Tag: Vinod Prabhakar

  • ವಿನೋದ್  ಪ್ರಭಾಕರ್ ಹೀರೋ, ಶ್ರೀನಗರ ಕಿಟ್ಟಿ ವಿಲನ್: ಇದು ‘ಮಾದೇವ’ ಅವತಾರ

    ವಿನೋದ್ ಪ್ರಭಾಕರ್ ಹೀರೋ, ಶ್ರೀನಗರ ಕಿಟ್ಟಿ ವಿಲನ್: ಇದು ‘ಮಾದೇವ’ ಅವತಾರ

    ವೀನ್ ರೆಡ್ಡಿ ಬಿ ಸಾರಥ್ಯದಲ್ಲಿ ಮೂಡಿ ಬರ್ತಿರುವ ಮಾದೇವ (Madeva) ಸಿನಿಮಾ ಅಖಾಡಕ್ಕೆ ಇದೀಗ ಶ್ರೀನಗರ ಕಿಟ್ಟಿ ಎಂಟ್ರಿ ಕೊಟ್ಟಿದ್ದಾರೆ. 80 ರ ದಶಕದ ಕಥೆಯನ್ನು ಒಳಗೊಂಡಿರುವ ಈ ಚಿತ್ರದಲ್ಲಿ  ಮರಿ ಟೈಗರ್ ವಿನೋದ್ ಪ್ರಭಾಕರ್ ನಾಯಕನಾಗಿ ನಟಿಸಿದ್ದು, ವಿನೋದ್ (Vinod Prabhakar) ಎದುರು ಶ್ರೀನಗರ ಕಿಟ್ಟಿ (Shrinagar Kitty) ಖಳನಾಯಕನಾಗಿ ತೊಡೆ ತಟ್ಟಿದ್ದಾರೆ.  ಸಮುದ್ರ ಎಂಬ ಪವರ್ ಫುಲ್ ಪಾತ್ರದ ಮೂಲಕ ಶ್ರೀನಗರ ಕಿಟ್ಟಿ ಗ್ಯಾಂಗ್ ಸ್ಟಾರ್ ಆಗಿ ಅಬ್ಬರಿಸಲಿದ್ದಾರೆ.

    ಭಂಟಿ ಎಂಬ ಸಿನಿಮಾ ನಿರ್ಮಾಣ ಮಾಡಿರುವ ಆರ್ ಕೇಶವ್ ದೇವಸಂದ್ರ ಮಾದೇವ ಚಿತ್ರಕ್ಕೆ ಬಂಡವಾಳ ಹೂಡಿದ್ದು, ಲವ್ ಗುರು ಸಮಂತ್ ಸಹ ನಿರ್ಮಾಣದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ.  ಶೃತಿ, ಅಚ್ಯುತ್ ಕುಮಾರ್, ಕಾಕ್ರೋಚ್ ಸುಧಿ ನಟಿಸುತ್ತಿರುವ ಈ ಚಿತ್ರದಲ್ಲಿ ವಿನೋದ್ ಪ್ರಭಾಕರ್ ಗೆ ಜೋಡಿಯಾಗಿ ಸೋನಲ್ ಮೊಂಥೆರೋ (Sonal Monthero) ನಾಯಕಿಯಾಗಿ ಬಣ್ಣ ಹಚ್ಚಿದ್ದಾರೆ. ಬಾಲಕೃಷ್ಣ ಥೋಟ ಛಾಯಾಗ್ರಹಣ, ಪ್ರದ್ಯೋತ್ಥನ್ ಸಂಗೀತ ಸಿನಿಮಾಕ್ಕಿದೆ. ಇದನ್ನೂ ಓದಿ:ಕಾಸ್ಟಿಂಗ್ ಕೌಚ್ ಬಗ್ಗೆ ಕರಾಳ ಅನುಭವ ಬಿಚ್ಚಿಟ್ಟ ನಟಿ ಶಮಾ ಸಿಕಂದರ್

    ಹೈದ್ರಾಬಾದ್ ರಾಮೋಜಿ ಫಿಲ್ಮ್ ಸಿಟಿ, ಮದ್ದೂರು, ಕನಕಪುರ, ಚನ್ನಪಟ್ಟಣ ಭಾಗದಲ್ಲಿ ಶೇಕಡ ಐವತ್ತರಷ್ಟು ಶೂಟಿಂಗ್ ಕಂಪ್ಲೀಟ್ ಮಾಡಿರುವ ಚಿತ್ರತಂಡ ಉಳಿದ ಭಾಗದ ಚಿತ್ರೀಕರಣವನ್ನು ಮಲೆನಾಡು ಶಿವಮೊಗ್ಗ ಸೇರಿದಂತೆ ಇತರೆ ಭಾಗಗಳಲ್ಲಿ ನಡೆಸಲು ಯೋಜನೆ ಹಾಕಿಕೊಂಡಿದೆ.

    Live Tv
    [brid partner=56869869 player=32851 video=960834 autoplay=true]

  • ಗೌರಿಹಬ್ಬಕ್ಕೆ ಮರಿ ಟೈಗರ್ ನಟನೆಯ ಲಂಕಾಸುರ ಸಿನಿಮಾದಿಂದ ಹಾಡಿನ ಗಿಫ್ಟ್

    ಗೌರಿಹಬ್ಬಕ್ಕೆ ಮರಿ ಟೈಗರ್ ನಟನೆಯ ಲಂಕಾಸುರ ಸಿನಿಮಾದಿಂದ ಹಾಡಿನ ಗಿಫ್ಟ್

    ದೇ ಮೊದಲ ಬಾರಿಗೆ ಮರಿ ಟೈಗರ್ ವಿನೋದ್ ಪ್ರಭಾಕರ್ ನಟಿಸಿ, ನಿರ್ಮಾಣ ಮಾಡುತ್ತಿರುವ ಲಂಕಾಸುರ ಸಿನಿಮಾದ ಹಾಡೊಂದು ರೆಡಿಯಾಗಿದ್ದು, ಈ ಹಾಡನ್ನು ವಿಶೇಷ ದಿನದಂದು ಬಿಡುಗಡೆ ಮಾಡಲು ಚಿತ್ರತಂಡ ಸಿದ್ದತೆ ಮಾಡಿಕೊಂಡಿದೆ. ನಾಡಿನಲ್ಲೆಡೆ ಗೌರಿ – ಗಣೇಶ ಹಬ್ಬದ ಸಂಭ್ರಮ. ಈ ಶುಭ ಸಂದರ್ಭದಲ್ಲಿ ಟೈಗರ್ ಟಾಕೀಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ “ಲಂಕಾಸುರ” ಚಿತ್ರದ ಹಾಡೊಂದು ಬಿಡುಗಡೆಯಾಗುತ್ತಿದೆ.

