ಚೆನ್ನೈ: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ 50 ರನ್ಗಳ ಅಂತರದಲ್ಲಿ ಸೋಲು ಕಂಡ ನಂತರ ಮಾಜಿ ನಾಯಕ ಎಂ.ಎಸ್ ಧೋನಿ (MS Dhoni) ಅವರ ಬ್ಯಾಟಿಂಗ್ ಕ್ರಮಾಂಕವು ಈಗ ಚರ್ಚೆ ಹುಟ್ಟುಹಾಕಿದೆ.

ಚೆಪಾಕ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಆರ್ಸಿಬಿ, ನಿಗದಿತ 20 ಓವರ್ಗಳಲ್ಲಿ 7 ವಿಕೆಟ್ಗೆ 196 ರನ್ ಕಲೆಹಾಕಿತ್ತು. ಈ ಗುರಿ ಎದುರು ಆರಂಭಿಕ ಆಘಾತಕ್ಕೆ ಒಳಗಾದ ಸಿಎಸ್ಕೆ, 52 ರನ್ ಗಳಿಸುವಷ್ಟರಲ್ಲೇ ಪ್ರಮುಖ 4 ವಿಕೆಟ್ಗಳನ್ನು ಕಳೆದುಕೊಂಡಿತ್ತು.

ಒಂದು ತುದಿಯಲ್ಲಿ ಆರಂಭಿಕ ರಚಿನ್ ರವೀಂದ್ರ (31 ಎಸೆತ, 41 ರನ್) ಉತ್ತಮವಾಗಿ ಆಡುತ್ತಿದ್ದರೂ, ಮತ್ತೊಂದೆಡೆ ವಿಕೆಟ್ ಉರುಳುತ್ತಾ ಸಾಗಿದ್ದವು. ಇದರಿಂದಾಗಿ ಅನಗತ್ಯ ರನ್ರೇಟ್ ಏರುತ್ತಾ ಸಾಗಿತ್ತು. 6ನೇ ವಿಕೆಟ್ ಉರುಳಿದಾಗ, ಸಿಎಸ್ಕೆ ಗೆಲುವಿಗೆ 7.1 ಓವರ್ಗಳಲ್ಲಿ 117 ರನ್ ಬೇಕಿತ್ತು. ಆದರೆ ಆಗಲೂ, ಧೋನಿ ಕ್ರೀಸ್ಗಿಳಿಯಲಿಲ್ಲ. ಅವರ ಬದಲು, ಬೌಲಿಂಗ್ ಆಲ್ರೌಂಡರ್ ಆರ್.ಅಶ್ವಿನ್ ಬಂದರು. ಅಲ್ಲದೇ ಪ್ರತಿ ಓವರ್ಗೆ 16 ರನ್ ಸರಾಸರಿಗಿಂತಲೂ ಹೆಚ್ಚಿನ ರನ್ ಬೇಕಿದ್ದಾಗಲೂ ಧೋನಿ ಕಣಕ್ಕಿಳಿಯಲಿಲ್ಲ. ಹೀಗಾಗಿ ಚೆನ್ನೈ ಸೂಪರ್ ಕಿಂಗ್ಸ್ (CSK) ಎದುರಾಳಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧ 50 ರನ್ಗಳ ಸೋಲಿನ ನಂತರ, ಮಾಜಿ ನಾಯಕ ಎಂಎಸ್ ಧೋನಿ ಅವರ ಬ್ಯಾಟಿಂಗ್ ಕ್ರಮಾಂಕವು ದೊಡ್ಡ ಚರ್ಚೆಯನ್ನು ಹುಟ್ಟುಹಾಕಿದೆ.

9ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ಗೆ ಇಳಿದ ಧೋನಿ ಕೇವಲ 16 ರಲ್ಲಿ ಅಜೇಯ 30 ರನ್ ಗಳಿಸಿದರು. ಆದರೆ RCB ಹೀನಾಯ ಗೆಲುವಿನತ್ತ ಸಾಗಿದ್ದರಿಂದ ಅವರ ನಾಕ್ ಯಾವುದೇ ಪ್ರಸ್ತುತತೆಯನ್ನು ಹೊಂದಿರಲಿಲ್ಲ. ಕಳೆದ ಕೆಲವು ಋತುಗಳಲ್ಲಿ ಧೋನಿ ತಮ್ಮ ಬ್ಯಾಟಿಂಗ್ ಸಮಯವನ್ನು ಸೀಮಿತಗೊಳಿಸಿದ್ದರೂ, ಅವರು ಎದುರಿಸುತ್ತಿರುವ ಎಸೆತಗಳ ಮೊತ್ತಕ್ಕೆ ಸಂಬಂಧಿಸಿದಂತೆ, ರವೀಂದ್ರ ಜಡೇಜಾ, ಸ್ಯಾಮ್ ಕರ್ರನ್ ಮತ್ತು ರವಿಚಂದ್ರನ್ ಅಶ್ವಿನ್ ಅವರಂತಹ 43 ವರ್ಷದ ಬ್ಯಾಟಿಂಗ್ ಬಗ್ಗೆ ಅಭಿಮಾನಿಗಳು ಮತ್ತು ತಜ್ಞರು ಸಂತೋಷಪಡಲಿಲ್ಲ.

ಕಾಲೆಳೆದ ಸೆಹ್ವಾಗ್:
ಇನ್ನೂ 9ನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಅಬ್ಬರಿಸಿದ ಮಹಿಗೆ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಕಾಲೆಳೆದಿದ್ದಾರೆ. ಸಾಮಾನ್ಯವಾಗಿ ಸಿಎಸ್ಕೆ ಲೆಜೆಂಡ್ ಇನ್ನಿಂಗ್ಸ್ನ ಕೊನೆಯ ಎರಡು ಓವರ್ಗಳಲ್ಲಿ ಬ್ಯಾಟಿಂಗ್ ಮಾಡಲು ಆದ್ಯತೆ ನೀಡುತ್ತಿದ್ದರು. ಈ ಸಲ ಬಹಳ ಬೇಗನೆ ಬಂದಿದ್ದಾರೆ ಸೆಹ್ವಾಗ್ ಕಾಲೆಳೆದಿದ್ದಾರೆ.































