Tag: Viratpura Viragi

  • ಶರಣು ಹುಲ್ಲೂರು, ಬಿ.ಎಸ್.ಲಿಂಗದೇವರಿಗೆ ರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ

    ಶರಣು ಹುಲ್ಲೂರು, ಬಿ.ಎಸ್.ಲಿಂಗದೇವರಿಗೆ ರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ

    ಬ್ಲಿಕ್ ಟಿವಿ ಡಿಜಿಟಲ್ ಸಿನಿಮಾ ವಿಭಾಗದ ಶರಣು ಹುಲ್ಲೂರು ಮತ್ತು ರಾಷ್ಟ್ರ ಪ್ರಶಸ್ತಿ ವಿಜೇತ ಬಿ.ಎಸ್.ಲಿಂಗದೇವರು ಅವರಿಗೆ ಜಂಟಿಯಾಗಿ ಶ್ರೀ ರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ದೊರೆತಿದೆ. ಶರಣು ಹುಲ್ಲೂರು (Sharanu Hullur) ಮತ್ತು ಬಿ.ಎಸ್.ಲಿಂಗದೇವರು (BS Lingadevaru) ಜೊತೆಯಾಗಿ ‘ವಿರಾಟಪುರ ವಿರಾಗಿ’ (Viratpura Viragi) ಚಿತ್ರಕ್ಕೆ ಸಂಭಾಷಣೆ ಬರೆದಿದ್ದರು. ಈ ಚಿತ್ರದ ಸಂಭಾಷಣೆಗಾಗಿ ಖ್ಯಾತ ಚಿತ್ರ ಸಾಹಿತಿ ಶ್ರೀಹುಣಸೂರು ಕೃಷ್ಣಮೂರ್ತಿ ಸ್ಮರಣಾರ್ಥ ಪ್ರಶಸ್ತಿ ಸಂದಿದೆ.

    ಹಾನಗಲ್ಲ (Hanagalla) ಕುಮಾರಸ್ವಾಮಿಗಳ (Kumaraswamy) ಜೀವನವನ್ನು ಆಧರಿಸಿದ ಸಿನಿಮಾ ವಿರಾಟಪುರ ವಿರಾಗಿ. ಭಾರೀ ಬಜೆಟ್ ಸಿನಿಮಾಗಳೇ ಸೋಲಿನ ಹಾದಿ ಹಿಡಿದಿರುವ ಸಂದರ್ಭದಲ್ಲಿ ವಿರಾಟಪುರ ವಿರಾಗಿ ಸಿನಿಮಾ ಭಾರೀ ಯಶಸ್ಸು ಕಂಡಿತ್ತು. ಕಲಬುರಗಿ ನಗರವೊಂದರಲ್ಲೇ ನೂರು ಪ್ರದರ್ಶನಗಳನ್ನು ಕಂಡು ದಾಖಲೆ ಬರೆದಿತ್ತು. ಕರ್ನಾಟಕದಾದ್ಯಂತ ಮೂರು ಸಾವಿರಕ್ಕೂ ಹೆಚ್ಚು ಪ್ರದರ್ಶನಗಳನ್ನು ಕಂಡಿತ್ತು.

    ಸಿನಿಮಾ ಬಿಡುಗಡೆಗೆ ಮುನ್ನವೇ 75 ಸಾವಿರಕ್ಕೂ ಅಧಿಕ ಟಿಕೆಟ್ ಮಾರಾಟವಾಗಿ ಹೊಸ ದಾಖಲೆ ಬರೆದಿದ್ದ  ಈ ಸಿನಿಮಾ 750ಕ್ಕೂ ಹೆಚ್ಚು ಶೋಗಳು ಹೌಸ್ ಫುಲ್ ಆಗಿವೆ. 62ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿತ್ತು. ಕಲಬುರಗಿಯಲ್ಲೇ 82 ಶೋಗಳು ಹೌಸ್ ಫುಲ್ ಪ್ರದರ್ಶನ ಕಂಡಿತ್ತು. ಈ ವರ್ಷದಲ್ಲಿ ಹೆಚ್ಚು ಸದ್ದು ಮಾಡಿದ ಸಿನಿಮಾಗಳ ಪಟ್ಟಿಯಲ್ಲಿ ಈ ಚಿತ್ರ ಕೂಡ ಕಾಣಿಸಿಕೊಂಡಿತ್ತು.

     

    ಕನ್ನಡ ಚಿತ್ರರಂಗದ ಪ್ರಥಮ ಪ್ರಚಾರಕರ್ತ ದಿವಂಗತ ಶ್ರೀ ಡಿ.ವಿ. ಸುಧೀಂದ್ರ ಅವರು ತಮ್ಮ ಶ್ರೀ ರಾಘವೇಂದ್ರ ಚಿತ್ರವಾಣಿ ಸಂಸ್ಥೆಗೆ 25 ವರ್ಷ ತುಂಬಿದ  ಸುಸಂದರ್ಭದಲ್ಲಿ ನಿರ್ಮಾಪಕರಿಗೆ ಮತ್ತು ಹಿರಿಯ ಪತ್ರಕರ್ತರಿಗೆ ಪ್ರಶಸ್ತಿ ನೀಡುವ ಪರಿಪಾಠ ಆರಂಭಿಸಿದರು. ಈಗ ಪ್ರಶಸ್ತಿಗಳ ಸಂಖ್ಯೆ 11ಕ್ಕೇರಿದೆ. ಸಂಸ್ಥೆಯ 48ನೇ ವಾರ್ಷಿಕೋತ್ಸವ ಹಾಗೂ 23ನೇ ವರ್ಷದ  ಪ್ರಶಸ್ತಿ ಪ್ರದಾನ ಸಮಾರಂಭ ಜನವರಿ  27ರ ಶನಿವಾರ ಸಂಜೆ 5.30ಕ್ಕೆ ಚಾಮರಾಜಪೇಟೆಯ ಕರ್ನಾಟಕ ಚಲನಚಿತ್ರ ಕಲಾವಿದರ ಸಂಘದಲ್ಲಿ ನಡೆಯಲಿದೆ. ಅಂದು ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ.

  • ಸಿಂಗಾಪುರದಲ್ಲಿ ‘ವಿರಾಟಪುರ ವಿರಾಗಿ’ ಶೋ: ಮೂಕವಿಸ್ಮಿತರಾದ ಪ್ರೇಕ್ಷಕರು

    ಸಿಂಗಾಪುರದಲ್ಲಿ ‘ವಿರಾಟಪುರ ವಿರಾಗಿ’ ಶೋ: ಮೂಕವಿಸ್ಮಿತರಾದ ಪ್ರೇಕ್ಷಕರು

    ನ್ನಡ ಸಂಘ ಸಿಂಗಾಪುರ (Singapore) ಆಯೋಜಿಸಿದ್ದ, ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಬಿ.ಎಸ್. ಲಿಂಗದೇವರು (BS Lingadevaru) ನಿರ್ದೇಶನದ ‘ವಿರಾಟಪುರ ವಿರಾಗಿ’ (Viratpura Viragi) ಸಿನಿಮಾದ ಪ್ರದರ್ಶನ ಅತ್ಯಂತ ಯಶಸ್ವಿಯಾಗಿ ನೆರವೇರಿತು. ಸಿನಿಮಾ ಪ್ರದರ್ಶನದ ನಂತರ ಪ್ರೇಕ್ಷಕರು ಭಾವುಕರಾಗಿದ್ದರು. ಹಾನಗಲ್ ಕುಮಾರಸ್ವಾಮಿಗಳ ಚರಿತೆಯನ್ನು ಕಣ್ತುಂಬಿಕೊಂಡು ಪುಳಕಿತರಾಗಿದ್ದರು.

