Tag: vinod gobragala

  • ಬಿಗ್ ಬಾಸ್ ಮನೆಯಿಂದ ನೇರವಾಗಿ ನಾಮಿನೇಟ್ ಆಗಿದ್ದಾರೆ ರೂಪೇಶ್ ಮತ್ತು ಗುರೂಜಿ

    ಬಿಗ್ ಬಾಸ್ ಮನೆಯಿಂದ ನೇರವಾಗಿ ನಾಮಿನೇಟ್ ಆಗಿದ್ದಾರೆ ರೂಪೇಶ್ ಮತ್ತು ಗುರೂಜಿ

    ಬಿಗ್ ಬಾಸ್ (Bigg Boss Season 9) ಮನೆಯಲ್ಲಿ ಯಾವುದೂ ಅಂದುಕೊಂಡಂತೆ ನಡೆಯುತ್ತಿಲ್ಲ. ಮನೆಯಲ್ಲಿ ಏನು ನಡೆಯುತ್ತಿದೆ ಎಂದು ಅರಿವಿಗೆ ಬಾರದೇ ದೊಡ್ಮನೆ ಸದಸ್ಯರು ಗಲಿಬಿಲಿಗೊಂಡಿದ್ದಾರೆ. ಒಬ್ಬೊಬ್ಬರದ್ದು ಒಂದೊಂದು ನಡವಳಿಕೆ. ಮೊದಲ ವಾರ ಸೈಲೆಂಟ್ ಆಗಿದ್ದವರು, ಎರಡನೇ ವಾರಕ್ಕೆ ಅಬ್ಬರಿಸುತ್ತಿದ್ದಾರೆ. ಕಿಚ್ಚನ ಪಂಚಾಯತಿಯಲ್ಲಿ ಕೆಲವರ ಬಣ್ಣ ಬಯಲಾಗುತ್ತಿದ್ದಂತೆಯೇ ಅವರನ್ನು ಇತರರು ನೋಡುವ ರೀತಿಯೇ ಬದಲಾಗಿದೆ.

    ಈ ನಡುವೆ ಎರಡನೇ ವಾರದ ನಾಮಿನೇಟ್ ಪ್ರಕ್ರಿಯೆ ಕೂಡ ನಡೆದಿದ್ದು, ಇಬ್ಬರು ಸ್ಪರ್ಧಿಗಳು ನೇರವಾಗಿ ನಾಮಿನೇಟ್ ಆಗಿದ್ದಾರೆ. ಮೊದಲನೇ ವಾರದಲ್ಲೇ ಮನೆಯಿಂದ ಹೊರ ನಡೆದ ಐಶ್ವರ್ಯ ಪಿಸ್ಸೆಗೆ (Aishwarya Pisse) ಬಿಗ್ ಬಾಸ್ ವಿಶೇಷ ಅಧಿಕಾರವನ್ನು ನೀಡಿದ್ದರು. ಮನೆಯಿಂದ ಆಚೆ ಹೋಗುವಾಗ ಒಬ್ಬರನ್ನು ನಾಮಿನೇಟ್ ಮಾಡಿ ಎಂದು ತಿಳಿಸಿದ್ದರು. ಹಾಗಾಗಿ ಆರ್ಯವರ್ಧನ್ ಗುರೂಜಿಯನ್ನು (Aryavardhan Guruji) ಐಶ್ವರ್ಯ ನೇರವಾಗಿ ನಾಮಿನೇಟ್ ಮಾಡಿದ್ದಾರೆ. ಇದನ್ನೂ ಓದಿ:ಮಣಿರತ್ನಂ ನಿರ್ದೇಶನದ ‘ಪೊನ್ನಿಯಿನ್ ಸೆಲ್ವನ್’ ಮೂರು ದಿನದ ಗಳಿಕೆ 230 ಕೋಟಿಗೂ ಅಧಿಕ

    ಇದೇ ರೀತಿಯಾಗಿಯೇ ಮತ್ತೊಂದು ವಿಶೇಷ ಅಧಿಕಾರ ಸಿಕ್ಕಿದ್ದು ಮನೆಯ ಕ್ಯಾಪ್ಟನ್ ಆಗಿ ಆಯ್ಕೆಯಾಗಿರುವ ವಿನೋದ್ ಗೊಬ್ರಗಾಲಗೆ. ವಿನೋದ್ (Vinod Gobragala) ಕೂಡ ಒಬ್ಬರನ್ನು ನೇರವಾಗಿ ನಾಮಿನೇಟ್ ಮಾಡುವ ಅಧಿಕಾರವನ್ನು ಹೊಂದಿದ್ದರಿಂದ ಅವರು ರೂಪೇಶ್ ರಾಜಣ್ಣ ಅವರ ಹೆಸರು ಸೂಚಿಸಿದ್ದರು. ಹೀಗಾಗಿ ಗುರೂಜಿ ಜೊತೆಗೆ ನೇರವಾಗಿ ರೂಪೇಶ್ ರಾಜಣ್ಣ (Rupesh Rajanna) ಕೂಡ ನಾಮಿನೇಟ್ ಆಗಿದ್ದಾರೆ.

    ಗುರೂಜಿ ಮತ್ತು ರೂಪೇಶ್ ಇಬ್ಬರು ಬಿಗ್ ಬಾಸ್ ಮನೆಯಲ್ಲಿ ನೇರವಾಗಿ ನಾಮಿನೇಟ್  (Nominate)ಆಗಿದ್ದಾರೆ. ಇವರ ಜೊತೆ ಇತರರ ಏಳು ಜನರು ನಾಮಿನೇಟ್ ಯಾದಿಯಲ್ಲಿ ಇದ್ದಾರೆ. ಒಟ್ಟು ಒಂಭತ್ತು ಜನರ ಮೇಲೆ ಈ ಬಾರಿ ನಾಮಿನೇಟ್ ತೂಗುಕತ್ತಿ ತೂಗುತ್ತಿದೆ. ಈ ಒಂಭತ್ತು ಜನರಲ್ಲಿ ಯಾರು ಎರಡನೇ ವಾರಕ್ಕೆ ಮನೆಯಿಂದ ಆಚೆ ಬರಲಿದ್ದಾರೆ ಎನ್ನುವುದು ಕುತೂಹಲ.  

    Live Tv
    [brid partner=56869869 player=32851 video=960834 autoplay=true]

  • ಬಿಗ್ ಬಾಸ್ ವಿನೋದ್ ಗೊಬ್ಬರಗಾಲ ಅವರ ಮೊದಲ ಸಂಭಾವನೆ ಕೇಳಿದ್ರೆ ಶಾಕ್ ಆಗುತ್ತೀರಾ

    ಬಿಗ್ ಬಾಸ್ ವಿನೋದ್ ಗೊಬ್ಬರಗಾಲ ಅವರ ಮೊದಲ ಸಂಭಾವನೆ ಕೇಳಿದ್ರೆ ಶಾಕ್ ಆಗುತ್ತೀರಾ

    ಜಾಭಾರತ, ಗಿಚ್ಚಿ ಗಿಲಿ ಗಿಲಿ, ಶೋ ಮೂಲಕ ಮೋಡಿ ಮಾಡಿರುವ ವಿನೋದ್ ಗೊಬ್ಬರಗಾಲ(Vinod Gobbaragala) ಇದೀಗ ಬಿಗ್ ಬಾಸ್ ಮನೆಗೆ(Bigg Boss House) ಎಂಟ್ರಿ ಕೊಟ್ಟಿದ್ದಾರೆ. ತಮ್ಮ ಕಾಮಿಡಿ ಮೂಲಕ ಕಮಾಲ್ ಮಾಡುತ್ತಿರುವ ನಟ ವಿನೋದ್ ನಟನಾ ಕ್ಷೇತ್ರದ ಮೊದಲ ಸಂಭಾವನೆ ಕೇಳಿದ್ರೆ ನಿಜಕ್ಕೂ ಅಚ್ಚರಿಪಡುತ್ತೀರಾ.

    ವಿನೋದ್ ಅಪ್ಪಟ ಹಳ್ಳಿ ಪ್ರತಿಭೆ ಮೂಲತಃ ಮಂಡ್ಯದ (Mandya) ಗೊಬ್ಬರಗಾಲದವರಾಗಿದ್ದಾರೆ. ನಟನಾಗಿ ಕನಸು ಹೊತ್ತು ಬಂದಿದ್ದ ವಿನೋದ್‌ಗೆ ಮೊದಲು ಸಿಕ್ಕಿದ್ದೆ `ಮಜಾಭಾರತ'(Majabharatha) ಕಾಮಿಡಿ ರಿಯಾಲಿಟಿ ಶೋ, ಬಳಿಕ ಗಿಚ್ಚಿ ಗಿಲಿ ಗಿಲಿ ಶೋನ ರನ್ನರ್ ಅಪ್ ಆಗಿ ಗುರುತಿಸಿಕೊಂಡಿದ್ದಾರೆ. ಬಹುಮುಖ ಪ್ರತಿಭೆಯಾಗಿರುವ ಗೊಬ್ಬರಗಾಲ ಇದೀಗ ದೊಡ್ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ಇದನ್ನೂ ಓದಿ:ಆಂಟಿ ಎಂದು ಕರೆದ ಗೊಬ್ಬರಗಾಲ ಮೇಲೆ ʻಮಂಗಳಗೌರಿʼ ಗರಂ

     

    View this post on Instagram

     

    A post shared by BUD Pictures (@bud.picturess)

    ಸಾಕಷ್ಟು ಸವಾಲುಗಳನ್ನ ದಾಟಿ ಬಿಗ್ ಬಾಸ್ ಮನೆಯಲ್ಲಿ ಮನರಂಜಿಸುತ್ತಿರುವ ವಿನೋದ್ ಅವರು ತಮ್ಮ ಮೊದಲ ರಿಯಾಲಿಟಿ ಶೋನಲ್ಲಿ ಪ್ರತಿ ತಿಂಗಳು 12,750 ರೂಪಾಯಿಗಳನ್ನ ಗಳಿಸುತ್ತಿದ್ದರು. ತನ್ನ ಹುಟ್ಟೂರಿನಲ್ಲಿ ಕಾರ್ಪೆಂಟರ್, ಅಕ್ಕಸಾಲಿಗನಾಗಿ ಕೆಲಸ ಮಾಡಿದ್ದರು. ಬಳಿಕ ಬೆಂಗಳೂರಿನಲ್ಲಿ ಆಫೀಸ್ ಬಾಯ್ ಆಗಿ ಕೆಲಸ ನಿರ್ವಹಿಸಿರುತ್ತಾರೆ.

    ಬಳಿಕ ಸತತ ಪ್ರಯತ್ನದ ನಂತರ `ಮಜಾಭಾರತ’ ಮೂಲಕ ಗೊಬ್ಬರಗಾಲ ಮೋಡಿ ಮಾಡುತ್ತಾರೆ. ಹೀಗೆ ಒಂದೊಂದೇ ಅವಕಾಶಗಳನ್ನ ಸದುಪಯೋಗಪಡಿಸಿಕೊಂಡು ಈಗ ಬಿಗ್ ಬಾಸ್‌ನಲ್ಲಿ ವಿನೋದ್ ಹೈಲೆಟ್ ಆಗುತ್ತಿದ್ದಾರೆ. ಹುಟ್ಟೂರಿನಲ್ಲಿ ಮನೆ ಕಟ್ಟುವ ಕನಸು ಹೊತ್ತಿರುವ ವಿನೋದ್ ಬಿಗ್ ಬಾಸ್ (Bigg Boss) ಟ್ರೋಫಿ ಗೆಲ್ಲುತ್ತಾರಾ ಅಂತಾ ಕಾದುನೋಡಬೇಕಿದೆ.

    Live Tv
    [brid partner=56869869 player=32851 video=960834 autoplay=true]