Tag: Vinish

  • ನನ್​ ತಂದೆ ಬಗ್ಗೆ ನಿಂದಿಸಿದ್ದಕ್ಕೆ ಥ್ಯಾಂಕ್ಸ್ – ದರ್ಶನ್‌ ಪುತ್ರ ವಿನೀಶ್‌ ಭಾವುಕ ಪೋಸ್ಟ್‌!

    ನನ್​ ತಂದೆ ಬಗ್ಗೆ ನಿಂದಿಸಿದ್ದಕ್ಕೆ ಥ್ಯಾಂಕ್ಸ್ – ದರ್ಶನ್‌ ಪುತ್ರ ವಿನೀಶ್‌ ಭಾವುಕ ಪೋಸ್ಟ್‌!

    ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್‌ (Actor Darshan) ಅವರ ಪುತ್ರ ವಿನೀಶ್‌ (Vinish), ತಂದೆಯನ್ನು ನೆನೆದು ತಮ್ಮ ಇನ್‌ಸ್ಟಾಗ್ರಾಮ್‌ (Instagram Post) ಖಾತೆಯಲ್ಲಿ ಭಾವುಕ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದಾರೆ.

    ನಾನು 15 ವರ್ಷದ ಹುಡುಗನಿದ್ದೇನೆ. ನನಗೂ ಮನಸ್ಸಿದೆ, ಭಾವನೆಗಳಿವೆ ಅನ್ನೋದನ್ನ ಪರಿಗಣಿಸದೇ ನನ್ನ ತಂದೆಯ ಬಗ್ಗೆ ಕೆಟ್ಟ ಕಾಮೆಂಟ್ಸ್ ಮತ್ತು ಆಕ್ಷೇಪಾರ್ಹ ಭಾಷೆಯಲ್ಲಿ ನಿಂದಿಸುತ್ತಿರುವವರಿಗೆ ಧನ್ಯವಾದಗಳು. ನನ್ನ ತಂದೆ ಮತ್ತು ತಾಯಿಯ ಬೆಂಬಲದ ಅಗತ್ಯವಿರುವ ಈ ಕಷ್ಟದ ಸಮಯದಲ್ಲಿಯೂ ನನ್ನನ್ನು ಶಪಿಸುವುದರಿಂದ ನೀವು ಬದಲಾಗುವುದಿಲ್ಲ ಎಂದು ಬರೆದುಕೊಂಡಿದ್ದಾರೆ.

    ನಟರೂ ಆಗಿರುವ ಆರೋಪಿ ದರ್ಶನ್‌ ತೂಗುದೀಪ ವಿರುದ್ಧ ಕೇಳಿಬಂದಿರುವ ಕೊಲೆ ಆರೋಪ ಪ್ರಕರಣದಲ್ಲಿ ಕೆಲ ಪ್ರಭಾವಿಗಳು ದರ್ಶನ್ ರಕ್ಷಿಸಲು ಪ್ರಯತ್ನ ನಡೆಸಿದ್ದಾರೆ. ಪೊಲೀಸ್ ಅಧಿಕಾರಿಗಳಿಗೆ ಫನ್‌ ಕರೆಗಳನ್ನು ಮಾಡಿ ಒತ್ತಡ ಹೇರುತ್ತಿದ್ದಾರೆ ಎಂಬ ಸ್ಫೋಟಕ ಮಾಹಿತಿಗಳು ಹೊರಬೀಳುತ್ತಿವೆ. ಇದನ್ನೂ ಓದಿ: ಏನಿದು ಬಿಎಸ್‌ವೈ ವಿರುದ್ಧದ ಪೋಕ್ಸೊ ಕೇಸ್‌? – ಇಲ್ಲಿದೆ ನೋಡಿ ಟೈಮ್‌ಲೈನ್‌..

    ಈ ಬೆನ್ನಲ್ಲೇ ದರ್ಶನ್ ಪ್ರಕರಣದಲ್ಲಿ ಪೊಲೀಸ್ ಇಲಾಖೆಯ ನಡೆಗೆ ಬಿಜೆಪಿಗರಿಂದ ತೀವ್ರ ಆಕ್ರೋಶ ವ್ಯಕ್ತವಾಗ್ತಿದೆ. ನಾವು ಎಲ್ಲಿದೀವಿ? ಪಾಕಿಸ್ತಾನದಲ್ಲಿ ಇದೀವಾ? ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ, ಮಾಧ್ಯಮ ನಿರ್ಬಂಧ, ಮಾಧ್ಯಮದವರ ಮೇಲಿನ ಹಲ್ಲೆ ಖಂಡನೀಯ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಹೇಳಿದ್ದಾರೆ. ಪೊಲೀಸ್ ಠಾಣೆ ಬಳಿ ನಿಷೇಧಾಜ್ಞೆ ವಿಧಿಸಿದ್ದನ್ನು ಪಿ.ರಾಜೀವ್ ತೀವ್ರವಾಗಿ ಖಂಡಿಸಿದ್ದಾರೆ.

    ಈ ಎಲ್ಲಾ ಬೆಳವಣಿಗೆಯಿಂದ ರಾಜ್ಯ ಸರ್ಕಾರ ಮುಜುಗರಕ್ಕೀಡಾಗಿದೆ. ಈ ಕುರಿತ ಪ್ರಶ್ನೆಗಳಿಗೆ ಉತ್ತರಿಸಲು ಗೃಹ ಸಚಿವ ಪರಮೇಶ್ವರ್ ಹಿಂದೇಟು ಹಾಕಿದ್ದಾರೆ. ಅಭಿಮಾನಿಗಳು ಹೆಚ್ಚು ಬರಬಹುದು ಅಂತ ಪೊಲೀಸ್ರು ಹಾಗೆ ಮಾಡಿರಬಹುದು ಎಂದು ಡಿಸಿಎಂ ಹೇಳಿದ್ದಾರೆ. ಸಚಿವ ಹೆಚ್‌.ಕೆ ಪಾಟೀಲ್ ಮಾತ್ರ, ಇಂತಹ ಸ್ಥಿತಿ ಯಾಕೆ ಬಂತೋ ಗೊತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಟ್ರೇಲರ್‌ನಲ್ಲಿ ಆಕ್ಷೇಪಾರ್ಹ ಸಂಭಾಷಣೆಗಳಿವೆ: ‘ಹಮಾರೆ ಬಾರಹ್‌’ ಸಿನಿಮಾ ಬಿಡುಗಡೆಗೆ ಸುಪ್ರೀಂ ತಡೆ

  • ಬಾಟಲ್ ಕ್ಯಾಪ್ ಚಾಲೆಂಜ್‍ನಲ್ಲಿ ಎಲ್ರಿಗೂ ಸೆಡ್ಡು ಹೊಡೆದ ದರ್ಶನ್ ಪುತ್ರ: ವಿಡಿಯೋ

    ಬಾಟಲ್ ಕ್ಯಾಪ್ ಚಾಲೆಂಜ್‍ನಲ್ಲಿ ಎಲ್ರಿಗೂ ಸೆಡ್ಡು ಹೊಡೆದ ದರ್ಶನ್ ಪುತ್ರ: ವಿಡಿಯೋ

    ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಈಗ ಬಾಟಲ್ ಕ್ಯಾಪ್ ಚಾಲೆಂಜ್ ಸದ್ದು ಮಾಡುತ್ತಿದೆ. ಹಲವು ಕಲಾವಿದರು ಈ ಚಾಲೆಂಜ್ ಸ್ವೀಕರಿಸುತ್ತಿದ್ದು, ಈಗ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಪುತ್ರ ವಿನೀಶ್ ಕೂಡ ಈ ಚಾಲೆಂಜ್‍ನಲ್ಲಿ ಗೆದಿದ್ದಾರೆ.

    ಹೌದು. ಇತ್ತೀಚೆಗೆ ದರ್ಶನ್ ಅವರ ಪುತ್ರ ವಿನೀಶ್ ಬಾಟಲ್ ಕ್ಯಾಪ್ ಚಾಲೆಂಜ್ ಸ್ವೀಕರಿಸಿದ್ದಾರೆ. ಈ ಚಾಲೆಂಜ್ ಮಾಡಿ ಅವರು ಗೆದ್ದಿದ್ದಾರೆ. ವಿನೀಶ್ ಬಾಟಲ್ ಚಾಲೆಂಜ್ ಮಾಡಿದ ವಿಡಿಯೋವನ್ನು ಅವರ ತಾಯಿ ವಿಜಯಲಕ್ಷ್ಮಿ ದರ್ಶನ್ ಅವರು ತಮ್ಮ ಟ್ವಿಟ್ಟರಿನಲ್ಲಿ ಹಂಚಿಕೊಂಡಿದ್ದಾರೆ.

    ವಿಜಯಲಕ್ಷ್ಮಿ ತಮ್ಮ ಟ್ವಿಟ್ಟರಿನಲ್ಲಿ ವಿಡಿಯೋ ಹಾಕಿ, ಬಾಟಲ್ ಕ್ಯಾಪ್ ಚಾಲೆಂಜ್, ವಿನೀಶ್ ಎಂದು ಹ್ಯಾಶ್‍ಟ್ಯಾಗ್ ಬಳಸಿ ಟ್ವೀಟ್ ಮಾಡಿದ್ದಾರೆ. ಈ ವಿಡಿಯೋಗೆ ಇದುವರೆಗೂ 2 ಸಾವಿರಕ್ಕೂ ಹೆಚ್ಚು ಲೈಕ್ಸ್ ಹಾಗೂ 479 ರೀ-ಟೀಟ್ ಪಡೆದುಕೊಂಡಿದೆ.

    ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರು ಮೊದಲಿಗೆ ಈ ಬಾಟಲ್ ಕ್ಯಾಪ್ ಚಾಲೆಂಜ್ ಪ್ರಾರಂಭಿಸಿದ್ದರು. ಇದೀಗ ಸ್ಯಾಂಡಲ್‍ವುಡ್‍ಗೂ ಈ ಚಾಲೆಂಜ್ ಲಗ್ಗೆ ಇಟ್ಟಿದ್ದು, ನಟ ಅರ್ಜುನ್ ಸರ್ಜಾ, ಗೋಲ್ಡನ್ ಸ್ಟಾರ್ ಗಣೇಶ್, ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್, ನಟಿ ರಚಿತಾ ರಾಮ್ ಈ ಚಾಲೆಂಜ್ ಸ್ವೀಕರಿಸಿ ಗೆದ್ದಿದ್ದರು.

    https://twitter.com/vijayaananth2/status/1147752015558148096

    ಏನಿದು ಚಾಲೆಂಜ್?
    ಒಂದು ಟೇಬಲ್ ಮೇಲೆ ಒಂದು ಬಾಟಲಿ ಇಡಬೇಕು. ಅದರ ಮುಚ್ಚಳವನ್ನು ಬಾಟಲ್ ಮೇಲೆ ಸಡಿಲವಾಗಿ ತಿರುಗಿ ಇಡಬೇಕು. ನಂತರ ಚಾಲೆಂಜ್ ಸ್ವೀಕರಿಸಿದವರು ಸ್ವಲ್ಪ ದೂರದಲ್ಲಿ ನಿಂತು ಒಂದು ಸುತ್ತು ತಿರುಗಿ ಕಾಲಿನಿಂದ ಬಾಟಲಿ ಕ್ಯಾಪನ್ನು ಒದಿಯಬೇಕು. ಈ ಪ್ರಕ್ರಿಯೆಯಲ್ಲಿ ಬಾಟಲಿ ಕೆಳಗೆ ಬೀಳಬಾರದು. ಹೀಗೆ ಬಾಟಲ್ ಬೀಳದಂತೆ ಕ್ಯಾಪ್ ಮಾತ್ರ ಕೆಳಗೆ ಬೀಳಿಸಿದರೆ ಈ ಚಾಲೆಂಜ್ ಗೆದ್ದಂತೆ.