    ಚೇತನ್ ಕುಮಾರ್ ಬರೆದಿರುವ “ಲಕ್ ಲಕ್ ಲಕ್ಕು ಪದುಮಿ. ಒಂಚುರು ಪ್ಲೀಸು ಟಚುಮಿ” ಎಂಬ ಹಾಡು ಗೌರಿ ಹಬ್ಬದ ಶುಭ ಸಂದರ್ಭ ದಲ್ಲಿ ಬಿಡುಗಡೆಯಾಗುತ್ತಿದೆ. ವಿಜೇತ್ ಕೃಷ್ಣ ಸಂಗೀತ ನೀಡಿದ್ದಾರೆ. ಸಹನ ಗೌಡ ನರ್ತಿಸಿರುವ ಈ ಹಾಡಿಗೆ ಭಜರಂಗಿ ಮೋಹನ್ ನೃತ್ಯ ನಿರ್ದೇಶನ ಮಾಡಿದ್ದಾರೆ. ಇಂದು ನಾಗರಾಜ್ ಇಂಪಾಗಿ ಹಾಡಿದ್ದಾರೆ.  ಈ ಹಿಂದೆ ಬಿಡುಗಡೆಯಾಗಿದ್ದ “ಲಂಕಾಸುರ” ಚಿತ್ರದ ಟೈಟಲ್ ಸಾಂಗ್ ಸಹ ಅಪಾರ ಮೆಚ್ಚುಗೆ ಪಡೆದುಕೊಳ್ಳುತ್ತಿದೆ. ಈಗ ಎರಡನೇ ಹಾಡು ಬಿಡುಗಡೆಯಾಗುತ್ತಿದೆ. ಇದನ್ನೂ ಓದಿ:ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ‘ಗಂಡುಮಗ’ ಎಂದು ಹಾಡಿ ಹೊಗಳಿದ ಜಗ್ಗೇಶ್

    ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸುತ್ತಿರುವ ಈ ಚಿತ್ರವನ್ನು ನಿಶಾ ವಿನೋದ್ ಪ್ರಭಾಕರ್ ನಿರ್ಮಾಣ ಮಾಡುತ್ತಿದ್ದಾರೆ. ಪ್ರಮೋದ್ ಕುಮಾರ್ ಈ ಚಿತ್ರದ ನಿರ್ದೇಶಕರು. ಸುಜ್ಞಾನ್ ಛಾಯಾಗ್ರಹಣ ಹಾಗೂ ದೀಪು ಎಸ್ ಕುಮಾರ್ ಸಂಕಲನ ಈ ಚಿತ್ರಕ್ಕಿದೆ.

    Live Tv
    [brid partner=56869869 player=32851 video=960834 autoplay=true]

  • ಮಾದೇವನಿಗೆ ಸೋನಲ್ ಮೊಂಥೆರೋ ಜೋಡಿ

    ಮಾದೇವನಿಗೆ ಸೋನಲ್ ಮೊಂಥೆರೋ ಜೋಡಿ

    ರಿ ಟೈಗರ್ ವಿನೋದ್ ಪ್ರಭಾಕರ್ ಭತ್ತಳಿಕೆಯ ಬಹುನಿರೀಕ್ಷಿತ ಸಿನಿಮಾಗಳಲ್ಲೊಂದು ಮಾದೇವ. ವಿಭಿನ್ನ ಕಥಾಹಂದರ ಹೊಂದಿರುವ ಈ ಸಿನಿಮಾ ಅಂಗಳಕ್ಕೀಗ ಪಂಚತಂತ್ರ ಬ್ಯೂಟಿ ಸೋನಲ್ ಮೊಂಥೆರೋ ಎಂಟ್ರಿ ಕೊಟ್ಟಿದ್ದಾರೆ. ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಸೋನಲ್ ಈ ಚಿತ್ರದಲ್ಲಿ ವಿನೋದ್ ಪ್ರಭಾಕರ್ ಗೆ ಜೋಡಿಯಾಗಿ ನಟಿಸಲಿದ್ದಾರೆ.

    ವಿನೋದ್ ಹಾಗೂ ಸೋನಲ್ ಈ ಹಿಂದೆ ರಾಬರ್ಟ್ ಸಿನಿಮಾದಲ್ಲಿ ತನು-ರಾಘವ ಎಂಬ ಪಾತ್ರದ ಮೂಲಕ ಪ್ರೇಕ್ಷಕರ ಮನೆ ಗೆದ್ದಿದ್ದರು. ಇದೀಗ ಮತ್ತೊಮ್ಮೆ ಈ ಜೋಡಿ ಒಂದಾಗಿರುವುದು ಅಭಿಮಾನಿಗಳಲ್ಲಿ ನಿರೀಕ್ಷೆ ಹೆಚ್ಚಿಸಿದೆ. ಖಾಕಿ ಸಿನಿಮಾ ಸಾರಥಿ ನವೀನ್ ಬಿ ರೆಡ್ಡಿ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಮಾದೇವ ಚಿತ್ರದಲ್ಲಿ ಸೋನಲ್ 80ರ ದಶಕದ ಮಧ್ಯಮವರ್ಗದ ಹುಡುಗಿಯಾಗಿ ಬಣ್ಣ ಹಚ್ಚಲಿದ್ದಾರೆ. ಇದನ್ನೂ ಓದಿ:ನೇಪಾಳದಲ್ಲೂ ರಿಲೀಸ್ ಆಗಲಿದೆ ವಿಕ್ರಾಂತ್ ರೋಣ: 27 ದೇಶಗಳಲ್ಲಿ ಪ್ರಿವ್ಯೂ ಶೋ

