Tag: viral

  • 60 ವರ್ಷದ ವೃದ್ಧ ಸೇರಿ ಆಸ್ಪತ್ರೆಯಲ್ಲಿ ಸೋಂಕಿತರು ಭರ್ಜರಿ ಡ್ಯಾನ್ಸ್ – ವಿಡಿಯೋ ವೈರಲ್

    60 ವರ್ಷದ ವೃದ್ಧ ಸೇರಿ ಆಸ್ಪತ್ರೆಯಲ್ಲಿ ಸೋಂಕಿತರು ಭರ್ಜರಿ ಡ್ಯಾನ್ಸ್ – ವಿಡಿಯೋ ವೈರಲ್

    ಹಾವೇರಿ: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಆದರೆ ಹಾವೇರಿಯ ಜಿಲ್ಲಾಸ್ಪತ್ರೆಯಲ್ಲಿರುವ ಕೋವಿಡ್-19 ವಾರ್ಡಿನಲ್ಲಿ ಸೋಂಕಿತರು ಭರ್ಜರಿ ಸ್ಟೆಪ್ ಹಾಕಿದ್ದಾರೆ.

    ಐಎಲ್‍ಐ ವಾರ್ಡ್‍ನಲ್ಲಿ ಇರುವ ನಾಲ್ಕೈದು ಸೋಂಕಿತರು ಭರ್ಜರಿಯಾಗಿ ಡ್ಯಾನ್ಸ್ ಮಾಡಿ ಎಂಜಾಯ್ ಮಾಡಿದ್ದಾರೆ. ಈ ಮೂಲಕ ಕೊರೊನಾ ಬಂದರೆ ಆತ್ಮಸ್ಥೈರ್ಯ ಕಳೆದುಕೊಳ್ಳಬೇಡಿ ಧೈರ್ಯದಿಂದ ಇರಿ ಎಂಬ ಸಂದೇಶವನ್ನು ಸೋಂಕಿತರು ರವಾನಿಸಿದ್ದಾರೆ.

    ಚೌಕ ಸಿನಿಮಾದ ಅಲ್ಲಾಡ್ಸ್ ಅಲ್ಲಾಡ್ಸ್ ಎಂಬ ಹಾಡಿಗೆ ಎರಡೂವರೆ ನಿಮಿಷ ಭರ್ಜರಿಯಾಗಿ ಕೊರೊನಾ ಸೋಂಕಿತರು ಡ್ಯಾನ್ಸ್ ಮಾಡಿ ಸಮಯವನ್ನು ಕಳೆದಿದ್ದಾರೆ. 60 ವರ್ಷ ವೃದ್ಧ ಸೇರಿ ನಾಲ್ವರು ರೋಗಿಗಳಿಂದ ಬಿಂದಾಸ್ ಡ್ಯಾನ್ಸ್ ಜಿಲ್ಲೆಯಲ್ಲಿ ಸಖತ್ ವೈರಲ್ ಆಗಿದೆ. ಕೊರೊನಾಗೆ ಹೆದರಬೇಡಿ, ಜಾಗೃತರಾಗಿರಿ ಎಂದು ಸೋಂಕಿತರು ಸ್ಟೆಪ್ ಹಾಕಿದ ವಿಡಿಯೋಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

  • ಕೊರೊನಾ ಅಲ್ಲ, ಇದು ಪ್ರೀತಿಯ ಸೋಂಕು- ವಿಭಿನ್ನ ಲಗ್ನ ಪತ್ರಿಕೆ ಫುಲ್ ವೈರಲ್

    ಕೊರೊನಾ ಅಲ್ಲ, ಇದು ಪ್ರೀತಿಯ ಸೋಂಕು- ವಿಭಿನ್ನ ಲಗ್ನ ಪತ್ರಿಕೆ ಫುಲ್ ವೈರಲ್

    ಶಿವಮೊಗ್ಗ: ಕೊರೊನಾ ಸೋಂಕಲ್ಲ, ಇದು ಪ್ರೀತಿಯ ಸೋಂಕು ಎಂದು ವರನೋರ್ವ ವಿಶೇಷವಾಗಿ ಲಗ್ನ ಪತ್ರಿಕೆಯೊಂದನ್ನು ಮುದ್ರಿಸಿದ್ದು, ಈ ಪತ್ರಿಕೆ ಈಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ.

    ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಯುವಕ ವಿನೋದ್ ಇದೇ ತಿಂಗಳ ಜೂ. 15ರಂದು ಚಂದನಾ ಅವರೊಂದಿಗೆ ವಿವಾಹವಾಗುತ್ತಿದ್ದಾರೆ. ಇವರ ವಿವಾಹಕ್ಕೆ ವರ ವಿನೋದ್ ವಿಭಿನ್ನವಾದ ಲಗ್ನ ಪತ್ರಿಕೆ ಮಾಡಿಸಿದ್ದು, ಇದರಲ್ಲಿ ನಿಶ್ಚಿತಾರ್ಥವನ್ನು ಲಾಕ್‍ಡೌನ್‍ಗೆ ಮತ್ತು ಮದುವೆಯನ್ನು ಸೀಲ್‍ಡೌನ್‍ಗೆ ಹೋಲಿಸಲಾಗಿದೆ.

    ಈ ಪತ್ರಿಕೆಯ ಮುಂಭಾಗದಲ್ಲಿ ವಿನೋದ್ ಹಾಗೂ ಚಂದನಾ ಇವರಿಬ್ಬರಿಗೂ ಪರಸ್ಪರ ಪ್ರೀತಿ ಎಂಬ ಸೋಂಕು ಇರುವುದು ದೃಢಪಟ್ಟಿದ್ದು, ನಿಶ್ಚಿತಾರ್ಥದ ಮೂಲಕ ಲಾಕ್‍ಡೌನ್ ಮಾಡಿ, ಮದುವೆ ಎಂಬ ಸೀಲ್‍ಡೌನ್ ಮಾಡಿ, ನಂತರ ಜೀವನವಿಡಿ ಲವ್ ಕ್ವಾರಂಟೈನ್ ಮಾಡಲು ಗುರುಹಿರಿಯ ಬಂಧುಮಿತ್ರರು ತೀರ್ಮಾನಿಸಿದ್ದು, ತಾವುಗಳು ಮುಖಕ್ಕೆ ಮಾಸ್ಕ್ ಧರಿಸಿ, ಕೈಗಳಿಗೆ ಸ್ಯಾನಿಟೈಜರ್ ಹಚ್ಚಿಕೊಂಡು ಸಾಮಾಜಿಕ ಅಂತರದೊಂದಿಗೆ ಬಂದು ಆಶೀರ್ವಾದ ಮಾಡಬೇಕು ಎಂದು ಅಹ್ವಾನಿಸುತ್ತೇವೆ ಎಂದು ಬರೆಯಲಾಗಿದೆ.

  • ಆನೆ ಆಯ್ತು, ಈಗ ಗರ್ಭಿಣಿ ಹಸುವಿಗೆ ಸ್ಫೋಟಕ ತಿನ್ನಿಸಿದ ಕೀಚಕರು

    ಆನೆ ಆಯ್ತು, ಈಗ ಗರ್ಭಿಣಿ ಹಸುವಿಗೆ ಸ್ಫೋಟಕ ತಿನ್ನಿಸಿದ ಕೀಚಕರು

    ಶಿಮ್ಲಾ: ಕೇರಳದಲ್ಲಿ ಸ್ಫೋಟಕ ತಿನ್ನಿಸಿ ಗರ್ಭಿಣಿ ಆನೆಯನ್ನು ಕೊಂದ ಅಮಾನವೀಯ ಘಟನೆ ಮಾಸುವ ಮುನ್ನವೇ ಹಿಮಾಚಲ ಪ್ರದೇಶದಲ್ಲಿ ಗರ್ಭಿಣಿ ಹಸುವಿಗೆ ಸ್ಫೋಟಕ ತಿನ್ನಿಸಿರುವ ಘಟನೆ ಬೆಳಕಿಗೆ ಬಂದಿದೆ.

