Tag: Viral Fever

  • ಯಾದಗಿರಿ | ಹವಾಮಾನ ಬದಲಾವಣೆ – ಮಕ್ಕಳಲ್ಲಿ ಹೆಚ್ಚಿದ ವೈರಲ್ ಫೀವರ್

    ಯಾದಗಿರಿ | ಹವಾಮಾನ ಬದಲಾವಣೆ – ಮಕ್ಕಳಲ್ಲಿ ಹೆಚ್ಚಿದ ವೈರಲ್ ಫೀವರ್

    ಯಾದಗಿರಿ: ಜಿಲ್ಲೆಯಲ್ಲಿ ಹವಾಮಾನ ಬದಲಾವಣೆಯಿಂದಾಗಿ ಮಕ್ಕಳು ಅನಾರೋಗ್ಯಕ್ಕೆ ತುತ್ತಾಗುತ್ತಿದ್ದು, ವೈರಲ್ ಫೀವರ್ (Viral Fever) ಹೆಚ್ಚಾಗುತ್ತಿದೆ.

    ಮಕ್ಕಳಲ್ಲಿ ಕೆಮ್ಮು, ನೆಗಡಿ, ಜ್ವರ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದು, ಪೋಷಕರು ಆಸ್ಪತ್ರೆಗೆ ಮುಗಿಬೀಳುತ್ತಿದ್ದಾರೆ. ನಿತ್ಯ ವೈದ್ಯರು 150ಕ್ಕೂ ಅಧಿಕ ಮಕ್ಕಳಿಗೆ ಚಿಕಿತ್ಸೆ ನೀಡುತ್ತಿದ್ದು, ಮಳೆಯಿಂದ ಹವಾಮಾನ ಬದಲಾಗುತ್ತಿರುವ ಕಾರಣ ಈ ರೀತಿಯಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ.ಇದನ್ನೂ ಓದಿ: ಅಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪ; ಮೃತರ ಸಂಖ್ಯೆ 2,200ಕ್ಕೆ ಏರಿಕೆ

    ಆಸ್ಪತ್ರೆಗಳಲ್ಲಿ ಓಪಿಡಿ ಚೀಟಿ ವಿತರಿಸಿರುವ ಕೌಂಟರ್ ಸಂಖ್ಯೆಯನ್ನು ಹೆಚ್ಚಿಸಿದರೂ ಕೂಡ ಮಕ್ಕಳ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಹೀಗಾಗಿ ಇರುವ ಬೆಡ್‌ಗಳಲ್ಲಿಯೇ ಅಡ್ಜಸ್ಟ್ ಮಾಡಿಕೊಂಡು ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.

    ಈ ಕುರಿತು ಮಕ್ಕಳ ತಜ್ಞ ವೈದ್ಯ ಡಾ.ಕುಮಾರ್ ಅಂಗಡಿ ಮಾಹಿತಿ ನೀಡಿದ್ದು, ಮಕ್ಕಳಿಗೆ ವೈರಲ್ ಜ್ವರ ಹೆಚ್ಚಿನ ಪ್ರಮಾಣದಲ್ಲಿ ಕಾಣಿಸಿಕೊಳ್ಳುತ್ತಿದೆ. ಹೀಗಾಗಿ ಪೋಷಕರು ಮಕ್ಕಳ ಬಗ್ಗೆ ಎಚ್ಚರಿಕೆ ವಹಿಸಬೇಕು. ಯಾವುದೇ ಭಯಪಡುವ ಅಗತ್ಯವಿಲ್ಲ, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಗತ್ಯ ಬಿದ್ದರೆ ಮತ್ತೊಂದು ವಾರ್ಡ್ ಓಪನ್ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ಜಯದೇವ ಹೃದ್ರೋಗ ಆಸ್ಪತ್ರೆಗೆ ಸಂದರ್ಶನದ ಮೂಲಕ ನಿರ್ದೇಶಕರ ಆಯ್ಕೆ

  • ಕೊಡಗಿನಲ್ಲಿ ನಿರಂತರ ಗಾಳಿ ಮಳೆಯಿಂದ ಹರಡುತ್ತಿದೆ ವೈರಲ್ ಫೀವರ್‌ – ಒಂದೇ ತಿಂಗಳಲ್ಲಿ 3,000 ಕೇಸ್‌

    ಕೊಡಗಿನಲ್ಲಿ ನಿರಂತರ ಗಾಳಿ ಮಳೆಯಿಂದ ಹರಡುತ್ತಿದೆ ವೈರಲ್ ಫೀವರ್‌ – ಒಂದೇ ತಿಂಗಳಲ್ಲಿ 3,000 ಕೇಸ್‌

    ಮಡಿಕೇರಿ: ಕೊಡಗಿನಲ್ಲಿ ನಿರಂತರ ಗಾಳಿ ಮಳೆಯಿಂದಾಗಿ (Rain) ಜನರಲ್ಲಿ ವೈರಲ್‌ ಫೀವರ್‌ (Viral Fever) ಹೆಚ್ಚಾಗಿ ಹರಡುತ್ತಿದೆ. ಕಳೆದ ಒಂದೇ ತಿಂಗಳಲ್ಲಿ 3,000 ಶೀತಜ್ವರ ಪ್ರಕರಣಗಳು ದಾಖಲಾಗಿವೆ.

    ಮೇ ತಿಂಗಳಲ್ಲಿ ಕೊಡಗಿನಲ್ಲಿ (Kodagu) ನಿರಂತರವಾಗಿ ಅಬ್ಬರಿಸಿದ್ದ ಮಳೆರಾಯ ಕೊಂಚ ಬಿಡುವು ನೀಡಿದ್ದ. ಕಳೆದ ಎರಡು ದಿನಗಳಿಂದ ಮತ್ತೆ ಧಾರಾಕಾರ ಮಳೆಯಾಗುತ್ತಿದೆ. ಅಚ್ಚರಿಯೆಂದರೆ ಈ ವರ್ಷ ಮಳೆಯೊಂದಿಗೆ ಶೀತಗಾಳಿಯೂ (Cold Wind) ಹೆಚ್ಚಾಗಿರುವುದರಿಂದ ಜನರಿಗೆ ವೈರಲ್‌ ಫೀವರ್‌ ಹರಡುತ್ತಿದೆ. ಮಳೆ, ಶೀತಗಾಳಿ ಪರಿಣಾಮ ಶೀತಜ್ವರದಿಂದ ಬಳಲುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇದನ್ನೂ ಓದಿ: ಮುಂದಿನ ಮೂರ್ನಾಲ್ಕು ದಿನ ಬೆಂಗ್ಳೂರಿಗೆ ಮಳೆ ಅಲರ್ಟ್‌

    ಜಿಲ್ಲೆಯಾದ್ಯಂತ ಕಳೆದ ಏಪ್ರಿಲ್‌ನಲ್ಲಿ 15,000 ಶೀತಜ್ವರ ಪ್ರಕರಣಗಳು ದಾಖಲಾಗಿತ್ತು. ಆದ್ರೆ ಆಗಸ್ಟ್‌ ತಿಂಗಳಲ್ಲಿ 3,000 ಜ್ವರ ಪ್ರಕರಣಗಳು ದಾಖಲಾಗಿದೆ. ಕಳೆದ 3 ತಿಂಗಳಿಗೆ ಹೋಲಿಸಿದ್ರೆ ಈ ತಿಂಗಳಲ್ಲಿ ಹೆಚ್ಚು ಪ್ರಕರಣ ದಾಖಲಾಗಿದೆ ಅಂತ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸತೀಶ್ ಮಾಹಿತಿ ನೀಡಿದ್ದಾರೆ.  ಇದನ್ನೂ ಓದಿ: ವಿದೇಶಿ ಪ್ರಜೆಗಳಿಗೆ ಬಾಡಿಗೆ ನೀಡುವ ಮನೆ ಮಾಲೀಕರಿಗೆ ಗೈಡ್‌ಲೈನ್ಸ್‌ ಜಾರಿ – ಮಾರ್ಗಸೂಚಿ ಏನು?

    ಮಕ್ಕಳಲು ಆರೋಗ್ಯ ಸಮಸ್ಯೆ:
    ಮಳೆಗಾಲ ಬಂತೆಂದರೆ ಕೊಡಗು ಜಿಲ್ಲೆಯಲ್ಲಿ ಓಡಾಡೋದೇ ಕಷ್ಟ. ಸದಾ ರಸ್ತೆಯಲ್ಲಿ ನೀರು ನಿಂತಂತಿರುತ್ತದೆ. ಇನ್ನು ಮಣ್ಣು ರಸ್ತೆಗಳ ಸ್ಥಿತಿಯಂತೂ ಕೇಳೋಹಾಗೇ ಇಲ್ಲ. ಆದ್ರೆ ಶೀತಗಾಳಿ ಕಡಿಮೆ ಇರುತ್ತಿದ್ದ ಪರಿಣಾಮ ಆರೋಗ್ಯ ಸಮಸ್ಯೆಗೆ ತುತ್ತಾಗುವವರ ಸಂಖ್ಯೆ ಕಡಿಮೆಯಿರುತ್ತು. ಆದ್ರೆ ಈ ಬಾರಿ ಮಕ್ಕಳು, ವಿದ್ಯಾರ್ಥಿಗಳು ಕೂಡ ಆರೋಗ್ಯ ಸಮಸ್ತೆಗೆ ಗುತ್ತಾಗುತ್ತಿದ್ದಾರೆ. ಹೀಗಾಗಿ ಜನರು ಮುನ್ನೆಚ್ಚರಿಕೆ ವಹಿಸುವಂತೆ ಆರೋಗ್ಯಾಧಿಕಾರಿಗಳು ಸಲಹೆ ನೀಡಿದ್ದಾರೆ.  ಇದನ್ನೂ ಓದಿ: ಕಾಂಗ್ರೆಸ್ ಯಾವಾಗಲು ಬೇರೆ ಧರ್ಮದ ಪರವಾಗಿ ಇದ್ದೇವೆ ಅಂತ ತೋರಿಸುತ್ತದೆ: ನಿಖಿಲ್ ಕುಮಾರಸ್ವಾಮಿ

  • ವೈರಲ್ ಫೀವರ್ ಹಾವಳಿ; ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಬೆಡ್ ಇಲ್ಲದೇ ರೋಗಿಗಳ ಪರದಾಟ

    ವೈರಲ್ ಫೀವರ್ ಹಾವಳಿ; ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಬೆಡ್ ಇಲ್ಲದೇ ರೋಗಿಗಳ ಪರದಾಟ

    ಚಿತ್ರದುರ್ಗ: ಇತ್ತೀಚೆಗೆ ಎಲ್ಲೆಡೆ ವೈರಲ್ ಫೀವರ್ (Viral Fever) ಹಾಗೂ ಚಿಕನ್ ಗುನ್ಯಾ ಸೇರಿದಂತೆ ವಿವಿಧ ಸಾಂಕ್ರಾಮಿಕ ರೋಗಗಳು ತುಂಬಾ ವೇಗವಾಗಿ ಹರಡುತ್ತಿದೆ. ಆದರೆ ಚಿತ್ರದುರ್ಗ (Chitradurga) ಜಿಲ್ಲಾಸ್ಪತ್ರೆಯಲ್ಲಿ ಮಾತ್ರ ರೋಗಿಗಳು ಬೆಡ್‌ಗಳ ಸಮಸ್ಯೆಯಿಂದ (Bed Problem) ಪರದಾಡುತ್ತಿದ್ದಾರೆ.

    ಹೌದು, ಇಲ್ಲಿನ ನೂತನ ಸರ್ಕಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಬೆಡ್‌ಗಳು ಭರ್ತಿಯಾಗಿವೆ ಅಂತ ಬಾಣಂತಿಯರು ಹಾಗೂ ಹಸುಗೂಸುಗಳನ್ನು ನೆಲದ ಮೇಲೆ ಮಲಗಿಸಿ ಚಿಕಿತ್ಸೆ ನೀಡಲಾಗ್ತಿದೆ. ಹೀಗಾಗಿ, ರೋಗ ಮತ್ತಷ್ಟು ಉಲ್ಬಣಗೊಳ್ತಿದ್ದು, ರೋಗಿಗಳು ಪ್ರಾಣ ಕೈಯಲ್ಲಿಡಿದುಕೊಂಡು ಚಿಕಿತ್ಸೆ ಪಡೆಯುವಂತಾಗಿದೆ. ಇದನ್ನೂ ಓದಿ: ಹಂದಿ ಮಾಂಸ ಸೇವನೆ ಹೆಚ್ಚಳ – ಶಟಲ್‌ ಕಾಕ್‌ಗೆ ಬಂತು ಬರ, ಬೆಲೆ ದಿಢೀರ್‌ ಏರಿಕೆ!

    ಚಿತ್ರದುರ್ಗದ ಜಿಲ್ಲಾಸ್ಪತ್ರೆಯಲ್ಲಿ 100 ಬೆಡ್‌ಗಳ ತಾಯಿ ಮತ್ತು ಮಕ್ಕಳ ನೂತನ ಆಸ್ಪತ್ರೆಯು ಗರ್ಭಿಣಿಯರು ಹಾಗೂ ಮಕ್ಕಳ ಪಾಲಿಗೆ ಸಂಜೀವಿನಿ ಆಗಬೇಕಿತ್ತು. ಆದ್ರೆ, ಹೆರಿಗೆಯಾದ ಬಳಿಕ ಮಗುವಿಗೆ ಏನಾದರೂ ಉಸಿರಾಟದ ಸಮಸ್ಯೆ, ಜಾಂಡೀಸ್ ಸೇರಿದಂತೆ ಇನ್ನಿತರ ರೋಗಗಳು ಉಲ್ಬಣವಾದ್ರೆ ಈ ಆಸ್ಪತ್ರೆ ಬಾಣಂತಿಯರ ಪರಿಸ್ಥಿತಿ ನರಕಕ್ಕಿಂತ ಕಡೆಯಾಗಲಿದೆ. ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಸ್ಮಾರ್ಟ್ ಇಂಟೆಲಿಜೆಂಟ್ ವಿಲೇಜ್ – ಏನಿದು ಹೊಸ ಯೋಜನೆ?