    80 ದಶಕದ ಎಮೋಷನಲ್ ಹಾಗೂ ಮಾಸ್ ಎಲಿಮೆಂಟ್ ಕಂಟೆಂಟ್ ಹೊಂದಿರುವ ಮಾದೇವ ಸಿನಿಮಾ ರೈಲು ಮತ್ತು ಜೈಲಿನ ಬ್ಯಾಕ್ ಡ್ರಾಪ್ ನಲ್ಲಿ ನಡೆಯಲಿದೆ. ವಿನೋದ್ ಪ್ರಭಾಕರ್ ಈ ಹಿಂದಿನ ಪಾತ್ರಗಳಿಗಿಂತ ಈ ಚಿತ್ರದಲ್ಲಿ ಡಿಫರೆಂಟ್ ಆಗಿ ಕಾಣಿಸಿಕೊಳ್ಳಲಿದ್ದಾರೆ. ಶಿವಮೊಗ್ಗ, ಧಾರವಾಡ ಮತ್ತು ಹೈದರಾಬಾದ್‌ನಲ್ಲಿ ಸಿನಿಮಾದ ಶೂಟಿಂಗ್ ನಡೆಯಲಿದೆ. ಹಿರಿಯ ನಟಿ ಶ್ರುತಿ, ಪೋಷಕ ಕಲಾವಿದ ಅಚ್ಯುತ್ ಕುಮಾರ್, ಕಾಕ್ರೋಚ್ ಸುಧಿ ಸೇರಿದಂತೆ ಹಲವರು ತಾರಾಬಳಗದಲ್ಲಿದ್ದು, ಬಾಲಕೃಷ್ಣ ತೋಟ ಕ್ಯಾಮೆರಾ ಕೈಚಳಕ, ಪ್ರದ್ಯೋಥನ್ ಮ್ಯೂಸಿಕ್ ಪುಳಕ ಸಿನಿಮಾಕ್ಕಿದೆ. ಗಾಯತ್ರಿ ರಾಜೇಶ್ ಹಾಗೂ ಲವ್ ಗುರು ಸುಮನ್ ನಿರ್ಮಾಣದ ಮಾದೇವ ಸಿನಿಮಾದ ಶೂಟಿಂಗ್ ಭರದಿಂದ ಸಾಗ್ತಿದೆ.

    Live Tv
    [brid partner=56869869 player=32851 video=960834 autoplay=true]

  • ವಿನೋದ್ ಪ್ರಭಾಕರ್ ನಟನೆಯ ‘ಲಂಕಾಸುರ’ ಸಿನಿಮಾದ ಟೈಟಲ್ ಟ್ರ್ಯಾಕ್ ರಿಲೀಸ್

    ವಿನೋದ್ ಪ್ರಭಾಕರ್ ನಟನೆಯ ‘ಲಂಕಾಸುರ’ ಸಿನಿಮಾದ ಟೈಟಲ್ ಟ್ರ್ಯಾಕ್ ರಿಲೀಸ್

    ವಿನೋದ್ ಪ್ರಭಾಕರ್ ನಾಯಕನಾಗಿ ನಟಿಸುವುದರೊಂದಿಗೆ, ನಿರ್ಮಾಣವನ್ನು ಮಾಡುತ್ತಿರುವ ಚಿತ್ರ “ಲಂಕಾಸುರ”. ಇದು ಟೈಗರ್ ಟಾಕೀಸ್ ಸಂಸ್ಥೆಯ ಮೊದಲ ಚಿತ್ರವೂ ಹೌದು. ನಿಶಾ ವಿನೋದ್ ಪ್ರಭಾಕರ್ ಈ ಚಿತ್ರದ ನಿರ್ಮಾಪಕರು. ಪ್ರಮೋದ್ ಕುಮಾರ್ ನಿರ್ದೇಶಕರು.

    “ಅಣ್ಣ ಗನ್ ಹಿಡ್ದು  ನಿಂತ ಅಂದ್ರೆ ಭಸ್ಮಾಸುರ. ಲಾಂಗ್ ಹಿಡ್ದು  ನಡ್ಕೊಂಡು ಬಂದ್ರೆ ಲಂಕಾಸುರ.  ಲಂಕಾಸುರ   ಲಂಕಾಸುರ  .. ಎಂಬ ಟೈಟಲ್ ಟ್ರ್ಯಾಕ್  ಬಿಡುಗಡೆಯಾಗಿದೆ.  ಸಾಕಷ್ಟು ಸಂಖ್ಯೆಯಲ್ಲಿ  ವೀಕ್ಷಣೆಯಾಗುತ್ತಿದೆ. ಚೇತನ್ ಕುಮಾರ್ ಬರೆದಿರುವ ಈ ಹಾಡನ್ನು ವಿಜೇತ್ ಕೃಷ್ಣ ಅವರೆ ಹಾಡಿದ್ದಾರೆ. ಜೋಯೆಲ್ ಶಾಸ್ತ್ರಿ ಗಿಟಾರ್ ನುಡಿಸಿದ್ದಾರೆ. ಇದನ್ನೂ ಓದಿ: ಶಿವಣ್ಣನನ್ನೇ ಹಿಂದಿಕ್ಕಿದ ಶಿವಣ್ಣನ ಅಭಿಮಾನಿ ಕಾಫಿನಾಡು ಚಂದು!

    ಮೋಹನ್ ಕುಮಾರ್ ನೃತ್ಯ ನಿರ್ದೇಶನ ಮಾಡಿರುವ ಈ ಹಾಡಿನಲ್ಲಿ ನಾಯಕ ವಿನೋದ್ ಪ್ರಭಾಕರ್ ಅಭಿನಯಿಸಿದ್ದಾರೆ. ಹೆಚ್.ಎಂ.ಟಿ, ಟೊರಿನೊ ಫ್ಯಾಕ್ಟರಿ ಹಾಗೂ ಮಲ್ಲೇಶ್ವರಂ  ದೋಬಿ ಘಾಟ್ ನಲ್ಲಿ ನಿರ್ಮಿಸಲಾಗಿದ್ದ ಆರು ಅದ್ದೂರಿ ಸೆಟ್ ಗಳಲ್ಲಿ ಈ ಹಾಡಿನ ಚಿತ್ರೀಕರಣ ನಡೆದಿದೆ.

    Live Tv
    [brid partner=56869869 player=32851 video=960834 autoplay=true]

  • ‘ಮಾದೇವ’ನಾಗಿ ಮರಿ ಯಂಗ್ ಟೈಗರ್ ವಿನೋದ್ ಪ್ರಭಾಕರ್

    ‘ಮಾದೇವ’ನಾಗಿ ಮರಿ ಯಂಗ್ ಟೈಗರ್ ವಿನೋದ್ ಪ್ರಭಾಕರ್

    ಮ್ಮದೇ ಬ್ಯಾನರ್ ನ ಸಿನಿಮಾದಲ್ಲಿ ನಟಿಸುತ್ತಿರುವ ಮರಿ ಯಂಗ್ ಟೈಗರ್ ವಿನೋದ್ ಪ್ರಭಾಕರ್ ಇದೀಗ ಹೊಸ ಸಿನಿಮಾವೊಂದನ್ನು ಒಪ್ಪಿಕೊಂಡಿದ್ದಾರೆ. ಈ ಸಿನಿಮಾಗೆ ಮಾದೇವ ಎಂದು ಹೆಸರಿಡಲಾಗಿದೆ. ಇದೊಂದು ಮಾಸ್ ಸಿನಿಮಾವಾಗಿದ್ದು, ಈ ಸಿನಿಮಾದಲ್ಲಿ ಅವರು ಮಾದೇವನಾಗಿ ಅಬ್ಬರಿಸಲಿದ್ದಾರೆ. ಈ ಸಿನಿಮಾದ ಪೋಸ್ಟರ್ ಇಂದು ರಿಲೀಸ್ ಆಗಿದೆ.

    ಗಾಯತ್ರಿ ಆರ್ ಹಳಲೆ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದು, ನವೀನ್ ರೆಡ್ಡಿ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬರಲಿದೆ. ಮಾಸ್ ಸಿನಿಮಾಗಳಿಗೆ ವಿನೋದ್ ಪ್ರಭಾಕರ್ ಹೇಳಿ ಮಾಡಿಸಿದ ನಟ. ಅವರಿಗಾಗಿಯೇ ಈ ರೀತಿಯ ಕಥೆಯನ್ನು ಬರೆದಿದ್ದಾರಂತೆ ನಿರ್ದೇಶಕ ನವೀನ್ ರೆಡ್ಡಿ. ಸದ್ಯದಲ್ಲೇ ಸಿನಿಮಾದ ಶೂಟಿಂಗ್ ಕೂಡ ಶುರುವಾಗಲಿದೆಯಂತೆ. ಇದನ್ನೂ ಓದಿ: ರಾಧಿಕಾ ಪಂಡಿತ್ ತಂದೆ -ತಾಯಿಯ ವಿವಾಹ ವಾರ್ಷಿಕೋತ್ಸವ ಸಂಭ್ರಮ

    ಮಾದೇವ ಶಿವನ ಮತ್ತೊಂದು ಹೆಸರು. ಹಾಗಾಗಿ ಉಗ್ರ ಸ್ವರೂಪಿಯ ಹೆಸರಿನಲ್ಲಿ ಈ ಸಿನಿಮಾ ತಯಾರಾಗಲಿದೆಯಂತೆ. ಪಾತ್ರದ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಸಿನಿಮಾ ಟೀಮ್ ಬಹಿರಂಗ ಪಡಿಸದೇ ಇದ್ದರೂ, ಈ ಸಿನಿಮಾದಲ್ಲಿ ವಿನೋದ್ ರಗಡ್ ಲುಕ್ ನಲ್ಲಿ ಕಾಣಿಸಿಕೊಳ್ಳಲಿದ್ದಾರಂತೆ. ಈವರೆಗೂ ಮಾಡದೇ ಇರುವಂತಹ ಪಾತ್ರ ಅದಾಗಿದೆ ಎಂದಿದ್ದಾರೆ.

    Live Tv

  • ಸದ್ಯದಲ್ಲೇ ವಿನೋದ್ ಪ್ರಭಾಕರ್ ಅಭಿನಯದ  ‘ಲಂಕಾಸುರ’ ಟೀಸರ್

    ಸದ್ಯದಲ್ಲೇ ವಿನೋದ್ ಪ್ರಭಾಕರ್ ಅಭಿನಯದ ‘ಲಂಕಾಸುರ’ ಟೀಸರ್

    ದೇ ಮೊದಲ ಬಾರಿಗೆ ನಿರ್ಮಾಣದ ಜೊತೆಗೆ ನಟನೆಯನ್ನೂ ಮಾಡಿರುವ ವಿನೋದ್ ಪ್ರಭಾಕರ್ ನಟಿಸಿರುವ ಲಂಕಾಸುರ ಚಿತ್ರದ ಶೂಟಿಂಗ್ ಮುಕ್ತಾಯವಾಗಿದೆ. ಬೆಂಗಳೂರು ಹಾಗೂ ಗೋವಾದಲ್ಲಿ ಸುಮಾರು 65 ದಿನಗಳ ಚಿತ್ರೀಕರಣ ನಡೆದಿದೆ. ಪೋಸ್ಟ್ ಪ್ರೊಡಕ್ಷನ್ಸ್ ಕೆಲಸ ಬಿರುಸಿನಿಂದ ಸಾಗಿದೆ. ಸದ್ಯದಲ್ಲೇ ಟೀಸರ್ ಸಹ ಬಿಡುಗಡೆಯಾಗಲಿದೆ ಎಂದು ನಿರ್ಮಾಪಕಿ ನಿಶಾ ವಿನೋದ್ ಪ್ರಭಾಕರ್ ತಿಳಿಸಿದ್ದಾರೆ.

    ವಿನೋದ್ ಪ್ರಭಾಕರ್ ಹಾಗೂ ಲೂಸ್ ಮಾದ ಯೋಗಿ ಮೊದಲ ಬಾರಿಗೆ ಈ ಚಿತ್ರದಲ್ಲಿ ಒಟ್ಟಾಗಿ ನಟಿಸಿದ್ದಾರೆ.   ನಾಯಕಿಯಾಗಿ ಪಾರ್ವತಿ ಅರುಣ್ ಅಭಿನಯಿಸಿದ್ದಾರೆ.  ಹಿರಿಯ ನಟರಾದ ದೇವರಾಜ್, ರವಿಶಂಕರ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಇದನ್ನೂ ಓದಿ : ಹಾಸ್ಯನಟ ನರಸಿಂಹರಾಜು ಹಿರಿಯ ಪುತ್ರಿ, ನಿರ್ದೇಶಕ ಅರವಿಂದ್ ತಾಯಿ ಧರ್ಮವತಿ ನಿಧನ

    ಈ ಚಿತ್ರದ ಆಕ್ಷನ್ ಸನ್ನಿವೇಶಗಳು ಮೈನವಿರೇಳಿಸುವ ಹಾಗಿದೆ. ಐದು ಸಾಹಸ ಸನ್ನಿವೇಶಗಳಿದ್ದು, ಡಿಫರೆಂಟ್ ಡ್ಯಾನಿ, ವಿನೋದ್, ಚೇತನ್ ಡಿಸೋಜ, ಅರ್ಜುನ್ ರಾಜ್ , ಕುಂಗ್ಫು ಚಂದ್ರು ಸಾಹಸ ನಿರ್ದೇಶನ ಮಾಡಿದ್ದಾರೆ.  ಒಂದು ಸಾಹಸ ಸನ್ನಿವೇಶಕ್ಕಾಗಿ ವಿನೋದ್ ಪ್ರಭಾಕರ್ ಹತ್ತು ಕೆಜಿ ತೂಕ ಇಳಿಸಿಕೊಂಡಿದ್ದಾರೆ. ಚಿತ್ರ ಬಿಡುಗಡೆಗಾಗಿ ಮರಿ ಟೈಗರ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಇದನ್ನೂ ಓದಿ : Exclusive : ರಾಷ್ಟ್ರ ಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಮೊದಲ ವರ್ಷದ ಪುಣ್ಯಸ್ಮರಣೆ : ಪುತ್ಥಳಿ ಅನಾವರಣ

    ಪ್ರಮೋದ್ ಕುಮಾರ್ ಈ ಚಿತ್ರದ ನಿರ್ದೇಶಕರು. ವಿಜೇತ್ ಕೃಷ್ಣ ಸಂಗೀತ ನಿರ್ದೇಶನ, ಸುಜ್ಞಾನ್ ಛಾಯಾಗ್ರಹಣ, ಮುರಳಿ, ಮೋಹನ್ ಅವರ ನೃತ್ಯ ನಿರ್ದೇಶನ ಹಾಗೂ ದೀಪು ಎಸ್ ಕುಮಾರ್ ಸಂಕಲನ ಈ ಚಿತ್ರಕ್ಕಿದೆ.

