Tag: visit

  • ಅನರ್ಹ ಶಾಸಕರ ಜೊತೆ ಸಿಎಂ ಬಿಎಸ್‍ವೈರನ್ನ ಭೇಟಿಯಾದ ಜಿಟಿಡಿ

    ಅನರ್ಹ ಶಾಸಕರ ಜೊತೆ ಸಿಎಂ ಬಿಎಸ್‍ವೈರನ್ನ ಭೇಟಿಯಾದ ಜಿಟಿಡಿ

    ಬೆಂಗಳೂರು: ಅಚ್ಚರಿಯ ಬೆಳವಣಿಗೆ ಎಂಬಂತೆ ಮಾಜಿ ಸಚಿವ ಜಿಟಿ ದೇವೇಗೌಡ ಅವರು ಇಂದು ಸಿಎಂ ಬಿಎಸ್ ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ.

    ಅನರ್ಹ ಶಾಸಕ ವಿಶ್ವನಾಥ್, ಎಸ್.ಟಿ.ಸೋಮಶೇಖರ್ ಅವರೊಂದಿಗೆ ಬಿಎಸ್‍ವೈ ಅವರ ಧವಳಗಿರಿ ನಿವಾಸಕ್ಕೆ ಆಗಮಿಸಿದ್ದ ಜಿ.ಟಿ.ದೇವೇಗೌಡ ಅವರು, ಸುಮಾರು ಅರ್ಧ ಗಂಟೆಗಳ ಕಾಲ ಮಾತುಕತೆ ನಡೆಸಿದರು. ಈ ಭೇಟಿ ಜೆಡಿಎಸ್‍ನ ಮತ್ತೊಂದು ವಿಕೆಟ್ ಪತನಕ್ಕೆ ಕಾರಣವಾಗುತ್ತಾ ಎಂಬ ಅನುಮಾನ ಮೂಡಿದೆ.

    ಬಿಎಸ್‍ವೈರನ್ನ ಭೇಟಿ ಮಾಡಿದ್ದ ಜಿಟಿ ದೇವೇಗೌಡರು ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ, ಮೈಸೂರು ಜಿಲ್ಲಾ ಹಾಲು ಒಕ್ಕೂಟದ ಚುನಾವಣೆ ಕಳೆದ ತಿಂಗಳ 9 ರಂದು ನಿಗದಿಯಾಗಿತ್ತು. ಆದರೆ ಚುನಾವಣೆಯಲ್ಲಿ ಗೊಂದಲ ಉಂಟಾಗಿದ್ದು, ಈ ಬಗ್ಗೆ ಸಿಎಂ ಅವರೊಂದಿಗೆ ಮಾತುಕತೆ ನಡೆಸಲು ಆಗಮಿಸಿದ್ದೆ. ಡೈರಿ ಚುನಾವಣೆ ನಡೆಯದ ಕಾರಣ ಹುದ್ದೆ ಖಾಲಿ ಇದ್ದು, ಪರಿಣಾಮ ರೈತರಿಗೆ ಬಿಡುಗಡೆಯಾಗಬೇಕಾದ ಹಣ ಲಭಿಸುತ್ತಿಲ್ಲ ಎಂದರು.

    ರೈತರ ಸಮಸ್ಯೆಯಿಂದ ನಾನೇ ಬಂದು ಈ ಬಗ್ಗೆ ಸಿಎಂ ಅವರಿಗೆ ಮನವರಿಕೆ ಮಾಡಿದ್ದೇನೆ. ಸಿಎಂ ಅವರು ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದಾರೆ ಎಂದರು. ಇದೇ ಸಂದರ್ಭದಲ್ಲಿ ಜೆಡಿಎಸ್ ಪಕ್ಷ ಬಿಡುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ನಾನು ಈ ಹಿಂದೆಯೇ ಹಲವು ಬಾರಿ ಸ್ಪಷ್ಟ ಪಡಿಸಿದ್ದು, ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು. ಬಳಿಕ ಮಾತನಾಡಿದ ಬಿಎಸ್‍ವೈ ಅವರು, ಈ ಭೇಟಿಯಲ್ಲಿ ಯಾವುದೇ ವಿಶೇಷ ಇಲ್ಲ. ಕ್ಷೇತ್ರದ ಸಮಸ್ಯೆ ಬಗ್ಗೆ ಮಾತನಾಡಲು ಅವರು ಬಂದಿದ್ದರು ಅಷ್ಟೇ ಎಂದರು.

    ಈ ಹಿಂದೆ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ್ದ ಜಿಟಿ ದೇವೇಗೌಡ ಅವರು, ಪರೋಕ್ಷವಾಗಿ ಜೆಡಿಎಸ್ ದಳಪತಿಗಳ ವಿರುದ್ಧ ಅಸಮಾದಾನ ಹೊರ ಹಾಕಿದ್ದರು. ಮೈತ್ರಿ ಸರ್ಕಾರದ ಆರಂಭದ ಒಂದು ತಿಂಗಳು ನಾನು ಸಚಿವ ಸ್ಥಾನ ಪಡೆಯಲಿಲ್ಲ. ಸಚಿವ ಸ್ಥಾನ ಸ್ವೀಕರಿಸಿದ ಬಳಿಕ ದಸರಾ, ಮಹಾನಗರ ಪಾಲಿಕೆ ಮತ್ತು ಲೋಕಸಭಾ ಚುನಾವಣೆ, ವಿಶ್ವವಿದ್ಯಾಲಯಗಳ ಘಟಿಕೋತ್ಸವ, ನಿರಂತರ ಸಭೆಗಳಲ್ಲಿ ಭಾಗಿಯಾಗಿದ್ದರಿಂದ ಸ್ವ-ಕ್ಷೇತ್ರಕ್ಕೆ ಹೋಗಲು ಸಾಧ್ಯವಾಗಲಿಲ್ಲ. ಈ ಹಿಂದೆ ಸಿಗುತ್ತಿದ್ದ ಜಿ.ಟಿ.ದೇವೇಗೌಡ ಸಿಗುತ್ತಿಲ್ಲ ಎಂದು ಕ್ಷೇತ್ರದ ಜನತೆ ನನ್ನ ಮೇಲೆ ಮುನಿಸಿಕೊಂಡಿದ್ದರು. ರಾಜಕೀಯದಲ್ಲಿ ಸಹ ವಿವಿಧ ಬೆಳವಣಿಗೆಗಳು ನಡೆದಿದ್ದರಿಂದ ಮೈತ್ರಿ ಸರ್ಕಾರ ಸಹ ಪತನಗೊಂಡಿತು. ಈ ಎಲ್ಲ ಕಾರಣಗಳಿಂದ ರಾಜಕಾರಣ ಸಾಕು ಎಂಬ ನಿರ್ಣಯಕ್ಕೆ ಬಂದಿದ್ದೇನೆ. ಬೇರೆಯವರಿಗಿಂತ ನಮ್ಮ ಪಕ್ಷದ ನಾಯಕರೇ ನನ್ನ ವಿರುದ್ಧ ಕೆಲಸ ಮಾಡಿದ್ದರಿಂದ ತುಂಬಾ ನೋವಾಯ್ತು. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಬೇಕೆಂದು ತಾಯಿ ಚಾಮುಂಡಿಯಲ್ಲಿ ನನ್ನ ಕುಟುಂಬವೇ ಪ್ರಾರ್ಥನೆ ಮಾಡಿದೆ. ಆದರೆ ಅವರ ಬಳಿ ನಾನು ಪ್ರೀತಿ ಮತ್ತು ವಿಶ್ವಾಸವನ್ನು ನೋಡಲೇ ಇಲ್ಲ. ಹಾಗಾಗಿ ನನ್ನನ್ನು ನಿರ್ಲಕ್ಷ್ಯ ಮಾಡಲಾಯ್ತು ಎಂದು ಪರೋಕ್ಷವಾಗಿ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಜಿಟಿಡಿ ಹಾಗೂ ಬಿಎಸ್‍ವೈ ಅವರ ಭೇಟಿಗೆ ಹೆಚ್ಚಿನ ಮಹತ್ವ ಲಭಿಸಿತ್ತು.

  • ರಾಮಲಿಂಗಾ ರೆಡ್ಡಿ ಮನೆಗೆ ಬಿಜೆಪಿ ನಾಯಕರು ಭೇಟಿ

    ರಾಮಲಿಂಗಾ ರೆಡ್ಡಿ ಮನೆಗೆ ಬಿಜೆಪಿ ನಾಯಕರು ಭೇಟಿ

    ಬೆಂಗಳೂರು: ರೆಬೆಲ್ ಶಾಸಕ ರಾಮಲಿಂಗಾ ರೆಡ್ಡಿ ಮನೆಗೆ ಬಿಜೆಪಿ ನಾಯಕರಾದ ಶಾಸಕ ಎಸ್.ಆರ್ ವಿಶ್ವನಾಥ್ ಮತ್ತು ಎಂ. ಕೃಷ್ಣಪ್ಪ ಭೇಟಿ ಕೊಟ್ಟಿದ್ದಾರೆ.

    ಎಸ್.ಆರ್ ವಿಶ್ವನಾಥ್ ಮತ್ತು ಎಂ. ಕೃಷ್ಣಪ್ಪ ಅವರು ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ರಾಮಲಿಂಗಾ ರೆಡ್ಡಿ ಜೊತೆ ಮಾತುಕತೆ ನಡೆಸಿದ್ದಾರೆ. ಚರ್ಚೆ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ವಿಶ್ವನಾಥ್, ಯಾವುದೇ ರಾಜಕೀಯ ಮಾತನಾಡಲು ಬಂದಿಲ್ಲ. ರೆಡ್ಡಿ ಸಂಘದ ಚುನಾವಣೆ ದಿನಾಂಕ 15ಕ್ಕೆ ನಾಮಿನೇಷನ್ ಲಾಸ್ಟ್ ಇದೆ. 27ಕ್ಕೆ ಚುನಾವಣೆ ಇದೆ. ಈ ಕಾರಣಕ್ಕೆ ಬಂದಿದ್ದೇವೆ ಅಷ್ಟೇ. ಅವರು ಒಂಥರಾ ಬಂಡೆ ಇದ್ದ ಹಾಗೆ, ಯಾರು ಏನೇ ಮಾಡಿದರೂ ಅವರ ನಿರ್ಧಾರ ಅವರದ್ದು ಎಂದು ಹೇಳಿದರು.

    ಸಿಎಂ ಅವರ ಬಳಿ ನಂಬರ್ ಇಲ್ಲ. ಯಾವ ನಂಬರ್ ಗೇಮ್ ಆಗಲ್ಲ. ಗೌರವದಿಂದ ನಿರ್ಗಮಿಸಬೇಕು ಅನ್ನೋದು ಸಿಎಂ ಮನಸ್ಸಿನಲ್ಲಿ ಇರಬೇಕು. ಅದಕ್ಕೆ ವಿಶ್ವಾಸಮತ ಯಾಚನೆ ನಿರ್ಧಾರ ಮಾಡಿದ್ದಾರೆ. ನಂಬರ್ ಗೇಮ್ ಆಡಲಿಕ್ಕೆ ಸಾಧ್ಯವಿಲ್ಲ. ವಿಶ್ವಾಸಮತ ಯಾಚನೆ ದಿನ ಅವರ ಬಳಿ ಇರುವ ಕೆಲ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರೇ ಗೈರಾಗುತ್ತಾರೆ ನೋಡಿ ಎಂದು ವಿಶ್ವನಾಥ್ ಪರೋಕ್ಷವಾಗಿ ಸಮ್ಮಿಶ್ರ ಸರ್ಕಾರ ಇರುವುದಿಲ್ಲ ಎಂದು ತಿಳಿಸಿದರು.

  • ಭಕ್ತರ ಮನೆಗೆ ಪೂಜೆಗೆಂದು ಬಂದು ಪಾದುಕೆ ಬಿಟ್ಟು ಹೋಗಿದ್ರು!

    ಭಕ್ತರ ಮನೆಗೆ ಪೂಜೆಗೆಂದು ಬಂದು ಪಾದುಕೆ ಬಿಟ್ಟು ಹೋಗಿದ್ರು!

    ಚಾಮರಾಜನಗರ: ನಡೆದಾಡುವ ದೇವರು ತ್ರಿವಿಧ ದಾಸೋಹಿ ಸಿದ್ದಗಂಗಾ ಶ್ರೀಗಳು ಹತ್ತು ವರ್ಷಗಳ ಹಿಂದೆ ಚಾಮರಾಜನಗರಕ್ಕೆ ಭೇಟಿ ನೀಡಿದ್ದರು.

    ಇಲ್ಲಿನ ನಿಜಗುಣ ರಾಜು ಮನೆಗೆ ಪೂಜೆಗೆಂದು ಬಂದಿದ್ದ ಶ್ರೀಗಳು ಪೂಜೆಯ ನಂತರ ತಮ್ಮ ಪಾದುಕೆಗಳನ್ನು ಬಿಟ್ಟು ಹೋಗಿದ್ದಾರೆ. ಅಂದಿನಿಂದಲೂ ಈ ಭಕ್ತರ ಮನೆಯಲ್ಲಿ ಶ್ರೀಗಳ ಪಾದುಕೆಗೂ ನಿತ್ಯ ಪೂಜೆ ನಡೆಯುತ್ತಿದೆ. ಅಂದು 101 ವರ್ಷಗಳಾಗಿದ್ದರೂ ದೂರದ ತುಮಕೂರಿನಿಂದ ಚಾಮರಾಜನಗರದವರೆಗೂ ಕಾರಿನಲ್ಲಿ ಬಂದಿದ್ದರು.

