Tag: Vishwanath

  • ದೇವಿ ಮುಂದೆ ನಿಂತು ಸಾರಾ ಮಹೇಶ್ ಕ್ಷಮೆಯಾಚನೆ

    ದೇವಿ ಮುಂದೆ ನಿಂತು ಸಾರಾ ಮಹೇಶ್ ಕ್ಷಮೆಯಾಚನೆ

    ಮೈಸೂರು: ನಿನ್ನೆಯ ಘಟನೆಯ ಬಗ್ಗೆ ಚಾಮುಂಡಿ ದೇವಿ ಮುಂದೆ ಹಾಗೂ ನಾಡಿನ ಜನರ ಮುಂದೆ ಕ್ಷಮೆ ಕೇಳುತ್ತೇನೆ ಎಂದು ಮಾಜಿ ಸಾಚಿವ ಸಾರಾ ಮಹೇಶ್ ಕ್ಷಮೆಯಾಚಿಸಿದ್ದಾರೆ.

    ಅಣೆ – ಪ್ರಮಾಣದ ಬಳಿಕ ಇವತ್ತು ಚಾಮುಂಡಿ ಬೆಟ್ಟಕ್ಕೆ ಮತ್ತೆ ಬಂದ ಮಾಜಿ ಸಚಿವ ಸಾರಾ ಮಹೇಶ್ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ನಮ್ಮ ರಾಜಕಾರಣಕ್ಕೆ ತಾಯಿ ಸನ್ನಿಧಾನವನ್ನು ಬಳಸಿಕೊಂಡು ತಪ್ಪು ಮಾಡಿದ್ದೇವೆ. ನನಗೆ ಇಡೀ ಘಟನೆ ಬಗ್ಗೆ ಪ್ರಾಯಶ್ತಿತವಾಗಿ ನನ್ನನ್ನು ಕ್ಷಮಿಸಿ ಅಂತಾ ದೇವಿಯಲ್ಲಿ ಕೋರಿದ್ದೇನೆ ಎಂದು ಹೇಳಿದರು. ಇದನ್ನೂ ಓದಿ:ಚಾಮುಂಡಿ ಬೆಟ್ಟದಲ್ಲಿ ವೈಶಂಪಾಯನ ಡ್ರಾಮಾ – ದುರ್ಯೋಧನನಿಗೆ ಹೋಲಿಸಿ ವಿಶ್ವನಾಥ್ ವಾಗ್ದಾಳಿ

    ಇವತ್ತು ಶುಕ್ರವಾರ, ಚಾಮುಂಡೇಶ್ವರಿ ತಾಯಿಯನ್ನು ನಾವೆಲ್ಲರು ನಂಬಿದ್ದೇವೆ. ಮನ್ನಸ್ಸಿಗೆ ಆತ್ಮ ಸಾಕ್ಷಿಗೆ ನೋವಾದಾಗ, ನ್ಯಾಯಾಲಯದಲ್ಲಿ ನ್ಯಾಯ ಸಿಗದಿದ್ದಾಗ, ಸಾಕ್ಷಿಗಳು ಬಂದು ಹೇಳದಿದ್ದಾಗ ಎಷ್ಟೇ ದೊಡ್ಡವರಾದರೂ ದೇವರ ಮೊರೆಹೋಗುತ್ತಾರೆ. ಹೀಗಿರುವಾಗ ರಾಜಕಾರಣದ ವಿಚಾರದಲ್ಲಿ ನಾವು ತಾಯಿ ಚಾಮುಂಡೇಶ್ವರಿ ತಾಯಿ ಹೆಸರನ್ನು ತರುವಂತಹ ಕೆಲಸ ಮಾಡಿದ್ದೇವೆ. ಇದು ನನ್ನ ಮನಸ್ಸಿಗೆ ಒಪ್ಪಲಿಲ್ಲ. ಆದ್ದರಿಂದ ಮತ್ತೊಮ್ಮೆ ತಾಯಿಯ ದರ್ಶನ ಪಡೆದು ಕ್ಷಮೆ ಕೇಳಿ, ರಾಜ್ಯದ ಜನತೆಗೂ ಕ್ಷಮೆ ಕೋರಿ ಪೂಜೆಯನ್ನು ಮಾಡಿಸಲು ನಾನು ಬಂದಿದ್ದೇನೆ ಎಂದು ತಿಳಿಸಿದರು. ಇದನ್ನೂ ಓದಿ:ಆಣೆ ಮಾಡಿ ಕಣ್ಣೀರು ಹಾಕಿದ ಮಹೇಶ್ – ಸಾರಾ ವಿರುದ್ಧ ವಿಶ್ವನಾಥ್ ಮತ್ತೆ ಕಿಡಿ

    ಎಲ್ಲರಿಗೂ ಒಳ್ಳೆಯದನ್ನ ಮಾಡು, ಸತ್ಯಾಸತ್ಯತೆಯನ್ನ ನಿನ್ನ ಮುಂದೆ ಇಟ್ಟಿದ್ದೇನೆ. ನೀನೇ ತೀರ್ಮಾನ ಮಾಡಮ್ಮ ಎಂದು ನಿನ್ನೆಯೂ ಬೇಡಿಕೊಂಡಿದ್ದೆ, ಇಂದು ಅದೇ ಬೇಡಿದ್ದೇನೆ. ನನಗೆ ಒಂದು ತಿಂಗಳಿಂದಲೇ ಪ್ರಾಯಶ್ಚಿತವಾಗಿದೆ. ನಿನ್ನೆ ನಡೆದ ಘಟನೆಯಿಂದ ನೋವಾಗಿದೆ ಹೀಗಾಗಿ ದೇವರಲ್ಲಿ ಹಾಗೂ ಜನರಲ್ಲಿ ನಾನು ಕ್ಷಮೆಕೋರುತ್ತೇನೆ ಎಂದರು.

  • ಆಣೆ ಮಾಡಿ ಕಣ್ಣೀರು ಹಾಕಿದ ಮಹೇಶ್ – ಸಾರಾ ವಿರುದ್ಧ ವಿಶ್ವನಾಥ್ ಮತ್ತೆ ಕಿಡಿ

    ಆಣೆ ಮಾಡಿ ಕಣ್ಣೀರು ಹಾಕಿದ ಮಹೇಶ್ – ಸಾರಾ ವಿರುದ್ಧ ವಿಶ್ವನಾಥ್ ಮತ್ತೆ ಕಿಡಿ

    ಮೈಸೂರು: ಹುಣಸೂರಿನ ಅನರ್ಹ ಶಾಸಕ ಎಚ್ ವಿಶ್ವನಾಥ್ ಮತ್ತು ಮಾಜಿ ಸಚಿವ ಸಾರಾ ಮಹೇಶ್ ಇಬ್ಬರು ಚಾಮುಂಡಿ ಬೆಟ್ಟಕ್ಕೆ ಆಗಮಿಸಿದ್ದರೂ ಇಂದು ಮಹೇಶ್ ಕಣ್ಣೀರು ಹಾಕಿ ಆಣೆ ಮಾಡಿ ತೆರಳಿದ್ದಾರೆ.

    ಗುರುವಾರ ಬೆಳಗ್ಗೆ 9 ಗಂಟೆಗೆ ಇಬ್ಬರು ಚಾಮುಂಡೇಶ್ವರಿ ಮುಂದೆ ಆಣೆ ಪ್ರಮಾಣ ಮಾಡುವುದಾಗಿ ಹೇಳಿದ್ದರಿಂದ ಇಂದು ಏನಾಗುತ್ತದೆ ಎನ್ನುವ ಕುತೂಹಲ ಮೂಡಿತ್ತು. 8 ನಿಮಿಷ ಮೊದಲು ಅಂದರೆ 8:52ಕ್ಕೆ ವಿಶ್ವನಾಥ್ ಮೊದಲಿಗರಾಗಿ ಬೆಟ್ಟಕ್ಕೆ ಆಗಮಿಸಿ ದೇವಾಲಯ ಪ್ರವೇಶಿಸಿದರು.

    ದೇವಾಲಯದ ಮುಂಭಾಗ ನಿಂತ ವಿಶ್ವನಾಥ್ ಅವರು ಪೂಜೆ ಮಾಡಿ ಹೊರ ಬಂದರು. ವಿಶ್ವನಾಥ್ ಹೊರ ಬಂದ ಬೆನ್ನಲ್ಲೇ ಸಾರಾ ಮಹೇಶ್ ದೇವಾಲಯ ಪ್ರವೇಶಿಸಿದರು. ಸಾರಾ ಮಹೇಶ್ ದೇವಾಲಯ ಪ್ರವೇಶಿಸಿದ ವಿಚಾರ ತಿಳಿದ ವಿಶ್ವನಾಥ್ ಹೊರಗಡೆ ಅವರಿಗಾಗಿ ಕಾಯುತ್ತಾ ಕುಳಿತಿದ್ದರು. ಸುಮಾರು ಒಂದು ಗಂಟೆಗಳ ಕಾಲ ಮಹೇಶ್ ಅವರಿಗಾಗಿ ವಿಶ್ವನಾಥ್ ಹೊರಗಡೆ ಕುಳಿತಿದ್ದರು. ಒಂದು ಗಂಟೆ ಕಾದರೂ ಮಹೇಶ್ ಮಾತ್ರ ದೇವಾಲಯದ ಒಳಗಡೆಯಿಂದ ಬರಲೇ ಇಲ್ಲ. ಮಹೇಶ್ ಅವರು ಬಾರದ ಕಾರಣ ವಿಶ್ವನಾಥ್ ಮಾಜಿ ಸಚಿವರ ವಿರುದ್ಧ ವಾಗ್ದಾಳಿ ನಡೆಸಿ ತೆರಳಿದರು. ವಿಶ್ವನಾಥ್ ಹೋದ ನಂತರ ಸಾರಾ ಮಹೇಶ್ ದೇವಾಲಯದಿಂದ ಹೊರ ಬಂದರು. ಇದನ್ನೂ ಓದಿ: ನನ್ನ ಮಾತನ್ನು ತಿರುಚಬೇಡಿ, ಯಾವುದೇ ಆಣೆ ಪ್ರಮಾಣ ಮಾಡಲು ನಾನು ಬಂದಿಲ್ಲ: ವಿಶ್ವನಾಥ್

    ಈ ಬಗ್ಗೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಬದಲಾದಂತಹ ರಾಜಕೀಯ ಪರಿಸ್ಥಿತಿಯಲ್ಲಿ ನಮ್ಮ ಪಕ್ಷದ ಮೂರು ಜನ ಶಾಸಕರು ಹೋಗಿದ್ದಾರೆ. ನಾನು ಯಾರ ಬಗ್ಗಯೂ ಚರ್ಚೆ ಮಾಡಿಲ್ಲ. ಆದರೆ ಇವರು ಹೋದ ನಂತರ ಹಾಗೂ ಪಕ್ಷದಲ್ಲಿ ಇದ್ದ ಸಂದರ್ಭದಲ್ಲಿ ವೈಯಕ್ತಿಕವಾಗಿ ಹಾಗೂ ಸಾರ್ವಜನಿಕವಾಗಿ ನನ್ನನ್ನು ಟೀಕಿಸಿದ್ದರು. ಆದಾದ ನಂತರ ಮುಂಬೈಯಿಂದ ಕೂಡ ಎರಡು ಬಾರಿ ನನ್ನ ಬಗ್ಗೆ ಮಾತನಾಡಿದ್ದರು. ನಂತರ ವಿಧಾನಸಭೆಯಲ್ಲಿ ನನ್ನ ಜೊತೆ ಮಾತನಾಡಿದ್ದನ್ನು ಉಲ್ಲೇಖ ಮಾಡಿದ್ದರು. ಆದಾದ ಬಳಿಕವೂ ಅವರು ನನ್ನ ಬಗ್ಗೆ ಟೀಕೆ ಮಾಡಿದ್ದರು ಎಂದು ದೂರಿದ್ದರು.

    ನೀವು ನನ್ನ ಜೊತೆ ಚರ್ಚೆ ಮಾಡಿದ್ದೀರಿ. ಮಂತ್ರಿ ಬೇಡ ಎಂದು ಹೇಳಿದ್ದೀರಿ. ನನಗೆ ಒತ್ತಡ ಇದೆ. ಈ ವಯಸ್ಸಿನಲ್ಲಿ ಅಂತಹ ಕೆಲಸ ಮಾಡಲ್ಲ ಎಂದು ಹೇಳಿದ್ದೀರಿ. ಹಾಗಿದ್ದರೆ ಈಗ ಯಾವ ಅಂಶಕ್ಕೆ ಬಲಿ ಆಗಿದ್ದೀರಿ. ಅದನ್ನು ಬಂದು ಪ್ರಮಾಣ ಮಾಡಿ ಎಂದು ಕೇಳಿದ್ದೆ. ಮೊದಲು ಅವರು ಸಂವಿಧಾನ ಮೇಲೆ ಪ್ರಮಾಣ ಮಾಡುತ್ತೇನೆ ಎಂದು ಹೇಳಿದ್ದಾರೆ. ನಾವು ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸುವ ಸಂದರ್ಭದಲ್ಲಿ ಕರ್ತವ್ಯ ನಿಷ್ಠೆ ಮತ್ತು ನಂಬಿಕೆ ಮೇಲೆ ಗೌರವ ಇದ್ದಿದ್ದರೆ ಅವರು ರಾಜೀನಾಮೆ ನೀಡುತ್ತಿರಲಿಲ್ಲ. ಆದರೆ ಈಗ ಕೊಟ್ಟಿದ್ದಾರೆ. ಹಾಗಾಗಿ ನಾನು ಅವರನ್ನು ದೇವಸ್ಥಾನಕ್ಕೆ ಕರೆದಿದ್ದೇನೆ ಎಂದು ಹೇಳಿದ್ದಾರೆ.

    ಮೊದಲು ನಾವು ಸಾರ್ವಜನಿಕ ಜೀವನದಲ್ಲಿದ್ದೇವೆ. ನಮ್ಮ ಸಾರ್ವಜನಿಕ ಬದುಕು ಹಾಗೂ ವೈಯಕ್ತಿಕ ಬದುಕು ಎರಡು ಚೆನ್ನಾಗಿರಬೇಕು. ನಾನು ನಿಮ್ಮ ಮೇಲೆ ಮಾಡಿದ ಆರೋಪ ಸುಳ್ಳು ಎಂದರೆ ಪ್ರಮಾಣ ಮಾಡಿ. ಇಲ್ಲವೆಂದರೆ ವೈಯಕ್ತಿಕವಾಗಿ ಮಾಡಿದ ಆರೋಪ ನಿಜವೆಂದು ಸಾಬೀತು ಮಾಡಲಿ. ನಾನು ರಾಜಕೀಯದಿಂದ ನಿವೃತ್ತಿ ಪಡೆಯುತ್ತೇನೆ ಎಂದು ಹೇಳಿದ್ದೇನೆ. ನಾನು ಏನೂ ಎಂಬುದು ವಿಶ್ವನಾಥ್‍ಗೆ ಸಾರ್ವಜನಿಕವಾಗಿ ಹೇಳಿದ್ದೆ. ಮೊದಲು ಅವರು ಪ್ರಮಾಣ ಮಾಡಲಿ. ನಂತರ ಅವರನ್ನು ಖರೀದಿಸುವವರನ್ನು ಕರೆದುಕೊಂಡು ಬರೋಣ ಎಂದರು.

    ಇದೇ ವೇಳೆ ನಾನು ಕುರುಬ ಸಮುದಾಯದವನೂ ಎಂದು ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ ಎಂಬ ವಿಶ್ವನಾಥ್ ಹೇಳಿಕೆಗೂ ಸಾರಾ ತಿರುಗೇಟು ನೀಡಿದ್ದಾರೆ. ಇಷ್ಟು ದಿನ ಇಲ್ಲದ ಈ ಮಾತು ಈಗ ಯಾಕೆ ಬಂತು? ಎಂಬುದು ನನಗೆ ಗೊತ್ತಿಲ್ಲ. ನಮ್ಮ ಸಮಾಜದವರು ಇದ್ದರೂ ನಾವು ಅವರಿಗೆ ಟಿಕೆಟ್ ಕೊಟ್ಟು ಗೆಲ್ಲಿಸಿ ರಾಜ್ಯಾಧ್ಯಕ್ಷ ಮಾಡಿರಲಿಲ್ವಾ? ಆಗ ನಮಗೆ ಅವರ ಜಾತಿ ಗೊತ್ತಿರಲಿಲ್ವಾ? ಅವರು ಮೊದಲು ಪ್ರಮಾಣ ಮಾಡಲಿ. ಈಗ ಈ ಬಗ್ಗೆ ಅವರು ಯಾಕೆ ಮಾತನಾಡುತ್ತಿದ್ದಾರೆ ಗೊತ್ತಿಲ್ಲ ಎಂದು ವಿಶ್ವನಾಥ್ ಆರೋಪಕ್ಕೆ ಸಾರಾ ಮಹೇಶ್ ಪ್ರತಿಕ್ರಿಯಿಸಿದರು.

    ಈ ಬೆಳವಣಿಗೆ ಆದ ನಂತರ ನಾನು ಸ್ಪೀಕರ್‍ರನ್ನು ಭೇಟಿಯಾಗಿ ರಾಜೀನಾಮೆ ಪತ್ರ ನೀಡಿದ್ದೇನೆ. ಮೊದಲಿನಿಂದಲೂ ನನ್ನ ಹಾಗೂ ಸ್ಪೀಕರ್ ಸಂಬಂಧ ಚೆನ್ನಾಗಿರುವ ಕಾರಣ ಅವರು ಎರಡು ಬಾರಿ ನನ್ನನ್ನು ಕರೆದು ಸಮಾಧಾನ ಮಾಡಿ ವಾಪಸ್ ಕಳುಹಿಸಿದ್ದರು. ನಾನು ರಾಜಕೀಯ ವಿಷಯದಲ್ಲಿ ವೈಯಕ್ತಿವಾಗಿ ಯಾವತ್ತೂ ಯಾರಿಗೂ ಟೀಕೆ ಮಾಡಿಲ್ಲ. ಅವರು ನನ್ನಿಂದ ರಾಜೀನಾಮೆ ನೀಡಿಲ್ಲ. ಬದಲಿಗೆ ಅವರು ಆಮಿಷಕ್ಕೆ ಒಳಗಾಗಿ ರಾಜೀನಾಮೆ ನೀಡಿದ್ದಾರೆ ಎಂದು ಮಹೇಶ್ ತಿಳಿಸಿದರು.

    ನನ್ನ ರಾಜೀನಾಮೆ ಬಗ್ಗೆ ಕುಮಾರಸ್ವಾಮಿ, ದೇವೇಗೌಡ, ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರು ನನಗೆ ತಿಳಿ ಹೇಳಿದ್ದಾರೆ. ರಾಜಕೀಯದಲ್ಲಿ ಇದೆಲ್ಲ ಸಹಜ ಎಂದು ಹೇಳಿದ್ದಾರೆ. ಮಂಗಳವಾರ ನಾನು ಸ್ಪೀಕರ್ ಜೊತೆ ಮಾತನಾಡಿದ್ದೇನೆ. ಎರಡ್ಮೂರು ದಿನದಲ್ಲಿ ಹೇಳುತ್ತೇನೆ ಎಂದು ಸಾರಾ ಮಹೇಶ್ ಹೇಳಿದರು.

  • ಇಲ್ಲಿಗೆ ಎಲ್ಲವನ್ನೂ ನಿಲ್ಲಿಸೋಣ – ಸಾರಾ ಮಹೇಶ್ ಜೊತೆ ರಾಜಿಗೆ ನಿಂತ ವಿಶ್ವನಾಥ್

    ಇಲ್ಲಿಗೆ ಎಲ್ಲವನ್ನೂ ನಿಲ್ಲಿಸೋಣ – ಸಾರಾ ಮಹೇಶ್ ಜೊತೆ ರಾಜಿಗೆ ನಿಂತ ವಿಶ್ವನಾಥ್

    ಮೈಸೂರು: ಇಬ್ಬರೂ ತಪ್ಪು ಮಾಡಿದ್ದೇವೆ, ವೈಯುಕ್ತಿಕ ಟೀಕೆಗಳನ್ನು ನಿಲ್ಲಿಸೋಣ ಎಂದು ಅನರ್ಹ ಶಾಸಕ ಹೆಚ್.ವಿಶ್ವನಾಥ್ ಹೇಳಿಕೆ ನೀಡಿದ್ದಾರೆ. ಇಷ್ಟು ದಿನ ಸಾರಾ ಮಹೇಶ್ ಹೇಳಿಕೆಗಳಿಗೆ ಮಾತಿನ ಚಾಟಿ ಬೀಸಿ ತಿರುಗೇಟು ನೀಡುತ್ತಿದ್ದ ವಿಶ್ವನಾಥ್ ಈಗ ಅವರ ಜೊತೆಗೆ ರಾಜಿಗೆ ಮುಂದಾಗಿದ್ದಾರೆ.

    ಹೌದು. ಇಷ್ಟು ದಿನ ಹಾವು ಮುಂಗುಸಿಯಂತೆ ವಿಶ್ವನಾಥ್ ಹಾಗೂ ಸಾರಾ ಮಹೇಶ್ ಒಬ್ಬರ ಮೇಲೊಬ್ಬರು ಆರೋಪ ಮಾಡಿಕೊಂಡು ಬಂದಿದ್ದರು. ಆದರೆ ಈಗ ಇದ್ದಕ್ಕಿದ್ದಂತೆ ವಿಶ್ವನಾಥ್ ಅವರು ಸಾರಾ ಮಹೇಶ್ ಜೊತೆ ರಾಜಿಗೆ ನಿಂತಿದ್ದಾರೆ. ಇಬ್ಬರು ಗಾಜಿನ ಮನೆಯಲ್ಲಿ ಇದ್ದೇವೆ. ಜನರು ನಮ್ಮನ್ನು ನೋಡುತ್ತಿದ್ದಿದ್ದಾರೆ. ಅವರ ಮುಂದೆ ನಾವು ಜಾರಿ ಬೀಳುವುದು ಬೇಡ. ಇಬ್ಬರೂ ತಪ್ಪು ಮಾಡುತ್ತಿದ್ದೇವೆ ಅಂತ ನನಗೆ ಅನಿಸುತ್ತಿದೆ. ನಾವಿಬ್ಬರು ಒಂದೇ ಊರಿನವರು, ಪರಸ್ಪರ ಈ ರೀತಿ ಮಾತನಾಡುವುದು ಬೇಡ. ನೀವೇನೋ ಮಾಡುತ್ತೀರಾ ಅಂತ ಹೆದರಿ ಈ ಮಾತುಗಳನ್ನ ಹೇಳುತ್ತಿಲ್ಲ. ನೀವು ಬೆಳೆಯಬೇಕಿರುವ ರಾಜಕಾರಣಿ. ನನ್ನದು ನಿವೃತ್ತಿಯ ರಾಜಕಾರಣ. ಆದ್ದರಿಂದ ಇಂತಹ ಪರಸ್ಪರ ವೈಯುಕ್ತಿಕ ಮಾತುಗಳು ನಮಗೆ ಒಳ್ಳೆಯದಲ್ಲ. ಅಭಿವೃದ್ಧಿ ಹಾಗೂ ವಿಷಯಾಧಾರಿತವಾಗಿ ಮಾತನಾಡೋಣ. ಇಬ್ಬರೂ ಕೂಡ ಮಂತ್ರಿಗಳಾಗಿದ್ದವರು. ಈ ರೀತಿ ಮಾತನಾಡಿದರೆ ಜನ ನೋಡುತ್ತಾರೆ. ಇಲ್ಲಿಗೆ ಎಲ್ಲವನ್ನು ನಿಲ್ಲಿಸೋಣ. ವೈಯುಕ್ತಿಕ ಟೀಕೆಗಳನ್ನ ನಿಲ್ಲಿಸೋಣ ಎಂದು ಸಾ.ರಾ.ಮಹೇಶ್ ಅವರಲ್ಲಿ ಮನವಿ ಮಾಡಿದರು. ಇದನ್ನೂ ಓದಿ:ಕುಮಾರಸ್ವಾಮಿ ಪ್ರಜ್ಞೆ ಇಟ್ಕೊಂಡು ಮಾತನಾಡಲಿ – ಹೆಚ್‍ಡಿಕೆ ವಿರುದ್ಧ ಟಗರು ಗುಟುರು

    ಯಡಿಯೂರಪ್ಪ ಸಿಎಂ ಆಗಲು ಸಿದ್ದರಾಮಯ್ಯ, ಕುಮಾರಸ್ವಾಮಿ ಕಾರಣ. ಇದನ್ನ ಸ್ವತಃ ಅವರಿಬ್ಬರೇ ಒಪ್ಪಿಕೊಂಡಿದ್ದಾರೆ. ಇದಕ್ಕೆ 17 ಜನ ಅನರ್ಹ ಶಾಸಕರು ಕಾರಣರಲ್ಲ. ನಮ್ಮ ಮೇಲೆ ಸರ್ಕಾರ ಬೀಳಿಸಿದ ಗೂಬೆ ಕೂರಿಸಿದ್ದಿರಿ ಇಷ್ಟು ದಿನ. ಈಗ ನಿಮ್ಮ ಮಾತಿನ ಮೂಲಕ ಸರ್ಕಾರ ಪತನಕ್ಕೆ ನೀವೇ ಕಾರಣ ಎನ್ನುವುದು ಸ್ಪಷ್ಟವಾಗಿದೆ. ಪರಸ್ಪರ ಅಸಮಾಧಾನ ಅಪನಂಬಿಕೆಯಲ್ಲಿ ಸರ್ಕಾರ ನಡೆಸಿದವರು ನೀವು. ಅದರ ಪರಿಣಾಮ ಸರ್ಕಾರ ಪತನವಾಯಿತು. ಈಗ ನೀವು ಹದ್ದು ಗಿಣಿ ಎಂಬ ಟೀಕೆ ಮಾಡಿಕೊಳ್ಳುತ್ತಿದ್ದೀರಿ. ಯಡಿಯೂರಪ್ಪ ಮುಖ್ಯಮಂತ್ರಿ ಆಗಲು ಕಾರಣ ಸಿದ್ದರಾಮಯ್ಯ, ಕುಮಾರಸ್ವಾಮಿ. ಕುಮಾರಸ್ವಾಮಿಯೇ ತಮ್ಮದು ಕೆಟ್ಟ ಸರ್ಕಾರ ಎಂದು ಹೇಳಿದ್ದಾರೆ. ನಾವು ಅದನ್ನ ಹೇಳಿಯೇ ಸರ್ಕಾರದಿಂದ ಹೊರ ಬಂದಿದ್ದು. ಈಗ ಅದನ್ನು ನೀವೇ ಖಚಿತ ಪಡಿಸುತ್ತಿದ್ದೀರಿ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ಕಿಡಿಕಾರಿದರು. ಇದನ್ನೂ ಓದಿ:ತೇಜಸ್ವಿ ಸೂರ್ಯ ರಾಕ್ಷಸ, ರಾಜ್ಯದ ಜನರ ದಿಕ್ಕು ತಪ್ಪಿಸ್ತಿದ್ದಾನೆ: ಈಶ್ವರ್ ಖಂಡ್ರೆ

    ಮಾಜಿ ಸಚಿವ ರೇವಣ್ಣರನ್ನ ಹೊಗಳುವುದರ ಜೊತೆಗೆ ವಿಶ್ವನಾಥ್ ಅವರು ಟಾಂಗ್ ಕೊಟ್ಟಿದ್ದಾರೆ. ಅವರು ಕೆಲಸ ಮಾಡುವುದರಲ್ಲಿ ದೈತ್ಯರು. ಅವರ ಕೆಲಸದ ಬಗ್ಗೆ ಯಾವುದೇ ಅನುಮಾನ ಬೇಡ. ಯಾವುದೇ ಖಾತೆ ಇದ್ದರು ಅದನ್ನ ಮಾಡುತ್ತಾರೆ. ಜೊತೆಗೆ ಎಲ್ಲಾ ಖಾತೆಗೂ ಕೈಯಾಡಿಸುತ್ತಾರೆ ಎಂದು ಕಾಲೆಳೆದಿದ್ದರು.

    15 ಕ್ಷೇತ್ರಗಳಿಗೆ ಉಪಚುನಾವಣೆ ವಿಚಾರವಾಗಿ ಮಾತನಾಡಿ, ಉಪಚುನಾವಣೆಯಲ್ಲಿ ಅನರ್ಹ ಶಾಸಕರ ಸ್ಪರ್ಧೆಗೆ ಅವಕಾಶ ನೀಡಿರುವ ಆಯೋಗದ ನಿರ್ಧಾರ ಸ್ವಾಗತಾರ್ಹ. ಆದರೆ ಚುನಾವಣೆ ಮುಂದೂಡಿಕೆ ಮಾಡಿ ಎನ್ನುವುದೇ ನಮ್ಮ ಮನವಿ ಎಂದು ಹೇಳಿದರು. ನಾವು ನ್ಯಾಯಾಲಯದ ಮೊರೆ ಹೋಗಿದ್ದೇವೆ. ಈಗ ನಡೆಯುತ್ತಿರುವ ಚುನಾವಣೆ ತರಾತುರಿಯಲ್ಲಿ ನಡೆಯುತ್ತಿದೆ. ಹಾಗಾಗಿ ಉಪಚುನಾವಣೆ ಈಗ ಬೇಡ ಎನ್ನುವುದು ನಮ್ಮ ಅಭಿಪ್ರಾಯ. ಅದೇನೆ ಇದ್ದರೂ ಬುಧವಾರ ಹಾಗೂ ಶುಕ್ರವಾರದವರೆಗೆ ಕಾಯಬೇಕು. ಸುಪ್ರೀಂಕೋರ್ಟ್ ತೀರ್ಮಾನದ ನಂತರ ಎಲ್ಲವು ನಿರ್ಧಾರ ಆಗಲಿದೆ. ಉಪಚುನಾವಣೆಗೆ ನಾನು ತಯಾರಿ ಮಾಡಿಕೊಳ್ಳುತ್ತಿದ್ದೇನೆ. ಹುಣಸೂರಿನ ಹಿರಿಯರು, ಮುಖಂಡರ ಜೊತೆ ಚರ್ಚೆ ಮಾಡುತ್ತೆನೆ. ಅವರ ಅಭಿಪ್ರಾಯ ಪಡೆದು ಮುಂದುವರಿಯುತ್ತೇನೆ. ಉಪಚುನಾವಣೆಗೆ ಸಮಯ ಕಡಿಮೆ ಇದೆ. ಹೀಗಾಗಿ ತಯಾರಿ ಮಾಡಿಕೊಳ್ಳಲೇಬೇಕು ಅಲ್ಲವೇ ಎಂದು ಹೇಳಿದರು.

  • ಸಿದ್ದರಾಮಯ್ಯ ಎಲ್ಲಿದ್ದಾರೋ ಗೊತ್ತಾಗುತ್ತಿಲ್ಲ, ಅವರು ಬೇಗ ಹೊರಗೆ ಬರಲಿ: ಎಚ್. ವಿಶ್ವನಾಥ್

    ಸಿದ್ದರಾಮಯ್ಯ ಎಲ್ಲಿದ್ದಾರೋ ಗೊತ್ತಾಗುತ್ತಿಲ್ಲ, ಅವರು ಬೇಗ ಹೊರಗೆ ಬರಲಿ: ಎಚ್. ವಿಶ್ವನಾಥ್

    ಮೈಸೂರು: ಮಾಜಿ ಸಿಎಂ ಸಿದ್ದರಾಮಯ್ಯ ಎಲ್ಲಿದ್ದಾರೋ ಗೊತ್ತಾಗುತ್ತಿಲ್ಲ. ಮೈಸೂರಲ್ಲೂ ಕಾಣುತ್ತಿಲ್ಲ, ಬಾದಾಮಿ ಕ್ಷೇತ್ರದಲ್ಲೂ ಕಾಣುತ್ತಿಲ್ಲ. ಅವರ ಬೇಗ ಹೊರಗೆ ಬಂದು ಸರ್ಕಾರಕ್ಕೆ ಮಾರ್ಗದರ್ಶನ ಮಾಡಬೇಕು ಎಂದು ಅನರ್ಹ ಶಾಸಕ ಎಚ್. ವಿಶ್ವನಾಥ್ ಹೇಳಿದ್ದಾರೆ.

    ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಸಿಎಂ ಯಡಿಯೂರಪ್ಪಗೆ ಬರೆದ ಪತ್ರದಲ್ಲಿ ಒಳ್ಳೆಯ ಸಲಹೆ ಕೊಟ್ಟಿದ್ದಾರೆ. ಒಬ್ಬ ಮತ್ಸದ್ದಿಯಾಗಿ ಅವರು ಕೊಟ್ಟ ಸಲಹೆಗಳು ಬಹಳ ಉತ್ತಮವಾಗಿವೆ ಎಂದು ಹೇಳಿದರು.

    ಇದೇ ವೇಳೆ ರಾಜ್ಯದಲ್ಲಿ ದೂರವಾಣಿ ಕದ್ದಾಲಿಕೆ ದೊಡ್ಡ ಮಟ್ಟದಲ್ಲಿ ನಡೆದಿದೆ. ಸಿದ್ದರಾಮಯ್ಯ ಅವರ ಪಿಎ ವೆಂಕಟೇಶ್ ಎಂಬವರ ಫೋನ್ ಕದ್ದಾಲಿಕೆ ಮಾಡಲಾಗಿದೆ. ರೆಬೆಲ್ ಶಾಸಕರ ದೂರವಾಣಿ ಕದ್ದಾಲಿಕೆ ಮಾಡಲಾಗಿದೆ. ಹೀಗೆ ಕದ್ದಾಲಿಕೆ ಮಾಡಿ ರೆಬೆಲ್ ಶಾಸಕರನ್ನು ಸಿಎಂ (ಹೆಚ್‍ಡಿಕೆ) ಕಚೇರಿಯಿಂದ ಬ್ಲಾಕ್ ಮೇಲ್ ಮಾಡಲಾಯಿತು. ಜೆಡಿಎಸ್ ರಾಜ್ಯಾಧ್ಯಕ್ಷನಾಗಿದ್ದವನ ದೂರವಾಣಿಯನ್ನು ಜೆಡಿಎಸ್ ಮುಖ್ಯಮಂತ್ರಿಯೇ ಕದ್ದಾಲಿಕೆ ಮಾಡಿದ್ದಾರೆ. ನಮ್ಮ ಮೇಲೆ ನಿಮಗೆ ವಿಶ್ವಾಸ ಇರಲಿಲ್ಲವೇ ಎಂದು ವಿಶ್ವನಾಥ್ ಪ್ರಶ್ನೆ ಮಾಡಿದರು.

    ವಿಶ್ವನಾಥ್ ಮಾತನಾಡಿರುವುದು ಸಿಕ್ಕಿದೆ ಚೀ ಚೀ ಕೇಳಿಸಿಕೊಳ್ಳಲು ಆಗಲ್ಲ ಎಂದು ಕುಮಾರಸ್ವಾಮಿ ಸದನದಲ್ಲಿ ಹೇಳಿದ್ದರು. ನಾನು ಮೊಬೈಲ್‍ನಲ್ಲಿ ಸಾವಿರ ಮಾತನಾಡುತ್ತೇನೆ. ಹೀಗೆ ಮಾತಾಡಬೇಕು ಎಂದು ಹೇಳೋಕೆ ನೀವು ಯಾರು? ಬೆಂಗಳೂರು ಪೊಲೀಸ್ ಆಯುಕ್ತರ ದೂರವಾಣಿಯೆ ಕದ್ದಾಲಿಕೆ ಮಾಡಲಾಗಿದೆ. ರಾಜ್ಯದ ಸಿಎಂ ಆಗಿ ಹೆಚ್‍ಡಿಕೆ ಎಲ್ಲಾ ಕಾನೂನು ಉಲ್ಲಂಘನೆ ಮಾಡಿದರು. ಹಳ್ಳಿ ಕಡೆ ಮನೆಯವರಿಗೆ ಮನೆಯವರೇ ಮದ್ದು ಹಾಕುತ್ತಾರೆ ಎನ್ನುವ ಮಾತಿದೆ ಇದು ಅದೇ ಕಥೆ ಎಂದು ವ್ಯಂಗ್ಯವಾಡಿದರು.

    ಜಿಟಿ ದೇವೇಗೌಡರ ಜೊತೆ ಸಿಎಂ ಭೇಟಿ ವಿಚಾರವಾಗಿ ಮಾತನಾಡಿದ ವಿಶ್ವನಾಥ್, ಸಿಎಂ ಭೇಟಿ ಸಹಜ, ಇಬ್ಬರು ರಾಜಕಾರಣಿಗಳು ಭೇಟಿಯಾದ ಮೇಲೆ ರಾಜಕಾರಣ ಮಾತನಾಡದೆ ಇರೋಕೆ ಆಗುತ್ತಾ? ಜಿಟಿ ದೇವೇಗೌಡರಿಗೆ ಬಿಜೆಪಿ ಹಳೆಯ ಪಾರ್ಟಿ, ಅವರೇನೂ ಬಿಜೆಪಿಗೆ ಹೊಸಬರಲ್ಲ. ನೆರೆ ಪ್ರವಾಹದ ಹಿನ್ನೆಲೆಯಲ್ಲಿ ಸರಳ ದಸರಾ ಮಾಡಬಾರದು, ದಸರಾ ಅದ್ಧೂರಿಯಾಗೆ ಮಾಡಬೇಕು. ದಸರಾದಲ್ಲಿ ಸರಳತೆ ಬೇಡ ಎಲ್ಲಾ ಕಷ್ಟ ನಿವಾರಿಸು ಅಂತಾನೇ ನಾಡಹಬ್ಬ ಮಾಡುವುದು ಇದರಲ್ಲಿ ಸರಳತೆ ಬೇಡ ಎಂದು ಹೇಳಿದರು.

    ಶಾಸಕರ ಅನರ್ಹತೆ ಪ್ರಕರಣದಲ್ಲಿ ನ್ಯಾಯಾಲಯದ ನಿಲುವಿಗೆ ಎಚ್.ವಿಶ್ವನಾಥ್ ಪ್ರತಿಕ್ರಿಯಿಸಿ, ಇದನ್ನು ತ್ವರಿತಗತಿಯಲ್ಲಿ ವಿಚಾರಣೆ ಸಾಧ್ಯವಿಲ್ಲ. ನಮಗೆ ಅನರ್ಹಗೊಳಿಸವಾಗ ನಿಯಮಗಳನ್ನು ಪಾಲಿಸಿಲ್ಲ. ನಮಗೆ ನ್ಯಾಯ ಸಿಕ್ಕಿಲ್ಲ. ಈ ವಿಚಾರವಾಗಿ ನಾವು ನ್ಯಾಯಾಲಯದ ಮೊರೆ ಹೋಗಿದ್ದೇವೆ. ನಾವು ಎಲ್ಲರೂ ಧೈರ್ಯವಾಗಿದ್ದೇವೆ. ನಾವೆಲ್ಲರೂ ಧೈರ್ಯವಂತರೇ ಇರುವುದು ಎಂದು ಹೇಳಿದರು.

  • ಕೈ-ತೆನೆ ಭದ್ರಕೋಟೆಯಲ್ಲಿ ಯೋಗೇಶ್ವರ್ ಎಂಟ್ರಿಗೆ ಬಿಜೆಪಿ ತಂತ್ರ

    ಕೈ-ತೆನೆ ಭದ್ರಕೋಟೆಯಲ್ಲಿ ಯೋಗೇಶ್ವರ್ ಎಂಟ್ರಿಗೆ ಬಿಜೆಪಿ ತಂತ್ರ

    ಮೈಸೂರು: ಆಪರೇಷನ್ ಕಮಲದಲ್ಲಿ ಮುಖ್ಯ ಪಾತ್ರವಹಿಸಿದ್ದ ಯೋಗೇಶ್ವರ್ ಅವರನ್ನು ಹುಣಸೂರಿನಿಂದ ಕಣಕ್ಕೆ ಇಳಿಸಲು ಬಿಜೆಪಿ ಲೆಕ್ಕಾಚಾರ ಹಾಕಿಕೊಂಡಿದೆ.

    ಹುಣಸೂರು ಕ್ಷೇತ್ರವನ್ನ ಗೆದ್ದೆ ಗೆಲ್ಲಬೇಕು ಎಂದು ಬಿಜೆಪಿ ತಂತ್ರ ರೂಪಿಸಿದ್ದು, ಈ ಮೂಲಕ ಜೆಡಿಎಸ್ ಹಾಗೂ ಕಾಂಗ್ರೆಸ್ ಕೋಟೆ ಛಿದ್ರಗೊಳಿಸಲು ಬಿಜೆಪಿ ಮಾಸ್ಟರ್ ಪ್ಲಾನ್ ಮಾಡಿಕೊಂಡಿದೆ. ಅನರ್ಹ ಶಾಸಕ ಎಚ್.ವಿಶ್ವನಾಥ್ ರಾಜೀನಾಮೆ ಕೊಟ್ಟಿದ್ದಾರೆ. ಈ ಸ್ಥಾನಕ್ಕೆ ನಡೆಯುವ ಉಪಚುನಾವಣೆಯಲ್ಲಿ ಸಿ.ಪಿ.ಯೋಗೇಶ್ವರ್ ಗೆ ಟಿಕೆಟ್ ಕೊಟ್ಟು ಹುಣಸೂರು ಕ್ಷೇತ್ರವನ್ನು ವಶ ಪಡಿಸಿಕೊಳ್ಳುವ ತಂತ್ರವನ್ನು ಬಿಜೆಪಿ ಮಾಡಿಕೊಂಡಿದೆ ಎನ್ನಲಾಗುತ್ತಿದೆ.

    ಹುಣಸೂರು ಕ್ಷೇತ್ರಕ್ಕೆ ಕಾಂಗ್ರೆಸ್ ಮತ್ತು ಜೆ.ಡಿ.ಎಸ್ ನಡುವೆ ಪೈಪೋಟಿ ಇದ್ದ ಕ್ಷೇತ್ರವಾಗಿದೆ. ಹೀಗಾಗಿ ಕಾಂಗ್ರೆಸ್ ಜೆಡಿಎಸ್ ಜೊತೆಗಿನ ಪೈಪೋಟಿಯ ಲಾಭವನ್ನು ಪಡೆಯಲು ಬಿಜೆಪಿ ತೀರ್ಮಾನಿಸಿದ್ದು, ಜಾತಿ ಹಾಗೂ ಹಿಂದುತ್ವದ ಅಜೆಂಡಾದ ಮೂಲಕ ಕ್ಷೇತ್ರವನ್ನು ಪಡೆಯಲು ಬಿಜೆಪಿ ಮಾಸ್ಟರ್ ಪ್ಲ್ಯಾನ್ ಮಾಡಿಕೊಂಡಿದೆ.

    ಬಿಜೆಪಿ ಲೆಕ್ಕಾಚಾರ:
    ಈ ಕ್ಷೇತ್ರದಲ್ಲಿ ವಿಶ್ವನಾಥ್ ಪ್ರಾಬಲ್ಯವಿದೆ. ಒಂದು ವೇಳೆ ಈ ಕ್ಷೇತ್ರದಲ್ಲಿ ವಿಶ್ವನಾಥ್ ಪುತ್ರನನ್ನು ಕಣಕ್ಕಿಳಿಸಿದರೆ ಅದು ಪಕ್ಷಕ್ಕೆ ನಷ್ಟವಾಗುತ್ತದೆ. ಮೊದಲೇ ಅದು ಕಾಂಗ್ರೆಸ್ ಜೆಡಿಎಸ್‍ನ ಭದ್ರಕೋಟೆಯಾಗಿದೆ. ಹೀಗಾಗಿ ಈ ಕ್ಷೇತ್ರಕ್ಕೆ ಯೋಗೇಶ್ವರ್ ಕಣಕ್ಕಿಳಿಸಿದರೆ ಒಕ್ಕಲಿಗರ ಮತ ಮತ್ತು ಶಾಸಕ ಪ್ರತಾಪ್ ಸಿಂಹರ ಮೂಲಕ ಹಿಂದುತ್ವ ಮತವನ್ನು ಪಡೆಯಬಹುದು ಎಂಬುದು ಬಿಜೆಪಿ ಲೆಕ್ಕಾಚಾರವಾಗಿದೆ.

    ಇನ್ನೊಂದೆಡೆ ಆಪರೇಷನ್ ಕಮಲದ ಸಂದರ್ಭದಲ್ಲಿ ಹೆಚ್ಚು ಸಹಾಯ ಮಾಡಿದ್ದಾರೆ. ಈ ಮೂಲಕ ಅವರಿಗೆ ಬೆಲೆ ಕೊಟ್ಟಂತಾಗುತ್ತದೆ ಎಂಬುದು ಬಿಜೆಪಿ ಪ್ಲ್ಯಾನ್ ಆಗಿದೆ. ಕಳೆದು ವಿಧಾನಸಭಾ ಚುನಾವಣೆಯಲ್ಲೂ ಇವರ ಹೆಸರು ಕೇಳಿ ಬಂದಿತ್ತು.

  • ಕ್ಷೇತ್ರದ ಜನತೆಗೆ ಎಚ್. ವಿಶ್ವನಾಥ್ ಸಂದೇಶ

    ಕ್ಷೇತ್ರದ ಜನತೆಗೆ ಎಚ್. ವಿಶ್ವನಾಥ್ ಸಂದೇಶ

    ಮುಂಬೈ: ಹುಣಸೂರು ಕ್ಷೇತ್ರದ ಮತದಾರರಿಗೆ ಅನರ್ಹ ಶಾಸಕ ಎಚ್. ವಿಶ್ವನಾಥ್ ಅವರು ವಿಡಿಯೋ ಕಾಲ್ ಮಾಡುವ ಮೂಲಕ ಸಂದೇಶ ಕಳುಹಿಸಿದ್ದಾರೆ.

    ವಿಡಿಯೋದಲ್ಲಿ ವಿಶ್ವನಾಥ್ ಅವರು, ನಾನು ನನ್ನನ್ನು ದುಡ್ಡಿಗಾಗಿ ಮಾರಿಕೊಂಡವಲ್ಲ. ಇದು ನನ್ನ ವಿರೋಧಿಗಳು ಮಾಡುತ್ತಿರುವ ಅಪಪ್ರಚಾರವಾಗಿದೆ. ನೀವು ನನ್ನ ಮೇಲೆ ವಿಶ್ವಾಸವಿಟ್ಟು ಕೊಟ್ಟಂತಹ ಮತಗಳಿಗೆ ಅಪಚಾರ ಮಾಡುವನು ನಾನಲ್ಲ ಎಂದಿದ್ದಾರೆ.

    ನೀವು ಮತಕೊಟ್ಟು ಹರಿಸಿದ ನಿಮ್ಮ ಶಾಸಕ ಪದೇ ಪದೇ ಆದ ಅವಮಾನ, ತಾರತಮ್ಯಗಳನ್ನು ನುಂಗಲಾರದೆ ತನ್ನ ಆತ್ಮಗೌರವಕ್ಕಾಗಿ, ಕ್ಷೇತ್ರದ ಜನರ ಸ್ವಾಭಿಮಾನ ಮತ್ತು ಒಳಿತಿಗಾಗಿ ರಾಜೀನಾಮೆ ಕೊಟ್ಟಿದ್ದೇನೆ ಎಂದು ಹೇಳಿದ್ದಾರೆ. ನನ್ನ ಮೇಲಿನ ಅನರ್ಹತೆ ತೀರ್ಪು ಅನ್ನು ಸುಪ್ರೀಂಕೋರ್ಟಿನಲ್ಲಿ ಪ್ರಶ್ನಿಸುತ್ತೇನೆ. ಸದ್ಯದಲ್ಲೇ ಹುಣಸೂರಿಗೆ ಭೇಟಿ ನೀಡಿ ನಿಮ್ಮ ಮುಂದೆ ವಾಸ್ತವ ಸಂಗತಿಗಳನ್ನು ಹಂಚಿಕೊಳ್ಳುತ್ತೇನೆ ಎಂದಿದ್ದಾರೆ.

    ಭಾನುವಾರ ಸ್ಪೀಕರ್ ರಮೇಶ್ ಕುಮಾರ್ ತುರ್ತು ಸುದ್ದಿಗೋಷ್ಠಿ ಕರೆದು 14 ಮಂದಿ ಅತೃಪ್ತ ಶಾಸಕರನ್ನು ಅನರ್ಹ ಮಾಡಿದ್ದಾರೆ. ಹೀಗಾಗಿ ಇದರಿಂದ ಅತೃಪ್ತ ಶಾಸಕರು ತಮ್ಮ ಅನರ್ಹತೆಯ ಬಗ್ಗೆ ಪ್ರಶ್ನಿಸಿ ಇಂದು ಸುಪ್ರೀಂಕೋರ್ಟ್ ಮೊರೆ ಹೋಗಲು ನಿರ್ಧರಿಸಿದ್ದಾರೆ. ಇತ್ತ ಅನರ್ಹ ಬೆನ್ನಲ್ಲಿಯೇ ಬೈರತಿ ಬಸವರಾಜು, ಎಸ್.ಟಿ ಸೋಮಶೇಖರ್, ಶಿವರಾಮ್ ಹೆಬ್ಬಾರ್, ಮುನಿರತ್ನ ಹಾಗೂ ಎಂಟಿಬಿ ನಾಗರಾಜ್ ಈ ಐವರು ಶಾಸಕರು ಬೆಂಗಳೂರಿಗೆ ವಾಪಸ್ಸಾಗಿದ್ದಾರೆ. ಭಾನುವಾರ ಮಧ್ಯರಾತ್ರಿ 12.50ರ ಸುಮಾರಿಗೆ ಕೆಂಪೇಗೌಡ ಏರ್ ಪೋರ್ಟಿಗೆ ಆಗಮಿಸಿದ್ದಾರೆ.

  • ಅನರ್ಹತೆಗೆ ನಾವು ಹೆದರೋದಿಲ್ಲ: ವಿಶ್ವನಾಥ್ ತಿರುಗೇಟು

    ಅನರ್ಹತೆಗೆ ನಾವು ಹೆದರೋದಿಲ್ಲ: ವಿಶ್ವನಾಥ್ ತಿರುಗೇಟು

    ಮುಂಬೈ: ಸ್ಪೀಕರ್ ಮೂವರನ್ನ ಅನರ್ಹಗೊಳಿಸಿದ ವಿಚಾರವಾಗಿ ಪ್ರತಿಕ್ರಿಯಿಸಿದ ಜೆಡಿಎಸ್ ನಾಯಕ ಎಚ್. ವಿಶ್ವನಾಥ್ ಅವರು ಅನರ್ಹತೆಗೆ ನಾವು ಹೆದರೋದಿಲ್ಲ ಎಂದು ತಿರುಗೇಟು ನೀಡಿದ್ದಾರೆ.

    ಗುರುವಾರದಂದು ರಾಣೇಬೆನ್ನೂರು ಶಾಸಕ ಆರ್.ಶಂಕರ್, ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ, ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಈ ಮೂವರನ್ನು ಸ್ಪೀಕರ್ ರಮೇಶ್ ಕುಮಾರ್ ಅನರ್ಹಗೊಳಿಸಿದ್ದಾರೆ. ಈ ಬಗ್ಗೆ ಮುಂಬೈನಲ್ಲಿ ಮಾತನಾಡಿದ ವಿಶ್ವನಾಥ್, ಅನರ್ಹತೆಗೆ ನಾವು ಹೆದರೋದಿಲ್ಲ. ಇನ್ನು 2-3 ದಿನಗಳಲ್ಲಿ ಬೆಂಗಳೂರಿಗೆ ವಾಪಸ್ ಬರುತ್ತೇವೆ. ಅನರ್ಹತೆ ವಿಚಾರವನ್ನ ಸುಪ್ರಿಂಕೋರ್ಟಿನಲ್ಲಿ ಪ್ರಶ್ನೆ ಮಾಡುತ್ತೇವೆ ಎಂದು ಕಿಡಿಕಾರಿದ್ದಾರೆ.

    ಶಾಸಕ ಆರ್.ಶಂಕರ್, ರಮೇಶ್ ಜಾರಕಿಹೊಳಿ, ಮಹೇಶ್ ಕುಮಟಳ್ಳಿ ಮೂವರನ್ನು ಸ್ಪೀಕರ್ ರಮೇಶ್ ಕುಮಾರ್ ಅನರ್ಹಗೊಳಿಸಲಾಗಿದೆ. ಇನ್ನುಳಿದ ರಾಜೀನಾಮೆ ನೀಡಿರುವ ಶಾಸಕರ ಪ್ರಕರಣಗಳ ಬಗ್ಗೆ ಅಧ್ಯಯನ ಮಾಡುತ್ತಿದ್ದು, ಮುಂದಿನ ದಿನಗಳಲ್ಲಿ ಈ ಬಗ್ಗೆ ಸವಿವರವಾಗಿ ಮಾಹಿತಿ ನೀಡುತ್ತೇನೆ. ಅನರ್ಹಗೊಂಡಿರುವ ಶಾಸಕರು 15 ವಿಧಾನಸಭೆ ಅವಧಿ ಅಂದರೆ 3 ವರ್ಷ 10 ತಿಂಗಳು ಚುನಾವಣೆಗೆ ಸ್ಪರ್ಧಿಸಲು ಸಾಧ್ಯವಿಲ್ಲ ಎಂಬುದನ್ನು ಸ್ಪೀಕರ್ ರಮೇಶ್ ಕುಮಾರ್ ತಿಳಿಸಿದ್ದರು.

    ಸ್ಪೀಕರ್ ಅವರು ಮೂವರು ರೆಬೆಲ್ ಶಾಸಕರನ್ನು ಅನರ್ಹಹೊಳಿಸಿ ಆದೇಶ ಹೊರಡಿಸಿದ್ದಕ್ಕೆ ಕಾಂಗ್ರೆಸ್ ವಲಯದಲ್ಲಿ ಸಂತಸ ವ್ಯಕ್ತವಾಗಿದೆ. ಈ ಕುರಿತು ಕಾಂಗ್ರೆಸ್ ನಾಯಕರು ಟ್ವೀಟ್ ಮೇಲೆ ಟ್ವೀಟ್ ಮಾಡಿ ಪ್ರತಿಕ್ರಿಯಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಮಾಜಿ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ನಾಯಕ ಜಿ. ಪರಮೇಶ್ವರ್ ಅವರು ಟ್ವೀಟ್ ಮಾಡಿ ಸ್ಪೀಕರ್ ನಿರ್ಧಾರವನ್ನ ಶ್ಲಾಘಿಸಿದ್ದಾರೆ.

    ಟ್ವೀಟ್‍ಗಳಲ್ಲಿ ಏನಿದೆ?
    ರೆಬೆಲ್ ಶಾಸಕರಾದ ರಮೇಶ್ ಜಾರಕಿಹೊಳಿ, ಮಹೇಶ್ ಕುಮಟಳ್ಳಿ, ಆರ್.ಶಂಕರ್ ಅವರನ್ನು ಅನರ್ಹಗೊಳಿಸಲಾಗಿದೆ. ಸ್ಪೀಕರ್ ರಮೇಶ್ ಕುಮಾರ್ ಅವರ ತೀರ್ಪನ್ನ ಹೃದಯಪೂರ್ವಕವಾಗಿ ಸ್ವಾಗತಿಸುತ್ತೇನೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದರು.

    ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾದ ನಮ್ಮ ಪಕ್ಷದ ಮೂವರು ಶಾಸಕರನ್ನು ಅನರ್ಹಗೊಳಿಸಿರುವ ಸ್ಪೀಕರ್ ಅವರ ನಿರ್ಣಯವನ್ನು ಸ್ವಾಗರಿಸುತ್ತೇನೆ. ಪ್ರಜಾಪ್ರಭುತ್ವದ ರಕ್ಷಣೆಗಾಗಿ ಇಂತ ನಿರ್ಧಾರಗಳು ಅತ್ಯಗತ್ಯ. ಸ್ವಾರ್ಥ ಸಾಧನೆಗಾಗಿ ಜನಾದೇಶವನ್ನು ಉಲ್ಲಂಘಿಸಿದವರಿಗೆ ಈ ಐತಿಹಾಸಿಕ ನಿರ್ಣಯ ಎಚ್ಚರಿಕೆಯ ಗಂಟೆಯಗಲಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದರು.

    ಬಂಡಾಯ ಶಾಸಕರು ಅಧಿಕಾರದ ಆಸೆಗೆ ಪಕ್ಷ ತೊರೆದು ಹೋದರು. ಈ ಮೂಲಕ ತಮ್ಮನ್ನು ಆರಿಸಿದ ಜನರನ್ನು ಇಡೀ ದೇಶದ ಜನರ ಎದುರಿಗೆ ನಗೆಪಾಟಲಿಗೆ ತಳ್ಳಿದರು. ರೆಬೆಲ್ ಶಾಸಕರಾದ ರಮೇಶ್ ಜಾರಕಿಹೊಳಿ, ಆರ್.ಶಂಕರ್ ಹಾಗೂ ಮಹೇಶ್ ಕುಮಟಳ್ಳಿ ಅವರನ್ನು ಅಮಾನತು ಮಾಡಿರುವ ಸಭಾಧ್ಯಕ್ಷರ ನಿರ್ಧಾರವನ್ನು ಸ್ವಾಗತಿಸುತ್ತೇನೆ. ಬಂಡಾಯ ಶಾಸಕರ ನಡವಳಿಕೆಯಿಂದಾಗಿ ರಾಜಕಾರಣದ ಬಗ್ಗೆ ಜನರಲ್ಲಿ ಹೇಸಿಗೆ ಹುಟ್ಟಿದೆ ಎಂದು ಜಿ. ಪರಮೇಶ್ವರ್ ಕಿಡಿಕಾರಿದ್ದರು.

  • 28 ಕೋಟಿ ಆರೋಪ ಮಾಡಿದ್ದ ಸಾರಾ ಮಹೇಶ್‍ಗೆ ವಿಶ್ವನಾಥ್ ಸವಾಲು

    28 ಕೋಟಿ ಆರೋಪ ಮಾಡಿದ್ದ ಸಾರಾ ಮಹೇಶ್‍ಗೆ ವಿಶ್ವನಾಥ್ ಸವಾಲು

    ಬೆಂಗಳೂರು: ಶುಕ್ರವಾರ ಸದನದಲ್ಲಿ ನಡೆದ ಚರ್ಚೆಯ ವೇಳೆ ಸಚಿವ ಸಾ.ರಾ.ಮಹೇಶ್ ಅವರು ಎಚ್. ವಿಶ್ವನಾಥ್ ಮೇಲೆ 28 ಕೋಟಿ ರೂಪಾಯಿಯ ಆರೋಪ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಎಚ್.ವಿಶ್ವನಾಥ್ ಅವರು ಮಹೇಶ್ ಅವರಿಗೆ ಧೈರ್ಯವಿದ್ದರೆ ಪ್ರತಿಕಾಗೋಷ್ಠಿ ಮಾಡಿ ಆರೋಪ ಮಾಡಲಿ ಎಂದು ಸವಾಲು ಹಾಕಿದ್ದಾರೆ.

    ಈ ಬಗ್ಗೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಎಚ್.ವಿಶ್ವನಾಥ್, ಕೆಲವು ಕಾರಣಗಳಿಂದ ಮುಂಬೈನಲ್ಲಿ ಇದ್ದೀನಿ ಖಂಡಿತ ಬರುತ್ತೇನೆ. ನಾವು ಬಂದಂತಹ ಸಂದರ್ಭದಲ್ಲಿ ಜಾತಿ, ಹಣದ ಬಗ್ಗೆ ಎತ್ತಿಕಟ್ಟಿ ನಮ್ಮ ಮಾನಹರಣ ಮಾಡುತ್ತಾರೆ. ಹೊರಗಡೆ ಇದ್ದರೂ ಮಾಡುತ್ತಾರೆ ಎಂದು ಗೊತ್ತಿದೆ. ಆದರೆ ಗೈರಾದ ಶಾಸಕನ ಬಗ್ಗೆ ಸದನದೊಳಗೆ ಮಾತನಾಡುವ ಅಧಿಕಾರ ಯಾವ ಸದಸ್ಯನಿಗೂ ಇಲ್ಲ. ಅದಕ್ಕೆ ಸ್ಪೀಕರ್ ಅವಕಾಶ ಮಾಡಿಕೊಡಬಾರದು ಎಂದು ಗರಂ ಆದರು. ಇದನ್ನೂ ಓದಿ: ಬಿಜೆಪಿಯಿಂದ ವಿಶ್ವನಾಥ್‍ಗೆ 28 ಕೋಟಿ ರೂ. ಆಫರ್: ಸಾ.ರಾ.ಮಹೇಶ್

    ಇದೆಲ್ಲ ಗೊತ್ತಿದ್ದರೂ ಸಾ.ರಾ.ಮಹೇಶ್ ಸದನದಲ್ಲಿ ಆರೋಪ ಮಾಡಿದ್ದಾರೆ. ಅವರಿಗೆ ಧೈರ್ಯವಿದ್ದರೆ ಹೊರಗಡೆ ಬಂದು ಪ್ರತಿಕಾಗೋಷ್ಠಿ ಮಾಡಿ ಆರೋಪ ಮಾಡಲಿ. ಆಗ ನಾನು ಅದನ್ನು ಎದುರಿಸುತ್ತೇನೆ. ಅದನ್ನು ಬಿಟ್ಟು ಸದನದಲ್ಲಿ ಆಪಾದನೆ ಮಾಡಿದರೆ ಗಾಳಿಯಲ್ಲಿ ಗುಂಡು ಹೊಡೆದ ರೀತಿಯಲ್ಲಿ ಇರುತ್ತದೆ. ಸದನದಲ್ಲಿ ಯಾರು ಬೇಕಾದರು ಯಾರ ಮೇಲಾದರೂ ಆರೋಪ ಮಾಡಬಹುದು ಎಂದು ಮಹೇಶ್ ವಿರುದ್ಧ ವಾಗ್ದಾಳಿ ನಡೆಸಿದರು.

    ಸದನದಲ್ಲಿ ಸದಸ್ಯನ ಗೈರು ಹಾಜರಿಯಲ್ಲಿ ಆಪಾದನೆ ಮಾಡುವ ಅವಕಾಶವಿಲ್ಲ. ಆದರೆ ಆಪಾದನೆ ಮಾಡುವುದಕ್ಕೆ ಸದನದಲ್ಲಿ ಪ್ರೋತ್ಸಾಹ ಕೊಟ್ಟಿದ್ದಾರೆ. ನಾನು ಇದನ್ನು ಸದನದಲ್ಲಿ ನೋಡಿದೆ. ಇದು ದ್ರೌಪದಿಯ ಸೀರೆ ಎಳೆಯುವಾಗ ಮಿಕ್ಕವರು ಅದನ್ನು ನೋಡಿ ನಕ್ಕಿದ್ದಂತಾಗಿದೆ. ಇದನ್ನು ನೋಡಿ ಮನಸ್ಸಿಗೆ ತುಂಬ ನೋವಾಯಿತು. ಸ್ಪೀಕರ್ ಪಕ್ಷಪಾತ ಮಾಡಿದ್ದಾರೆ. ಅದನ್ನು ಹೇಗೆ ಎಸದುರಿಸಬೇಕು ಎಂದು ಗೊತ್ತಿದೆ. ಈಗಾಗಲೇ ಸ್ಪೀಕರ್‌ಗೆ ಪತ್ರ ಬರೆಯುತ್ತಿದ್ದೇನೆ.

    ಶುಕ್ರವಾರ ನಡೆದ ಚರ್ಚೆಯಲ್ಲಿ ಸಚಿವ ಸಾರಾ ಮಹೇಶ್ ವಿಶ್ವನಾಥ್‍ಗೆ ಬಿಜೆಪಿ ಅವರು 28 ಕೋಟಿ ರೂ. ಆಫರ್ ಕೊಟ್ಟಿದ್ದಾರೆ ಎಂದು ಗಂಭೀರವಾಗಿ ಆರೋಪ ಮಾಡಿದ್ದರು.

  • ಅವನ್ಯಾರು ನನಗೆ ಮಂತ್ರಿಗಿರಿ ಕೊಡೋಕೆ, ನಾನು ಸೇಲ್ ಆಗಿಲ್ಲ: ವಿಶ್ವನಾಥ್ ತಿರುಗೇಟು

    ಅವನ್ಯಾರು ನನಗೆ ಮಂತ್ರಿಗಿರಿ ಕೊಡೋಕೆ, ನಾನು ಸೇಲ್ ಆಗಿಲ್ಲ: ವಿಶ್ವನಾಥ್ ತಿರುಗೇಟು

    ಬೆಂಗಳೂರು: ಅವನ್ಯಾರು ನನಗೆ ಮಂತ್ರಿ ಸ್ಥಾನ ಕೊಡೋಕೆ? ನಾನು ಸೇಲ್ ಆಗಿಲ್ಲ ಎಂದು ವಿಶ್ವನಾಥ್ ಅವರು ಸಚಿವ ಸಾರಾ ಮಹೇಶ್ ಆರೋಪಕ್ಕೆ ಕೆಂಡಾಮಂಡಲರಾಗಿದ್ದಾರೆ.

    ಪಬ್ಲಿಕ್ ಟಿವಿ ಜೊತೆ ಮತನಾಡಿದ ಅವರು, ನಾನು ಸಾರಾ ಮಹೇಶ್ ಆರೋಪ ಮಾಡಿರುವುದನ್ನ ನೋಡಿದೆ. ಅವರು ತೋಟದ ಮನೆ ವಿಚಾರ ನಿಜ. ಅಲ್ಲಿಗೆ ನಾನು ಸ್ನೇಹಿತನಾಗಿ ಹೋಗಿದ್ದೆ. ನಾವು ಚುನಾವಣೆಯಲ್ಲಿ ಮಾಡಿಕೊಂಡಿದ್ದಂತಹ ಸಾಲದ ಬಗ್ಗೆ ಕೂಡ ನಾವು ಮಾತನಾಡಿದ್ದೇವು. ಆದರೆ 28 ಕೋಟಿಗೆ ನಾವು ಸೇಲ್ ಆಗಿದ್ದೇವೆ ಎಂದು ಸಾರಾ ಮಹೇಶ್ ಹೇಳಿದ್ದು ನಿಜಕ್ಕೂ ಮನಸಿಗೆ ನೋವಾಯ್ತು ಎಂದರು.

    ಸುಮಾರು 40 ವರ್ಷದಿಂದ ಪ್ರಮಾಣಿಕತೆಯನ್ನು ನಾನು ಕಾಪಾಡಿಕೊಂಡು ಬಂದಿದ್ದೇನೆ. ಈಗ ನಾನು ಸದನದಲ್ಲಿ ಇಲ್ಲವಲ್ಲ, ನಾನು ವಾಪಾಸ್ ಬಂದಮೇಲೆ ಅವರಿಗೆ ಉತ್ತರ ಕೊಡುತ್ತೇನೆ. ಸದನದಲ್ಲಿ ಓರ್ವ ಶಾಸಕ ಗೈರು ಹಾಜರಿ ಹಾಕಿರುವಾಗ ಅವರ ಬಗ್ಗೆ ಬೇರೆ ನಾಯಕರು ಈ ರೀತಿ ಮಾತನಾಡಲು ಸ್ಪೀಕರ್ ಅವಕಾಶ ಕೊಟ್ಟಿರುವುದು ಸರಿಯಲ್ಲ. ಮಾತನಾಡಲು ಬೇಕಾದಷ್ಟಿದೆ, ಸಿಎಂ ನಮ್ಮನ್ನು ಯಾವ ರೀತಿ ನಡೆಸಿಕೊಂಡರು ಎನ್ನುವ ಬಗ್ಗೆ ಆಮೇಲೆ ಹೇಳುತ್ತೇನೆ. ಸಾರಾ ಮಹೇಶ್ ಆರೋಪವನ್ನು ನಾನು ತಿರಸ್ಕಾರ ಮಾಡುತ್ತಿದ್ದೇನೆ. ಮುಂದೆ ಈ ಬಗ್ಗೆ ನಾನು ಕಾನೂನು ಹೋರಾಟವನ್ನು ಕೂಡ ಮಾಡುತ್ತೇನೆ. ಶಾಸನ ಸಭೆಯಲ್ಲೂ ಕೂಡ ಈ ಬಗ್ಗೆ ನಾನು ಪ್ರಸ್ತಾಪ ಮಾಡುತ್ತೇನೆ ಎಂದರು.

    ಸಾರಾ ಮಹೇಶ್ ಅವರು ಎಲ್ಲರನ್ನೂ ಜಾತಿ ಆಧಾರದ ಮೇಲೆ ಮಾತನಾಡಿಸುತ್ತಾರೆ. ಅದಕ್ಕೆ ನಾನು ಹಲವು ಸಾರಿ ಸಿಎಂ ಬಳಿ ಈ ಬಗ್ಗೆ ಹೇಳಿದ್ದೆ, ನಿಮ್ಮ ಸಚಿವ ಸಾರಾಸಗಟಾಗಿ ಎಲ್ಲರ ಬಗ್ಗೆ ಜಾತಿ ಹಿಡಿದು ಮಾತನಾಡುತ್ತಾರೆ ಎಂದು ಗಮನಕ್ಕೆ ತಂದಿದ್ದೆ. ಸಾರಾ ಮಹೇಶ್ ಅವರು ಬರೀ ಚಾಡಿ ಹೇಳುತ್ತಾರೆ. ಸರ್ಕಾರದ ಈ ಸ್ಥಿತಿಗೆ ಅವರು ಕೂಡ ಒಂದು ರೀತಿ ನೇರ ಕಾರಣ. ಅವರ ದುರಹಂಕಾರ, ತಿಂಗಳು ತಿಂಗಳಿಗೆ ಕೊಡುತ್ತೇನೆ ತೆಗೆದುಕೊಂಡು ಹೋಗು ಅನ್ನೋಕೆ ನಮ್ಮನ್ನೆಲ್ಲಾ ಏನು ಅಂದುಕೊಂಡಿದ್ದಾನೆ ಎಂದು ಪ್ರಶ್ನಿಸಿ ಗರಂ ಆದರು.

    ನಾನು ವಿಶೇಷ ವಿಮಾನದಲ್ಲಿ ಪ್ರಯಾಣಿಸಿದ್ದು ಬೇರೆಯ ವಿಚಾರ. ಆ ಸಂದರ್ಭ ಬಂದಾಗ ನಾನು ಅದರ ಬಗ್ಗೆ ಮಾತನಾಡುತ್ತೆನೆ. ವಿಮಾನದಲ್ಲಿ ಹೋಗುವವರೆಲ್ಲ ಯಾರ ಹತ್ತಿರವಾದರೂ ದುಡ್ಡು ತೆಗೆದುಕೊಂಡೆ ಹೋಗುತ್ತಾರಾ? ಹಾಗೆ ಹೋಗಿ ಬರುತ್ತಾರೆ. ಅದು ಬೇರೆಯ ವಿಚಾರವಾಗುತ್ತದೆ ಎಂದು ಕಿಡಿಕಾರಿದರು. ನಾನು 28 ಕೋಟಿ ತೆಗೆದುಕೊಂಡಿರುವುದನ್ನ ಇವರು ಸಾಬೀತು ಮಾಡಲಿ. ಈ ದುಡ್ಡು ಯಾರು ಕೊಟ್ಟರು? ಇವನೆಲ್ಲಿ ಅದನ್ನು ನೋಡಿದ? ಎನ್ನುವುದನ್ನ ಸಾಬೀತು ಮಾಡಲಿ. ನಾನು ಸಾಲ ಮಾಡಿದ್ದು ನಿಜ, ಇವತ್ತಿಗೂ ಸಾಲ ಇದೆ. ಚುನಾವಣೆ ಸಾಲ ಮಾಡದಿದ್ದರೆ ಹೇಗೆ ಆಗುತ್ತೆ. ಪಾಪ ಸಾರಾ ಮಹೇಶ್ ಕರಿಯುತ್ತಿದ್ದಾರೆ ಅಂತ ತೋಟಕ್ಕೆ ಹೋದೆ. ಆಗ ನಿಮ್ಮ ಸಾಲ ಇದ್ದರೆ ತೀರಿಸು ಎಂದು ಸಿಎಂ ನನಗೆ ಹೇಳಿದ್ದಾರೆ ಎಂದರು. ಇವೆಲ್ಲಾ ವಿಚಾರ ಸಿಎಂ ಅವರಿಗೂ ಗೊತ್ತಿದೆ ಎಂದು ಏಕವಚನದಲ್ಲೆ ವಾಗ್ದಾಳಿ ನಡೆಸಿದರು.

    ಆದ್ರೆ ನಮ್ಮ ಅಸಹಾಯಕತೆಯನ್ನ ಇವರು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಮಂತ್ರಿ ಸ್ಥಾನ ಬೇಕು ಅಂತ ನನಗೆ ಕೇಳೋಕೆ ಇವನ್ಯಾರು? ಮುಖ್ಯಮಂತ್ರಿನಾ? ನಾನು ಮೊದಲೆ ಹೇಳಿದ್ದೆ ನನಗೆ ಮಂತ್ರಿಗಿರಿ ಬೇಡ ಎಂದು ಸಿಎಂಗೆ ಹೇಳಿದ್ದೆ. ಸರ್ಕಾರದಲ್ಲಿ ನಿಮ್ಮ ಜೊತೆ ನಿಂತು ಕೆಲಸ ಮಾಡಲು ಇಷ್ಟ ಪಡುತ್ತೇನೆ ಆದ್ರೆ ಸಚಿವ ಸ್ಥಾನ ಬೇಡ ಅಂದಿದ್ದೆ.

    ಏನು ನಡಿತೋ, ಏನು ಗೊತ್ತಾಯ್ತೋ. ಇವರು ಮಾತ್ರ ಸುಳ್ಳಿನ ಕಂತೆ ಹೇಳಿಕೊಂಡು ಇದ್ದಾರೆ. ಇವತ್ತಿನ ಸದನದಲ್ಲಿ ಯಾರು ಯಾರ ಮೇಲೆ ಆರೋಪ ಮಾಡಬೇಕು ಅನ್ನೊದನ್ನ ನಿರ್ಧರಿಸಿಕೊಂಡು ಬಂದ ಹಾಗೆ ಇದೆ. ಸಿಎಂ ಗೆ ಎಲ್ಲಾ ಮಾಹಿತಿ ಗೊತ್ತಿದ್ದರೆ ಇಟ್ಟುಕೊಟ್ಟಲಿ. ಇಲ್ಲವಾದರೆ ಜನರಿಗೆ ಹೇಳಲಿ ಅದಕ್ಕೇನು? ನಾನು ಸ್ವತಂತ್ರ ವ್ಯಕ್ತಿ. ನಾನು ಎಲ್ಲಿಗೆ ಹೋಗಿದ್ದೆ ಎಂದು ಕೇಳಲು ಇವರ್ಯಾರು? ನಾನು ಸ್ವಚ್ಛವಾಗಿದ್ದೆನೆ, ನನಗೆ ಬೆರಳು ಮಾಡಿ ಹೇಳುವಂತ ಕೆಲಸವನ್ನ ನಾನು ಮಾಡಿಲ್ಲ. ಇಲ್ಲಿ ಶಕ್ತಿವಂತನಲ್ಲದಿದ್ದರೂ ಪ್ರಾಮಾಣಿಕತೆಯಿಂದ ಬದುಕುವವರ ಪಟ್ಟಿಯಲ್ಲಿ ನಾನಿದ್ದೇನೆ. ನನ್ನ ಮೇಲೆ ಆರೋಪ ಮಾಡಿದಕ್ಕೆ ಸಿಎಂ ಹಾಗೂ ಮಹೇಶ್ ಮೇಲೆ ನನಗೆ ಬೇಸರವಾಯ್ತು. ಸಾರಾ ಮಹೇಶ್ ಅವರಿಂದ ನನ್ನ ವಿರುದ್ಧ ಆರೋಪ ಮಾಡುವಂತೆ ಹೇಳಿಕೊಟ್ಟಿದ್ದಾರೆ ಎಂದು ಹೇಳಿದರು.

    ಇವತ್ತು ನನ್ನ ವಿರುದ್ಧ ಮಾಡಿರುವ ಆರೋಪಕ್ಕೆ ನಾನು ಕಾನೂನಾತ್ಮಕವಾಗಿ ಹೋರಾಡುತ್ತೇನೆ. ಮಹೇಶ್ ಸವಾಲು ಸ್ವೀಕರಿಸಲು ನಾನು ಸಿದ್ಧನಿದ್ದೇನೆ ಎಂದರು.

    ಸಾರಾ ಮಹೇಶ್ ಹೇಳಿದ್ದೇನು?

    ವಿಶ್ವನಾಥ್‍ಗೆ ಬಿಜೆಪಿ ಅವರು 28 ಕೋಟಿ ರೂ. ಆಫರ್ ಕೊಟ್ಟಿದ್ದಾರೆ ಎಂದು ಸಾರಾ ಮಹೇಶ್ ಗಂಭೀರವಾಗಿ ಆರೋಪ ಮಾಡಿದ್ದಾರೆ. ಲೋಕಸಭಾ ಚುನಾವಣೆಗೆ ಮೊದಲು ಅಂದರೆ ನಾಲ್ಕು ತಿಂಗಳ ಹಿಂದೆ ಅವರೇ, “ಪ್ರತಿಪಕ್ಷಗಳಿಗೆ ಅಧಿಕಾರ ಹಿಡಿಯುವ ಹಂಬಲ, ಕಾತುರ ಇರುವುದು ಸಹಜವಾಗಿದೆ. ಆದರೆ ಅದಕ್ಕಾಗಿ ವಾಮ ಮಾರ್ಗ ಹಿಡಿಯುವುದು ಸರಿಯಿಲ್ಲ. ರಾಜ್ಯದಲ್ಲಿ ಸಂವಿಧಾನಾತ್ಮಕವಾಗಿ ಮೈತ್ರಿ ಸರ್ಕಾರ ಆಡಳಿತದಲ್ಲಿದೆ. ಅದನ್ನು ಉರುಳಿಸುತ್ತಿರುವ ಪ್ರಯತ್ನಕ್ಕೆ ಕೈ ಹಾಕುತ್ತಿರುವುದು ಬಿಜೆಪಿಗೆ ಶೋಭೆ ತರುವುದಲ್ಲ. ಅದೇ ರೀತಿ ಕಪ್ಪು ಹಣ ಉಪಯೋಗಿಸಬಾರದು” ಎಂದು ಹೇಳಿಕೆ ಕೊಟ್ಟಿದ್ದರು.

    ಆದರೆ ನಾನು ಅಮೆರಿಕಕ್ಕೆ ಹೋಗುವ ಮೊದಲು ಸಾ.ರಾ ಮಹೇಶ್ ಸರಿಯಿಲ್ಲ. ಅವರ ಧೋರಣೆಗೆ ಬೇಸತ್ತು ಹೋಗುತ್ತಿದ್ದೇನೆ ಎಂದು ಹೇಳಿದ್ದರು. ಆಗ ನಾನು ಅವರನ್ನು ತೋಟಕ್ಕೆ ಕರೆಸಿ, ಏನ್ ಸರ್ ಮಂತ್ರಿ ಆಗಬೇಕೆಂಬ ಆಸೆ ಇದೆಯೇ ಹೇಳಿ ಸರ್ ಎಂದು ಕೇಳಿದೆ. ಅದಕ್ಕೆ ಅವರು ಇಲ್ಲ, ಇಲ್ಲ ನನಗೆ ಅದೇನು ಬೇಡ ಎಂದರು. ಅದಕ್ಕೆ ನಾನು ಮತ್ತೆ ಬೇರೆ ಏನ್ ಬೇಕು ಹೇಳಿ ಸರ್ ಎಂದು ಕೇಳಿದೆ. ಅದಕ್ಕೆ ಅವರು ಚುನಾವಣೆಗೆ ನಾನು ಸಾಲ ಮಾಡಿಕೊಂಡಿದ್ದೇನೆ. ಅದರಿಂದ ಸಮಸ್ಯೆಯಾಗಿದೆ ಎಂದಿದ್ದರು.

    ಇದೇ ವೇಳೆ ಅವರು, ನನ್ನನ್ನು ಬಿಜೆಪಿಯವರು ಕರೆದಿದ್ದರು. ಜೊತೆಗೆ 28 ಕೋಟಿ ರೂ. ಕೊಡುತ್ತೇನೆ ಎಂದಿದ್ದಾರೆ. ಆದರೆ ದೇವೇಗೌಡರು ಈ ಕಾಲದಲ್ಲಿ ನನ್ನನ್ನು ನಂಬಿ ಮೂಲೆಯಲ್ಲಿ ಇದ್ದವನ ಕರೆದುಕೊಂಡು ಬಂದು ಶಾಸಕನ ಸ್ಥಾನ ಕೊಟ್ಟರು. ಅವರಿಗೆ ಮೋಸ ಮಾಡಲ್ಲ ಎಂದಿದ್ದೇನೆ. ನೀವು ಸಾಲ ತೀರಿಸಲು ಒಂದು ವ್ಯವಸ್ಥೆ ಮಾಡಿ ಎಂದು ಕೇಳಿಕೊಂಡರು. ಬೇಕಿದ್ದರೆ ಅವರನ್ನು ಕರೆಸಿ ಇಲ್ಲೆ ಕೇಳಿ ನಾನು ಹೇಳುತ್ತಿರುವುದು ಸತ್ಯ. ಇಲ್ಲವಾದಲ್ಲಿ ಇನ್ಮುಂದೆ ಯಾವತ್ತು ಬಿಳಿ ಬಟ್ಟೆ ಹಾಕಲ್ಲ. ಕೈ ಮುಗಿದು ಸಾರ್ವಜನಿಕರ ಮುಂದೆ ವೋಟು ಕೇಳಲ್ಲ ಎಂದು ಮಹೇಶ್ ಶಪಥ ಮಾಡಿದರು.

  • ಬಿಜೆಪಿಯಿಂದ ವಿಶ್ವನಾಥ್‍ಗೆ 28 ಕೋಟಿ ರೂ. ಆಫರ್: ಸಾ.ರಾ.ಮಹೇಶ್

    ಬಿಜೆಪಿಯಿಂದ ವಿಶ್ವನಾಥ್‍ಗೆ 28 ಕೋಟಿ ರೂ. ಆಫರ್: ಸಾ.ರಾ.ಮಹೇಶ್

    ಬೆಂಗಳೂರು: ವಿಧಾನಸಭೆಯಲ್ಲಿ ನಡೆಯುತ್ತಿರುವ ಸದನದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು ಬಿಜೆಪಿ ಅವರು ಕುದುರೆ ವ್ಯಾಪಾರ ಮಾಡುತ್ತಿದ್ದು, ಶ್ರೀನಿವಾಸ್ ಗೌಡರು 5 ಕೋಟ್ ಆಫರ್ ಬಂದಿತ್ತು ಎಂದು ಹೇಳಿದ ಬೆನ್ನಲ್ಲೆ ಸಚಿವ ಸಾರಾ ಮಹೇಶ್ ಎದ್ದು ನಿಂತು ವಿಶ್ವನಾಥ್‍ಗೆ ಬಿಜೆಪಿ ಅವರು 28 ಕೋಟಿ ರೂ. ಆಫರ್ ಕೊಟ್ಟಿದ್ದಾರೆ ಎಂದು ಗಂಭೀರವಾಗಿ ಆರೋಪ ಮಾಡಿದ್ದಾರೆ.

    ಲೋಕಸಭಾ ಚುನಾವಣೆಗೆ ಮೊದಲು ಅಂದರೆ ನಾಲ್ಕು ತಿಂಗಳ ಹಿಂದೆ ಅವರೇ, “ಪ್ರತಿಪಕ್ಷಗಳಿಗೆ ಅಧಿಕಾರ ಹಿಡಿಯುವ ಹಂಬಲ, ಕಾತುರ ಇರುವುದು ಸಹಜವಾಗಿದೆ. ಆದರೆ ಅದಕ್ಕಾಗಿ ವಾಮ ಮಾರ್ಗ ಹಿಡಿಯುವುದು ಸರಿಯಿಲ್ಲ. ರಾಜ್ಯದಲ್ಲಿ ಸಂವಿಧಾನಾತ್ಮಕವಾಗಿ ಮೈತ್ರಿ ಸರ್ಕಾರ ಆಡಳಿತದಲ್ಲಿದೆ. ಅದನ್ನು ಉರುಳಿಸುತ್ತಿರುವ ಪ್ರಯತ್ನಕ್ಕೆ ಕೈ ಹಾಕುತ್ತಿರುವುದು ಬಿಜೆಪಿಗೆ ಶೋಭೆ ತರುವುದಲ್ಲ. ಅದೇ ರೀತಿ ಕಪ್ಪು ಹಣ ಉಪಯೋಗಿಸಬಾರದು” ಎಂದು ಹೇಳಿಕೆ ಕೊಟ್ಟಿದ್ದರು.

    ಆದರೆ ನಾನು ಅಮೆರಿಕಕ್ಕೆ ಹೋಗುವ ಮೊದಲು ಸಾ.ರಾ ಮಹೇಶ್ ಸರಿಯಿಲ್ಲ. ಅವರ ಧೋರಣೆಗೆ ಬೇಸತ್ತು ಹೋಗುತ್ತಿದ್ದೇನೆ ಎಂದು ಹೇಳಿದ್ದರು. ಆಗ ನಾನು ಅವರನ್ನು ತೋಟಕ್ಕೆ ಕರೆಸಿ, ಏನ್ ಸರ್ ಮಂತ್ರಿ ಆಗಬೇಕೆಂಬ ಆಸೆ ಇದೆಯೇ ಹೇಳಿ ಸರ್ ಎಂದು ಕೇಳಿದೆ. ಅದಕ್ಕೆ ಅವರು ಇಲ್ಲ, ಇಲ್ಲ ನನಗೆ ಅದೇನು ಬೇಡ ಎಂದರು. ಅದಕ್ಕೆ ನಾನು ಮತ್ತೆ ಬೇರೆ ಏನ್ ಬೇಕು ಹೇಳಿ ಸರ್ ಎಂದು ಕೇಳಿದೆ. ಅದಕ್ಕೆ ಅವರು ಚುನಾವಣೆಗೆ ನಾನು ಸಾಲ ಮಾಡಿಕೊಂಡಿದ್ದೇನೆ. ಅದರಿಂದ ಸಮಸ್ಯೆಯಾಗಿದೆ ಎಂದಿದ್ದರು.

    ಇದೇ ವೇಳೆ ಅವರು, ನನ್ನನ್ನು ಬಿಜೆಪಿಯವರು ಕರೆದಿದ್ದರು. ಜೊತೆಗೆ 28 ಕೋಟಿ ರೂ. ಕೊಡುತ್ತೇನೆ ಎಂದಿದ್ದಾರೆ. ಆದರೆ ದೇವೇಗೌಡರು ಈ ಕಾಲದಲ್ಲಿ ನನ್ನನ್ನು ನಂಬಿ ಮೂಲೆಯಲ್ಲಿ ಇದ್ದವನ ಕರೆದುಕೊಂಡು ಬಂದು ಶಾಸಕನ ಸ್ಥಾನ ಕೊಟ್ಟರು. ಅವರಿಗೆ ಮೋಸ ಮಾಡಲ್ಲ ಎಂದಿದ್ದೇನೆ. ನೀವು ಸಾಲ ತೀರಿಸಲು ಒಂದು ವ್ಯವಸ್ಥೆ ಮಾಡಿ ಎಂದು ಕೇಳಿಕೊಂಡರು. ಬೇಕಿದ್ದರೆ ಅವರನ್ನು ಕರೆಸಿ ಇಲ್ಲೆ ಕೇಳಿ ನಾನು ಹೇಳುತ್ತಿರುವುದು ಸತ್ಯ. ಇಲ್ಲವಾದಲ್ಲಿ ಇನ್ಮುಂದೆ ಯಾವತ್ತು ಬಿಳಿ ಬಟ್ಟೆ ಹಾಕಲ್ಲ. ಕೈ ಮುಗಿದು ಸಾರ್ವಜನಿಕರ ಮುಂದೆ ವೋಟು ಕೇಳಲ್ಲ ಎಂದು ಮಹೇಶ್ ಶಪಥ ಮಾಡಿದರು.

    ಈ ಸಂದರ್ಭದಲ್ಲಿ, ಸರ್ ಬೇಸರ ಮಾಡಿಕೊಳ್ಳಬೇಡಿ, ಕುಮಾರಣ್ಣ ನಂಬಿ ನನ್ನನ್ನು ಮಂತ್ರಿ ಮಾಡಿದ್ದಾರೆ. ನಾನು ಜನರ ಸೇವೆ ಮಾಡಲೆಂದು ಮಂತ್ರಿಯಾಗಿದ್ದೇನೆ. ಹೀಗಾಗಿ ನನ್ನ ಬಳಿ ಯಾವುದೇ ಹಣ ಇಲ್ಲ. ಆದರೆ ನಾನು ಸಂಪಾದನೆ ಮಾಡಿರುವ ಹಣ ಇದೆ. ಅದನ್ನು ತಿಂಗಳಿಗೆ ಇಂತಿಷ್ಟು ಎಂದು ಕೊಡುತ್ತೇನೆ, ನೀವು ಸಾಲ ತೀರಿಸಿಕೊಳ್ಳಿ ಎಂದು ಸಾ.ರಾ ಮಹೇಶ್ ತಂದೆ-ತಾಯಿ, ಮಕ್ಕಳ ಮೇಲೆ ಆಣೆ ಮಾಡಿ ಹೇಳುತ್ತೇನೆ ಎಂದರು.

    ನಾನು ಅಮೆರಿಕದಲ್ಲಿದ್ದೆ ಆಗಲೂ ಫೋನ್ ಮಾಡಿ ಸರ್ ಹಣವನ್ನು ಎಲ್ಲಿಗೆ ಕಳುಹಿಸಲಿ ಎಂದು ಕೇಳಿದೆ. ಆಗ ಮಹೇಶ್ ನಾನೇ ಬರುತ್ತೇನೆ, ಅಲ್ಲೆ ಬಂದು ಮಾತನಾಡುತ್ತೇನೆ ಎಂದಿದ್ದರು. ಆದರೆ ಇಂದು ಮುಂಬೈಗೆ ಹೋಗಿದ್ದಾರೆ. ನನ್ನಿಂದ ಬೇಸರವಾಗಿ ಹೋಗಿದ್ದೇನೆ ಎಂದು ಹೇಳಿದ್ದಾರೆ. ಹೀಗಾಗಿ ಅವರನ್ನು ಕರೆಸಿ ಎಂದು ಸ್ಪೀಕರ್ ಬಳಿ ಮಹೇಶ್ ಮನವಿ ಮಾಡಿಕೊಂಡರು.