    ಬಾಣಂತಿಯರು ನೆಲದ ಮೇಲೆಯೇ ಮಲಗಿ ಚಿಕಿತ್ಸೆ ಪಡೆಯುವ ಪರಿಸ್ಥಿತಿ ಎದುರಾಗಿದೆ. ಅಲ್ಲದೇ ಇತ್ತೀಚೆಗೆ ವೈರಲ್ ಫೀವರ್ ಹಾಗು ಚಿಕನ್ ಗುನ್ಯಾದಂತಹ ವಿವಿಧ ಸಾಂಕ್ರಾಮಿಕ ರೋಗಗಳು ಮಕ್ಕಳಲ್ಲಿ ಹೆಚ್ಚಾಗಿ ಹರಡುತ್ತಿದೆ. ಹೀಗಾಗಿ ಮಕ್ಕಳ ವಾರ್ಡ್ ಫುಲ್ ಆಗಿದ್ದು, ಬೆಡ್‌ಗಳು ಭರ್ತಿಯಾಗಿವೆ.

     ಹೀಗಾಗಿ ಚಿಕಿತ್ಸೆಗೆಂದು ಬರುವ ಮಕ್ಕಳಿಗೂ ನೆಲವೇ ಗತಿಯಾಗಿದ್ದು, ಚಿಕಿತ್ಸೆ ಸಿಕ್ರೆ ಸಾಕಪ್ಪ, ಬೆಡ್ ಇಲ್ಲವಾದ್ರು ಪರವಾಗಿಲ್ಲ ಅಂತಿದ್ದಾರೆ. ಇನ್ನು, ಆಸ್ಪತ್ರೆಗೆ ದಾಖಲಾಗುವ ರೋಗಿಗಳಲ್ಲಿ ವಿವಿಧ ವೈರಲ್ ಅಟ್ಯಾಕ್‌ನಿಂದ ರೋಗ ಮತ್ತಷ್ಟು ಹೆಚ್ಚಾಗುವ ಭೀತಿ ಕಾಡುತ್ತಿದೆ. ಆದ್ರೆ ಸಂಬಂಧಪಟ್ಟ ಜಿಲ್ಲಾಸ್ಪತ್ರೆ ಸರ್ಜನ್ ಡಾ.ರವೀಂದ್ರ ಅವರು ಮಾತ್ರ ನಿದ್ರಾವಸ್ಥೆಯಲ್ಲಿರೋದು ವಿಪರ್ಯಾಸ ಅಂತ ರೋಗಿಗಳು ಆಕ್ರೋಶ ಹೊರಹಾಕಿದ್ದಾರೆ.

    ಈ ನೂತನ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಆರಂಭವಾಗಿ ಈಗಾಗಲೇ ಒಂದು ವರ್ಷ ಕಳೆದಿದೆ. ಆದ್ರೆ ಬೆಡ್‌ಗಳ ಸಮಸ್ಯೆ ನಿವಾರಿಸುವಲ್ಲಿ ಜಿಲ್ಲಾಡಳಿತ ವಿಫಲವಾಗಿದೆ. ಹೀಗಾಗಿ, ಚಿಕಿತ್ಸೆಗೆಂದು ಬರುವ ರೋಗಿಗಳು ಬೆಡ್ ಸಿಗಲಾರದೇ ಮಕ್ಕಳನ್ನು ತಮ್ಮ ಹೆಗಲ ಮೇಲೆ ಹಾಗೂ ಮಡಿಲಲ್ಲಿ ಮಲಗಿಸಿಕೊಂಡೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೀಗಾಗಿ ಈ ಸಮಸ್ಯೆಗೊಂದು ಶಾಶ್ವತ ಪರಿಹಾರ ಒದಗಿಸುವಂತೆ ರೋಗಿಗಳು ಆಗ್ರಹಿಸಿದ್ದಾರೆ.

    ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಸಿಕ್ಕರೂ ಕೂಡ ಬೆಡ್ ಸಿಗಲಾರದೇ ಬಾಣಂತಿಯರು ಹಾಗೂ ಮಕ್ಕಳು ಪರದಾಡುವಂತಾಗಿದೆ. ಐಸಿಯುನಲ್ಲಿ ಚಿಕಿತ್ಸೆ ಪಡೆಯುವ ನವಜಾತಶಿಶುಗಳ ತಾಯಂದಿರ ಹಿತದೃಷ್ಟಿಯಿಂದ ಸುಸಜ್ಜಿತ ತಂಗುದಾಣ ನಿರ್ಮಿಸುವ ಮೂಲಕ ಬಾಣಂತಿಯರ ಹಿತ ಕಾಯಬೇಕೆಂಬುದು ಎಲ್ಲರ ಆಶಯವಾಗಿದೆ.

  • ತೀವ್ರ ಮಳೆಯಿಂದಾಗಿ ಮಲೆನಾಡಾದ ರಾಯಚೂರು – ವೈರಲ್ ಫೀವರ್ ಪ್ರಮಾಣ ಹೆಚ್ಚಳ

    ತೀವ್ರ ಮಳೆಯಿಂದಾಗಿ ಮಲೆನಾಡಾದ ರಾಯಚೂರು – ವೈರಲ್ ಫೀವರ್ ಪ್ರಮಾಣ ಹೆಚ್ಚಳ

    – ಚಿಕ್ಕಮಕ್ಕಳಿಂದ ವಯೋವೃದ್ಧರವರೆಗೂ ಹರಡುತ್ತಿರುವ ಜ್ವರ

    ರಾಯಚೂರು: ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಬಿಸಿಲನಾಡು ರಾಯಚೂರು (Raichuru) ಇದೀಗ ಮಲೆನಾಡಂತಾಗಿದೆ. ಇದರಿಂದ ವೈರಲ್ ಫೀವರ್ ಹೆಚ್ಚಾಗಿದ್ದು, ಚಿಕ್ಕಮಕ್ಕಳಿಂದ ಹಿಡಿದು ವಯೋವೃದ್ಧರವರೆಗೂ ಜ್ವರ ವಿಪರೀತವಾಗಿ ಹರಡಿಕೊಳ್ಳುತ್ತಿದೆ.

    ಹೌದು, ಜಿಲ್ಲೆಯಲ್ಲಿ ವರುಣನ ಅಬ್ಬರ ಜೋರಾಗಿದ್ದು, ನಾನಾ ಸಮಸ್ಯೆಗಳನ್ನ ಉಂಟು ಮಾಡುತ್ತಿದೆ. ಒಂದೆಡೆ ರೈತರು ಬೆಳೆ ಉಳಿಸಿಕೊಳ್ಳಲು ಒದ್ದಾಡುತ್ತಿದ್ದರೆ, ಇನ್ನೊಂದೆಡೆ ಜನ ವೈರಲ್ ಫೀವರ್‌ಗೆ ತತ್ತರಿಸುತ್ತಿದ್ದಾರೆ. ಪ್ರತೀ ವರ್ಷಕ್ಕಿಂತ ಈ ಬಾರಿ ರೋಗಿಗಳ ಸಂಖ್ಯೆ ಹೆಚ್ಚಾಗಿದೆ.ಇದನ್ನೂ ಓದಿ: ಮುಂದಿನ ಮೂರು ಗಂಟೆ ಬೆಂಗಳೂರಿಗೆ ಮಳೆ ಅಲರ್ಟ್

    ವಾತಾವರಣದಲ್ಲಿನ ಬದಲಾವಣೆಯಿಂದ ಬಿಸಿಲನಾಡು ಮಲೆನಾಡಾಗಿದ್ದು, ಜನರಲ್ಲಿ ವೈರಲ್ ಫೀವರ್ ಹೆಚ್ಚಾಗಿದೆ. ಇದರಿಂದ ಚಿಕ್ಕಮಕ್ಕಳಿಂದ ಹಿಡಿದು ವಯೋವೃದ್ದರವರೆಗೂ ಆಸ್ಪತ್ರೆಗೆ ದಾಖಲಾಗುವಂತಾಗಿದೆ. ಪ್ರತಿ ವರ್ಷವೂ ಮಳೆಗಾಲದ ಬಳಿಕ ಸಮಸ್ಯೆಗಳು ಸಾಮಾನ್ಯವಾಗಿ ಕಂಡುಬರುತ್ತವೆ. ಆದ್ರೆ ಈ ಬಾರಿ ಮಳೆಯ ಪ್ರಮಾಣ ಹೆಚ್ಚಾಗಿದ್ದು, ನಿರಂತರ ಮಳೆ ಬರುತ್ತಿರುವುದರಿಂದ ವಾತಾವರಣ ತಂಪಾಗಿದೆ. ವೈರಾಣು ವೃದ್ಧಿ ಪ್ರಮಾಣ ಹೆಚ್ಚಾಗುವುದರಿಂದ ವೈರಲ್ ಫೀವರ್ ಸಮಸ್ಯೆ ಹೆಚ್ಚಾಗಿ ಕಾಡುತ್ತಿದೆ.

    ಒಬ್ಬರಿಂದ ಒಬ್ಬರಿಗೆ ಹರಡುವುದರಿಂದ ಚಿಕ್ಕಮಕ್ಕಳಲ್ಲಿ ಹೆಚ್ಚಾಗಿ ಕಂಡುಬರುತ್ತಿದ್ದು, ಮಕ್ಕಳ ಆಸ್ಪತ್ರೆಗಳಲ್ಲಿ ವೈರಲ್ ಫೀವರ್ ಪ್ರಕರಣಗಳೇ ಜಾಸ್ತಿಯಾಗಿವೆ. ಉಸಿರಾಟ ಸಮಸ್ಯೆ, ಕೆಮ್ಮು, ನೆಗಡಿ, ಜ್ವರ, ಸುಸ್ತು, ಮೈ,ಕೈ ನೋವು, ವಾಂತಿ ಭೇದಿಯಂತ ಲಕ್ಷಣಗಳು ಸಹ ಕಾಣಿಸಿಕೊಳ್ಳುತ್ತಿವೆ.

    ಕಳೆದ ಹದಿನೈದು ದಿನಗಳಿಂದ ಜಿಲ್ಲೆಯ ಎಲ್ಲಾ ಆಸ್ಪತ್ರೆ, ಕ್ಲಿನಿಕ್, ಮಕ್ಕಳ ಆಸ್ಪತ್ರೆಗಳಲ್ಲಿ ವೈರಲ್ ಫೀವರ್ ರೋಗಿಗಳ ಸಂಖ್ಯೆ ಹೆಚ್ಚಾಗಿದೆ. ಹಿಂದೆಂದಿಗಿಂತಲೂ ಈ ವರ್ಷ ವೈರಲ್ ಫೀವರ್ ಪ್ರಕರಣಗಳ ಸಂಖ್ಯೆ ದುಪ್ಪಟ್ಟಾಗಿದೆ ಅಂತ ವೈದ್ಯರು ಹೇಳುತ್ತಿದ್ದಾರೆ. ವೈರಲ್ ಫೀವರ್‌ಗೆ ಹೆದರುವ ಅಗತ್ಯವಿಲ್ಲ ಆರಂಭದಲ್ಲೇ ಚಿಕಿತ್ಸೆ ಪಡೆದರೇ ಬೇಗ ಗುಣಮುಖರಾಗಬಹುದು. ಆದ್ರೆ ಆರಂಭಿಕ ಹಂತದಲ್ಲಿ ನಿರ್ಲಕ್ಷ್ಯ ಮಾಡಿದ್ರೆ ಆಸ್ಪತ್ರೆಗೆ ದಾಖಲಾಗಬೇಕಾಗುತ್ತದೆ. ಹೀಗಾಗಿ ಮುನ್ನೆಚ್ಚರಿಕೆ ವಹಿಸಬೇಕು, ಹೆಚ್ಚು ಬಿಸಿ ನೀರು ಸೇವಿಸಬೇಕು ಅಂತ ಮಕ್ಕಳ ತಜ್ಞ ವೈದ್ಯ ಡಾ.ಮಲ್ಲೇಶ್ ಗೌಡ ಸಲಹೆ ನೀಡಿದ್ದಾರೆ.

    ವೈರಲ್ ಫೀವರ್ ಸಾಂಕ್ರಾಮಿಕವಾಗಿರುವುದರಿಂದ ಮನೆಯಲ್ಲಿ, ಶಾಲೆಗಳಲ್ಲಿ ಎಚ್ಚರ ವಹಿಸಬೇಕು. ಮಕ್ಕಳಿಗೆ ಬೇರೆ ಆರೋಗ್ಯ ಸಮಸ್ಯೆಗಳಿದ್ರೆ ಪೋಷಕರು ಹೆಚ್ಚು ಕಾಳಜಿ ವಹಿಸಬೇಕು ಅಂತ ವೈದ್ಯರು ಎಚ್ಚರಿಕೆ ನೀಡಿದ್ದಾರೆ.ಇದನ್ನೂ ಓದಿ: Ramanagara | ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳ ಮಾರಾಮಾರಿ – 23 ಮಂದಿಯ ವಿರುದ್ಧ ಎಫ್‌ಐಆರ್

  • ಹವಾಮಾನ ವೈಪರೀತ್ಯ – ಕೊಡಗಿನಲ್ಲಿ ವೈರಲ್ ಫೀವರ್, ಒಂದೇ ದಿನ 200 ರಿಂದ 300 ಜನರಿಗೆ ಚಿಕಿತ್ಸೆ

    ಹವಾಮಾನ ವೈಪರೀತ್ಯ – ಕೊಡಗಿನಲ್ಲಿ ವೈರಲ್ ಫೀವರ್, ಒಂದೇ ದಿನ 200 ರಿಂದ 300 ಜನರಿಗೆ ಚಿಕಿತ್ಸೆ

    ಮಡಿಕೇರಿ: ಹವಾಮಾನ ವೈಪರೀತ್ಯದಿಂದಾಗಿ ಜಿಲ್ಲೆಯಲ್ಲಿ ವಾರಕ್ಕೆ ನೂರಾರು ಜನರು ಮಕ್ಕಳು ಸಾಮೂಹಿಕವಾಗಿ ಅನಾರೋಗ್ಯಕ್ಕೀಡಾಗುತ್ತಿದ್ದು, ಜಿಲ್ಲೆಯ ಜನರಲ್ಲಿ ಆತಂಕ ಮೂಡಿಸಿದೆ. ಜಿಲ್ಲೆಯಲ್ಲಿ ಆಗೋಮ್ಮೆ ಈಗೊಮ್ಮೆ ಮಳೆ, ಬಿಸಿಲು, ಚಳಿಯ ವಾತಾವರಣ ಬರುತ್ತಿರುವುದರಿಂದ ಜಿಲ್ಲೆಯಲ್ಲಿ ಒಂದೇ ದಿನಕ್ಕೆ ಸುಮಾರು 200 ರಿಂದ 300 ಜನ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ.

