Tag: Vivek Oberoi

  • ಯಶ್ ‘ರಾಮಾಯಣ’ ಪ್ರಾಜೆಕ್ಟ್‌ನಲ್ಲಿ ವಿವೇಕ್ ಒಬೆರಾಯ್?

    ಯಶ್ ‘ರಾಮಾಯಣ’ ಪ್ರಾಜೆಕ್ಟ್‌ನಲ್ಲಿ ವಿವೇಕ್ ಒಬೆರಾಯ್?

    ರಾಕಿಂಗ್ ಸ್ಟಾರ್ ಯಶ್ (Yash) ಸಹ ನಿರ್ಮಾಣದ ‘ರಾಮಾಯಣ’ ಪ್ರಾಜೆಕ್ಟ್‌ನಲ್ಲಿ ಬಾಲಿವುಡ್ ನಟ ವಿವೇಕ್ ಒಬೆರಾಯ್ (Vivek Oberoi) ನಟಿಸಲಿದ್ದಾರೆ ಎನ್ನಲಾದ ಸುದ್ದಿಯೊಂದು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಇದನ್ನೂ ಓದಿ:ಕಾಮಾಕ್ಯ ದೇಗುಲಕ್ಕೆ ನಟಿ ಕಾರುಣ್ಯ ರಾಮ್ ಭೇಟಿ

    ‘ರಾಮಾಯಣ’ (Ramayana) ಚಿತ್ರದಲ್ಲಿ ನಟಿಸುವ ತಾರಾಗಣ ದಿನದಿಂದ ದಿನಕ್ಕೆ ಹಿರಿದಾಗುತ್ತಲೇ ಇದೆ. ಚಿತ್ರದಲ್ಲಿ ‘ರಾವಣ’ ಯಶ್‌ಗೆ ಮಡದಿಯಾಗಿ ಮಗಧೀರ ನಟಿ ಕಾಜಲ್ ಅಗರ್ವಾಲ್ ‘ಮಂಡೋರಿ’ ರೋಲ್‌ನಲ್ಲಿ ನಟಿಸುತ್ತಾರೆ ಎಂಬ ಸುದ್ದಿ ಹಬ್ಬಿತ್ತು. ಈ ಬೆನ್ನಲ್ಲೇ ವಿವೇಕ್ ಒಬೆರಾಯ್ ಕೂಡ ಯಶ್ ಜೊತೆ ತೆರೆಹಂಚಿಕೊಳ್ಳಲಿದ್ದಾರಂತೆ. ಹಾಗಂತ ಸೋಷಿಯಲ್ ಮೀಡಿಯಾದಲ್ಲಿ ಗುಸು ಗುಸು ಚರ್ಚೆ ಶುರುವಾಗಿದೆ. ಇದನ್ನೂ ಓದಿ:‘ಅನಿಮಲ್’ ನಟಿಗೆ ಬಂಪರ್ ಆಫರ್- ಪ್ರಭಾಸ್‌ಗೆ ನಾಯಕಿಯಾದ ತೃಪ್ತಿ ದಿಮ್ರಿ

    ಈ ಚಿತ್ರದಲ್ಲಿ ಶೂರ್ಪನಖಿಯ ಪತಿ ವಿದ್ಯುತ್ಜಿಹ್ವನ ಪಾತ್ರದಲ್ಲಿ ವಿವೇಕ್ ಒಬೆರಾಯ್ ನಟಿಸುತ್ತಾರೆ ಎನ್ನುವ ಊಹಾಪೋಹ ಶುರುವಾಗಿದೆ. ಈ ಚಿತ್ರದಲ್ಲಿ ಶೂರ್ಪನಖಿ ಪಾತ್ರದಲ್ಲಿ ರಕುಲ್ ಪ್ರೀತ್ ಸಿಂಗ್ ಬಣ್ಣ ಹಚ್ಚಿದ್ದಾರೆ. ಈ ನಟಿಯ ಪತಿಯ ಪಾತ್ರದಲ್ಲಿ ವಿವೇಕ್ ನಟಿಸುವ ಸಾಧ್ಯತೆಯಿದೆ ಎನ್ನಲಾಗ್ತಿದೆ. ಅಷ್ಟಕ್ಕೂ ಈ ಸುದ್ದಿ ನಿಜನಾ? ಈ ಚಿತ್ರತಂಡದಿಂದ ಅಧಿಕೃತ ಮಾಹಿತಿ ಸಿಗುವವರೆಗೂ ಕಾಯಬೇಕಿದೆ.

    ರಾಮನಾಗಿ ರಣಬೀರ್ ಕಪೂರ್, ಸೀತೆಯಾಗಿ ಸಾಯಿ ಪಲ್ಲವಿ, ರಾವಣನಾಗಿ ರಾಕಿಂಗ್ ಸ್ಟಾರ್ ಯಶ್ ನಟಿಸುತ್ತಿರೋದು ಅಧಿಕೃತವಾಗಿದೆ. ಉಳಿದ ಪಾತ್ರಗಳ ಆಯ್ಕೆ ಬಗ್ಗೆ ಚಿತ್ರತಂಡದ ಕಡೆಯಿಂದ ಅಧಿಕೃತ ಮಾಹಿತಿ ಸಿಗಬೇಕಿದೆ.

    ರಾಮಾಯಣ ಸಿನಿಮಾವನ್ನು ಎರಡು ಭಾಗಗಳಲ್ಲಿ ತರೋದಾಗಿ ಈಗಾಗಲೇ ಚಿತ್ರತಂಡ ತಿಳಿಸಿದೆ. 2026ರಲ್ಲಿ ಸಿನಿಮಾ ರಿಲೀಸ್ ಆಗಲಿದೆ.

  • ಅಬುಧಾಬಿಯ ಹಿಂದೂ ದೇವಾಲಯದ ಉದ್ಘಾಟನೆಯಲ್ಲಿ ಅಕ್ಷಯ್, ವಿವೇಕ್ ಒಬೆರಾಯ್

    ಅಬುಧಾಬಿಯ ಹಿಂದೂ ದೇವಾಲಯದ ಉದ್ಘಾಟನೆಯಲ್ಲಿ ಅಕ್ಷಯ್, ವಿವೇಕ್ ಒಬೆರಾಯ್

    ರಬ್ಬರ ನೆಲದಲ್ಲಿ ನಿರ್ಮಿಸಲಾಗಿರುವ ಮೊದಲ ಹಿಂದೂ ದೇವಾಲಯವನ್ನು ಭಾರತದ ಪ್ರಧಾನಿ ನರೇಂದ್ರ (Narendra Modi) ಮೋದಿ ಅವರು ಇಂದು (ಫೆ.14) ಲೋಕಾರ್ಪಣೆಗೊಳಿಸಿದರು. ಈ ಕಾರ್ಯಕ್ರಮದಲ್ಲಿ ಬಾಲಿವುಡ್ ನಟ ಅಕ್ಷಯ್ ಕುಮಾರ್ (Akshay Kumar), ವಿವೇಕ್ ಒಬೆರಾಯ್, ದಿಲೀಪ್ ಜೋಶಿ, ಸಿಂಗರ್ ಶಂಕರ್ ಮಹಾದೇವನ್ ಭಾಗಿಯಾಗಿದ್ದಾರೆ.

    ಅಬುಧಾಬಿಯ ಹಿಂದೂ ದೇವಾಲಯದ ಉದ್ಘಾಟನೆ ಸಮಾರಂಭದಲ್ಲಿ ಭಾಗಿಯಾಗಿರುವುದ್ದಕ್ಕೆ ಅಕ್ಷಯ್ ಕುಮಾರ್ ಮತ್ತು ವಿವೇಕ್ ಒಬೆರಾಯ್ ಸಂತಸ ವ್ಯಕ್ತಪಡಿಸಿದ್ದಾರೆ. ಇದು ಅತ್ಯಂತ ಸುಂದರವಾದ ದೇವಾಲಯವಾಗಿದ್ದು, ಇಂದು ದೇವರ ಸೇವೆ ಮಾಡುವ ಸೌಭಾಗ್ಯ ನನಗಿತ್ತು ಎಂದು ವಿವೇಕ್ ಒಬೆರಾಯ್ (Vivek Oberoi) ಮಾತನಾಡಿದ್ದಾರೆ.

    ಅಂದಹಾಗೆ, ಅರಬ್ ಸಂಯುಕ್ತ ಸಂಸ್ಥಾನದ (ಯುಎಇ) ಬೋಚಸನವಾಸಿ ಶ್ರೀ ಅಕ್ಷರ ಪುರುಷೋತ್ತಮ ಸ್ವಾಮಿನಾರಾಯಣ ಸಂಸ್ಥಾ ಹಿಂದೂ ದೇವಾಲಯವನ್ನು ಮೋದಿ (Narendra Modi) ಫೆ.14ರ ಸಂಜೆ ಉದ್ಘಾಟಿಸಿದರು.

    ದೇವಾಲಯ ಉದ್ಘಾಟನೆಗೂ ಮುನ್ನ ಮಂದಿರದ ಹೊರಗಡೆ ಕಲ್ಯಾಣಿಗೆ ಗಂಗಾ ಪೂಜೆ ಕಾರ್ಯವನ್ನು ಮೋದಿ ನೆರವೇರಿಸಿದರು. ನಂತರ ಪ್ರವೇಶದ್ವಾರದಲ್ಲಿ ಟೇಪ್ ಕತ್ತರಿಸುವ ಮೂಲಕ ದೇವಾಲಯವನ್ನು ಲೋಕಾರ್ಪಣೆಗೊಳಿಸಿದರು. ಇದೇ ವೇಳೆ ಪ್ರಧಾನಿ ಮೋದಿಗೆ ಈಶ್ವರಚರಣದಾಸ ಸ್ವಾಮೀಜಿ ಸೇರಿದಂತೆ ಇತರೆ ಸ್ವಾಮೀಜಿಗಳು ಸಾಥ್ ನೀಡಿದರು. ಈ ವೇಳೆ ಸ್ವಾಮೀಜಿಗಳು ಭವ್ಯ ಮಂದಿರದ ರಚನೆ ಕುರಿತು ಮೋದಿ ಅವರಿಗೆ ಮಾಹಿತಿ ನೀಡಿದರು.

    ನಂತರ ದೇವಾಲಯದಲ್ಲಿ ಮೋದಿ ಆರತಿ ಬೆಳಗಿದರು. ಮಂದಿರದ ದೇವರಿಗೆ ಪುಷ್ಪವನ್ನು ಅರ್ಪಿಸಿ ಪ್ರಾರ್ಥಿಸಿದರು. 27 ಎಕರೆ ಜಾಗದಲ್ಲಿ 900 ಕೋಟಿ ರೂ. ವೆಚ್ಚದಲ್ಲಿ ದೇವಾಲಯ ನಿರ್ಮಿಸಲಾಗಿದೆ.

  • ಬಾಲಿವುಡ್ ನಟ ವಿವೇಕ್ ಒಬೆರಾಯ್ ಗೆ ಕೋಟಿ ಕೋಟಿ ವಂಚನೆ

    ಬಾಲಿವುಡ್ ನಟ ವಿವೇಕ್ ಒಬೆರಾಯ್ ಗೆ ಕೋಟಿ ಕೋಟಿ ವಂಚನೆ

    ಬಾಲಿವುಡ್ (Bollywood) ನಟ ವಿವೇಕ್ ಒಬೆರಾಯ್ ವಂಚನೆಗೆ ಒಳಗಾಗಿದ್ದಾರೆ. ಕಾರ್ಯಕ್ರಮ ಮತ್ತು ಸಿನಿಮಾಗೆ ಬಂಡವಾಳ ಹೂಡಿದೆ ಹೆಚ್ಚಿನ ಲಾಭ ಕೊಡಲಾಗುವುದು ಎಂದು ಹೇಳಿ ಬರೋಬ್ಬರಿ 1.55 ಕೋಟಿ ರೂಪಾಯಿ ವಂಚಿಸಿದ್ದಾರೆ (Fraud). ಈ ಕುರಿತು ನಟ ವಿವೇಕ್ ಅವರ ಅಕೌಂಟೆಂಟ್ ಅಂಧೇರಿಯಲ್ಲಿ(Andheri) ಮೂವರ ವಿರುದ್ಧ ದೂರು ದಾಖಲಿಸಿದ್ದಾರೆ.

    ವಿವೇಕ್ ಒಬೆರಾಯ್ (Vivek Oberoi) ಅವರಿಂದ ಮೂವರು ಹಣ ಪಡೆದು ವೈಯಕ್ತಿಕವಾಗಿ ಬಳಸಿಕೊಂಡಿದ್ದಾರೆ. ಕಾರ್ಯಕ್ರಮ ಮತ್ತು ಸಿನಿಮಾ ನಿರ್ಮಾಣದಲ್ಲಿ ಹಣ ತೊಡಗಿಸಿರುವುದಾಗಿ ಸುಳ್ಳು ಹೇಳಿದ್ದಾರೆ. ಈ ಮೂವರಲ್ಲಿ ಒಬ್ಬರು ಸಿನಿಮಾ ನಿರ್ಮಾಪಕರು ಇದ್ದಾರೆ ಎಂದು ದೂರಿನಲ್ಲಿ ವಿವರಿಸಿದ್ದಾರೆ. ಆರೋಪಿಗಳ ವಿರುದ್ಧ ಎಫ್.ಐ.ಆರ್ ದಾಖಲಾಗಿದೆ. ಇದನ್ನೂ ಓದಿ:ಜುಲೈ 23ಕ್ಕೆ ವಿಶ್ವಕುಂದಾಪ್ರ ಕನ್ನಡ ದಿನಕ್ಕೆ ಸಿಎಂ, ರಿಷಬ್ ಶೆಟ್ಟಿ- ಪ್ರಮೋದ್ ಶೆಟ್ಟಿ ಸಾಥ್

     

    ನಟರ ಹೆಸರಿನಲ್ಲಿ ವಂಚಿಸುವ ಹಲವು ರೀತಿಯ ಪ್ರಕರಣಗಳು ದಾಖಲಾಗುತ್ತಿವೆ. ಮೊನ್ನೆಯಷ್ಟೇ ಸಲ್ಮಾನ್ ಖಾನ್ ತಮ್ಮ ನಿರ್ಮಾಣ ಸಂಸ್ಥೆಯ ಹೆಸರಿನಲ್ಲಿ ಹಲವರು ಹಣ ಮಾಡುತ್ತಿದ್ದಾರೆ. ಆಡಿಷನ್ ಮಾಡುವುದಾಗಿ ಹೇಳಿ ಹಣ ಪಡೆದು ವಂಚಿಸುತ್ತಿದ್ದಾರೆ ಎಂದು ಹೇಳಿಕೊಂಡಿದ್ದರು. ವಂಚಕರ ವಿರುದ್ಧ ಕಠಿಣ ಕ್ರಮಕ್ಕೂ ಅವರು ಆಗ್ರಹಿಸಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪತ್ನಿ ಜೊತೆ ವಿವೇಕ್ ಒಬೆರಾಯ್ ಔಟಿಂಗ್- ದಾಖಲಾಯ್ತು ಎಫ್‍ಐಆರ್

    ಪತ್ನಿ ಜೊತೆ ವಿವೇಕ್ ಒಬೆರಾಯ್ ಔಟಿಂಗ್- ದಾಖಲಾಯ್ತು ಎಫ್‍ಐಆರ್

    ಮುಂಬೈ: ಪತ್ನಿ ಜೊತೆ ಔಟಿಂಗ್ ಹೋಗುವಾಗ ಹೆಲ್ಮೆಟ್ ಹಾಗೂ ಮಾಸ್ಕ್ ಹಾಕದ್ದಕ್ಕೆ ನಟ ವಿವೇಕ್ ಒಬೆರಾಯ್ ವಿರುದ್ಧ ಪ್ರಕರಣ ದಾಖಲಾಗಿದ್ದು, ದಂಡ ಸಹ ವಿಧಿಸಲಾಗಿದೆ.

    ವ್ಯಾಲೆಂಟೈನ್ಸ್ ಡೇ ದಿನ ಪತ್ನಿ ಜೊತೆ ವಿವೇಕ್ ಒಬೆರಾಯ್ ಔಟಿಂಗ್ ಹೋಗಿದ್ದ ವೀಡಿಯೋವನ್ನು ಇನ್‍ಸ್ಟಾಗ್ರಾಮ್‍ನಲ್ಲಿ ಹಂಚಿಕೊಂಡಿದ್ದರು. ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಈ ವೀಡಿಯೋ ವೈರಲ್ ಆಗಿದ್ದು, ಹೆಲ್ಮೆಟ್ ಹಾಗೂ ಮಾಸ್ಕ್ ಹಾಕದಿರುವುದು ಕಂಡುಬಂದಿದೆ. ಹೀಗಾಗಿ ದಂಡ ಹಾಕಲಾಗಿದೆ.

    ಹೆಲ್ಮೆಟ್ ಹಾಕದೆ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿರುವುದು ಹಾಗೂ ಕೊರೊನಾ ಸಮಯದಲ್ಲಿ ಮಾಸ್ಕ್ ಧರಿಸದೇ ಸಂಚರಿಸಿದ್ದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗಿತ್ತು. ಇದರಿಂದಾಗಿ ಯುವಕರನ್ನು ತಪ್ಪು ದಾರಿಗೆ ಎಳೆಯಲು ಪ್ರೋತ್ಸಾಹಿಸಿದಂತಾಗುತ್ತದೆ. ಹೀಗಾಗಿ ದಂಡ ಕಟ್ಟಬೇಕು ಎಂದು ಒತ್ತಾಯಿಸಲಾಗಿತ್ತು.

    ಇದನ್ನು ಗಮನಿಸಿದ ಮುಂಬೈ ಪೊಲೀಸರು ಕ್ರಮ ಕೈಗೊಂಡಿದ್ದು, ಇ-ಚಲನ್ ನೀಡುವ ಮೂಲಕ ದಂಡ ಹಾಕಿದ್ದಾರೆ. ಹೆಲ್ಮೆಟ್ ಧರಿಸದ್ದಕ್ಕೆ ವಿವೇಕ್ ಒಬೆರಾಯ್ ಅವರಿಗೆ 500 ರೂ.ಗಳ ದಂಡದ ಇ-ಚಲನ್‍ನ್ನು ಸ್ಯಾಂತಾಕ್ರೂಜ್ ವಿಭಾಗದ ಪೊಲೀಸರು ನೀಡಿದ್ದಾರೆ. ಶುಕ್ರವಾರ ಸಂಜೆ 7 ಗಂಟೆಗೆ ಅಸಿಸ್ಟೆಂಟ್ ಇನ್‍ಸ್ಪೆಕ್ಟರ್ ನಂದಕಿಶೋರ್ ಯಾದವ್ ಅವರು ಇ-ಚಲನ್ ನೀಡಿದ್ದಾರೆ.

    ದಂಡ ಮಾತ್ರವಲ್ಲದೆ ಮಾಸ್ಕ್ ಧರಿಸದ್ದಕ್ಕೆ ವಿವೇಕ್ ಒಬೆರಾಯ್ ವಿರುದ್ಧ ಮುಂಬೈನ ಜುಹು ಪೊಲೀಸ್ ಠಾಣೆಯಲ್ಲಿ ಫೆಬ್ರವರಿ 19ರಂದು ಎಫ್‍ಐಆರ್ ಸಹ ದಾಖಲಾಗಿದೆ. ಮಹಾರಾಷ್ಟ್ರದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಮಾಸ್ಕ್ ಕಡ್ಡಾಯಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.

    ಮೋಟರ್ ವೆಹಿಕಲ್ಸ್ ಆ್ಯಕ್ಟ್‍ನ ಸೆಕ್ಷನ್ 21ರ ಅಡಿ ಸೆಕ್ಷನ್ 129/177 ಅಡಿ ಪ್ರಕರಣ ದಾಖಲಾಗಿದೆ. ಪ್ರಕರಣದ ಕುರಿತು ಮಹಾರಾಷ್ಟ್ರ ಕೋವಿಡ್-19 ಮೀಶರ್ಸ್ 2020ಯ ಜುಹು ಠಾಣೆಯ ಸಬ್ ಇನ್‍ಸ್ಪೆಕ್ಟರ್ ಕಾಂಬ್ಳೆ ಅವರು ಈ ಕುರಿತು ತನಿಖೆ ನಡೆಸುತ್ತಿದ್ದಾರೆ. ಇಂದು ಪೊಲೀಸರು ವಿವೇಕ್ ಒಬೆರಾಯ್ ಅವರ ಮನೆಗೆ ಹೇಳಿಕೆ ಪಡೆಯಲು ತೆರಳಿದ್ದು, ಈ ವೇಳೆ ಅವರು ದೆಹಲಿಗೆ ತರಳಿದ್ದಾರೆ ಎಂದು ಮನೆಯವರು ತಿಳಿಸಿದ್ದಾರೆ.

     

    View this post on Instagram

     

    A post shared by Viral Bhayani (@viralbhayani)

    ದಂಡ ಬಿದ್ದಿದ್ಯಾಕೆ?
    ವ್ಯಾಲೆಂಟೈನ್ಸ್ ಡೇ ದಿನ ನಟ ವಿವೇಕ್ ಒಬೆರಾಯ್ ಅವರು ಹಾರ್ಲೆ ಡೆವಿಡ್ಸನ್ ಬೈಕ್ ಮೇಲೆ ಪತ್ನಿಯನ್ನು ಕೂರಿಸಿಕೊಂಡು ತೆರಳುತ್ತಿದ್ದರು. ಈ ವಿಡಿಯೋವನ್ನು ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಹಂಚಿಕೊಂಡಿದ್ದರು. ಬಳಿಕ ಈ ವಿಡಿಯೋ ವೈರಲ್ ಆಗಿತ್ತು. ವ್ಯಾಲೆಂಟೈನ್ಸ್ ಡೇ ಹೇಗೆ ಆರಂಭಿಸಬೇಕು ಎನ್ನುತ್ತಲೇ ನಾನು ನನ್ನ ಪತ್ನಿ ಜಾಯ್ ರೈಡ್ ಮೂಲಕ ರಿಫ್ರೆಶ್ ಆಗುತ್ತಿದ್ದೇವೆ ಎಂದು ಬರೆದುಕೊಂಡಿದ್ದರು.

  • ಸ್ಯಾಂಡಲ್‍ವುಡ್ ಡ್ರಗ್ ಕೇಸ್ – ಬಾಲಿವುಡ್ ನಟ ವಿವೇಕ್ ಒಬೆರಾಯ್‍ಗೆ ಸಿಸಿಬಿ ಶಾಕ್

    ಸ್ಯಾಂಡಲ್‍ವುಡ್ ಡ್ರಗ್ ಕೇಸ್ – ಬಾಲಿವುಡ್ ನಟ ವಿವೇಕ್ ಒಬೆರಾಯ್‍ಗೆ ಸಿಸಿಬಿ ಶಾಕ್

    ಬೆಂಗಳೂರು: ಸ್ಯಾಂಡಲ್‍ವುಡ್ ಡ್ರಗ್ ಕೇಸ್ ವಿಚಾರವಾಗಿ ಇಂದು ಬಾಲಿವುಡ್ ನಟ ವಿವೇಕ್ ಒಬೆರಾಯ್ ಮನೆ ಮೇಲೆ ಬೆಂಗಳೂರು ಸಿಸಿಬಿ ಪೊಲೀಸರು ದಾಳಿ ಮಾಡಿದ್ದಾರೆ.

    ಡ್ರಗ್ ಮಾಫಿಯಾ ಕೇಸಿನಲ್ಲಿ ಪ್ರಮುಖ ಆರೋಪಿಯಾಗಿರುವ ಆದಿತ್ಯ ಆಳ್ವಾ ನಾಪತ್ತೆಯಾಗಿದ್ದು, ಆತನನನ್ನು ವಿಚಾರಣೆಗೆ ಒಳಪಡಿಸಲು ಸಿಸಿಬಿ ಪೊಲೀಸರು ಹುಡುಕುತ್ತಿದ್ದಾರೆ. ಆರೋಪಿ ಆದಿತ್ಯ ಆಳ್ವಾ, ನಟ ವಿವೇಕ್ ಒಬೆರಾಯ್ ಅವರ ಸಂಬಂಧಿಯಾಗಿದ್ದು ಅವರ ಮನೆಯಲ್ಲಿ ಇರಬಹುದು ಎಂಬ ಶಂಕೆ ವ್ಯಕ್ತವಾದ ಹಿನ್ನೆಲೆ ಇಂದು ಒಬೆರಾಯ್ ಮನೆ ಮೇಲೆ ಸಿಸಿಬಿ ಅಧಿಕಾರಿಗಳು ರೇಡ್ ಮಾಡಿದ್ದಾರೆ.

    ನಾಪತ್ತೆಯಾಗಿರುವ ಆರೋಪಿ ಆದಿತ್ಯ ಆಳ್ವಾನಿಗೆ ವಿವೇಕ್ ಒಬೆರಾಯ್ ತನ್ನ ಮನೆಯಲ್ಲಿ ಆಶ್ರಯ ನೀಡಿರುವ ಶಂಕೆ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಅವರ ಮನೆಯಲ್ಲಿ ಸರ್ಚ್ ಮಾಡಲು ಬೆಂಗಳೂರು ಸಿಸಿಬಿ ಪೊಲೀಸರು ಕೋರ್ಟಿನಿಂದ ಸರ್ಚ್ ವಾರೆಂಟ್ ಪಡೆದುಕೊಂಡಿದ್ದರು. ಈ ವಿಚಾರವಾಗಿ ನಿನ್ನೆಯೇ ಮುಂಬೈಗೆ ಸಿಸಿಬಿ ಅಧಿಕಾರಿಗಳು ಹೋಗಿದ್ದರು. ಆದರೆ ಮುಂಬೈ ಪೊಲೀಸರು ಸರಿಯಾಗಿ ಸ್ಪಂದಿಸದ ಕಾರಣ ಇಂದು ತಡವಾಗಿ ವಿವೇಕ್ ಒಬೆರಾಯ್ ಮನೆ ಮೇಲೆ ದಾಳಿ ಮಾಡಿದ್ದಾರೆ.

    ಡ್ರಗ್ಸ್ ಪ್ರಕರಣದಲ್ಲಿ ರವಿಶಂಕರ್ ಬಂಧನವಾಗುತ್ತಿದ್ದಂತೆ ಆದಿತ್ಯ ಆಳ್ವಾ ನಾಪತ್ತೆಯಾಗಿದ್ದು, ಮುಂಬೈ ಅಥವಾ ದೆಹಲಿಯಲ್ಲಿರೋ ಬಗ್ಗೆ ಅನುಮಾನಗಳು ವ್ಯಕ್ತವಾಗಿವೆ. ಆದಿತ್ಯ ಆಳ್ವಾ ಮನೆಯಲ್ಲಿ ನಡೆಯುತ್ತಿದ್ದ ಪಾರ್ಟಿಗಳಿಗೆ ರಾಜಕಾರಣಿ ಮತ್ತು ಉದ್ಯಮಿಗಳ ಮಕ್ಕಳು ಸೇರಿದಂತೆ ಹಲವು ತಾರೆಯರು ಭಾಗಿಯಾಗುತ್ತಿದ್ದಾರೆ. ಪಾರ್ಟಿಗಳಲ್ಲಿ ಡ್ರಗ್ಸ್ ಹೊಳೆ ಹರಿಯುತ್ತಿತ್ತು ಎಂದು ತಿಳಿದು ಬಂದಿತ್ತು.

    ಯಾರು ಈ ಆದಿತ್ಯ ಆಳ್ವಾ?
    ಆದಿತ್ಯ ಆಳ್ವಾ ಮಾಜಿ ಸಚಿವ ಜೀವರಾಜ್ ಆಳ್ವಾ ಪುತ್ರ. ಆದಿತ್ಯ ಆಳ್ವಾನ ಸಹೋದರಿಯನ್ನು ನಟ ವಿವೇಕ್ ಒಬೆರಾಯ್‍ಗೆ ಮದುವೆ ಮಾಡಿಕೊಡಲಾಗಿದೆ. ಹೀಗಾಗಿ ಬಾಮೈದನ ರಕ್ಷಣೆಗಾಗಿ ನಟ ವಿವೇಕ್ ಒಬೆರಾಯ್ ನಿಂತಿರುವ ಶಂಕೆ ವ್ಯಕ್ತವಾಗಿದ್ದು, ಇಂದು ಅವರ ಮನೆಯ ಮೇಲೂ ಸಿಸಿಬಿ ದಾಳಿ ಮಾಡಿದೆ.

  • ಸ್ಯಾಂಡಲ್‌ವುಡ್‌ ಟು ಬಾಲಿವುಡ್‌ – ಆದಿತ್ಯ ಆಳ್ವ ನಾಪತ್ತೆ, ವಿವೇಕ್‌ ಒಬೆರಾಯ್‌ ಪಾರ್ಟಿ ವಿಡಿಯೋ ಔಟ್‌

    ಸ್ಯಾಂಡಲ್‌ವುಡ್‌ ಟು ಬಾಲಿವುಡ್‌ – ಆದಿತ್ಯ ಆಳ್ವ ನಾಪತ್ತೆ, ವಿವೇಕ್‌ ಒಬೆರಾಯ್‌ ಪಾರ್ಟಿ ವಿಡಿಯೋ ಔಟ್‌

    ಬೆಂಗಳೂರು: ಸ್ಯಾಂಡಲ್‌ವುಡ್‌ ಡ್ರಗ್ಸ್‌ ದಂಧೆಯ ಒಂದೊಂದೆ ಮುಖಗಳು ಬಯಲಾಗುತ್ತಿವೆ. ಈ ಡ್ರಗ್ಸ್ ದಂಧೆಯನ್ನು ಬಗೆದಷ್ಟೂ ಮತ್ತಷ್ಟು ವಿಷಯಗಳು, ವ್ಯಕ್ತಿಗಳ ನಂಟು ಹೊರ ಬರುತ್ತಿದ್ದು, ಮಾಜಿ ಸಚಿವ ಜೀವರಾಜ್ ಆಳ್ವ ಪುತ್ರ ಆದಿತ್ಯ ಆಳ್ವ ಕೂಡ ಮಾಫಿಯಾದ ಸೂತ್ರಧಾರಿ.

    ಸಿಸಿಬಿ ದಾಖಲಿಸಿಕೊಂಡಿರುವ ಸ್ವಯಂಪ್ರೇರಿತ ಸ್ಯಾಂಡಲ್‌ವುಡ್‌ ಡ್ರಗ್‌ ಪ್ರಕರಣದಲ್ಲಿ ರಾಗಿಣಿ ಎರಡನೇ ಆರೋಪಿಯಾಗಿದ್ದರೆ ಆದಿತ್ಯ ಆಳ್ವ ಆರನೇ ಆರೋಪಿಯಾಗಿದ್ದಾನೆ.

    ಎಫ್‍ಐಆರ್ ದಾಖಲಾದ ಬೆನ್ನಲ್ಲೇ ಸದಾಶಿವನಗರದ ಆಳ್ವ ನಿವಾಸ ಸಂಪೂರ್ಣ ಖಾಲಿಯಾಗಿದೆ ಆದಿತ್ಯ ಆಳ್ವ ನಾಪತ್ತೆಯಾಗಿದ್ದಾನೆ. ಸಿಸಿಬಿ ತಂಡ ಈಗ ಆದಿತ್ಯ ಆಳ್ವನನ್ನು ಬಂಧಿಸಲು ಶೋಧ ಕಾರ್ಯ ನಡೆಸುತ್ತಿದೆ. ಇದನ್ನೂ ಓದಿ: ಮಾಜಿ ಸಚಿವ ಜೀವರಾಜ್‌ ಆಳ್ವ ಪುತ್ರ ಸೇರಿದಂತೆ 12 ಮಂದಿ ವಿರುದ್ಧ ಕೇಸ್‌ – ಯಾವೆಲ್ಲ ಸೆಕ್ಷನ್‌? ಶಿಕ್ಷೆ ಏನು? ಇಲ್ಲಿದೆ ಪೂರ್ಣ ವಿವರ

    ಮತ್ತೊಂದು ಕಡೆ, ಜೀವರಾಜ್ ಆಳ್ವ ಅಳಿಯನಾಗಿರುವ ಬಾಲಿವುಡ್ ನಟ ವಿವೇಕ್ ಒಬೇರಾಯ್ ಹೆಸರು ಕೂಡ ಈಗ ಥಳಕು ಹಾಕಿಕೊಂಡಿದೆ. ಶ್ರೀಲಂಕಾದ ಕ್ಯಾಸಿನೋದಲ್ಲಿ ನಡೆದ ಪಾರ್ಟಿಯಲ್ಲಿ ನಟಿ ಸಂಜನಾ ಜೊತೆ ವಿವೇಕ್ ಒಬೇರಾಯ್ ಕಾಣಿಸಿಕೊಂಡಿದ್ದಾರೆ.

    ಈ ಎಲ್ಲ ಕಾರಣಕ್ಕೆ ಸ್ಯಾಂಡಲ್‍ವುಡ್‍ನಿಂದ ಬಾಲಿವುಡ್‍ವರೆಗೆ ಡ್ರಗ್ಸ್ ಜಾಲ ಹಬ್ಬಿದ್ಯಾ? ಇನ್ನಷ್ಟು ಸ್ಟಾರ್‌ಗಳ ಮುಖವಾಡ ಬಯಲಾಗುತ್ತಾ ಎನ್ನುವುದು ಕುತೂಹಲ ಕೆರಳಿಸಿದೆ.

    ಪಬ್ಲಿಕ್‌ ಟಿವಿಗೆ ಪ್ರತಿಕ್ರಿಯಿಸಿದ್ದ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್‌ ಸಂಬರ್ಗಿ ಈಗ ಕೇಳಿ ಬರುತ್ತಿರುವ ವ್ಯಕ್ತಿಗಳು ಈ ವ್ಯವಹಾರದಲ್ಲಿ ಬಹಳ ಸಣ್ಣವರು. ಸ್ಯಾಂಡಲ್‌ವುಡ್‌ ಮಾತ್ರವಲ್ಲ ಬಾಲಿವುಡ್‌ವರೆಗೂ ಈ ಲಿಂಕ್‌ ಹಬ್ಬಿದೆ. ಸಾಕ್ಷ್ಯಗಳು ಸರಿಯಾಗಿ ಸಿಕ್ಕಿದರೆ ದೊಡ್ಡ ದೊಡ್ಡ ವ್ಯಕ್ತಿಗಳು ಹೊರ ಬರುತ್ತಾರೆ. ಮುಂದಿನ ದಿನಗಳಲ್ಲಿ ಯಾರೆಲ್ಲ ಈ ದಂಧೆಯಲ್ಲಿ ಭಾಗಿಯಾಗಿದ್ದಾರೆ ಎಂಬ ಎಲ್ಲ ವಿವರಗಳು ಹೊರಬರಲಿದೆ ಎಂದು ತಿಳಿಸಿದ್ದರು.

  • ಅಭಿನಂದನ್ ಕುರಿತು ಸಿನಿಮಾ ತಯಾರಿಯಲ್ಲಿ ವಿವೇಕ್ ಒಬೇರಾಯ್-ಸೋಶಿಯಲ್ ಮೀಡಿಯಾದಲ್ಲಿ ಟ್ರೋಲ್

    ಅಭಿನಂದನ್ ಕುರಿತು ಸಿನಿಮಾ ತಯಾರಿಯಲ್ಲಿ ವಿವೇಕ್ ಒಬೇರಾಯ್-ಸೋಶಿಯಲ್ ಮೀಡಿಯಾದಲ್ಲಿ ಟ್ರೋಲ್

    ಮುಂಬೈ: ನಟ ವಿವೇಕ್ ಒಬೇರಾಯ್ ಭಾರತೀಯ ವಾಯುಸೇನೆಯ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಅವರ ಕುರಿತ ಸಿನಿಮಾ ಮಾಡಲು ಮುಂದಾಗಿದ್ದಾರೆ. ಈ ಸಂಬಂಧ ಶುಕ್ರವಾರ ಬಾಲಿವುಡ್ ಸಿನಿಮಾ ವಿಮರ್ಶಕ ತರಣ್ ಆದರ್ಶ್ ಟ್ವೀಟ್ ಮೂಲಕ ವಿಷಯವನ್ನು ರಿವೀಲ್ ಮಾಡಿದ್ದರು. ಸಿನಿಮಾ ವಿಷಯ ಹೊರ ಬೀಳುತ್ತಿದ್ದಂತೆ ಸೋಶಿಯಲ್ ಮೀಡಿಯಾದಲ್ಲಿ ಜನರು ವಿವೇಕ್ ಒಬೇರಾಯ್ ಅವರನ್ನು ಟ್ರೋಲ್ ಮಾಡಲಾರಂಭಿಸಿದ್ದಾರೆ.

    ವಿವೇಕ್ ಒಬೇರಾಯ್ ಬಾಲಕೋಟ್ ಏರ್ ಸ್ಟ್ರೈಕ್ ಕಥೆಯಾದರಿತ ಸಿನಿಮಾದಲ್ಲಿ ನಟಿಸುತ್ತಿದ್ದು, ‘ಬಾಲಕೋಟ್: ದಿ ಟ್ರ್ಯೂ ಸ್ಟೋರಿ’ ಎಂದು ಟೈಟಲ್ ಅಂತಿಮಗೊಳಿಸಲಾಗಿದೆ. ಜಮ್ಮು, ಕಾಶ್ಮೀರ, ದೆಹಲಿ ಮತ್ತು ಆಗ್ರಾದಲ್ಲಿ ಸಿನಿಮಾದ ಚಿತ್ರೀಕರಣ ನಡೆಯಲಿದೆ. ಈ ವರ್ಷದ ಅಂತಿಮದಲ್ಲಿ ಸಿನಿಮಾ ಶೂಟಿಂಗ್ ಆರಂಭಗೊಳ್ಳಲಿದೆ. ಹಿಂದಿ, ತಮಿಳು ಮತ್ತು ತೆಲಗು ಭಾಷೆಯಲ್ಲಿ ಸಿನಿಮಾ ಬಿಡುಗಡೆಯಾಗಲಿದೆ ಎಂದು ತರಣ್ ಆದರ್ಶ್ ಟ್ವೀಟ್ ಮೂಲಕ ತಿಳಿಸಿದ್ದರು.

    ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಜೀವನಾಧರಿತ ಸಿನಿಮಾದಲ್ಲಿ ವಿವೇಕ್ ಒಬೇರಾಯ್ ಪ್ರಧಾನಿಗಳ ಪಾತ್ರದಲ್ಲಿ ನಟಿಸಿದ್ದರು. ಆದ್ರೆ ಸಿನಿಮಾ ಬಾಕ್ಸ್ ಆಫೀಸ್‍ನಲ್ಲಿ ಸದ್ದು ಮಾಡಲು ವಿಫಲವಾಗಿತ್ತು. ಮೋದಿಯವರ ಪಾತ್ರಕ್ಕೆ ಜೀವ ತುಂಬುವಲ್ಲಿ ವಿವೇಕ್ ಒಬೇರಾಯ್ ಯಶಸ್ವಿಯಾಗಿರಲಿಲ್ಲ ಎಂಬ ಮಾತುಗಳು ಸಾಮಾಜಿಕ ಜಾಲತಾಣಗಳಲ್ಲಿ ಕೇಳಿ ಬಂದಿದ್ದವು. ಇದೀಗ ವಿಂಗ್ ಕಮಾಂಡರ್ ಪಾತ್ರದಲ್ಲಿ ಅಭಿನಂದನ್ ಪಾತ್ರದಲ್ಲಿ ವಿವೇಕ್ ಒಬೇರಾಯ್ ನಟಿಸಲಿದ್ದಾರೆ ಎನ್ನಲಾಗುತ್ತಿದ್ದು, ನೆಟ್ಟಿಗರು ಬೇಸರ ವ್ಯಕ್ತಪಡಿಸಿದ್ದಾರೆ.

    ಸಿನಿಮಾ ಕುರಿತು ಪ್ರತಿಕ್ರಿಯಿಸಿರುವ ವಿವೇಕ್ ಒಬೇರಾಯ್, ಓರ್ವ ಭಾರತೀಯ ಮತ್ತು ದೇಶಭಕ್ತನಾಗಿ ಹಾಗೂ ಸಿನಿಮಾ ಉದ್ಯಮದ ಸದಸ್ಯನಾಗಿ ಈ ರೀತಿಯ ಸಿನಿಮಾ ಮಾಡಲು ನನಗೆ ಹೆಮ್ಮೆಯಾಗುತ್ತಿದೆ. ನಮ್ಮ ಸೇನೆಯ ಶಕ್ತಿ ಮತ್ತು ಸಾಮಥ್ರ್ಯ ಬಿಂಬಿಸುವ ಸಿನಿಮಾ ಇದಾಗಿದೆ. ಅಭಿನಂದನ್ ಸೇರಿದಂತೆ ಭಾರತೀಯ ವಾಯುಸೇನೆಯ ಅಧಿಕಾರಿಗಳ ಪಾತ್ರಗಳು ಸಿನಿಮಾದ ಲೀಡ್ ನಲ್ಲಿ ಇರಲಿವೆ ಎಂದು ಹೇಳಿದ್ದಾರೆ.

    https://twitter.com/sagarcasm/status/1164791354582417409

    ಬಾಲಕೋಟ್ ಏರ್ ಸ್ಟ್ರೈಕ್ ಭಾರತೀಯ ವಾಯು ಸೇನೆ ನಡೆಸಿದ ದಾಳಿಯಲ್ಲಿ ಒಂದಾಗಿದೆ. ಪುಲ್ವಾಮಾ ದಾಳಿಯಿಂದ ಏರ್ ಸ್ಟ್ರೈಕ್ ವರೆಗಿನ ಎಲ್ಲ ವಿಷಯಗಳ ಬಗ್ಗೆ ಓದುತ್ತಾ ಬಂದಿದ್ದೇನೆ. ಈ ಸಿನಿಮಾ ಮೂಲಕ ಏರ್ ಸ್ಟ್ರೈಕ್ ದಾಳಿಯ ಸಂಪೂರ್ಣ ಮಾಹಿತಿಯನ್ನು ಚಿತ್ರದಲ್ಲಿ ನೀಡಲು ಪ್ರಯತ್ನಿಸಲಾಗುಗುವುದು ಎಂದು ವಿವೇಕ್ ತಿಳಿಸಿದ್ದಾರೆ.

    ಸಿನಿಮಾ ಘೋಷಣೆ ಬಳಿಕ ನೆಟ್ಟಿಗರು, ಚಿತ್ರದ ನಿರ್ದೇಶಕರು ವಿವೇಕ್ ಬದಲಾಗಿ ಅಕ್ಷಯ್ ಕುಮಾರ್ ಅವರನ್ನು ಆಯ್ಕೆ ಮಾಡಿಕೊಳ್ಳಬಹುದಿತ್ತು ಎಂದು ಸಲಹೆ ನೀಡಿದ್ದಾರೆ. ಕೆಲವರು ಅಜಯ್ ದೇವಗನ್, ಹೃತಿಕ್ ರೋಶನ್ ಅವರ ಹೆಸರನ್ನು ಸೂಚಿಸಿದ್ದಾರೆ. ಈ ಹಿಂದೆ ಉರಿ ಚಿತ್ರದಲ್ಲಿ ವಿಕ್ಕಿ ಕೌಶಲ್ ಪಾತ್ರಕ್ಕೆ ನ್ಯಾಯ ಒದಗಿಸಿದ್ದರು ಎಂದು ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ.

    https://twitter.com/ParijatSingh23/status/1164784448690241537

  • ವಿಶ್ವಕಪ್ ಬಗ್ಗೆ ಪೋಸ್ಟ್ ಹಾಕಿ ಟ್ರೋಲ್ ಆದ ವಿವೇಕ್

    ವಿಶ್ವಕಪ್ ಬಗ್ಗೆ ಪೋಸ್ಟ್ ಹಾಕಿ ಟ್ರೋಲ್ ಆದ ವಿವೇಕ್

    ಮುಂಬೈ: ಬಾಲಿವುಡ್ ನಟ ವಿವೇಕ್ ಒಬೇರಾಯ್ ವಿಶ್ವಕಪ್ ಬಗ್ಗೆ ಜಿಫ್ ವಿಡಿಯೋ ಟ್ವೀಟ್ ಮಾಡುವ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಆಗುತ್ತಿದ್ದಾರೆ.

    ಭಾರತ ತಂಡ ಸೆಮಿ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ ವಿರುದ್ಧ ಸೋಲು ಕಂಡಿತ್ತು. ಈ ಬಗ್ಗೆ ವಿವೇಕ್, ಜಿಫ್ ವಿಡಿಯೋವನ್ನು ಟ್ವೀಟ್ ಮಾಡಿಕೊಂಡಿದ್ದಾರೆ. ಇದನ್ನು ನೋಡಿದ ಅಭಿಮಾನಿಗಳು ಟ್ರೋಲ್ ಮಾಡಲು ಶುರು ಮಾಡಿದ್ದಾರೆ.

    ವಿವೇಕ್ ಟ್ವೀಟ್ ಮಾಡಿರುವ ವಿಡಿಯೋದಲ್ಲಿ ನೀಲಿ ಬಣ್ಣದ ಟೀ-ಶರ್ಟ್ ಧರಿಸಿ ಬರುತ್ತಿದ್ದ ವ್ಯಕ್ತಿಯನ್ನು ಯುವತಿಯೊಬ್ಬಳು ತಬ್ಬಿಕೊಳ್ಳುವ ರೀತಿ ಆತನ ಮುಂದೆ ಹೋಗುತ್ತಾಳೆ. ಬಳಿಕ ಆ ವ್ಯಕ್ತಿ ಹಿಂದೆ ಬರುತ್ತಿದ್ದ ಮತ್ತೊಬ್ಬ ವ್ಯಕ್ತಿಯನ್ನು ಯುವತಿ ತಬ್ಬಿಕೊಂಡಿದ್ದಾಳೆ. ಈ ವಿಡಿಯೋ ಹಾಕಿ ವಿವೇಕ್ ಅದಕ್ಕೆ, “ವಿಶ್ವಕಪ್‍ನ ಸೆಮಿಫೈನಲ್‍ನಲ್ಲಿ ಭಾರತದ ಅಭಿಮಾನಿಗಳಿಗೆ ಇದೇ ರೀತಿ ಆಗಿದೆ” ಎಂದು ಕ್ಯಾಪ್ಷನ್ ಕೊಟ್ಟಿದ್ದಾರೆ.

    ವಿವೇಕ್ ಅವರ ಟ್ವೀಟ್ ನೋಡಿ ಕೆಲವರು ‘ನೀವು ನಿಮ್ಮ ವೃತ್ತಿಜೀವನದ ಆಕಾಂಕ್ಷೆಗಳ ಹಿಂದೆ ಹೊರಟಿದ್ದಾಗ ನಿಮಗೂ ಹೀಗೆ ಆಗಿದೆ. ನಿಮ್ಮ ಯಾವುದಾದರೂ ಸಿನಿಮಾ 50 ಕೋಟಿ ರೂ. ದಾಟಿದ್ದರೆ ಹೇಳಿ ನಾನು ಅದನ್ನು ವೀಕ್ಷಿಸಲು ಇಷ್ಟಪಡುತ್ತೇನೆ’ ಎಂದು ಟ್ವೀಟ್ ಮಾಡಿದ್ದಾರೆ. ಮತ್ತೆ ಕೆಲವರು ನಮ್ಮ ಭಾರತ ತಂಡ ಎಲ್ಲ ತಂಡದ ವಿರುದ್ಧ ಗೆಲುವು ಸಾಧಿಸಿ ಸೆಮಿ ಫೈನಲ್ ತಲುಪಿದೆ. ನಿಮ್ಮ ತರಹ ಫ್ಲಾಪ್ ಸಿನಿಮಾಗಳನ್ನು ಮಾಡಿಲ್ಲ. ಭಾರತ ತಂಡವನ್ನು ಗೌರವಿಸಿ ಎಂದು ಕಾಮೆಂಟ್ ಮಾಡಿದ್ದಾರೆ.

    ಈ ಹಿಂದೆ ವಿವೇಕ್ ಸಲ್ಮಾನ್ ಮತ್ತು ಐಶ್ವರ್ಯ ಜೊತೆಗಿನ ಫೋಟೋ ಹಾಕಿ Opinion Poll, ವಿವೇಕ್-ಐಶ್ವರ್ಯಾ ಫೋಟೋಗೆ Exit Poll ಕೊನೆಗೆ ಅಭಿಷೇಕ್ ಬಚ್ಚನ್, ಐಶ್ವರ್ಯ ಮತ್ತು ಆರಾಧ್ಯ ಜೊತೆಗಿನ ಫೋಟೋಗೆ Result ಎಂದು ಬರೆಯಲಾಗಿದೆ. ಈ ಮೂರು ಫೋಟೋಗಳನ್ನು ಸೇರಿಸಿರುವ ಟ್ರೋಲ್ ವಿವೇಕ್ ಹಂಚಿಕೊಂಡಿದ್ದರು.

  • ವಿವೇಕ್ ಒಬೇರಾಯ್ ಟ್ವೀಟ್‍ಗೆ ಸಲ್ಮಾನ್ ಮೊದಲ ಪ್ರತಿಕ್ರಿಯೆ

    ವಿವೇಕ್ ಒಬೇರಾಯ್ ಟ್ವೀಟ್‍ಗೆ ಸಲ್ಮಾನ್ ಮೊದಲ ಪ್ರತಿಕ್ರಿಯೆ

    ಮುಂಬೈ: ನಟ ವಿವೇಕ್ ಒಬೇರಾಯ್ ವಿವಾದಾತ್ಮಕ ಟ್ವೀಟ್‍ಗೆ ಬಾಲಿವುಡ್ ಸುಲ್ತಾನ್ ಸಲ್ಮಾನ್ ಖಾನ್ ತಮ್ಮ ಮೊದಲ ಪ್ರತಿಕ್ರಿಯೆಯನ್ನ ನೀಡಿದ್ದಾರೆ.

    ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಸಲ್ಮಾನ್ ಖಾನ್ ಅವರಿಗೆ ವಿವಾದಾತ್ಮಕ ಟ್ವೀಟ್ ಕುರಿತಾಗಿ ಮಾಧ್ಯಮಗಳು ಪ್ರಶ್ನೆ ಮಾಡಿದ್ದವು. ನನಗೆ ಬಹಳ ಕೆಲಸಗಳಿವೆ. ನಾನು ಕೆಲಸ ಮಾಡಲೇ, ಮೀಮ್ಸ್ ಗಳನ್ನು ನೋಡುತ್ತಾ ಕುಳಿತುಕೊಳ್ಳಲೇ ಎಂದು ಕಿಡಿಕಾರಿದ್ದಾರೆ.

    ಭಾರತ್ ಸಿನಿಮಾ ಪ್ರಚಾರದ ಸಂದರ್ಭದಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ್ದ ಸಲ್ಮಾನ್ ಖಾನ್, ಸಾಮಾಜಿಕ ಜಾಲತಾಣಗಳತ್ತ ನಾನು ಹೆಚ್ಚು ಗಮನ ಕೊಡಲ್ಲ. ಮೊದಲಿನಂತೆ ಸೋಶಿಯಲ್ ಮೀಡಿಯಾದಲ್ಲಿಯೂ ಹೆಚ್ಚು ಆ್ಯಕ್ಟೀವ್ ಆಗಿರಲ್ಲ. ಕಾಲಹರಣಕ್ಕಾಗಿ ಅನಾವಶ್ಯಕ ಟ್ವೀಟ್‍ಗಳನ್ನು ಮಾಡಲ್ಲ. ನನಗೆ ನನ್ನದೇ ಆದ ಕೆಲಸಗಳಿವೆ. ಕೆಲಸದತ್ತ ಗಮನ ನೀಡದೇ ಯಾರೋ ಮಾಡಿದ ಟ್ವೀಟ್ ಮತ್ತು ಮೀಮ್ಸ್ ನೋಡುತ್ತಾ ಸಮಯ ವ್ಯರ್ಥ ಮಾಡಲ್ಲ ಎಂದು ಖಡಕ್ ಮಾತನ್ನು ಆಡಿದ್ದಾರೆ.

    ಲೋಕಸಭಾ ಚುನಾವಣೋತ್ತರ ಸಮೀಕ್ಷೆಗಳು ಹೊರ ಬಂದ ಮರುದಿನ ವಿವೇಕ್ ಒಬೇರಾಯ್, ನಟಿ ಐಶ್ವರ್ಯಾ ರೈ ವೈವಾಹಿಕ ಪೂರ್ವ ಖಾಸಗಿ ಜೀವನವನ್ನು ಬಿಂಬಿಸುವ ಮೀಮ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದರು. ಎಕ್ಸಿಟ್ ಪೋಲ್ ಮೀಮ್ ವಿವಾದಕ್ಕೆ ಕಾರಣವಾಗುತ್ತಲೇ ಸ್ಪಷ್ಟನೆ ನೀಡಿದ ವಿವೇಕ್ ಒಬೇರಾಯ್ ಕ್ಷಮೆ ಕೇಳಿ ಟ್ವೀಟ್ ಡಿಲೀಟ್ ಮಾಡಿದ್ದರು. ಈ ಮೀಮ್ ಟ್ವೀಟ್ ನಲ್ಲಿ ಐಶ್ವರ್ಯಾ ಮತ್ತು ಸಲ್ಮಾನ್ ಖಾನ್ ಜೊತೆಗಿನ ಫೋಟೋವನ್ನು ಬಳಸಿಕೊಳ್ಳಲಾಗಿತ್ತು.

  • ಎಕ್ಸಿಟ್ ಪೋಲ್ ಪೋಸ್ಟ್‌ಗೆ ಕ್ಷಮೆಯಾಚಿಸಿದ ವಿವೇಕ್ ಒಬೇರಾಯ್

    ಎಕ್ಸಿಟ್ ಪೋಲ್ ಪೋಸ್ಟ್‌ಗೆ ಕ್ಷಮೆಯಾಚಿಸಿದ ವಿವೇಕ್ ಒಬೇರಾಯ್

    ಮುಂಬೈ: ಬಾಲಿವುಡ್ ನಟ ವಿವೇಕ್ ಒಬೇರಾಯ್ ಎಕ್ಸಿಟ್ ಪೋಲ್ ಟ್ರೋಲ್‍ನ ತಮ್ಮ ಟ್ವಿಟ್ಟರಿನಲ್ಲಿ ಹಂಚಿಕೊಂಡು ವಿವಾದಕ್ಕೆ ಗುರಿ ಆಗಿದ್ದರು. ಈಗ ವಿವೇಕ್ ಈ ಬಗ್ಗೆ ಅಭಿಮಾನಿಗಳಲ್ಲಿ ಕ್ಷಮೆಯಾಚಿಸಿದ್ದಾರೆ.

    ಈ ಬಗ್ಗೆ ಟ್ವೀಟ್ ಮಾಡಿದ ನಟ ವಿವೇಕ್, “ಕೆಲವು ಬಾರಿ ನಾವು ಮೊದಲು ನೋಡಿದಾಗ ಅದು ನಮಗೆ ತಮಾಷೆಯಾಗಿ ಕಾಣಿಸುತ್ತದೆ. ಆದರೆ ಬೇರೆಯವರಿಗೆ ತಮಾಷೆಯಾಗಿ ಕಾಣಿಸುವುದಿಲ್ಲ. ನಾನು ಕಳೆದ 10 ವರ್ಷದಿಂದ ಮಹಿಳಾ ಶಕ್ತಿಕರಣಕ್ಕಾಗಿ ಕೆಲಸ ಮಾಡುತ್ತಿದ್ದೇನೆ. ಇದುವರೆಗೂ 2 ಸಾವಿರಕ್ಕೂ ಹೆಚ್ಚು ವಂಚಿತ ಮಹಿಳೆಯರನ್ನು ಸಮಾಜದ ಮುಂದೆ ತಂದಿದ್ದು, ಇಂದು ಎಲ್ಲರೂ ಸಂತೋಷದ ಜೀವನ ನಡೆಸುತ್ತಿದ್ದಾರೆ” .

    ಮತ್ತೊಂದು ಟ್ವೀಟ್‍ನಲ್ಲಿ, “ನನ್ನ ರಿಪ್ಲೈನಿಂದ ಯಾವುದಾದರೂ ಮಹಿಳೆಯರ ಭಾವನೆಗೆ ಧಕ್ಕೆ ತಂದಿದ್ದರೆ, ತಪ್ಪನ್ನು ಸುಧಾರಿಸಿಕೊಳ್ಳಲು ನನ್ನನ್ನು ಕ್ಷಮಿಸಿ ಬಿಡಿ” ಎಂದು ಬರೆದು ಟ್ವೀಟ್ ಮಾಡಿದಲ್ಲದೆ ನಾನು ಹಿಂದಿನ ಟ್ವೀಟ್ ಡಿಲೀಟ್ ಮಾಡುತ್ತಿದ್ದೇನೆ” ಎಂದು ಟ್ವೀಟ್‍ನಲ್ಲಿ ಉಲ್ಲೇಖಿಸಿದ್ದಾರೆ.

    ಬಾಲಿವುಡ್ ನಟ ವಿವೇಕ್ ಒಬೇರಾಯ್ ಸೋಮವಾರ ಮಧ್ಯಾಹ್ನ ಮಾಡಿದ್ದ ಎಕ್ಸಿಟ್ ಪೋಲ್ ಪೋಸ್ಟ್ ಟ್ವೀಟ್ ವಿವಾದಕ್ಕೆ ಕಾರಣವಾಗಿತ್ತು. ನಟಿ ಸೋನಂ ಕಪೂರ್, ಟೆನ್ನಿಸ್ ಆಟಗಾರ್ತಿ ಜ್ವಾಲಾ ಗುಟ್ಟಾ ಸೇರಿದಂತೆ ದೇಶದ ಮಹಿಳೆಯರ ಕೆಂಗಣ್ಣಿಗೆ ವಿವೇಕ್ ಟ್ವೀಟ್ ಗುರಿಯಾಗಿತ್ತು.

    ಬಿಗ್-ಬಿ ಅಮಿತಾಬ್ ಬಚ್ಚನ್ ಸೊಸೆಯಾಗಿರುವ ಐಶ್ವರ್ಯಾ ರೈ ಅವರ ವೈವಾಹಿಕ ಪೂರ್ವ ಸಂಬಂಧದ ವಿಚಾರಗಳನ್ನು ವಿವೇಕ್ ಒಬೇರಾಯ್ ಕೆಣಕ್ಕಿದ್ದು, ಮಹಿಳೆಯರ ಆಕ್ರೋಶಕ್ಕೆ ಕಾರಣವಾಗಿತ್ತು. 2006ರಲ್ಲಿ ಅಭಿಷೇಕ್ ಬಚ್ಚನ್ ಅವರನ್ನು ಮದುವೆಯಾಗುವ ಮೂಲಕ ಐಶ್ವರ್ಯಾ ತಮ್ಮ ಬಗ್ಗೆ ಬಾಲಿವುಡ್ ಅಂಗಳದಲ್ಲಿದ್ದ ಅಂತೆ-ಕಂತೆಗಳಿಗೆ ಪೂರ್ಣ ವಿರಾಮ ಹಾಕಿದ್ದರು. 7 ವರ್ಷದ ಮುದ್ದು ಮಗಳ ತಾಯಿಯಾಗಿರುವ ಐಶ್ವರ್ಯಾ ಯಾವುದೇ ವಿವಾದಗಳಿಗೆ ಗುರಿಯಾಗದೇ ಖಾಸಗಿ ಜೀವನದಲ್ಲಿ ಖುಷಿಯಾಗಿದ್ದಾರೆ.

    ವಿವಾದಾತ್ಮಕ ಟ್ವೀಟ್‍ನಲ್ಲಿ ಏನಿತ್ತು?
    ಸಲ್ಮಾನ್ ಮತ್ತು ಐಶ್ವರ್ಯ ಜೊತೆಗಿನ ಫೋಟೋ ಹಾಕಿ Opinion Poll, ವಿವೇಕ್-ಐಶ್ವರ್ಯಾ ಫೋಟೋಗೆ Exit Poll ಕೊನೆಗೆ ಅಭಿಷೇಕ್ ಬಚ್ಚನ್, ಐಶ್ವರ್ಯ ಮತ್ತು ಆರಾಧ್ಯ ಜೊತೆಗಿನ ಫೋಟೋಗೆ Result ಅಂತಾ ಬರೆಯಲಾಗಿದೆ. ಈ ಮೂರು ಫೋಟೋಗಳನ್ನು ಸೇರಿಸಿರುವ ಟ್ರೋಲ್ ವಿವೇಕ್ ಹಂಚಿಕೊಳ್ಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.