Tag: Visvesvaraya Iron and Steel Plant

  • VISL ಮುಚ್ಚದಂತೆ ಸಂಸದ ಬಿ.ವೈ ರಾಘವೇಂದ್ರ ನೇತೃತ್ವದ ನಿಯೋಗದಿಂದ ಮನವಿ

    VISL ಮುಚ್ಚದಂತೆ ಸಂಸದ ಬಿ.ವೈ ರಾಘವೇಂದ್ರ ನೇತೃತ್ವದ ನಿಯೋಗದಿಂದ ಮನವಿ

    ನವದೆಹಲಿ: ಭದ್ರಾವತಿಯ (Bhadravati) ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯನ್ನು (Visvesvaraya Iron and Steel Plant) ಮುಚ್ಚುವ ಕ್ರಮವನ್ನು ಸ್ಥಗಿತಗೊಳಿಸುವಂತೆ ಸಂಸದ ಬಿ.ವೈ ರಾಘವೇಂದ್ರ (BY Raghavendra) ನೇತೃತ್ವದ ನಿಯೋಗ ಭಾರತೀಯ ಉಕ್ಕು ಪ್ರಾಧಿಕಾರದ ನೂತನ ಅಧ್ಯಕ್ಷ ಅಮರೆಂದು ಪ್ರಕಾಶ್ ಅವರಿಗೆ ಮನವಿ ಸಲ್ಲಿಸಿದೆ.

    ಉಕ್ಕುಸ್ಥಾವರವನ್ನು ಪುನಶ್ಚೇತನಗೊಳಿಸಲು ಅಗತ್ಯ ಬಂಡವಾಳ ಹೂಡುವಂತೆ ಕ್ರಮ ಕೈಗೊಳ್ಳಬೇಕು. ಈ ಮೂಲಕ ವಿಐಎಸ್‍ಎಲ್ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯನ್ನು ಮುಚ್ಚುವ ನಿರ್ಧಾರವನ್ನು ಕೈ ಬಿಡಬೇಕು. ಸ್ಥಗಿತಗೊಂಡಿರುವ ಎಲ್ಲಾ ಉತ್ಪಾದನಾ ಘಟಕಗಳನ್ನು ಪುನರಾರಂಭಿಸಬೇಕು ಎಂದು ಮನವಿ ಮಾಡಿದ್ದಾರೆ. ಇದನ್ನೂ ಓದಿ: ವರ್ಕ್ ಫ್ರಂ ಹೋಮ್ ಸಾಕು, ಆಫೀಸಿಗೆ ಬನ್ನಿ ಎಂದಿದ್ದಕ್ಕೆ ಮಹಿಳಾ ಟೆಕ್ಕಿಗಳು ಸಾಮೂಹಿಕ ರಾಜೀನಾಮೆ!

    ಕಳೆದ ಫೆಬ್ರವರಿಯಲ್ಲಿ ಭದ್ರಾವತಿಯ ಕಾರ್ಖಾನೆಯನ್ನು ಮುಚ್ಚುವುದಾಗಿ ಕೇಂದ್ರ ಸರ್ಕಾರ ಅಧಿಕೃತವಾಗಿ ಹೇಳಿತ್ತು. ರಾಜ್ಯಸಭೆಯಲ್ಲಿ ಕೇಳಿದ ಪ್ರಶ್ನೆಯೊಂದಕ್ಕೆ ಸರ್ಕಾರದಿಂದ ಈ ಪ್ರತಿಕ್ರಿಯೆ ಬಂದಿತ್ತು. ಇದಾದ ಬಳಿಕ ಕೇಂದ್ರದ ವ್ಯಾಪಕ ವಿರೋಧ ವ್ಯಕ್ತವಾಗಿತ್ತು.

