Tag: Virender Sehwag

  • ತುಂಬಾ ಬೇಗ ಬ್ಯಾಟಿಂಗ್‌ಗೆ ಬಂದ್ರಿ – ಆರ್‌ಸಿಬಿ ವಿರುದ್ಧ 9ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಧೋನಿ ಕಾಲೆಳೆದ ಸೆಹ್ವಾಗ್

    ತುಂಬಾ ಬೇಗ ಬ್ಯಾಟಿಂಗ್‌ಗೆ ಬಂದ್ರಿ – ಆರ್‌ಸಿಬಿ ವಿರುದ್ಧ 9ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಧೋನಿ ಕಾಲೆಳೆದ ಸೆಹ್ವಾಗ್

    ಚೆನ್ನೈ: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ವಿರುದ್ಧ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ 50 ರನ್‌ಗಳ ಅಂತರದಲ್ಲಿ ಸೋಲು ಕಂಡ ನಂತರ ಮಾಜಿ ನಾಯಕ ಎಂ.ಎಸ್‌ ಧೋನಿ  (MS Dhoni) ಅವರ ಬ್ಯಾಟಿಂಗ್‌ ಕ್ರಮಾಂಕವು ಈಗ ಚರ್ಚೆ ಹುಟ್ಟುಹಾಕಿದೆ.

    ಚೆಪಾಕ್‌ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಆರ್‌ಸಿಬಿ, ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್‌ಗೆ 196 ರನ್‌ ಕಲೆಹಾಕಿತ್ತು. ಈ ಗುರಿ ಎದುರು ಆರಂಭಿಕ ಆಘಾತಕ್ಕೆ ಒಳಗಾದ ಸಿಎಸ್‌ಕೆ, 52 ರನ್ ಗಳಿಸುವಷ್ಟರಲ್ಲೇ ಪ್ರಮುಖ 4 ವಿಕೆಟ್‌ಗಳನ್ನು ಕಳೆದುಕೊಂಡಿತ್ತು.

    ಒಂದು ತುದಿಯಲ್ಲಿ ಆರಂಭಿಕ ರಚಿನ್ ರವೀಂದ್ರ (31 ಎಸೆತ, 41 ರನ್) ಉತ್ತಮವಾಗಿ ಆಡುತ್ತಿದ್ದರೂ, ಮತ್ತೊಂದೆಡೆ ವಿಕೆಟ್ ಉರುಳುತ್ತಾ ಸಾಗಿದ್ದವು. ಇದರಿಂದಾಗಿ ಅನಗತ್ಯ ರನ್‌ರೇಟ್‌ ಏರುತ್ತಾ ಸಾಗಿತ್ತು. 6ನೇ ವಿಕೆಟ್ ಉರುಳಿದಾಗ, ಸಿಎಸ್‌ಕೆ ಗೆಲುವಿಗೆ 7.1 ಓವರ್‌ಗಳಲ್ಲಿ 117 ರನ್ ಬೇಕಿತ್ತು. ಆದರೆ ಆಗಲೂ, ಧೋನಿ ಕ್ರೀಸ್‌ಗಿಳಿಯಲಿಲ್ಲ. ಅವರ ಬದಲು, ಬೌಲಿಂಗ್ ಆಲ್‌ರೌಂಡ‌ರ್ ಆ‌ರ್.ಅಶ್ವಿನ್ ಬಂದರು. ಅಲ್ಲದೇ ಪ್ರತಿ ಓವರ್‌ಗೆ 16 ರನ್‌ ಸರಾಸರಿಗಿಂತಲೂ ಹೆಚ್ಚಿನ ರನ್‌ ಬೇಕಿದ್ದಾಗಲೂ ಧೋನಿ ಕಣಕ್ಕಿಳಿಯಲಿಲ್ಲ. ಹೀಗಾಗಿ ಚೆನ್ನೈ ಸೂಪರ್ ಕಿಂಗ್ಸ್ (CSK) ಎದುರಾಳಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧ 50 ರನ್‌ಗಳ ಸೋಲಿನ ನಂತರ, ಮಾಜಿ ನಾಯಕ ಎಂಎಸ್ ಧೋನಿ ಅವರ ಬ್ಯಾಟಿಂಗ್ ಕ್ರಮಾಂಕವು ದೊಡ್ಡ ಚರ್ಚೆಯನ್ನು ಹುಟ್ಟುಹಾಕಿದೆ.

    9ನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಇಳಿದ ಧೋನಿ ಕೇವಲ 16 ರಲ್ಲಿ ಅಜೇಯ 30 ರನ್ ಗಳಿಸಿದರು. ಆದರೆ RCB ಹೀನಾಯ ಗೆಲುವಿನತ್ತ ಸಾಗಿದ್ದರಿಂದ ಅವರ ನಾಕ್ ಯಾವುದೇ ಪ್ರಸ್ತುತತೆಯನ್ನು ಹೊಂದಿರಲಿಲ್ಲ. ಕಳೆದ ಕೆಲವು ಋತುಗಳಲ್ಲಿ ಧೋನಿ ತಮ್ಮ ಬ್ಯಾಟಿಂಗ್ ಸಮಯವನ್ನು ಸೀಮಿತಗೊಳಿಸಿದ್ದರೂ, ಅವರು ಎದುರಿಸುತ್ತಿರುವ ಎಸೆತಗಳ ಮೊತ್ತಕ್ಕೆ ಸಂಬಂಧಿಸಿದಂತೆ, ರವೀಂದ್ರ ಜಡೇಜಾ, ಸ್ಯಾಮ್ ಕರ್ರನ್‌ ಮತ್ತು ರವಿಚಂದ್ರನ್ ಅಶ್ವಿನ್ ಅವರಂತಹ 43 ವರ್ಷದ ಬ್ಯಾಟಿಂಗ್ ಬಗ್ಗೆ ಅಭಿಮಾನಿಗಳು ಮತ್ತು ತಜ್ಞರು ಸಂತೋಷಪಡಲಿಲ್ಲ.

    ಕಾಲೆಳೆದ ಸೆಹ್ವಾಗ್‌:
    ಇನ್ನೂ 9ನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಅಬ್ಬರಿಸಿದ ಮಹಿಗೆ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್‌ ಕಾಲೆಳೆದಿದ್ದಾರೆ. ಸಾಮಾನ್ಯವಾಗಿ ಸಿಎಸ್‌ಕೆ ಲೆಜೆಂಡ್‌ ಇನ್ನಿಂಗ್ಸ್‌ನ ಕೊನೆಯ ಎರಡು ಓವರ್‌ಗಳಲ್ಲಿ ಬ್ಯಾಟಿಂಗ್‌ ಮಾಡಲು ಆದ್ಯತೆ ನೀಡುತ್ತಿದ್ದರು. ಈ ಸಲ ಬಹಳ ಬೇಗನೆ ಬಂದಿದ್ದಾರೆ ಸೆಹ್ವಾಗ್‌ ಕಾಲೆಳೆದಿದ್ದಾರೆ.

  • ಪ್ರೀತಿಸಿ ಮದ್ವೆಯಾಗಿದ್ದ ಸೆಹ್ವಾಗ್‌ – ಆರತಿ ದಾಂಪತ್ಯದಲ್ಲಿ ಬಿರುಕು – ಶೀಘ್ರವೇ ಡಿವೋರ್ಸ್‌?

    ಪ್ರೀತಿಸಿ ಮದ್ವೆಯಾಗಿದ್ದ ಸೆಹ್ವಾಗ್‌ – ಆರತಿ ದಾಂಪತ್ಯದಲ್ಲಿ ಬಿರುಕು – ಶೀಘ್ರವೇ ಡಿವೋರ್ಸ್‌?

    ನವದೆಹಲಿ: ಭಾರತದ (Team India) ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ (Virender Sehwag) ಮತ್ತು ಪತ್ನಿ ಆರತಿ ಅಹ್ಲಾವತ್ (Aarti Ahlawat)  ಅವರ 20 ವರ್ಷಗಳ ದಾಂಪತ್ಯ ಜೀವನದಲ್ಲಿ ಬಿರುಕು ಮೂಡಿದೆ.

    ಸೆಹ್ವಾಗ್ ಮತ್ತು ಆರತಿ ಸಾಮಾಜಿಕ ಮಾಧ್ಯಮ ವೇದಿಕೆ ಇನ್‌ಸ್ಟಾಗ್ರಾಮ್‌ನಲ್ಲಿ ಪರಸ್ಪರ ಅನ್‌ಫಾಲೋ ಮಾಡಿದ್ದು, ಶೀಘ್ರವೇ ವಿಚ್ಛೇದನ (Divorce) ನೀಡಲಿದ್ದಾರೆ ಎಂದು ವರದಿಯಾಗಿದೆ.

    2004 ರಲ್ಲಿ ಮದುವೆಯಾದ ಸೆಹ್ವಾಗ್‌ ಮತ್ತು ಆರತಿಗೆ ಇಬ್ಬರು ಮಕ್ಕಳಿದ್ದಾರೆ – ಆರ್ಯವೀರ್ 2007 ರಲ್ಲಿ ಜನಿಸಿದರೆ ವೇದಾಂತ್ 2010 ರಲ್ಲಿ ಹುಟ್ಟಿದ್ದ. ದಂಪತಿ ಹಲವಾರು ತಿಂಗಳುಗಳಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ.

    ಸೆಹ್ವಾಗ್ ಅವರ ಇತ್ತೀಚಿನ ದೀಪಾವಳಿ ಆಚರಣೆಯ ಫೋಟೋ ಅಪ್ಲೋಡ್‌ ಮಾಡಿದ್ದರು. ಇದರಲ್ಲಿ ತಾಯಿ, ಮಕ್ಕಳು ಇದ್ದರೆ ಪತ್ನಿಯ ಫೋಟೋ ಇರಲಿಲ್ಲ.

     

    ಕೆಲವು ವಾರಗಳ ಹಿಂದೆ ಸೆಹ್ವಾಗ್ ಕೇರಳದ ಪಾಲಕ್ಕಾಡ್‌ನಲ್ಲಿರುವ ವಿಶ್ವ ನಾಗಯಕ್ಷಿ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಈ ಭೇಟಿಯ ವೇಳೆಯೂ ಪತ್ನಿ ಆರತಿ ಕಾಣಿಸಿಕೊಂಡಿರಲಿಲ್ಲ. ಇಲ್ಲಿಯವರೆಗೆ ಇಬ್ಬರ ಕಡೆಯಿಂದ ಯಾವುದೇ ಅಧಿಕೃತ ಹೇಳಿಕೆ ಪ್ರಕಟವಾಗಿಲ್ಲ.

    ದೆಹಲಿ ಮೂಲದ ಆರತಿ ಅಹ್ಲಾವತ್ ಲೇಡಿ ಇರ್ವಿನ್ ಸೆಕೆಂಡರಿ ಶಾಲೆ ಮತ್ತು ಭಾರತೀಯ ವಿದ್ಯಾ ಭವನದಲ್ಲಿ ಶಾಲಾ ಶಿಕ್ಷಣವನ್ನು ಪೂರ್ಣಗೊಳಿಸಿದ ನಂತರ ದೆಹಲಿ ವಿಶ್ವವಿದ್ಯಾಲಯದ ಮೈತ್ರೇಯಿ ಕಾಲೇಜಿನಿಂದ ಕಂಪ್ಯೂಟರ್ ಸೈನ್ಸ್‌ನಲ್ಲಿ ಡಿಪ್ಲೊಮಾ ಪಡೆದರು.

    ಸೆಹ್ವಾಗ್‌ ಮತ್ತು ಆರತಿ ಪ್ರೀತಿಸಿ ಮದುವೆಯಾಗಿದ್ದರು. 2000 ನೇ ಇಸ್ವಿಯಲ್ಲಿ ಆರಂಭಗೊಂಡ ಪ್ರೀತಿಗೆ 2004 ರಲ್ಲಿ ವಿವಾಹದ ಮುದ್ರೆ ಒತ್ತಿದ್ದರು. ಕೇಂದ್ರದ ಮಾಜಿ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರ ನಿವಾಸದಲ್ಲಿ ನಡೆದ ಭವ್ಯ ಕಾರ್ಯಕ್ರಮದಲ್ಲಿ ಇಬ್ಬರು ವಿವಾಹವಾಗಿದ್ದರು.  ಇದನ್ನೂ ಓದಿ: ಸದ್ದಿಲ್ಲದೇ ಸಪ್ತಪದಿ ತುಳಿದ ಒಲಿಂಪಿಕ್ಸ್‌ ಪದಕ ವಿಜೇತ ನೀರಜ್ ಚೋಪ್ರಾ

    ಸೆಹ್ವಾಗ್‌ 2015 ರಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ ಹೇಳಿದ ನಂತರ ರಾಷ್ಟ್ರೀಯ ಡೋಪಿಂಗ್ ವಿರೋಧಿ ಏಜೆನ್ಸಿಯ ಡೋಪಿಂಗ್ ವಿರೋಧಿ ಮೇಲ್ಮನವಿ ಸಮಿತಿಯ ಸದಸ್ಯರಾಗಿ ಸೇವೆ ಸಲ್ಲಿಸುವುದರ ಜೊತೆ ವಾಹಿನಿಗಳಲ್ಲಿ ಕ್ರಿಕೆಟ್‌ ನಿರೂಪಕರಾಗಿಯೂ ಕೆಲಸ ಮಾಡುತ್ತಿದ್ದಾರೆ.

  • ಫಿಫ್ಟಿ ಬಳಿಕ ಕೊಹ್ಲಿ ಸ್ಟ್ರೈಕ್‌ರೇಟ್‌ ಹೆಚ್ಚಾಗ್ಬೇಕಿತ್ತು – ಮ್ಯಾಕ್ಸಿ ತರ ಆದ್ರೆ ಏನ್‌ ಮಾಡೋಕಾಗುತ್ತೆ: ಸೆಹ್ವಾಗ್‌

    ಫಿಫ್ಟಿ ಬಳಿಕ ಕೊಹ್ಲಿ ಸ್ಟ್ರೈಕ್‌ರೇಟ್‌ ಹೆಚ್ಚಾಗ್ಬೇಕಿತ್ತು – ಮ್ಯಾಕ್ಸಿ ತರ ಆದ್ರೆ ಏನ್‌ ಮಾಡೋಕಾಗುತ್ತೆ: ಸೆಹ್ವಾಗ್‌

    – ಒಬ್ಬರಾದ್ರೂ ವಿಕೆಟ್‌ ತೆಗೆಯೋರಿಲ್ಲ – ಆರ್‌ಸಿಬಿ ಹೇಗೆ ತಾನೆ ಗೆಲ್ಲುತ್ತೆ? – ಇರ್ಫಾನ್‌ ಪಠಾಣ್‌ ಗರಂ

    ಜೈಪುರ: ರಾಜಸ್ಥಾನ್‌ ರಾಯಲ್ಸ್‌ ವಿರುದ್ಧ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RR vs RCB) ತಂಡದ ಸೋಲು ಕ್ರಿಕೆಟ್‌ ಲೋಕದಲ್ಲಿ ಭಾರೀ ಸದ್ದು ಮಾಡುತ್ತಿದೆ. ತಂಡದಲ್ಲಿ ನಿಧಾನಗತಿಯ ಬ್ಯಾಟಿಂಗ್‌ ನಡೆಸಿದ ವಿರಾಟ್‌ ಕೊಹ್ಲಿ (Virat Kohli), ಪ್ರಮುಖ ವಿಕೆಟ್‌ ಕೀಳುವಲ್ಲಿ ವಿಫಲರಾದ ಬೌಲರ್‌ಗಳು ಹಾಗೂ ಕೈಗೊಟ್ಟ ಗ್ಲೆನ್‌ ಮಾಕ್ಸ್‌ವೆಲ್‌ ವಿರುದ್ಧ ಹಿರಿಯ ಕ್ರಿಕೆಟಿಗರು ಹರಿಹಾಯ್ದಿದ್ದಾರೆ.

    ಆರ್‌ಸಿಬಿ ಸೋಲಿನ ಕುರಿತು ಮಾತನಾಡಿರುವ ಮಾಜಿ ಕ್ರಿಕೆಟಿಗ ವಿರಾಟ್‌ ಕೊಹ್ಲಿ, ಮೊದಲು ಬ್ಯಾಟಿಂಗ್‌ ಮಾಡಿದ ಆರ್‌ಸಿಬಿ ಇನ್ನೂ 20 ರನ್‌ ಹೆಚ್ಚುವರಿ ಗಳಿಸಬೇಕಿತ್ತು. ವಿರಾಟ್‌ ಕೊಹ್ಲಿ ಇನ್ನಿಂಗ್ಸ್‌ ಚೆನ್ನಾಗಿತ್ತು. ಆದ್ರೆ ಅವರೊಂದಿಗೆ ಸಾಥ್‌ ನೀಡಬೇಕಿದ್ದ ಮ್ಯಾಕ್ಸ್‌ವೆಲ್‌, ಕ್ಯಾಮರೂನ್‌ ಗ್ರೀನ್‌ ಸರಿಯಾಗಿ ಬ್ಯಾಟಿಂಗ್‌ ಮಾಡಲಿಲ್ಲ. ಮಹಿಪಾಲ್‌ ಲೊಮ್ರೋರ್‌ ಸಹ ತಂಡದಲ್ಲಿ ಇಲ್ಲದೇ ಇದ್ದದ್ದು ದೊಡ್ಡ ನಷ್ಟವಾಯಿತು. ವಿರಾಟ್‌ ಕೊಹ್ಲಿ 39 ಬಾಲ್‌ಗೆ 50 ರನ್‌ ಗಳಿಸಿದಾಗ, ಅವರ ಸ್ಟ್ರೈಕ್‌ ರೇಟ್‌ 200ರ ಗಡಿ ದಾಟಬೇಕಿತ್ತು. ಆದ್ರೆ ಇತರ ಬ್ಯಾಟರ್‌ಗಳು ಸಾಥ್‌ ನೀಡದ ಪರಿಣಾಮ ಸಂಪೂರ್ಣ ಒತ್ತಡ ಕೊಹ್ಲಿ ಮೇಲೆ ಇತ್ತು ಎಂದು ಹೇಳಿದ್ದಾರೆ.

    ಕೊಹ್ಲಿ ಒಳ್ಳೆ ಫಾರ್ಮ್‌ನಲ್ಲಿದ್ದಾರೆ, ಕೊನೇವರೆಗೂ ಕ್ರೀಸ್‌ನಲ್ಲಿ ಉಳಿಯೋದು ಅವರ ಪಾತ್ರ. ಆದ್ರೆ ಅಷ್ಟೊಂದು ಹಣಕ್ಕೆ ಆಯ್ಕೆಯಾದ ಇತರ ಬ್ಯಾಟರ್‌ಗಳು ತಮ್ಮ ಸಾಮರ್ಥ್ಯವನ್ನು ಸಾಬೀತು ಮಾಡಬೇಕು. ಮ್ಯಾಕ್ಸ್‌ವೆಲ್‌ (Glenn maxwell) ತರ ಆದ್ರೆ ಯಾರು ಏನ್‌ ಮಾಡೋದಕ್ಕೆ ಆಗುತ್ತೆ ಎಂದು ಬೇಸರ ಹೊರಹಾಕಿದ್ದಾರೆ. ಇದನ್ನೂ ಓದಿ: ಬಟ್ಲರ್‌ ಬೊಂಬಾಟ್‌ ಶತಕ – ರಾಜಸ್ಥಾನ್‌ಗೆ 6 ವಿಕೆಟ್‌ಗಳ ಜಯ; ಆರ್‌ಸಿಬಿಗೆ ಹೀನಾಯ ಸೋಲು!

    ಆರ್‌ಸಿಬಿ ವಿರುದ್ಧ ಪಠಾಣ್‌ ಗರಂ:
    ಇಬ್ಬರು ಬ್ಯಾಟರ್‌ಗಳು (ಸಂಜು ಸ್ಯಾಮ್ಸನ್‌, ಜೋಸ್‌ ಬಟ್ಲರ್‌) 170+ ಸ್ಟ್ರೈಕ್ ರೇಟ್‌ನೊಂದಿಗೆ ಆಡುತ್ತಿದ್ದಾರೆ. ಇನ್ನೊಂದು ತುದಿಯಲ್ಲಿ ಒಬ್ಬನೇ ಒಬ್ಬ ವಿಕೆಟ್ ಪಡೆಯುವ ಬೌಲರ್‌ ಇಲ್ಲ. ಆರ್‌ಸಿಬಿ ಬೌಲರ್‌ಗಳ ಮೊರೆ ಹೋಗಲಿಲ್ಲ. ಹೀಗಿರುವಾಗ ನೀವು ಹೇಗೆ ಗೆಲ್ಲುತ್ತೀರಿ? ಎಂದು ತಿವಿದಿದ್ದಾರೆ. ಇದನ್ನೂ ಓದಿ: ಟಿ20 ವಿಶ್ವಕಪ್‌ಗೆ ಭರ್ಜರಿ ತಯಾರಿ – ಪಾಕಿಸ್ತಾನ ತಂಡಕ್ಕೆ ಸೇನೆಯಿಂದ ತರಬೇತಿ!

    ಮಹಿಪಾಲ್‌ ಲೋಮ್ರೋರ್‌ ದೇಶೀಯ ಕ್ರಿಕೆಟ್‌ನಲ್ಲಿ ಈ ಪಿಚ್‌ನಲ್ಲಿ ಆಡುತ್ತಾರೆ. ಆರ್‌ಸಿಬಿ ತಂಡದಲ್ಲಿ ತಮ್ಮ ಫಾರ್ಮ್‌ ಸಾಬೀತು ಮಾಡಿದ್ದಾರೆ. ಆದ್ರೆ ಅವರು ಪ್ಲೇಯಿಂಗ್‌-11 ಭಾಗವಾಗಿರಲಿಲ್ಲ. ಆದ್ದರಿಂದ ಫ್ರಾಂಚೈಸಿಯಲ್ಲಿ ಭಾರತೀಯ ಕೋಚ್‌ಗಳು ಇದ್ದರೆ, ಇಂತಹ ಮೂಲಭೂತ ತಪ್ಪುಗಳು ಆಗುವುದಿಲ್ಲ ಎಂದು ಹೇಳಿದ್ದಾರೆ. ಇದೇ ವೇಳೆ ಜೋಸ್‌ ಬಟ್ಲರ್‌ ಅವರ ಶತಕವನ್ನು ಹಾಡಿ ಹೊಗಳಿದ್ದಾರೆ. ಇದನ್ನೂ ಓದಿ: ಶ್ರೀಕೃಷ್ಣನ ಮೇಲಿನ ನಂಬಿಕೆಯಿಂದ ಮಾಂಸಾಹಾರ ತ್ಯಜಿಸಿದ್ರಾ ವೇಗಿ? – ಮಯಾಂಕ್‌ ತಾಯಿ ಹೇಳಿದ್ದೇನು?

    ಶನಿವಾರ ಸವಾಯ್‌ ಮಾನ್ಸಿಂಗ್‌ ಕ್ರೀಡಾಂಗಣದಲ್ಲಿ ರಾಜಸ್ಥಾನ್‌ ರಾಯಲ್ಸ್‌ ವಿರುದ್ಧದ ಪಂದ್ಯದಲ್ಲಿ ಆರ್‌ಸಿಬಿ 10 ಓವರ್‌ಗಳಲ್ಲಿ 183 ರನ್‌ ಗಳಿಸಿತ್ತು. ರಾಜಸ್ಥಾನ್‌ ರಾಯಲ್ಸ್‌ 19.1 ಓವರ್‌ಗಳಲ್ಲೇ 189 ರನ್‌ ಗಳಿಸಿ ಗೆಲುವು ಸಾಧಿಸಿತ್ತು. ಹೌದು. ಆರ್‌ಸಿಬಿ ಪರ ಏಕಾಂಗಿ ಹೋರಾಟ ನಡೆಸಿದ್ದ ವಿರಾಟ್ ಕೊಹ್ಲಿ 67 ಎಸೆತಗಳಲ್ಲಿ ಶತಕ ಸಿಡಿಸಿದರೆ, ಒಟ್ಟಾರೆ 72 ಎಸೆತಗಳಿಂದ 12 ಬೌಂಡರಿ ಹಾಗೂ 4 ಸಿಕ್ಸರ್ ನೆರವಿನಿಂದ ಅಜೇಯ 113 ರನ್ ದಾಖಲಿಸಿದರು.

    ಐಪಿಎಲ್‌ನಲ್ಲಿ ನಿಧಾನಗತಿಯ ಶತಕ ಸಿಡಿಸಿದ ಪ್ಲೇಯರ್ಸ್‌:
    * ವಿರಾಟ್ ಕೊಹ್ಲಿ: 67 ಎಸೆತಗಳು Vs ರಾಜಸ್ಥಾನ್ ರಾಯಲ್ಸ್, 2024
    * ಮನೀಶ್ ಪಾಂಡೆ: 67 ಎಸೆತಗಳು Vs ಡೆಕ್ಕನ್ ಚಾರ್ಜರ್ಸ್, 2009
    * ಸಚಿನ್ ತೆಂಡೂಲ್ಕರ್: 66 ಎಸೆತಗಳು Vs ವಿರುದ್ಧ ಕೊಚ್ಚಿ ಟಸ್ಕರ್ಸ್ ಕೇರಳ, 2011
    * ಡೇವಿಡ್ ವಾರ್ನರ್: 66 ಎಸೆತಗಳು Vs ಕೆಕೆಆರ್‌, 2010
    * ಜೋಸ್ ಬಟ್ಲರ್: 66 ಎಸೆತಗಳು Vs ಮುಂಬೈ ಇಂಡಿಯನ್ಸ್‌, 2022
    * ಕೆವಿನ್ ಪೀಟರ್ಸನ್: 64 ಎಸೆತಗಳು Vs ಡೆಕ್ಕನ್ ಚಾರ್ಜರ್ಸ್, 2012

  • ICC ODI WorldCup: ಈ ನಾಲ್ಕು ತಂಡಗಳು ಸೆಮಿಫೈನಲ್‌ ಪ್ರವೇಶಿಲಿವೆ – ಸೆಹ್ವಾಗ್‌ ಭವಿಷ್ಯ

    ICC ODI WorldCup: ಈ ನಾಲ್ಕು ತಂಡಗಳು ಸೆಮಿಫೈನಲ್‌ ಪ್ರವೇಶಿಲಿವೆ – ಸೆಹ್ವಾಗ್‌ ಭವಿಷ್ಯ

    – ಕೊಹ್ಲಿಗಾಗಿ ಟೀಂ ಇಂಡಿಯಾ ಹೋರಾಡಲಿದೆ
    – ಭಾರತ – ಪಾಕ್‌ ಪಂದ್ಯಕ್ಕಾಗಿ ಕಾಯುತ್ತಿದ್ದೇನೆ ಎಂದ ಸೆಹ್ವಾಗ್‌

    ಮುಂಬೈ: ಐಸಿಸಿ ಏಕದಿನ ವಿಶ್ವಕಪ್‌ (ICC WorldCup 2023) ವೇಳಾಪಟ್ಟಿ ಪ್ರಕಟವಾದ ಬೆನ್ನಲ್ಲೇ ಈ ಬಾರಿ ಭಾರತ, ಆಸ್ಟ್ರೇಲಿಯಾ, ಇಂಗ್ಲೆಂಡ್‌ ಮತ್ತು ಪಾಕಿಸ್ತಾನ ತಂಡಗಳು ಸೆಮಿಫೈನಲ್‌ ಪ್ರವೇಶಿಸಲಿವೆ ಎಂದು ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್‌ (Virender Sehwag) ಭವಿಷ್ಯ ನುಡಿದಿದ್ದಾರೆ.

    1987 ಮತ್ತು 1996ರಲ್ಲಿ ಭಾರತ-ಪಾಕಿಸ್ತಾನ (India – Pakistan) ಮತ್ತು 2011ರಲ್ಲಿ ಭಾರತ-ಬಾಂಗ್ಲಾದೇಶ ಜಂಟಿಯಾಗಿ ಆತಿಥ್ಯ ವಹಿಸಿದೆ. ಆದ್ರೆ ಇಂಗ್ಲೆಂಡ್‌ 4 ಬಾರಿ ಸ್ವತಃ ಆತಿಥ್ಯ ವಹಿಸಿದ್ದು, 2019ರಲ್ಲಿ ವೇಲ್ಸ್‌ನೊಂದಿಗೆ ಜಂಟಿ ಆತಿಥ್ಯ ವಹಿಸಿತ್ತು. ಟೀಂ ಇಂಡಿಯಾ (Team India) ಇದೇ ಮೊದಲಬಾರಿಗೆ ಏಕಾಂಗಿಯಾಗಿ ಆತಿಥ್ಯ ವಹಿಸಿಕೊಂಡಿದ್ದು, ತವರಿನಲ್ಲೇ ಟ್ರೋಫಿಗೆಲ್ಲುವ ತವಕದಲ್ಲಿದೆ. ಇದನ್ನೂ ಓದಿ: ICC ODI World Cup: ಪಾಕ್ ಪಂದ್ಯಗಳಿಗೆ ಬಿಗಿ ಭದ್ರತೆ ನೀಡ್ತೇವೆ – ಬಂಗಾಳ ಕ್ರಿಕೆಟ್‌

    ಆ ದಿನಕ್ಕಾಗಿ ಕಾದಿರುವೆ:
    ಮುಂದುವರಿದು ಮಾತನಾಡಿ, ಆದಿನ ಏನಾಗುತ್ತೆ ಅನ್ನೋದು ನಿಜಕ್ಕೂ ನನಗೆ ಗೊತ್ತಿಲ್ಲ. ಆದ್ರೆ ಒತ್ತಡ ನಿಭಾಯಿಸುವ ತಂಡಕ್ಕೆ ಯಶಸ್ಸು ಒಲಿಯುವುದು ನಿಶ್ಚಿತ. ಭಾರತ ತಂಡ ಖಂಡಿತವಾಗಿಯೂ ಅಂತಹ ಒತ್ತಡ ನಿಭಾಯಿಸಿ ಗೆಲುವು ದಾಖಲಿಸಲಿದೆ ಎಂದು ಹೇಳಿದ್ದಾರೆ. ಪಾಕಿಸ್ತಾನ ತಂಡ ಈವರೆಗೆ ವಿಶ್ವಕಪ್‌ನಲ್ಲಿ ಭಾರತದ ಎದುರು ಗೆದ್ದಿಲ್ಲ. 1990ರ ಸಮಯದಲ್ಲಿ ಪಾಕಿಸ್ತಾನ ತಂಡ ಒತ್ತಡ ನಿಭಾಯಿಸಿ ಪಂದ್ಯಗಳನ್ನ ಗೆಲ್ಲುವುದರಲ್ಲಿ ನಿಸ್ಸೀಮವಾಗಿತ್ತು. 2000 ಇಸವಿಯ ನಂತರ ಭಾರತ ಆ ಸ್ಥಿತಿಗೆ ತಲುಪಿದೆ ಆದ್ದರಿಂದ ಆ ದಿನವನ್ನು ಕಾದು ನೋಡಬೇಕು ಎಂದು ಸೆಹ್ವಾಗ್‌ ತಿಳಿಸಿದ್ದಾರೆ.

    ಕೊಹ್ಲಿಗಾಗಿ ಹೋರಾಡಲಿದ್ದಾರೆ:
    ಭಾರತ ತಂಡ 2011ರಲ್ಲಿ ಕೊನೇ ಬಾರಿಗೆ ಏಕದಿನ ವಿಶ್ವಕಪ್‌ ಟ್ರೋಫಿ ಗೆದ್ದು ಬೀಗಿತ್ತು. ಅಂದು ಟೀಂ ಇಂಡಿಯಾ ಆಟಗಾರರು ಸಚಿನ್‌ ತೆಂಡೂಲ್ಕರ್‌ ಸಲುವಾಗಿ ವಿಶ್ವಕಪ್‌ ಗೆಲ್ಲುವ ಪಣತೊಟ್ಟು ಆಡಿದ್ದರು. ಈ ಬಾರಿ ಭಾರತ ತಂಡದ ಆಟಗಾರರು ವಿರಾಟ್‌ ಕೊಹ್ಲಿಗಾಗಿ ಕಪ್‌ ಗೆದ್ದು ಕೊಡಲು ಹೋರಾಟಲಿದ್ದಾರೆ. ಆಟಗಾರರ ಮನದಲ್ಲಿ ಅದೇ ಭಾವನೆ ಕಾಣಬಹುದು ಎಂದು ಹೇಳಿದ್ದಾರೆ. ಇದನ್ನೂ ಓದಿ: ಭಾರತ Vs ಐರ್ಲೆಂಡ್‌ T20 ಸರಣಿಗೆ ವೇಳಾಪಟ್ಟಿ ಪ್ರಕಟ – ಇಲ್ಲಿದೆ ಡಿಟೇಲ್ಸ್‌

    ಕೊಹ್ಲಿ ಅಬ್ಬರಿಸೋದು ಖಚಿತ:
    ವಿರಾಟ್‌ ಕೊಹ್ಲಿ ವಿಶ್ವಕಪ್‌ ಟೂರ್ನಿಯಲ್ಲಿ ಅಬ್ಬರಿಸಲು ಕಾಯ್ತಿದ್ದಾರೆ. ಅಹಮದಾಬಾದ್‌ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಒಂದು ಲಕ್ಷಕ್ಕೂ ಅಧಿಕ ಮಂದಿ ಆಟ ವೀಕ್ಷಣೆ ಮಾಡಬಹುದಾಗಿದೆ. ಅಲ್ಲಿನ ಪಿಚ್‌ ಹೇಗಿದೆ ಎಂಬುದು ಚೆನ್ನಾಗಿ ಗೊತ್ತಿದೆ. ಖಂಡಿತಾ ಅವರು ಹೆಚ್ಚು ರನ್‌ ಗಳಿಸುತ್ತಾರೆ ಅನ್ನೋ ವಿಶ್ವಾಸ ನನಗಿದೆ. ಇನ್ನೂ ಎಲ್ಲರ ಕಣ್ಣು ಭಾರತ-ಪಾಕಿಸ್ತಾನ ನಡುವಣ ಹೈವೋಲ್ಟೇಜ್ ಪಂದ್ಯದ ಮೇಲಿದೆ. ನಾನು ಕೂಡ ಆ ಪಂದ್ಯವನ್ನೇ ಎದುರು ನೋಡುತ್ತಿದ್ದೇನೆ ಎಂದಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ದ್ವಿಶತಕ ಸಿಡಿಸಿ ದಿಗ್ಗಜರ ಪಟ್ಟಿಗೆ ಸೇರಿದ ಗಿಲ್ – ಭಾರತ ಪರ ಡಬಲ್ ಸೆಂಚುರಿ ಬಾರಿಸಿದ ಐವರು ಸಾಧಕರಿವರು

    ದ್ವಿಶತಕ ಸಿಡಿಸಿ ದಿಗ್ಗಜರ ಪಟ್ಟಿಗೆ ಸೇರಿದ ಗಿಲ್ – ಭಾರತ ಪರ ಡಬಲ್ ಸೆಂಚುರಿ ಬಾರಿಸಿದ ಐವರು ಸಾಧಕರಿವರು

    ಮುಂಬೈ: ಟೀಂ ಇಂಡಿಯಾದ (Team India) ಯುವ ಆಟಗಾರ ಶುಭಮನ್ ಗಿಲ್ (Shubman Gill) ದ್ವಿಶತಕ (Double Hundred) ಬಾರಿಸಿ ದಿಗ್ಗಜ ಆಟಗಾರರಾದ ಸಚಿನ್ ತೆಂಡೂಲ್ಕರ್ (Sachin Tendulkar), ವೀರೇಂದ್ರ ಸೆಹ್ವಾಗ್ (Virender Sehwag) ಅವರ ಪಟ್ಟಿಗೆ ಸೇರ್ಪಡೆಗೊಂಡಿದ್ದಾರೆ.

    ಗಿಲ್ 7ನೇ ದ್ವಿಶತಕ ವೀರನಾಗಿ ದಿಗ್ಗಜರ ಪಟ್ಟಿಗೆ ಎಂಟ್ರಿಕೊಟ್ಟಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಬಿರುಸಿನ ಬ್ಯಾಟಿಂಗ್ ಮೂಲಕ ಗಮನ ಸೆಳೆದ 23 ವರ್ಷದ ಗಿಲ್ ಬರೋಬ್ಬರಿ 19 ಬೌಂಡರಿ, 9 ಭರ್ಜರಿ ಸಿಕ್ಸ್ ಸಹಿತ 149 ಎಸೆತಗಳಲ್ಲಿ 208 ರನ್ ಚಚ್ಚಿದರು. ಈ ಮೂಲಕ ಏಕದಿನ ಮಾದರಿ ಕ್ರಿಕೆಟ್‍ನಲ್ಲಿ ದ್ವಿಶತಕ ಸಿಡಿಸಿದ ಯುವ ಆಟಗಾರ ಎಂಬ ದಾಖಲೆ ಬರೆದಿದ್ದಾರೆ. ಇದನ್ನೂ ಓದಿ: ಹ್ಯಾಟ್ರಿಕ್ ಸಿಕ್ಸ್ ಸಿಡಿಸಿ ದ್ವಿಶತಕ ಬಾರಿಸಿದ ಗಿಲ್

     

     

    ಟೀಂ ಇಂಡಿಯಾದ ದ್ವಿಶತಕ ವೀರರು:
    ಟೀಂ ಇಂಡಿಯಾ ಪರ ಈವರೆಗೆ 7 ದ್ವಿಶತಕ ದಾಖಲಾಗಿದೆ. ಈ ಪೈಕಿ ಟೀಂ ಇಂಡಿಯಾದ ಕ್ಯಾಪ್ಟನ್ ಹಿಟ್‍ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ (Rohit Sharma) ಒಬ್ಬರೇ 3 ದ್ವಿಶತಕ ಬಾರಿಸಿದ್ದಾರೆ. ಉಳಿದಂತೆ ಸಚಿನ್, ಸೆಹ್ವಾಗ್, ಇಶಾನ್ ಕಿಶನ್ (Ishan Kishan) ಮತ್ತು ಶುಭಮನ್ ಗಿಲ್ ತಲಾ ಒಂದೊಂದು ದ್ವಿಶತಕ ಬಾರಿಸಿ ಸಾಧನೆ ಮಾಡಿದ್ದಾರೆ.

    ಟೀಂ ಇಂಡಿಯಾ ಪರ ಮೊದಲ ದ್ವಿಶತಕ ಸಚಿನ್‍ರಿಂದ ಬಂತು. 2010ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಸಚಿನ್ 200 ರನ್ ಸಿಡಿಸಿದ್ದರು. 2ನೇ ದ್ವಿಶತಕ ಸೆಹ್ವಾಗ್ 2011ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಬಾರಿಸಿದ್ದರು. ನಂತರ 2013, 2014 ಮತ್ತು 2017ರಲ್ಲಿ ಆಸ್ಟ್ರೇಲಿಯಾ ಮತ್ತು ಶ್ರೀಲಂಕಾ ವಿರುದ್ಧ ರೋಹಿತ್ ಶರ್ಮಾ ದ್ವಿಶತಕ ಸಿಡಿಸಿ ಮಿಂಚಿದ್ದರು. ಆ ಬಳಿಕ 2022ರಲ್ಲಿ ಬಾಂಗ್ಲಾದೇಶ ವಿರುದ್ಧ ಇಶಾನ್ ಕಿಶನ್ ದ್ವಿಶತಕ ಸಾಧನೆಗೈದಿದ್ದರು. ಇದೀಗ 2023ರಲ್ಲಿ ಗಿಲ್ ನ್ಯೂಜಿಲೆಂಡ್ ವಿರುದ್ಧ ದ್ವಿಶತಕ ಸಿಡಿಸಿದ್ದಾರೆ. ಇದನ್ನೂ ಓದಿ: ರಾಷ್ಟ್ರೀಯ ತರಬೇತುದಾರರಿಂದ ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ – ವಿನೇಶ್‌ ಫೋಗಟ್‌ ಗಂಭೀರ ಆರೋಪ

    ದ್ವಿಶತಕಗಳ ಪೈಕಿ ರೋಹಿತ್ 264 ರನ್ ಸಿಡಿಸಿದ್ದರೆ, ಸೆಹ್ವಾಗ್ 219, ಇಶಾನ್ ಕಿಶನ್ 210, ಗಿಲ್ 208 ಮತ್ತು ಸಚಿನ್ ತೆಂಡೂಲ್ಕರ್ 200 ರನ್ ಬಾರಿಸಿ ಏಕದಿನ ಮಾದರಿ ಕ್ರಿಕೆಟ್‍ನಲ್ಲಿ ಅತೀ ಹೆಚ್ಚು ರನ್ ಸಿಡಿಸಿದ ಭಾರತೀಯ ಆಟಗಾರರಾಗಿಯೂ ಗುರುತಿಸಿಕೊಂಡಿದ್ದಾರೆ.

    ಗಿಲ್ ಏಕದಿನ ಮಾದರಿ ಕ್ರಿಕೆಟ್‍ನಲ್ಲಿ ವೇಗವಾಗಿ ಕೇವಲ 19 ಇನ್ನಿಂಗ್ಸ್‌ಗಳಿಂದ 1,000 ರನ್ ಪೂರ್ತಿಗೊಳಿಸಿದ ಆಟಗಾರ ಎಂಬ ದಾಖಲೆ ಬರೆದರು. ಈ ಮೊದಲು ವಿರಾಟ್ ಕೊಹ್ಲಿ 24 ಇನ್ನಿಂಗ್ಸ್‌ಗಳಿಂದ ಸಾವಿರ ರನ್ ಪೂರೈಸಿದ ದಾಖಲೆ ಬರೆದಿದ್ದರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಓಂ ಹೆಲಿಕಾಪ್ಟರಾಯ ನಮಃ ಎಂದು ಧೋನಿಗೆ ವಿಶ್ ಮಾಡಿದ ಸೆಹ್ವಾಗ್

    ಓಂ ಹೆಲಿಕಾಪ್ಟರಾಯ ನಮಃ ಎಂದು ಧೋನಿಗೆ ವಿಶ್ ಮಾಡಿದ ಸೆಹ್ವಾಗ್

    ಮುಂಬೈ: ಟೀಂ ಇಂಡಿಯಾ ಕಂಡ ಯಶಸ್ವಿ ನಾಯಕರಲ್ಲಿ ಒಬ್ಬರಾಗಿರುವ ಕೂಲ್ ಕ್ಯಾಪ್ಟನ್ ಖ್ಯಾತಿಯ ಮಹೇಂದ್ರ ಸಿಂಗ್ ಧೋನಿಗೆ ಇಂದು 41ರ ಹುಟ್ಟುಹಬ್ಬದ ಸಂಭ್ರಮ. ಇಂದು ಧೋನಿ ಹುಟ್ಟುಹಬ್ಬಕ್ಕಾಗಿ ಹಲವು ಮಾಜಿ ಆಟಗಾರರು ಸಹಿತ ಧೋನಿ ಫ್ಯಾನ್ಸ್ ಸಾಮಾಜಿಕ ಜಾಲತಾಣದ ಮೂಲಕ ಧೋನಿಗೆ ಶುಭ ಹಾರೈಸಿದ್ದಾರೆ.

    2004ರಲ್ಲಿ ಟೀಂ ಇಂಡಿಯಾಗೆ ಎಂಟ್ರಿಕೊಟ್ಟ ಉದ್ದನೆ ಕೂದಲಿನ ಯುವಕ ಬಳಿಕ ತಮ್ಮ ಸ್ಫೋಟಕ ಬ್ಯಾಟಿಂಗ್‍ನಿಂದ ಟೀಂ ಇಂಡಿಯಾದ ಮಧ್ಯಮ ಕ್ರಮಾಂಕದ ಆಧಾರ ಸ್ತಂಭವಾಗಿ ಮಿಂಚಿದವರು. ಬ್ಯಾಟಿಂಗ್ ಮತ್ತು ವಿಕೆಟ್ ಕೀಪಿಂಗ್ ಮೂಲಕ ಭಾರತ ತಂಡದಲ್ಲಿ ಖಾಯಂ ಸ್ಥಾನ ಪಡೆದ ಧೋನಿ ಮೂರು ಮಾದರಿ ಕ್ರಿಕೆಟ್‍ನಲ್ಲಿ ನಾಯಕನಾಗಿ ಹೆಚ್ಚು ಜನಪ್ರಿಯಗೊಂಡವರು. ಭಾರತ ತಂಡಕ್ಕೆ 2007ರಲ್ಲಿ ಟಿ20 ವಿಶ್ವಕಪ್, 2011ರಲ್ಲಿ ಏಕದಿನ ವಿಶ್ವಕಪ್ ಮತ್ತು ಚಾಂಪಿಯನ್ ಟ್ರೋಫಿ ತಂದು ಕೊಟ್ಟು ನಾಯಕರಾಗಿ ಮಿಂಚಿದರು. ಈ ಮೂಲಕ ಐಸಿಸಿ ಮಾದರಿಯ ಮೂರು ಟ್ರೋಫಿ ಗೆದ್ದ ನಾಯಕ ಎಂಬ ಹೆಗ್ಗಳಿಕೆ ಪಾತ್ರರಾದವರು. ಇದನ್ನೂ ಓದಿ: ICC ಟೆಸ್ಟ್ ರ‍್ಯಾಂಕಿಂಗ್: ಕಳಪೆ ಬ್ಯಾಟಿಂಗ್‌ನಿಂದ ಟಾಪ್-10 ಪಟ್ಟಿಯಲ್ಲಿ ಸ್ಥಾನ ಕಳೆದುಕೊಂಡ ಕೊಹ್ಲಿ

    2020ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‍ಗೆ ನಿವೃತ್ತಿ ಘೋಷಿಸಿದ ಧೋನಿ ಆ ಬಳಿಕ ಇದೀಗ ಐಪಿಎಲ್‍ನಲ್ಲಿ ಆಡುತ್ತಿದ್ದಾರೆ. ಐಪಿಎಲ್‍ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕನಾಗಿ ಧೋನಿ ಅಭಿಮಾನಿಗಳನ್ನು ರಂಜಿಸುತ್ತಿದ್ದಾರೆ. ಇದನ್ನೂ ಓದಿ: ಭಾರತ – ವೆಸ್ಟ್ಇಂಡೀಸ್ ಏಕದಿನ ಕ್ರಿಕೆಟ್‌ ಸರಣಿಗೆ ಆಯ್ಕೆ ಪಟ್ಟಿ ಪ್ರಕಟ – ಶಿಖರ್ ಧವನ್ ಕ್ಯಾಪ್ಟನ್

    ಇಂದು ಧೋನಿ ಹುಟ್ಟಹಬ್ಬವಾಗಿರುವುದರಿಂದ ಮಾಜಿ ಆಟಗಾರ ವಿರೇಂದ್ರ ಸೆಹ್ವಾಗ್ ಟ್ಟಿಟ್ಟರ್ ಮೂಲಕ ವಿಶ್ ಮಾಡಿದ್ದು, ಇನ್ನೂ ಕೂಡ ಅಂತ್ಯಗೊಂಡಿಲ್ಲ. ಧೋನಿ ಕ್ರಿಸ್‍ನಲ್ಲಿ ಇರೋವರೆಗೆ ಪಂದ್ಯ ಮುಗಿದಿರುವುದಿಲ್ಲ. ಧೋನಿಯಂತಹ ಆಟಗಾರ ಭಾರತಕ್ಕೆ ಹೊರತು ಪಡಿಸಿ ವಿಶ್ವದ ಇತರ ತಂಡಕ್ಕೆ ಸಿಕ್ಕಿರಲು ಸಾಧ್ಯವಿಲ್ಲ. ಓಂ ಓಂ ಹೆಲಿಕಾಪ್ಟರಾಯ ನಮಃ ಎಂದು ಬರೆದುಕೊಂಡು ಶುಭಕೋರಿದ್ದಾರೆ.

    ಬಿಸಿಸಿಸಿ, ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸ್, ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ, ಮಾಜಿ ಆಟಗಾರರಾದ ಸುರೇಶ್ ರೈನಾ, ಮೊಹಮ್ಮದ್ ಕೈಫ್ ಸೇರಿದಂತೆ ಹಲವು ಮಾಜಿ, ಹಾಲಿ ಆಟಗಾರರು ಟ್ಟಿಟ್ಟರ್ ಮೂಲಕ ಧೋನಿಗೆ ಹುಟ್ಟುಹಬ್ಬದ ಶುಭಕೋರಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಐಪಿಎಲ್ 2020ರ ತಂಡ ಪ್ರಕಟಿಸಿದ ಸೆಹ್ವಾಗ್- ಕನ್ನಡಿಗರಿಗೆ ಆರಂಭಿಕ ಸ್ಥಾನ

    ಐಪಿಎಲ್ 2020ರ ತಂಡ ಪ್ರಕಟಿಸಿದ ಸೆಹ್ವಾಗ್- ಕನ್ನಡಿಗರಿಗೆ ಆರಂಭಿಕ ಸ್ಥಾನ

    ಮುಂಬೈ: ಟೀ ಇಂಡಿಯಾ ಮಾಜಿ ಆಟಗಾರ ವಿರೇಂದ್ರ ಸೆಹ್ವಾಗ್ ಐಪಿಎಲ್ 2020ರ ತಂಡವನ್ನು ಪ್ರಕಟಿಸಿದ್ದು, ಈ ಆವೃತ್ತಿಯಲ್ಲಿ ಕ್ರಿಕೆಟಿಗರು ತೋರಿದ ಪ್ರದರ್ಶನದ ಆಧಾರದ ಮೇಲೆ ತಂಡವನ್ನು ಆಯ್ಕೆ ಮಾಡಿದ್ದಾರೆ. ಪ್ರಮುಖವಾಗಿ ಕನ್ನಡಿಗರಾದ ಕೆಎಲ್ ರಾಹುಲ್ ಹಾಗೂ ದೇವ್‍ದತ್ ಪಡಿಕ್ಕಲ್ ಅವರಿಗೆ ಆರಂಭಿಕ ಆಟಗಾರರ ಸ್ಥಾನವನ್ನು ನೀಡಿದ್ದಾರೆ.

    ಐಪಿಎಲ್ 2020ರ ಆವೃತ್ತಿಯಲ್ಲಿ ಕೆಎಲ್ ರಾಹುಲ್ 670 ರನ್ ಗಳೊಂದಿಗೆ ಆರೆಂಜ್ ಕ್ಯಾಪ್ ಪಡೆದಿದ್ದು, ಇತ್ತ ಯುವ ಆಟಗಾರ ಪಡಿಕ್ಕಲ್ 473 ರನ್ ಗಳೊಂದಿಗೆ ಉದಯೋನ್ಮುಖ ಆಟಗಾರ ಪ್ರಶಸ್ತಿಯನ್ನು ಪಡೆದಿದ್ದಾರೆ. ತಂಡದ ಒನ್ ಡೌನ್ ಆಟಗಾರನಾಗಿ ಸೂರ್ಯಕುಮಾರ್ ಯಾದವ್ ಅವರನ್ನು ಆಯ್ಕೆ ಮಾಡಲಾಗಿದ್ದು, ಕಳೆದ ಮೂರು ಆವೃತ್ತಿಗಳಲ್ಲಿ ಸೂರ್ಯಕುಮಾರ್ ಯಾದವ್ ಸತತವಾಗಿ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ.

    ಸೆಹ್ವಾಗ್ ತಂಡದ ನಾಯಕತ್ವ ಜವಾಬ್ದಾರಿಯನ್ನು ಆರ್ ಸಿಬಿ ಕ್ಯಾಪ್ಟನ್ ಕೊಹ್ಲಿಗೆ ನೀಡಿದ್ದು, ಬ್ಯಾಟಿಂಗ್ ಕ್ರಮಾಂಕದಲ್ಲಿ 4ನೇ ಸ್ಥಾನ ನೀಡಿದ್ದಾರೆ. 5ನೇ ಸ್ಥಾನದಲ್ಲಿ ಹೈದರಾಬಾದ್ ತಂಡದ ನಾಯಕ ವಾರ್ನರ್ ಅವರನ್ನು ಆಯ್ಕೆ ಮಾಡಲಾಗಿದೆ. ತಂಡದಲ್ಲಿ ಕೊಹ್ಲಿ ಆರಂಭಿಕ ಹಾಗೂ ಮಾಧ್ಯಮ ಕ್ರಮಾಂಕದಲ್ಲಿ ಆಡುವ ಸಾಮರ್ಥ್ಯವಿರುವ ಕಾರಣ ನಾಯಕತ್ವ ಜವಾಬ್ದಾರಿಯನ್ನು ನೀಡಲಾಗಿದೆ ಎಂದು ಸೆಹ್ವಾಗ್ ತಿಳಿಸಿದ್ದಾರೆ. ಉಳಿದಂತೆ 6ನೇ ಕ್ರಮಾಂಕದಲ್ಲಿ ಎಬಿ ಡಿವಿಲಿಯರ್ಸ್ ಅವರಿಗೆ ಸ್ಥಾನ ನೀಡಲಾಗಿದೆ. 6ನೇ ಸ್ಥಾನಕ್ಕೆ ಪೋಲಾರ್ಡ್, ಪಾಂಡ್ಯ ರಂತಹ ಆಟಗಾರರಿದ್ದರೂ, ಡೆತ್ ಓವರ್ ಗಳಲ್ಲಿ ಈ ಆವೃತ್ತಿಯಲ್ಲಿ ಡಿವಿಲಿಯರ್ಸ್ ಹೆಚ್ಚು ರನ್ ಗಳಿಸಿದ ಕಾರಣ ಅವರಿಗೆ ತಂಡದಲ್ಲಿ ಸ್ಥಾನ ನೀಡಲಾಗಿದೆ.

    ಬೌಲಿಂಗ್ ವಿಭಾಗದಲ್ಲಿ ವೇಗದ ಬೌಲರ್ ಗಳಾಗಿ ರಬಡಾ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ ಅವರನ್ನು ಆಯ್ಕೆ ಮಾಡಿರುವ ಸೆಹ್ವಾಗ್, ಚಹಲ್, ರಶೀದ್ ಖಾನ್‍ಗೆ ಆಡುವ 11ರ ಬಳಗದಲ್ಲಿ ಸ್ಥಾನ ನೀಡಿದ್ದಾರೆ. ಇನ್ನು ಇಶಾನ್ ಕಿಶಾನ್, ಜೋಫ್ರಾ ಅರ್ಚರ್ ಅವರನ್ನು 12 ಮತ್ತು 13ನೇ ಆಟಗಾರರಾಗಿ ಆಯ್ಕೆ ಮಾಡಿಕೊಂಡಿದ್ದಾರೆ. ಸೆಹ್ವಾಗ್ ತಂಡದಲ್ಲಿ ರಾಜಸ್ಥಾನ ರಾಯಲ್ಸ್ ತಂಡದ ಜೋಫ್ರಾ ಅರ್ಚರ್ ಗೆ 13ನೇ ಸ್ಥಾನ ನೀಡಿದ್ದು, ಚೆನ್ನೈ, ಕೋಲ್ಕತ್ತಾ ತಂಡದ ಯಾವುದೇ ಆಟಗಾರನಿಗೆ ಸೆಹ್ವಾಗ್ ತಂಡದಲ್ಲಿ ಸ್ಥಾನ ಲಭಿಸಿಲ್ಲ.

  • ಕೆಲ ಸಿಎಸ್‍ಕೆ ಆಟಗಾರರು ತಂಡದಲ್ಲಿ ತಮ್ಮ ಸ್ಥಾನವನ್ನು ಸರ್ಕಾರಿ ಕೆಲಸ ಅಂದ್ಕೊಂಡಿದ್ದಾರೆ: ಸೆಹ್ವಾಗ್

    ಕೆಲ ಸಿಎಸ್‍ಕೆ ಆಟಗಾರರು ತಂಡದಲ್ಲಿ ತಮ್ಮ ಸ್ಥಾನವನ್ನು ಸರ್ಕಾರಿ ಕೆಲಸ ಅಂದ್ಕೊಂಡಿದ್ದಾರೆ: ಸೆಹ್ವಾಗ್

    ಮುಂಬೈ: ಸಾಮಾಜಿಕ ಜಾಲತಾಣದಲ್ಲಿ ಸದಾ ಅಭಿಮಾನಿಗಳೊಂದಿಗೆ ಸಂಪರ್ಕದಲ್ಲಿರುವ ಟೀಂ ಇಂಡಿಯಾ ಮಾಜಿ ಆಟಗಾರ ವಿರೇಂದ್ರ ಸೆಹ್ವಾಗ್ ಸಿಎಸ್‍ಕೆ ಆಟಗಾರರ ವಿರುದ್ಧ ಗಂಭೀರ ಟೀಕೆ ಮಾಡಿದ್ದಾರೆ.

    2020ರ ಐಪಿಎಲ್ ಆವೃತ್ತಿಯಲ್ಲಿ ನಾಲ್ಕು ಸೋಲುಗಳನ್ನು ಕಂಡಿರುವ ಚೆನ್ನೈ ಸೂಪರ್ ಕಿಂಗ್ಸ್ ಅಂಕಪಟ್ಟಿಯಲ್ಲಿ 6ನೇ ಸ್ಥಾನವನ್ನು ಪಡೆದುಕೊಂಡಿದೆ. ಅದರಲ್ಲೂ ಕೋಲ್ಕತ್ತಾ ವಿರುದ್ಧ ಪಂದ್ಯದಲ್ಲಿ ಗೆಲುವ ಅವಕಾಶವನ್ನು ಕೈಚೆಲ್ಲಿದ್ದ ಸಿಎಸ್‍ಕೆ ಆಟಗಾರರ ವಿರುದ್ಧ ಭಾರೀ ಟೀಕೆ ಕೇಳಿಬಂದಿತ್ತು. ಇದರ ನಡುವೆಯೇ ಸೆಹ್ವಾಗ್ ಕೂಡ ತಂಡದ ಆಟಗಾರರ ಕುರಿತು ಟೀಕೆ ಮಾಡಿದ್ದಾರೆ. ಇದನ್ನೂ ಓದಿ: ಮುಂದಿನ ಪಂದ್ಯದಲ್ಲಿ ಗ್ಲುಕೋಸ್ ತೆಗೆದುಕೊಂಡು ಬನ್ನಿ- ಸಿಎಸ್‍ಕೆಗೆ ಸೆಹ್ವಾಗ್ ಸಲಹೆ

    ಕೋಲ್ಕತ್ತಾ ತಂಡ ನೀಡಿದ್ದ ಗೆಲುವಿನ ಗುರಿಯನ್ನು ಚೆನ್ನೈ ಸುಲಭವಾಗಿ ಗಳಿಸಬಹುದಿತ್ತು. ಆದರೆ ಕೇದರ್ ಜಾದವ್, ರವೀಂದ್ರ ಜಡೇಜಾ ಆಡಿದ ಡಾಟ್ ಬಾಲ್ಸ್ ತಂಡಕ್ಕೆ ಯಾವುದೇ ಪ್ರಯೋಜನ ಆಗಲಿಲ್ಲ. ನನ್ನ ಪ್ರಕಾರ ಚೆನ್ನೈ ತಂಡದ ಕೆಲ ಬ್ಯಾಟ್ಸ್ ಮನ್ಸ್ ತಮಗೆ ಸಿಕ್ಕಿರುವ ಸ್ಥಾನವನ್ನು ಸರ್ಕಾರಿ ಉದ್ಯೋಗ ಎಂದು ಭಾವಿಸಿದ್ದಾರೆ. ಉತ್ತಮ ಪ್ರದರ್ಶನ ನೀಡಿದರೂ, ನೀಡದಿದ್ದರೂ ಅವರಿಗೆ ತಲುಪಬೇಕಾದ ವೇತನ ತಲುಪತ್ತದೆ ಎಂದು ಅವರಿಗೆ ತಿಳಿದಿದೆ ಎಂದು ಮಾಧ್ಯಮ ಸಂದರ್ಶನವೊಂದರಲ್ಲಿ ಹೇಳಿದ್ದಾರೆ. ಇದನ್ನೂ ಓದಿ: ಧೋನಿ ನಾಲ್ಕನೇ ಕ್ರಮಾಂಕದಲ್ಲಿ ಆಡುವಷ್ಟರಲ್ಲಿ ಭಾರತಕ್ಕೆ ಬುಲೆಟ್ ಟ್ರೈನ್ ಬರುತ್ತೆ: ಸೆಹ್ವಾಗ್

    ಇತ್ತ ತಮ್ಮ ಫೇಸ್‍ಬುಕ್ ಸೀರಿಸ್ ವಿರು ಕೀ ಬೈಟಕ್‍ನಲ್ಲಿಯೂ ಜಾದವ್ ಬ್ಯಾಟಿಂಗ್ ಕುರಿತು ಟೀಕೆ ಮಾಡಿರುವ ಸೆಹ್ವಾಗ್, ಜಾದವ್ ಉಪಯೋಗಕ್ಕೆ ಬಾರದ ಅಲಂಕಾರಿಕ ವಸ್ತುವಂತೆ ಇದ್ದಾರೆ. 12 ಎಸೆತಗಳಲ್ಲಿ 7 ರನ್ ಗಳಿಸಿದ ಜಾದವ್‍ಗೆ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ನೀಡಬೇಕಿತ್ತು ಎಂದು ಟೀಕೆ ಮಾಡಿದ್ದಾರೆ.

    ಈಗಾಗಲೇ ಐಪಿಎಲ್‍ನಲ್ಲಿ 8 ಬಾರಿ ಪೈನಲ್ ಪ್ರವೇಶ ಮಾಡಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡ ಈ ಬಾರಿಯ ಆವೃತ್ತಿಯಲ್ಲಿ ನಿರೀಕ್ಷಿತ ಮಟ್ಟದಲ್ಲಿ ಪ್ರದರ್ಶನ ನೀಡುತ್ತಿಲ್ಲ. ಇದುವರೆಗೂ ಆಡಿರುವ 6 ಪಂದ್ಯಗಳಲ್ಲಿ 4ರಲ್ಲಿ ಸೋಲುಂಡಿರುವ ಸಿಎಸ್‍ಕೆ, ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸಲಿದೆ.

  • ಅಂಪೈರ್‌ಗೆ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಕೊಡಿ: ಸೆಹ್ವಾಗ್

    ಅಂಪೈರ್‌ಗೆ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಕೊಡಿ: ಸೆಹ್ವಾಗ್

    ಮುಂಬೈ: ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಕಿಂಗ್ಸ್ ಇಲೆವೆನ್ ಪಂಜಾಬ್ ನಡುವಿನ ಐಪಿಎಲ್ ಪಂದ್ಯದ ವೇಳೆ ಅಂಪೈರ್ ನೀಡಿರುವ ಶಾರ್ಟ್ ರನ್ ತೀರ್ಪನ್ನು ಟೀಂ ಇಂಡಿಯಾ ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್ ಕಟುವಾಗಿ ಟೀಕಿಸಿದ್ದಾರೆ.

    ನಿನ್ನೆ ರೋಚಕ ಅಂತದಲ್ಲಿ ಟೈ ಆದ ಪಂದ್ಯ ಸೂಪರ್ ಓವರ್ ಗೆ ದಾರಿ ಮಾಡಿಕೊಟ್ಟಿತ್ತು. ಸೂಪರ್ ಓವರ್ ನಲ್ಲಿ ಉತ್ತಮ ಪ್ರದರ್ಶನ ನೀಡಿದ ಡೆಲ್ಲಿ ಗೆಲುವು ಪಡೆಯುವ ಮೂಲಕ ಟೂರ್ನಿಯಲ್ಲಿ ಶುಭಾರಂಭ ಮಾಡಿತ್ತು. ಆದರೆ ಪಂದ್ಯದ 18ನೇ ಓವರಿನಲ್ಲಿ ಅಂಪೈರ್ ನೀಡಿದ್ದ ಶಾರ್ಟ್ ರನ್ ತೀರ್ಪು ಪಂದ್ಯದ ದಿಕ್ಕನ್ನೇ ಬದಲಿಸಿತ್ತು. ಓವರಿನ 3ನೇ ಎಸೆತದಲ್ಲಿ ಮಯಾಂಕ್ ಕವರ್ ಡ್ರೈವ್ ಕಡೆ ಚೆಂಡನ್ನು ಬಾರಿಸಿ 2 ರನ್ ಓಡಿದ್ದರು. ಆದರೆ ಲೆಗ್-ಅಂಪೈರ್ ನಾನ್ ಸ್ಟ್ರೈಕ್‍ನಲ್ಲಿದ್ದ ಕ್ರಿಸ್ ಜೋರ್ಡನ್ ಮೊದಲ ರನ್ ಪಡೆಯುವ ವೇಳೆ ಕ್ರಿಸ್ ಟಚ್ ಮಾಡಿಲ್ಲ ಎಂದು ನಿರ್ಧರಿಸಿ ಶಾರ್ಟ್ ರನ್ ಎಂದು ತೀರ್ಪು ನೀಡಿದ್ದರು. ಇದನ್ನೂ ಓದಿ: ಮಯಾಂಕ್ ಅಗರ್ವಾಲ್ ಕಿಚ್ಚಿನ ಆಟಕ್ಕೆ ಕಿಚ್ಚನ ಮೆಚ್ಚುಗೆ

    ಆದರೆ, ರಿಪ್ಲೇನಲ್ಲಿ ಬ್ಯಾಟ್ಸ್ ಮನ್ ಗೆರೆಯನ್ನು ಟಚ್ ಮಾಡಿದ್ದು ಸ್ಪಷ್ಟವಾಗಿತ್ತು. ಸದ್ಯ ಈ ಅಂಪೈರ್ ಅವರ ಕಳಪೆ ತೀರ್ಪಿನ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಕ್ರಿಕೆಟ್ ಅಭಿಮಾನಿಗಳು ಹಾಗೂ ಹಿರಿಯ ಆಟಗಾರರು ಅಸಮಾಧಾನ ಹೊರಹಾಕಿದ್ದಾರೆ.

    ಈ ಕುರಿತು ಟ್ವೀಟ್ ಮಾಡಿರುವ ಸೆಹ್ವಾಗ್, ಮ್ಯಾನ್ ಆಫ್ ದಿ ಮ್ಯಾಚ್ ಆಯ್ಕೆಗೆ ನನ್ನ ಸಹಮತವಿಲ್ಲ. ಶಾರ್ಟ್ ರನ್ ತೀರ್ಪು ನೀಡಿದ್ದ ಅಂಪೈರ್ ಗೆ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ನೀಡಬೇಕು. ಆದರೆ ಅದು ಶಾರ್ಟ್ ರನ್ ಅಲ್ಲ ಎಂದು ಸೆಹ್ವಾಗ್ ಹೇಳಿದ್ದಾರೆ. ಮತ್ತೊಬ್ಬ ಮಾಜಿ ಆಟಗಾರ ಇರ್ಫಾನ್ ಪಠಾಣ್ ಕೂಡ ಅಂಪೈರ್ ತೀರ್ಪಿನ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ. ಇದನ್ನೂ ಓದಿ: ಕೊಹ್ಲಿ Vs ವಾರ್ನರ್, ಬೇರ್ಸ್ಟೋವ್ Vs ಎಬಿಡಿ- ಆರ್‌ಸಿಬಿ, ಹೈದರಾಬಾದ್ ತಂಡಗಳ ಬಲಾಬಲ

    ಪಂದ್ಯದಲ್ಲಿ ಏಕಾಂಗಿ ಹೋರಾಟ ನಡೆಸಿದ್ದ ಮಯಾಂಕ್ ಶ್ರಮಕ್ಕೆ ತಕ್ಕ ಪ್ರತಿಫಲ ಲಭಿಸಲಿಲ್ಲ. ಇಂತಹ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಂದರ್ಭದಲ್ಲಿ ಮೂರನೇ ಅಂಪೈರ್ ನೆರವು ಪಡೆಯಬಹುದಾಗಿತ್ತು. ಆಧುನಿಕ ತಂತ್ರಜ್ಞಾನ ಲಭ್ಯವಿದ್ದ ಸಂದರ್ಭದಲ್ಲೂ ಇಂತಹ ನಿರ್ಣಯ ಕೈಗೊಳ್ಳುವುದು ತಪ್ಪು. ಈ ಕುರಿತ ನಿಯಮಗಳಲ್ಲಿ ಬದಲಾವಣೆ ಆಗಬೇಕಿದೆ ಎಂದು ಕೆಲ ಕ್ರಿಕೆಟ್ ಅಭಿಮಾನಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇತ್ತ ಪಂದ್ಯವನ್ನು ಗೆದ್ದ ಡೆಲ್ಲಿ ತಂಡದ ಟೂರ್ನಿಯಲ್ಲಿ ಶುಭಾರಂಭ ಮಾಡಿದ್ದು, 3 ಅಂಕಗಳನ್ನು ಪಡೆದಿದೆ. ಇದನ್ನೂ ಓದಿ: ಡೆಬ್ಯು ಪಂದ್ಯದ ಮೊದ್ಲ ಓವರ್‌ನಲ್ಲೇ 2 ವಿಕೆಟ್ ಕಬಳಿಸಿ ಗಂಭೀರವಾಗಿ ಗಾಯಗೊಂಡ ಅಶ್ವಿನ್

  • ಯೋಗದಿಂದ ಮಾತ್ರ ಇದು ಸಾಧ್ಯ- ವೀರು

    ಯೋಗದಿಂದ ಮಾತ್ರ ಇದು ಸಾಧ್ಯ- ವೀರು

    ನವದೆಹಲಿ: ಟೀಂ ಇಂಡಿಯಾ ಮಾಜಿ ಆಟಗಾರ ವೀರೆಂದ್ರ ಸೆಹ್ವಾಗ್, ಸಚಿನ್ ತೆಂಡೂಲ್ಕರ್ ಸೇರಿದಂತೆ ಅನೇಕ ಕ್ರಿಕೆಟಿಗರು ವಿಶ್ವ ಯೋಗ ದಿನದ ನಿಮಿತ್ತ ವಿಡಿಯೋ, ಫೋಟೋಗಳನ್ನು ಟ್ವಿಟ್ ಮಾಡಿದ್ದಾರೆ.

    ವೀರು ವಿಡಿಯೋವನ್ನು ಮಾಡಿದ್ದು ಇದರಲ್ಲಿ ಅವರು ಯೋಗ ಮಾಡುವುದನ್ನು ಕಾಣಬಹುದು. “ಇದು ಸ್ವಲ್ಪ ಸಮಯ ತೆಗೆದುಕೊಳ್ಳಬಹುದು. ಆದರೆ ಅದು ಯೋಗದಿಂದ ಸಾಧ್ಯವಾಗುತ್ತದೆ” ಎಂದು ಹೇಳಿದ್ದಾರೆ.

    ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿರುವ ವೀರೆಂದ್ರ ಸೆಹ್ವಾಗ್ ಅವರು ಅಭಿಮಾನಿಗಳೊಂದಿಗೆ ವಿಶೇಷ ವಿಡಿಯೋ, ಫೋಟೋಗಳನ್ನು ಹಂಚಿಕೊಳ್ಳುತ್ತಾರೆ. ವೀರು ವಿಶಿಷ್ಟ ಶೈಲಿಯೊಂದಿಗೆ ಅಭಿಮಾನಿಗಳನ್ನು ರಂಜಿಸುತ್ತಾರೆ. ಈ ಬಾರಿ ಅವರು ಹ್ಯಾಂಡಲ್ ಮತ್ತು ಬ್ರೇಕ್ ಇಲ್ಲದೆ ಬೈಸಿಕಲ್ ಸವಾರಿ ಮಾಡುತ್ತಿರುವ ವ್ಯಕ್ತಿಯ ವಿಡಿಯೋವನ್ನು ವೀರು ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಪೋಸ್ಟ್ ಮಾಡಿದ್ದಾರೆ.

    ವಿಡಿಯೋವನ್ನು ಹಂಚಿಕೊಂಡ ಸೆಹ್ವಾಗ್, “ರೋಹ್ಟಕ್‍ನಲ್ಲಿ ಹನುಮಾನ್ ಭಕ್ತ, ಹ್ಯಾಂಡಲ್ ಮತ್ತು ಬ್ರೇಕ್ ಇಲ್ಲದೆ ಸೈಕ್ಲಿಂಗ್ ಮಾಡುತ್ತಿದ್ದಾರೆ. ಯಾರೂ ಇದನ್ನು ಪ್ರಯತ್ನಿಸಲು ಮುಂದಾಗಬೇಡಿ” ಎಂದು ಕೇಳಿಕೊಂಡಿದ್ದಾರೆ.

    https://www.instagram.com/p/CBpZOJyAeyx/?utm_source=ig_embed

    ಸಚಿನ್ ತೆಂಡೂಲ್ಕರ್ ಅವರು ಮಗ ಹಾಗೂ ಮಗಳ ಜೊತೆಗೆ ಯೋಗಾಸನ ಮಾಡುತ್ತಿರುವ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.