Tag: Volodymyr Zelenskyy

  • ಅಮೆರಿಕ ನಿರ್ಮಿತ ದೀರ್ಘ ಶ್ರೇಣಿಯ ಕ್ಷಿಪಣಿಗಳಿಂದ ರಷ್ಯಾ ಮೇಲೆ ಉಕ್ರೇನ್‌ ದಾಳಿ

    ಅಮೆರಿಕ ನಿರ್ಮಿತ ದೀರ್ಘ ಶ್ರೇಣಿಯ ಕ್ಷಿಪಣಿಗಳಿಂದ ರಷ್ಯಾ ಮೇಲೆ ಉಕ್ರೇನ್‌ ದಾಳಿ

    ಮಾಸ್ಕೋ/ಕೈವ್‌: ರಷ್ಯಾದ (Russia) ಮೇಲೆ ದೀರ್ಘ ಶ್ರೇಣಿಯ ಕ್ಷಿಪಣಿಗಳನ್ನು ಬಳಸಲು ಅಮೆರಿಕ ಒಪ್ಪಿಗೆ ನೀಡಿದ ಬೆನ್ನಲ್ಲೇ ಉಕ್ರೇನ್‌ (Ukraine) ಅಮೆರಿಕ ನಿರ್ಮಿತ ಕ್ಷಿಪಣಿಗಳಿಂದ (American Missiles) ದಾಳಿ ನಡೆಸಿದೆ. ಒಟ್ಟು 6 ಬ್ಲಾಲಿಸ್ಟಿಕ್‌ ಕ್ಷಿಪಣಿಗಳನ್ನು ತನ್ನ ಮೇಲೆ ಹಾರಿಸಿದೆ ಎಂದು ರಷ್ಯಾದ ರಕ್ಷಣಾ ಸಚಿವಾಲಯ‌ ಹೇಳಿಕೊಂಡಿದೆ.

    ಉಕ್ರೇನ್‌ ಗಡಿಯಿಂದ ಸುಮಾರು 130 ಕಿಮೀ ದೂರದಲ್ಲಿರುವ ಬ್ರಿಯಾನ್ಸ್ಕ್ ಪ್ರದೇಶದ ಕರಾಚೆವ್ ನಗರದಲ್ಲಿರುವ ರಷ್ಯಾದ ಮಿಲಿಟರಿ ಸೌಲಭ್ಯ ಗುರಿಯಾಗಿಸಿ ಈ ದಾಳಿ ನಡೆದಿದೆ. ರಷ್ಯಾ ಸೇನೆಯನ್ನ ಗುರಿಯಾಗಿಸಿ ಉಕ್ರೇನ್‌ ಇದೇ ಮೊದಲ ಬಾರಿಗೆ ಈ ATACMS ಬ್ಯಾಲಿಸ್ಟಿಕ್‌ ಕ್ಷಿಪಣಿ ಪ್ರಯೋಗ ಮಾಡಿದ್ದು, ಕಾರ್ಯಾಚರಣೆ ಯಶಸ್ವಿಯಾಗಿದೆ ಎಂದು ಉಕ್ರೇನ್‌ ಹೇಳಿಕೊಂಡಿರುವುದಾಗಿ ವರದಿಗಳು ತಿಳಿಸಿವೆ.

    ಉಕ್ರೇನ್‌ನ ಇಂಧನ ಮೂಲಸೌಕರ್ಯವನ್ನು ಗುರಿಯಾಗಿಸಿ ರಷ್ಯಾ ಸೇನೆ ಭಾನುವಾರ 120 ಕ್ಷಿಪಣಿಗಳನ್ನು ಹಾರಿಸಿತ್ತು. ಇದರಿಂದ ಇಬ್ಬರು ನಾಗರಿಕರು ಮೃತಪಟ್ಟಿದ್ದರು. ಇದನ್ನೂ ಓದಿ: ಜನಸಂಖ್ಯೆ ಹೆಚ್ಚಳಕ್ಕೆ ರಷ್ಯಾದಲ್ಲಿ ʻಸೆಕ್ಸ್‌ ಸಚಿವಾಲಯʼ ಸ್ಥಾಪನೆಗೆ ಪ್ಲ್ಯಾನ್‌ – ಭಾರತದಲ್ಲಿ ಏನಾಗ್ತಿದೆ?

    1,000 ದಿನಗಳಲ್ಲಿ 10 ಲಕ್ಷ ಮಂದಿ ಸಾವು:
    2022ರ ಫೆಬ್ರವರಿ 24ರಂದು ಶುರುವಾದ ರಷ್ಯಾ-ಉಕ್ರೇನ್ ನಡುವಿನ ಯುದ್ಧ ಬರೋಬ್ಬರಿ ಒಂದು ಸಾವಿರ ದಿನಗಳನ್ನು ಪೂರೈಸಿದೆ. ಈ ಘನಘೋರ ಯುದ್ಧದಲ್ಲಿ ಈವರೆಗೂ ಅಂದಾಜು 10 ಲಕ್ಷ ಮಂದಿ ಬಲಿ ಆಗಿದ್ದಾರೆ. ಲಕ್ಷಾಂತರ ಮಂದಿ ಗಾಯಗೊಂಡಿದ್ದಾರೆ. ಉಕ್ರೇನ್ ಜನಸಂಖ್ಯೆ ಶೇ.25ರಷ್ಟು ಮಂದಿ ಇಲ್ಲವಾಗಿದ್ದಾರೆ. ರಷ್ಯಾ ಜನಸಂಖ್ಯೆಯೂ ಇಳಿಮುಖವಾಗಿದೆ ಎಂದು ಸ್ಥಳೀಯ ಸುದ್ದಿಸಂಸ್ಥೆಗಳು ವರದಿ ಮಾಡಿವೆ. ಇದನ್ನೂ ಓದಿ: 1,000 ದಿನ ಪೂರೈಸಿದ ರಷ್ಯಾ-ಉಕ್ರೇನ್‌ ಯುದ್ಧ; ಪರಮಾಣು ಶಸ್ತ್ರಾಸ್ತ್ರ ಬಳಕೆ ಎಚ್ಚರಿಕೆ ನೀಡಿದ ಪುಟಿನ್‌

    ಉಕ್ರೇನ್‌ನ 40 ಲಕ್ಷ ಮಂದಿ ನಿರಾಶ್ರಿತರಾಗಿದ್ದಾರೆ. 60 ಲಕ್ಷ ಮಂದಿ ವಿದೇಶಗಳಲ್ಲಿ ಆಶ್ರಯ ಪಡೆದಿದ್ದಾರೆ. ಇಷ್ಟೆಲ್ಲಾ ಆದ್ರೂ ಈ ಭೀಕರ ಯುದ್ಧ ನಿಲ್ಲುವಂತೆ ಕಾಣ್ತಿಲ್ಲ. ಇದು ಯುರೋಪ್ ಇತರೆಡೆಗಳಿಗೂ ಹಬ್ಬುವ ಆತಂಕವಿದೆ. ರಷ್ಯಾ ದಾಳಿ ನಡೆಸಬಹುದು.. ಔಷಧಿ, ಬೇಬಿ ಫುಡ್ ಸ್ಟಾಕ್ ಮಾಡಿಕೊಳ್ಳಿ ಎಂದು ನ್ಯಾಟೋ ಕೂಟ ಅಲರ್ಟ್ ಮಾಡಿದೆ.

    ಈ ಹೊತ್ತಲ್ಲೇ ಅಣ್ವಸ್ತ್ರಗಳ ಬಳಕೆಗೆ ಅನುಮತಿಸುವ ನಿಯಮಗಳನ್ನು ಸರಳೀಕರಿಸುವ ಕಡತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್ ಸಹಿ ಹಾಕಿದ್ದಾರೆ. ಅಂದ ಹಾಗೇ, ಜನವರಿ ಆರಂಭದಲ್ಲಿ ಪುಟಿನ್ ಭಾರತ ಪ್ರವಾಸ ಕೈಗೊಳ್ಳಲಿದ್ದಾರೆ..ಆದ್ರೆ, ದಿನಾಂಕ ಇನ್ನೂ ನಿಗದಿ ಆಗಿಲ್ಲ ಎಂದು ಕ್ರೆಮ್ಲಿನ್ ತಿಳಿಸಿದೆ. ಇದನ್ನೂ ಓದಿ: ಬ್ರೆಜಿಲ್‌ನಲ್ಲಿ ವೇದಘೋಷಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿಗೆ ಭವ್ಯ ಸ್ವಾಗತ

  • ಪ್ರಭಾವ ಬಳಸಿ ಮೋದಿ ರಷ್ಯಾ-ಉಕ್ರೇನ್‌ ಯುದ್ಧವನ್ನು ನಿಲ್ಲಿಸಬಹುದು: ಝೆಲೆನ್ಸ್ಕಿ

    ಪ್ರಭಾವ ಬಳಸಿ ಮೋದಿ ರಷ್ಯಾ-ಉಕ್ರೇನ್‌ ಯುದ್ಧವನ್ನು ನಿಲ್ಲಿಸಬಹುದು: ಝೆಲೆನ್ಸ್ಕಿ

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಪ್ರಭಾವ ಬಳಸಿ ರಷ್ಯಾ-ಉಕ್ರೇನ್‌ (Russia-Ukraine War) ಯುದ್ಧವನ್ನು ನಿಲ್ಲಿಸಬಹುದು ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ (Volodymyr Zelenskyy) ಹೇಳಿದ್ದಾರೆ.

