Tag: viral video

  • ಮಂಗಳೂರು | ಗೆಳತಿಯ ಬಟ್ಟೆ ಬದಲಿಸುವ ವಿಡಿಯೋ ಚಿತ್ರೀಕರಿಸಿ ಹಂಚಿಕೊಂಡಿದ್ದ ಯುವತಿ ಅರೆಸ್ಟ್‌

    ಮಂಗಳೂರು | ಗೆಳತಿಯ ಬಟ್ಟೆ ಬದಲಿಸುವ ವಿಡಿಯೋ ಚಿತ್ರೀಕರಿಸಿ ಹಂಚಿಕೊಂಡಿದ್ದ ಯುವತಿ ಅರೆಸ್ಟ್‌

    – ಯುವಕನ ಡೆತ್‌ನೋಟ್‌ನಲ್ಲಿ ಬಯಲಾಯ್ತು ರಹಸ್ಯ
    – ವಾಟ್ಸಪ್‌ ಗ್ರೂಪ್‌ನಲ್ಲಿ ವಿಡಿಯೋ ಹರಿಬಿಟ್ಟ ಬಳಿಕ ದೂರು

    ಮಂಗಳೂರು: ಒಂದೇ ಮನೆಯಲ್ಲಿ ವಾಸವಿದ್ದ ಸಂದರ್ಭದಲ್ಲಿ, ಯುವತಿಯರಿಬ್ಬರ ಖಾಸಗಿ ವಿಡಿಯೊವನ್ನ ಇನ್ನೊಬ್ಬಾಕೆ ಚಿತ್ರೀಕರಿಸಿ, ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ ಆರೋಪದ ಮೇಲೆ ಯುವತಿಯೊಬ್ಬಳನ್ನ ಕದ್ರಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

    ಚಿಕ್ಕಮಗಳೂರು ಜಿಲ್ಲೆಯ ಕಲಶದ ನಿರೀಕ್ಷಾ ಬಂಧಿತ ಯುವತಿ. ಮಂಗಳೂರಿನ ಕುದ್ಕೋರಿಗುಡ್ಡೆಯ ಬಾಡಿಗೆ ಮನೆಯೊಂದರಲ್ಲಿ ಗೆಳತಿ ಜೊತೆ ವಾಸವಿದ್ದ ನಿರೀಕ್ಷಾ ಉದ್ಯೋಗ ಮಾಡಿಕೊಂಡಿದ್ದಳು. ಈ ವೇಳೆ ಗೆಳತಿಯ ಖಾಸಗಿ ದೃಶ್ಯವನ್ನ ವಿಡಿಯೊ ಮಾಡಿಟ್ಟುಕೊಂಡಿದ್ದಳು. ಆ ವಿಡಿಯೊ ಈಚೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿತ್ತು.

    ಯುವತಿಯರು ಬಟ್ಟೆ ಬದಲಿಸುವ ವಿಡಿಯೋ ಮಾಡಿಟ್ಟುಕೊಂಡಿದ್ದ ಆರೋಪಿ ನಿರೀಕ್ಷಾ ಉಡುಪಿ ಜಿಲ್ಲೆಯ ಕಾರ್ಕಳ ನಿವಾಸಿ ಅಭಿಷೇಕ್ ಎಂಬಾತನಿಗೆ ಕಳುಹಿಸಿದ್ದಳಂತೆ. ಅಭಿಷೇಕ್ ಮಂಗಳೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಶಿಯನ್ ಆಗಿದ್ದ. ಆದ್ರೆ ಕಳೆದ ಅಕ್ಟೋಬರ್‌ 9ರಂದು ಕಾರ್ಕಳದಲ್ಲಿ ಅಭಿಷೇಕ್‌ ಸುಧೀರ್ಘ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದ. ಡೆತ್‌ನೋಟ್‌ನಲ್ಲಿ ನಿರೀಕ್ಷಾ ಹಾಗೂ ಇತರರ ವಿರುದ್ಧ ಮೃತ ಅಭಿಷೇಕ್‌ ಹನಿಟ್ರ್ಯಾಪ್‌ ಆರೋಪ ಮಾಡಿದ್ದ.

    ನಿರೀಕ್ಷಾ ತನ್ನ ರೂಮಿನಲ್ಲಿದ್ದ ಇಬ್ಬರು ಯುವತಿಯರ ವಿಡಿಯೋ ಮಾಡಿ ವೈರಲ್ ಮಾಡಿದ್ದ ಬಗ್ಗೆಯೂ ಡೆತ್ ನೋಟ್ ನಲ್ಲಿ ಉಲ್ಲೇಖಿಸಿದ್ದ. ಸಾಯುವ ಮುನ್ನ truth group ಹೆಸರಿನ ವಾಟ್ಸಪ್‌ ಗ್ರೂಪ್‌ ಮಾಡಿ ಅದರಲ್ಲಿ ಕೆಲ ವಿಡಿಯೋಗಳನ್ನೂ ಹರಿಬಿಟ್ಟಿದ್ದ. ಅದರಲ್ಲಿ ಈ ಇಬ್ಬರ ಯುವತಿಯರ ವಿಡಿಯೋ ಕೂಡ ಇದ್ದ ಹಿನ್ನೆಲೆ ಕದ್ರಿ ಠಾಣೆಗೆ ಸಂತ್ರಸ್ತೆಯರು ದೂರು ನೀಡಿದ್ದರು.

    ಒಂದು ವರ್ಷದ ಹಿಂದೆಯೇ ವಿಡಿಯೋ ಮಾಡಿರುವ ಸಾಧ್ಯತೆಗಳಿದೆ ಎನ್ನಲಾಗಿದೆ. ಸದ್ಯ ನಿರೀಕ್ಷಾಳನ್ನು ಬಂಧಿಸಿರುವ ಕದ್ರಿ ಪೊಲೀಸರು ಬಿಎನ್ ಎಸ್ 77, 78(2), 294(2)(ಚಿ) ಅಡಿ ದಾಖಲಾಗಿದ್ದ ಪ್ರಕರಣ ದಾಖಲಿಸಿದ್ದಾರೆ. ಅತ್ತ ಉಡುಪಿಯ ಕಾರ್ಕಳ ಪೊಲೀಸರು ಈಗಾಗಲೇ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿದ್ದಾರೆ.

  • 7 ವರ್ಷದ ಬಾಲಕನ ಮೇಲೆ ಶಿಕ್ಷಕಿಯಿಂದ ಇದೆಂಥಾ ಕ್ರೌರ್ಯ – ಹೋಂ ವರ್ಕ್‌ ಮಾಡದಿದ್ದಕ್ಕೆ ತಲೆ ಕೆಳಗಾಗಿ ನೇತುಹಾಕಿ ಹಿಂಸೆ

    7 ವರ್ಷದ ಬಾಲಕನ ಮೇಲೆ ಶಿಕ್ಷಕಿಯಿಂದ ಇದೆಂಥಾ ಕ್ರೌರ್ಯ – ಹೋಂ ವರ್ಕ್‌ ಮಾಡದಿದ್ದಕ್ಕೆ ತಲೆ ಕೆಳಗಾಗಿ ನೇತುಹಾಕಿ ಹಿಂಸೆ

    ಚಂಡೀಗಢ: ಯಾವುದೇ ಒಬ್ಬ ವಿದ್ಯಾರ್ಥಿ ತನ್ನ ಗುರಿ ತಲುಪಬೇಕಾದ್ರೆ ಹಿಂದೆ ಶಿಕ್ಷಕರೊಬ್ಬರು ಇರಲೇಬೇಕು. ವಿದ್ಯಾರ್ಥಿಗಳ ತಪ್ಪುಗಳನ್ನು ತಿದ್ದುತ್ತಾ, ಜೀವನಕ್ಕೆ ದಾರಿ ದೀಪವಾಗಬೇಕಿರುವುದು ಶಿಕ್ಷಕರು (Teachers). ಆದ್ರೆ ಇಲ್ಲೊಬ್ಬಳು ಶಿಕ್ಷಕಿ ಅದಕ್ಕೆ ವ್ಯತಿರಿಕ್ತವಾಗಿದ್ದಾಳೆ. ವಿದ್ಯಾರ್ಥಿ ಹೋಂ ವರ್ಕ್‌ ಮಾಡಿಲ್ಲ ಅನ್ನೋ ಕಾರಣಕ್ಕೆ ಆತನ ಕೈಕಾಲು ಕಟ್ಟಿ, ತಲೆಕೆಳಗಾಗಿ ನೇತು ಹಾಕಿ ಹಿಂಸೆ ನೀಡಿ ಕ್ರೌರ್ಯ ಮೆರೆದಿದ್ದಾಳೆ.

    ಹೌದು. ಹರಿಯಾಣದ (Haryana) ಪಾಣಿಪತ್‌ನ ಶ್ರೀಜನ್ ಪಬ್ಲಿಕ್ ಶಾಲೆಯಲ್ಲಿ (Srijan Public School) ಈ ಘಟನೆ ನಡೆದಿದೆ. ವಿದ್ಯಾರ್ಥಿ ಹೋಂ ವರ್ಕ್‌ ಮಾಡಿಲ್ಲ ಅಂತ ಶಿಕ್ಷಕಿಯೊಬ್ಬಳು ಆತನ ಕೈಕಾಲು ಕಟ್ಟಿ, ತಲೆಕೆಳಗಾಗಿಸಿ ನೇತುಹಾಕಿದ್ದಾಳೆ, ವಿದ್ಯಾರ್ಥಿಯನ್ನ ಚೆನ್ನಾಗಿ ಥಳಿಸಿದ್ದಾಳೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಹಿಟ್ ಅಂಡ್‌ ರನ್‌ಗೆ ಬಿ.ಕಾಂ ಪದವೀಧರೆ ಬಲಿ

    ಆಗಸ್ಟ್‌ 13ರಂದು ನಡೆದಿದ್ದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಶಾಲಾ ಆಡಳಿಯ ಮಂಡಳಿಗೆ ಈ ವಿಷಯ ತಿಳಿದಿದ್ದೂ ಮುಚ್ಚಿಟ್ಟಿದ್ದರು. ಆದ್ರೆ ಹಲ್ಲೆ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆದಮೇಲೆ ವಿಷಯ ಗೊತ್ತಾಗಿದೆ.

    ವಿಡಿಯೋ ಆಧರಿಸಿ ಮಾಡೆಲ್‌ ಪೊಲೀಸ್‌ ಠಾಣೆಗೆ ಪೋಷಕರು ದೂರು ನೀಡಿದ್ದಾರೆ. ದೂರು ನೀಡುತ್ತಿದ್ದಂತೆ ಶಿಕ್ಷಕಿ ಕಡೆಯವರು ಎನ್ನಲಾದ ಕೆಲವರು ಪೋಷಕರಿಗೆ ದೂರು ಹಿಂಪಡೆಯುವಂತೆ ಬೆದರಿಕೆ ಹಾಕಿದ್ದಾರೆಂದು ತಿಳಿದುಬಂದಿದೆ. ಇದನ್ನೂ ಓದಿ: TVK Vijay Rally Stampede | ಮದ್ರಾಸ್‌ ಹೈಕೋರ್ಟ್‌ನಲ್ಲಿಂದು ವಿಚಾರಣೆ – ಸಾವಿನ ಸಂಖ್ಯೆ 41ಕ್ಕೆ ಏರಿಕೆ

    ಮತ್ತೊಂದು ವಿಡಿಯೋ ವೈರಲ್‌
    ಇನ್ನೂ ಅದೇ ಶಾಲೆಯಲ್ಲಿ ಇತರ ಮಕ್ಕಳನ್ನು ಥಳಿಸುತ್ತಿರುವ ಇನ್ನೊಂದು ವಿಡಿಯೋ ಸಹ ವೈರಲ್ ಆಗಿದೆ. ಆ ವಿಡಿಯೋದಲ್ಲಿ ಒಬ್ಬ ಶಿಕ್ಷಕಿ ಮಗುವನ್ನ ಹೊಡೆಯುತ್ತಿರುವುದು ಸ್ಪಷ್ಟವಾಗಿ ಕಾಣುತ್ತಿದೆ. ಸತತ ಒಂಬತ್ತು ಬಾರಿ ಮಗುವಿಗೆ ಕಪಾಳಮೋಕ್ಷ ಮಾಡುತ್ತಿದ್ದಾಳೆ. ವಿಡಿಯೋಗಳನ್ನ ವಶಕ್ಕೆ ಪಡೆದು ಪೊಲೀಸರು ತನಿಖೆ ಆರಂಭಿಸಿದ್ದಾರೆ. ಅಲ್ಲದೇ ಚಾಲಕನ ಕೈಯಿಂದಲೂ ಥಳಿಸಿದ್ದಳು ಎನ್ನಲಾಗಿ ಕಾಲೇಜು ಪ್ರಾಂಶುಪಾಲರು ಹಾಗೂ ಬಸ್‌ ಚಾಲಕನನ್ನ ಬಂಧಿಸಲಾಗಿದೆ.