    ಬೆಳಗ್ಗೆಯಿಂದ ಸಂಜೆಯವರೆಗೂ ಇಲ್ಲಿಯೇ ಇದ್ದು ಭಕ್ತರಿಗೆ ದರ್ಶನ ಭಾಗ್ಯ ನೀಡಿದ್ದ ಡಾ. ಶಿವಕುಮಾರ ಸ್ವಾಮಿಗಳು ಎಲ್ಲರನ್ನು ಲವಲವಿಕೆಯಿಂದಲೇ ಮಾತನಾಡಿಸಿದ್ದರು. ಈ ಪಾದುಕೆಗಳನ್ನು ತಮ್ಮ ಮನೆಯಲ್ಲಿ ಬಿಟ್ಟು ಹೋದ ನಂತರ ತಮಗೆ ಎಲ್ಲಾ ರೀತಿಯ ಅನುಕೂಲಗಳು ಉಂಟಾಗಿವೆ. ಶ್ರೀಗಳ ಪಾದುಕೆಗಳೇ ತಮಗೆ ಶ್ರೀರಕ್ಷೆಯಾಗಿವೆ ಎನ್ನುವ ಅವರು ಪ್ರತಿನಿತ್ಯ ಈ ಪಾದುಕೆಗಳನ್ನು ಪೂಜಿಸಿದ ನಂತರವಷ್ಟೇ ತಮ್ಮ ಇತರ ಕೆಲಸಗಳನ್ನು ಆರಂಭಿಸುತ್ತೇವೆ ಎನ್ನುತ್ತಾರೆ.

    ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ(111) ಇಂದು ನಿಧನರಾಗಿದ್ದಾರೆ. ನಡೆದಾಡುವ ದೇವರೇ ಎಂದು ಕರೆಸಿಕೊಳ್ಳುತ್ತಿದ್ದ ಶ್ರೀಗಳು ಅಪಾರ ಭಕ್ತರನ್ನು ಅಗಲಿ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ. ಈಗಾಗಲೇ ನಾಡಿನಾದ್ಯಂತ ಮೌನ ಆವರಿಸಿದ್ದು, ಶ್ರೀಗಳ ಅಂತಿಮ ದರ್ಶನ ಪಡೆಯಲು ಭಕ್ತರು ಕಾಯುತ್ತಿದ್ದಾರೆ. ಸಿದ್ದಗಂಗಾ ಮಠದ ಸುತ್ತಲೂ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಸಾರ್ವಜನಿಕರು ಶಾಂತಿಯಿಂದ ಇರಬೇಕು ಎಂದು ಪೊಲೀಸರು ಮನವಿ ಮಾಡಿಕೊಂಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ನಿಖಿಲ್ ಕುಮಾರಸ್ವಾಮಿಗೆ ಶೀಘ್ರವೇ ಕಂಕಣ ಭಾಗ್ಯ?

    ನಿಖಿಲ್ ಕುಮಾರಸ್ವಾಮಿಗೆ ಶೀಘ್ರವೇ ಕಂಕಣ ಭಾಗ್ಯ?

    ಚಿಕ್ಕಮಗಳೂರು: ಮುಖ್ಯಮಂತ್ರಿ ಕುಮಾರಸ್ವಾಮಿ ತಮ್ಮ ಮಗ ನಿಖಿಲ್ ಕುಮಾರಸ್ವಾಮಿಯ ಮದುವೆ ಬಗ್ಗೆ ಶೃಂಗೇರಿ ಶ್ರೀಗಳೊಂದಿಗೆ ಚರ್ಚೆ ನಡೆಸುತ್ತೇನೆಂದು ಹೇಳಿದ್ದಾರೆ.

    ಜಿಲ್ಲೆಯ ಸುಪ್ರಸಿದ್ಧ ಪುಣ್ಯಕ್ಷೇತ್ರ ಶೃಂಗೇರಿ ಶಾರದಾಂಬ ದೇವಾಲಯಕ್ಕೆ ಆಗಮಿಸಿರುವ ಎಚ್‍ಡಿಕೆ ಮಾಧ್ಯಮಗಳೊಂದಿಗೆ ಮಾತನಾಡಿ, ಗುರುಗಳ ಅಶೀರ್ವಾದ, ಶಾರದಾಂಬೆ ದರ್ಶನ ಪಡೆಯಲು ಬಂದಿದ್ದೇನೆ. ಕ್ಷೇತ್ರಕ್ಕೆ ಬಂದು ದೇವಿಯ ದರ್ಶನ, ಗುರುಗಳ ಆಶೀರ್ವಾದದಿಂದ ಹಲವಾರು ರೀತಿಯ ಸಮಸ್ಯೆಗಳಿಂದ ಪರಿಹಾರ ಕಂಡುಕೊಂಡಿದ್ದೇನೆ. ಎಲ್ಲಾ ಒಳ್ಳೆಯ ಕಾರ್ಯಕ್ಕೂ ಗುರುಗಳ ಆಶೀರ್ವಾದ ಇರಬೇಕು. ಹೀಗಾಗಿ ಮಗ ನಿಖಿಲ್ ಕುಮಾರಸ್ವಾಮಿಯ ಮದುವೆ ವಿಷಯವನ್ನೂ ಸಹ ಶ್ರೀಗಳ ಬಳಿ ಚರ್ಚೆ ನಡೆಸುತ್ತೇನೆ. ಇಂದಿನ ಭೇಟಿಯಲ್ಲಿ ಮದುವೆ ವಿಚಾರಕ್ಕೆ ಗುರುಗಳ ಆಶೀರ್ವಾದ ಪಡೆಯುವ ಉದ್ದೇಶವನ್ನು ಹೊಂದಿದ್ದೇನೆಂದು ಹೇಳಿದ್ದಾರೆ.

    ಈ ವೇಳೆ ಸುದ್ದಿಗಾರರು ಬಿಎಸ್‍ವೈ ಕೇರಳ ಭೇಟಿ ಹಿನ್ನೆಲೆ ಶೃಂಗೇರಿಗೆ ಭೇಟಿ ನೀಡಿದ್ದೀರಾ ಎಂದು ಪ್ರಶ್ನಿಸಿದಾಗ, ನಾವು ಕದ್ದು ಮುಚ್ಚಿ ವಾಮಾಚಾರ, ಯಾಗ ಮಾಡಿಸುವ ಪ್ರಶ್ನೆಯೇ ಇಲ್ಲ. ಆ ಉದ್ದೇಶದಿಂದ ಯಾಗ ನಡೆಸುತ್ತಿಲ್ಲ. ನಾವು ದೇವರನ್ನು ನಂಬಿದ್ದೇವೆ. ದೇವರ ಬಳಿ ಪ್ರಾರ್ಥನೆ ಮಾಡುತ್ತೇವೆ. ಈ ಬಾರಿಯ ಚಳಿಗಾಲದ ಅಧಿವೇಶನ ಸುಸೂತ್ರವಾಗಿ ನಡೆಯಬೇಕು. ಹೀಗಾಗಿ ತಾಯಿಯ ಆಶೀರ್ವಾದ ಪಡೆಯಲು ಬಂದಿದ್ದೇನೆ. ವಿಶೇಷ ಪೂಜೆ ಏನು ಇಲ್ಲ. ಶೃಂಗೇರಿ ಕ್ಷೇತ್ರಕ್ಕೂ ನಮ್ಮ ಕುಟುಂಬಕ್ಕೂ, ಹಿಂದಿನಿಂದಲೂ ಸಂಬಂಧ ಹಾಗೂ ನಂಬಿಕೆ ಇದೆ. ಕ್ಷೇತ್ರಕ್ಕೆ ಬಂದರೆ ಸಮಸ್ಯೆ ಬಗೆಹರಿಯುತ್ತದೆನ್ನುವ ನಂಬಿಕೆ ಇದೆ ಎಂದು ಹೇಳಿದರು.

    ಕಂಪ್ಲಿ ಶಾಸಕರ ಹೇಳಿಕೆಗೆ ಪ್ರತಿಕ್ರಿಯಿಸಿ, ಯಾರು ಏನಾದರೂ ಹೇಳಿಕೆ ನೀಡಲು ಸ್ವಾತಂತ್ರ್ಯವಿದೆ. ಅದಕ್ಕೆ ಸುಮ್ಮನೆ ಯಾಕೆ ತಲೆ ಕೆಡಿಸಿಕೊಂಡಿದ್ದೀರೆಂದು ತಿಳಿಸಿದರು.

    ಶೃಂಗೇರಿಗೆ ಆಗಮಿಸುತ್ತಿದ್ದಂತೆ ಸಿಎಂ ನೇರವಾಗಿ ಶಾರದಾಂಬೆಯ ದರ್ಶನ ಪಡೆದುಕೊಂಡರು. ಬಳಿಕ ಶ್ರೀ ಮಠಕ್ಕೆ ತೆರಳಿ ಜಗದ್ಗುರು ಭಾರತೀತೀರ್ಥ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದುಕೊಂಡಿದ್ದಾರೆ. ಸಿಎಂ ಶುಕ್ರವಾರ ದೇವಾಲಯದಲ್ಲಿ ನಡೆಯುವ ಪ್ರತಿಶೂಲಿನಿ ಯಾಗದ ಪೂರ್ಣಾಹುತಿಯಲ್ಲಿ ಭಾಗಿಯಾಗಲಿದ್ದಾರೆ. ಅಲ್ಲದೇ ಚಳಿಗಾಲದ ಅಧಿವೇಶನ, ಆಪರೇಷನ್ ಕಮಲದ ಭೀತಿ ಹಾಗೂ ಸಚಿವ ಸಂಪುಟದ ಕಸರತ್ತು ಹಿನ್ನೆಲೆಯಲ್ಲಿ ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

    ಸಿಎಂ ಕುಮಾರಸ್ವಾಮಿಯವರಿಗೆ ಪತ್ನಿ ಅನಿತಾ ಕುಮಾರಸ್ವಾಮಿ, ಸಚಿವ ರೇವಣ್ಣ, ಹಾಗೂ ಜೆಡಿಎಸ್ ವರಿಷ್ಠ ದೇವೇಗೌಡರೂ ಸಾಥ್ ನೀಡಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

     

  • ಮೋದಿ ಭೇಟಿ ಮಾಡಿ ಕುತೂಹಲ ಮೂಡಿಸಿದ ಜಡೇಜಾ ದಂಪತಿ

    ಮೋದಿ ಭೇಟಿ ಮಾಡಿ ಕುತೂಹಲ ಮೂಡಿಸಿದ ಜಡೇಜಾ ದಂಪತಿ

    ನವದೆಹಲಿ: ಟೀಂ ಇಂಡಿಯಾ ಆಲ್‍ರೌಂಡರ್ ರವೀಂದ್ರ ಜಡೇಜಾ ಪತ್ನಿ ಸಮೇತ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ.

    ಆಸೀಸ್ ಟೂರ್ನಿಯ ಪ್ರವಾಸದ ಸಿದ್ಧತೆಯಲ್ಲಿರುವ ಜಡೇಜಾ ಮಂಗಳವಾರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. ಪ್ರಧಾನಿ ಮೋದಿ ಅವರು ಕೂಡ ಟ್ವೀಟ್ ಮಾಡಿ ಜಡೇಜಾ ಹಾಗೂ ರಿವಾಬಾ ಸೋಲಂಕಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಲಾಯಿತು ಎಂದು ತಿಳಿಸಿದ್ದಾರೆ.

    ಮೋದಿ ಅವರ ಭೇಟಿಯ ಫೋಟೋವನ್ನು ರವೀಂದ್ರ ಜಡೇಜಾ ಕೂಡ ಟ್ವೀಟ್ ಮಾಡಿದ್ದು, ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ್ದು ಹೆಮ್ಮೆಯ ವಿಚಾರವಾಗಿದೆ ಎಂದು ತಿಳಿಸಿದ್ದಾರೆ. ಈ ವೇಳೆ ಪುಷ್ಪಗುಚ್ಛ ನೀಡಿ ಶುಭಾಶಯ ತಿಳಿಸಿದ್ದಾರೆ.

