Tag: VK Singh

  • ಏರ್ ಸ್ಟ್ರೈಕ್‍ನಲ್ಲಿ ಸುಮಾರು 250 ಉಗ್ರರು ಬಲಿ: ಕೇಂದ್ರ ಸಚಿವ ವಿಕೆ ಸಿಂಗ್

    ಏರ್ ಸ್ಟ್ರೈಕ್‍ನಲ್ಲಿ ಸುಮಾರು 250 ಉಗ್ರರು ಬಲಿ: ಕೇಂದ್ರ ಸಚಿವ ವಿಕೆ ಸಿಂಗ್

    ನವದೆಹಲಿ: ಪುಲ್ವಾಮಾ ಭಯೋತ್ಪಾದಕ ದಾಳಿ ಪ್ರತಿಕಾರವಾಗಿ ಭಾರತ ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿದ ದಾಳಿಯಲ್ಲಿ ಸುಮಾರು 250 ಉಗ್ರರು ಸಾವನ್ನಪ್ಪಿರುವ ಸಾಧ್ಯತೆ ಇದೆ ಎಂದು ರಕ್ಷಣಾಖಾತೆ ರಾಜ್ಯ ಸಚಿವ ವಿಕೆ ಸಿಂಗ್ ಹೇಳಿದ್ದಾರೆ.

    ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಭಾರತೀಯ ವಾಯುಸೇನೆ ಪಾಕಿಸ್ತಾನ ಉಗ್ರ ನೆಲೆಗಳ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲಿ ಸುಮಾರು 250 ಉಗ್ರರು ಸಾವನ್ನಪ್ಪಿರುವ ಸಾಧ್ಯತೆ ಇದೆ. ಭಾರತ ಏರ್ ಸ್ಟ್ರೈಕ್ ಉಗ್ರರ ನೆಲೆಗಳ ಮೇಲೆ ಮಾತ್ರ ನಡೆಸುವ ಉದ್ದೇಶ ಹೊಂದಿತ್ತು. ಏಕೆಂದರೆ ಜನವಸತಿ ಪ್ರದೇಶದಲ್ಲಿ ದಾಳಿ ನಡೆಸಿದರೆ ನಾಗರಿಕರು ಸಾವನ್ನಪ್ಪುವ ಕಾರಣದಿಂದ ಈ ನಿರ್ಧಾರವನ್ನು ಕೈಗೊಳ್ಳಲಾಗಿತ್ತು. ಅದ್ದರಿಂದ ಜನವಸತಿಯಿಂದ ದೂರ ನಿರ್ಮಾಣ ಮಾಡಲಾಗಿದ್ದ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಲಾಗಿದೆ ಎಂದು ಸ್ಪಷ್ಟನೆ ನೀಡಿದರು.

    ಅಮಿತ್ ಶಾ 250 ಮಂದಿ ಸಾವನ್ನಪ್ಪಿದ್ದಾರೆ ಎಂದು ಹೇಳಿಕೆ ನೀಡಿದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಬಾಲಕೋಟ್ ಕಟ್ಟಡದಲ್ಲಿ ನೆಲೆಸಿದ್ದ ವ್ಯಕ್ತಿಗಳನ್ನು ಆಧಾರಿಸಿ ಅವರು ಹೇಳಿಕೆ ಕೊಟ್ಟಿದ್ದಾರೆ. ಅವರು ಅಧಿಕೃತವಾಗಿ 250 ಮಂದಿ ಸಾವನ್ನಪ್ಪಿದ್ದಾರೆ ಎಂದು ಹೇಳಿಲ್ಲ. ಅಷ್ಟು ಮಂದಿ ಸಾವನ್ನಪ್ಪಿರಬಹುದು ಎಂದು ಅಂದಾಜಿನಲ್ಲಿ ಹೇಳಿದ್ದಾರೆ ಅಷ್ಟೇ ಎಂದು ತಿಳಿಸಿದರು.

    ಕಾಂಗ್ರೆಸ್ ಪಕ್ಷದ ವಕ್ತಾರರದ ದಿಗ್ವಿಜಯ್ ಸಿಂಗ್ ಏರ್ ಸ್ಟ್ರೈಕ್ ನಡೆಸಿರುವ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು. ಅಲ್ಲದೇ ಪುಲ್ವಾಮಾ ದಾಳಿ ಒಂದು ಘಟನೆ ಆಕ್ಸಿಡೆಂಟ್ ಮಾತ್ರ ಎಂದು ಶಂಕೆ ವ್ಯಕ್ತಪಡಿಸಿದ್ದರು. ಈ ಹೇಳಿಕೆಗೆ ವಿಕೆ ಸಿಂಗ್ ತಿರುಗೇಟು ನೀಡಿ ದಿಗ್ವಿಜಯ್ ಸಿಂಗ್ ಸೇರಿಂದತೆ ಏರ್ ಸ್ಟ್ರೈಕ್ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಬಗ್ಗೆ ಕಿಡಿಕಾರಿದ್ದಾರೆ. ನಾನು ದಿಗ್ವಿಜಯ್ ಸಿಂಗ್‍ರನ್ನು ಗೌರವದಿಂದ ಪ್ರಶ್ನೆ ಮಾಡುತ್ತಿದ್ದೇನೆ. ರಾಜೀವ್ ಗಾಂಧಿ ಅವರ ಹತ್ಯೆ ಅಪಘಾತವೇ ಅಥವಾ ಉಗ್ರರ ದಾಳಿಯೇ ಎಂದು ಪ್ರಶ್ನಿಸಿದರು.

    ಗುಜರಾತ್‍ನಲ್ಲಿ ಮಾತನಾಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಅಮಿತ್ ಶಾ, ಭಾರತದ ವಾಯುಪಡೆ ಬಾಲಕೋಟ್ ಮೇಲೆ ನಡೆಸಿದ ದಾಳಿಯಲ್ಲಿ 250ಕ್ಕೂ ಹೆಚ್ಚು ಉಗ್ರರು ಸಾವನ್ನಪ್ಪಿದ್ದಾರೆ. ಉರಿಯಲ್ಲಿ ಉಗ್ರರ ದಾಳಿ ಬಳಿಕ ಭಾರತ ಪ್ರತೀಕಾರವಾಗಿ ಸರ್ಜಿಕಲ್ ಸ್ಟ್ರೈಕ್ ನಡೆಸಿತ್ತು. ಪುಲ್ವಾಮಾ ದಾಳಿ ಬಳಿಕ ಪಾಕಿಸ್ತಾನದ ಉಗ್ರರು ಅಲರ್ಟ್ ಆಗಿದ್ದರಿಂದ ವಾಯು ದಾಳಿ ನಡೆಸಲಾಗಿದೆ. ಪುಲ್ವಾಮಾ ದಾಳಿಯ ಬಳಿಕ ಫೆಬ್ರವರಿ 26 ರಂದು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಏರ್ ಸ್ಟ್ರೈಕ್ ನಡೆಸಲು ಅನುಮತಿ ನೀಡಿತ್ತು. ಭಾರತ ಯಶಸ್ವಿಯಾಗಿ ಉಗ್ರರ ತಾಣಗಳನ್ನು ಯಶಸ್ವಿಯಾಗಿ ಧ್ವಂಸಗೊಳಿಸಿ ಯಾವುದೇ ಹಾನಿಗೆ ಒಳಗಾಗದೇ ಭಾರತಕ್ಕೆ ಹಿಂದಿರುಗಿತ್ತು ಎಂದು ಹೇಳಿದ್ದರು.

    ಏರ್ ಸ್ಟ್ರೈಕ್ ನಲ್ಲಿ ಎಷ್ಟು ಮಂದಿ ಸಾವನ್ನಪ್ಪಿದ್ದಾರೆ ಎನ್ನುವ ಪ್ರಶ್ನೆಗೆ ವಾಯುಸೇನೆ ಉತ್ತರ ನೀಡಿರಲಿಲ್ಲ. ಏರ್ ಚೀಫ್ ಮಾರ್ಷಲ್ ಧನೋವಾ ಅವರು ಸತ್ತವರ ಹೆಣವನ್ನು ಲೆಕ್ಕಹಾಕುವುದು ನಮ್ಮ ಕೆಲಸವಲ್ಲ. ನಮಗೆ ಏನು ಗುರಿಯನ್ನು ನೀಡಲಾಗಿತ್ತೋ ಆ ಗುರಿಯನ್ನು ಯಶಸ್ವಿಯಾಗಿ ಹೊಡೆದು ಹಾಕಿದ್ದೇವೆ ಎಂದು ಹೇಳಿದ್ದರು.

    ಕೇಂದ್ರ ಸರ್ಕಾರ ಅಧಿಕೃತವಾಗಿ ಎಷ್ಟು ಮಂದಿ ಉಗ್ರರು ಸಾವನ್ನಪ್ಪಿದ್ದಾರೆ ಎನ್ನುವುದನ್ನು ತಿಳಿಸಿರಲಿಲ್ಲ. ಈ ಮಧ್ಯೆ ಅಮಿತ್ ಶಾ 250 ಮಂದಿ ಸಾವನ್ನಪ್ಪಿದ್ದಾರೆ ಎಂದು ಹೇಳಿಕೆ ನೀಡಿದ್ದರು. ಹೀಗಾಗಿ ಕಾಂಗ್ರೆಸ್ ನಾಯಕರು ಕಿಡಿಕಾರಿ, ದೇಶದ ರಕ್ಷಣಾ ಮಾಹಿತಿ ಬಿಜೆಪಿ ಪಕ್ಷದ ಅಧ್ಯಕ್ಷರ ಕೈಗೆ ಹೇಗೆ ಸಿಕ್ಕಿತ್ತು ಎಂದು ಪ್ರಶ್ನಿಸಿದ್ದರು. ಈಗ ಏರ್ ಸ್ಟ್ರೈಕ್ ನಡೆದ ಬಳಿಕ ಇದೇ ಮೊದಲ ಬಾರಿಗೆ ವಿಕೆ ಸಿಂಗ್ 250 ಮಂದಿ ಮೃತಪಟ್ಟಿದ್ದಾರೆ ಎಂದು ಹೇಳುವ ಮೂಲಕ ಕೇಂದ್ರ ಸರ್ಕಾರ ನೀಡಬೇಕಾದ ಉತ್ತರವನ್ನು ನೀಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸುಳ್ಳೇ ಸುಳ್ಳು…! ಮತ್ತೆ ಸುಳ್ಳು ಹೇಳಿದ ಯಡಿಯೂರಪ್ಪ! – ನೀವು ಹೇಳಿದ್ದನ್ನು ಮತ್ತೊಮ್ಮೆ ಕೇಳಿಸ್ಕೊಳ್ಳಿ

    ಸುಳ್ಳೇ ಸುಳ್ಳು…! ಮತ್ತೆ ಸುಳ್ಳು ಹೇಳಿದ ಯಡಿಯೂರಪ್ಪ! – ನೀವು ಹೇಳಿದ್ದನ್ನು ಮತ್ತೊಮ್ಮೆ ಕೇಳಿಸ್ಕೊಳ್ಳಿ

    ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಸಿಎಂ ಯಡಿಯೂರಪ್ಪ ಬಿಜೆಪಿಯ ಮರ್ಯಾದೆಯನ್ನು ರಾಷ್ಟ್ರ ಮಟ್ಟದಲ್ಲಿ ಹರಾಜು ಹಾಕಿದ್ದಾರೆ. ಆದರೆ ಈ ಹೇಳಿಕೆಯ ಕಸಿವಿಸಿ ಬಿಜೆಪಿ ರಾಷ್ಟ್ರ ಮಟ್ಟದ ನಾಯಕರಿಗೆ ಆಗಿದೆ ಎಂದು ಅರಿವಾಗುತ್ತಿದ್ದಂತೆಯೇ, ಬಿ.ಎಸ್.ವೈ ಈಗ ತಮ್ಮ ಮೇಲಿನ ಆರೋಪವನ್ನು ಮಾಧ್ಯಮಗಳ ಮೇಲೆ ಹಾಕುವ ಯತ್ನ ಮಾಡಿದ್ದಾರೆ. ಆದರೆ ಯಡಿಯೂರಪ್ಪನವರೇ ನೀವು ನಿನ್ನೆ ಅರ್ಥಾತ್ ಬುಧವಾರ ಏನು ಮಾತಾಡಿದ್ದೀರಿ ಎಂದು ನಿಮಗೆ ಮರೆತಿದ್ದರೆ ನಿನ್ನೆ ನೀವು ಚಿತ್ರದುರ್ಗದಲ್ಲಿ ಏನ್ ಹೇಳಿದ್ರಿ ಅನ್ನೋದನ್ನು ನೀವೇ ಒಂದ್ಸಾರಿ ಕೇಳಿಸಿಕೊಳ್ಳಿ.

    ರಾಷ್ಟ್ರಮಟ್ಟದಲ್ಲಿ ಬಿಜೆಪಿ ನಾಯಕರು ತಲೆ ತಗ್ಗಿಸುವಂತಹ ಹೇಳಿಕೆ ನೀಡಿದ ಯಡಿಯೂರಪ್ಪ ಅವರು ಇಂದು ಟ್ವಿಟ್ಟರ್ ನಲ್ಲಿ, ನನ್ನ ಹೇಳಿಕೆಯನ್ನು ಬೇರೆ ರೀತಿ ಅರ್ಥೈಸಲಾಗಿದೆ. ನಾನು ಪರಿಸ್ಥಿತಿ ಬಿಜೆಪಿ ಪರವಾಗಿದೆ ಅಂತಾ ಹೇಳಿದ್ದೇನೆ. ಇದನ್ನ ನಾನು ಹಲವು ತಿಂಗಳಿನಿಂದ ಹೇಳುತ್ತಾ ಬಂದಿದ್ದೇನೆ. ಮೋದಿ ನಾಯಕತ್ವದಲ್ಲಿ ಕನಿಷ್ಠ 22 ಸೀಟು ಗೆಲ್ಲುವುದಾಗಿ ಹೇಳುತ್ತಿದ್ದೇನೆ. ಈ ರೀತಿ ನಾನು ಹೇಳಿರೋದು ಇದೇ ಮೊದಲಲ್ಲ ಎಂದು ಟ್ವೀಟ್ ಮಾಡಿ ಸ್ಪಷ್ಟನೆ ನೀಡಿದರು.

    ಆದರೆ ಈ ಟ್ವೀಟ್ ಮಾಡುವುದಕ್ಕೂ ಮುನ್ನ ಇಂದು ಯಾದಗಿರಿಯಲ್ಲಿದ್ದ ಯಡಿಯೂರಪ್ಪ, ನಾನು ಏನೂ ಪ್ರತಿಕ್ರಿಯೆ ನೀಡಲು ಇಷ್ಟಪಡುವುದಿಲ್ಲ ಎಂದು ಹೇಳಿದ್ದರು. ಇದಾಗಿ ಗಂಟೆಗಳು ಕಳೆಯುವ ಮುನ್ನವೇ ನಿನ್ನೆ ನೀಡಿದ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎನ್ನುತ್ತಿದ್ದಾರೆ.

    https://www.youtube.com/watch?v=LLIlyAySnxg

    ಈ ಎಲ್ಲದರ ನಡುವೆಯೇ ವಿದೇಶಾಂಗ ಇಲಾಖೆಯ ರಾಜ್ಯ ಸಚಿವರಾಗಿರುವ ವಿ.ಕೆ.ಸಿಂಗ್ ಅವರು ಟ್ವಿಟ್ಟರ್ ನಲ್ಲೇ ಯಡಿಯೂರಪ್ಪಗೆ ಮಂಗಳಾರತಿ ಮಾಡಿದ್ದಾರೆ. ನಮ್ಮ ದೇಶದ ಕಾರ್ಯಾಚರಣೆ ಚುನಾವಣೆಯಲ್ಲಿ ಕೆಲವು ಎಕ್ಸ್ ಟ್ರಾ ಸೀಟುಗಳನ್ನು ಗೆಲ್ಲಲು ಮಾಡಿದ್ದಲ್ಲ. ನಾವೆಲ್ಲಾ ಜೊತೆಯಾಗಿದ್ದೇವೆ. ದೇಶದ ಹಿತದೃಷ್ಟಿಯಿಂದ ಹಾಗೂ ಜನರ ಸುರಕ್ಷತೆಗಾಗಿ ನಾವು ಈ ಕಾರ್ಯಾಚರಣೆ ಮಾಡಿದ್ದೇವೆ ಎಂದು ಯಡಿಯೂರಪ್ಪ ಅವರ ಹೇಳಿಕೆಯನ್ನು ಖಂಡಿಸಿದ್ದರು.

    ಅಲ್ಲದೆ ಇದರ ಜೊತೆಗೆ ಮಾಜಿ ಪ್ರಧಾನಿ ವಾಜಪೇಯಿಯವರು ಲೋಕಸಭೆಯಲ್ಲಿ ಮಾಡಿದ್ದ ಭಾಷಣದ ತುಣುಕು ಇರುವ ಯೂಟ್ಯೂಬ್ ಲಿಂಕ್ ಹಾಕಿದ್ದರು. ಅಂದಿನ ಭಾಷಣದಲ್ಲಿ ಮೋದಿಯವರು ಏನು ಹೇಳಿದ್ದರು ಎಂಬುದನ್ನೂ ಒಂದು ಸಾರಿ ಕೇಳಿಸ್ಕೊಳ್ಳಿ.

    ಈ ಮಧ್ಯೆ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು, ಇಡೀ ದೇಶ ಕೇಂದ್ರ, ಸೇನೆಗೆ ಬೆಂಬಲಿಸುತ್ತಿದೆ. ಆದರೆ ಬಿಜೆಪಿ ನಾಯಕರು ಲೆಕ್ಕಾಚಾರದಲ್ಲಿ ತೊಡಗಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್‍ವೈ ಹೆಚ್ಚು ಸೀಟಿನ ಲೆಕ್ಕಾಚಾರದಲ್ಲಿದ್ದಾರೆ. ಉಗ್ರರ ದಾಳಿ, ಯುದ್ಧವನ್ನು ಇಟ್ಟುಕೊಂಡು ರಾಜಕೀಯ ಮಾಡುತ್ತಿದೆ. ಇದು ನಾಚಿಕೆಗೇಡಿನ ವಿಚಾರ. ಸೈನಿಕರಿಗೆ ಮಾಡುತ್ತಿರುವ ಅವಮಾನ ಎಂದು ಯಡಿಯೂರಪ್ಪರನ್ನು ಟ್ವೀಟ್ ನಲ್ಲಿ ಕುಟುಕಿದ್ದರು.

    ಈ ಎಲ್ಲ ಬೆಳವಣಿಗೆಗಳ ನಡುವೆಯೇ ಯಡಿಯೂರಪ್ಪ ಅವರ ಟ್ವಿಟ್ಟರ್ ಖಾತೆಯಲ್ಲಿ ನಾನು ಹಾಗೆ ಹೇಳಿದ್ದಲ್ಲ ಎಂಬ ಟ್ವೀಟ್ ಕಾಣಿಸಿಕೊಂಡಿದೆ. ಯಡಿಯೂರಪ್ಪ ಅವರ 22 ಸೀಟಿನ ಹೇಳಿಕೆಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿದೆ.

    ಕೆಟ್ಟ ಮೇಲೆ ಬುದ್ಧಿ ಬಂತು ಎಂಬಂತೆ ನಿಮ್ಮ ತಪ್ಪನ್ನು ಒಪ್ಪಿಕೊಂಡು ನೀವು ಇನ್ನಷ್ಟು ದೊಡ್ಡವರಾಗಬಹುದಿತ್ತು. ಆದರೆ ನಿಮ್ಮ ತಪ್ಪನ್ನು ಬೇರೆಯವರ ಮೇಲೆ ಹಾಕಿದ್ಯಾಕೆ ಯಡಿಯೂರಪ್ಪನವರೇ..?

    ಯಡಿಯೂರಪ್ಪ ಅವರ ಹೇಳಿಕೆಯನ್ನು ಕೇಳಿಸಿಕೊಂಡ ಮೇಲೆ ನಿಮಗೇನನ್ನಿಸಿತು ಎಂಬುದನ್ನು ಕಮೆಂಟ್ ಮಾಡಿ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಉಗ್ರರಿಂದ ಹತ್ಯೆಗೊಳಗಾದ 38 ಭಾರತೀಯರ ಶವಗಳು ಹಸ್ತಾಂತರ

    ಉಗ್ರರಿಂದ ಹತ್ಯೆಗೊಳಗಾದ 38 ಭಾರತೀಯರ ಶವಗಳು ಹಸ್ತಾಂತರ

    ನವದೆಹಲಿ: ಯುದ್ಧಪೀಡಿತ ಇರಾಕ್‍ನ ಮೊಸೆಲ್‍ನಲ್ಲಿ ಐಎಸ್ ಉಗ್ರರಿಂದ ಹತ್ಯೆಗೊಳಗಾಗಿದ್ದ 38 ಭಾರತೀಯರ ಶವಗಳನ್ನು ತರಲು ಕೇಂದ್ರ ಸಚಿವ ವಿಕೆ ಸಿಂಗ್ ಇರಾಕ್‍ಗೆ ತೆರಳಿದ್ದಾರೆ. ಡಿಎನ್‍ಎ ಆಧಾರದಲ್ಲಿ ಶವ ಹಸ್ತಾಂತರ ಪ್ರಕ್ರಿಯೆ ನಡೆದಿದ್ದು ಭಾರತಕ್ಕೆ ಇಂದು ತಡರಾತ್ರಿ ಪಾರ್ಥಿವ ಶರೀರಗಳು ಆಗಮಿಸುವ ಸಾಧ್ಯತೆ ಇದೆ.

    ಮೃತದೇಹಗಳ ಹಸ್ತಾಂತರಕ್ಕೆ ಸಂಬಂಧಿಸಿದಂತೆ ವಿದೇಶಾಂಗ ವ್ಯವಹಾರಗಳ ಖಾತೆ ರಾಜ್ಯ ಸಚಿವ ವಿ.ಕೆ. ಸಿಂಗ್ ಇರಾಕ್ ಗೆ ತೆರಳಿದ್ದಾರೆ. ಈ ಸಂಬಂಧ ಮೇಲ್ವಿಚಾರಣೆ ವಿ.ಕೆ.ಸಿಂಗ್ ನೇತೃತ್ವದಲ್ಲಿ ನಡೆಯಲಿದೆ. ಭಾರತಕ್ಕೆ ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗುವುದು ಅಂತಾ ಹೇಳಲಾಗಿದೆ. ಇತ್ತೀಚೆಗೆ ಕುಟುಂಬಸ್ಥರನ್ನು ಭೇಟಿಯಾಗಿದ್ದ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಮೃತದೇಹಗಳನ್ನು ಒಂದು ವಾರದಲ್ಲಿ ತರಲಾಗುವುದು ಅಂತಾ ಭರವಸೆಯನ್ನು ನೀಡಿದ್ದರು. ಇದನ್ನೂ ಓದಿ: ಇರಾಕ್‍ನಲ್ಲಿ ಐಸಿಸ್‍ನಿಂದ ಹತ್ಯೆಯಾಗಿದ್ದ 39 ಭಾರತೀಯರ ಮೃತ ದೇಹ ಪತ್ತೆ ಮಾಡಿದ್ದು ಹೇಗೆ? 

    ಕಳೆದ ವರ್ಷ ಜುಲೈನಲ್ಲಿ ಸದನಕ್ಕೆ ಮಾಹಿತಿ ನೀಡಿದ್ದ ಸುಷ್ಮಾ ಸ್ವರಾಜ್ ಅವರು, ಅಪಹರಣಕ್ಕೆ ಒಳಗಾಗಿರುವ 39 ಮಂದಿಯ ಖಚಿತ ಮಾಹಿತಿ ದೊರೆಯದ ಹೊರತು ಅವರು ಮೃತ ಪಟ್ಟಿದ್ದಾರೆ ಎಂದು ಪ್ರಕಟಿಸಲು ಸಾಧ್ಯವಿಲ್ಲ ಎಂದು ತಿಳಿಸಿದ್ದರು. ಆದರೆ ಮಾರ್ಚ್ ನಲ್ಲಿ ಖಚಿತ ಮಾಹಿತಿಯ ಮೇಲೆ 39 ಮಂದಿಯ ಹತ್ಯೆಯಾಗಿರುವುದನ್ನು ದೃಢಪಡಿಸಿದರು. ಇದನ್ನೂ ಓದಿ: ಕಾಂಗ್ರೆಸ್ ಟ್ವೀಟನ್ನು ರಿಟ್ವೀಟ್ ಮಾಡಿದ್ರು ಸುಷ್ಮಾ ಸ್ವರಾಜ್!

    ಹತ್ಯೆಯಾದ ಭಾರತೀಯ ಮೃತದೇಹದ ಅವಶೇಷಗಳನ್ನು ಭಾರತಕ್ಕೆ ತರಲಾಗುವುದು. ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ವಿಕೆ ಸಿಂಗ್ ಇರಾಕ್ ಗೆ ತೆರಳಿ ಅಲ್ಲಿಂದ ಮೃತರ ಅವಶೇಷಗಳನ್ನು ಅಮೃತಸರ, ಪಾಟ್ನಾ ಹಾಗೂ ಕೋಲ್ಕತ್ತಾಗಳಿಗೆ ತರಲಿದ್ದಾರೆ ಎಂದು ಮಾಹಿತಿ ನೀಡಿದರು.

     

  • ಕಾಂಗ್ರೆಸ್ ಟ್ವೀಟನ್ನು ರಿಟ್ವೀಟ್ ಮಾಡಿದ್ರು ಸುಷ್ಮಾ ಸ್ವರಾಜ್!

    ಕಾಂಗ್ರೆಸ್ ಟ್ವೀಟನ್ನು ರಿಟ್ವೀಟ್ ಮಾಡಿದ್ರು ಸುಷ್ಮಾ ಸ್ವರಾಜ್!

    ನವದೆಹಲಿ: ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ತನ್ನನ್ನು ಗುರಿಯಾಗಿಸಿ ಕಾಂಗ್ರೆಸ್ ಕ್ರಿಯೆಟ್ ಮಾಡಿದ್ದ ಟ್ವಿಟ್ಟರ್ ಪೋಲನ್ನು ರಿಟ್ವೀಟ್ ಮಾಡಿದ್ದಾರೆ.

    ಇರಾಕ್ ನಲ್ಲಿ ಐಸಿಸ್ ಉಗ್ರರ ದಾಳಿಗೆ ಮೃತಪಟ್ಟ 39 ಭಾರತೀಯರ ಸಾವಿಗೆ ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹೊಣೆಗಾರರು ಎಂದು ಕಾಂಗ್ರೆಸ್ ಆರೋಪಿಸಿ ಪೋಲ್ ರಚಿಸಿತ್ತು. 39 ಜನರ ಸಾವಿಗೆ ಕಾರಣರಾದ ಸುಷ್ಮಾ ಸ್ವರಾಜ್ ತಮ್ಮ ಅಧಿಕಾರದಲ್ಲಿ ವಿಫಲವಾಗಿದ್ದಾರೆಯೇ ಎನ್ನುವ ಪ್ರಶ್ನೆಯನ್ನು ಕಾಂಗ್ರೆಸ್ ಕೇಳಿತ್ತು.

    ಮಾರ್ಚ್ 26ರಂದು ಮುಕ್ತಾಯಗೊಂಡ ಈ ಪೋಲ್ ನಲ್ಲಿ 33,879 ಮಂದಿ ವೋಟ್ ಮಾಡಿದ್ದು, 76% ಮಂದಿ ಇಲ್ಲ ಎಂದು ಉತ್ತರಿಸಿದರೆ ಇನ್ನುಳಿದ 24% ಮಂದಿ ಹೌದು ಎಂದು ಉತ್ತರಿಸಿದ್ದರು. ಈ ಪೋಲಿನಲ್ಲಿ ತನ್ನ ಪರವಾಗಿ ಫಲಿತಾಂಶ ಬಂದ ಹಿನ್ನೆಲೆಯಲ್ಲಿ ಸುಷ್ಮಾ ಸ್ವರಾಜ್ ಕಾಂಗ್ರೆಸ್ ಟ್ವೀಟ್ ನ್ನು ರಿಟ್ವೀಟ್ ಮಾಡಿದ್ದಾರೆ.

    ಟ್ವಿಟ್ಟರ್ ನಲ್ಲಿ ಕಾಂಗ್ರೆಸ್ ಕೇಳಿದ ಪ್ರಶ್ನೆಗೆ ಜನ ಸಾಮಾನ್ಯರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಸಾವಿನ ಮನೆಯಲ್ಲೂ ರಾಜಕೀಯ ಮಾಡುತ್ತಿರುವುದು ಸರಿಯಲ್ಲ ಎಂದು ಟೀಕಿಸಿದ್ದಾರೆ.

    2014 ರಲ್ಲಿ ಇರಾಕ್ ನಿಂದ ಐಸಿಸ್ ಅಪಹರಣ ಮಾಡಿದ್ದ 39 ಮಂದಿ ಭಾರತೀಯರನ್ನು ಐಸಿಸ್ ಉಗ್ರರು ಹತ್ಯೆ ಮಾಡಿದ್ದಾರೆ ಎಂದು ವಿದೇಶಾಂಗ ಸಚಿವೆ ಮಾರ್ಚ್ 20ರಂದು ಸುಷ್ಮಾ ಸ್ವರಾಜ್ ರಾಜ್ಯಸಭೆಯಲ್ಲಿ ತಿಳಿಸಿದ್ದರು. ಮೊಸುಲ್ ನಿಂದ ಅಪಹರಣ ಮಾಡಿದವರ ಹತ್ಯೆ ಕುರಿತು ಖಚಿತ ಮಾಹಿತಿ ಪಡಿಸಿಕೊಳ್ಳಲು ಆಳವಾದ ರೇಡಾರ್ ಬಳಕೆ ಮಾಡಲಾಗಿದೆ. 39 ಮೃತದೇಹಗಳಲ್ಲಿ 38 ಮಂದಿಯ ಡಿಎನ್‍ಎ ಸ್ಯಾಪಲ್ ಮ್ಯಾಚ್ ಆಗಿದೆ. 39ನೇ ಮೃತ ದೇಹದ ಡಿಎನ್‍ಎ ಶೇ. 70 ರಷ್ಟು ಮ್ಯಾಚ್ ಆಗಿದೆ ಎಂದು ತಿಳಿಸಿದ್ದರು.

    ಕಳೆದ ವರ್ಷ ಜುಲೈನಲ್ಲಿ ಸದನಕ್ಕೆ ಮಾಹಿತಿ ನೀಡಿದ್ದ ಸುಷ್ಮಾ ಸ್ವರಾಜ್ ಅವರು, ಅಪಹರಣಕ್ಕೆ ಒಳಗಾಗಿರುವ 39 ಮಂದಿಯ ಖಚಿತ ಮಾಹಿತಿ ದೊರೆಯದ ಹೊರತು ಅವರು ಮೃತ ಪಟ್ಟಿದ್ದಾರೆ ಎಂದು ಪ್ರಕಟಿಸಲು ಸಾಧ್ಯವಿಲ್ಲ ಎಂದು ತಿಳಿಸಿದ್ದರು. ಆದರೆ ಇಂದು ಖಚಿತ ಮಾಹಿತಿಯ ಮೇಲೆ 39 ಮಂದಿಯ ಹತ್ಯೆಯಾಗಿರುವುದನ್ನು ದೃಢಪಡಿಸಿದರು. ಇದನ್ನೂ ಓದಿ: ಇರಾಕ್‍ನಲ್ಲಿ ಐಸಿಸ್‍ನಿಂದ ಹತ್ಯೆಯಾಗಿದ್ದ 39 ಭಾರತೀಯರ ಮೃತ ದೇಹ ಪತ್ತೆ ಮಾಡಿದ್ದು ಹೇಗೆ? 

    ಹತ್ಯೆಯಾದ ಭಾರತೀಯ ಮೃತದೇಹದ ಅವಶೇಷಗಳನ್ನು ಭಾರತಕ್ಕೆ ತರಲಾಗುವುದು. ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ವಿಕೆ ಸಿಂಗ್ ಇರಾಕ್ ಗೆ ತೆರಳಿ ಅಲ್ಲಿಂದ ಮೃತರ ಅವಶೇಷಗಳನ್ನು ಅಮೃತಸರ, ಪಾಟ್ನಾ ಹಾಗೂ ಕೋಲ್ಕತ್ತಾಗಳಿಗೆ ತರಲಿದ್ದಾರೆ ಎಂದು ಮಾಹಿತಿ ನೀಡಿದರು.