    ಮನವಿ ಸಲ್ಲಿಸುವ ವೇಳೆ ಬಿಜೆಪಿ ಮುಖಂಡ ಮಂಗೋಟೆ ರುದ್ರೇಶ್, ವಿಐಎಸ್‍ಎಲ್ ಕಾರ್ಮಿಕರ ಸಂಘದ ಅಧ್ಯಕ್ಷ ಜಗದೀಶ್, ಗುತ್ತಿಗೆ ಕಾರ್ಮಿಕ ಸಂಘದ ಅಧ್ಯಕ್ಷ ಸುರೇಶ್ ಮತ್ತಿತರರು ಹಾಜರಿದ್ದರು. ಇದನ್ನೂ ಓದಿ: ಭದ್ರಾವತಿ VISL ಮುಚ್ಚುತ್ತೇವೆ: ಕೇಂದ್ರದಿಂದ ಅಧಿಕೃತ ಉತ್ತರ

  • ವಿಐಎಸ್‍ಎಲ್ ಕಾರ್ಖಾನೆ ಪುನಶ್ಚೇತನಗೊಳಿಸಿ- ಕೇಂದ್ರ ಸಚಿವರಿಗೆ ಬಿಎಸ್‍ವೈ ಮನವಿ

    ವಿಐಎಸ್‍ಎಲ್ ಕಾರ್ಖಾನೆ ಪುನಶ್ಚೇತನಗೊಳಿಸಿ- ಕೇಂದ್ರ ಸಚಿವರಿಗೆ ಬಿಎಸ್‍ವೈ ಮನವಿ

    ನವದೆಹಲಿ: ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಭದ್ರಾವತಿ ಜನರೊಂದಿಗೆ ಭಾವನಾತ್ಮಕ ಸಂಬಂಧ ಹೊಂದಿದ್ದಾರೆ. ಹೀಗಾಗಿ ಬಂಡವಾಳ ಹಿಂತೆಗೆಯುವುದನ್ನು ಕೈ ಬಿಟ್ಟು ಕಾರ್ಖಾನೆ ಪುನಶ್ಚೇತನಕ್ಕೆ ಆದ್ಯತೆ ನೀಡಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ ಅವರಿಗೆ ಮನವಿ ಮಾಡಿದ್ದಾರೆ.

    ನವದೆಹಲಿಯಲ್ಲಿ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವ ಧರ್ಮೇಂದ್ರ ಪ್ರಧಾನ ಅವರನ್ನು ಸಿಎಂ ಯಡಿಯೂರಪ್ಪ ಭೇಟಿಯಾದರು. ಈ ವೇಳೆ ವಿಐಎಸ್‍ಎಲ್ ಬಂಡಾವಳ ಹಿಂತೆಗೆತ ಪ್ರಕ್ರಿಯೆಯನ್ನು ನಿಲ್ಲಿಸುವಂತೆ ಮನವಿ ಮಾಡಿಕೊಂಡರು.

    ವಿಐಎಸ್‍ಎಲ್ ಬಗ್ಗೆ ಶಿವಮೊಗ್ಗ ಮತ್ತು ಭದ್ರಾವತಿ ಭಾಗದ ಜನತೆಗೆ ಭಾವನಾತ್ಮಕ ಸಂಬಂಧವಿದೆ. ನೀತಿ ಆಯೋಗದ ಸಲಹೆಯಂತೆ ಬಂಡಾವಳ ಹಿಂತೆಗೆತಕ್ಕೆ ಚಾಲನೆ ನೀಡಲಾಗಿದೆ. ಆದರೆ ಈವರೆಗೂ ಯಾವುದೇ ಖಾಸಗಿ ಕಂಪನಿ ಬಂಡವಾಳ ಹೂಡಿಕೆಗೆ ಒಲವು ತೋರಿಲ್ಲ. ವಿಐಎಸ್‍ಎಲ್ ಉತ್ಪಾದಿಸುವ ಉಕ್ಕು ಉತ್ಕೃಷ್ಟ ಗುಣಮಟ್ಟದ ಕಬ್ಬಿಣವಾಗಿದ್ದು ದೇಶದಲ್ಲಿಯೇ ಹೆಸುರುವಾಸಿಯಾಗಿದೆ. ಹೀಗಾಗಿ ಬಂಡವಾಳ ಹಿಂತೆಗೆತವನ್ನು ಕೈಬಿಟ್ಟು ಕಾರ್ಖಾನೆ ಪುನಶ್ಚೇತನಕ್ಕೆ ಆದ್ಯತೆ ನೀಡಬೇಕು ಎಂದು ಸಿಎಂ ಕೇಳಿಕೊಂಡರು.

    ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ ಅವರ ಭೇಟಿಯ ವೇಳೆ ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಉಪಸ್ಥಿತರಿದ್ದರು.