  • ಕುಟುಂಬಸ್ಥರ ಚಿಕಿತ್ಸೆಗಾಗಿ ಭಿಕ್ಷೆ ಬೇಡಿದ ಜನ – ಮೈಸೂರಲ್ಲೊಂದು ಮನಕಲಕುವ ಘಟನೆ

    ಕುಟುಂಬಸ್ಥರ ಚಿಕಿತ್ಸೆಗಾಗಿ ಭಿಕ್ಷೆ ಬೇಡಿದ ಜನ – ಮೈಸೂರಲ್ಲೊಂದು ಮನಕಲಕುವ ಘಟನೆ

    – ನೊಂದ ಕುಟುಂಬದ ಕಣ್ಣೀರಿಗೆ ಕರಗಿದ ಆಸ್ಪತ್ರೆ ಆಡಳಿತ ಮಂಡಳಿ

    ಮೈಸೂರು: ನಂಜನಗೂಡು (Nanjangud) ತಾಲ್ಲೂಕಿನ ಹೆಡತಲೆ ಗ್ರಾಮದಲ್ಲೊಂದು ಮನಕಲಕುವ ಘಟನೆ ನಡೆದಿದೆ. ಆಸ್ಪತ್ರೆ ಹಣಕ್ಕಾಗಿ ಗ್ರಾಮದ ಯುವಕರು, ಸಂಬಂಧಿಗಳ ಜೊತೆ ಸೇರಿ ಕುಟುಂಬವೊಂದು ಭಿಕ್ಷೆ ಬೇಡಿದೆ.

    ಹೌದು. ಇದೇ ತಿಂಗಳ 2ನೇ ತಾರೀಖು ಬದನವಾಳು ಬಳಿ 2 ಬೈಕ್ ನಡುವೆ ಅಪಘಾತ ಆಗಿದ್ದು, 6 ಜನ ಗಾಯಗೊಂಡಿದ್ದರು. ಅದರಲ್ಲಿ ಒಂದೇ ಕುಟುಂಬದ ತಂದೆ ಮಹೇಶ್ (38) ತಾಯಿ ರಾಣಿ (32) ಹಾಗೂ ಮಗಳು ಆದ್ಯ (5) ಗಾಯಗೊಂಡಿದ್ರು. ಇದನ್ನೂ ಓದಿ: ಚಾಮುಂಡಿ ಚಲೋ ಪಾದಯಾತ್ರೆಗೆ ಪೊಲೀಸರ ತಡೆ – ಬಿಜೆಪಿ, ಹಿಂದೂ ಕಾರ್ಯಕರ್ತರು ವಶಕ್ಕೆ

    ತಾಯಿ, ಮಗು ಒಂದೆಡೆ, ತಂದೆ ಮತ್ತೊಂದು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಸದ್ಯ ಮಗು ಆದ್ಯಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗ್ತಿದೆ. 3 ದಿನದ ಚಿಕಿತ್ಸೆಗೆ 1,80,000 ಹಣ ಕಟ್ಟಬೇಕು ಎಂದು ಆಸ್ಪತ್ರೆ ಸಿಬ್ಬಂದಿ ಹೇಳಿದ್ದಾರೆ. ಮಗು ನೋಡಬೇಕು, ವೆಂಟಿಲೇಟರ್‌ನಿಂದ ಹೊರ ತೆಗೆಯಬೇಕು ಅಂದ್ರೆ ಹಣ ಕಟ್ಟಿ ಅಂತಿದ್ದಾರೆ ಅಂತ ಸಂಬಂಧಿಕರು ಆರೋಪಿಸಿದ್ದಾರೆ. ಕೂಲಿ ಮಾಡುವ ಕುಟುಂಬಕ್ಕೆ ಅಷ್ಟು ಹಣ ನೀಡಲು ಆಗದ ಕಾರಣ ಬಡ ಕುಟುಂಬದ ನೆರವಿಗೆ ಗ್ರಾಮದ ಯುವಕರು, ಸಂಬಂಧಿಗಳು ಭಿಕ್ಷೆ ಬೇಡಿದ್ದಾರೆ. ಇದನ್ನೂ ಓದಿ: ಸಚಿವ ಹೆಚ್‌.ಸಿ ಮಹದೇವಪ್ಪ ಹೆಸರಿನಲ್ಲಿ ಬರೋಬ್ಬರಿ 27 ಲಕ್ಷ ರೂ. ವಂಚಿಸಿದ ಮಹಿಳೆ

    ದೊಡ್ಡಮ್ಮ ಮಂಗಳ ಅನ್ನೋವ್ರು ಭಿಕ್ಷೆ ಬೇಡೋ ವಿಡಿಯೋ ವೈರಲ್ ಆಗಿದೆ. ಆದರೆ, ಖಾಸಗಿ ಆಸ್ಪತ್ರೆ (ಬೃಂದಾವನ) ಆಡಳಿತ ಮಂಡಳಿಯ ಖಂಡೇಶ್ ಸ್ಪಷ್ಟನೆ ನೀಡಿದ್ದು, ಆಸ್ಪತ್ರೆ ಬಂದಾಗ ಇಲ್ಲಿನ ಚಿಕಿತ್ಸಾ ವೆಚ್ಚದ ಬಗ್ಗೆ ತಿಳಿಸಲಾಗಿತ್ತು. ಅವರು ಅದಕ್ಕೆ ಒಪ್ಪಿದ್ದರು. ಆ ಕುಟುಂಬದ ಆರ್ಥಿಕ ಪರಿಸ್ಥಿತಿ ನಮಗೆ ಗೊತ್ತಿರಲಿಲ್ಲ. ಭಿಕ್ಷೆ ಬೇಡಿ ಹಣ ತಂದಿದ್ದಾರೆ ಎಂಬುದು ನಮಗೆ ವಿಡಿಯೋ ಮೂಲಕ ತಿಳಿಯಿತು. ಹೀಗಾಗಿ ಈ ವಿಡಿಯೋ ನೋಡಿ ನಾವು ರಿಯಾಯಿತಿ ಕೊಡಲು ತೀರ್ಮಾನ ಮಾಡಿದ್ದೇವೆ. ಮಗು ಐಸಿಯುನಲ್ಲಿದ್ದರೂ ಡಿಸ್ಚಾರ್ಜ್ ಮಾಡಿ ಎನ್ನುತ್ತಿದ್ದಾರೆ ಅಂದಿದ್ದಾರೆ. ಇದನ್ನೂ ಓದಿ: ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್‌ಗೆ ಆಹ್ವಾನ – ಹೈಕೋರ್ಟ್ ಮೆಟ್ಟಿಲೇರಿದ ಪ್ರತಾಪ್ ಸಿಂಹ

  • Viral Video | ಕೆಂಪು ಕೋಟೆಯಲ್ಲಿ 1.5 ಕೋಟಿ ಮೌಲ್ಯದ ವಜ್ರ, ರತ್ನ ಖಚಿತ ಕಲಶ ಕಳವು

    Viral Video | ಕೆಂಪು ಕೋಟೆಯಲ್ಲಿ 1.5 ಕೋಟಿ ಮೌಲ್ಯದ ವಜ್ರ, ರತ್ನ ಖಚಿತ ಕಲಶ ಕಳವು

    – ಜೈನ ಅರ್ಚಕನ ವೇಷದಲ್ಲಿ ಬಂದ ಕಳ್ಳನಿಂದ ಕೃತ್ಯ

    ನವದೆಹಲಿ: ಐತಿಹಾಸಿಕ ಕೆಂಪು ಕೋಟೆ ಆವರಣದಲ್ಲಿ ನಡೆದ ಜೈನರ ಧಾರ್ಮಿಕ ಕಾರ್ಯಕ್ರಮದಲ್ಲಿ (Jain Event) 1.5 ಕೋಟಿ ಮೌಲ್ಯದ ಎರಡು ಚಿನ್ನದ ಕಲಶ (Golden Kalash) ಹಾಗೂ ಇತರ ಬೆಲೆ ಬಾಳುವ ವಸ್ತುಗಳನ್ನು ಕಳ್ಳತನ ಮಾಡಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

    ಅರ್ಚಕನ (Jain Priest) ವೇಷದಲ್ಲಿ ಬಂದ ಕಳ್ಳ ಬೆಲೆಬಾಳುವ ವಸ್ತುಗಳನ್ನ ದೋಚಿದ್ದಾನೆ. ಈ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸೋಷಿಯಲ್‌ ಮೀಡಿಯಾದಲ್ಲೂ ಈಗ ವೈರಲ್‌ ಆಗಿದೆ. ಕಳ್ಳ ಅರ್ಚಕನನ್ನ ಗುರುತಿಸಿದ್ದು. ಶೀಘ್ರದಲ್ಲೇ ಆತನನ್ನ ಬಂಧಿಸುವುದಾಗಿ ಪೊಲೀಸರು (Delhi Police) ತಿಳಿಸಿದ್ದಾರೆ. ಇದನ್ನೂ ಓದಿ: ಹನಿಮೂನ್ ಮರ್ಡರ್‌ ಕೇಸ್ | 790 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ – ಕೊಲೆಯಾದ ರಘುವಂಶಿ ಪತ್ನಿಯೇ ಪ್ರಮುಖ ಆರೋಪಿ

    ಏನೇನು ಕಳ್ಳತನ?
    ಕಳ್ಳ ಅರ್ಚಕ ಕದ್ದ ವಸ್ತುಗಳಲ್ಲಿ ಚಿನ್ನದ ಜರಿ (ಕಲಶ), ಸುಮಾರು 760 ಗ್ರಾಂ ತೂಕದ ಚಿನ್ನದ ತೆಂಗಿನಕಾಯಿ (ಕಲಸದ ಮೇಲಿಡುವ ತೆಂಗು ಮಾದರಿ ವಸ್ತು), ವಜ್ರಗಳು, ರತ್ನ ಹಾಗೂ ಮಾಣಿಕ್ಯಗಳಿಂದ ಕೂಡಿದ ಸಣ್ಣ ಗಾತ್ರದ 115 ಗ್ರಾಂ ಚಿನ್ನದ ಕಲಶ ಸೇರಿವೆ.

    ಈ ವಸ್ತುಗಳೆಲ್ಲವು ಉದ್ಯಮಿ ಸುಧೀರ್ ಜೈನ್ ಅವರಿಗೆ ಸೇರಿದ್ದಾಗಿದೆ. ಪ್ರತಿದಿನ ಅವರು ಆಚರಣೆಗಳಿಗಾಗಿ ಬೆಲೆಬಾಳುವ ವಸ್ತುಗಳನ್ನು ತರುತ್ತಿದ್ದರು ಎನ್ನಲಾಗಿದೆ. ಈ ವಸ್ತುಗಳನ್ನು ಪೂಜಾ ಕೈಂಕರ್ಯ, ಆಚರಣೆಗಳಲ್ಲಿ ಬಳಸುವುದು ಪವಿತ್ರ ಹಾಗೂ ಶ್ರೇಷ್ಠ ಅನ್ನೋದು ಜೈನರ ನಂಬಿಕೆ.  ಇದನ್ನೂ ಓದಿ: ಯುವತಿಯನ್ನು ಪ್ರೀತಿಸಿ, ಮದುವೆಯಾಗಿ ಕಿರುಕುಳ ಆರೋಪ – ಮಾಜಿ ಕಾರ್ಪೊರೇಟರ್ ದಂಪತಿ, ಪುತ್ರನ ವಿರುದ್ಧ FIR

    ಕಳ್ಳತನ ಆಗಿದ್ದು ಯಾವಾಗ?
    ಕೆಂಪುಕೋಟೆ ಆವರಣದಲ್ಲಿರುವ ಪಾರ್ಕ್‌ನಲ್ಲಿ ʻದಶಲಕ್ಷಣ ಮಹಾಪರ್ವʼ ಹೆಸರಿನಲ್ಲಿ ಆ.15 ರಿಂದ ಸೆ.9ರ ವರೆಗೆ ಧಾರ್ಮಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಜೈನ ಕಾರ್ಯಕ್ರಮದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿಶೇಷ ಅತಿಥಿಯಾಗಿದ್ದರು. ಇದೇ ಸಂದರ್ಭದಲ್ಲಿ ಕಳ್ಳತನ ನಡೆದಿದೆ. ಜೈನ ಅರ್ಚಕನ ವೇಷದಲ್ಲಿ ಬಂದ ವ್ಯಕ್ತಿ ಬೆಲೆ ಬಾಳುವ ವಸ್ತುಗಳನ್ನು ಒಂದು ಚೀಲದಲ್ಲಿ ತುಂಬಿಕೊಂಡು ಹೋಗಿದ್ದಾನೆ. ಆಯೋಜಕರು ಗಣ್ಯರನ್ನು ಸ್ವಾಗತಿಸುವ ಭರದಲ್ಲಿದ್ದಾಗ ವ್ಯಕ್ತಿ ವಸ್ತುಗಳನ್ನ ದೋಚಿದ್ದಾನೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

    ಜೈನ ಸಮುದಾಯದ ಮುಖಂಡರು ಈ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಕಲಶವು ಕೇವಲ ಆರ್ಥಿಕ ಮೌಲ್ಯ ಮಾತ್ರವಲ್ಲದೆ, ಧಾರ್ಮಿಕ ಮತ್ತು ಸಾಂಸ್ಕೃತಿಕ ಮಹತ್ವವನ್ನು ಹೊಂದಿತ್ತು. ಇಂತಹ ಘಟನೆಯು ಜೈನ ಸಮುದಾಯಕ್ಕೆ ಆಘಾತಕಾರಿಯಾಗಿದೆ. ಕೆಂಪು ಕೋಟೆಯಂತಹ ಸ್ಥಳದಲ್ಲಿ ಇದು ಸಂಭವಿಸಿರುವುದು ಆತಂಕಕಾರಿಯಾಗಿದೆ. ಪೊಲೀಸರು ಶೀಘ್ರವಾಗಿ ಕಾರ್ಯಪ್ರವೃತ್ತರಾಗಿ ಕಲಶ ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ:  ಮುಂಬೈನಲ್ಲಿ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ – ನೋಯ್ಡಾದಲ್ಲಿ ಆರೋಪಿ ಅರೆಸ್ಟ್

  • ನದಿಗಿಳಿದು ಡೇರ್‌ ರಿಪೋರ್ಟಿಂಗ್‌ – ಲೈವ್‌ ಮಾಡ್ತಿದ್ದಾಗಲೇ ಬಾಲಕಿ ಮೃತದೇಹದ ಮೇಲೆ ಕಾಲಿಟ್ಟ ಪತ್ರಕರ್ತ!

    ನದಿಗಿಳಿದು ಡೇರ್‌ ರಿಪೋರ್ಟಿಂಗ್‌ – ಲೈವ್‌ ಮಾಡ್ತಿದ್ದಾಗಲೇ ಬಾಲಕಿ ಮೃತದೇಹದ ಮೇಲೆ ಕಾಲಿಟ್ಟ ಪತ್ರಕರ್ತ!

    ಬ್ರೆಜಿಲಿಯಾ: ಪ್ರತಿಯೊಂದು ಕ್ಷೇತ್ರದ ಬೆಳವಣಿಗೆಗಳ ಕುರಿತು ಮಾಹಿತಿ, ವಸ್ತುನಿಷ್ಠ ವರದಿಗಳ ಮೂಲಕ ಜನತೆಯ ವಿಶ್ವಾಸ ಗಳಿಸಿಕೊಳ್ಳುವ ಉದ್ದೇಶದಿಂದ ಪತ್ರಕರ್ತರು (Journalists) ಇನ್ನಿಲ್ಲದ ಸಾಹಸಗಳಿಗೆ ಮುಂದಾಗುತ್ತಾರೆ. ಆ ಮೂಲಕ ಕಟು ಸತ್ಯವನ್ನು ಬಯಲಿಗೆಳೆದಿರುವ ಸಂಗತಿಗಳು ಅನೇಕ. ಅದೇ ರೀತಿಯ ಪ್ರಕರಣವೊಂದು ಈಗ ಬ್ರೆಜಿಲ್‌ನಲ್ಲಿ ಬೆಳಕಿಗೆ ಬಂದಿದೆ.

    ಹೌದು. 13 ವರ್ಷದ ಬಾಲಕಿ ನಾಪತ್ತೆಯಾಗಿದ್ದ (The girl Missing) ಸ್ಥಳದಲ್ಲಿ ವರದಿಗಾರಿಕೆ ಮಾಡುವಾಗ ಟಿವಿ ವರದಿಗಾರನೊಬ್ಬ ಆಕಸ್ಮಿಕವಾಗಿ ಆಕೆಯ ಮೃತದೇಹದ ಮೇಲೆ ಕಾಲಿಟ್ಟ ಘಟನೆ ಬ್ರೆಜಿಲ್‌ನಲ್ಲಿ ನಡೆದಿದೆ. ಮೃತ ಬಾಲಕಿಯನ್ನ ರೈಸಾ ಗುರುತಿಸಲಾಗಿದೆ. ಈಶಾನ್ಯ ಬ್ರೆಜಿಲ್‌ನ ಬಕಾಬಲ್‌ನಲ್ಲಿರುವ ಮೀರಿನ್‌ ನದಿಯಲ್ಲಿ (Mearin River) ದುರಂತ ಸಂಭವಿಸಿದ್ದು, ವಿಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಇದನ್ನೂ ಓದಿ: ದೆಹಲಿಯಲ್ಲಿ ಮಳೆ ಆರ್ಭಟ; ಪ್ರಮುಖ ರಸ್ತೆಗಳು ಜಲಾವೃತ – ಸಂಚಾರ ಅಸ್ತವ್ಯಸ್ತ

    38 ಸೆಕೆಂಡುಗಳ ವಿಡಿಯೋನಲ್ಲಿ ಏನಿದೆ?
    ಪತ್ರಕರ್ತ ಲೆನಿಲ್ಡೊ ಫ್ರಾಜಾವೊ (Lenildo Fraza) ಬಾಲಕಿ ಕಣ್ಮರೆಯಾಗಿದ್ದ ಸ್ಥಳದಲ್ಲಿ ನದಿಯ ನಿಖರ ಆಳ ತೋರಿಸಲು ನದಿಗೆ ಇಳಿದಿದ್ದರು. ಅಲ್ಲದೇ ಸಾವಿಗೂ ಮುನ್ನ ಆ ಕ್ಷಣದಲ್ಲಿ ಬಾಲಕಿ ಸ್ಥಿತಿ ಏನಿತ್ತು ಅನ್ನೋದನ್ನ ಲೈವ್‌ನಲ್ಲಿ ವಿವರಿಸುತ್ತಿದ್ದರು. ಈ ಸಮಯದಲ್ಲಿ ನದಿ ನೀರಿನ ಆಳ ಎದೆಮಟ್ಟದಷ್ಟಿತ್ತು. ಹೀಗಿರುವಾಗ ಘಟನೆ ವಿವರಿಸುತ್ತಲೇ ಒಂದು ಹೆಜ್ಜೆ ಮುಂದಿಟ್ಟಾಗ ಮುಗ್ಗರಿಸಿದಂತಾಗುತ್ತದೆ.

    ತಕ್ಷಣ ಇಲ್ಲಿನ ತಳದಲ್ಲಿ ಏನೋ ಇದೆ ಅನ್ನಿಸುತ್ತಿದೆ ಎಂದು ತನ್ನ ಸಹ ಸಿಬ್ಬಂದಿಗೆ ಹೇಳ್ತಾರೆ. ಸ್ವಲ್ಪ ಸಮಯದ ಬಳಿಕ ನಾನಿನ್ನೂ ಮುಂದೆ ಹೋಗಲ್ಲ, ನನಗೆ ಭಯ ಆಗ್ತಿದೆ, ಅದು ಮನುಷ್ಯನ ತೋಳಿನಂತೆ ಕಾಣ್ತಿತ್ತು. ಒಂದು ವೇಳೆ ಅದು ನಾಪತ್ತೆಯಾದ ಬಾಲಕಿಯದ್ದೇ ಆಗಿರಬಹುದಾ ಅಂತ ಸಂಶಯ ವ್ಯಕ್ತಪಡಿಸ್ತಾರೆ. ಮತ್ತೊಂದು ಕಡೆ ಅದು ಮೀನು ಕೂಡ ಆಗಿರಬಹುದಲ್ವಾ? ಏನೋ ಗೊತ್ತಿಲ್ಲ ಅಂತ ಹೇಳ್ತಾರೆ. ಇದನ್ನೂ ಓದಿ: ಬಿಕ್ಲು ಶಿವ ಕೊಲೆ ಕೇಸ್‌ – ಇಂದು ಮತ್ತೆ ವಿಚಾರಣೆ, FIR ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಬೈರತಿ ಬಸವರಾಜ್

    ಕೂಡಲೇ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡುತ್ತಾರೆ. ಬಳಿಕ ಪೊಲೀಸರು ರಕ್ಷಣಾ ತಂಡದ ಸಹಾಯದಿಂದ ಪತ್ರಕರ್ತ ವರದಿ ಮಾಡುತ್ತಿದ್ದ ನಿಖರ ಸ್ಥಳದಲ್ಲೇ ಮೃತದೇಹವನ್ನ ಹೊರತೆಗೆಯುತ್ತಾರೆ. ಇನ್ನೂ ಈ ಘಟನೆ ಹಲವು ಅನುಮಾನಗಳಿಗೆ ದಾರಿಮಾಡಿಕೊಟ್ಟಿದ್ದು, ವರದಿಗಾರನನ್ನೂ ತನಿಖೆಗೆ ಒಳಪಡಿಸುವಂತೆ ಕೆಲವರು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಅವಳ ಮೂಗಿನ ತುದಿ ಕೋಪ ನಂಗಿಷ್ಟ!

  • ಸೆಕೆಯಿಂದ ಕಂಗೆಟ್ಟನಾ ಕಾಡಿನ ರಾಜ? – ಮಧ್ಯರಾತ್ರಿ ಮನೆಯೊಳಗೆ ಬಂದು ಫ್ರಿಡ್ಜ್ ಮೇಲೆ ಕುಳಿತ ಸಿಂಹ!

    ಸೆಕೆಯಿಂದ ಕಂಗೆಟ್ಟನಾ ಕಾಡಿನ ರಾಜ? – ಮಧ್ಯರಾತ್ರಿ ಮನೆಯೊಳಗೆ ಬಂದು ಫ್ರಿಡ್ಜ್ ಮೇಲೆ ಕುಳಿತ ಸಿಂಹ!

    ಗಾಂಧಿನಗರ: ಮಧ್ಯರಾತ್ರಿ ಸಮಯದಲ್ಲಿ ಸಿಂಹವೊಂದು (Lion) ಅಡುಗೆ ಮನೆಯಲ್ಲಿದ್ದ ಫ್ರಿಡ್ಜ್‌ ಏರಿ ಕುಳಿತ ಘಟನೆ ಗುಜರಾತ್‌ನ (Gujarat) ಅಮ್ರೇಲಿಯ ಕೊವಾಯಾ ಗ್ರಾಮದಲ್ಲಿ ನಡೆದಿದೆ. ಕುಟುಂಬದ ಸದಸ್ಯರು ಮನೆಯೊಳಗೆ ಸಿಂಹ ಇರುವುದನ್ನು ನೋಡಿ ಹೌಹಾರಿದ್ದಾರೆ.

     

    View this post on Instagram

     

    A post shared by Gujarat Live (@gujaratlive_)

    ಮುಲುಭಾಯಿ ರಾಮ್‌ಭಾಯ್ ಲಖನ್ನೋತ್ರಾ ಎಂಬವರ ಮನೆಯಲ್ಲಿ ಈ ಘಟನೆ ನಡೆದಿದೆ. ಸಿಂಹ ಫ್ರಿಡ್ಜ್‌ ಮೇಲಿನಿಂದ ಇಣುಕಿ ನೋಡುತ್ತಿರುವ ವೀಡಿಯೋ ಮೊಬೈಲ್‌ನಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್‌ (Viral Video) ಆಗಿದೆ. ಸೋಮವಾರ ರಾತ್ರಿ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

    ಮನೆಯಲ್ಲಿ ಎಲ್ಲರೂ ಮಲಗಿದ್ದಾಗ, ಸಿಂಹವು ಛಾವಣಿಯ ಮೇಲಿಂದ ಒಳಗೆ ನುಸುಳಿ ಬಂದಿದೆ. ಶಬ್ದದಿಂದ ಎಚ್ಚರಗೊಂಡ ಕುಟುಂಬಸ್ಥರು ಸಿಂಹವನ್ನು ನೋಡಿ ಭಯದಿಂದ ಹೊರಗೆ ಓಡಿದ್ದಾರೆ. ಕೂಡಲೇ ಗ್ರಮದ ಜನರು ಒಟ್ಟಾಗಿ ಕೂಗುತ್ತಾ ಸ್ಥಳಕ್ಕೆ ಸಿಂಹವನ್ನು ಓಡಿಸಿದ್ದಾರೆ.

    ವೈರಲ್‌ ಆಗಿರುವ ವೀಡಿಯೊದಲ್ಲಿ ಸಿಂಹವು ಫ್ರಿಡ್ಜ್‌ ಮೇಲೆ ಕುಳಿತು ಇಣುಕುತ್ತಿರುವುದನ್ನು ನೋಡಬಹುದು. ಅಲ್ಲದೇ ಅದನ್ನು ಹೆದರಿಸಲು ಜನ ಮುಖದ ಮೇಲೆ ಟಾರ್ಚ್ ಬೆಳಕನ್ನು ಬಿಟ್ಟಿದ್ದಾರೆ. ಗ್ರಾಮದ ಸುತ್ತಮುತ್ತ ಸುಮಾರು ಐದು ಸಿಂಹಗಳು ಓಡಾಡುತ್ತಿರುವುದು ಕಂಡುಬಂದಿದೆ. ಸಿಂಹವು ಹತ್ತಿರದ ಕಾಡಿನಿಂದ ವಸತಿ ಪ್ರದೇಶಗಳಿಗೆ ಬಂದಿವೆ ಎಂದು ವರದಿಯಾಗಿದೆ

  • Video Viral | ಹಸಿವಿನಿಂದ ಕಾರ್ಮಿಕರ ಮನೆಗೆ ನುಗ್ಗಿ ಅಕ್ಕಿ ತಿಂದ ಆನೆ

    Video Viral | ಹಸಿವಿನಿಂದ ಕಾರ್ಮಿಕರ ಮನೆಗೆ ನುಗ್ಗಿ ಅಕ್ಕಿ ತಿಂದ ಆನೆ

    ಚೆನ್ನೈ: ಕಾಡಂಚಿನ ಗ್ರಾಮಗಳಿಗೆ ಆನೆಗಳು (Wild Elephant) ನುಗ್ಗಿ ದಾಂಧಲೆ ಮಾಡುವುದು ಹೊಸದೇನಲ್ಲ. ಹಾಗೆಯೇ ವಲಸೆ ಕಾರ್ಮಿಕರು ನೆಲೆಸಿದ್ದ ಬಾಡಿಗೆ ಮನೆಗೆ ನುಗ್ಗಿದ ಗಂಡು ಕಾಡಾನೆಯೊಂದು ಆಹಾರ ಪದಾರ್ಥಗಳನ್ನ ತಿಂದು ಹೋದ ಘಟನೆ ತಮಿಳುನಾಡು ಕೊಯಮತ್ತೂರು (Coimbatore) ಜಿಲ್ಲೆಯ ತೆರುಕ್ಕುಪಾಳ್ಯಂನಲ್ಲಿ ನಡೆದಿದೆ.

    ಆನೆಯು ಮನೆಯತ್ತ ನುಗ್ಗಿ ಬರುತ್ತಿರುವುದನ್ನು ಗಮನಿಸಿರುವ ಕಾರ್ಮಿಕರು ಗ್ಯಾಸ್‌ ಸ್ಟೌ ಆಫ್‌ ಮಾಡಿದ್ದಾರೆ, ಭಯಭೀತರಾಗಿ ಮನೆಯ ಮೂಲೆಯಲ್ಲಿ ಅವಿತು ಕುಳಿತಿದ್ದಾರೆ. ಇದನ್ನೂ ಓದಿ: 5 ಗೋವುಗಳನ್ನು ಎತ್ತಿಕೊಂಡು ಹೋಗುತ್ತಿದ್ದ ದೃಶ್ಯ ಸಿಕ್ಕಿದ್ರೂ ವಾಹನ ನಂಬರ್‌ ಇಲ್ವಂತೆ – ಕೈ ಚೆಲ್ಲಿದ ಪೊಲೀಸರು

    ಬಳಿಕ ಮನೆಯ ಬಾಗಿಲ ಬಳಿ ಬಂದ ಆನೆ ಸೊಂಡಿಲು ಚಾಚಿ ಅಕ್ಕಿ ಮೂಟೆಯನ್ನು ಎಳೆದುಕೊಂಡಿದೆ. ಗ್ಯಾಸ್‌ ಸಿಲಿಂಡರ್‌ ಸಮೇತ ಮಾಡಿದ್ದ ಅಡುಗೆಯನ್ನೆಲ್ಲ ಚೆಲ್ಲಾಪಿಲ್ಲಿ ಮಾಡಿದೆ. ಅಕ್ಕಿಯನ್ನೆಲ್ಲ ತಿಂದು ಮುಗಿಸಿದ ಬಳಿಕ ಸ್ಥಳ ಬಿಟ್ಟು ತೆರಳಿದೆ. ಇದನ್ನೂ ಓದಿ: ವಕ್ಫ್‌ ವಿರುದ್ಧ ಅನ್ನದಾತರ ಆಕ್ರೋಶ – ಇಂದು ಶ್ರೀರಂಗಪಟ್ಟಣ ಸ್ವಯಂ ಪ್ರೇರಿತ ಬಂದ್‌

    ಈ ದೃಶ್ಯವನ್ನು ಕಾರ್ಮಿಕರು ತಮ್ಮ ಮೊಬೈಲ್‌ನಲ್ಲಿ ಸೆರೆಹಿಡಿದ್ದು, ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ನೆಲಮಂಗಲದಲ್ಲಿ ಸರಣಿ ಅಪಘಾತ – ಕಾರು ಲಾರಿಯ ಕೆಳಗೆ ಸಿಲುಕಿದ್ರೂ ಪವಾಡ ರೀತಿಯಲ್ಲಿ ಚಾಲಕ ಪಾರು

  • 10 ರೂ.ಗಾಗಿ ನಿವೃತ್ತ IAS ಅಧಿಕಾರಿಗೆ ಬಸ್‌ ಕಂಡಕ್ಟರ್‌ನಿಂದ ಹಲ್ಲೆ

    10 ರೂ.ಗಾಗಿ ನಿವೃತ್ತ IAS ಅಧಿಕಾರಿಗೆ ಬಸ್‌ ಕಂಡಕ್ಟರ್‌ನಿಂದ ಹಲ್ಲೆ

    ಜೈಪುರ: 10 ರೂ.ಗಾಗಿ ನಿವೃತ್ತ ಐಎಎಸ್‌ ಅಧಿಕಾರಿಯೊಬ್ಬರ (Retired IAS Officer) ಮೇಲೆ ಬಸ್‌ ಕಂಡಕ್ಟರ್‌ ಹಲ್ಲೆ ನಡೆಸಿರುವ ಘಟನೆ ಜೈಪುರದಲ್ಲಿ ನಡೆದಿದೆ.

    ನಿವೃತ್ತ ಅಧಿಕಾರಿ ಆರ್.ಎಲ್. ಮೀನ ಹಲ್ಲೆಗೆ ಒಳಗಾದ ನಿವೃತ್ತ ಅಧಿಕಾರಿ. ಇವರು ಆಗ್ರಾ ರಸ್ತೆಯ ಕನೋಟಾ ಬಸ್ ನಿಲ್ದಾಣದಲ್ಲಿ ಇಳಿಯಬೇಕಿತ್ತು. ಆದರೆ, ಕಂಡಕ್ಟರ್ (Bus Conductor) ನಿಲ್ದಾಣ ಬಂದಿದೆ ಎಂದು ತಿಳಿಸಿಲ್ಲ. ನಂತರ ಬಸ್ ನೈಲಾದಲ್ಲಿ ಮುಂದಿನ ನಿಲ್ದಾಣ ತಲುಪಿತು. ಮುಂದಿನ ನಿಲ್ದಾಣಕ್ಕೆ ಹೆಚ್ಚುವರಿ 10 ರೂ. ಪಾವತಿಸಿ ಎಂದು ಕಂಡಕ್ಟರ್‌ ಕೇಳಿದ್ದಾರೆ. ಈ ವೇಳೆ ಇಬ್ಬರ ನಡುವೆ ಜಗಳವಾಗಿದೆ.

    ಶುಕ್ರವಾರ ಈ ಘಟನೆ ನಡೆದಿದ್ದು, ಆ ಘಟನೆಯ ವೀಡಿಯೋ ವೈರಲ್ ಆಗಿದೆ. ಬಲಿಪಶು ಸರಿಯಾದ ಬಸ್ ನಿಲ್ದಾಣವನ್ನು ತಪ್ಪಿಸಿಕೊಂಡಾಗ, ಮುಂದಿನ ನಿಲ್ದಾಣದವರೆಗೆ ಪ್ರಯಾಣಕ್ಕೆ 10 ರೂ. ಹೆಚ್ಚುವರಿ ಶುಲ್ಕ ಪಾವತಿಸಲು ಕಂಡಕ್ಟರ್‌ ಕೇಳಿದ್ದರು. ಹೆಚ್ಚುವರಿ ಪ್ರಯಾಣ ದರ ನೀಡಲು ನಿರಾಕರಿಸಿದ್ದಕ್ಕೆ, ಹಲ್ಲೆ ನಡೆಸಲಾಗಿದೆ ಎನ್ನಲಾಗಿದೆ. ಇದನ್ನೂ ಓದಿ: ಬಂಡೀಪುರದಲ್ಲಿ ರಸ್ತೆಗಿಳಿದ ಗಜರಾಜ – ನಾಲ್ಕು ಕಿಮೀ ಟ್ರಾಫಿಕ್ ಜಾಮ್!

    ಹೆಚ್ಚುವರಿ ಶುಲ್ಕದ ವಿಚಾರಕ್ಕೆ ಕಂಡಕ್ಟರ್ ಮತ್ತು ನಿವೃತ್ತ ಅಧಿಕಾರಿ ಮೀನ ಅವರ ನಡುವೆ ವಾಗ್ವಾದ ನಡೆಯಿತು. ಆದರೆ, ಮೀನ ಹಣ ನೀಡಲು ನಿರಾಕರಿಸಿದ್ದಾರೆ. ಕಂಡಕ್ಟರ್, ಮೀನ ಅವರನ್ನು ತಳ್ಳುತ್ತಿದ್ದಂತೆ, ಇವರು ಕಂಡಕ್ಟರ್‌ಗೆ ಕಪಾಳಮೋಕ್ಷ ಮಾಡಿದ್ದಾರೆ. ನಂತರ ಕಂಡಕ್ಟರ್‌ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಇದನ್ನೂ ಓದಿ:  ಹೆಲ್ಮೆಟ್ ಹಾಕದಿದ್ರೆ ಪೆಟ್ರೋಲ್ ಇಲ್ಲ; ಸಾವು-ನೋವು ತಡೆಗೆ ಯುಪಿ ಸರ್ಕಾರ ಸಜ್ಜು

  • ಮೆಟ್ರೋ ರೈಲಿನ ಒಳಗಡೆ ಭಿಕ್ಷಾಟನೆ, ದಂಗಾದ ಪ್ರಯಾಣಿಕರು!

    ಮೆಟ್ರೋ ರೈಲಿನ ಒಳಗಡೆ ಭಿಕ್ಷಾಟನೆ, ದಂಗಾದ ಪ್ರಯಾಣಿಕರು!

    ಬೆಂಗಳೂರು: ಟ್ರಾಫಿಕ್‌ ಸಿಗ್ನಲ್‌, ಬಸ್‌ ನಿಲ್ದಾಣ, ದೇವಸ್ಥಾನಗಳಲ್ಲಿ ಭಿಕ್ಷುಕರು (Beggars) ಇರುವುದು ಸಾಮಾನ್ಯ. ಆದರೆ ಈಗ ಭಿಕ್ಷುಕರು ನಮ್ಮ ಮೆಟ್ರೋಗೂ (Namma Metro) ಲಗ್ಗೆ ಇಟ್ಟಿದ್ದಾರೆ.

    ಹೌದು. ನಮ್ಮ ಮೆಟ್ರೋ ರೈಲು ಒಳಗಡೆ ವಿಶೇಷ ಚೇತನ ವ್ಯಕ್ತಿಯೊಬ್ಬ ಭಿಕ್ಷಾಟನೆ ಮಾಡಿದ್ದಾನೆ. ಚಲ್ಲಘಟ್ಟದಿಂದ ವೈಟ್ ಫೀಲ್ಡ್‌ ಮಾರ್ಗದ ಮೆಟ್ರೋದಲ್ಲಿ ಪ್ರಯಾಣಿಕರಂತೆ ಬಂದ ವ್ಯಕ್ತಿ ಭಿಕ್ಷೆ ಬೇಡಿದ್ದಾನೆ. ಇದನ್ನೂ ಓದಿ: ನಟ ಅಲ್ಲು ಅರ್ಜುನ್ ಬಂಧನ – ಪೊಲೀಸರ ನಡೆ ಸಮರ್ಥಿಸಿಕೊಂಡ ತೆಲಂಗಾಣ ಸಿಎಂ


    ತನ್ನ ದೈಹಿಕ ಊನವನ್ನು ತೋರಿಸಿ ಭಿಕ್ಷಾಟನೆ ಮಾಡಿದ್ದನ್ನು ಕಂಡು ಪ್ರಯಾಣಿಕರು ದಂಗಾಗಿದ್ದಾರೆ. ಕ್ಯೂ ಆರ್ ಕೋಡ್ ಸ್ಕ್ಯಾನ್ ಮಾಡಿ ಟಿಕೆಟ್‌ ಪಡೆದು ಭಿಕ್ಷೆ ಬೇಡಿದ್ದು ಹಲವರ ಅಚ್ಚರಿಗೆ ಕಾರಣವಾಗಿದೆ.

    ಮೆಟ್ರೋ ರೈಲಿನಲ್ಲಿ ಭಿಕ್ಷೆ ಬೇಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ (Social Media) ವೈರಲ್‌ ಆಗಿದೆ. ನಮ್ಮ‌ ಮೆಟ್ರೊದಲ್ಲೂ ಭಿಕ್ಷುಕರು ಭಿಕ್ಷೆ ಬೇಡುವುದಕ್ಕೂ ಶುರು ಮಾಡಿದ್ರಾ ಎಂಬ ಪ್ರಶ್ನೆಗಳನ್ನು ನೆಟ್ಟಿಗರು ಕೇಳುತ್ತಿದ್ದಾರೆ.

  • ಬಸ್‌ ಸೀಟಿಗಾಗಿ ಚಪ್ಪಲಿಯಲ್ಲಿ ಬಡಿದಾಡಿದ ಮಹಿಳೆಯರು

    ಬಸ್‌ ಸೀಟಿಗಾಗಿ ಚಪ್ಪಲಿಯಲ್ಲಿ ಬಡಿದಾಡಿದ ಮಹಿಳೆಯರು

    ಬೆಳಗಾವಿ: ಸರ್ಕಾರಿ ಬಸ್ಸಿನಲ್ಲಿ (Government Bus) ಸೀಟ್‌ ವಿಚಾರಕ್ಕೆ ಮಹಿಳೆಯರು (Women) ಚಪ್ಪಲಿಯಲ್ಲಿ ಹೊಡೆದಾಡಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ.

    ಸವದತ್ತಿ ರೇಣುಕಾ ಯಲ್ಲಮ್ಮದೇವಿ ದರ್ಶನ ಪಡೆಯಲು ಸವದತ್ತಿಗೆ ಹೋಗುವ ಬಸ್ಸನ್ನು ಮಹಿಳೆಯರು ಹತ್ತಿದ್ದಾರೆ. ಈ ವೇಳೆ ಸೀಟ್ ನನ್ನದು ನನ್ನದು ಅಂತಾ ಮಹಿಳೆಯರ ಮಧ್ಯೆ ಜಗಳ ಆರಂಭವಾಗಿದೆ.

    ಮೊದಲಿಗೆ ಮಹಿಳೆಯರು ಪರಸ್ಪರ ಬೈದಾಡಿಕೊಂಡಿದ್ದಾರೆ. ನಂತರ ಕೈಕೈ ಮಿಲಾಯಿಸಿ ಚಪ್ಪಲಿಯಲ್ಲಿ ಹೊಡೆದಾಡಿದ್ದಾರೆ. ಈ ವೇಳೆ ವೇಳೆ ಅಡ್ಡ ಬಂದ ಬಾಲಕಿಗೂ ಚಪ್ಪಲಿಯಿಂದ ಮಹಿಳೆ ಹೊಡೆದಿದ್ದಾಳೆ.  ಇದನ್ನೂ ಓದಿ: ಶಿವಮೊಗ್ಗ| ಬಾನೆಟ್ ಮೇಲೆ ಪೊಲೀಸ್ ಸಿಬ್ಬಂದಿಯನ್ನು ಹೊತ್ತೊಯ್ದ ಕಾರು – ಚಾಲಕ‌ ಪೊಲೀಸರ ವಶಕ್ಕೆ

    ಮಹಿಳೆಯರ ಜಗಳದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಈಗ ವೈರಲ್ ಆಗಿದೆ.