    ಮಳೆಗಾಲದಲ್ಲಿ ಪ್ರಕೃತಿ ವಿಕೋಪದಿಂದ ನಲುಗಿದ ಕೊಡಗಿನ ಜನರಿಗೆ ಈ ವರ್ಷ ಇಡಿ ಹವಾಮಾನ ವೈಪರೀತ್ಯದಿಂದ ಜನರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ಇದರಿಂದಾಗಿ ಜಿಲ್ಲೆಯ ಜನರಿಗೆ ಶೀತ, ಕೆಮ್ಮು, ವೈರಲ್ ಫೀವರ್, ರಿಕೆಟ್ಸಿಯಲ್ ಫೀವರ್ ಹರಡುತ್ತಿದೆ. ಅಲ್ಲದೇ ನಿರಂತರವಾಗಿ ಬಿಸಿಲಿನ ಉಷ್ಣಾಂಶ ಹಾಗೂ ಗಾಳಿ, ಚಳಿ ಹೆಚ್ಚಾಗಿರುವುದರಿಂದ ಆಸ್ತಮಾ ಕಾಯಿಲೆಯಿಂದ ಬಳಲುತ್ತಿರುವ ಜನರಿಗೆ ಉಸಿರಾಟದ ಸಮಸ್ಯೆ ಕಾಡುತ್ತಿದೆ. ಮಕ್ಕಳು, ಮಧ್ಯ ವಯಸ್ಕರು ವೃದ್ಧರು ಹೆಚ್ಚಾಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರೊಂದಿಗೆ ದಿಢೀರ್‌ ಮಳೆ, ಬಿಸಿಲು ಬರುತ್ತಿರುವುದರಿಂದ ಮನೆಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೀರು ನಿಂತು ಮಲೇರಿಯಾ ಸೊಳ್ಳೆಗಳ ಉತ್ಪತ್ತಿಯಾಗುವ ಸಾಧ್ಯತೆ ಇದೆ ಅನ್ನೋ ಅತಂಕವೂ ಎದುರಾಗಿದೆ.

    ಕೊಡಗು ಜಿಲ್ಲೆಯಲ್ಲಿ ವಾತಾವರಣದಲ್ಲಿ ವೈಪರೀತ್ಯ ಆಗುತ್ತಲೇ ಇದೆ. ಬೆಳಗ್ಗೆ ಮೋಡ ಕವಿದ ವಾತಾವರಣ ಇದ್ದರೇ ಸಂಜೆ ವೇಳೆಗೆ ದಿಢೀರ್ ಮಳೆ ಸುರಿಯುತ್ತೆ. ಈ ರೀತಿಯ ಭಾರಿ ಮಳೆಯ ಜೊತೆಗೆ ನಗರದಲ್ಲಿ ತಾಪಮಾನದ ಕುಸಿತವು ಜನರ ಆರೋಗ್ಯದ ಮೇಲೆ ಪರಿಣಾಮ ಉಂಟು ಮಾಡುತ್ತಿದೆ. ನೆಗಡಿಯಿಂದ ಶುರುವಾಗಿ ನಂತರ ಗಂಟಲು ಕೆರೆತ, ಕೆಮ್ಮು, ಕಫಾ, ಜ್ವರದಿಂದ ಬಳಲುವ ಜನರು ಆಸ್ಪತ್ರೆ ಹಾಗೂ ಕ್ಲಿನಿಕ್ ಮೊರೆ ಹೋಗುತ್ತಿದ್ದಾರೆ. ಇದನ್ನೂ ಓದಿ: ಕಟ್ಟಡ ದುರಂತ ಸ್ಥಳಕ್ಕೆ ಭೇಟಿ ಕೊಟ್ಟ ಸಿಎಂ- ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ

    ಕೊಡಗು ಐದು ತಾಲೂಕಿನಲ್ಲಿ ದಿನವೊಂದಕ್ಕೆ 200 ರಿಂದ 300 ಜನರು ಆಸ್ಪತ್ರೆಯಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಲ್ಲದೇ ಅಕ್ಟೋಬರ್ ತಿಂಗಳಲ್ಲೇ ಸುಮಾರು 600 ರಿಂದ 700 ಜನರು ಚಿಕಿತ್ಸೆ ಪಡೆದು ಹೋಗಿದ್ದಾರೆ. ಅಷ್ಟೇ ಅಲ್ಲದೇ ಜನವರಿಯಿಂದ ಇಲ್ಲಿಯ ವರೆಗೂ… ಡೇಗ್ಯೂ ಜ್ವರ ಪ್ರಕರಣ ಹೆಚ್ಚಾಗಿ ಕಂಡು ಬರುತ್ತಿರುವುದರಿಂದ ಗ್ರಾಮೀಣ ಭಾಗದ ಜನರಲ್ಲಿ ಅರೋಗ್ಯ ಇಲಾಖೆ ಜಾಗೃತಿ ಕಾರ್ಯವನ್ನು ಮಾಡಲಾಗುತ್ತಿದೆ. ಇದನ್ನೂ ಓದಿ: ಮುಡಾದಲ್ಲಿ ಜಿಲ್ಲಾಧಿಕಾರಿ ಪಾತ್ರವಿಲ್ಲ, ಲೋಕಾಯುಕ್ತರಿಗೆ ಸ್ಪಷ್ಟನೆ ನೀಡಿದ್ದೇನೆ: ಜಿ.ಕುಮಾರ ನಾಯಕ್

  • ವೈರಲ್ ಜ್ವರದ ನಂತರ ಮತ್ತೆ ವರ್ಕೌಟ್‍ಗೆ ಮರಳಿದ ಸಮಂತಾ

    ವೈರಲ್ ಜ್ವರದ ನಂತರ ಮತ್ತೆ ವರ್ಕೌಟ್‍ಗೆ ಮರಳಿದ ಸಮಂತಾ

    ಚೆನ್ನೈ: ದಕ್ಷಿಣ ಭಾರತದ ಖ್ಯಾತ ನಟಿ ಸಮಂತಾ ರುತ್ ಪ್ರಭು ವರ್ಕೌಟ್ ಪ್ರಿಯೆಯಾಗಿದ್ದು, ಇತ್ತೀಚೆಗೆ ಅವರಿಗೆ ವೈರಲ್ ಜ್ವರ ಕಾಣಿಸಿಕೊಂಡ ಕಾರಣ ವರ್ಕೌಟ್‍ಗೆ ಹೋಗಿರಲಿಲ್ಲ. ಆದರೆ 20 ದಿನಗಳ ನಂತರ ಮತ್ತೆ ಜಿಮ್ ನಲ್ಲಿ ವರ್ಕೌಟ್ ಮಾಡಲು ಅವರು ಪ್ರಾರಂಭಿಸಿದ್ದಾರೆ.

     

    View this post on Instagram

     

    A post shared by Samantha (@samantharuthprabhuoffl)

    ಇತ್ತೀಚೆಗೆ ರಿಲೀಸ್ ಆದ ‘ಪುಷ್ಪಾ’ ಸಿನಿಮಾದ ಐಟಂ ಡ್ಯಾನ್ಸ್ ‘ಊ ಅಂತಾವಾ ಮಾವ’ ಹಾಡಿನಲ್ಲಿ ಪ್ರೇಕ್ಷಕರ ಗಮನ ಸೆಳೆದಿದ್ದು, ಎಲ್ಲರೂ ಅವರ ರಿಯಾಕ್ಷನ್ ಮತ್ತು ಫಿಟ್‍ನೆಸ್ ನೋಡಿ ಬೆರಗುಗೊಂಡಿದ್ದರು. ಅದರಂತೆ ಸಮಂತಾ ಯಾವಗಲೂ ತಮ್ಮ ಫಿಟ್‍ನೆಸ್ ಅನ್ನು ಕಾಪಾಡಿಕೊಳ್ಳಲು ಜಿಮ್‍ನಲ್ಲಿ ಸಖತ್ ಆಗಿ ಬೆವರನ್ನು ಇಳಿಸುತ್ತಾರೆ. ವರ್ಕೌಟ್ ವೀಡಿಯೋಗಳನ್ನು ಸಮಂತಾ ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿಗಳೊಂದಿಗೆ ಹಂಚಿಕೊಳ್ಳುತ್ತಿರುತ್ತಾರೆ. ಇದನ್ನೂ ಓದಿ:  ಒಂದು ದಿನದ ಬಂದ್ ಮಾಡಿದ್ರೆ ತಪ್ಪೇನು ಆಗಲ್ಲ: ಎಚ್‍ಕೆ ಕುಮಾರಸ್ವಾಮಿ

    ನಟಿಗೆ ವೈರಲ್ ಜ್ವರ ಕಾಣಿಸಿಕೊಂಡ 20 ದಿನಗಳ ನಂತರ ಮತ್ತೆ ಜಿಮ್‍ನಲ್ಲಿ ವರ್ಕೌಟ್ ಮಾಡಲು ಪ್ರಾರಂಭಿಸಿದ್ದಾರೆ. ಅವರ ವರ್ಕೌಟ್ ವೀಡಿಯೋವನ್ನು ಇನ್‍ಸ್ಟಾ ಸ್ಟೋರೀಸ್‍ನಲ್ಲಿ ಅಪ್‍ಲೋಡ್ ಸಹ ಮಾಡಿದ್ದಾರೆ. ಸಮಂತಾ ಅವರು ಹೊಸ ರೀತಿಯ ವರ್ಕೌಟ್‍ಗಳನ್ನು ಪ್ರಯತ್ನಿಸಲು ಯಾವಾಗಲೂ ಉತ್ಸುಕರಾಗಿರುತ್ತಾರೆ. ಅದು ಅಲ್ಲದೇ ಸೆಪ್ಟೆಂಬರ್‍ನಲ್ಲಿ ಸಮಂತಾ ತನ್ನ ಕೆಲವು ಸ್ನೇಹಿತರೊಂದಿಗೆ ಸೈಕ್ಲಿಂಗ್ ಮಾಡಿದ್ದು, ಆ ಫೋಟೋವನ್ನು ಹಂಚಿಕೊಂಡಿದ್ದರು.

     

    View this post on Instagram

     

    A post shared by Samantha (@samantharuthprabhuoffl)

    ವರ್ಕೌಟ್ ಬಗ್ಗೆ ಅವರು ತನ್ನ ಆರೋಗ್ಯವನ್ನು ಸುಧಾರಿಸಿಕೊಳ್ಳುವುದು ಮಾತ್ರವಲ್ಲ, ತಮ್ಮ ಜೀವನದ ಕಹಿ ಘಟನೆಗಳನ್ನು ಮರೆಯಲು ಇದು ಸಹಾಯ ಮಾಡುತ್ತೆ ಎಂದು ಹೇಳಿದ್ದರು.

  • ಬೆಣ್ಣೆ ನಗರಿಯಲ್ಲಿ ವೈರಲ್ ಫೀವರ್ ಆತಂಕ-ಐಸಿಯುನಲ್ಲಿ ಮಕ್ಕಳು

    ಬೆಣ್ಣೆ ನಗರಿಯಲ್ಲಿ ವೈರಲ್ ಫೀವರ್ ಆತಂಕ-ಐಸಿಯುನಲ್ಲಿ ಮಕ್ಕಳು

    ದಾವಣಗೆರೆ: ಬೆಣ್ಣೆ ನಗರಿಯಲ್ಲಿ ಮಕ್ಕಳಲ್ಲಿ ವೈರಲ್ ಫೀವರ್, ಡೆಂಗ್ಯೂ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ಮಕ್ಕಳಲ್ಲಿ ವೈರಾಣು ಕಾಣಿಸಿಕೊಳ್ಳುತ್ತಿದ್ದು, ಪೋಷಕರಲ್ಲಿ ಆತಂಕ ಉಂಟು ಮಾಡಿದೆ.

    ಡೆಂಗ್ಯೂ, ವೈರಲ್ ಫೀವರ್ ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ವಿಜಯನಗರ ಜಿಲ್ಲೆಯ ಸಾವಿರಾರು ಮಕ್ಕಳಲ್ಲಿ ವೈರಲ್ ಫೀವರ್ ಕಾಣಿಸಿಕೊಂಡಿದೆ. 15 ದಿನಗಳಿಂದಿಚೆಗೆ ವೈರಾಣು ಅಬ್ಬರ ಹೆಚ್ಚಾಗಿದೆ. ಚಿಕಿತ್ಸೆಗಾಗಿ ದಾವಣಗೆರೆಗೆ ದಿನಕ್ಕೆ ಸಾವಿರಕ್ಕೂ ಅಧಿಕ ಮಕ್ಕಳು ಬರುತ್ತಿದ್ದಾರೆ. RSV (Respiratory syncytial virus ) ವೈರಾಣುವಿನಿಂದ ಏಕಕಾಲಕ್ಕೆ ಬ್ರಾಂಕ್ಯುಲೈಟಿಸ್, ವೈರಲ್ ವ್ಹೀಜಿಂಗ್, ವೈರಲ್ ನ್ಯುಮೋನಿಯಾ ಇವುಗಳ ಜೊತೆ ಡೆಂಗ್ಯೂ ಸೋಂಕು ಆತಂಕ ಎದುರಾಗಿದೆ. ಇದನ್ನೂ ಓದಿ:  ಇಂತಹ ಕೆಟ್ಟ ಸರ್ಕಾರವನ್ನು ರಾಜಕೀಯ ಜೀವನದಲ್ಲಿ ನೋಡಿಲ್ಲ: ಸಿದ್ದರಾಮಯ್ಯ

