Tag: visits

  • ಆಪರೇಷನ್ ಕಮಲ ಮಾಡ್ತಾನೂ ಇಲ್ಲ, ಅದರ ಅಗತ್ಯನೂ ನಮಗಿಲ್ಲ: ಬಿಎಸ್‍ವೈ

    ಆಪರೇಷನ್ ಕಮಲ ಮಾಡ್ತಾನೂ ಇಲ್ಲ, ಅದರ ಅಗತ್ಯನೂ ನಮಗಿಲ್ಲ: ಬಿಎಸ್‍ವೈ

    ಬೆಂಗಳೂರು: ನಾವು ಯಾವುದೇ ಆಪರೇಷನ್ ಕಮಲ ಮಾಡುತ್ತಿಲ್ಲ ಹಾಗೂ ಅದರ ಅವಶ್ಯಕತೆಯೂ ನಮಗಿಲ್ಲ ಎಂದು ಸಚಿವ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಟಾಂಗ್ ನೀಡಿದ್ದಾರೆ.

    ನಗರದ ಡಾಲರ್ ಕಾಲೋನಿಯಲ್ಲಿ ಮಾತನಾಡಿದ ಅವರು, ಸಚಿವ ಡಿ.ಕೆ.ಶಿವಕುಮಾರ್ ಆರೋಪಿಸಿದ್ದ ಆಪರೇಷನ್ ಕಮಲದ ಕುರಿತು ಪ್ರತಿಕ್ರಿಯಿಸಿ ನಾವು ಯಾವುದೇ ಆಪರೇಷನ್ ಕಮಲ ಮಾಡುತ್ತಿಲ್ಲ, ಅದರ ಅವಶ್ಯಕತೆಯೂ ನಮಗಿಲ್ಲ, ಡಿಕೆಶಿ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಕಿಡಿಕಾರಿದರು.

    ಮಂಗಳವಾರ ತುರ್ತು ಸಭೆಯ ಹಿನ್ನೆಲೆಯಲ್ಲಿ ದೆಹಲಿಗೆ ಪ್ರಯಾಣ ಬೆಳಸಿದ್ದೆ, ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಭೇಟಿಗೆ ಮಂಗಳವಾರ ಸಮಯ ಕೊಟ್ಟಿದ್ದರು. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾರವರನ್ನು ಭೇಟಿಯಾಗಿ, ಪ್ರಸಕ್ತ ರಾಜ್ಯ ರಾಜಕಾರಣ ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದೇನೆ. ನಾವು ವಿರೋಧ ಪಕ್ಷದ ಸ್ಥಾನದಲ್ಲಿಯೇ ಕುಳಿತು ಆಡಳಿತ ಪಕ್ಷದ ವಿರುದ್ಧ ನಮ್ಮ ಹೋರಾಟವನ್ನು ಮುಂದುವರೆಸುತ್ತೇವೆ ಎಂದು ತಿಳಿಸಿದರು.

    ನಮ್ಮ ರಾಜ್ಯಕ್ಕೆ ಆಗಬೇಕಿರುವ ಕೆಲಸಗಳ ಬಗ್ಗೆ ಕೇಂದ್ರ ಸಚಿವರ ಬಳಿ ಮಾತಾಡಿದ್ದೇನೆ. ಮುಂದೆ ಇಡಬೇಕಾದ ಹೆಜ್ಜೆಗಳ ಬಗ್ಗೆ ಚರ್ಚೆ ಮಾಡಿದ್ದೇವೆ. ಈ ಹಿನ್ನೆಲೆಯಲ್ಲಿ ಗುರವಾರದಿಂದ ಬೀದರ್ ಜಿಲ್ಲೆಯಿಂದ ಪ್ರವಾಸ ಆರಂಭಿಸುತ್ತಿದ್ದೇನೆ. ಅಲ್ಲದೇ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ನಾವು ಹೆಚ್ಚು ಸ್ಥಾನಗಳನ್ನು ಗೆಲ್ಲಬೇಕಿದೆ. ಕೆಲವು ಜಿಲ್ಲೆಗಳಲ್ಲಿ ಬರದ ಪರಿಸ್ಥಿತಿ ಇದೆ. ಪ್ರವಾಸದ ವೇಳೆ ಇದೆಲ್ಲವನ್ನೂ ಅವಲೋಕಿಸುತ್ತೇವೆ ಎಂದರು.

    ಈ ವೇಳೆ ಕರುಣಾನಿಧಿಯವರಿಗೆ ಸಂತಾಪ ಸೂಚಿಸಿ, ಕರುಣಾನಿಧಿಯವರು ಮುಖ್ಯಮಂತ್ರಿ ಆಗಿದ್ದಾಗ ನನ್ನ ವಿಶೇಷ ಪ್ರಯತ್ನದಿಂದ ತಮಿಳುನಾಡಿನಲ್ಲಿ ಸರ್ವಜ್ಞ ಪ್ರತಿಮೆ ಸ್ಥಾಪನೆ ಆಯಿತು. ಇದಕ್ಕೆ ಅವರು ವಿಶೇಷ ಸಹಕಾರವನ್ನು ಸಹ ನೀಡಿದ್ದರು. ತಿರುವಳ್ಳುವರ್ ಪ್ರತಿಮೆಯನ್ನು ವಿಧಾನಸೌಧಕ್ಕೆ ಕಳುಹಿಸಿಕೊಟ್ಟಿದ್ದರು. ಇಲ್ಲಿ ತಿರುವಳ್ಳುವರ್ ಪ್ರತಿಮೆ ಸ್ಥಾಪನೆ ಮಾಡಲಾಯಿತು. ಆದರೆ ಕೆಲವು ಕಾರಣಗಳಿಂದಾಗಿ ಕಳೆದ ಒಂಬತ್ತು ವರ್ಷದಿಂದ ಈ ಯೋಜನೆ ಹಾಗೆ ನೆನೆಗುದಿಗೆ ಬಿದ್ದಿದೆ ಎಂದರು.

    ಕರುಣಾನಿಧಿಯವರು ನನ್ನೊಂದಿಗೆ ಮಾತನಾಡಿದ ರೀತಿ ಯಾವುದನ್ನೂ ಮರೆಯುವಂತಿಲ್ಲ, 5 ಬಾರಿ ಮುಖ್ಯಮಂತ್ರಿ ಆಗಿದ್ದವರು ಕರುಣಾನಿಧಿಯವರು ಈಗ ದೈವಾಧೀನರಾಗಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಸಂತಾಪ ಸೂಚಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

  • ಕರ್ನಾಟಕ ರಾಜಕೀಯ ಅಖಾಡಕ್ಕೆ ಧುಮುಕ್ತಾರಾ ನಟ ಪವನ್ ಕಲ್ಯಾಣ್?

    ಕರ್ನಾಟಕ ರಾಜಕೀಯ ಅಖಾಡಕ್ಕೆ ಧುಮುಕ್ತಾರಾ ನಟ ಪವನ್ ಕಲ್ಯಾಣ್?

    ಚಿಕ್ಕಬಳ್ಳಾಪುರ: ಜಿಲ್ಲೆಯ ವಿಧಾನಸಭಾ ಕ್ಷೇತ್ರದ ರಾಜಕೀಯ ವಲಯದಲ್ಲಿ ಇಂದು ಹೊಸ ಸಂಚಲನ ಮೂಡಲಿದೆ. ಇದಕ್ಕೆ ಕಾರಣ ತೆಲುಗು ನಟ ಹಾಗೂ ಜನಸೇನಾ ಪಕ್ಷದ ಅಧ್ಯಕ್ಷ ಪವರ್ ಸ್ಟಾರ್ ಪವನ್ ಕಲ್ಯಾಣ್ ಜಿಲ್ಲೆಗೆ ಆಗಮಿಸಿತ್ತಿರುವುದು.

    ಪ್ರಸ್ತುತ ಆಂಧ್ರ ಪ್ರದೇಶದ ಹಿಂದೂಪುರಂ ನಲ್ಲಿ ಜನಸೇನಾ ಪಕ್ಷದ ಕಾರ್ಯಕರ್ತರ ಸಮಾವೇಶದಲ್ಲಿ ಭಾಗಿಯಾಗಿರುವ ನಟ ಪವನ್ ಕಲ್ಯಾಣ್ ಸಂಜೆ 5 ಗಂಟೆಗೆ ಚಿಕ್ಕಬಳ್ಳಾಪುರಕ್ಕೆ ಆಗಮಿಸಲಿದ್ದಾರೆ. ನಗರದ ಹೊರವಲಯದ ಕೆ ವಿ ಶಿಕ್ಷಣ ಸಂಸ್ಥೆಗಳ ಕ್ಯಾಂಪಸ್ ನಲ್ಲಿ ಸಮಾರಂಭ ನಡೆಯಲಿದ್ದು, ಸಿದ್ಧತೆಗಳು ಪೂರ್ಣಗೊಂಡಿದೆ.

    ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಕೆ ವಿ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥ ಕೆ ವಿ ನವೀನ್ ಕಿರಣ್ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ತೀರ್ಮಾನಿಸಿದ್ದಾರೆ. ನವೀನ್ ಕಿರಣ್ ಜೊತೆ ಪವನ್ ಕಲ್ಯಾಣ್ ಮಾತುಕತೆ ನಡೆಸಲಿದ್ದಾರೆ. ಹೀಗಾಗಿ ಚಿಕ್ಕಬಳ್ಳಾಪುರ ವಿಧಾನಸಭಾಕ್ಷೇತ್ರದ ರಾಜಕೀಯ ವಲಯದಲ್ಲಿ ನಟ ಪವನ್ ಕಲ್ಯಾಣ್ ಭೇಟಿ ಸಂಚಲನ ಮೂಡಿಸಿದೆ. ಹಿಂದೂಪುರಂ ನಲ್ಲಿ ಸಮಾವೇಶ ಮುಗಿದ ಬಳಿಕ ಚಿಕ್ಕಬಳ್ಳಾಪುರಕ್ಕೆ ಆಗಮಿಸಲಿರುವ ಪವನ್ ಕಲ್ಯಾಣ್ ಆಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

    ಈಗಾಗಲೇ ಪವನ್ ಕಲ್ಯಾಣ್ ಗೆ ಸ್ವಾಗತ ಕೋರಲು ಅಭಿಮಾನಿಗಳು ಸನ್ನದ್ಧರಾಗಿದ್ದಾರೆ. ಕೆವಿ ಕ್ಯಾಂಪಸ್ ನ ಆವರಣದಲ್ಲಿ ಬೃಹತ್ ವೇದಿಕೆ ಸಿದ್ಧವಾಗಿದೆ. ಆದರೆ ಈ ಸಮಾರಂಭದ ಕುರಿತು ಮಾತನಾಡಿದ ನವೀನ್ ಕುಮಾರ್ ಕೇವಲ ಅಭಿಮಾನದ ಭೇಟಿ ಅಷ್ಟೇ, ರಾಜಕೀಯದ ಭೇಟಿ ಅಲ್ಲ ಎಂದು ತಿಳಿಸಿದ್ದಾರೆ.

    ಈ ಹಿಂದೆ ಜೆಡಿಎಸ್ ಪಕ್ಷದ ಪರ ವಿಧಾನಸಭಾ ಚುನಾವಣೆಯಲ್ಲಿ ಪ್ರಚಾರ ನಡೆಸುತ್ತಾರೆ ಎಂದು ಜೆಡಿಎಸ್ ಮೂಲಗಳಿಂದ ತಿಳಿದು ಬಂದಿತ್ತು. ಈ ಕುರಿತು ಮಾಹಿ ಸಿಎಂ ಕುಮಾರಸ್ವಾಮಿ ಹಾಗೂ ಪವನ್ ಅವರ ನಡುವೆ ಮೂರು ಸುತ್ತಿನ ಮಾತುಕತೆ ಸಹ ನಡೆದಿದೆ ಎನ್ನಲಾಗಿತ್ತು. ಕರ್ನಾಟಕ ಹಾಗೂ ಆಂಧ್ರ ಗಡಿ ಭಾಗದ ಜಿಲ್ಲೆಗಳಾದ ರಾಯಚೂರು, ಕೋಲಾರ, ತುಮಕೂರು, ಬಳ್ಳಾರಿ, ಬೀದರ್, ಚಿಕ್ಕಬಳ್ಳಾಪು ಜಿಲ್ಲೆಗಳಲ್ಲಿ ಪ್ರಚಾರ ನಡೆಸುವ ಮಾಹಿತಿ ಲಭಿಸಿತ್ತು.

    ಪವನ್ ಕಲ್ಯಾಣ್ ಸಿನಿಮಾ ಜೊತೆಗೆ ರಾಜಕೀಯದಲ್ಲಿ ಗುರುತಿಸಿಕೊಂಡಿದ್ದು, 2014 ಮಾರ್ಚ್ ನಲ್ಲಿ ತಮ್ಮದೇ `ಜನ ಸೇನಾ’ ಎಂಬ ಪ್ರಾದೇಶಿಕ ಪಕ್ಷವನ್ನು ಸ್ಥಾಪಿಸಿದ್ದಾರೆ. ಪಕ್ಷದ ಮೂರನೇ ವರ್ಷದ ವಾರ್ಷಿಕೋತ್ಸವದಲ್ಲಿ `ಜನಸೇನಾ’ 2019ರ ವಿಧಾನಸಭಾ ಚುನವಾಣೆಯಲ್ಲಿ ಆಂಧ್ರ ಮತ್ತು ತೆಲಂಗಾಣ ಎರಡೂ ರಾಜ್ಯಗಳಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಲಿದೆ. ಸಹೋದರ ಚಿರಂಜೀವಿ `ಜನಸೇನಾ’ ಪಕ್ಷಕ್ಕೆ ಸೇರ್ಪಡೆಯಾಗಲ್ಲ. ರಾಜಕೀಯವಾಗಿ ನನ್ನ ಆಲೋಚನೆಗಳು ಅವರೊಂದಿಗೆ ಹೊಂದಾಣಿಕೆ ಆಗುವುದಿಲ್ಲ. 2019ರ ಚುನಾವಣೆಯಲ್ಲಿ ನಮ್ಮ ಪಕ್ಷದಿಂದ ಶೇ.60ರಷ್ಟು ಕ್ಷೇತ್ರಗಳಲ್ಲಿ ಯುವಕರು ಸ್ಪರ್ಧಿಸಲಿದ್ದು, ನಾನು ಅನಂತಪುರ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲಿದ್ದೇನೆ ಎಂದು ತಿಳಿಸಿದ್ದರು.