Tag: Vishwanath

  • ಕಾಶಿ ವಿಶ್ವನಾಥನನ್ನ ಬಿಜೆಪಿ ವಿಶ್ವನಾಥ ಎನ್ನಬೇಡಿ: ಕೆ.ಎಸ್ ಈಶ್ವರಪ್ಪ

    ಕಾಶಿ ವಿಶ್ವನಾಥನನ್ನ ಬಿಜೆಪಿ ವಿಶ್ವನಾಥ ಎನ್ನಬೇಡಿ: ಕೆ.ಎಸ್ ಈಶ್ವರಪ್ಪ

    ರಾಯಚೂರು: ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ (Kashi Vishwanath Temple) ಮಂದಿರ ಒಡೆದು ಮಸೀದಿ ಕಟ್ಟಿದ್ದರು ವಾರಣಾಸಿ ನ್ಯಾಯಾಲಯದ ತೀರ್ಪು ಸಂತೋಷ ತಂದಿದೆ. ಬಿಜೆಪಿ ರಾಮ ಅಂತ ಕೆಲ ಕಾಂಗ್ರೆಸ್ ನವರು ಕರೆಯುತ್ತಿದ್ದರು. ಈ ತೀರ್ಪಿನ ಮೂಲಕ ಬಿಜೆಪಿ ಕಾಶಿ ವಿಶ್ವನಾಥ ಎಂದು ಕರೆಯಬೇಡಿ. ಇಲ್ಲಿನ ಮುಸ್ಲಿಮರು ನಾವು ಅಣ್ಣ-ತಮ್ಮಂದಿರು. ಕಾಂಗ್ರೆಸ್‌ನವರು ಒಡೆದಾಳುವ ನೀತಿ ಮಾಡುತ್ತಿದ್ದಾರೆ, ನಮ್ಮನ್ನ ಒಡೆಯಬೇಡಿ ಅಂತ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

    ರಾಯಚೂರಿನಲ್ಲಿ (Raichur) ಮಾತನಾಡಿದ ಅವರು, ಔರಂಗಜೇಬನ ಕಾಲದಲ್ಲಿ ದೇವಾಲಯ ಒಡೆದು ಮಸೀದಿ ಕಟ್ಟಿದ್ದರು. ನೆಲಮಾಳಿಗೆಯಲ್ಲಿ ಹಿಂದೂಗಳ 10 ಮೂರ್ತಿ ಸಿಕ್ಕಿದೆ. 7 ದಿನ ಹಿಂದೂಗಳು ಪೂಜಿಸಲು ನ್ಯಾಯಾಲಯ ಅವಕಾಶ ಕೊಟ್ಟಿರುವುದು ಸಂತೋಷದ ವಿಷಯ. ಜೈಶ್ರೀರಾಮ ಅಂತ ಕರೆಯುತ್ತಿದ್ದೆವು ತೀರ್ಪಿನಿಂದ ಈಗ ಹರಹರ ಮಹಾದೇವ ಅಂತ ಕೆರೆಯುತ್ತೇವೆ. ವಾರಣಾಸಿ ನ್ಯಾಯಾಲಯ ತೀರ್ಪು ಎಲ್ಲರಿಗೂ ಸಂತೋಷ ತಂದಿದೆ. ಅಲ್ಲಿನ ಮುಸ್ಲಿಮರು ಹೈಕೋರ್ಟ್‌ಗೆ ಹೋಗ್ತೀವಿ ಅಂತಿದ್ದಾರೆ. ಅವರು ಎಲ್ಲಿಗಾದ್ರೂ ಹೋಗಲಿ ಅಭ್ಯಂತರವಿಲ್ಲ ಎಲ್ಲಾ ದಾಖಲೆಗಳು ನಮ್ಮ ಪರ ಇವೆ. ಮುಸ್ಲಿಂ ಪರ ವಕೀಲರಿಗೆ ಹೇಳುತ್ತೇನೆ ದಾಖಲೆಗಳು ನಮ್ಮ ಪರ ಇರುವುದರಿಂದ ತೀರ್ಪು ಒಪ್ಪಿಕೊಳ್ಳಬೇಕು ಅಂತ ಹೇಳಿದರು.

    ಕಾಶಿ ವಿಶ್ವನಾಥ ದೇವಾಲಯದ ಪುನರ್ ನಿರ್ಮಾಣ ಆಗಬೇಕು. ಇನ್ನೂ ಕೆಳಗಡೆ ಅರ್ಧ ಮಂದಿರವಿದೆ. ನೀವು ನಮ್ಮ ಗುಲಾಮರು ಅಂತ ತೋರಿಸಲು ಮಂದಿರದ ಮೇಲೆ ಮಸೀದಿ ಕಟ್ಟಿದ್ದಾರೆ. ಕಾಶಿ ವಿಶ್ವನಾಥ ಟ್ರಸ್ಟ್ ನವರು ಮಂದಿರ ಪುನರ್ ನಿರ್ಮಾಣ ಮಾಡಲು ಮುಂದಾಗಬೇಕು ಅನ್ನೋದು ನಮ್ಮ ಅಪೇಕ್ಷೆ.ಇದನ್ನ ಯಾವುದೇ ಕಾರಣಕ್ಕೂ ರಾಜಕಾರಣಕ್ಕೆ ಎಳೆಯಬೆಡಿ ಎಂದರು. ಇದನ್ನೂ ಓದಿ: ಮೈಸೂರಿಗೂ ಕಾಲಿಟ್ಟ ಧ್ವಜ ದಂಗಲ್- ಪ್ರತಾಪ್ ಸಿಂಹ ವಿರೋಧದ ಬೆನ್ನಲ್ಲೇ ಟಿಪ್ಪು ಬಾವುಟ ತೆರವು

    ಯಾವ ಕಾರಣಕ್ಕೂ ಹಿಂದೂ ಸಮಾಜ ಒಡೆಯಬೇಡಿ. ಬಿಜೆಪಿಯ ಕಾಶಿ ವಿಶ್ವನಾಥ ಅನ್ನಬೇಡಿ. ಮುಸ್ಲಿಮರಿಗೆ ಏನ್ ಅವಕಾಶ ಸಿಗಬೇಕು ಅದನ್ನ ಕೋರ್ಟ್ ತೀರ್ಮಾನ ಮಾಡುತ್ತೆ. ಮಂದಿರ ಧ್ವಂಸ ಮಾಡಿದರೂ ನೆಲಮಾಳಿಗೆಯನ್ನ ಧ್ವಂಸ ಮಾಡಲು ಆಗಿಲ್ಲ. ದೇವನಾಗರಿ ಲಿಪಿ ಇರೋದು ಅಲ್ಲಿ ಗೊತ್ತಾಗಿದೆ. ಕಾಶಿಯಲ್ಲಿ ಮೂಲ ಮಂದಿರವನ್ನ ಪುನರ್ ಪ್ರತಿಷ್ಠಾಪನೆ ಮಾಡಬೇಕು.ಇಡೀ ಹಿಂದೂ ಸಮಾಜ ತೀರ್ಪನ್ನ ಸ್ವಾಗತ ಮಾಡುತ್ತದೆ.ಎಲ್ಲರೂ ಒಟ್ಟಾಗಿ ಭವ್ಯ ಮಂದಿರ ನಿರ್ಮಾಣ ಮಾಡೋಣ ಎಂದು ಈಶ್ವರಪ್ಪ ಹೇಳಿದರು.

  • ‘ಪರಿಷತ್’ನಲ್ಲಿ ಕನಸಿನ ರಾಣಿ ಮಾಲಾಶ್ರೀ ಕುರಿತು ಹಾಸ್ಯ ಚರ್ಚೆ

    ‘ಪರಿಷತ್’ನಲ್ಲಿ ಕನಸಿನ ರಾಣಿ ಮಾಲಾಶ್ರೀ ಕುರಿತು ಹಾಸ್ಯ ಚರ್ಚೆ

    ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಕನ್ನಡ ಹೆಸರಾಂತ ನಟಿ, ಕನಸಿನ ರಾಣಿ ಮಾಲಾಶ್ರೀ ಕುರಿತಾಗಿ ಬಿಸಿಬಿಸಿ ಚರ್ಚೆಯಾಗಿದೆ. ವಿಧಾನ ಪರಿಷತ್ (Vidhana Parishad) ನಲ್ಲಿ ಈ ಚರ್ಚೆ ನಡೆದಿದ್ದು, ಉಮಾಶ್ರೀ (Umashree) ಸೇರಿದಂತೆ ಹಲವರು ಇದರಲ್ಲಿ ಭಾಗಿಯಾಗಿದ್ದರು. ಅಷ್ಟಕ್ಕೂ ಮಾಲಾಶ್ರೀಯನ್ನು ನೆನಪಿಸಿಕೊಂಡಿದ್ದು ಬಿಜೆಪಿಯ ಸದಸ್ಯ ವಿಶ್ವನಾಥ್ (Vishwanath) ಎನ್ನುವುದು ವಿಶೇಷ.

    ವಿಧೇಯಕದ ಮೇಲಿನ ಚರ್ಚೆ ವೇಳೆ ಉಮಾಶ್ರೀ ಹೆಸರಿನ ಬದಲಾಗಿ, ಬಾಯ್ತಪ್ಪಿ ಮಾಲಾಶ್ರೀ (Malashree) ಅವರ ಹೆಸರು ಹೇಳಿದರು ವಿಶ್ವನಾಥ್. ಮಾಲಾಶ್ರೀ ಹೆಸರು ಕೇಳಿ ಸಭಾಪತಿಗಳಿಗೆ ಒಂದು ರೀತಿಯಲ್ಲಿ ಅಚ್ಚರಿ ಆಯಿತು. ಹಾಗಾಗಿ ಮಾಲಾಶ್ರೀ ಅವರನ್ನು ಈಗೇಕೆ ನೆನಪಿಸಿಕೊಂಡಿರಿ ಎಂದು ತಮಾಷೆಯಾಗಿಯೇ ವಿಶ್ವನಾಥ್ ಅವರನ್ನು ಕೇಳಿದರು.  ಈ ವೇಳೆ ಮಧ್ಯ ಪ್ರವೇಶ ಮಾಡಿದ ತೇಜಸ್ವಿನಿ ಗೌಡ, ಭಾರತದಲ್ಲಿ ಹೇಮಾಮಾಲಿನಿ ಹೇಗೆ ಕನಸಿನ ಕನ್ಯೆ ಎಂದು ಹೆಸರು ಪಡೆದಿದ್ರೊ, ಅದೇ ರೀತಿ ಕನ್ನಡ ಚಿತ್ರರಂಗದಲ್ಲಿ ಮಾಲಾಶ್ರೀ ನಟನೆಯಿಂದ ಹೆಸರು ಮಾಡಿದ್ರು ಎಂದರು. ಮಾತು ಮುಂದುವರೆಸಿದ ತೇಜಸ್ವಿನಿಗೌಡ  ನಾಯಕಿಯಾಗಲು ಸೌಂದರ್ಯದ ಮಾನದಂಡ ಬದಲು ನಟನೆಯ ಮಾನದಂಡ ಆಗಿದ್ದರೆ, ಉಮಾಶ್ರೀಯವರು ನಾಯಕಿಯಾಗಿ ಹಲವು ಚಿತ್ರದಲ್ಲಿ ನಟಿಸಬಹುದಿತ್ತು ಎಂದರು.

    ಈ ವೇಳೆ ಎದ್ದು ನಿಂತ ಉಮಾಶ್ರೀ, ನನ್ನ ನಟನೆಯ ಬಗ್ಗೆ ಮಾತನಾಡಿದ್ದಕ್ಕೆ ಧನ್ಯವಾದ. ನಾನು ರಂಗಭೂಮಿಯಿಂದ ಬಂದವಳು. ರಂಗಭೂಮಿಯಲ್ಲಿ ನಾಯಕಿ ಪಾತ್ರ ಮಾಡಿದ್ದೇನೆ. ಆದರೆ ಸಿನಿಮಾದಲ್ಲಿ ಹಲವು ವಿಭಾಗ ಇದೆ. ನಾಯಕಿ, ಸಹ ನಟಿ, ಹಾಸ್ಯ ನಟಿ, ಪೋಷಕ ನಟಿ ಅಂತ. ನನಗೆ ನಾಯಕಿ ಆಗಿಲ್ಲ ಅನ್ನೋ ನೋವು ಇತ್ತು. ಆದರೆ ಗಿರೀಶ್ ಕಾಸರವಳ್ಳಿಯವರು ನನಗೆ ಗುಲಾಬಿ ಟಾಕೀಸ್ ಚಿತ್ರದಲ್ಲಿ ನಾಯಕಿ ನಟಿಯ ಅವಕಾಶ ನೀಡಿದ್ರು. ಗುಲಾಬಿ ಟಾಕೀಸ್ ಚಿತ್ರದಿಂದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ನಾಯಕಿ ಪ್ರಶಸ್ತಿ ಬಂತು. ನನಗೆ ಬೆಂಬಲ ನೀಡಿದ ಕರ್ನಾಟಕ ಜನತೆ, ಕರ್ನಾಟಕ ಚಿತ್ರ ರಂಗಕ್ಕೆ ಧನ್ಯವಾದ ಎಂದು ಹೇಳಿದರು ಉಮಾಶ್ರೀ.

    ಈ ವೇಳೆ ಮಧ್ಯೆ ಪ್ರವೇಶ ಮಾಡಿದ ಸಚಿವ ಎಚ್ ಕೆ ಪಾಟೀಲ್, ನಟಿ ಉಮಾಶ್ರೀಯವರ ಒಡಲಾಳ ನಾಟಕ ನೋಡಿದ್ರೆ ಎಂತಹ ಅದ್ಬುತ ಕಲಾವಿದೆ ಎಂದು ಗೊತ್ತಾಗಲಿದೆ. ನಮ್ಮ ಭಾಗದಲ್ಲಿ ಉಮಾಶ್ರೀ ಈ ಪಾತ್ರದ ಮೂಲಕ ನಾಯಕರಾಗಿಯೇ ಇದ್ದರು. ನಮ್ಮ ನಾಯಕಿ ಸೋನಿಯಾಗಾಂಧಿಯವರಿಗೆ ಒಡಲಾಳ ನಾಟಕವನ್ನ ತೋರಿಸಿದ್ವಿ. ಆ ನಂತರ ಉಮಾಶ್ರಿಯವರನ್ನ ಭೇಟಿ ಮಾಡಿಸಿದಾಗ ಆ ನಾಟಕದಲ್ಲಿ ಪಾತ್ರ ಮಾಡಿರುವವರು ಇವರೇನಾ ಎಂದು ಮೂರು ಬಾರಿ ಕೇಳಿದ್ರು ಎಂದರು.

    ಹೀಗೆ ಮಾಲಾಶ್ರೀ ಬಿಟ್ಟು ಉಮಾಶ್ರೀ ನಟನೆಯ ಬಗ್ಗೆ ಪರಿಷತ್ ನಲ್ಲಿ ಮೆಚ್ಚುಗೆ ವ್ಯಕ್ತ ಪಡಿಸಲಾಯಿತು. ಮತ್ತೆ ಹಾಸ್ಯ ಮಾಡಿದ ಸಭಾಪತಿ, ಈಗ ಯಾಕೆ ಮಾಲಾಶ್ರೀ ನೆನಪು ‌ಎಂದು ಮತ್ತೆ ಕೇಳಿದರು. ಕಲಾಸಕ್ತಿ ಹುಣಸೆಕಾಯಿ ಇದ್ದ ಹಾಗೆ ಎಂದು ಹಾಸ್ಯ ಮಾಡಿದರು ವಿಶ್ವನಾಥ್. ಹೀಗೆ ಹಾಸ್ಯ ರೂಪದಲ್ಲಿ ವಿಧೇಯಕದ ವೇಳೆ ಚರ್ಚೆಯಾಗಿ ಮಾಲಾಶ್ರೀ ಮತ್ತು  ಉಮಾಶ್ರೀ ಹೆಸರು ಪ್ರಸ್ತಾಪವಾಯಿತು.

  • ವಿಧಾನ ಪರಿಷತ್‍ನಲ್ಲಿ ಗುಂಡಿನ ಗಮ್ಮತ್ತಿನ ಬಗ್ಗೆ ಚರ್ಚೆ- ನಗೆಗಡಲಲ್ಲಿ ತೇಲಿದ ಸದನ

    ವಿಧಾನ ಪರಿಷತ್‍ನಲ್ಲಿ ಗುಂಡಿನ ಗಮ್ಮತ್ತಿನ ಬಗ್ಗೆ ಚರ್ಚೆ- ನಗೆಗಡಲಲ್ಲಿ ತೇಲಿದ ಸದನ

    ಬೆಂಗಳೂರು: ಬಜೆಟ್ (Budget) ಮೇಲಿನ ಭಾಷಣದ ಚರ್ಚೆ ಗುಂಡಿನತ್ತ ತಿರುಗಿ ವಿಧಾನ ಪರಿಷತ್ (Vidhana Parishad) ಕಲಾಪದಲ್ಲಿ ಕೆಲ ಕಾಲ ಗುಂಡಿನ ಮತ್ತಿನ ಗಮ್ಮತ್ತಾಯಿತು. ಗುಂಡಿನ ಚರ್ಚೆಗೆ ಇಡೀ ಸದನವೇ ನಗೆಗಡಲಲ್ಲಿ ತೇಲಾಡಿತು. ಸರ್ವ ರೋಗಕ್ಕೂ ಸಾರಾಯಿ ಮದ್ದು ಅಂತ ಮಾತಿದೆ ಎಂದು ಗುಂಡಿನ ಬಗೆಗಿನ ಚರ್ಚೆಯನ್ನು ಹಾಸ್ಯದ ರೀತಿಯಲ್ಲಿ ಬಿಜೆಪಿ ಸದಸ್ಯ ಹೆಚ್.ವಿಶ್ವನಾಥ್ (H Vishwanath) ಸಮರ್ಥನೆ ಮಾಡಿಕೊಂಡರು.

    ವಿಧಾನ ಪರಿಷತ್ ವಿತ್ತೀಯ ಕಾರ್ಯಕಲಾಪದಲ್ಲಿ ಬಜೆಟ್ ಮೇಲಿನ ಚರ್ಚೆಯಲ್ಲಿ ಮೊದಲಿಗರಾಗಿ ಮಾತನಾಡಿದ ಬಿಜೆಪಿ ಸದಸ್ಯ ಹೆಚ್.ವಿಶ್ವನಾಥ್, ಕಾಂಗ್ರೆಸ್ ಬಜೆಟ್ ಬೆಂಬಲಿಸಿಕೊಂಡು ಮಾತನಾಡಿದರು. ಶಾಸನ ಸಭೆಗೆ ಬರೋದು ಜನರ ಸಮಸ್ಯೆ, ದುಃಖಗಳ ಬಗ್ಗೆ ಚರ್ಚೆ ಮಾಡುವುದಕ್ಕೆ. ಆದರೆ ಇವತ್ತು ವ್ಯವಸ್ಥೆ ಬದಲಾಗಿದೆ ಅಂತ ಕಳವಳ ವ್ಯಕ್ತಪಡಿಸಿದರು.

    ಈ ವೇಳೆ ಮಾತನಾಡುವಾಗ ಗುಂಡಿನ ಚರ್ಚೆಗೆ ವಿಷಯ ತಿರುಗಿತು. ಅತಿ ಹೆಚ್ಚು ಸರಕು ಮತ್ತು ಸೇವಾ ತೆರಿಗೆ (GST) ಕಟ್ಟುವುದು ನಾವು. ಜನ ಬೆಳಗ್ಗೆ ಎದ್ದರೆ ಜಿಎಸ್‍ಟಿ ಕಟ್ಟಬೇಕು. ಹಾಲು, ಪೇಪರ್ ಸೇರಿ ಎಲ್ಲದ್ದಕ್ಕೂ ಜಿಎಸ್‍ಟಿ. ನಾವು ರಾತ್ರಿ ಮಲಗೋವರೆಗೂ ಜಿಎಸ್‍ಟಿ ಕಟ್ಟುತ್ತೇವೆ ಎಂದರು.

    ಈ ವೇಳೆ ಗುಂಡಿನ ಬಗ್ಗೆ ಹೇಳಲಿಲ್ಲವಲ್ಲ ಎಂದು ಬಿಜೆಪಿ ಸದಸ್ಯರು ವಿಶ್ವನಾಥ್ ಕಾಲೆಳೆದರು. ಈ ವೇಳೆ ಸಮ್ಮಿಶ್ರ ಸರ್ಕಾರದ ಪತನದ ವಿಚಾರ ಪ್ರಸ್ತಾಪ ಮಾಡಿದ ವಿಶ್ವನಾಥ್, ಸಮ್ಮಿಶ್ರ ಸರ್ಕಾರದ ಪತನ ಸಮಯದಲ್ಲಿ ವೈಎ ನಾರಾಯಣಸ್ವಾಮಿ ಮನೆಯಲ್ಲಿ ಸೇರುತ್ತಿದ್ದೆವು. ಸಮ್ಮಿಶ್ರ ಸರ್ಕಾರ ಪತನಕ್ಕೆ ನಾರಾಯಣಸ್ವಾಮಿ ಮನೆಯಲ್ಲಿ ಸೇರುವಾಗ ಗುಂಡು ಹೊಡೆಯುತ್ತಿದ್ದೆವು ಎಂದ ಬಿಜೆಪಿ (BJP) ಸದಸ್ಯರ ಕಾಲೆಳೆದರು. ಇದನ್ನೂ ಓದಿ: ಸರ್ಕಾರದಿಂದ ವೆಬ್ ಸೀರೀಸ್ ಪ್ರಶಸ್ತಿ ಘೋಷಿಸಿದ ಸಚಿವ ಅನುರಾಗ್ ಠಾಕೂರ್

    ನಾರಾಯಣಸ್ವಾಮಿ (Narayanaswamy) ಮನೆಯಲ್ಲಿ ಎಣ್ಣೆ ಹೊಡೆದಿದ್ದೇವೆ ಎಂದಿದ್ದ ವಿಶ್ವನಾಥ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಛಲವಾದಿ ನಾರಾಯಣಸ್ವಾಮಿ, ಯಾವ ನಾರಾಯಣಸ್ವಾಮಿ ಎಂದು ವಿಶ್ವನಾಥ್ ಹೇಳಬೇಕು. ನಾನು ಈ ಎಣ್ಣೆ ವಿಚಾರದಲ್ಲಿ ಇಲ್ಲ ಎಂದರು. ಈ ವೇಳೆ ಸದನದಲ್ಲಿ ಹಾಸ್ಯದ ಹೊನಲು ಹರಿಯಿತು.

    ವಿಶ್ವನಾಥ್ ಮಾತಿಗೆ ಸದನದಲ್ಲಿ 10 ನಿಮಿಷ ಗುಂಡಿನ ಬಗ್ಗೆ ಚರ್ಚೆಯಾಯಿತು. ತೇಜಸ್ವಿನಿಗೌಡ, ರವಿಕುಮಾರ್, ಭಾರತಿ ಶೆಟ್ಟಿ ಹಾಗೂ ಕಾಂಗ್ರೆಸ್ ಸದಸ್ಯರ ನಡುವೆ ಹಾಸ್ಯಭರಿತ ಎಣ್ಣೆ ಬಗ್ಗೆ ಚರ್ಚೆಯಾಯಿತು. ಇದನ್ನೂ ಓದಿ: ಬಿಎಸ್‍ವೈ ಭೇಟಿಯಾಗಿ ಆಶೀರ್ವಾದ ಪಡೆದ್ರು ಸಿ.ಟಿ ರವಿ!

    ನಂತರ ವೈ.ಎ.ನಾರಾಯಣಸ್ವಾಮಿ ಮಾತನಾಡಿ, ನಾನು ವಿಶ್ವನಾಥ್ ಜೊತೆಗೆ ಇದ್ದೆವು. ವಿಶ್ವನಾಥ್ ಈಗ ಗುಂಡು ಹೊಡೆಯುವುದು ಬಿಟ್ಟಿದ್ದಾರೆ. ಬಜೆಟ್ ಬಗ್ಗೆ ಮಾತನಾಡುವಾಗ ಲಾಟರಿ, ಸಾರಾಯಿ ನಿಷೇಧ ಮಾಡಿದ್ದು ಸರ್ಕಾರಕ್ಕೆ ಹೇಳಿ ಎಂದು ಕಿಚಾಯಿಸಿದರು.

    ಈ ವೇಳೆ ಮಾತನಾಡಿದ ಬಿಜೆಪಿ ಸದಸ್ಯ ರವಿಕುಮಾರ್ ಮಧ್ಯದ ಸುಂಕ ಹೆಚ್ಚಾಗಿದೆ. ಮದ್ಯಪ್ರಿಯರ ಬಗ್ಗೆ ಕಾಳಜಿಯಿಂದ ಇದರ ಬಗ್ಗೆಯೂ ಬೆಳಕು ಚೆಲ್ಲಲಿ ಎಂದರು. ತೇಜಸ್ವಿನಿಗೌಡ ಮಾತನಾಡಿ, ಇದರ ಬಗ್ಗೆ ಈಗ ಬೆಳಕನ್ನ ಚೆಲ್ಲಲು ಆಗುವುದಿಲ್ಲ. ಇದು ರಾತ್ರಿಯಲ್ಲಿ ನಡೆಯುವ ವಿಷಯ ಎಂದು ಹಾಸ್ಯ ಚಟಾಕಿ ಹಾರಿಸಿದರು. ಭಾರತಿ ಶೆಟ್ಟಿ ಮಾತನಾಡಿ, ಗುಂಡು ಹೊಡೆದವರ ಜೊತೆ ನಾವು ಬದುಕುತ್ತಿದ್ದೇವೆ ಎಂದರು.

    ಬಿಜೆಪಿ ಸದಸ್ಯರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಭಾ ನಾಯಕ ಬೋಸರಾಜ್, ಗುಂಡು ಹಾನಿಕರ ಎಂದು ಅದನ್ನ ಕಡಿವಾಣ ಹಾಕಬೇಕೆಂದು ಅದರ ಮೇಲೆ ಸುಂಕ ಹೆಚ್ಚು ಮಾಡಿದ್ದೇವೆ ಎಂದು ಅಬಕಾರಿ ಸುಂಕ ಹೆಚ್ಚಳ ಸಮರ್ಥಿಸಿಕೊಂಡರು.

    ನಂತರ ಮಾತನಾಡಿದ ವಿಶ್ವನಾಥ್, ಗುಂಡಿನ ಬಗ್ಗೆ ಚರ್ಚೆ ವೇಳೆ ಮಾತಾಡುತ್ತಿದ್ದ ಭಾರತಿ ಶೆಟ್ಟಿ, ತೇಜಸ್ವಿನಿಗೌಡ ಇಬ್ಬರಿಗೂ ಟಾಂಗ್ ಕೊಟ್ಟರು. ಗುಂಡು ಹೊಡೆಯದೆ ಇರುವ ಇವರಿಗೆ ಇಷ್ಟು ಗುಂಡಿಗೆ ಇರೋದಾದರೆ ಗುಂಡು ಹಾಕೋ ನಮಗೆ ಎಷ್ಟು ಗುಂಡಿಗೆ ಇರಬೇಕು ಎಂದು ಹಾಸ್ಯ ಚಟಾಕಿ ಹಾರಿಸಿದರು.

    ನಾವು ಗೆದ್ದಾಗಲೂ ಕುಡಿಯುತ್ತೇವೆ. ಸೋತಾಗಲೂ ಕುಡಿಯುತ್ತೇವೆ. ಸತ್ತಾಗಲೂ ಕುಡಿಯುತ್ತೇವೆ. ಸರ್ವ ರೋಗಕ್ಕೂ ಸಾರಾಯಿ ಮದ್ದು ಅಂತ ಮಾತಿದೆ ಎಂದು ಗುಂಡಿನ ಬಗೆಗಿನ ಚರ್ಚೆಯನ್ನು ಹಾಸ್ಯದ ರೀತಿ ಸಮರ್ಥನೆ ಮಾಡಿಕೊಂಡರು ಸದನ ನಗೆಗಡಲಲ್ಲಿ ತೇಲೀತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವೇದಿಕೆಯಲ್ಲಿ ಒಂದೇ ಹಣ್ಣು ಹಂಚಿಕೊಂಡು ತಿಂದ ಸಿದ್ದರಾಮಯ್ಯ, ಹೆಚ್.ವಿಶ್ವನಾಥ್

    ವೇದಿಕೆಯಲ್ಲಿ ಒಂದೇ ಹಣ್ಣು ಹಂಚಿಕೊಂಡು ತಿಂದ ಸಿದ್ದರಾಮಯ್ಯ, ಹೆಚ್.ವಿಶ್ವನಾಥ್

    ರಾಯಚೂರು: ಕಾಂಗ್ರೆಸ್ (Congress) ತೊರೆದ ಬಳಿಕ ಸಿದ್ದರಾಮಯ್ಯ (Siddaramaiah) ಅವರಿಂದ ಅಂತರ ಕಾಯ್ದುಕೊಂಡಿದ್ದ ಮಾಜಿ ಸಚಿವ, ಎಂಎಲ್‌ಸಿ ಹೆಚ್.ವಿಶ್ವನಾಥ್ (H.Vishwanath) ರಾಯಚೂರಿನ (Raichuru) ದೇವದುರ್ಗದ ತಿಂಥಣಿಯಲ್ಲಿ ನಡೆಯುತ್ತಿರುವ ಹಾಲುಮತ ಸಂಸ್ಕೃತಿ ವೈಭವ ಕಾರ್ಯಕ್ರಮದ ವೇದಿಕೆಯಲ್ಲಿ ಅಕ್ಕಪಕ್ಕ ಕುಳಿತು ಉಭಯ ಕುಶಲೋಪರಿ ವಿಚಾರಿಸಿದರಲ್ಲದೇ, ಒಂದೇ ಹಣ್ಣನ್ನ ಹಂಚಿಕೊಂಡು ತಿಂದರು.

    ಬುಧವಾರವಷ್ಟೇ ಕಾಂಗ್ರೆಸ್ ನನ್ನ ರಕ್ತ, ನಾನು ಕಾಂಗ್ರೆಸ್‌ಗೆ ಹೋಗುತ್ತೇನೆ ಅಂತ ಹೇಳಿಕೆ ನೀಡಿದ್ದ ಹೆಚ್.ವಿಶ್ವನಾಥ್ ಇಂದು ಹಾಲುಮತ ಸಂಸ್ಕೃತಿ ವೈಭವ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕರ ಜೊತೆ ವೇದಿಕೆ ಹಂಚಿಕೊಂಡಿದ್ದಾರೆ. ವೇದಿಕೆಯಲ್ಲಿ ಪಕ್ಕದಲ್ಲೇ ಕುಳಿತಿದ್ದ ಸಿದ್ದರಾಮಯ್ಯ ಹೆಚ್.ವಿಶ್ವನಾಥ್‌ಗೆ ತಮ್ಮ ಕೈಯಲ್ಲಿದ್ದ ಅರ್ಧ ಪೇರಲ ಹಣ್ಣು ಕೊಟ್ಟರು. ಕಾರ್ಯಕ್ರಮದಲ್ಲಿ ಸತೀಶ್ ಜಾರಕಿಹೊಳಿ, ಹೆಚ್.ಎಂ.ರೇವಣ್ಣ ಸೇರಿದಂತೆ ಹಲವಾರು ಕಾಂಗ್ರೆಸ್ ನಾಯಕರು ಭಾಗಿಯಾಗಿದ್ದರು‌. ಇದನ್ನೂ ಓದಿ: ಸಿದ್ದರಾಮಯ್ಯ ಕೋಲಾರದಲ್ಲಿ ನಿಂತರೆ ಸೋಲುತ್ತಾರೆ: ಸಿಎಂ ಇಬ್ರಾಹಿಂ ಭವಿಷ್ಯ

    ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಭಾಷಣದ ವೇಳೆ ಯುವಕನೋರ್ವ ಸ್ಪೀಕರ್ ಮೇಲೆ ಏರಿ ಕುಳಿತು ಸಿದ್ದರಾಮಯ್ಯಗೆ ಕೈ ಮುಗಿಯುವ ಮೂಲಕ ಗಮನ ಸೆಳೆದ ಘಟನೆ ನಡೆಯಿತು.‌ ಅಭಿಮಾನಿಯ ಹುಚ್ಚಾಟ ಕಂಡು ಗರಂ ಆದ ಸಿದ್ದರಾಮಯ್ಯ ಕೆಳಗಡೆ ಇಳಿಯುವಂತೆ ಯುವಕನಿಗೆ ಗದರಿದರು.

    ಸಿದ್ದರಾಮಯ್ಯ ಬೈದರೂ ಯುವಕ ಕೈ ಮುಗಿಯುತ್ತಲೇ ಕುಳಿತಿದ್ದ. ಅವನನ್ನ ಯಾರೂ ನೋಡಬೇಡಿ.. ಭಾಷಣ ಕೇಳಿ ಅಂತಾ ಸಿದ್ದರಾಮಯ್ಯ ಹೇಳಿದ್ದಕ್ಕೆ ಕೆಲಕಾಲ ನೆರೆದಿದ್ದ ಜನ ನಗೆಗಡಲಲ್ಲಿ‌ ತೇಲಿದ್ದರು. ಬಳಿಕ ಯುವಕನನ್ನ ಪೊಲೀಸರು ಕೆಳಗೆ ಇಳಿಸಿದರು. ಇದನ್ನೂ ಓದಿ: ಸುಮಲತಾ ಅಂಬರೀಶ್‌ಗೆ ಬಿಜೆಪಿ ಪಕ್ಷ ಸೇರ್ಪಡೆ ಆಹ್ವಾನ ನೀಡಿದ್ದೇವೆ: ಅಶ್ವಥ್ ನಾರಾಯಣ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಕಟೀಲ್‌ಗೆ ಛೀ, ಥೂ ಎಂದ ವಿಶ್ವನಾಥ್

    ಕಟೀಲ್‌ಗೆ ಛೀ, ಥೂ ಎಂದ ವಿಶ್ವನಾಥ್

    ಮಡಿಕೇರಿ: ಕರ್ನಾಟಕ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ (Nalin Kumar Kateel) ಅವರು ತಮ್ಮ ಪಕ್ಷದ ಕಾರ್ಯಕರ್ತರಿಗೆ ರಸ್ತೆ ಮತ್ತು ಚರಂಡಿಯಂತಹ ‘ಸಣ್ಣ ಸಮಸ್ಯೆಗಳ’ ಬಗ್ಗೆ ಮಾತನಾಡಬೇಡಿ, ಆದರೆ ‘ಲವ್ ಜಿಹಾದ್’ (Love Jihad) ನಂತಹ ದೊಡ್ಡ ವಿಷಯಗಳ ಬಗ್ಗೆ ಮಾತನಾಡಿ ಎಂದು ಹೇಳಿಕೆ ನೀಡಿರುವ ಮೂಲಕ ಹೊಸ ವಿವಾದವನ್ನು ಹುಟ್ಟುಹಾಕಿದ್ದಾರೆ. ಈ ಹಿನ್ನೆಲೆ ಒಂದು ರಾಜ್ಯ ಆಳುವ ಪಕ್ಷದ ಅಧ್ಯಕ್ಷ ಹೀಗೆ ಅರ್ಥವಿಲ್ಲದ ಮಾತುಗಳನ್ನಾಡಬಾರದು, ಛೀ.. ಥೂ.. ಎಂದು ಎಂಎಲ್‌ಸಿ ವಿಶ್ವನಾಥ್ (Vishwanath) ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

    ಮಡಿಕೇರಿಯಲ್ಲಿ (Madikeri) ಮಾತಾನಾಡಿದ ಅವರು, ನಿಮಗೆ ಇದು ಸಣ್ಣ ಪುಟ್ಟ ವಿಷಯವೇ ಆದರೆ ಕೇರಿಯಲ್ಲಿ ಬದುಕುವವರ ಕಥೆ ಏನು? ಕೇರಿಯಲ್ಲಿ ಬದುಕುವ ನಮಗೆ ನಮ್ಮ ಮೂಲಭೂತ ಸೌಲಭ್ಯ ಮುಖ್ಯ. ನಮ್ಮ ಪಾಯಿಖಾನೆ ಏನಾಯ್ತು? ನಮ್ಮ ಚರಂಡಿ, ರಸ್ತೆ, ಮನೆ ಏನಾಯ್ತು? ನಮ್ಮ ಕೇರಿ ನೀರೇನಾಯ್ತು? ಇದುವೇ ನಮ್ಮ ಸಮಸ್ಯೆ. ಅದು ಬಿಟ್ಟು ಲವ್ ಜಿಹಾದ್ ಹೆಸರಿನಲ್ಲಿ ನೀವು ಜನರನ್ನು ಹೇಗೆ ದಿಕ್ಕು ತಪ್ಪಿಸುತ್ತೀರಿ ನೋಡಿ ಎಂದು ಕಿಡಿಕಾರಿದರು. ಇದನ್ನೂ ಓದಿ: ತಂದಿಟ್ಟು ತಮಾಷೆ ನೋಡುವ ಕಲೆ ಕುಮಾರಸ್ವಾಮಿ ಅವರಿಗೆ ಸಿದ್ಧಿಸಿದೆ: ಬಿಜೆಪಿ ಕಿಡಿ

    ಒಂದು ರಾಜ್ಯ ಆಳುವ ಪಕ್ಷದ ಅಧ್ಯಕ್ಷ ಹೀಗೆ ಅರ್ಥವಿಲ್ಲದ ಮಾತುಗಳನ್ನಾಡಬಾರದು. ಛೀ.. ಥೂ… ಎಂದು ವಿಶ್ವನಾಥ್ ಅಸಮಾಧಾನ ವ್ಯಕ್ತಪಡಿಸಿದರು.

    ಸಿಎಂ ಬಸವರಾಜ ಬೊಮ್ಮಾಯಿ ಪ್ರಧಾನಿ ನರೇಂದ್ರ ಮೋದಿ ಎದುರು ನಾಯಿಮರಿ ರೀತಿ ನಿಲ್ಲುತ್ತಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ನೀಡಿರುವ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಸಿದ್ದರಾಮಯ್ಯ ಕೂಡಾ ಸಿಎಂ ಆಗಿದ್ದವರು. ಈಗ ಬೊಮ್ಮಾಯಿ ನಮ್ಮ ಸಿಎಂ ಆಗಿದ್ದಾರೆ. ಯಾರೇ ಆದರೂ ಈ ರೀತಿ ಲಘುವಾಗಿ ಮಾತನಾಡಬಾರದು ಎಂದರು. ಇದನ್ನೂ ಓದಿ: ಬಿಜೆಪಿ, ಕಾಂಗ್ರೆಸ್ ನಾಯಕರ ಮಾತಿಗೆ ತಲೆ ಕೆಡಿಸಿಕೊಳ್ಳಲ್ಲ: ಜನಾರ್ದನ ರೆಡ್ಡಿ

    Live Tv
    [brid partner=56869869 player=32851 video=960834 autoplay=true]

  • ಹಳ್ಳಿಹಕ್ಕಿ ಮರಳಿ ಗೂಡು ಸೇರುತ್ತಾ? ನಿನ್ನೆ ಖರ್ಗೆ, ಇವತ್ತು ಸಿದ್ದು ಭೇಟಿಯ ಗುಟ್ಟೇನು?

    ಹಳ್ಳಿಹಕ್ಕಿ ಮರಳಿ ಗೂಡು ಸೇರುತ್ತಾ? ನಿನ್ನೆ ಖರ್ಗೆ, ಇವತ್ತು ಸಿದ್ದು ಭೇಟಿಯ ಗುಟ್ಟೇನು?

    ಬೆಂಗಳೂರು: ವಿಧಾನಸಭೆ ಚುನಾವಣೆ ಬರುತ್ತಿದ್ದಂತೆ ವಲಸಿಗರ ನಡೆ ಕುತೂಹಲ ಮೂಡಿಸುತ್ತಿದೆ. ಬಿಜೆಪಿ (BJP) ಪರಿಷತ್ ಸದಸ್ಯ ಎಚ್. ವಿಶ್ವನಾಥ್ (H Vishwanath) ಸದ್ದಿಲ್ಲದೇ ಇಬ್ಬರು ಘಟಾನುಘಟಿ ಕಾಂಗ್ರೆಸ್ ನಾಯಕರನ್ನು ಬ್ಯಾಕ್ ಟು ಬ್ಯಾಕ್ ಭೇಟಿ ಮಾಡಿದ್ದು, ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಟಿಯಾಗಿದೆ. ವಿಶ್ವನಾಥ್ ಬಿಜೆಪಿ ತೊರೆದು ಕಾಂಗ್ರೆಸ್ (Congress) ಸೇರ್ತಾರಾ ಅನ್ನೋ ಅನುಮಾನ ಹುಟ್ಟಿಸಿದೆ.

    ಕಳೆದ 3 ವರ್ಷಗಳಿಂದ ಬಿಜೆಪಿಯಲ್ಲಿರುವ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಈಗ ಮರಳಿ ಗೂಡಿಗೆ ಸೇರಲು ಕಸರತ್ತು ನಡೆಸ್ತಿದ್ದಾರಾ? ಬಿಜೆಪಿ ತೊರೆದು ಮಾತೃಪಕ್ಷ ಸೇರ್ತಾರಾ ವಿಶ್ವನಾಥ್? ಈ ಅನುಮಾನ ಬರಲು ಕಾರಣ ನಿನ್ನೆ ಮತ್ತು ಇವತ್ತು ವಿಶ್ವನಾಥ್ ತೋರಿದ ನಡೆ. ವಿಶ್ವನಾಥ್ ಅವರು, ನಿನ್ನೆಯಷ್ಟೇ ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun kharge) ಅವರನ್ನು ಭೇಟಿ ಮಾಡಿ ಅನೇಕರ ಹುಬ್ಬು ಮೇಲೆ ಹೋಗುವಂತೆ ಮಾಡಿದ್ದರು.

    ಅದರ ಬೆನ್ನಲ್ಲೇ ಇವತ್ತು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡುವ ಮೂಲಕ ತೀವ್ರ ಕುತೂಹಲ ಮೂಡಿಸಿದ್ದಾರೆ. ಇವತ್ತು ಬೆಳಗ್ಗೆ ಆರೋಗ್ಯ ವಿಚಾರಿಸುವ ನೆಪದಲ್ಲಿ ಸಿದ್ದರಾಮಯ್ಯ (Siddaramaiah) ಅವರ ಸರ್ಕಾರಿ‌ ನಿವಾಸಕ್ಕೆ ವಿಶ್ವನಾಥ್ ಭೇಟಿ ಕೊಟ್ಟರು. ಅರ್ಧ ಗಂಟೆಗೂ ಹೆಚ್ಚು ಕಾಲ ಸಿದ್ದರಾಮಯ್ಯ ಅವರ ಜತೆ ವಿಶ್ವನಾಥ್ ಮಾತುಕತೆ ನಡೆಸಿದರು.

    ಅಷ್ಟಕ್ಕೂ ವಿಶ್ವನಾಥ್, ಸಿದ್ದರಾಮಯ್ಯನವರ ನಡೆಯಿಂದ ಬೇಸತ್ತು ಕಾಂಗ್ರೆಸ್ ತೊರೆದು ಜೆಡಿಎಸ್ (JDS) ಸೇರಿದ್ದರು. ನಂತರ ಜೆಡಿಎಸ್‌ನಲ್ಲೂ ವೈಮನಸ್ಸು ಬಂದು ಸಮ್ಮಿಶ್ರ ಸರ್ಕಾರ ಕೆಡವಿ 16 ಜನ ವಲಸಿಗರ ಜತೆ ತಾವೂ ಬಿಜೆಪಿಗೆ ಸೇರ್ಪಡೆ ಆಗಿದ್ದರು. ಆದರೆ ಬಿಜೆಪಿಯಲ್ಲಿ ಮಾತ್ರ ಈವರೆಗೂ ಅವರಿಗೆ ಸಚಿವ ಸ್ಥಾನ ಸಿಗಲಿಲ್ಲ. ಅವರ ಹಿರಿತನಕ್ಕೆ ಮಾನ್ಯತೆಯೂ ಸಿಗಲಿಲ್ಲ. ಸಾಲದ್ದಕ್ಕೆ ಉಪಚುನಾವಣೆಯಲ್ಲಿ ಸಹ ಸೋತರು.

    ಬಹಳ ಕಸರತ್ತು ನಡೆಸಿ ಸಾಹಿತ್ಯ ಕೋಟಾದಿಂದ ಪರಿಷತ್‌ಗೆ ನಾಮನಿರ್ದೇಶನಗೊಂಡರು. ಆದರೆ ಬಿಜೆಪಿಯಲ್ಲಿದ್ರೂ ಅಲ್ಲಿನ ನಾಯಕರನ್ನು ಸತತವಾಗಿ ಟೀಕಿಸುತ್ತಲೇ ಬಂದರು. ಸದ್ಯ ಅವರು ಈಗ ಬಿಜೆಪಿಯಿಂದಲೂ ಮಾನಸಿಕವಾಗಿ ದೂರವಾಗಿದ್ದಾರೆ. ಇನ್ನು, ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರ್ತೀರಾ ಎಂಬ ಪ್ರಶ್ನೆಗೆ ಅಸ್ಪಷ್ಟ ಉತ್ತರದ ಮೂಲಕವೇ ಪಕ್ಷ ಬಿಡುವ ಸುಳಿವನ್ನು ನೀಡಿದ್ದಾರೆ. ಇದನ್ನೂ ಓದಿ: ತವರಿಗೆ ಮತ್ತೆ ಮರಳುತ್ತಾ ಹಳ್ಳಿಹಕ್ಕಿ- ವಿಶ್ವನಾಥ್‍ಗೆ ಈಗ ಖರ್ಗೆಯೇ ಆಸರೆ!

    ವಿಶ್ವನಾಥ್ ಕಾಂಗ್ರೆಸ್‌ನ ಘಟಾನುಘಟಿ ನಾಯಕರನ್ನು ಭೇಟಿ ಮಾಡಿರೋದು, ಅವರು ಪಕ್ಷಾಂತರ ಮಾಡ್ತಾರೆ ಅಂತ ದಟ್ಟವಾಗಿಯೇ ಚರ್ಚೆ ನಡೀತಿದೆ. ತಮ್ಮ ಪುತ್ರನ ರಾಜಕೀಯ ಭವಿಷ್ಯ ಗಟ್ಟಿ ಮಾಡುವ ಪ್ರಯತ್ನವೂ ಇದರಲ್ಲಿ ಸೇರಿದೆ ಎನ್ನಲಾಗುತ್ತಿದೆ. ಇದನ್ನೂ ಓದಿ: ಆಸ್ತಿ ವಿಚಾರಕ್ಕೆ ಸೋದರ ಸಂಬಂಧಿಯ ತಲೆಯನ್ನೇ ಕಡಿದ್ರು – ಸೆಲ್ಫಿ ತೆಗೆದು ವಿಕೃತಿ ಮೆರೆದ್ರು

    Live Tv
    [brid partner=56869869 player=32851 video=960834 autoplay=true]

  • ಸಿದ್ದರಾಮಯ್ಯಗೆ ಮಾತಿನ ಮೇಲೆ ಹಿಡಿತ ಇಲ್ಲ: ವಿಶ್ವನಾಥ್ ಕಿಡಿ

    ಸಿದ್ದರಾಮಯ್ಯಗೆ ಮಾತಿನ ಮೇಲೆ ಹಿಡಿತ ಇಲ್ಲ: ವಿಶ್ವನಾಥ್ ಕಿಡಿ

    ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತಿನ ಮೇಲೆ ಹಿಡಿತ ಇಲ್ಲದಂತೆ ಮಾತನಾಡುತ್ತಾರೆ. ಹಿಂದುತ್ವ ಮತ್ತು ಆರ್‌ಎಸ್‌ಎಸ್ ವಿರೋಧ ಮಾಡಿದರೆ ಅಲ್ಪಸಂಖ್ಯಾತರು ಮತ ಹಾಕುತ್ತಾರೆ ಎಂಬ ಕೆಟ್ಟ ಅಭಿಪ್ರಾಯ ಹೊಂದಿದ್ದಾರೆ ಎಂದು ಶಾಸಕ ಎಸ್.ಆರ್.ವಿಶ್ವನಾಥ್ ಅವರು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಇವತ್ತು ಆರ್‌ಎಸ್‌ಎಸ್‌ ಇಲ್ಲದೇ ಹೋಗಿದ್ದರೆ ದೇಶದ ಪರಿಸ್ಥಿತಿ ಏನಾಗುತ್ತಿತ್ತು ಎಂಬುದನ್ನು ಅವರು ಅರ್ಥ ಮಾಡಿಕೊಳ್ಳಬೇಕು. ನಾವೆಲ್ಲರೂ ಮೂಲ ಆರ್‌ಎಸ್‌ಎಸ್‍ನಿಂದ ಬಂದವರು. ನಮಗೆ ಯಾವುದೇ ರೀತಿಯಲ್ಲಿ ಬಹಿರಂಗವಾಗಿ ನೇಣಿಗೆ ಹಾಕಿ, ಕೈ ಕತ್ತರಿಸಿ, ಕಲ್ಲು ಹೊಡೆಯಿರಿ ಎಂದು ಆರ್‌ಎಸ್‌ಎಸ್‌ ಹೇಳಿಲ್ಲ. ಭಾರತ್ ಮಾತಾಕಿ ಜೈ ಎನ್ನಬೇಕು, ವಂದೇ ಮಾತರಂ ಹೇಳಬೇಕು, ನಮ್ಮ ದೇಶಕ್ಕೆ ಯಾವುದೇ ರೀತಿಯ ತೊಂದರೆ ಆದಾಗ ನಾವು ಧ್ವನಿ ಎತ್ತಬೇಕು. ಈ ದಿಸೆಯಲ್ಲಿ ಆರ್‌ಎಸ್‌ಎಸ್‌ ಕೆಲಸ ಮಾಡುತ್ತಿದೆ ಎಂದು ನುಡಿದಿದ್ದಾರೆ. ಇದನ್ನೂ ಓದಿ: 18 ತಿಂಗಳ ಬಳಿಕ ಸವದತ್ತಿ ಎಲ್ಲಮ್ಮ ದರ್ಶನಕ್ಕೆ ಅವಕಾಶ- ಕಂಡಿಶನ್ಸ್ ಅಪ್ಲೈ

    ಸಿದ್ದರಾಮಯ್ಯನವರು ಇನ್ನು ಮುಂದೆಯಾದರೂ ಇಂತಹ ಹೇಳಿಕೆ ನೀಡುವುದನ್ನು ನಿಲ್ಲಿಸಬೇಕು. ಚಡ್ಡಿಗಳು ಎಂದು ಹೇಳುವುದನ್ನು ನಿಲ್ಲಿಸಬೇಕು. ಬಹುಶಃ ಮೊನ್ನೆ ವಿಧಾನಸಭೆಯಲ್ಲಿ ಅವರ ಪಂಚೆ ಉದುರಿದಾಗ ಈ ಚಡ್ಡಿಯೇ ಅವರ ಮಾನ ಉಳಿಸಿದೆ. ದೇಶದ ಗೌರವ, ಸಂಸ್ಕೃತಿಯನ್ನು ಉಳಿಸುವ ನಿಟ್ಟಿನಲ್ಲಿ ಹೋರಾಟ ಮಾಡಿಕೊಂಡಿರುವ ಸಂಸ್ಥೆಯಿದು. ಒಮ್ಮೆ ಸಿದ್ದರಾಮಯ್ಯನವರು ನಮ್ಮ ಒಟಿಸಿ ಕ್ಯಾಂಪ್‍ಗೆ ಬಂದು ಅಲ್ಲಿನ ಶಿಸ್ತು ದೇಶಭಕ್ತಿಯನ್ನು ಕಲಿಯಲಿ. ಹೀಗೆ ಬಂದರೆ ಅವರ ಮನಃಸ್ಥಿತಿ ಬದಲಾಗುತ್ತದೆ. ದಯಮಾಡಿ ಸಿದ್ದರಾಮಯ್ಯನವರೇ ನೀವು ಒಂದು ತಿಂಗಳ ಮಟ್ಟಿಗೆ ನಮ್ಮ ಆರ್‌ಎಸ್‌ಎಸ್‍ನ ಒಟಿಸಿಗೆ ಬನ್ನಿ ಎಂದಿದ್ದಾರೆ. ಇದನ್ನೂ ಓದಿ: ತಾಲಿಬಾನ್‍ಗೂ, RSSಗೂ ವ್ಯತ್ಯಾಸ ಇದೆ: ಸಿದ್ದರಾಮಯ್ಯಗೆ ಆರಗ ಜ್ಞಾನೇಂದ್ರ ತಿರುಗೇಟು

    ನೀವೆಲ್ಲಾ ತಾಲಿಬಾನ್ ಪರವಾಗಿರುವವರು, ಹಾಗಾಗಿ ಒಮ್ಮೆಯೂ ನೀವು ತಾಲಿಬಾನ್ ವಿರೋಧಿಸಿಲ್ಲ. ತಾಲಿಬಾನ್ ಮನಸ್ಥಿತಿ ಕಾಂಗ್ರೆಸ್‍ನವರಿಗೆ ಇದೆ. ನೀವು ಎಷ್ಟು ಆರ್‌ಎಸ್‌ಎಸ್‌ ಅನ್ನು ಟೀಕೆ ಮಾಡುತ್ತೀರಿ, ನರೇಂದ್ರ ಮೋದಿಯವರನ್ನು ಟೀಕೆ ಮಾಡುತ್ತೀರಿ, ಅಷ್ಟು ಕಪ್ಪು ಚುಕ್ಕೆ ನಿಮಗಾಗುತ್ತದೆ. ನಿಮಗೆ ತುಂಬಾ ಡ್ಯಾಮೇಜ್ ಆಗುತ್ತದೆ. ನೀವು ಹೀಗೆ ಮಾತನಾಡುತ್ತಾ ಹೋದರೆ, ಜನ ನಿಮ್ಮನ್ನು ಲೆಕ್ಕಕ್ಕೆ ಇಟ್ಟಿಕೊಳ್ಳುವುದಿಲ್ಲ. ನೀವು ಸೈಕಲ್, ಜಟಕಾ ಹತ್ತಿ ರಾಜ್ಯ ಸುತ್ತುವ ವೇಳೆಗೆ ನಾವು ಮತ್ತೊಮ್ಮೆ ಅಧಿಕಾರಕ್ಕೆ ಬರುತ್ತೇವೆ ಎಂದು ವ್ಯಂಗ್ಯವಾಡಿದ್ದಾರೆ.

  • ಅಪ್ಪಾಜಿಯ ಸಿಎಂ ಸ್ಥಾನ ಗಟ್ಟಿಯಾಗಿರಲೆಂದು ದೇವರಲ್ಲಿ ಪ್ರಾರ್ಥಿಸುವೆ: ಬಿಎಸ್‍ವೈ ದತ್ತು ಪುತ್ರ ವಿಶ್ವನಾಥ್

    ಅಪ್ಪಾಜಿಯ ಸಿಎಂ ಸ್ಥಾನ ಗಟ್ಟಿಯಾಗಿರಲೆಂದು ದೇವರಲ್ಲಿ ಪ್ರಾರ್ಥಿಸುವೆ: ಬಿಎಸ್‍ವೈ ದತ್ತು ಪುತ್ರ ವಿಶ್ವನಾಥ್

    ಬೆಂಗಳೂರು: ಅಪ್ಪಾಜಿ ಸಿಎಂ ಸ್ಥಾನದಿಂದ ನಿರ್ಗಮನದ ವಿಚಾರ ಚರ್ಚೆಯಾಗುತ್ತಿದೆ. ಆದರೆ ಅವರು ಐದು ವರ್ಷ ಪೂರೈಸಬೇಕು. ಸಿಎಂ ಸೀಟಿನಿಂದ ಕೆಳಗೆ ಇಳಿಯಬಾರದು. ಸಿಎಂ ಸ್ಥಾನ ಗಟ್ಟಿಯಾಗಿರಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ದತ್ತು ಪುತ್ರ ವಿಶ್ವನಾಥ್ ಬಿ ತಿಳಿಸಿದ್ದಾರೆ.

    ಈ ಕುರಿತು ಮಾತನಾಡಿರುವ ಅವರು, ಅಪ್ಪಾಜಿಯವರು ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಬಾರದು, ಅವರು ಸಿಎಂ ಸ್ಥಾನದಲ್ಲಿ ಮುಂದುವರಿಯಬೇಕೆಂದು ಪ್ರಾರ್ಥಿಸುತ್ತೇನೆ ಎಂದು ಭಾವುಕರಾಗಿ ನುಡಿದರು.

    ಮೂಲತಃ ಉತ್ತರ ಕರ್ನಾಟಕ ಮೂಲದ ವಿಶ್ವನಾಥ್ ಬೆಂಗಳೂರಿನಲ್ಲಿ ವಾಸವಾಗಿದ್ದರು. 2010ರಲ್ಲಿ ಬಿಎಸ್‍ವೈ ಸಿಎಂ ಆಗಿದ್ದಾಗ ಮಳೆ ಹಾನಿ ವೀಕ್ಷಿಸಲು ಗಾಳಿ ಅಂಜನೇಯ ದೇಗುಲಕ್ಕೆ ತೆರಳಿದ್ದರು. ಆಗ 11 ವರ್ಷದ ವಿಶ್ವನಾಥ್ ಸಿಎಂ ನೋಡಲು ದೇವಸ್ಥಾನದ ಗೋಡೆ ಎಗರಿ, ಸರ್ಕಸ್ ಮಾಡಿ ಸಿಎಂ ಬಳಿಗೆ ಬಂದಿದ್ದರು.

    ಈ ವೇಳೆ ಪುಟ್ಟ ಹುಡುಗನನ್ನು ನೋಡಿದ ಬಿಎಸ್‍ವೈ ಖುಷಿ ಪಟ್ಟು, ನಿನ್ನನ್ನು ನಾನು ದತ್ತು ಪಡೆದು, ವಿದ್ಯಾಭ್ಯಾಸ ನೋಡಿಕೊಳ್ಳುತ್ತೇನೆ ಎಂದು ವಿಶ್ವನಾಥ್ ಗೆ ಭರವಸೆ ಕೊಟ್ಟಿದ್ದರು. ಅಷ್ಟೇ ಅಲ್ಲ ವಿಶ್ವನಾಥ್ ಗೆ ಈಗ ಕೆಆರ್‍ಡಿಎಲ್ ನಲ್ಲಿ ಡಿ ಗ್ರೂಪ್ ನೌಕರ ಹುದ್ದೆಯನ್ನು ಕೂಡ ಕೊಡಿಸಿದ್ದಾರೆ. ಈಗ ಸಿಎಂ ಬದಲಾವಣೆಯ ಬಗ್ಗೆ ಚರ್ಚೆಯಾಗುತ್ತಿರುವ ವಿಚಾರಕ್ಕೆ ಸಿಎಂ ದತ್ತು ಪುತ್ರ ಬೇಸರ ವ್ಯಕ್ತಪಡಿಸಿದ್ದಾರೆ.

  • ರಾಜ್ಯದಲ್ಲಿ ಕೊರೊನಾ ಲಸಿಕೆಗೆ ಅಭಾವ: ವಿಶ್ವನಾಥ್

    ರಾಜ್ಯದಲ್ಲಿ ಕೊರೊನಾ ಲಸಿಕೆಗೆ ಅಭಾವ: ವಿಶ್ವನಾಥ್

    ನೆಲಮಂಗಲ: ರಾಜ್ಯದಲ್ಲಿ ವ್ಯಾಕ್ಸಿನ್ ಸಾಕಷ್ಟು ಪ್ರಮಾಣದಲ್ಲಿ ಸರಬರಾಜು ಹಾಗುತ್ತಿಲ್ಲ. ಈ ಬಗ್ಗೆ ಆರೋಗ್ಯ ಸಚಿವರು ಕೇಂದ್ರದ ಸಚಿವರ ಜೊತೆಗೆ ಸಂಪರ್ಕದಲ್ಲಿ ಇದ್ದಾರೆ ಎಂದು ಬಿಡಿಎ ಅಧ್ಯಕ್ಷ ಯಲಹಂಕ ಶಾಸಕ ಎಸ್ ಆರ್ ವಿಶ್ವನಾಥ್ ಸತ್ಯವನ್ನ ಹೊರ ಹಾಕಿದ್ದಾರೆ.

    ನೆಲಮಂಗಲ ಸಮೀಪದ ದಾಸನಪುರ ಹೋಬಳಿಯ ಗ್ರಾಮಸ್ಥರಿಗೆ ಅನುಕೂಲವಾಗಲಿ ಎಂದು ಎನ್.ಜಿ.ಓ ದವರ ಜೊತೆಗೂಡಿ ವ್ಯಾಕ್ಸಿನ್ ಅನ್ನು ನೀಡಲಾಗುತ್ತಿದೆ ಇಂದು 500 ಜನರಿಗೆ ವ್ಯಾಕ್ಸಿನ್ ನೀಡುವ ಉದ್ದೇಶವನ್ನು ಹೊಂದಿದ್ದೇವೆ. ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳ ಸಲಹೆಗಾರ ಪ್ರಶಾಂತ್ ಸಹಕಾರದೊಂದಿಗೆ ವ್ಯಾಕ್ಸಿನ್ ವಿತರಣೆಯನ್ನು ಮಾಡಲಾಗುತ್ತಿದೆ ಎಂದರು.

    ಕಳೆದ 15 ದಿನಗಳಿಂದ 3000 ಜನರಿಗೆ ವ್ಯಾಕ್ಸಿನ್ ವಿತರಣೆ ಮಾಡಲಾಗಿದೆ. ಹಾಗೆಯೇ ದಾಸನಪುರ ಹೋಬಳಿಯಲ್ಲಿ ಇಂದು ಮತ್ತು ನಾಳೆ 1500 ಜನರಿಗೆ ವ್ಯಾಕ್ಸಿನ್ ಮಾಡಲಾಗುತ್ತದೆ. ನಮ್ಮ ರಾಜ್ಯದಲ್ಲಿ ವ್ಯಾಕ್ಸಿನೇಷನ್ ಸಾಕಷ್ಟು ಪ್ರಮಾಣದಲ್ಲಿ ಸರಬರಾಜು ಆಗುತ್ತಿಲ್ಲ. ಆದ್ದರಿಂದ ಅರೋಗ್ಯ ಸಚಿವರು ಕೇಂದ್ರದ ಸಚಿವರ ಜೊತೆಗೆ ಮಾತನಾಡುತ್ತಿದ್ದಾರೆ. ಜುಲೈ ಆಗಸ್ಟ್ ತಿಂಗಳ ಒಳಗಾಗಿ ಎಲ್ಲರಿಗೂ ಕೂಡ ಮೊದಲನೇ ಹಂತದ ಲಸಿಕೆ ಹಾಕಿಸಲಾಗುತ್ತದೆ ಎಂದು ತಿಳಿಸಿದರು.

    ಎಲ್ಲರೂ ಕೂಡ ಸರ್ಕಾರದ ನಿಯಮಗಳನ್ನ ಕಡ್ಡಾಯವಾಗಿ ಪಾಲಿಸಬೇಕು. ಅಂಕಿ-ಅಂಶಗಳ ಪ್ರಕಾರ ವ್ಯಾಕ್ಸಿನೇಷನ್ ಪಡೆದವರಲ್ಲಿ ಸಾವು-ನೋವುಗಳು ಆಗಿರುವುದಿಲ್ಲ. ಎಲ್ಲೋ ಕೆಲವರಿಗೆ ಜ್ವರ ಬಂದಿದೆ ಅಷ್ಟೇ. ಈಗಿನ ಪರಿಸ್ಥಿತಿಯಲ್ಲಿ ಪೂರ್ಣ ರೋಗ ಕಡಿಮೆ ಮಾಡುವ ಔಷಧಿ ಯಾವುದು ಬಂದಿರುವುದಿಲ್ಲ. ವ್ಯಾಕ್ಸಿನೇಷನ್ ಮಾಡಿಸುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ ಎಂದು ಹೇಳಿದರು.

  • ಸಿಎಂ ಬಿಎಸ್‍ವೈಗೆ ಮತ್ತೆ ವಿಶ್ವನಾಥ್ ಟಕ್ಕರ್

    ಸಿಎಂ ಬಿಎಸ್‍ವೈಗೆ ಮತ್ತೆ ವಿಶ್ವನಾಥ್ ಟಕ್ಕರ್

    ಬೆಂಗಳೂರು: ಸಿಎಂ ಆದಿಯಾಗಿ ಬಿಜೆಪಿಯ ಪ್ರಮುಖರು ಶಿಸ್ತು ಕ್ರಮದ ಸುಳಿವು ಕೊಟ್ಟಿದ್ರೂ, ಎಂಎಲ್‍ಸಿ ಹೆಚ್ ವಿಶ್ವನಾಥ್ ಬೇಗುದಿ ಮಾತ್ರ ಕಮ್ಮಿ ಆಗ್ತಿಲ್ಲ. ವಿಶ್ವನಾಥ್‍ಗೆ ವಿಧಾನಪರಿಷತ್ ಸದಸ್ಯತ್ವವನ್ನು ಭಿಕ್ಷೆಯ ರೀತಿ ನೀಡಲಾಗಿದೆ ಎಂಬ ನಿಗಮ ಮಂಡಳಿ ಅಧ್ಯಕ್ಷರ ಪ್ರಕಟಣೆಗೆ ಹಳ್ಳಿಹಕ್ಕಿ ಫುಲ್ ಗರಂ ಆಗಿದ್ದಾರೆ.

    ನನಗೆ ಎಂಎಲ್‍ಸಿ ಸ್ಥಾನವನ್ನು ಅವರಪ್ಪನ ಮನೆಯಿಂದ ಕೊಟ್ಟಿದ್ದಾರಾ? ನನ್ನ ತ್ಯಾಗದಿಂದ ನನಗೆ ಪರಿಷತ್ ಸ್ಥಾನಮಾನ ಸಿಕ್ಕಿದೆ. ನಾವು ಅವರ ಮರ್ಜಿಯಲ್ಲಿಲ್ಲ, ಮುಖ್ಯಮಂತ್ರಿಯಾದಿಯಾಗಿ ಇಡೀ ಸರ್ಕಾರವೇ ನಮ್ಮ ಮರ್ಜಿಯಲ್ಲಿದೆ ಎಂದು ವಿಶ್ವನಾಥ್ ಗುಡುಗಿದ್ದಾರೆ.

    ಯಾರೇ ಮಂತ್ರಿಯಾಗಿರಬಹುದು. ಅದೆಲ್ಲವೂ ನಮ್ಮ ತ್ಯಾಗದಿಂದ ಆಗಿರುವುದು. ನಮ್ಮ ಬಗ್ಗೆ ಮಾತಾಡಲು ಅವರಿಗೆ ಯಾವ ಅಧಿಕಾರ ಇದೆ ಅಂತಾ ಕಿಡಿಕಾರಿದ್ದಾರೆ. ಈ ಬೆನ್ನಲ್ಲೇ ವಿಶ್ವನಾಥ್ ವಿರುದ್ಧ ಸಚಿವ ಬಿಸಿ ಪಾಟೀಲ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ವಿಶ್ವನಾಥ್ ಹತಾಶರಾಗಿ ಆಧಾರ ರಹಿತ ಆರೋಪ ಮಾಡ್ತಿರೋದು ಸರಿಯಲ್ಲ. ಒಂದು ಪಕ್ಷದ ಎಂಎಲ್‍ಸಿಯಾಗಿ, ಪಕ್ಷದ ಚೌಕಟ್ಟಿನಲ್ಲಿ ಮಾತನಾಡಬೇಕು ಅಂತಾ ಕಿವಿಮಾತು ಹೇಳಿದ್ದಾರೆ. ಈ ಮಧ್ಯೆ, ವಿಶ್ವನಾಥ್ ಹೇಳಿಕೆಯನ್ನೇ ಕಾಂಗ್ರೆಸ್ ಅಸ್ತ್ರ ಮಾಡ್ಕೊಂಡಿದೆ. ಇದು 10 ಪರ್ಸೆಂಟ್ ಕಮೀಷನ್ ಸರ್ಕಾರ ಎಂದು ಸಿದ್ದರಾಮಯ್ಯ ಆಪಾದಿಸಿದ್ದಾರೆ.

    ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮಾತನಾಡಿ, ನೀರಾವರಿ ಇಲಾಖೆಯ ಟೆಂಡರ್ ಬಗ್ಗೆ ನನಗೂ ಮಾಹಿತಿ ಇದೆ. ಅಸೆಂಬ್ಲಿಯಲ್ಲಿ ಮಾತಾಡೋಣ ಅಂದ್ಕೊಂಡಿದ್ದೆ. ಆದರೆ ಅದಕ್ಕೂ ಮುನ್ನ ವಿಶ್ವನಾಥ್ ಮಾತಾಡಿದ್ರು. ಇದರ ತನಿಖೆಗೆ ಜಂಟಿ ಸದನ ಸಮಿತಿ ರಚನೆ ಆಗ್ಬೇಕು ಅಂತಾ ಡಿಕೆಶಿ ಒತ್ತಾಯಿಸಿದ್ರು.