    ಸಿಂಗಾಪುರ ಕನ್ನಡ ಸಂಘವು ಈ ಬಾರಿ ವಚನಾಂಜಲಿಯನ್ನು ವಿಶೇಷವಾಗಿ ಆಯೋಜಿಸಿತ್ತು. ಇದರ ಭಾಗವಾಗಿ ಶಿವಯೋಗಿಗಳಾದ ಶ್ರೀ ಹಾನಗಲ್ ಕುಮಾರಸ್ವಾಮಿಯವರ ಜೀವನಾಧಾರಿತ ಚಲನಚಿತ್ರ ‘ವಿರಾಟಪುರ ವಿರಾಗಿ’ಯ ಪ್ರದರ್ಶನವನ್ನು ಏರ್ಪಡಿಸಿ, ಅಲ್ಲಿನ ಕನ್ನಡಿಗರಿಗೆ ಕುಮಾರಸ್ವಾಮಿಗಳ ಚರಿತೆಯನ್ನು ತಿಳಿಸಿದ್ದು ವಿಶೇಷವಾಗಿತ್ತು. ಈ ಪ್ರದರ್ಶನದಲ್ಲಿ ನಿರ್ದೇಶಕರಾದ ಲಿಂಗದೇವರು, ಕುಮಾರಸ್ವಾಮಿಗಳ ಪಾತ್ರ ಮಾಡಿದ್ದ ಸುಚೇಂದ್ರ ಪ್ರಸಾದ್ (Suchendra Prasad)  ಭಾಗಿಯಾಗಿದ್ದರು.

    ಜನಸಾಮಾನ್ಯರ ಬದುಕನ್ನು ಉನ್ನತಗೊಳಿಸಲು ಹನ್ನೆರಡನೆಯ ಶತಮಾನದ ಶಿವಶರಣರು ಶ್ರಮಿಸಿರುವುದು ನಮಗೆಲ್ಲಾ ತಿಳಿದೇ ಇದೆ. ಶರಣರು ಸಾಹಿತ್ಯ ರಚಿಸಬೇಕೆಂಬ ಉದ್ದೇಶದಿಂದ ವಚನಗಳನ್ನು ಬರೆಯದೆ ದಿನನಿತ್ಯದ ತಮ್ಮ ಅನುಭವಗಳನ್ನು ವಚನದ ರೂಪದಲ್ಲಿ ಹೇಳಿದ್ದರಿಂದ ವಚನ ಸಾಹಿತ್ಯ ಒಂದು ಚಳಿವಳಿಯಾಯಿತು ಎಂಬುದು ಇತಿಹಾಸ. ವರ್ಣ-ಆಧಾರಿತ, ಜಾತಿ ಆಧಾರಿತ, ಲಿಂಗ-ಆಧಾರಿತ ಅಸಮಾನತೆಯನ್ನು ನಿರ್ಮೂಲಗೊಳಿಸಿ ಸರ್ವ ಸಮಾನತೆಯ ಸಮಾಜ ನಿರ್ಮಾಣಕ್ಕೆ ನಾಂದಿ ಹಾಡಿದವರು ಶಿವ ಶರಣರು. ಈ ಹಿನ್ನಲೆಯಲ್ಲಿ ಶ್ರೀ ಹಾನಗಲ್ ಕುಮಾರಸ್ವಾಮಿಯವರು ಎಲ್ಲರನ್ನು ಒಳಗೊಳ್ಳುವ ಮತ್ತು ಬಹುತ್ವ ಪರಂಪರೆಗೆ ಒತ್ತುಕೊಟ್ಟು ಸಮಸಮಾಜ ನಿರ್ಮಿಸಲು ಸ್ವಾತಂತ್ರ್ಯಪೂರ್ವದಲ್ಲಿ ಶ್ರಮಿಸಿದವರು. ಅಂತಹವರ  ಜೀವನಾಧಾರಿತ  ವಿರಾಟಪುರ ವಿರಾಗಿ ಸಿನಿಮಾವು ಶರಣರ ವಚನಗಳ ಅರ್ಥ ಮತ್ತು ಅಂತರಂಗದ ಅರಿವನ್ನು ಮೂಡಿಸುವಂಥದ್ದು.

    ಸಿನಿಮಾದಲ್ಲಿ ವಚನಗಳನ್ನು ಸನ್ನಿವೇಶಗಳಿಗೆ ಹೊಂದುವಂತೆ ಆಯ್ಕೆ ಮಾಡಿಕೊಂಡು, ಅದಕ್ಕೆ ಅತ್ಯುತ್ತಮ ಸಂಗೀತ ಸಂಯೋಜನೆ ಮಾಡಿರುವುದು ಪ್ರೇಕ್ಷಕರ ಹೃದಯವನ್ನು ಗೆಲ್ಲುವಲ್ಲಿ ಸಹಾಯವಾಗಿದೆ. ಇಡೀ ತಂಡವು ನಮ್ಮನ್ನು ಸ್ವಾತಂತ್ರ್ಯ ಪೂರ್ವ ಕಾಲಘಟ್ಟಕ್ಕೆ ಕೊಂಡೊಯ್ಯುವಲ್ಲಿ ಯಶಸ್ವಿಯಾಗಿದೆ. ಜನಸಾಮಾನ್ಯರನ್ನು ಆಧ್ಯಾತ್ಮದತ್ತ ಕರೆದುಕೊಳ್ಳಲು, ನೈತಿಕ ಮೌಲ್ಯಗಳನ್ನು ಹೆಚ್ಚಿಸಲು, ಅನುಭಾವದ ಚಿಂತನೆಗೆ ತೊಡಗಿಸಲು ಈ ಚಿತ್ರ ಕನ್ನಡಿಗರ ಹೆಮ್ಮೆಯ ಚಿತ್ರವಾಗಿದೆ ಎನ್ನುವ ಅಭಿಪ್ರಾಯ ಪ್ರದರ್ಶನದ ನಂತರ ವ್ಯಕ್ತವಾಯಿತು.

    ಸುಮಾರು ನಾಲ್ಕಾರು ದಶಕಗಳಿಂದ ಕನ್ನಡಿಗರು ಸಿಂಗಾಪೂರದಲ್ಲಿ ನೆಲೆಸಿದ್ದಾರೆ. ಕನ್ನಡಿಗರು ಸಂಘ ಜೀವಿಗಳು ಮತ್ತು ತಮ್ಮ ಸಂಸ್ಕೃತಿ,  ಪರಂಪರೆ ಮತ್ತು ಕನ್ನಡ ಭಾಷೆ ನಮ್ಮ ಅಸ್ಮಿತೆಯೆಂದು ನಂಬಿರುವವರು. ಈ ಹಿನ್ನೆಲೆಯಲ್ಲಿ 11ನೇ ಸೆಪ್ಟೆಂಬರ್ 1996 ರಂದು ಸಿಂಗಾಪೂರದ ರಿಜಿಸ್ಟ್ರಾರ್ ಆಫ್ ಸೊಸೈಟಿಯಲ್ಲಿ ನೋಂದಾಯಿಸುವ ಮೂಲಕ ಕನ್ನಡ ಸಂಘ ಉದಯವಾಯಿತು. ಅಂದಿನಿಂದ ಇಂದಿನವರೆಗೂ ಕನ್ನಡಿಗರ ಸಂಸ್ಕೃತಿ,  ಪರಂಪರೆ ಮತ್ತು ಕನ್ನಡ ಭಾಷೆಯನ್ನು ಶ್ರೀಮಂತಗೊಳಿಸಲು ಅನೇಕ ಕಾರ್ಯಕ್ರಮ ಗಳನ್ನು ಆಯೋಜಿಸುವ ಮೂಲಕ ಶ್ರಮಿಸುತ್ತಿದ್ದಾರೆ.

    ಕನ್ನಡ ಸಂಘ (ಸಿಂಗಾಪುರ)ವು ವಚನ ಸಾಹಿತ್ಯದ ಸಾರಾಮೃತವನ್ನು ಹರಡುವ, ಹಂಚುವ ಸದುದ್ದೇಶದಿಂದ ಸುಮಾರು 13 ವರ್ಷಗಳಿಂದ ನಡೆಸಿಕೊಂಡು ಬರುತ್ತಿರುವ ಕಾರ್ಯಕ್ರಮವೇ ವಚನಾಂಜಲಿ.  ಪ್ರತೀ ವರ್ಷ ವಿವಿಧ ರೂಪಗಳಲ್ಲಿ ಆಚರಿಸಿಕೊಂಡು ಬಂದಂತಹ ವಚನಾಂಜಲಿ, ಶಾಸ್ತ್ರೀಯ ಸಂಗೀತ, ಜನಪದ ಶೈಲಿಯ ಹಾಡುಗಳ ಮೂಲಕ, ಭರತ ನಾಟ್ಯದಲ್ಲಿನ ನೃತ್ಯ ರೂಪಕಗಳಲ್ಲಿ, ಸಾಂಸ್ಕೃತಿಕವಾಗಿ ಆಚರಿಸಿಕೊಂಡು ಬಂದಿರುವುದು ಒಂದೆಡೆಯಾದರೆ, ಸಾಹಿತ್ಯದ ಒಳ ಅರಿವನ್ನು ಅರಿಯುವ ಹಾದಿಯಲ್ಲಿ ವಿಚಾರ ಗೋಷ್ಠಿಗಳು, ವಿಚಾರ ಸಂಕಿರಣ, ಸಂವಾದಗಳ ಮೂಲಕ ಅರ್ಥಪೂರ್ಣವಾಗಿ ನಡೆಸಿಕೊಂಡು ಬರುತ್ತಿದೆ. ಅದರ ಭಾಗವಾಗಿ ಈ ಬಾರಿ ವಿರಾಟ ಪುರ ವಿರಾಗಿ ಸಿನಿಮಾ ಪ್ರದರ್ಶನವಾಯಿತು.

    ತುಂಬಿದ ಸಭಾಂಗಣದಲ್ಲಿ ವಿರಾಟಪುರ ವಿರಾಗಿ  ಚಲನಚಿತ್ರ ಪ್ರದರ್ಶನ, ವಚನ ಸಾಹಿತ್ಯದ ಬಗೆಗಿನ ವಿಚಾರ ಗೋಷ್ಠಿ, ವಚನ ಸ್ಪರ್ಧೆಗಳಲ್ಲಿನ ವಿಜೇತರಿಗೆ ಬಹುಮಾನ ವಿತರಣೆ ಕೊನೆಯಲ್ಲಿ ದಾಸೋಹದೊಂದಿಗೆ ಅನೇಕ ವಿಚಾರಗಳ ವಿವರಣೆ, ವಿಮರ್ಶೆ, ವಿತರಣೆ ಕಾರ್ಯಗಳು ಜರುಗಿದವು. ಕನ್ನಡ ಸಂಘ ಸಿಂಗಾಪುರ ಅಧ್ಯಕ್ಷ ವೆಂಕಟ ರತ್ನಯ್ಯ (Venkata Ratnaya)ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಆ.20ಕ್ಕೆ ಸಿಂಗಾಪುರದಲ್ಲಿ ‘ವಿರಾಟಪುರ ವಿರಾಗಿ’: ನಿರ್ದೇಶಕ ಬಿ.ಎಸ್.ಲಿಂಗದೇವರು ಭಾಗಿ

    ಆ.20ಕ್ಕೆ ಸಿಂಗಾಪುರದಲ್ಲಿ ‘ವಿರಾಟಪುರ ವಿರಾಗಿ’: ನಿರ್ದೇಶಕ ಬಿ.ಎಸ್.ಲಿಂಗದೇವರು ಭಾಗಿ

    ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಬಿ.ಎಸ್.ಲಿಂಗದೇವರು (BS Lingadevaru) ನಿರ್ದೇಶನದಲ್ಲಿ ಮೂಡಿ ಬಂದಿರುವ ‘ವಿರಾಟಪುರ ವಿರಾಗಿ’ (Viratpur Viragi) ಸಿನಿಮಾ ಆಗಸ್ಟ್ 20ರಂದು ಸಿಂಗಾಪುರದ ಕನ್ನಡ ಸಂಘ ಆಯೋಜನೆ ಮಾಡಿರುವ ‘ವಚನಾಂಜಲಿ 2023’ರ ಕಾರ್ಯಕ್ರಮದಲ್ಲಿ ಪ್ರದರ್ಶನ ಕಾಣಲಿದೆ. ಈ ಕಾರ್ಯಕ್ರಮದಲ್ಲಿ ನಿರ್ದೇಶಕ ಬಿ.ಎಸ್.ಲಿಂಗದೇವರು ಮತ್ತು ನಾಯಕ ನಟ ಸುಚೇಂದ್ರ ಪ್ರಸಾದ್ (Suchendra Prasad) ಅವರು ಭಾಗಿಯಾಗಲಿದ್ದಾರೆ.

    ಆಗಸ್ಟ್ 20ರಂದು ಸಿಂಗಾಪುರದ (Singapore) ಸಿವಿಲ್ ಸರ್ವೀಸ್ ಕ್ಲಬ್ ನಲ್ಲಿ ಸಂಜೆ 5 ಗಂಟೆಯಿಂದ ರಾತ್ರಿ 9 ಗಂಟೆಯೊಳಗೆ ಈ ಕಾರ್ಯಕ್ರಮವನ್ನು ಸಿಂಗಪುರದ ಕನ್ನಡ ಸಂಘ ಆಯೋಜನೆ ಮಾಡಿದೆ. ಈ ಹಿಂದೆ ವಿರಾಟಪುರ ವಿರಾಗಿ ಸಿನಿಮಾ  ಆಸ್ಟ್ರೇಲಿಯಾದ (Australia) ಸಿಡ್ನಿಯಲ್ಲಿ(Sydney) ಪ್ರದರ್ಶನ ಕಂಡಿತ್ತು. ಇವೆಂಟ್ ಸಿನಿಮಾಸ್ ಲೈವರ್ ಪೋಲ್ ಆಸ್ಟ್ರೇಲಿಯಾದಲ್ಲಿ ಸಿನಿಮಾ ಪ್ರದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಇದನ್ನೂ ಓದಿ:‘ಬಾಹುಬಲಿ’ ಪ್ರಭಾಸ್- ಅನುಷ್ಕಾ ಶೆಟ್ಟಿ ಅಭಿಮಾನಿಗಳಿಗೆ ಕೊನೆಗೂ ಸಿಕ್ತು ಗುಡ್‌ ನ್ಯೂಸ್

    ಹಾನಗಲ್ಲ (Hanagalla) ಕುಮಾರಸ್ವಾಮಿಗಳ (Kumaraswamy) ಜೀವನವನ್ನು ಆಧರಿಸಿದ ಸಿನಿಮಾ ಇದಾಗಿದ್ದು, ಭಾರೀ ಬಜೆಟ್ ಸಿನಿಮಾಗಳೇ ಸೋಲಿನ ಹಾದಿ ಹಿಡಿದಿರುವ ಸಂದರ್ಭದಲ್ಲಿ ವಿರಾಟಪುರ ವಿರಾಗಿ ಸಿನಿಮಾ ಭಾರೀ ಯಶಸ್ಸು ಕಂಡಿದೆ. ಸತತ ಮೂವತ್ತೈದು ದಿನಗಳಿಂದ ಹಲವು ಕಡೆ ಸಿನಿಮಾ ಪ್ರದರ್ಶನ ಕಾಣುತ್ತಿದೆ. ಕಲಬುರಗಿ ನಗರವೊಂದರಲ್ಲೇ ನೂರು ಪ್ರದರ್ಶನಗಳನ್ನು ಕಂಡು ದಾಖಲೆ ಬರೆದಿದೆ. ಕರ್ನಾಟಕದಾದ್ಯಂತ ಈವರೆಗೂ ಮೂರು ಸಾವಿರಕ್ಕೂ ಹೆಚ್ಚು ಪ್ರದರ್ಶನಗಳನ್ನು ಕಂಡಿದೆ.

    ಸಿನಿಮಾ ಬಿಡುಗಡೆಗೆ ಮುನ್ನವೇ 75 ಸಾವಿರಕ್ಕೂ ಅಧಿಕ ಟಿಕೆಟ್ ಮಾರಾಟವಾಗಿ ಹೊಸ ದಾಖಲೆ ಬರೆದಿದ್ದ  ಈ ಸಿನಿಮಾ ಈವರೆಗೂ 750ಕ್ಕೂ ಹೆಚ್ಚು ಶೋಗಳು ಹೌಸ್ ಫುಲ್ ಆಗಿವೆ. 62ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿದೆ. ಕಲಬುರಗಿಯಲ್ಲೇ 82 ಶೋಗಳು ಹೌಸ್ ಫುಲ್ ಪ್ರದರ್ಶನ ಕಂಡಿದೆ. ಈ ವರ್ಷದಲ್ಲಿ ಹೆಚ್ಚು ಸದ್ದು ಮಾಡಿದ ಸಿನಿಮಾಗಳ ಪಟ್ಟಿಯಲ್ಲಿ ಈ ಚಿತ್ರ ಕೂಡ ಕಾಣಿಸಿಕೊಂಡಿದೆ.

     

    ಮಣಿಕಾಂತ್ ಕದ್ರಿ ಸಂಗೀತ ಸಂಯೋಜನೆಯಲ್ಲಿ ಮೂಡಿ ಬಂದ ಹಾಡುಗಳು ಕೂಡ ಕೇಳುಗರ ಗಮನ ಸೆಳೆದಿದ್ದು, ಈ ಸಿನಿಮಾವನ್ನು ಜನರಿಗೆ ತಲುಪಿಸುವುದಕ್ಕಾಗಿಯೇ ಹಾನಗಲ್ಲ ಕುಮಾರಸ್ವಾಮಿಗಳ ಭಕ್ತರು ರಥಯಾತ್ರೆ ಮತ್ತು ಗದಗ ಸೇರಿದಂತೆ ಹಲವು ಕಡೆ ಕಾರ್ಯಕ್ರಮಗಳನ್ನು ಆಯೋಜನೆ ಮಾಡಿದ್ದರು. ರಾಜ್ಯಾದ್ಯಂತ ರಥೆಯಾತ್ರೆ ಪ್ರವಾಸ ಮಾಡಿ, ಸಿನಿಮಾ ಮುಟ್ಟಿಸುವಲ್ಲಿ ಗೆದ್ದಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬಿಡುಗಡೆಗೂ ಮುನ್ನ‘ವಿರಾಟಪುರ ವಿರಾಗಿ’ ಚಿತ್ರದ 75 ಸಾವಿರ ಟಿಕೆಟ್ ಸೋಲ್ಡ್ ಔಟ್

    ಬಿಡುಗಡೆಗೂ ಮುನ್ನ‘ವಿರಾಟಪುರ ವಿರಾಗಿ’ ಚಿತ್ರದ 75 ಸಾವಿರ ಟಿಕೆಟ್ ಸೋಲ್ಡ್ ಔಟ್

    ಹಾನಗಲ್ಲ ಕುಮಾರಸ್ವಾಮಿಗಳ ಜೀವನವನ್ನು ಆಧರಿಸಿದ ‘ವಿರಾಟಪುರ ವಿರಾಗಿ’ ಸಿನಿಮಾ ಜನವರಿ 13 ರಂದು ದೇಶದಾದ್ಯಂತ ಬಿಡುಗಡೆ ಆಗುತ್ತಿದೆ. ಸಿನಿಮಾ ರಿಲೀಸ್ ಗೂ ಮುನ್ನ ಚಿತ್ರದ 75 ಸಾವಿರಕ್ಕೂ ಹೆಚ್ಚು ಟಿಕೆಟ್ ಗಳು ಮಾರಾಟವಾಗಿವೆ. ಬಿಡುಗಡೆಯ ಹೊತ್ತಿಗೆ ಈ ಸಂಖ್ಯೆ ಒಂದು ಲಕ್ಷ ದಾಟಬಹುದು ಎಂದು ನಿರ್ದೇಶಕ ಬಿ.ಎಸ್.ಲಿಂಗದೇವರು ಹರ್ಷ ವ್ಯಕ್ತ ಪಡಿಸಿದ್ದಾರೆ. ಈ ರೀತಿಯ ಸಿನಿಮಾಗಳಿಗೆ ಇಂತಹ ಬೆಂಬಲ ಸಿಕ್ಕಿದ್ದು ನಿಜಕ್ಕೂ ಅಚ್ಚರಿ ತಂದಿದೆ ಎನ್ನುವುದು ಅವರ ಮಾತು.

    ಮೊನ್ನೆಯಷ್ಟೇ ಈ ಸಿನಿಮಾದ ಟ್ರೈಲರ್ ಗದಗನಲ್ಲಿ ಅದ್ಧೂರಿಯಾಗಿ ಬಿಡುಗಡೆ ಆಯಿತು. ಈ ಟ್ರೈಲರ್ ಬಿಡುಗಡೆ ಸಮಾರಂಭಕ್ಕೆ ಐದು ಸಾವಿರಕ್ಕೂ ಹೆಚ್ಚು ಜನರು, ನಾಡಿನ ಅನೇಕ ಮಠಾಧೀಶರು ಹಾಗೂ ಜನಪ್ರತಿನಿಧಿಗಳು ಸಾಕ್ಷಿಯಾಗಿದ್ದರು. ಅವರ ಸಮ್ಮುಖದಲ್ಲಿ ರಿಲೀಸ್ ಆಗಿರುವ ಟ್ರೈಲರ್ ಗೂ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಇಂಥದ್ದೊಂದು ಸಿನಿಮಾ ಈ ಹೊತ್ತಿಗೆ ತುರ್ತಾಗಿ ಬೇಕಿತ್ತು ಎನ್ನುವ ಮಾತುಗಳನ್ನು ಅನೇಕರು ಆಡಿದ್ದಾರೆ. ಇದನ್ನೂ ಓದಿ: ರಶ್ಮಿಕಾ ಮಂದಣ್ಣ ಎಂಟ್ರಿಯಿಂದ ವಿಜಯ್- ಸಂಗೀತಾ ದಾಂಪತ್ಯದಲ್ಲಿ ಕಲಹ?

    ವಿರಾಟಪುರ ವಿರಾಗಿ ಸಿನಿಮಾದ ಟ್ರೈಲರ್ ಅನ್ನು ಬಿಡುಗಡೆ ಮಾಡಿ ಮಾತನಾಡಿದ್ದ ಜನಪ್ರಿಯ ಯುವ ನಾಯಕ ಬಿ.ವೈ ವಿಜಯೇಂದ್ರ ‘ಇಂಥದ್ದೊಂದು ಸಿನಿಮಾ ಆಗಿದೆ ಎನ್ನುವುದೇ ನಮಗೊಂದು ಹೆಮ್ಮೆ. ಈ ಸಿನಿಮಾವನ್ನು ನಾವೆಲ್ಲರೂ ಗೆಲ್ಲಿಸಬೇಕು. ಟ್ರೈಲರ್ ನೋಡಿದ ಮೇಲೆ ಸಿನಿಮಾ ನೋಡಬೇಕು ಎನ್ನುವ ಕುತೂಹಲ ಇನ್ನೂ ಹೆಚ್ಚಾಗಿದೆ. ಅಪರೂಪದ ಸಿನಿಮಾ ಮಾಡಿರುವ ಬಿ.ಎಸ್.ಲಿಂಗದೇವರು ಮತ್ತು ಮೌನತಪಸ್ವಿ ಜಡೆಯ ಶಾಂತಲಿಂಗೇಶ್ವರ ಮಹಾಸ್ವಾಮಿಗಳಿಗೆ ನಾವೆಲ್ಲರೂ ಋಣಿಯಾಗಿರಬೇಕು’ ಎಂದಿದ್ದರು.

    ಈ ಸಿನಿಮಾವನ್ನು ಜನರಿಗೆ ತಲುಪಿಸುವುದಕ್ಕಾಗಿ ವಿನೂತನವಾಗಿ ರಥೆಯಾತ್ರೆ ಆರಂಭಿಸಿತ್ತು ಚಿತ್ರತಂಡ.  20-12-22 ರಂದು 6 ರಥಗಳು  ರಾಜ್ಯದ ವಿವಿಧ ಭಾಗಗಳಿಂದ ಹೊರಟು 7000 ಕಿಮೀ ಪ್ರಯಾಣ ಮಾಡಿ, 400ಕ್ಕೂ ಹೆಚ್ಚು ಸಭೆ ನಡೆಸಿ ಸುಮಾರು ಒಂದು ಕೋಟಿ ಜನರಿಗೆ ಹಾನಗಲ್ ಶ್ರೀಗಳು ಮತ್ತು ವಿರಾಟಪುರ ವಿರಾಗಿ ಸಿನಿಮಾ ಬಗ್ಗೆ ಜಾಗೃತಿ ಮೂಡಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ‘ವಿರಾಟಪುರ ವಿರಾಗಿ’ ಸಿನಿಮಾದ ಧ್ವನಿ ಸುರುಳಿ ರಿಲೀಸ್ ಮಾಡಿ, ರಥಯಾತ್ರೆಗೆ ಚಾಲನೆ ನೀಡಿದ ಸಿಎಂ

    ‘ವಿರಾಟಪುರ ವಿರಾಗಿ’ ಸಿನಿಮಾದ ಧ್ವನಿ ಸುರುಳಿ ರಿಲೀಸ್ ಮಾಡಿ, ರಥಯಾತ್ರೆಗೆ ಚಾಲನೆ ನೀಡಿದ ಸಿಎಂ

    ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಬಿ.ಎಸ್.ಲಿಂಗದೇವರು ನಿರ್ದೇಶನದಲ್ಲಿ ಮೂಡಿ ಬಂದಿರುವ ಹಾನಗಲ್ ಶ್ರೀ ಕುಮಾರ ಶಿವಯೋಗಿಗಳ ಜೀವನ ಚರಿತ್ರೆ ಆಧಾರಿತ ‘ವಿರಾಟಪುರ ವಿರಾಗಿ’ ಚಿತ್ರದ ಧ್ವನಿ ಸುರಳಿ ಬಿಡುಗಡೆ ಹಾಗೂ ಕುಮಾರೇಶ್ವರ ರಥ ಯಾತ್ರೆಗೆ ಇಂದು ಸಿಎಂ ಬಸವರಾಜ ಬೊಮ್ಮಾಯಿ ಬೆಳಗಾವಿಯಲ್ಲಿ ಚಾಲನೆ ನೀಡಿದರು. ಧ್ವನಿ ಸುರಳಿ ಬಿಡುಗಡೆ ಮಾಡಿ, ರಥ ಯಾತ್ರೆಗೆ ಚಾಲನೆ ನೀಡಿದ ನಂತರ ಸಿನಿಮಾ ಕುರಿತಾಗಿ ಅವರು ಮಾತನಾಡಿದರು.

    ಸಿನಿಮಾದ ಬಗ್ಗೆ ಮಾತನಾಡಿದ ಸಿಎಂ, ‘ಹಾನಗಲ್ ಕುಮಾರಸ್ವಾಮಿಗಳು ೧೨ ಶತಮಾನದ ಆಧ್ಯಾತ್ಮಿಕ ಕ್ರಾಂತಿ ಮಾಡಿದವರು. ವೀರಶೈವ ಲಿಂಗಾಯತ ಸಮುದಾಯವನ್ನು ಎತ್ತಿ ಹಿಡಿದವರು. ಅವರು ಸ್ಥಾಪನೆ ಮಾಡಿರುವ ಶಿವಯೋಗಿ ಮಂದಿರ ಮಹಾನ್ ಸಂಸ್ಥೆಯಾಗಿದೆ. ನಮ್ಮ ಪರಂಪರೆ. ಸಂಸ್ಕಾರವನ್ನು ಅದು ಕಾಪಾಡಿಕೊಂಡು ಬರುತ್ತಿದೆ. ಶಿವಯೋಗಿ ಮಂದಿರ ಜೀಣೋದ್ದಾರಕ್ಕಾಗಿ ಬಿ.ಎಸ್. ಯಡ್ಯೂರಪ್ಪನವರು ಸಿಎಂ ಆಗಿದ್ದ ವೇಳೆ ಅನುದಾನ ನೀಡಿದ್ದರು’ ಎಂದು ಹೇಳಿದರು. ಇದನ್ನೂ ಓದಿ: ಭಾರತದಲ್ಲಿ 150 ಕೋಟಿಗೂ ಅಧಿಕ ಗಳಿಕೆ ಮಾಡಿದ ‘ಅವತಾರ್ 2’ ಸಿನಿಮಾ

    ಮುಂದುವರೆದು ಮಾತನಾಡಿದ ಸಿ.ಎಂ, ‘ವೀರಶೈವ ಲಿಂಗಾಯತ ಸಮುದಾಯ ಚಲನಶೀಲ ಸಮಾಜ. ಎಲ್ಲರನ್ನೂ ಒಪ್ಪಿಕೊಳ್ಳುವ ಅಪ್ಪಿಕೊಳ್ಳುವ ಪ್ರಗತಿಪರವಾಗಿರುವ ಸಮಾಜವಾಗಿದೆ. ಬೆಳಗಾವಿಯ ಗಡಿಭಾಗದಿಂದ ಹಿಡಿದು ಕೊಳ್ಳಗಾಲದವರೆಗೂ ವೀರಶೈವ ಲಿಂಗಾಯತ ಮಠದ ಶಿಕ್ಷಣ ಸಂಸ್ಥೆಗಳನ್ನು ತೆರಯಲಾಗಿದೆ. ಸಿನಮಾ ಒಂದು ಒಳ್ಳೆಯ ಕೆಲಸವಾಗಿದೆ. ಸಂಶೋಧನೆ ಮಾಡಿ ಚಿತ್ರ ಮಾಡಿದ್ಸಾರೆ. ಸಿನಿಮಾದಲ್ಲಿನ ಜೀವನ ಚರಿತ್ರೆ ಎಲರಿಗೂ ಪ್ರೇರಣೆಯಾಗಬೇಕು’ ಎಂದರು ಬಸವರಾಜ್ ಬೊಮ್ಮಾಯಿ.

    ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯ್ಯೂರಪ್ಪ, ಚಿತ್ರ ನಿರ್ದೇಶಕ ಬಿ.ಎಸ್.ಲಿಂಗದೇವರು ಹಾಗೂ ಅನೇಕ ಮಠಾಧೀಶರು ಉಪಸ್ಥಿತರಿದ್ದರು. ಹಾನಗಲ್ಲ ಕುಮಾರ ಶಿವಯೋಗಿಗಳ ಜೀವನಚರಿತ್ರೆ ಆಧರಿತ ಸಿನಿಮಾ ‘ವಿರಾಟಪುರ ವಿರಾಗಿ’ ಸಿದ್ಧವಾಗಿದೆ. ಸಮಾಧಾನ ಸಂಸ್ಥೆ ನಿರ್ಮಾಣದಲ್ಲಿ ಮೂಡಿ ಬಂದಿರುವ ಈ ಸಿನಿಮಾದ  ಹಿನ್ನೆಲೆಯನ್ನು ಸಾರುವುದಕ್ಕಾಗಿ ಕುಮಾರ ಶಿವಯೋಗಿಗಳ ನೆನಪಿನಲ್ಲಿ ‘ವಿರಾಗಿ ಶ್ರೀ ಕುಮಾರೇಶ್ವರ ರಥಯಾತ್ರೆ’ ನಡೆಸಲು ಉದ್ದೇಶಿಸಲಾಗಿದೆ.

    ರಾಜ್ಯಾದ್ಯಂತ ಆರು ರಥಗಳು, ಹದಿಮೂರು ದಿನಗಳ ಕಾಲ, ಏಳು ಸಾವಿರ ಕಿಲೋ ಮೀಟರ್ ಪಯಣವನ್ನು ಮಾಡಲಿವೆ. ಈ ರಥಯಾತ್ರೆಯಲ್ಲಿ ಒಟ್ಟು 360 ಸಭೆಗಳನ್ನೂ ಆಯೋಜನೆ ಮಾಡಲಾಗಿದ್ದು, ಒಂದು ಕೋಟಿ ಜನರನ್ನು ಮುಟ್ಟುವ ಗುರಿಯನ್ನು ಹೊಂದಲಾಗಿದೆ ಎಂದು ಲಿಂಗದೇವರು ತಿಳಿಸಿದ್ದಾರೆ. ಡಿಸೆಂಬರ್ 20ರಂದು ಶುರುವಾಗಲಿರುವ ಈ ರಥಯಾತ್ರೆಯು ಜನವರಿ 1 ರಂದು ಗದಗನಲ್ಲಿ ಮುಕ್ತಾಯಗೊಳ್ಳಲಿದೆ.

    Live Tv
    [brid partner=56869869 player=32851 video=960834 autoplay=true]

  • ಲಿಂಗದೇವರು ನಿರ್ದೇಶನದ ‘ವಿರಾಟಪುರ ವಿರಾಗಿ’ ಸಿನಿಮಾಗಾಗಿ 7000 ಕಿಲೋಮೀಟರ್ ರಥಯಾತ್ರೆ

    ಲಿಂಗದೇವರು ನಿರ್ದೇಶನದ ‘ವಿರಾಟಪುರ ವಿರಾಗಿ’ ಸಿನಿಮಾಗಾಗಿ 7000 ಕಿಲೋಮೀಟರ್ ರಥಯಾತ್ರೆ

    ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ ಬಿ.ಎಸ್.ಲಿಂಗದೇವರು ನಿರ್ದೇಶನದಲ್ಲಿ ಮೂಡಿ ಬಂದಿರುವ, ಹಾನಗಲ್ಲ ಕುಮಾರ ಶಿವಯೋಗಿಗಳ ಜೀವನಚರಿತ್ರೆ ಆಧರಿತ ಸಿನಿಮಾ ‘ವಿರಾಟಪುರ ವಿರಾಗಿ’ ಸಿದ್ಧವಾಗಿದೆ. ಸಮಾಧಾನ ಸಂಸ್ಥೆ ನಿರ್ಮಾಣದಲ್ಲಿ ಮೂಡಿ ಬಂದಿರುವ ಈ ಸಿನಿಮಾದ  ಹಿನ್ನೆಲೆಯನ್ನು ಸಾರುವುದಕ್ಕಾಗಿ ಕುಮಾರ ಶಿವಯೋಗಿಗಳ ನೆನಪಿನಲ್ಲಿ ‘ವಿರಾಗಿ ಶ್ರೀ ಕುಮಾರೇಶ್ವರ ರಥಯಾತ್ರೆ’ ನಡೆಸಲು ಉದ್ದೇಶಿಸಲಾಗಿದೆ.

    ರಾಜ್ಯಾದ್ಯಂತ ಆರು ರಥಗಳು, ಹದಿಮೂರು ದಿನಗಳ ಕಾಲ, ಏಳು ಸಾವಿರ ಕಿಲೋ ಮೀಟರ್ ಪಯಣವನ್ನು ಮಾಡಲಿವೆ. ಈ ರಥಯಾತ್ರೆಯಲ್ಲಿ ಒಟ್ಟು 360 ಸಭೆಗಳನ್ನೂ ಆಯೋಜನೆ ಮಾಡಲಾಗಿದ್ದು, ಒಂದು ಕೋಟಿ ಜನರನ್ನು ಮುಟ್ಟುವ ಗುರಿಯನ್ನು ಹೊಂದಲಾಗಿದೆ ಎಂದು ಲಿಂಗದೇವರು ತಿಳಿಸಿದ್ದಾರೆ. ಡಿಸೆಂಬರ್ 20ರಂದು ಶುರುವಾಗಲಿರುವ ಈ ರಥಯಾತ್ರೆಯು ಜನವರಿ 1 ರಂದು ಗದಗನಲ್ಲಿ ಮುಕ್ತಾಯಗೊಳ್ಳಲಿದೆ. ಇದನ್ನೂ ಓದಿ: ನಾನು ಪಠಾಣ್ ಸಿನಿಮಾ ನೋಡುತ್ತೇನೆ: ಬಹಿರಂಗವಾಗಿ ಘೋಷಿಸಿಕೊಂಡ ನಟ ಪ್ರಕಾಶ್ ಬೆಳವಾಡಿ

    ಸಿನಿಮಾ ಕುರಿತು ಮತ್ತೋರ್ವ ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಗಿರೀಶ್ ಕಾಸರವಳ್ಳಿ, ‘ಕುಮಾರ ಶಿವಯೋಗಿಗಳು ಒಂದು ದಂತಕಥೆ. ಒಬ್ಬ ಮನುಷ್ಯ ತನ್ನ ಜೀವಿತಾಧಿಯಲ್ಲಿ ಏನೇನು ಮಾಡಲು ಅಸಾಧ್ಯವೋ ಅದನ್ನೆಲ್ಲಾ ಸಾಧ್ಯ ಮಾಡಿದ್ದಾರೆ. ಗಾಂಧೀಜಿಯವರು ಭಾರತಕ್ಕೆ ಬರುವ ಕೆಲವು ವರ್ಷಗಳ ಮೊದಲೇ ಗಾಂಧೀಜಿ ಅವರು ಆದರ್ಶ ಅಂದುಕೊಂಡಿದ್ದ ಬಹುತೇಕ ಕೆಲಸಗಳನ್ನು ಮಾಡಿ ತೋರಿಸಿದವರು ಹಾನಗಲ್ಲ ಗುರುಕುಮಾರ ಶಿವಯೋಗಿಗಳು’ ಎಂದು ಮಾತನಾಡಿದ್ದಾರೆ.

    ಹಾನಗಲ್ಲ  ಕುಮಾರೇಶ್ವರನನ್ನು 2ನೇ ಬಸವಣ್ಣ ಎಂದು ಕರೆಯಲಾಗುತ್ತದೆ. ಸ್ವಾತಂತ್ರ್ಯ ಪೂರ್ವದ ವಿಪರ್ಯಾಸದ ದಿನಗಳಲ್ಲಿ ನಾಡಿನ ಹಿತಕ್ಕಾಗಿ ನಿಂತವರು ಹಾನಗಲ್ಲ ಶ್ರೀಗಳು. ಮಠದಿಂದ ಘಟ ಬೆಳಗಬಾರದು – ಘಟದಿಂದ ಮಠ ಬೆಳಗಬೇಕೆಂದು ಸಾಧಿಸಿ ತೋರಿಸಿದವರು. 19ನೇ ಶತಮಾನದ ಆದಿಯಲ್ಲಿಯೇ ಅವರು ಹೊಸ ಮನ್ವಂತರಕ್ಕೆ ಭದ್ರ ಬುನಾದಿ ಹಾಕಿದವರು. ಸಮ ಸಮಾಜ ನಿರ್ಮಾಣದ ರೂವಾರಿಗಳು. ಸರ್ವರಿಗೂ ಶಿಕ್ಷಣ. ಅಂಧರ ಬಾಳಿಗೆ ಸಂಗೀತ ಶಿಕ್ಷಣ. ಅಖಿಲ ಭಾರತ ವೀರಶೈವ (ಲಿಂಗಾಯತ) ಮಹಾಸಭಾ ಸ್ಥಾಪನೆ. ಮಹಿಳಾ ಶಿಕ್ಷಣ ಮತ್ತು ಸ್ತ್ರೀ ಸಬಲೀಕರಣ. ಶಿವಯೋಗ ಮಂದಿರ ಸ್ಥಾಪನೆ. ವಚನ ತಾಡೋಲೆಗಳ ಸಂಗ್ರಹ ಮತ್ತುಗ್ರಂಥಾಲಯ ಸ್ಥಾಪನೆ. ಅಧುನಿಕ ಕೃಷಿ ಪದ್ಧತಿ ಮತ್ತು ಗೋಶಾಲೆ ಸ್ಥಾಪನೆ. ವಿಭೂತಿ ಹಾಗೂ ಇಷ್ಟ ಲಿಂಗದ ನಿರ್ಮಾಣ, ಹತ್ತಿ ಕಾರ್ಖಾನೆಯ ಸ್ಥಾಪನೆ. ಆಯುರ್ವೇದಚಿಕಿತ್ಸಾಲಯ ಸ್ಥಾಪನೆ. ಚಿತ್ರಮಂದಿರಗಳ ಪ್ರಾರಂಭ, ಪ್ರಾಣಿ ಬಲಿ ನಿಷೇಧ. ಹೀಗೆ ಹತ್ತು ಹಲವಾರು ಸಾಧ್ಯತೆಗಳನ್ನು ಸಾಧ್ಯವಾಗಿಸಿದವರು  ಇವೆಲ್ಲವುಗಳನ್ನೂ ಸಿನಿಮಾದಲ್ಲಿ ಹೇಳುವ ಪ್ರಯತ್ನ ಮಾಡಿದ್ದಾರಂತೆ ಲಿಂಗದೇವರು.

    ಕನ್ನಡದ ಖ್ಯಾತ ನಟ ಸುಚೇಂದ್ರ ಪ್ರಸಾದ್ ಹಾನಗಲ್ ಕುಮಾರ ಶ್ರೀಗಳ ಪಾತ್ರವನ್ನು ನಿರ್ವಹಿಸಿದ್ದು, ಲೇಖಕಿ ಕುಸುಮಾ ಆಯರಹಳ್ಳಿ ಅವರ ಪುತ್ರ ಸಮರ್ಥ ಆಯರಹಳ್ಳಿ ಹಾನಗಲ್ ಕುಮಾರ ಶ್ರೀಗಳ ಬಾಲ್ಯದ ಪಾತ್ರ ಮಾಡಿದ್ದಾರೆ. ಕರ್ನಾಟಕದ ನಾನಾ ಮಠಗಳ ಮಠಾಧೀಶರು ಕೂಡ ಪಾತ್ರ ಮಾಡಿರುವುದು ವಿಶೇಷ. ಮಣಿಕಾಂತ್ ಕದ್ರಿ ಸಂಗೀತ ಸಂಯೋಜನೆಯಲ್ಲಿ ಹಾಡುಗಳು ಮೂಡಿ ಬಂದಿದ್ದು, ಅಶೋಕ್ ವಿ ರಾಮನ್ ಅವರ ಸಿನಿಮಾಟೋಗ್ರಫಿ ಹಾಗೂ ಎಸ್. ಗುಣಶೇಖರನ್ ಅವರು ಸಂಕಲನ ಚಿತ್ರಕ್ಕಿದೆ. ಈಗಾಗಲೇ ಸಿನಿಮಾದ ಫಸ್ಟ್ ಲುಕ್ ಕೂಡ ರಿಲೀಸ್ ಆಗಿದ್ದು ಮೆಚ್ಚುಗೆ ವ್ಯಕ್ತವಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಲಿಂಗದೇವರು ನಿರ್ದೇಶನದ ‘ವಿರಾಟಪುರ ವಿರಾಗಿ’ ಸಿನಿಮಾದ ಫಸ್ಟ್ ಲುಕ್ ರಿಲೀಸ್

    ಲಿಂಗದೇವರು ನಿರ್ದೇಶನದ ‘ವಿರಾಟಪುರ ವಿರಾಗಿ’ ಸಿನಿಮಾದ ಫಸ್ಟ್ ಲುಕ್ ರಿಲೀಸ್

    ಧುನಿಕ ಬಸವಣ್ಣ ಎಂದೇ ಖ್ಯಾತರಾಗಿರುವ ಹಾನಗಲ್ ಕುಮಾರ ಶಿವಯೋಗಿಗಳ ಜೀವನಾಧಾರಿತ “ವಿರಾಟಪುರ ವಿರಾಗಿ” ಚಿತ್ರದ ಮೊದಲ ನೋಟ ಇತ್ತೀಚಿಗೆ ಬಿಡುಗಡೆಯಾಯಿತು.  ಶ್ರೀಜಡೆಯ ಶಾಂತಲಿಂಗೇಶ್ವರ ಮಹಾಸ್ವಾಮಿಗಳು, ಶ್ರೀ ಸದಾಶಿವ ಮಹಾಸ್ವಾಮಿಗಳು ಹಾವೇರಿ, ಶ್ರೀ ಸಂಗಮೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು, ಶ್ರೀ ಘನಬಸವ ಅಮರೇಶ್ವರ ಮಹಾಸ್ವಾಮಿಗಳು ಶಿವಮೊಗ್ಗ, ಕರ್ನಾಟಕ ಚಲನಚಿತ್ರ ವೀರಶೈವ ಲಿಂಗಾಯಿತ ಮಹಾಸಭಾ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ, ಪದ್ಮಶ್ರೀ ಪುರಸ್ಕೃತ ನಿರ್ದೇಶಕ ಗಿರೀಶ್ ಕಾಸರವಳ್ಳಿ ಹಾಗೂ ಮಾಜಿ ಸಚಿವರಾದ ಅಲ್ಲಮ ವೀರಭದ್ರಪ್ಪ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು‌.‌ ಬಿ.ಎಸ್ ಲಿಂಗದೇವರು ಈ ಚಿತ್ರವನ್ನು ನಿರ್ದೇಶಿಸಿದ್ದಾರೆ‌.‌ ಸಮಾಧಾನ ತಂಡ ಈ ಚಿತ್ರವನ್ನು ನಿರ್ಮಾಣ ಮಾಡಿದೆ.

    ಎರಡೂ ವರೆ ವರ್ಷಗಳ ಹಿಂದೆ ಜಡೆಯ ಮಹಾಸ್ವಾಮಿಗಳು ನನಗೆ ಹಾನಗಲ್ ಕುಮಾರ ಶಿವಯೋಗಿಗಳ ಕುರಿತು ಸಿನಿಮಾ ಮಾಡಲು ಹೇಳಿದರು. ಆನಂತರ ನನ್ನ ಆಪ್ತರ ಬಳಿ ಈ ವಿಷಯವನ್ನು ಸಮಾಲೋಚನೆ ಮಾಡಿದೆ.  ಅವರೆಲ್ಲರೂ ನೀವು ಈ ಚಿತ್ರವನ್ನು ನಿರ್ದೇಶನ ಮಾಡಿ ಎಂದು ಧೈರ್ಯ ತುಂಬಿದರು. ನಾನು ನಿರ್ದೇಶನಕ್ಕೆ ಮುಂದಾದೆ.  ಅನೇಕ ಮಠಾಧೀಶರನ್ನು ಹಾಗೂ ವಿದ್ವಾಂಸರನ್ನು ಸಂಪರ್ಕಿಸಿ ಸ್ಕ್ರಿಪ್ಟ್ ಸಿದ್ದ ಮಾಡಿದೆ. “ಸಮಧಾನ” ತಂಡದಿಂದ ಚಿತ್ರ ನಿರ್ಮಾಣವಾಗಿದೆ. ಇದನ್ನೂ ಓದಿ: ರೂಪೇಶ್ ಶೆಟ್ಟಿ ವಿಚಾರವಾಗಿ, ಬಿಗ್ ಬಾಸ್ ವಿರುದ್ಧ ಸಾನ್ಯ ಅಯ್ಯರ್ ಗರಂ

    ಕುಮಾರ ಶಿವಯೋಗಿಗಳ ಪಾತ್ರದಲ್ಲಿ ಸುಚೇಂದ್ರ ಪ್ರಸಾದ್ ಆಭಿನಯಿಸಿದ್ದಾರೆ. ಈಗ ಚಿತ್ರ ಸಿದ್ದವಾಗಿದೆ. ಶಿಕ್ಷಣ, ಆರೋಗ್ಯ ಹಾಗೂ ಮಹಿಳಾ ಸಬಲೀಕರಣ ಸೇರಿದಂತೆ ಅನೇಕ ಅಭಿವೃದ್ಧಿ ಕಾರ್ಯಗಳ ಹರಿಕಾರರಾದ ಕುಮಾರ ಶಿವಯೋಗಿಗಳ ಜೀವನಾಧಾರಿತ ಈ ಚಿತ್ರದ ಮೊದಲ ನೋಟ ಪರಮಪೂಜ್ಯರ ಹಾಗೂ ಗಣ್ಯರ ಸಮ್ಮುಖದಲ್ಲಿ ಬಿಡುಗಡೆಯಾಗಿರುವುದು ತುಂಬಾ ಸಂತೋಷವಾಗಿದೆ. ಮಣಿಕಾಂತ್ ಕದ್ರಿ ಸಂಗೀತ ನಿರ್ದೇಶನ, ಅಶೋಕ್  ವಿ ರಾಮನ್ ಛಾಯಾಗ್ರಹಣ ಹಾಗೂ ಗುಣಶೇಖರನ್ ಸಂಕಲನ ಈ ಚಿತ್ರಕ್ಕಿದೆ ಎಂದು ನಿರ್ದೇಶಕ ಬಿ.ಎಸ್ ಲಿಂಗದೇವರು ಚಿತ್ರದ ಕುರಿತು ಮಾಹಿತಿ ನೀಡಿದರು.

    ಇಂತಹ ಪಾತ್ರದಲ್ಲಿ ನಾನು ಅಭಿನಯಿಸಿರುವುದು ನನ್ನ ಪುಣ್ಯ ಎಂದರು ನಟ ಸುಚೇಂದ್ರ ಪ್ರಸಾದ್. ನೂರು ವರ್ಷಗಳ ಹಿಂದೆ ಸಮಾಜ ಈ ರೀತಿ ಇರಲಿಲ್ಲ. ಅಂತಹ ಸಮಯದಲ್ಲಿ ಅನೇಕ ಸುಧಾರಣೆಗೆ ಮುಂದಾದ, ಆಧುನಿಕ ಬಸವಣ್ಣ ಎಂದೇ ಎಲ್ಲರಿಂದಲೂ ಕರೆಯಲ್ಪಡುವ ಹಾನಗಲ್ ಕುಮಾರ ಶಿವಯೋಗಿಗಳ ಜೀವನಾಧಾರಿತ ಈ ಚಿತ್ರವನ್ನು ಪ್ರತಿಯೊಬ್ಬರೂ ನೋಡಬೇಕು. ಲಿಂಗ ದೇವರು  ನಿರ್ದೇಶನದ ಈ ಚಿತ್ರ ಜನವರಿ 12ರಂದು ಬಿಡುಗಡೆಯಾಗಲಿದೆ. ಅದಕ್ಕೂ ಮುನ್ನ ರಾಜ್ಯದ ಐದು ಕಡೆಗಳಿಂದ ರಥಯಾತ್ರೆ ನಡೆಯಲಿದೆ ಎಂದು ಜಡೆ ಅಮರೇಶ್ವರ ಶ್ರೀಗಳು ತಿಳಿಸಿದರು. ಶಾಮನೂರು ಶಿವಶಂಕರಪ್ಪ, ನಿರ್ದೇಶಕ ಗಿರೀಶ್ ಕಾಸರವಳ್ಳಿ ಹಾಗೂ ಅಲ್ಲಮ ವೀರಭದ್ರಪ್ಪ ಮುಂತಾದ ಗಣ್ಯರು ಮಾತನಾಡಿ, ಚಿತ್ರಕ್ಕೆ ಶುಭ ಕೋರಿದರು.

    Live Tv
    [brid partner=56869869 player=32851 video=960834 autoplay=true]