    ಹಿಮಾಚಲ ಪ್ರದೇಶದ ಬಿಲಾಸ್ಪುರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಸ್ಫೋಟಕ ಸೇವಿಸಿ ಹಸುವಿನ ಬಾಯಿ ಸಂಪೂರ್ಣ ಬ್ಲಾಸ್ಟ್ ಆಗಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ. ಕೇರಳದಲ್ಲಿ ನಡೆದ ಘಟನೆಯ ಬಳಿಕ ಮಾನವನ ಕ್ರೌರ್ಯವನ್ನು ತೋರಿಸುವ ಇನ್ನೊಂದು ಘಟನೆ ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ಸಖತ್ ವೈರಲ್ ಆದ ನಂತರ ಈ ಘಟನೆ ಬಿಲಾಸ್ಪುರ್ ಜಿಲ್ಲೆಯ ಜಂಡುಟ್ಟಾ ಪ್ರದೇಶದಲ್ಲಿ ನಡೆದಿದೆ ಎಂದು ತಿಳಿದು ಬಂದಿದೆ. ಈ ವಿಚಾರವಾಗಿ ಮಾತನಾಡಿರುವ ಹಸುವಿನ ಮಾಲೀಕರು, ಗೋದಿ ಹಿಟ್ಟಿನಲ್ಲಿ ಸ್ಫೋಟಕವನ್ನು ತುಂಬಿ ಹಸುವಿಗೆ ತಿನ್ನಿಸಲಾಗಿದೆ. ಇದು ನರೆಮನೆಯವರು ಮಾಡಿರುವ ಕೃತ್ಯ ಎಂದು ಆರೋಪಿಸಿದ್ದಾರೆ. ಜೊತೆಗೆ ಅಪರಾಧ ಬೆಳಕಿಗೆ ಬಂದಾಗ ಅವರು ಪರಾರಿಯಾಗಿದ್ದಾರೆ ಎಂದು ಹೇಳಿದ್ದಾರೆ.

    ಈ ವಿಚಾರವಾಗಿ ಈಗಾಗಲೇ ಪೊಲೀಸರು ದೂರು ದಾಖಲಿಸಿಕೊಂಡಿದ್ದು, ಇಂತಹ ಘಟನೆಗಳನ್ನು ಸಹಿಸುವುದಿಲ್ಲ ಎಂದು ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಜೈರಾಮ್ ಠಾಕೂರ್ ಹೇಳಿದ್ದಾರೆ. ಈ ಬಗ್ಗೆ ತನಿಖೆ ನಡೆಸುವಂತೆ ಪೊಲೀಸರಿಗೆ ಆದೇಶಿಸಿದ್ದು, ಪ್ರಕರಣದಲ್ಲಿ ಕಠಿಣ ಕ್ರಮ ಕೈಗೊಳ್ಳುವುದಾಗಿ ಸಿಎಂ ಭರವಸೆ ನೀಡಿದ್ದಾರೆ.

  • 57ನೇ ವಯಸ್ಸಿನಲ್ಲೂ ಶಿವಣ್ಣ ಫಿಟ್ ಆ್ಯಂಡ್ ಫೈನ್- ವರ್ಕೌಟ್ ವಿಡಿಯೋ ವೈರಲ್

    57ನೇ ವಯಸ್ಸಿನಲ್ಲೂ ಶಿವಣ್ಣ ಫಿಟ್ ಆ್ಯಂಡ್ ಫೈನ್- ವರ್ಕೌಟ್ ವಿಡಿಯೋ ವೈರಲ್

    ಬೆಂಗಳೂರು: ಚಂದನವನದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಜಿಮ್ ಮಾಡುತ್ತಿರುವ ವಿಡಿಯೋವೊಂದು ವೈರಲ್ ಆಗಿದೆ.

    ಶಿವಣ್ಣ ಎಂದರೆ ನಮಗೆ ಮೊದಲಿಗೆ ನೆನಪಿಗೆ ಬರುವುದು ಅವರ ಎನರ್ಜಿ ಮತ್ತು ಡ್ಯಾನ್ಸ್. ಶಿವರಾಜ್ ಕುಮಾರ್ ಅವರಿಗೆ ವಯಸ್ಸು 57 ಆದರೂ ಅವರು ಈಗಲೂ ಯುವಕರನ್ನು ನಾಚಿಸುವಷ್ಟು ಫಿಟ್ ಆ್ಯಂಡ್ ಫೈನ್ ಆಗಿದ್ದಾರೆ. ಈಗ ಅವರು ಮನೆಯಲ್ಲಿ ತಾಲೀಮು ಮಾಡುತ್ತಿರುವ ವಿಡಿಯೋವೊಂದು ವೈರಲ್ ಆಗಿದೆ.

    https://www.instagram.com/p/CAxaN5kgYxC/

    ಈ ವರ್ಕೌಟ್ ವಿಡಿಯೋವನ್ನು ಸ್ವತಃ ಶಿವಣ್ಣ ಅವರೇ ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಹಂಚಿಕೊಂಡಿದ್ದಾರೆ. ಕೇವಲ 24 ಸೆಕೆಂಡ್ ಇರುವ ಈ ವಿಡಿಯೋದಲ್ಲಿ ಶಿವಣ್ಣ ಅವರು, ಮೊದಲು ಕತ್ತಿಗೆಗೆ ವ್ಯಾಯಾಮ ಮಾಡಿ ನಂತರ ತೂಕವನ್ನು ಹಿಡಿದು ಸೈಡ್ ಫ್ಯಾಟ್‍ಗೆ ವ್ಯಾಯಾಮ ಮಾಡುತ್ತಾರೆ. ತದನಂತರ ಮೆಷಿನ್ ಮೇಲೆ ಮಲಗಿ ಹೊಟ್ಟೆಗೆ ವರ್ಕೌಟ್ ಮಾಡುತ್ತಿರುವುದನ್ನು ನಾವು ವಿಡಿಯೋದಲ್ಲಿ ಕಾಣಬಹುದು.

    ಈ ವಿಡಿಯೋವನ್ನು ಹಂಚಿಕೊಂಡಿರುವ ಶಿವಣ್ಣ ನಿಮ್ಮ ಶಕ್ತಿಗೂ ಮೀರಿ ನೀವು ಬಲವಾಗಿರಬೇಕು ಎಂದು ಬರೆದುಕೊಂಡಿದ್ದಾರೆ. ಈ ವಿಡಿಯೋ ನೋಡಿದ ಶಿವಣ್ಣನ ಅಭಿಮಾನಿಗಳು ಫಿದಾ ಆಗಿದ್ದು, ನೀವು ಈ ವಯಸ್ಸಿನಲ್ಲೂ ನಮಗೆ ಸ್ಫೂರ್ತಿಯಾಗುತ್ತೀರಾ ಶಿವಣ್ಣ ಎಂದು ಕೆಲವರು ಕಮೆಂಟ್ ಮಾಡಿದ್ದಾರೆ. ಇನ್ನೂ ಕೆಲವರು ನೀವು ನಮಗೆ ಎನರ್ಜಿ ಬೂಸ್ಟರ್ ಎಂದು ಕಮೆಂಟ್ ಮಾಡಿದ್ದಾರೆ. ಈಗ ಈ ವಿಡಿಯೋ ಎಲ್ಲೆಡೆ ಸಖತ್ ವೈರಲ್ ಆಗುತ್ತಿದೆ.

    ಲಾಕ್‍ಡೌನ್‍ನಿಂದ ಮನೆಯಲ್ಲೇ ಉಳಿದಿರುವ ಶಿವಣ್ಣ ಕುಟುಂಬದ ಜೊತೆ ಕಾಲ ಕಳೆಯುತ್ತಿದ್ದಾರೆ. ಸಾಲು ಸಾಲು ಸಿನಿಮಾಗಳಲ್ಲಿ ಅಭಿನಯಿಸುತ್ತಿರುವ ಶಿವಣ್ಣ ಸದ್ಯ ರವಿ ಆರಸು ನಿರ್ದೇಶನ ಮಾಡಿರುವ ಆರ್.ಡಿ.ಎಕ್ಸ್ ಎಂಬ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಈ ನಡುವೆ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿ ಇರುವ ಶಿವಣ್ಣ ನೆನ್ನೆ ನಡೆದ ರೆಬೆಲ್ ಸ್ಟಾರ್ ಅಂಬರೀಷ್ ಅವರ ಹುಟ್ಟುಹಬ್ಬಕ್ಕೆ ಟ್ವೀಟ್ ಮಾಡುವ ಮೂಲಕ ವಿಶ್ ಮಾಡಿದ್ದರು.

    https://www.instagram.com/p/CAHUT8vJZo_/

    ಈ ಹಿಂದೆ ಕೂಡ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ವರ್ಕೌಟ್ ಮಾಡಿರುವ ವಿಡಿಯೋ ಕೂಡ ವೈರಲ್ ಆಗಿದ್ದವು. ಪುನೀತ್ ರಾಜ್‍ಕುಮಾರ್ ಅವರು ಈ ಹಿಂದೆ ಎರಡು ವರ್ಕೌಟ್ ವಿಡಿಯೋವನ್ನು ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಹಂಚಿಕೊಂಡಿದ್ದರು. ವಿಡಿಯೋದಲ್ಲಿ ಅಪ್ಪು ದೇಹ ದಂಡಿಸುತ್ತಿರುವುದನ್ನು ನೋಡಿದ ಅಭಿಮಾನಿಗಳು 45ರ ವಯಸ್ಸಿನಲ್ಲಿಯೂ ನಮ್ಮ ಅಪ್ಪು ಕಾಲೇಜು ಯುವಕನ ರೀತಿಯಲ್ಲಿ ಕಾಣುತ್ತಾರೆ ಎಂದು ಹಾಡಿಹೊಗಳಿದ್ದರು.

  • ಸೌದೆ ತರಲು ಹೋಗಿದ್ದ ಮಹಿಳೆಯ ಮೇಲೆ ಕಾಮುಕರಿಂದ ಅತ್ಯಾಚಾರ

    ಸೌದೆ ತರಲು ಹೋಗಿದ್ದ ಮಹಿಳೆಯ ಮೇಲೆ ಕಾಮುಕರಿಂದ ಅತ್ಯಾಚಾರ

    – ವಿಡಿಯೋ ಮಾಡಿ ವೈರಲ್ ಮಾಡಿದ ಕೀಚಕರು

    ಮಡಿಕೇರಿ: ಸೌದೆ ತರಲು ಹೋಗಿದ್ದ ಮಹಿಳೆ ಮೇಲೆ ಇಬ್ಬರು ಕಾಮುಕರು ಅತ್ಯಾಚಾರ ನಡೆಸಿರುವ ಘಟನೆ ಮಡಿಕೇರಿ ತಾಲೂಕಿನ ತಾವೂರು ಗ್ರಾಮದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

    ತಾವೂರು ಗ್ರಾಮದ ಚಿದಾನಂದ ಹಾಗೂ ಚೇತನ್ ಬಂಧಿತ ಆರೋಪಿಗಳು. ತಾವೂರಿನ ವಿವಾಹಿತ ಮಹಿಳೆಯೊಬ್ಬರು ಸೌದೆ ತರಲು ತೆರಳಿದ್ದಾಗ ಮಹಿಳೆ ಮೇಲೆ ಅತ್ಯಾಚಾರ ಮಾಡಿದ್ದಾರೆ. ಚಿದಾನಂದ್ ಅತ್ಯಾಚಾರ ಮಾಡುವ ವೇಳೆ ಚೇತನ್ ವಿಡಿಯೋ ಮಾಡಿಕೊಂಡಿದ್ದಾನೆ. ನಂತರ ಈ ವಿಷಯವನ್ನು ಹೊರಗಡೆ ಹೇಳಿದ್ದರೆ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದರೆ ಎನ್ನಲಾಗಿದೆ.

    ಭಯದಿಂದ ಮಹಿಳೆ ಸುಮ್ಮನಿದ್ದರೂ ಕೆಲವು ದಿನಗಳ ಬಳಿಕ ಆರೋಪಿಗಳು ವಿಡಿಯೋ ವೈರಲ್ ಮಾಡಿದ್ದಾರೆ. ವೈರಲ್ ವಿಡಿಯೋ ವಿಚಾರ ತಿಳಿದು ಮಹಿಳೆ ಮಡಿಕೇರಿಯ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ. ದೂರು ಆಧರಿಸಿ ಅತ್ಯಾಚಾರ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದು, ಕಾನೂನು ಪ್ರಕ್ರಿಯೆಗೆ ಒಳಪಡಿಸಿದ್ದಾರೆ.

  • ‘ಯಾವ ಹಾಲಿವುಡ್ ಹೀರೋಗೂ ಕಮ್ಮಿ ಇಲ್ಲ’- ಕಿಚ್ಚನ ಖಡಕ್ ಲುಕ್‍ಗೆ ಅಭಿಮಾನಿಗಳು ಫಿದಾ

    ‘ಯಾವ ಹಾಲಿವುಡ್ ಹೀರೋಗೂ ಕಮ್ಮಿ ಇಲ್ಲ’- ಕಿಚ್ಚನ ಖಡಕ್ ಲುಕ್‍ಗೆ ಅಭಿಮಾನಿಗಳು ಫಿದಾ

    ಬೆಂಗಳೂರು: ಚಂದನವನದ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಖಡಕ್ ಲುಕ್ ಹಾಗೂ ಬೇರ್ ಬಾಡಿ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿವೆ.

    ಸುದೀಪ್ ಅವರು ಪೈಲ್ವಾನ್ ಸಿನಿಮಾದ ಸಮಯದಲ್ಲಿ ತಮ್ಮ ದೇಹವನ್ನು ದಂಡಿಸಿ ಖಡಕ್ ಬಾಡಿ ಮಾಡಿದ್ದರು. ಈಗ ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದ್ದು, ಟ್ವಿಟ್ಟರ್ ನಲ್ಲಿ ಟ್ರೆಂಡ್ ಆಗುತ್ತಿವೆ.

    ಕಿಚ್ಚನ ಖಡಕ್ ಲುಕ್ ಇರುವ ಈ ಫೋಟೋಗಳನ್ನು ಹಂಚಿಕೊಂಡಿರುವ ನಿರ್ದೇಶಕ ಪವನ್ ಒಡೆಯರ್, ಬಹಳ ಚೆನ್ನಾಗಿದೆ ಹಾಗೂ ಸ್ಫೂರ್ತಿದಾಯಕವಾಗಿದೆ. ಕಿಚ್ಚ ಸುದೀಪ್ ಸರ್ ನಿಮ್ಮ ಈ ಉತ್ಸಾಹ ನಮಗೆ ಪ್ರೇರಣೆ ಎಂದು ಬರೆದುಕೊಂಡಿದ್ದಾರೆ. ಇದಕ್ಕೆ ಕಿಚ್ಚ ಸುದೀಪ್ ಅವರು ಕೂಡ ರೀಪ್ಲೈ ಮಾಡಿದ್ದು, ನಾನು ಇನ್ನೊಬ್ಬರಿಗೆ ಸ್ಫೂರ್ತಿ ಆಗುತ್ತೇನೆ ಎಂದರೆ ನನಗೂ ಖುಷಿಯಾಗುತ್ತದೆ. ಲವ್ ಯೂ ಸ್ನೇಹಿತ ಎಂದು ಬರೆದುಕೊಂಡಿದ್ದಾರೆ.

    ಕಿಚ್ಚನ ಈ ಫೋಟೋಗಳನ್ನು ನೋಡಿ ಅವರ ಅಭಿಮಾನಿಗಳು ಫಿದಾ ಆಗಿದ್ದಾರೆ. ಜೊತೆಗೆ ಈ ಫೋಟೋಗೆ ಅಸ್ಸಾಂ ರಾಜ್ಯದ ಕಿಚ್ಚ ಸುದೀಪ್ ಅಭಿಮಾನಿಯೋರ್ವ ಕಮೆಂಟ್ ಮಾಡಿದ್ದು, ನಾನು ನಿಮ್ಮ ದೊಡ್ಡ ಅಭಿಮಾನಿ ಸರ್, ಅಸ್ಸಾಂನಿಂದ ನಿಮಗೆ ತುಂಬು ಹೃದಯದ ಪ್ರೀತಿ ಎಂದು ಬರೆದುಕೊಂಡಿದ್ದಾರೆ. ಇನ್ನೂ ಕೆಲ ಅಭಿಮಾನಿಗಳು ನೀವು ಯಾವ ಹಾಲಿವುಡ್ ಹೀರೋಗೂ ಕಮ್ಮಿ ಇಲ್ಲ ಸರ್ ಎಂದು ಕಮೆಂಟ್ ಮಾಡಿದ್ದಾರೆ.

    ಕಳೆದ ವರ್ಷ ಸೆಪ್ಟಂಬರ್ ನಲ್ಲಿ ತೆರೆಕಂಡ ಪೈಲ್ವಾನ್ ಚಿತ್ರಕ್ಕಾಗಿ ಸುದೀಪ್ ಅವರು ತನ್ನ ದೇಹವನ್ನು ದಂಡಿಸಿದ್ದರು. ಈ ಸಿನಿಮಾದಲ್ಲಿ ಕಿಚ್ಚ ಕುಸ್ತಿಪಟು ಮತ್ತು ಬಾಕ್ಸರ್ ಪಾತ್ರದಲ್ಲಿ ನಟಿಸಿದ್ದರು. ಇದಾದ ನಂತರ ಇದೇ ಸಮಯದಲ್ಲಿ ಅವರು ಬಾಲಿವುಡ್‍ನಲ್ಲಿ ಸಲ್ಮಾನ್ ಖಾನ್ ಅವರು ಜೊತೆ ದಬಾಂಗ್-3 ಸಿನಿಮಾದಲ್ಲಿ ನಟಿಸಿದ್ದರು. ಈ ಸಿನಿಮಾದಲ್ಲಿ ಕಿಚ್ಚ ಬೇರ್ ಬಾಡಿಯಲ್ಲಿ ಸಲ್ಲು ಜೊತೆ ಫೈಟ್ ಮಾಡಿ ಸೈ ಎನಿಸಿಕೊಂಡಿದ್ದರು.

    ಸದಾ ಸಾಮಾಜಿಕ ಜಾಲತಾಣಲದಲ್ಲಿ ಸಕ್ರಿಯವಾಗಿ ಇರುವ ಕಿಚ್ಚ ಸುದೀಪ್ ಅವರು, ನೆನ್ನೆ ಅವರ ಅಪ್ಪ-ಅಮ್ಮ ಮದುವೆ ವಾರ್ಷಿಕೋತ್ಸವಕ್ಕೆ ಭಾವನಾತ್ಮಕ ಸಾಲುಗಳನ್ನು ಬರೆದುಕೊಂಡಿದ್ದರು. ಜೊತೆಗೆ ಅವರ ಫ್ಯಾನ್ಸ್‍ಗಳ ಹುಟ್ಟುಹಬ್ಬಕ್ಕೆ ಕೂಡ ವಿಶ್ ಮಾಡುತ್ತಾರೆ. ಕಿಚ್ಚನ ಅಭಿಮಾನಿ ಬಳಗದಿಂದ ಲಾಕ್‍ಡೌನ್ ಸಮಯದಲ್ಲಿ ಬಡವರಿಗೆ ಸಹಾಯ ಮಾಡುತ್ತಿರುವವರಿಗೆ ಟ್ವಿಟ್ಟರ್ ಮೂಲಕವೇ ಹುರಿದುಂಬಿಸುವ ಕೆಲಸ ಮಾಡುತ್ತಾರೆ.

    ಸದ್ಯ ಕಿಚ್ಚ ಸುದೀಪ್ ಅಭಿನಯದ ಕೋಟಿಗೊಬ್ಬ-3 ಸಿನಿಮಾ ಬಿಡುಗಡೆಗೆ ತಯಾರಾಗಿದೆ. ಆದರೆ ಕೊರೊನಾ ಲಾಕ್‍ಡೌನ್ ಆದ ಕಾರಣ ಚಿತ್ರದ ಬಿಡುಗಡೆಯ ದಿನಾಂಕ ಮುಂದಕ್ಕೆ ಹೋಗಿದೆ. ಇದರಲ್ಲಿ ಕಿಚ್ಚನಿಗೆ ಜೋಡಿಯಾಗಿ ಮಡೋನಾ ಸೆಬಾಸ್ಟಿಯನ್ ನಟಿಸಿದ್ದಾರೆ. ಈ ಸಿನಿಮಾದ ನಂತರ ಕಿಚ್ಚ ಅನೂಪ್ ಬಂಡಾರಿ ನಿರ್ದೇಶನದ ಫ್ಯಾಂಟಮ್ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ಫಸ್ಟ್ ಲುಕ್ ಈಗಾಗಲೇ ಬಿಡುಗಡೆಯಾಗಿದೆ.

  • ಪಾಕ್ ಕ್ರಿಕೆಟಿಗನ ಜೊತೆ ತಮನ್ನಾ ವಿವಾಹ – ಸ್ಪಷ್ಟನೆ ಕೊಟ್ಟ ಮಿಲ್ಕಿ ಬ್ಯೂಟಿ

    ಪಾಕ್ ಕ್ರಿಕೆಟಿಗನ ಜೊತೆ ತಮನ್ನಾ ವಿವಾಹ – ಸ್ಪಷ್ಟನೆ ಕೊಟ್ಟ ಮಿಲ್ಕಿ ಬ್ಯೂಟಿ

    ಬೆಂಗಳೂರು: ಸೌತ್ ಸಿನಿಮಾರಂಗದ ಮಿಲ್ಕಿ ಬ್ಯೂಟಿ ತಮನ್ನಾ ಭಾಟಿಯಾ ಪಾಕಿಸ್ತಾನದ ಕ್ರಿಕೆಟರ್ ಒಬ್ಬರನ್ನು ಮದುವೆಯಾಗುತ್ತಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸಖತ್ ಸುದ್ದಿಯಾಗಿತ್ತು. ಈಗ ಇದಕ್ಕೆ ಸ್ವತಃ ತಮನ್ನಾ ಅವರೇ ಸ್ಪಷ್ಟನೇ ನೀಡಿದ್ದಾರೆ.

    ಸದ್ಯ ದಕ್ಷಿಣ ಭಾರತದ ಚಿತ್ರರಂಗದಲ್ಲಿ ಟಾಪ್ ನಟಿಯಗಿರುವ ತಮನ್ನಾ ಅವರು ಬಾಲಿವುಡ್‍ನಲ್ಲೂ ನಟಿಸುತ್ತಿದ್ದಾರೆ. ಹಾಗಾಗಿ ಟೆನ್ನಿಸ್ ತಾರೆ ಸಾನಿಯಾ ಮಿರ್ಜಾ ಅವರ ನಂತರ ತಮ್ಮನ್ನಾ ಪಾಕ್ ಕ್ರಿಕೆಟಿಗನನ್ನು ಮದುವೆಯಾಗುತ್ತಾರೆ ಎಂಬ ಸುದ್ದಿ ಸಖತ್ ವೈರಲ್ ಆಗಿತ್ತು. ಇದಕ್ಕೆ ಸ್ಪಷ್ಟನೆ ನೀಡಿರುವ ತಮನ್ನಾ ಇದು ಶುದ್ಧ ಸುಳ್ಳು ಎಂದು ಹೇಳಿದ್ದಾರೆ.

    ತಮನ್ನಾ ಅವರ ಜೊತೆ ಥಳಕು ಹಾಕಿಕೊಂಡ ಪಾಕ್ ಕ್ರಿಕೆಟಿಗನನ್ನು ನೋಡಿದರೆ ಅದು ಮಾಜಿ ಆಟಗಾರ ಅಬ್ದುಲ್ ರಜಾಕ್, ಆರೇ ಅಬ್ದುಲ್ ರಜಾಕ್ ಅವರು ಮದುವೆಯಾಗಿದ್ದಾರೆ. ಹೀಗಿರುವಾಗ ಅವರನ್ನು ಯಾಕೆ ತಮನ್ನಾ ಮದುವೆಯಾಗುತ್ತಾರೆ ಎಂದು ಕೆಲ ಅಭಿಮಾನಿಗಳು ಪ್ರಶ್ನೆ ಮಾಡಿದ್ದಾರೆ. ತಮ್ಮನ್ನಾ ಮತ್ತು ರಜಾಕ್ ಜೊತೆಗಿರುವ ಒಂದು ಫೋಟೋವನ್ನು ಕಿಡಿಗೇಡಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದು, ಈ ರೀತಿಯ ಸುಳ್ಳು ಸುದ್ದಿ ಹಬ್ಬಲು ಕಾರಣವಾಗಿದೆ.

    ಈ ಫೋಟೋದಲ್ಲಿ ತಮನ್ನಾ ಮತ್ತು ರಜಾಕ್ ಅವರು ಪಕ್ಕಪಕ್ಕದಲ್ಲಿ ನಿಂತಿದ್ದಾರೆ. ಇದರಲ್ಲಿ ರಜಾಕ್ ಅವರು ಕೆಲ ಆಭರಣಗಳು ಹಿಡಿದುಕೊಂಡಿದ್ದಾರೆ. ಪಕ್ಕದಲ್ಲೇ ಬಿಳಿ ಬಣ್ಣದ ಚೂಡಿದಾರ್ ತೊಟ್ಟು ನಿಂತಿರುವ ತಮನ್ನಾ ಅವರು ಆ ಆಭರಣಗಳನ್ನು ನೋಡುತ್ತಿದ್ದಾರೆ. ಈ ಹಳೇ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವ ಕಿಡಿಗೇಡಿಗಳು. ಸಾನಿಯಾ ಮಿರ್ಜಾ ನಂತರ ತಮನ್ನಾ ಪಾಕ್ ಕ್ರಿಕೆಟಿಗರನ್ನು ಮದುವೆಯಾಗುತ್ತಿದ್ದಾರೆ ಎಂದು ಸುಳ್ಳು ಸುದ್ದಿ ಹಬ್ಬಿಸಿದ್ದಾರೆ.

    ಈ ಸುಳ್ಳು ಸುದ್ದಿ ಕೇಳಿ ಕೋಪಗೊಂಡ ತಮನ್ನಾ ಖಾರವಾಗಿಯೇ ಪ್ರತಿಕ್ರಿಯೆ ನೀಡಿದ್ದು, ನಾನು ಯಾವ ಪಾಕ್ ಆಟಗಾರರನ್ನು ಮದುವೆಯಾಗುತ್ತಿಲ್ಲ. ನಾನು ರಜಾಕ್ ಅವರನ್ನು ಭೇಟಿಯಾಗಿದ್ದು ನಿಜ. ಒಂದು ಆಭರಣ ಮಳಿಗೆಯ ಉದ್ಘಾಟನ ಸಮಾರಂಭದಲ್ಲಿ ನಾನು ಅವರನ್ನು ಭೇಟಿ ಮಾಡಿದ್ದೆ. ಇದು ಹಳೆಯ ಫೋಟೋ ಈ ಫೋಟೋವನ್ನು ಈಗ ಯಾರೋ ವೈರಲ್ ಮಾಡಿದ್ದಾರೆ. ನನ್ನ ಮದುವೆಯ ಬಗ್ಗೆ ನಾನೇ ಹೇಳಿಕೊಳ್ಳುತ್ತೇನೆ ವದಂತಿಗಳನ್ನು ನಂಬಬೇಡಿ ಎಂದು ಗಾಳಿ ಸುದ್ದಿಗೆ ತೆರೆ ಎಳೆದಿದ್ದಾರೆ.

    ಯಶ್ ಜೊತೆ ತಮನ್ನಾ ಸಿನಿಮಾ
    ಇತ್ತೀಚೆಗೆ ರಾಕಿಂಗ್ ಸ್ಟಾರ್ ಯಶ್ ಅವರ ಜೊತೆ ತಮನ್ನಾ ಅವರು ಸಿನಿಮಾ ಮಾಡುತ್ತಾರೆ ಎಂಬ ಮಾತುಗಳು ಜೋರಾಗಿ ಕೇಳಿ ಬರುತ್ತಿವೆ. ಮಫ್ತಿ ಸಿನಿಮಾವನ್ನು ನಿರ್ದೇಶನ ಮಾಡಿದ್ದ ನರ್ತನ್ ಈ ಸಿನಿಮಾವನ್ನು ನಿರ್ದೇಶನ ಮಾಡಲಿದ್ದು, ತಮನ್ನಾ ಮತ್ತು ಯಶ್ ಈ ಚಿತ್ರದಲ್ಲಿ ನಟಿಸುತ್ತಾರೆ ಎಂದು ಸುದ್ದಿಯಾಗಿದೆ. ಆದರೆ ಈ ಬಗ್ಗೆ ಯಾರೂ ಕೂಡ ಅಧಿಕೃತವಾಗಿ ಘೋಷಣೆ ಮಾಡಿಕೊಂಡಿಲ್ಲ.

  • ಸತ್ತಿಲ್ಲ ಬದುಕಿದ್ದಾನೆ ಸರ್ವಾಧಿಕಾರಿ ಕಿಮ್- ಉಹಾಪೋಹದ ಬಳಿಕ ಕಾಣಿಸಿಕೊಂಡ ಹುಚ್ಚುದೊರೆ

    ಸತ್ತಿಲ್ಲ ಬದುಕಿದ್ದಾನೆ ಸರ್ವಾಧಿಕಾರಿ ಕಿಮ್- ಉಹಾಪೋಹದ ಬಳಿಕ ಕಾಣಿಸಿಕೊಂಡ ಹುಚ್ಚುದೊರೆ

    ಸಿಯೋಲ್: ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್ ಜಾಂಗ್-ಉನ್ ಬಹಳ ದಿನಗಳ ನಂತರ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾನೆ. ಈ ಮೂಲಕ ತನ್ನ ಆರೋಗ್ಯದ ಬಗ್ಗೆ ಇದ್ದ ಉಹಾಪೋಹಗಳಿಗೆ ತೆರೆ ಎಳೆದಿದ್ದಾನೆ.

    ಏಪ್ರಿಲ್ 11ರ ನಂತರ ಕಿಮ್ ಜಾಂಗ್-ಉನ್ ಸಾರ್ವಜನಿಕವಾಗಿ ಎಲ್ಲೂ ಕಾಣಿಸಿಕೊಂಡಿರಲಿಲ್ಲ. ಈ ಕಾರಣಕ್ಕೆ ಕಿಮ್ ಆರೋಗ್ಯ ಸ್ಥಿತಿ ಹದಗೆಟ್ಟಿದ್ದು, ಆತ ಸಾವನ್ನಪ್ಪಿರಬಹುದು ಎಂದು ರಾಷ್ಟ್ರೀಯ ಮಾಧ್ಯಮಗಳು ಸುದ್ದಿ ಮಾಡಿದ್ದವು. ಆದರೆ ಕಿಮ್ ಇಂದು ತನ್ನ ದೇಶದಲ್ಲಿ ಸಾರ್ವಜನಿಕವಾಗಿ ಕಾಣಿಸಿಕೊಳ್ಳುವ ಮೂಲಕ ಈ ಎಲ್ಲ ಗಾಳಿ ಸುದ್ದಿಗಳಿಗೂ ಬ್ರೇಕ್ ಹಾಕಿದ್ದಾನೆ.

    ಕಿಮ್ ತನ್ನ ಸಹೋದರಿ ಮತ್ತು ತನ್ನ ಅಪ್ತ ಅಧಿಕಾರಿಗಳೊಂದಿಗೆ ಇಂದು ಕಾಣಿಸಿಕೊಂಡಿದ್ದು, ತನ್ನ ದೇಶದಲ್ಲಿ ಆರಂಭವಾದ ನೂತನ ರಸಗೊಬ್ಬರ ಕಾರ್ಖಾನೆಯನ್ನು ಟೇಪ್ ಕತ್ತರಿಸುವ ಮೂಲಕ ಓಪನ್ ಮಾಡಿದ್ದಾನೆ. ಜೊತೆಗೆ ಶುಕ್ರವಾರವೇ ಕಿಮ್ ಹೊರಗೆ ಬಂದಿದ್ದು, ತನ್ನ ದೇಶದ ರಾಜಧಾನಿ ಪ್ಯೊಂಗ್ಯಾಂಗ್ ಬಳಿಯ ಸುನ್‍ಚಾನ್‍ನಲ್ಲಿ ಒಂದು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಎಂದು ತಿಳಿದು ಬಂದಿದೆ.

    ಇದೇ ವೇಳೆ ರಸಗೊಬ್ಬರ ಕಾರ್ಖಾನೆ ಓಪನ್ ಮಾಡಿ ಮಾತನಾಡಿದ ಕಿಮ್ ಜಾಂಗ್-ಉನ್, ಆಧುನಿಕ ರಸಗೊಬ್ಬರ ಕಾರ್ಖಾನೆಯನ್ನು ನಿರ್ಮಿಸುವುದು ನಮ್ಮೆಲ್ಲರ ಕನಸಾಗಿತ್ತು. ಈ ಸುದ್ದಿ ಕೇಳಿದರೆ ನಮ್ಮ ಅಜ್ಜ ಕಿಮ್ ಇಲ್ ಸುಂಗ್ ಮತ್ತು ಅಪ್ಪ ಕಿಮ್ ಜಾಂಗ್ ಇಲ್ ಬಹಳ ಸಂತೋಷ ಪಡುತ್ತಿದ್ದರು ಎಂದು ಹೇಳಿದನು ಎಂದು ರಾಷ್ಟ್ರೀಯ ಮಾಧ್ಯಮವೊಂದು ವರದಿ ಮಾಡಿದೆ. ಈ ಕಾರ್ಯಕ್ರಮದ ನಂತರ ತಕ್ಷಣ ಆತನ ಫೋಟೋಗಳು ರಿಲೀಸ್ ಆಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ.

    ಈ ವಿಚಾರವಾಗಿ ವಾರದ ಹಿಂದೆ ಮಾತನಾಡಿದ್ದ ಉತ್ತರ ಕೊರಿಯಾದ ಭದ್ರತಾ ಸಲಹೆಗಾರ ಮೂನ್ ಜೇ-ಇನ್, ಕಿಮ್ ಜಾಂಗ್-ಉನ್ ಜೀವಂತವಾಗಿ ಇದ್ದಾರೆ. ಚೆನ್ನಾಗಿ ಇದ್ದಾರೆ. ಅವರು ಏಪ್ರಿಲ್ 13ರಿಂದ ಉತ್ತರ ಕೊರಿಯಾದ ಪೂರ್ವದಲ್ಲಿರುವ ರೆಸಾರ್ಟ್ ಪಟ್ಟಣವಾದ ವೊನ್ಸಾನ್‍ನಲ್ಲಿ ತಂಗಿದ್ದರು ಎಂದು ಹೇಳಿದ್ದರು. ಆದರೆ ಈ ಮಾಹಿತಿಯನ್ನು ಒಪ್ಪದ ರಾಷ್ಟ್ರೀಯ ಮಾಧ್ಯಮಗಳು ಕಿಮ್ ಆರೋಗ್ಯ ಸರಿಯಿಲ್ಲ. ಆತ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾನೆ ಎಂದು ವರದಿ ಮಾಡಿದ್ದವು.

    ಕಿಮ್ ಆರೋಗ್ಯದ ಬಗ್ಗೆ ಅನುಮಾನ ಬರಲು ಕಾರಣವೇನು?
    ಕಿಮ್ ಜಾಂಗ್-ಉನ್ ಸರ್ವಾಧಿಕಾರಿಯಾಗಿದ್ದು, ಹೆಚ್ಚು ಹೆಚ್ಚು ಮಾಧ್ಯಮಗಳ ಮುಂದೆ ಕಾಣಿಸಿಕೊಳ್ಳುತ್ತಿದ್ದನು. ಆದರೆ ಏಪ್ರಿಲ್ 11ರ ನಂತರ ಕಿಮ್ ಜಾಂಗ್-ಉನ್ ಎಲ್ಲಿಯೂ ಸಾರ್ವಜನಿಕವಾಗಿ ಕಾಣಿಸಿಕೊಂಡಿಲ್ಲ. ವರದಿಗಳ ಪ್ರಕಾರ ಕಿಮ್ ಏಪ್ರಿಲ್ 15 ರಂದು ನಡೆದ ತನ್ನ ಅಜ್ಜ ಮತ್ತು ಉತ್ತರ ಕೊರಿಯಾ ಸಂಸ್ಥಾಪಕ ಕಿಮ್ ಇಲ್ ಸುಂಗ್ ಅವರ ಹುಟ್ಟುಹಬ್ಬದ ಆಚರಣೆಗೂ ಗೈರು ಹಾಜರಾಗಿದ್ದನು. ಅಧಿಕಾರಕ್ಕೆ ಏರಿದ ಬಳಿಕ ಇಲ್ಲಿಯವರೆಗೆ ಈ ಕಾರ್ಯಕ್ರಮಕ್ಕೆ ಗೈರಾಗಿರಲಿಲ್ಲ. ಈ ಕಾರಣದಿಂದ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿತ್ತು.

    ಕಿಮ್ ಜಾಂಗ್-ಉನ್ ಚೈನ್ ಸ್ಮೋಕರ್ ಆಗಿದ್ದು, ಆತನ ದೇಹದ ತೂಕ ಜಾಸ್ತಿಯಾಗಿದೆ. ಜೊತೆಗೆ ಕುಟುಂಬ ಈ ಹಿಂದೆಯಿಂದಲೂ ಹೃದಯರಕ್ತನಾಳದ ಸಮಸ್ಯೆಯನ್ನು ಬಳಲಿದ್ದ ಇತಿಹಾಸವನ್ನು ಹೊಂದಿದೆ ಎಂದು ವರದಿಯಾಗಿದೆ. ಈ ಕಾರಣದಿಂದ ಆತನ ಆರೋಗ್ಯ ಹದಗೆಟ್ಟಿದ್ದು ಆತ ಸಾವನ್ನಪ್ಪಿರಬಹುದು ಎಂದು ಹೇಳಲಾಗಿತ್ತು. ಈ ನಡುವೆ ಚೀನಾದಿಂದ ಉನ್ನತ ವೈದ್ಯರ ತಂಡ ಉತ್ತರ ಕೊರಿಯಾಗೆ ಹೋಗಿದ್ದು, ಆತನಿಗೆ ಚಿಕಿತ್ಸೆ ನೀಡುತ್ತಿದೆ ಎಂದು ಹೇಳಲಾಗಿತ್ತು.

  • ಸ್ಟೇ ಹೋಂ, ಸ್ಟೇ ಫಿಟ್ – ಪವರ್‌ಸ್ಟಾರ್ ಫಿಟ್ನೆಸ್‍ಗೆ ನೆಟ್ಟಿಗರು ಫಿದಾ

    ಸ್ಟೇ ಹೋಂ, ಸ್ಟೇ ಫಿಟ್ – ಪವರ್‌ಸ್ಟಾರ್ ಫಿಟ್ನೆಸ್‍ಗೆ ನೆಟ್ಟಿಗರು ಫಿದಾ

    ಬೆಂಗಳೂರು: ಚಂದನವದ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರ ಫಿಟ್ನೆಸ್ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ.

    ನಮ್ಮ ಸ್ಯಾಂಡಲ್‍ವುಡ್‍ನಲ್ಲಿ ಫಿಟ್ನೆಸ್, ಡ್ಯಾನ್ಸ್ ಹಾಗೂ ಫೈಟ್ ಹೀಗೆ ಎಲ್ಲದಕ್ಕೂ ಸೈ ಅನ್ನುವ ನಟರಲ್ಲಿ ಪುನೀತ್ ರಾಜ್‍ಕುಮಾರ್ ಅವರು ಮುಂಚೂಣಿಗೆ ಬರುತ್ತಾರೆ. ವಯಸ್ಸು 45 ಅದರೂ ದೇಹದಲ್ಲಿ ಮೂಳೆಯೇ ಇಲ್ಲ ಎಂಬತೆ ಡ್ಯಾನ್ಸ್ ಮಾಡುವ ಅಪ್ಪು ದೇಹ ದಂಡಿಸುವ ವಿಚಾರದಲ್ಲೂ ಯಾವಾಗಲೂ ಮುಂದೆ ಇರುತ್ತಾರೆ. ಹಾಗೆಯೇ ಲಾಕ್‍ಡೌನ್ ಸಮಯದಲ್ಲಿ ಅಪ್ಪು ಮನೆಯಲ್ಲೇ ಕಸರತ್ತು ಮಡುತ್ತಿದ್ದಾರೆ. ಇದರ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟಯ ವೈರಲ್ ಆಗುತ್ತಿದ್ದು, ಅಪ್ಪು ದೇಹದಂಡನೆಗೆ ನೆಟ್ಟಿಗರು ಫಿದಾ ಆಗಿದ್ದಾರೆ.

    https://twitter.com/SanthoshAnand15/status/1253014574057439232

    ಅಪ್ಪು ಅವರ ಈ ಕಸರತ್ತಿನ ವಿಡಿಯೋವನ್ನು ಶೇರ್ ಮಾಡಿಕೊಂಡಿರುವ ನಿರ್ದೇಶಕ ಸಂತೋಷ್ ಅನಂದ್‍ರಾಮ್, `ಪವರ್ ಸ್ಟಾರ್` ಎಂಬ ಬಿರುದು ಶಿವಣ್ಣ ಕೊಟ್ಟಿದ್ದಕ್ಕೂ, ಅಭಿಮಾನಿಗಳು ಎದೆಯಲ್ಲಿಟ್ಟುಕೊಂಡು ಹಚ್ಚೆ ಹಾಕಿಸಿಕೊಂಡಿದ್ದಕ್ಕೂ, ಕರ್ನಾಟಕ ಜನತೆಯು ಪ್ರೀತಿಯಿಂದ ಕರೆಯುವುದಕ್ಕೂ ಸಾರ್ಥಕವಾಗಿದೆ. ಪವರ್ ಸ್ಟಾರ್ 45ರ ವಯಸ್ಸಿನಲ್ಲೂ ಕಾಲೇಜು ಯುವಕನ ಪಾತ್ರ ಮಾಡುವಷ್ಟು ಫಿಟ್ ಆಗಿ ಇದ್ದಾರೆ ಎಂದು ಬರೆದುಕೊಂಡಿದ್ದಾರೆ.

    https://www.instagram.com/p/B_SJuXJpbFd/

    ಕೇವಲ 17 ಸೆಕೆಂಡ್ ಇರುವ ಪುನೀತ್ ಅವರ ಈ ವಿಡಿಯೋದಲ್ಲಿ ಅಪ್ಪು ಜಿಗಿದು ಬಂದು ಲೆಗ್ ಪಂಚ್ ಜೊತೆಗೆ ಬ್ಯಾಕ್‍ಫ್ಲಿಪ್ ಹೊಡೆದಿದ್ದಾರೆ. ಈಗ ವಿಡಿಯೋ ಟ್ವಿಟ್ಟರ್ ನಲ್ಲಿ ಟ್ರೆಂಡ್ ಆಗುತ್ತಿದೆ. ಈ ವಿಡಿಯೋವನ್ನು ಅಪ್ಪು ಕೂಡ ತಮ್ಮ ಇನ್‍ಸ್ಟಾದಲ್ಲಿ ಹಂಚಿಕೊಂಡಿದ್ದು, ಸ್ಟೇ ಹೋಂ, ಸ್ಟೇ ಸೇಫ್, ಸ್ಟೇ ಫಿಟ್ ಎಂದು ಬರೆದುಕೊಂಡಿದ್ದಾರೆ. ವಿಡಿಯೋದಲ್ಲಿ ಪವರ್ ಸ್ಟಾರ್ ಫಿಟ್ನೆಸ್ ನೋಡಿದ ಅವರ ಅಭಿಮಾನಿಗಳು ಪವರ್ ಸ್ಟಾರ್ ಎಂಬ ಬಿರುದು ಇವರಿಗೆ ಮಾತ್ರ ಸೂಟ್ ಆಗುತ್ತದೆ ಎಂದು ಕಮೆಂಟ್ ಮಾಡಿದ್ದಾರೆ.

    ಸದ್ಯ ಲಾಕ್‍ಡೌನ್ ನಡುವೆ ಮನೆಯಲ್ಲೇ ಕುಟುಂಬದವರ ಜೊತೆ ಕಾಲಕಳೆಯುತ್ತಿರುವ ಪವರ್ ಸ್ಟಾರ್ ಸಾಮಾಜಿಕ ಜಾಲತಾಣದಲ್ಲಿ ಸಖತ್ ಸಕ್ರಿಯವಾಗಿ ಇದ್ದಾರೆ. ಜೊತೆಗೆ ಮನೆಯಲ್ಲೇ ಕುಳಿತು ತಮ್ಮ ಅಭಿಮಾನಿಗಳಿಗೆ ಕೊರೊನಾ ಬಗ್ಗೆ ಜಾಗೃತಿ ಮೂಡಿಸುವ ಕೆಲಸವನ್ನು ಕೂಡ ಮಾಡುತ್ತಿದ್ದಾರೆ. ಇದರ ಜೊತೆಗೆ ಕೊರೊನಾ ಸಿಎಂ ಪರಿಹಾರ ನಿಧಿಗೆ ಪುನೀತ್ ಅವರು 50 ಲಕ್ಷ ದೇಣಿಗೆ ಕೂಡ ನೀಡಿದ್ದರು.

    https://www.instagram.com/p/B9sw1Y7pxwc/

    ಕೊರೊನಾ ವಿಚಾರವಾಗಿ ಮಾರ್ಚ್ 17 ರಂದು ಇದ್ದ ಅವರ ಹುಟ್ಟುಹಬ್ಬವನ್ನು ಕೂಡ ಅಪ್ಪು ಅಚರಿಸಿಕೊಂಡಿರಲಿಲ್ಲ. ಜೊತೆಗೆ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳದ ಬಗ್ಗೆ ಟ್ವಿಟ್ಟರಿನಲ್ಲಿ ವಿಡಿಯೋ ಅಪ್ಲೋಡ್ ಮಾಡಿದ್ದ ಅಪ್ಪು, “ಎಲ್ಲಾ ಸಮಸ್ತ ಅಭಿಮಾನಿ ದೇವರುಗಳಿಗೆ ನಮಸ್ಕಾರ. ಈ ವರ್ಷ ನಾನು ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ. ಹೀಗಾಗಿ ಯಾರೂ 17 ರಂದು ತಮ್ಮ ತಮ್ಮ ಊರುಗಳಿಂದ ಮನೆಯ ಹತ್ತಿರ ಬರಬೇಡಿ. ನಾನು ಮನೆಯಲ್ಲೂ ಇರುವುದಿಲ್ಲ” ಎಂದು ಮನವಿ ಮಾಡಿಕೊಂಡಿದ್ದರು.

    ಪುನೀತ್ ರಾಜ್‍ಕುಮಾರ್ ಸದ್ಯ ಯುವರತ್ನ ಎಂಬ ಸಿನಿಮಾ ಮಾಡುತ್ತಿದ್ದಾರೆ. ಈ ಸಿನಿಮಾವನ್ನು ಸಂತೋಷ್ ಅನಂದ್‍ರಾಮ್ ಅವರು ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ಪುನೀತ್, ಅಪ್ಪು ಸಿನಿಮಾದ ಬಳಿಕ ಕಾಲೇಜು ಯುವಕ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಚಿತ್ರದ ಬಹುತೇಕ ಶೂಟಿಂಗ್ ಆಗಲೇ ಮುಗಿದಿದ್ದು, ಇನ್ನುಳಿದ ಚಿತ್ರೀಕರಣ ಕೊರೊನಾ ವೈರಸ್ ನಿಂದ ಮುಂದಕ್ಕೆ ಹೋಗಿದೆ.

  • ಡಿಕೆಶಿ ಕೈ ಕುಲುಕಿ ಅಭಿನಂದನೆ ಸಲ್ಲಿಸಿದ ಕುಖ್ಯಾತ ರೌಡಿ

    ಡಿಕೆಶಿ ಕೈ ಕುಲುಕಿ ಅಭಿನಂದನೆ ಸಲ್ಲಿಸಿದ ಕುಖ್ಯಾತ ರೌಡಿ

    ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೂತನ ಸಾರಥಿ ಡಿ.ಕೆ.ಶಿವಕುಮಾರ್ ಅವರಿಗೆ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. ಅಭಿನಂದನೆ ನೆಪದಲ್ಲಿ ಮಂಡ್ಯ ನಗರದ ಕುಖ್ಯಾತ ರೌಡಿಶೀಟರ್ ಒಬ್ಬ ಡಿ.ಕೆ.ಶಿವಕುಮಾರ್ ಅವರ ಕೈ ಕುಲುಕಿ ವಿಶ್ ಮಾಡುತ್ತಿರುವ ಫೋಟೋ ವೈರಲ್ ಆಗಿದೆ.

    ಬೆಂಗಳೂರಿನಲ್ಲಿ ರೌಡಿಶೀಟರ್ ಶಿವಕುಮಾರ್ ಆಲಿಯಾಸ್ ಡೇಂಜರ್ ಶಿವ ಹಾಗೂ ಕಾಂಗ್ರೆಸ್‍ನಲ್ಲಿ ಗುರುತಿಸಿಕೊಂಡಿರುವ ರೌಡಿಯ ಪತ್ನಿ ರಶ್ಮಿ ಡಿಕೆ ಶಿವಕುಮಾರ್ ಅವರಿಗೆ ಬೊಕ್ಕೆ ನೀಡಿ ಶುಭಕೋರಿದ್ದಾರೆ. ಶಿವನ ವಿರುದ್ಧ ಮಂಡ್ಯ ನಗರ ಸೇರಿದಂತೆ ವಿವಿಧ ಠಾಣೆಗಳಲ್ಲಿ ಹಲವು ಪ್ರಕರಣಗಳು ದಾಖಲಾಗಿವೆ. ಕಾಂಗ್ರೆಸ್ ಮುಖಂಡ ಹಾಗೂ ಉದ್ಯಮಿ ಎಚ್.ಪಿ.ನಾಗೇಂದ್ರ ಹತ್ಯೆ ಆರೋಪ ಪ್ರಕರಣದಲ್ಲಿ ಜೈಲುಪಾಲಾಗಿ ಜೀವಾವಧಿ ಶಿಕ್ಷೆಗೂ ಶಿವ ಒಳಗಾಗಿದ್ದ. ಕಾನೂನು ಹೋರಾಟ ನಡೆಸಿ ಅಧೀನ ನ್ಯಾಯಾಲಯ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿ ಅಲ್ಲಿ ಜಾಮೀನು ಪಡೆದು ಹೊರಬಂದಿದ್ದ.

    ಇತ್ತೀಚೆಗೆ ಮಂಡ್ಯದಲ್ಲಿ ಡೇಂಜರ್ ಶಿವ ಸೇರಿದಂತೆ 38 ರೌಡಿಗಳನ್ನು ಗಡಿಪಾರು ಮಾಡುವಂತೆ ಮಂಡ್ಯ ಪೊಲೀಸರು ಜಿಲ್ಲಾಡಳಿತಕ್ಕೆ ಶಿಫಾರಸ್ಸು ಕೂಡ ಮಾಡಿದ್ದರು. ರಾಜಕೀಯ ಒತ್ತಡ ಹಾಗೂ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯರ ಶ್ಯೂರಿಟಿ ನೀಡಿ ಗಡಿಪಾರಿನಿಂದ ಬಚಾವ್ ಆಗಿದ್ದ. ಆದರೆ ಇದೀಗ ರೌಡಿಯೊಬ್ಬ ಹಿರಿಯ ರಾಜಕಾರಣಿ ಮನೆಯಲ್ಲಿ ಕಾಣಿಸಿಕೊಂಡಿರುವುದು ಎಷ್ಟು ಸರಿ ಎಂಬ ಮಾತುಗಳು ಕೇಳಿ ಬರುತ್ತಿವೆ.