Tag: Vishnu Vishal

  • ಆ್ಯನಿವರ್ಸರಿ ದಿನವೇ ಹೆಣ್ಣು ಮಗುವನ್ನು ಬರಮಾಡಿಕೊಂಡ ನಟ ವಿಷ್ಣು ವಿಶಾಲ್‌, ಜ್ವಾಲಾ ಗುಟ್ಟಾ ದಂಪತಿ

    ಆ್ಯನಿವರ್ಸರಿ ದಿನವೇ ಹೆಣ್ಣು ಮಗುವನ್ನು ಬರಮಾಡಿಕೊಂಡ ನಟ ವಿಷ್ಣು ವಿಶಾಲ್‌, ಜ್ವಾಲಾ ಗುಟ್ಟಾ ದಂಪತಿ

    ‘ಲಾಲ್ ಸಲಾಮ್’ ನಟ ವಿಷ್ಣು ವಿಶಾಲ್ (Vishnu Vishal) ಪತ್ನಿ ಜ್ವಾಲಾ ಗುಟ್ಟಾ (Jwala Gutta) ಆ್ಯನಿವರ್ಸರಿ ದಿನವೇ ಹೆಣ್ಣು ಮಗುವಿಗೆ (Baby Girl) ಜನ್ಮ ನೀಡಿದ್ದಾರೆ. ಮದುವೆ ವಾರ್ಷಿಕೋತ್ಸವದ ದಿನವೇ ಮುದ್ದು ಹೆಣ್ಣು ಮಗುವನ್ನು ಬರಮಾಡಿಕೊಂಡಿದ್ದಾರೆ. ಇದನ್ನೂ ಓದಿ:‘ದೂರ ತೀರ ಯಾನ’ ಚಿತ್ರದ ಮೊದಲ ಪ್ರೇಮಗೀತೆಗೆ ಅಭಿಮಾನಿಗಳ ಮೆಚ್ಚುಗೆಯ ಸುರಿಮಳೆ

    ನಮಗೆ ಹೆಣ್ಣು ಮಗು ಜನಿಸಿದೆ. ನನ್ನ ಮಗ ಆರ್ಯನ್ ಈಗ ಅಣ್ಣ ಆಗಿದ್ದಾನೆ. ಇಂದು ನಮ್ಮ 4ನೇ ವಾರ್ಷಿಕೋತ್ಸವದ ಸಂಭ್ರಮ. ಇದೇ ದಿನ ನಾವು ದೇವರಿಂದ ಈ ಉಡುಗೊರೆಯನ್ನು ಸ್ವಾಗತಿಸುತ್ತಿದ್ದೇವೆ. ನಿಮ್ಮೆಲ್ಲರ ಪ್ರೀತಿ ಮತ್ತು ಆಶೀರ್ವಾದ ನಮಗೆ ಬೇಕು ಎಂದು ನಟ ವಿಷ್ಣು ವಿಶಾಲ್ ಇನ್ಸ್ಟಾಗ್ರಾಂ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಸದ್ಯ ಪೋಷಕರಾದ ಸಂಭ್ರಮದಲ್ಲಿರುವ ಈ ಜೋಡಿಗೆ ಫ್ಯಾನ್ಸ್‌ಗೆ ವಿಶ್ ಮಾಡುತ್ತಿದ್ದಾರೆ. ಇದನ್ನೂ ಓದಿ:ನಗದಿನ ಮೂಲಕ ಸಂಭಾವನೆ – ಮಹೇಶ್‌ ಬಾಬುಗೆ ಇಡಿ ನೋಟಿಸ್‌

     

    View this post on Instagram

     

    A post shared by Vishnu Vishal (@thevishnuvishal)

    ಅಂದಹಾಗೆ, ನಟ ಕೆ. ನಟರಾಜ್ ಪುತ್ರಿ ರಂಜನಿ ನಟರಾಜ್ ಅವರನ್ನು ಪ್ರೀತಿಸಿ 2010ರಲ್ಲಿ ವಿಷ್ಣು ಮದುವೆಯಾದರು. ಇವರ ದಾಂಪತ್ಯಕ್ಕೆ ಮಗ ಆರ್ಯನ್ ಸಾಕ್ಷಿಯಾಗಿದ್ದಾರೆ. 2018ರಲ್ಲಿ ಕೆಲ ಮನಸ್ತಾಪಗಳಿಂದ ಈ ಜೋಡಿ ಡಿವೋರ್ಸ್ ಪಡೆದರು. ಬಳಿಕ 2022ರಲ್ಲಿ ಬ್ಯಾಡ್ಮಿಂಟನ್ ಆಟಗಾರ್ತಿ ಜ್ವಾಲಾ ಗುಟ್ಟಾ ಜೊತೆ ವಿಷ್ಣು ಹೈದರಾಬಾದ್‌ನಲ್ಲಿ ಮದುವೆಯಾದರು. ಇದೀಗ ಮನೆಗೆ ಮಹಾಲಕ್ಷ್ಮಿ ಆಗಮಿಸಿದ ಖುಷಿಯಲ್ಲಿ ವಿಷ್ಣು ಕುಟುಂಬ.

  • ಚೆನ್ನೈ ಪ್ರವಾಹ: ಆಮೀರ್‌, ವಿಷ್ಣುರನ್ನ ರಕ್ಷಿಸಿದ ಅಗ್ನಿಶಾಮಕ ದಳ

    ಚೆನ್ನೈ ಪ್ರವಾಹ: ಆಮೀರ್‌, ವಿಷ್ಣುರನ್ನ ರಕ್ಷಿಸಿದ ಅಗ್ನಿಶಾಮಕ ದಳ

    ಚೆನ್ನೈನಲ್ಲಿ ಮಿಚಾಂಗ್ ಚಂಡಮಾರುತದಿಂದ ಹಲವಾರು ಮನೆಗಳಿಗೆ ನೀರು ನುಗ್ಗಿದೆ. ಎಡಬಿಡದೆ ಸುರಿದ ಭಾರೀ ಮಳೆಯಿಂದಾಗಿ ಕಾಲಿವುಡ್ ಹೀರೋ ವಿಷ್ಣು ವಿಶಾಲ್ ಮನೆಯಿರುವ ಪ್ರದೇಶ ಜಲಾವೃತ್ತಗೊಂಡಿದೆ. ಈ ಪರಿಣಾಮ, ಮನೆಯಿಂದ ಯಾರೂ ಹೊರಬರಲಾರದ ಸ್ಥಿತಿಯಲ್ಲಿದ್ದಾರೆ. ಇದೇ ವೇಳೆ, ಬಾಲಿವುಡ್ ನಟ ಆಮೀರ್ ಖಾನ್ ಅವರು ನಟ ವಿಷ್ಣು (Vishnu Vishal) ಮನೆಯಲ್ಲೇ ಲಾಕ್ ಆಗಿದ್ದಾರೆ.

    ಚೆನ್ನೈನ ಕರಪಾಕ್ಕಂ ಪ್ರದೇಶದಲ್ಲಿರುವ ತಮಿಳು ನಟ ವಿಷ್ಣು ವಿಶಾಲ್ ಮನೆಗೆ ಆಮೀರ್ ಖಾನ್ ಭೇಟಿ ನೀಡಿದ್ದರು. ಪ್ರವಾಹ ಪರಿಸ್ಥಿತಿಯಿಂದಾಗಿ ವಿಷ್ಣು ವಿಶಾಲ್ ಅವರ ನಿವಾಸದಲ್ಲೇ ಆಮೀರ್ ಖಾನ್ ಸಿಲುಕಿದ್ದರು. ಈ ಸಂದರ್ಭದಲ್ಲಿ ನೀರಿನ ಮಟ್ಟ ತೀವ್ರವಾಗಿ ಏರುತ್ತಿದ್ದು, ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ನೆಟ್‌ವರ್ಕ್, ವೈಫೈ ಯಾವುದೂ ಇಲ್ಲವಾಗಿದೆ. ಇದೇ ಸಮಯದಲ್ಲಿ ವಿಷ್ಣು ವಿಶಾಲ್ ಮನೆಯೊಳಗೆ ನೀರು ನುಗ್ಗಿದ್ರಿಂದ ಸಹಾಯಕ್ಕಾಗಿ ನಟ ವಿಷ್ಣು ವಿಶಾಲ್ ಅವರು ಸೋಷಿಯಲ್ ಮೀಡಿಯಾದಲ್ಲಿ ಮೂಲಕ ಮನವಿ ಮಾಡಿದ್ದರು.

    ಕೂಡಲೆ ಅಗ್ನಿಶಾಮಕ ದಳ ನಟ ವಿಷ್ಣು ವಿಶಾಲ್ ಮತ್ತು ಆಮೀರ್ ಖಾನ್ (Aamir Khan) ಅವರನ್ನು ರಕ್ಷಿಸಿ ಸುರಕ್ಷಿತ ಸ್ಥಳಕ್ಕೆ ಧಾವಿಸಿದ್ದಾರೆ. ಮಿಚಾಂಗ್ ಚಂಡಮಾರುತದಿಂದ ನನ್ನ ಮನೆಯೊಳಗೆ ನೀರು ನುಗ್ಗಿದೆ ಅವಾಂತರ ಆಗಿದೆ. ಕರಪಾಕ್ಕಂನಲ್ಲಿ ನೀರಿನ ಮಟ್ಟ ತೀವ್ರವಾಗಿ ಏರಿಕೆಯಾಗುತ್ತಿದೆ. ಸಹಾಯಕ್ಕಾಗಿ ಕರೆ ಮಾಡಿದ್ದೇನೆ. ವಿದ್ಯುತ್ ಸಂಪರ್ಕ ಇಲ್ಲ. ವೈಪೈ, ಫೋನ್ ಸಿಗ್ನಲ್ ಇಲ್ಲ. ಇಲ್ಲಿರುವವರ ಸಹಾಯಕ್ಕೆ ಯಾರಾದರೂ ಧಾವಿಸಲಿ ಎಂದು ಬಯಸುತ್ತೇನೆ ಎಂದು ವಿಷ್ಣು ವಿಶಾಲ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು.

    ಈ ವಿಷಯ ಅರಿತ, ಅಗ್ನಿಶಾಮಕ ದಳ ವಿಷ್ಣು ಮನೆಗೆ ಧಾವಿಸಿ, ನಟ ವಿಷ್ಣು ಮತ್ತು ಆಮೀರ್ ಖಾನ್ ರಕ್ಷಣೆ ಮಾಡಿದ್ದಾರೆ. ಅಗ್ನಿಶಾಮಕ ತಂಡಕ್ಕೆ ವಿಷ್ಣು ಮತ್ತು ಆಮೀರ್‌ ಖಾನ್‌ ಧನ್ಯವಾದ ತಿಳಿಸಿದ್ದಾರೆ.

  • ಅಪ್ಪನಿಗೆ ಆ್ಯಕ್ಷನ್-ಕಟ್ ಹೇಳಲಿದ್ದಾರೆ ರಜನಿಕಾಂತ್ ಪುತ್ರಿ ಐಶ್ವರ್ಯ: ಲಾಲ್ ಸಲಾಮ್ ಚಿತ್ರದಲ್ಲಿ ರಜನಿ

    ಅಪ್ಪನಿಗೆ ಆ್ಯಕ್ಷನ್-ಕಟ್ ಹೇಳಲಿದ್ದಾರೆ ರಜನಿಕಾಂತ್ ಪುತ್ರಿ ಐಶ್ವರ್ಯ: ಲಾಲ್ ಸಲಾಮ್ ಚಿತ್ರದಲ್ಲಿ ರಜನಿ

    ಮಿಳಿನ ಸೂಪರ್ ಸ್ಟಾರ್ ರಜನಿಕಾಂತ್ ಪುತ್ರಿ ಐಶ್ವರ್ಯ (Aishwarya Rajinikanth) ಇದೀಗ ಹೊಸ ಸಿನಿಮಾವೊಂದನ್ನು ನಿರ್ದೇಶನ ಮಾಡುತ್ತಿದ್ದಾರೆ. ಲಾಲ್ ಸಲಾಮ್ (Lal Salaam) ಹೆಸರಿನಲ್ಲಿ ಇವರು ಚಿತ್ರ ಮಾಡುತ್ತಿದ್ದು, ಈ ಸಿನಿಮಾದಲ್ಲಿ ರಜನಿಕಾಂತ್ ಕೂಡ ವಿಶೇಷ ಪಾತ್ರದಲ್ಲಿ ನಟಿಸಲಿದ್ದಾರೆ. ಈ ಮಾಹಿತಿಯನ್ನು ಸ್ವತಃ ಸಿನಿಮಾದ ನಿರ್ಮಾಪಕರೇ ಘೋಷಿಸಿದ್ದಾರೆ. ಲೈಕಾ ಪ್ರೊಡಕ್ಷನ್ ಸಂಸ್ಥೆಯು ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದೆ.

    ಲಾಲ್ ಸಲಾಮ್ ಸಿನಿಮಾದಲ್ಲಿ ವಿಷ್ಣು ವಿಶಾಲ್ ಮತ್ತು ವಿಕ್ರಾಂತ್ ನಾಯಕರಾಗಿ ನಟಿಸುತ್ತಿದ್ದು, ಸಂಗೀತ ಮಾಂತ್ರಿಕ ಎ.ಆರ್.ರೆಹಮಾನ್ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ಲೈಕಾ ಪ್ರೊಡಕ್ಷನ್ ಬ್ಯಾನರ್ ಅಡಿಯಲ್ಲಿ ಶ್ರೀಧರ್ ಪಿಲ್ಲೈ ಅವರು ಚಿತ್ರಕ್ಕೆ ಹಣ ಹೂಡಿದ್ದಾರೆ. ಅವರೇ ಟ್ವಿಟ್ ಮೂಲಕ ತಮ್ಮ ಸಿನಿಮಾದಲ್ಲಿ ರಜನಿಕಾಂತ್ (Rajinikanth) ವಿಶೇಷ ಪಾತ್ರ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ:ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ರು ವಿಜಯ್ ದೇವರಕೊಂಡ- ರಶ್ಮಿಕಾ

    ಇದೊಂದು ಕ್ರಿಕೆಟ್ ಹಿನ್ನೆಲೆಯನ್ನು ಆಧರಿಸಿದ ಸಿನಿಮಾ ಎಂದು ಹೇಳಲಾಗುತ್ತಿದೆ. ಈ ಕಾರಣಕ್ಕಾಗಿಯೇ ಕ್ರಿಕೆಟ್ ಬಲ್ಲಂತಹ ನಟರಾದ ವಿಕ್ರಾಂತ್ (Vikrant) ಮತ್ತು ವಿಷ್ಣು ವಿಶಾಲ್ (Vishnu Vishal) ಅವರನ್ನು ಆಯ್ಕೆ ಮಾಡಿಕೊಂಡಿದ್ದಾರಂತೆ. ಈ ಇಬ್ಬರೂ ಕಲಾವಿದರು ಉತ್ತಮ ಕ್ರಿಕೆಟ್ ಪಟುಗಳು ಎನ್ನುವುದು ವಿಶೇಷ. ಈ ಸಿನಿಮಾದಲ್ಲಿ ಇನ್ನೂ ಹಲವು ಅಚ್ಚರಿಯ ವಿಷಯಗಳಿದ್ದು, ಅವುಗಳನ್ನು ಮುಂದಿನ ದಿನಗಳಲ್ಲಿ ಹೇಳುವುದಾಗಿಯೂ ನಿರ್ಮಾಣ ಸಂಸ್ಥೆ ತಿಳಿಸಿದೆ.

    Live Tv
    [brid partner=56869869 player=32851 video=960834 autoplay=true]

  • ಗಂಡನ ಬೆತ್ತಲೆ ಫೋಟೋ ಶೂಟ್ ಮಾಡಿದ ಖ್ಯಾತ ಬ್ಯಾಡ್ಮಿಂಟನ್ ತಾರೆ ಜ್ವಾಲಾ ಗುಟ್ಟಾ

    ಗಂಡನ ಬೆತ್ತಲೆ ಫೋಟೋ ಶೂಟ್ ಮಾಡಿದ ಖ್ಯಾತ ಬ್ಯಾಡ್ಮಿಂಟನ್ ತಾರೆ ಜ್ವಾಲಾ ಗುಟ್ಟಾ

    ಬಾಲಿವುಡ್ ನಟ ರಣವೀರ್ ಸಿಂಗ್ ಬೆತ್ತಲೆ ಫೋಟೋ ವೈರಲ್ ಆಗುತ್ತಿದ್ದಂತೆಯೇ ಹಲವು ನಟರು ಕೂಡ ಅದೇ ದಾರಿಯಲ್ಲಿ ಸಾಗುತ್ತಿದ್ದಾರೆ. ಮೊನ್ನೆಯಷ್ಟೇ ಹಿಂದಿಯ ಕಿರುತೆರೆ ನಟನೊಬ್ಬ ಬೆತ್ತಲೆ ಫೋಟೋ ಶೂಟ್ ಮಾಡಿಸಿಕೊಂಡಿದ್ದ, ನಂತರ ರಣವೀರ್ ಗೆ ಚಾಲೇಂಜ್ ಅನ್ನುವಂತೆ ನಟಿ ಉರ್ಫಿ ಜಾವೇದ್ ಕೂಡ ಅದೇ ದಾರಿ ಹಿಡಿದಿದ್ದರು. ಇದೀಗ ತಮಿಳು ನಟ ವಿಷ್ಣು ವಿಶಾಲ್ ಕೂಡ ಬೆತ್ತಲೆಯಾಗಿ ಫೋಟೋ ಶೂಟ್ ಮಾಡಿಸಿಕೊಂಡಿದ್ದಾರೆ. ಈ ಫೋಟೋ ಸೆರೆ ಹಿಡಿದಿರುವುದು ಭಾರತೀಯ ಖ್ಯಾತ ಬ್ಯಾಡ್ಮಿಂಟನ್ ಆಟಗಾರ್ತಿ ಜ್ವಾಲಾ ಗುಟ್ಟಾ ಎನ್ನುವುದು ವಿಶೇಷ.

    ಭಾರತೀಯ ಖ್ಯಾತ ಬ್ಯಾಡ್ಮಿಂಟನ್ ತಾರೆ ಜ್ವಾಲಾ ಗುಟ್ಟಾ ಮತ್ತು ತಮಿಳಿನ ಖ್ಯಾತ ನಟ ವಿಷ್ಣು ವಿಶಾಲ್ 2021ರಲ್ಲಿ ಮದುವೆಯಾದವರು. ಅದಕ್ಕೂ ಮುನ್ನ ಬ್ಯಾಡ್ಮಿಂಟನ್ ಆಟಗಾರ ಚೇತನ್ ಆನಂದ್ ಜೊತೆ ಮದುವೆಯಾಗಿದ್ದರು. ಈ ಇಬ್ಬರೂ ಡಿವೋರ್ಸ್ ಪಡೆದುಕೊಂಡ ನಂತರ ವಿಷ್ಣು ವಿಶಾಲ್ ಜೊತೆ ಜ್ವಾಲಾ ಮದುವೆಯಾಗಿದ್ದಾರೆ. ಇದೀಗ ಗಂಡನ ಬೆತ್ತಲೆ ಫೋಟೋವನ್ನು ತಗೆಯುವ ಮೂಲಕ ಮತ್ತೆ ಸುದ್ದಿಯಾಗಿದ್ದಾರೆ ಜ್ವಾಲಾ.

    ಬೆತ್ತಲೆ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ವಿಷ್ಣು ವಿಶಾಲ್, ಈ ಫೋಟೋವನ್ನು ಸೆರೆ ಹಿಡಿದಿರುವುದು ತಮ್ಮ ಪತ್ನಿ ಜ್ವಾಲಾ ಗುಟ್ಟಾ ಎನ್ನುವುದನ್ನು ಅವರೇ ಬಹಿರಂಗ ಪಡಿಸಿದ್ದಾರೆ. ಈ ಫೋಟೋಗಳು ಕೂಡ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ಈ ಹೆಸರಾಂತ ತಾರೆಯರು ಯಾಕೆ ಹೀಗೆ ಹುಚ್ಚಾಟ ಮಾಡುತ್ತಾರಾ ಎಂದು ಕೆಲವರು ಪ್ರಶ್ನಿಸಿದ್ದಾರೆ. ಇದರಿಂದ ಆಗುವ ಲಾಭ ಏನು ಎಂದು ಕೆಲವರು ಕಾಮೆಂಟ್ ಕೂಡ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ವಿಷ್ಣು ವಿಶಾಲ್ ಜೊತೆ ಜ್ವಾಲಾಗುಟ್ಟಾ ಮದ್ವೆಗೆ ಮುಹೂರ್ತ ನಿಗದಿ

    ವಿಷ್ಣು ವಿಶಾಲ್ ಜೊತೆ ಜ್ವಾಲಾಗುಟ್ಟಾ ಮದ್ವೆಗೆ ಮುಹೂರ್ತ ನಿಗದಿ

    – ಯಾರು ಈ ವಿಷ್ಣು ವಿಶಾಲ್?

    ಚೆನ್ನೈ: ಇದೇ ಏಪ್ರಿಲ್ 22ರಂದು ಭಾರತೀಯ ಬ್ಯಾಡ್ಮಿಂಟನ್ ಡಬಲ್ ವಿಭಾಗದ ತಾರೆ ಜ್ವಾಲಾಗುಟ್ಟಾ ಗೆಳೆಯ, ನಟ ವಿಷ್ಣು ವಿಶಾಲ್ ಜೊತೆ ಸಪ್ತಪದಿ ತುಳಿಯಲಿದ್ದಾರೆ. ಸೆಪ್ಟೆಂಬರ್ ನಲ್ಲಿ ಜ್ವಾಲಾಗುಟ್ಟಾ ಜನ್ಮದಿನದಂದೇ ನಟ ವಿಶಾಲ್ ಪ್ರಪೋಸ್ ಮಾಡಿದ್ದರು. ಅದೇ ದಿನ ವಿಷ್ಣು ವಿಶಾಲ್ ಪ್ರಪೋಸಲ್ ಸ್ವೀಕರಿಸಿದ್ದ ಜ್ವಾಲಾಗುಟ್ಟಾ, ನಿಶ್ಚಿತಾರ್ಥ ಮಾಡಿಕೊಂಡಿದ್ದರು.

    ಎರಡೂ ಕುಟುಂಬಗಳ ಆಶೀರ್ವಾದದೊಂದಿಗೆ ಆಪ್ತರ ಸಮ್ಮುಖದಲ್ಲಿ ಇದೇ 22ರಂದು ನಾವು ಹೊಸ ಜೀವನಕ್ಕೆ ಕಾಲಿಡುತ್ತಿದ್ದೇವೆ. ನಮಗೆ ನೀವು ತೋರಿಸಿದ ಪ್ರೀತಿಗೆ ಚಿರಋಣಿ. ನಿಮ್ಮ ಆಶೀರ್ವಾದ ಮತ್ತು ಹಾರೈಕೆ ನಮ್ಮ ಮೇಲಿರಲಿ. ಪ್ರೀತಿ, ನಿಷ್ಠೆ, ಸ್ನೇಹದೊಂದಿಗೆ ಒಂದಾಗಿ ನಮ್ಮ ಜೀವನದ ಹೊಸ ಪ್ರಯಾಣ ಆರಂಭಿಸುತ್ತಿದ್ದೇವೆ ಎಂದು ಆಮಂತ್ರಣ ಪತ್ರಿಕೆಯಲ್ಲಿ ಬರೆಸಿದ್ದಾರೆ. 37 ವರ್ಷದ ಜ್ವಾಲಾ ಗುಟ್ಟಾ 2010 ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಚಿನ್ನದ ಪದಕ ಗೆದ್ದಿದ್ದು, ಅರ್ಜುನ ಪ್ರಶಸ್ತಿ ಸಹ ಪಡೆದುಕೊಂಡಿದ್ದಾರೆ.

    36 ವರ್ಷದ ನಟ ವಿಷ್ಣು ವಿಶಾಲ್ ಮೂಲತಃ ತಮಿಳುನಾಡಿನ ವೆಲ್ಲೊರು ಮೂಲದವರು. ಇವರ ಮೂಲ ಹೆಸರು ವಿಶಾಲ್ ಕುಡವಾಲ. ಹೆಚ್ಚಾಗಿ ತಮಿಳಿನ ಕ್ರೀಡಾ ಆಧಾರಿತ ಚಿತ್ರಗಳಲ್ಲಿ ಕಾಣಿಸಿಕೊಂಡಿರುವ ವಿಶಾಲ್, 2009 ರಲ್ಲಿ ಚಿತ್ರರಂಗಕ್ಕೆ ಪಾದರ್ಪಣೆ ಮಾಡಿದ್ದಾರೆ. 17ಕ್ಕೂ ಹೆಚ್ಚು ತಮಿಳು ಸಿನಿಮಾಗಳಲ್ಲಿ ನಟಿಸಿದ್ದಾರೆ.

    ವೆನ್ನಿಲಾ ಕಬ್ಬಡಿ ಕುಝೂ, ಬಲೆ ಪಾಂಡೀಯನ್, ಕಾದನ್, ಸಿಲ್ಲುಕುವರಿಪಟ್ಟಿ ಸಿಂಗಮ ಇವರ ಪ್ರಮುಖ ಚಿತ್ರಗಳು. ಜೊತೆಗೆ ತಮಿಳಿನ ಹಲವು ಚಿತ್ರಗಳನ್ನ ನಿರ್ಮಾಣ ಸಹ ಮಾಡಿದ್ದಾರೆ. ಈ ಹಿಂದೆ 2010ರಲ್ಲಿ ತಮಿಳು ಖ್ಯಾತ ನಟ ಕೆ ನಟರಾಜ್ ರ ಪುತ್ರಿ ರಜನಿ ನಟರಾಜ್ ರನ್ನ ಮದುವೆಯಾಗಿದ್ದರು. ಕಾರಣಾಂತರಗಳಿಂದ 2018ರಲ್ಲಿ ಜೋಡಿ ಕಾನೂನತ್ಮಾಕವಾಗಿ ಬೇರ್ಪಟ್ಟಿತ್ತು. ಇದೇ 22ಕ್ಕೆ ಬ್ಯಾಡ್ಮಿಂಟನ್ ತಾರೆ ಜೊತೆ ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆ.