Tag: Vishnuvardhan

  • ನಾಳೆಯಿಂದ ಡಾ.ವಿಷ್ಣು ಹೆಸರಿನಲ್ಲಿ ಕ್ರಿಕೆಟ್: ಚಿತ್ರೋದ್ಯಮ ಭಾಗಿ

    ನಾಳೆಯಿಂದ ಡಾ.ವಿಷ್ಣು ಹೆಸರಿನಲ್ಲಿ ಕ್ರಿಕೆಟ್: ಚಿತ್ರೋದ್ಯಮ ಭಾಗಿ

    ನ್ನಡದ ಹೆಸರಾಂತ ನಟ ಡಾ.ವಿಷ್ಣುವರ್ಧನ್ (Vishnuvardhan) ಅವರ ಹೆಸರಿನಲ್ಲಿ ನಡೆಯುತ್ತಿರುವ ‘ಯಜಮಾನ ಪ್ರೀಮಿಯರ್ ಲೀಗ್ ಸೀಸನ್ 2’ ನಾಳೆಯಿಂದ ಎರಡು ದಿನಗಳ ಕಾಲ ಬೆಂಗಳೂರಿನಲ್ಲಿ ನಡೆಯುತ್ತಿದೆ. ಅಭಿಮಾನಿಗಳ ಜೊತೆ ಸಿನಿ ತಾರೆಯರು ಈ ಪಂದ್ಯದಲ್ಲಿ ಭಾಗವಹಿಸುತ್ತಿರುವುದು ವಿಶೇಷ. ಎರಡು ದಿನಗಳ ಕಾಲ ನಡೆಯುವ ಪಂದ್ಯಗಳಲ್ಲಿ ಅನೇಕ ಮಹತ್ವದ ಕಾರ್ಯಕ್ರಮಗಳನ್ನೂ ಆಯೋಜನೆ ಮಾಡಲಾಗಿದೆ.

    ಸ್ಯಾಂಡಲ್ ವುಡ್ ನಲ್ಲಿ ಕ್ರಿಕೆಟ್ ಪಂದ್ಯಾವಳಿಯನ್ನು ಶುರು ಮಾಡಿದ ಕೀರ್ತಿ ಡಾ.ವಿಷ್ಣುವರ್ಧನ್ ಅವರಿಗೆ ಸಲ್ಲುತ್ತದೆ. ಸಿನಿಮಾ ತಂಡಗಳನ್ನು ಕಟ್ಟಿಕೊಂಡು ವಿಷ್ಣು ಸದಾ ಕ್ರಿಕೆಟ್ ಆಡುತ್ತಿದ್ದರು. ವೃತ್ತಿಪರ ಕ್ರಿಕೆಟ್ ಆಟಗಾರರ ಜೊತೆಯೂ ಅವರು ಪಂದ್ಯಾವಳಿಗಳನ್ನು ಆಡಿದ್ದೂ ಇದೆ. ಆ ಪರಂಪರೆಯನ್ನು ಮುಂದುವರೆಸಿಕೊಂಡು ಹೋಗುವ ನಿಟ್ಟಿನಲ್ಲಿ ಅವರ ಅಭಿಮಾನಿಗಳು ಕೂಡ ‘ಯಜಮಾನ ಪ್ರೀಮಿಯರ್ ಲೀಗ್’ (Yajamana Premier League) ಹೆಸರಿನಲ್ಲಿ ಕ್ರಿಕೆಟ್ ಪಂದ್ಯಾವಳಿಗಳನ್ನು ಆಯೋಜನೆ ಮಾಡುತ್ತಾ ಬಂದಿದ್ದಾರೆ.

    ಈ ಹಿಂದೆ ಜೂನ್ ನಲ್ಲಿಯೇ ಯಜಮಾನ ಪ್ರೀಮಿಯರ್ ಲೀಗ್ ಸೀಸನ್ 2 ಆಯೋಜನೆ ಆಗಿತ್ತು. ಮಳೆ ಮತ್ತು ಇತರ ಕಾರಣಗಳಿಂದಾಗಿ ಅದು ಮುಂದೂಡಲ್ಪಟ್ಟಿತ್ತು. ಇದೀಗ ಯಜಮಾನ ಪ್ರೀಮಿಯರ್ ಲೀಗ್ ಆಗಸ್ಟ್ 12 ಮತ್ತು 13ರಂದು ಬಿಐಸಿಸಿ ಇನ್ಫಿನಿಟಿ ಔಟ್ ಡೋರ್ ಗ್ರೌಂಡ್ ಮಾಗಡಿ ರಸ್ತೆ, ಬೆಂಗಳೂರಿನಲ್ಲಿ ನಡೆಯಲಿದೆ. ಇದನ್ನೂ ಓದಿ:ಬೆಂಗಳೂರಿನ ಮಿಂಚುಳ್ಳಿ, ಬಿಕಿನಿಯಲ್ಲಿ ಬಳುಕುವ ಬಳ್ಳಿ ವೈಭವಿ ಜಗದೀಶ್

    ಡಾ.ವಿಷ್ಣು ಸೇನಾ ಸಮಿತಿಯು ಹಮ್ಮಿಕೊಂಡಿರುವ ಎರಡನೇ ಸೀಸನ್ ಇದಾಗಿದ್ದು, ವೀರಕಪುತ್ರ ಶ್ರೀನಿವಾಸ್ (Veerkaputra Srinivas) ನೇತೃತ್ವದಲ್ಲಿ ವಿಷ್ಣು ಸೇನಾನಿಗಳು ಪಂದ್ಯಗಳನ್ನು ಆಡಲಿದ್ದಾರೆ. ವಿಷ್ಣುವರ್ಧನ್ ಹೆಸರಿನಲ್ಲಿ ವೀರಕಪುತ್ರ ಶ್ರೀನಿವಾಸ್ ಅವರು ಹತ್ತಾರು ಕೆಲಸಗಳನ್ನು ಮಾಡುತ್ತಾ ಬಂದಿದ್ದು, ಅದಕ್ಕೆ ಸೇರ್ಪಡೆ ಈ ಯಜಮಾನ ಕಪ್ ಆಗಿದೆ. ಜನಪರ ಕೆಲಸಗಳ ಜೊತೆಗೆ ಕ್ರೀಡಾ ಲೋಕಕ್ಕೂ ಉತ್ತೇಜನ ಕೊಡುವ ನಿಟ್ಟಿನಲ್ಲಿ ಈ ಪಂದ್ಯಾವಳಿ ಆಯೋಜನೆಗೊಂಡಿದೆ.

    ತಾರೆಗಳು ಸಾಥ್

    ಎರಡು ದಿನಗಳ ಕಾಲ ನಡೆಯುವ ಕ್ರಿಕೆಟ್ ಪಂದ್ಯಾವಳಿಯಲ್ಲಿ ಕನ್ನಡದ ಹೆಸರಾಂತ ನಟರಾದ ನೀನಾಸಂ ಸತೀಶ್, ವಸಿಷ್ಠ ಸಿಂಹ, ಡಾರ್ಲಿಂಗ್ ಕೃಷ್ಣ, ರವಿಶಂಕರ್ ಗೌಡ, ಧನ್ವೀರ್, ಬಾಲಾಜಿ, ನಟಿ ಮಿಲನಾ ನಾಗರಾಜ್ ಸೇರಿದಂತೆ ಹಲವಾರು ಕಲಾವಿದರು, ನಿರ್ಮಾಪಕರಾದ ಕೆ.ಮಂಜು, ನಿರ್ದೇಶಕರಾದ ರಾಜೇಂದ್ರ ಸಿಂಗ್ ಬಾಬು, ನಾಗೇಂದ್ರ ಪ್ರಸಾದ್, ಶಶಾಂಕ್, ನವೀನ್ ಕೃಷ್ಣ ಮತ್ತು ಇತರ ನಿರ್ದೇಶಕರು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಭಾ.ಮಾ ಹರೀಶ್ ಮತ್ತು ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್ ಸೇರಿದಂತೆ ಹಲವರು ಭಾಗಿಯಾಗಲಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಡಾ.ವಿಷ್ಣು ನೆನಪಲ್ಲಿ ಕ್ರಿಕೆಟ್: ಆ.12 ಮತ್ತು13ಕ್ಕೆ ‘ಯಜಮಾನ ಪ್ರೀಮಿಯರ್ ಲೀಗ್’  ಸೀಸನ್ 2

    ಡಾ.ವಿಷ್ಣು ನೆನಪಲ್ಲಿ ಕ್ರಿಕೆಟ್: ಆ.12 ಮತ್ತು13ಕ್ಕೆ ‘ಯಜಮಾನ ಪ್ರೀಮಿಯರ್ ಲೀಗ್’ ಸೀಸನ್ 2

    ಸ್ಯಾಂಡಲ್ ವುಡ್ ನಲ್ಲಿ ಕ್ರಿಕೆಟ್ (Cricket) ಪಂದ್ಯ ಶುರು ಮಾಡಿದ ಕೀರ್ತಿ ಡಾ.ವಿಷ್ಣುವರ್ಧನ್ (Vishnuvardhan) ಅವರಿಗೆ ಸಲ್ಲುತ್ತದೆ. ಸಿನಿಮಾ ತಂಡಗಳನ್ನು ಕಟ್ಟಿಕೊಂಡು ವಿಷ್ಣು ಸದಾ ಕ್ರಿಕೆಟ್ ಆಡುತ್ತಿದ್ದರು. ವೃತ್ತಿಪರ ಕ್ರಿಕೆಟ್ ಆಟಗಾರರ ಜೊತೆಯೂ ಅವರು ಪಂದ್ಯಾವಳಿಗಳನ್ನು ಆಡಿದ್ದೂ ಇದೆ. ಆ ಪರಂಪರೆಯನ್ನು ಮುಂದುವರೆಸಿಕೊಂಡು ಹೋಗುವ ನಿಟ್ಟಿನಲ್ಲಿ ಅವರ ಅಭಿಮಾನಿಗಳು ಕೂಡ ‘ಯಜಮಾನ ಪ್ರೀಮಿಯರ್ ಲೀಗ್’ (Yajamana Premier League) ಹೆಸರಿನಲ್ಲಿ ಕ್ರಿಕೆಟ್ ಪಂದ್ಯಾವಳಿಗಳನ್ನು ಆಯೋಜನೆ ಮಾಡುತ್ತಾ ಬಂದಿದ್ದಾರೆ.

    ಈ ಹಿಂದೆ ಜೂನ್ ನಲ್ಲಿಯೇ ಯಜಮಾನ ಪ್ರೀಮಿಯರ್ ಲೀಗ್ ಸೀಸನ್ 2 ಆಯೋಜನೆ ಆಗಿತ್ತು. ಮಳೆ ಮತ್ತು ಇತರ ಕಾರಣಗಳಿಂದಾಗಿ ಅದು ಮುಂದೂಡಲ್ಪಟ್ಟಿತ್ತು. ಇದೀಗ ಯಜಮಾನ ಪ್ರೀಮಿಯರ್ ಲೀಗ್ ಆಗಸ್ಟ್ 12 ಮತ್ತು 13ರಂದು ಬಿಐಸಿಸಿ ಇನ್ಫಿನಿಟಿ ಔಟ್ ಡೋರ್ ಗ್ರೌಂಡ್ ಮಾಗಡಿ ರಸ್ತೆ, ಬೆಂಗಳೂರಿನಲ್ಲಿ ನಡೆಯಲಿದೆ. ಇದನ್ನೂ ಓದಿ:ಟೆಂಪಲ್ ರನ್ ಮುಗಿಸಿ ಫೋಟೋಶೂಟ್ ನಲ್ಲಿ ಭಾಗಿಯಾದ ಸಾರಾ ಅಲಿ ಖಾನ್

    ಎರಡು ದಿನಗಳ ಕಾಲ ನಡೆಯುವ ಕ್ರಿಕೆಟ್ ಪಂದ್ಯಾವಳಿಯಲ್ಲಿ ಕನ್ನಡದ ಹೆಸರಾಂತ ನಟರಾದ ನೀನಾಸಂ ಸತೀಶ್, ವಸಿಷ್ಠ ಸಿಂಹ ಮತ್ತು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಭಾ.ಮಾ ಹರೀಶ್ ಮತ್ತು ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್ ಸೇರಿದಂತೆ ಹಲವರು ಭಾಗಿಯಾಗಲಿದ್ದಾರೆ.

    ಡಾ.ವಿಷ್ಣು ಸೇನಾ ಸಮಿತಿಯು ಹಮ್ಮಿಕೊಂಡಿರುವ ಎರಡನೇ ಸೀಸನ್ ಇದಾಗಿದ್ದು, ವೀರಕಪುತ್ರ ಶ್ರೀನಿವಾಸ್ (Veerkaputra Srinivas) ನೇತೃತ್ವದಲ್ಲಿ ವಿಷ್ಣು ಸೇನಾನಿಗಳು ಪಂದ್ಯಗಳನ್ನು ಆಡಲಿದ್ದಾರೆ. ವಿಷ್ಣುವರ್ಧನ್ ಹೆಸರಿನಲ್ಲಿ ವೀರಕಪುತ್ರ ಶ್ರೀನಿವಾಸ್ ಅವರು ಹತ್ತಾರು ಕೆಲಸಗಳನ್ನು ಮಾಡುತ್ತಾ ಬಂದಿದ್ದು, ಅದಕ್ಕೆ ಸೇರ್ಪಡೆ ಈ ಯಜಮಾನ ಕಪ್ ಆಗಿದೆ. ಜನಪರ ಕೆಲಸಗಳ ಜೊತೆಗೆ ಕ್ರೀಡಾ ಲೋಕಕ್ಕೂ ಉತ್ತೇಜನ ಕೊಡುವ ನಿಟ್ಟಿನಲ್ಲಿ ಈ ಪಂದ್ಯಾವಳಿ ಆಯೋಜನೆಗೊಂಡಿದೆ.

     

    ಯಜಮಾನರ ಹೆಸರಿನಲ್ಲಿ ಕ್ರಿಕೆಟ್ ಆಡುವುದು ಎಲ್ಲರಿಗೂ ಸಂಭ್ರಮ ತರುವ ವಿಚಾರ. ಮೊದಲಿನಿಂದಲೂ ಯಜಮಾನರು ಕಲೆ, ಸಂಗೀತ, ಕ್ರಿಕೆಟ್ ಗೆ ತಮ್ಮದೇ ಆದ ಕೊಡುಗೆ ನೀಡುತ್ತಾ ಬಂದಿದ್ದಾರೆ. ಸ್ವತಃ ಅವರು ಕೂಡ ಕ್ರಿಕೆಟ್ ಆಡುತ್ತಿದ್ದರು. ಅವರ ನೆನಪಿನಲ್ಲಿ ನಾವೆಲ್ಲ ಕ್ರಿಕೆಟ್ ಆಡುತ್ತೇವೆ. ಇದಕ್ಕೆ ಸ್ಯಾಂಡಲ್ ವುಡ್ ನ ಅನೇಕ ಕಲಾವಿದರು ಮತ್ತು ತಂತ್ರಜ್ಞರು ಜೊತೆಯಾಗುತ್ತಿದ್ದಾರೆ. ಪ್ರತಿ ವರ್ಷವೂ ಇದನ್ನು ಆಯೋಜನೆ ಮಾಡುತ್ತೇವೆ ಎನ್ನುವುದು ಡಾ.ವಿಷ್ಣು ಸೇನಾ ಸಮಿತಿಯ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ್ ಅವರ ಮಾತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮೇರುನಟ ಡಾ.ವಿಷ್ಣು ಅವರ 52ನೇ ಪುತ್ಥಳಿ ಅನಾವರಣ

    ಮೇರುನಟ ಡಾ.ವಿಷ್ಣು ಅವರ 52ನೇ ಪುತ್ಥಳಿ ಅನಾವರಣ

    ನ್ನಡದ ಮೇರುನಟ ಡಾ. ವಿಷ್ಣುವರ್ಧನ್ ಅವರ ಪುತ್ಥಳಿಗಳು ರಾಜ್ಯಾದ್ಯಂತ ತಲೆಯೆತ್ತಿವೆ. ವಿಷ್ಣು ಅಭಿಮಾನಿಗಳು ರಾಜ್ಯದ ನಾನಾ ಕಡೆ ಅವರ ಪುತ್ಥಳಿಯನ್ನು (Putthali) ಪ್ರತಿಷ್ಠಾಪಿಸಿದ್ದಾರೆ. ಇಂದು ಬೆಂಗಳೂರಿನಲ್ಲಿ (Bangalore) ಕರುನಾಡ  ತಿಲಕ ಡಾ.ವಿಷ್ಣು ಕನ್ನಡ ಅಭಿಮಾನಿಗಳ‌ ಸಂಘದ ವತಿಯಿಂದ ಗಿರಿನಗರ ಹಿರಣ್ಣನ ಗುಟ್ಟೆ ಸರ್ಕಲ್ ನಲ್ಲಿ  ಡಾ‌.ವಿಷ್ಣು ಸೇನಾ ಸಮಿತಿ ರಾಜ್ಯಾಧ್ಯಕ್ಷರಾದ ವೀರಕಪುತ್ರ ಶ್ರೀನಿವಾಸ್ (Veerakaputra Srinivas) ಅವರ  ಉಪಸ್ಥಿತಿಯಲ್ಲಿ ಶಾಸಕ ಎಂ ಕೃಷ್ಣಪ್ಪ (M. Krishnappa) ಅಮೃತ ಹಸ್ತದಿಂದ ಪುತ್ಥಳಿ ಅನಾವರಣವಾಯಿತು

    ವಿಶೇಷ ಏನಂದ್ರೆ ಇದು ವೀರಕಪುತ್ರ ಶ್ರೀನಿವಾಸ್ ಅವರು ವೈಯಕ್ತಿಕವಾಗಿ ಡಾ.ವಿಷ್ಣುವರ್ಧನ್ ಅವರ ಪುತ್ಥಳಿಯನ್ನು ಕೊಡುಗೆಯಾಗಿ ನೀಡುತ್ತಿರುವ 52 ನೇ ಪುತ್ಥಳಿ ಆಗಿರುವುದು ವಿಶೇಷ. ವಿಷ್ಣು ಅವರ ಹೆಸರಿನಲ್ಲಿ ಸಾಕಷ್ಟು ಕೆಲಸಗಳನ್ನು ಮಾಡುತ್ತಾ ಬಂದಿರುವ ವೀರಕಪುತ್ರ ಶ್ರೀನಿವಾಸ್ ಸಾಕಷ್ಟು ಕಡೆ ಪುತ್ಥಳಿಯನ್ನು ಕೊಡುಗೆಯಾಗಿ ನೀಡಿದ್ದಾರೆ. ಈ ಮೂಲಕ ಅಭಿಮಾನ ಮೆರೆದಿದ್ದಾರೆ. ಇದನ್ನೂ ಓದಿ:‘ಕಬಾಲಿ’ ನಿರ್ಮಾಪಕ ಅರೆಸ್ಟ್ ಬೆನ್ನಲ್ಲೇ ಡ್ರಗ್ಸ್ ಪ್ರಕರಣದಲ್ಲಿ ನಟಿ ಅಶು ರೆಡ್ಡಿ ಹೆಸರು

    ಮೊನ್ನೆಯಷ್ಟೇ ವಿಷ್ಣುವರ್ಧನ್ (Dr. Vishnuvardhan) ಹೆಸರಿನಲ್ಲಿ ದಾಖಲೆ (Record) ಯೊಂದು  ಸೃಷ್ಟಿಯಾಗಿತ್ತು. ವೀರಕಪುತ್ರ ಶ್ರೀನಿವಾಸ್ ಮತ್ತು ವಿಷ್ಣು ಸೇನಾನಿಗಳು ವಿಷ್ಣುವರ್ಧನ್ ಹುಟ್ಟು ಹಬ್ಬದಂದು ಕಟೌಟ್ ಜಾತ್ರೆ ಮಾಡಿದ್ದರು. ನೆಚ್ಚಿನ ನಟನ 52 ಕಟೌಟ್‌ಗಳನ್ನು ಅಂದು ಬೆಂಗಳೂರಿನ ಬಾಲಣ್ಣ ಸ್ಟುಡಿಯೋದಲ್ಲಿರುವ ವಿಷ್ಣುವರ್ಧನ್ ಅವರ ಸ್ಮಾರಕದ ಮುಂದೆ ನಿಲ್ಲಿಸಿದ್ದರು. ಇದನ್ನು ಪರಿಗಣಿಸಿ ಏಷ್ಯಾ ಬುಕ್ ಮತ್ತು ಇಂಟರ್ ನ್ಯಾಷನಲ್ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ಅದು ದಾಖಲಾಗಿತ್ತು.

    ಡಾ. ವಿಷ್ಣುವರ್ಧನ್ ಅವರು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿ 50 ವರ್ಷಗಳಾದ ಹಿನ್ನಲೆಯಲ್ಲಿ ಅವರ 50 ಸೇನಾನಿಗಳು ಡಾ. ವಿಷ್ಣು ಸೇನಾ ಸಮಿತಿಯ ವೀರಕಪುತ್ರ ಶ್ರೀನಿವಾಸ ಅವರ ನೇತೃತ್ವದಲ್ಲಿ 2022ರ ಸೆಪ್ಟೆಂಬರ್‌ 18 ರಂದು ಬೆಂಗಳೂರಿನ ಡಾ. ವಿಷ್ಣು ಪುಣ್ಯಭೂಮಿಯಲ್ಲಿ 51 ಬೃಹತ್‌ ಕಟೌಟ್‌ಗಳನ್ನು ಸ್ಥಾಪಿಸಿ ‘ಕಟೌಟ್‌ ಜಾತ್ರೆ’ ಎಂಬ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಆ ಕಟೌಟ್‌ಗಳಿಗೆ ಬೃಹತ್‌ ಹಾರಗಳನ್ನು ಸಹ ಹಾಕಿಸಿದ್ದರು. ಪೊಲೀಸ್‌ ಇಲಾಖೆಯ ಪ್ರಕಾರ ಎರಡೂವರೆ ಲಕ್ಷ ಕನ್ನಡಿಗರು ಈ ಕಟೌಟ್‌ ಜಾತ್ರೆಯಲ್ಲಿ ಭಾಗವಹಿಸಿದ್ದರು.

     

    ಅಂದೇ ಈ ಕಟೌಟ್‌ ಜಾತ್ರೆಯನ್ನು ಏಷ್ಯಾ ಬುಕ್‌ ಆಫ್‌ ರೆಕಾರ್ಡ್‌ನಲ್ಲಿ ದಾಖಲಿಸಲು ಮನವಿಯನ್ನು ಸಲ್ಲಿಸಲಾಗಿತ್ತು. ಆ ಸಂಸ್ಥೆಯು ನಮ್ಮ ದಾಖಲೆ ಸಂಬಂಧ ಅನೇಕ ಹಂತದ ಪರೀಕ್ಷೆಗಳನ್ನು ನಡೆಸಿದರಲ್ಲದೆ, ಖುದ್ದಾಗಿ ಸ್ಥಳ ಪರಿಶೀಲನೆಯನ್ನು ಸಹ ಮಾಡಿದ್ದರು. ನಂತರ ಕಟೌಟ್ ಜಾತ್ರೆಯು ಏಷ್ಯಾ ಬುಕ್‌ ಆಫ್‌ ‌ ರೆಕಾರ್ಡ್‌ನಲ್ಲಿ ದಾಖಲೆಯಾಗಿದೆ.

  • ಡಾ.ವಿಷ್ಣು ಹೆಸರಿನಲ್ಲಿ ಕ್ರಿಕೆಟ್ : ಜೂ 24, 25ಕ್ಕೆ ಯಜಮಾನ ಪ್ರೀಮಿಯರ್ ಲೀಗ್

    ಡಾ.ವಿಷ್ಣು ಹೆಸರಿನಲ್ಲಿ ಕ್ರಿಕೆಟ್ : ಜೂ 24, 25ಕ್ಕೆ ಯಜಮಾನ ಪ್ರೀಮಿಯರ್ ಲೀಗ್

    ಸ್ಯಾಂಡಲ್ ವುಡ್ ನಲ್ಲಿ ಕ್ರಿಕೆಟ್ (Cricket) ಪಂದ್ಯ ಶುರು ಮಾಡಿದ ಕೀರ್ತಿ ಡಾ.ವಿಷ್ಣುವರ್ಧನ್ (Vishnuvardhan) ಅವರಿಗೆ ಸಲ್ಲುತ್ತದೆ. ಸಿನಿಮಾ ತಂಡಗಳನ್ನು ಕಟ್ಟಿಕೊಂಡು ವಿಷ್ಣು ಸದಾ ಕ್ರಿಕೆಟ್ ಆಡುತ್ತಿದ್ದರು. ವೃತ್ತಿಪರ ಕ್ರಿಕೆಟ್ ಆಟಗಾರರ ಜೊತೆಯೂ ಅವರು ಪಂದ್ಯಾವಳಿಗಳನ್ನು ಆಡಿದ್ದೂ ಇದೆ. ಆ ಪರಂಪರೆಯನ್ನು ಮುಂದುವರೆಸಿಕೊಂಡು ಹೋಗುವ ನಿಟ್ಟಿನಲ್ಲಿ ಅವರ ಅಭಿಮಾನಿಗಳು ಕೂಡ ‘ಯಜಮಾನ ಪ್ರೀಮಿಯರ್ ಲೀಗ್’ (Yajamana Premier League) ಹೆಸರಿನಲ್ಲಿ ಕ್ರಿಕೆಟ್ ಪಂದ್ಯಾವಳಿಗಳನ್ನು ಆಯೋಜನೆ ಮಾಡುತ್ತಾ ಬಂದಿದ್ದಾರೆ.

    ಈ ಬಾರಿಯ ಪಂದ್ಯಾವಳಿಯು ಇದೇ ಜೂನ್ 24 ಹಾಗೂ 25 ರಂದು ಬಿಐಸಿಸಿ ಇನ್ಫಿನಿಟಿ ಔಟ್ ಡೋರ್ ಗ್ರೌಂಡ್ ಮಾಗಡಿ ರಸ್ತೆ, ಬೆಂಗಳೂರಿನಲ್ಲಿ ನಡೆಯಲಿದೆ. ಈ ಮಾಹಿತಿಯನ್ನು ಮೊನ್ನೆಯಷ್ಟೇ ಕಿಚ್ಚ ಸುದೀಪ್ (Sudeep) ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ‘ನಮ್ಮ ಉದ್ದೇಶಗಳು ಸರಿಯಾಗಿದ್ದರೆ, ಅವು ನಮ್ಮ ನಂತರವೂ ಜೀವಂತವಾಗಿರುತ್ತವೆ ಎಂಬುದಕ್ಕೆ ಉದಾಹರಣೆ ಈ ಯಜಮಾನ ಪ್ರೀಮಿಯರ್ ಲೀಗ್’ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ:ಶರ್ವಾನಂದ್ ರಿಸೆಪ್ಷನ್ ಸಂಭ್ರಮದಲ್ಲಿ ಸಿನಿ ತಾರೆಯರ ದಂಡು

    ಡಾ.ವಿಷ್ಣು ಸೇನಾ ಸಮಿತಿಯು ಹಮ್ಮಿಕೊಂಡಿರುವ ಎರಡನೇ ಸೀಸನ್ ಇದಾಗಿದ್ದು, ವೀರಕಪುತ್ರ ಶ್ರೀನಿವಾಸ್ (Veerkaputra Srinivas) ನೇತೃತ್ವದಲ್ಲಿ ವಿಷ್ಣು ಸೇನಾನಿಗಳು ಪಂದ್ಯಗಳನ್ನು ಆಡಲಿದ್ದಾರೆ. ವಿಷ್ಣುವರ್ಧನ್ ಹೆಸರಿನಲ್ಲಿ ವೀರಕಪುತ್ರ ಶ್ರೀನಿವಾಸ್ ಅವರು ಹತ್ತಾರು ಕೆಲಸಗಳನ್ನು ಮಾಡುತ್ತಾ ಬಂದಿದ್ದು, ಅದಕ್ಕೆ ಸೇರ್ಪಡೆ ಈ ಯಜಮಾನ ಕಪ್ ಆಗಿದೆ. ಜನಪರ ಕೆಲಸಗಳ ಜೊತೆಗೆ ಕ್ರೀಡಾ ಲೋಕಕ್ಕೂ ಉತ್ತೇಜನ ಕೊಡುವ ನಿಟ್ಟಿನಲ್ಲಿ ಈ ಪಂದ್ಯಾವಳಿ ಆಯೋಜನೆಗೊಂಡಿದೆ.

    ಯಜಮಾನರ ಹೆಸರಿನಲ್ಲಿ ಕ್ರಿಕೆಟ್ ಆಡುವುದು ಎಲ್ಲರಿಗೂ ಸಂಭ್ರಮ ತರುವ ವಿಚಾರ. ಮೊದಲಿನಿಂದಲೂ ಯಜಮಾನರು ಕಲೆ, ಸಂಗೀತ, ಕ್ರಿಕೆಟ್ ಗೆ ತಮ್ಮದೇ ಆದ ಕೊಡುಗೆ ನೀಡುತ್ತಾ ಬಂದಿದ್ದಾರೆ. ಸ್ವತಃ ಅವರು ಕೂಡ ಕ್ರಿಕೆಟ್ ಆಡುತ್ತಿದ್ದರು. ಅವರ ನೆನಪಿನಲ್ಲಿ ನಾವೆಲ್ಲ ಕ್ರಿಕೆಟ್ ಆಡುತ್ತೇವೆ. ಇದಕ್ಕೆ ಸ್ಯಾಂಡಲ್ ವುಡ್ ನ ಅನೇಕ ಕಲಾವಿದರು ಮತ್ತು ತಂತ್ರಜ್ಞರು ಜೊತೆಯಾಗುತ್ತಿದ್ದಾರೆ. ಪ್ರತಿ ವರ್ಷವೂ ಇದನ್ನು ಆಯೋಜನೆ ಮಾಡುತ್ತೇವೆ ಎನ್ನುವುದು ಡಾ.ವಿಷ್ಣು ಸೇನಾ ಸಮಿತಿಯ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ್ ಅವರ ಮಾತು.

  • ಡಾ. ವಿಷ್ಣುವರ್ಧನ್ ಹೆಸರಿನಲ್ಲಿ ಮತ್ತೊಂದು ದಾಖಲೆ

    ಡಾ. ವಿಷ್ಣುವರ್ಧನ್ ಹೆಸರಿನಲ್ಲಿ ಮತ್ತೊಂದು ದಾಖಲೆ

    ಸಾಹಸ ಸಿಂಹ ಡಾ. ವಿಷ್ಣುವರ್ಧನ್ (Dr. Vishnuvardhan) ಹೆಸರಿನಲ್ಲಿ ಮತ್ತೊಂದು ದಾಖಲೆ (Record) ಸೃಷ್ಟಿಯಾಗಿದೆ. ವೀರಕಪುತ್ರ ಶ್ರೀನಿವಾಸ್ ಮತ್ತು ವಿಷ್ಣು ಸೇನಾನಿಗಳು ವಿಷ್ಣುವರ್ಧನ್ ಹುಟ್ಟು ಹಬ್ಬದಂದು ಕಟೌಟ್ ಜಾತ್ರೆ ಮಾಡಿದ್ದರು. ನೆಚ್ಚಿನ ನಟನ 52 ಕಟೌಟ್‌ಗಳನ್ನು ಅಂದು ಬೆಂಗಳೂರಿನ ಬಾಲಣ್ಣ ಸ್ಟುಡಿಯೋದಲ್ಲಿರುವ ವಿಷ್ಣುವರ್ಧನ್ ಅವರ ಸ್ಮಾರಕದ ಮುಂದೆ ನಿಲ್ಲಿಸಿದ್ದರು. ಇದನ್ನು ಪರಿಗಣಿಸಿ ಏಷ್ಯಾ ಬುಕ್ ಮತ್ತು ಇಂಟರ್ ನ್ಯಾಷನಲ್ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ಅದು ದಾಖಲಾಗಿದೆ.

    ಈ ಕುರಿತು ಮಾತನಾಡಿರುವ ವಿಷ್ಣು ಸೇನಾ ಸಮಿತಿಯ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ್, ‘ಯಜಮಾನರು ಈಗಾಗಲೇ ಹಲವು ದಾಖಲೆಗಳನ್ನು ಬರೆದಿದ್ದಾರೆ. ಅವೆಲ್ಲವೂ ಯಾರೂ ಅಳಿಸಲಾಗದ ದಾಖಲೆಗಳಾಗಿ ಉಳಿದಿವೆ. ಇದೀಗ ಅವರ ಹೆಸರು ಏಷ್ಯಾ ಬುಕ್‌ ಮತ್ತು ಇಂಟರ್‌ ನ್ಯಾಷನಲ್‌ ಬುಕ್‌ ಆಫ್‌ ರೆಕಾರ್ಡ್‌ನಲ್ಲಿ ದಾಖಲಾಗಿದ್ದು ಹೆಮ್ಮೆ ಅನಿಸುತ್ತದೆ’ ಎಂದರು.

    ಈ ದಾಖಲೆಗೆ ಕಾರಣೀಕರ್ತರಾದ ಎಲ್ಲಾ ಐವತ್ತು ಸೇನಾನಿಗಳಿಗೆ ನನ್ನ ಮನದಾಳದ ಅಭಿನಂದನೆಗಳು. ನಿಮ್ಮಿಂದಲೇ ಇದು ಸಾಧ್ಯವಾಗಿದ್ದು ಎಂದಿದ್ದಾರೆ ಶ್ರೀನಿವಾಸನ್. ಇನ್ನೂ ಹಲವು ದಾಖಲೆಗಳಿಗೆ ಕಟೌಟ್ ಜಾತ್ರೆಯು ಕಾರಣವಾಗಲಿ ಎಂದೂ ಅವರು ಮಾತನಾಡಿದ್ದಾರೆ.

    ಭಾರತೀಯ ಸಿನಿಮಾ ರಂಗದಲ್ಲಿ ಈವರೆಗೂ ಯಾರೂ ಮಾಡದೇ ಇರುವ ದಾಖಲೆ ಇದಾಗಿದ್ದು, ಕನ್ನಡದ ನಟರೊಬ್ಬರು ಇಂತಹ ದಾಖಲಗೆ ಅರ್ಹರಾಗಿದ್ದು, ಅಭಿಮಾನಿಗಳಿಗೆ ಸಹಜವಾಗಿಯೆ ಸಂಭ್ರಮ ತಂದಿದೆ. ಈ ಕಟೌಟ್ ಜಾತ್ರೆಯು ಮಾದರಿಯಾಗಿದೆ.

    ಡಾ. ವಿಷ್ಣುವರ್ಧನ್ ಅವರು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿ 50 ವರ್ಷಗಳಾದ ಹಿನ್ನಲೆಯಲ್ಲಿ ಅವರ 50 ಸೇನಾನಿಗಳು ಡಾ. ವಿಷ್ಣು ಸೇನಾ ಸಮಿತಿಯ ವೀರಕಪುತ್ರ ಶ್ರೀನಿವಾಸ ಅವರ ನೇತೃತ್ವದಲ್ಲಿ 2022ರ ಸೆಪ್ಟೆಂಬರ್‌ 18 ರಂದು ಬೆಂಗಳೂರಿನ ಡಾ. ವಿಷ್ಣು ಪುಣ್ಯಭೂಮಿಯಲ್ಲಿ 51 ಬೃಹತ್‌ ಕಟೌಟ್‌ಗಳನ್ನು ಸ್ಥಾಪಿಸಿ ‘ಕಟೌಟ್‌ ಜಾತ್ರೆ’ ಎಂಬ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಆ ಕಟೌಟ್‌ಗಳಿಗೆ ಬೃಹತ್‌ ಹಾರಗಳನ್ನು ಸಹ ಹಾಕಿಸಿದ್ದರು. ಪೊಲೀಸ್‌ ಇಲಾಖೆಯ ಪ್ರಕಾರ ಎರಡೂವರೆ ಲಕ್ಷ ಕನ್ನಡಿಗರು ಈ ಕಟೌಟ್‌ ಜಾತ್ರೆಯಲ್ಲಿ ಭಾಗವಹಿಸಿದ್ದರು. ಇದನ್ನೂ ಓದಿ: ಒಂದೇ ಸಿನಿಮಾದಲ್ಲಿ ರಜನಿಕಾಂತ್-ಕಮಲ್ ಹಾಸನ್

    ಅಂದೇ ಈ ಕಟೌಟ್‌ ಜಾತ್ರೆಯನ್ನು ಏಷ್ಯಾ ಬುಕ್‌ ಆಫ್‌ ರೆಕಾರ್ಡ್‌ನಲ್ಲಿ ದಾಖಲಿಸಲು ಮನವಿಯನ್ನು ಸಲ್ಲಿಸಲಾಗಿತ್ತು. ಆ ಸಂಸ್ಥೆಯು ನಮ್ಮ ದಾಖಲೆ ಸಂಬಂಧ ಅನೇಕ ಹಂತದ ಪರೀಕ್ಷೆಗಳನ್ನು ನಡೆಸಿದರಲ್ಲದೆ, ಖುದ್ದಾಗಿ ಸ್ಥಳ ಪರಿಶೀಲನೆಯನ್ನು ಸಹ ಮಾಡಿದ್ದರು. ಇದೀಗ ಆ ಎಲ್ಲಾ ಹಂತದ ಪರೀಕ್ಷೆಗಳೂ ಮುಗಿದಿದ್ದು, ಈ ಕಟೌಟ್ ಜಾತ್ರೆಯು ಏಷ್ಯಾ ಬುಕ್‌ ಆಫ್‌ ‌ ರೆಕಾರ್ಡ್‌ನಲ್ಲಿ ದಾಖಲೆಯಾಗಿ ದಾಖಲೆಯಾಗಿದೆ. ಆ ದಾಖಲೆಯ ಸರ್ಟಿಫಿಕೇಟ್‌ ಮತ್ತು ಪದಕ ಇಂದು ನಮಗೆ ತಲುಪಿದವು.

    ತೆರೆಮುಂದೆ ತೆರೆಹಿಂದೆ ನುಡಿದಂತೆ ನಡೆದ ಮೇರುನಟನ ಹೆಸರಲ್ಲಿ ಇಂತಹದ್ದೊಂದು ದಾಖಲೆಯನ್ನು ಅವರಿಲ್ಲದ ಹೊತ್ತಿನಲ್ಲಿ ಸ್ಥಾಪಿಸಲು ಸಾಧ್ಯವಾಗಿದ್ದಕ್ಕೆ ನಿಜಕ್ಕೂ ಹೆಮ್ಮೆಪಡುತ್ತೇವೆ. ಈ ದಾಖಲೆಯು ಡಾ. ವಿಷ್ಣುವರ್ಧನ್ ಅವರ ಅಗಲಿಕೆಯ 13 ವರ್ಷಗಳ ನಂತರವೂ ಅವರ ನೆನಪನ್ನು ಹಸಿರಾಗಿಡುವ ಕೆಲಸವನ್ನು ಅವರ ಅಭಿಮಾನಿಗಳು ನಿರಂತರವಾಗಿ ಮಾಡುತ್ತಿರುವುದರ ದ್ಯೋತಕವಾಗಿದೆ. ಈ ಕಟೌಟ್‌ ಜಾತ್ರೆಗೆ ಬೆನ್ನೆಲುಬಾಗಿ ನಿಂತ 50 ಸೇನಾನಿಗಳಿಗೆ, ಯೋಜನೆ ಕರ್ಯಸಾಧುಗೊಳಿಸಿದ ಆನಂದ್‌ ರಾಚ್‌, ಕಟೌಟ್‌ ವಿನ್ಯಾಸ ಮಾಡಿದ ರಾಜುವಿಷ್ಣು ಮತ್ತು ಈ ಸಂಸ್ಥೆಗಳ ಜೊತೆ ಸಂವಹನ ನಡೆಸಿ, ಸಾಧ್ಯವಾಗಿಸಿದ ಸಾಹಿತಿ ಜನಾರ್ಧನ್‌ ರಾವ್‌ ಅವರಿಗೆ ಧನ್ಯವಾದಗಳನ್ನು ಅರ್ಪಿಸಲು ಇಚ್ಚಿಸುತ್ತೇನೆ ಎಂದಿದ್ದಾರೆ ವೀರಕಪುತ್ರ ಶ್ರೀನಿವಾಸ್. ಇದನ್ನೂ ಓದಿ: ಮುಖ್ಯಮಂತ್ರಿಯನ್ನು ಭೇಟಿ ಮಾಡಿದ ಫಿಲ್ಮ್ ಚೇಂಬರ್ ಅಧ್ಯಕ್ಷರ ನಿಯೋಗ

  • ಸುದೀಪ್ ಬಿಜೆಪಿಗೆ? : ಡಾ.ವಿಷ್ಣು ನೆನಪಿಸಿಕೊಂಡ ಅಭಿಮಾನಿಗಳು

    ಸುದೀಪ್ ಬಿಜೆಪಿಗೆ? : ಡಾ.ವಿಷ್ಣು ನೆನಪಿಸಿಕೊಂಡ ಅಭಿಮಾನಿಗಳು

    ಕಿಚ್ಚ ಸುದೀಪ್ (Sudeep) ಬಿಜೆಪಿಗೆ (BJP) ಸೇರ್ಪಡೆ ಆಗಲಿದ್ದಾರೆ ಎನ್ನುವ ಸುದ್ದಿ ಅವರ ಅಭಿಮಾನಿಗಳಲ್ಲಿ ಸಂಭ್ರಮ ಮತ್ತು ಆತಂಕ ಎರಡನ್ನೂ ಮೂಡಿಸಿದೆ. ಈ ಕುರಿತಂತೆ ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ಪರ ವಿರೋಧ ಚರ್ಚೆ ಆರಂಭಿಸಿದ್ದಾರೆ. ನೆಚ್ಚಿನ ನಟ ಈಗಾಗಲೇ ತಮ್ಮದೇ ಟ್ರಸ್ಟ್ ಮೂಲಕ ಸಮಾಜಸೇವೆ ಆರಂಭಿಸಿದ್ದಾರೆ. ರಾಜಕಾರಣಕ್ಕೆ ಹೋದರೆ ಮತ್ತಷ್ಟು ಸಹಾಯ ಮಾಡಬಹುದು ಎಂದು ಕೆಲವರು ಅಭಿಪ್ರಾಯ ವ್ಯಕ್ತ ಪಡಿಸಿದ್ದರೆ, ಇನ್ನೂ ಕೆಲವರು ಅವರು ರಾಜಕೀಯ ಕ್ಷೇತ್ರಕ್ಕೆ ಹೋಗುವುದು ಬೇಡ ಎಂದು ನೇರವಾಗಿ ಹೇಳಿಕೆ ನೀಡಿದ್ದಾರೆ.

    ಈ ನಡುವೆ ಅನೇಕ ಅಭಿಮಾನಿಗಳು ಡಾ.ವಿಷ್ಣುವರ್ಧನ್ (Vishnuvardhan) ಅವರನ್ನು ನೆನಪಿಸಿಕೊಂಡಿದ್ದಾರೆ. ವಿಷ್ಣು ಕಾಲವಾದ ನಂತರ ವಿಷ್ಣುವರ್ಧನ್ ಅವರ ಸಾಕಷ್ಟು ಅಭಿಮಾನಿಗಳು ಕಿಚ್ಚ ಸುದೀಪ್ ಬೆಂಬಲಕ್ಕೆ ನಿಂತಿದ್ದರು. ಸುದೀಪ್ ಕೂಡ ವಿಷ್ಣುವರ್ಧನ್ ಅವರ ಹೆಸರಿನ ಸಿನಿಮಾಗಳಲ್ಲಿ ನಟಿಸಿದ್ದಾರೆ. ಅಲ್ಲದೇ, ವಿಷ್ಣುವರ್ಧನ್ ಸ್ಮಾರಕ ವಿಚಾರವಾಗಿ ಹೋರಾಟಕ್ಕೂ ಬಂದಿದ್ದರು. ಈ ಎಲ್ಲ ಕಾರಣದಿಂದಾಗಿ ವಿಷ್ಣು ಅಭಿಮಾನಿಗಳು ಸುದೀಪ್ ಅಭಿಮಾನಿಗಳಾಗಿಯೂ ಇದ್ದರು. ರಾಜಕೀಯ ನಡೆಗಾಗಿ ಕೊಂಚ ಬೇಸರ ವ್ಯಕ್ತ ಪಡಿಸಿದ್ದಾರೆ ವಿಷ್ಣು ಅಭಿಮಾನಿಗಳು.

    ಡಾ.ವಿಷ್ಣುವರ್ಧನ್  ಅವರು ಯಾವುದೇ ಕಾರಣಕ್ಕೂ ರಾಜಕಾರಣ ಮಾಡಲಿಲ್ಲ. ಯಾವ ಪಕ್ಷದ ಪರವಾಗಿಯೂ ಅವರು ಮಾತನಾಡಲಿಲ್ಲ. ಅವರಂತೆಯೇ ಸುದೀಪ್ ಕೂಡ ಇರಬೇಕು ಎನ್ನುವುದು ನಮ್ಮ ಅಭಿಪ್ರಾಯ. ನಾವು ನಿಮ್ಮಲ್ಲಿ ವಿಷ್ಣುದಾದಾ ಅವರನ್ನು ಕಾಣುತ್ತಿದ್ದೇವೆ ಎಂದು ಅನೇಕರು ಸೋಷಿಯಲ್ ಮೀಡಿಯಾದಲ್ಲಿ ಕಾಮೆಂಟ್ ಮಾಡಿದ್ದಾರೆ.

    ಬಿಜೆಪಿ ಸೇರುವ ವಿಚಾರವಾಗಿ ಸುದೀಪ್ ಬೆಂಗಳೂರಿನಲ್ಲಿ ಸ್ಪಷ್ಟನೆ ನೀಡಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು ‘ಕೆಲವು ವಿಚಾರಗಳನ್ನು ಸದ್ಯ ಹೇಳುವುದು ಕಷ್ಟ. ಸಿಎಂ ಬಸವರಾಜ ಬೊಮ್ಮಾಯಿ ಅವರು ಪತ್ರಿಕಾಗೋಷ್ಠಿಗೆ ಆಹ್ವಾನಿಸಿದ್ದಾರೆ. ನಾನು ಹೋಗುತ್ತಿದ್ದೇನೆ. ಅಲ್ಲೇ ಹಲವು ವಿಚಾರಗಳನ್ನು ಮಾತನಾಡುತ್ತೇನೆ’ ಎಂದಿದ್ದಾರೆ ಸುದೀಪ್. ಈ ಸಂದರ್ಭದಲ್ಲಿ ಅವರು ಹಲವು ವಿಚಾರಗಳನ್ನೂ ಹಂಚಿಕೊಂಡಿದ್ದಾರೆ.

    ಮುಂದುವರೆದು ಮಾತನಾಡಿದ ಅವರು, ‘ಬಿಜೆಪಿ ಜೊತೆಗಿನ ಸಂಬಂಧವನ್ನು ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತೇನೆ. ಆದರೆ, ಈ ಸಂದರ್ಭದಲ್ಲಿ ಒಂದು ಸ್ಪಷ್ಟನೆ ನೀಡುತ್ತೇನೆ. ಯಾವುದೇ ಕಾರಣಕ್ಕೂ ನಾನು ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ. ಇದನ್ನು ಅಭಿಮಾನಿಗಳಿಗೆ ಸ್ಪಷ್ಟನೆ ನೀಡುತ್ತೇನೆ. ಯಾವುದೇ ಕಾರಣಕ್ಕೂ ಟಿಕೆಟ್ ಕೇಳುವುದಿಲ್ಲ’ ಎಂದಿದ್ದಾರೆ ಸುದೀಪ್.

  • ಮಗನಿಗೆ ಸಾಹಸಸಿಂಹ ವಿಷ್ಣುವರ್ಧನ್ ಹೆಸರಿಟ್ಟ ವಿಷ್ಣು ಅಭಿಮಾನಿ

    ಮಗನಿಗೆ ಸಾಹಸಸಿಂಹ ವಿಷ್ಣುವರ್ಧನ್ ಹೆಸರಿಟ್ಟ ವಿಷ್ಣು ಅಭಿಮಾನಿ

    ಮ್ಮ ನೆಚ್ಚಿನ ನಟನ ಹೆಸರಿನಲ್ಲಿ ನಾನಾ ರೀತಿಯ ಕೆಲಸಗಳನ್ನು ಮಾಡಿದ ಉದಾಹರಣೆಗಳು ಇವೆ. ಅದರಲ್ಲೂ ಡಾ.ವಿಷ್ಣು ಸೇನಾ ಸಮಿತಿಯು ಪ್ರತಿ ವರ್ಷವೂ ಹತ್ತಾರು ಜನಪರ ಕೆಲಸಗಳನ್ನು ಮಾಡುತ್ತಲೇ ಇರುತ್ತದೆ. ಇದೀಗ ವಿಷ್ಣು ಅಭಿಮಾನಿಯೊಬ್ಬರು (fan) ತಮ್ಮ ಪುತ್ರನಿಗೆ ನೆಚ್ಚಿನ ನಟ ಹೆಸರನ್ನು ಇಟ್ಟಿದ್ದಾರೆ. ಆ ಹೆಸರನ್ನು ನೋಂದಾವಣೆ ಕೂಡ ಮಾಡಿದ್ದಾರೆ. ಈ ಮೂಲಕ ಡಾ.ವಿಷ್ಣುವರ್ಧನ್ (Vishnuvardhan) ಅವರನ್ನು ಸದಾ ಜೀವಂತವಾಗಿರಿಸುವ ಕೆಲಸ ಮಾಡಿದ್ದಾರೆ.

    ಈ ವಿಷಯವನ್ನು ಡಾ.ವಿಷ್ಣು ಸೇನಾ ಸಮಿತಿಯ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ್ (Veerakaputra Srinivas) ತಮ್ಮ ಫೇಸ್ ಬುಕ್ ಪೇಜ್ ನಲ್ಲಿ ‘ಅಭಿಮಾನಿಯ ಅಭಿಮಾನ ತಾಯಿ ಪ್ರೀತಿಯಷ್ಟೇ ಶ್ರೇಷ್ಠ ಎಂಬ ನನ್ನ ಅಭಿಪ್ರಾಯ ಮತ್ತೊಮ್ಮೆ ನಿಜವೆಂದು ಸಾಬೀತಾಯಿತು. ನಿನ್ನ ಅಭಿಮಾನಕ್ಕೆ ಶರಣು ಗೆಳೆಯ’ ಎಂದು ಬರೆದುಕೊಂಡಿದ್ದಾರೆ. ಅಲ್ಲದೇ, ಅಭಿಮಾನಿ ಮಗುವಿಗೆ ಒಳ್ಳೆಯದಾಗಲಿ ಎಂದು ಹಾರೈಸಿದ್ದಾರೆ. ಇದನ್ನೂ ಓದಿ: ಧ್ವನಿಯಿಂದ ಎದುರಿಸಿದ ಟೀಕೆ ಬಗ್ಗೆ ಬಾಯ್ಬಿಟ್ಟ ರಾಣಿ ಮುಖರ್ಜಿ

    ಅಂದಹಾಗೆ ರವಿ ದೇವರಮನಿ (Ravi Devarmani) ಹೆಸರಿನ ಈ ಅಭಿಮಾನಿ ಯಾದಗಿರಿ ಜಿಲ್ಲೆಯವರು. ತಮ್ಮ ಮಗನಿಗೆ ವಿಷ್ಣುವರ್ಧನ ದೇವರಮನಿ ಎಂದು ಹೆಸರಿಟ್ಟಿದ್ದಾರೆ. ಚಿಕ್ಕಂದಿನಿಂದಲೂ ವಿಷ್ಣುವರ್ಧನ್ ಅಭಿಮಾನಿಯಾಗಿರುವ ರವಿ, ವಿಷ್ಣು ಹೆಸರಿನಲ್ಲಿ ನಾನಾ ಕೆಲಸಗಳನ್ನು ಮಾಡುತ್ತಲೇ ಇರುತ್ತಾರಂತೆ. ನೆಚ್ಚಿನ ನಟ ತಮ್ಮ ಮನೆಯಲ್ಲಿ ಸದಾ ಓಡಾಡುತ್ತಿರಲಿ ಎನ್ನುವ ಕಾರಣಕ್ಕಾಗಿ ಮಗನಿಗೆ ವಿಷ್ಣು ಹೆಸರು ಇಟ್ಟಿದ್ದಾರೆ.

  • ಡಾ.ವಿಷ್ಣು ಸಮಾಧಿ ಸಂರಕ್ಷಣೆಗಾಗಿ ವಾಣಿಜ್ಯ ಮಂಡಳಿ ಮುಂದೆ ಅಭಿಮಾನಿಗಳ ಪ್ರತಿಭಟನೆ

    ಡಾ.ವಿಷ್ಣು ಸಮಾಧಿ ಸಂರಕ್ಷಣೆಗಾಗಿ ವಾಣಿಜ್ಯ ಮಂಡಳಿ ಮುಂದೆ ಅಭಿಮಾನಿಗಳ ಪ್ರತಿಭಟನೆ

    ಬೆಂಗಳೂರಿನ ಅಭಿಮಾನ ಸ್ಟುಡಿಯೋ ಅವರಣದಲ್ಲಿ ಹೆಸರಾಂತ ನಟ ಡಾ.ವಿಷ್ಣುವರ್ಧನ್ ಸಮಾಧಿ ಸಂರಕ್ಷಣೆ ಮತ್ತು ಸ್ಮಾರಕ ಮಾಡಲು ನಾಡಪ್ರೇಮಿ ಡಾ.ವಿಷ್ಣು ಅಕಾಡೆಮಿ ಮನವಿ ಮಾಡಿತು. ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಮುಂಭಾಗದಲ್ಲಿ ಅಕಾಡೆಮಿ ವತಿಯಿಂದ ಬೆಂಗಳೂರಿನ ಅಭಿಮಾನ ಸ್ಟುಡಿಯೋ ಆವರಣದಲ್ಲಿರುವ ವಿಷ್ಣುವರ್ಧನ್ ಅವರ ಸ್ಮಾರಕದ ಸಂರಕ್ಷಣೆಗೆ ಆಗ್ರಹಿಸಿ ಪ್ರತಿಭಟನಾ ಧರಣಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

    ನಾಡಪ್ರೇಮಿ ಡಾ.ವಿಷ್ಣು ಅಕಾಡೆಮಿ ಗೌರವಾಧ್ಯಕ್ಷರಾದ ಕ್ರಾಂತಿ ರಾಜು, ಕನ್ನಡ ಪರ ಹೋರಾಟಗಾರ ಪಾಲನೇತ್ರ,  ಅಕಾಡೆಮಿಯ ಸದಸ್ಯರು, ನಟ ವಿಷ್ಣುವರ್ಧನ್ ಅವರ ಅಭಿಮಾನಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಕ್ರಾಂತಿ ರಾಜು, ‘ಅಭಿಮಾನಿಗಳಿಂದ ಸಾಹಸಸಿಂಹ, ವಿಷ್ಣುದಾದ ಎಂಬ ಹಲವಾರು ಬಿರುದು ಪಡೆದ ಡಾ.ವಿಷ್ಣುವರ್ಧನ್ ಅವರು ಅಪ್ರತಿಮ ಕಲಾವಿದರು. 35ವರ್ಷಗಳ ಕಲಾಸೇವೆ ಮತ್ತು ನೂರಾರು ಕನ್ನಡ ಚಲನಚಿತ್ರದಲ್ಲಿ ಅಭಿನಯಿಸಿ ಕನ್ನಡಿಗರ ಮನಗೆದ್ದಿದ್ದಾರೆ. ನಮ್ಮ ರಾಜ್ಯದಲ್ಲಿ  ಕಲೆ, ಕಲಾವಿದರನ್ನು ದೇವರಂತೆ ಆರಾಧಿಸುವ ಕನ್ನಡಿಗರ ಇದ್ದಾರೆ. ವಿಷ್ಣುವರ್ಧನ್ ಆಗಲಿಕೆಯಿಂದ ಕನ್ನಡ ಚಿತ್ರರಂಗ ಮತ್ತು ಅಭಿಮಾನಿಗಳಿಗೆ  ಅಪಾರ ನೋವು, ನಷ್ಟವಾಗಿದೆ’ ಎಂದರು.

    ಮುಂದುವರೆದು ಮಾತನಾಡಿ ರಾಜು, ‘ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರ ಅಂತ್ಯಕ್ರಿಯೆ ನಡೆದ ಬೆಂಗಳೂರಿನ ಕೆಂಗೇರಿಯಲ್ಲಿರುವ ಅಭಿಮಾನ ಸ್ಟುಡಿಯೋ ಆವರಣದಲ್ಲಿರುವ ವಿಷ್ಣುವರ್ಧನ್‌ ಅವರ ಸಮಾಧಿಯನ್ನು ಸಂರಕ್ಷಿಸಿ, ಅದನ್ನು ಸ್ಮಾರಕ ಎಂದು ಘೋಷಿಸಬೇಕೆಂದು ಕರ್ನಾಟಕ ರಾಜ್ಯ ಸರ್ಕಾರ ಮತ್ತು ಚಲನಚಿತ್ರ ವಾಣಿಜ್ಯ ಮಂಡಳಿ ಮನವಿ ಸಲ್ಲಿಸಲಾಗುವುದು. ವಿಷ್ಣುವರ್ಧನ್ ಅವರ ಕೊಟ್ಯಂತರ ಅಭಿಮಾನಿಗಳ ಆಸೆ ಅವರ ಅಂತ್ಯಕ್ರಿಯೆ ನಡೆದ ಸ್ಥಳ ನೋಡಬೇಕು, ಗೌರವ ಸಲ್ಲಿಸಬೇಕು ಎಂಬುದಾಗಿದೆ’ ಎಂದರು. ಇದನ್ನೂ ಓದಿ: ನಟ ಉಪೇಂದ್ರ ಪಕ್ಷಕ್ಕೆ ಅಧಿಕೃತ ಚಿಹ್ನೆ ನೀಡಿದ ಚುನಾವಣಾ ಆಯೋಗ

    ಕನ್ನಡ ಪರ ಹೋರಾಟಗಾರ ಪಾಲನೇತ್ರ ಮಾತನಾಡಿ ‘ಕನ್ನಡ ನಾಡಿಗೆ ಅಮೂಲ್ಯರತ್ನ ಸಾಹಸಿಸಿಂಹ ವಿಷ್ಣುವರ್ಧನ್ ಅವರ ಸಮಾಧಿ ಸ್ಥಳದಲ್ಲಿ ಸಾವಿರಾರು ಅಭಿಮಾನಿಗಳು ಪ್ರತಿನಿತ್ಯ ಆಗಮಿಸಿ, ಗೌರವ ಸಲ್ಲಿಸುತ್ತಿದ್ದಾರೆ. ಪ್ರತಿದಿನ ಒಂದಲ್ಲ, ಒಂದು ಸಮಾಜಮುಖಿ ಚಟುವಟಿಕೆಗಳು ನಡೆಯುತ್ತಿದೆ, ಅಭಿಮಾನಿಗಳ ಪಾಲಿಗೆ ಪವಿತ್ರ ಕ್ಷೇತ್ರವಾಗಿದೆ. ಕೂಡಲೆ ರಾಜ್ಯ ಸರ್ಕಾರ ಅಭಿಮಾನ ಸ್ಟುಡಿಯೊ ಸಂಸ್ಥೆಯವರ ಜೊತೆಯಲ್ಲಿ ಚರ್ಚಿಸಿ, ಸಮಾಧಿ ಸ್ಥಳ ಉಳಿಸಿ, ಸ್ಮಾರಕ ಮಾಡಬೇಕು ಎಂದು ಮನವಿ ಮಾಡಿದರು’ ಎಂದರು.

    ವಾಣಿಜ್ಯ ಮಂಡಳಿ ಮುಂದೆ ನಡೆದ ಹೋರಾಟದಲ್ಲಿ ಸಾವಿರಾರು ವಿಷ್ಣು ಅಭಿಮಾನಿಗಳು ಜೊತೆಯಾಗಿದ್ದರು. ಈ ಸಂದರ್ಭದಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್ ಅವರಿಗೆ ಮನವಿ ಪತ್ರವನ್ನು ನೀಡಲಾಯಿತು. ಸರಕಾರದ ಜೊತೆ ಮಾತನಾಡಿ, ವಿಷ್ಣು ಅಭಿಮಾನಿಗಳ ಜೊತೆ ನಿಂತುಕೊಳ್ಳುವಂತೆ ಮನವಿ ಆಗ್ರಹಿಸಲಾಯಿತು.

  • ನಟ ಚೇತನ್ ವಿರುದ್ಧ ತಿರುಗಿ ಬಿದ್ದ ವಿಷ್ಣುವರ್ಧನ್ ಫ್ಯಾನ್ಸ್

    ನಟ ಚೇತನ್ ವಿರುದ್ಧ ತಿರುಗಿ ಬಿದ್ದ ವಿಷ್ಣುವರ್ಧನ್ ಫ್ಯಾನ್ಸ್

    ಸಿನಿಮಾ ಸಿಲೆಬ್ರೆಟಿಗಳಿಗೆ ಸಾರ್ವಜನಿಕ ಜಾಗ, ಹಣ ಮತ್ತು ಸಂಪನ್ಮೂಲಗಳನ್ನು ಬಳಸಿಕೊಂಡು ಸ್ಮಾರಕ ನಿರ್ಮಾಣ ಮಾಡುವುದು ಸರಿಯಲ್ಲ ಎಂದು ನಿನ್ನೆಯಷ್ಟೇ ನಟ, ಸಾಮಾಜಿಕ ಹೋರಾಟಗಾರ ಚೇತನ್ (Chetan) ತಮ್ಮ ಸೋಷಿಯಲ್ ಮೀಡಿಯಾ ಪೇಜ್ ನಲ್ಲಿ ಬರೆದುಕೊಂಡಿದ್ದರು. ಈ ಬರಹಕ್ಕೆ ಡಾ.ವಿಷ್ಣುವರ್ಧನ್ (Vishnuvardhan) ಅಭಿಮಾನಿಗಳು (Fans) ಗರಂ ಆಗಿದ್ದಾರೆ. ಚೇತನ್ ಹೇಳುತ್ತಿರುವ ಮಾತು ಸರಿಯಾಗಿಯೇ ಇರಬಹುದು. ಆದರೆ, ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆ ಆಗಿರುವ ಈ ಹೊತ್ತಿನಲ್ಲಿ ಅವರ ಪ್ರತಿಕ್ರಿಯೆ ದುರುದ್ದೇಶದಿಂದ ಕೂಡಿದ್ದು ಎಂದಿದ್ದಾರೆ ಅಭಿಮಾನಿಗಳು.

    ಕನ್ನಡ ಸಿನಿಮಾ ರಂಗದಲ್ಲಿ ಯಾವೆಲ್ಲ ನಟ, ನಟಿಯರ, ನಿರ್ಮಾಪಕರ ಸ್ಮಾರಕಗಳು ಆಗಿವೆ ಎನ್ನುವುದು ಚೇತನ್ ಗೆ ಗೊತ್ತಿದೆ. ಆಗೆಲ್ಲ ಮಾತಾಡದೇ ಇರುವವರು ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆಯಾದ ಸಂದರ್ಭದಲ್ಲಿ ಮಾತನಾಡಿದ್ದಾರೆ ಅಂದರೆ, ಆ ಮಾತಿನ ಹಿಂದಿರುವ ಉದ್ದೇಶವನ್ನೂ ಅವರು ಸ್ಪಷ್ಟ ಪಡಿಸಬೇಕು ಎಂದು ಅನೇಕ ಅಭಿಮಾನಿಗಳು ಚೇತನ್ ಪೇಜ್ ನಲ್ಲಿಯೇ ಪ್ರತಿಕ್ರಿಯೆ ನೀಡಿದ್ದಾರೆ. ಅವರು ಎಲ್ಲರ ಸ್ಮಾರಕಗಳ ಬಗ್ಗೆಯೂ ಮಾತನಾಡಲಿ ಎಂದು ಸಲಹೆ ನೀಡಿದ್ದಾರೆ. ಇದನ್ನೂ ಓದಿ: ಮುಖಮುಚ್ಚಿಕೊಂಡು ‘ಪಠಾಣ್’ ಸಿನಿಮಾಗೆ ಬಂದ ದೀಪಿಕಾ ಪಡುಕೋಣೆ

    ನಿನ್ನೆ ಅವರು ತಮ್ಮ ಸೋಷಿಯಲ್ ಮೀಡಿಯಾ ಪೇಜ್ ನಲ್ಲಿ ಚಲನಚಿತ್ರ ತಾರೆಯರಿಗೆ ಸಾರ್ವಜನಿಕ ಜಾಗ, ಹಣ ಮತ್ತು ಸಂಪನ್ಮೂಲಗಳನ್ನು ಬಳಸಿಕೊಂಡು ಸ್ಮಾರಕ ನಿರ್ಮಾಣ ಮಾಡಬಾರದು. ಹಲವಾರು ಕನ್ನಡಿಗರಂತೆಯೇ ನಟ, ನಟಿಯರು ಕೂಡ ಕೆಲಸ ಮಾಡಿ ಸಂಪಾದಿಸುತ್ತಾರೆ. ಈಗಾಗಲೇ ನಮ್ಮ ಸಮಾಜದಲ್ಲಿ ಅವರಿಗೆ ಅನಗತ್ಯ ಪ್ರಚಾರ ನೀಡಿದ್ದೇವೆ. ಅವರ ಸಿನಿಮಾ ಯಶಸ್ಸಿಗೆ ಅನಗತ್ಯವಾಗಿಯೇ ಗಮನ ಸೆಳೆಯುತ್ತಾರೆ. ಹಾಗಾಗಿ ಸ್ಮಾರಕಗಳನ್ನು ಕಟ್ಟದಂತೆ ಅವರು ಮನವಿ ಮಾಡಿದ್ದರು. ನಾಡಿಗೆ ಬೇಕಾಗಿದ್ದು ಸ್ಟಾರ್ ಗಳ ಸ್ಮಾರಕಗಳ ಬದಲು ಕರ್ನಾಟಕ ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಪ್ರದರ್ಶಿಸುವಂತಹ ವಸ್ತು ಸಂಗ್ರಹಾಲಯಗಳು. ನಮ್ಮ ನೆಲ ಸ್ಮಾರಕಗಳಿಗಿಂತ ವಸ್ತು ಸಂಗ್ರಹಾಲಯಗಳಿಗೆ ಬಳಕೆಯಾಗಲಿ ಎಂದು ನಟ ಚೇತನ್ ಆಗ್ರಹಿಸಿದ್ದರು.

    ಸಿನಿಮಾ ರಂಗದ ವಿಚಾರವಾಗಿ ಚೇತನ್ ಈ ಹಿಂದೆಯೇ ಅನೇಕ ಮಾತುಗಳನ್ನು ಆಡಿದ್ದಾರೆ. ಮೀಟೂ ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡ ಹೋರಾಟವನ್ನೇ ಅವರು ಕೈಗೆತ್ತಿಕೊಂಡಿದ್ದರು. ನಟ ನಟಿಯರ ತಾರತಮ್ಯದ ಬಗ್ಗೆ ಧ್ವನಿ ಎತ್ತಿದ್ದರು. ಕಾರ್ಮಿಕರ ಕಷ್ಟಗಳ ಕುರಿತು ಮಾತನಾಡಿದ್ದರು. ಇದೀಗ ಸ್ಮಾರಕಗಳ ಬಗ್ಗೆ ಚೇತನ್ ಮಾತನಾಡಿದ್ದಾರೆ. ಜನರ ಹಣವನ್ನು ಈ ರೀತಿಯಾಗಿ ದುಂದುವೆಚ್ಚ ಮಾಡಬೇಡಿ ಎಂದು ಅವರು ಸರಕಾರಕ್ಕೆ ಸಲಹೆ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ವಿಷ್ಣು ಸ್ಮಾರಕದ ಬಗ್ಗೆ ಪ್ರೀತಿಯ ಗೆಳೆಯನ ಮಾತು

    ವಿಷ್ಣು ಸ್ಮಾರಕದ ಬಗ್ಗೆ ಪ್ರೀತಿಯ ಗೆಳೆಯನ ಮಾತು

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k