Tag: Vishnuvardhan

  • ವಿಷ್ಣುವರ್ಧನ್ ಪುತ್ಧಳಿ ಧ್ವಂಸಗೊಳಿಸಿದವರಿಗೆ ಶಿಕ್ಷೆ ಆಗ್ಬೇಕು: ದರ್ಶನ್ ಕಿಡಿ

    ವಿಷ್ಣುವರ್ಧನ್ ಪುತ್ಧಳಿ ಧ್ವಂಸಗೊಳಿಸಿದವರಿಗೆ ಶಿಕ್ಷೆ ಆಗ್ಬೇಕು: ದರ್ಶನ್ ಕಿಡಿ

    ಬೆಂಗಳೂರು: ಸಾಹಸಸಿಂಹ ವಿಷ್ಣುವರ್ಧನ್ ಪುತ್ಥಳಿ ಧ್ವಂಸ ಮಾಡಿದ ದುಷ್ಕರ್ಮಿಗಳಿಗೆ ತಕ್ಕ ಶಿಕ್ಷೆಯಾಗಲಬೇಕೆಂದು ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಆಗ್ರಹಿಸಿದ್ದಾರೆ.

    ಕರ್ನಾಟಕದಲ್ಲಿ ಅತಿಯಾಗಿ ಪ್ರೀತಿಸೋ, ಆರಾಧಿಸೋ ವ್ಯಕ್ತಿಗಳಲ್ಲಿ ಮುಂಚೂಣಿಯಲ್ಲಿ ನಿಲ್ಲುವ ನಮ್ಮ ನಲ್ಮೆಯ ಸಾಹಸ ಸಿಂಹ ಡಾ. ವಿಷ್ಣು ಸರ್ ಪುತ್ಥಳಿಯನ್ನು ಯಾರೋ ಕಿಡಿಗೇಡಿಗಳು ಯಾರು ಇಲ್ಲದ ಹೊತ್ತಿನಲ್ಲಿ ಧ್ವಂಸ ಮಾಡಿರುವುದು ನಾಚಿಕೆಯ ಸಂಗತಿ. ಇಂತ ದುಷ್ಕರ್ಮಿಗಳಿಗೆ ತಕ್ಕ ಶಿಕ್ಷೆಯಾಗಲೇಬೇಕು ಎಂದು ದರ್ಶನ್ ಟ್ವೀಟ್ ಮಾಡಿದ್ದಾರೆ.

    ಬೆಂಗಳೂರಿನ ಮಾಗಡಿ ರಸ್ತೆಯ ಟೋಲ್‍ಗೇಟ್ ಅಂಡರ್‍ಪಾಸ್ ಮೇಲಿದ್ದ ನಟ ಸಾಹಸ ಸಿಂಹ ವಿಷ್ಣುವರ್ಧನ್ ಪ್ರತಿಮೆಯನ್ನ ರಾತ್ರೋ ರಾತ್ರಿ ತೆಗೆಯಲಾಗಿದೆ. ವಿಷಯ ತಿಳಿದು ಸ್ಥಳದಲ್ಲಿ ಜಮಾಯಿಸಿರುವ ವಿಷ್ಣುವರ್ಧನ್ ಅಭಿಮಾನಿಗಳು ಆಕ್ರೋಶ ಹೊರ ಹಾಕಿದ್ದಾರೆ. ಮುನ್ನೇಚ್ಚರಿಕೆ ಕ್ರಮವಾಗಿ ಸ್ಥಳದಲ್ಲಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

    ಟೋಲ್‍ಗೇಟ್ ಸರ್ಕಲ್ ಗೆ ಶ್ರೀ ಬಾಲ ಗಂಗಾಧರ ಸ್ವಾಮೀಜಿ ವೃತ್ತ ಅಂತ ಹೆಸರಿಡಲಾಗಿದೆ. ಹಾಗಾಗಿ ವಿಷ್ಣುವರ್ಧನ್ ಪ್ರತಿಮೆ ಸ್ಥಳದಲ್ಲಿ ಬಾಲಗಂಗಾಧರ ಸ್ವಾಮೀಜಿ ಸ್ಟ್ಯಾಚು ಇಡಲು ನಿರ್ಧರಿಸಲಾಗಿದೆ. ಹೀಗಾಗಿ ರಾತ್ರಿ ವಿಷ್ಣು ಪ್ರತಿಮೆ ತೆರವುಗೊಳಿಸಲಾಗಿದೆ ಎಂಬ ಆರೋಪಗಳು ಕೇಳಿ ಬಂದಿವೆ. ಪ್ರತಿಮೆ ತೆಗೆಯುವ ಮೂಲಕ ಕನ್ನಡಿಗರಿಗೆ ಅವಮಾನಿಸಲಾಗಿದೆ ಎಂದು ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

  • ರಾತ್ರೋ ರಾತ್ರಿ ಪ್ರತಿಮೆ ತೆಗೆಯುವುದು ಸರಿನಾ?- ಅನಿರುದ್ಧ್

    ರಾತ್ರೋ ರಾತ್ರಿ ಪ್ರತಿಮೆ ತೆಗೆಯುವುದು ಸರಿನಾ?- ಅನಿರುದ್ಧ್

    ಬೆಂಗಳೂರು: ಮಾಗಡಿ ರಸ್ತೆಯ ಅಂಡರ್ ಪಾಸ್ ಮೇಲ್ಭಾಗದಲ್ಲಿ ವಿಷ್ಣುವರ್ಧನ್ ಪ್ರತಿಮೆ ಸ್ಥಳಾಂತರದ ಬಗ್ಗೆ ನಟ ಅನಿರುದ್ಧ್ ಪ್ರತಿಕ್ರಿಯೆ ನೀಡಿದ್ದಾರೆ.

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅನಿರುದ್ಧ್, ಪ್ರತಿಷ್ಠಾಪನೆಯಾಗಿರುವ ಮೂರ್ತಿಯನ್ನ ರಾತ್ರೋ ರಾತ್ರಿ ಯಾರಿಗೂ ಹೇಳದೇ ತೆಗೆಯುವುದು ಎಷ್ಟು ಸೂಕ್ತ. ಈ ರೀತಿಯ ಕೆಲಸಗಳಿಂದ ಹಿರಿಯ ವ್ಯಕ್ತಿಗೆ ಅವಮಾನ ಮಾಡಿದಂತೆ ಆಗಲ್ವಾ? ಇದರಿಂದ ಅಭಿಮಾನಿಗಳಿಗೆ ದುಃಖ ಆಗುತ್ತೆ. ವಿಷ್ಣುವರ್ಧನ್ ಅಪ್ಪಾಜಿ ಪ್ರತಿಮೆಯನ್ನ ಯಾರು ತೆಗೆದ್ರು ಮತ್ತು ಯಾಕೆ ತೆಗೆದರು ಎಂದು ಬೇಸರ ವ್ಯಕ್ತಪಡಿಸಿದರು.

    ನಮ್ಮ ಕುಟುಂಬ ಎಲ್ಲರನ್ನ ಗೌರವಿಸುತ್ತೆ. ನಾವು ಯಾರ ಮಾತಿಗೆ ತಿರುಗೇಟು ನೀಡುವುದು ನಮಗೆ ಗೊತ್ತಿಲ್ಲ. ಸಚಿವರಾಗಿರುವ ಸೋಮಣ್ಣ ಅವರ ಮಾತುಗಳಿಗೆ ನಾವು ಗೌರವ ನೀಡುತ್ತೇವೆ. ಒಂದು ಪುತ್ಥಳಿಯನ್ನ ಪ್ರತಿಷ್ಠಾಪನೆ ಮಾಡುವಾಗಲೇ ಎಲ್ಲ ಮಾಹಿತಿ ಸಂಗ್ರಹಿಸಿಕೊಳ್ಳಬೇಕು. ಪ್ರತಿಷ್ಠಾಪನೆ ವಿಚಾರದಲ್ಲಿ ಯಾವ ತೊಂದರೆಯೂ ಇಲ್ಲ ಅಂದ್ಮೇಲೆ ಪ್ರತಿಮೆ ಸ್ಥಾಪನೆ ಮಾಡಲಾಗುತ್ತದೆ. ಪ್ರತಿ ಬಾರಿಯೂ ಅಪ್ಪಾಜಿ ಅವರ ಬಗ್ಗೆಯೇ ಈ ರೀತಿ ಯಾಕೆ ಆಗ್ತಿದೆ. ಒಂದು ವೇಳೆ ಪ್ರತಿಮೆ ಸ್ಥಳಾಂತರಿಸುವದಿದ್ದರೆ ಎಲ್ಲರ ಜೊತೆ ಮಾತುಕತೆ ನಡೆಸಿ ಗೌರವಯುತವಾಗಿ ತೆಗೆಯಬಹದಿತ್ತು ಎಂದರು.

    ವಿ.ಸೋಮಣ್ಣ ಹೇಳಿದ್ದೇನು?: 40 ವರ್ಷಗಳ ಹಿಂದೆಯೇ ಬಾಲಗಂಗಾಧರೇಶ್ವರ ವೃತ್ತ ಎಂದು ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ನಾನು ಮತ್ತು ವಿಷ್ಣುವರ್ಧನ್ ಆತ್ಮೀಯರು. ಆದ್ರೆ ಈ ಪ್ರತಿಮೆ ಏಕೆ ತೆರವು ಆಯ್ತು ಅಂತ ಮಾಹಿತಿ ಇಲ್ಲ. ಆದ್ರೆ ಈ ಪ್ರದೇಶದಲ್ಲಿ ತಿಳಿದೋ ಅಥವಾ ತಿಳಿಯದೋ ಅಲ್ಲಿ ಪ್ರತಿಮೆ ಇರಿಸಲಾಗಿತ್ತು. ಮುಂದಿನ ನಾಲ್ಕೈದು ದಿನಗಳಲ್ಲಿ ಒಳ್ಳೆ ಕಡೆ ಪ್ರತಿಮೆ ಸ್ಥಾಪನೆ ಮಾಡಲಾಗುವುದು. ವಿಷ್ಣುವರ್ಧನ್ ನನಗೆ ಆತ್ಮೀಯರಲ್ಲಿ ಆತ್ಮೀಯರು. ನನ್ನ ಜೊತೆಗಿನ ಅವರ ಒಡನಾಟ ಹೇಗಿತ್ತು ಅನ್ನೋದು ಈಗ ಹೇಳಲು ಸಮಯ ಇಲ್ಲ. ಇದೊಂದು ಸೂಕ್ಷ್ಮ ಘಟನೆಯಾಗಿದ್ದು, ನಡೆದ ಅತಾಚುರ್ಯಕ್ಕೆ ನಾನು ಕ್ಷಮೆ ಕೇಳುತ್ತೇನೆ. ನನ್ನ ಕ್ಷೇತ್ರದಲ್ಲಿ ಎಲ್ಲಿ ಬೇಕಾದ್ರೂ ಸ್ಥಾಪಿಸುವ ಕೆಲಸ ಮಾಡುತ್ತೇನೆ ಎಂದು ಹೇಳಿದ್ದರು.

  • ಮಾತುಕತೆ ಮೂಲಕವೇ ವಿಷ್ಣು ಮೂರ್ತಿ ತೆಗೆಯಲಾಗಿದೆ: ವಿ.ಸೋಮಣ್ಣ

    ಮಾತುಕತೆ ಮೂಲಕವೇ ವಿಷ್ಣು ಮೂರ್ತಿ ತೆಗೆಯಲಾಗಿದೆ: ವಿ.ಸೋಮಣ್ಣ

    – ನಡೆದ ಅತಾಚುರ್ಯಕ್ಕೆ ಕ್ಷಮೆ ಕೇಳಿದ ಸಚಿವರು

    ಬೆಂಗಳೂರು: ಸಾಹಸಸಿಂಹ ವಿಷ್ಣುವರ್ಧನ್ ಅವರ ಮೂರ್ತಿಯನ್ನ ಮಾತುಕತೆಯೇ ಮೂಲಕವೇ ತೆರವು ಮಾಡಲಾಗಿದೆ. ಆದ್ರೆ ಯಾಕೆ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ನನಗೂ ಗೊತ್ತಿಲ್ಲ. ಕೂಡಲೇ ವಿಷ್ಣುವರ್ಧನ್ ಅವರ ಅಭಿಮಾನಿಗಳನ್ನ ಕರೆಸಿ ಮಾತನಾಡುತ್ತೇನೆ ಎಂದು ವಸತಿ ಸಚಿವ ವಿ.ಸೋಮಣ್ಣ ಪ್ರತಿಕ್ರಿಯೆ ನೀಡಿದ್ದಾರೆ.

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ವಿ.ಸೋಮಣ್ಣ, ನಾನು ನಿನ್ನೆ ಚಿಕ್ಕಮಗಳೂರಿನಲ್ಲಿದ್ದು, ಇಂದು ಮಾತನಾಡುತ್ತೇನೆ. ಶ್ರೀ ಬಾಲಗಂಗಾಧರ ಸ್ವಾಮೀಜಿಗಳ ವೃತ್ತ ಆಗಿರೋದರಿಂದ ಅವರ ಪ್ರತಿಮೆ ಸ್ಥಾಪನೆ ಬಗ್ಗೆ ಚರ್ಚೆ ನಡೆದಿತ್ತು. ಅಲ್ಲಿಯೇ ನಿರ್ಮಾಣವಾಗುತ್ತಿರುವ ಪಾರ್ಕ್ ನಲ್ಲಿ ಅಥವಾ ವಿಜಯನಗರ ಬಸ್ ನಿಲ್ದಾಣದಲ್ಲಿ ವಿಷ್ಣು ಅವರ ಪ್ರತಿಮೆ ಸ್ಥಾಪಿಸುವ ಕುರಿತು ಮಾತುಕತೆ ನಡೆದಿತ್ತು ಎಂದು ಸೋಮಣ್ಣ ಅವರು ತಿಳಿಸಿದರು.

    40 ವರ್ಷಗಳ ಹಿಂದೆಯೇ ಬಾಲಗಂಗಾಧರೇಶ್ವರ ವೃತ್ತ ಎಂದು ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ನಾನು ಮತ್ತು ವಿಷ್ಣುವರ್ಧನ್ ಆತ್ಮೀಯರು. ಆದ್ರೆ ಈ ಪ್ರತಿಮೆ ಏಕೆ ತೆರವು ಆಯ್ತು ಅಂತ ಮಾಹಿತಿ ಇಲ್ಲ. ಆದ್ರೆ ಈ ಪ್ರದೇಶದಲ್ಲಿ ತಿಳಿದೋ ಅಥವಾ ತಿಳಿಯದೋ ಅಲ್ಲಿ ಪ್ರತಿಮೆ ಇರಿಸಲಾಗಿತ್ತು. ಮುಂದಿನ ನಾಲ್ಕೈದು ದಿನಗಳಲ್ಲಿ ಒಳ್ಳೆ ಕಡೆ ಪ್ರತಿಮೆ ಸ್ಥಾಪನೆ ಮಾಡಲಾಗುವುದು ಎಂದರು.

    ವಿಷ್ಣುವರ್ಧನ್ ನನಗೆ ಆತ್ಮೀಯರಲ್ಲಿ ಆತ್ಮೀಯರು. ನನ್ನ ಜೊತೆಗಿನ ಅವರ ಒಡನಾಟ ಹೇಗಿತ್ತು ಅನ್ನೋದು ಈಗ ಹೇಳಲು ಸಮಯ ಇಲ್ಲ. ಇದೊಂದು ಸೂಕ್ಷ್ಮ ಘಟನೆಯಾಗಿದ್ದು, ನಡೆದ ಅತಾಚುರ್ಯಕ್ಕೆ ನಾನು ಕ್ಷಮೆ ಕೇಳುತ್ತೇನೆ. ನನ್ನ ಕ್ಷೇತ್ರದಲ್ಲಿ ಎಲ್ಲಿ ಬೇಕಾದ್ರೂ ಸ್ಥಾಪಿಸುವ ಕೆಲಸ ಮಾಡುತ್ತೇನೆ ಎಂದು ಹೇಳಿದ್ದರು.

  • ರಾತ್ರೋ ರಾತ್ರಿ ವಿಷ್ಣುವರ್ಧನ್ ಪ್ರತಿಮೆ ತೆರವು

    ರಾತ್ರೋ ರಾತ್ರಿ ವಿಷ್ಣುವರ್ಧನ್ ಪ್ರತಿಮೆ ತೆರವು

    ಬೆಂಗಳೂರು: ಮಾಗಡಿ ರಸ್ತೆಯ ಟೋಲ್‍ಗೇಟ್ ಅಂಡರ್‍ಪಾಸ್ ಮೇಲಿದ್ದ ನಟ ಸಾಹಸ ಸಿಂಹ ವಿಷ್ಣುವರ್ಧನ್ ಪ್ರತಿಮೆಯನ್ನ ರಾತ್ರೋ ರಾತ್ರಿ ತೆಗೆಯಲಾಗಿದೆ. ವಿಷಯ ತಿಳಿದು ಸ್ಥಳದಲ್ಲಿ ಜಮಾಯಿಸಿರುವ ವಿಷ್ಣುವರ್ಧನ್ ಅಭಿಮಾನಿಗಳು ಆಕ್ರೋಶ ಹೊರ ಹಾಕಿದ್ದಾರೆ. ಮುನ್ನೇಚ್ಚರಿಕೆ ಕ್ರಮವಾಗಿ ಸ್ಥಳದಲ್ಲಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

    ಟೋಲ್‍ಗೇಟ್ ಸರ್ಕಲ್ ಗೆ ಶ್ರೀ ಬಾಲ ಗಂಗಾಧರ ಸ್ವಾಮೀಜಿ ವೃತ್ತ ಅಂತ ಹೆಸರಿಡಲಾಗಿದೆ. ಹಾಗಾಗಿ ವಿಷ್ಣುವರ್ಧನ್ ಪ್ರತಿಮೆ ಸ್ಥಳದಲ್ಲಿ ಬಾಲಗಂಗಾಧರ ಸ್ವಾಮೀಜಿ ಸ್ಟ್ಯಾಚು ಇಡಲು ನಿರ್ಧರಿಸಲಾಗಿದೆ. ಹೀಗಾಗಿ ರಾತ್ರಿ ವಿಷ್ಣು ಪ್ರತಿಮೆ ತೆರವುಗೊಳಿಸಲಾಗಿದೆ ಎಂಬ ಆರೋಪಗಳು ಕೇಳಿ ಬಂದಿವೆ. ಪ್ರತಿಮೆ ತೆಗೆಯುವ ಮೂಲಕ ಕನ್ನಡಿಗರಿಗೆ ಅವಮಾನಿಸಲಾಗಿದೆ ಎಂದು ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

    ಟೋಲ್ ಗೇಟ್ ಅಂಡರ್ ಪಾಸ್ ಮೇಲೆ ವಿಷ್ಣು ದಾದಾ ಸ್ಟ್ಯಾಚು ಇಡಲಾಗಿತ್ತು. ಎರಡು ವರ್ಷದ ಹಿಂದೆ ವಿಷ್ಣು ಸ್ಟ್ಯಾಚು ಪ್ರತಿಷ್ಠಾನ ಮಾಡಲಾಗಿತ್ತು. ವಿಷ್ಣು ದಾದಾಗೆ ಪದೇ ಪದೇ ಅವಮಾನವಾಗ್ತಿದೆ. ರಾತ್ರೋ ರಾತ್ರಿ ಸ್ಟ್ಯಾಚು ಒಡೆದು ಹಾಕಲಾಗಿದೆ. ಕಳೆದ ಒಂದು ವಾರದಿಂದ ಇಲ್ಲಿ ಸ್ಟ್ಯಾಚು ತೆಗೆಸ್ತೀನಿ ಅನ್ನೋ ಗುಸು ಗುಸು ನಡೆಯುತ್ತಿತ್ತು. ಅತೃಪ್ತ ಆತ್ಮಗಳಿಗೆ ವಿಷ್ಣುದಾದರನ್ನ ಸಹಿಸಿಕೊಳ್ಳೋದಕ್ಕೆ ಆಗುತ್ತಿಲ್ಲ. ಕಳೆದ ಬಾರಿ ಸಹ ಇದೇ ರೀತಿ ಪ್ರತಿಮೆ ತೆಗೆದು ಅವಮಾನಿಸಲಾಗಿತ್ತು. ನಂತರ ಅಭಿಮಾನಿಗಳು ಮತ್ತೆ ಪ್ರತಿಮೆ ಪುನರ್ ಪ್ರತಿಷ್ಠಾಪಿಸಿದ್ದರು. ಸಾರಾ ಗೋವಿಂದ್, ಎನ್.ಆರ್.ರಮೇಶ್ ಗೆ ವಿಷ್ಣುವರ್ಧನ್ ಕಂಡ್ರೆ ಆಗಲ್ಲ. ವಿಷ್ಣು ಪ್ರತಿಮೆ ಇಟ್ರೆ ಅವರಿಗೆ ಕೆಲವರು ಕಿವಿ ಚುಚ್ಚೊ ಕೆಲಸ ಮಾಡ್ತಾರೆ. ಕಂಪ್ಲೇಂಟ್ ಕೊಡೋದಕ್ಕೆ ಅಭಿಮಾನಿ ಪದಾದಿಕಾರಿಗಳ ಜೊತೆ ಮಾತಾಡುತ್ತೇವೆ ಎಂದು ವಿಷ್ಣು ಅಭಿಮಾನಿ ರಮೇಶ್ ಗೌಡ ಹೇಳಿದ್ದಾರೆ.

    ವಿಷ್ಣು ಪ್ರತಿಮೆ ತೆರವಿನ ಹಿಂದೆ ಸಾರಾ ಗೋವಿಂದು ಹಾಗೂ ಎನ್.ಆರ್.ರಮೇಶ್ ಹೆಸರು ಕೇಳಿ ಬರುತ್ತಿದೆ. ಕಳೆದ ವರ್ಷವೂ ಇದೇ ರೀತಿ ವಿಷ್ಣು ಸ್ಮಾರಕಕ್ಕೆ ಹಾನಿಯಾಗಿತ್ತು. ಕೂಡಲೇ ಈ ಬಗ್ಗೆ ಕ್ರಮ ತೆಗೆದುಕೊಳ್ಳಬೇಕು. ವಿಷ್ಣು ಸರ್ ಇಂಡಸ್ಟ್ರಿಗೆ ಬಂದಾಗಿನಿಂದಲೂ ಈ ರೀತಿ ಅವರ ವಿರುದ್ಧ ಷಡ್ಯಂತ್ರ ನಡೀತಿದೆ ಎಂದು ರಮೇಶ್ ಗೌಡ ಹೇಳಿದ್ದಾರೆ.

  • ವಿಷ್ಣುವರ್ಧನ್ ಬಗ್ಗೆ ಮಾತಾಡಿದ ವ್ಯಕ್ತಿ ಕ್ಷಮೆಗೆ ಅರ್ಹರಲ್ಲ, ಕ್ಷಮಿಸಲೂ ಬಾರದು: ಸುಮಲತಾ ಕಿಡಿ

    ವಿಷ್ಣುವರ್ಧನ್ ಬಗ್ಗೆ ಮಾತಾಡಿದ ವ್ಯಕ್ತಿ ಕ್ಷಮೆಗೆ ಅರ್ಹರಲ್ಲ, ಕ್ಷಮಿಸಲೂ ಬಾರದು: ಸುಮಲತಾ ಕಿಡಿ

    ಬೆಂಗಳೂರು: ಸ್ಯಾಂಡಲ್‍ವುಡ್ ಸಾಹಸಸಿಂಹ ವಿಷ್ಣುವರ್ಧನ್ ಅವರ ಕುರಿತು ತೆಲುಗು ಚಿತ್ರರಂಗದ ನಟ ವಿಜಯ್ ರಂಗರಾಜು ವಿವಾದಾತ್ಮಹಕ ಹೇಳಿಕೆ ನೀಡಿರುವ ಕುರಿತು ಭಾರೀ ಚರ್ಚೆಯಾಗುತ್ತಿದೆ. ಅಲ್ಲದೆ ಈ ಬಗ್ಗೆ ಕನ್ನಡ ಚಿತ್ರರಂಗದ ಮಂದಿ ನಟನ ವಿರುದ್ಧ ಸಿಡಿದೆದ್ದಿದ್ದಾರೆ. ಅಂತೆಯೇ ಇದೀಗ ನಟಿ, ಸಂಸದೆ ಸುಮಲತಾ ಅಂಬರೀಶ್ ಅವರು ವಿಜಯ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಈ ಸಂಬಂಧ ಸರಣಿ ಟ್ವೀಟ್ ಮಾಡುವ ಮೂಲಕ ರೊಚ್ಚಿಗೆದ್ದ ಸಂಸದೆ, ಕರ್ನಾಟಕದ ಸಾಹಸ ಸಿಂಹ ಡಾ. ವಿಷ್ಣುವರ್ಧನ್ ಅವರ ವ್ಯಕ್ತಿತ್ವ, ಘನತೆ ಏನೆಂಬುವುದು ಚೆನ್ನಾಗಿಯೇ ಗೊತ್ತು ಎಂದು ಕಿಡಿಕಾರಿದ್ದಾರೆ.

    ಟ್ವೀಟ್‍ನಲ್ಲೇನಿದೆ..?
    ಇತ್ತೀಚಿನ ದಿನಗಳಲ್ಲಿ ಜನಪ್ರಿಯ ವ್ಯಕ್ತಿಗಳ ಬಗ್ಗೆ ಇಲ್ಲ ಸಲ್ಲದ ವಿವಾದಾತ್ಮಕ ಹೇಳಿಕೆ ನೀಡಿ ಬಿಟ್ಟಿ ಪ್ರಚಾರ ಪಡೆಯುವುದೇ ಕೆಲವರಿಗೆ ಹವ್ಯಾಸವಾಗಿ ಹೋಗಿದೆ. ಇಡೀ ದೇಶವೇ, ಅದರಲ್ಲೂ ದಕ್ಷಿಣ ಭಾರತೀಯ ಚಿತ್ರ ರಸಿಕರಿಗೆ ನಮ್ಮ ಕರ್ನಾಟಕದ ಸಾಹಸ ಸಿಂಹ ಡಾ. ವಿಷ್ಣುವರ್ಧನ್ ಅವರ ವ್ಯಕ್ತಿತ್ವ, ಘನತೆ ಏನೆಂಬುವುದು ಚೆನ್ನಾಗಿಯೇ ಗೊತ್ತು.

    ವಿಷ್ಣು ನಮ್ಮನ್ನು ದೈಹಿಕವಾಗಿ ದೂರವಾಗಿ ಹತ್ತು ವರುಷಗಳೇ ಕಳೆದರೂ ಅವರ ಮೇಲಿನ ಅಭಿಮಾನ ಎಳ್ಳಷ್ಟೂ ಕಡಿಮೆಯಾಗದಿರುವುದೇ ಅದಕ್ಕೆ ಸಾಕ್ಷಿ. ಯಾರಿಗೂ ತಿಳಿಯದ, ಯಾರೋ ಒಬ್ಬ ಅವರ ಬಗ್ಗೆ ಮನಸ್ಸೋ ಇಚ್ಛೆ ಕೆಲವು ಕೆಟ್ಟ ಪದಗಳಿಂದ ನಿಂದಿಸಿದರೆ ಅದರಿಂದ ನಮ್ಮ ವಿಷ್ಣುವಿನ ಘನತೆಗೆ ಒಂದು ಸಾಸಿವೆ ಕಾಳಷ್ಟು ಧಕ್ಕೆಯಾಗದು!

    ಅದು ಕೇವಲ ಅಂತಹ ಬಾಯಿಬಡುಕ ವ್ಯಕ್ತಿಯ ಕೆಟ್ಟ ಗುಣ ಹಾಗೂ ನೀಚ ಬುದ್ಧಿಯ ಅನಾವರಣವಲ್ಲದೆ ಬೇರೇನಲ್ಲ. ಅದರಲ್ಲೂ ನಮ್ಮನ್ನು ಅಗಲಿದ ವ್ಯಕ್ತಿಯ ಬಗ್ಗೆ ಈ ರೀತಿಯ ತುಚ್ಛವಾಗಿ ಮಾತನಾಡುವುದು ಕ್ಷಮಿಸಲಾಗದ ದೊಡ್ಡ ಅಪರಾಧ. ಇದನ್ನೂ ಓದಿ: ವಿಷ್ಣುವರ್ಧನ್ ಬಗ್ಗೆ ಮಾತಾಡಿದವನ ಚಳಿ ಬಿಡಿಸಿದ ರಾಕಿಭಾಯ್

    ಸರಿಯಾದ ಮನಸ್ಥಿತಿ ಉಳ್ಳವನು, ಒಬ್ಬ ವ್ಯಕ್ತಿಯು ಬದುಕಿದ್ದಾಗಲೇ ಅವರ ಬಗ್ಗೆ ಮಾತನಾಡಿ ಅವರ ಪ್ರತಿಕ್ರಿಯೆ ನಿರೀಕ್ಷಿಸುವುದು ಸರಿಯೇ ಹೊರತು, ಅವರ ನಿಧನದ ನಂತರ ಅವರ ಚಾರಿತ್ರ್ಯಕ್ಕೆ ಮಸಿ ಬಳಿಯುವ ಪ್ರಯತ್ನ, ಕೇವಲ ಹೇಡಿತನದ ಪರಮಾವಧಿ ಅಲ್ಲದೆ ಮತ್ತೇನೂ ಅಲ್ಲ.

    ವಿಷ್ಣುವರ್ಧನ್ ಅವರ ವ್ಯಕ್ತಿತ್ವ, ವರ್ಚಸ್ಸು ಅವರನ್ನು ಪ್ರೀತಿಸುವ ಅಸಂಖ್ಯಾತ ಅಭಿಮಾನಿಗಳಿಗೆ ಗೊತ್ತು. ನಾಯಿ ಬೊಗಳಿದರೆ ದೇವಲೋಕ ಹಾಳಾಗದು ಎಂಬುದಕ್ಕೆ ಇದೊಂದು ಸರಿಯಾದ ಉದಾಹರಣೆ. ಇಂತಹ ‘ಚೀಪ್ ಪಬ್ಲಿಸಿಟಿ’ ಗಾಗಿ ಮನಬಂದಂತೆ ಬಾಯಿ ಹರಟುವ ವ್ಯಕ್ತಿಗಳು ಕ್ಷಮೆ ಕೇಳಲು ಅರ್ಹರಲ್ಲ. ಕ್ಷಮಿಸಲು ಆಗದು, ಕ್ಷಮಿಸಲು ಬಾರದು ಎಂದು ಸರಣಿ ಟ್ವೀಟ್ ಮಾಡುವ ಮೂಲಕ ಸಂಸದೆ ಕಿಡಿಕಾರಿದ್ದಾರೆ.

    ನಟ ಹೇಳಿದ್ದೇನು?
    ತೆಲುಗು ಚಿತ್ರರಂಗದ ನಟ ವಿಜಯ್ ರಂಗರಾಜು ಸಂದರ್ಶನವೊಂದರಲ್ಲಿ ನೀಡಿದ ಹೇಳಿಕೆ ವೈರಲ್ ಆಗಿದೆ. ಇದನ್ನು ಗಮನಿಸಿದ ಸ್ಯಾಂಡಲ್‍ವುಡ್ ತಾರೆಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ದಶಕಗಳ ಹಿಂದೆ ವಿಷ್ಣುವರ್ಧನ್ ಜೊತೆ ನಟಿಸಿದ್ದಾಗಿ ಹೇಳಿಕೊಂಡಿದ್ದು, ಇದೇ ವೇಳೆ ವಿಷ್ಣುವರ್ಧನ್ ಅವರ ನಡತೆ ಬಗ್ಗೆ ಆಕ್ಷೇಪಣೆಯ ಮಾತುಗಳನ್ನಾಡಿದ್ದಾರೆ. ಅಲ್ಲದೆ ಅಂದು ವಿಷ್ಣುವರ್ಧನ್ ಕಾಲರ್ ಹಿಡಿದು ಜಗಳ ಮಾಡಿದ್ದಾಗಿ ಸಹ ಹೇಳಿದ್ದಾರೆ. ಹೀಗಾಗಿ ಆಕ್ರೋಶ ಭುಗಿಲೆದ್ದಿದೆ.

    ವಿಷ್ಣುಸೇನೆ, ವಿಷ್ಟುವರ್ಧನ್ ಅಭಿಮಾನಿಗಳು ನಟನ ವಿರುದ್ಧ ಹಲವು ಕಡೆ ದೂರು ದಾಖಲಿಸಿದ್ದು, ಚಲನಚಿತ್ರ ವಾಣಿಜ್ಯ ಮಂಡಳಿ ಸಹ ದೂರು ದಾಖಲಿಸಿಕೊಂಡಿದೆ. ಅಲ್ಲದೆ ಸ್ಯಾಂಡಲ್‍ವುಡ್ ನಟರು ಸಹ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದೀಗ ಯಶ್ ಈ ಬಗ್ಗೆ ಕಿಡಿಕಾರಿದ್ದಾರೆ.

  • ವಿಷ್ಣುವರ್ಧನ್ ಬಗ್ಗೆ ಮಾತಾಡಿದವನ ಚಳಿ ಬಿಡಿಸಿದ ರಾಖಿ ಭಾಯ್

    ವಿಷ್ಣುವರ್ಧನ್ ಬಗ್ಗೆ ಮಾತಾಡಿದವನ ಚಳಿ ಬಿಡಿಸಿದ ರಾಖಿ ಭಾಯ್

    – ಕ್ಷಮೆ ಕೇಳಿ, ಮಾತು ಹಿಂಪಡೆಯಲು ಆಗ್ರಹ

    ಬೆಂಗಳೂರು: ತೆಲುಗು ನಟ ವಿಜಯ್ ರಂಗರಾಜು ಕನ್ನಡದ ಮೇರು ನಟ ಡಾ.ವಿಷ್ಣುವರ್ಧನ್ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುವ ಮೂಲಕ ವಿವಾದ ಸೃಷ್ಟಿಸಿದ್ದು, ಇದಕ್ಕೆ ಸ್ಯಾಂಡಲ್‍ವುಡ್‍ನಲ್ಲಿ ಭಾರೀ ವಿರೋಧ ವ್ಯಕ್ತವಾಗುತ್ತಿದೆ.

    ನಟರಾದ ಜಗ್ಗೇಶ್, ಸುದೀಪ್, ಯಶ್, ಪುನೀತ್ ರಾಜ್ ಕುಮಾರ್ ಆದಿಯಾಗಿ ಬಹುತೇಕ ನಟ, ನಟಿಯರು ಆಕ್ರೋಶ ಹೊರ ಹಾಕಿದ್ದಾರೆ. ಅಲ್ಲದೆ ಕ್ಷಮೆಯಾಚಿಸಲೇಬೇಕೆಂದು ಒತ್ತಾಯಿಸುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುವ ಮೂಲಕ ಯಶ್ ಕಿಡಿಕಾರಿದ್ದು, ಸರಿ ದಾರಿಯಲ್ಲಿ ನಡೆಯುವವರು ಬೆವರುಹರಿಸಿ ಹಂತ ಹಂತವಾಗಿ ಬೆಳೆದು ಹೆಸರು ಮಾಡಿ ಉಳಿದುಕೊಳ್ಳುತ್ತಾರೆ. ಅಡ್ಡದಾರಿಯಲ್ಲಿ ನಡೆಯುವವರು ಅಂತ ಹೆಸರುಗಳನ್ನು ಬಳಸಿಕೊಳ್ಳಲು ಹೋಗಿ ಬದಿಯಲ್ಲೇ ಉಳಿದುಬಿಡುತ್ತಾರೆ ಎಂದಿದ್ದಾರೆ.

    ವಿಷ್ಣು ಸರ್ ಕನ್ನಡ ನಾಡು ಕಂಡ ಮಹಾನ್ ಸಾಧಕರು. ಅವರ ಶ್ರಮ, ಪ್ರತಿಭೆ ಹಾಗೂ ನಟನೆಯ ಜೊತೆಗೆ ಬದುಕು ಹಾಗೂ ವ್ಯಕ್ತಿತ್ವದಿಂದ ನಮ್ಮ ಮನೆ, ಮನದಲ್ಲಿ ಅಜರಾಮರವಾಗಿರುವವರು. ಅಂತಹ ಸಾಧಕರನ್ನು ನಿಂದಿಸಿ ಹೆಸರು ಮಾಡ ಬಯಸುವ ಹೀನ ಮಟ್ಟಕ್ಕೆ ಇಳಿಯುವವನು ಕಲಾವಿದನಲ್ಲ. ಕನ್ನಡ ಚಿತ್ರರಂಗ ಎಲ್ಲ ಚಿತ್ರರಂಗಗಳಜೊತೆ ಪರಸ್ಪರ ಹೊಂದಾಣಿಕೆ ಹಾಗೂ ಗೌರವವನ್ನು ಕಾಪಾಡಿಕೊಂಡು ಬಂದಿದೆ. ಅದು ಇಂತಹವರಿಂದ ತಪ್ಪು ದಾರಿಗೆ ಹೋಗಬಾರದು. ಆ ವ್ಯಕ್ತಿ ಕ್ಷಮೆ ಕೇಳಿ ತಮ್ಮ ಅಸಮಂಜಸ ಮಾತುಗಳನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದ್ದಾರೆ.

    Posted by Yash on Saturday, December 12, 2020

    ನಟನ ಹೇಳಿಕೆ ಏನು?
    ತೆಲುಗು ಚಿತ್ರರಂಗದ ನಟ ವಿಜಯ್ ರಂಗರಾಜು ಸಂದರ್ಶನವೊಂದರಲ್ಲಿ ನೀಡಿದ ಹೇಳಿಕೆ ವೈರಲ್ ಆಗಿದೆ. ಇದನ್ನು ಗಮನಿಸಿದ ಸ್ಯಾಂಡಲ್‍ವುಡ್ ತಾರೆಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ದಶಕಗಳ ಹಿಂದೆ ವಿಷ್ಣುವರ್ಧನ್ ಜೊತೆ ನಟಿಸಿದ್ದಾಗಿ ಹೇಳಿಕೊಂಡಿದ್ದು, ಇದೇ ವೇಳೆ ವಿಷ್ಣುವರ್ಧನ್ ಅವರ ನಡತೆ ಬಗ್ಗೆ ಆಕ್ಷೇಪಣೆಯ ಮಾತುಗಳನ್ನಾಡಿದ್ದಾರೆ. ಅಲ್ಲದೆ ಅಂದು ವಿಷ್ಣುವರ್ಧನ್ ಕಾಲರ್ ಹಿಡಿದು ಜಗಳ ಮಾಡಿದ್ದಾಗಿ ಸಹ ಹೇಳಿದ್ದಾರೆ. ಹೀಗಾಗಿ ಆಕ್ರೋಶ ಭುಗಿಲೆದ್ದಿದೆ.

    ವಿಷ್ಣುಸೇನೆ, ವಿಷ್ಟುವರ್ಧನ್ ಅಭಿಮಾನಿಗಳು ನಟನ ವಿರುದ್ಧ ಹಲವು ಕಡೆ ದೂರು ದಾಖಲಿಸಿದ್ದು, ಚಲನಚಿತ್ರ ವಾಣಿಜ್ಯ ಮಂಡಳಿ ಸಹ ದೂರು ದಾಖಲಿಸಿಕೊಂಡಿದೆ. ಅಲ್ಲದೆ ಸ್ಯಾಂಡಲ್‍ವುಡ್ ನಟರು ಸಹ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದೀಗ ಯಶ್ ಈ ಬಗ್ಗೆ ಕಿಡಿಕಾರಿದ್ದಾರೆ.

  • ಎಂದೂ ನೀವಿಲ್ಲವೆಂದುಕೊಂಡಿಲ್ಲ, ಅನುದಿನವೂ ನಮ್ಮೊಳಗಿನ ಶಕ್ತಿಯಾಗಿ ಮುನ್ನಡೆಸುತ್ತಿರುವಿರಿ – ಅನಿರುದ್ಧ್

    ಎಂದೂ ನೀವಿಲ್ಲವೆಂದುಕೊಂಡಿಲ್ಲ, ಅನುದಿನವೂ ನಮ್ಮೊಳಗಿನ ಶಕ್ತಿಯಾಗಿ ಮುನ್ನಡೆಸುತ್ತಿರುವಿರಿ – ಅನಿರುದ್ಧ್

    – ‘ಯಜಮಾನ’ನನ್ನು ನೆನಪಿಸಿಕೊಂಡ ಸ್ಯಾಂಡಲ್‍ವುಡ್ ತಾರೆಯರು

    ಬೆಂಗಳೂರು: ಇಂದು ಕನ್ನಡ ನಾಡು ಕಂಡ ಅದ್ಭುತ ನಟ ಸಾಹಸ ಸಿಂಹ್ ವಿಷ್ಣುವರ್ಧನ್ ಅವರ 70ನೇ ವರ್ಷದ ಹುಟ್ಟುಹಬ್ಬ. ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ನಟ ಅನಿರುದ್ಧ್ ಸೇರಿದಂತೆ ಸಿನಿ ರಂಗದ ಕಲಾವಿದರು ವಿಷ್ಣುವರ್ಧನ್ ಅವರ ಜೊತೆಗಿನ ನೆನಪುಗಳನ್ನು ಹಂಚಿಕೊಂಡಿದ್ದಾರೆ.

    ಕನ್ನಡ ಚಿತ್ರರಂಗ ಕಂಡ ಮೇರು ಪ್ರತಿಭೆ ನಮ್ಮನ್ನು ಆಗಲಿ 9 ವರ್ಷಗಳಾಗಿವೆ. ಅವರ ನೆನಪಿಗಾಗಿ ರಾಜ್ಯ ಸರ್ಕಾರ ಮೈಸೂರಿನಲ್ಲಿ ಅವರ ಪುಣ್ಯಸ್ಮಾರಕವನ್ನು ನಿರ್ಮಾಣ ಮಾಡುತ್ತಿದೆ. ಇಂದು ಅವರ ಹುಟ್ಟುಹಬ್ಬದಂದು ಸಾವಿರಾರು ಅಭಿಮಾನಿಗಳು ಅವರನ್ನು ನೆನೆದಿದ್ದಾರೆ.

    https://www.facebook.com/Anirudhofficialpage/posts/394677755265796

    ವಿಷ್ಣು ಅವರ ಹುಟ್ಟುಹ್ಬದ ಪ್ರಯುಕ್ತ ಫೇಸ್‍ಬುಕ್ ಪೋಸ್ಟ್ ಹಾಕಿರುವ ಅನಿರುದ್ಧ್, ಮಗನಾಗಿ, ಅವರ ಗುಣಗಳಿಗೆ ಅಭಿಮಾನಿಯಾಗಿ ಕೋಟಿ ನೆನಪುಗಳು. ಅವರ ಸರಳತನ, ನಿಷ್ಕಲ್ಮಶ ಮನಸ್ಸು, ಮುಗ್ಧತೆ, ಔದಾರ್ಯ, ಸಜ್ಜನಿಕೆ, ಬಹುಶಃ ಒಬ್ಬ ವ್ಯಕ್ತಿ ಮತ್ತೊಬ್ಬರ ಜೀವನಕ್ಕೆ ಸ್ಫೂರ್ತಿಯಾಗಿ ಸಾಧಿಸಲು ಪ್ರಮುಖ ಕಾರಣಕರ್ತರಾಗುವವರೆಂದರೆ ನನಗೆ ಅದು ನೀವೇ. ಎಂದೂ ನೀವಿಲ್ಲವೆಂದುಕೊಂಡಿಲ್ಲ. ಅನುದಿನವೂ ನಮ್ಮೊಳಗಿನ ಶಕ್ತಿಯಾಗಿ ಮುನ್ನಡೆಸುತ್ತಿರುವಿರಿ. ಜನ್ಮದಿನವಿಂದು ಚಿಕ್ಕವನು ನಾನು ನಾನೇನನು ಹೇಳಲಿ. ಎಲ್ಲರಿಗೂ ನಿಮ್ಮ ಆಶೀರ್ವಾದವಿರಲಿ. ಎಂದಿನಂತೆ ಕೈ ಹಿಡಿದು ಮುನ್ನಡೆಸಿ ಎಂದಿದ್ದಾರೆ.

    ನಿನ್ನೆ ವಿಷ್ಣು ಅವರ ಹುಟ್ಟುಹಬ್ಬಕ್ಕೆ ಕಾಮನ್ ಡಿಪಿಯನ್ನು ಬಿಡುಗಡೆ ಮಾಡಿದ್ದ ನಟ ಸುದೀಪ್ ಅವರು, ಅವರನ್ನು ಭೇಟಿ ಮಾಡಲು ಸಮಯದ ಆಶೀರ್ವಾದವಿತ್ತು. ಅವರೊಂದಿಗೆ ಕೆಲಸ ಮಾಡಲು ಸಿನಿಮಾದ ಆಶೀರ್ವಾದವಿತ್ತು. ಎಲ್ಲಕ್ಕಿಂತ ದೊಡ್ಡ ಆಶೀರ್ವಾದ ಅವರು ನನ್ನನ್ನು ನನ್ನ ಹೆಸರಿಂದ ಗುರುತಿಸುತ್ತಿದ್ದರು. ನಾನು ಅವರ ಹುಟ್ಟು ಹಬ್ಬಕ್ಕೆ ಕಾಮನ್ ಡಿಪಿಯನ್ನು ಬಿಡುಗಡೆ ಮಾಡುತ್ತಿರುವುದು ನನಗೆ ಸಿಕ್ಕ ಭಾಗ್ಯ. ಎಂದಿಗೂ ಅವರ ಅಭಿಮಾನಿ ಎಂದು ಟ್ವೀಟ್ ಮಾಡಿದ್ದರು.

    ಇಂದು ವಿಷ್ಣುವರ್ಧನ್ ಅವರ ಜೊತೆ ಇರುವ ತನ್ನ ಬಾಲ್ಯದ ಫೋಟೋ ಹಂಚಿಕೊಂಡಿರುವ ಪುನೀತ್ ಅವರು, ಅವರ 70ನೇ ಹುಟ್ಟುಹಬ್ಬದಂದು ವಿಷ್ಣು ಸರ್ ಅವರನ್ನು ನೆನೆಯುತ್ತಾ ಎಂದು ಬರೆದುಕೊಂಡಿದ್ದಾರೆ. ಜೊತೆಗೆ ಡಾಲಿ ಧನಂಜಯ್ ಅವರು ಟ್ವೀಟ್ ಮಾಡಿ, ನಮ್ಮಲ್ಲಿ ಎಂದಿಗೂ ನೀವು ಶಾಶ್ವತ, ಅವರ ಹುಟ್ಟುಹಬ್ಬದಂದು ವಿಷ್ಣುದಾದನನ್ನು ನೆನೆಯುತ್ತಾ ಎಂದು ಬರೆದುಕೊಂಡಿದ್ದಾರೆ.

    ಇವರ ಜೊತೆಗೆ ನಟ ರಕ್ಷಿತ್ ಶೆಟ್ಟಿ ಟ್ವೀಟ್ ಮಾಡಿ, ನೀವು ನಮ್ಮ ಚಿತ್ರರಂಗದಲ್ಲಿ ಓರ್ವ ಶ್ರೇಷ್ಠ ನಟನಾಗಿ ಉಳಿದುಕೊಂಡಿದ್ದೀರಿ. ನಮ್ಮ ಮನಸ್ಸಿನಲ್ಲಿ ನೀವು ಯಾವಾಗಲೂ ಉಳಿಯುತ್ತೀರಾ ವಿಷ್ಣುವರ್ಧನ್ ಸರ್. ಅಭಿನಯ ಭಾರ್ಗವ, ಸಾಹಸಸಿಂಹ, ಪ್ರೀತಿಯ ವಿಷ್ಣುದಾದ ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು ಎಂದು ಬರೆದುಕೊಂಡಿದ್ದಾರೆ. ಹಿರಿಯ ನಟಿ ಮಾಳವಿಕಾ ಅವಿನಾಶ್, ನಟ ವಸಿಷ್ಠ ಸಿಂಹ, ನಟಿ ಮಾನ್ವಿತಾ ಸೇರಿದಂತೆ ಹಲವು ಅಭಿಮಾನಿಗಳು ವಿಷ್ಣುವರ್ಧನ್ ಅವರನ್ನು ನೆನಪಿಸಿಕೊಂಡಿದ್ದಾರೆ.

  • ಸೆ.15 ರಂದು ವಿಷ್ಣುವರ್ಧನ್ ಸ್ಮಾರಕಕ್ಕೆ ಭೂಮಿ ಪೂಜೆ: ಭಾರತಿ

    ಸೆ.15 ರಂದು ವಿಷ್ಣುವರ್ಧನ್ ಸ್ಮಾರಕಕ್ಕೆ ಭೂಮಿ ಪೂಜೆ: ಭಾರತಿ

    ಬೆಂಗಳೂರು: ಇದೇ ತಿಂಗಳ 15ರಂದು ಮೈಸೂರಿನಲ್ಲಿ ವಿಷ್ಣು ಸ್ಮಾರಕಕ್ಕೆ ಭೂಮಿ ಪೂಜೆ ನೆರವೇರಲಿದೆ ಎಂದು ಭಾರತಿ ವಿಷ್ಣುವರ್ಧನ್ ತಿಳಿಸಿದ್ದಾರೆ.

    ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಭಾರತಿ ವಿಷ್ಣುವರ್ಧನ್ ಹಾಗೂ ಅನಿರುದ್ಧ್ ಭೇಟಿ ಮಾಡಿ ವಿಷ್ಣು ಸ್ಮಾರಕ ನಿರ್ಮಾಣದ ಗುದ್ದಲಿ ಪೂಜೆ ನೆರೆವೇರಿಸುವಂತೆ ಮನವಿ ಮಾಡಿಕೊಂಡರು.

    ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಭಾರತಿ, 11ನೇ ವರ್ಷದ ವಿಷ್ಣುವರ್ಧನ್ ಪುಣ್ಯ ಸ್ಮರಣೆಗೆ ಸಿಂಎಂ ಅವರನ್ನ ಕರೆಯಲು ಬಂದಿದ್ದೇವೆ. ಮೈಸೂರಿನಲ್ಲಿ ವಿಷ್ಣುವರ್ಧನ್ ಸ್ಮಾರಕ ನಿರ್ಮಾಣ ಆಗುತ್ತಿದೆ. ಈ ತಿಂಗಳ 15ರಂದು ಸ್ಮಾರಕದ ಗುದ್ದಲಿ ಪೂಜೆ ಕಾರ್ಯಕ್ರಮವಿದೆ. ಸೂಕ್ತ ಭದ್ರತೆಗಾಗಿ ಮತ್ತು ಉದ್ಘಾಟನಾ ಕಾರ್ಯಕ್ರಮಕ್ಕಾಗಿ ಸಿಎಂಗೆ ಮನವಿ ಮಾಡಿದ್ದೇವೆ ಎಂದರು.

    ಕೋವಿಡ್ ಇರೋ ಕಾರಣ ಸಿ.ಎಂ ಗುದ್ದಲಿಪೂಜೆಗೆ ಬರಲು ಆಗುತ್ತಿಲ್ಲ. ಹೀಗಾಗಿ ಅವರು ಆನ್ ಲೈನ್ ಮೂಲಕ ವಿಷ್ಣು ಸ್ಮಾರಕದ ಶಂಕುಸ್ಥಾಪನೆ ಮಾಡಲಿದ್ದಾರೆ ಎಂದು ಅವರು ತಿಳಿಸಿದರು.

    ಇದೇ ವೇಳೆ ಡ್ರಗ್ಸ್ ಮಾಫಿಯಾ ಬಗ್ಗೆ ಮಾತನಾಡಿದ ಅನಿರುದ್ಧ, ನಮಗೆ ಡ್ರಗ್ಸ್ ಮಾಫಿಯಾ, ಡ್ರಗ್ಸ್ ಜಾಲದ ಬಗ್ಗೆ ಅರಿವಿಲ್ಲ. ಈ ವಿಚಾರ ಮನಸ್ಸಿಗೆ ತುಂಬಾ ಬೇಜಾರಾಗುತ್ತಿದೆ. ಇಡೀ ಜಗತ್ತಿನಲ್ಲೇ ಈ ಮಾಫಿಯಾ ಇರಬಾರದು. ಯುವ ಪೀಳಿಗೆಯನ್ನ ಇದರಿಂದ ರಕ್ಷಿಸಬೇಕು ಎಂದು ಇದೇ ವೇಳೆ ಮನವಿ ಮಾಡಿಕೊಂಡರು.

  • ಸಾಹಸಸಿಂಹ ವಿಷ್ಣುವರ್ಧನ್ ಅಭಿಮಾನಿ ಆತ್ಮಹತ್ಯೆ

    ಸಾಹಸಸಿಂಹ ವಿಷ್ಣುವರ್ಧನ್ ಅಭಿಮಾನಿ ಆತ್ಮಹತ್ಯೆ

    ದಾವಣಗೆರೆ: ಸಾಹಸಿಂಹ ವಿಷ್ಣುವರ್ಧನ್ ಅಭಿಮಾನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.

    ಆತ್ಮಹತ್ಯೆ ಮಾಡಿಕೊಂಡಿರುವವರನ್ನು ಲೋಕೇಶ್(52) ಎಂದು ಗುರುತಿಸಲಾಗಿದೆ. ಇವರು ದಾವಣಗೆರೆಯ ಕೆಟಿಜೆ ನಗರದ ಡಾಂಗೇ ಪಾರ್ಕ್ ಬಳಿ ಇರುವ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

    ಸಾಹಸಸಿಂಹ ವಿಷ್ಣು ಅಭಿಮಾನಿಯಾಗಿ ಮಿಮಿಕ್ರಿ ಮಾಡುತ್ತಿದ್ದ ಲೋಕೇಶ್ ಅವರು ನಗರದ ಕೆಎಸ್‌ಆರ್‌ಟಿಸಿ ಮುಂಭಾಗ ಬೀಡ ಅಂಗಡಿ ನಡೆಸುತ್ತಿದ್ದರು. ಸಾಲದ ಬಾಧೆ ಹಿನ್ನೆಲೆಯಲ್ಲಿ ನೇಣಿಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.

    ಕೆಟಿಜೆ ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

  • ಕನ್ನಡ ಚಿತ್ರರಂಗ ಇರುವವರೆಗೂ ವಿಷ್ಣು ಸರ್ ಜೀವಂತವಾಗಿ ಇರುತ್ತಾರೆ: ಕಿಚ್ಚ

    ಕನ್ನಡ ಚಿತ್ರರಂಗ ಇರುವವರೆಗೂ ವಿಷ್ಣು ಸರ್ ಜೀವಂತವಾಗಿ ಇರುತ್ತಾರೆ: ಕಿಚ್ಚ

    ಬೆಂಗಳೂರು: ಕನ್ನಡ ಚಿತ್ರರಂಗ ಇರುವವರೆಗೂ ಸಾಹಸ ಸಿಂಹ ವಿಷ್ಣುವರ್ಧನ್ ಅವರು ಜೀವಂತವಾಗಿ ಇರುತ್ತಾರೆ ಎಂದು ಕಿಚ್ಚ ಸುದೀಪ್ ಅವರು ಟ್ವೀಟ್ ಮಾಡಿದ್ದಾರೆ.

    ಕಿಚ್ಚ ಸದಾ ಟ್ವಿಟ್ಟರ್ ನಲ್ಲಿ ಸಕ್ರಿಯವಾಗಿ ಇರುತ್ತಾರೆ. ಅಭಿಮಾನಿಗಳ ಜೊತೆ ಚಾಟ್ ಮಾಡುತ್ತಾರೆ. ಅವರ ಹುಟ್ಟುಹಬ್ಬಕ್ಕೆ ವಿಶ್ ಮಾಡುತ್ತಿರುತ್ತಾರೆ. ಈಗ ಕಳೆದ ಮೇ 23ಕ್ಕೆ ಡಾ. ವಿಷ್ಣುವರ್ಧನ್ ಅವರು ಬಣ್ಣ ಹಚ್ಚಿ 48 ವರ್ಷಗಳು ಕಳೆದಿವೆ. ಈ ವಿಚಾರವಾಗಿಯೂ ಕೂಡ ಕಿಚ್ಚ ಟ್ವೀಟ್ ಮಾಡಿದ್ದಾರೆ.

    ಈ ಸುಂದರವಾದ ಕ್ಷಣಗಳನ್ನು ಸೆರೆಹಿಡಿಯಲು ಆ ಕ್ಯಾಮೆರಗಳು ಅದೃಷ್ಟ ಮಾಡಿದ್ದವು. ಅವುಗಳಿಗೆ ಅಂದು ಗೊತ್ತಿರಲಿಲ್ಲ ಇಂದು ನಾವು ಸೆರೆಹಿಡಿಯುತ್ತಿರುವ ವ್ಯಕ್ತಿ ಮುಂದೇ ಒಂದು ದಿನ ಲೆಜೆಂಡ್ ಆಗಿ ಬೆಳೆಯುತ್ತಾರೆ ಎಂದು. ನಾಗರಹಾವು ಸಿನಿಮಾ, ನಿರ್ದೇಶಕ ಪುಟ್ಟಣ್ಣ ಕಣಗಾಲ್ ಅವರು ಹಾಗೂ ವಿಷ್ಣು ಸರ್ ಅವರು ಕನ್ನಡ ಚಿತ್ರರಂಗ ಇರುವವರೆಗೂ ಜೀವಂತವಾಗಿ ಇರುತ್ತಾರೆ ಎಂದು ಕಿಚ್ಚ ಟ್ವೀಟ್ ಮಾಡುವ ಮೂಲಕ ತಿಳಿಸಿದ್ದಾರೆ.

    ಈ ವಿಚಾರವಾಗಿ ವಿಷ್ಣುವರ್ಧನ್ ಅವರ ಟ್ವಿಟ್ಟರ್ ಫ್ಯಾನ್ಸ್ ಪೇಜ್ ಒಂದು ಯಾಜಮಾನರು ನಾಗರಹಾವು ಚಿತ್ರಕ್ಕಾಗಿ ಬಣ್ಣಹಚ್ಚಿ ಕ್ಯಾಮೆರಾ ಎದುರು ನಿಂತಿದಕ್ಕೆ ಇಂದಿಗೆ 48 ವರ್ಷ ಎಂದು ಬರೆದು ಟ್ವೀಟ್ ಮಾಡಿದ್ದಾರೆ. ಇದಕ್ಕೆ ಕಿಚ್ಚ ರೀಟ್ವೀಟ್ ಮಾಡಿದ್ದಾರೆ. ಇದಕ್ಕೆ ಸಂತಸ ವ್ಯಕ್ತಪಡಿಸಿರುವ ಕಿಚ್ಚ ಮತ್ತು ವಿಷ್ಣುವರ್ದನ್ ಅಭಿಮಾನಿಗಳು, ನೀವು ಕೂಡ ದಾದನ ಹಾಗೇ ಅಣ್ಣ ಎಂದು ಕಮೆಂಟ್ ಮಾಡಿದ್ದಾರೆ.

    ನಾಗರಹಾವು ಚಿತ್ರ 1972ರಲ್ಲಿ ಬಿಡುಗಡೆಯಾಗಿತ್ತು. ಇದರಲ್ಲಿ ಮೊದಲ ಬಾರಿಗೆ ವಿಷ್ಣುವರ್ದನ್ ಅವರು ನಾಯಕ ನಟನಾಗಿ ಅಭಿನಯಿಸಿದ್ದರು. ಈ ಸಿನಿಮಾವನ್ನು ಪುಟ್ಟಣ್ಣ ಕಣಗಾಲ್ ನಿರ್ದೇಶನ ಮಾಡಿದ್ದು, ಎನ್ ವೀರಸ್ವಾಮಿ ಅವರು ನಿರ್ಮಾಣ ಮಾಡಿದ್ದರು. ಓರ್ವ ವಿದ್ಯಾರ್ಥಿ ಮತ್ತು ಶಿಕ್ಷರ ನಡುವಿನ ಬಾಂಧವ್ಯವನ್ನು ಈ ಸಿನಿಮಾದಲ್ಲಿ ಚೆನ್ನಾಗಿ ತೋರಿಸಲಾಗಿತ್ತು. ವಿಜಯ್ ಭಾಸ್ಕರ್ ಅವರ ಸಂಗೀತದಲ್ಲಿ ಮೂಡಿ ಬಂದಿದ್ದ ಹಾವಿನ ದ್ವೇಷ 12 ವರುಷ ಎಂಬ ಹಾಡು, ಚಿಗರು ಮೀಸೆ ಹುಡುಗ ರಾಮಾಚಾರಿಯನ್ನು ಕನ್ನಡಿಗರು ಒಪ್ಪಿ ಅಪ್ಪಿ ಮುದ್ದಾಡಿದ್ದರು.

    ಸುದೀಪ್ ಅವರು ವಿಷ್ಣವರ್ಧನ್ ಅವರ ಅಪ್ಪಟ ಅಭಿಮಾನಿಯಾಗಿದ್ದಾರೆ. ಸದ್ಯ ಕಿಚ್ಚನ `ಕೋಟಿಗೊಬ್ಬ-3′ ಚಿತ್ರ ಬಿಡುಗಡೆಗೆ ಸಿದ್ಧವಾಗಿದ್ದು, ಈ ಕೊರೊನಾ ವೈರಸ್ ಲಾಕ್‍ಡೌನ್ ನಿಂದ ಮುಂದಕ್ಕೆ ಹೋಗಿದೆ. ಈ ಸಿನಿಮಾದ ನಂತರ ಸುದೀಪ್ ಅವರು ಅನೂಪ್ ಭಂಡಾರಿ ನಿರ್ದೇಶನದ `ಫ್ಯಾಂಟಮ್’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಕಿಚ್ಚ ವಿಕ್ರಾಂತ್ ರೋಣ ಎಂಬ ಖಡಕ್ ಅಧಿಕಾರಿಯ ಪಾತ್ರ ಮಾಡಲಿದ್ದಾರೆ. ಚಿತ್ರದ ಮೊದಲ ಪೋಸ್ಟರ್ ಈಗಾಗಲೇ ಬಿಡುಗಡೆಯಾಗಿದೆ.