    ಕಳೆದ ವರ್ಷಕ್ಕಿಂತ ಈ ಬಾರಿ ಕಾಯಿಲೆ ಅಧಿಕವಾಗಿದೆ. 3 ವರ್ಷದೊಳಗಿನ ಮಕ್ಕಳಿಗೆ ಉಸಿರಾಟದ ತೊಂದರೆ ಕಾಣಿಸಿಕೊಳ್ಳುತ್ತಿದೆ. ಮಕ್ಕಳನ್ನು ತೀವ್ರ ನಿಗಾ ಘಟಕಕ್ಕೆ ದಾಖಲಿಸಬೇಕಾದ ಅನಿವಾರ್ಯತೆ ಉಂಟಾಗಿದೆ. ಎಸ್.ಎಸ್. ಹೈಟೆಕ್‍ನ ಐಸಿಯುನಲ್ಲಿ 65 ಮಕ್ಕಳು ದಾಖಲಾಗಿದ್ದಾರೆ. ಎಸ್.ಎಸ್. ಹೈಟೆಕ್‍ನಲ್ಲಿ 116, ಬಾಪೂಜಿಯಲ್ಲಿ 97, ಜಿಲ್ಲಾಸ್ಪತ್ರೆಯಲ್ಲಿ 27, ಒಟ್ಟು 236 ಮಕ್ಕಳಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಜಿಲ್ಲಾಡಳಿತ, ಆರೋಗ್ಯ ಇಲಾಖೆಯಿಂದ ಮಕ್ಕಳ ಚಿಕಿತ್ಸೆಗೆ ಮುಂಜಾಗ್ರತಾ ಕ್ರಮವಾಗಿ ಬೆಡ್‍ಗಳ ಸಂಖ್ಯೆ ಹೆಚ್ಚಿಸುವಂತೆ ಜಿಲ್ಲಾಧಿಕಾರಿಗಳ ಸೂಚನೆ ನೀಡಿದೆ. ಪ್ರತಿ ಎರಡು ದಿನಕ್ಕೊಮ್ಮೆ ಜಿಲ್ಲಾಸ್ಪತ್ರೆ ಸೇರಿದಂತೆ ಹಲವು ಆಸ್ಪತ್ರೆಗೆ ಭೇಟಿ ನೀಡುತ್ತಿರುವ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಪರಿಶೀಲನೆ ನಡೆಸುತ್ತಿದ್ದಾರೆ.

  • ಮಕ್ಕಳನ್ನು ವೈದ್ಯರಲ್ಲಿ ತೋರಿಸಲು ಪೋಷಕರ ನೂಕುನುಗ್ಗಲು

    ಮಕ್ಕಳನ್ನು ವೈದ್ಯರಲ್ಲಿ ತೋರಿಸಲು ಪೋಷಕರ ನೂಕುನುಗ್ಗಲು

    – ರಾಯಚೂರಿನಲ್ಲಿ ವಿಪರೀತ ಡೆಂಗ್ಯೂ, ವೈರಲ್ ಫೀವರ್

    ರಾಯಚೂರು: ಜಿಲ್ಲೆಯಲ್ಲಿ ಡೆಂಗ್ಯೂ, ವೈರಲ್ ಫೀವರ್ ಹೆಚ್ಚಾದ ಹಿನ್ನೆಲೆ ಮಾನ್ವಿ ತಾಲೂಕು ಆಸ್ಪತ್ರೆಯಲ್ಲಿ ಮಕ್ಕಳನ್ನ ವೈದ್ಯರಲ್ಲಿ ತೋರಿಸಲು ಪೋಷಕರು ಮುಗಿಬೀಳುವ ಪರಸ್ಥಿತಿ ಉಂಟಾಗಿದೆ.

    ವೈರಲ್ ಫೀವರ್ ಹೆಚ್ಚು ಮಕ್ಕಳಲ್ಲಿ ಬಂದಿರುವುದರಿಂದ ಪೋಷಕರು, ನೂಕುನುಗ್ಗಲು ಮಾಡಿಕೊಂಡು ಮಕ್ಕಳಿಗೆ ಚಿಕಿತ್ಸೆ ಕೊಡಿಸುತ್ತಿದ್ದಾರೆ. ಖಾಸಗಿ ಆಸ್ಪತ್ರೆಗಳಲ್ಲೂ ಕೂಡ ಇದೇ ಪರಿಸ್ಥಿತಿ ಎದುರಾಗಿದೆ. ಇದನ್ನೂ ಓದಿ: ವಿಧಾನಸಭೆಯಲ್ಲಿ ಬಿಜೆಪಿ ಶಾಸಕರಿಂದ್ಲೇ ಮೀಸಲಾತಿ ಆಕ್ರೋಶ – ಇಕ್ಕಟ್ಟಿನಲ್ಲಿ ಬೊಮ್ಮಾಯಿ ಸರ್ಕಾರ

    ಪ್ರಯೋಗಾಲಯಗಳ ಮುಂದೆಯೂ ಮಕ್ಕಳ ರಕ್ತ, ಮೂತ್ರ ಪರೀಕ್ಷೆಗಾಗಿ ಪೋಷಕರು ಮುಗಿಬಿದ್ದಾರೆ. ಹೆಚ್ಚು ಪ್ರಮಾಣದಲ್ಲಿ ಚಿಕ್ಕ ಮಕ್ಕಳನ್ನು ಬಾಧಿಸುತ್ತಿರುವ ಡೆಂಗ್ಯೂ, ವೈರಲ್ ಫೀವರ್ ನಿಂದ ಪ್ರತೀ ನಿತ್ಯ ನೂರಾರು ಮಕ್ಕಳು ತಾಲೂಕು ಆಸ್ಪತ್ರೆಗೆ ಬರುತ್ತಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಸರಣಿ ಸ್ಫೋಟ – ಮೂವರು ಸಾವು, ನಾಲ್ವರ ಸ್ಥಿತಿ ಗಂಭೀರ

    ತಾಲೂಕು ಆಸ್ಪತ್ರೆಯಲ್ಲಿ ಈಗಾಗಲೇ ಬೆಡ್ ಕೊರತೆ ಎದುರಾಗಿದ್ದು, ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ವೈದ್ಯರು ಮಕ್ಕಳನ್ನು ಬೇರೆಡೆ ಕಳುಹಿಸುತ್ತಿದ್ದಾರೆ. ಮಾನ್ವಿ ಪಟ್ಟಣದಲ್ಲಿ ಈಗಾಗಲೇ ಡೆಂಗ್ಯೂವಿನಿಂದ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ಜಿಲ್ಲೆಯ ಮಕ್ಕಳಲ್ಲಿ ವೈರಲ್ ಫೀವರ್ ಹರಡುತ್ತಿದ್ದು, ಜಿಲ್ಲಾಡಳಿತ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗಳು ಮತ್ತಷ್ಟು ಹೆಚ್ಚಿನ ಕ್ರಮಗಳನ್ನು ತೆಗೆದುಕೊಳ್ಳಬೇಕಿದೆ. ಅಲ್ಲದೆ ಬೆಡ್‍ಗಳ ಸಮಸ್ಯೆಯನ್ನು ನಿವಾರಿಸಬೇಕಿದೆ.

  • ಜ್ವರದಿಂದ ಬಳಲುತ್ತಿದ್ದ 14ರ ಬಾಲಕಿ ಸಾವು- ದಾವಣಗೆರೆಯಲ್ಲಿ ಹೆಚ್ಚಾಗುತ್ತಿದೆ ಡೆಂಘೀ

    ಜ್ವರದಿಂದ ಬಳಲುತ್ತಿದ್ದ 14ರ ಬಾಲಕಿ ಸಾವು- ದಾವಣಗೆರೆಯಲ್ಲಿ ಹೆಚ್ಚಾಗುತ್ತಿದೆ ಡೆಂಘೀ

    ದಾವಣಗೆರೆ: ಜಿಲ್ಲೆಯಲ್ಲಿ ವೈರಲ್ ಫೀವರ್ ಹಾಗೂ ಡೆಂಘೀ ಪ್ರಕರಣಗಳು ಹೆಚ್ಚಾಗುತ್ತಿದ್ದು, ಜ್ವರದಿಂದ ಬಳಲುತ್ತಿದ್ದ ಬಾಲಕಿ ಸಾವನ್ನಪ್ಪಿದ್ದಾಳೆ.

    ಜ್ವರದಿಂದ ಬಳಲುತ್ತಿದ್ದ 14 ವರ್ಷದ ಬಾಲಕಿ ಸುಮಯ್ಯಾ ಕೌಸರ್ ಸಾವನ್ನಪ್ಪಿದ್ದಾಳೆ. ಇದು ಡೆಂಘೀ ಶಂಕಿತ ಪ್ರಕರಣವಾಗಿದ್ದು, ಡೆಂಘೀ ಎಂದು ಖಚಿತವಾಗಿಲ್ಲ ಎಂದು ಡಿಹೆಚ್‍ಒ ನಾಗರಾಜ್ ಪಬ್ಲಿಕ್ ಟಿವಿಗೆ ಮಾಹಿತಿ ನೀಡಿದ್ದಾರೆ.

    ಬಾಲಕಿ ಸಾವಿನ ಬಗ್ಗೆ ದಾವಣಗೆರೆ ಡಿಎಚ್‍ಒ ಡಾ.ನಾಗರಾಜ ಮಾತನಾಡಿ, ಕಳೆದ ಒಂದು ವಾರದಿಂದ ಜ್ವರದಿಂದ ಬಳಲುತ್ತಿದ್ದ ಬಾಲಕಿ, ದಾವಣಗೆರೆ ನಗರದ ಬಾಪೂಜಿ ಮಕ್ಕಳ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು. ಕಳೆದ ದಿನ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾಳೆ. ಸಾವನ್ನಪ್ಪಿದ ಬಾಲಕಿ ಸುಮಯ್ಯಾ ಕೌಸರ್ ಜಿಲ್ಲೆಯ ಚನ್ನಗಿರಿ ತಾಲೂಕಿನ ಕೆರೆಬಿಳಚಿ ಗ್ರಾಮದ ಮುಜಾಹಿದ್ ಅವರ ಪುತ್ರಿ ಎಂದು ತಿಳಿದುಬಂದಿದೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಪಾಸಿಟಿವಿಟಿ ರೇಟ್ ಶೇ.0.57ಕ್ಕೆ ಇಳಿಕೆ- 847 ಹೊಸ ಕೊರೊನಾ ಕೇಸ್, 20 ಸಾವು

    ಜಿಲ್ಲೆಯಲ್ಲಿ ಡೆಂಘೀ ಹಾಗೂ ವೈರಲ್ ಫೀವರ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಮಕ್ಕಳನ್ನು ಹೆಚ್ಚು ಬಾಧಿಸುತ್ತಿದೆ. ಹೀಗಾಗಿ ಪೋಷಕರಲ್ಲಿ ಆತಂಕ ಮನೆ ಮಾಡಿದೆ.

  • ಬದಲಾದ ವಾತಾವರಣದಿಂದ ಮಕ್ಕಳಲ್ಲಿ ಕಾಯಿಲೆ ಹೆಚ್ಚಾಗಿದೆ: ಡಿಎಚ್‍ಓ ಡಾ.ನಾಗರಾಜ್

    ಬದಲಾದ ವಾತಾವರಣದಿಂದ ಮಕ್ಕಳಲ್ಲಿ ಕಾಯಿಲೆ ಹೆಚ್ಚಾಗಿದೆ: ಡಿಎಚ್‍ಓ ಡಾ.ನಾಗರಾಜ್

    ರಾಯಚೂರು: ಜಿಲ್ಲೆಯಲ್ಲಿ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗಿದ್ದು, ಬದಲಾದ ವಾತಾವರಣದಿಂದ ಮಕ್ಕಳಲ್ಲಿ ಕಾಯಿಲೆಗಳು ಹೆಚ್ಚಾಗಿವೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ನಾಗರಾಜ್ ಹೇಳಿದ್ದಾರೆ.

    ಜಿಲ್ಲೆಯಲ್ಲಿ ಈವರೆಗೂ 994 ಡೆಂಗ್ಯೂ ಶಂಕಿತ ಪ್ರಕರಣಗಳಲ್ಲಿ 40 ಪ್ರಕರಣ ದೃಢಪಟ್ಟಿವೆ. ವಾತಾವರಣ ಬದಲಾವಣೆಯಿಂದ ಮಕ್ಕಳಲ್ಲಿ ಸೋಂಕಿನ ಪ್ರಮಾಣ ಜಾಸ್ತಿಯಾಗುತ್ತಿದೆ ಅಂತ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ನಾನು ಯಾರ ಬೂಟೂ ನೆಕ್ಕಿಲ್ಲ – ಬೊಮ್ಮಾಯಿಗೆ ಸುಬ್ರಮಣಿಯನ್ ಸ್ವಾಮಿ ತಿರುಗೇಟು

    ಕೊರೊನಾ 3ನೇ ಅಲೆ ಆತಂಕದ ನಡುವೆಯೇ ಜಿಲ್ಲೆಯಲ್ಲಿ ಚಿಕ್ಕಮಕ್ಕಳನ್ನ ಡೆಂಗ್ಯೂ, ನ್ಯೂಮೋನಿಯಾ ಕಾಡುತ್ತಿವೆ. ಈಗ ರಾಜ್ಯದಲ್ಲಿ ವಾತಾವರಣ ಬದಲಾಗಿರುವುದರಿಂದ ಜ್ವರ, ಕೆಮ್ಮು, ನೆಗಡಿ ಹಾಗೂ ಉಸಿರಾಟ ತೊಂದರೆ ಕಾಯಿಲೆಗಳಿಂದ ಮಕ್ಕಳು ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಮಕ್ಕಳಿಗೆ ಕೋವಿಡ್ ತಪಾಸಣೆ ಮಾಡಿದಾಗ ಇದುವರೆಗೆ ಯಾವುದೇ ಪಾಸಿಟಿವ್ ಪ್ರಕರಣ ದಾಖಲಾಗಿಲ್ಲ. ಹೀಗಾಗಿ ಪೋಷಕರು ಆತಂಕಕ್ಕೆ ಒಳಗಾಗಬೇಕಿಲ್ಲ ಎಂದರು. ಇದನ್ನೂ ಓದಿ: ಅಯ್ಯೋ ಮಗನೇ, ಆ ದೇವರು ನಿನ್ನ ಬದಲು ನನ್ನನ್ನು ಕರೆದುಕೊಳ್ಳಬೇಕಿತ್ತು

    ವೈರಲ್ ಫೀವರ್ ಹೆಚ್ಚಾಗಿರುವುದರಿಂದ ಕೋವಿಡ್‍ಗೆ ಸಂಬಂಧಿತ ತಪಾಸಣೆ ಹಾಗೂ ಚಿಕಿತ್ಸೆ ನೀಡಲಾಗುತ್ತಿದೆ. ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲೂ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ ಅಂತ ಜಿಲ್ಲಾ ಆರೋಗ್ಯಾಧಿಕಾರಿ ಡಾ.ನಾಗರಾಜ್ ಹೇಳಿದ್ದಾರೆ.