Tag: Virginity

  • ಟ್ರೇಲರ್‌ನಲ್ಲಿ  ಕಂಡಿದ್ದು ಭಿನ್ನ ಕಥೆಯ ರಂಗನಾಯಕಿ!

    ಟ್ರೇಲರ್‌ನಲ್ಲಿ ಕಂಡಿದ್ದು ಭಿನ್ನ ಕಥೆಯ ರಂಗನಾಯಕಿ!

    ಬೆಂಗಳೂರು: ನಿರ್ದೇಶಕ ದಯಾಳ್ ಪದ್ಮನಾಭನ್ ಯಾವ ಚಿತ್ರವನ್ನೇ ಮಾಡಿದರೂ ವಿಶಿಷ್ಟವಾದ ಕಥೆಯನ್ನೇ ಕೈಗೆತ್ತಿಕೊಂಡಿರುತ್ತಾರೆಂಬ ನಂಬಿಕೆ ಪ್ರೇಕ್ಷಕರಲ್ಲಿದೆ. ಇತ್ತೀಚೆಗೆ ತೆರೆಗಂಡಿದ್ದ ತ್ರಯಂಬಕಂ ಚಿತ್ರದವರೆಗೂ ಅವರು ಆ ನಂಬಿಕೆಯನ್ನು ಹುಸಿಗೊಳಿಸಿದ್ದೇ ಇಲ್ಲ. ಇದೀಗ ಅವರು ರಂಗನಾಯಕಿ ಎಂಬ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಅದರ ಟ್ರೇಲರ್ ಕೂಡಾ ಬಿಡುಗಡೆಯಾಗಿದೆ. ಈ ಮೂಲಕವೇ ಇದು ದಯಾಳ್ ನಿರ್ದೇಶನದ ಇದುವರೆಗಿನ ಚಿತ್ರಗಳಿಗಿಂತಲೂ ಭಿನ್ನವಾದ ಕಥೆಯನ್ನೊಳಗೊಂಡಿರೋ ಸಿನಿಮಾ ಎಂಬ ಭರವಸೆ ಪ್ರೇಕ್ಷಕರಲ್ಲಿ ಮೂಡಿಕೊಂಡಿದೆ.

    ಈ ಟ್ರೇಲರ್ ಬಿಡುಗಡೆಯಾದ ತುಸು ಹೊತ್ತಿನಲ್ಲಿಯೇ ವ್ಯಾಪಕ ವೀಕ್ಷಣೆ ಪಡೆದುಕೊಂಡಿದೆ. ಜೊತೆಗೆ ಭರ್ಜರಿಯಾದ ಪಾಸಿಟಿವ್ ಕಮೆಂಟುಗಳನ್ನೂ ತನ್ನದಾಗಿಸಿಕೊಳ್ಳುತ್ತಾ ಯೂಟ್ಯೂಬ್ ಟ್ರೆಂಡಿಂಗ್‍ನತ್ತ ಸಾಗುತ್ತಿದೆ. ವ್ಯಾಲ್ಯೂಮ್ 1 ವರ್ಜಿನಿಟಿ ಎಂಬ ಟ್ಯಾಗ್ ಲೈನ್ ಹೊಂದಿರೋ ರಂಗನಾಯಕಿಯ ಕಥೆ ಅತ್ಯಾರಕ್ಕೊಳಗಾದ ಹುಡುಗಿಯೊಬ್ಬಳು ಸಮಾಜವನ್ನು ಎದುರಿಸುವಂಥಾ ಸೂಕ್ಷ್ಮ ಕಥಾಹಂದರವನ್ನೊಳಗೊಂಡಿರೋ ಸ್ಪಷ್ಟ ಸುಳಿವನ್ನು ಈ ಟ್ರೇಲರ್ ಬಿಟ್ಟು ಕೊಟ್ಟಿದೆ. ಇದು ವಿಶೇಷವಾದ ಕಥೆಯ ಮಹಿಳಾಪ್ರಧಾನ ಚಿತ್ರ. ಇಲ್ಲಿ ನಾಗಕನ್ನಿಕೆ ಖ್ಯಾತಿಯ ಅದಿತಿ ಪ್ರಭುದೇವ ರಂಗನಾಯಕಿಯಾಗಿ ಅಮೋಘವಾಗಿ ಅಭಿನಯಿಸಿರೋ ಸ್ಪಷ್ಟ ಲಕ್ಷಣಗಳೂ ಗೋಚರಿಸಿವೆ.

    ದಯಾಳ್ ಪದ್ಮನಾಭನ್ ಅವರಿಗೆ ಈ ಚಿತ್ರದಲ್ಲಿಯೂ ನಟ ನವೀನ್ ಕೃಷ್ಣ ಸಂಭಾಷಣೆಕಾರರಾಗಿ ಸಾಥ್ ಕೊಟ್ಟಿದ್ದಾರೆ. ಅದಿತಿ ಪ್ರಭುದೇವ ಜೊತೆ ಎಂಜಿ ಶ್ರೀನಿವಾಸ್ ಮತ್ತು ತ್ರಿವಿಕ್ರಂ ಮುಖ್ಯ ಪಾತ್ರಗಳ ಮೂಲಕ ಜೊತೆಯಾಗಿದ್ದಾರೆ. ಈ ಹಿಂದೆ ಎಟಿಎಂ ಎಂಬ ಚಿತ್ರ ನಿರ್ಮಾಣ ಮಾಡಿದ್ದ ಎಸ್ ವಿ ನಾರಾಯಣ್ ರಂಗನಾಯಕಿಗೂ ಬಂಡವಾಳ ಹೂಡಿದ್ದಾರೆ. ಹೆಣ್ಣೊಬ್ಬಳು ಅತ್ಯಾಚಾರಕ್ಕೊಳಗಾದರೆ ಕೇಸು ದಾಖಲಿಸಿ ಅತ್ಯಾಚಾರಿಗಳಿಗೆ ಶಿಕ್ಷೆಯಾಗುವಂತೆ ನೋಡಿಕೊಳ್ಳಲೂ ಪೋಶಕರು ಹಿಂದೇಟು ಹಾಕುತ್ತಾರೆ. ಅದಕ್ಕೆ ಕಾರಣ ಈ ಸಮಾಜದ ಭಯ. ಆದರಿಲ್ಲಿ ಅತ್ಯಾಚಾರಕ್ಕೀಡಾದ ನಾಯಕಿಯೇ ಖುದ್ದಾಗಿ ಕೇಸು ದಾಖಲಿಸೋ ದೃಷ್ಯದ ಮೂಲಕ ಇದೊಂದು ಭಿನ್ನ ಕಥೆ ಹೊಂದಿರೋ ಚಿತ್ರವೆಂಬ ಸುಳಿವನ್ನೂ ಈ ಟ್ರೇಲರ್ ಬಿಟ್ಟುಕೊಟ್ಟಿದೆ. ಇದುವೇ ರಂಗನಾಯಕಿಗಾಗಿ ಪ್ರೇಕ್ಷಕರು ನಕಾತರದಿಂದ ಕಾಯುವಂತೆಯೂ ಮಾಡಿದೆ.

  • ನೀವು ಸೀಲ್ ಒಡೆದಿರುವ ತಂಪು ಪಾನೀಯ ಖರೀದಿ ಮಾಡುತ್ತೀರಾ : ಕನ್ಯತ್ವದ ಬಗ್ಗೆ ಪ್ರೊಫೆಸರ್ ಪೋಸ್ಟ್

    ನೀವು ಸೀಲ್ ಒಡೆದಿರುವ ತಂಪು ಪಾನೀಯ ಖರೀದಿ ಮಾಡುತ್ತೀರಾ : ಕನ್ಯತ್ವದ ಬಗ್ಗೆ ಪ್ರೊಫೆಸರ್ ಪೋಸ್ಟ್

    ಕೋಲ್ಕತ್ತಾ: ಯುವತಿಯರ ಕನ್ಯತ್ವದ ಬಗ್ಗೆ ಅಶ್ಲೀಲವಾಗಿ ಪಶ್ಚಿಮ ಬಂಗಾಳದ ಪ್ರೊಫೆಸರ್ ಒಬ್ಬರು ಬರೆದು ವಿವಾದವನ್ನು ಮೈ ಮೇಲೆ ಎಳೆದುಕೊಂಡಿದ್ದಾರೆ.

    ಕೋಲ್ಕತ್ತಾದ ಪ್ರತಿಷ್ಠಿತ ಜಾಧವ್‍ಪುರ ವಿಶ್ವವಿದ್ಯಾಲಯದ ಪ್ರೊಫೆಸರ್ ಕನಕ್ ಸರ್ಕಾರ್ ಕನ್ಯತ್ವವನ್ನು ತಂಪು ಪಾನೀಯಕ್ಕೆ ಹೋಲಿಸಿ, ನೀವು ಸೀಲ್ ಒಡೆದಿರುವ ತಂಪು ಪಾನೀಯ ಖರೀದಿ ಮಾಡುತ್ತೀರಾ ಎಂದು ಪ್ರಶ್ನಿಸಿ ಫೇಸ್‍ಬುಕ್ ನಲ್ಲಿ ಪೋಸ್ಟ್ ಪ್ರಕಟಿಸಿದ್ದಾರೆ.

    ನೀವು ಸೀಲ್ ಒಡೆದಿರುವ ತಂಪು ಪಾನೀಯವನ್ನು ಖರೀದಿ ಮಾಡುತ್ತೀರಾ ಅಥವಾ ಪ್ಯಾಕ್ ಆಗಿರುವ ಬಿಸ್ಕೇಟ್ ಅನ್ನು ಖರೀದಿ ಮಾಡುತ್ತೀರಾ ಎಂದು ಯುವಕರಿಗೆ ಕನಕ್ ಸರ್ಕಾರ್ ಪ್ರಶ್ನೆ ಮಾಡಿದ್ದಾರೆ.

    20 ವರ್ಷ ಬೋಧನ ಅನುಭವ ಮತ್ತು ಪಿಎಚ್‍ಡಿ ಮಾರ್ಗದರ್ಶಕರಾಗಿರುವ ಕನಕ್ ಸರ್ಕಾರ್, ಕನ್ಯತ್ವ ಹೊಂದಿರುವ ಯುವತಿಯರ ಬಗ್ಗೆ ಈಗಿನ ಹುಡುಗರಿಗೆ ಅರಿವು ಇಲ್ಲ. ಹುಡುಗಿ ಸೀಲ್ ಆಗಿದ್ದರೆ ಆಕೆ `ದೇವತೆ’ ಎಂದು ಬರೆದುಕೊಂಡಿದ್ದಾರೆ.

    ಹುಟ್ಟಿನಿಂದ ಸೀಲ್ ಓಪನ್ ಆಗುವರೆಗೂ ಆಕೆ ಹುಡುಗಿಯಾಗಿರುತ್ತಾಳೆ. ಮದುವೆಯ ಸಮಯದಲ್ಲೂ ಕನ್ಯತ್ವವನ್ನು ಉಳಿಸಿಕೊಂಡಿದ್ದಾಳೆ ಎಂದರೆ ಆಕೆ ಉತ್ತಮ ಗುಣ ನಡತೆಯ ಜೊತೆ ಸುಸಂಸ್ಕೃತೆ ಎಂದರ್ಥ. ಇಂದಿನ ಕಾಲದಲ್ಲಿ ಹುಡುಗರು, ಹುಡುಗಿಯರು ಬ್ರಹ್ಮಚರ್ಯೆ ಮತ್ತು ಕನ್ಯತ್ವದ ಬಗ್ಗೆ ಜಾಸ್ತಿ ತಲೆಕೆಡಿಸಿಕೊಳ್ಳುವುದಿಲ್ಲ. ಈ ಕಾರಣಕ್ಕೆ ಹುಡುಗಿಯರು ಹುಡುಗರ ಕುತಂತ್ರಕ್ಕೆ ಬಲಿಯಾಗುತ್ತಿದ್ದಾರೆ ಎಂದು ಬರೆದುಕೊಂಡಿದ್ದಾರೆ.

    ಕನ್ಯತ್ವದ ಬಗ್ಗೆ ಜಪಾನ್ ದೇಶದ ಉದಾಹರಣೆ ನೀಡಿದ ಅವರು, ಜಪಾನಿನ ಶೇ.99ರಷ್ಟು ಹುಡುಗಿಯರು ಮದುವೆಯಾಗುವವರೆಗೂ ಕನ್ಯತ್ವ ಉಳಿಸಿಕೊಂಡಿರುತ್ತಾರೆ ಎನ್ನುವುದು ಹೆಮ್ಮೆಯ ವಿಚಾರ. ಜಪಾನಿನ ಸಮಾಜ ಅಭಿವೃದ್ಧಿ ಹೊಂದಿದೆ ಎನ್ನುವುದನ್ನು ಇದರಿಂದಲೇ ಗುರುತಿಸಬಹುದು ಎಂದು ಹೇಳಿದ್ದಾರೆ.

    ಪಾಶ್ಚಿಮಾತ್ಯ ಜೀವನ ಶೈಲಿ ಅಳವಡಿಸಿಕೊಂಡ ಕಾರಣ ಇಂದಿನ ಯುವಕ, ಯುವತಿ ಹಾಳಾಗುತ್ತಿದ್ದಾರೆ. ಹೀಗಾಗಿ ಇವರಿಗೆ ಕನ್ಯತ್ವದ ಮಹತ್ವವೇ ತಿಳಿದಿಲ್ಲ ಎಂದು ದೂರಿದ್ದಾರೆ.

    ಫೇಸ್‍ಬುಕ್ ನಲ್ಲಿ ಕೆಲ ದಿನಗಳಿಂದ ಕನ್ಯತ್ವದ ಬಗ್ಗೆ ಪೋಸ್ಟ್ ಪ್ರಕಟಿಸುತ್ತಿದ್ದ ಕನಕ್ ಸರ್ಕಾರ್ ತನ್ನ ಅಭಿಪ್ರಾಯಗಳು ವಿವಾದಕ್ಕೆ ಕಾರಣವಾಗುತ್ತಿದೆ ಎನ್ನುವುದನ್ನು ತಿಳಿದು ಎಲ್ಲ ಪೋಸ್ಟ್ ಗಳನ್ನು ಈಗ ಡಿಲೀಟ್ ಮಾಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv