Tag: Viratpur Viragi

  • ಸಿಂಗಾಪುರದಲ್ಲಿ ‘ವಿರಾಟಪುರ ವಿರಾಗಿ’ ಶೋ: ಮೂಕವಿಸ್ಮಿತರಾದ ಪ್ರೇಕ್ಷಕರು

    ಸಿಂಗಾಪುರದಲ್ಲಿ ‘ವಿರಾಟಪುರ ವಿರಾಗಿ’ ಶೋ: ಮೂಕವಿಸ್ಮಿತರಾದ ಪ್ರೇಕ್ಷಕರು

    ನ್ನಡ ಸಂಘ ಸಿಂಗಾಪುರ (Singapore) ಆಯೋಜಿಸಿದ್ದ, ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಬಿ.ಎಸ್. ಲಿಂಗದೇವರು (BS Lingadevaru) ನಿರ್ದೇಶನದ ‘ವಿರಾಟಪುರ ವಿರಾಗಿ’ (Viratpura Viragi) ಸಿನಿಮಾದ ಪ್ರದರ್ಶನ ಅತ್ಯಂತ ಯಶಸ್ವಿಯಾಗಿ ನೆರವೇರಿತು. ಸಿನಿಮಾ ಪ್ರದರ್ಶನದ ನಂತರ ಪ್ರೇಕ್ಷಕರು ಭಾವುಕರಾಗಿದ್ದರು. ಹಾನಗಲ್ ಕುಮಾರಸ್ವಾಮಿಗಳ ಚರಿತೆಯನ್ನು ಕಣ್ತುಂಬಿಕೊಂಡು ಪುಳಕಿತರಾಗಿದ್ದರು.

    ಸಿಂಗಾಪುರ ಕನ್ನಡ ಸಂಘವು ಈ ಬಾರಿ ವಚನಾಂಜಲಿಯನ್ನು ವಿಶೇಷವಾಗಿ ಆಯೋಜಿಸಿತ್ತು. ಇದರ ಭಾಗವಾಗಿ ಶಿವಯೋಗಿಗಳಾದ ಶ್ರೀ ಹಾನಗಲ್ ಕುಮಾರಸ್ವಾಮಿಯವರ ಜೀವನಾಧಾರಿತ ಚಲನಚಿತ್ರ ‘ವಿರಾಟಪುರ ವಿರಾಗಿ’ಯ ಪ್ರದರ್ಶನವನ್ನು ಏರ್ಪಡಿಸಿ, ಅಲ್ಲಿನ ಕನ್ನಡಿಗರಿಗೆ ಕುಮಾರಸ್ವಾಮಿಗಳ ಚರಿತೆಯನ್ನು ತಿಳಿಸಿದ್ದು ವಿಶೇಷವಾಗಿತ್ತು. ಈ ಪ್ರದರ್ಶನದಲ್ಲಿ ನಿರ್ದೇಶಕರಾದ ಲಿಂಗದೇವರು, ಕುಮಾರಸ್ವಾಮಿಗಳ ಪಾತ್ರ ಮಾಡಿದ್ದ ಸುಚೇಂದ್ರ ಪ್ರಸಾದ್ (Suchendra Prasad)  ಭಾಗಿಯಾಗಿದ್ದರು.

    ಜನಸಾಮಾನ್ಯರ ಬದುಕನ್ನು ಉನ್ನತಗೊಳಿಸಲು ಹನ್ನೆರಡನೆಯ ಶತಮಾನದ ಶಿವಶರಣರು ಶ್ರಮಿಸಿರುವುದು ನಮಗೆಲ್ಲಾ ತಿಳಿದೇ ಇದೆ. ಶರಣರು ಸಾಹಿತ್ಯ ರಚಿಸಬೇಕೆಂಬ ಉದ್ದೇಶದಿಂದ ವಚನಗಳನ್ನು ಬರೆಯದೆ ದಿನನಿತ್ಯದ ತಮ್ಮ ಅನುಭವಗಳನ್ನು ವಚನದ ರೂಪದಲ್ಲಿ ಹೇಳಿದ್ದರಿಂದ ವಚನ ಸಾಹಿತ್ಯ ಒಂದು ಚಳಿವಳಿಯಾಯಿತು ಎಂಬುದು ಇತಿಹಾಸ. ವರ್ಣ-ಆಧಾರಿತ, ಜಾತಿ ಆಧಾರಿತ, ಲಿಂಗ-ಆಧಾರಿತ ಅಸಮಾನತೆಯನ್ನು ನಿರ್ಮೂಲಗೊಳಿಸಿ ಸರ್ವ ಸಮಾನತೆಯ ಸಮಾಜ ನಿರ್ಮಾಣಕ್ಕೆ ನಾಂದಿ ಹಾಡಿದವರು ಶಿವ ಶರಣರು. ಈ ಹಿನ್ನಲೆಯಲ್ಲಿ ಶ್ರೀ ಹಾನಗಲ್ ಕುಮಾರಸ್ವಾಮಿಯವರು ಎಲ್ಲರನ್ನು ಒಳಗೊಳ್ಳುವ ಮತ್ತು ಬಹುತ್ವ ಪರಂಪರೆಗೆ ಒತ್ತುಕೊಟ್ಟು ಸಮಸಮಾಜ ನಿರ್ಮಿಸಲು ಸ್ವಾತಂತ್ರ್ಯಪೂರ್ವದಲ್ಲಿ ಶ್ರಮಿಸಿದವರು. ಅಂತಹವರ  ಜೀವನಾಧಾರಿತ  ವಿರಾಟಪುರ ವಿರಾಗಿ ಸಿನಿಮಾವು ಶರಣರ ವಚನಗಳ ಅರ್ಥ ಮತ್ತು ಅಂತರಂಗದ ಅರಿವನ್ನು ಮೂಡಿಸುವಂಥದ್ದು.

    ಸಿನಿಮಾದಲ್ಲಿ ವಚನಗಳನ್ನು ಸನ್ನಿವೇಶಗಳಿಗೆ ಹೊಂದುವಂತೆ ಆಯ್ಕೆ ಮಾಡಿಕೊಂಡು, ಅದಕ್ಕೆ ಅತ್ಯುತ್ತಮ ಸಂಗೀತ ಸಂಯೋಜನೆ ಮಾಡಿರುವುದು ಪ್ರೇಕ್ಷಕರ ಹೃದಯವನ್ನು ಗೆಲ್ಲುವಲ್ಲಿ ಸಹಾಯವಾಗಿದೆ. ಇಡೀ ತಂಡವು ನಮ್ಮನ್ನು ಸ್ವಾತಂತ್ರ್ಯ ಪೂರ್ವ ಕಾಲಘಟ್ಟಕ್ಕೆ ಕೊಂಡೊಯ್ಯುವಲ್ಲಿ ಯಶಸ್ವಿಯಾಗಿದೆ. ಜನಸಾಮಾನ್ಯರನ್ನು ಆಧ್ಯಾತ್ಮದತ್ತ ಕರೆದುಕೊಳ್ಳಲು, ನೈತಿಕ ಮೌಲ್ಯಗಳನ್ನು ಹೆಚ್ಚಿಸಲು, ಅನುಭಾವದ ಚಿಂತನೆಗೆ ತೊಡಗಿಸಲು ಈ ಚಿತ್ರ ಕನ್ನಡಿಗರ ಹೆಮ್ಮೆಯ ಚಿತ್ರವಾಗಿದೆ ಎನ್ನುವ ಅಭಿಪ್ರಾಯ ಪ್ರದರ್ಶನದ ನಂತರ ವ್ಯಕ್ತವಾಯಿತು.

    ಸುಮಾರು ನಾಲ್ಕಾರು ದಶಕಗಳಿಂದ ಕನ್ನಡಿಗರು ಸಿಂಗಾಪೂರದಲ್ಲಿ ನೆಲೆಸಿದ್ದಾರೆ. ಕನ್ನಡಿಗರು ಸಂಘ ಜೀವಿಗಳು ಮತ್ತು ತಮ್ಮ ಸಂಸ್ಕೃತಿ,  ಪರಂಪರೆ ಮತ್ತು ಕನ್ನಡ ಭಾಷೆ ನಮ್ಮ ಅಸ್ಮಿತೆಯೆಂದು ನಂಬಿರುವವರು. ಈ ಹಿನ್ನೆಲೆಯಲ್ಲಿ 11ನೇ ಸೆಪ್ಟೆಂಬರ್ 1996 ರಂದು ಸಿಂಗಾಪೂರದ ರಿಜಿಸ್ಟ್ರಾರ್ ಆಫ್ ಸೊಸೈಟಿಯಲ್ಲಿ ನೋಂದಾಯಿಸುವ ಮೂಲಕ ಕನ್ನಡ ಸಂಘ ಉದಯವಾಯಿತು. ಅಂದಿನಿಂದ ಇಂದಿನವರೆಗೂ ಕನ್ನಡಿಗರ ಸಂಸ್ಕೃತಿ,  ಪರಂಪರೆ ಮತ್ತು ಕನ್ನಡ ಭಾಷೆಯನ್ನು ಶ್ರೀಮಂತಗೊಳಿಸಲು ಅನೇಕ ಕಾರ್ಯಕ್ರಮ ಗಳನ್ನು ಆಯೋಜಿಸುವ ಮೂಲಕ ಶ್ರಮಿಸುತ್ತಿದ್ದಾರೆ.

    ಕನ್ನಡ ಸಂಘ (ಸಿಂಗಾಪುರ)ವು ವಚನ ಸಾಹಿತ್ಯದ ಸಾರಾಮೃತವನ್ನು ಹರಡುವ, ಹಂಚುವ ಸದುದ್ದೇಶದಿಂದ ಸುಮಾರು 13 ವರ್ಷಗಳಿಂದ ನಡೆಸಿಕೊಂಡು ಬರುತ್ತಿರುವ ಕಾರ್ಯಕ್ರಮವೇ ವಚನಾಂಜಲಿ.  ಪ್ರತೀ ವರ್ಷ ವಿವಿಧ ರೂಪಗಳಲ್ಲಿ ಆಚರಿಸಿಕೊಂಡು ಬಂದಂತಹ ವಚನಾಂಜಲಿ, ಶಾಸ್ತ್ರೀಯ ಸಂಗೀತ, ಜನಪದ ಶೈಲಿಯ ಹಾಡುಗಳ ಮೂಲಕ, ಭರತ ನಾಟ್ಯದಲ್ಲಿನ ನೃತ್ಯ ರೂಪಕಗಳಲ್ಲಿ, ಸಾಂಸ್ಕೃತಿಕವಾಗಿ ಆಚರಿಸಿಕೊಂಡು ಬಂದಿರುವುದು ಒಂದೆಡೆಯಾದರೆ, ಸಾಹಿತ್ಯದ ಒಳ ಅರಿವನ್ನು ಅರಿಯುವ ಹಾದಿಯಲ್ಲಿ ವಿಚಾರ ಗೋಷ್ಠಿಗಳು, ವಿಚಾರ ಸಂಕಿರಣ, ಸಂವಾದಗಳ ಮೂಲಕ ಅರ್ಥಪೂರ್ಣವಾಗಿ ನಡೆಸಿಕೊಂಡು ಬರುತ್ತಿದೆ. ಅದರ ಭಾಗವಾಗಿ ಈ ಬಾರಿ ವಿರಾಟ ಪುರ ವಿರಾಗಿ ಸಿನಿಮಾ ಪ್ರದರ್ಶನವಾಯಿತು.

    ತುಂಬಿದ ಸಭಾಂಗಣದಲ್ಲಿ ವಿರಾಟಪುರ ವಿರಾಗಿ  ಚಲನಚಿತ್ರ ಪ್ರದರ್ಶನ, ವಚನ ಸಾಹಿತ್ಯದ ಬಗೆಗಿನ ವಿಚಾರ ಗೋಷ್ಠಿ, ವಚನ ಸ್ಪರ್ಧೆಗಳಲ್ಲಿನ ವಿಜೇತರಿಗೆ ಬಹುಮಾನ ವಿತರಣೆ ಕೊನೆಯಲ್ಲಿ ದಾಸೋಹದೊಂದಿಗೆ ಅನೇಕ ವಿಚಾರಗಳ ವಿವರಣೆ, ವಿಮರ್ಶೆ, ವಿತರಣೆ ಕಾರ್ಯಗಳು ಜರುಗಿದವು. ಕನ್ನಡ ಸಂಘ ಸಿಂಗಾಪುರ ಅಧ್ಯಕ್ಷ ವೆಂಕಟ ರತ್ನಯ್ಯ (Venkata Ratnaya)ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ ಸ್ಪರ್ಧೆಗೆ ‘ವಿರಾಟಪುರ ವಿರಾಗಿ’ ಆಯ್ಕೆ

    ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ ಸ್ಪರ್ಧೆಗೆ ‘ವಿರಾಟಪುರ ವಿರಾಗಿ’ ಆಯ್ಕೆ

    ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಬಿ.ಎಸ್.ಲಿಂಗದೇವರು (B.S. Lingadevaru) ನಿರ್ದೇಶನದ ‘ವಿರಾಟಪುರ ವಿರಾಗಿ’ (Viratpur Viragi) ಸಿನಿಮಾ ಮಾರ್ಚ್ 23 ರಿಂದ ನಡೆಯುವ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವದ ಏಷಿಯನ್ ವಿಭಾಗದ ಸ್ಪರ್ಧೆಗೆ ಆಯ್ಕೆಯಾಗಿದೆ. ಏಷಿಯನ್ ಸ್ಪರ್ಧೆಯಲ್ಲಿ ಇರಾನ್, ಇಸ್ರೆಲ್, ಜಪಾನ್, ಶ್ರೀಲಂಕಾ, ಬಾಂಗ್ಲಾದೇಶ, ಮರಾಠಿ ಸೇರಿದಂತೆ 14 ಸಿನಿಮಾಗಳನ್ನು ಆಯ್ಕೆ ಮಾಡಲಾಗಿದ್ದು, ಈ ಹದಿನಾಲ್ಕು ಸಿನಿಮಾಗಳಲ್ಲಿ ವಿರಾಟಪುರ ವಿರಾಗಿ ಸಿನಿಮಾ ಕೂಡ ಒಂದು. ಚಿತ್ರೋತ್ಸವದಲ್ಲಿ ಇದೊಂದು ಮಹತ್ವದ ವಿಭಾಗ ಆಗಿರುವುದು ವಿಶೇಷ.

    ಹಾನಗಲ್ಲ  ಕುಮಾರಸ್ವಾಮಿಗಳ (Hanagal Kumaraswamy)  ಜೀವನವನ್ನು ಆಧರಿಸಿದ ಸಿನಿಮಾ ಇದಾಗಿದ್ದು, ಭಾರೀ ಬಜೆಟ್ ಸಿನಿಮಾಗಳೇ ಸೋಲಿನ ಹಾದಿ ಹಿಡಿದಿರುವ ಸಂದರ್ಭದಲ್ಲಿ ವಿರಾಟಪುರ ವಿರಾಗಿ ಸಿನಿಮಾ ಭಾರೀ ಯಶಸ್ಸು ಕಂಡಿದೆ. ಸತತ ಮೂವತ್ತೈದು ದಿನಗಳಿಂದ ಹಲವು ಕಡೆ ಸಿನಿಮಾ ಪ್ರದರ್ಶನ ಕಾಣುತ್ತಿದೆ. ಕಲಬುರಗಿ ನಗರವೊಂದರಲ್ಲೇ ನೂರು ಪ್ರದರ್ಶನಗಳನ್ನು ಕಂಡು ದಾಖಲೆ ಬರೆದಿದೆ. ಕರ್ನಾಟಕದಾದ್ಯಂತ ಈವರೆಗೂ ಮೂರು ಸಾವಿರಕ್ಕೂ ಹೆಚ್ಚು ಪ್ರದರ್ಶನಗಳನ್ನು ಕಂಡಿದೆ. ಇದನ್ನೂ ಓದಿ: ಜಿನಿವಾದಲ್ಲಿ ನಾಳೆ ‘ಕಾಂತಾರ’ ಸಿನಿಮಾ ಪ್ರದರ್ಶನ : ರಿಷಬ್ ಶೆಟ್ಟಿ ಭಾಗಿ

    ಸಿನಿಮಾ ಬಿಡುಗಡೆಗೆ ಮುನ್ನವೇ 75 ಸಾವಿರಕ್ಕೂ ಅಧಿಕ ಟಿಕೆಟ್ ಮಾರಾಟವಾಗಿ ಹೊಸ ದಾಖಲೆ ಬರೆದಿದ್ದ  ಈ ಸಿನಿಮಾ ಈವರೆಗೂ 750ಕ್ಕೂ ಹೆಚ್ಚು ಶೋಗಳು ಹೌಸ್ ಫುಲ್ ಆಗಿವೆ. 62ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿದೆ. ಕಲಬುರಗಿಯಲ್ಲೇ 82 ಶೋಗಳು ಹೌಸ್ ಫುಲ್ ಪ್ರದರ್ಶನ ಕಂಡಿದೆ. ಈ ವರ್ಷದಲ್ಲಿ ಹೆಚ್ಚು ಸದ್ದು ಮಾಡಿದ ಸಿನಿಮಾಗಳ ಪಟ್ಟಿಯಲ್ಲಿ ಈ ಚಿತ್ರ ಕೂಡ ಕಾಣಿಸಿಕೊಂಡಿದೆ.

    ಮಣಿಕಾಂತ್ ಕದ್ರಿ ಸಂಗೀತ ಸಂಯೋಜನೆಯಲ್ಲಿ ಮೂಡಿ ಬಂದ ಹಾಡುಗಳು ಕೂಡ ಕೇಳುಗರ ಗಮನ ಸೆಳೆದಿದ್ದು, ಈ ಸಿನಿಮಾವನ್ನು ಜನರಿಗೆ ತಲುಪಿಸುವುದಕ್ಕಾಗಿಯೇ ಹಾನಗಲ್ಲ ಕುಮಾರಸ್ವಾಮಿಗಳ ಭಕ್ತರು ರಥಯಾತ್ರೆ ಮತ್ತು ಗದಗ ಸೇರಿದಂತೆ ಹಲವು ಕಡೆ ಕಾರ್ಯಕ್ರಮಗಳನ್ನು ಆಯೋಜನೆ ಮಾಡಿದ್ದರು. ರಾಜ್ಯಾದ್ಯಂತ ರಥೆಯಾತ್ರೆ ಪ್ರವಾಸ ಮಾಡಿ, ಸಿನಿಮಾ ಮುಟ್ಟಿಸುವಲ್ಲಿ ಗೆದ್ದಿದೆ.

  • ಮಾ.19ರಂದು ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ‘ವಿರಾಟಪುರ ವಿರಾಗಿ’ ಚಿತ್ರ ಪ್ರದರ್ಶನ

    ಮಾ.19ರಂದು ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ‘ವಿರಾಟಪುರ ವಿರಾಗಿ’ ಚಿತ್ರ ಪ್ರದರ್ಶನ

    ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಬಿ.ಎಸ್.ಲಿಂಗದೇವರು (BS Lingadevaru) ನಿರ್ದೇಶನದಲ್ಲಿ ಮೂಡಿ ಬಂದಿರುವ ‘ವಿರಾಟಪುರ ವಿರಾಗಿ’ (Viratpur Viragi) ಸಿನಿಮಾ ಮಾರ್ಚ್ 19ರಂದು ಆಸ್ಟ್ರೇಲಿಯಾದ (Australia) ಸಿಡ್ನಿಯಲ್ಲಿ(Sydney) ಪ್ರದರ್ಶನ ಕಾಣುತ್ತಿದೆ. ಅಂದು ಮಧ್ಯಾಹ್ನ 3.30ಕ್ಕೆ ಇವೆಂಟ್ ಸಿನಿಮಾಸ್ ಲೈವರ್ ಪೋಲ್ ಆಸ್ಟ್ರೇಲಿಯಾದಲ್ಲಿ ಸಿನಿಮಾ ಪ್ರದರ್ಶನಕ್ಕೆ ಸಿದ್ಧತೆ ಮಾಡಿಕೊಂಡಿರುವುದಾಗಿ ಬಿ.ಎಸ್.ಲಿಂಗದೇವರು ತಿಳಿಸಿದ್ದಾರೆ.

    ಹಾನಗಲ್ಲ (Hanagalla) ಕುಮಾರಸ್ವಾಮಿಗಳ (Kumaraswamy) ಜೀವನವನ್ನು ಆಧರಿಸಿದ ಸಿನಿಮಾ ಇದಾಗಿದ್ದು, ಭಾರೀ ಬಜೆಟ್ ಸಿನಿಮಾಗಳೇ ಸೋಲಿನ ಹಾದಿ ಹಿಡಿದಿರುವ ಸಂದರ್ಭದಲ್ಲಿ ವಿರಾಟಪುರ ವಿರಾಗಿ ಸಿನಿಮಾ ಭಾರೀ ಯಶಸ್ಸು ಕಂಡಿದೆ. ಸತತ ಮೂವತ್ತೈದು ದಿನಗಳಿಂದ ಹಲವು ಕಡೆ ಸಿನಿಮಾ ಪ್ರದರ್ಶನ ಕಾಣುತ್ತಿದೆ. ಕಲಬುರಗಿ ನಗರವೊಂದರಲ್ಲೇ ನೂರು ಪ್ರದರ್ಶನಗಳನ್ನು ಕಂಡು ದಾಖಲೆ ಬರೆದಿದೆ. ಕರ್ನಾಟಕದಾದ್ಯಂತ ಈವರೆಗೂ ಮೂರು ಸಾವಿರಕ್ಕೂ ಹೆಚ್ಚು ಪ್ರದರ್ಶನಗಳನ್ನು ಕಂಡಿದೆ. ಇದನ್ನೂ ಓದಿ: 800 ವರ್ಷದ ಹಳೆಯ ಮನೆಯಲ್ಲಿ ಶುಭಾ ಪೂಂಜಾ ದಿಢೀರ್ ಮದುವೆ

    ಸಿನಿಮಾ ಬಿಡುಗಡೆಗೆ ಮುನ್ನವೇ 75 ಸಾವಿರಕ್ಕೂ ಅಧಿಕ ಟಿಕೆಟ್ ಮಾರಾಟವಾಗಿ ಹೊಸ ದಾಖಲೆ ಬರೆದಿದ್ದ  ಈ ಸಿನಿಮಾ ಈವರೆಗೂ 750ಕ್ಕೂ ಹೆಚ್ಚು ಶೋಗಳು ಹೌಸ್ ಫುಲ್ ಆಗಿವೆ. 62ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿದೆ. ಕಲಬುರಗಿಯಲ್ಲೇ 82 ಶೋಗಳು ಹೌಸ್ ಫುಲ್ ಪ್ರದರ್ಶನ ಕಂಡಿದೆ. ಈ ವರ್ಷದಲ್ಲಿ ಹೆಚ್ಚು ಸದ್ದು ಮಾಡಿದ ಸಿನಿಮಾಗಳ ಪಟ್ಟಿಯಲ್ಲಿ ಈ ಚಿತ್ರ ಕೂಡ ಕಾಣಿಸಿಕೊಂಡಿದೆ.

    ಮಣಿಕಾಂತ್ ಕದ್ರಿ ಸಂಗೀತ ಸಂಯೋಜನೆಯಲ್ಲಿ ಮೂಡಿ ಬಂದ ಹಾಡುಗಳು ಕೂಡ ಕೇಳುಗರ ಗಮನ ಸೆಳೆದಿದ್ದು, ಈ ಸಿನಿಮಾವನ್ನು ಜನರಿಗೆ ತಲುಪಿಸುವುದಕ್ಕಾಗಿಯೇ ಹಾನಗಲ್ಲ ಕುಮಾರಸ್ವಾಮಿಗಳ ಭಕ್ತರು ರಥಯಾತ್ರೆ ಮತ್ತು ಗದಗ ಸೇರಿದಂತೆ ಹಲವು ಕಡೆ ಕಾರ್ಯಕ್ರಮಗಳನ್ನು ಆಯೋಜನೆ ಮಾಡಿದ್ದರು. ರಾಜ್ಯಾದ್ಯಂತ ರಥೆಯಾತ್ರೆ ಪ್ರವಾಸ ಮಾಡಿ, ಸಿನಿಮಾ ಮುಟ್ಟಿಸುವಲ್ಲಿ ಗೆದ್ದಿದೆ.

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಮೈಸೂರಿನಲ್ಲಿ ‘ವಿರಾಟಪುರ ವಿರಾಗಿ’ ಸಿನಿಮಾ ರಥಯಾತ್ರೆಗೆ ಚಾಲನೆ ನೀಡಿದ ಸುತ್ತೂರುಶ್ರೀ

    ಮೈಸೂರಿನಲ್ಲಿ ‘ವಿರಾಟಪುರ ವಿರಾಗಿ’ ಸಿನಿಮಾ ರಥಯಾತ್ರೆಗೆ ಚಾಲನೆ ನೀಡಿದ ಸುತ್ತೂರುಶ್ರೀ

    ಹಾನಗಲ್ಲ ಕುಮಾರ ಶಿವಯೋಗಿಗಳ ಜೀವನ ಚರಿತ್ರೆಯನ್ನು ಆಧರಿಸಿದ ‘ವಿರಾಟಪುರ ವಿರಾಗಿ’ ಸಿನಿಮಾದ ಧ್ವನಿ ಸುರುಳಿ ಬಿಡುಗಡೆ ಸಮಾರಂಭ ಮತ್ತು ರಥಯಾತ್ರೆಗೆ ಚಾಲನೆ ನೀಡುವ ಕಾರ್ಯಕ್ರಮ ಮೈಸೂರಿನಲ್ಲಿ ನಡೆಯಿತು. ಮೈಸೂರು ಸುತ್ತೂರಮಠದ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿ, ನಿಂಬಾಳ ಶಾಂತಲಿಂಗೇಶ್ವರ ವಿರಕ್ತಮಠದ ಜಡೆಯ ಶಾಂತಲಿಂಗೇಶ್ವರ ಸ್ವಾಮಿಗಳ ಸಮ್ಮುಖದಲ್ಲಿ ಈ ಕಾರ್ಯಕ್ರಮಗಳು ನಡೆದವು. ಗೊ.ರು ಚನ್ನಬಸಪ್ಪನವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನಿರ್ದೇಶಕ ಲಿಂಗದೇವರು, ಹಲವು ಮಠಗಳ ಮಠಾಧೀಶರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

    ರಾಜ್ಯಾದ್ಯಂತ ಆರು ರಥಗಳು, ಹದಿಮೂರು ದಿನಗಳ ಕಾಲ, ಏಳು ಸಾವಿರ ಕಿಲೋ ಮೀಟರ್ ಪಯಣವನ್ನು ಮಾಡಲಿವೆ. ಈ ರಥಯಾತ್ರೆಯಲ್ಲಿ ಒಟ್ಟು 360 ಸಭೆಗಳನ್ನೂ ಆಯೋಜನೆ ಮಾಡಲಾಗಿದ್ದು, ಒಂದು ಕೋಟಿ ಜನರನ್ನು ಮುಟ್ಟುವ ಗುರಿಯನ್ನು ಹೊಂದಲಾಗಿದೆ ಎಂದು ಲಿಂಗದೇವರು ತಿಳಿಸಿದ್ದಾರೆ. ಡಿಸೆಂಬರ್ 20ರಂದು ಶುರುವಾಗಲಿರುವ ಈ ರಥಯಾತ್ರೆಯು ಜನವರಿ 1 ರಂದು ಗದಗನಲ್ಲಿ ಮುಕ್ತಾಯಗೊಳ್ಳಲಿದೆ.

    ಸಿನಿಮಾ ಕುರಿತು ಮತ್ತೋರ್ವ ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಗಿರೀಶ್ ಕಾಸರವಳ್ಳಿ, ‘ಕುಮಾರ ಶಿವಯೋಗಿಗಳು ಒಂದು ದಂತಕಥೆ. ಒಬ್ಬ ಮನುಷ್ಯ ತನ್ನ ಜೀವಿತಾಧಿಯಲ್ಲಿ ಏನೇನು ಮಾಡಲು ಅಸಾಧ್ಯವೋ ಅದನ್ನೆಲ್ಲಾ ಸಾಧ್ಯ ಮಾಡಿದ್ದಾರೆ. ಗಾಂಧೀಜಿಯವರು ಭಾರತಕ್ಕೆ ಬರುವ ಕೆಲವು ವರ್ಷಗಳ ಮೊದಲೇ ಗಾಂಧೀಜಿ ಅವರು ಆದರ್ಶ ಅಂದುಕೊಂಡಿದ್ದ ಬಹುತೇಕ ಕೆಲಸಗಳನ್ನು ಮಾಡಿ ತೋರಿಸಿದವರು ಹಾನಗಲ್ಲ ಗುರುಕುಮಾರ ಶಿವಯೋಗಿಗಳು’ ಎಂದು ಮಾತನಾಡಿದ್ದಾರೆ.

    ಕನ್ನಡದ ಖ್ಯಾತ ನಟ ಸುಚೇಂದ್ರ ಪ್ರಸಾದ್ ಹಾನಗಲ್ ಕುಮಾರ ಶ್ರೀಗಳ ಪಾತ್ರವನ್ನು ನಿರ್ವಹಿಸಿದ್ದು, ಕರ್ನಾಟಕದ ನಾನಾ ಮಠಗಳಿ ಮಠಾಧೀಶರು ಕೂಡ ಪಾತ್ರ ಮಾಡಿರುವುದು ವಿಶೇಷ. ಮಣಿಕಾಂತ್ ಕದ್ರಿ ಸಂಗೀತ ಸಂಯೋಜನೆಯಲ್ಲಿ ಹಾಡುಗಳು ಮೂಡಿ ಬಂದಿದ್ದು, ಅಶೋಕ್ ವಿ ರಾಮನ್ ಅವರ ಸಿನಿಮಾಟೋಗ್ರಫಿ ಹಾಗೂ ಎಸ್. ಗುಣಶೇಖರನ್ ಅವರು ಸಂಕಲನ ಚಿತ್ರಕ್ಕಿದೆ. ಈಗಾಗಲೇ ಸಿನಿಮಾದ ಫಸ್ಟ್ ಲುಕ್ ಕೂಡ ರಿಲೀಸ್ ಆಗಿದ್ದು ಮೆಚ್ಚುಗೆ ವ್ಯಕ್ತವಾಗಿದೆ.

    Live Tv
    [brid partner=56869869 player=32851 video=960834 autoplay=true]