  • ಬಂಬೂ ಸವಾರಿ ಚಿತ್ರಕ್ಕೆ ಸ್ಯಾಂಡಲ್ ವುಡ್ ಪ್ರತಿಭಾವಂತರ ಸಾಥ್

    ಬಂಬೂ ಸವಾರಿ ಚಿತ್ರಕ್ಕೆ ಸ್ಯಾಂಡಲ್ ವುಡ್ ಪ್ರತಿಭಾವಂತರ ಸಾಥ್

    ಇಂಗ್ಲಿಷ್ ಮಂಜ ಸಿನಿಮಾದ ಸಾರಥಿ ಆರ್ಯ ಎನ್.ಮಹೇಶ್ ನಿರ್ದೇಶನದಲ್ಲಿ ಮೂಡಿ ಬರ್ತಿರುವ ‘ಬಂಬೂ ಸವಾರಿ’ ಸಿನಿಮಾದ ಮುಹೂರ್ತ ಇವತ್ತು ಬೆಂಗಳೂರಿನ ಗುಂಡಾಂಜನೇಯ ದೇಗುಲದಲ್ಲಿ ನೆರವೇರಿತು. ಈ ಸಮಾರಂಭದಲ್ಲಿ ಕನ್ನಡದ ಚಿತ್ರರಂಗದ ಪ್ರತಿಭಾನ್ವಿತ ನಿರ್ದೇಶಕ ಸಿಂಪಲ್ ಸುನಿ, ನಟ ಶ್ರೀನಗರ ಕಿಟ್ಟಿ, ವಿನೋದ್ ಪ್ರಭಾಕರ್ ಹಾಗೂ ನಿರ್ದೇಶಕ ಕೆ.ಎಂ.ಚೈತನ್ಯ ಉಪಸ್ಥಿತರಿದ್ದರು. ಇದನ್ನು ಓದಿ: ‘ಅಣ್ಣಾವ್ರ ನಾಡು’: ಡಾ.ರಾಜ್ ಕುಮಾರ್ ನೆನೆದ ರಾಕಿಂಗ್ ಸ್ಟಾರ್ ಯಶ್

    ಸಿಂಪಲ್ ಸುನಿ, ಹೆಸರಲ್ಲಿಯೇ ಪಾಸಿಟಿವ್ ಇದೆ. ಸವಾರಿ ಅನ್ನುವ ಸಿನಿಮಾ ಮೈಲುಗಲ್ಲು ಸಾಧಿಸಿತ್ತು. ಮಹೇಶ್ ಪ್ರಚಲಿತ ವಿದ್ಯಮಾನಗಳ ಮೇಲೆ ಸಿನಿಮಾ ಕಥೆ ಹೇಳ್ತಾರೆ. ವರ್ಧನ್ ಒಳ್ಳೆ ಕಲಾವಿದ. ಹೊಸತಂಡದಲ್ಲಿ ಇರುವವರಿಗೆ ಎಲ್ಲರಿಗೂ ಶುಭ ಹಾರೈಕೆಗಳು. ಸವಾರಿ ನೂರು ದಿನ ಓಡಲಿ ಎಂದು ಹಾರೈಸಿದರು. ಶ್ರೀನಗರ ಕಿಟ್ಟಿ, ಮಹೇಶ್ ಮುಂದಿನ ಪ್ರಯತ್ನ. ನಾನು ಜಂಬೂ ಸವಾರಿ ಅಂತಾ ಅಂದುಕೊಂಡಿದ್ದೆ. ಟೈಟಲ್ ಹೇಳಿದ ಮೇಲೆ ಬಂಬೂ ಸವಾರಿ ಅಂತಾ ಗೊತ್ತಾಯ್ತು. ತಂತ್ರಜ್ಞನರು, ಕಲಾವಿದರು ಎಲ್ಲರಿಗೂ ಒಳ್ಳೆದಾಲಿ ಎಂದು ಶುಭ ಕೋರಿದರು. ಇದನ್ನೂ ಓದಿ : ಸೂಪರ್‌ಸ್ಟಾರ್ ಮಹೇಶ್ ಬಾಬು ಜೊತೆ ಕಾಣಿಸಿಕೊಂಡ ಮೇಘಾ ಶೆಟ್ಟಿ

    ವಿನೋದ್ ಪ್ರಭಾಕರ್, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಆಶೀರ್ವಾದದೊಂದಿಗೆ ಸಿನಿಮಾ ಪ್ರಾರಂಭ ಮಾಡಿದ್ದಾರೆ. ನಾನು ಕೂಡ ಕಿಟ್ಟಪ್ಪನ ತರಹ ಜಂಬೂ ಸವಾರಿ ಅಂದುಕೊಂಡಿದ್ದೆ. ನವಗ್ರಹ ಮಾಡುವಾಗ ಜಂಬೂ ಸವಾರಿ ಫೇಮಸ್ ಆಗಿತ್ತು. ಇಡೀ ತಂಡಕ್ಕೆ ಒಳ್ಳೆದಾಗಲಿ ಎಂದು ಬೆಸ್ಟ್ ವಿಷಸ್ ತಿಳಿಸಿದರು. ಇದನ್ನೂ ಓದಿ : ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳಕ್ಕೆ ರಾಕಿಂಗ್ ಸ್ಟಾರ್ ಯಶ್ ಭೇಟಿ

    ಬಂಬೂ ಸವಾರಿ ಸಿನಿಮಾದಲ್ಲಿ ತಾಂಡವ ರಾಮ, ವರ್ಧನ್, ದೀಪಕ್ ವಿ ಮುಖ್ಯಭೂಮಿಕೆಯಲ್ಲಿ ನಟಿಸ್ತಿದ್ದು, ಆದ್ಯ ಪ್ರಿಯಾ, ಅಭಿ ಸಾರಿಕಾ ನಾಯಕಿಯಾರಾಗಿ ಬಣ್ಣ ಹಚ್ಚಿದ್ದು, ಉಳಿದಂತೆ  ಕವಿರತ್ನ ಡಾ ವಿ ನಾಗೇಂದ್ರ ಪ್ರಸಾದ್, ನಾಗೇಂದ್ರ ಅರಸ್, ಬಾಲರಾಜ್ ವಾಡಿ, ಷರೀಫ್  ಕಲಾ ಬಳಗದಲ್ಲಿದೆ. ಬಂಬೂ ಸವಾರಿ ಕಲ್ಟ್ ಜಾನರ್ ಸಿನಿಮಾವಾಗಿದ್ದು, ಬೆಂಗಳೂರು ಸುತ್ತಮುತ್ತ ಶೂಟಿಂಗ್ ಮಾಡಲು ಚಿತ್ರತಂಡ ಪ್ಲ್ಯಾನ್ ಹಾಕಿಕೊಂಡಿದೆ.

  • ಮರಿ ಟೈಗರ್ ಹುಟ್ಟುಹಬ್ಬಕ್ಕೆ ರಾಬರ್ಟ್ ತಂಡದಿಂದ ಗಿಫ್ಟ್

    ಮರಿ ಟೈಗರ್ ಹುಟ್ಟುಹಬ್ಬಕ್ಕೆ ರಾಬರ್ಟ್ ತಂಡದಿಂದ ಗಿಫ್ಟ್

    ಬೆಂಗಳೂರು: ಟೈಗರ್ ಪ್ರಭಾಕರ್ ಪುತ್ರ ಮರಿ ಟೈಗರ್ ವಿನೋದ್ ಪ್ರಭಾಕರ್ ಬಹುದಿನಗಳ ನಂತರ ದೊಡ್ಡ ಬ್ರೇಕ್ ಸಿಗುವ ನಿರೀಕ್ಷೆಯಲ್ಲಿದ್ದು, ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಚಿತ್ರದಲ್ಲಿ ತೆರೆ ಹಂಚಿಕೊಳ್ಳುತ್ತಿದ್ದಾರೆ. ಇದೀಗ ಅವರ ಹುಟ್ಟುಹಬ್ಬಕ್ಕೆ ಚಿತ್ರ ತಂಡ ಭರ್ಜರಿ ಗಿಫ್ಟ್ ನೀಡಿದೆ.

    ಈಗಾಗಲೇ ರಾಬರ್ಟ್ ಚಿತ್ರೀಕರಣ ಪೂರ್ಣಗೊಂಡಿದ್ದು, ಬಿಡುಗಡೆಗೆ ಸಿದ್ಧವಾಗಿದೆ. ಎಲ್ಲ ಅಂದುಕೊಂತೆ ಆಗಿದ್ದರೆ ಕ್ರಿಸ್ ಪ್ರಯುಕ್ತ ಡಿಸೆಂಬರ್ 25ರಂದು ಚಿತ್ರ ತೆರೆ ಕಾಣಬೇಕಿತ್ತು. ಆದರೆ ಕೊರೊನಾ ಮಹಾಮಾರಿಯಿಂದಾಗಿ ಚಿತ್ರೀಕರಣ ಸ್ವಲ್ಪ ತಡವಾಯಿತು. ಮಾತ್ರವಲ್ಲ ಇದೀಗ ಸ್ಟಾರ್ ನಟರ ಚಿತ್ರಗಳನ್ನು ಬಿಡುಗಡೆ ಮಾಡಲು ಅನುಮತಿ ಇಲ್ಲ. ಹೀಗಾಗಿ ಸಿನಿಮಾ ಬಿಡುಗಡೆ ತಡವಾಗಿದೆ.

    ರಿಲೀಸ್ ತಡವಾದರೂ ಚಿತ್ರತಂಡ ಹಾಡು, ಟೀಸರ್ ಬಿಡುಗಡೆ ಮಾಡುವ ಮೂಲಕ ಅಭಿಮಾನಿಗಳನ್ನು ತಣಿಸಿದೆ. ಆದರೂ ಅಭಿಮಾನಿಗಳು ಬಹುನಿರೀಕ್ಷಿತ ಚಿತ್ರವನ್ನು ಕಣ್ತುಂಬಿಕೊಳ್ಳಲು ಕಾತರದಿಂದ ಕಾಯುತ್ತಿದ್ದಾರೆ. ಡಿ ಬಾಸ್ ಈ ಸಿನಿಮಾದಲ್ಲಿ ತ್ರಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದರಿಂದ ಅಭಿಮಾನಿಗಳಲ್ಲಿ ನಿರೀಕ್ಷೆ ಇನ್ನೂ ಹೆಚ್ಚಿದೆ. ಹೀಗಾಗಿ ಚಿತ್ರ ಬಿಡುಗಡೆ ಕುರಿತು ಎದುರು ನೋಡುತ್ತಿದ್ದಾರೆ.

    ಇದೆಲ್ಲದರ ನಡುವೆ ಮರಿ ಟೈಗರ್ ಹುಟ್ಟುಹಬ್ಬಕ್ಕೆ ಚಿತ್ರ ತಂಡ ಭರ್ಜರಿ ಉಡುಗೊರೆ ನಿಡಿದ್ದು, ಅವರ ಫಸ್ಟ್ ಲುಕ್ ರಿಲೀಸ್ ಮಾಡಿದೆ. ಪೋಸ್ಟರ್ ನಲ್ಲಿ ವಿನೋದ್ ಪ್ರಭಾಕರ್ ಗನ್ ಹಿಡಿದು ಮಾಸ್ ಲುಕ್ ನೀಡಿದ್ದು, ಬಾಯಿ ಮೇಲೆ ಗನ್ ಹಿಡಿದು ನಿಶ್ಶಬ್ದದ ಸಂಕೇತ ನೀಡಿದ್ದಾರೆ. ಇದನ್ನು ಕಂಡ ಅಭಿಮಾನಿಗಳು ಫಿದಾ ಆಗಿದದ್ದಾರೆ. ಆದರೆ ವಿನೋದ್ ಪ್ರಭಾಕರ್ ದರ್ಶನ್ ಜೊತೆ ಸಪೋರ್ಟಿವ್ ರೋಲ್‍ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೋ ಅಥವಾ ಎದುರಾಳಿಯಾಗಿಯೋ ಎಂಬುದು ಅಭಿಮಾನಿಗಳ ಸದ್ಯ ಪ್ರಶ್ನೆಯಾಗಿದೆ.

