Tag: Vishwa Vidyalaya

  • ರಾಣಿ ಚೆನ್ನಮ್ಮ ವಿವಿಯಿಂದ ನಟ ರಮೇಶ್ ಅರವಿಂದ್ ಸೇರಿ ಮೂವರಿಗೆ ಗೌರವ ಡಾಕ್ಟರೇಟ್

    ರಾಣಿ ಚೆನ್ನಮ್ಮ ವಿವಿಯಿಂದ ನಟ ರಮೇಶ್ ಅರವಿಂದ್ ಸೇರಿ ಮೂವರಿಗೆ ಗೌರವ ಡಾಕ್ಟರೇಟ್

    ನ್ನಡದ ಹೆಸರಾಂತ ನಟ, ಮೊನ್ನೆಯಷ್ಟೇ ಹುಟ್ಟು ಹಬ್ಬವನ್ನು ಆಚರಿಸಿಕೊಂಡಿರುವ ರಮೇಶ್ ಅರವಿಂದ್ (Ramesh Aravind) ಸೇರಿ ಮೂವರಿಗೆ ರಾಣಿ ಚೆನ್ನಮ್ಮ (Rani Chennamma) ವಿಶ್ವ ವಿದ್ಯಾಲಯದಿಂದ ಗೌರವ ಡಾಕ್ಟರೇಟ್ (Honorary Doctorate) ಘೋಷಿಸಲಾಗಿದೆ. ಕನ್ನಡ ಚಿತ್ರರಂಗಕ್ಕೆ (Sandalwood) ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ರಮೇಶ್ ಅವರನ್ನು ಗೌರವ ಡಾಕ್ಟರೇಟ್‌ಗೆ ಆಯ್ಕೆ ಮಾಡಲಾಗಿದೆ.

    ರಮೇಶ್ ಅರವಿಂದ್ ಅವರ ಜೊತೆ ಸಮಾಜ ಸೇವೆ ಕ್ಷೇತ್ರದಲ್ಲಿ ವಿ.ರವಿಚಂದರ್, ಧಾರ್ಮಿಕ ಕ್ಷೇತ್ರದಲ್ಲಿ ಸೇವೆಗೈದ ಮಾತೆ ಅಕ್ಕ ಅನ್ನಪೂರ್ಣ ‌ತಾಯಿಗೆ ಗೌರವ ಡಾಕ್ಟರೇಟ್ ಘೋಷಣೆಯಾಗಿದೆ. ಸೆ.14 ರಂದು ಮಧ್ಯಾಹ್ನ 12 ಕ್ಕೆ ಸುವರ್ಣಸೌಧದಲ್ಲಿ ನಡೆಯಲಿರುವ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುವುದು ಎಂದು ವಿ.ವಿ ತಿಳಿಸಿದೆ. ಇದನ್ನೂ ಓದಿ:ನಂದಿನಿ ಔಟ್ ಆದ್ಮೇಲೆ ಸಾನ್ಯ ಜೊತೆ ಜಶ್ವಂತ್ ಲವ್ವಿ-ಡವ್ವಿ: ರೂಪೇಶ್‌ಗೆ ಟೆನ್ಷನ್ ಶುರು

    ಘಟಿಕೋತ್ಸವದ ಅಧ್ಯಕ್ಷತೆಯನ್ನು ರಾಜ್ಯಪಾಲ ಥಾವರಚಂದ ಗೆಹ್ಲೋಟ್ ವಹಿಸಲಿದ್ದು, ಆಂಧ್ರದ ಕೇಂದ್ರಿಯ ಬುಡಕಟ್ಟು ವಿವಿ ಕುಲಪತಿ ಪ್ರೊ. ಟಿ.ವಿ ಕಟ್ಟಿಮನಿ ಅವರಿಂದ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ.  ಉನ್ನತ ಶಿಕ್ಷಣ ‌ಸಚಿವ ಡಾ. ಸಿ.ಎನ್ ಅಶ್ವಥ್ ನಾರಾಯಣ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರಲಿದ್ದಾರೆ ಎಂದು ರಾಣಿ ‌ಚೆನ್ನಮ್ಮ ವಿವಿ ಕುಲಪತಿ ಪ್ರೊ. ರಾಮಚಂದ್ರೆಗೌಡ ಮಾಹಿತಿ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ‘ಪತ್ನಿ ಮನೆಯಲಿಲ್ಲ, ಬಂದು ಅಡುಗೆ ಮಾಡು’- ನಡುರಾತ್ರಿ ವಿದ್ಯಾರ್ಥಿನಿಗೆ ಪ್ರೊಫೆಸರ್ ಮೆಸೇಜ್

    ‘ಪತ್ನಿ ಮನೆಯಲಿಲ್ಲ, ಬಂದು ಅಡುಗೆ ಮಾಡು’- ನಡುರಾತ್ರಿ ವಿದ್ಯಾರ್ಥಿನಿಗೆ ಪ್ರೊಫೆಸರ್ ಮೆಸೇಜ್

    ಡೆಹ್ರಾಡೂನ್: ವಿದ್ಯಾರ್ಥಿನಿಗೆ ನಡುರಾತ್ರಿ ಸಂದೇಶ ರವಾನೆ ಮಾಡಿದ್ದ ಪ್ರೊಫೆಸರ್, ತನ್ನ ಪತ್ನಿ ಮನೆಯಲ್ಲಿ ಇಲ್ಲ. ಬಂದು ಅಡುಗೆ ಮಾಡಿಕೊಡು ಎಂದು ಮೆಸೇಜ್ ಮಾಡಿ ಕಿರುಕುಳ ನೀಡಿರುವ ಘಟನೆ ಉತ್ತರಖಂಡ್ ಪಂತ್ ವಿಶ್ವವಿದ್ಯಾಲಯದಲ್ಲಿ ನಡೆದಿದೆ.

    ಪ್ರೊಫೆಸರ್ ಕೆಟ್ಟ ಸಂದೇಶದ ಕುರಿತು ವಿದ್ಯಾರ್ಥಿನಿ ವಿಶ್ವವಿದ್ಯಾಲಯದ ವಿಸಿ ಅವರಿಗೆ ದೂರು ನೀಡಿದ್ದು, ಮಹಿಳಾ ವಿದ್ಯಾರ್ಥಿಗಳ ಹಾಸ್ಟೆಲ್ ವಾರ್ಡನ್ ಆಗಿ ಜವಾಬ್ದಾರಿ ವಹಿಸಿಕೊಂಡಿದ್ದ ಪ್ರೊಫೆಸರ್ ವಿರುದ್ಧ ಕ್ರಮಕ್ಕೆ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.

    ಘಟನೆ ಸಂಬಂಧ ವಿದ್ಯಾರ್ಥಿನಿ ವಿಸಿ ಅವರಿಗೆ ಸಂದೇಶದ ಫೋಟೋವನ್ನು ಸಾಕ್ಷಿಯಾಗಿ ನೀಡಿದ್ದು, ವಿಶ್ವವಿದ್ಯಾಲಯ ಕಮಿಟಿ ಪ್ರೊಫೆಸರ್ ನನ್ನು ಹಾಸ್ಟೆಲ್ ವಾರ್ಡನ್ ಹುದ್ದೆಯಿಂದ ತೆರವು ಮಾಡಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. ಆದರೆ ಪ್ರೊಫೆಸರ್ ವಿರುದ್ಧ ಪೊಲೀಸ್ ದೂರು ದಾಖಲಾಗಿಲ್ಲ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

    ಪ್ರಕರಣದ ಸಂಬಂಧ ಮಾಹಿತಿ ಪಡೆದಿರುವ ರಾಜ್ಯಪಾಲರು ಪ್ರೊಫೆಸರ್ ವಿರುದ್ಧ ಕ್ರಮಕೈಗೊಳ್ಳಲು ಸೂಚನೆ ನೀಡಿದ್ದಾರೆ. ಅಲ್ಲದೇ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿನಿಯರಿಗೆ ಸೂಕ್ತ ರಕ್ಷಣೆ ನೀಡುವಂತೆ ತಿಳಿಸಿದ್ದಾರೆ. ಪ್ರಕರಣದ ಕುರಿತಂತೆ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ವಿಶ್ವವಿದ್ಯಾಲಯ ರಿಜಿಸ್ಟ್ರಾರ್ ಎಪಿ ಶರ್ಮಾ, ರಾಜ್ಯಪಾಲರ ನಿರ್ದೇಶನದಂತೆ ವಾರ್ಡನ್ ಹುದ್ದೆಯಿಂದ ತೆಗೆದು ಹಾಕಲಾಗಿದ್ದು, ಹೆಚ್ಚಿನ ವಿಚಾರಣೆಯನ್ನು ನಡೆಸುತ್ತಿದ್ದೇವೆ. ವಿಶ್ವವಿದ್ಯಾಲಯದಲ್ಲಿರುವ ವಿದ್ಯಾರ್ಥಿಗಳಿಗೆ ಯಾವುದೇ ಸಮಸ್ಯೆ ಎದುರಾಗಂತೆ ಕ್ರಮಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.