Tag: Vitla

  • ವಿಟ್ಲ ಪಂಚಲಿಂಗೇಶ್ವರ ಜಾತ್ರೆಯಲ್ಲಿ ದೇವರ ಪ್ರಭಾವಳಿಗೆ ಬಡಿದ ಡ್ರೋಣ್‌

    ವಿಟ್ಲ ಪಂಚಲಿಂಗೇಶ್ವರ ಜಾತ್ರೆಯಲ್ಲಿ ದೇವರ ಪ್ರಭಾವಳಿಗೆ ಬಡಿದ ಡ್ರೋಣ್‌

    ಮಂಗಳೂರು: ವಿಟ್ಲದ (Vitla) ಶ್ರೀಪಂಚಲಿಂಗೇಶ್ವರ ದೇವಸ್ಥಾನದ (Shri Panchalingeshwara Temple) ರಥೋತ್ಸವದ ವೇಳೆ ಡ್ರೋಣ್ (Drone) ನಿಯಂತ್ರಣ ತಪ್ಪಿ ದೇವರ ಪ್ರಭಾವಳಿಗೆ ಬಡಿದಿದೆ.

    ರಥದಲ್ಲಿ ಏರುವ ಹೊತ್ತಿಗೆ ದೇವರ ಉತ್ಸವ ಮೂರ್ತಿಗೆ ಡ್ರೋಣ್ ಬಡಿದಿದೆ.‌ ಬಳಿಕ ರಥದ ಮೇಲಿದ್ದ ಸಹಾಯಕ ಅರ್ಚಕರ ತಲೆಗೆ ಬಡಿದು ಬಿದ್ದಿದೆ. ಒಮ್ಮೆಗೆ ಈ ಘಟನೆಯಿಂದ ದೇವರ ಮೂರ್ತಿ ಹೊತ್ತ ಅರ್ಚಕರು ತಬ್ಬಿಬ್ಬಾಗಿದ್ದಾರೆ. ಅವರು ಕೊಂಚ ನಿಯಂತ್ರಣ ತಪ್ಪಿದ್ದರೂ ದೇವರ ಉತ್ಸವ ಮೂರ್ತಿ ಸಹಿತ ಅವರೂ ಕೆಳಕ್ಕೆ ಬೀಳುತ್ತಿದ್ದರು. ಅದೃಷ್ಟವಶಾತ್ ಯಾವುದೇ ಅವಘಡ ಸಂಭವಿಸಿಲ್ಲ.

    ತಕ್ಷಣ ಸಹ ಅರ್ಚಕರು ಡ್ರೋಣ್‌ನ್ನು ಒದ್ದು ಎಸೆದಿದ್ದಾರೆ. ಡ್ರೋಣ್ ಅಪರೇಟರ್ ಹುಚ್ಚಾಟಕ್ಕೆ ಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

  • ಮಂಗಳೂರಲ್ಲಿ ಪಾದ್ರಿಯಿಂದ ವೃದ್ಧ ದಂಪತಿ ಮೇಲೆ ಹಲ್ಲೆ – ವಿಡಿಯೋ ವೈರಲ್

    ಮಂಗಳೂರಲ್ಲಿ ಪಾದ್ರಿಯಿಂದ ವೃದ್ಧ ದಂಪತಿ ಮೇಲೆ ಹಲ್ಲೆ – ವಿಡಿಯೋ ವೈರಲ್

    ಮಂಗಳೂರು: ಚರ್ಚ್‍ನ (Church) ಪಾದ್ರಿಯೊಬ್ಬ ವೃದ್ಧ ದಂಪತಿ ಮೇಲೆ ಹಲ್ಲೆ ನಡೆಸಿದ ಘಟನೆ ವಿಟ್ಲ (Vitla) ಪೊಲೀಸ್ (Police) ಠಾಣಾ ವ್ಯಾಪ್ತಿಯ ಅಡ್ಯನಡ್ಕದ ಮನೇಲಾ ಎಂಬಲ್ಲಿ ನಡೆದಿದೆ.

    ಪೆರಿಯಲ್ತಡ್ಕನ ಚರ್ಚ್ ಒಂದರ ಪಾದ್ರಿ ನೆಲ್ಸನ್ ಒಲಿವೇರಾ ಹಲ್ಲೆ ನಡೆಸಿದ ವ್ಯಕ್ತಿಯಾಗಿದ್ದಾನೆ. ಜೋರ್ಜ್ ಮಾಂತೇರಿಯೋ (79) ಮತ್ತು ಅವರ ಪತ್ನಿ ಫಿಲೋಮಿನಾ (72) ಹಲ್ಲೆಗೊಳಗಾದ ವೃದ್ಧ ದಂಪತಿ ಎಂದು ತಿಳಿದು ಬಂದಿದೆ. ಘಟನೆ ಫೆ.29 ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಇದನ್ನೂ ಓದಿ: RCB – MI ಹೈವೋಲ್ಟೇಜ್‌ ಕದನ; ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬಾಂಬ್ ಸ್ಕ್ವಾಡ್ ತೀವ್ರ ತಪಾಸಣೆ

    ವೃದ್ಧರನ್ನು ಪಾದ್ರಿ ಕಾಲಿನಿಂದ ಒದೆಯುತ್ತಿರುವುದು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪಾದ್ರಿಯ ಕೃತ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ಇದನ್ನೂ ಓದಿ: ರಾಮೇಶ್ವರಂ ಕೆಫೆಯಲ್ಲಿನ ಬಾಂಬ್ ಬ್ಲಾಸ್ಟ್ ಹಿಂದಿದ್ಯಾ ಐಸಿಸ್ ಕೈವಾಡ?

  • ಮೂವರಿಂದ ಅಪ್ರಾಪ್ತೆಯ ಮೇಲೆ ನಿರಂತರ ಅತ್ಯಾಚಾರ – ಆರೋಪಿಗಳು ಅರೆಸ್ಟ್

    ಮಂಗಳೂರು: ಅಪ್ರಾಪ್ತ ಬಾಲಕಿಯ ಮೇಲೆ ಮೂವರು ಯುವಕರು ನಿರಂತರವಾಗಿ ಅತ್ಯಾಚಾರ ಎಸಗಿರುವ ಪ್ರಕರಣ ವಿಟ್ಲದಲ್ಲಿ (Vitla) ಬೆಳಕಿಗೆ ಬಂದಿದೆ.

    ಪ್ರಕರಣದ ಮೂವರು ಆರೋಪಿಗಳನ್ನು ಪೊಲೀಸರು (Police) ಬಂಧಿಸಿದ್ದಾರೆ. ಬಂಧಿತರನ್ನು ಅಕ್ಷಯ್ ದೇವಾಡಿಗ (24), ಕಮಲಾಕ್ಷ ಬೆಳ್ಚಾಡ (30), ಸುಕುಮಾರ ಬೆಳ್ಚಾಡ (28) ಎಂದು ಗುರುತಿಸಲಾಗಿದೆ. ಈ ಮೂವರು ಆರೋಪಿಗಳು ಅಪ್ರಾಪ್ತ ಬಾಲಕಿಯ ಮೇಲೆ ಪ್ರತ್ಯೇಕವಾಗಿ ಅತ್ಯಚಾರ ನಡೆಸಿದ್ದಾರೆ. ಅಲ್ಲದೇ 2019 ರಿಂದ ನಿರಂತರವಾಗಿ ವಿವಿಧ ಕಡೆ ಅತ್ಯಾಚಾರ ಎಸಗಿದ್ದರು ಎಂಬ ಆರೋಪ ಬಂದಿದೆ.

    ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪೋಕ್ಸೋ (POCSO) ಹಾಗೂ ದಲಿತ ದೌರ್ಜನ್ಯ ತಡೆ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: 21 ಲಕ್ಷ ಮೌಲ್ಯದ ಟೊಮೆಟೋ ತುಂಬಿದ್ದ ಲಾರಿ ನಾಪತ್ತೆ ಕೇಸ್‌ – ಹಣದೊಂದಿಗೆ ಚಾಲಕ, ಕ್ಲೀನರ್ ಪರಾರಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮನೆಯ ಮೇಲೆ ಬಿದ್ದ ಕೋಳಿ ತುಂಬಿದ್ದ ಪಿಕಪ್- ಮಹಿಳೆಗೆ ಗಾಯ

    ಮನೆಯ ಮೇಲೆ ಬಿದ್ದ ಕೋಳಿ ತುಂಬಿದ್ದ ಪಿಕಪ್- ಮಹಿಳೆಗೆ ಗಾಯ

    ಮಂಗಳೂರು: ಕೋಳಿ ಸಾಗಾಟದ ಪಿಕಪ್ (Pickup) ವಾಹನವೊಂದು ರಸ್ತೆಯಿಂದ ಕೆಳಗೆ ಎಸೆಯಲ್ಪಟ್ಟು ಮನೆ ಮೇಲೆ ಬಿದ್ದು ಮಹಿಳೆಯೋರ್ವರು ಗಂಭೀರ ಗಾಯಗೊಂಡ ಘಟನೆ ನಡೆದಿದೆ.

    ಬಂಟ್ವಾಳ (Bantwal) ತಾಲೂಕಿನ ಸಾರಡ್ಕ ಬಳಿಯ ಕೂರೇಲು ಎಂಬಲ್ಲಿ ರಸ್ತೆಯಲ್ಲಿ ಹೋಗುತ್ತಿದ್ದ ಕೋಳಿ (Chicken) ಸಾಗಾಟದ ಪಿಕಪ್ ನಿಯಂತ್ರಣ ತಪ್ಪಿ ಕೆಳಗೆ ಉರುಳಿ ಮನೆ ಮೇಲೆ ಬಿದ್ದಿದೆ. ಮನೆ ಸಂಪೂರ್ಣ ಹಾನಿಯಾಗಿದ್ದು ಮನೆಯೊಳಗಿದ್ದ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಸದ್ಯ ಮಹಿಳೆ ಮಂಗಳೂರಿನ ಸರ್ಕಾರಿ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

    ಪಿಕಪ್ ನ್ನು ಕ್ರೇನ್ ಮೂಲಕ ಮೇಲಕ್ಕೆತ್ತಲಾಗಿದ್ದು, ಪಿಕಪ್‍ನಲ್ಲಿದ್ದ ಸುಮಾರು 500 ಕ್ಕೂ ಅಧಿಕ ಕೋಳಿಗಳು ಸಾವನ್ನಪ್ಪಿದೆ. ಘಟನೆಯ ಬಗ್ಗೆ ವಿಟ್ಲ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಣ್ಣಿಗೆ ಮೆಣಸಿನ ಪುಡಿ ಎರಚಿ ಮಾರಕಾಸ್ತ್ರಗಳಿಂದ ಕೊಚ್ಚಿ ಕಾಂಗ್ರೆಸ್ ಮುಖಂಡನ ಕಗ್ಗೊಲೆ

    ಕಣ್ಣಿಗೆ ಮೆಣಸಿನ ಪುಡಿ ಎರಚಿ ಮಾರಕಾಸ್ತ್ರಗಳಿಂದ ಕೊಚ್ಚಿ ಕಾಂಗ್ರೆಸ್ ಮುಖಂಡನ ಕಗ್ಗೊಲೆ

    ಮಂಗಳೂರು: ಗ್ರಾಮ ಪಂಚಾಯತ್ ಉಪಾಧ್ಯಕ್ಷರೊಬ್ಬರನ್ನು ಪಂಚಾಯತ್ ಒಳಗಡೆ ಬರ್ಬರವಾಗಿ ಕಡಿದು ಕೊಲೆ ಮಾಡಿದ ಘಟನೆ ಬಂಟ್ವಾಳ ತಾಲೂಕಿನ ವಿಟ್ಲದ ಕರೋಪಾಡಿಯಲ್ಲಿ ನಡೆದಿದೆ.

    ಅಬ್ದುಲ್ ಜಲೀಲ್ ಕೊಲೆಯಾದ ಉಪಾಧ್ಯಕ್ಷ. ಮುಸುಕುಧಾರಿಗಳಾಗಿ ಎರಡು ಬೈಕ್‍ನಲ್ಲಿ ಬಂದ ನಾಲ್ವರು ಅಬ್ದುಲ್ ಜಲೀಲ್ ಅವರ ಮೇಲೆ ಮೆಣಸಿನ ಪುಡಿ ಎರಚಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಪಂಚಾಯತ್ ಒಳಗಿದ್ದ ಸಿಬ್ಬಂದಿಗೂ ಮಾರಕಾಸ್ತ್ರ ತೋರಿಸಿ ಬೆದರಿಸಿ ಪರಾರಿಯಾಗಿದ್ದಾರೆ.

    ಹಲ್ಲೆಗೊಳಗಾದ ಜಲೀಲ್ ಅವರನ್ನು ಕೂಡಲೇ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯದಲ್ಲಿ ಸಾವನ್ನಪ್ಪಿದ್ದಾರೆ. ಈ ಹಿಂದೆ ಕರೋಪಾಡಿಯಲ್ಲಿ ನಿಧಿಶೋಧ ಪ್ರಕರಣ ನಡೆದ ಸಂಧರ್ಭದಲ್ಲಿ ಆರೋಪಿಗಳನ್ನು ಪತ್ತೆ ಹಚ್ಚಲು ಜಲೀಲ್ ನೆರವಾಗಿದ್ದು, ಜೈಲಿನಿಂದ ಬಿಡುಗಡೆಗೊಂಡ ಆರೋಪಿಗಳೇ ಕೃತ್ಯ ಎಸಗಿರಬಹುದು ಎಂದು ಶಂಕಿಸಲಾಗಿದೆ.

    ಸ್ಥಳಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೂಷಣ್ ಜಿ.ಬೊರಸೆ ಸೇರಿದಂತೆ ಹಿರಿಯ ಅಧಿಕಾರಿಗಳು, ಶ್ವಾನದಳ, ಬೆರಳಚ್ಚು ತಜ್ಞ ರು ಭೇಟಿ ನೀಡಿದ್ದು ತನಿಖೆ ಆರಂಭಿಸಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಸಕ್ರೀಯವಾಗಿ ಗುರುತಿಸಿಕೊಂಡಿದ್ದ ಜಲೀಲ್ ಹತ್ಯೆಯ ಹಿಂದೆ ಹಲವು ಅನುಮಾನಗಳು ಕವಲೊಡೆದಿವೆ.