    ಭಾರತದ ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ನಿಸ್ಸಂದೇಹವಾಗಿ ಪ್ರಧಾನಿ ಮೋದಿ ಈ ಕೆಲಸ ಮಾಡಬಹುದು. ಅಗ್ಗದ ಶಕ್ತಿಯನ್ನು ನಿರಾಕರಿಸುವುದು ಮತ್ತು ಆದ್ದರಿಂದ ಯುದ್ಧಗಳನ್ನು ನಡೆಸುವ ಮಾಸ್ಕೋದ ಸಾಮರ್ಥ್ಯವನ್ನು ಕಡಿಮೆ ಮಾಡಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

    ಅಮೆರಿಕದಲ್ಲಿ ಅಧ್ಯಕ್ಷೀಯ ಚುನಾವಣೆ ದಿನಾಂಕ ಹತ್ತಿರ ಬರುತ್ತಿದ್ದಂತೆ ಝೆಲೆನ್ಸ್ಕಿ ಅವರಿಂದ ಈ ಹೇಳಿಕೆ ಬಂದಿರುವುದು ವಿಶೇಷ. ಒಂದು ವೇಳೆ ನಾನು ಗೆದ್ದರೆ ಉಕ್ರೇನ್‌ ನೀಡುತ್ತಿರುವ ಸೇನಾ ನೆರವನ್ನು ಕಡಿತಗೊಳಿಸುತ್ತೇನೆ ಎಂದು ರಿಪಬ್ಲಿಕನ್‌ ಅಭ್ಯರ್ಥಿ ಟ್ರಂಪ್‌ ಈಗಾಗಲೇ ಹೇಳಿಕೆ ನೀಡಿದ್ದಾರೆ. ಟ್ರಂಪ್‌ ಅಧ್ಯಕ್ಷರಾಗಿ ಆಯ್ಕೆಯಾದರೆ ಉಕ್ರೇನ್‌ ಹೋರಾಟಕ್ಕೆ ಭಾರೀ ಹಿನ್ನಡೆಯಾಗಲಿದೆ.

    ನಿರ್ದಿಷ್ಟವಾಗಿ ಹೇಳುವುದಾದರೆ, ಬಲವಂತವಾಗಿ ರಷ್ಯಾಕ್ಕೆ ಗಡೀಪಾರು ಮಾಡಲಾದ ಉಕ್ರೇನಿಯನ್ ಮಕ್ಕಳನ್ನು ಮರಳಿ ಕರೆತರಲು ಸಹಾಯ ಮಾಡುವಂತೆ ಝೆಲೆನ್ಸ್ಕಿ ಮೋದಿ ಅವರನ್ನು ಕೇಳಿದರು. ರಷ್ಯಾ ಅಧ್ಯಕ್ಷ ಪುಟಿನ್ (Vladimir Putin) ಬಳಿ ಮೋದಿ ತಮ್ಮ ಪ್ರಭಾವ ಬಳಸಿ ಉಕ್ರೇನಿಯನ್ ಮಕ್ಕಳನ್ನು ಮರಳಿ ಕರೆತರಲು ಒತ್ತಾಯಿಸಬಹುದು ಎಂದು ಹೇಳಿದರು. ಇದನ್ನೂ ಓದಿ: ಗಡಿಯಲ್ಲಿ ಶಾಂತಿ ಸ್ಥಾಪನೆಗೆ ಭಾರತ-ಚೀನಾ ಹ್ಯಾಂಡ್‌ಶೇಕ್; ಫಲ ನೀಡುತ್ತಾ ಒಪ್ಪಂದ?

     ನಾವು ಈಗಲೇ ನ್ಯಾಟೋ ಸದಸ್ಯತ್ವವನ್ನು ಕೇಳುತ್ತಿಲ್ಲ.  ಏಕೆಂದರೆ ಯುದ್ಧದ ಸಮಯದಲ್ಲಿ ಅದು ಸಾಧ್ಯವಿಲ್ಲ ಎಂದು ಝೆಲೆನ್ಸ್ಕಿ ತಿಳಿಸಿದರು.

     

  • ನ್ಯೂಯಾರ್ಕ್‌ನಲ್ಲಿ ಝೆಲೆನ್ಸ್ಕಿ ಭೇಟಿಯಾದ ಮೋದಿ – ಶಾಂತಿಮಂತ್ರ ಪಠಿಸಿದ ಪ್ರಧಾನಿ

    ನ್ಯೂಯಾರ್ಕ್‌ನಲ್ಲಿ ಝೆಲೆನ್ಸ್ಕಿ ಭೇಟಿಯಾದ ಮೋದಿ – ಶಾಂತಿಮಂತ್ರ ಪಠಿಸಿದ ಪ್ರಧಾನಿ

    ವಾಷಿಂಗ್ಟನ್‌: ವಿಶ್ವಸಂಸ್ಥೆಯ ಶೃಂಗಸಭೆ (UNGN) ಹಿನ್ನೆಲೆ ಅಮೆರಿಕಕ್ಕೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ನ್ಯೂಯಾರ್ಕ್‌ನಲ್ಲಿ ಉಕ್ರೇನ್‌ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ (Volodymyr Zelenskyy) ಅವರನ್ನ ಭೇಟಿಯಾಗಿದ್ದಾರೆ. ಕಳೆದ ಮೂರು ತಿಂಗಳಲ್ಲಿ ಇದು ಮೋದಿ-ಝಲೆನ್ಸ್ಕಿ ನಡುವಿನ 3ನೇ ಭೇಟಿಯಾಗಿದೆ.

    ಸದ್ಯ ಶೃಂಗ ಸಭೆಯಲ್ಲಿ ವಿದೇಶಾಂಗ ಸಚಿವ ಎಸ್.ಜೈಶಂಕರ್ ಕೂಡ ಉಪಸ್ಥಿತರಿದ್ದು, ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸುವ ಮಾರ್ಗಗಳ ಕುರಿತು ವಿಸ್ತೃತ ಚರ್ಚೆ ನಡೆಸಲಾಗುತ್ತಿದೆ. ಇದೇ ವೇಳೆ ಉಕ್ರೇನ್‌ನಲ್ಲಿ (Ukraine) ನಡೆಯುತ್ತಿರುವ ಸಂಘರ್ಷವನ್ನು ಆದಷ್ಟು ಬೇಗನೇ ಇತ್ಯರ್ಥಗೊಳಿಸಲು, ಪ್ರದೇಶದಲ್ಲಿ ಶಾಂತಿ ನೆಲೆಸಲು ಮತ್ತು ಸ್ಥಿರತೆ ಕಾಪಾಡಲು ಮಾಡುತ್ತಿರುವ ಭಾರತದ ಪ್ರಯತ್ನಗಳನ್ನು ಝಲೆನ್ಸ್ಕಿ ಶ್ಲಾಘಿಸಿದ್ದಾರೆ.

    ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಬರೆದುಕೊಂಡಿರುವ ಪ್ರಧಾನಿ ಮೋದಿ, ನ್ಯೂಯಾರ್ಕ್‌ನಲ್ಲಿ ಉಕ್ರೇನ್ ಅಧ್ಯಕ್ಷ ವೊಲೊಡಿಮಿ‌ರ್ ಝಲೆನ್‌ಸ್ಕಿ ಅವರನ್ನು ಭೇಟಿಯಾಗಿದ್ದೇನೆ. ಉಭಯ ದೇಶಗಳ ನಡುವಣ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಕಳೆದ ತಿಂಗಳ ಉಕ್ರೇನ್ ಭೇಟಿಯ ವೇಳೆ ನಡೆದ ಮಾತುಕತೆಯನ್ನು ಫಲಪ್ರದವಾಗಿ ಜಾರಿಗೊಳಿಸಲು ಬದ್ಧರಾಗಿದ್ದೇವೆ. ಉಕ್ರೇನ್‌ನಲ್ಲಿ ಸಂಘರ್ಷಕ್ಕೆ ಆದಷ್ಟು ಬೇಗನೇ ಪರಿಹಾರ ಕಂಡುಕೊಳ್ಳುವುದು ಮತ್ತು ಶಾಂತಿ ಹಾಗೂ ಸ್ಥಿರತೆಯ ಮರುಸ್ಥಾಪನೆಗೆ ಭಾರತದ ಬೆಂಬಲವನ್ನು ಪುನರುಚ್ಚರಿಸಿದ್ದೇನೆ ಎಂದು ಅವರು ತಿಳಿಸಿದ್ದಾರೆ.

    ಉಕ್ರೇನ್ ಸಂಘರ್ಷಕ್ಕೆ ಶಾಶ್ವತ ಮತ್ತು ಶಾಂತಿಯುತ ಪರಿಹಾರಕ್ಕೆ ನೆರವಾಗಲು ಬೇಕಾದ ಎಲ್ಲ ನೆರವು ನೀಡಲು ಭಾರತ ತನ್ನ ಪ್ರಯತ್ನಿಸುತ್ತಿದೆ. ಸಂಘರ್ಷವನ್ನು ಮಾತುಕತೆಯ ಮೂಲಕ ಶಾಂತಿಯುತವಾಗಿ ಬಗೆಹರಿಸುವ ನಿಟ್ಟಿನಲ್ಲಿ ಸ್ಪಷ್ಟ, ಸ್ಥಿರ ಮತ್ತು ರಚನಾತ್ಮಕ ನಿಲುವನ್ನು ಭಾರತ ಪುನರುಚ್ಛರಿಸಿದೆ. ಮತ್ತೊಂದೆಡೆ ಎಕ್ಸ್‌ನಲ್ಲಿ ಬರೆದುಕೊಂಡಿರುವ ಝಲೆನ್‌ಸ್ಕಿ, ಭಾರತ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಈ ವರ್ಷ 3ನೇ ಬಾರಿ ದ್ವಿಪಕ್ಷೀಯ ಮಾತುಕತೆ ನಡೆಸಿದ್ದೇನೆ. ಉಭಯ ದೇಶಗಳ ನಡುವಣ ಬಾಂಧವ್ಯವನ್ನು ಸಕ್ರಿಯವಾಗಿ ವೃದ್ಧಿಗೊಳಿಸಲಾಗುತ್ತಿದ್ದು, ವಿವಿಧ ಕ್ಷೇತ್ರಗಳಲ್ಲಿ ಸಹಕಾರವನ್ನು ಗಟ್ಟಿಗೊಳಿಸಲು ಒಟ್ಟಾಗಿ ಕೆಲಸ ಮಾಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.

    ಕಳೆದ ಆಗಸ್ಟ್‌ 23ರಂದು ಪ್ರಧಾನಿ ಮೋದಿ ಉಕ್ರೇನ್‌ಗೆ ಭೇಟಿ ನೀಡಿದ್ದರು. 1992 ರಲ್ಲಿ ಉಭಯ ದೇಶಗಳ ನಡುವೆ ರಾಜತಾಂತ್ರಿಕ ಸಂಬಂಧಗಳನ್ನು ಸ್ಥಾಪಿಸಿದ ನಂತರ ಉಕ್ರೇನ್‌ಗೆ ಭೇಟಿ ನೀಡಿದ ಮೊದಲ ಭಾರತೀಯ ಪ್ರಧಾನಿ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದರು. ಅಲ್ಲಿಯೂ ಸಹ ಶಾಂತಿಯುತ ಮಾತುಕತೆ ಮೂಲಕ ಸಂಘರ್ಷ ಬಗೆಹರಿಸುವ ಪ್ರಯತ್ನಗಳ ಬಗ್ಗೆ ಚರ್ಚಿಸಿದ್ದರು.

  • 50ಕ್ಕೂ ಹೆಚ್ಚು ವಿಶ್ವನಾಯಕರಿಂದ ಮೋದಿಗೆ ಅಭಿನಂದನೆಗಳ ಮಹಾಪೂರ!

    50ಕ್ಕೂ ಹೆಚ್ಚು ವಿಶ್ವನಾಯಕರಿಂದ ಮೋದಿಗೆ ಅಭಿನಂದನೆಗಳ ಮಹಾಪೂರ!

    ನವದೆಹಲಿ:‌ ಲೋಕಸಭಾ ಚುನಾವಣೆಯಲ್ಲಿ (Parliamentary elections) ಸತತ ಹ್ಯಾಟ್ರಿಕ್‌ ಗೆಲುವು ಸಾಧಿಸಿರುವ ನಿರ್ಗಮಿತ ಪ್ರಧಾನಿ ನರೇಂದ್ರ ಮೋದಿ ಅವರು ಎನ್‌ಡಿಎ ಬಹುಮತದೊಂದಿಗೆ 3ನೇ ಅವಧಿಗೆ ಅಧಿಕಾರದ ಗದ್ದುಗೆ ಏರುವ ವಿಶ್ವಾಸದಲ್ಲಿದ್ದಾರೆ. ಈ ನಡುವೆ ಹ್ಯಾಟ್ರಿಕ್‌ ಗೆಲುವು ಸಾಧಿಸಿರುವ ಮೋದಿ ಅವರಿಗೆ 50ಕ್ಕೂ ಹೆಚ್ಚು ವಿಶ್ವನಾಯಕರಿಂದ (World Leaders) ಅಭಿನಂದನಾ ಮಹಾಪೂರವೇ ಹರಿದುಬಂದಿದೆ.

    ಶ್ರೀಲಂಕಾ, ಮಾಲ್ಡೀವ್ಸ್‌, ಇರಾನ್‌, ಸೆಶೆಲ್ಸ್‌, ನೈಜೀರಿಯಾ, ಕೀನ್ಯಾ ಮತ್ತು ಕೊಮೊರೊಸ್‌ ಅಧ್ಯಕ್ಷರು, ನೇಪಾಳ, ಬಾಂಗ್ಲಾದೇಶ, ಭೂತಾನ್‌, ಮ್ಯಾನ್ಮಾರ್‌, ಮಾರಿಷಸ್‌ನ ಪ್ರಧಾನಿಗಳು, ಕೆರಿಬಿಯನ್ ರಾಷ್ಟ್ರಗಳಾದ ಜಮೈಕಾ, ಬಾರ್ಬಡೋಸ್ ಮತ್ತು ದಕ್ಷಿಣ ಅಮೆರಿಕದ ಗಯಾನಾ ನಾಯಕರು ನರೇಂದ್ರ ಮೋದಿ (Narendra Modi) ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಇದರೊಂದಿಗೆ ಇಟಲಿ, ಜಪಾನ್ ಮತ್ತು ದಕ್ಷಿಣ ಕೊರಿಯಾದ ಅಧ್ಯಕ್ಷರು, ಜಿ20 ರಾಷ್ಟ್ರಗಳ ನಾಯಕರು, ಆಗ್ನೇಯ ಏಷ್ಯಾದಿಂದ, ಸಿಂಗಾಪುರ ಮತ್ತು ಮಲೇಷ್ಯಾದ ಪ್ರಧಾನ ಮಂತ್ರಿಗಳು ಮೋದಿಗೆ ಶುಭಸಂದೇಶಗಳನ್ನ ಕಳುಹಿಸಿದ್ದಾರೆ.

    543 ಸದಸ್ಯ ಬಲದ ಲೋಕಸಭೆಯಲ್ಲಿ ಬಿಜೆಪಿ 240 ಸ್ಥಾನಗಳನ್ನು ಪಡೆದು 2019ರ ಚುನಾವಣೆಗಿಂತಲೂ 63 ಸ್ಥಾನಗಳಲ್ಲಿ ಕುಸಿತ ಕಂಡಿದ್ದರೆ, ಕಾಂಗ್ರೆಸ್‌ ಕಳೆದ ಬಾರಿಗಿಂತಲೂ 47 ಹೆಚ್ಚಿನ ಸ್ಥಾನಗಳನ್ನ ಗೆದ್ದುಕೊಂಡಿದ್ದು, 99 ಸ್ಥಾನಗಳಲ್ಲಿ ವಿಜಯ ಸಾಧಿಸಿದೆ. ಒಟ್ಟಾರೆಯಾಗಿ ಎನ್‌ಡಿಎ ಕೂಟ 291, ಇಂಡಿಯಾ ಒಕ್ಕೂಟ 234 ಹಾಗೂ ಇತರ ಪಕ್ಷಗಳು 18 ಸ್ಥಾನಗಳನ್ನ ಗೆದ್ದಿವೆ.  

    ಜೂ.8ರಂದು ಮೋದಿ ಪ್ರಮಾಣವಚನ:
    ಬುಧವಾರ (ಜೂ.5) ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ನರೇಂದ್ರ ಮೋದಿ ಅವರು, ಜೂನ್ 8ರ ಶನಿವಾರ ಸಂಜೆ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ ಎಂಬುದಾಗಿ ಮೂಲಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: ಪ್ರಧಾನಿ ಸ್ಥಾನಕ್ಕೆ ನರೇಂದ್ರ ಮೋದಿ ರಾಜೀನಾಮೆ

    ಈ ಮೂಲಕ ನರೇಂದ್ರ ಮೋದಿಯವರು 3 ನೇ ಬಾರಿಗೆ ಭಾರತದ ಪ್ರಧಾನಿಯಾಗಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ. ಇಂದು (ಬುಧವಾರ) ಸಂಜೆ ರಾಷ್ಟ್ರಪತಿಗಳಿಗೆ ಎನ್‌ಡಿಎ ಮೈತ್ರಿಕೂಟದ ಬೆಂಬಲ ಪತ್ರ ನೀಡುವ ಸಾಧ್ಯತೆ ಇದೆ. ಪ್ರಧಾನಿ ಮೋದಿ ಕೊನೆಯದಾಗಿ ಇಂದು ಕೇಂದ್ರ ಸಚಿವ ಸಂಪುಟ ಸಭೆ ನಡೆಸಿದರು. ಇಂದಿಗೆ 17 ನೇ ಲೋಕಸಭೆ (17th Lok Sabha) ವಿಸರ್ಜನೆಗೆ ಶಿಫಾರಸು ಮಾಡಲಾಗಿದೆ. ಇದನ್ನೂ ಓದಿ: ನಿತೀಶ್‌, ಯಾದವ್‌ ಒಂದೇ ವಿಮಾನದಲ್ಲಿ ಪ್ರಯಾಣ- ಊಹಾಪೋಹ ಅಲ್ಲಗೆಳೆದ ಜೆಡಿಯು

    ಜೂನ್‌ 7 ರ ಶುಕ್ರವಾರ ಮಧ್ಯಾಹ್ನ 2.30 ಕ್ಕೆ ಸಂಸತ್ ಭವನದಲ್ಲಿ ಎನ್‌ಡಿಎ ಸಂಸದರ ಸಭೆ ನಡೆಯಲಿದೆ. ಈ ಸಭೆಯಲ್ಲಿ ಎನ್‌ಡಿಎ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ಮತ್ತು ವಿವಿಧ ಪಕ್ಷಗಳ ಅಧ್ಯಕ್ಷರು ಭಾಗವಹಿಸಲಿದ್ದಾರೆ. ಮರುದಿನ ಅಂದರೆ ಜೂನ್ 8 ರಂದು ನರೇಂದ್ರ ಮೋದಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಪ್ರಮಾಣ ವಚನ ಕಾರ್ಯಕ್ರಮ ಸಂಜೆ 7 ರಿಂದ 8 ಗಂಟೆಯವರೆಗೆ ನಡೆಯಬಹುದು ಎಂಬುದಾಗಿ ಮೂಲಗಳಿಂದ ಮಾಹಿತಿ ಲಭಿಸಿದೆ. ಇದನ್ನೂ ಓದಿ: ಮಹಾರಾಷ್ಟ್ರ ಸೋಲಿಗೆ ನಾನೇ ಹೊಣೆ – ಡಿಸಿಎಂ ಹುದ್ದೆಗೆ ದೇವೇಂದ್ರ ಫಡ್ನವಿಸ್‌ ರಾಜೀನಾಮೆ

  • ಯುದ್ಧ ವಿಮಾನಗಳನ್ನು ಕಳುಹಿಸುತ್ತೇವೆ – ಉಕ್ರೇನ್ ಬೆಂಬಲಕ್ಕೆ ನಿಂತ ಬ್ರಿಟನ್

    ಯುದ್ಧ ವಿಮಾನಗಳನ್ನು ಕಳುಹಿಸುತ್ತೇವೆ – ಉಕ್ರೇನ್ ಬೆಂಬಲಕ್ಕೆ ನಿಂತ ಬ್ರಿಟನ್

    ಲಂಡನ್: ಉಕ್ರೇನ್‌ಗೆ (Ukraine) ಯುದ್ಧ ವಿಮಾನಗಳನ್ನು ಕಳುಹಿಸುತ್ತೇವೆ ಎಂದು ಬ್ರಿಟನ್ (UK) ರಕ್ಷಣಾ ಸಚಿವಾಲಯ ಹೇಳಿದೆ.

    ರಕ್ಷಣಾ ಸಚಿವಾಲಯದ ಕಾರ್ಯದರ್ಶಿ ಬೆನ್ ವ್ಯಾಲೆಸ್ ಈ ಕುರಿತು ಪತ್ರಕರ್ತರೊಂದಿಗೆ ಮಾತನಾಡಿದ್ದಾರೆ. ಯುದ್ಧ ವಿಮಾಗಳನ್ನು ಪೂರೈಸುವ ಪ್ರಕ್ರಿಯೆಯಲ್ಲಿ ನಾವು ಸ್ಪಷ್ಟವಾಗಿದ್ದೇವೆ. `ಯಾವುದನ್ನೂ ಆಳಬೇಡಿ, ಯಾವುದನ್ನೂ ತಳ್ಳಿಹಾಕಬೇಡಿ’ ಅನ್ನೋದು ಕಳೆದ ವರ್ಷದಲ್ಲಿ ನಾನು ಕಲಿತ ಒಂದು ವಿಷಯ. ರಷ್ಯಾದ ಆಕ್ರಮಣ ಹಿಮ್ಮೆಟ್ಟಿಸಲು ಸಹಾಯ ಮಾಡುವಂತೆ ಅಮೆರಿಕ ನಿರ್ಮಿತ ಎಫ್-16 ಯುದ್ಧ ವಿಮಾನಗಳ ಸಹಾಯ ಕೋರಿದೆ.

    ಚಲಿಸುತ್ತಿದ್ದ ಕಾರಿನಲ್ಲಿ ಸೀಟ್‌ಬೆಲ್ಟ್ ಹಾಕದ ರಿಷಿ ಸುನಾಕ್‌ಗೆ ದಂಡ

    ಈ ನಡುವೆ ಅಮೆರಿಕ (US) ಉಕ್ರೇನ್‌ಗೆ ಎಫ್-16 ಯುದ್ಧವಿಮಾನಗಳ (F16 Fighter Jets) ವಿತರಣೆಯನ್ನು ತಳ್ಳಿಹಾಕಿದೆ. ಆದ್ರೆ ಪೋಲೆಂಡ್ ಸೇರಿದಂತೆ ಇತರ ಮಿತ್ರ ರಾಷ್ಟ್ರಗಳು ಉಕ್ರೇನ್‌ಗೆ ನೆರವು ನೀಡಲು ಮುಕ್ತವಾಗಿವೆ. ಇದರೊಂದಿಗೆ ಕೇವಲ ಜೆಟ್‌ಗಳಷ್ಟೇ ಅಲ್ಲ, ಎಲ್ಲಾ ರೀತಿಯ ವ್ಯವಸ್ಥೆಗಳನ್ನು ಪರೀಕ್ಷಿಸಲು ನಾನು ತುಂಬಾ ಮುಕ್ತವಾಗಿದ್ದೇನೆ ಎಂದು ವ್ಯಾಲೆಸ್ ಭರವಸೆ ನೀಡಿದ್ದಾರೆ. ಇದನ್ನೂ ಓದಿ: ಕೂಡಲೇ ವಿದ್ಯುತ್‌ ದರ ಏರಿಸಿ – ಪಾಕ್‌ಗೆ ಐಎಂಎಫ್‌ ಶಾಕ್‌: PoK ಜನತೆಗೆ ನೀಡಿದ್ದ ಸಬ್ಸಿಡಿ ಬಂದ್‌

    ಯುಕೆಯ ಟೈಫೂನ್ ಮತ್ತು F-35 ಫೈಟರ್ ಜೆಟ್‌ಗಳು (F-35 Fighter Jet) ಅತ್ಯಾಧುನಿಕವಾಗಿವೆ. ಆದರೆ ಅದನ್ನು ಹೇಗೆ ಹಾರಾಟ ನಡೆಸಬೇಕು ಅನ್ನೋದನ್ನ ತಿಳಿದುಕೊಳ್ಳುವುದಕ್ಕೆ ತಿಂಗಳುಗಟ್ಟಲೆ ಸಮಯ ತೆಗೆದುಕೊಳ್ಳುತ್ತದೆ. ಹಾಗಾಗಿ ಅವುಗಳನ್ನು ಸದ್ಯದಲ್ಲೇ ಉಕ್ರೇನ್‌ಗೆ ಕಳುಹಿಸುವುದು ಪ್ರಾಯೋಗಿಕವಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಭಯೋತ್ಪಾದಕರಿಗೆ ಏಕೆ ಬಾಗಿಲು ತೆರೆದರು? – ಆತ್ಮಾಹುತಿ ಬಾಂಬ್ ದಾಳಿಗೆ ನವಾಜ್ ಷರೀಫ್ ಪುತ್ರಿ ಖಂಡನೆ

    ಹೆಲಿಕಾಪ್ಟರ್‌ ಪತನ - ಉಕ್ರೇನ್‌ ಸಚಿವ ಸೇರಿ 16 ಮಂದಿ ಬಲಿ

    ಕಳೆದ ವರ್ಷ ಹಿಂದಿನ ಪ್ರಧಾನಿಯಾಗಿದ್ದ ಬೋರಿಸ್ ಜಾನ್ಸನ್ ಉಕ್ರೇನ್‌ಗೆ ಭೇಟಿ ನೀಡಿದ್ದರು. ಈ ವೇಳೆ ಯುದ್ಧಪೀಡಿತ ಉಕ್ರೇನ್‌ಗೆ ಬ್ರಿಟನ್ ಹೊಸದಾಗಿ 1.3 ಶತಕೋಟಿ ಪೌಂಡ್ (12 ಸಾವಿರ ಕೋಟಿ ರೂ.) ಮಿಲಿಟರಿ ಸಹಾಯ ನೀಡುವುದಾಗಿ ನೀಡಿದ್ದರು. ರಿಷಿ ಸುನಾಕ್ (Rishi Sunak) ಅವರು ಅಧಿಕಾರ ವಹಿಸಿಕೊಂಡ ಸಂದರ್ಭದಲ್ಲಿ ಉಕ್ರೇನ್‌ಗೆ ಭೇಟಿ ನೀಡಿ ರಕ್ಷಣಾ ನೆರವು ನೀಡುವ ಬಗ್ಗೆ ಮಾತುಕತೆ ನಡೆಸಿದ್ದರು. ಈ ವೇಳೆ ಅಮೆರಿಕ ನಿರ್ಮಿತ F-16 ಯುದ್ಧವಿಮಾನ ಸೇರಿದಂತೆ ಇತರ ಯುದ್ಧ ಸಾಮಗ್ರಿಗಳ ನೆರವು ನೀಡುವುದಾಗಿ ಭರವಸೆ ನೀಡಿದ್ದರು.

    ಬ್ರಿಟನ್ ಸರ್ಕಾರ 2023ರ ಜನವರಿಯಲ್ಲೂ ಸಹ ಉಕ್ರೇನ್‌ಗೆ ಸಹಾಯ ಮಾಡುವುದಾಗಿ ಭರವಸೆ ನೀಡಿತ್ತು. ಅದರಂತೆ ಮಾರ್ಚ್ ಅಂತ್ಯದ ವೇಳೆಗೆ 14 ಚಾಲೆಂಜರ್-2 ಟ್ಯಾಂಕರ್‌ಗಳನ್ನು ಕಳುಹಿಸುವ ಗುರಿ ಹೊಂದಿದೆ. ಉಕ್ರೇನ್ ರಷ್ಯಾದ ಪಡೆಗಳನ್ನು ಹಿಮೆಟ್ಟಿಸಲು ತಕ್ಷಣವೇ ಶಸ್ತ್ರಾಸ್ತ್ರಗಳ ಅಗತ್ಯವಿದ್ದು, ಈ ಟ್ಯಾಂಕರ್‌ಗಳು ಸುಲಭವಾಗಿ ಶಸ್ತ್ರಾಸ್ತ್ರ ಒಯ್ಯಲಿವೆ ಎಂದು ಅಭಯ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಉಕ್ರೇನ್ ಮೇಲೆ ಮತ್ತೆ ರಷ್ಯಾ ಕ್ಷಿಪಣಿ ದಾಳಿ – 12 ಮಂದಿ ಸಾವು

    ಉಕ್ರೇನ್ ಮೇಲೆ ಮತ್ತೆ ರಷ್ಯಾ ಕ್ಷಿಪಣಿ ದಾಳಿ – 12 ಮಂದಿ ಸಾವು

    ಕೀವ್/ಮಾಸ್ಕೋ: ಇನ್ಮುಂದೆ ಉಕ್ರೇನ್ ವಿರುದ್ಧ ಯುದ್ಧ (Russia Ukraine War)) ಮಾಡುವುದಿಲ್ಲ, ಮಾತುಕತೆಗೆ ಸಿದ್ಧರಿದ್ದೇವೆ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Vladimir Putin) ಹೇಳಿದ ನಂತರವೂ ರಷ್ಯಾ ಅಟ್ಟಹಾಸ ಮುಂದುವರಿದಿದೆ.

    ಉಕ್ರೇನಿನ ಡ್ನಿಪ್ರೊ ನಗರದ 9 ಅಂತಸ್ತಿನ ಕಟ್ಟಡದ ಮೇಲೆ ಮತ್ತೆ ಭೀಕರ ಕ್ಷಿಪಣಿ ದಾಳಿ (Missile Strike) ನಡೆಸಿದ್ದು, ಕನಿಷ್ಠ 12 ಮಂದಿ ಮೃತಪಟ್ಟಿದ್ದಾರೆ. ಈಗಾಗಲೇ ಸತತ ದಾಳಿಯಿಂದ ರಷ್ಯಾ, ಉಕ್ರೇನಿನ ಮೂಲ ಸೌಕರ್ಯಗಳನ್ನ (Ukraine Infrastructure) ನಾಶಪಡಿಸಿದೆ. ಇದೀಗ ದಾಳಿಯ ಹೊಸ ಅಲೆ ಮುಂದುವರಿಸಿದೆ. ಇದನ್ನೂ ಓದಿ: ಸಾನ್ಯ ಜೊತೆ ರೂಪೇಶ್ ಶೆಟ್ಟಿ ಮೀಟಿಂಗ್:‌ ಮದುವೆ ಬಗ್ಗೆ ನೆಟ್ಟಿಗರಿಂದ ಪ್ರಶ್ನೆಗಳ ಸುರಿಮಳೆ

    ಶನಿವಾರ ತಡರಾತ್ರಿ ನಡೆದ ದಾಳಿಯಲ್ಲಿ ಡ್ನಿಪ್ರೊ ನಗರ ಹೊರತುಪಡಿಸಿ, ಕೀವ್ ಹಾಗೂ ಇತರ ಸ್ಥಳಗಳಲ್ಲಿ ನಿರ್ಣಾಯಕ ಮೂಲ ಸೌಕರ್ಯಗಳನ್ನು ದಮನ ಮಾಡಿದೆ. ಇದರಿಂದ ಮುಂದಿನ ದಿನಗಳಲ್ಲಿ ಉಕ್ರೇನ್‌ನಲ್ಲಿ ವಿದ್ಯುತ್, ನೀರು ಹಾಗೂ ಮೂಲ ಸೌಕರ್ಯಗಳ ಕೊರತೆ ಎದುರಾಗಲಿದೆ ಎಂದು ಉಕ್ರೇನಿನ ಇಂಧನ ಸಚಿವರು ಎಚ್ಚರಿಸಿದ್ದಾರೆ.

    ರಷ್ಯಾದ ದಾಳಿಯಲ್ಲಿ ಉಕ್ಕಿನ ತಯಾರಿಕಾ ನಗರವಾದ ಕ್ರಿವಿ ರಿಹ್‌ನಲ್ಲಿ ಒಬ್ಬರು ಸಾವನ್ನಪ್ಪಿದ್ದು ಮತ್ತೊಬ್ಬರು ಗಾಯಗೊಂಡಿದ್ದರು. ಅಲ್ಲದೇ ಝಲೆನ್ಸ್ಕಿ (Volodymyr Zelenskyy) ತವರು ನಗರದಲ್ಲಿ 6 ಮನೆಗಳು ಹಾನಿಗೊಳಗಾದವು.

    ಇದೀಗ ಡ್ನಿಪ್ರೊ ಅಪಾರ್ಟ್ಮೆಂಟ್ ದಾಳಿಯಲ್ಲಿ ಮೃತರ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ. ಅದಕ್ಕಾಗಿ ಉಕ್ರೇನ್ ತನ್ನ ನಾಗರಿಕರ ಮೇಲಿನ ದಾಳಿ ಕೊನೆಗೊಳಿಸಲು ಹೆಚ್ಚಿನ ಶಸ್ತ್ರಾಸ್ತ್ರಗಳಿಗಾಗಿ ಪಾಶ್ಚಿಮಾತ್ಯ ಮಿತ್ರರಾಷ್ಟ್ರಗಳಿಗೆ ಮನವಿ ಮಾಡಿದೆ. ಇದನ್ನೂ ಓದಿ: Exclusive- ‘ಮೇರುನಟ’ ವಿಷ್ಣುವರ್ಧನ್ ಸಮಾಧಿ ನೆಲಸಮ ಆಗತ್ತಾ? ಆತಂಕ ಹೊರಹಾಕಿದ ಅಭಿಮಾನಿ

    ಇತ್ತೀಚೆಗೆ “ನಮ್ಮ ಕ್ಷಿಪಣಿಗಳು 1,300ಕ್ಕೂ ಹೆಚ್ಚು ಮಂದಿ ಇದ್ದ ಉಕ್ರೇನಿಯನ್ ಸೈನ್ಯದ ಕ್ರಾಮಾಟೋರ್ಸ್‌ನಲ್ಲಿರುವ ಎರಡು ಬ್ಯಾರಲ್‌ಗಳಿಗೆ ಅಪ್ಪಳಿಸಿದ್ದು, ಅವರಲ್ಲಿ 600 ಮಂದಿ ಉಕ್ರೇನ್ ಸೈನಿಕರು ಸಾವನ್ನಪ್ಪಿದ್ದಾರೆ” ಎಂದು ರಷ್ಯಾದ ರಕ್ಷಣಾ ಸಚಿವಾಲಯದ ವಕ್ತಾರ ಇಗೊರ್ ಕೊನಾಶೆಂಕೋವ್ ಹೇಳಿಕೆ ನೀಡಿದ್ದರು. ಆದರೆ ಉಕ್ರೇನ್ ಸೈನಿಕರು ಈ ದಾಳಿಯಲ್ಲಿ ಸಾವನ್ನಪ್ಪಿಲ್ಲ ಎಂದು ಹೇಳಿ ಆರೋಪ ತಳ್ಳಿಹಾಕಿತ್ತು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಉಕ್ರೇನ್ ಮೇಲೆ ಡೆಡ್ಲಿ ಅಟ್ಯಾಕ್ 600 ಸೈನಿಕರ ಹತ್ಯೆ – ರಷ್ಯಾ ಸುಳ್ಳು ಹೇಳುತ್ತಿದೆ ಎಂದ ಅಧಿಕಾರಿಗಳು

    ಉಕ್ರೇನ್ ಮೇಲೆ ಡೆಡ್ಲಿ ಅಟ್ಯಾಕ್ 600 ಸೈನಿಕರ ಹತ್ಯೆ – ರಷ್ಯಾ ಸುಳ್ಳು ಹೇಳುತ್ತಿದೆ ಎಂದ ಅಧಿಕಾರಿಗಳು

    ಕೀವ್: ಉಕ್ರೇನ್ (Ukraine)  ಮೇಲೆ ಕ್ಷಿಪಣಿ ದಾಳಿ ನಡೆಸಿ 600ಕ್ಕೂ ಹೆಚ್ಚು ಸೈನಿಕರ (Troops) ಹತ್ಯೆ ನಡೆದಿದೆ ಎಂದು ರಷ್ಯಾ (Russia) ಸೈನ್ಯ ಹೇಳಿಕೊಂಡಿದೆ. ಆದರೆ ಉಕ್ರೇನ್ ಇದು ಸುಳ್ಳು ನಮ್ಮ ಸೈನಿಕರು ಸತ್ತಿಲ್ಲ ಎಂದು ಹೇಳಿರುವ ಕುರಿತು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

    ನಮ್ಮ ಕ್ಷಿಪಣಿಗಳು 1,300ಕ್ಕೂ ಹೆಚ್ಚು ಮಂದಿ ಇದ್ದ ಉಕ್ರೇನಿಯನ್ ಸೈನ್ಯದ ಕ್ರಾಮಾಟೋರ್ಸ್‌ನಲ್ಲಿರುವ ಎರಡು ಬ್ಯಾರಕ್‍ಗಳಿಗೆ ಅಪ್ಪಳಿಸಿದ್ದು, ಅವರಲ್ಲಿ 600 ಮಂದಿ ಉಕ್ರೇನ್ ಸೈನಿಕರು ಸಾವನ್ನಪ್ಪಿದ್ದಾರೆ ಎಂದು ರಷ್ಯಾದ ರಕ್ಷಣಾ ಸಚಿವಾಲಯದ ವಕ್ತಾರ ಇಗೊರ್ ಕೊನಾಶೆಂಕೋವ್ ಹೇಳಿಕೆ ನೀಡಿದ್ದಾರೆ. ಆದರೆ ಈ ಹೇಳಿಕೆ ಸುಳ್ಳು ನಮ್ಮ ಸೈನಿಕರು ಸತ್ತಿಲ್ಲ ಎಂದು ಉಕ್ರೇನ್ ಸೈನ್ಯ ಸ್ಪಷ್ಟಪಡಿಸಿದೆ. ಇದನ್ನೂ ಓದಿ: ಹೆಚ್.ಡಿ ಕುಮಾರಸ್ವಾಮಿ ಬೆಂಬಲಿಗನಿಗೆ ಟಿಕೆಟ್ ಘೋಷಣೆ ಮಾಡಿದ್ದಕ್ಕೆ ರೇವಣ್ಣ ಆಪ್ತರು ಬಂಡಾಯ

    ಕೆಲ ದಿನಗಳ ಹಿಂದೆ ಉಕ್ರೇನ್ ಸೈನ್ಯ ರಷ್ಯಾದ ಸೈನಿಕರ ಬ್ಯಾರಕ್ ಮೇಲೆ ದಾಳಿ ನಡೆಸಿ 89 ಸೈನಿಕರ ಸಾವಿಗೆ ಕಾರಣವಾಗಿತ್ತು. ಇದಕ್ಕೆ ಪ್ರತಿಯಾಗಿ ರಷ್ಯಾ ಸೈನ್ಯ ಉಕ್ರೇನ್ ಮೇಲೆ ದಾಳಿ ನಡೆಸಿದೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಮಾಹಿತಿ ನೀಡಿದ ಉಕ್ರೇನ್ ಸೈನ್ಯದ ಅಧಿಕಾರಿಗಳು ರಷ್ಯಾ ದಾಳಿ ನಡೆಸಿರುವುದು ನಿಜ ಆದರೆ ನಮ್ಮ ಕಟ್ಟಡ ಸಹಿತ ಕೆಲ ಪ್ರದೇಶಗಳಿಗೆ ಹಾನಿಯಾಗಿದೆ. ಆದರೆ ನಮ್ಮ ಸೈನಿಕರು ಈ ದಾಳಿಯಲ್ಲಿ ಸಾವನ್ನಪ್ಪಿಲ್ಲ ಎಂದು ತಿಳಿಸಿದೆ. ಇದನ್ನೂ ಓದಿ: ಬಜ್ಜಿ, ಬೋಂಡಾ ತಿನ್ನಲು ಬಂದಿದ್ದ ಮಹಿಳಾ ‘ಪೊಲೀಸ್’ ಮೇಲೆ ದೂರು ದಾಖಲು!

    ಈ ದಾಳಿ ಕುರಿತಾಗಿ ವೀಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ (Volodymyr Zelenskyy), ಜಗತ್ತಿನ ಮುಂದೆ ರಷ್ಯಾ ಸುಳ್ಳು ಹೇಳಿಕೆ ನೀಡುವ ಮೂಲಕ ಮತ್ತೆ ತನ್ನತ್ತ ಸೆಳೆಯಲು ನೋಡುತ್ತಿದೆ. ರಷ್ಯಾ ಈ ಮೂಲಕ ಪರಿಸ್ಥಿತಿಯನ್ನು ಇನ್ನಷ್ಟು ಹದಗೇಡಿಸುತ್ತಿದೆ ಎಂದು ಕಿಡಿಕಾರಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಹೊಸ ವರ್ಷಾರಂಭದಲ್ಲಿ ಮತ್ತೆ ಯುದ್ಧ – ರಷ್ಯಾದಿಂದ 2 ಲಕ್ಷ ಸಾಮರ್ಥ್ಯದ ಸೇನೆ ಸಿದ್ಧ

    ಹೊಸ ವರ್ಷಾರಂಭದಲ್ಲಿ ಮತ್ತೆ ಯುದ್ಧ – ರಷ್ಯಾದಿಂದ 2 ಲಕ್ಷ ಸಾಮರ್ಥ್ಯದ ಸೇನೆ ಸಿದ್ಧ

    ಕೀವ್: ಮುಂಬರುವ ಹೊಸ ವರ್ಷ ಉಕ್ರೇನ್ (Ukraine) ಪಾಲಿಗೆ ಕಹಿಯಾಗಿದೆ. ಕೆಲ ದಿನಗಳಿಂದ ಬಿಡುವು ನೀಡಿದ್ದ ರಷ್ಯಾ-ಉಕ್ರೇನ್ ಯುದ್ಧ (Russia Ukraine War)  ಮತ್ತೊಮ್ಮೆ ಭೀಕರ ಸ್ವರೂಪಕ್ಕೆ ತಿರುಗುವುದು ಖಚಿವಾಗಿದೆ. 2023ರ ಹೊಸ ವರ್ಷದ ಆರಂಭದಲ್ಲಿ ರಷ್ಯಾದಿಂದ ಮತ್ತೆ ದಾಳಿ ಎದುರಾಗುವ ಬಗ್ಗೆ ಉಕ್ರೇನ್ ಸಶಸ್ತ್ರ ಪಡೆಗಳ ಕಮಾಂಡರ್ ಮುಖ್ಯಸ್ಥ ಸಂದರ್ಶನವೊಂದರಲ್ಲಿ ತಿಳಿಸಿದ್ದಾರೆ.

    ರಷ್ಯಾ, ಉಕ್ರೇನ್ (Russia-Ukraine) ಮೇಲಿನ ತನ್ನ ದಾಳಿಯನ್ನು ಮುಂದುವರಿಸಲು ತಯಾರಿ ಮಾಡಿಕೊಳ್ಳುತ್ತಿದೆ. ಅದಕ್ಕಾಗಿ ಸುಮಾರು 2 ಲಕ್ಷ ಸೈನಿಕರನ್ನು ಒಳಗೊಂಡ ಹೊಸ ಸೇನಾಪಡೆಯನ್ನು ಸಿದ್ಧಪಡಿಸುತ್ತಿದೆ. ಕೀವ್‌ನಲ್ಲಿ (Kyiv) ಅಟ್ಯಾಕ್ ಮಾಡುವ ಸಾಧ್ಯತೆಯಿದೆ ಎಂದು ಸಂದರ್ಶನದಲ್ಲಿ ಹೇಳಿದ್ದಾರೆ. ಇದನ್ನೂ ಓದಿ: ಉಕ್ರೇನ್‌ನಲ್ಲಿ ಕದನ ವಿರಾಮ, ರಾಜತಾಂತ್ರಿಕತೆ ಮಾರ್ಗ ಕಂಡುಕೊಳ್ಳಬೇಕಿದೆ – ಜಿ20 ಶೃಂಗಸಭೆಯಲ್ಲಿ ಮೋದಿ ಮಾತು

    ಉಕ್ರೇನ್ ಸಹ ದಾಳಿಯ ಬಗ್ಗೆ ಎಲ್ಲಾ ಲೆಕ್ಕಾಚಾರ ಮಾಡಿಕೊಂಡಿದೆ. ನಮಗೆ ಎಷ್ಟು ಯುದ್ಧ ಟ್ಯಾಂಕರ್‌ಗಳು ಬೇಕು? ಫಿರಂಗಿಗಳು ಬೇಕು ಎಲ್ಲ ರೀತಿಯ ಲೆಕ್ಕಾಚಾರ ಮಾಡಿದ್ದೇವೆ. ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ಉಕ್ರೇನ್ ಈಶಾನ್ಯದಲ್ಲಿರುವ ಖಾರ್ಕೀವ್ ಪ್ರದೇಶದಿಂದ ರಷ್ಯನ್ ಪಡೆಗಳನ್ನು ಹಿಂದಕ್ಕೆ ಸರಿಸಿತ್ತು. ಆನಂತರದಲ್ಲಿ ರಷ್ಯಾ, ಉಕ್ರೇನಿನ ಮೂಲಸೌಕರ್ಯಗಳ ಮೇಲೆ ದಾಳಿ ಮಾಡಿತ್ತು. ನಿರಂತರ ಕ್ಷಿಪಣಿ (Missile), ಡ್ರೋನ್ (Drone) ದಾಳಿಯಿಂದ ಇಂಧನ ಸಂಪನ್ಮೂಲ ಹಾಗೂ ಇತರ ಮೂಲಸೌಕರ್ಯಗಳನ್ನು ನಾಶಪಡಿಸಿತು. ಇದರಿಂದ ಈಗಾಗಲೇ ದೇಶಾದ್ಯಂತ ಭಾರೀ ವಿದ್ಯುತ್ ಅಭಾವವನ್ನುಂಟು ಮಾಡಿದೆ ಎಂದು ಸೇನಾ ಮುಖ್ಯಸ್ಥ ತಿಳಿಸಿದ್ದಾರೆ.

    ಸದ್ಯ ಉಕ್ರೇನ್‌ಗೆ ರಷ್ಯಾ ಪಡೆಗಳನ್ನು ಎದುರಿಸಲು 300 ಟ್ಯಾಂಕರ್‌ಗಳು, 600 ರಿಂದ 700 ಇನ್ಫಾಂಟರಿ ಫೈಟಿಂಗ್ ವೆಹಿಕಲ್ (ಪದಾತಿದಳದ ಹೋರಾಟದ ವಾಹನಗಳು) ಹಾಗೂ 500 ಹೊವಿಟ್ಜರ್‌ಗಳು ಬೇಕಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ತಕ್ಷಣ ಉಕ್ರೇನ್‌ನಿಂದ ಹೊರಟುಬಿಡಿ – ವಿದ್ಯಾರ್ಥಿಗಳು, ನಾಗರಿಕರಿಗೆ ಭಾರತ ತುರ್ತು ಸಲಹೆ

    ಕೆಲ ದಿನಗಳ ಹಿಂದೆಯಷ್ಟೇ ಉಕ್ರೇನ್ ರಷ್ಯಾದ ತೂಗು ಸೇತುವೆಯನ್ನು ಧ್ವಂಸಗೊಳಿಸಿದ ನಂತರ ಉಕ್ರೇನ್ ಭೀಕರ ದಾಳಿಗೆ ತುತ್ತಾಗಿತ್ತು. ರಷ್ಯಾ ಏಕಾಏಕಿ 100 ಕ್ಷಿಪಣಿಗಳು, ಇರಾನಿ ಡ್ರೋನ್‌ಗಳ ಮೂಲಕ ದಾಳಿ ನಡೆಸಿತು.

    Live Tv
    [brid partner=56869869 player=32851 video=960834 autoplay=true]

  • ರಷ್ಯಾಗೆ ಕೌಂಟರ್ ಕೊಡಲು 125 ಆ್ಯಂಟಿ ಏರ್‌ಕ್ರಾಫ್ಟ್ ಗನ್ – ಉಕ್ರೇನ್ ಬೆಂಬಲಕ್ಕೆ ಬ್ರಿಟನ್

    ರಷ್ಯಾಗೆ ಕೌಂಟರ್ ಕೊಡಲು 125 ಆ್ಯಂಟಿ ಏರ್‌ಕ್ರಾಫ್ಟ್ ಗನ್ – ಉಕ್ರೇನ್ ಬೆಂಬಲಕ್ಕೆ ಬ್ರಿಟನ್

    ಕೀವ್: ಉಕ್ರೇನ್ (Ukraine) ಅನ್ನು ಮಣಿಸಲು ಸತತ ದಾಳಿ ನಡೆಸುತ್ತಿರುವ ರಷ್ಯಾ (Russia) ತನ್ನ ಮಿತಿಯ ಎಲ್ಲ ಮಾದರಿಯ ಕ್ಷಿಪಣಿ ಹಾಗೂ ಸ್ಫೋಟಕಗಳನ್ನು ಉಕ್ರೇನ್ ಮೇಲೆ ಪ್ರಯೋಗಿಸುತ್ತಿದೆ. ಅದರಲ್ಲೂ ಇತ್ತೀಚೆಗೆ ಉಕ್ರೇನಿನ ಮೂಲ ಸೌಕರ್ಯಗಳನ್ನೇ ಗುರಿಯಾಗಿಸಿ ದಾಳಿ ನಡೆಸುತ್ತಿದೆ. ಇದರಿಂದ ಉಕ್ರೇನಿನ ಜನ ಬೆಚ್ಚಿ ಬೀಳುತ್ತಿದ್ದಾರೆ.

    ಇದೀಗ ಬ್ರಿಟನ್ (UK) ಪ್ರಧಾನಿಯಾಗಿ ಇತ್ತೀಚೆಗೆ ಅಧಿಕಾರ ವಹಿಸಿಕೊಂಡ ರಿಷಿ ಸುನಾಕ್ ಉಕ್ರೇನ್‌ಗೆ ಬೆಂಬಲ ನೀಡುವುದಾಗಿ ಘೋಷಿಸಿದ್ದಾರೆ. ಕೀವ್‌ಗೆ ಇಂದು ಅನಿರೀಕ್ಷಿತ ಭೇಟಿ ನೀಡಿದ ರಿಷಿ ಸುನಾಕ್ (Rishi Sunak) ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝಲೆನ್ಸ್ಕಿ (Volodymyr Zelenskyy) ಅವರೊಂದಿಗೆ ಈ ಬಗ್ಗೆ ಮಾತುಕತೆ ನಡೆಸಿದ್ದಾರೆ. ಉಕ್ರೇನ್ ಗೆಲ್ಲುವವರೆಗೆ ಬ್ರಿಟನ್ ಬೆಂಬಲ ನೀಡುತ್ತದೆ ಎಂದು ಹೇಳಿದ್ದಾರೆ. ಅಲ್ಲದೇ ರಷ್ಯಾದಿಂದ ಅಬ್ಬರಿಸುತ್ತಿರುವ ಇರಾನಿ ಡ್ರೋನ್‌ಗಳನ್ನು (Iranian Drones) ಎದುರಿಸಲು 125 `ಆ್ಯಂಟಿ ಏರ್‌ಕ್ರಾಫ್ಟ್ ಗನ್’ಗಳನ್ನು ಪೂರೈಸುವುದಾಗಿ ಹಾಗೂ 50 ಮಿಲಿಯನ್ STG ಪ್ಯಾಕೇಜ್ (ವಾಯುಸೇನೆ ರಕ್ಷಣಾತ್ಮಕ ಸೌಲಭ್ಯ) ಪೂರೈಸುವುದಾಗಿ ಭರವಸೆ ನೀಡಿದ್ದಾರೆ. ಇದನ್ನೂ ಓದಿ: ಉಕ್ರೇನ್ ವಿರುದ್ಧ ಮತ್ತೆ ಸಮರ ಸಾರಿದ ರಷ್ಯಾ – ಒಂದೇ ಬಾರಿಗೆ 100 ಕ್ಷಿಪಣಿ ಉಡಾವಣೆ

    ರಷ್ಯಾದ ಸತತ ದಾಳಿಯಿಂದ ಕಂಗೆಟ್ಟಿರುವ ಉಕ್ರೇನ್‌ನಲ್ಲಿ 437 ಮಕ್ಕಳು ಮೃತಪಟ್ಟಿದ್ದು, 837 ಮಕ್ಕಳು ಗಾಯಗೊಂಡಿದ್ದಾರೆ. ಉಕ್ರೇನಿನ ಮೂಲ ಸೌಕರ್ಯಗಳನ್ನ ಗುರಿಯಾಗಿಸಿ ಈಗಾಗಲೇ 1,000 ಕ್ಷಿಪಣಿ ಮತ್ತು ಡ್ರೋನ್‌ಗಳನ್ನು ರಷ್ಯಾ ಉಡಾಯಿಸಿದೆ. ಆದರೂ ಆಗ್ನೇಯ ಭಾಗದಲ್ಲಿ ತನ್ನ ಪರಾಕ್ರಮವನ್ನು ಮುಂದುವರಿಸಿದೆ.

    ರಷ್ಯಾ ಕ್ಷಿಪಣಿ ದಾಳಿಯಿಂದ ಉಕ್ರೇನಿನ 12 ಪ್ರಾಂತ್ಯಗಳಲ್ಲಿ ತೀವ್ರ ವಿದ್ಯುತ್ ಸಮಸ್ಯೆ ಉಂಟಾಗಿದೆ. ಅಲ್ಲದೇ ಉಕ್ರೇನ್ ರಾಷ್ಟ್ರದ ಅರ್ಧದಷ್ಟು ಇಂಧನ ಮೂಲ ಸೌಕರ್ಯಗಳು ಹಾನಿಗೊಳಗಾಗಿವೆ ಎಂದು ಕೀವ್ ಮಿಲಿಟರಿ ಅಧಿಕಾರಿಗಳು ಹೇಳಿದ್ದಾರೆ. ಇದನ್ನೂ ಓದಿ: ರಷ್ಯಾದಿಂದ ಮತ್ತೆ ಡೆಡ್ಲಿ ಡ್ರೋನ್ ದಾಳಿ – ಉಕ್ರೇನ್‌ನಲ್ಲಿ ಅಲ್ಲೋಲ ಕಲ್ಲೋಲ

    ಕೆಲ ದಿನಗಳ ಹಿಂದೆ ಯುದ್ಧಕ್ಕೆ ಬಿಡುವು ನೀಡಿದ್ದ ರಷ್ಯಾ ತನ್ನ ರಷ್ಯಾದ ಕ್ರಿಮಿಯಾ ಸೇತುವೆಯನ್ನು ಧ್ವಂಸಗೊಳಿಸಿದ ನಂತರ ಪ್ರತಿಕಾರವಾಗಿ ರಷ್ಯಾ ದಾಳಿಗೆ ಮುಂದಾಯಿತು. ಸತತವಾಗಿ 75 ಕ್ಷಿಪಣಿಗಳು, 5 ಡೆಡ್ಲಿ ರಾಕೆಟ್‌ಗಳನ್ನು ಉಕ್ರೇನ್ ಮೇಲೆ ಹಾರಿಬಿಟ್ಟಿತ್ತು. ಇದಾದ ಒಂದು ವಾರದಲ್ಲಿ ರಷ್ಯಾ ಅಧ್ಯಕ್ಷ ಪುಟಿನ್ ಉಕ್ರೇನ್ ವಿರುದ್ಧ ಕ್ಷಿಪಣಿ ದಾಳಿ ಅಂತ್ಯಗೊಳಿಸುವುದಾಗಿ ಹೇಳಿದ್ದರು. ಮತ್ತೆ 84 ಡೆಡ್ಲಿ ಡ್ರೋನ್‌ಗಳಿಂದ ದಾಳಿ ನಡೆಸಿತ್ತು. ಅದಕ್ಕಾಗಿ ಇರಾನಿ ಡ್ರೋನ್‌ಗಳನ್ನು ಬಳಸಲಾಗಿತ್ತು. ಮೂರು ದಿನಗಳ ಹಿಂದೆಯೂ ಸಹ ಏಕಾ-ಏಕಿ ನೂರು ಕ್ಷಿಪಣಿಗಳಿಂದ ದಾಳಿ ನಡೆಸಿತ್ತು.

    Live Tv
    [brid partner=56869869 player=32851 video=960834 autoplay=true]

  • ಉಕ್ರೇನ್‍ನ ನಾಲ್ಕು ಪ್ರದೇಶಗಳು ರಷ್ಯಾ ವಶ – ನ್ಯಾಟೋ ಸದಸ್ಯತ್ವಕ್ಕಾಗಿ ಝೆಲೆನ್ಸ್ಕಿ ಪಟ್ಟು

    ಉಕ್ರೇನ್‍ನ ನಾಲ್ಕು ಪ್ರದೇಶಗಳು ರಷ್ಯಾ ವಶ – ನ್ಯಾಟೋ ಸದಸ್ಯತ್ವಕ್ಕಾಗಿ ಝೆಲೆನ್ಸ್ಕಿ ಪಟ್ಟು

    ‌ಮಾಸ್ಕೋ: ಉಕ್ರೇನ್‍ನ (Ukraine) ನಾಲ್ಕು ಪ್ರದೇಶಗಳನ್ನು ರಷ್ಯಾ (Russia) ವಶಪಡಿಸಿಕೊಂಡ ಬೆನ್ನಲ್ಲೇ ಉಕ್ರೇನ್ ಅಧ್ಯಕ್ಷ ವೊಲಿಡಿಮಿರ್ ಝೆಲೆನ್ಸ್ಕಿ (Volodymyr Zelenskyy) ಸದಸ್ಯತ್ವವವನ್ನು ಆದಷ್ಟೂ ಬೇಗ ಕೊಡಿ ಎಂದು ನ್ಯಾಟೋಗೆ (Nato) ಮನವಿ ಸಲ್ಲಿಸಿದ್ದಾರೆ.

    ಉಕ್ರೇನ್‍ನ ನಾಲ್ಕು ಪ್ರದೇಶಗಳಾದ ಡಾನೆಸ್ಕ್, ಖೇರ್ಸಾನ್, ಲುಹಾಂಸ್ಕ್ ಮತ್ತು ಝೆಪೋರ್‌ಝಿಯಾ ಪ್ರದೇಶಗಳನ್ನು ರಷ್ಯಾ ವಶಕ್ಕೆ ಪಡೆದಿದೆ. ಈ ನಾಲ್ಕು ಪ್ರದೇಶಗಳನ್ನು ರಷ್ಯಾದೊಂದಿಗೆ ವಿಲೀನ ಮಾಡಿಕೊಳ್ಳಲಾಗಿದೆ. ಇದನ್ನೂ ಓದಿ: ಉಕ್ರೇನ್‌ನ 4 ಪ್ರದೇಶಗಳು ರಷ್ಯಾ ವಶ – ಪುಟಿನ್‌ ಘೋಷಣೆ

    ಕ್ರೆಮ್ಲಿನ್ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ವಿಲೀನ ಪ್ರಕ್ರಿಯೆ ನಡೆಯಿತು. ಬಳಿಕ ಮಾತನಾಡಿದ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Vladimir Putin), ಉಕ್ರೇನ್‍ನ ಸುಮಾರು ಶೇ.15 ರಷ್ಟು ಭೂಭಾಗವಿರುವ ಪ್ರದೇಶಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಈ ಪ್ರದೇಶಗಳು ಶಾಶ್ವತವಾಗಿ ರಷ್ಯಾ ಪಾಲಾಗಲಿವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಸೂಕ್ತ ಒಳಉಡುಪು ಧರಿಸಲೇಬೇಕು – ಪಾಕ್ ವಿಮಾನಯಾನ ಸಂಸ್ಥೆ ಆದೇಶ

    ಇತ್ತ ರಷ್ಯಾ ಈ ನಡೆಯ ಬೆನ್ನಲ್ಲೇ ಝೆಲೆನ್ಸ್ಕಿ, ನ್ಯಾಟೋ ಸದಸ್ಯತ್ವ ತ್ವರಿತವಾಗಿ ಕೊಡಬೇಕೆಂದು ಪಟ್ಟುಹಿಡಿದಿದ್ದಾರೆ. ನಾವು ಮಿತ್ರಪಕ್ಷಗಳೊಂದಿಗೆ ಮೈತ್ರಿಗೆ ಸಂಬಂಧಿಸಿದ ಎಲ್ಲ ನಿಯಮಗಳನ್ನೂ ಪಾಲಿಸಿದ್ದೇವೆ. ಹಾಗಾಗಿ ನಮಗೆ ಆದಷ್ಟೂ ಬೇಗ ಸದಸ್ಯತ್ವ ನೀಡುವಂತೆ ಕೋರಿರುವ ಅರ್ಜಿಗೆ ಸಹಿ ಹಾಕಿ ನ್ಯಾಟೋಗೆ ನೀಡಿದ್ದಾರೆ. ಈ ಮೂಲಕ ನಾವು ನಿರ್ಣಾಯಕ ಹೆಜ್ಜೆ ಇಡುತ್ತಿದ್ದೇವೆ ಎಂದು ಝೆಲೆನ್ಸ್ಕಿ ರಷ್ಯಾ ವಿರುದ್ಧ ನ್ಯಾಟೋ ಅಸ್ತ್ರ ಪ್ರಯೋಗಿಸಲು ಮುಂದಾಗಿದ್ದಾರೆ.

    ಈ ಎಲ್ಲಾ ಬೆಳವಣಿಗೆಯ ನಡುವೆಯೇ ರಷ್ಯಾ-ಉಕ್ರೇನ್ ನಡುವಿನ ಯುದ್ಧ ಮುಂದುವರಿದಿದೆ. ಝೆಪೋರ್‌ಝಿಯಾ ಪ್ರದೇಶಗಳಲ್ಲಿ ರಷ್ಯಾ ತನ್ನ ಹಿಡಿತವನ್ನು ಸಾಧಿಸಲು ರಾಕೆಟ್ ದಾಳಿ ನಡೆಸಿ ಅನೇಕ ಸಾವು, ನೋವಿಗೆ ಕಾರಣವಾಗಿದೆ.

    Live Tv
    [brid partner=56869869 player=32851 video=960834 autoplay=true]