Tag: Vishnu Memorial

  • ಡಿಸೆಂಬರ್ ಒಳಗೆ ವಿಷ್ಣುವರ್ಧನ್ ಸ್ಮಾರಕ ಉದ್ಘಾಟನೆ – ಸಿಎಂ

    ಡಿಸೆಂಬರ್ ಒಳಗೆ ವಿಷ್ಣುವರ್ಧನ್ ಸ್ಮಾರಕ ಉದ್ಘಾಟನೆ – ಸಿಎಂ

    ಬೆಂಗಳೂರು: ಮೈಸೂರಿನಲ್ಲಿ ನಿರ್ಮಾಣವಾಗುತ್ತಿರುವ ವಿಷ್ಣುವರ್ಧನ್ ಸ್ಮಾರಕವನ್ನು (Vishnu Memorial) ಡಿಸೆಂಬರ್ ಒಳಗೆ ಉದ್ಘಾಟಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ತಿಳಿಸಿದರು.

    ಈ ಹಿಂದೆ ವಿಷ್ಣುವರ್ಧನ್ (Vishnuvardhan) ಅವರಿದ್ದ ಜಯನಗರದ ಮನೆಯ ಸ್ಥಳದಲ್ಲಿಯೇ ನೂತನವಾಗಿ ನಿರ್ಮಾಣವಾಗಿರುವ ಮನೆಯ ಗೃಹ ಪ್ರವೇಶ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಇದನ್ನೂ ಓದಿ: ಸಾಹಸ ಸಿಂಹ ವಿಷ್ಣುವರ್ಧನ್ ಮನೆ ಗೃಹಪ್ರವೇಶ: ನಾನಾ ಗಣ್ಯರು ಭಾಗಿ

    ಭಾರತಿಯವರು ಖುದ್ದಾಗಿ ಬಂದು ಗೃಹಪ್ರವೇಶಕ್ಕೆ ಆಹ್ವಾನ ನೀಡಿದ್ದರು. ವಿಷ್ಣುವರ್ಧನ್ ಅವರಿದ್ದ ಮನೆಯನ್ನು ಇನ್ನಷ್ಟು ಚಂದ ಮಾಡಿದ್ದಾರೆ. ನವೀಕರಣಗೊಂಡಿರುವ ವಿಷ್ಣುವರ್ಧನ್ ಅವರ ಮನೆಯ ಹಿಂದೆ ಭಾರತಿ ವಿಷ್ಣುವರ್ಧನ್ ಅವರ ಪ್ರಯತ್ನ ಹಾಗೂ ಶ್ರಮ ಎದ್ದು ಕಾಣುತ್ತಿದೆ. ವಿಷ್ಣುವರ್ಧನ್ ಅವರ ತ್ಯಾಗವನ್ನು ಅಳವಡಿಸಿದ್ದಾರೆ ಎನ್ನುವುದು ನನ್ನ ಭಾವನೆ. ಅವರಿಗೆ ಶುಭ ಕೋರಲು ಬಂದಿದ್ದೇನೆ ಎಂದರು.

    ಮೈಸೂರಿನಲ್ಲಿ ನಿರ್ಮಾಣವಾಗುತ್ತಿರುವ ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣ ಪೂರ್ಣಗೊಳ್ಳುತ್ತಾ ಬಂದಿದೆ. ಡಿಸೆಂಬರ್ ಒಳಗೆ ಸ್ಮಾರಕದ ಉದ್ಘಾಟನೆಯನ್ನು ಅದ್ದೂರಿಯಾಗಿ ಮಾಡಲು ತೀರ್ಮಾನಿಸಲಾಗಿದೆ. ಹೆಚ್ಚಿನ ವಿವರಗಳನ್ನು ಅವರ ಕುಟುಂಬದವರೊಂದಿಗೆ ಚರ್ಚಿಸಿ ನಿರ್ಧಾರಕ್ಕೆ ಬರಲಾಗುವುದು. ವಿಷ್ಣುವರ್ಧನ್ ಅವರ ಮೇರು ವ್ಯಕ್ತಿತ್ವ ಹಾಗೂ ಘನತೆಗೆ ತಕ್ಕ ಹಾಗೆ ಕಾರ್ಯಕ್ರಮವನ್ನು ವೈಭವಯುತವಾಗಿ ಆಯೋಜಿಸಲಾಗುವುದು ಎಂದು ಹೇಳಿದರು. ಇದನ್ನೂ ಓದಿ: ನಟ ಡಾ. ವಿಷ್ಣುವರ್ಧನ್ ಮನೆ ಹೇಗಿದೆ? ‘ವಲ್ಮೀಕ’ ವಿಶೇಷ

    ಚುಕ್ಕಿ ರೋಗ ತಡೆಗೆ ಕ್ರಮ
    ಚಿಕ್ಕಮಗಳೂರಿನಲ್ಲಿ ಅಡಿಕೆಗೆ ಎಲೆ ಚುಕ್ಕಿ ರೋಗ ಬಂದಿದ್ದು, ವಿಜ್ಞಾನಿಗಳ ಸಂಶೋಧನೆ ಒಂದು ಹಂತಕ್ಕೆ ಬಂದಿದೆ. ಅದಕ್ಕೆ ಪರಿಹಾರ ನೀಡುವ ಹಾಗೂ ರೋಗ ಹರಡದಂತೆ ಅನುದಾನ ಬಿಡುಗಡೆಯಾಗಿದೆ. ಮಲೆನಾಡ ಭಾಗದಲ್ಲಿ ಆನೆ ಹಾವಳಿ ಹೆಚ್ವಿದ್ದು, ನಾಲ್ಕು ಜಿಲ್ಲೆಗಳಲ್ಲಿ ಅರಣ್ಯ ಪಡೆಗಳನ್ನು ರಚಿಸಿ, ವಾಹನ ಸಲಕರಣೆಗೆ ಅನುದಾನ ಬಿಡುಗಡೆಯಾಗುತ್ತಿದೆ ಎಂದು ತಿಳಿಸಿದರು.

    ಶೃಂಗೇರಿಯಲ್ಲಿ ಆಸ್ಪತ್ರೆ
    ಶೃಂಗೇರಿಯಲ್ಲಿ ಆಸ್ಪತ್ರೆ ನಿರ್ಮಿಸಲು ತೀರ್ಮಾನಿಸಲಾಗಿದೆ. ಸ್ಥಳದ ಸಮಸ್ಯೆಯಿದ್ದು, ಅದನ್ನು ಬಗೆಹರಿಸಿ ಆಸ್ಪತ್ರೆ ನಿರ್ಮಿಸಲಾಗುವುದು ಎಂದರು.

    Live Tv
    [brid partner=56869869 player=32851 video=960834 autoplay=true]

  • ದೌರ್ಜನ್ಯ ನಡೆಸಿ ವಿಷ್ಣು ಸ್ಮಾರಕಕ್ಕೆ ಜಮೀನು ಕಿತ್ತುಕೊಳ್ಳೋ ಬದಲು ವಿಷ ಕೊಟ್ಟು ಬಿಡಿ – ರೈತ ಮಹಿಳೆ

    ದೌರ್ಜನ್ಯ ನಡೆಸಿ ವಿಷ್ಣು ಸ್ಮಾರಕಕ್ಕೆ ಜಮೀನು ಕಿತ್ತುಕೊಳ್ಳೋ ಬದಲು ವಿಷ ಕೊಟ್ಟು ಬಿಡಿ – ರೈತ ಮಹಿಳೆ

    ಮೈಸೂರು: ನಮ್ಮ ಮೇಲೆ ದೌರ್ಜನ್ಯ ನಡೆಸಿ ಜಮೀನು ಕಿತ್ತು ಕೊಳ್ಳುವ ಬದಲು ವಿಷ ಕೊಟ್ಟು ಬಿಡಿ ಇಲ್ಲೆ ಎಲ್ಲಾ ಸತ್ತು ಹೋಗುತ್ತೇವೆ ಎಂದು ಡಾ. ವಿಷ್ಣು ಸ್ಮಾರಕ ನಿರ್ಮಾಣ ಮಾಡಲು ಗುರುತಿಸಿರುವ ಜಮೀನಿನಲ್ಲಿ ಕೃಷಿ ಮಾಡುತ್ತಿರುವ ರೈತ ಮಹಿಳೆ ಜಯಮ್ಮ ಹೇಳಿದ್ದಾರೆ.

    ಮೈಸೂರಿನ ಹೊರವಲಯದ ಹಾಲಾಳು ಗ್ರಾಮದಲ್ಲಿ ಸ್ಮಾರಕ ನಿರ್ಮಾಣಕ್ಕೆ ಸರಕಾರ ಮುಂದಾಗಿತ್ತು. ಸರ್ಕಾರದ ನಿರ್ಧಾರಕ್ಕೆ ಈ ಜಾಗದಲ್ಲಿ ಕಳೆದ 4 ತಲೆಮಾರುಗಳಿಂದ ಉಳುಮೆ ಮಾಡುತ್ತಿರುವ ಜಯಮ್ಮ ಕುಟುಂಬ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದೆ.

    ವಿಷ್ಣು ಸ್ಮಾರಕ ವಿವಾದಕ್ಕೆ ಅಭಿಮಾನಿಗಳು ಆಗ್ರಹಿಸಿದ ಅಭಿಮಾನಿಗಳ ಹಿನ್ನೆಲೆಯಲ್ಲಿ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ರೈತ ಮಹಿಳೆ ಜಯಮ್ಮ, ನಮಗೆ ಸೂಕ್ತವಾದ ಪರಿಹಾರ ಕೊಟ್ಟು ಜಮೀನು ತೆಗೆದುಕೊಳ್ಳಿ ಎಂದು ಹೇಳಿದ್ದೇನೆ. ಅದನ್ನು ಬಿಟ್ಟು ದೌರ್ಜನ್ಯ ಮಾಡಿ ಜಮೀನು ಕಿತ್ತು ಕೊಳ್ಳುವುದಾರೆ ವಿಷ ಕೊಡಿ. ನಮ್ಮ ಸಮಾಧಿಯೂ ಇಲ್ಲೇ ಮಾಡಿ ಎಂದರು.

    ಭಾರತಿ ವಿಷ್ಣುವರ್ಧನ್ ಅವರು ನಮ್ಮ ಜೊತೆ ಸರಿಯಾಗಿ ಮಾತನಾಡಿಲ್ಲ. ಇಲ್ಲಿಗೆ ಬರುವ ಎಲ್ಲರೂ ದೌರ್ಜನ್ಯದಿಂದ ನಡೆದುಕೊಳ್ಳುತ್ತಿದ್ದಾರೆ. ನಾಳೆಯಿಂದ ಈ ಜಮೀನಿಗೆ ಯಾರಿಗೂ ಕಾಲಿಡುವುದಕ್ಕೂ ಬಿಡಲ್ಲ. ನಮಗೇ ಸೂಕ್ತ ಪರಿಹಾರ ನೀಡದೆ 4 ತಲೆ ಮಾರುಗಳಿಂದ ಇದೇ ಭೂಮಿಯನ್ನು ನಂಬಿ ಜೀವನ ನಡೆಸುವ ನಮ್ಮ ಅನ್ನಕ್ಕೆ ಕಲ್ಲು ಹಾಕಬೇಡಿ. ನಿಮಗೇ ಇದೇ ಜಾಮೀನು ಬೇಕೆಂದರೆ ಸೂಕ್ತ ಪರಿಹಾರ ನೀಡಿ. ಈ ವಿಚಾರದಲ್ಲಿ ಭಾರತಿ ವಿಷ್ಣುವರ್ಧನ್ ಅವರು ಅಸಹಾಯಕರಾಗಿದ್ದಾರೆ. ಈ ಹಿಂದೆ ಸರ್ಕಾರ ಸ್ಮಾರಕ ನಿರ್ಮಾಣಕ್ಕೆ ಹಣ ನೀಡಲ್ಲ ಎಂದು ಹೇಳಿ, ಸ್ವತಃ ಅವರೇ ಹಣ ನೀಡುತ್ತೇನೆ ಎಂದು ಮಾಹಿತಿ ನೀಡಿದ್ದರು. ಆದರೆ ಅವರು ನೀಡುವ 20 ಲಕ್ಷ ರೂ. ಮಾತ್ರ ನೀಡಿದರೆ ನಮಗೆ ಅನ್ಯಾಯವಾಗುತ್ತದೆ. ಸರ್ಕಾರ ಗೋಮಾಳ ಎಂದು ಹೇಳುತ್ತೆ. ಅದಕ್ಕೆ ನಾವು ಪರಿಹಾರಕ್ಕಾಗಿ ನ್ಯಾಯಾಲಯ ಮೋರೆ ಹೋಗಿದ್ದೇವೆ ಎಂದರು. ಇದನ್ನು ಓದಿ : ಸಾಹಸ ಸಿಂಹನಿಗೆ ಪೂಜೆ ಸಲ್ಲಿಸಿದ ಅಭಿಮಾನಿಗಳು – ಸ್ಮಾರಕ ನಿರ್ಮಾಣಕ್ಕೆ ಶಂಕು ಸ್ಥಾಪನೆ

    ಎಷ್ಟು ಪರಿಹಾರ ಬೇಕು ಎಂದು ಕೇಳಿದ್ದಕ್ಕೆ, 20 ಲಕ್ಷ ಬೇಡ. ನಮ್ಮ ಮನೆಯಲ್ಲಿ 5 ಮಂದಿ ಇದ್ದಾರೆ. ಒಂದೊಂದು ತಲೆಗೆ 30 ಲಕ್ಷ ಕೊಡಬೇಕು. ನಮ್ಮ ಬೇಡಿಕೆಗೆ ಭಾರತಿ ವಿಷ್ಣುವರ್ಧನ್ ಒಪ್ಪಿಗೆ ನೀಡಲಿಲ್ಲ ಎಂದು ಹೇಳಿದರು.

    ಕಲಾವದರಿಗೂ ಕಷ್ಟ ಸುಖ ಗೊತ್ತಿರುತ್ತದೆ. ನಮಗೆ ಮಾತುಕತೆ ಮೂಲವೇ ಚರ್ಚೆ ನಡೆಸಿ ಪರಿಹಾರ ನೀಡಲು ಮುಂದಾದರೆ ಸಿದ್ಧರಾಗಿದ್ದೇವೆ. ಈ ಕುರಿತು ಸರ್ಕಾರದ ಅಧಿಕಾರಿಗಳಿಗೂ ಕೂಡ ನಮ್ಮ ಬೇಡಿಕೆ ತಿಳಿಸಿದ್ದೇವೆ. ಈ ಭೂಮಿಯನ್ನು ನಂಬಿಯೇ ನಮ್ಮ ಕುಟುಂಬ ಜೀವನ ನಡೆಸುತ್ತಿದ್ದು, ಸೂಕ್ತ ಪರಿಹಾರ ನೀಡಬೇಕು ಎಂದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv