Tag: viral video

  • ಕ್ಯೂನಲ್ಲಿ ನಿಂತು ಮದ್ಯ ಖರೀದಿಸಿದ ರಾಕುಲ್ ಪ್ರೀತ್ – ವೈರಲ್ ವಿಡಿಯೋದ ಅಸಲಿಯತ್ತೇ ಬೇರೆ

    ಕ್ಯೂನಲ್ಲಿ ನಿಂತು ಮದ್ಯ ಖರೀದಿಸಿದ ರಾಕುಲ್ ಪ್ರೀತ್ – ವೈರಲ್ ವಿಡಿಯೋದ ಅಸಲಿಯತ್ತೇ ಬೇರೆ

    ಮುಂಬೈ: ಲಾಕ್‍ಡೌನ್‍ನಲ್ಲಿ ಎಣ್ಣೆ ಸಿಗದೆ ಮದ್ಯಪ್ರಿಯರು ಪರದಾಡಿದ್ದರು. ಆದರೆ ಈಗ ಮದ್ಯದಂಗಡಿ ತೆರೆದಿರುವ ಹಿನ್ನೆಲೆ ಕ್ಯೂನಲ್ಲಿ ನಿಂತು ಮದ್ಯಪ್ರಿಯರು ಎಣ್ಣೆ ಖರೀದಿಸುವಲ್ಲಿ ಬ್ಯೂಸಿ ಆಗಿದ್ದಾರೆ. ಮದ್ಯ ಖರೀದಿಗೆ ಪುರುಷರು, ಮಹಿಳೆಯರು, ಯುವಕ-ಯುವತಿಯರು ಕ್ಯೂನಲ್ಲಿನಿಂತ ಸಾಕಷ್ಟು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಮಧ್ಯೆ ರಸ್ತೆ ಬದಿಯ ವೈನ್ ಸ್ಟೋರ್ ನಿಂದ ನಟಿ ರಾಕುಲ್ ಪ್ರೀತ್ ಸಿಂಗ್ ಮದ್ಯ ಖರೀದಿಸಿ ಹೋಗುತ್ತಿದ್ದಾರೆ ಎನ್ನಲಾದ ವಿಡಿಯೋವೊಂದು ಕೂಡ ವೈರಲ್ ಆಗಿದೆ.

    ಮದ್ಯ ಮಾರಾಟಕ್ಕೆ ಅವಕಾಶ ನೀಡುತ್ತಿದ್ದಂತೆಯೇ ಮುಖಕ್ಕೆ ಮಾಸ್ಕ್ ಹಾಕಿಕೊಂಡು ರಾಕುಲ್ ವೈನ್ ಸ್ಟೋರ್‍ಗೆ ಹೋಗಿ, ಮದ್ಯ ಖರೀದಿಸಿಕೊಂಡು ಬಂದಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಚರ್ಚೆ ಆಗಿದೆ. ರಾಕುಲ್ ಕೈಯಲ್ಲಿ ಮದ್ಯದ ಬಾಟಲಿ ಹಿಡಿದುಕೊಂಡು ಬರುತ್ತಿದ್ದಾರೆ ಎಂಬ ವಿಡಿಯೋ ಕೂಡ ಸಖತ್ ವೈರಲ್ ಆಗಿತ್ತು. ಆದರೆ ಆ ವಿಡಿಯೋ ಅಸಲಿಯತ್ತೆ ಬೇರೆಯಾಗಿದೆ ಎಂದು ಅಭಿಮಾನಿಗಳು ಹೇಳುತ್ತಿದ್ದಾರೆ.

    https://www.instagram.com/p/B_ysdMlHBxE/?utm_source=ig_embed

    ರಾಕುಲ್ ಯಾವುದೇ ಮದ್ಯದಂಗಡಿಗೆ ಹೋಗಿರಲಿಲ್ಲ. ಬದಲಿಗೆ ಅವರು ಮೆಡಿಕಲ್ ಶಾಪ್‍ಗೆ ತೆರಳಿ ಔಷಧಿ ತೆಗೆದುಕೊಂಡು ಬರುತ್ತಿದ್ದರು. ಈ ವೇಳೆ ಅವರು ಕೈಯಲ್ಲಿ ಸಿರಪ್ ಬಾಟಲ್ ಹಿಡಿದುಕೊಂಡು ಬರುತ್ತಿದ್ದರು ಎನ್ನಲಾಗಿದ್ದು, ಈ ವಿಡಿಯೋವನ್ನು ಕೆಲವರು ಸೆರೆಹಿಡಿದಿದ್ದರು. ಆದರೆ ಬಳಿಕ ರಾಕುಲ್ ಮದ್ಯವನ್ನು ಖರೀದಿಸಿಕೊಂಡು ಹೋಗುತ್ತಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಇದೇ ವಿಡಿಯೋವನ್ನು ಹರಿಬಿಟ್ಟಿದ್ದಾರೆ ಎನ್ನಲಾಗಿದೆ.

    ಆದರೆ ಈ ವಿಡಿಯೋವನ್ನು ನೋಡಿದ ರಾಕುಲ್ ಅಭಿಮಾನಿಗಳು ಸಿಟ್ಟಿಗೆದಿದ್ದು, ಸುಳ್ಳು ಸುದ್ದಿಗಳನ್ನು ಹರಡುವ ಮೊದಲು ಖಚಿತಪಡಿಸಿಕೊಳ್ಳಿ ಎಂದು ಕಾಮೆಂಟ್ ಮಾಡಿ ಕಿಡಿಕಾಡಿದ್ದಾರೆ. ಇನ್ನೂ ಕೆಲವರು ರಾಕುಲ್ ಫಿಟ್‍ನೆಸ್‍ಗೆ ಹೆಚ್ಚು ಒತ್ತು ನೀಡುತ್ತಾರೆ, ಅವರು ಹೀಗೆಲ್ಲ ಮದ್ಯ ಸೇವನೆ ಮಾಡಲ್ಲ ಎಂದು ನಟಿ ಪರ ನಿಂತಿದ್ದಾರೆ. ಅಷ್ಟೇ ಅಲ್ಲದೇ ವಿಡಿಯೋದಲ್ಲಿ ಕಾಣಿಸಿಕೊಂಡಿರುವುದು ರಾಕುಲ್ ಅವರೇನಾ? ಇಲ್ಲ ಬೇರೆಯವರ ಎಂಬ ಅನುಮಾನಗಳೂ ಇವೆ. ಅದೇನೇ ಇರಲಿ ಅಭಿಮಾನಿಗಳು ಮಾತ್ರ ನೀವೆಷ್ಟೇ ಟ್ರೋಲ್ ಮಾಡಿ, ಆದರೆ ರಾಕುಲ್ ಮಾತ್ರ ಕ್ಯೂನಲ್ಲಿ ನಿಂತು ಮದ್ಯ ಖರೀದಿಸಿಲ್ಲ ಎಂದು ನಟಿ ಪರ ನಿಂತಿದ್ದಾರೆ.

    ಸದ್ಯ ಲಾಕ್‍ಡೌನ್‍ನಿಂದಾಗಿ ಮನೆಯಲ್ಲಿ ಕಾಲ ಕಳೆಯುತ್ತಿರುವ ರಾಕುಲ್ ಸಾಮಾಜಿಕ ಜಾಲತಾಣದಲ್ಲಿ ಆಗಾಗ ಲೈವ್ ಬರುವ ಮೂಲಕ, ಫಿಟ್ನೆಟ್ ವಿಡಿಯೋಗಳನ್ನು ಪೋಸ್ಟ್ ಮಾಡಿ ಅಭಿಮಾನಿಗಳಿಗೆ ಖುಷಿ ಪಡಿಸುತ್ತಿದ್ದಾರೆ.

  • ಮನೆಯ ಟೆರೇಸ್‍ನಲ್ಲಿ ಮದ್ವೆಯಾದ ಬಿಗ್‍ಬಾಸ್ ಜೋಡಿ- ವಿಡಿಯೋ ವೈರಲ್

    ಮನೆಯ ಟೆರೇಸ್‍ನಲ್ಲಿ ಮದ್ವೆಯಾದ ಬಿಗ್‍ಬಾಸ್ ಜೋಡಿ- ವಿಡಿಯೋ ವೈರಲ್

    ನವದೆಹಲಿ: ಕೊರೊನಾ ವೈರಸ್ ಹರಡುವುದನ್ನು ತೆಗಟ್ಟುವ ಸಲುವಾಗಿ ಇಡೀ ದೇಶವನ್ನೇ ಲಾಕ್ ಡೌನ್ ಮಾಡಲಾಗಿದ್ದು, ಹಲವಾರು ಕಾರ್ಯಕ್ರಮಗಳು, ಮದುವೆಗಳು ರದ್ದಾಗಿವೆ. ಆದರೆ ಹಿಂದಿ ಬಾಗ್ ಬಾಸ್ ಸೀಸನ್ 2ರ ವಿನ್ನರ್ ಅಶುತೋಷ್ ಕೌಶಿಕ್ ಲಾಕ್ ಡೌನ್ ನಡುವೆಯೇ ಮದುವೆಯಾಗಿ ಇದೀಗ ಭಾರೀ ಸುದ್ದಿಯಾಗಿದ್ದಾರೆ.

    ಹೌದು. ಅಶುತೋಷ್ ಅವರು ತಮ್ಮ ಮದುವೆಯನ್ನು ಕ್ಯಾನ್ಸಲ್ ಮಾಡಿಕೊಳ್ಳದೆ, ಹಿರಿಯರ ಸಮ್ಮುಖದಲ್ಲಿ ಗೆಳತಿ ಅರ್ಪಿತಾ ತಿವಾರಿಯನ್ನು ನೊಯ್ಡಾದಲ್ಲಿರುವ ಮನೆಯ ಟೆರೇಸ್ ಮೇಲೆಯೇ ವರಿಸಿದ್ದಾರೆ. ಸದ್ಯ ಇವರ ಮದುವೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

    ಮದುವೆ ಕಾರ್ಯಕ್ರಮದಲ್ಲಿ ಅಶುತೋಷ್ ಕುಟುಂಬದ ಆಪ್ತರಷ್ಟೇ ಭಾಗಿಯಾಗಿದ್ದು, ಉಳಿದವರು ವಿಡಿಯೋ ಕಾನ್ಫರೆನ್ಸ್ ಮೂಲಕ ನೂತನ ವಧು-ವರರಿಗೆ ಶುಭ ಕೋರಿದ್ದಾರೆ. ಅಶುತೋಷ್ ಬಳಿ ಬಣ್ಣದ ಶರ್ಟ್ ಹಾಗೂ ಕಡು ನೀಲಿ ಬಣ್ಣದ ಪ್ಯಾಂಟ್ ಧರಿಸಿದ್ದರೆ, ವಧು ಕೆಂಪು ಬಣ್ಣದ ಡ್ರೆಸ್ ಧರಿಸಿ ಬಹಳ ಸರಳವಾಗಿ ಹಸೆಮಣೆ ಏರಿದ್ದನ್ನು ನಾವು ವಿಡಿಯೋದಲ್ಲಿ ಕಾಣಬಹುದಾಗಿದೆ.

    ಇತ್ತೀಚೆಗೆ ಮಾಧ್ಯಮಕ್ಕೆ ನೀಡಿದ್ದ ಸಂದರ್ಶನದಲ್ಲಿ ಮಾತನಾಡಿದ್ದ ಅಶುತೋಷ್, ಲಾಕ್ ಡೌನ್ ಘೋಷಣೆಯಾಗುವ ಮೊದಲೇ ಅಂದರೆ ಫೆಬ್ರವರಿಯಲ್ಲಿ ನನ್ನ ಮದುವೆ ದಿನಾಂಕ ನಿಗದಿಯಾಗಿತ್ತು. ಈ ಬಾರಿ ಅಕ್ಷಯ ತೃತೀಯದಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟರೆ ಒಳ್ಳೆಯದು ಎಂಬುದಾಗಿ ಅಂದೇ ಮದುವೆ ದಿನಾಂಕವನ್ನು ಫಿಕ್ಸ್ ಮಾಡಿದ್ದೆವು. ದಿನ ನಿಗದಿ ಆದ ಬಳಿಕ ಲಾಕ್ ಡೌನ್ ಘೋಷಣೆಯಾಯಿತು. ಆದರೆ ಮದುವೆಯ ದಿನವನ್ನು ಮುಂದೂಡಲು ಇಬ್ಬರಿಗೂ ಇಷ್ಟವಿರಲಿಲ್ಲ. ಹೀಗಾಗಿ ಅಂದೇ ಇಬ್ಬರೂ ವೂವಾಹಿಕ ಜೀವನಕ್ಕೆ ಕಾಲಿಡಲು ನಿರ್ಧರಿಸಿದೆವು.

    ನಾನು ಸೇರಿದಂತೆ ಕೇವಲ 4 ಮಂದಿ ಕಾರಿನಲ್ಲಿ ಅರ್ಪಿತಾಳ ಮನೆಗೆ ತೆರಳಿದೆವು. ಪಂಡಿತರಲ್ಲಿ ಗ್ಲೌಸ್ ಹಾಗೂ ಮಾಸ್ಕ್ ಧರಿಸಲು ಮನವಿ ಮಾಡಿದೆವು. ಈ ಮೂಲಕ ಸರಳವಾಗಿ ಅರ್ಪಿತಾ ಮನೆಯಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವುದಾಗಿ ಅಶುತೋಷ್ ತಿಳಿಸಿದರು.

    ನಮ್ಮ ಮದುವೆಗೆ ಖರ್ಚು ಮಾಡುವ ಹಣವನ್ನು ದಾನ ಮಾಡಲು ನಿರ್ಧರಿಸಿದ್ದೇನೆ. ಈ ಬಗ್ಗೆ ಅರ್ಪಿತಾ ಮನೆಯವರಿಗೂ ತಿಳಿಸಿದ್ದು, ಅವರು ಕೂಡ ನಮ್ಮ ನಿರ್ಧಾರಕ್ಕೆ ಸಮ್ಮತಿ ಸೂಚಿಸಿದ್ದಾರೆ ಎಂದರು.

  • ಸಾಬೂನಿನಿಂದ ಕೈ ತೊಳೆದ್ರೆ ಆಗುವ ಲಾಭ ಮಕ್ಕಳಿಗೆ ತಿಳಿಸಿದ ಶಿಕ್ಷಕಿ-ವಿಡಿಯೋ ವೈರಲ್

    ಸಾಬೂನಿನಿಂದ ಕೈ ತೊಳೆದ್ರೆ ಆಗುವ ಲಾಭ ಮಕ್ಕಳಿಗೆ ತಿಳಿಸಿದ ಶಿಕ್ಷಕಿ-ವಿಡಿಯೋ ವೈರಲ್

    ಬೆಂಗಳೂರು: ಸಾಬೂನಿನಿಂದ ಕೈ ತೊಳೆದರೆ ಆಗುವ ಲಾಭವನ್ನ ಶಿಕ್ಷಕಿ ಮಕ್ಕಳಿಗೆ ತಿಳಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಶುಚಿಯಾಗಿರಬೇಕು ಎಂಬ ಮಾತುಗಳಿ ಕೇಳಿ ಬರುತ್ತಿವೆ. ಕೈಯನ್ನು ಶುಚಿಯಾಗಿಟ್ಟುಕೊಳ್ಳಬೇಕು ಎಂಬ ಸಲಹೆ ಮತ್ತು ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ನೋಡುತ್ತಿರುತ್ತೇವೆ. ಮಾರ್ಚ್ 13ರಂದು ಈ ವಿಡಿಯೋ ಟ್ವಿಟ್ಟರ್ ನಲ್ಲಿ ಅಪ್ಲೋಡ್ ಆಗಿದ್ದು, 61 ಲಕ್ಷಕ್ಕೂ ಅಧಿಕ ವ್ಯೂವ್ ಪಡೆದುಕೊಂಡಿದೆ. ಕಾಳು ಮೆಣಸಿನ ಪೌಡರ್ ಬಳಸಿ ಮಕ್ಕಳಿಗೆ ಶಿಕ್ಷಕಿ ಸರಳವಾಗಿ ಪಾಠ ಮಾಡಿದ್ದಾರೆ. ಸರಳ ವಿಧಾನ ನೋಡಿದ ನೆಟ್ಟಿಗರು ವಿಡಿಯೋವನ್ನು ಹಂಚಿಕೊಳ್ಳುತ್ತಿದ್ದಾರೆ.

    ವಿಡಿಯೋದಲ್ಲಿ ಏನಿದೆ?
    ವಿಡಿಯೋದಲ್ಲಿ ಎರಡು ತಟ್ಟೆಗಳು ಇರೋದನ್ನು ಕಾಣಬಹುದು. ಒಂದರಲ್ಲಿ ನೀರು ಹಾಕಿ ಮೇಲ್ಗಡೆ ಕಾಳು ಮೆಣಸಿನ ಪುಡಿ ಹಾಕಲಾಗಿದೆ. ಮತ್ತೊಂದರಲ್ಲಿ ಸಾಬೂನು (ದ್ರವ ರೂಪದಲ್ಲಿರುವ) ಇರಿಸಲಾಗಿದೆ. ನೀರಿನ ಮೇಲೆ ತೇಲುತ್ತಿರುವ ಮೆಣಸಿನ ಪುಡಿಯನ್ನು ವೈರಸ್ ಗೆ ಹೋಲಿಸುತ್ತಾರೆ. ನಂತರ ತಮ್ಮ ಬೆರಳನ್ನು ನೀರಿನಲ್ಲಿ ಅದ್ದಿದಾಗ ಮೆಣಸಿನ ಪುಡಿ ಅಂಟಿಕೊಳ್ಳುತ್ತದೆ. ಆವಾಗ ನೋಡಿ ಹೇಗೆ ವೈರಸ್ ನನ್ನ ಬೆರಳಿಗೆ ಅಂಟಿಕೊಳ್ತು. ಅದೇ ಬೆರಳನ್ನು ಸಾಬೂನು ಇರಿಸಲಾಗಿದ್ದ ತಟ್ಟೆಯಲ್ಲಿ ಅದ್ದಿದಾಗ ಕೈ ಶುಚಿಯಾಗುತ್ತೆ. ಕೊನೆಗೆ ಶುಚಿಯಾದ ಬೆರಳನ್ನು ಮೆಣಸಿನ ಪುಡಿ ಹಾಕಲಾಗಿರುವ ತಟ್ಟೆಯಲ್ಲಿ ಇರಿಸುತ್ತಾರೆ. ಶುಚಿಯಾದ ಬೆರಳು ತಟ್ಟೆಯಲ್ಲಿಡುತ್ತಿದ್ದಂತೆ ಮೆಣಸಿನ ಪುಡಿ ದೂರ ಹೋಗುತ್ತೆ.

    ಮೆಣಸಿನ ಪುಡಿ ದೂರ ಹೋಗುತ್ತಿದ್ದಂತೆ ಮಕ್ಕಳು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. ಕೊನೆಗೆ ಶಿಕ್ಷಕಿ ಸಾಬೂನಿನಿಂದ ಕೈ ತೊಳೆದ್ರೆ ಯಾವ ವೈರಾಣುಗಳು ನಿಮ್ಮ ಬಳಿ ಸುಳಿಯಲ್ಲ ಎಂಬುದನ್ನ ಮಕ್ಕಳಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ.

  • ಧಮ್ ಎಳೆದು, ಲಿಪ್ ಕಿಸ್ ಕೊಟ್ಟು ಕಣ್ಣೀರಿಟ್ಟ ರಚಿತಾ ರಾಮ್

    ಧಮ್ ಎಳೆದು, ಲಿಪ್ ಕಿಸ್ ಕೊಟ್ಟು ಕಣ್ಣೀರಿಟ್ಟ ರಚಿತಾ ರಾಮ್

    ಬೆಂಗಳೂರು: ಐ ಲವ್ ಯು ಸಿನಿಮಾದಲ್ಲಿ ಸಖತ್ ಬೋಲ್ಡ್ ಅವತಾರದಲ್ಲಿ ಕಾಣಿಸಿಕೊಂಡು ಡಿಂಪಲ್ ಕ್ವೀನ್ ರಚಿತಾ ರಾಮ್ ಸಖತ್ ಸದ್ದು ಮಾಡಿದ್ದರು. ಈಗ ಮತ್ತೆ ತಮ್ಮ ಹೊಸ ಸಿನಿಮಾದಲ್ಲಿ ಹಿಂದೆಂದೂ ಕಾಣಿಸಿಕೊಳ್ಳ ಪಾತ್ರದಲ್ಲಿ ನಟಿಸಿ ಮತ್ತೆ ಎಲ್ಲೆಡೆ ಸುದ್ದಿಯಾಗಿದ್ದಾರೆ.

    ಹೌದು. ರಚಿತಾ ತಮ್ಮ ಹೊಸ ಚಿತ್ರ `ಏಕ್ ಲವ್ ಯಾ’ ಸಿನಿಮಾದಲ್ಲಿ ಮತ್ತೆ ಬೋಲ್ಡ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಇಂದು ಚಿತ್ರದ ಟೀಸರ್ ಬಿಡುಗಡೆಯಾಗಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ. ಅದರಲ್ಲೂ ಬೋಲ್ಡ್ ಲುಕ್‌ನಲ್ಲಿ ಕಾಣಿಸಿಕೊಂಡ ರಚಿತಾ ಸಿಗರೇಟ್ ಸೇದಿ, ಹೀರೋಗೆ ಲಿಪ್ ಕಿಸ್ ಕೊಟ್ಟ ದೃಶ್ಯ ಎಲ್ಲೆಡೆ ಸಖತ್ ಸದ್ದು ಮಾಡುತ್ತಿದೆ.

    ರಚಿತಾ ರಾಮ್ ಸಿಗರೇಟ್ ಸೇದುವ ದೃಶ್ಯದ ಮೂಲಕ ಟೀಸರ್ ಆರಂಭವಾಗುತ್ತದೆ. ನಾಯಕ ರಾಣಾಗೆ ರಚಿತಾ ಲಿಪ್ ಕಿಸ್ ಮಾಡುವ ದೃಶ್ಯದೊಂದಿಗೆ ಟೀಸರ್ ಮುಗಿಯುತ್ತದೆ. 1 ನಿಮಿಷ 40 ಸೆಕೆಂಡ್‍ಗಳ ಟೀಸರ್ ನಲ್ಲಿ ರಾಣಾ ಆ್ಯಕ್ಷನ್ ಹಾಗೂ ರಚಿತಾ ಲುಕ್ ಎಲ್ಲರ ಗಮನ ಸೆಳೆದಿದೆ.

    `ಏಕ್ ಲವ್ ಯಾ’ ಚಿತ್ರಕ್ಕೆ ನಿರ್ದೇಶಕ ಪ್ರೇಮ್ ಆ್ಯಕ್ಷನ್ ಕಟ್ ಹೇಳಿದ್ದು, ನಟಿ ರಕ್ಷಿತಾ ಪ್ರೇಮ್ ನಿರ್ಮಾಣ ಮಾಡುತ್ತಿದ್ದು, ಅವರ ಸಹೋದರ ರಾಣಾ ನಾಯಕನಾಗಿ ಅಭಿನಯಿಸಿದ್ದಾರೆ. ಇತ್ತೀಚೆಗೆ ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗಿ ಎಲ್ಲೆಡೆ ಸಾಕಷ್ಟು ಸದ್ದು ಮಾಡಿತ್ತು. ಸಂಗೀತ ನಿರ್ದೇಶಕ ಅರ್ಜುನ್ ಜನ್ಯಾ ಅವರ ಸಂಗೀತ ಸಂಯೋಜನೆಯಲ್ಲಿ ಚಿತ್ರದ ಹಾಡುಗಳು ಮೂಡಿಬಂದಿದ್ದು, ಟೀಸರ್ ಆರಂಭದಲ್ಲಿ ಪುಲ್ವಾಮಾದಲ್ಲಿ ಹುತಾತ್ಮರಾದ ಯೋಧರಿಗೆ ಗೌರವ ಅರ್ಪಿಸಲಾಗಿದೆ.

    ಐ ಲವ್ ಯು ಸಿನಿಮಾದಲ್ಲಿ ರಿಯಲ್ ಸ್ಟಾರ್ ಉಪೇಂದ್ರ ಜೊತೆ ನಟಿ ರಚಿತಾ ರಾಮ್ ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡು ಅಭಿಮಾನಿಗಳಿಗೆ ಶಾಕ್ ನೀಡಿದ್ದರು. ನಂತರದ ದಿನಗಳಲ್ಲಿ ಸ್ವತಃ ರಚಿತಾ ಅವರೇ, ‘ಇನ್ನುಮುಂದೆ ಅಂಥ ದೃಶ್ಯಗಳಲ್ಲಿ ಕಾಣಿಸಿಕೊಳ್ಳಲ್ಲ’ ಎಂದು ಹೇಳಿಕೊಂಡಿದ್ದರು. ಈಗ ರಚಿತಾ ಬಿಂದಾಸ್ ಆಗಿ ಸಿಗರೇಟ್ ಸೇದುತ್ತಿರುವ ಫೊಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.

    ಈ ಕುರಿತು ಪ್ರೇಮ್ ಸಹ ಖಚಿತಪಡಿಸಿದ್ದು, ಇದು ನಮ್ಮ ಏಕ್ ಲವ್ ಯಾ ಚಿತ್ರದ ಸ್ಟಿಲ್. ಹೇಗೆ ಹೊರಬಂತೋ ನಮಗೂ ಗೊತ್ತಿಲ್ಲ. ಈ ಚಿತ್ರದಲ್ಲಿ ರಚಿತಾ ರಾಮ್ ಸಿಗರೇಟ್ ಸೇದುವ ದೃಶ್ಯವಿದೆ. ಟೀಸರ್‍ನಲ್ಲಿ ಇನ್ನಷ್ಟು ಅಚ್ಚರಿಗಳು ಕಾದಿವೆ. ಹಿಂದೆಂದೂ ಕಾಣಿಸಿಕೊಳ್ಳದ ಪಾತ್ರದಲ್ಲಿ ರಚಿತಾ ಕಾಣಿಸಿಕೊಂಡಿದ್ದಾರೆ ಎಂದು ಹೇಳಿದ್ದರು.

  • ‘ನೀನು ಕಳ್ಳಿ’ – ಪತ್ನಿಯನ್ನು ಕಿಚಾಯಿಸಿದ ಮಾಹಿ

    ‘ನೀನು ಕಳ್ಳಿ’ – ಪತ್ನಿಯನ್ನು ಕಿಚಾಯಿಸಿದ ಮಾಹಿ

    ರಾಂಚಿ: ಸೋಷಿಯಲ್ ಮೀಡಿಯಾದಲ್ಲಿ ಮಾಹಿ ದಂಪತಿ ದಿನೇ ದಿನೇ ಸಖತ್ ಆಕ್ಟಿವ್ ಆಗ್ತಿದ್ದಾರೆ. ಫನ್ನಿ ಫನ್ನಿ ಫೋಟೋಸ್ ವಿಡಿಯೋಗಳನ್ನು ಶೇರ್ ಮಾಡ್ತಾ ಮಸ್ತ್ ಎಂಜಾಯಿ ಮಾಡ್ತಿದ್ದಾರೆ.

    ಸೋಷಿಯಲ್ ಮೀಡಿಯಾದಲ್ಲಿ ತನ್ನ ಫಾಲೋವರ್ ಗಳನ್ನು ಹೆಚ್ಚಿಸಿಕೊಳ್ಳೋಕೆ ಸಾಕ್ಷಿ ನನ್ನ ವೀಡಿಯೋಗಳನ್ನ ಪೋಸ್ಟ್ ಮಾಡುತ್ತಿದ್ದಾರೆ. ಇಂತಹ ವೈರಲ್ ವಿಡಿಯೋವೊಂದರಲ್ಲಿ ಧೋನಿ ತಮ್ಮ ಪತ್ನಿಯನ್ನು, ‘ಸಾಕ್ಷಿ ಕಳ್ಳಿ’ ಅಂತ ಕಿಚಾಯಿಸಿ ಧೋನಿ ಕಾಲೆಳೆದಿದ್ದಾರೆ.

    ಧೋನಿ ಅವರ ಈ ಮಾತಿಗೆ ಪ್ರತಿಕ್ರಿಯೆ ನೀಡಿರುವ ಸಾಕ್ಷಿ, ನಾನು ನಿನ್ನ ಅರ್ಧಾಂಗಿ ರಾಜ, ಬೇಬಿ ಸ್ವೀಟಿ ಅಂತೆಲ್ಲಾ ಹೊಗಳಿ ಅಟ್ಟಕೇರಿಸಿದ್ದಾರೆ. ಅಲ್ಲದೇ ನಿಮ್ಮ ಫಾಲೋವರ್ಸ್ ಎಲ್ಲಾ ನನ್ನ ಸಿಕ್ಕಾಪಟ್ಟೆ ಇಷ್ಟ ಪಡ್ತಾರೆ ಗೊತ್ತಾ? ಯಾರಾದ್ರು ನಿಮ್ಮನ್ನು ನೋಡ್ಬೇಕು ಅಂದ್ರೆ ನನ್ನ ಅಕೌಂಟಿನಲ್ಲಿ ನೋಡ್ತಾರೆ. ನನ್ನ ಹೀರೋ ಧೋನಿ ಎಲ್ಲೋದ್ರು, ‘ಮಾಹಿ ಬಾಯಿ, ಧೋನಿ ತಲಾ’ ಅಂತೆಲ್ಲಾ ಕರೆಯುತ್ತಾರೆ. ಈ ವೀಡಿಯೋಗಳನ್ನ ನೋಡಿ ಖುಷಿ ಪಡ್ತಾರೆ ಎಂದಿದ್ದಾರೆ. ಇಬ್ಬರ ತಮಾಷೆಯ ವೀಡಿಯೋ ಈಗ ಸಿಕ್ಕಾಪಟ್ಟೆ ಟ್ರೋಲ್ ಆಗ್ತಿದೆ.

  • ಬಸ್ ನಿಲ್ದಾಣದಲ್ಲೇ ಕಾಲೇಜು ವಿದ್ಯಾರ್ಥಿನಿಯರ ಹೊಡೆದಾಟ

    ಬಸ್ ನಿಲ್ದಾಣದಲ್ಲೇ ಕಾಲೇಜು ವಿದ್ಯಾರ್ಥಿನಿಯರ ಹೊಡೆದಾಟ

    ತುಮಕೂರು: ಕಾಲೇಜು ವಿದ್ಯಾರ್ಥಿನಿಯರಿಬ್ಬರು ಬಸ್ ನಿಲ್ದಾಣದಲ್ಲೇ ಜಗಳ ಮಾಡಿಕೊಂಡು ಬಳಿಕೊಂಡು ಪರಸ್ಪರ ಹೊಡೆದಾಡಿಕೊಂಡಿರುವ ಘಟನೆ ನಗರದ ಕೆಎಸ್‍ಆರ್ ಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದೆ.

    ಇಂದು ಮಧ್ಯಾಹ್ನ 3:30ರ ಸುಮಾರಿಗೆ ಘಟನೆ ನಡೆದಿದ್ದು, ಸಾರ್ವಜನಿಕ ಎದುರೇ ಜಗಳವಾಡಿ ಕೊನೆಗೆ ಒಬ್ಬರಿಗೊಬ್ಬರು ಹೊಡೆದಾಡಿಕೊಂಡಿದ್ದಾರೆ. ಒಬ್ಬರಿಗೊಬ್ಬರು ಜುಟ್ಟು ಹಿಡಿದುಕೊಂಡು ನೂಕಾಟ ತಳ್ಳಾಟ ಮಾಡಿಕೊಂಡು ಕಿತ್ತಾಟ ನಡೆಸಿದ್ದು, ಈ ದೃಶ್ಯಗಳು ಸ್ಥಳೀಯರ ಮೊಬೈಲ್‍ನಲ್ಲಿ ಸೆರೆಯಾಗಿದೆ.

    ವಿಡಿಯೋ ವೈರಲ್: ವಿದ್ಯಾರ್ಥಿನಿಯರು ಜಗಳ ನಡೆಸುತ್ತಿರುವ ವಿಡಿಯೋವನ್ನು ಸ್ಥಳದಲ್ಲಿದ್ದವರು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ. ಅಲ್ಲದೇ ಈ ವಿಡಿಯೋವನ್ನು ಸಾಮಾಜಿಕ ಜಾಲತಾಣ ಹಾಗೂ ವಾಟ್ಸಾಪ್ ಗಳಲ್ಲಿ ಹರಿಬಿಟ್ಟಿದ್ದು, ಸಾಕಷ್ಟು ವೈರಲ್ ಆಗಿದೆ. ‘ಏನ್ ಗುರು ನಮ್ ತುಮಕೂರಲ್ಲಾ?, ನಾವಿದ್ದಾಗ ಇಂತಹದ್ಯಾವದೂ ಕಾಣಲಿಲ್ಲ.’ ಎಂದು ಸಾಮಾಜಿಕ ಜಾಲತಾಣದಲ್ಲಿ ಕೆಲವರು ವಿಡಿಯೋ ಪ್ರತಿಕ್ರಿಯೆ ನೀಡಿದ್ದಾರೆ. ಆದರೆ ವಿದ್ಯಾರ್ಥಿನಿಯರು ಯಾವ ಕಾರಣಕ್ಕೆ ಜಗಳ ಮಾಡಿಕೊಂಡಿದ್ದಾರೆ ಎಂಬುವುದು ತಿಳಿದು ಬಂದಿಲ್ಲ. ವಿದ್ಯಾರ್ಥಿನಿರ ಜಗಳ ಕಂಡ ಕೆಲ ಹಿರಿಯರು ಇಬ್ಬರಿಗೂ ಬುದ್ಧಿವಾದ ಹೇಳಿ ಸ್ಥಳದಿಂದ ಕಳುಹಿಸಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಇಬ್ಬರೂ ಒಂದೇ ಕಾಲೇಜು ವಿದ್ಯಾರ್ಥಿನಿಯರು ಎನ್ನಲಾಗಿದೆ.

  • ಸೋಮಶೇಖರ್ ರೆಡ್ಡಿ ಯೂ ಟರ್ನ್

    ಸೋಮಶೇಖರ್ ರೆಡ್ಡಿ ಯೂ ಟರ್ನ್

    ಬೆಂಗಳೂರು: ಸಿಎಎ ಸಂಬಂಧ ಪ್ರತಿಭಟನೆಯಲ್ಲಿ ಮುಸ್ಲಿಂ ಸಮುದಾಯದ ವಿರುದ್ಧ ವಾಗ್ದಾಳಿ ನಡೆಸಿದ್ದ ಶಾಸಕ ಸೋಮಶೇಖರ್ ರೆಡ್ಡಿ ಈಗ ಯು ಟರ್ನ್ ಹೊಡೆದಿದ್ದಾರೆ. ಬಳ್ಳಾರಿಯಲ್ಲಿ ಶ್ರೀರಾಮುಲು ಸಮ್ಮುಖದಲ್ಲಿ ಮುಸ್ಲಿಂ ಮುಖಂಡರ ಜೊತೆ ಮಾತುಕತೆ ನಡೆಸಿದ ವಿಡಿಯೋ ಈಗ ವೈರಲ್ ಆಗಿದೆ.

    ಬಳ್ಳಾರಿಯಲ್ಲಿ ಮುಸ್ಲಿಂ ಸಮುದಾಯದ ಕಾರ್ಯಕ್ರಮವೊಂದರಲ್ಲಿ ಮುಖಂಡರು ಹಾಗೂ ಸೋಮಶೇಖರ್ ರೆಡ್ಡಿ ನಡುವೆ ಶ್ರೀರಾಮುಲು ಸಂಧಾನ ಮಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ಇದನ್ನೂ ಓದಿ: ಸೋಮಶೇಖರ್ ಪ್ರಚೋದನಾಕಾರಿ ಹೇಳಿಕೆ ತಪ್ಪು: ಡಿಸಿಎಂ ಅಶ್ವಥ್ ನಾರಾಯಣ್

    ಶ್ರೀರಾಮುಲು ಸಿಎಎ ವಿರುದ್ಧ ಪ್ರತಿಭಟನೆ ಮಾಡುತ್ತಿರುವವರು ನಿಮ್ಮನ್ನು ದಾರಿ ತಪ್ಪಿಸುತ್ತಿದ್ದಾರೆ, ಆತಂಕ ಬೇಡ. ದೇಶದಲ್ಲಿರುವರಿಗೆ ಯಾವುದೇ ದಾಖಲೆ ಕೇಳಲ್ಲ. ಅಕ್ರಮವಾಗಿ ಬಂದವರಿಗೆ ಮಾತ್ರ ದಾಖಲೆ ಕೇಳುತ್ತಾರೆ. ನೀವು ಹಿರಿಯರು, ಇದನ್ನು ಮನವರಿಕೆ ಮಾಡಬೇಕು ಎಂದು ಮುಸ್ಲಿಂ ಧರ್ಮಗುರುವೊಬ್ಬರೊಂದಿಗೆ ಮಾತಾಡಿದ್ದಾರೆ. ಇದನ್ನೂ ಓದಿ: ಸೋಮಶೇಖರ್ ರೆಡ್ಡಿ ಶಾಸಕತ್ವ ಸ್ಥಾನ ಅಮಾನತ್ತಿಗೆ ಆಗ್ರಹಿಸಿ ರಾಯಚೂರಿನಲ್ಲಿ ಹೋರಾಟ

    ಅದಕ್ಕೆ ಮುಸ್ಲಿಂ ಧರ್ಮಗುರು ಜನರ ಮನಸ್ಸು ಕಲುಷಿತವಾಗುವಂತೆ ಬಿಂಬಿತವಾಗಿದೆ. ನಿಮ್ಮ ಶರೀರ ರೋಗಗ್ರಸ್ತವಾಗಿಲ್ಲ. ನಿಮ್ಮ ಮನಸ್ಸುಗಳು ರೋಗಗ್ರಸ್ಥವಾಗಿದೆ ಎಂದು ಸೋಮಶೇಖರ್ ರೆಡ್ಡಿ ವಿರುದ್ದ ಅಸಮಾಧಾನ ಹೊರ ಹಾಕಿದ್ದಾರೆ. ಇದನ್ನೂ ಓದಿ:  ಸಿಎಎ ವಿರೋಧಿ ಹೋರಾಟಗಾರರ ವಿರುದ್ಧ ವಿವಾದಾತ್ಮಕ ಹೇಳಿಕೆ- ರಾಯಚೂರಿನಲ್ಲಿ ಸೋಮಶೇಖರ್ ರೆಡ್ಡಿ ವಿರುದ್ಧ ದೂರು

    ಶಾಸಕ ಸೋಮಶೇಖರ್ ರೆಡ್ಡಿ ನಾವು 130 ಕೋಟಿ ಜನರನ್ನೂ ಭಾರತೀಯರು ಎಂದು ಹೇಳುತ್ತೇವೆ. ಹಿಂದೂಗಳು ಬೇರೆ, ಮುಸ್ಲಿಮರು ಬೇರೆ ಎಂದಿಲ್ಲ ಎಂದು ಸಮಜಾಯಿಶಿ ನೀಡಿದ್ದಾರೆ. ಜನರಲ್ಲಿ ಪ್ರತಿದಿನ ಗೊಂದಲ ಮೂಡಿಸುತ್ತಿದ್ದಾರೆ. ಪ್ರಧಾನಿ ಮೋದಿ, ಅಮಿತ್ ಶಾ ಒಳ್ಳೆಯ ಆಡಳಿತ ನಡೆಸುವುದನ್ನು ಸಹಿಸಲಾರದವರು ಮಾಡುತ್ತಿರುವ ಅಪಪ್ರಚಾರ. ಒಂದೆರಡು ದಿನ ಈ ವಿಚಾರದಲ್ಲಿ ಮೌನವಾದರೆ ಎಲ್ಲವೂ ಸರಿಹೋಗುತ್ತೆ ಎಂದು ರಾಮುಲು ಪರಿಸ್ಥಿತಿ ತಿಳಿಗೊಳಿಸುವ ಪ್ರಯತ್ನ ಮಾಡಿದ್ದಾರೆ. ಮುಸ್ಲಿಂ ಧರ್ಮಗುರು ಈಗ ನಿಮಗಾಗಿರುವುದು ದೇಹಕ್ಕೆ ಆಗಿರುವ ರೋಗವಲ್ಲ. ನಿಮ್ಮ ಮನಸ್ಸಿಗೆ ಅಂಟಿರುವ ರೋಗ ಎಂದಿದ್ದಾರೆ. ಶ್ರೀರಾಮುಲು, ಸೋಮಶೇಖರ ರೆಡ್ಡಿ ಇಬ್ಬರು ಗುರುಗಳೇ ನೀವು ಸತ್ಯವನ್ನು ಜನರಿಗೆ ಹೇಳಿ ಎಂದು ಕೇಳಿಕೊಳ್ಳುತ್ತಿರುವ ವಿಡಿಯೋ ವೈರಲ್ ಆಗಿದೆ.

  • ಮೈದಾನದಲ್ಲೇ ಇಂಗ್ಲೆಂಡ್ ಆಟಗಾರರ ನಡ್ವೆ ವಾಗ್ವಾದ – ಸ್ಟೋಕ್ಸ್, ಬ್ರಾಡ್ ವಿಡಿಯೋ ವೈರಲ್

    ಮೈದಾನದಲ್ಲೇ ಇಂಗ್ಲೆಂಡ್ ಆಟಗಾರರ ನಡ್ವೆ ವಾಗ್ವಾದ – ಸ್ಟೋಕ್ಸ್, ಬ್ರಾಡ್ ವಿಡಿಯೋ ವೈರಲ್

    ಸೆಂಚೂರಿಯನ್: ಇಂಗ್ಲೆಂಡ್ ತಂಡದ ಆಲ್‍ರೌಂಡರ್, ಉಪನಾಯಕ ಬೆನ್ ಸ್ಟೋಕ್ಸ್ ಬಿರುಸಿನಿಂದ ಮಾತನಾಡುವುದು ಸ್ವಲ್ಪ ಹೆಚ್ಚು. ಈ ಹಿಂದೆಯೂ ಕೂಡ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದ ಕೂಡ ಕೇಳಿ ಬಂದ ಹಿನ್ನೆಲೆಯಲ್ಲಿ ತಂಡದಿಂದ ಕೆಲ ಸಮಯ ದೂರ ಉಳಿದಿದ್ದರು. ಮೈದಾನದಲ್ಲೂ ಎದುರಾಳಿ ಆಟಗಾರನನ್ನು ಸ್ಲೆಡ್ಜಿಂಗ್ ಮಾಡುವುದರಲ್ಲೂ ಸ್ಟೋಕ್ಸ್ ಮುಂದು. ಈಗ ಬ್ರಾಡ್ ಜೊತೆ ವಾಗ್ವಾದ ಮಾಡಿದ್ದು, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಯಾವ ಕಾರಣದಿಂದ ಇಬ್ಬರು ಆಟಗಾರರು ವಾಗ್ವಾದಕ್ಕೆ ಮುಂದಾಗಿದ್ದಾರೆ ಎಂಬುವುದು ಮಾತ್ರ ಈವರೆಗೂ ಸ್ವಷ್ಟವಾಗಿಲ್ಲ. ಆದರೆ ತಂಡದ ಆಟಗಾರರ ನಡುವೆಯೇ ಇಬ್ಬರು ಆಟಗಾರರು ವಾಗ್ವಾದ ನಡೆಸಿದ್ದಾರೆ. ಈ ವೇಳೆ ಜೋ ರೂಟ್, ಜೋಸ್ ಬಟ್ಲರ್ ನಡುವೆ ಬಂದು ಇಬ್ಬರನ್ನು ಸಮಾಧಾನ ಪಡಿಸಿದ್ದಾರೆ.

    ದಕ್ಷಿಣ ಆಫ್ರಿಕಾ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ 3ನೇ ದಿನದಾಟದ ಬ್ರೇಕ್ ವೇಳೆ ಘಟನೆ ನಡೆದಿದೆ. ಸ್ಟೋಕ್ಸ್‍ಗೆ ಬ್ರಾಡ್ ಏನೋ ಹೇಳುತ್ತಿರುವುದು ವಿಡಿಯೋದಲ್ಲಿ ಕಾಣಬಹುದಾಗಿದೆ. ಘಟನೆಗೂ ಮುನ್ನ ಸ್ಟೋಕ್ಸ್ ಏನೋ ಅಂದ ಕಾರಣ ಬ್ರಾಡ್ ವಾಗ್ವಾದಕ್ಕಿಳಿದರು ಎನ್ನಲಾಗಿದೆ. ಈ ಘಟನೆಯೊಂದಿಗೆ ಇಂಗ್ಲೆಂಡ್ ತಂಡದ ಆಟಗಾರರ ನಡುವೆ ಶೀತಲ ಸಮರ ನಡೆಯುತ್ತಿದೆಯೇ ಎಂಬ ಅನುಮಾನ ಅಭಿಮಾನಿಗಳಲ್ಲಿ ಮೂಡಿದೆ.

    ಆಟಗಾರರು ಮೈದಾನದಲ್ಲೇ ವಾಗ್ವಾದಕ್ಕೆ ಇಳಿದಿರುವ ಕುರಿತು ಇಂಗ್ಲೆಂಡ್ ಮಾಜಿ ನಾಯಕ ನಾಸಿರ್ ಹುಸೇನ್ ಅಸಮಾಧಾನ ವ್ಯಕ್ತಪಡಿಸಿದ್ದು, ಇದು ಉತ್ತಮ ಬೆಳವಣಿಗೆಯಲ್ಲ ಎಂದಿದ್ದಾರೆ. ಅಲ್ಲದೇ ಯಾವುದೇ ಅತೃಪ್ತಿ ಇದ್ದರೆ ಆಟಗಾರರು ಕುಳಿತು ಬಗೆಹರಿಸಿಕೊಳ್ಳಬೇಕಿದೆ ಎಂಬ ಸಲಹೆಯನ್ನು ನೀಡಿದ್ದಾರೆ. ಈ ನಡುವೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದ್ದು, ಅಭಿಮಾನಿಗಳು ಈ ಕುರಿತು ಪ್ರಶ್ನಿಸಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

  • ಕ್ಯಾಚ್ ಹಿಡಿಯಲು ಹೋಗಿ ಡಿಕ್ಕಿ – ಸಾವು ಬದುಕಿನ ನಡುವೆ ಆಟಗಾರರು

    ಕ್ಯಾಚ್ ಹಿಡಿಯಲು ಹೋಗಿ ಡಿಕ್ಕಿ – ಸಾವು ಬದುಕಿನ ನಡುವೆ ಆಟಗಾರರು

    ಕೋಲಾರ: ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಿಯ ಪಂದ್ಯಾವಳಿಯ ಸಂದರ್ಭದಲ್ಲಿ ಫೀಲ್ಡಿಂಗ್ ಮಾಡುತ್ತಿದ್ದ ಇಬ್ಬರು ಆಟಗಾರರು ಕ್ಯಾಚ್ ಹಿಡಿಯುವ ಪ್ರಯತ್ನದಲ್ಲಿ ಪರಸ್ಪರ ಡಿಕ್ಕಿಯಾಗಿ ಆಸ್ಪತ್ರೆ ಸೇರಿರುವ ಘಟನೆ ಜಿಲ್ಲೆಯಲ್ಲಿ ನಡೆದಿದ್ದು, ಮೈದಾನದಲ್ಲಿ ಪ್ರಜ್ಞೆ ಕಳೆದುಕೊಂಡ ಆಟಗಾರರು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ.

    ಶ್ರೀನಿವಾಸಪುರ ತಾಲ್ಲೂಕಿನ ಸೋಮಯಾಜಲಹಳ್ಳಿಯಲ್ಲಿ ಇಂದು ನಡೆದಿದ್ದ ಕ್ರಿಕೆಟ್ ಟೂರ್ನಿಯಲ್ಲಿ ಘಟನೆ ನಡೆದಿದೆ. ಬ್ಯಾಟ್ಸ್ ಮನ್ ಸಿಡಿಸಿದ ಚೆಂಡನ್ನು ಕ್ಯಾಚ್ ಹಿಡಿಯಲು ಹೋದ ಸಂದರ್ಭದಲ್ಲಿ ಡೀಪ್ ಸ್ಕ್ವೇರ್ ಲೇಗ್ ಹಾಗೂ ಡೀಪ್ ಮೀಡ್ ವಿಕೆಟ್‍ನಲ್ಲಿ ಫೀಲ್ಡಿಂಗ್ ಮಾಡುತ್ತಿದ್ದ ಭಾನು ಪ್ರಕಾಶ್, ಶ್ರೀನಿವಾಸ್ ಕ್ಯಾಚ್ ಹಿಡಿಯಲು ಯತ್ನಿಸಿದ್ದರು. ಈ ವೇಳೆ ಆಟಗಾರ ನಡುವೆ ಡಿಕ್ಕಿ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ ಕ್ಷಣ ಮಾತ್ರದಲ್ಲಿ ಇಬ್ಬರು ಮೈದಾನದಲ್ಲೇ ಪ್ರಜ್ಞೆ ತಪ್ಪಿಬಿದ್ದಿದ್ದರು.

    ಇಬ್ಬರು ಆಟಗಾರರು ಪ್ರಜ್ಞೆ ಕಳೆದುಕೊಂಡ ಕಾರಣ ಸಹ ಆಟಗಾರಲ್ಲಿ ಆತಂಕ ಸೃಷ್ಟಿಯಾಗಿತ್ತು. ಕೂಡಲೇ ಇಬ್ಬರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿದೆ. ಚಿಕಿತ್ಸೆ ಪಡೆದ ಬಳಿಕ ಶ್ರೀನಿವಾಸ್ ಚೇತರಿಕೆ ಕಂಡಿದ್ದು, ಭಾನು ಪ್ರಕಾಶ್‍ರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕೋಲಾರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

    ಆಟದ ವೇಳೆ ನಡೆದ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಟೂರ್ನಿಯನ್ನು ವೆಬ್ ಚಾನಲ್ ನಲ್ಲಿ ನೇರ ಪ್ರಸಾರ ಮಾಡಲಾಗುತ್ತಿತ್ತು. ಟೂರ್ನಿಯಲ್ಲಿ ರೈಸಿಂಗ್ ಸ್ಟಾರ್ಸ್ ಹಾಗೂ ಎಸ್‍ಎಎಸ್ ಕ್ರಿಕೆಟರ್ಸ್ ನಡುವೆ ಪಂದ್ಯ ನಡೆಯುತ್ತಿತ್ತು. ಭಾನು ಹಾಗೂ ಶ್ರೀನಿವಾಸ್ ರೈಸಿಂಗ್ ಸ್ಟಾರ್ಸ್ ತಂಡದ ಪರ ಆಡುತ್ತಿದ್ದರು.

  • ರಣ್‍ವೀರ್ ಬಾತ್‍ರೂಂ ಡ್ಯಾನ್ಸ್ ವಿಡಿಯೋ ವೈರಲ್

    ರಣ್‍ವೀರ್ ಬಾತ್‍ರೂಂ ಡ್ಯಾನ್ಸ್ ವಿಡಿಯೋ ವೈರಲ್

    ಮುಂಬೈ: ಬಾಲಿವುಡ್‍ನ ಬಾಜೀರಾವ್, ರಣ್‍ವೀರ್ ಸಿಂಗ್ ಸದಾ ತಮ್ಮ ವಿಭಿನ್ನ ಡ್ರೆಸ್‍ಗಳಿಂದಲೇ ಸುದ್ದಿ ಆಗುತ್ತಿರುತ್ತಾರೆ. ಇದೀಗ ಕಾಜೋಲ್ ನಟನೆಯ ಹಾಡಿಗೆ ಬಾತ್‍ರೂಮಿನಲ್ಲಿ ಡ್ಯಾನ್ಸ್ ಮಾಡಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

    ಬಾಲಿವುಡ್‍ನ ಸೂಪರ್ ಹಿಟ್ ಡಿಡಿಎಲ್‍ಜೆ (ದಿಲ್ ವಾಲೇ ದುಲ್ಹನಿಯಾ ಲೇ ಜಾಯೇಂಗೇ) ಸಿನಿಮಾದ ‘ಆಯೇ ಮೇರೆ ಖಾಬೋ’ ಹಾಡಿಗೆ ರಣ್‍ವೀರ್ ಬಾತ್‍ರೂಮಿನಲ್ಲಿ ಸಖತ್ ಹೆಜ್ಜೆ ಹಾಕಿದ್ದಾರೆ. ಇದು ಹಳೆಯ ವಿಡಿಯೋ ಆಗಿದ್ದು, ಸದ್ಯ ವೈರಲ್ ಆಗುತ್ತಿದೆ. ಅಭಿಮಾನಿಗಳು ತಮ್ಮ ನೆಚ್ಚಿನ ನಟನ ವಿಡಿಯೋವನ್ನು ಸೋಶಿಯಲ್ ಮೀಡಿಯಾಗಳಲ್ಲಿ ಶೇರ್ ಮಾಡಿಕೊಳ್ಳುತ್ತಿದ್ದಾರೆ.

    ರಣ್‍ವೀರ್ ಸಿಂಗ್ ನಟನೆ ’83’ ಸಿನಿಮಾ ಬಿಡುಗಡೆಗೆ ಸಿದ್ಧಗೊಳ್ಳುತ್ತಿದೆ. ಚಿತ್ರತಂಡ ಪೋಸ್ಟ್ ಪ್ರೊಡೆಕ್ಷನ್ ಕೆಲಸಗಳಲ್ಲಿ ಬ್ಯುಸಿಯಾಗಿದೆ. ಟೀಂ ಇಂಡಿಯಾ ಮಾಜಿ ನಾಯಕ ಕಪಿಲ್ ದೇವ್ ಪಾತ್ರದಲ್ಲಿ ರಣ್‍ವೀರ್ ಸಿಂಗ್ ನಟಿಸಿದ್ದಾರೆ. ಸಿನಿಮಾದಲ್ಲಿ ರಣ್‍ವೀರ್ ಗೆ ಜೊತೆಯಾಗಿ ಪತ್ನಿ ದೀಪಿಕಾ ಜೋಡಿಯಾಗಿದ್ದಾರೆ. ಮದುವೆ ಬಳಿಕ ಇಬ್ಬರು ಜೊತೆಯಾಗಿ ನಟಿಸಿರುವ ಮೊದಲ ಚಿತ್ರ ಇದಾಗಿದೆ. ಈ ಹಿಂದೆ ರಾಮ್‍ಲೀಲಾ, ಬಾಜೀರಾವ್ ಮಸ್ತಾನಿ, ಪದ್ಮಾವತ್ ಚಿತ್ರಗಳಲ್ಲಿ ದೀಪಿಕಾ ಮತ್ತು ರಣ್‍ವೀರ್ ಜೊತೆಯಾಗಿ ನಟಿಸಿದ್ದರು. ಇತ್ತ ದೀಪಿಕಾ ನಟನೆಯ ಛಪಾಕ್ ಸಿನಿಮಾದ ಟ್ರೈಲರ್ ಬಿಡುಗಡೆಯಾಗಿ ಬಾಲಿವುಡ್ ಲೋಕದಲ್ಲಿ ಸಂಚಲನ ಮೂಡಿಸಿದೆ.

    https://www.instagram.com/p/B6XJvb8BGjr/