Tag: visit

  • Breaking- ಮನವಿ ಪತ್ರ ಹಿಡಿದು ಸಿಎಂ ಬೊಮ್ಮಾಯಿ ಭೇಟಿ ಮಾಡಿದ ನಟ ರಿಷಬ್ ಶೆಟ್ಟಿ

    Breaking- ಮನವಿ ಪತ್ರ ಹಿಡಿದು ಸಿಎಂ ಬೊಮ್ಮಾಯಿ ಭೇಟಿ ಮಾಡಿದ ನಟ ರಿಷಬ್ ಶೆಟ್ಟಿ

    ಚುನಾವಣೆ ಸಮಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraja Bommai) ಅವರನ್ನು ಭೇಟಿ ಮಾಡಿದ್ದಾರೆ ನಟ ರಿಷಬ್ ಶೆಟ್ಟಿ (Rishabh Shetty). ಸಿಎಂ ಭೇಟಿಯ ಫೋಟೋವನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಭೇಟಿಯ ಹಿಂದೆ ಮಹತ್ವದ ಉದ್ದೇಶವಿತ್ತು ಎನ್ನುವುದನ್ನೂ ಅವರು ಹೇಳಿಕೊಂಡಿದ್ದಾರೆ. ತಾವು ಕೊಟ್ಟಿರುವ ಮನವಿಗೂ ಬಸವರಾಜ ಬೊಮ್ಮಾಯಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದೂ ಅವರು ವಿಡಿಯೋ ಮೂಲಕ ಹೇಳಿದ್ದಾರೆ.

    ಕಾಂತಾರ 2 RISHAB SHETTY

    ಕಾಂತಾರ ಚಿತ್ರದ ನಂತರ ಅವರು ಅನೇಕ ಕಾಡುಗಳಿಗೆ ಭೇಟಿ ನೀಡಿದ್ದಾರಂತೆ. ಕರ್ನಾಟಕದ ನಾನಾ ಭಾಗಗಳಲ್ಲಿ ಸಂಚರಿಸಿದ್ದಾರಂತೆ. ಅದರಲ್ಲೂ ಕಾಡಂಚಲ್ಲಿ ವಾಸಿಸುವವರ ಜೊತೆ ಬೆರೆತಿದ್ದಾರೆ. ಅವರ ನೋವು ನಲಿವುಗಳಿಗೆ ಸಾಕ್ಷಿಯಾಗಿದ್ದಾರೆ. ಅಲ್ಲದೇ, ಕಾಡಿನಲ್ಲಿ ಕೆಲಸ ಮಾಡುವ ಅಧಿಕಾರಿಗಳು ಮತ್ತು ಸಿಬ್ಬಂದಿ ಜೊತೆಯೂ ಮಾತನಾಡಿದ್ದಾರಂತೆ. ಅವರು ಕಷ್ಟಗಳು ಏನು ಎನ್ನುವುದನ್ನು ಪಟ್ಟಿಮಾಡಿ, ಆ ಪಟ್ಟಿಯನ್ನು ಸಿಎಂಗೆ ನೀಡಿದ್ದಾರೆ ರಿಷಬ್. ಇದನ್ನೂ ಓದಿ: ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟ ಕಿರುತೆರೆ ಸುಂದರಿ ಅಮೂಲ್ಯ ಗೌಡ

    ಕಾಡಿನ ಪಕ್ಕದಲ್ಲೇ ವಾಸಿಸುವ ಅನೇಕರಿಗೆ ಏನೆಲ್ಲ ಕಷ್ಟ ಪಡುತ್ತಿದ್ದಾರೆ, ಅವರಿಗೆ ಏನೆಲ್ಲ ಪರಿಹಾರ ನೀಡಬಹುದು ಹಾಗೂ ಕಾಡು ಪ್ರಾಣಿಗಳಿಂದ ಯಾವ ರೀತಿಯಲ್ಲಿ ತೊಂದರೆ ಆಗುತ್ತಿದೆ ಮತ್ತು ಅರಣ್ಯ ಸಿಬ್ಬಂದಿ ಎಷ್ಟೆಲ್ಲ ಸಂಕಟಗಳನ್ನು ಅನುಭವಿಸುತ್ತಿದ್ದಾರೆ ಎನ್ನುವುದನ್ನು ಅಕ್ಷರ ರೂಪದಲ್ಲಿ ಮುಖ್ಯಮಂತ್ರಿಗಳಿಗೆ ತೋರಿಸಿದ್ದಾರೆ. ಸಿಎಂ ಕೂಡ ಕೂಡಲೇ ಅವುಗಳಿಗೆ ಸ್ಪಂದಿಸುವುದಾಗಿ ತಿಳಿಸಿದ್ದಾರಂತೆ.

    ಕಾಂತಾರ ಯಶಸ್ಸಿನ ಅಲೆಯಲ್ಲಿ ತೇಲುತ್ತಿರುವ ರಿಷಬ್, ಸಾಕಷ್ಟು ಸಮಾಜಮುಖಿ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ದೈವನರ್ತಕರಿಗೆ ಮತ್ತು ಅವರ ಕುಟುಂಬಕ್ಕೆ ಅನೇಕ ರೀತಿಯಲ್ಲಿ ಸಹಾಯ ಮಾಡುತ್ತಿದ್ದಾರೆ. ಅಲ್ಲದೇ, ಜನಪದ ಕಲೆಗಳು ಮತ್ತು ಜನಪದರ ಭಾವನೆಗಳಿಗೆ ಸ್ಪಂದಿಸಿದ್ದಾರೆ. ಅದರ ಮುಂದುವರೆಕೆಯಾಗಿ ಸಿಎಂ ಭೇಟಿ ಮಾಡಿದ್ದಾರೆ.

  • ದೈವಿ ಕ್ಷೇತ್ರಗಳಿಗೆ ಕಾಂತಾರ ನಟಿ ಭೇಟಿ : ಕೊರಗಜ್ಜ, ಗುಳಿಗ ಸನ್ನಿಧಿಯಲ್ಲಿ ಸಪ್ತಮಿ

    ದೈವಿ ಕ್ಷೇತ್ರಗಳಿಗೆ ಕಾಂತಾರ ನಟಿ ಭೇಟಿ : ಕೊರಗಜ್ಜ, ಗುಳಿಗ ಸನ್ನಿಧಿಯಲ್ಲಿ ಸಪ್ತಮಿ

    ದೈವ ಶಕ್ತಿಯ ಮೂಲಕವೇ ಅಪಾರ ಜನಮನ್ನಣೆ ಪಡೆದಿರುವ ಮತ್ತು ರಾಷ್ಟ್ರದಾದ್ಯಂತ ಯಶಸ್ಸಿ ಪ್ರದರ್ಶನ ಕಾಣುತ್ತಿರುವ ಕಾಂತಾರ ಸಿನಿಮಾದ ನಟಿ ಸಪ್ತಮಿ ಗೌಡ, ತಮ್ಮ ಸಿನಿಮಾದ ಗೆಲುವಿಗೆ ಕಾರಣರಾದ ದೈವಗಳಿಗೆ ಭೇಟಿ ನೀಡಿ, ಅವರ ಆಶೀರ್ವಾದ ಪಡೆದಿದ್ದಾರೆ. ತಮ್ಮ ಬಿಡುವಿಲ್ಲದ ಸಮಯದ ನಡುವೆಯೂ ಮಂಗಳೂರಿನ ದೈವೀ ಕ್ಷೇತ್ರಗಳಿಗೆ ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿದ್ದಾರೆ.

    ಮಂಗಳೂರಿನ ಕಲ್ಲಾಪು ಬಳಿಯ ಬುರ್ದುಗೋಳಿಯ ಗುಳಿಗ ದೇವಸ್ಥಾನ, ಕೊರಗ ತನಿಯ ದೈವಗಳ ಉದ್ಭವ ಶಿಲೆಯ ಆದಿಸ್ಥಳಕ್ಕೆ ಭೇಟಿ ನೀಡಿರುವ ಅವರು, ಕೆಲ ಸಮಯ ಅಲ್ಲಿಯೇ ಇದ್ದು ಪೂಜೆ ಸಲ್ಲಿಸಿದ್ದಾರೆ. ಇವರ ಜೊತೆ ಸಿನಿಮಾದಲ್ಲಿ ಕೆಲಸ ಮಾಡಿದ ಹಲವು ಸದಸ್ಯರು ಮತ್ತು ಸಪ್ತಮಿ ಕುಟುಂಬ ಕೂಡ ಈ ಸಂದರ್ಭದಲ್ಲಿ ಹಾಜರಿತ್ತು. ಕ್ಷೇತ್ರದ ಸಮಿತಿಯವರು ನಟಿಯನ್ನು ಬರಮಾಡಿಕೊಂಡು, ಕ್ಷೇತ್ರದ ಮಹಿಮೆಯನ್ನು ತಿಳಿಸಿದರು. ಇದನ್ನೂ ಓದಿ:ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ನಿರ್ಮಾಣದ ಸಿನಿಮಾದ ಶೂಟಿಂಗ್ ಮುಕ್ತಾಯ

    ಈ ಸಂದರ್ಭದಲ್ಲಿ ಮಾತನಾಡಿದ ಸಪ್ತಮಿ, ತುಳು ನಾಡಿನ ದೈವಗಳ ಆಶೀರ್ವಾದದಿಂದ ತಮ್ಮ ಸಿನಿಮಾ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ದೈವಗಳ ಮೇಲೆ ನನಗೂ ನಂಬಿಕೆ ಇದೆ. ಈ ಕಾರಣದಿಂದಾಗಿಯೇ ನನ್ನನ್ನು ಕಾಂತಾರ ಸಿನಿಮಾದ ಮೂಲಕ ನಾಡಿಗೆ ಪರಿಚಯವಾದೆ. ಇದಕ್ಕೆಲ್ಲ ದೈವಗಳ ಆಶೀರ್ವಾದವೇ ಕಾರಣ. ಸಿನಿಮಾ ಮಾಡಲುವಾಗಲೇ ಅಷ್ಟೇ ಶ್ರದ್ಧೆಯಿಂದ ಕೆಲಸ ಮಾಡಿದೆ. ಈಗಲೂ ಅದೇ ಶ್ರದ್ಧೆಯಿಂದ ಇಲ್ಲಿಗೆ ಬಂದಿರುವೆ ಎಂದರು.

    ಕಾಂತಾರ ಸಿನಿಮಾದ ನಂತರ ಸಪ್ತಮಿ ಗೌಡ ಅವರಿಗೆ ಹಲವು ಆಫರ್ಸ್ ಬರುತ್ತಿದ್ದು, ಈಗಾಗಲೇ ಎರಡು ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಅಲ್ಲದೇ, ಒಂದು ಸಿನಿಮಾದ ಸ್ಕ್ರೀಪ್ಟ್ ರೀಡಿಂಗ್ ಕೂಡ ನಡೆಯುತ್ತಿದೆ ಎಂದು ಅವರೇ ಸ್ವತಃ ಹೇಳಿಕೊಂಡಿದ್ದಾರೆ. ಈ ಸಿನಿಮಾದಿಂದಾಗಿ ಅವರು ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ. ಈ ಸಕ್ಸಸ್ ಅನ್ನು ಸದ್ಯ ಸಪ್ತಮಿ ಎಂಜಾಯ್ ಮಾಡುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಜನಾರ್ದನ್ ರೆಡ್ಡಿ ಮಗನ ಸಿನಿಮಾ ಸೆಟ್ ಗೆ ಶಿವರಾಜ್ ಕುಮಾರ್ ಸರ್ಪ್ರೈಸ್ ವಿಸಿಟ್

    ಜನಾರ್ದನ್ ರೆಡ್ಡಿ ಮಗನ ಸಿನಿಮಾ ಸೆಟ್ ಗೆ ಶಿವರಾಜ್ ಕುಮಾರ್ ಸರ್ಪ್ರೈಸ್ ವಿಸಿಟ್

    ಮಾಜಿ ಮಂತ್ರಿ ಗಾಲಿ ಜನಾರ್ದನ್ ರೆಡ್ಡಿ ಪುತ್ರ, ನಟ ಕಿರೀಟಿ ಗಂಧದಗುಡಿ ಅಂಗಳಕ್ಕೆ ಗ್ರ್ಯಾಂಡ್ ಆಗಿ ಬಂದಾಗಿದೆ. ಇನ್ನೂ ಹೆಸರಿಡದ ಈ ಚಿತ್ರವನ್ನು ತೆಲುಗಿನ ಖ್ಯಾತ ನಿರ್ಮಾಣ ಸಂಸ್ಥೆ ವಾರಾಹಿ ಫಿಲ್ಮಂ ಪ್ರೊಡಕ್ಷನ್ ಕನ್ನಡ ಹಾಗೂ ತೆಲುಗು ಎರಡು ಭಾಷೆಯಲ್ಲಿ ಅದ್ಧೂರಿಯಾಗಿ ನಿರ್ಮಾಣ ಮಾಡುತ್ತಿದೆ. ರಾಧಾಕೃಷ್ಣ ರೆಡ್ಡಿ ಸಾರಥ್ಯದಲ್ಲಿ ತಯಾರಾಗುತ್ತಿರುವ ಈ ಚಿತ್ರ ಸಾಕಷ್ಟು ನಿರೀಕ್ಷೆಯನ್ನು ಹೆಚ್ಚಿಸಿದೆ. ಈಗಾಗಲೇ ರಿಲೀಸ್ ಆಗಿರುವ ಕಿರೀಟಿ ಇಂಟ್ರೂಡಕ್ಷನ್ ಟೀಸರ್ ಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದ್ದು, ಇದೀಗ ಸಿನಿಮಾ ಅಂಗಳದಿಂದ ನಯಾ ಖಬರ್ ರಿವೀಲ್ ಆಗಿದೆ.

    ಅದ್ಧೂರಿಯಾಗಿ ಮುಹೂರ್ತ ನೆರವೇರಿಸಿಕೊಂಡು ಶೂಟಿಂಗ್ ಅಖಾಡಕ್ಕೆ ಧುಮುಕ್ಕಿದ್ದ ಚಿತ್ರತಂಡ ಬ್ರೇಕ್ ತೆಗೆದುಕೊಳ್ಳದೇ ನಿರಂತರವಾಗಿ ಚಿತ್ರೀಕರಣ ನಡೆಸುತ್ತಿದೆ. ಸದ್ಯ ಬೆಂಗಳೂರಿನ ನಾಗವಾರದ ಮಾನ್ಯತಾ ಟೆಕ್ ಪಾರ್ಕ್ ನಲ್ಲಿ ಚಿತ್ರದ ಶೂಟಿಂಗ್ ಭರದಿಂದ ಸಾಗುತ್ತಿದೆ. ಈ ಶೂಟಿಂಗ್ ಸೆಟ್ ಗೆ ದೊಡ್ಮನೆ ದೊರೆ ಶಿವಣ್ಣ ಸರ್ಪ್ರೈಸ್ ಆಗಿ ವಿಸಿಟ್ ಕೊಟ್ಟಿದ್ದಾರೆ. ಈ ಸಂದರ್ಭದಲ್ಲಿ ಕಿರೀಟಿ ಹಾಗೂ ಜೆನಿಲಿಯಾ ಭಾಗದ ಚಿತ್ರೀಕರಣ ನಡೆಯುತ್ತಿತ್ತು. ಈ ವೇಳೆ ಕೆಲಕಾಲ ಅಲ್ಲಿಯೇ ಸಮಯ ಕಳೆದ ಶಿವಣ್ಣ ಇಡೀ ತಂಡಕ್ಕೆ ಒಳ್ಳೆದಾಗಲಿ ಎಂದು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಇಡೀ ತಂಡ ಹಾಗೂ ಜನಾರ್ದನ ರೆಡ್ಡಿ ಕೂಡ ಉಪಸ್ಥಿತರಿದ್ದರು. ಇದನ್ನೂ ಓದಿ: ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಗಿಫ್ಟ್‌ ತನ್ನಿ ಎಂದ ರಿಯಲ್‌ ಸ್ಟಾರ್‌ ಉಪೇಂದ್ರ

    ಹೆಸರಿಡದ ಕಿರೀಟಿ ಚೊಚ್ಚಲ ಸಿನಿಮಾದ ಟೈಟಲ್ ಅನಾವರಣಕ್ಕೂ ಮುಹೂರ್ತ ಫಿಕ್ಸ್ ಆಗಿದೆ. ಇದೇ ತಿಂಗಳ 29ಕ್ಕೆ ಕಿರೀಟಿ ಹುಟ್ಟುಹಬ್ಬವಿದೆ. ಈ ದಿನದಂದೂ ಟೈಟಲ್ ರಿವೀಲ್ ವಿಡಿಯೋ ಝಲಕ್ ರಿಲೀಸ್ ಮಾಡಲು ಯೋಜನೆ ಹಾಕಿಕೊಂಡಿದೆ. ಸದ್ಯ ಬಹುತೇಕ ಭಾಗ ಸಿನಿಮಾದ ಶೂಟಿಂಗ್ ಕಂಪ್ಲೀಟ್ ಆಗಿದ್ದು, ಪ್ರೊಡಕ್ಷನ್ ಕೆಲಸಗಳು ಕೂಡ ಭರದಿಂದ ನಡೆಯುತ್ತಿವೆ. ಸಾಯಿ ಕೊರಪಾಠಿ ನಿರ್ಮಿಸಲಿರುವ ಚಿತ್ರಕ್ಕೆ ರಾಕ್‌ಸ್ಟಾರ್ ದೇವಿ ಶ್ರೀ ಪ್ರಸಾದ್ ಸಂಗೀತ ನೀಡುತ್ತಿದ್ದು, ಬಾಹುಬಲಿ ಸಿನಿಮಾದ ಕಣ್ಣು ಕೆ ಸೆಂಥಿಲ್ ಕುಮಾರ್ ಛಾಯಾಗ್ರಹಣ, ರವೀಂದರ್ ಕಲಾ ನಿರ್ದೇಶನ, ಭಾರತದ ಟಾಪ್ ಸ್ಟಂಟ್ ನಿರ್ದೇಶಕ ಪೀಟರ್ ಹೆನ್ ಆಕ್ಷನ್ ಚಿತ್ರಕ್ಕಿದೆ.

    Live Tv
    [brid partner=56869869 player=32851 video=960834 autoplay=true]

  • ರಜನಿಕಾಂತ್ ಮನೆಯಲ್ಲಿ ಕಾಣಿಸಿಕೊಂಡ ಕಮಲ್ ಹಾಸನ್: ಕುತೂಹಲ ಮೂಡಿಸಿದ ಭೇಟಿ

    ರಜನಿಕಾಂತ್ ಮನೆಯಲ್ಲಿ ಕಾಣಿಸಿಕೊಂಡ ಕಮಲ್ ಹಾಸನ್: ಕುತೂಹಲ ಮೂಡಿಸಿದ ಭೇಟಿ

    ರಡು ದಿನಗಳ ಹಿಂದೆಯಷ್ಟೇ ‘ನಾನು ಎಂದಿಗೂ ರಜನಿಕಾಂತ್ ಅವರನ್ನು ದ್ವೇಷಿಸಿಲ್ಲ. ಅವರು ನನ್ನ ವೈರಿಯಲ್ಲ’ ಎಂದು ಕಮಲ್ ಹಾಸನ್ ಹೇಳಿದ ಬೆನ್ನೆಲ್ಲೇ, ರಜನಿ ಮನೆಗೆ ಕಮಲ್ ಹೋಗಿದ್ದಾರೆ. ಮನೆಗೆ ಬಂದ ಅತಿಥಿಯನ್ನು ಆತ್ಮೀಯವಾಗಿಯೇ ಬರಮಾಡಿಕೊಂಡಿದ್ದಾರೆ ರಜನಿ. ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದನ್ನೂ ಓದಿ : ಸದ್ದಿಲ್ಲದೇ ಶೂಟಿಂಗ್ ಮುಗಿಸಿದ ಮಂಸೋರೆ ನಿರ್ದೇಶನದ ‘19.20.21’ ಸಿನಿಮಾ

    ರಜನಿಕಾಂತ್ ಮತ್ತು ಕಮಲ್ ಹಾಸನ್ ಒಟ್ಟೊಟ್ಟಿಗೆ ಸಿನಿಮಾ ರಂಗದಲ್ಲಿ ಬದುಕು ಕಟ್ಟಿಕೊಂಡವರು. ಒಟ್ಟೊಟ್ಟಿಗೆ ಸಿನಿಮಾ ಮಾಡಿದವರು. ಒಂದೇ ದಿನಕ್ಕೆ ಇಬ್ಬರೂ ಸಿನಿಮಾಗಳನ್ನು ರಿಲೀಸ್ ಮಾಡಿ ತೊಡೆತಟ್ಟಿದವರು. ಹೀಗಾಗಿ ಇಬ್ಬರ ಫ್ಯಾನ್ಸ್ ಕೂಡ ಆಗಾಗ್ಗೆ ಫ್ಯಾನ್ಸ್ ವಾರ್ ಮಾಡಿದ್ದಿದೆ. ನಮ್ಮಿಬ್ಬರ ಮಧ್ಯೆ ವೈರತ್ವ ಇಲ್ಲವೆಂದು ಇಬ್ಬರೂ ಹೇಳಿಕೊಂಡರೂ, ಅಭಿಮಾನಿಗಳು ಮಾತ್ರ ಅದನ್ನು ನಂಬಲು ತಯಾರಿಲ್ಲ. ಇದನ್ನೂ ಓದಿ : ಒಟಿಟಿಯಲ್ಲೂ ರಾಜಮೌಳಿ ‘RRR’ ದಾಖಲೆ

    ಸದ್ಯ ಕಮಲ್ ಹಾಸನ್ ನಟನೆಯ ‘ವಿಕ್ರಮ್ ‘ ಸಿನಿಮಾ ರಿಲೀಸ್ ಆಗುತ್ತಿದೆ. ಇದೇ ವಾರವೇ ವಿಶ್ವದಾದ್ಯಂತ ಸಿನಿಮಾ ತೆರೆಗೆ ಬರುತ್ತಿದೆ. ಈ ಸಂದರ್ಭದಲ್ಲಿ ರಜನಿಕಾಂತ್ ಮನೆಗೆ ಕಮಲ್ ಹಾಸನ್ ಭೇಟಿ ನೀಡಿದ್ದಾರೆ. ವಿಕ್ರಮ್ ಸಿನಿಮಾ ನೋಡುವಂತೆ ಆಹ್ವಾನ ಮಾಡಿದ್ದಾರೆ ಎನ್ನಲಾಗುತ್ತಿದೆ. ಹೀಗಾಗಿ ರಜನಿ ಅಭಿಮಾನಿಗಳು ಕೂಡ ವಿಕ್ರಮ್ ಸಿನಿಮಾವನ್ನು ನೋಡಬಹುದು ಎನ್ನುವ ಅಂದಾಜಿದೆ. ಇದನ್ನೂ ಓದಿ : ಅಭಿಷೇಕ್ ಅಂಬರೀಶ್ ನಟನೆಯ ಕಾಳಿ ಸಿನಿಮಾ ಫಸ್ಟ್ ಲುಕ್ ರಿಲೀಸ್

    ದಕ್ಷಿಣದಲ್ಲಿ ಕಮಲ್ ನಟನೆಯ ವಿಕ್ರಮ್ ಚಿತ್ರ ರಿಲೀಸ್ ಆಗುತ್ತಿದ್ದರೆ, ಬಾಲಿವುಡ್ ನಲ್ಲಿ ಅಕ್ಷಯ್ ಕುಮಾರ್ ಅವರ ಸಾಮ್ರಾಟ್ ಫೃಥ್ವಿರಾಜ್ ಸಿನಿಮಾ ಕೂಡ ತೆರೆಗೆ ಬರುತ್ತಿದೆ. ಆ ಸಿನಿಮಾ ಕೂಡ ನಿರೀಕ್ಷೆಯನ್ನು ಹೆಚ್ಚಿಸಿದೆ. ಹೀಗಾಗಿ ಸಹಜವಾಗಿಯೇ ಎರಡೂ ಚಿತ್ರಗಳ ಮಧ್ಯೆ ಪೈಪೋಟಿ ನಡೆಯಲಿದೆ. ಎರಡು ಸಿನಿಮಾಗಳಲ್ಲಿ ಪ್ರೇಕ್ಷಕ ಯಾರಿಗೆ ಒಲಿಯುತ್ತಾನೆ ಎನ್ನುವುದು ಸದ್ಯಕ್ಕಿರುವ ಕುತೂಹಲ.

  • ಐತಿಹಾಸಿಕ ಮ್ಯೂಸಿಯಂಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿ

    ಐತಿಹಾಸಿಕ ಮ್ಯೂಸಿಯಂಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿ

    ಬಳ್ಳಾರಿ: ಗಣಿ ನಾಡು ಬಳ್ಳಾರಿಯಲ್ಲಿರುವ ಐತಿಹಾಸಿಕ ಮ್ಯೂಸಿಯಂಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಭೇಟಿ ನೀಡಿದ್ದಾರೆ.

    ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಯ ವಿವಿಧ ಕಾರ್ಯಕ್ರಮದಲ್ಲಿ ಭಾಗಿಯಾಗಲು ಬಂದಿರುವ ರಾಜ್ಯಪಾಲರು ಇಂದು ಮುಂಜಾನೆ ಸಂಗನಕಲ್ಲು ಮ್ಯೂಸಿಯಂಗೆ ಭೇಟಿ ನೀಡಿದ್ದಾರೆ. ಇದನ್ನೂ ಓದಿ:  ಕೊನೆಗೂ ಮದುವೆಯ ವಿಚಾರ ಖಚಿತಪಡಿಸಿದ ಆಲಿಯಾ!

    ಮ್ಯೂಸಿಯಂನಲ್ಲಿನ 5 ಸಾವಿರ ವರ್ಷಗಳ ಹಿಂದಿನ ಪಳೆಯುಳಿಕೆಗಳ ವೀಕ್ಷಣೆ ಮಾಡಿದ್ದಾರೆ. ಮಮ್ಮಿ ಮಾದರಿಯ ಶವಪೆಟ್ಟಿಗೆ ವೀಕ್ಷಿಸಿ ಅಚ್ಚರಿ ವ್ಯಕ್ತಪಡಿಸಿದ ರಾಜ್ಯಪಾಲರು, ಐದು ಸಾವಿರ ವರ್ಷದ ಹಿಂದಿನ ಟೆಕ್ನಾಲಜಿ ಕುರಿತು ಮಾಹಿತಿ ಪಡೆದಿದ್ದಾರೆ. ರಾಜ್ಯಪಾಲರಿಗೆ ಬಳ್ಳಾರಿ ನಗರ  ಶಾಸಕ ಸೋಮಶೇಖರರೆಡ್ಡಿ,  ಹಾಗೂ ಅಪರ್ ಜಿಲ್ಲಾಧಿಕಾರಿ ಮಂಜುನಾಥ ಸಾಥ್ ಅವರು ಸಾತ್ ನೀಡಿದ್ದರು. ಇನ್ನು ರಾಜ್ಯಪಾಲರ ಭೇಟಿ ಹಿನ್ನೆಲೆಯಲ್ಲಿ ಬಳ್ಳಾರಿ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ಇದನ್ನೂ ಓದಿ: ಬೆಂಕಿ ಬಿರುಗಾಳಿ ಎಬ್ಬಿಸಿದ ಕಂಗನಾ ಶೋ: ಪತಿ ಜತೆ ಮಲಗಿದವರ ಲಿಸ್ಟ್ ಹೇಳಿದ ನಟಿ ಮಂದರಾ

  • ಗುರಿ ಈಡೇರಿಸಿಕೊಳ್ಳುವ ಕಡೆಗೆ ಪ್ರಯತ್ನ ನಿರಂತರವಾಗಿರಲಿ: ಎಸ್.ಟಿ.ಸೋಮಶೇಖರ್

    ಗುರಿ ಈಡೇರಿಸಿಕೊಳ್ಳುವ ಕಡೆಗೆ ಪ್ರಯತ್ನ ನಿರಂತರವಾಗಿರಲಿ: ಎಸ್.ಟಿ.ಸೋಮಶೇಖರ್

    ಮೈಸೂರು: ಗುರಿ ಈಡೇರಿಸಿಕೊಳ್ಳುವ ಕಡೆಗೆ ಪ್ರಯತ್ನ ನಿರಂತರವಾಗಿರಲಿ ಎಂದು ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದ್ದಾರೆ.

    ಕೋವಿಡ್ ಹಿನ್ನೆಲೆಯಲ್ಲಿ ದೀರ್ಘಕಾಲದ ನಂತರ 9, 10ನೇ ತರಗತಿ ಹಾಗೂ ಪದವಿ ಪೂರ್ವ ಕಾಲೇಜು ಭೌತಿಕ ತರಗತಿಗಳು ಆರಂಭವಾಗಿವೆ. ಈ ಹಿನ್ನೆಲೆಯಲ್ಲಿ ಎಸ್.ಟಿ.ಸೋಮಶೇಖರ್ ಅವರು ಬುಧವಾರ ವಿವಿಧ ಶಾಲಾ ಕಾಲೇಜುಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಧೈರ್ಯ ಹೇಳಿ ಶುಭಕೋರಿದರು. ಇದನ್ನೂ ಓದಿ: ಮೈಸೂರಲ್ಲಿ ನಡೆದ ಗ್ಯಾಂಗ್‍ರೇಪ್ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು: ಸಿ.ಟಿ ರವಿ

    ಮೈಸೂರಿನ ನಾರಾಯಣಶಾಸ್ತ್ರಿ ರಸ್ತೆಯಲ್ಲಿರುವ ಮಹಾರಾಣಿ ಸಂಯುಕ್ತ ಕಾಲೇಜಿಗೆ ಭೇಟಿ ನೀಡಿದಾಗ, ಭೌತಿಕ ತರಗತಿಗಳು ಆರಂಭವಾಗಿರುವುದು ಖುಷಿ ತಂದಿದೆ ಎಂದು ವಿದ್ಯಾರ್ಥಿನಿಯರು ಸಚಿವರಿಗೆ ಹೇಳಿದರು.

    ಕುವೆಂಪುನಗರದ ಕರ್ನಾಟಕ ಪಬ್ಲಿಕ್ ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳ ಶೈಕ್ಷಣಿಕ ಆಶೋತ್ತರಗಳ ಬಗ್ಗೆ ಸಚಿವರು ವಿಚಾರಿಸಿದರು. ರಾಜಕಾರಣಿ ಆಗುವ ಬಯಕೆ ಯಾರಿಗಾದರೂ ಇದಿಯ ಎಂದು ಸಚಿವರು ಕೇಳಿದಾಗ ವಿದ್ಯಾರ್ಥಿಗಳು ನಕ್ಕು ಅಸಮ್ಮತಿ ತೋರಿದರು. ಇಂಜಿನಿಯರ್, ವೈದ್ಯ, ಐ.ಎ.ಎಸ್, ಐ.ಪಿ.ಎಸ್ ಆಗುವ ಬಗ್ಗೆ ಕೇಳಿದಾಗ ಹಲವರು ಕೈ ಮೇಲೆ ಎತ್ತಿ ತಮ್ಮ ಗುರಿ, ಬಯಕೆ ವ್ಯಕ್ತಪಡಿಸಿದರು. ತಮ್ಮ ಗುರಿ ಈಡೇರಿಸಿಕೊಳ್ಳುವ ಕಡೆಗೆ ತಮ್ಮ ಪ್ರಯತ್ನ ನಿರಂತರವಾಗಿರಲಿ ಎಂದು ಸಚಿವರು ಹಾರೈಸಿದರು.

    ಈ ಸಂದರ್ಭದಲ್ಲಿ ಶಾಸಕ ಎಸ್.ಎ. ರಾಮದಾಸ್, ಸಂಸದ ಪ್ರತಾಪ್ ಸಿಂಹ, ಶಾಸಕ ಎಲ್. ನಾಗೇಂದ್ರ, ಜಿಲ್ಲಾ ಪಂಚಾಯಿತಿ ಸಿಇಒ ಎ.ಎಂ.ಯೋಗೀಶ್, ಮತ್ತಿತರರು ಉಪಸ್ಥಿತರಿದ್ದರು.

  • ಎರಡು ದಶಕಗಳ ಹಿಂದೆ ಬಂದ್ ಆಗಿದ್ದ ಇಎಸ್‍ಐ ಆಸ್ಪತ್ರೆಗೆ ಹೈಟೆಕ್ ಟಚ್

    ಎರಡು ದಶಕಗಳ ಹಿಂದೆ ಬಂದ್ ಆಗಿದ್ದ ಇಎಸ್‍ಐ ಆಸ್ಪತ್ರೆಗೆ ಹೈಟೆಕ್ ಟಚ್

    ಕಲಬುರಗಿ: ಕಳೆದ ಎರಡು ದಶಕಗಳ ಹಿಂದೆ ನಾನಾ ಕಾರಣಗಳಿಂದ ಬಂದ್ ಆಗಿದ್ದ ಶಹಬಾದ್ ಪಟ್ಟಣದಲ್ಲಿನ ಇಎಸ್‍ಐ ಆಸ್ಪತ್ರೆಗೆ ಇದೀಗ ಹೈಟೆಕ್ ಟಚ್ ನೀಡಲಾಗುತ್ತಿದ್ದು, ಇಂದು ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸ್ನಾ ಆಸ್ಪತ್ರೆಗೆ ಭೇಟಿ ಕಾಮಗಾರಿ ಪರಿಶೀಲನೆ ನಡೆಸಿದರು.

    ನೀರು, ಆಂತರಿಕ ವಿದ್ಯುತ್ತೀಕರಣ ಸೇರಿದಂತೆ ಬಹುತೇಕ ಸಿವಿಲ್ ಕಾಮಗಾರಿ ಪೂರ್ಣಗೊಂಡಿವೆ ಎಂದು ಸ್ಥಳದಲ್ಲಿದ್ದ ಸೇಡಂ ಉಪವಿಭಾಗದ ಲೊಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತ ಕೃಷ್ಣಾ ಅಗ್ನಿಹೋತ್ರಿ ಅವರು ಮಾಹಿತಿ ನೀಡಿದರು. ಗ್ಯಾಸ್ ಪೈಪ್ ಲೈನ್ ಕಾಮಗಾರಿ ಪೂರ್ಣಗೊಂಡಿದ್ದರಿಂದ ಪ್ರಾಯೋಗಿಕವಾಗಿ ಕಾರ್ಯಾಚರಣೆ ನಡೆಸುವಂತೆ ಅಧಿಕಾರಿಗಳಿಗೆ ಡಿ.ಸಿ. ಸೂಚಿಸಿದರು.

    ನವೀಕರಣಗೊಂಡ ಆಸ್ಪತ್ರೆಗೆ ಬೇಕಾಗುವ ವೈದ್ಯಕೀಯ ಉಪಕರಣಗಳು, ಪೀಠೋಪಕರಣಗಳ ಇಂಡೆಂಟ್ ಸಲ್ಲಿಸಬೇಕು. ಅದರ ಜೊತೆಗೆ ಅಸ್ಪತ್ರೆಗೆ ಅವಶ್ಯಕವಿರುವ ವೈದ್ಯಕೀಯ ಮತ್ತು ವೈದ್ಯಕೀಯೇತರ ಸಿಬ್ಬಂದಿ ವಿವರ ಸಹ ನೀಡಬೇಕೆಂದು ತಾಲೂಕು ಆರೋಗ್ಯಾಧಿಕಾರಿ ಡಾ.ಅಮರದೀಪ ಪವಾರ್ ಅವರಿಗೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.

    ಉಳಿದ ಕೆಲಸ-ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಮುಗಿಸಿ, ಅಸ್ಪತ್ರೆ ಪುನರಾರಂಭಕ್ಕೆ ಅಣಿಯಾಗಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ತಹಶೀಲ್ದಾರ್ ಸುರೇಶ್ ವರ್ಮಾ, ನಗರಸಭೆಯ ಆಯುಕ್ತ ಕೆ.ಗುರುಲಿಂಗಪ್ಪ, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತ ಅಣ್ಣೆಪ್ಪ ಕುದ್ರಿ, ಸಹಾಯಕ ಅಭಿಯಂತ ಜಗನ್ನಾಥ್ ಮಾಳಗೆ ಸೇರಿದಂತೆ ಇನ್ನಿತರ ಅಧಿಕಾರಿಗಳು ಇದ್ದರು.

  • ಪ್ರವಾಸಿಗರ ಭೇಟಿಗೆ ತಾಜ್ ಮಹಲ್ ಮುಕ್ತ – ಒಂದೇ ಬಾರಿಗೆ 650 ಮಂದಿಗೆ ಅವಕಾಶ

    ಪ್ರವಾಸಿಗರ ಭೇಟಿಗೆ ತಾಜ್ ಮಹಲ್ ಮುಕ್ತ – ಒಂದೇ ಬಾರಿಗೆ 650 ಮಂದಿಗೆ ಅವಕಾಶ

    ಲಕ್ನೋ: ಕೊರೊನಾ ಲಾಕ್‍ಡೌನ್ ಬಳಿಕ ಮೊದಲ ಬಾರಿಗೆ ವಿಶ್ವ ವಿಖ್ಯಾತ ತಾಜ್ ಮಹಲ್ ಪ್ರವೇಶಕ್ಕೆ ಷರತ್ತು ವಿಧಿಸಿ ಪ್ರವಾಸಿಗರ ಭೇಟಿಗೆ ಅನುಮತಿ ನೀಡಲಾಗಿದೆ.

    ಕೊರೊನಾ ಕಾರಣದಿಂದಾಗಿ ದೇಶದಲ್ಲಿ ಬಹುತೇಕ ಪ್ರವಾಸಿ ತಾಣಗಳು ಮುಚ್ಚಲ್ಪಟ್ಟಿದ್ದವು. ಸೋಂಕು ಪ್ರಸರಣ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೆಲವು ಪ್ರೇಕ್ಷಣೀಯ ಸ್ಥಳಗಳನ್ನು ತೆರೆಯಲು ನಿರ್ಧರಿಸಲಾಗಿದೆ. ತಾಜ್‍ಮಹಲ್ ಸೇರಿದಂತೆ, ಕೇಂದ್ರ ಸರ್ಕಾರದಿಂದ ಸಂರಕ್ಷಿಸಲ್ಪಡುವ ಎಲ್ಲಾ ಸ್ಮಾರಕಗಳನ್ನು ಇಂದಿನಿಂದ (ಜೂ.16) ಮತ್ತೆ ತೆರೆಯಲಾಗುತ್ತಿದ್ದು, ಪ್ರವಾಸಿಗರು ಕಣ್ತುಂಬಿಕೊಳ್ಳಬಹುದಾಗಿದೆ. ಸುಮಾರು 2 ತಿಂಗಳ ಬಳಿಕ ಪ್ರವಾಸಿಗರಿಗೆ ತಾಜ್‍ಮಹಲ್ ಪ್ರವೇಶಕ್ಕೆ ಪ್ರವಾಸಿಗರಿಗೆ ಅವಕಾಶ ನೀಡಲಾಗುತ್ತಿದೆ. ಇದನ್ನೂ ಓದಿ: ಕಾನೂನು ರಕ್ಷಣೆ ರದ್ದು – ಟ್ವಿಟ್ಟರ್ ವಿರುದ್ಧ ಬಿತ್ತು ಮೊದಲ ಕೇಸ್

    ಕೊರೊನಾ ಎರಡನೇ ಅಲೆ ಕಾಣಿಸಿಕೊಂಡ ಬಳಿಕ ಪ್ರೇಕ್ಷಣೀಯ ಸ್ಥಳಗಳಾದ ಕೆಂಪುಕೋಟೆ, ತಾಜ್‍ಮಹಲ್, ಅಜಂತಾ ಗುಹೆ ಸೇರಿದಂತೆ ಎಲ್ಲಾ ಕೇಂದ್ರೀಕೃತ ಸ್ಮಾರಕಗಳು ಹಾಗೂ ವಸ್ತು ಸಂಗ್ರಹಾಲಯಗಳನ್ನು ಏಪ್ರಿಲ್ 15ರಿಂದ ಮುಚ್ಚಲು ಸರ್ಕಾರ ಆದೇಶಿಸಿತ್ತು. ಇದೀಗ ತಾಜ್ ಮಹಲ್‍ಗೆ ಭೇಟಿ ನೀಡುವ ಪ್ರವಸಿಗರಿಗೆ ಅವಕಾಶ ಕಲ್ಪಸಿಕೊಡಲಾಗಿದೆ.

    ಯುನೆಸ್ಕೋ ವಿಶ್ವ ಪಾರಂಪರಿಕ ತಾಣಗಳಲ್ಲಿ ಒಂದಾದ ತಾಜ್‍ಮಹಲ್‍ನ್ನು ಕೊರೊನಾ ಕಾರಣದಿಂದಾಗಿ ಎರಡನೇ ಬಾರಿಗೆ ಏಪ್ರಿಲ್ 4ರಿಂದ ಮುಚ್ಚಲಾಗಿತ್ತು. ಕಳೆದ ವರ್ಷ ಕೂಡ ಕೋವಿಡ್ ಹೆಚ್ಚಾಗಿದ್ದರಿಂದ ತಾಜ್‍ಮಹಲ್‍ಗೆ ಪ್ರವಾಸಿಗರ ಪ್ರವೇಶವನ್ನು ನಿಬರ್ಂಧಿಸಲಾಗಿತ್ತು.

    ಒಮ್ಮೆಗೆ ಕೇವಲ 650 ಮಂದಿ ಪ್ರವಾಸಿಗರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ. ಆದರೆ ಸ್ಮಾರಕದ ಯಾವುದೇ ಭಾಗವನ್ನು ಮುಟ್ಟಲು ಪ್ರವಾಸಿಗರಿಗೆ ಅವಕಾಶ ನೀಡುವುದಿಲ್ಲ. ಭೇಟಿ ನೀಡುವವರು ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ತಾಜ್‍ಮಹಲ್‍ಗೆ ಭೇಟಿ ನೀಡುವ ಪ್ರವಾಸಿಗರು ಸ್ಪಂಜಿನಂತಹ ಕಾರ್ಪೆಟ್ ಮೇಲೆ ಮಾತ್ರ ನಡೆಯಬೇಕು. ಅಲ್ಲಿ ಸ್ಯಾನಿಟೈಜರ್ ಸಿಂಪಡಿಸಲಾಗಿದ್ದು, ತಾಜ್‍ಮಹಲ್ ಪ್ರವೇಶಿಸುವ ಪ್ರವಾಸಿಗರ ಶೂ, ಚಪ್ಪಲಿಗಳು ಸ್ಯಾನಿಟೈಸ್ ಆಗಲಿದೆ.

    ಕಳೆದ 2 ತಿಂಗಳುಗಳಿಂದ ಅಂಗಡಿ ತೆರೆಯಲಾಗದೇ ಜೀವನ ನಿರ್ವಹಣೆಗೆ ಸಂಕಷ್ಟ ಎದುರಿಸಿದ್ದೆವು. ಈಗ ತಾಜ್ ಮಹಲ್ ಅನ್ನು ಪ್ರವಾಸಿಗರಿಗೆ ತೆರೆಯಲಾಗಿದ್ದು, ನಾವೂ ಕೂಡ ಅಂಗಡಿಗಳನ್ನು ತೆರೆಯುತ್ತಿದ್ದೇವೆ. ಇದರಿಂದ ನಮ್ಮ ಸಂಕಷ್ಟ ಕೊಂಚ ಸಹಾಯವಾಗುತ್ತದೆ ಎಂದು ಭಾವಿಸಿದ್ದೇವೆ ಎಂದು ಅಲ್ಲಿನ ವ್ಯಾಪಾರಿಯೊಬ್ಬರು ಹೇಳಿದ್ದಾರೆ.

  • ಪಿಪಿಇ ಕಿಟ್ ಧರಿಸಿ ಕೋವಿಡ್ ವಾರ್ಡ್‍ನಲ್ಲಿ ಸಂಚಾರ- ಸೋಂಕಿತರ ಜೊತೆ ಸಂವಾದ ನಡೆಸಿದ ಡಿಸಿಎಂ

    ಪಿಪಿಇ ಕಿಟ್ ಧರಿಸಿ ಕೋವಿಡ್ ವಾರ್ಡ್‍ನಲ್ಲಿ ಸಂಚಾರ- ಸೋಂಕಿತರ ಜೊತೆ ಸಂವಾದ ನಡೆಸಿದ ಡಿಸಿಎಂ

    – ಜಿಲ್ಲೆಯಲ್ಲಿ ಐಸಿಯು ಹಾಸಿಗೆ ಹೆಚ್ಚಳ
    – ಎಲ್ಲ ಆಸ್ಪತ್ರೆಗಳಲ್ಲೂ ಆಕ್ಸಿಜನ್ ಘಟಕ

    ಮಂಡ್ಯ: ರಾಜ್ಯ ಕೋವಿಡ್ ಕಾರ್ಯಪಡೆ ಅಧ್ಯಕ್ಷರೂ ಆದ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಅವರು ಗುರುವಾರ ಬೆಳಗಿನಿಂದ ಮಧ್ಯಾಹ್ನದವರೆಗೆ ಜಿಲ್ಲೆಯಲ್ಲಿ ಕೋವಿಡ್ ವ್ಯವಸ್ಥೆ ವೀಕ್ಷಿಸಲು ಬಿರುಸಿನ ಪ್ರವಾಸ ನಡೆಸಿದರು. ಅಲ್ಲದೆ ಮದ್ದೂರು, ಬೂದನೂರು ಹಾಗೂ ಮಂಡ್ಯ ಆಸ್ಪತ್ರೆಗಳಿಗೆ ಭೇಟಿ ವ್ಯಾಪಕ ಪರಿಶೀಲನೆ ನಡೆಸಿದರು.

    ಮಂಡ್ಯದ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಪಿಪಿಇ ಕಿಟ್ ಧರಿಸಿ ಕೋವಿಡ್ ಸೋಂಕಿತರ ವಾರ್ಡ್‍ಗೆ ತೆರಳಿ ಖುದ್ದು ಪರಿಶೀಲನೆ ನಡೆಸಿದರು. ಸೋಂಕಿತರ ಯೋಗ ಕ್ಷೇಮ ವಿಚಾರಿಸಿ, ಚಿಕಿತ್ಸೆ-ಆರೈಕೆಯ ಬಗ್ಗೆ ಮಾಹಿತಿ ಪಡೆದರು.

    ಆಮ್ಲಜನಕದ ವ್ಯವಸ್ಥೆ, ಚಿಕಿತ್ಸೆ ವಿಧಾನ, ಮೂಲಸೌಕರ್ಯ ಮುಂತಾದವುಗಳನ್ನು ವೀಕ್ಷಿಸಿದರು. ವಾರ್ಡ್‍ನಲ್ಲಿ ಸೋಂಕಿತರ ಅಟೆಂಡರ್‍ಗಳು ಇದ್ದಿದ್ದನ್ನು ಕಂಡು ಆಕ್ಷೇಪ ವ್ಯಕ್ತಪಡಿಸಿದ ಡಿಸಿಎಂ, ಯಾವುದೇ ಕಾರಣಕ್ಕೂ ಸೋಂಕಿತರಲ್ಲದವರನ್ನು ವಾರ್ಡ್‍ಗೆ ಬಿಟ್ಟುಕೊಳ್ಳಬಾರದು ಎಂದು ಜಿಲ್ಲಾ ವೈದ್ಯಾಧಿಕಾರಿಗೆ ತಾಕೀತು ಮಾಡಿದರು.

    ಸೋಂಕಿತರ ಕೇಸ್ ಶೀಟ್‍ಗಳನ್ನೂ ಗಮನಿಸಿ, ಔಷಧೋಪಚಾರದ ಬಗ್ಗೆಯೂ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಸೋಂಕಿತರನ್ನು ಮಾತನಾಡಿಸಿದ ಅವರು, ಧೈರ್ಯದಿಂದ ಇರಿ, ಬೇಗ ಗುಣಮುಖರಾಗುತ್ತೀರಿ. ವೈದ್ಯರು ಹೇಳಿದಂತೆ ಕೇಳಿ ಎಂದು ಆತ್ಮಸ್ಥೈರ್ಯ ತುಂಬಿದರು.

    ಮದ್ದೂರಿನಿಂದ ಪ್ರವಾಸ ಆರಂಭಿಸಿದ ಡಿಸಿಎಂ, ಆಸ್ಪತ್ರೆಗೆ ಬರುತ್ತಿದ್ದಂತೆಯೇ, ಆಸ್ಪತ್ರೆಯೊಳಗೆ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರು ಕಿಟಕಿಗಳ ಮೂಲಕವೇ ಕಾಣಿಸಿಕೊಂಡು ಡಿಸಿಎಂಗೆ ಅಭಿವಂದನೆ ಸಲ್ಲಿಸಿದರು. ನಮಸ್ಕಾರ ಅಶ್ವತ್ಥನಾರಾಯಣ್ ಸರ್ ಎಂದು ಕೂಗಿದರು. ಈ ವೇಳೆ ಕೊಂಚ ಹತ್ತಿರಕ್ಕೆ ಹೋದ ಡಿಸಿಎಂ, ಎಲ್ಲರೂ ಕ್ಷೇಮವಾಗಿದ್ದೀರಾ? ಒಳ್ಳೆಯ ಚಿಕಿತ್ಸೆ, ಆಹಾರ ಸಿಗುತ್ತಿದೆಯಾ ಎಂದು ಆಪ್ತವಾಗಿ ವಿಚಾರಿಸಿದರು. ಇದಕ್ಕೆ ಉತ್ತರಿಸಿದ ಸೋಂಕಿತರು, ಎಲ್ಲವೂ ಚೆನ್ನಾಗಿದೆ ಎಂದು ಉತ್ತರಿಸಿದರು. ಅಲ್ಲಿಯೂ ಎಲ್ಲ ವ್ಯವಸ್ಥೆಗಳನ್ನು ಪರಿಶೀಲನೆ ಮಾಡಿ, ಸೋಂಕಿತರಿಗೆ ಯಾವುದೇ ಕೊರತೆ ಉಂಟಾಗಬಾರದು ಎಂದು ಅಧಿಕಾರಿಗಳಿಗೆ ಸೂಚಿಸಿದರು.

    ಬೂದನೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೂ ಭೇಟಿ ಪರಿಶೀಲನೆ ನಡೆಸಿದರು. ಸಿಬ್ಬಂದಿ ಕೊರತೆ ಇರುವುದನ್ನು ಕಂಡ ಡಿಸಿಎಂ, ಕೂಡಲೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಅಗತ್ಯ ಇರುವ ಎಲ್ಲ ಸಿಬ್ಬಂದಿಯನ್ನೂ ತಕ್ಷಣವೇ ನೇಮಕ ಮಾಡಿಕೊಳ್ಳಿ ಎಂದು ಜಿಲ್ಲಾಧಿಕಾರಿ ಅಶ್ವಥಿ ಅವರಿಗೆ ಸೂಚನೆ ನೀಡಿದರು.

    ಐಸಿಯು ಬೆಡ್‍ಗಳ ಹೆಚ್ಚಳ
    ಪ್ರವಾಸದ ಕೊನೆಯಲ್ಲಿ ಮಂಡ್ಯ ವೈದ್ಯಕೀಯ ವಿಜ್ಞಾನ ಸಂಸ್ಥೆ ಬಳಿ ಮಾಧ್ಯಮಗಳ ಜತೆ ಮಾತನಾಡಿದ ಡಾ.ಅಶ್ವಥ್ ನಾರಾಯಣ್, ಐಸಿಯು ಹಾಸಿಗೆಗಳನ್ನು ಗಣನೀಯವಾಗಿ ಹೆಚ್ಚಿಸಲಾಗುವುದು. ದಿನಕ್ಕೆ 18 ಕೆಎಲ್ ಆಮ್ಲಜನಕವನ್ನು ಒದಗಿಸುವ ಉದ್ದೇಶದಿಂದ ತಾಲೂಕು ಆಸ್ಪತ್ರೆಗಳು, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಆಮ್ಲಜನಕ ಉತ್ಪಾದನಾ ಘಟಕಗಳನ್ನು ಸ್ಥಾಪಿಸಲಾಗುವುದು ಮತ್ತು ಆಕ್ಸಿಜನ್ ಉತ್ಪಾದನಾ ಘಟಕವನ್ನು ಸ್ಥಾಪಿಸಲು ಮನ್ಮುಲ್ ಸಂಸ್ಥೆ ಮುಂದೆ ಬಂದಿದೆ ಎಂದರು.

    ಜಿಲ್ಲೆಯಲ್ಲಿ ಈಗ ನಾಲ್ಕು ಕೋವಿಡ್ ಕೇರ್ ಸೆಂಟರ್‍ಗಳಿದ್ದು, ಇದರ ಸಂಖ್ಯೆಯನ್ನು ಇನ್ನೂ ಹೆಚ್ಚಿಸಲಾಗುವುದು. ಮುಖ್ಯವಾಗಿ ಗ್ರಾಮೀಣ ಪ್ರದೇಶ ಹಾಗೂ ಮಂಡ್ಯದ ಕೊಳೆಗೇರಿಗಳಲ್ಲಿ ಪತ್ತೆಯಾಗುವ ಸೋಂಕಿತರಿಗೆ ಹೋಮ್ ಐಸೋಲೇಷನ್ ಇರುವುದಿಲ್ಲ. ಅವರೆಲ್ಲರನ್ನೂ ಕೋವಿಡ್ ಕೇರ್‍ಗಳಿಗೆ ಶಿಫ್ಟ್ ಮಾಡಿ ಚಿಕಿತ್ಸೆ ನೀಡಲಾಗುವುದು. ಈ ಬಗ್ಗೆ ಜಿಲ್ಲಾಡಳಿತಕ್ಕೆ ಸ್ಪಷ್ಟ ನಿರ್ದೇಶನ ಕೊಡಲಾಗಿದೆ ಎಂದರು.

    ಜಿಲ್ಲೆಯಲ್ಲಿ ಕೋವಿಡ್ ನಿರ್ವಹಣೆ ಅತ್ಯುತ್ತಮವಾಗಿದೆ. ಶೇ.95ರಷ್ಟು ಸೋಂಕಿತರನ್ನು ಮನೆ ಮನೆಗೆ ಭೇಟಿ ನೀಡಿ ಪತ್ತೆ ಹಚ್ಚಲಾಗಿದೆ. ಟೆಲಿ ಟ್ರಾಯಾಜಿಂಗ್ ಚೆನ್ನಾಗಿ ಆಗುತ್ತಿದೆ. 24 ಗಂಟೆಗೂ ಮೊದಲೇ ಪರೀಕ್ಷೆ ರಿಪೋರ್ಟ್ ಬರುತ್ತಿದೆ ಎಂದ ಡಿಸಿಎಂ, ಜಿಲ್ಲಾಡಳಿತ ಇನ್ನೂ ಉತ್ತಮವಾಗಿ ಕೆಲಸ ಮಾಡಿ ಗ್ರಾಮ ಮತ್ತು ಪಂಚಾಯಿತಿಗಳನ್ನು ಕೊರೊನಾ ಮುಕ್ತ ಮಾಡಬೇಕು ಎಂದು ಸಲಹೆ ನೀಡಿದರು.

    ಡಿಸೆಂಬರ್ ಹೊತ್ತಿಗೆ ಎಲ್ಲರಿಗೂ ಲಸಿಕೆ
    2021ರ ಕೊನೆ ವೇಳೆಗೆ ರಾಜ್ಯದ ಪ್ರತಿ ನಾಗರಿಕರಿಗೂ ಲಸಿಕೆ ಸಿಗುವ ನಿಟ್ಟಿನಲ್ಲಿ ಸರ್ಕಾರ ಎಲ್ಲ ಕ್ರಮ ವಹಿಸಿದೆ. 45 ವರ್ಷಕ್ಕೂ ಮೇಲ್ಪಟ್ಟ ಎಲ್ಲರಿಗೂ 2ನೇ ಡೋಸ್ ಲಸಿಕೆ ಕೊಡಲಾಗುತ್ತಿದೆ. ಇದರಲ್ಲಿ ಯಾವುದೇ ಸಮಸ್ಯೆ ಇಲ್ಲ. ಅವರಿಗೆ ಲಸಿಕೆ ಕೊರತೆ ಉಂಟಾಗಂತೆ ಎಚ್ಚರ ವಹಿಸಲಾಗಿದೆ. ಮೂಂಚೂಣಿಯಲ್ಲಿ ನಿಂತು ಕೆಲಸ ಮಾಡುತ್ತಿರುವ ಯಾರಿಗೂ ಕೊರತೆ ಆಗುತ್ತಿಲ್ಲ. ಲಸಿಕೆ ಉತ್ಪಾದನೆಯನ್ನು ತಿಂಗಳಿಂದ ತಿಂಗಳಿಗೆ ಹೆಚ್ಚಿಸಲಾಗುತ್ತಿದೆ ಎಂದು ಡಿಸಿಎಂ ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

    ಮುಖ್ಯಮಂತ್ರಿಗಳು ಘೋಷಣೆ ಮಾಡಿರುವ 1,250 ಕೋಟಿ ರೂ. ಪ್ಯಾಕೇಜ್ ಬಗ್ಗೆ ಅಪಸ್ವರ ಎತ್ತುವುದು ಸರಿಯಲ್ಲ. ಎಲ್ಲ ವರ್ಗದವರನ್ನು ಒಳಗೊಂಡಂತೆ ಪ್ಯಾಕೇಜ್ ರೂಪಿಸಲಾಗಿದೆ. ಯಾರಾದರೂ ತಪ್ಪಿ ಹೋಗಿದ್ದರೆ ಅವರನ್ನೂ ಸೇರಿಸಲು ಪ್ರಯತ್ನಿಸಲಾಗುವುದು ಎಂದರು. ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣಗೌಡ, ಶಾಸಕ ಡಿ.ಸಿ.ತಮ್ಮಣ್ಣ, ಜಿಲ್ಲಾಧಿಕಾರಿ ಅಶ್ವಥಿ, ಜಿಲ್ಲಾ ಸಹಕಾರ ಬ್ಯಾಂಕ್ ಅಧ್ಯಕ್ಷ ಸಿ.ಪಿ.ಉಮೇಶ್, ಡಿಸಿಎಂ ಕಾರ್ಯದರ್ಶಿ ಪ್ರದೀಪ್, ಡಿಎಚ್‍ಒ ಮುಂತಾದವರು ಇದ್ದರು.

  • ಹೆಚ್‍ಡಿಕೆ ಬಿಎಸ್‍ವೈಯನ್ನ ಭೇಟಿಯಾದ್ರೆ ಏನು ತಪ್ಪು?- ಮಾಧುಸ್ವಾಮಿ

    ಹೆಚ್‍ಡಿಕೆ ಬಿಎಸ್‍ವೈಯನ್ನ ಭೇಟಿಯಾದ್ರೆ ಏನು ತಪ್ಪು?- ಮಾಧುಸ್ವಾಮಿ

    ಹಾಸನ: ಮಾಜಿ ಸಿಎಂ ಹೆಚ್‍ಡಿ ಕುಮಾರಸ್ವಾಮಿ ಸಿಎಂ ಯಡಿಯೂರಪ್ಪ ಭೇಟಿ ಮಾಡಿದರೆ ಏನು ತಪ್ಪು, ಕುಮಾರಸ್ವಾಮಿ ಮತ್ತು ಯಡಿಯೂರಪ್ಪ ಇಬ್ಬರೂ ಲೀಡರ್ಸ್. ರಾಜ್ಯದ ಹಿತಾಸಕ್ತಿಗಾಗಿ ಭೇಟಿ ಮಾಡಿದರೆ ಬೇರೆ ತಿಳಿಯಬಾರದು ಎಂದು ಸಚಿವ ಮಾಧುಸ್ವಾಮಿ ಹೇಳಿದ್ದಾರೆ.

    ಹಾಸನ ಜಿಲ್ಲೆಯ ಹಳೇಬೀಡು ಕೆರೆಗೆ ಭೇಟಿ ನೀಡಿದ ಬಳಿಕ ಮಾತನಾಡಿದ ಅವರು, ಸಿಎಂ ಮತ್ತು ಮಾಜಿ ಸಿಎಂ ಭೇಟಿ ವಿಷಯ ಕೇಳಿದ್ದಕ್ಕೆ ಕೈಮುಗಿದರು. ಬಳಿಕ ಮಾತನಾಡಿ ಶಿರಾ ಮತ್ತು ಆರ್.ಆರ್ ನಗರ ಉಪ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಶಾಮೀಲಾಗಿದ್ದರು ಎಂಬ ಚರ್ಚೆ ವಿಚಾರಕ್ಕೆ ಪ್ರತಿಕ್ರಿಯಿಸಿ ಉಪ ಚುನಾವಣೆಯಲ್ಲಿ ಯಾವುದೇ ಶಾಮೀಲಾಗಿಲ್ಲ ಎಂದು ಸ್ಪಷ್ಟನೆ ನೀಡಿದರಲ್ಲದೇ ಇಬ್ಬರೂ ಚುನಾವಣೆ ಮಾಡಿದ್ದಾರೆ ಎಂದರು.

    ಶಾಸಕ ಮುನಿರತ್ನಗೆ ಸಚಿವ ಸ್ಥಾನ ನೀಡುವ ವಿಚಾರ ಸಂಬಂಧ, ಇದಕ್ಕೆ ಉತ್ತರ ನೀಡಲು ಯಡಿಯೂರಪ್ಪ ಒಬ್ಬರೇ ಸಮರ್ಥರು ನಾನೇನನ್ನೂ ಹೇಳೊಲ್ಲಾ ಎಂದು ಹೇಳಿದರು. ಸಚಿವ ಸಂಪುಟದಿಂದ ನಾಲ್ವರು ಸಚಿವರನ್ನು ಕೈಬಿಡುತ್ತಾರೆಂಬ ವಿಚಾರ ಇದುವರೆಗೂ ಸಿಎಂ ಯಾರ ಜತೆಯೂ ಚರ್ಚಿಸಿಲ್ಲ. ಮುನಿರತ್ನ ಅವರ ಚುನಾವಣೆಯಲ್ಲಿ ಮಂತ್ರಿ ಮಾಡುವುದಾಗಿ ಸಿಎಂ ಹೇಳಿದ್ದಾರೆ ಅದರ ಬಗ್ಗೆಯಷ್ಟೇ ನಾನು ಹೇಳಬಹುದು. ಆದರೆ ಬೇರೆ ವಿಷಯ ಇದುವರೆಗೂ ಮಾತನಾಡಿಲ್ಲ ಎಂದು ಸಚಿವ ಮಾಧುಸ್ವಾಮಿ ಹೇಳದರು.

    ಇದೇ ವೇಳೆ ಸಾರ್ ಕೆಲಸ ತುಂಬಾ ನಿಧಾನವಾಗಿ ನಡೀತಿದೆ. ಇವತ್ತೆಲ್ಲೋ ಕೆಲಸ ಮಾಡಲು ಜನ ಕಳುಹಿಸಿದ್ದಾರೆ. ನಮ್ಮ ಹೋರಾಟಕ್ಕೆ ನ್ಯಾಯ ಸಿಕ್ಕಿಲ್ಲ. ನಮಗೆ ಕೆರೆ ನೀರು ಉಳಿಸಿಕೊಳ್ಳಲು ಶಾಶ್ವತ ಪರಿಹಾರ ಒದಗಿಸಿ ಎಂದು ಮಾಧುಸ್ವಾಮಿ ಎದುರು ರೈತರು ಅಸಮಾಧಾನ ಹೊರಹಾಕಿದರು. ನಂತರದ ಮಾತನಾಡಿದ ಸಚಿವರು ಕೆರೆ ಏರಿ ಪರಿಶೀಲನೆಗೆ ಬಂದಿದ್ದೇನೆ. ತಂತ್ರಜ್ಞರ ಜೊತೆ ಮಾತುಕತೆ ನಡೆಸಿ ಶಾಶ್ವತ ಪರಿಹಾರಕ್ಕೆ ಯೋಜನೆ ರೂಪಿಸಲಾಗುವುದು ಎಂದು ಭರವಸೆ ನೀಡಿದರು.