Tag: Vinay Guruji

  • ಪೂಜೆ ವೇಳೆ ವಿನಯ್ ಗುರೂಜಿ ದತ್ತಾಶ್ರಮದಲ್ಲಿ ಪವಾಡ- ಉಘೇ.. ಶಂಕರ ಅಂದ್ರು ಭಕ್ತರು

    ಪೂಜೆ ವೇಳೆ ವಿನಯ್ ಗುರೂಜಿ ದತ್ತಾಶ್ರಮದಲ್ಲಿ ಪವಾಡ- ಉಘೇ.. ಶಂಕರ ಅಂದ್ರು ಭಕ್ತರು

    ಚಿಕ್ಕಮಗಳೂರು: ಶಿವರಾತ್ರಿಯಂದು ಮಹಾಮಂಗಳಾರತಿ ವೇಳೆ ಸೃಷ್ಠಿಕರ್ತ ಶಿವ, ಶಿರದ ಮೇಲೆ ಒಂದೂ ಹೂವನ್ನಿಟ್ಟುಕೊಳ್ಳದೆ ಮುಡಿಸಿದ್ದ ಎಲ್ಲಾ ಹೂವುಗಳನ್ನ ಪ್ರಸಾದದ ರೂಪದಲ್ಲಿ ಚೆಲ್ಲಿರುವ ಅಪರೂಪ ಹಾಗೂ ಪವಾಡ ಸದೃಶ್ಯದ ಘಟನೆಗೆ ವಿನಯ್ ಗುರೂಜಿ ದತ್ತಾಶ್ರಮ ಸಾಕ್ಷಿಯಾಗಿದೆ.

    ಜಿಲ್ಲೆಯ ಕೊಪ್ಪ ತಾಲೂಕಿನ ಹರಿಹರಪುರ ಸಮೀಪದ ಸ್ವರ್ಣಪೀಠಿಕೇಶ್ವರಿ ದತ್ತಾಶ್ರಮದಲ್ಲಿ,  ವಿನಯ್ ಗುರೂಜಿ 24 ಗಂಟೆಗಳ ಕಾಲ ನಿರಂತರ ಶಿವರಾತ್ರಿ ಆಚರಣೆಗೆ ಮುಂದಾಗಿದ್ದಾರೆ. ಈ ವೇಳೆ ಶಿವನಿಗೆ ವಿಶೇಷ ಅಲಂಕಾರ ಮಾಡಿ ವಿನಯ್ ಗೂರೂಜಿ ಪೂಜೆ ಮಾಡುವ ವೇಳೆ ಶಿವನಿಗೆ ಮುಡಿಸಿದ್ದ ಎಲ್ಲಾ ಹೂವಗಳು ಕೆಳಗೆ ಬಿದ್ದಿವೆ.

    ಶಿವ ಶಿರದ ಮೇಲೆ ಒಂದೇ ಒಂದು ಹೂವನ್ನೂ ಇಟ್ಟುಕೊಳ್ಳದೆ ಎಲ್ಲಾ ಹೂವುಗಳನ್ನ ಚೆಲ್ಲಿದ್ದಾನೆ. ಈ ದೃಶ್ಯವನ್ನ ಕಣ್ಣಾರೆ ಕಂಡ ಭಕ್ತ ಸಮೂಹ ಉಘೇ ಶಂಕರ ಅಂತ ಕೈಮುಗಿದಿದ್ದಾರೆ. ಸ್ವರ್ಣಪೀಠಿಕೇಶ್ವರಿ ದತ್ತಾಶ್ರಮದ ಅವಧೂತ ವಿನಯ್ ಗುರೂಜಿ ಆಶ್ರಮದಲ್ಲಿ 24 ಗಂಟೆಗಳ ಕಾಲ ನಿರಂತರ ಶಿವರಾತ್ರಿ ಕಾರ್ಯಕ್ರಮಕ್ಕೆ ಮುಂದಾಗಿದ್ದಾರೆ. ಈಗಾಗಲೇ ಶಿವರಾತ್ರಿ ಆಚರಣೆಗೆ ಆಶ್ರದಮದಲ್ಲಿ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ಇಂದು ಬೆಳಗ್ಗೆ ಆರು ಗಂಟೆಯಿಂದ ನಾಳೆ ಬೆಳಗ್ಗೆ ಆರು ಗಂಟೆವರೆಗೆ ನಿರಂತರ ಪೂಜಾ ಕೈಂಕರ್ಯ, ಹೋಮ-ಹವನ ನಡೆಯಲಿದೆ. ಇದನ್ನೂ ಓದಿ: ಅನ್ನ, ನೀರು, ಮೊಬೈಲ್ ಚಾರ್ಜಿಂಗ್ ಮಾಡಲಾಗದೆ ವಿದ್ಯಾರ್ಥಿಗಳ ಪರದಾಟ

    24 ಗಂಟೆಗಳ ಕಾಲ ನಿರಂತರ ವಿಶೇಷ ಲಿಂಗ ಪೂಜೆ ಜೊತೆಗೆ ರುದ್ರಾಭಿಷೇಕ ಕೂಡ ನಡೆಯಲಿದೆ. ಜೊತೆಗೆ ಐದು ಯಾಮ ಪೂಜೆ ಕೂಡ ನಡೆಯಲಿದೆ. ಇಡೀ ರಾತ್ರಿ ಭಕ್ತ ಸಂಗೀತ, ಭಜನೆ ನಡೆಯಲಿದ್ದು, ಅವಧೂತ ವಿನಯ್ ಗುರೂಜಿ ಅವರಿಂದ ಪ್ರವಚನ ಆಶ್ರಮದ ಆವರಣದಲ್ಲಿ ವಿಶೇಷ ಪೂಜೆಗಳು ನಡೆಯಲಿವೆ. ಈಗಾಗಲೇ ಆಶ್ರದಲ್ಲಿರುವ ದೇವತೆಗಳಿಗೆ ವಿಶೇಷ ಅಲಂಕಾರ ಮಾಡಲಾಗಿದೆ. ಆಶ್ರಮದ ಆವರಣದಲ್ಲಿರುವ ನೀಲಕಂಠನಿಗೂ ವಿಶೇಷವಾದ ಅಲಂಕಾರ ಮಾಡಿದ್ದಾರೆ. ಶಿವರಾತ್ರಿ ಅಂಗವಾಗಿ ಆಶ್ರಮದ ಆವರಣದಲ್ಲಿ ಕೃತಕ ಲಿಂಗನನ್ನೂ ಕೂಡ ನಿರ್ಮಿಸಿ ವಿಶೇಷ ಅಲಂಕಾರಗೈದು ಪೂಜೆ ನಡೆಸುತ್ತಿದ್ದಾರೆ.

  • ಮಾರ್ಚ್, ಮೇ ಹೊತ್ತಿಗೆ ದೇಶದಲ್ಲಿ ಕೊರೊನಾ ಇರಲ್ಲ: ವಿನಯ್ ಗುರೂಜಿ

    ಮಾರ್ಚ್, ಮೇ ಹೊತ್ತಿಗೆ ದೇಶದಲ್ಲಿ ಕೊರೊನಾ ಇರಲ್ಲ: ವಿನಯ್ ಗುರೂಜಿ

    ಚಿಕ್ಕಮಗಳೂರು: ನನ್ನ ಪ್ರಕಾರ ಮಾರ್ಚ್ ಅಥವಾ ಮೇ ತಿಂಗಳ ಹೊತ್ತಿಗೆ ಕೊರೊನಾ ಇಡೀ ದೇಶದಿಂದ ದೂರವಾಗಬಹುದು ಎಂದು ಗೌರಿಗದ್ದೆ ಗ್ರಾಮದ ಸ್ವರ್ಣಪೀಠಿಕೇಶ್ವರಿ ದತ್ತಾಶ್ರಮದ ಅವಧೂತ ವಿನಯ್ ಗುರೂಜಿ ಭವಿಷ್ಯ ನುಡಿದಿದ್ದಾರೆ.

    ತಾಲೂಕಿನ ಮುಳ್ಳಯ್ಯನಗಿರಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಇನ್ನೂ ಮೂರ್ನಾಲ್ಕು ತಿಂಗಳು ಕೊರೊನಾ ಇರಬಹುದು. ನನ್ನ ಪ್ರಕಾರ ಮಾರ್ಚ್, ಮೇ ವೇಳೆಗೆ ಕೊರೊನಾ ನಿಯಂತ್ರಣಕ್ಕೆ ಬರಬಹುದು ಎಂದಿದ್ದಾರೆ. ಇದನ್ನೂ ಓದಿ: ಮೃತ ವ್ಯಕ್ತಿಯ ಹೆಸರಿನಲ್ಲಿ ಬಂತು ಕೋವಿಡ್‌ ಲಸಿಕೆ ಪಡೆದ ಪ್ರಮಾಣಪತ್ರ!

    ಮನುಷ್ಯನಿಗೆ ಆತ್ಮಸ್ಥೈರ್ಯ ಮುಖ್ಯ. ಜನ ಆತ್ಮವಿಶ್ವಾಸ ಕಳೆದುಕೊಳ್ಳಬಾರದು. ಎಲ್ಲವನ್ನೂ ದೇವರು ನೋಡಿಕೊಳ್ತಾನೆ. ಮ್ಯಾಜಿಕ್ ಆಗಲಿ, ಪವಾಡ ಆಗಲಿ ಅಂದರೆ ಯಾವುದು ಆಗುವುದಿಲ್ಲ. ಇದರಿಂದ ಹೊರ ಬರಲು ನಾವು ಪ್ರಯತ್ನ ಪಡುವುದೇ ನಿಜವಾದ ಪವಾಡ ಎಂದು ತಿಳಿಸಿದ್ದಾರೆ.

    ಜನ, ಸರ್ಕಾರ, ಪಕ್ಷಗಳು ಎಲ್ಲರೂ ಒಬ್ಬರನ್ನೊಬ್ಬರು ದೂರಿಕೊಳ್ಳುವುದು ಸರಿಯಲ್ಲ. ಎಲ್ಲಾ ಜನರನ್ನು ರಕ್ಷಿಸಬೇಕು ಎಂದು ಒಮ್ಮತದಿಂದ ಕೆಲಸ ಮಾಡಬೇಕು. ಆಗ ಮಾತ್ರ ಎಲ್ಲರೂ ಆರೋಗ್ಯವಾಗಿರಿಸಲು ಸಾಧ್ಯ ಎಂದು ಅಭಿಪ್ರಾಯಪಟ್ಟಿದ್ದಾರೆ.

    ದತ್ತಪೀಠ ವಿಚಾರವಾಗಿ ಸರ್ಕಾರಕ್ಕೆ ಮನವಿ ಮಾಡಿದ ವಿನಯ್ ಗುರೂಜಿ, ದತ್ತಪೀಠವನ್ನು ಪ್ರಾಧಿಕಾರ ಮಾಡಿ ಅಭಿವೃದ್ಧಿಗೊಳಿಸಬೇಕು. ನಾನು ಗುರು ಎನ್ನುವುದಕ್ಕಿಂತ ಒಬ್ಬ ಸಾಮಾನ್ಯನಾಗಿ ಸರ್ಕಾರದ ಬಳಿ ಮನವಿ ಮಾಡಿಕೊಳ್ಳುತ್ತಿದ್ದೇನೆ. ದತ್ತಪೀಠದಲ್ಲಿ ಶೌಚಾಲಯಗಳನ್ನು ಮತ್ತಷ್ಟು ನಿರ್ಮಾಣ ಮಾಡಬೇಕು. ಈ ಕುರಿತು ಮುಖ್ಯಮಂತ್ರಿ ಹಾಗೂ ಪ್ರವಾಸೋದ್ಯಮ ಸಚಿವರಿಗೆ ಪತ್ರ ಬರೆಯುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಮಕ್ಕಳಿಗೂ ವಕ್ಕರಿಸಿತು ಹೊಸ ತಳಿ- ಮಹಾರಾಷ್ಟ್ರದಲ್ಲಿ 3 ವರ್ಷದ ಮಗುವಿನಲ್ಲಿ ಓಮಿಕ್ರಾನ್‌ ಪತ್ತೆ

    ನಾನೇ ಸ್ವತಃ ಶೌಚಾಲಯಗಳನ್ನು ಶುಚಿಗೊಳಿಸಿ ಬಂದಿದ್ದೇನೆ. ಸ್ವಚ್ಛತೆಯ ಬಗ್ಗೆ ಗಮನಹರಿಸಬೇಕಿದೆ. ವಾರಾಂತ್ಯದಲ್ಲಿ ಈ ಭಾಗಕ್ಕೆ 2,000ಕ್ಕೂ ಹೆಚ್ಚು ವಾಹನಗಳಲ್ಲಿ ಪ್ರವಾಸಿಗರು ಆಗಮಿಸುತ್ತಾರೆ. ಹೀಗಾಗಿ ಇನ್ನಷ್ಟು ಮೂಲ ಸೌಕರ್ಯಗಳನ್ನು ಒದಗಿಸಬೇಕು. ದುಡ್ಡಿದ್ದವರು ರೆಸಾರ್ಟ್, ಲಾಡ್ಜ್, ಹೋಂ ಸ್ಟೇಗೆ ಹೋಗುತ್ತಾರೆ. ಆದರೆ ಬಡವರು ಎಲ್ಲಿಗೆ ಹೋಗಬೇಕು? ಬಡವರು ದೇವಸ್ಥಾನ, ಪ್ರವಾಸಕ್ಕೆ ಹೋಗಬಾರದು ಎಂದು ಕಾನೂನಿಲ್ಲ, ಎಲ್ಲರೂ ಒಂದೇ. ಆದ್ದರಿಂದ ಮುಂದಿನ ದಿನಗಳಲ್ಲಿ ಮೂಲ ಸೌಕರ್ಯಗಳನ್ನು ಇಲ್ಲಿ ಸರ್ಕಾರ ಕಲ್ಪಿಸಬೇಕು ಎಂದು ಒತ್ತಾಯಿಸಿದ್ದಾರೆ.

  • ಮಂಗಳಮುಖಿಯರ ಪಾದಪೂಜೆ ಮಾಡುವ ಮೂಲಕ ದೀಪಾವಳಿ ಆಚರಿಸಿದ ವಿನಯ್ ಗುರೂಜಿ

    ಮಂಗಳಮುಖಿಯರ ಪಾದಪೂಜೆ ಮಾಡುವ ಮೂಲಕ ದೀಪಾವಳಿ ಆಚರಿಸಿದ ವಿನಯ್ ಗುರೂಜಿ

    ಚಿಕ್ಕಮಗಳೂರು: ಮಂಗಳಮುಖಿಯರ ಪಾದಪೂಜೆ ಮಾಡುವ ಮೂಲಕ ಅವಧೂತ ವಿನಯ್ ಗುರೂಜಿ ದೀಪಾವಳಿ ಹಬ್ಬವನ್ನು ವಿಶೇಷ ಹಾಗೂ ಅರ್ಥಪೂರ್ಣವಾಗಿ ಆಚರಿಸಿದ್ದಾರೆ.

    ವಿನಯ್ ಗುರೂಜಿ ಜಿಲ್ಲೆ ಕೊಪ್ಪ ತಾಲೂಕಿನ ಹರಿಹರಪುರ ಸಮೀಪದ ಗೌರಿಗದ್ದೆ ಗ್ರಾಮದ ಸ್ವರ್ಣಪೀಠಿಕೇಶ್ವರಿ ದತ್ತಾಶ್ರಮದ ಅವಧೂತರು. ಇವರನ್ನು ಭಕ್ತರು ನಡೆದಾಡುವ ದೈವ ಎಂದೇ ಕರೆಯುತ್ತಾರೆ. ಅವರು ಇಂದು ಹರಿಹರಪುರ ಸಮೀಪದ ಗೌರಿಗದ್ದೆ ಆಶ್ರಮದಲ್ಲಿ ಮಂಗಳಮುಖಿಯರಿಗೆ ಪಾದಪೂಜೆ ಮಾಡಿ ದೀಪಾವಳಿ ಹಬ್ಬವನ್ನು ಆಚರಿಸಿದರು. ಇದೇ ವೇಳೆ, 150ಕ್ಕೂ ಹೆಚ್ಚು ಬಡಕುಟುಂಬಗಳಿಗೆ ದಿನಸಿ ಕಿಟ್ ವಿತರಿಸಿದರು. ಬಡವರಿಗೆ ಕಿಟ್ ವಿತರಿಸುವ ಮುನ್ನ ಅವರಿಗೆ ಸ್ವತಃ ವಿನಯ್ ಗುರೂಜಿಯೇ ಮಂಗಳಾರತಿ ಮಾಡಿ ಬಳಿಕ ಅವರಿಗೆ ಕಿಟ್ ವಿತರಿಸಿದ್ದಾರೆ. ಇದನ್ನೂ ಓದಿ: ತೈಲ ಬೆಲೆ ಇಳಿಕೆ ಬೆನ್ನಲ್ಲೇ ದುಬಾರಿಯಾಗಲಿದೆ ಹೋಟೆಲ್ ಫುಡ್

    ವಿನಯ್ ಗುರೂಜಿ ಪ್ರತಿಯೊಂದು ಹಬ್ಬವನ್ನೂ ವಿಭಿನ್ನವಾಗಿ ಆಚರಿಸುತ್ತಾರೆ. ಕಳೆದ ವರ್ಷ ಕನ್ನಡ ರಾಜ್ಯೋತ್ಸವದಂದು ಕೊಪ್ಪ ಬಸ್ ನಿಲ್ದಾಣದಲ್ಲಿ ಕಸ ಗುಡಿಸುವ ಮೂಲಕ ಕನ್ನಡ ರಾಜ್ಯೋತ್ಸವ ಆಚರಿಸಿದ್ದರು. ಗಾಂಧಿ ಜಯಂತಿಯಂದು ಶೌಚಾಲಯ ಶುಚಿ ಮಾಡುವ ಮೂಲಕ ಗಾಂಧಿ ಜಯಂತಿಯನ್ನು ಆಚರಿಸಿದ್ದರು. ವಿನಯ್ ಗುರೂಜಿ ಪ್ರತಿವರ್ಷವೂ ಒಂದೊಂದು ಹಬ್ಬವನ್ನು ಒಂದೊಂದು ರೀತಿ ವಿಭಿನ್ನವಾಗಿ ಆಚರಿಸುತ್ತಾರೆ. ಈ ದಿನದ ಕಾರ್ಯಕ್ರಮದಲ್ಲಿ ಮಠದ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

    ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಸ್ಪೀಕರ್ ರಮೇಶ್ ಕುಮಾರ್, ಮಾಜಿ ಪ್ರಧಾನಿ ದೇವೇಗೌಡ ಸೇರಿದಂತೆ ರಾಜ್ಯದ ಬಹುತೇಕ ರಾಜಕಾರಣಿಗಳು ಇವರ ಪರಮ ಭಕ್ತರಾಗಿದ್ದು, ಮಾಜಿ ಸ್ಪೀಕರ್ ರಮೇಶ್ ಕುಮಾರ್ ಮತ್ತು ಮಾಜಿ ಪ್ರಧಾನಿ ದೇವೇಗೌಡರು, ವಿನಯ್ ಗುರೂಜಿಗೆ ಪಾದಪೂಜೆ ಮಾಡಿ ಆಶೀರ್ವಾದ ಪಡೆದಿದ್ದಾರೆ.  ಇದನ್ನೂ ಓದಿ: ನ.8 ರಿಂದ ಅಂಗನವಾಡಿ ಕೇಂದ್ರಗಳು ರೀ ಓಪನ್

  • ಕ್ಯಾನ್ಸರ್ ರೋಗ 4ನೇ ಹಂತ ತಲುಪಿದಾಗ ಏನಾಗುತ್ತೋ ಹಾಗೆ ಅತ್ಯಾಚಾರಿಗಳಿಗೆ ಶಿಕ್ಷೆಯಾಗ್ಬೇಕು: ವಿನಯ್ ಗುರೂಜಿ

    ಕ್ಯಾನ್ಸರ್ ರೋಗ 4ನೇ ಹಂತ ತಲುಪಿದಾಗ ಏನಾಗುತ್ತೋ ಹಾಗೆ ಅತ್ಯಾಚಾರಿಗಳಿಗೆ ಶಿಕ್ಷೆಯಾಗ್ಬೇಕು: ವಿನಯ್ ಗುರೂಜಿ

    ರಾಯಚೂರು: ಮೈಸೂರಿನಲ್ಲಿ ನಡೆದಿರುವ ಗ್ಯಾಂಗ್‍ರೇಪ್ ಸಂಬಂಧಿಸಿದಂತೆ ಕ್ಯಾನ್ಸರ್ ರೋಗ ನಾಲ್ಕನೇ ಹಂತ ತಲುಪಿದಾಗ ಏನಾಗುತ್ತದೆಯೋ ಹಾಗೆ ಅತ್ಯಾಚಾರಿಗಳಿಗೆ ಶಿಕ್ಷೆಯಾಗಬೇಕು ಎಂದು ಅವದೂತ ವಿನಯ್ ಗುರೂಜಿ ಅಭಿಪ್ರಾಯಪಟ್ಟಿದ್ದಾರೆ.

    ರಾಯಚೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೈಸೂರಿನಲ್ಲಿ ನಡೆದಿರುವ ಅತ್ಯಾಚಾರ ಪ್ರಕರಣ ಖಂಡನೀಯವಾಗಿದೆ. ರಾಜ್ಯದಲ್ಲಿ ಅತ್ಯಾಚಾರ ಪ್ರಕರಣದ ಕಾನೂನನ್ನು ಮತ್ತಷ್ಟು ಬಿಗಿಗೊಳಿಸಬೇಕಿದೆ. ಪಕ್ಷ ಭೇದವಿಲ್ಲದೆ ಕಾನೂನನ್ನು ಬಿಗಿಗೊಳಿಸುವ ಕೆಲಸ ಆಗಬೇಕು. ಅಹಿಂಸಾವಾದಿಯಾದ ನಾನು ಎಲ್ಲವನ್ನೂ ಹೇಳಲಾಗುವುದಿಲ್ಲ. ಆದರೆ ಅತ್ಯಾಚಾರಿಗಳಿಗೆ ಸರಿಯಾದ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ಬಿಯರ್ ಬಾಟ್ಲಿ, ಬಸ್ ಟಿಕೆಟ್ ಆಧರಿಸಿ ಅತ್ಯಾಚಾರಿಗಳ ಬಂಧನ

    ಅತ್ಯಾಚಾರಿಗಳಿಗೆ, ಹೈದರಾಬಾದ್ ನಲ್ಲಿ ನಡೆದ ಅತ್ಯಾಚಾರ ಪ್ರಕರಣದ ಕ್ರಮದಂತೆ ಇಲ್ಲಿಯೂ ಮಾಡಲಿ. ಕ್ಯಾನ್ಸರ್ ರೋಗ ನಾಲ್ಕನೇ ಹಂತ ತಲುಪಿದಾಗ ಏನಾಗುತ್ತದಯೋ ಹಾಗೆ ಅತ್ಯಾಚಾರಿಗಳಿಗೆ ಶಿಕ್ಷೆಯಾಗಬೇಕು ಎನ್ನುವ ಮೂಲಕ ಪರೋಕ್ಷವಾಗಿ ಶೂಟ್ ಮಾಡಿ ಎಂದರು. ಇದನ್ನೂ ಓದಿ: ದರೋಡೆ ಮಾಡಲು ಹೋಗಿ ಏನೂ ಸಿಗದಿದ್ದಾಗ ಯುವತಿಯ ಅತ್ಯಾಚಾರವೆಸಗಿದ ಕಾಮುಕರು!

    ಪ್ರಪಂಚದ ಎಲ್ಲ ದೇಶಗಳು ಒಂದಾದರೆ ತಾಲಿಬಾನ್ ಉಗ್ರರನ್ನು ಮಟ್ಟ ಹಾಕಬಹುದು. ತಾಲಿಬಾನ್ ಮೇಲೆ ದಾಳಿ ಮಾಡಿರುವ ಉಗ್ರರು ಪ್ರಾಯೋಗಿಕವಾಗಿ ಅಘ್ಘಾನ್ ದೇಶವನ್ನು ಬಳಸಿಕೊಂಡಿದ್ದಾರೆ. ಚೀನಾ ಮತ್ತು ಪಾಕಿಸ್ತಾನ, ಭಾರತದ ಮೇಲೆ ದಾಳಿ ಮಾಡುವ ಸಂಚಿನಲ್ಲಿವೆ ಎಂದು ವಿನಯ್ ಗುರೂಜಿ ಅಭಿಪ್ರಾಯಪಟ್ಟರು.

  • ನಿಖಿಲ್‍ಗೆ ಗಂಡು ಮಗುವಾಗಲಿದೆ: ವಿನಯ್ ಗುರೂಜಿ

    ನಿಖಿಲ್‍ಗೆ ಗಂಡು ಮಗುವಾಗಲಿದೆ: ವಿನಯ್ ಗುರೂಜಿ

    – ರಾಜಕೀಯವಾಗಿ ನಿಖಿಲ್‍ಗೆ ಉತ್ತಮ ಭವಿಷ್ಯ

    ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಪುತ್ರ, ನಟ ನಿಖಿಲ್ ಕುಮಾರಸ್ವಾಮಿ ಅವರಿಗೆ ಗಂಡು ಮಗುವಾಗಲಿದ್ದು, ನಂತರ ಒಳ್ಳೆಯ ಯೋಗ ಬರುತ್ತದೆ ಎಂದು ಅವಧೂತ ವಿನಯ್ ಗುರೂಜಿ ಭವಿಷ್ಯ ನುಡಿದಿದ್ದಾರೆ.

    ಇಂದು ಜೆಡಿಎಸ್ ಮಾಜಿ ಪರಿಷತ್ ಸದಸ್ಯ ಟಿ.ಎ ಶರವಣ ಮನೆಯಲ್ಲಿ ಭೇಟಿಯಾಗಿ ಹೆಚ್‍ಡಿಕೆ ಅವರಿಗೆ ಗುರೂಜಿ ಆಶೀರ್ವಚನ ನೀಡಿದ್ದಾರೆ. ನಿಖಿಲ್ ಶಾಸಕರಾಗಿ ಆಯ್ಕೆಯಾಗುತ್ತಾರೆ. ಮನೆಗೆ ಗಂಡು ಮಗುವಿನ ಆಗಮನ ಆಗುತ್ತದೆ. ನಂತರ ನಿಖಿಲ್ ಗೆ ಒಳ್ಳೆಯ ಯೋಗ ಬರುತ್ತದೆ. ರಾಜಕೀಯವಾಗಿ ನಿಖಿಲ್ ಗೆ ಉತ್ತಮ ಭವಿಷ್ಯ ಇದೆ ಎಂದಿದ್ದಾರೆ.

    ಜೆಡಿಎಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರುತ್ತೆ. ಮುಂದಿನ ದಿನಗಳಲ್ಲಿ ಜೆಡಿಎಸ್ ಮತ್ತೆ ಅಧಿಕಾರ ಹಿಡಿಯುವುದು ಖಚಿತ. ರಾಜ್ಯದಲ್ಲಿ ಜೆಡಿಎಸ್ ಆಡಳಿತ ನಡೆಸಲಿದೆ ಎಂದು ವಿನಯ್ ಗುರೂಜಿ ತಿಳಿಸಿದ್ದಾರೆ. ಇದನ್ನೂ ಓದಿ: ಹೌದು ತಂದೆಯಾಗುತ್ತಿರುವುದು ನಿಜ: ನಿಖಿಲ್

    ಈ ಹಿಂದೆ ಮಾಧ್ಯಮಗಳ ಜೊತೆ ಮಾತನಾಡಿದ್ದ ನಿಖಿಲ್, ಮೊದಲ ಮಗುವಿನ ನಿರೀಕ್ಷೆಯಲ್ಲಿರುವುದನ್ನು ಸ್ಪಷ್ಟಪಡಿಸಿದ್ದರು. ಇದಕ್ಕೂ ಮೊದಲು ಹೆಚ್.ಡಿ.ಕುಮಾರಸ್ವಾಮಿ ತಾವು ಅಜ್ಜನಾಗುತ್ತಿರುವ ವಿಚಾರವನ್ನು ಮಾಧ್ಯಮಗಳ ಮುಂದೆ ಬಹಿರಂಗಪಡಿಸಿದ್ದರು. ಸೊಸೆ ರೇವತಿ 5 ತಿಂಗಳ ಗರ್ಭಿಣಿ ಎಂದು ಸಂತಸದ ಸುದ್ದಿಯನ್ನು ರಿವೀಲ್ ಮಾಡಿದ್ದರು.

  • ಕೊರೊನಾ 3ನೇ ಅಲೆಗೆ ಸಿದ್ಧತೆ ಮಾಡಿಕೊಳ್ಳಿ: ಸಿಎಂಗೆ ವಿನಯ್ ಗುರೂಜಿ ಸಲಹೆ

    ಕೊರೊನಾ 3ನೇ ಅಲೆಗೆ ಸಿದ್ಧತೆ ಮಾಡಿಕೊಳ್ಳಿ: ಸಿಎಂಗೆ ವಿನಯ್ ಗುರೂಜಿ ಸಲಹೆ

    ಬೆಂಗಳೂರು: ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ಬರುವ ಹೊತ್ತಿನಲ್ಲೆ 3ನೇ ಅಲೆಗೂ ರಾಜ್ಯ ಸರ್ಕಾರ ಸಕಲ ಸಿದ್ಧತೆಗಳನ್ನ ಮಾಡಿಕೊಳ್ಳಬೇಕು ಅಂತ ಅವಧೂತ ವಿನಯ್ ಗುರೂಜಿ ಸಿಎಂ ಯಡಿಯೂರಪ್ಪರಿಗೆ ಸಲಹೆ ನೀಡಿದ್ದಾರೆ.

    ಮುಖ್ಯಮಂತ್ರಿಗಳ ಕಾವೇರಿ ನಿವಾಸದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ ವಿನಯ್ ಗುರೂಜಿ, 3ನೇ ಅಲೆ ಸಾಕಷ್ಟು ತೊಂದರೆ ಕೊಡುತ್ತೆ ಅಂತ ವಿಜ್ಞಾನ ವಲಯ ಹೇಳುತ್ತಿದೆ. ಹೀಗಾಗಿ ರಾಜ್ಯ ಸರ್ಕಾರ ಎಚ್ಚರ ತಪ್ಪದೆ ಅಗತ್ಯ ಸಿದ್ದತೆ ಮಾಡಿಕೊಳ್ಳಬೇಕು. ಎರಡನೇ ಅಲೆಯಲ್ಲಿ ಆದ ಸಮಸ್ಯೆ ಆಗದಂತೆ ಎಚ್ಚರಿಕೆಯಿಂದ ಹೆಜ್ಜೆ ಇಡಬೇಕು ಅಂತ ಸಲಹೆ ನೀಡಿದರು. ಇದಲ್ಲದೆ ಪ್ರತಿ ತಾಲೂಕಿಗೂ ಒಂದೊಂದು ಮಲ್ಪಿ ಸ್ಪೆಷಲ್ ಆಸ್ಪತ್ರೆಗಳನ್ನು ಸರ್ಕಾರ ಪ್ರಾರಂಭ ಮಾಡಬೇಕು ಅಂತ ಮನವಿ ಮಾಡಿದ್ರು.

    ಇದೇ ವೇಳೆ ತಮ್ಮ ಜಿಲ್ಲೆಯ ಕೆಲ ಸಮಸ್ಯೆಗಳನ್ನ ಪರಿಹಾರ ಮಾಡುವಂತೆ ವಿನಯ್ ಗುರೂಜಿ ಅವರು ಸಿಎಂ ಯಡಿಯೂರಪ್ಪಗೆ ಮನವಿ ಮಾಡಿದರು. ಮಲೆನಾಡು ಸೇರಿದಂತೆ ಹಲವು ಕಡೆ ಅಂತರ್ಜಲದ ಮಟ್ಟ ಕುಸಿದಿದೆ. ನೀಲಗಿರಿ, ಅಕೇಶಿಯ ಪ್ಲಾಂಟೇಶ್ ನಿಂದ ಸಾಕಷ್ಟು ಸಮಸ್ಯೆ ಆಗಿದೆ. ಹೀಗಾಗಿ ಅಕೇಶಿಯಾ ಮತ್ತು ನೀಲಗಿರಿ ಮಗಳನ್ನ ತೆಗೆದು ಹಣ್ಣಿನ ಗಿಡಗಳನ್ನ ಬೆಳಿಸಿದ್ರೆ ಪ್ರಾಣಿ-ಪಕ್ಷಿಗಳಿಗೆ ಅನುಕೂಲ ಆಗುತ್ತೆ ಅಂತ ಮನವಿ ಮಾಡಿದರು.  ಇದನ್ನೂ ಓದಿ: ಪ್ರಯಾಣಿಕರ ಪಾಸ್ ಅವಧಿ ವಿಸ್ತರಿಸಿದ ಬಿಎಂಟಿಸಿ

    ಇದೇ ವೇಳೆ ಕೊಪ್ಪದಲ್ಲಿ ಇರೋ ಆಸ್ಪತ್ರೆಯನ್ನ ಮೇಲ್ದರ್ಜೆ ಏರಿಸಬೇಕು. ಕೊಪ್ಪದಿಂದ ಶಿವಮೊಗ್ಗ ಬರೋದಕ್ಕೆ ಒಂದೂವರೆ ಗಂಟೆಯಾಗುತ್ತೆ. ಇದ್ರಿಂದ ಸಾಕಷ್ಟು ಸಮಸ್ಯೆ ಆಗ್ತಿದೆ. ಹೀಗಾಗಿ ಅಲ್ಲಿನ ಆಸ್ಪತ್ರೆಯನ್ನ ಮೇಲ್ದರ್ಜೆಗೆ ಏರಿಸಬೇಕು ಅಂತ ಮನವಿ ಮಾಡಿಕೊಂಡರು. ಇದನ್ನೂ ಓದಿ: ಸೋಮವಾರದಿಂದ ಹೊಸ ರೂಲ್ಸ್, ಹೊಸ ಲೈಫ್ – ಅನ್‍ಲಾಕ್ 2.Oಗೆ ಬೆಂಗಳೂರಿಗರ ಸಿದ್ಧತೆ

  • ಈ ಸಮಯದಲ್ಲಿ ಕಷ್ಟದಲ್ಲಿದ್ದವರಿಗೆ ನೆರವಾಗುವುದೇ ದೇವರ ಕಾರ್ಯ: ಆರ್.ಅಶೋಕ್

    ಈ ಸಮಯದಲ್ಲಿ ಕಷ್ಟದಲ್ಲಿದ್ದವರಿಗೆ ನೆರವಾಗುವುದೇ ದೇವರ ಕಾರ್ಯ: ಆರ್.ಅಶೋಕ್

    ಬೆಂಗಳೂರು: ಮಹಾತ್ಮ ಗಾಂಧಿ ಸೇವಾ ಟ್ರಸ್ಟ್ ಆಶ್ರಯದಲ್ಲಿ ಕೋವಿಡ್ ನಿಂದ ಪೋಷಕರನ್ನ ಕಳೆದುಕೊಂಡು ಅನಾಥರಾದ ಮಕ್ಕಳ ವಿದ್ಯಾಭ್ಯಾಸ ಹಾಗೂ ಉದ್ಯೋಗದ ಜವಾಬ್ದಾರಿಯನ್ನ ತೆಗೆದುಕೊಳ್ಳುವ ನಿಟ್ಟಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ಆಯೋಜಿಸಿದ್ದ ನೀವು ಅನಾಥರಲ್ಲ ಕಾರ್ಯಕ್ರಮಕ್ಕೆ ಕಂದಾಯ ಸಚಿವ ಆರ್ ಅಶೋಕ್ ಚಾಲನೆ ನೀಡಿದರು.

    ಈ ವೇಳೆ ಮಾತನಾಡಿದ ಸಚಿವ ಅಶೋಕ್, ಟ್ರಸ್ಟ್ ನ ಸಂಸ್ಥಾಪಕರಾದ ವಿನಯ್ ಗುರೂಜಿಯವರು ಮಹತ್ಕಾರ್ಯವನ್ನು ಮಾಡುತ್ತಿದ್ದಾರೆ. ಇಲ್ಲಿ ಯಾರೂ ಅನಾಥರಲ್ಲ. ನಾವೆಲ್ಲಾ ಬಂಧುಗಳಿದ್ದಂತೆ. ಇದೊಂದು ಸಂಕಷ್ಟದ ಕಾಲ. ಈ ಸಮಯದಲ್ಲಿ ನಾವು ಮಾಡುವ ಚಿಕ್ಕ ಪುಟ್ಟ ನೆರವು ಕೂಡಾ ಕಷ್ಟದಲ್ಲಿರುವವರಿಗೆ ಆಸರೆಯಾಗುತ್ತದೆ. ಸರ್ಕಾರ ಕೂಡಾ ನೋವಿನಲ್ಲಿರುವವರಿಗೆ ಜೊತೆಯಾಗಲು ಎಲ್ಲ ಸಹಾಯವನ್ನ ಮಾಡುತ್ತಿದೆ. ಈಗಾಗಲೇ ಮುಖ್ಯಮಂತ್ರಿಗಳು ಸೋಂಕಿನಿಂದ ಪ್ರಾಣ ಕಳೆದುಕೊಂಡ ಬಿಪಿಎಲ್ ಕುಟುಂಬದ ಒಬ್ಬ ಸದಸ್ಯರಿಗೆ 1 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ನಾನು ಕೂಡಾ ನನ್ನ ಕ್ಷೇತ್ರದಲ್ಲಿ ವೈಯಕ್ತಿಕವಾಗಿ ನೆರವಾಗುವ ಕಾರ್ಯಗಳನ್ನ ಮಾಡುತ್ತಿದ್ದೇನೆ.

    ನಾನಾ ಕಾರಣಗಳಿಂದ ಸಂಬಂಧಿಗಳು ಮುಂದೆ ಬರದಿದ್ದಾಗ ನೂರಾರು ಜನರ ಅಸ್ಥಿಗಳನ್ನ ಕಾವೇರಿಯಲ್ಲಿ ವಿಸರ್ಜನೆ ಮಾಡಿ ಬಂದೆ. ನಾವು ಆತ್ಮಸಾಕ್ಷಿಗೆ ಅನುಗುಣವಾಗಿ ಮಾನವೀಯತೆಯಿಂದ ನಡೆದುಕೊಳ್ಳಬೇಕಾದ ಕಾಲ. ಯಾವುದೇ ರೀತಿಯಲ್ಲಿ ಸಹಾಯ ಮಾಡಿದರು ಅದು ದೇವರ ಕಾರ್ಯ. ಗುರೂಜಿಯವರ ಆಶೀರ್ವಾದ ಹಾಗೂ ಮಾರ್ಗದರ್ಶನದಲ್ಲಿ ಅವರ ಅನುಯಾಯಿಗಳು ಮಾಡುತ್ತಿರುವ ಈ ಕಾರ್ಯ ಎಲ್ಲರಿಗೂ ಪ್ರೇರಣೆಯಾಗಲಿ ಎಂದು ಹೇಳಿದರು.

    ಟ್ರಸ್ಟ್ ನ ಸಂಸ್ಥಾಪಕರಾದ ಅವಧೂತ ಶ್ರೀ ವಿನಯ್ ಗುರೂಜಿ ಮಾತನಾಡಿ, ಇದೊಂದು ಅನಿರೀಕ್ಷಿತ ಸಂದರ್ಭ. ನಾವೆಲ್ಲಾ ಸರ್ಕಾರದ ಜೊತೆಗೆ, ಸರ್ಕಾರದಂತೆಯೇ ಕೆಲಸ ಮಾಡಬೇಕಿದೆ. ಇಂತಹ ನೂರು ಸಮಸ್ಯೆಗಳು ಬಂದರು ನಾವೆಲ್ಲಾ ಜೊತೆಯಾಗಿ ನಿಂತು ಪರಿಹರಿಸಬೇಕು. ಈಗಾಗಲೇ ಟ್ರಸ್ಟ್ ವತಿಯಿಂದ ಅನ್ನ ಅಭಿಯಾನ, ಔಷಧಿ ಅಭಿಯಾನ, ರೈತ ನಿಧಿ, ವಿಧವಾ ನಿಧಿ, ಮಂಗಳಮುಖಿಯರಿಗೆ ಸುಹಾಸಿನಿ ಕಾರ್ಯಕ್ರಮ, ಕಾಡು ಪ್ರಾಣಿಗಳಿಗೆ ನೀರು ನೀಡುವುದು ಹೀಗೆ ನಾನಾ ಕಾರ್ಯಗಳನ್ನ ಮಾಡುತ್ತಿದ್ದೇವೆ. ಇದನ್ನೂ ಓದಿ: ಅರ್ಜಿ ಸಲ್ಲಿಸದೇ ವೃದ್ಧಾಪ್ಯ ವೇತನ ಮನೆ ಬಾಗಿಲಿಗೆ: ಆರ್.ಅಶೋಕ್

    ಅದರ ಮುಂದುವರೆದ ಭಾಗವಾಗಿ ಪೋಷಕರನ್ನ ಕಳೆದುಕೊಂಡ ಪ್ರತಿ ಜಿಲ್ಲೆಯಲ್ಲಿಯೂ ಹೆಣ್ಣು ಮಕ್ಕಳಿಗೆ ವಿದ್ಯಾಭ್ಯಾಸ ಹಾಗೂ ಮದುವೆ ಮತ್ತು ಗಂಡು ಮಕ್ಕಳಿಗೆ ವಿದ್ಯೆ ಮತ್ತು ಉದ್ಯೋಗದ ಜವಾಬ್ದಾರಿ ತೆಗೆದುಕೊಳ್ಳಬೇಕೆಂದು ನಿರ್ಧರಿಸಲಾಯಿತು. ಈ ಕುರಿತಂತೆ ಹಲವು ಕಂಪನಿಗಳ ಜೊತೆ ಮಾತನಾಡಿ ಕೈ ಜೋಡಿಸಲು ಕರೆ ನೀಡಲಾಗಿದೆ. ಸಮಸ್ಯೆಗಳು ಬರುತ್ತಲೇ ಇರುತ್ತವೆ. ಅವುಗಳನ್ನ ಎದುರಿಸುವ ಸಾಮರ್ಥ್ಯ ಬೆಳೆಸಿಕೊಳ್ಳುವುದು ಅಗತ್ಯ, ಎಂದರು.

    ಈ ಸಂದರ್ಭದಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಎಂ ಕೃಷ್ಣಪ್ಪ, ದೊಡ್ಡಬಳ್ಳಾಪುರ ಶಾಸಕ ಟಿ ವೆಂಕಟರಮಣಯ್ಯ, ಟ್ರಸ್ಟ್ ನ ಅಧ್ಯಕ್ಷರಾದ ಬೇಳೂರು ರಾಘವೇಂದ್ರ ಶೆಟ್ಟಿ, ಬಿಜೆಪಿ ಮುಖಂಡರಾದ ಧೀರಜ್ ಮುನಿರಾಜು, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ ಶ್ರೀನಿವಾಸ್ ಉಪಸ್ಥಿತರಿದ್ದರು.

  • ಮಗನಿಗೆ ಏನೂ ಆಗಲ್ಲ ಅಂದಿದ್ರು, ವಿನಯ್ ಗುರೂಜಿ ಭೇಟಿಗೆ ಬಂದೆ: ಕಾರಜೋಳ

    ಮಗನಿಗೆ ಏನೂ ಆಗಲ್ಲ ಅಂದಿದ್ರು, ವಿನಯ್ ಗುರೂಜಿ ಭೇಟಿಗೆ ಬಂದೆ: ಕಾರಜೋಳ

    – ಒಡೆದ ಮನೆ ಆಗಿರೋ ಕಾಂಗ್ರೆಸ್‍ನಲ್ಲಿ ಮೂರು ಗುಂಪು

    ಚಿಕ್ಕಮಗಳೂರು: ನನ್ನ ಮಗ ಎರಡೂವರೆ ತಿಂಗಳುಗಳ ಕಾಲ ವೆಂಟಿಲೇಟರ್ ನಲ್ಲಿದ್ದ. ಆಗ ವಿನಯ್ ಗುರೂಜಿ ಬೆಂಗಳೂರಿಗೆ ಬಂದು ನಿಮ್ಮ ಮಗನಿಗೆ ಏನೂ ಆಗಲ್ಲ. ನೀವು ಭಯ ಪಡಬೇಡಿ. ದೇವರು ಕಾಪಾಡುತ್ತಾನೆ ಎಂದು ಹೇಳಿ ಆಶೀರ್ವಾದ ಮಾಡಿದ್ದರು. ಅವರ ಅಷ್ಟು ಕಳಕಳಿಯಿಂದ ಬೆಂಗಳೂರಿಗೆ ಬಂದು ಆಶೀರ್ವಾದ ಮಾಡಿದ್ದರು. ಈಗ ಮಗ ಚೆನ್ನಾಗಿದ್ದಾನೆ. ಹಾಗಾಗಿ ಅವರ ದರ್ಶನಕ್ಕಾಗಿ ಜಿಲ್ಲೆಗೆ ಬಂದಿದ್ದೇನೆ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದ್ದಾರೆ.

    ಇದೇ ವೇಳೆ ರಾಜ್ಯ ರಾಜಕೀಯದ ಕುರಿತಾಗಿ ಮಾತನಾಡಿದ ಅವರು, ನಾನು ಸಾಮಾನ್ಯವಾಗಿ ವಿವಾದಗಳ ಜೊತೆ ಇರಲ್ಲ. ಆದರೂ ನೀವು ಕೇಳುತ್ತಿದ್ದೀರಾ ಎಂದು ಹೇಳುತ್ತೇನೆ ಎಂದು ಹೇಳಿ ಮಾಜಿ ಸಿಎಂ ಕುಮಾರಸ್ವಾಮಿ ಅವರ ಹೇಳಿಕೆ ಹಾಸ್ಯಾಸ್ಪದ. ಪ್ರಧಾನಿ ಮೋದಿ ನೇತೃತ್ವದಲ್ಲಿ ಇಡೀ ದೇಶವೇ ಭಾರತೀಯ ಜನತಾ ಪಕ್ಷ ಆಗಿದೆ. 23 ರಾಜ್ಯಗಳಲ್ಲಿ ಬಿಜೆಪಿ ಅಧಿಕಾರದಲ್ಲಿದೆ. ಹಾಗಾದ್ರೆ ಕುಮಾರಸ್ವಾಮಿಯವರ ಆಶೀರ್ವಾದದಿಂದಲೇ ಬಂದಿದೆಯಾ ಎಂದು ವಿರುದ್ಧ ವ್ಯಂಗ್ಯವಾಡಿದರು. ಇದನ್ನೂ ಓದಿ: ನನಗೆ 70 ವರ್ಷ ವಯಸ್ಸಾಗಿದೆ- ಗೋವಿಂದ್ ಕಾರಜೋಳ ಕಣ್ಣೀರು– ನಾನು, ನನ್ನ ಕುಟುಂಬ ಕೊರೊನಾದಿಂದ ಬಳಲ್ತಿದ್ದೇವೆ

    ಕಾಶ್ಮೀರದಿಂದ ಕನ್ಯಾಕುಮಾರಿವರೆಗೂ ಬಿಜೆಪಿ ಸದೃಢವಾಗಿದೆ. 2009ರಲ್ಲೇ ಮೋದಿ ಭಾರತ ಕಾಂಗ್ರೆಸ್ ಮುಕ್ತ ಭಾರತವಾಗುತ್ತೆ ಎಂದಿದ್ದರು. ಇವತ್ತು ಕಾಂಗ್ರೆಸ್ ಭಾರತ ಮುಕ್ತ ಭಾರತವಾಗಿದ್ದು, ದೇಶದಲ್ಲಿ ಕಾಂಗ್ರೆಸ್ ಎಲ್ಲಿದೆ ಎಂದು ಪ್ರಶ್ನಿಸಿದರು. ಪಂಜಾಬ್ ಅಲ್ಲಿ-ಇಲ್ಲಿ ಒಂದೆರಡು ಬಿಟ್ಟರೇ ಎಲ್ಲಿದೆ ಎಂದರು. ಇನ್ನು ಕಾಂಗ್ರೆಸ್ ಪಕ್ಷ ಒಡೆದ ಮನೆಯಾಗಿದ್ದು ಸಿದ್ದರಾಮಯ್ಯನವರದ್ದು ಒಂದು ಗುಂಪು, ಡಿ.ಕೆ.ಶಿವಕುಮಾರ್ ಹಾಗೂ ಮಲ್ಲಿಕಾರ್ಜುನ ಖರ್ಗೆಯವರದ್ದು ಒಂದು ಗುಂಪು. ಈ ಮೂರು ಗುಂಪುಗಳ ಮಧ್ಯೆ ದಿನದ 24 ಗಂಟೆಯೂ ಒಳಗೆ ಗುದ್ದಾಟ ನಡೆಯುತ್ತಿರುತ್ತೆ. ಆ ಗುದ್ದಾಟ ಹೊಸದಲ್ಲ ಅದರಲ್ಲೇ ಕಾಂಗ್ರೆಸ್ ನೆಲಕಚ್ಚಿದೆ ಎಂದು ಕಾಂಗ್ರೆಸ್ ವಿರುದ್ಧ ಲೇವಡಿ ಮಾಡಿದರು.

  • ಸಿದ್ಧಾರ್ಥ್ ಹೆಗ್ಡೆ ಸಮಾಧಿ ಬಳಿ ಬುದ್ಧನ ವಿಗ್ರಹ ಪ್ರತಿಷ್ಠಾಪಿಸಿದ ವಿನಯ್ ಗುರೂಜಿ

    ಸಿದ್ಧಾರ್ಥ್ ಹೆಗ್ಡೆ ಸಮಾಧಿ ಬಳಿ ಬುದ್ಧನ ವಿಗ್ರಹ ಪ್ರತಿಷ್ಠಾಪಿಸಿದ ವಿನಯ್ ಗುರೂಜಿ

    – ಆ ಸಿದ್ಧಾರ್ಥ ಜ್ಞಾನ ಕೊಟ್ಟ, ಈ ಸಿದ್ಧಾರ್ಥ ಕೆಲಸ, ಬದುಕು ಕೊಟ್ಟ

    ಚಿಕ್ಕಮಗಳೂರು: ಕಾಫಿ ಡೇ ಮಾಲೀಕ ಸಿದ್ಧಾರ್ಥ್ ಹೆಗ್ಡೆ ಸಮಾಧಿ ಬಳಿ ಅವಧೂತ ವಿನಯ್ ಗುರೂಜಿ ಬುದ್ಧನ ವಿಗ್ರಹವನ್ನ ಪ್ರತಿಷ್ಠಾಪನೆ ಮಾಡಿದ್ದಾರೆ.

    ದಿವಂಗತ ಸಿದ್ಧಾರ್ಥ್ ಹೆಗ್ಡೆಯವರ ಸ್ವಗ್ರಾಮವಾದ ಮೂಡಿಗೆರೆ ತಾಲೂಕಿನ ಚೇತನಹಳ್ಳಿ ಎಸ್ಟೇಟಿಗೆ ಭೇಟಿ ನೀಡಿದ್ದ ವಿನಯ್ ಗುರೂಜಿ, ಅವರ ಸಮಾಧಿ ಬಳಿ ಬುದ್ಧನ ಮೂರ್ತಿಯನ್ನ ಪ್ರತಿಷ್ಠಾಪಿಸಿದ್ದಾರೆ. ಇದೇ ವೇಳೆ ಮಾತನಾಡಿ, ಆ ಸಿದ್ಧಾರ್ಥ ಜಗತ್ತಿಗೆ ಜ್ಞಾನ ಕೊಟ್ಟ, ಈ ಸಿದ್ಧಾರ್ಥ ಲಕ್ಷಾಂತರ ಜನರಿಗೆ ಜೀವನ ಹಾಗೂ ಬದುಕನ್ನ ಕೊಟ್ಟ ಎಂದು ಸಿದ್ಧಾರ್ಥ್ ಹೆಗ್ಡೆಯವರ ಸರಳ ವ್ಯಕ್ತಿತ್ವವನ್ನ ಸ್ಮರಿಸಿದ್ದಾರೆ.

    ಆಶ್ರಮದಲ್ಲಿ ಪೂಜಿಸುತ್ತಿದ್ದ ಬುದ್ಧನ ಮೂರ್ತಿಯನ್ನ ಸಿದ್ಧಾರ್ಥ್ ಹೆಗ್ಡೆಯವರ ಮನೆ ಪಕ್ಕದಲ್ಲಿನ ಅವರ ಸಮಾಧಿ ಬಳಿ ಪ್ರತಿಷ್ಠಾಪನೆ ಮಾಡಿದ್ದಾರೆ. ಈ ವೇಳೆ ಸಿದ್ಧಾರ್ಥ್ ಹೆಗ್ಡೆ ಅವರ ತಾಯಿ ವಾಸಂತಿ ಹೆಗ್ಡೆ ಹಾಗೂ ಕುಟುಂಬದ ಆಪ್ತರು ಭಾಗಿಯಾಗಿದ್ದರು. ಚೇತನಹಳ್ಳಿಗೆ ಭೇಟಿ ನೀಡುವ ಮುನ್ನ ವಿನಯ್ ಗುರೂಜಿ ಹೊರನಾಡು ಅನ್ನಪೂರ್ಣೇಶ್ವರಿಯ ದರ್ಶನ ಪಡೆದಿದ್ದಾರೆ. ಇದೇ ವೇಳೆ, ಹೊರನಾಡು ಅನ್ನಪೂರ್ಣೇಶ್ವರಿ ದೇಗುಲದ ಧರ್ಮಕರ್ತರಾದ ಭೀಮೇಶ್ವರ ಜೋಷಿಯವರು ವಿನಯ್ ಗುರೂಜಿಗೆ ಆತ್ಮೀಯ ಸ್ವಾಗತ ಕೋರಿದ್ದಾರೆ.

     

  • ಸಿದ್ಧಾರ್ಥ್ ಹೆಗ್ಡೆ ಸಮಾಧಿಗೆ ಬೋಧಿ ವೃಕ್ಷ ನೆಟ್ಟ ವಿನಯ್ ಗುರೂಜಿ

    ಸಿದ್ಧಾರ್ಥ್ ಹೆಗ್ಡೆ ಸಮಾಧಿಗೆ ಬೋಧಿ ವೃಕ್ಷ ನೆಟ್ಟ ವಿನಯ್ ಗುರೂಜಿ

    – ಬುದ್ಧ ಜಗತ್ತಿಗೆ ಪ್ರೇರಣೆ, ಸಿದ್ದಾರ್ಥ್ ಹೆಗ್ಡೆ ಯುವಕರಿಗೆ ಆದರ್ಶ

    ಚಿಕ್ಕಮಗಳೂರು: ಕಾಫಿ ಡೇ ಮಾಲೀಕ ದಿವಂಗತ ಸಿದ್ಧಾರ್ಥ್ ಹೆಗ್ಡೆ ಅವರ ಸಮಾಧಿ ಬಳಿ ಅವಧೂತ ವಿನಯ್ ಗುರೂಜಿ ಅರಳಿ ಗಿಡ ಹಾಗೂ ಬೋಧಿ ವೃಕ್ಷ ನೆಟ್ಟು ಸಿದ್ಧಾರ್ಥ್ ಹೆಗ್ಡೆ ಮತ್ತೊಮ್ಮೆ ಹುಟ್ಟಿ ಬರಲಿ ಎಂದು ಬೇಡಿಕೊಂಡಿದ್ದಾರೆ.

    ಜಿಲ್ಲೆಯ ಕೊಪ್ಪ ತಾಲೂಕಿನ ಹರಿಹರಪುರದ ಗೌರಿಗದ್ದೆ ಗ್ರಾಮದ ಸ್ವರ್ಣಪೀಠಿಕೇಶ್ವರಿ ದತ್ತಾಶ್ರಮದ ಅವಧೂತ ವಿನಯ್ ಗುರೂಜಿ ಜಿಲ್ಲೆಯ ಮೂಡಿಗೆರೆ ತಾಲೂಕಿನ ಸಿದ್ಧಾರ್ಥ್ ಹೆಗ್ಡೆ ಅವರ ಸ್ವಗ್ರಾಮ ಚೇತನಹಳ್ಳಿ ಎಸ್ಟೇಟ್‍ಗೆ ಭೇಟಿ ನೀಡಿದ್ದರು.

    ಭಾನುವಾರ ವಾಮನ ಜಯಂತಿ ದಿನ ಅಂದರೆ ವಿಷ್ಣು ವಾಮನ ಅವತಾರ ತಾಳಿದ ದಿನ. ಹಾಗಾಗಿ ನಿನ್ನೆ ಚೇತನಹಳ್ಳಿ ಎಸ್ಟೇಟ್ ಗೆ ಭೇಟಿ ನೀಡಿದ್ದ ವಿನಯ್ ಗುರೂಜಿ, ಲಕ್ಷಾಂತರ ಜನರ ಬದುಕಿಗೆ ದಾರಿ ದೀಪವಾಗಿದ್ದ ಸಿದ್ಧಾರ್ಥ್ ಹೆಗ್ಡೆ ಮತ್ತೊಮ್ಮೆ ಹುಟ್ಟಿ ಬರಲೆಂದು ಅದೇ ದಿನ ಅವರ ಸಮಾಧಿ ಬಳಿ ಅರಳಿ ಗಿಡ ನೆಟ್ಟಿದ್ದಾರೆ. ಇದೇ ವೇಳೆ, ಬುದ್ಧ ಇಡೀ ಪ್ರಪಂಚಕ್ಕೆ ಪ್ರೇರಣೆ, ಸಿದ್ಧಾರ್ಥ್ ಹೆಗ್ಡೆ ಯುವಕರಿಗೆ ಆದರ್ಶ ಎಂದು ಬುದ್ಧನಿಗೆ ಜ್ಞಾನೋದಯವಾದ ಬೋಧಿ ವೃಕ್ಷವನ್ನೂ ನೆಟ್ಟಿದ್ದಾರೆ.

    ಈ ವೇಳೆ ಸಿದ್ಧಾರ್ಥ್ ಹೆಗ್ಡೆ ತಾಯಿ ವಾಸಂತಿ ಹೆಗ್ಡೆ ಹಾಗೂ ಆಪ್ತರಷ್ಟೇ ಭಾಗಿಯಾಗಿದ್ದರು. ಗಿಡ ನೆಡುವ ಮುನ್ನ ತಿರುಪತಿಯಿಂದ ತಂದಿದ್ದ ಮೂಲ ಮಂತ್ರಾಕ್ಷತೆಯನ್ನು ಹಾಕಿದ ವಿನಯ್ ಗುರೂಜಿ ಅದೇ ಜಾಗದಲ್ಲಿ ಅರಳಿ ಗಿಡ ಹಾಗೂ ಬೋಧಿ ವೃಕ್ಷವನ್ನು ನೆಟ್ಟಿದ್ದಾರೆ. ಸಿದ್ಧಾರ್ಥ್ ಹೆಗ್ಡೆ ಅವರ ಫ್ಯಾಮಿಲಿ ವಿನಯ್ ಗುರೂಜಿಯ ಪರಮ ಭಕ್ತ ಕುಟುಂಬ. ಇದೇ ವೇಳೆ ಯಾರಿಗೂ ನೋವು ನೀಡದ ಜೀವ ಸಿದ್ಧಾರ್ಥ್ ಹೆಗ್ಡೆಯನ್ನು ವಿನಯ್ ಗುರೂಜಿ ನೆನೆದಿದ್ದಾರೆ.