Tag: Vinesh Phogat

  • ವಿನೇಶ್‌ ಫೋಗಟ್ ಹೋದಲ್ಲೆಲ್ಲ ಸತ್ಯನಾಶವಾಗಲಿದೆ: ಬ್ರಿಜ್ ಭೂಷಣ್ ಶರಣ್ ಸಿಂಗ್

    ವಿನೇಶ್‌ ಫೋಗಟ್ ಹೋದಲ್ಲೆಲ್ಲ ಸತ್ಯನಾಶವಾಗಲಿದೆ: ಬ್ರಿಜ್ ಭೂಷಣ್ ಶರಣ್ ಸಿಂಗ್

    – ಫೋಗಟ್ ಗೆಲುವಿಗೆ ಸಹಕರಿಸಿದ ಮಹಾನ್‌ ವ್ಯಕ್ತಿ ನಾನು!

    ಚಂಡೀಗಢ: ವಿನೇಶ್ ಫೋಗಟ್ (Vinesh Phogat) ಅವರು ಚುನಾವಣೆ ಗೆದ್ದರು, ಆದರೆ ಕಾಂಗ್ರೆಸ್‌ ಸೋಲು ಅನುಭವಿಸಿತು. ಅವರು ಹೋದಲ್ಲೆಲ್ಲ ಸತ್ಯನಾಶವಾಗಲಿದೆ ಎಂದು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಶರಣ್ ಸಿಂಗ್ (Brij Bhushan Singh) ತೀವ್ರ ವಾಗ್ದಾಳಿ ನಡೆಸಿದ್ದಾರೆ.

    ಹರಿಯಾಣ (Haryana) ವಿಧಾನಸಭಾ ಚುನಾವಣೆಯಲ್ಲಿ ಜುಲಾನಾ ಕ್ಷೇತ್ರದಿಂದ ವಿನೇಶ್ ಫೋಗಟ್ ಗೆಲುವು ಸಾಧಿಸಿದ್ದಾರೆ. ಅವರು ನನ್ನ ಹೆಸರನ್ನು ಹೇಳಿಕೊಂಡು ಗೆದ್ದಿದ್ದಾರೆ. ಇದರಿಂದಾಗಿ ಅವರ ಗೆಲುವಿಗೆ ಸಹಕರಿಸಿದ ಮಹಾನ್‌ ವ್ಯಕ್ತಿ ನಾನು ಎಂದು ಅವರು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಹರಿಯಾಣ ಚುನಾವಣೆ ಫಲಿತಾಂಶವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ: ಕಾಂಗ್ರೆಸ್‌

    ಕಾಂಗ್ರೆಸ್ (Congress) ಪಕ್ಷವನ್ನು ಪ್ರತಿನಿಧಿಸುತ್ತಿರುವ ವಿನೇಶ್ ಫೋಗಟ್ ಬಿಜೆಪಿಯ ಯೋಗೇಶ್ ಕುಮಾರ್ ಅವರನ್ನು 6,000 ಮತಗಳ ಅಂತರದಿಂದ ಸೋಲಿಸಿ ಜೂಲಾನಾ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ. ಈ ಗೆಲುವು ಕಾಂಗ್ರೆಸ್‌ಗೆ ಮಹತ್ವದ ಮೈಲಿಗಲ್ಲಾಗಿದೆ. ಏಕೆಂದರೆ ಇದು 2005ರ ಬಳಿಕ ಈ ಕ್ಷೇತ್ರದಲ್ಲಿ ಅವರ ಮೊದಲ ಗೆಲುವಾಗಿದೆ.

    ಗೆಲುವಿನ ಬಳಿಕ ಪ್ರತಿಕ್ರಿಯಿಸಿದ್ದ ವಿನೇಶ್ ಫೋಗಟ್ ʻಸತ್ಯಕ್ಕೆ ಜಯವಾಗಿದೆ’. ನನ್ನ ರಾಜಕೀಯ ಪ್ರವೇಶಕ್ಕೆ ಅನುವು ಮಾಡಿಕೊಟ್ಟ ಕಾಂಗ್ರೆಸ್ (Congress) ಪಕ್ಷಕ್ಕೆ ನಾನು ಧನ್ಯವಾದ ಅರ್ಪಿಸುತ್ತೇನೆ. ನಮ್ಮ ಸಮಯ ಸರಿಯಿಲ್ಲದೇ ಇರುವಾಗ ಮಾತ್ರ ನಮ್ಮ ಜೊತೆ ಯಾರು ನಿಂತಿದ್ದಾರೆ ಎಂದು ಗೊತ್ತಾಗುತ್ತದೆ. ಬಿಜೆಪಿ (BJP) ಪಕ್ಷವನ್ನು ಹೊರತುಪಡಿಸಿ ಇತರ ಎಲ್ಲಾ ಪಕ್ಷಗಳು ನನ್ನ ನೋವನ್ನು ಹಾಗೂ ನನ್ನ ಕಣ್ಣೀರನ್ನು ಅರ್ಥಮಾಡಿಕೊಂಡಿದ್ದವು ಎಂದಿದ್ದರು.

    ಒಲಿಂಪಿಕ್ಸ್‌ನಲ್ಲಿ ಅನರ್ಹಗೊಳ್ಳುವ ಮೂಲಕ ಸೋಲನ್ನು ಅನುಭವಿಸಿದ್ದರು. ಇದಾದ ಬಳಿಕ ಸೆ.4 ರಂದು ಕಾಂಗ್ರೆಸ್‌ಗೆ ಸೇರಿಕೊಂಡಿದ್ದರು. ಇದನ್ನೂ ಓದಿ: Jammu Kashmir Results | ಚುನಾವಣೆಯಲ್ಲಿ ಸೋತರೂ ಮತಗಳಿಕೆಯಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ ಬಿಜೆಪಿ

  • Haryana Results| ಕಾಂಗ್ರೆಸ್‌ ಸೋತಿದ್ದು ಹೇಗೆ? – ಇಲ್ಲಿದೆ 6 ಕಾರಣಗಳು

    Haryana Results| ಕಾಂಗ್ರೆಸ್‌ ಸೋತಿದ್ದು ಹೇಗೆ? – ಇಲ್ಲಿದೆ 6 ಕಾರಣಗಳು

    ನವದೆಹಲಿ: ಹರಿಯಾಣದಲ್ಲಿ ಬಿಜೆಪಿ (BJP) ಹ್ಯಾಟ್ರಿಕ್‌ ಸಾಧನೆ ಮಾಡಿದೆ. ಆಡಳಿತ ವಿರೋಧಿ ಅಲೆಯಿಂದ ಈ ಬಾರಿ ಗೆಲುವು ನಮ್ಮದೇ ಎಂದು ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್‌ ಸೋತಿದೆ.

    ಚುನಾವಣಾ (Haryana Election) ಪ್ರಚಾರ ಭಾಷಣದಲ್ಲಿ ಪ್ರಧಾನಿ ಮೋದಿ (PM Narendra Modi) ಅವರು ಕೇಂದ್ರದಲ್ಲಿ ಯಾವ ಪಕ್ಷ ಅಧಿಕಾರದಲ್ಲಿ ಇರುತ್ತದೋ ಆ ಪಕ್ಷಕ್ಕೆ ಹರಿಯಾಣ ಜನ ಮತ ಹಾಕುತ್ತಾರೆ ಎಂದು ಪದೇ ಪದೇ ಉಲ್ಲೇಖಿಸುತ್ತಿದ್ದರು. ಅದರಂತೆ ಮತ್ತೆ ಹರಿಯಾಣ ಜನತೆ ಬಿಜೆಪಿಗೆ ಮತ ನೀಡಿದ್ದಾರೆ.

    ಆಡಳಿತ ವಿರೋಧಿ ಅಲೆ, ರೈತರ ಆಕ್ರೋಶ, ಅಗ್ನಿವೀರ್‌ ನೇಮಕಾತಿ ಮತ್ತು ಕುಸ್ತಿಪಟುಗಳ ಪ್ರತಿಭಟನೆಯಿಂದ ಕಾಂಗ್ರೆಸ್‌ಗೆ ಲಾಭವಾಗಲಿದೆ ಎಂದೇ ಊಹಿಸಲಾಗಿತ್ತು. ಆದರೆ ಹರಿಯಾಣದಲ್ಲಿ ಈ ವಿಚಾರಗಳು ಕೆಲಸ ಮಾಡಿಲ್ಲ.

    ಕಾಂಗ್ರೆಸ್‌ ಸೋತಿದ್ದು ಹೇಗೆ?
    ಜಾಟ್ ಮತದಾರರ ಮೇಲೆ ಅತಿಯಾದ ಅವಲಂಬನೆ
    ರಾಜ್ಯದ ಮತದಾರರ ಪೈಕಿ ಸುಮಾರು 27% ರಷ್ಟಿರುವ ಜಾಟ್ ಮತದಾರರ ಮೇಲೆ ಕಾಂಗ್ರೆಸ್ ಹೆಚ್ಚು ಅವಲಂಬಿತವಾಗಿತ್ತು. ಜಾಟ್ ಪ್ರಾಬಲ್ಯದ ಸ್ಥಾನಗಳ ಪೈಕಿ, ಕೈತಾಲ್, ಜುಲಾನಾ, ಉಚ್ಚಾನ ಕಲಾನ್, ತೋಹಾನಾ, ದಬ್ವಾಲಿ, ಎಲೆನಾಬಾದ್, ನಾರ್ನಾಂಡ್, ಮೆಹಮ್, ಗರ್ಹಿ ಸಂಪ್ಲಾ-ಕಿಲೋಯ್ ಮತ್ತು ಬದ್ಲಿಯಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದ್ದರೂ ಪಾಣಿಪತ್ ಗ್ರಾಮಾಂತರ, ಸೋನಿಪತ್, ಗೊಹಾನಾ, ಬಧ್ರಾ, ಜಜ್ಜರ್ ಬಿಜೆಪಿ ಪರವಾಗಿ ಮತ ಚಲಾಯಿಸಿದ್ದಾರೆ.

    ಇನ್ನೊಂದು ಕಡೆ ಬಿಜೆಪಿ ಜಾಟ್‌ ಜೊತೆ ಒಬಿಸಿ ಮತಗಳನ್ನು ಸೆಳೆಯಲು ಮುಂದಾಯಿತು. ಚುನಾವಣೆ ವೇಳೆ ಜಾಟ್‌ ಮತಗಳು ಕಾಂಗ್ರೆಸ್‌ಗೆ ಬಿದ್ದರೂ ಬಿಜೆಪಿಗೂ ಬಿದ್ದಿದೆ. ಒಬಿಸಿ ವರ್ಗದ ಮತಗಳು ಬಿಜೆಪಿಗೆ ಬಿದ್ದ ಪರಿಣಾಮ ಕಾಂಗ್ರೆಸ್‌ ಚುನಾವಣೆಯಲ್ಲಿ ಸೋತಿದೆ. ಇದನ್ನೂ ಓದಿ: ಸತ್ಯಕ್ಕೆ ಜಯವಾಗಿದೆ: ಚೊಚ್ಚಲ ಚುನಾವಣೆಯಲ್ಲಿ ಜಯಭೇರಿ ಭಾರಿಸಿದ ಫೋಗಟ್ ಮಾತು

    ಆಂತರಿಕ ಕಿತ್ತಾಟ
    ಆಂತರಿಕ ಕಲಹಗಳು, ವಿಶೇಷವಾಗಿ ದಲಿತ ನಾಯಕಿ ಮತ್ತು ಸಿರ್ಸಾ ಸಂಸದೆ ಕುಮಾರಿ ಸೆಲ್ಜಾ ಮತ್ತು ಮಾಜಿ ಸಿಎಂ ಮತ್ತು ಜಾಟ್ ನಾಯಕ ಭೂಪಿಂದರ್ ಸಿಂಗ್ ಹೂಡಾ ನಡುವಿನ ಕಲಹದಿಂದ ಕಾಂಗ್ರೆಸ್‌ ಭಾರೀ ನಷ್ಟ ಅನುಭವಿಸಿದೆ.

    ಹೂಡಾ ಹೇಳಿದ ಅಭ್ಯರ್ಥಿಗಳಿಗೆ  ಟಿಕೆಟ್‌ ನೀಡಿದ್ದಕ್ಕಾಗಿ ಪಕ್ಷದೊಂದಿಗೆ ಅಸಮಾಧಾನಗೊಂಡಿದ್ದ ಸೆಲ್ಜಾ ಕೆಲವು ದಿನಗಳ ಕಾಲ ಪ್ರಚಾರದಿಂದಲೇ ದೂರ ಉಳಿದಿದ್ದರು. ಅವರನ್ನು ಮನವೊಲಿಸಿದ ಬಳಿಕ ಕೊನೆಯ ಹಂತದಲ್ಲಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದ್ದರು. ಅಷ್ಟೇ ಅಲ್ಲದೇ ಅವರು ಪದೇ ಪದೇ ಸಿಎಂ ಕುರ್ಚಿಯ ಮೇಲೆ ಹಕ್ಕು ಸಾಧಿಸಿದ್ದು ಪಕ್ಷಕ್ಕೆ ಮುಳುವಾಯಿತು.

    ಸಿಎಂ ಸೈನಿ ಪ್ರಭಾವ:
    2014ರ ಚುನಾವಣೆಯಲ್ಲಿ ಬಿಜೆಪಿ ಜಯಗಳಿಸಿದ್ದರೂ ಜಾಟ್‌ ಅಲ್ಲದ ಮನೋಹರ್‌ ಲಾಲ್‌ ಕಟ್ಟರ್‌ ಅವರನ್ನು ಸಿಎಂ ಹುದ್ದೆಗೆ ಬಿಜೆಪಿ ಹೈಕಮಾಂಡ್‌ ಆಯ್ಕೆ ಮಾಡಿತ್ತು.ರೈತರ ಹೋರಾಟ ತೀವ್ರಗೊಂಡ ಬಳಿಕ ಲೋಕಸಭೆ ಚುನಾವಣೆಗೂ ಮೊದಲು ಒಬಿಸಿ ಸಮುದಾಯ ನಯಾಬ್ ಸಿಂಗ್ ಸೈನಿಗೆ ಸಿಎಂ ಹುದ್ದೆ ನೀಡಿತ್ತು.

    ಕಾಂಗ್ರೆಸ್‌ ಯಾವಾಗಲೂ ಬಿಜೆಪಿಯನ್ನು ದಲಿತ ವಿರೋಧಿ ಎಂದು ದೂರಿಕೊಂಡೇ ಬಂದಿತ್ತು. ತನ್ನ ವಿರುದ್ಧ ಆರೋಪವನ್ನು ತೊಡೆದು ಹಾಕಲು ಬಿಜೆಪಿ ಸೈನಿಗೆ ಸಿಎಂ ಹುದ್ದೆ ನೀಡಿತ್ತು. ಇದರಿಂದಾಗಿ ಬಿಜೆಪಿ ದಲಿತ ಮತಗಳನ್ನು ಸೆಳೆಯುವಲ್ಲಿ ಯಶಸ್ವಿಯಾಯಿತು. ಅಷ್ಟೇ ಅಲ್ಲದೇ ಚುನಾವಣೆಯಲ್ಲಿ ಗೆದ್ದರೆ ನಯಾಬ್ ಸಿಂಗ್ ಸೈನಿಯೇ ಮುಖ್ಯಮಂತ್ರಿ ಆಗಿ ಮುಂದುವರಿಯಲಿದ್ದಾರೆ ಎಂದು ಹೇಳಿತ್ತು. ಆದರೆ ಕಾಂಗ್ರೆಸ್‌ ಈ ಚುನಾವಣೆಯಲ್ಲಿ ಸಿಎಂ ಅಭ್ಯರ್ಥಿಯನ್ನು ಪ್ರಕಟಿಸಿರಲಿಲ್ಲ. ಇದನ್ನೂ ಓದಿ: Haryana Election Results | ಆಪ್‌ನಿಂದ ಬಿಜೆಪಿ ಮುನ್ನಡೆ?

    ಅಭ್ಯರ್ಥಿಗಳ ಆಯ್ಕೆಯಲ್ಲಿ ವಿಫಲ:
    ಹರಿಯಾಣದಲ್ಲಿ ಇರುವುದು ಒಟ್ಟು 90 ಕ್ಷೇತ್ರಗಳು. ಆದರೆ ಕಾಂಗ್ರೆಸ್ಸಿನ 2,565 ಮಂದಿ ಟಿಕೆಟ್‌ಗಾಗಿ ಅರ್ಜಿ ಸಲ್ಲಿಸಿದ್ದರು. ಬಂಡಾಯ ಶಮನ ಮಾಡಲು ಅಭ್ಯರ್ಥಿಗಳ 8 ಪಟ್ಟಿಯನ್ನು ಬಿಡುಗಡೆ ಮಾಡಿತ್ತು. ಅಷ್ಟೇ ಅಲ್ಲದೇ ನಾಮಪತ್ರ ಸಲ್ಲಿಸುವ ಕೊನೆಯ ದಿನ ಕಾಂಗ್ರೆಸ್‌ ಪಟ್ಟಿಯನ್ನು ಬಿಡುಗಡೆ ಮಾಡಿತ್ತು.

    ಟಿಕೆಟ್‌ ಹಂಚಿಕೆಯಲ್ಲೂ ಭೂಪಿಂದರ್ ಸಿಂಗ್ ಹೂಡಾ ಮಾತೇ ಬಹಳಷ್ಟು ಕಡೆ ಫೈನಲ್‌ ಆಗಿತ್ತು. ಅವರ ಬೆಂಬಲಿಗರಿಗೆ ಟಿಕೆಟ್‌ ನೀಡುವಂತೆ ಹೈಕಮಾಂಡ್‌ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದರು. ಹೂಡಾ ಶಿಫಾರಸು ಮಾಡಿದ ಶಾಸಕರ ಪೈಕಿ 13 ಮಂದಿ ಮಾತ್ರ ಗೆದ್ದಿದ್ದಾರೆ.

    ಅತಿಯಾದ ಆತ್ಮವಿಶ್ವಾಸ:
    ಈ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಒಟ್ಟು 10 ಕ್ಷೇತ್ರಗಳ ಪೈಕಿ 5 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಹೀಗಾಗಿ ಕಾಂಗ್ರೆಸ್‌ ಈ ಚುನಾವಣೆಯನ್ನು ಗೆಲ್ಲಬಹುದು ಎಂದು ಅತಿಯಾದ ಆತ್ಮವಿಶ್ವಾಸವನ್ನು ಹೊಂದಿತ್ತು. ಆದರೆ ಲೋಕಸಭಾ ಚುನಾವಣೆಯಲ್ಲಿ ಸೋತ ಬಿಜೆಪಿ ತಳಮಟ್ಟದಿಂದ ಪಕ್ಷವನ್ನು ಸಂಘಟಿಸಲು ಆರಂಭಿಸಿತ್ತು.

    ಕೈ ಹಿಡಿಯದ ಗ್ಯಾರಂಟಿ:
    ಹರಿಯಾಣದಲ್ಲೂ ಕಾಂಗ್ರೆಸ್‌ ಭರ್ಜರಿ ಗ್ಯಾರಂಟಿ ಯೋಜನೆಗಳನ್ನು ಪ್ರಕಟಿಸಿತ್ತು. ಆದರೆ ಬಿಜೆಪಿ ಹಿಮಾಚಲ ಮತ್ತು ಕರ್ನಾಟಕದ ಉದಾಹರಣೆ ನೀಡಿ ರಾಜ್ಯದ ಅಭಿವೃದ್ಧಿ ಕುಂಠಿತವಾಗಿದೆ ಎಂದು ಪ್ರಚಾರ ಮಾಡಿತ್ತು. ಅದರಲ್ಲೂ ಮೋದಿ ಅವರು ಹಲವು ಬಾರಿ ಈ ಎರಡು ರಾಜ್ಯಗಳ ಉದಾಹರಣೆಯನ್ನು ಕಾಂಗ್ರೆಸ್‌ ಗ್ಯಾರಂಟಿಯನ್ನು ಟೀಕೆ ಮಾಡಿದ್ದರು.

  • ಸತ್ಯಕ್ಕೆ ಜಯವಾಗಿದೆ: ಚೊಚ್ಚಲ ಚುನಾವಣೆಯಲ್ಲಿ ಜಯಭೇರಿ ಭಾರಿಸಿದ ಫೋಗಟ್ ಮಾತು

    ಸತ್ಯಕ್ಕೆ ಜಯವಾಗಿದೆ: ಚೊಚ್ಚಲ ಚುನಾವಣೆಯಲ್ಲಿ ಜಯಭೇರಿ ಭಾರಿಸಿದ ಫೋಗಟ್ ಮಾತು

    ನವದೆಹಲಿ: ʻಸತ್ಯಕ್ಕೆ ಜಯವಾಗಿದೆ’ ಎಂದು ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ತನ್ನ ಮೊದಲ ಗೆಲುವು ಸಾಧಿಸಿದ ಬಳಿಕ ವಿನೇಶ್ ಫೋಗಟ್ (Vinesh Phogat) ಪ್ರತಿಕ್ರಿಯೆ ನೀಡಿದರು.

    ಹರಿಯಾಣ (Hariyana) ಚುನಾವಣೆಯ ಜೂಲಾನಾ (Julana) ಕ್ಷೇತ್ರದಿಂದ ಸ್ಪರ್ಧಿಸಿದ್ದ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಕುಸ್ತಿಪಟು ವಿನೇಶ್ ಫೋಗಟ್ 5 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಜಯಗಳಿಸಿದರು. ಒಲಿಂಪಿಕ್ಸ್‌ನಲ್ಲಿ ಅನರ್ಹಗೊಳ್ಳುವ ಮೂಲಕ ಸೋಲನ್ನು ಅನುಭವಿಸಿದ್ದರು. ಇದಾದ ಬಳಿಕ ಸೆ.4 ರಂದು ಕಾಂಗ್ರೆಸ್‌ಗೆ ಸೇರಿಕೊಂಡ ವಿನೇಶ್ ಇಂದು ಚುನಾವಣಾ ಕುಸ್ತಿಯಲ್ಲಿ ತನ್ನ ಚೊಚ್ಚಲ ಗೆಲುವನ್ನು ಸಾಧಿಸಿದ್ದಾರೆ.ಇದನ್ನೂ ಓದಿ: ಸೂರ್ಯನಿಗೆ ಬೇಕಿದೆ 39 ರನ್‌ – ವಿಶ್ವದಾಖಲೆ ಬರೆಯುವ ಸನಿಹದಲ್ಲಿ ಮಿಸ್ಟರ್‌ 360

    ಚೊಚ್ಚಲ ಗೆಲುವು ಕಂಡ ವಿನೇಶ್ ಮಾತನಾಡಿ, ನಾನು ಹೊಸ ಇನ್ನಿಂಗ್ಸ್ ಪ್ರಾರಂಭಿಸುತ್ತಿದ್ದೇನೆ. ನಾನು ನನ್ನ ಕ್ರೀಡಾ ಜೀವನದಲ್ಲಿ ಅನುಭವಿಸಿದ ನೋವನ್ನು ಬೇರೆ ಕ್ರೀಡಾಪಟುಗಳು ಅನುಭವಿಸುವುದು ಬೇಡ ಎಂದು ಬಯಸುತ್ತೇನೆ ಎಂದರು.

    ನನ್ನ ರಾಜಕೀಯ ಪ್ರವೇಶಕ್ಕೆ ಅನುವು ಮಾಡಿಕೊಟ್ಟ ಕಾಂಗ್ರೆಸ್ (Congress) ಪಕ್ಷಕ್ಕೆ ನಾನು ಧನ್ಯವಾದ ಅರ್ಪಿಸುತ್ತೇನೆ. ನಮ್ಮ ಸಮಯ ಸರಿಯಿಲ್ಲದೇ ಇರುವಾಗ ಮಾತ್ರ ನಮ್ಮ ಜೊತೆ ಯಾರು ನಿಂತಿದ್ದಾರೆ ಎಂದು ಗೊತ್ತಾಗುತ್ತದೆ. ಬಿಜೆಪಿ (BJP) ಪಕ್ಷವನ್ನು ಹೊರತುಪಡಿಸಿ ಇತರ ಎಲ್ಲಾ ಪಕ್ಷಗಳು ನನ್ನ ನೋವನ್ನು ಹಾಗೂ ನನ್ನ ಕಣ್ಣೀರನ್ನು ಅರ್ಥಮಾಡಿಕೊಂಡಿದ್ದವು ಎಂದರು.

    ವಿನೇಶ್ ಫೋಗಟ್ ಗೆಲುವು:
    ಅ.5 ರಂದು ನಡೆದ ಹರಿಯಾಣ ಚುನಾವಣೆಯ ಮತ ಎಣಿಕೆ ಮಂಗಳವಾರ ಬೆಳಿಗ್ಗೆ 8 ಗಂಟೆಗೆ ಪ್ರಾರಂಭವಾಯಿತು.

    ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿನ ಇತ್ತೀಚಿನ ಟ್ರೆಂಡ್‌ಗಳ ಪ್ರಕಾರ, ಹರಿಯಾಣ ವಿಧಾನಸಭೆಯಲ್ಲಿ ಬಿಜೆಪಿ ಬಹುಮತದ ಅಂಕವನ್ನು ದಾಟಿ 48 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿತ್ತು. ಆದರೆ ಕಾಂಗ್ರೆಸ್ 37 ಸ್ಥಾನಗಳಲ್ಲಿದ್ದು, 11 ಸ್ಥಾನಗಳಿಂದ ಹಿನ್ನಡೆಯಲ್ಲಿತ್ತು. ಆದರೂ ಕೂಡ ಜೂಲಾನಾ ಕ್ಷೇತ್ರದಿಂದ ವಿನೇಶ್ ಫೋಗಟ್ ಗೆಲುವನ್ನು ಸಾಧಿಸಿದ್ದಾರೆ. ಹರಿಯಾಣದಲ್ಲಿ ಬಿಜೆಪಿಯು ಮೂರನೇ ಅವಧಿಗೆ ಸಿದ್ಧವಾಗಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಪುನರಾಗಮನವನ್ನು ಊಹಿಸಿದ ಎಕ್ಸಿಟ್ ಪೋಲ್‌ನ ಫಲಿತಾಂಶಗಳು ಸುಳ್ಳಾಗಿವೆ.

    ಬಿಜೆಪಿ ಅಭ್ಯರ್ಥಿ ಯೋಗೇಶ್ ಕುಮಾರ್ ಮತ್ತು ವಿನೇಶ್ ಫೋಗಟ್ ಮಧ್ಯೆ ನೇರಾನೇರ ಪೈಪೋಟಿ ಇತ್ತು. ಆರಂಭದ ಮತ ಎಣಿಕೆಯಲ್ಲಿ ವಿನೇಶ್ ಫೋಗಟ್ ಅವರಿಗೆ ಮುನ್ನಡೆ ಸಿಕ್ಕಿದರೆ ನಂತರ ಯೋಗೇಶ್ ಕುಮಾರ್ ಅವರಿಗೆ ಮುನ್ನಡೆ ಸಿಕ್ಕಿತ್ತು. ಅಂತಿಮ ಸುತ್ತುಗಳ ಮತ ಎಣಿಕೆಯಲ್ಲಿ ಕಾಂಗ್ರೆಸ್‌ಗೆ ಹೆಚ್ಚು ಮತಗಳು ಬಿದ್ದ ಪರಿಣಾಮ ವಿನೇಶ್ ಫೋಗಟ್ ಮೊದಲ ಚುನಾವಣೆಯಲ್ಲಿ ಗೆದ್ದು ವಿಧಾನಸಭೆ ಪ್ರವೇಶಿಸಿದ್ದಾರೆ.ಇದನ್ನೂ ಓದಿ: ಕಿರಿಯ ವೈದ್ಯರ ಪ್ರತಿಭಟನೆಗೆ ಬೆಂಬಲ – ಆರ್‌ಜಿ ಕರ್ ಆಸ್ಪತ್ರೆಯ 45ಕ್ಕೂ ಹೆಚ್ಚು ಹಿರಿಯ ವೈದ್ಯರಿಂದ ರಾಜೀನಾಮೆ

  • Haryana Results| ಚುನಾವಣಾ ಕುಸ್ತಿಯಲ್ಲಿ ಗೆದ್ದ ವಿನೇಶ್‌ ಫೋಗಟ್‌

    Haryana Results| ಚುನಾವಣಾ ಕುಸ್ತಿಯಲ್ಲಿ ಗೆದ್ದ ವಿನೇಶ್‌ ಫೋಗಟ್‌

    ನವದೆಹಲಿ: ಹರ್ಯಾಣ ಚುನಾವಣೆಯಲ್ಲಿ (Haryana Election Results) ಜೂಲಾನಾ (Julana) ಕ್ಷೇತ್ರದಿಂದ ಸ್ಪರ್ಧಿಸಿದ್ದ ಕಾಂಗ್ರೆಸ್‌ ಅಭ್ಯರ್ಥಿ, ಮಾಜಿ ಕುಸ್ತಿ ಪಟು ವಿನೇಶ್‌ ಫೋಗಟ್‌ (Vinesh Phogat) 5 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಜಯಗಳಿಸಿದ್ದಾರೆ.

    ಬಿಜೆಪಿ ಅಭ್ಯರ್ಥಿ ಯೋಗೇಶ್‌ ಕುಮಾರ್‌ ಮತ್ತು ವಿನೇಶ್‌ ಫೋಗಟ್‌ ಮಧ್ಯೆ ನೇರಾನೇರಾ ಪೈಪೋಟಿ ಇತ್ತು. ಆರಂಭದ ಮತ ಎಣಿಕೆಯಲ್ಲಿ ವಿನೇಶ್‌ ಫೋಗಟ್‌ ಅವರಿಗೆ ಮುನ್ನಡೆ ಸಿಕ್ಕಿದರೆ ನಂತರ ಯೋಗೇಶ್‌ ಕುಮಾರ್‌ ಅವರಿಗೆ ಮುನ್ನಡೆ ಸಿಕ್ಕಿತ್ತು. ಅಂತಿಮ ಸುತ್ತುಗಳ ಮತ ಎಣಿಕೆಯಲ್ಲಿ ಕಾಂಗ್ರೆಸ್‌ ಹೆಚ್ಚು ಮತಗಳು ಬಿದ್ದ ಪರಿಣಾಮ ವಿನೇಶ್‌ ಫೋಗಟ್‌ ಮೊದಲ ಚುನಾವಣೆಯಲ್ಲಿ ಗೆದ್ದು ವಿಧಾನಸಭೆ ಪ್ರವೇಶಿಸಿದ್ದಾರೆ.

     

    ಹರ್ಯಾಣ ಚುನಾವಣೆಯಲ್ಲಿ ಕಿಸಾನ್‌, ಜವಾನ್‌, ಪೈಲ್ವಾನ್‌ ಘೋಷ ವಾಕ್ಯವನ್ನು ಇಟ್ಟುಕೊಂಡು ಕಾಂಗ್ರೆಸ್‌ ಚುನಾವಣೆ ಎದುರಿಸಿತ್ತು.

    ಮತ ಎಣಿಕೆಯ ಆರಂಭದ ಸುತ್ತುಗಳಲ್ಲಿ ಹರ್ಯಾಣದಲ್ಲಿ ಕಾಂಗ್ರೆಸ್‌ಗೆ ಮುನ್ನಡೆ ಸಿಕ್ಕಿತ್ತು. ನಂತರ ಬಿಜೆಪಿ ಮುನ್ನಡೆ ಸಾಧಿಸಿದೆ. ಮಧ್ಯಾಹ್ನ 1 ಗಂಟೆಯ ಟ್ರೆಂಡ್‌ ಪ್ರಕಾರ ಬಿಜೆಪಿ 48, ಕಾಂಗ್ರೆಸ್‌ 35, ಇತರರು 2 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.

  • Haryana Results| ಮಾಜಿ ಕುಸ್ತಿಪಟು ವಿನೇಶ್‌ ಫೋಗಟ್‌ಗೆ ಹಿನ್ನಡೆ

    Haryana Results| ಮಾಜಿ ಕುಸ್ತಿಪಟು ವಿನೇಶ್‌ ಫೋಗಟ್‌ಗೆ ಹಿನ್ನಡೆ

    ನವದೆಹಲಿ: ಹರ್ಯಾಣ ಚುನಾವಣೆಯಲ್ಲಿ (Haryana Election Results) ಜೂಲಾನಾ (Julana) ಕ್ಷೇತ್ರದಿಂದ ಸ್ಪರ್ಧಿಸಿದ್ದ ಕಾಂಗ್ರೆಸ್‌ ಅಭ್ಯರ್ಥಿ, ಮಾಜಿ ಕುಸ್ತಿ ಪಟು ವಿನೇಶ್‌ ಫೋಗಟ್‌ (Vinesh Phogat) ಅವರಿಗೆ ಹಿನ್ನಡೆಯಾಗಿದೆ.

    ಬಿಜೆಪಿ ಅಭ್ಯರ್ಥಿ ಯೋಗೇಶ್‌ ಕುಮಾರ್‌ 2,128 ಮತಗಳ ಮುನ್ನಡೆ ಸಾಧಿಸಿದ್ದಾರೆ. ಯೋಗೇಶ್‌ ಕುಮಾರ್‌ ಅವರಿಗೆ 9,404 ಮತಗಳು ಬಿದ್ದರೆ ವಿನೇಶ್‌ ಫೋಗಟ್‌ ಅವರಿಗೆ 7,276 ಮತಗಳು ಬಿದ್ದಿದೆ.

    ಬೆಳಗ್ಗೆ ಬೆಳಗ್ಗೆ 9 ಗಂಟೆಯ ವೇಳೆಗೆ ವಿನೇಶ್‌ ಫೋಗಟ್‌ 2012 ಮತಗಳ ಮುನ್ನಡೆ ಸಾಧಿಸಿದ್ದರು. ಒಟ್ಟು 15 ಸುತ್ತುಗಳಲ್ಲಿ ಎರಡನೇ ಸುತ್ತಿನ ಮತ ಎಣಿಕೆ ಮಾತ್ರ ಮುಕ್ತಾಯವಾಗಿದೆ.

    ಹಾವು ಏಣಿ ಆಟ:
    ಹರ್ಯಾಣ ಚುನಾವಣಾ ಫಲಿತಾಂಶದ ಮೇಲೆ ಈಗ ಎಲ್ಲರ ಗಮನ ನೆಟ್ಟಿದೆ. ಆರಂಭದ ಮತ ಎಣಿಕೆ ವೇಳೆ ಕಾಂಗ್ರೆಸ್‌ ಭಾರೀ ಮುನ್ನಡೆ ಸಾಧಿಸಿತ್ತು. ಆದರೆ ನಂತರ ಬಿಜೆಪಿ ಮುನ್ನಡೆ ಸಾಧಿಸಿದೆ.

    ಬೆಳಗ್ಗೆ 10:30ರ ಟ್ರೆಂಡ್‌ ಪ್ರಕಾರ ಬಿಜೆಪಿ 47, ಕಾಂಗ್ರೆಸ್‌ 35, ಇತರರು 8 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಇತರರು 8 ಮಂದಿ ಪೈಕಿ 3 ಮಂದಿ ಬಿಜೆಪಿ ರೆಬೆಲ್‌ಗಳಾಗಿರುವುದು ವಿಶೇಷ.

  • ವಿನೇಶ್‌ ಫೋಗಟ್‌ಗೆ ಆರಂಭಿಕ ಮುನ್ನಡೆ – ಜಮ್ಮು-ಕಾಶ್ಮೀರ, ಹರಿಯಾಣದಲ್ಲಿ ಕಾಂಗ್ರೆಸ್‌ಗೆ ಭರ್ಜರಿ ಮುನ್ನಡೆ

    ವಿನೇಶ್‌ ಫೋಗಟ್‌ಗೆ ಆರಂಭಿಕ ಮುನ್ನಡೆ – ಜಮ್ಮು-ಕಾಶ್ಮೀರ, ಹರಿಯಾಣದಲ್ಲಿ ಕಾಂಗ್ರೆಸ್‌ಗೆ ಭರ್ಜರಿ ಮುನ್ನಡೆ

    ನವದೆಹಲಿ: ಜಮ್ಮು ಮತ್ತು ಕಾಶ್ಮೀರ (Jammu Kashmir) ಹಾಗೂ ಹರಿಯಾಣ (Haryana) ರಾಜ್ಯಗಳ ಚುನಾವಣಾ ಮತ ಎಣಿಕೆ ನಡೆಯುತ್ತಿದ್ದು, ಎರಡೂ ರಾಜ್ಯಗಳಲ್ಲಿ ಕಾಂಗ್ರೆಸ್‌ ಆರಂಭಿಕ ಮುನ್ನಡೆ ಸಾಧಿಸಿದೆ. ಈ ಬೆನ್ನಲ್ಲೇ ಹರಿಯಾಣದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಸಂಭ್ರಮಾಚರಣೆ ಆಚರಿಸುತ್ತಿದ್ದಾರೆ.

    ಬೆಳಗ್ಗೆ 8:15ರ ವೇಳೆಗೆ ಹರಿಯಾಣದಲ್ಲಿ ಕಾಂಗ್ರೆಸ್‌ 29, ಬಿಜೆಪಿ 17, ಐಎನ್‌ಎಲ್‌ಡಿ 2 ಹಾಗೂ ಇತರೇ ಪಕ್ಷಗಳು 2 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿವೆ. ಇನ್ನೂ ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಂಗ್ರೆಸ್‌ ಮತ್ತು ಎನ್‌ಸಿ ಮೈತ್ರಿ ಕೂಟ 10, ಬಿಜೆಪಿ 8, ಪಿಡಿಪಿ 2 ಹಾಗೂ ಇತರೇ ಪಕ್ಷಗಳು 1 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿವೆ. ಚುನಾವಣೋತ್ತರ ಫಲಿತಾಂಶಗಳು ಈ ಬಾರಿ ಹರಿಯಾಣದಲ್ಲಿ ಕಾಂಗ್ರೆಸ್‌ ಹಾಗೂ ಜಮ್ಮು ಮತ್ತು ಕಾಶ್ಮೀರದಲ್ಲಿ ಮೈತ್ರಿಕೂಟಕ್ಕೆ ಅಧಿಕಾರ ಎಂದು ಭವಿಷ್ಯ ನುಡಿದಿವೆ.

    ಉಭಯ ರಾಜ್ಯಗಳಲ್ಲಿ ತಲಾ 90 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಚುನಾವಣೆಯ ಫಲಿತಾಂಶ (Election Result) ಇಂದು ಹೊರ ಬೀಳಲಿದೆ. ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಕಾರ್ಯ ಆರಂಭವಾಗಿದೆ.  ಇದನ್ನೂ ಓದಿ: Haryana Result | 2 ಲಕ್ಷ ಸರ್ಕಾರಿ ಉದ್ಯೋಗ ಭರವಸೆ, 100 ಚದರ ಅಡಿ ಸೈಟು ಫ್ರೀ ಗ್ಯಾರಂಟಿ: ಯಾರ ʻಕೈʼ ಮೇಲಾಗುತ್ತೆ?

    2019ರ ಅಸೆಂಬ್ಲಿ ಚುನಾವಣೆಯಲ್ಲಿ ರಾಜ್ಯದ 90 ಸ್ಥಾನಗಳಲ್ಲಿ ಬಿಜೆಪಿ 40, ಕಾಂಗ್ರೆಸ್ 31 ಮತ್ತು ಜನನಾಯಕ ಜನತಾ ಪಕ್ಷ (ಜೆಜೆಪಿ) 10 ಸ್ಥಾನಗಳನ್ನು ಗೆದ್ದಿದ್ದವು. ಜೆಜೆಪಿ ಬೆಂಬಲದೊಂದಿಗೆ ಬಿಜೆಪಿ ಸರ್ಕಾರ ರಚಿಸಿತ್ತು. ದುಶ್ಯಂತ್ ಚೌಟಾಲಾ ಉಪಮುಖ್ಯಮಂತ್ರಿಯಾದರು. ಮಾರ್ಚ್‌ನಲ್ಲಿ ಬಿಜೆಪಿ ಮನೋಹರ್ ಲಾಲ್ ಖಟ್ಟರ್ ಬದಲಿಗೆ ನಯಾಬ್ ಸಿಂಗ್ ಸೈನಿ ಅವರನ್ನು ಮುಖ್ಯಮಂತ್ರಿಯಾಗಿ ನೇಮಿಸಿದ ನಂತರ ಮೈತ್ರಿ ಕೊನೆಗೊಂಡಿತ್ತು. ಇದೀಗ ಹ್ಯಾಟ್ರಿಕ್‌ ಗೆಲುವು ಸಾಧಿಸುವ ಮೂಲಕ ಬಿಜೆಪಿ ಅಧಿಕಾರದ ಗದ್ದುಗೆ ಏರುವ ವಿಶ್ವಾಸದಲ್ಲಿದ್ದರೆ, ಕಾಂಗ್ರೆಸ್‌ ಅಧಿಕಾರ ಹಿಡಿಯಲು ಪ್ರಯತ್ನಿಸಿದೆ. ಇದನ್ನೂ ಓದಿ: ರಾಜಕೀಯ ಕೈದಿಗಳಿಗೆ ಕ್ಷಮಾದಾನ, ಆರ್ಟಿಕಲ್‌ 370 ಮರುಸ್ಥಾಪನೆ – J&K ನಲ್ಲಿ ಪಕ್ಷಗಳ ಪ್ರಣಾಳಿಕೆ ಬಲ ನೀಡುತ್ತಾ? 

  • ಪ್ಯಾರಿಸ್‌ ಒಲಿಂಪಿಕ್ಸ್‌ನಿಂದ ಅನರ್ಹಗೊಂಡ ನಂತ್ರ ಮೋದಿ ಮಾತನಾಡಲು ಮುಂದಾಗಿದ್ದರು, ನಾನೇ ನಿರಾಕರಿಸಿದ್ದೆ: ವಿನೇಶ್‌

    ಪ್ಯಾರಿಸ್‌ ಒಲಿಂಪಿಕ್ಸ್‌ನಿಂದ ಅನರ್ಹಗೊಂಡ ನಂತ್ರ ಮೋದಿ ಮಾತನಾಡಲು ಮುಂದಾಗಿದ್ದರು, ನಾನೇ ನಿರಾಕರಿಸಿದ್ದೆ: ವಿನೇಶ್‌

    – ಕಾಳಜಿ ಇದ್ದಿದ್ದರೆ ವೀಡಿಯೋ ಮಾಡದೇ ಕ್ರೀಡಾಪಟುಗಳನ್ನ ಅಭಿನಂದಿಸಬಹುದಿತ್ತು ಎಂದ ವಿನೇಶ್‌

    ಚಂಡೀಗಢ: ಪ್ಯಾರಿಸ್‌ ಒಲಿಂಪಿಕ್ಸ್‌ನಿಂದ (Paris Olympics 2024) ನಾನು ಅನರ್ಹಗೊಂಡ ನಂತರ ಮೋದಿ (PM Modi) ಮಾತನಾಡಲು ಮುಂದಾಗಿದ್ದರು. ಆದರೆ ನಾನೇ ಮಾತನಾಡಲು ನಿರಾಕರಿಸಿದ್ದೆ. ಏಕೆಂದರೆ ನಾನು ಮಾತನಾಡಿದ್ದರೇ ಅದನ್ನು ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡುತ್ತಿದ್ದರು ಎಂದು ವಿನೇಶ್‌ ಫೋಗಟ್‌ (Vinesh Phogat) ಹೇಳಿಕೊಂಡಿದ್ದಾರೆ.

    ಹರಿಯಾಣ ವಿಧಾನಸಭಾ ಚುನಾವಣೆಗೆ (Haryana assembly Poll) ಜುಲಾನಾ ಕ್ಷೇತ್ರದಿಂದ ಸ್ಪರ್ಧಿಸಿರುವ ವಿನೇಶ್‌ ಒಲಿಂಪಿಕ್ಸ್‌ ದಿನಗಳನ್ನು ಮತ್ತೊಮ್ಮೆ ನೆನೆದಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ, ನಾನು ಪ್ಯಾರಿಸ್‌ ಒಲಿಂಪಿಕ್ಸ್‌ನಿಂದ ಅನರ್ಹಗೊಂಡ ನಂತರ ಪ್ರಧಾನಿ ಮೋದಿ ನನ್ನೊಂದಿಗೆ ದೂರವಾಣಿಯಲ್ಲಿ ಮಾತನಾಡಲು ಮುಂದಾಗಿದ್ದರು. ಆದ್ರೆ ನಾನೇ ಮಾತನಾಡಲು ನಿರಾಕರಿಸಿದ್ದೆ ಎಂದಿದ್ದಾರೆ. ಇದನ್ನೂ ಓದಿ: ನಕಲಿ ದಾಖಲೆ ಸೃಷ್ಟಿಸಿ ಪಾಸ್‌ಪೋರ್ಟ್‌ – ದಾವಣಗೆರೆಯ ಪಾಕ್ ಸೊಸೆ ಚೆನ್ನೈನಲ್ಲಿ ಅರೆಸ್ಟ್‌

    ಪ್ರಧಾನಿಯೊಂದಿಗೆ ದೂರವಾಣಿಯಲ್ಲಿ ಮಾತನಾಡಲು ನಿರಾಕರಿಸಿದ್ದೆ. ಏಕೆಂದರೆ ನಾನೂ ಮಾತನಾಡಿದ್ದರೆ, ಆ ವೀಡಿಯೋವನ್ನು ಸೋಷಿಯಲ್‌ ಮೀಡಿಯಾದಲ್ಲಿ ಅಪ್‌ಲೋಡ್‌ ಮಾಡುತ್ತಿದ್ದರು. ಈ ಬಗ್ಗೆ ಮುಂಚೆಯೇ ನನಗೆ ಹೇಳಿದ್ದರು. ಮೋದಿ ಅವರೊಂದಿಗಿನ ಸಂವಾದವನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಾಕಲು ರೆಕಾರ್ಡ್‌ ಮಾಡಲಾಗುತ್ತದೆ ಎಂದು ಹೇಳಿದ್ದರು. ನನ್ನ ಭಾವನೆಗಳು, ನನ್ನ ಕಠಿಣ ಪರಿಶ್ರಮ, ಸೋಷಿಯಲ್‌ ಮೀಡಿಯಾದಲ್ಲಿ ಗೇಲಿ ಮಾಡುವುದು ನನಗೆ ಇಷ್ಟವಿರಲಿಲ್ಲ. ಅದಕ್ಕಾಗಿ ಪ್ರಧಾನಿ ಜೊತೆ ಮಾತನಾಡಲು ನಿರಾಕರಿಸಿದೆ. ಪ್ರಚಾರಕ್ಕಾಗಿ ಯಾವುದೇ ಷರತ್ತುಗಳಿಲ್ಲದೇ ಪ್ರಧಾನಿಯೊಂದಿಗಿನ ಸಂಭಾಷಣೆಯನ್ನು ನಾನು ಪ್ರಸಂಶಿಸುತ್ತೇನೆ ಎಂದು ಹೇಳಿಕೊಂಡಿದ್ದಾರೆ.

    ಪ್ಯಾರಿಸ್‌ನಲ್ಲಿ ಪದಕ ಗೆದ್ದ ಎಲ್ಲಾ ಅಥ್ಲಿಟ್‌ಗಳಿಗೆ ಪ್ರಧಾನಿ ಮೋದಿ ಕರೆ ಮಾಡಿ ಸಂವಾದ ನಡೆಸಿ ಅವರ ಪ್ರಯತ್ನಗಳಿಗಾಗಿ ಅಭಿನಂದಿಸಿದರು. ಅವರಿಗೆ ನಿಜವಾಗಿಯೂ ಕ್ರೀಡಾಪಟುಗಳ ಬಗ್ಗೆ ಕಾಳಜಿ ಇದ್ದಿದ್ದರೆ, ಅದನ್ನ ರೆಕಾರ್ಡ್ ಮಾಡದೆಯೇ ಕರೆ ಮಾಡಿ ಅಭಿನಂದನೆ ಸಲ್ಲಿಸಬಹುದಿತ್ತು, ಅದಕ್ಕೆ ನಾನೂ ಕೃತಜ್ಞಳಾಗಿರುತ್ತಿದ್ದೆ. ಅಲ್ಲದೇ ನನ್ನೊಂದಿಗೆ ಮಾತನಾಡಿದ್ರೆ, ಕಳೆದ 2 ವರ್ಷಗಳ ಹಿಂದಿನ ಘಟನೆಯನ್ನು ಕೆದಕುತ್ತಾಳೆ ಅನ್ನೋದು ಅರಿವಿಗೆ ಬಂದಿದೆ ಎಂದು ಕುಟುಕಿದ್ದಾರೆ. ಇದನ್ನೂ ಓದಿ: ಬ್ಯಾಂಕಾಕ್‌ನಿಂದ ಕೊಡಗಿಗೆ, ಕೊಡಗಿನಿಂದ ದುಬೈಗೆ ಹೈಡ್ರೋ ಗಾಂಜಾವಸ್ತು ರವಾನೆ – ಅಂತಾರಾಷ್ಟ್ರೀಯ ಪೆಡ್ಲರ್‌ಗಳ ಜಾಲ ಬೇಧಿಸಿದ ಪೊಲೀಸರು

    ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ವಿನೇಶ್‌ ಅನರ್ಹಗೊಂಡಿದ್ದೇಕೆ?
    ಮಹಿಳಾ ಕುಸ್ತಿಪಟು ವಿಭಾಗದಲ್ಲಿ ಇದೇ ಮೊದಲಬಾರಿಗೆ ಒಲಿಂಪಿಕ್ಸ್‌ ಫೈನಲ್‌ ಪ್ರವೇಶಿಸಿದ ವಿನೇಶ್‌ ಫೋಗಟ್‌ ಚಿನ್ನದ ಪದಕ ಗೆಲ್ಲುವ ಭರವಸೆ ಮೂಡಿಸಿದ್ದರು. ಆದ್ರೆ 50 ಕೆಜಿ ವಿಭಾಗದಲ್ಲಿ ಸ್ಪರ್ಧಿಸಬೇಕಿದ್ದ ವಿನೇಶ್‌ 150 ಗ್ರಾಂ ತೂಕ ಅಧಿಕವಿದ್ದದ ಕಾರಣ ಅವರನ್ನು ಅನರ್ಹಗೊಳಿಸಲಾಗಿತ್ತು.

  • Haryana Poll | ಬಿಜೆಪಿಯಿಂದ 21 ಅಭ್ಯರ್ಥಿಗಳ 2ನೇ ಪಟ್ಟಿ ರಿಲೀಸ್‌ – ವಿನೇಶ್‌ ವಿರುದ್ಧ ಪ್ರಬಲ ಅಭ್ಯರ್ಥಿ ಅಖಾಡಕ್ಕೆ

    Haryana Poll | ಬಿಜೆಪಿಯಿಂದ 21 ಅಭ್ಯರ್ಥಿಗಳ 2ನೇ ಪಟ್ಟಿ ರಿಲೀಸ್‌ – ವಿನೇಶ್‌ ವಿರುದ್ಧ ಪ್ರಬಲ ಅಭ್ಯರ್ಥಿ ಅಖಾಡಕ್ಕೆ

    ಚಂಡೀಗಢ: ಹರಿಯಾಣ ವಿಧಾನಸಭೆ ಚುನಾವಣೆಗೆ (Haryana Elections) ಬಿಜೆಪಿಯು 21 ಅಭ್ಯರ್ಥಿಗಳ 2ನೇ ಪಟ್ಟಿಯನ್ನು ಮಂಗಳವಾರ ಬಿಡುಗಡೆ ಮಾಡಿದೆ.

    90 ಸದಸ್ಯ ಬಲದ ಹರಿಯಾಣ ವಿಧಾನಸಭೆಗೆ ಬಿಜೆಪಿ ಈವರೆಗೆ 87 ಅಭ್ಯರ್ಥಿಗಳನ್ನು (BJP Candidates) ಘೋಷಣೆ ಮಾಡಿದೆ. ಇತ್ತೀಚೆಗಷ್ಟೇ ಕಾಂಗ್ರೆಸ್‌ ಸೇರ್ಪಡೆಯಾದ ಕುಸ್ತಿಪಟು ವಿನೇಶ್‌ ಫೋಗಟ್‌ (Vinesh Phogat) ವಿರುದ್ಧ ಜುಲಾನಾ ಕ್ಷೇತ್ರದಿಂದ ಕ್ಯಾಪ್ಟನ್‌ ಯೋಗೇಶ್‌ ಬೈರಾಗಿ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ. ಇದನ್ನೂ ಓದಿ: Hit-and-Run Case | ಬಾರ್‌ನಿಂದ ಬಂದು ಹಲವು ಕಾರುಗಳಿಗೆ ಡಿಕ್ಕಿ – ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷನ ಪುತ್ರ ಪರಾರಿ

    67 ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ, ಪಕ್ಷವು ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ (Nayab Singh Saini) ಅವರನ್ನು ಕರ್ನಾಲ್‌ನಿಂದ ಲಾಡ್ವಾ ಸ್ಥಾನಕ್ಕೆ ಕಣಕ್ಕಿಳಿಸಿದೆ. ಸೈನಿ ಅವರು 2019ರಿಂದ 2024ರ ಅವಧಿಯಲ್ಲಿ ಸಂಸದರಾಗಿ ಸೇವೆ ಸಲ್ಲಿಸಿದ್ದಾರೆ. ಅಲ್ಲದೇ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಆಗಿರುವ ಓಂ ಪ್ರಕಾಶ್ ಧನಕರ್ ಅವರನ್ನು ಬದ್ಲಿ ಕ್ಷೇತ್ರದಿಂದ ಕಣಕ್ಕಿಳಿಸಲಾಗಿದೆ. ಜೊತೆಗೆ ಮಾಜಿ ರಾಜ್ಯ ಸಚಿವ ಅನಿಲ್ ವಿಜ್ ಅವರು ತಮ್ಮ ಸಾಂಪ್ರದಾಯಿಕ ಭದ್ರಕೋಟೆಯಾದ ಅಂಬಾಲಾ ಕ್ಯಾಂಟ್‌ನಿಂದ ಸ್ಪರ್ಧಿಸಲು ಸಿದ್ಧರಾಗಿದ್ದಾರೆ. ಇದನ್ನೂ ಓದಿ: ವಯನಾಡು ದುರಂತದ ಬಳಿಕ ಸರ್ಕಾರ ಅಲರ್ಟ್- ಕಾಫಿನಾಡಲ್ಲಿ 40 ಅನಧಿಕೃತ ಹೋಂ ಸ್ಟೇ, ರೆಸಾರ್ಟ್‌ಗಳಿಗೆ ನೋಟಿಸ್

    ಈ ಬಾರಿ ಅಧಿಕಾರದ ಗದ್ದುಗೆ ಹಿಡಿಯಲು ಪಣ ತೊಟ್ಟಿರುವ ಬಿಜೆಪಿ ಪಕ್ಷದ ನಿಷ್ಠಾವಂತರಿಗೆ ಟಿಕೆಟ್‌ ನೀಡಿದೆ. ಈ ಹಿಂದೆ ಜನನಾಯಕ್ ಜನತಾ ಪಾರ್ಟಿ (ಜೆಜೆಪಿ)ಯಲ್ಲಿದ್ದ ದೇವೆಂದರ್ ಸಿಂಗ್ ಸದ್ಯ ಬಿಜೆಪಿಯಿಂದ ಬಬ್ಲಿ ಕ್ಷೇತ್ರದ ಅಭ್ಯರ್ಥಿಯಾಗಿದ್ದಾರೆ. ಹರಿಯಾಣದ ಮಾಜಿ ಸಿಎಂ ಬನ್ಸಿ ಲಾಲ್ ಅವರ ಮೊಮ್ಮಗಳು ಶ್ರುತಿ ಚೌಧರಿ ತೋಷಮ್‌ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಬಿಜೆಪಿ ಸತತ ಹ್ಯಾಟ್ರಿಕ್‌ ಗೆಲುವಿನ ವಿಶ್ವಾಸದಲ್ಲಿದೆ. ಇದನ್ನೂ ಓದಿ: ರೇಣುಕಾಸ್ವಾಮಿ ಕೊಲೆ ಕೇಸ್‌ – ಫಾಸ್ಟ್‌ ಟ್ರ್ಯಾಕ್‌ ಕೋರ್ಟ್‌ಗೆ ವರ್ಗಾಯಿಸಲು ಚಿಂತನೆ: ಬಿ.ದಯಾನಂದ್‌

    ಮುಂದಿನ ಅಕ್ಟೋಬರ್ 5 ರಂದು ವಿಧಾನಸಭಾ ಚುನಾವಣೆ ನಡೆಯಲಿದ್ದು, ಅಕ್ಟೋಬರ್ 8 ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. ಇದನ್ನೂ ಓದಿ: ಭೂ ಸುಧಾರಣೆ ತಿದ್ದುಪಡಿ ಕಾಯ್ದೆ ರಾಜ್ಯದಲ್ಲಿ ರದ್ದು ಮಾಡಿ- ಸಿಎಂಗೆ ಕುರುಬೂರು ಶಾಂತಕುಮಾರ್ ಮನವಿ 

  • ವಿನೇಶ್ ಫೋಗಟ್, ಬಜರಂಗ್ ರಾಜೀನಾಮೆ ಅಂಗೀಕರಿಸಿದ ರೈಲ್ವೇ

    ವಿನೇಶ್ ಫೋಗಟ್, ಬಜರಂಗ್ ರಾಜೀನಾಮೆ ಅಂಗೀಕರಿಸಿದ ರೈಲ್ವೇ

    ನವದೆಹಲಿ: ಒಲಿಂಪಿಕ್ ಕುಸ್ತಿಪಟುಗಳಾದ ವಿನೇಶ್ ಫೋಗಟ್ (Vinesh Phogat) ಹಾಗೂ ಬಜರಂಗ್ ಪುನಿಯಾ (Bajrang Punia) ಅವರ ರಾಜೀನಾಮೆಯನ್ನು ಭಾರತೀಯ ರೈಲ್ವೇ ಅಂಗೀಕರಿಸಿದೆ.

    ಕಾಂಗ್ರೆಸ್ ಸೇರ್ಪಡೆಗೂ ಮುನ್ನ ಭಾರತೀಯ ರೈಲ್ವೆಯಲ್ಲಿನ (Indian Railways) ತಮ್ಮ ಹುದ್ದೆಗಳಿಗೆ ರಾಜೀನಾಮೆ ಸಲ್ಲಿಸಿದ್ದರು. ಇದೀಗ ಕಾಂಗ್ರೆಸ್ ಸೇರ್ಪಡೆ ಬೆನ್ನಲ್ಲೇ ರಾಜೀನಾಮೆ ಅಂಗೀಕಾರಗೊಂಡಿದೆ.ಇದನ್ನೂ ಓದಿ: ‘ಭೂತ್ ಬಂಗ್ಲಾ’ ಕಥೆ ಹೇಳಲು ಸಜ್ಜಾದ ಅಕ್ಷಯ್ ಕುಮಾರ್

    ಇತ್ತೀಚಿಗಷ್ಟೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ನವದೆಹಲಿಯಲ್ಲಿ ಭೇಟಿಯಾದ ನಂತರ ಅವರ ರಾಜಕೀಯ ಪ್ರವೇಶದ ಬಗ್ಗೆ ಊಹಾಪೋಹಗಳು ವ್ಯಕ್ತವಾಗಿದ್ದವು. ಅದಾದ ಬಳಿಕ ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದರು. ಸೇರ್ಪಡೆಯಾದ ಬಳಿಕ ಕುಸ್ತಿಪಟು ವಿನೇಶ್ ಫೋಗಟ್‌ಗೆ ಹರಿಯಾಣ ಚುನಾವಣೆಯಲ್ಲಿ (Hariyana) ಸ್ಪರ್ಧಿಸಲು ಕಾಂಗ್ರೆಸ್ ಟಿಕೆಟ್ ನೀಡಿತ್ತು.

    ಪಕ್ಷ ಸೇರ್ಪಡೆಗೂ ಮುನ್ನ ವಿನೇಶ್ ಫೋಗಟ್ ಹಾಗೂ ಬಜರಂಗ್ ಪುನಿಯಾ ಭಾರತೀಯ ರೈಲ್ವೆಯಲ್ಲಿರುವ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದರು. ಭಾರತೀಯ ರೈಲ್ವೆಗೆ ಸೇವೆ ಸಲ್ಲಿಸುವುದು ನನ್ನ ಜೀವನದ ಸ್ಮರಣೀಯ ಮತ್ತು ಹೆಮ್ಮೆಯ ಸಮಯ. ನನ್ನ ಜೀವನದ ಈ ಹಂತದಲ್ಲಿ ನಾನು ರೈಲ್ವೆ ಸೇವೆಯಿಂದ ಹೊರಬರಲು ನಿರ್ಧರಿಸಿದೆ. ನನ್ನ ರಾಜೀನಾಮೆಯನ್ನು ಭಾರತೀಯ ರೈಲ್ವೆಯ ಸಮರ್ಥ ಅಧಿಕಾರಿಗಳಿಗೆ ಸಲ್ಲಿಸಿದ್ದೇನೆ. ರಾಷ್ಟ್ರದ ಸೇವೆಯಲ್ಲಿ ರೈಲ್ವೆ ನನಗೆ ನೀಡಿದ ಈ ಅವಕಾಶಕ್ಕಾಗಿ ನಾನು ಭಾರತೀಯ ರೈಲ್ವೆ ಕುಟುಂಬಕ್ಕೆ ಯಾವಾಗಲೂ ಕೃತಜ್ಞಳಾಗಿದ್ದೇನೆ ಎಂದು ಎಕ್ಸ್‌ನಲ್ಲಿ ಫೋಗಟ್ ಪೋಸ್ಟ್ ಹಾಕಿದ್ದರು.ಇದನ್ನೂ ಓದಿ: ಚಾರ್ಜ್‌ಶೀಟ್‌ನಲ್ಲಿ ಗೌಪ್ಯ ಮಾಹಿತಿ ಪ್ರಸಾರಕ್ಕೆ ಮಾಧ್ಯಮಗಳಿಗೆ ನಿರ್ಬಂಧ ಹೇರಿ: ಕೋರ್ಟ್‌ ಮೊರೆ ಹೋದ ದರ್ಶನ್‌

    ಹರಿಯಾಣದ ಜುಲಾನಾ (Julana) ಕ್ಷೇತ್ರದಿಂದ ವಿನೇಶ್ ಫೋಗಟ್ ಕಣಕ್ಕಿಳಿಯಲಿದ್ದಾರೆ. ಬಜರಂಗ್ ಪುನಿಯಾ ಅವರನ್ನು ಅಖಿಲ ಭಾರತ ಕಿಸಾನ್ ಕಾಂಗ್ರೆಸ್‌ನ (Indian Kisan Congress) ಕಾರ್ಯಾಧ್ಯಕ್ಷರನ್ನಾಗಿ ನೇಮಿಸಲಾಗಿದೆ.

  • ಕುಸ್ತಿಪಟುಗಳ ಬಗ್ಗೆ ಮಾತನಾಡಬೇಡಿ – ಬ್ರಿಜ್ ಭೂಷಣ್ ಸಿಂಗ್‍ಗೆ ಬಿಜೆಪಿ ಎಚ್ಚರಿಕೆ

    ಕುಸ್ತಿಪಟುಗಳ ಬಗ್ಗೆ ಮಾತನಾಡಬೇಡಿ – ಬ್ರಿಜ್ ಭೂಷಣ್ ಸಿಂಗ್‍ಗೆ ಬಿಜೆಪಿ ಎಚ್ಚರಿಕೆ

    – ವಿನೇಶ್ ಒಲಿಂಪಿಕ್ಸ್ ಅನರ್ಹತೆ ಕುರಿತು ಟೀಕಿಸಿದ್ದ ಮಾಜಿ ಸಂಸದ

    ನವದೆಹಲಿ: ಒಲಿಂಪಿಕ್ಸ್ ಕುಸ್ತಿಪಟುಗಳಾದ ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ವಿರುದ್ಧ ಹೇಳಿಕೆ ನೀಡದಂತೆ ಮಾಜಿ ಸಂಸದ ಹಾಗೂ ಕುಸ್ತಿ ಸಂಸ್ಥೆಯ (Wrestling Federation of India) ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ (Brij Bhushan Sharan Singh) ಅವರಿಗೆ ಬಿಜೆಪಿ (BJP) ಸೂಚನೆ ನೀಡಿದೆ ಎಂದು ಮೂಲಗಳು ತಿಳಿಸಿವೆ.

    ಹರಿಯಾಣ ವಿಧಾನಸಭಾ ಚುನಾವಣೆಗು ಮುನ್ನ ವಿನೇಶ್, ಪುನಿಯಾ ಕಾಂಗ್ರೆಸ್‍ಗೆ ಸೇರ್ಪಡೆಗೊಂಡಿದ್ದಾರೆ. ಈ ವಿಚಾರವಾಗಿ ಡಬ್ಲ್ಯುಎಫ್‍ಐ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಅವರು ಇಬ್ಬರ ವಿರುದ್ಧ ವಾಗ್ದಾಳಿ ನಡೆಸಿದ್ದರು. ಇದರ ಬೆನ್ನಲ್ಲೇ ಈ ವಿಚಾರವಾಗಿ ಯಾವುದೇ ಪ್ರತಿಕ್ರಿಯೆ ನೀಡದಂತೆ ಬ್ರಿಜ್ ಭೂಷಣ್ ಅವರಿಗೆ ಪಕ್ಷದ ಹಿರಿಯ ನಾಯಕರು ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

    ಮಾಧ್ಯಮಗಳೊಂದಿಗೆ ಮಾತನಾಡುತ್ತ ಬ್ರಿಜ್ ಭೂಷಣ್ ಸಿಂಗ್, ವಿನೇಶ್ ಫೋಗಟ್ ಮತ್ತು ಬಜರಂಗ್ ಪೂನಿಯಾ ಅವರು ಕುಸ್ತಿಯಲ್ಲಿ ಹೆಸರು ಮಾಡಿದ್ದಾರೆ. ಆದರೆ ಕಾಂಗ್ರೆಸ್ ಸೇರಿದ ನಂತರ ಅವರ ಹೆಸರುಗಳು ಅಳಿಸಿ ಹೋಗಲಿವೆ. ತಾವು ವಿಧಾನಸಭೆ ಚುನಾವಣೆಯಲ್ಲಿ ಗೆದ್ದುಬಿಡುತ್ತೇವೆ ಎಂದು ವಿನೇಶ್ ಫೋಗಟ್ ಹಾಗೂ ಬಜರಂಗ್ ಪೂನಿಯಾ ಭಾವಿಸಿದ್ದರೆ ಅದು ತಪ್ಪು. ಅವರು ಹರ್ಯಾಣದ ಯಾವುದೇ ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧಿಸಿದರೂ, ಬಿಜೆಪಿಯ ಸಣ್ಣ ಅಭ್ಯರ್ಥಿ ಕೂಡ ಅವರನ್ನು ಸೋಲಿಸುತ್ತಾರೆ ಎಂದು ಸಿಂಗ್ ಹೇಳಿದ್ದರು.

    ಕುಸ್ತಿ ಫೆಡರೇಷನ್ ಅಧ್ಯಕ್ಷರಾಗಿದ್ದಾಗ ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್, ಇದು ಕಾಂಗ್ರೆಸ್ ಪಕ್ಷವು ತಮ್ಮ ವಿರುದ್ಧ ನಡೆಸಿದ್ದ ಸಂಚು. ಇದಕ್ಕೆ ಫೋಗಟ್ ಹಾಗೂ ಪೂನಿಯಾ ಅವರ ಕಾಂಗ್ರೆಸ್ ಸೇರ್ಪಡೆ ಸಾಕ್ಷಿ ಎಂದು ಹೇಳಿದ್ದರು.

    ಅನರ್ಹಗೊಂಡ ವಿನೇಶ್‍ಗೆ ದೇವರೇ ಶಿಕ್ಷೆ ನೀಡಿದ್ದಾನೆ!
    ಪ್ರತಿಭಟನೆ ಆರಂಭಿಸಿದ ದಿನವೇ, ಇದರ ಹಿಂದೆ ಕಾಂಗ್ರೆಸ್ (Congress) ಪಾತ್ರವಿದೆ ಎಂದು ಹೇಳಿದ್ದೆ. ಈಗ ಅದೇ ನಿಜವಾಗಿದೆ. ಕಾಂಗ್ರೆಸ್ ಸಂಚಿಗೆ ವಿನೇಶ್ ಮತ್ತು ಬಜರಂಗ್ ದಾಳವಾಗಿದ್ದಾರೆ. ಭಾರತೀಯ ಕುಸ್ತಿ ಫೆಡರೇಷನ್ ಮೇಲೆ ಹಿಡಿತ ಸಾಧಿಸಲು ಮತ್ತು ಬಿಜೆಪಿ ವಿರುದ್ಧ ದಾಳಿ ನಡೆಸಲು ಸಂಚು ರೂಪಿಸಲಾಗಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಅವರ ಪಕ್ಷ ಇಂತಹ ಕೆಲಸಗಳನ್ನು ಮಾಡುತ್ತಲೇ ಇರುತ್ತದೆ. ಇದಕ್ಕಾಗಿ ಭೂಪಿಂದರ್ ಹೂಡಾ, ಕಾಂಗ್ರೆಸ್ ಮತ್ತು ಕಾಂಗ್ರೆಸ್ ಕುಟುಂಬ ಕುಸ್ತಿಪಟುಗಳನ್ನು ದಾಳವಾಗಿ ಬಳಸಿಕೊಂಡಿದೆ ಎಂದು ಕಿಡಿಕಾರಿದ್ದರು.

    ಈ ವೇಳೆ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಅಂತಿಮ ಹಂತದಲ್ಲಿ ಅನರ್ಹಗೊಂಡ ವಿನೇಶ್‍ಗೆ ದೇವರೇ ಶಿಕ್ಷೆ ನೀಡಿದ್ದಾನೆ ಎಂದು ಬ್ರಿಜ್‍ಭೂಷಣ್ ಹೇಳಿದ್ದರು.

    ಮುಂದುವರಿದು, ಒಬ್ಬ ಆಟಗಾರ ಒಂದು ದಿನದಲ್ಲಿ 2 ತೂಕದ ವಿಭಾಗಗಳಲ್ಲಿ ಟ್ರಯಲ್ಸ್ ನೀಡಬಹುದೇ ಎಂದು ನಾನು ವಿನೇಶ್ ಅವರನ್ನು ಕೇಳಲು ಬಯಸುತ್ತೇನೆ. ತೂಕದ ನಂತರ 5 ಗಂಟೆಗಳ ಕಾಲ ಪ್ರಯೋಗ ನಿಲ್ಲಿಸಬಹುದೇ? ನೀವು ಕುಸ್ತಿಯನ್ನು ಗೆಲ್ಲಲಿಲ್ಲ, ನೀವು ಮೋಸದಿಂದ ಅಲ್ಲಿಗೆ ಹೋಗಿದ್ದೀರಿ. ದೇವರು ನಿಮಗೆ ಅದೇ ಶಿಕ್ಷೆ ನೀಡಿದ್ದಾನೆ ಎಂದು ಲೇವಡಿ ಮಾಡಿದ್ದರು. ಇದು ಟೀಕೆಗೆ ಕಾರಣವಾಗಿತ್ತು.