    ಡಿಸೆಂಬರ್ 3 ವಿನೋದ್ ಪ್ರಭಾಕರ್ ಹುಟ್ಟುಹಬ್ಬವಾಗಿದ್ದು, ಸ್ನೇಹಿತರು ಅಭಿಮಾನಿಗಳು ಸಂಭ್ರಮದಿಂದ ಹುಟ್ಟುಹಬ್ಬ ಆಚರಿಸುತ್ತಿದ್ದಾರೆ. ಚಿತ್ರ ತಂಡ ಸಹ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಸಪ್ರ್ರೈಸ್ ನೀಡಿದೆ.

    ರಾಬರ್ಟ್ ಡಿ ಬಾಸ್ ಅಭಿನಯದ ಬಹು ನಿರೀಕ್ಷಿತ ಚಿತ್ರವಾಗಿದ್ದು, ಚಿತ್ರದ ಹಾಡುಗಳು, ಟೀಸರ್ ಸಖತ್ ಸೆನ್ಸೇಷನ್ ಕ್ರಿಯೇಟ್ ಮಾಡಿವೆ. ಉಮಾಪತಿ ನಿರ್ಮಾಣ, ತರುಣ್ ಸುಧೀರ್ ನಿರ್ದೇಶನದಲ್ಲಿ ಸಿನಿಮಾ ಮೂಡಿ ಬರುತ್ತಿದ್ದು, ಮೊದಲ ಬಾರಿಗೆ ದರ್ಶನ್ ತ್ರಿಪಾತ್ರದಲ್ಲಿ ನಟಿಸುತ್ತಿರೋದರಿಂದ ಚಿತ್ರ ಹೆಚ್ಚು ಭರವಸೆಯನ್ನು ಮೂಡಿಸಿದೆ. ರಾಬರ್ಟ್ ಗೆ ಜೊತೆಯಾಗಿ ಆಶಾ ಭಟ್ ನಟಿಸುತ್ತಿದ್ದು, ಜಗಪತಿ ಬಾಬು, ರವಿ ಕಿಶನ್, ರವಿ ಶಂಕರ್, ದೇವರಾಜ್, ವಿನೋದ್ ಪ್ರಭಾಕರ್ ಸೇರಿದಂತೆ ದೊಡ್ಡ ತಾರಾ ಬಳಗವಿದೆ. ಮ್ಯಾಜಿಕಲ್ ಕಂಪೋಸರ್ ಅರ್ಜುನ್ ಜನ್ಯ ಸಂಗೀತ ಚಿತ್ರಕ್ಕಿದೆ.

  • ಮರಿ ಟೈಗರ್ ಜೊತೆ ಪಾರು

    ಮರಿ ಟೈಗರ್ ಜೊತೆ ಪಾರು

    ಬೆಂಗಳೂರು: ಸ್ಯಾಂಡಲ್‍ವುಡ್‍ನಲ್ಲಿ ಮರಿ ಟೈಗರ್ ಎಂದೇ ಗುರುತಿಸಿಕೊಂಡಿರುವ ನಟ ವಿನೋದ್ ಪ್ರಭಾಕರ್ ಇತ್ತೀಚೆಗೆ ಹಲವು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದು, ರಾಬರ್ಟ್ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಟೈಸನ್ ಸಿನಿಮಾ ನಂತರ ಮರಿ ಟೈಗರ್ ಹೆಚ್ಚು ಕಾಣಿಸಿಕೊಂಡಿರಲಿಲ್ಲ. ಇದೀಗ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಸಿನಿಮಾದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅಲ್ಲದೆ ತಮ್ಮದೇ ಕೆಲ ಸಿನಿಮಾಗಳಿಗೂ ಸಹ ಸಹಿ ಹಾಕಿದ್ದಾರೆ.

    ಸದ್ಯ ಇದೀಗ ವಿನೋದ್ ಪ್ರಭಾಕರ್ ಬಳಿ ಸಿನಿಮಾ ಒಂದರ ಆಫರ್ ಬಂದಿದ್ದು, ಫೈನಲ್ ಸಹ ಆಗಿದೆ. ಇದೀಗ ಕೊರೊನಾ ವೈರಸ್ ಹಿನ್ನೆಲೆ ದೇಶದೆಲ್ಲೆಡೆ ಲಾಕ್‍ಡೌನ್ ಜಾರಿಯಲ್ಲಿದ್ದು, ಈ ಹಿನ್ನೆಲೆ ಚಿತ್ರೀಕರಣ ಸ್ವಲ್ಪ ತಡವಾಗಿಯೇ ಆರಂಭವಾಗಲಿದೆ. ಆದರೆ ಈ ಸಮಯದಲ್ಲಿ ಸಿನಿಮಾದ ಇತರೆ ಕೆಲಸಗಳಲ್ಲಿ ಚಿತ್ರ ತಂಡ ಬ್ಯುಸಿಯಾಗಿದ್ದು, ತಾರಾಗಣದ ಆಯ್ಕೆ ಪ್ರಕ್ರಿಯೆಯಲ್ಲಿ ತೊಡಗಿದೆ.

    ಎ.ಎಂ.ಎಸ್. ಪ್ರೊಡಕ್ಷನ್ಸ್ ಲಾಂಛನದಲ್ಲಿ ಹೇಮಾವತಿ ಮುನಿಸ್ವಾಮಿಯವರು ಈ ಚಿತ್ರವನ್ನು ನಿರ್ಮಿಸುತ್ತಿದ್ದು, ಮರಿ ಟೈಗರ್ ನಾಯಕನಟನಾಗಿ ಅಭಿನಯಿಸುತ್ತಿದ್ದಾರೆ. ಈ ಚಿತ್ರಕ್ಕೆ ಶೀರ್ಷಿಕೆ ಇನ್ನೂ ಅಂತಿಮ ಆಗಿಲ್ಲ. ಆದರೆ ತಾರಗಣದ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ. ಈಗಾಗಲೇ ಹೀರೋಯಿನ್ ಆಯ್ಕೆ ಮಾಡಲಾಗಿದ್ದು, ವಿನೋದ್‍ಗೆ ಜೋಡಿಯಾಗಿ ಪಾರ್ವತಿ ಅರುಣ್ ಅಭಿನಯಿಸಲಿದ್ದಾರೆ. ಮೂಲತಃ ಮಾಲಿವುಡ್‍ನವರಾದ ಪಾರ್ವತಿ, ಈ ಹಿಂದೆ ‘ಗೋಲ್ಡನ್ ಸ್ಟಾರ್’ ಗಣೇಶ್ ಜೊತೆ ‘ಗೀತಾ’ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಇದೀಗ ವಿನೋದ್ ಪ್ರಭಾಕರ್ ಜೊತೆ ರೊಮ್ಯಾನ್ಸ್ ಮಾಡಲು ಸಿದ್ಧತೆ ನಡೆಸಿದ್ದಾರೆ.

    ವಿನೋದ್ ಪ್ರಭಾಕರ್ ಟೈಸನ್, ಮರಿ ಟೈಗರ್, ರಗಡ್ ಸಿನಿಮಾಗಳಲ್ಲಿ ನಟಿಸಿದ್ದು, ಪ್ರಸ್ತುತ ಡಿ ಬಾಸ್ ಅಭಿನಯದ ರಾಬರ್ಟ್ ಸಿನಿಮಾದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇದರೊಂದಿಗೆ ಹಲವು ಪ್ರಾಜೆಕ್ಟ್‍ಗಳ ಕುರಿತು ಸಹ ಚಿಂತನೆ ನಡೆಸುತ್ತಿದ್ದಾರೆ.

    ಚಿತ್ರೀಕರಣ ಇನ್ನಷ್ಟೇ ಆರಂಭವಾಗಬೇಕಿದ್ದು, ಲಾಕ್‍ಡೌನ್ ಪರಿಸ್ಥಿತಿ ತಿಳಿಯಾದ ಬಳಿಕ ಶುರುವಾಗಲಿದೆ. ಸಿನಿಮಾ ಟೈಟಲ್ ಕೂಡ ಆಗಲೇ ತಿಳಿಯಲಿದೆ. ಪ್ರಸ್ತುತ ಫೋಟೋಶೂಟ್ ನಡೆದಿಯುತ್ತಿದೆಯಂತೆ. ‘ಮೂರ್ಕಲ್ ಎಸ್ಟೇಟ್’ ಸಿನಿಮಾ ಖ್ಯಾತಿಯ ನಿರ್ದೇಶಕ ಪ್ರಮೋದ್ ಕುಮಾರ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಲವ್ ಹಾಗೂ ಥ್ರಿಲ್ಲರ್ ಕಥಾ ಹಂದರವನ್ನು ಹೊಂದಿದೆ. ಈ ಮೂಲಕ ಬೆಳ್ಳಿ ಪರದೆ ಮೇಲೆ ಮೋಡಿ ಮಾಡಲು ವಿನೋದ್ ಪ್ರಭಾಕರ್ ತಯಾರಿ ನಡೆಸಿದ್ದಾರೆ.

  • ಬ್ಯಾಂಡೇಜ್ ಹಾಕ್ಕೊಂಡೆ ವಿನೋದ್ ಪ್ರಭಾಕರ್ ವರ್ಕೌಟ್

    ಬ್ಯಾಂಡೇಜ್ ಹಾಕ್ಕೊಂಡೆ ವಿನೋದ್ ಪ್ರಭಾಕರ್ ವರ್ಕೌಟ್

    ಬೆಂಗಳೂರು: ನಟ ವಿನೋದ್ ಪ್ರಭಾಕರ್ ಅವರು ಶೂಟಿಂಗ್ ವೇಳೆ ಬಿದ್ದು, ಕಾಲಿಗೆ ಪೆಟ್ಟು ಮಾಡಿಕೊಂಡಿದ್ದರು. ಆದರೂ ಕಾಲಿಗೆ ಬ್ಯಾಂಡೇಜ್ ಕಟ್ಟಿಕೊಂಡು ವರ್ಕೌಟ್ ಮಾಡುತ್ತಿದ್ದಾರೆ.

    ಹೌದು..ನಟ ವಿನೋದ್ ಪ್ರಭಾಕರ್ ಅವರು ತಮ್ಮ ಕಾಲು ನೋವನ್ನು ಲೆಕ್ಕಿಸದೆ ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿದ್ದಾರೆ. ವಿನೋದ್ ಅವರು ತಮ್ಮ ಸ್ನೇಹಿತರ ಸಹಾಯದಿಂದ ಜಿಮ್‍ನಲ್ಲಿ ಡಂಬಲ್ಸ್ ಹಾಗೂ ವೇಯ್ಟ್ ಲಿಫ್ಟಿಂಗ್ ಎತ್ತು ಮೂಲಕ ಕಸರತ್ತು ಮಾಡುತ್ತಿದ್ದಾರೆ. ಇದನ್ನೂ ಓದಿ: ಪ್ರಚಾರಕ್ಕೆ ಬ್ರೇಕ್- ಗಾಯಾಳು ಸ್ನೇಹಿತನನ್ನು ಭೇಟಿ ಮಾಡಿದ್ರು ದರ್ಶನ್

    ವಿನೋದ್ ಪ್ರಭಾಕರ್ ಅವರು ‘ವರದ’ ಸಿನಿಮಾದಲ್ಲಿ ಸಾಹಸ ದೃಶ್ಯದ ಚಿತ್ರೀಕರಣ ಮಾಡುತ್ತಿದ್ದರು. ಆಗ ಕೆಳಗೆ ಬಿದ್ದು, ಎಡಗಾಲಿಗೆ ಬಲವಾದ ಪೆಟ್ಟಾಗಿತ್ತು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು ಸತತ 5 ವಾರಗಳು ವಿಶ್ರಾಂತಿ ಪಡೆಯಬೇಕು ಎಂದು ಸೂಚಿಸಿದ್ದರು. ಆದರೂ ತಮ್ಮಿಂದ ಸಿನಿಮಾ ಕೆಲಸ ನಿಲ್ಲಬಾರದು ಎಂದು ಕಾಲಿಗೆ ಪೆಟ್ಟಾಗಿದ್ದರೂ ಸಹ ಚಿತ್ರದ ಟಾಕಿ ಪೋಷನ್ ನಲ್ಲಿ ಭಾಗಿಯಾಗಿ ತಮ್ಮ ಕೆಲಸ ಮಾಡಿ ಮುಗಿಸಿಕೊಟ್ಟಿದ್ದರು.

    ಇತ್ತೀಚಿಗಷ್ಟೆ ವಿನೋದ್ ಪ್ರಭಾಕರ್ ಅವರನ್ನು ನಟ ದರ್ಶನ್ ಕೂಡ ಭೇಟಿಯಾಗಿ ಆರೋಗ್ಯ ವಿಚಾರಿಸಿಕೊಂಡು ಹೋಗಿದ್ದರು. ಸದ್ಯಕ್ಕೆ ವಿನೋದ್ ಪ್ರಭಾಕರ್ ಅಭಿನಯದ ‘ರಗಡ್’ ಸಿನಿಮಾ ಬಿಡುಗಡೆಯಾಗಿದ್ದು, ‘ವರದ’ ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ.