Tag: Vishwa Hindu Parishad

  • ಗೋವು ಕಳ್ಳರನ್ನು ಬಂಧಿಸಿ – ಶಿವಮೊಗ್ಗದ್ದಲ್ಲಿ ವಿಎಚ್‍ಪಿ, ಭಜರಂಗ ದಳ ಪ್ರತಿಭಟನೆ

    ಗೋವು ಕಳ್ಳರನ್ನು ಬಂಧಿಸಿ – ಶಿವಮೊಗ್ಗದ್ದಲ್ಲಿ ವಿಎಚ್‍ಪಿ, ಭಜರಂಗ ದಳ ಪ್ರತಿಭಟನೆ

    ಶಿವಮೊಗ್ಗ: ಜಿಲ್ಲೆಯ ಸಾಗರ ತಾಲೂಕಿನ ಗ್ರಾಮಾಂತರ ಹಾಗೂ ನಗರ ವ್ಯಾಪ್ತಿಯಲ್ಲಿ ನಿರಂತರ ಗೋವು ಕಳ್ಳತನ ನಡೆಯುತ್ತಿದೆ. ಗೋವುಗಳ ಕಳ್ಳ ಸಾಗಾಣಿಕೆ ತಡೆಯಬೇಕು ಮತ್ತು ಮಾರಿಕಾಂಬಾ ದೇವಸ್ಥಾನದ ಎದುರು ಮಲಗಿದ್ದ ಗೋವು ಕದ್ದೊಯ್ದ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗ ದಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

    ಮಾರಿಕಾಂಬಾ ದೇವಾಲಯದ ಎದುರು ಗೋವಿಗೆ ಪೂಜೆ ಸಲ್ಲಿಸಿ ಮೆರವಣಿಗೆ ಹೊರಟ ಕಾರ್ಯಕರ್ತರು ಮಾರ್ಕೆಟ್ ರಸ್ತೆ ಮಾರ್ಗವಾಗಿ ಬಿ.ಹೆಚ್.ರಸ್ತೆಯ ಶಿವಪ್ಪ ನಾಯಕ ವೃತ್ತ ರಾಷ್ಟೀಯ ಹೆದ್ದಾರಿಯಲ್ಲಿ ಸುಮಾರು ಒಂದು ಗಂಟೆಗಳ ಕಾಲ ರಸ್ತೆತಡೆ ನಡೆಸಿ ಪ್ರತಿಭಟನೆ ನಡೆಸುವ ಮೂಲಕ ಗೋವು ಕಳ್ಳರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ರಿಲ್ಯಾಕ್ಸ್ ಮೂಡ್​ನಲ್ಲಿರುವ ಹೇಮ ಮಾಲಿನಿ, ಧರ್ಮೇಂದ್ರ

    ಸಾಗರ ತಾಲೂಕಿನ ಗ್ರಾಮಾಂತರ ಭಾಗ ಹಾಗೂ ನಗರ ಭಾಗದಲ್ಲಿ ನಡೆಯುತ್ತಿರುವ ಗೋಹತ್ಯೆ ಮತ್ತು ಗೋವು ಕಳ್ಳ ಸಾಗಾಣಿಕೆ ತಡೆಯುವಲ್ಲಿ ಪೆÇಲೀಸ್ ಇಲಾಖೆ ಸಂಪೂರ್ಣ ವಿಫಲವಾಗಿದೆ.

    ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ ಹಾಗೂ ಸ್ಥಳೀಯ ನಗರ ಸಭೆಯಲ್ಲಿ ಬಿಜೆಪಿ ಆಡಳಿತವಿದೆ. ಅಧಿಕಾರಕ್ಕೆ ಬರುವ ಸಂದರ್ಭದಲ್ಲಿ ಹಿಂದೂಗಳನ್ನು ಬಳಸಿಕೊಂಡು, ಹಿಂದುತ್ವ, ಗೋಸಂರಕ್ಷಣೆ ಬಗ್ಗೆ ಮಾತನಾಡುವ ಶಾಸಕರು, ನಗರಸಭೆ ಆಡಳಿತ ಈಗ ಗೋವು ಕಳ್ಳ ಸಾಗಾಣಿಕೆ ನಡೆಯುತ್ತಿದ್ದರೂ ಕ್ರಮ ಕೈಗೊಳ್ಳಲು ಹಿಂದೆ ಸರಿದಿರುವುದು ನಾಚಿಕೆಯ ಸಂಗತಿ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: KFC ತಿರಸ್ಕರಿಸಿ ಅಭಿಯಾನಕ್ಕೆ ತಮಿಳಿಗರ ಬೆಂಬಲ

  • ಸಾರ್ವಜನಿಕ ಗಣೇಶೋತ್ಸವ ಆಚರಿಸಲು ಮುಕ್ತ ಅವಕಾಶ ನೀಡಿ: ವಿಶ್ವ ಹಿಂದು ಪರಿಷದ್ ಆಗ್ರಹ

    ಸಾರ್ವಜನಿಕ ಗಣೇಶೋತ್ಸವ ಆಚರಿಸಲು ಮುಕ್ತ ಅವಕಾಶ ನೀಡಿ: ವಿಶ್ವ ಹಿಂದು ಪರಿಷದ್ ಆಗ್ರಹ

    ಬೆಂಗಳೂರು: ಕೋವಿಡ್ ನಿಯಮಗಳನ್ನು ಪಾಲಿಸಿಕೊಂಡು ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಮುಕ್ತ ಅವಕಾಶ ನೀಡಬೇಕೆಂದು ವಿಶ್ವ ಹಿಂದು ಪರಿಷದ್ ಆಗ್ರಹಿಸಿದೆ.

    ಹಿಂದುಗಳ ಪ್ರಮುಖ ಹಬ್ಬಗಳಲ್ಲಿ ಒಂದಾದ ಶ್ರೀ ಗಣೇಶೋತ್ಸವವನ್ನು ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿಕೊಂಡು ಸಾರ್ವಜನಿಕ ಪೆಂಡಾಲುಗಳಲ್ಲಿ ಗಣೇಶೋತ್ಸವ ನಡೆಸಲು ಕಳೆದ ವರ್ಷ ಅವಕಾಶ ನೀಡಲಾಗಿತ್ತು.

    ಈ ವರ್ಷವೂ ಸಹ ಭಕ್ತರ ಭಾವನೆಗಳಿಗೆ ಧಕ್ಕೆ ಯಾಗದಂತೆ ವಿಘ್ನ ವಿನಾಶಕನಾದ ಶ್ರೀ ಗಣೇಶನ ಪರಂಪರಾಗತ ಉತ್ಸವವನ್ನು (ಕರೋನಾ ನಿಯಮಗಳನ್ನು ಪಾಲಿಸಿ ಕೊಂಡು) ಸಾರ್ವಜನಿಕವಾಗಿ ಪೆಂಡಾಲುಗಳಲ್ಲಿ ಆಚರಿಸಲು ಮುಕ್ತ ಅವಕಾಶ ನೀಡಬೇಕೆಂದು ವಿ.ಹಿಂ.ಪ ಆಗ್ರಹ ಪೂರ್ವಕವಾಗಿ ರಾಜ್ಯ ಸರ್ಕಾರಕ್ಕೆ ವಿನಂತಿ ಮಾಡುತ್ತದೆ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ಕೇಶವ ಹೆಗಡೆ ಹೇಳಿದ್ದಾರೆ. ಇದನ್ನೂ ಓದಿ: ತಾಲಿಬಾನಿಗಳನ್ನ RSS, ಬಜರಂಗದಳಕ್ಕೆ ಹೋಲಿಸಿದ ಕವಿ ಮುನ್ವರ್ ರಾಣಾ

  • ಸಂಘಟನೆಯ ಮೂಲಕ ದೇಶವನ್ನು ಒಗ್ಗೂಡಿಸುವ ಕೆಲಸವಾಗ್ಬೇಕು: ಬೆಕ್ಕಿನ ಕಲ್ಮಠ ಶ್ರೀ

    ಸಂಘಟನೆಯ ಮೂಲಕ ದೇಶವನ್ನು ಒಗ್ಗೂಡಿಸುವ ಕೆಲಸವಾಗ್ಬೇಕು: ಬೆಕ್ಕಿನ ಕಲ್ಮಠ ಶ್ರೀ

    ಶಿವಮೊಗ್ಗ: ಜಾತಿ-ಜಾತಿಗಳ ಮೂಲಕ ಸಮಾಜ ವಿಘಟನೆಯಾಗಿದ್ದು ಇದನ್ನು ಬಿಟ್ಟು ಪ್ರತಿಯೊಬ್ಬರು ಸಂಘಟನೆಯ ಮೂಲಕ ದೇಶವನ್ನು ಒಂದು ಕೂಡಿಸುವ ಕೆಲಸ ಆಗಬೇಕು ಎಂದು ಬೆಕ್ಕಿನ ಕಲ್ಮಠದ ಡಾ||ಶ್ರೀ ಮಲ್ಲಿಕಾರ್ಜುನ ಮುರುಘ ರಾಜೇಂದ್ರ ಮಹಾಸ್ವಾಮಿಗಳು ಹೇಳಿದರು.

    ಇತ್ತೀಚೆಗೆ ನಡೆದ ಪ್ರಾಂತ ಬೈಠಕ್ ಗೆ ಚಾಲನೆ ಕೊಟ್ಟು ಮಾತನಾಡಿದ ಅವರು, ಸಂಘಟನೆಯಲ್ಲಿ ಬಲವಿದೆ ಎಂಬುದು ನಿರಂತರವಾಗಿ ಸಾಬೀತಾಗುತ್ತಿದೆ. ಇದರಿಂದ ಪ್ರತಿಯೊಬ್ಬರು ಸಂಘಟನೆಯ ಅಡಿಯಲ್ಲಿ ಬಂದಾಗ ಸದೃಢ ಸಮಾಜ ನಿರ್ಮಾಣವಾಗುತ್ತದೆ ಎಂದರು.

    ಬೈಠಕ್ ನಲ್ಲಿ ಕಳೆದ 6 ತಿಂಗಳಲ್ಲಿ ಮಾಡಿದ ಸೇವಾ ವರದಿಯನ್ನು ಪಡೆಯಲಾಯಿತು ಮತ್ತು ಮುಂದಿನ ಕಾರ್ಯ ಯೋಚನೆ ಮಾಡಲಾಯಿತು. ವಿಶ್ವ ಹಿಂದೂ ಪರಿಷದ್ ಕೇಂದ್ರೀಯ ಸಮಿತಿಯ ಅನುಮತಿಯನ್ನು ಪಡೆದು ಲಾಂಛನ (ಲೋಗೋ)ವನ್ನು ಬಳಸಬೇಕೆಂದು ನಿರ್ಣಯಿಸಲಾಯಿತು.

    ವಿಶ್ವ ಹಿಂದೂ ಪರಿಷತ್ ದಕ್ಷಿಣ ಪ್ರಾಂತ ಬೈಠಕ್ ನಲ್ಲಿ ಅಖಿಲ ಭಾರತೀಯ ಸಹ ಪ್ರಧಾನ ಕಾರ್ಯದರ್ಶಿ ಸ್ಥಾನು ಮಾಲಯನ್, ಬೆಂಗಳೂರು ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ಕೇಶವ್ ಹೆಗಡೆ ಜಿ ,ದಕ್ಷಿಣ ಪ್ರಾಂತ ಸಂಘಟನಾ ಕಾರ್ಯದರ್ಶಿ ಬಸವರಾಜ್, ಸರ್ಜಿ ಕಲ್ಯಾಣ ಮಂಟಪದ ಮಾಲೀಕರು ಪುಷ್ಪ ರಮೇಶ್, ದಕ್ಷಿಣ ಪ್ರಾಂತ ಕಾರ್ಯಾಧ್ಯಕ್ಷ ಎಂ ಬಿ ಪುರಾಣಿಕ, ಪ್ರಾಂತ ಕಾರ್ಯದರ್ಶಿ ಜಗನ್ನಾಥ್ ಶಾಸ್ತ್ರಿ ಪ್ರಾಂತ ಉಪಾಧ್ಯಕ್ಷರಾದ ಕುಸುಮನರಾಯಣಾಚಾರ್, ರಾಮಪ್ಪ ಜಿ, ಟಿ.ಎ. ಪಿ. ಶೆಣೈ ಜಿ, ಶಿವಮೊಗ್ಗ ಜಿಲ್ಲಾ ಅಧ್ಯಕ್ಷ ವಾಸುದೇವ್, ಪ್ರಾಂತ ಸಹ ಕೋಶಾಧ್ಯಕ್ಷರು ದೀಪಕ್ ರಾಜ ಗೋಪಾಲ್ ಮತ್ತು ಕಾರ್ಯಕರ್ತರು ಇದ್ದರು.

  • ಹಿಂದೂ ಧಾರ್ಮಿಕ ದತ್ತಿಯಿಂದ ಮಸೀದಿ, ಮದರಸಾಗಳಿಗೆ ತಸ್ತಿಕ್ ಭತ್ತೆ ನೀಡಲು ನಿರ್ಧಾರ- ವಿಹೆಚ್‍ಪಿ ವಿರೋಧ

    ಹಿಂದೂ ಧಾರ್ಮಿಕ ದತ್ತಿಯಿಂದ ಮಸೀದಿ, ಮದರಸಾಗಳಿಗೆ ತಸ್ತಿಕ್ ಭತ್ತೆ ನೀಡಲು ನಿರ್ಧಾರ- ವಿಹೆಚ್‍ಪಿ ವಿರೋಧ

    – ನಿರ್ಧಾರ ಹಿಂಪಡೆಯಲು ಆಗ್ರಹ

    ಮಂಗಳೂರು: ರಾಜ್ಯದಲ್ಲಿ ಕೋವಿಡ್ 19 ಸೋಂಕಿನಿಂದಾಗಿ ಅರ್ಚಕರು ಆರ್ಥಿಕ ಸಂಕಷ್ಟಕ್ಕೆ ಒಳಗಾಗಿರುವ ಕಾರಣ ಸರ್ಕಾರದಿಂದ ತಸ್ತಿಕ್ ಭತ್ತೆ ನೀಡಲು ಆದೇಶಿಸಿದನ್ನು ವಿಶ್ವ ಹಿಂದೂ ಪರಿಷತ್ ಸ್ವಾಗತಿಸುತ್ತದೆ. ಆದರೆ ಅದೇ ಆದೇಶದ ಪ್ರಕಾರ ತಸ್ತಿಕ್ ಹಣವನ್ನು ಹಿಂದೂ ಧಾರ್ಮಿಕ ದತ್ತಿ ಇಲಾಖೆಯಿಂದ ದಕ್ಷಿಣ ಕನ್ನಡ ಜಿಲ್ಲೆಯ 41 ಮಸೀದಿ, ಮದರಸಾದ ಮೌಲ್ವಿಗಳಿಗೆ ನೀಡಲು ನಿರ್ಧರಿಸಿದ್ದನ್ನು ವಿಶ್ವ ಹಿಂದೂ ಪರಿಷದ್ ವಿರೋಧಿಸುತ್ತದೆ.

    ದೈವಸ್ಥಾನ, ದೇವಸ್ಥಾನದ ಹಣವನ್ನು ಹಿಂದೂಗಳಿಗೆ ಮತ್ತು ದೇವಸ್ಥಾನದ ಕಾರ್ಯಗಳಿಗೆ ಮಾತ್ರ ಉಪಯೋಗಿಸಬೇಕು ವಿನಃ ಮಸೀದಿ, ಮದರಸಾಗಳಿಗೆ ಉಪಯೋಗಿಸುವುದನ್ನು ಖಂಡಿಸುವ ಮೂಲಕ ಈ ನಿರ್ಧಾರವನ್ನು ಹಿಂಪಡೆಯಬೇಕೆಂದು ಧಾರ್ಮಿಕ ದತ್ತಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಮನವಿ ಸಲ್ಲಿಸಲಾಯಿತು.

    ಮನವಿಗೆ ಸ್ಪಂದಿಸಿದ ಸಚಿವರು ನಿರ್ಧಾರವನ್ನು ಹಿಂದೆ ಪಡೆಯುವುದಾಗಿ ಭರವಸೆ ಕೊಟ್ಟರು. ವಿಶ್ವ ಹಿಂದೂ ಪರಿಷದ್ ವಿಭಾಗ ಕಾರ್ಯದರ್ಶಿ ಶರಣ್ ಪಂಪ್ ವೆಲ್, ಜಿಲ್ಲಾ ಅಧ್ಯಕ್ಷ ಗೋಪಾಲ್ ಕುತ್ತಾರ್, ಜಿಲ್ಲಾ ಕಾರ್ಯದರ್ಶಿ ಶಿವಾನಂದ್ ಮೆಂಡನ್, ಜಿಲ್ಲಾ ಉಪಾಧ್ಯಕ್ಷರು ಮನೋಹರ್ ಸುವರ್ಣ, ಜಿಲ್ಲಾ ಸಂಚಾಲಕ್ ಪುನೀತ್ ಅತ್ತಾವರ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.  ಇದನ್ನೂ ಓದಿ: ಕೈಗಾರಿಕೆಗಳು, ಆಸ್ಪತ್ರೆಗಳಿಗೆ ಆಮ್ಲಜನಕ ಸರಬರಾಜು ಮೇಲುಸ್ತುವಾರಿಗೆ ಜಿಲ್ಲೆಗಳಲ್ಲಿ ನೋಡಲ್ ಅಧಿಕಾರಿ: ಶೆಟ್ಟರ್

  • ಒಂದೇ ದಿನ 210 ಮಂದಿಗೆ ಕೊರೊನಾ- ಬೆಳ್ತಂಗಡಿಯ ಕ್ರೈಸ್ತ ಆಶ್ರಮಕ್ಕೆ ವಿಎಚ್‍ಪಿ ನೆರವು

    ಒಂದೇ ದಿನ 210 ಮಂದಿಗೆ ಕೊರೊನಾ- ಬೆಳ್ತಂಗಡಿಯ ಕ್ರೈಸ್ತ ಆಶ್ರಮಕ್ಕೆ ವಿಎಚ್‍ಪಿ ನೆರವು

    ಮಂಗಳೂರು: ಒಂದೇ ದಿನ 210 ಮಂದಿಗೆ ಕೊರೊನಾ ಸೋಂಕು ತಗುಲುವ ಮೂಲಕ ಕೊರೊನಾ ಅಬ್ಬರದಿಂದ ನಲುಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ನೆರಿಯಾ ಸಿಯೋನ್ ಆಶ್ರಮಕ್ಕೆ ನೆರಿಯ ವಿಶ್ವ ಹಿಂದೂ ಪರಿಷತ್ ಘಟಕ ನೆರವಾಗಿದೆ.

    ಸುಮಾರು 270 ಜನ ನಿರ್ಗತಿಕರು ಹಾಗೂ ವೃದ್ಧರಿರುವ ಈ ಆಶ್ರಮದಲ್ಲಿ ನಿನ್ನೆ ಬರೋಬ್ಬರಿ 210 ಮಂದಿಗೆಪಾಸಿಟಿವ್ ಆಗಿತ್ತು. ಹೀಗಾಗಿ ಇಂದು ವಿಎಚ್‍ಪಿ ಕಾರ್ಯಕರ್ತರು ಆಶ್ರಮವನ್ನು ಸಂಪೂರ್ಣ ಸ್ಯಾನಿಟೈಸೇಷನ್ ಮಾಡಿದ್ದಾರೆ. ಪಿಪಿಇ ಕಿಟ್ ಧರಿಸಿದ ಕಾರ್ಯಕರ್ತರು ತಮ್ಮ ಸ್ವಂತ ಖರ್ಚಿನಿಂದಲೇ ಆಶ್ರಮ, ಗೋಶಾಲೆಯನ್ನು ಸ್ಯಾನಿಟೈಸೇಷನ್ ಮಾಡಿದ್ದು, ಗೋವುಗಳ ಆಹಾರ ಆರೈಕೆಗೂ ವ್ಯವಸ್ಥೆ ಮಾಡಿದ್ದಾರೆ. ಇದನ್ನೂ ಓದಿ: ವಿಶೇಷ ಚೇತನ ಮಕ್ಕಳ ಶಾಲೆಯ ನೆರವಿಗೆ ನಿಂತ ನಟ ಸುದೀಪ್

    ಸಿಯೋನ್ ಆಶ್ರಮ ಸಹಜ ಸ್ಥಿತಿಗೆ ಬರುವವರೆಗೂ ಈ ಸೇವೆ ಮುಂದುವರಿಯಲಿದೆ ಎಂದು ವಿಎಚ್‍ಪಿ ನೆರಿಯ ಘಟಕದ ಉಪಾಧ್ಯಕ್ಷ ದೀಕ್ಷಿತ್ ನೆರಿಯ ಹೇಳಿದ್ದಾರೆ. ಕ್ರೈಸ್ತ ಸಮುದಾಯದ ಈ ಸಿಯೋನ್ ಆಶ್ರಮಕ್ಕೆ ವಿಎಚ್‍ಪಿ ನೆರವು ನೀಡಿರುವುದು ಇದೀಗ ಎಲ್ಲರ ಪ್ರಶಂಸೆಗೆ ಕಾರಣವಾಗಿದೆ.

  • ಕೋವಿಡ್ ಸಮಯದಲ್ಲಿ ವಿಎಚ್‍ಪಿಯಿಂದ ಸಮಾಜ ಸೇವೆ – ಏನೇನು ಮಾಡಿದೆ?

    ಕೋವಿಡ್ ಸಮಯದಲ್ಲಿ ವಿಎಚ್‍ಪಿಯಿಂದ ಸಮಾಜ ಸೇವೆ – ಏನೇನು ಮಾಡಿದೆ?

    ಬೆಂಗಳೂರು: ಕೊರೊನಾ ಸಂಕಷ್ಟ ಸಮಯದಲ್ಲಿ ವಿಶ್ವ ಹಿಂದೂ ಪರಿಷದ್ ರಾಜ್ಯಾದ್ಯಂತ ಹಲವು ರೀತಿಯ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದು, ಕೊರೊನಾದಿಂದ ಬಳಲುತ್ತಿರುವ ಅನೇಕ ಮಂದಿಗೆ ಆಕ್ಸಿಜನ್, ಊಟ, ಉಚಿತ ಆಟೋ ಸೇವೆ ಹೀಗೆ ಹಲವು ರೀತಿಯಲ್ಲಿ ಸಹಾಯ ಮಾಡುತ್ತಿದೆ.

    ಈಗ ವಿಶ್ವ ಹಿಂದೂ ಪರಿಷದ್ ಬೆಂಗಳೂರಿನ ಕೇಂದ್ರ ಕಾರ್ಯಾಲಯದಿಂದ ಬೆಳಗಾವಿಗೆ 5, ಶಿವಮೊಗ್ಗಕ್ಕೆ 2, ಚಿತ್ರದುರ್ಗ 1, ಮಂಗಳೂರಿಗೆ 1 ಆಕ್ಸಿಜನ್ ಸಾಂದ್ರಕವನ್ನು ಕಳುಹಿಸಿ ಕೊಡಲಾಗುತ್ತಿದೆ. ಈ ಸಂದರ್ಭದಲ್ಲಿ ಕರ್ನಾಟಕ ದಕ್ಷಿಣ ಪ್ರಾಂತ ಸಂಘಟನಾ ಕಾರ್ಯದರ್ಶಿ ಶ್ರೀಬಸವರಾಜ್ ಜಿ ಅವರು ಸೇವಾಕಾರ್ಯಗಳ ವಿವರ ನೀಡಿದರು.

    ಏನೇನು ಮಾಡಿದೆ?
    * ಎಲ್ಲಾ ಜಿಲ್ಲೆಗಳಲ್ಲಿ ರಕ್ತದಾನ ಶಿಬಿರ
    * ಮಂಗಳೂರಿನಲ್ಲಿ ಕೋವಿಡ್ ರೋಗಿಗಳಿಗೆ ಉಚಿತ ಆಟೋ ಸೇವೆ, ಅದಕ್ಕಾಗಿ ಸಹಾಯವಾಣಿ ಆರಂಭ
    * ಮಂಗಳೂರು, ಸುರತ್ಕಲ್, ಉಪ್ಪಿನಂಗಡಿ, ಮಡಿಕೇರಿ, ಚಿತ್ರದುರ್ಗ, ಮಳವಳ್ಳಿ, ತುಮಕೂರು, ಬೆಳಗಾವಿ, ಹುಬ್ಬಳ್ಳಿ ಹೀಗೆ ಹಲವಾರು ಕಡೆ ಕೋವಿಡ್‍ನಿಂದ ಮೃತಪಟ್ಟವರನ್ನು ಹಿಂದೂ ಪದ್ಧತಿಯಂತೆ ಅಂತ್ಯಕ್ರಿಯೆ.
    * ಶಿವಮೊಗ್ಗದಲ್ಲಿ ಅನ್ನ ಪರಬ್ರಹ್ಮ ಎನ್ನುವ ಕಾರ್ಯಕ್ರಮದಡಿ ಹಸಿದವರಿಗೆ ಪ್ರತಿದಿನ ನಗರದಾದ್ಯಂತ 1 ಸಾವಿರ ಆಹಾರ ಪೊಟ್ಟಣ ವಿತರಣೆ
    * ಬೆಂಗಳೂರಿನಲ್ಲಿ ಕೋವಿಡ್ ಆಗಿ ಹೋ ಐಸೋಲೇಷನ್‍ನಲ್ಲಿ ಇರುವವರಿಗೆ ಮೆಡಿಸನ್ ವಿತರಣೆ.
    * ಚಿತ್ರದುರ್ಗದ ಜಿಲ್ಲೆಯ ಹೊಳಲ್ಕೆರೆಯ ಸರಕಾರಿ ಆಸ್ಪತ್ರೆಗಳಲ್ಲಿರುವ ರೋಗಿಗಳ ಸಂಬಂಧಿಗಳಿಗೆ ಪ್ರತಿನಿತ್ಯ 200 ಆಹಾರ ಪೊಟ್ಟಣ ವಿತರಣೆ.
    * ಶಿವಮೊಗ್ಗದಲ್ಲಿ ವಿಶ್ವ ಹಿಂದೂ ಪರಿಷದ್ ಮತ್ತು ಸೇವಾ ಭಾರತೀಯಿಂದ 40 ಬೆಡ್ ಗಳ ಕೋವಿಡ್ ಆರೈಕೆ ಕೇಂದ್ರದ ಮೂಲಕ ಸಹಾಯ.
    * ಚಿತ್ರದುರ್ಗದಲ್ಲಿ ವಿಹಿಂಪ ಮತ್ತು ಜೈನ್ ಸಮುದಾಯ ಒಟ್ಟಾಗಿ 12 ಬೆಡ್ ಗಳ ಕೋವಿಡ್ ಆರೈಕೆ ಕೇಂದ್ರವನ್ನು ತೆರೆದಿಒದೆ.
    * ವಿಶ್ವ ಹಿಂದೂ ಪರಿಷದ್ ಕರ್ನಾಟಕ ಕೇಂದ್ರಕಾರ್ಯಾಲಯ ಧರ್ಮಶ್ರೀಯಲ್ಲಿ ಎರಡು ದಿನಗಳ ಕಾಲ ವ್ಯಾಕ್ಸಿನೇಷನ್ ಡ್ರೈವ್.
    * ಬೆಳಗಾವಿಯಲ್ಲಿ ವಿಶ್ವ ಹಿಂದೂ ಪರಿಷದ್, ಆರ್‍ಎಸ್‍ಎಸ್ ಏಕಲ್ ವಿದ್ಯಾಲಯದ ಆಶ್ರಯದಲ್ಲಿ ಕೋವಿಡ್ ಕೇರ್ ಸೆಂಟರ್.

  • ರಾಮ ಮಂದಿರ ನಿರ್ಮಾಣಕ್ಕೆ ಈವರೆಗೆ 25,000 ಮಿಲಿಯನ್ ರೂ. ದೇಣಿಗೆ ಸಂಗ್ರಹ: ವಿಎಚ್‍ಪಿ

    ರಾಮ ಮಂದಿರ ನಿರ್ಮಾಣಕ್ಕೆ ಈವರೆಗೆ 25,000 ಮಿಲಿಯನ್ ರೂ. ದೇಣಿಗೆ ಸಂಗ್ರಹ: ವಿಎಚ್‍ಪಿ

    ನವದೆಹಲಿ: ಪ್ರಸ್ತುತ ಮನೆಗಳಿಗೆ ತೆರಳಿ ದೇಣಿಗೆ ಸಂಗ್ರಹಿಸುವ ಪ್ರಕ್ರಿಯೆಯನ್ನು ನಿಲ್ಲಿಸಲಾಗಿದೆ. ಆದರೆ ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ವೆಬ್‍ಸೈಟ್ ನಲ್ಲಿ ಆನ್‍ಲೈನ್ ಮೂಲಕ ಇನ್ನೂ ಹಣ ನೀಡುತ್ತಿದ್ದಾರೆ ಎಂದು ವಿಶ್ವ ಹಿಂದೂ ಪರಿಷತ್ ತಿಳಿಸಿದೆ.

    ರಾಮ ಮಂದಿರ ನಿರ್ಮಾಣಕ್ಕೆ ಈ ವರೆಗೆ ಸಂಗ್ರಹವಾಗಿರುವ ಹಣ ಎಷ್ಟು ಎಂದು ಹಲವರು ಪ್ರಶ್ನೆ ಕೇಳುತ್ತಲೇ ಇದ್ದರು. ಇದಕ್ಕೆ ಇದೀಗ ಉತ್ತರ ಸಿಕ್ಕಿದ್ದು, ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಚಂಪತ್ ರೈ ದೇಣಿಗೆ ಸಂಗ್ರಹವಾಗಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಮಂದಿರದ ಮುಂದಿನ ಜಾಗವನ್ನು ಪಡೆಯುವ ಕುರಿತು ಮಾತುಕತೆ ನಡೆಯುತ್ತಿದ್ದು, ಇನ್ನೂ ನಿರ್ಧಾರವಾಗಿಲ್ಲ ಎಂದು ಮಾಹಿತಿ ನೀಡಿದ್ದಾರೆ.

    ಇನ್ನೂ ಕೇವಲ 3 ವರ್ಷದಲ್ಲಿ ಮಂದಿರ ನಿರ್ಮಾಣವಾಗಲಿದೆ. ಮಾರ್ಚ್ 4ರ ವರೆಗೆ ಬ್ಯಾಂಕ್ ರಿಸಿಪ್ಟ್ ಪ್ರಕಾರ 25,000 ಮಿಲಿಯನ್ ರೂ.(2,500 ಕೋಟಿ ರೂ.) ಹಣ ಸಂಗ್ರಹವಾಗಿದೆ. ಇತ್ತೀಚೆಗೆ ಟ್ರಸ್ಟ್ ಹೆಚ್ಚುವರಿ 7,285 ಚ.ಅಡಿಯಷ್ಟು ಭೂಮಿಯನ್ನು ಖರೀದಿಸಿದ್ದು, ಉದ್ದೇಶಿತ ಸಂಕೀರ್ಣದ ಪಕ್ಕದಲ್ಲಿದೆ. ರಾಮ ಮಂದಿರ ನಿರ್ಮಾಣಕ್ಕಾಗಿ ಸುಪ್ರೀಂ ಕೋರ್ಟ್ ನೀಡಿದ 70 ಎಕರೆ ಪ್ರದೇಶದ ಪಕ್ಕದಲ್ಲೇ ಈ ಹೊಸ ಭೂಮಿ ಇದೆ ಎಂದು ಅವರು ತಿಳಿಸಿದರು.

    ವರದಿಗಳ ಪ್ರಕಾರ ಈ ಜಮೀನು ಸ್ಥಳೀಯ ನಿವಾಸಿಗಳಿಗೆ ಸೇರಿದ್ದು, ಅವರಿಗೆ ಟ್ರಸ್ಟ್‍ನಿಂದ 1 ಕೋಟಿ ರೂ.ನೀಡಲಾಗಿದೆ. ಉದ್ದೇಶಿತ ರಾಮ ಮಂದಿರದ 70 ಎಕರೆ ಜಾಗಕ್ಕಿಂತ ಹೆಚ್ಚುವರಿಯಾಗಿ ಜಮೀನು ಪಡೆದು 107 ಎಕರೆಗೆ ವಿಸ್ತರಿಸಲು ಟ್ರಸ್ಟ್ ಯೋಜನೆ ರೂಪಿಸಿದೆ. ಪ್ರಮುಖ ಮಂದಿರವೂ 5 ಎಕರೆ ಜಾಗದಲ್ಲಿ ನಿರ್ಮಾಣವಾಗಲಿದ್ದು, ಉಳಿದ 100 ಎಕರಿಗೂ ಹೆಚ್ಚು ಜಾಗವನ್ನು ವಸ್ತುಸಂಗ್ರಹಾಲಯ, ಗ್ರಂಥಾಲಯ, ಯಾಗಶಾಲೆ ಹಾಗೂ ರಾಮನ ಜೀವನದ ವಿವಿಧ ಪ್ರಮುಖ ಘಟನೆಗಳ ಫೋಟೋ ಗ್ಯಾಲರಿ ಸೇರಿದಂತೆ ವಿವಿಧ ಸೌಲಭ್ಯಗಳಿಗೆ ಬಳಸಿಕೊಳ್ಳಲು ಚಿಂತಿಸಲಾಗಿದೆ.

  • ಕರ್ನಾಟಕ ಚಲನಚಿತ್ರ ಪೋಷಕ ಕಲಾವಿದರ ಸಂಘದ ವತಿಯಿಂದ ರಾಮ ಮಂದಿರಕ್ಕೆ ದೇಣಿಗೆ

    ಕರ್ನಾಟಕ ಚಲನಚಿತ್ರ ಪೋಷಕ ಕಲಾವಿದರ ಸಂಘದ ವತಿಯಿಂದ ರಾಮ ಮಂದಿರಕ್ಕೆ ದೇಣಿಗೆ

    ಬೆಂಗಳೂರು: ಕರ್ನಾಟಕ ಚಲನಚಿತ್ರ ಪೋಷಕ ಕಲಾವಿದರ ಸಂಘದ ವತಿಯಿಂದ ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣನಿಧಿ ಸಮರ್ಪಣಾಅಭಿಯಾನಕ್ಕೆ ತಾವೇ ನಿಧಿ ಸಂಗ್ರಹಣೆ ಮಾಡಿದ್ದಾರೆ. ನಂತರ ವಿಶ್ವ ಹಿಂದೂ ಪರಿಷದ್ ಕಚೇರಿಗೆ ಬಂದು ಬೆಂಗಳೂರು ಮಧ್ಯ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ಕೇಶವ್ ಹೆಗಡೆ ಹಾಗೂ ಕರ್ನಾಟಕ ದಕ್ಷಿಣ ಪ್ರಾಂತ ಸಂಘಟನಾ ಕಾರ್ಯದರ್ಶಿ ಬಸವರಾಜು ರವರಿಗೆ ನಿಧಿಯನ್ನು ಸಮರ್ಪಿಸಿ ರಶೀದಿಯನ್ನು ಪಡೆದರು.

    ಕರ್ನಾಟಕ ಚಲನಚಿತ್ರ ಪೋಷಕ ಕಲಾವಿದರ ಸಂಘದ ವತಿಯಿಂದ ಉಪಾಧ್ಯಕ್ಷರಾದ ಶಿವಮೊಗ್ಗ ಭಾಸ್ಕರ್ ಹಾಗೂ ಕಾರ್ಯದರ್ಶಿ ಆಡುಗೋಡಿ ಶ್ರೀನಿವಾಸ್ ನಿಧಿ ಸಮರ್ಪಿಸಿದರು.

  • ವಿಶ್ವ ಹಿಂದೂ ಪರಿಷತ್ ಪುಂಡು ಪೋಕರಿಗಳ ಸಂಸ್ಥೆ ಅಲ್ಲ: ಪೇಜಾವರ ಶ್ರೀ

    ವಿಶ್ವ ಹಿಂದೂ ಪರಿಷತ್ ಪುಂಡು ಪೋಕರಿಗಳ ಸಂಸ್ಥೆ ಅಲ್ಲ: ಪೇಜಾವರ ಶ್ರೀ

    ಉಡುಪಿ: ವಿಶ್ವ ಹಿಂದೂ ಪರಿಷತ್ ಪುಂಡು ಪೋಕರಿಗಳ ಸಂಸ್ಥೆಯಲ್ಲ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆಗೆ ಪೇಜಾವರ ಶ್ರೀ ತಿರುಗೇಟು ಕೊಟ್ಟಿದ್ದಾರೆ.

    ಉಡುಪಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಮಜನ್ಮಭೂಮಿ ಟ್ರಸ್ಟ್ ಬೇನಾಮಿ ಸಂಸ್ಥೆ ಅಲ್ಲ. ಟ್ರಸ್ಟ್ ನೋಂದಣಿಯಾಗಿರುವ ಸಂಸ್ಥೆ. ಟ್ರಸ್ಟ್ ನೊಂದಾವಣೆಗೆ ಅದರದ್ದೇ ಆದ ನೀತಿ ನಿಯಮಗಳಿವೆ. ದೇಣಿಗೆ ಸಂಗ್ರಹ ಮಾಡಲು ಅದರದ್ದೇ ಆದ ಕಾನೂನಿದೆ. ನಮಗೆ ಸಂವಿಧಾನವೇ ಅಧಿಕಾರ ಕೊಟ್ಟಿದೆ, ಪಾರರ್ದಶಕತೆ ಖಂಡಿತವಾಗಿ ಬೇಕೆ ಬೇಕು. ಸಂಶಯಗಳನ್ನು ಮುಂದಿಟ್ಟರೆ ಸೂಕ್ತ ಪರಿಹಾರ ಕಂಡುಕೊಳ್ಳಬಹುದು. ಇಲ್ಲಿ ಮುಚ್ಚುಮರೆ ಮಾಡಲು ಯಾವುದೇ ವಿಷಯಗಳು ನಡೆಯುವುದಿಲ್ಲ. ಕಾನೂನಾತ್ಮಕವಾಗಿ ಅದಕ್ಕೆ ಬೇಕಾಗಿರುವಂತ ಪುರಾವೆಗಳನ್ನು ಕೊಡಲು ಸಾಧ್ಯವಿದೆ ಎಂದರು.

    ಯಾವುದೇ ಸಂಶಯಗಳನ್ನು ಇಟ್ಟು ಆರೋಪ ಮಾಡುವುದು ಸೂಕ್ತವಲ್ಲ. ರಾಮ ಜನ್ಮಭೂಮಿ ಟ್ರಸ್ಟ್ ನಂತೆ ಅಧಿಕೃತವಾಗಿರುವ ವಿಶ್ವ ಪರಿಷತ್ ಕಾರ್ಯಕರ್ತರು ದೇಣಿಗೆ ಸಂಗ್ರಹ ಮಾಡುತ್ತಿದೆ. ವಿಶ್ವ ಹಿಂದೂ ಪರಿಷತ್‍ನ ಕಾರ್ಯರ್ತರಿಗೆ ದೇಣಿಗೆ ಸಂಗ್ರಹದ ಜವಾಬ್ದಾರಿ ನೀಡಲಾಗಿದೆ. ವಿಹಿಂಪನ ಮುಖ್ಯಸ್ಥ ಆಯಾ ಊರಿನಲ್ಲಿ ಸಂಗ್ರಹ ನಿರತರಾಗಿದ್ದಾರೆ. ಹಿರಿಯ, ಮುಂದಾಳುಗಳ ನೇತೃತ್ವದಲ್ಲಿ ಕಾರ್ಯಕರ್ತರು ನಿಧಿ ಸಂಗ್ರಹ ಮಾಡುತ್ತಿದ್ದಾರೆ ಎಂದು ಸ್ಪಷ್ಟಪಡಿಸಿದರು.

    ವಿಹಿಂಪ ಪುಂಡು ಪೋಕರಿಗಳ ಸಂಸ್ಥೆಯಲ್ಲ, ಇದು ಅಧಿಕೃತ ಸಂಸ್ಥೆ. ಹಾಗಾಗಿ ಇಂತಹ ಮಾತು ಬಳಸುವುದು ಯುಕ್ತವಲ್ಲ. ಸಂಶಯಕ್ಕೆ ಪರಿಹಾರ ಇದೆ. ಸಂಶಯ ಇದೆ ಎಂದು ಅರೋಪ ಮಾಡಿದರೆ, ಆರೋಪದಲ್ಲಿಯೇ ಮುಗಿಯುತ್ತದೆ. ಆರೋಪಕ್ಕೆ ಪ್ರತ್ಯಾರೋಪ ಸಿಗುತ್ತದೆ, ಪ್ರಶ್ನೆಗೆ ಉತ್ತರ ಸಿಗುವುದಿಲ್ಲ, ಪ್ರಶ್ನೆ ಮಾಡಿದರೆ ಉತ್ತರ ಕೊಡಬಹುದು ಎಂದು ಉಡುಪಿಯಲ್ಲಿ ಪೇಜಾವರ ಶ್ರೀ ಖಡಕ್ ಪ್ರತಿಕ್ರಿಯೆ ನೀಡಿದರು.

     

  • ಹೆಚ್‍ಡಿಕೆ ಟ್ವೀಟ್ ಬಾಲಿಶ, ಬೇಜವಾಬ್ದಾರಿಯಿಂದ ಕೂಡಿದ್ದಾಗಿದೆ: ವಿಹಿಂಪ

    ಹೆಚ್‍ಡಿಕೆ ಟ್ವೀಟ್ ಬಾಲಿಶ, ಬೇಜವಾಬ್ದಾರಿಯಿಂದ ಕೂಡಿದ್ದಾಗಿದೆ: ವಿಹಿಂಪ

    ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿಯವರು ಪ್ರಸ್ತುತ ನಡೆಯುತ್ತಿರುವ ಶ್ರೀರಾಮ ಮಂದಿರ ನಿಧಿ ಸಮರ್ಪಣಾ ಅಭಿಯಾನದ ಕುರಿತಾಗಿ ಮಾಡಿರುವ ಟ್ವೀಟ್ ಇದೀಗ ವಿವಾದಕ್ಕೀಡಾಗಿದೆ.

    ರಾಮಮಂದಿರಕ್ಕೆ ಹಣ ಸಂಗ್ರಹಿಸುತ್ತಿರುವವರು ಹಣ ಕೊಟ್ಟವರ, ಕೊಡದವರ ಮನೆ ಗುರುತು ಮಾಡುತ್ತಿರುವುದು ತಿಳಿಯಿತು. ಯಾತಕ್ಕೆ ಹೀಗೆ ಮಾಡುತ್ತಿದ್ದಾರೆಂಬುದು ಗೊತ್ತಿಲ್ಲ. ಹಿಟ್ಲರ್ ಕಾಲದಲ್ಲಿ ನಾಜಿ-ಯಹೂದಿಗಳಿಗೆ ಗಲಾಟೆ ನಡೆದು ಲಕ್ಷಾಂತರ ಜನರ ಮಾರಣ ಹೋಮ ನಡೆಯಿತು. ದೇಶದಲ್ಲಿ ನಡೆಯುತ್ತಿರುವ ಈ ಬೆಳವಣಿಗೆ ಎಲ್ಲಿ ತಲುಪುತ್ತದೆ ಗೊತ್ತಿಲ್ಲ ಎಂದು ಮಾಜಿ ಸಿಎಂ ಟ್ವೀಟ್ ಮಾಡಿದ್ದರು. ವಿಶ್ವ ಹಿಂದೂ ಪರಿಷತ್ ಶ್ರೀರಾಮ್ ಮಂದಿರ ನಿಧಿ ಸಮರ್ಪಣಾ ಅಭಿಯಾನದ ನೇತೃತ್ವ ವಹಿಸುತ್ತಿದ್ದು ಮಾಜಿ ಮುಖ್ಯಮಂತ್ರಿಗಳ ಟ್ವೀಟ್ ಬಾಲಿಶ ಹಾಗೂ ಬೇಜವಾಬ್ದಾರಿಯಿಂದ ಕೂಡಿದ್ದಾಗಿದೆ ಎಂದು ತೀಕ್ಷ್ಣವಾಗಿ ಖಂಡಿಸಿದೆ.

    ವಿಹಿಂಪದ ಕರ್ನಾಟಕ ರಾಜ್ಯದ ಸಂಘಟನಾ ಕಾರ್ಯದರ್ಶಿ ಬಸವರಾಜು ತಮ್ಮ ಪತ್ರಿಕಾ ಹೇಳಿಕೆಯಲ್ಲಿ, ಸಮಾಜವು ಧನಾತ್ಮಕವಾಗಿ ನಿಧಿ ಸಮರ್ಪಣೆಯಲ್ಲಿ ತೊಡಗಿದೆ. ಅಯೋಧ್ಯೆಯಲ್ಲಿ ಭವ್ಯ ಶ್ರೀರಾಮ ಮಂದಿರ ನಿರ್ಮಿಸಲು ಸಹಾಯವಾಗುವಂತೆ ಜನಸಾಮಾನ್ಯರೆಲ್ಲರೂ ನಿಧಿ ಸಮರ್ಪಿಸುತ್ತಿರುವಾಗ, ಮಾಜಿ ಮುಖ್ಯಮಂತ್ರಿಯೊಬ್ಬರಿಂದ ಇಂತಹ ಬೇಜವಾಬ್ದಾರಿ ಹೇಳಿಕೆ ಸಲ್ಲದು. ವಿಹಿಂಪ ಸೇರಿದಂತೆ ಹಲವು ಸಂಘಟನೆಗಳ ಕಾರ್ಯಕರ್ತರು ಮನೆ ಮನೆಗೆ ತೆರಳಿ ನಿಧಿಯನ್ನು ಸಂಗ್ರಹಿಸುವಾಗ ಇಂತಿಷ್ಟೇ ಹಣವನ್ನು ದಾನ ಮಾಡಬೇಕೆಂದು ಕೇಳುವುದಿಲ್ಲ. ಪ್ರಭು ಶ್ರೀರಾಮನ ಆದರ್ಶವನ್ನು ಜೀವನದಲ್ಲಿ ಪಾಲಿಸಬೇಕು ಹಾಗೂ ಈ ದೇಶದ ಅಸ್ಮಿತೆಯಾದ ಶ್ರೀರಾಮನ ಮಂದಿರಕ್ಕೆ ವಿವಿಧ ಸ್ಥರದ ಹಲವಾರು ಜನಸಾಮಾನ್ಯರು ತಮ್ಮ ಕೊಡುಗೆ ಸಮರ್ಪಣೆ ಮಾಡುತ್ತಿರುವುದನ್ನು ಗಮನಿಸಬೇಕು. ರಾಜ್ಯದ ಮುಖ್ಯಮಂತ್ರಿಯಾಗಿದ್ದವರು ಇಂತಹ ಬೇಜವಾಬ್ದಾರಿ ಹೇಳಿಕೆಯನ್ನು ವಿಹಿಂಪ ಖಂಡಿಸುತ್ತದೆ. ಆರ್‍ಎಸ್‍ಎಸ್ ಅಂತಹ ಸಂಘಟನೆಯ ಬಗ್ಗೆ ವೃಥಾ ಆರೋಪ ಮಾಡುವುದು ಶೋಭೆ ತರುವುದಿಲ್ಲ ಎಂದು ಹೇಳಿದ್ದಾರೆ.

    ಸಾರ್ವಜನಿಕ ವಲಯದಲ್ಲಿ ಸೊರಗುತ್ತಿರುವ ಸಂವಾದ ಹಾಗೂ ಅದರಲ್ಲಿ ನೇರವಾಗಿ ಭಾಗಿಯಾಗಿರುವ ಹೆಚ್‍ಡಿ ಕುಮಾರಸ್ವಾಮಿಯವರ ನಡೆಗೆ ವಿಹಿಂಪ ಆಕ್ಷೇಪ ವ್ಯಕ್ತಪಡಿಸುತ್ತದೆ ಎಂದಿದ್ದಾರೆ. ಇದೇ ವೇಳೆ ಬಜರಂಗ ದಳದ ಸೂರ್ಯನಾರಾಯಣ ಮಾತನಾಡಿ, ಸ್ವ-ಇಚ್ಛೆಯಿಂದ ಜನರು ನೀಡುವ ದೇಣಿಗೆಗೆ ಕುಮಾರಸ್ವಾಮಿಯವರು ಅವಮಾನಿಸಿದ್ದು, ಕೂಡಲೇ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.