    ಏಷ್ಯಾಕಪ್ ಟೂರ್ನಿಯಲ್ಲಿ ತಂಡಕ್ಕೆ ಕಮ್‍ಬ್ಯಾಕ್ ಮಾಡಿದ್ದ ರವೀಂದ್ರ ಜಡೇಜಾ ಉತ್ತಮ ಪ್ರದರ್ಶನ ನೀಡಿದ್ದರು. ಆದರೆ ಆಸೀಸ್ ವಿರುದ್ಧದ ಸಿಮೀತ ಓವರ್‍ಗಳ ಪಂದ್ಯಗಳ ಟೂರ್ನಿಗೆ ಆಯ್ಕೆಯಾಗಲು ವಿಫಲರಾಗಿದ್ದರು. ಸದ್ಯ ಟೆಸ್ಟ್ ತಂಡದಲ್ಲಿ ಮಾತ್ರ ಸ್ಥಾನ ಪಡೆದಿರುವ ರವೀಂದ್ರ ಜಡೇಜಾ ಸದ್ಯದಲ್ಲೇ ತಂಡವನ್ನು ಸೇರಿಕೊಳ್ಳಲಿದ್ದಾರೆ. ಇತ್ತ ಲೋಕಸಭಾ ಚುನಾವಣೆ ವೇಳೆಯೇ ಜಡೇಜಾ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ್ದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಕುಮಾರಸ್ವಾಮಿ ಕಂಡ್ರೆ ಭಯವಂತೆ- ಅವಕಾಶವಿದ್ರೂ ದೇಗುಲಕ್ಕೆ ಹೋಗಲ್ಲ ಮಹಿಳೆಯರು

    ಕುಮಾರಸ್ವಾಮಿ ಕಂಡ್ರೆ ಭಯವಂತೆ- ಅವಕಾಶವಿದ್ರೂ ದೇಗುಲಕ್ಕೆ ಹೋಗಲ್ಲ ಮಹಿಳೆಯರು

    ಬಳ್ಳಾರಿ: ಶಬರಿಮಲೆ ಅಯ್ಯಪ್ಪಸ್ವಾಮಿಯ ದರ್ಶನ ಮಾಡುವ ವಿಚಾರ ಇದೀಗ ದೇಶದೆಲ್ಲೆಡೆ ಚರ್ಚೆಗೆ ಕಾರಣವಾಗಿದ್ದರೆ, ಅಯ್ಯಪ್ಪಸ್ವಾಮಿಯಷ್ಟೇ ಪವರ್ ಪುಲ್ ಆಗಿರುವ ಕುಮಾರಸ್ವಾಮಿ ದರ್ಶನಕ್ಕೆ ಮಹಿಳೆಯರಿಗೆ ಅವಕಾಶವಿದ್ದರೂ ದರ್ಶನ ಮಾಡಲು ಭಯಪಡುತ್ತಿದ್ದಾರೆ.

    ಬಳ್ಳಾರಿಯ ಸಂಡೂರು ಪಟ್ಟಣದಿಂದ 12 ಕಿ.ಮೀ ದೂರದಲ್ಲಿರುವ ಕುಮಾರಸ್ವಾಮಿ ದೇವಾಲಯ ಇದಾಗಿದ್ದು, ಈ ದೇವಾಲಯವನ್ನು ಕಾರ್ತಿಕೇಯ ಸ್ವಾಮಿ, ಸುಬ್ರಮಣ್ಯಸ್ವಾಮಿ, ಷಣ್ಮುಖಸ್ವಾಮಿ, ನವಿಲು ಸ್ವಾಮಿ ದೇವಸ್ಥಾನ ಎಂದು ಕರೆಯುತ್ತಾರೆ. ಇಲ್ಲಿ ತಾರಕಾಸುರ ವಧೆ ಮಾಡಲು ಕುಮಾರಸ್ವಾಮಿ ಬಂದು ನೆಲೆಸಿದ ಬೀಡು ಎಂಬ ಪ್ರತೀತಿ ಇದೆ. ಚಾಲುಕ್ಯರು 8ನೇ ಶತಮಾನದಲ್ಲಿ ಈ ದೇವಸ್ಥಾನ ನಿರ್ಮಿಸಿದ್ದಾರೆ. ದೇವಾಲಯದಲ್ಲಿ ಕುಮಾರಸ್ವಾಮಿಯ ದರ್ಶನಕ್ಕೆ ಮಹಿಳೆಯರಿಗೂ ಮುಕ್ತ ಅವಕಾಶವಿದ್ದು, ಆದರೆ ಮಹಿಳೆಯರು ದರ್ಶನ ಮಾಡಲು ಭಯಪಡುತ್ತಾರೆ.

    ಮಹಿಳೆಯರು ದೇವರ ದರ್ಶನಕ್ಕೆ ಹಿಂದೇಟು ಹಾಕಲು ಒಂದು ಐತಿಹಾಸಿಕ ಕಾರಣವೂ ಇದೆ. ಹಿಂದೆ ಕುಮಾರಸ್ವಾಮಿ ತಾಯಿ ಪಾರ್ವತಿ ಮಗನಿಗೆ ವಿವಾಹ ಮಾಡಲು ಕನ್ಯಾಕುಮಾರಿಯಲ್ಲಿ ವಧು ನೋಡಿ ಬಂದಿರುತ್ತಾರೆ. ಆಗ ಕಾರ್ತಿಕೇಯ ಹುಡುಗಿ ಯಾರ ಥರಾ ಇದ್ದಾಳೆಂದು ಕೇಳಿದಾಗ ನನ್ನ ಹಾಗೆ ಇದ್ದಾಳೆ ಅಂತಾ ತಾಯಿ ಪಾರ್ವತಿ ಹೇಳ್ತಾರೆ. ಆಗ ಕುಮಾರಸ್ವಾಮಿ ನಾನು ಅವಳನ್ನ ಮದುವೆಯಾಗಲ್ಲ. ನಿನ್ನ ಸ್ವರೂಪದಂತೆ ಇದ್ದರೆ ಅವಳು ನನಗೆ ಮಾತೃ ಸಮಾನಳು, ನಾನು ಬ್ರಹ್ಮಚಾರಿಯಾಗಿಯೇ ಉಳಿಯುತ್ತೇನೆ ಎಂದು ಹೇಳಿದ್ದರಂತೆ. ಹೀಗಾಗಿ ಮಹಿಳೆಯರು ಕುಮಾರಸ್ವಾಮಿ ದರ್ಶನಕ್ಕೆ ಹಿಂಜರಿಯುತ್ತಾರೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

    ಇತ್ತ ಶಬರಿಮಲೆ ದರ್ಶನಕ್ಕೆ ಸುಪ್ರೀಂ ಕೋರ್ಟ್ ಮಹಿಳೆಯರಿಗೆ ಅವಕಾಶ ಕೊಟ್ಟಿದ್ದು, ನೂರಾರು ಮಹಿಳೆಯರು ಅಯ್ಯಪ್ಪಸ್ವಾಮಿಯ ದರ್ಶನ ಮಾಡಲು ಮುಂದಾಗುತ್ತಿದ್ದಾರೆ. ಆದರೆ ಇದಕ್ಕೆ ಅಷ್ಟೇ ವಿರೋಧ ವ್ಯಕ್ತವಾಗುತ್ತಿದೆ. ಆದರೆ ಬಳ್ಳಾರಿಯ ಕುಮಾರಸ್ವಾಮಿ ದೇವರ ದರ್ಶನಕ್ಕೆ ಮಹಿಳೆಯರು ಮುಕ್ತ ಅವಕಾಶವಿದ್ದರು ಜನರ ನಂಬಿಕೆ ಇಂದ ದೇವರ ದರ್ಶನಕ್ಕೆ ಮಹಿಳೆಯರು ಭಯಪಡುತ್ತಿರುವುದು ಅಚ್ಚರಿಯ ಸಂಗತಿಯಾಗಿದೆ.

    https://www.youtube.com/watch?v=_if1rv2FprI

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಇಂದು ಎಚ್‍ಡಿಡಿ ಭೇಟಿಗಾಗಿ ರಾಜ್ಯಕ್ಕೆ ಸಿಎಂ ಚಂದ್ರಬಾಬು ನಾಯ್ಡು ಆಗಮನ

    ಇಂದು ಎಚ್‍ಡಿಡಿ ಭೇಟಿಗಾಗಿ ರಾಜ್ಯಕ್ಕೆ ಸಿಎಂ ಚಂದ್ರಬಾಬು ನಾಯ್ಡು ಆಗಮನ

    ಬೆಂಗಳೂರು: ಕಾಂಗ್ರೆಸ್ ಜೊತೆ ಮೈತ್ರಿಗೆ ಮುಂದಾಗಿರುವ ಆಂಧ್ರಪ್ರದೇಶದ ಟಿಡಿಪಿ ನಾಯಕ ಚಂದ್ರಬಾಬು ನಾಯ್ಡು ಇಂದು ಬೆಂಗಳೂರಿಗೆ ಆಗಮಿಸಲಿದ್ದು, ಮಾಜಿ ಪ್ರಧಾನಿ ಎಚ್‍ಡಿ ದೇವೇಗೌಡ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ.

    ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಮಾಜಿ ಪ್ರಧಾನಿ ದೇವೇಗೌಡರೊಂದಿಗೆ ಮಾತುಕತೆ ನಡೆಸಲು ಚಂದ್ರಬಾಬು ನಾಯ್ಡು ಆಗಮಿಸುತ್ತಿದ್ದು, ಇಬ್ಬರ ನಾಯಕರ ಭೇಟಿ ತೀವ್ರ ಕುತೂಹಲ ಮೂಡಿಸಿದೆ. ಈಗಾಗಲೇ ಕಾಂಗ್ರೆಸ್ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಂಡಿರುವ ಜೆಡಿಎಎಸ್ ವರಿಷ್ಠರಿಂದ ಸಲಹೆ ಪಡೆಯಲು ಚಂದ್ರಬಾಬು ನಾಯ್ಡು ಆಗಮಿಸುತ್ತಿದ್ದಾರೆ ಎನ್ನಲಾಗಿದೆ.

    ಇದೇ ವೇಳೆ ಜನಾರ್ದನ ರೆಡ್ದಿಗಾಗಿ ಸಿಸಿಬಿ ಪೊಲಿಸರು ಶೋಧ ನಡೆಸುತ್ತಿರುವುದರಿಂದ ಕರ್ನಾಟಕ ಸಿಎಂ ಕುಮಾರಸ್ವಾಮಿ ಜೊತೆ ಮಾತುಕತೆ ನಡೆಸುವ ಸಾಧ್ಯತೆ ಇದೆ. ಉಳಿದಂತೆ ಕರ್ನಾಟಕ ಪಂಚಕ್ಷೇತ್ರಗಳ ಉಪಚುನಾವಣೆಯ ಬಳಿಕ ಮೈತ್ರಿ ಪಕ್ಷಗಳ ಅಭ್ಯರ್ಥಿಗಳು ಮೇಲುಗೈ ಸಾಧಿಸಿದ ವೇಳೆಯೂ ಚಂದ್ರಬಾಬು ನಾಯ್ಡು ಮಾಜಿ ಪ್ರಧಾನಿ ದೇವೇಗೌಡ ಶುಭಾಶಾಯ ತಿಳಿಸಿದ್ದರು.  ಇದನ್ನು ಓದಿ: ದೇಶ ಉಳಿಸಲು ಕಾಂಗ್ರೆಸ್ ಜೊತೆ ಕೈ ಜೋಡಿಸಿದ್ದೇವೆ: ಚಂದ್ರಬಾಬು ನಾಯ್ಡು

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಟಾಲಿವುಡ್ ದಿಗ್ಗಜರನ್ನು ಭೇಟಿ ಮಾಡಿದ ಕಿಚ್ಚ!

    ಟಾಲಿವುಡ್ ದಿಗ್ಗಜರನ್ನು ಭೇಟಿ ಮಾಡಿದ ಕಿಚ್ಚ!

    ಬೆಂಗಳೂರು: ಅಭಿನಯ ಚರ್ಕವರ್ತಿ ಸುದೀಪ್ ಅವರು ಟಾಲಿವುಡ್ ದಿಗ್ಗಜರಾದ ಪುರಿ ಜಗನ್ನಾಥ್ ಸುಕುಮಾರ್, ನಟಿ ಚಾರ್ಮಿ, ಮತ್ತು ನಟ ಶ್ರೀಕಾಂತ್ ಅವರನ್ನು ಭೇಟಿ ಮಾಡಿದ್ದಾರೆ.

    ಕಿಚ್ಚ ಸುದೀಪ್ ಹೈದರಾಬಾದ್‍ನಲ್ಲಿ ಪೈಲ್ವಾನ್ ಸಿನಿಮಾದ ಚಿತ್ರೀಕರಣದಲ್ಲಿ ತೊಡಗಿದ್ದಾರೆ. ಬಹುಭಾಷಾ ನಟರಾಗಿರುವ ಸುದೀಪ್ ಎಲ್ಲ ಚಿತ್ರರಂಗದಲ್ಲಿ ಸ್ನೇಹಿತರನ್ನು ಹೊಂದಿದ್ದಾರೆ. ಹೀಗಾಗಿ ಶೂಟಿಂಗ್‍ನ ಬಿಡುವಿನ ಸಮಯದಲ್ಲಿ ಹೈದರಾಬಾದ್‍ನಲ್ಲಿ ಇದ್ದ ಸ್ನೇಹಿತರನ್ನು ಭೇಟಿ ಮಾಡಿ ಅವರೊಂದಿಗೆ ಸುಂದರ ಕ್ಷಣಗಳನ್ನು ಕಳೆದಿದ್ದಾರೆ.

    ಅಷ್ಟೇ ಅಲ್ಲದೇ ಚಿತ್ರೀಕರಣ ನಡೆಯುತ್ತಿರುವ ಕಾರಣ ಹೈದರಾಬಾದ್‍ನಲ್ಲಿ ಇದುದ್ದರಿಂದ ಚಿತ್ರತಂಡದವರೆಲ್ಲ ಸೇರಿ ಸೆಟ್‍ನಲ್ಲೇ ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವವನ್ನು ಆಚರಿಸಿದ್ದರು. ಸುದೀಪ್ ಅವರು ಬರೀಗಾಲಿನಿಂದ ಬಂದು ಬಾವುಟ ಹಾರಿಸಿ ಕನ್ನಡಾಂಬೆಗೆ ನಮನವನ್ನು ಸಲ್ಲಿಸಿದ್ದರು.

    ಸದ್ಯಕ್ಕೆ ಸುದೀಪ್ ಅವರು ಪೈಲ್ವಾನ್, ಕೋಟಿಗೊಬ್ಬ 3 ಸಿನಿಮಾಗಳಲ್ಲಿ ಬ್ಯೂಸಿಯಾಗಿದ್ದು, ಕನ್ನಡದಲ್ಲಿ ಪ್ರಸಾರವಾಗುವ ಬಿಗ್ ಬಾಸ್ ಸೀಜನ್ 6 ನಲ್ಲಿಯೂ ಕೆಲಸ ಮಾಡುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಹಾಸನಾಂಬೆ ದೇವಿಯ ದರ್ಶನ ಪಡೆದ ಸಿಎಂ

    ಹಾಸನಾಂಬೆ ದೇವಿಯ ದರ್ಶನ ಪಡೆದ ಸಿಎಂ

    ಹಾಸನ: ವರ್ಷಕ್ಕೊಮ್ಮೆ ಬಾಗಿಲು ತೆಗೆಯುವ ಹಾಸನದ ಹಾಸನಾಂಬೆ ದೇವಿಯ ದರ್ಶನ ಇಂದಿನಿಂದ ಆರಂಭವಾಗಿದ್ದು, ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ದೇವಾಲಯಕ್ಕೆ ಭೇಟಿ ನೀಡಿ ಹಾಸನಾಂಬೆ ದೇವಿಯ ದರ್ಶನ ಪಡೆದಿದ್ದಾರೆ.

    ಆಶ್ವೀಜ ಮಾಸದ ಮೊದಲ ಗುರುವಾರ ಅಂದರೆ ಇಂದು ಮಧ್ಯಾಹ್ನ 12.30 ರ ನಂತರ ದೇವಾಲಯದ ಗರ್ಭಗುಡಿ ಬಾಗಿಲು ತೆರೆದಿತ್ತು. ಹೀಗಾಗಿ ಸಾರ್ವಜನಿಕ ದರ್ಶನ ಆರಂಭದ ಹಿನ್ನೆಲೆಯಲ್ಲಿ ತಡರಾತ್ರಿಯಿಂದಲೇ ದೇವಿಯ ದರ್ಶನ ಪಡೆಯಲು ಭಕ್ತರು ಸಾಲುಗಟ್ಟಿ ನಿಂತಿದ್ದರು. ಈ ವೇಳೆ ಸಿಎಂ ಕುಮಾರಸ್ವಾಮಿ ಅವರು ಕೂಡ ತಾಯಿ ದರ್ಶನ ಪಡೆದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿ ನಾನೂ ಕೂಡ ಇವತ್ತು ದೇವರ ದರ್ಶನಕ್ಕೆ ಬಂದಿದ್ದೇನೆ. ದೇವಾಲಯಕ್ಕೆ ಭಕ್ತರ ಸಂಖ್ಯೆಯ ಹೆಚ್ಚಳಕ್ಕೆ ಮಾಧ್ಯಮದ ಪಾತ್ರ ಮುಖ್ಯವಾಗಿದೆ ಎಂದರು.

    ಹಾಸನಾಂಬೆ ಅಪನಂಬಿಕೆ ಬಗ್ಗೆ ಪ್ರತಿಕ್ರಿಯಿಸಿ ಪವಾಡಗಳಲ್ಲಿ ನಂಬಿಕೆ ನಿನ್ನೆಮೊನ್ನೆಯಿಂದ ಆರಂಭವಾದದ್ದಲ್ಲ. ಹಲವಾರು ತಲೆಮಾರುಗಳಿಂದ ಈ ನಂಬಿಕೆ ಇದೆ. ನನ್ನ ಸಾರ್ವಜನಿಕ ಬದುಕಿಗೆ ಈ ದೇವರುಗಳ ನಂಬಿಕೆಯೇ ಕಾರಣ. ಹಾಸನಾಂಬೆ ತಾಯಿಯ ಬಗ್ಗೆ ಸಂಶಯ ಮಾಡುವುದರಿಂದ ನಿಮಗೆ ಏನು ಸಿಗುತ್ತದೆ. ನಂಬಿಕೆಗಳಿಗೆ ಅಪಚಾರ ತರುವುದು ಸೂಕ್ತ ಅಲ್ಲ ಎನ್ನುವುದು ನನ್ನ ವೈಯಕ್ತಿಕ ಅಭಿಪ್ರಾಯ. ಹಲವಾರು ಮಂದಿ ಭಕ್ತರ ನಂಬಿಕೆಗೆ ಧಕ್ಕೆ ತರುವುದು ತರವಲ್ಲ. ಪ್ರಕೃತಿ ವಿಕೋಪಗಳೆಲ್ಲ ಆಗುವುದು ಸಹ ಯಾವುದೋ ಒಂದು ಶಕ್ತಿಯಿಂದ ಹಾಸನಾಂಬೆ ದರ್ಶನಕ್ಕೆ ಕುರಿತು ಯಾವುದೇ ಗೊಂದಲ ಇಲ್ಲ. ಭಕ್ತರು ಪ್ರತಿವರ್ಷದಂತೆ ದರ್ಶನ ಪಡೆಯುತ್ತಿದ್ದಾರೆ ಎಂದು ಹೇಳಿದರು.

    ನಮ್ಮ ಜೀವನದ ಏರುಪೇರುಗಳನ್ನು ಸರಿಮಾಡಿಕೊಳ್ಳುವುದಕ್ಕೆ ಇದರ ಉಪಯೋಗ ಪಡೆದುಕೊಳ್ಳಬೇಕು. ಕಾಣದ ಶಕ್ತಿ ಎನ್ನುವುದು ನಮ್ಮ ನಂಬಿಕೆ ಆಗಿದೆ. ರಾಜ್ಯದ ಎಲ್ಲ ಕುಟುಂಬಗಳಿಗೆ ಸುಭೀಕ್ಷೆ ಮತ್ತು ನೆಮ್ಮದಿ ಜೀವನ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸಿದ್ದೇನೆ. ರಾಜ್ಯದ ಸಮಸ್ಯೆಗಳನ್ನು ಪರಿಹರಿಸುವ ಶಕ್ತಿ ನನಗೆ ನೀಡಲಿ ಎಂದು ದೇವರ ಬಳಿ ಪ್ರಾರ್ಥನೆ ಮಾಡಿದ್ದೇನೆ ಎಂದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ದಕ್ಷಿಣ ಭಾರತಕ್ಕಿಂತಲೂ ಪಾಕಿಸ್ತಾನ ಪ್ರವಾಸ ಉತ್ತಮವಾಗಿತ್ತು: ನವಜೋತ್ ಸಿಂಗ್

    ದಕ್ಷಿಣ ಭಾರತಕ್ಕಿಂತಲೂ ಪಾಕಿಸ್ತಾನ ಪ್ರವಾಸ ಉತ್ತಮವಾಗಿತ್ತು: ನವಜೋತ್ ಸಿಂಗ್

    ನವದೆಹಲಿ: ಪಾಕಿಸ್ತಾನದ ನೂತನ ಪ್ರಧಾನಿ ಪದವಿ ಸ್ವೀಕಾರ ಸಮಾರಂಭದಲ್ಲಿ ಪಾಕ್ ರಕ್ಷಣಾ ಮುಖ್ಯಸ್ಥರನ್ನು ತಬ್ಬಿಕೊಂಡಿದ್ದನ್ನು ಸಮರ್ಥಿಸಿಕೊಂಡಿದ್ದ ಟೀಂ ಇಂಡಿಯಾ ಮಾಜಿ ಆಟಗಾರ, ಕಾಂಗ್ರೆಸ್ ಪಕ್ಷದ ಮುಖಂಡ ನವಜೋತ್ ಸಿಂಗ್ ಸಿಧು, ದಕ್ಷಿಣ ಭಾರತದ ಭೇಟಿಗಿಂತ ಪಾಕಿಸ್ತಾನದ ಭೇಟಿ ನನಗೆ ಉತ್ತಮವಾಗಿತ್ತು ಎಂದು ವಿವಾದತ್ಮಕ ಹೇಳಿಕೆ ನೀಡಿದ್ದಾರೆ.

    ಮಾಧ್ಯಮವೊಂದರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಿಧು ಆಪ್ ಮುಖಂಡರೊಬ್ಬರ ಪ್ರಶ್ನೆಗೆ ಉತ್ತರಿಸಿ ಈ ಹೇಳಿಕೆ ನೀಡಿದ್ದಾರೆ. ನಾನು ದಕ್ಷಿಣ ಭಾರತಕ್ಕೆ ಪ್ರವಾಸ ಕೈಗೊಂಡ ವೇಳೆ ಅಲ್ಲಿನ ಭಾಷೆಯನ್ನು ಅರ್ಥೈಸಿಕೊಳ್ಳುವುದು ಕಷ್ಟವಾಗಿತ್ತು. ಅಲ್ಲದೇ ಆಹಾರ, ಸಾಂಪ್ರದಾಯ, ಸಂಸ್ಕೃತಿ ಎಲ್ಲವೂ ಕೂಡ ಭಿನ್ನವಾಗಿತ್ತು. ಆದರೆ ನಾನು ಪಾಕಿಸ್ತಾನಕ್ಕೆ ಭೇಟಿ ನೀಡಿದ ವೇಳೆ ಎಲ್ಲವೂ ಒಂದೇ ಆಗಿತ್ತು. ಇಂಗ್ಲಿಷ್ ಭಾಷೆಯಲ್ಲಿ 10 ಬಾರಿ ನಿಮ್ಮನ್ನು ಬೈಯುವುದಕ್ಕಿಂತ ಒಮ್ಮೆ ಪಂಜಾಬಿ ಭಾಷೆಯಲ್ಲಿ ಬೈದರೆ ಎಲ್ಲವೂ ಸರಿಯಾಗುತ್ತದೆ ಎಂದು ಹೇಳಿದ್ದಾರೆ.

    ತನ್ನದೇ ದೇಶದ ಸಂಸ್ಕೃತಿ ಹಾಗೂ ಭಾಷೆಯಗೆ ಗೌರವ ನೀಡದೇ ಪಾಕ್ ಭೇಟಿ ಅತ್ಯುತ್ತಮ ಎಂದು ಹೇಳಿರುವ ಸಿಧು ನಡೆಯ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಕುರಿತು ಪ್ರತಿಕ್ರಿಯೆ ನೀಡುವ ಪಂಜಾಬ್ ಅಕಾಲಿ ದಳದ ಹಿರಿಯ ಮುಖಂಡರೊಬ್ಬರು, ಭಾರತವನ್ನು ತುಳಿಯಲೆಂದೇ ಪಾಕಿಸ್ತಾನವನ್ನು ಹೊಗಳುತ್ತಾರೆ ಎಂದು ಟೀಕಿಸಿದ್ದಾರೆ.

    ಇತ್ತ ಬಿಜೆಪಿ ಪಕ್ಷದ ಮುಖಂಡರು ಕೂಡ ಸಿಧು ಪಾಕಿಸ್ತಾನದ ಮೇಲಿನ ಪ್ರೀತಿಯನ್ನು ಟೀಕಿಸಿದ್ದು, ಇಂತಹ ಹೇಳಿಕೆಗಳು ಸಹಿಸಿಕೊಳ್ಳುವಂತದಲ್ಲ ಎಂದು ಕಿಡಿಕಾರಿದ್ದಾರೆ. ದಕ್ಷಿಣ ಭಾರತವನ್ನು ಪಾಕಿಸ್ತಾನಕ್ಕೆ ಹೊಲಿಕೆ ಮಾಡಿರುವುದು ಖಂಡನಾರ್ಹವಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ನಳಿನ್ ಕೊಹ್ಲಿ ತಿಳಿಸಿದ್ದಾರೆ.

    ಈ ಹಿಂದೆ ಪಾಕ್‍ಗೆ ಭೇಟಿ ನೀಡಿದ್ದ ಸಿಧು ನಡೆಯನ್ನು ಸಮರ್ಥಿಸಿಕೊಂಡಿದ್ದ ಇಮ್ರಾನ್ ಖಾನ್, ಸಿಧು ಒಬ್ಬ ಶಾಂತಿಯ ರಾಯಭಾರಿ ಎಂದು ಹಾಡಿಹೊಗಳಿದ್ದರು. ಭಾರತದಲ್ಲಿ ಸಿಧು ವಿರುದ್ಧ ಆರೋಪ ಮಾಡುತ್ತಿರುವುದು ಶಾಂತಿ ಮಂತ್ರಕ್ಕೆ ತೋರುತ್ತಿರುವ ಅಗೌರವ. ಶಾಂತಿ ಇಲ್ಲದೇ ನಮ್ಮ ಜನರ ಅಭಿವೃದ್ಧಿ ಆಗುವುದಿಲ್ಲ ಎಂದು ಹೇಳಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv