Tag: Volodymyr Zelenskyy

  • ಉಕ್ರೇನ್‌ನ 4 ಪ್ರದೇಶಗಳು ರಷ್ಯಾ ವಶ – ಪುಟಿನ್‌ ಘೋಷಣೆ

    ಉಕ್ರೇನ್‌ನ 4 ಪ್ರದೇಶಗಳು ರಷ್ಯಾ ವಶ – ಪುಟಿನ್‌ ಘೋಷಣೆ

    ಮಾಸ್ಕೋ: ಉಕ್ರೇನ್‌ನ (Ukraine) ನಾಲ್ಕು ಪ್ರದೇಶಗಳನ್ನು ರಷ್ಯಾ (Russia) ವಶಕ್ಕೆ ಪಡೆದಿದೆ. ಈ ಪ್ರದೇಶಗಳು ಶಾಶ್ವತವಾಗಿ ರಷ್ಯಾ ಪಾಲಾಗಲಿವೆ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ (Vladimir Putin) ಘೋಷಿಸಿದ್ದಾರೆ.

    ಕ್ರೆಮ್ಲಿನ್‌ ಸಭಾಂಗಣದಲ್ಲಿ ಈ ಕುರಿತು ಮಾತನಾಡಿದ ಅವರು, ಉಕ್ರೇನ್‌ನ ಸುಮಾರು ಶೇ.15 ರಷ್ಟು ಭೂಭಾಗವಿರುವ ಪ್ರದೇಶಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಇದು 2ನೇ ವಿಶ್ವ ಯುದ್ಧದ ನಂತರ ಯೂರೋಪ್‌ನಲ್ಲಿಯೇ ಅತಿ ದೊಡ್ಡ ಸ್ವಾಧೀನವಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕಾಬೂಲ್‌ ಶಿಕ್ಷಣ ಕೇಂದ್ರದಲ್ಲಿ ಬಾಂಬ್‌ ಸ್ಫೋಟ – 19 ಮಂದಿ ದುರ್ಮರಣ

    ಉಕ್ರೇನ್‌ನ ಡೊನೆಟ್ಸ್ಕ್, ಲುಹಾನ್ಸ್ಕ್, ಖೆರ್ಸನ್ ಮತ್ತು ಝಪೊರಿಝಿಯಾ ಪ್ರದೇಶಗಳನ್ನು ರಷ್ಯಾ ವಶಕ್ಕೆ ಪಡೆದಿದೆ. ಇದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಉಕ್ರೇನ್‌ ಅಧ್ಯಕ್ಷ ವೊಲೊಡಿಮಿರ್‌ ಝೆಲೆನ್ಸ್ಕಿ (Volodymyr Zelenskyy), ಪುಟಿನ್ ಜೀವನಕ್ಕಿಂತ ಹೆಚ್ಚು ಯುದ್ಧವನ್ನೇ ಬಯಸುತ್ತಿದ್ದಾರೆ ಎಂದು ಹೇಳಿದ್ದಾರೆ.

    ಯುಎನ್ ಮುಖ್ಯಸ್ಥ ಆಂಟೋನಿಯೊ ಗುಟೆರೆಸ್, ಇದು ಅತ್ಯಂತ ಅಪಾಯಕಾರಿ. ವಿಶ್ವಸಂಸ್ಥೆಯ ನಿಯಮ ಉಲ್ಲಂಘನೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಹಿಜಬ್‌ ವಿರುದ್ಧ ಪ್ರತಿಭಟನೆ – ವೇದಿಕೆಯಲ್ಲೇ ಕೂದಲು ಕತ್ತರಿಸಿದ ಟರ್ಕಿ ಗಾಯಕಿ

    ಝಪೊರಿಝಿಯಾದಲ್ಲಿ ರಷ್ಯಾದ ರಾಕೆಟ್ ದಾಳಿಗೆ ಕನಿಷ್ಠ 25 ಜನರು ಸಾವನ್ನಪ್ಪಿದ್ದು, ಇನ್ನೂ 50 ಮಂದಿ ಗಾಯಗೊಂಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ಸಂಚರಿಸುತ್ತಿದ್ದ ಕಾರು ಅಪಘಾತ

    ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ಸಂಚರಿಸುತ್ತಿದ್ದ ಕಾರು ಅಪಘಾತ

    ಕೀವ್: ಉಕ್ರೇನ್ ಅಧ್ಯಕ್ಷ (Ukraine President) ವೊಲೊಡಿಮಿರ್ ಝೆಲೆನ್ಸ್ಕಿ (Volodymyr Zlenskyy) ಸಂಚರಿಸುತ್ತಿದ್ದ ಕಾರು (Car) ರಾಷ್ಟ್ರ ರಾಜಧಾನಿ ಕೀವ್‍ನಲ್ಲಿ (Kyiv) ಅಪಘಾತಕ್ಕೀಡಾಗಿದೆ.

    ರಷ್ಯಾ-ಉಕ್ರೇನ್ (Russia -Ukraine) ನಡುವೆ ನಡೆಯುತ್ತಿರುವ ಯದ್ಧಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಝೆಲೆನ್ಸ್ಕಿ ವಾಪಸ್ ಆಗುತ್ತಿದ್ದಾಗ ಅಪಘಾತ ಸಂಭವಿಸಿದೆ. ರಷ್ಯಾ ವಿರುದ್ಧ ಹೋರಾಡಿ ಉಕ್ರೇನ್ ಸೈನಿಕರು ಇಜಿಯಮ್ ನಗರವನ್ನು ಮತ್ತೆ ವಶಪಡಿಕೊಂಡ ಬಳಿಕ ಝೆಲೆನ್ಸ್ಕಿ ಅಲ್ಲಿಗೆ ಭೇಟಿ ನೀಡಿ ವಾಪಸ್ ಆಗುತ್ತಿದ್ದಾಗ ಕೀವ್‌ನ ಖಾರ್ಕಿವ್ ಪ್ರದೇಶದಲ್ಲಿ ಘಟನೆ ಸಂಭವಿಸಿದೆ. ಇದನ್ನೂ ಓದಿ: ಯುದ್ಧದ ನಡುವೆ ಫೋಟೋಶೂಟ್ ಮಾಡಿಸಿಕೊಂಡ ಝೆಲೆನ್ಸ್ಕಿ ದಂಪತಿ – ಸೈನಿಕರ ಸಾವಿನ ನಡುವೆ ಶೋಕಿ ಎಂದ ನೆಟ್ಟಿಗರು

    ಝೆಲೆನ್ಸ್ಕಿ ಸಂಚರಿಸುತ್ತಿದ್ದ ಕಾರಿಗೆ ನಾಗರೀಕರು ಸಂಚರಿಸುತ್ತಿದ್ದ ವಾಹನವೊಂದು ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಸಣ್ಣ ಪುಟ್ಟ ಗಾಯಗಳೊಂದಿಗೆ ಝೆಲೆನ್ಸ್ಕಿ ಮತ್ತು ಅಂಗರಕ್ಷಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೂಡಲೇ ಘಟನಾ ಸ್ಥಳದಿಂದ ಆಂಬುಲೆನ್ಸ್ ಮೂಲಕ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಇದನ್ನೂ ಓದಿ: ಟೇಕ್ ಆಫ್ ಆಗುವ ಮೊದಲೇ ಏರ್‌ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಇಂಜಿನ್‍ನಲ್ಲಿ ಬೆಂಕಿ

    ಝೆಲೆನ್ಸ್ಕಿ ಕಾರು ಪಘಾತಕ್ಕೀಡಾಗಿ ಯಾವುದೇ ಅಪಾಯ ಸಂಭವಿಸಿಲ್ಲ. ಸುರಕ್ಷಿತವಾಗಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳಿಗೆ ವಕ್ತಾರ ಸೆರ್ಗಿ ನಿಕಿಫೊರೊವ್  (Sergii Nikiforov) ಮಾಹಿತಿ ಹಂಚಿಕೊಂಡಿದ್ದಾರೆ. ಅಲ್ಲದೆ ಈ ಬಗ್ಗೆ ತನಿಖೆಗೆ ನಿರ್ದೇಶಿಸಲಾಗಿದೆ ಎಂದರು.

    Live Tv
    [brid partner=56869869 player=32851 video=960834 autoplay=true]

  • ಯುದ್ಧದ ನಡುವೆ ಫೋಟೋಶೂಟ್ ಮಾಡಿಸಿಕೊಂಡ ಝೆಲೆನ್ಸ್ಕಿ ದಂಪತಿ – ಸೈನಿಕರ ಸಾವಿನ ನಡುವೆ ಶೋಕಿ ಎಂದ ನೆಟ್ಟಿಗರು

    ಯುದ್ಧದ ನಡುವೆ ಫೋಟೋಶೂಟ್ ಮಾಡಿಸಿಕೊಂಡ ಝೆಲೆನ್ಸ್ಕಿ ದಂಪತಿ – ಸೈನಿಕರ ಸಾವಿನ ನಡುವೆ ಶೋಕಿ ಎಂದ ನೆಟ್ಟಿಗರು

    ಕೀವ್: ಉಕ್ರೇನ್ ವಿರುದ್ಧ ರಷ್ಯಾ ಯುದ್ಧ ಮುಂದುವರಿಸುತ್ತಿದ್ದರೆ ಇತ್ತ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಪತ್ನಿಯೊಂದಿಗೆ ಫೋಟೋಶೂಟ್ ಮಾಡಿಸಿಕೊಂಡು ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

    ಉಕ್ರೇನ್ ವಿರುದ್ಧ ರಷ್ಯಾ ಸೈನಿಕರು ಕಳೆದ ಫೆಬ್ರವರಿ ತಿಂಗಳಿಂದ ಯುದ್ಧ ಮಾಡುತ್ತಿದ್ದು, ಈಗಾಗಲೇ ಎರಡೂ ದೇಶಗಳ ಸಾವಿರಾರೂ ಸೈನಿಕರು ಮೃತಪಟ್ಟಿದ್ದಾರೆ. ಉಕ್ರೇನ್‍ನ ಕೀವ್ ಸೇರಿದಂತೆ ಬಹುತೇಕ ಪ್ರದೇಶಗಳಿಗೆ ರಷ್ಯಾ ಸೈನ್ಯ ದಾಳಿ ನಡೆಸಿ ಆಸ್ತಿ-ಪಾಸ್ತಿ ಹಾನಿಗೊಳಿಸಿದೆ. ಈ ನಡುವೆ ಇದೀಗ ಝೆಲೆನ್ಸ್ಕಿ ದಂಪತಿ ಸ್ಥಳೀಯ ಪತ್ರಿಕೆಯ ಮುಖಪುಟದ ವಿನ್ಯಾಸಕ್ಕಾಗಿ ಫೋಟೋಶೂಟ್ ಮಾಡಿಸಿಕೊಂಡಿದ್ದಾರೆ. ಇದನ್ನೂ ಓದಿ: ಅಮೆರಿಕದಲ್ಲಿ ಆರ್ಥಿಕ ಹಿಂಜರಿತ? – ಉತ್ತರ ಕೊಟ್ಟ ಬೈಡನ್

    ಝೆಲೆನ್ಸ್ಕಿ ದಂಪತಿ ಯುದ್ಧದ ನಡುವೆ ಯುದ್ಧೋಪಕರಣಗಳ ಬಳಿ ಮತ್ತು ಸೈನಿಕರ ನಡುವೆ ನಿಂತು ಫೋಟೋ ತೆಗೆಸಿಕೊಂಡಿದ್ದಾರೆ. ಫೋಟೋಶೂಟ್‍ ಅನ್ನು ಖ್ಯಾತ ಛಾಯಾಗ್ರಾಹಕ ಅನ್ನಿ ಲೀಬೊವಿಟ್ಜ್ ಮಾಡಿದ್ದಾರೆ. ಫೋಟೋಶೂಟ್‍ನಲ್ಲಿ ಝೆಲೆನ್ಸ್ಕಿ ಕಟ್ಟಡದ ಮೆಟ್ಟಿಲುಗಳ ಮೇಲೆ ನಿಂತು ವೀರನಂತೆ ಕಾಣಿಸಿಕೊಂಡಿದ್ದಾರೆ. ಜೊತೆಗೆ ಮಿಲಿಟರಿ ಬಂಕರ್‌ಗಳಲ್ಲಿ ಬಳಸಲಾದ ಮರಳಿನ ಚೀಲಗಳನ್ನು ಹೊತ್ತೊಯ್ದಂತೆ ಕಾಣಿಸಿಕೊಂಡಿದ್ದಾರೆ. ಇದನ್ನೂ ಓದಿ: ಶಿಕ್ಷಕರ ನೇಮಕಾತಿ ಹಗರಣ ಪಾರ್ಥ ಚಟರ್ಜಿ ಆಪ್ತೆ ಮನೆ ಮೇಲೆ ಇಡಿ ದಾಳಿ – 50 ಕೋಟಿ ರೂ., 5 ಕೆ.ಜಿ ಚಿನ್ನ ಪತ್ತೆ

    https://twitter.com/Levi_godman/status/1552031687365861376

    ಇನ್ನೊಂದೆಡೆ ಬ್ರಿಟನ್ ಉಕ್ರೇನ್‍ಗೆ ಭಾರೀ ಪ್ರಮಾಣದ ಮಿಲಿಟರಿ ನೆರವು ನೀಡಿ ನಾಗರಿಕರಿಗೆ ಆಶ್ರಯವನ್ನೂ ನೀಡಿತ್ತು. ಇದರಿಂದ ಉಕ್ರೇನ್‍ಗೆ ಸಹಾಯವಾಗಿತ್ತು. ಬ್ರಿಟನ್ ಇದುವರೆಗೆ ಸುಮಾರು 86,000 ಉಕ್ರೇನಿಯನ್ನರಿಗೆ ವೀಸಾಗಳನ್ನು ಒದಗಿಸಿದ್ದು, ಅದರಲ್ಲಿ ಸುಮಾರು 27,000 ಜನರು ಬ್ರಿಟನ್‍ಗೆ ತಲುಪಿದ್ದಾರೆ. ಯುದ್ಧಪೀಡಿತ ಉಕ್ರೇನ್‍ಗೆ ಬ್ರಿಟನ್ 1.3 ಶತಕೋಟಿ ಪೌಂಡ್ (12 ಸಾವಿರ ಕೋಟಿ ರೂ.) ಮಿಲಿಟರಿ ಸಹಾಯ ನೀಡುವುದಾಗಿ ಬ್ರಿಟನ್ ಭರವಸೆ ನೀಡಿತ್ತು. ಅದರಂತೆ ಶಸ್ತ್ರಾಸ್ತ್ರಗಳನ್ನು ಪೂರೈಕೆ ಮಾಡಿದೆ. ಆದರೆ ಝೆಲೆನ್ಸ್ಕಿ ಮಾತ್ರ ಯುದ್ಧದ ನಡುವೆ ಈ ರೀತಿ ಫೋಟೋ ಶೂಟ್‍ನಲ್ಲಿ ಕಾಣಿಸಿಕೊಂಡಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಇದೀಗ ಸಾಮಾಜಿಕ ಜಾಲತಾಣದಲ್ಲಿ ಫೋಟೋಶೂಟ್‌ಗಳ  ಬಗ್ಗೆ ಕಾಮೆಂಟ್ ಹರಿದಾಡುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ರಷ್ಯಾ 2 ಲಕ್ಷ ಉಕ್ರೇನ್ ಮಕ್ಕಳನ್ನು ಅಪಹರಿಸಿದೆ – ಝಲೆನ್ಸ್ಕಿ ಗಂಭೀರ ಆರೋಪ

    ರಷ್ಯಾ 2 ಲಕ್ಷ ಉಕ್ರೇನ್ ಮಕ್ಕಳನ್ನು ಅಪಹರಿಸಿದೆ – ಝಲೆನ್ಸ್ಕಿ ಗಂಭೀರ ಆರೋಪ

    ಕೀವ್: ಉಕ್ರೇನ್‌ನಲ್ಲಿ ರಷ್ಯಾದ ಆಕ್ರಮಣವು 100ನೇ ದಿನ ಸಮೀಪಿಸುತ್ತಿದೆ. ಈ ಹೊತ್ತಿನಲ್ಲೇ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ರಷ್ಯಾದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ರಷ್ಯಾ ಸುಮಾರು 2 ಲಕ್ಷ ಮಕ್ಕಳನ್ನು ಬಲವಂತವಾಗಿ ಕರೆದೊಯ್ದಿದೆ, 1 ಕೋಟಿಗೂ ಅಧಿಕ ಜನರು ವಲಸೆ ಹೋಗುವಂತೆ ಮಾಡಿದೆ ಎಂದು ಆರೋಪಿಸಿದ್ದಾರೆ.

    ಅಂತಾರಾಷ್ಟ್ರೀಯ ಮಕ್ಕಳ ದಿನ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಝಲೆನ್ಸ್ಕಿ, ರಷ್ಯಾದ ಕ್ರಿಮಿನಲ್ ಉದ್ದೇಶವು ಮಕ್ಕಳನ್ನು ಅಪಹರಣ ಮಾಡಿರುವುದು ಮಾತ್ರವಲ್ಲದೆ ವಲಸೆ ಹೋದವರು ಮತ್ತೆ ಉಕ್ರೇನ್‌ಗೆ ಮರಳದಂತೆ ಮಾಡಿದೆ. ಆದರೂ ಉಕ್ರೇನ್ ಅನ್ನು ವಶಪಡಿಸಿಕೊಳ್ಳಲು ಸಾಧ್ಯವಿಲ್ಲ. ನಮ್ಮ ಜನರು ಎಂದಿಗೂ ಶರಣಾಗುವುದಿಲ್ಲ. ನಮ್ಮ ದೇಶದ ಮಕ್ಕಳು ಆಕ್ರಮಣಕಾರರ ಆಸ್ತಿಯಾಗುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

    RUSSIA

    ಯುದ್ಧದ ನಡುವೆ ರಷ್ಯಾದ ಪಡೆಗಳು ಪೂರ್ವ ಡೊನ್ಬಾಸ್ ಪ್ರದೇಶದ ಮೇಲೆ ತಮ್ಮ ಹಿಡಿತ ಗಟ್ಟಿಗೊಳಿಸುತ್ತಿವೆ. ಇದಕ್ಕೆ ಪ್ರತಿದಾಳಿ ನಡೆಸುತ್ತಿರುವ ಉಕ್ರೇನ್ ಸೈನ್ಯವೂ ವಾಸ್ತವಿಕ ಆಡಳಿತ ಕೇಂದ್ರವಾದ ಕ್ರಾಮಾಟೋರ್ಸ್ಕ್ ಕಡೆಗೆ ಸ್ಥಿರವಾಗಿ ಹಿಮ್ಮೆಟ್ಟಿಸುತ್ತಿವೆ. ಕಳೆದ ಮೂರು ತಿಂಗಳಿನಿಂದ ರಷ್ಯಾದ ಆಕ್ರಮಣ 1.25 ಲಕ್ಷ ಚದರ ಕಿ.ಮೀ ವರೆಗೆ ಹೆಚ್ಚಾಗಿದೆ. ಸುಮಾರು 3 ಲಕ್ಷ ಕಿ.ಮೀ ಗಳಷ್ಟು ಸ್ಫೋಟಗೊಂಡ ಶಸ್ತ್ರಾಸ್ತ್ರಗಳಿಂದ ಕಲುಷಿತಗೊಂಡಿದೆ. ಒಟ್ಟಾರೆ ಶೇ.20 ರಷ್ಟು ಪ್ರದೇಶವನ್ನು ರಷ್ಯಾ ಸೈನ್ಯ ವಶಪಡಿಸಿಕೊಂಡಿದೆ. ಇದರಿಂದಾಗಿ 1.2 ಕೋಟಿ ಉಕ್ರೇನಿಯನ್ನರು ವಲಸೆ ಹೋಗಿದ್ದಾರೆ. 50 ಲಕ್ಷಕ್ಕೂ ಹೆಚ್ಚು ಮಂದಿ ವಿದೇಶಗಳಿಗೆ ತೆರಳಿದ್ದಾರೆ ಎಂದು ಆರೋಪಿಸಿದ್ದಾರೆ.

  • ಪುಟಿನ್‌ನೊಂದಿಗೆ ನೇರ ಮಾತುಕತೆಗೆ ನಾನು ಸಿದ್ಧ: ಝೆಲೆನ್ಸ್ಕಿ

    ಪುಟಿನ್‌ನೊಂದಿಗೆ ನೇರ ಮಾತುಕತೆಗೆ ನಾನು ಸಿದ್ಧ: ಝೆಲೆನ್ಸ್ಕಿ

    ಬರ್ನ್: ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಬುಧವಾರ ಯುದ್ಧವನ್ನು ನಿಲ್ಲಿಸಲು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಮಧ್ಯವರ್ತಿಗಳ ಬದಲು ನೇರವಾಗಿ ಮಾತನಾಡಲು ಸಿದ್ದನಿದ್ದೇನೆ ಎಂದು ತಿಳಿಸಿದ್ದಾರೆ.

    ದಾವೋಸ್‌ನಲ್ಲಿ ನಡೆದ ವಿಶ್ವ ಆರ್ಥಿಕ ಶೃಂಗಸಭೆಯ ವೇದಿಕೆಯಲ್ಲಿ ಪ್ರೇಕ್ಷಕರನ್ನು ಉದ್ದೇಶಿಸಿ ಮಾತನಾಡಿದ ಝೆಲೆನ್ಸ್ಕಿ, ಉಕ್ರೇನ್‌ನ ಎಲ್ಲಾ ಪ್ರದೇಶಗಳು ಯುದ್ಧದ ಪರಿಣಾಮದಿಂದ ಚೇತರಿಸಿಕೊಳ್ಳುವವರೆಗೂ ಹೋರಾಡಲಿದೆ. ಇದು ಮಾತುಕತೆಯ ಮೊದಲ ಹೆಜ್ಜೆಯಾಗಬಹುದು ಎಂದು ಹೇಳಿದರು. ಇದನ್ನೂ ಓದಿ: ಉಕ್ರೇನ್ ಮೇಲೆ ರಷ್ಯಾ ಯುದ್ಧ ಸಾರಿ ಇಂದಿಗೆ 3 ತಿಂಗಳು – ಪುಟ್ಟ ರಾಷ್ಟ್ರ ವಶಕ್ಕೆ ತಿಣುಕಾಟ

    ಇದಕ್ಕೂ ಮೊದಲು ರಷ್ಯಾದೊಂದಿಗೆ ಮಧ್ಯವರ್ತಿಗಳ ಮೂಲಕ ಮಾತುಕತೆ ನಡೆಸಿ ಯುದ್ಧವನ್ನು ನಿಲ್ಲಿಸುವ ಬಗ್ಗೆ ಚರ್ಚಿಸಲು ಝೆಲೆನ್ಸ್ಕಿ ಮುಂದಾಗಿದ್ದರು. ಆದರೆ ರಷ್ಯಾ ಅಧ್ಯಕ್ಷ ಇದಾವುದಕ್ಕೂ ಬಗ್ಗುವುದಿಲ್ಲ ಎಂಬುದು ಖಾತ್ರಿಯಾಗಿರುವುದರಿಂದ ಉಕ್ರೇನ್ ಅಧ್ಯಕ್ಷ ನೇರ ಮಾತುಕತೆ ನಡೆಸಲು ಸಿದ್ದರಿದ್ದಾರೆ ಎಂದಿದ್ದಾರೆ.

    ಕಳೆದ ವಾರ ಝೆಲೆನ್ಸ್ಕಿ ರಾಜತಾಂತ್ರಿಕತೆ ಇಲ್ಲದೇ ಯುದ್ಧವನ್ನು ನಿಲ್ಲಿಸುವುದು ಅಸಾಧ್ಯ ಎಂದು ತಿಳಿಸಿದ್ದರು. ಉಕ್ರೇನ್‌ನ 2ನೇ ಮುಖ್ಯ ನಗರವಾದ ಖಾರ್ಕೀವ್‌ನಲ್ಲಿ ನಮ್ಮ ಪಡೆ ರಷ್ಯಾ ವಿರುದ್ಧ ಪರಿಣಾಮಕಾರಿಯಾಗಿ ಹೋರಾಡುತ್ತಿದೆ. ಆದರೆ ಡಾನ್ಬಾಸ್ ನಗರದಲ್ಲಿ ರಕ್ತಸಿಕ್ತ ಪರಿಸ್ಥಿತಿ ಉಂಟಾಗಿದೆ. ಅಲ್ಲಿ ನಮ್ಮ ಹಲವು ನಾಗರಿಕರನ್ನು ಕಳೆದುಕೊಂಡಿದ್ದೇವೆ ಎಂದಿದ್ದಾರೆ. ಇದನ್ನೂ ಓದಿ: ದಾವೋಸ್‌ನಲ್ಲೂ ಆಪರೇಷನ್ ಕಮಲದ ಸದ್ದು- ಸಿಎಂಗೆ ನೀವು ಸ್ಟೇಬಲ್ ಇದ್ದೀರಾ ಎಂದ ಮಿತ್ತಲ್

    ರಷ್ಯಾ ಉಕ್ರೇನ್ ಮೇಲೆ ಯುದ್ಧ ಸಾರಿ 3 ತಿಂಗಳು ಕಳೆದಿದೆ. ಜಗತ್ತಿನ 2ನೇ ಅತೀ ದೊಡ್ಡ ರಾಷ್ಟ್ರ ಪುಟ್ಟ ಉಕ್ರೇನ್ ಅನ್ನು ಇನ್ನೂ ಕೂಡಾ ಸಂಪೂರ್ಣವಾಗಿ ವಶಪಡಿಸಿಕೊಳ್ಳಲು ಸಾಧ್ಯವಾಗಿಲ್ಲ. ಉಕ್ರೇನ್ ರಾಜಧಾನಿ ಕೀವ್ ನಗರದ ಮೇಲೆ ದಾಳಿ ನಡೆಸಿ ಅಪಾರ ಸಾವು-ನೋವು ಮಾಡಿದೆ ಬಿಟ್ಟರೆ, ಸಣ್ಣ ಪುಟ್ಟ ಗೆಲುವು ಸಾಧಿಸಿದೆ.

  • ರಾಜತಾಂತ್ರಿಕತೆಯಿಂದ ಮಾತ್ರ ಯುದ್ಧ ನಿಲ್ಲಿಸಲು ಸಾಧ್ಯ: ಝೆಲೆನ್ಸ್ಕಿ

    ರಾಜತಾಂತ್ರಿಕತೆಯಿಂದ ಮಾತ್ರ ಯುದ್ಧ ನಿಲ್ಲಿಸಲು ಸಾಧ್ಯ: ಝೆಲೆನ್ಸ್ಕಿ

    ಕೀವ್: ರಾಜತಾಂತ್ರಿಕತೆಯಿಂದ ಮಾತ್ರ ರಷ್ಯಾ – ಉಕ್ರೇನ್ ನಡುವಿನ ಯುದ್ಧವನ್ನು ಕೊನೆಗೊಳಿಸಬಹುದು ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಹೇಳಿದ್ದಾರೆ.

    ಉಕ್ರೇನ್‍ಗೆ ಭೇಟಿ ನೀಡುತ್ತಿರುವ ಪೋರ್ಚುಗೀಸ್ ಪ್ರಧಾನಿ ಆಂಟೋನಿಯೊ ಕೋಸ್ಟಾ ಅವರೊಂದಿಗೆ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ, ಸಂಪೂರ್ಣ ಮಿಲಿಟರಿ ವಿಜಯಕ್ಕಿಂತ ರಾಜತಾಂತ್ರಿಕ ಪ್ರಗತಿಯಿಂದ ಮಾತ್ರ ರಷ್ಯಾದೊಂದಿಗಿನ ಯುದ್ಧವನ್ನು ಕೊನೆಗೊಳಿಸಬಹುದು ಎಂದು ಹೇಳಿದ್ದಾರೆ.

    Russia-UkraineWar

    ಯುದ್ಧವು ರಕ್ತಮಯವಾಗಿರುತ್ತದೆ, ಹೋರಾಟ ಇರುತ್ತದೆ. ಆದರೆ ರಾಜತಾಂತ್ರಿಕತೆಯ ಮೂಲಕ ಮಾತ್ರ ಯುದ್ಧವನ್ನು ಕೊನೆಗೊಳಿಸಬಹುದು. ಉಕ್ರೇನ್ ಮತ್ತು ರಷ್ಯಾ ನಡುವಿನ ಚರ್ಚೆಗಳು ನಿರ್ಣಾಯಕವಾಗಿ ನಡೆಯುತ್ತವೆ. ಅದು ಯಾವ ಸ್ವರೂಪದಲ್ಲಿ ನನಗೆ ಗೊತ್ತಿಲ್ಲ. ಆದರೆ ಫಲಿತಾಂಶವು ಉಕ್ರೇನ್‍ಗೆ “ನ್ಯಾಯಯುತ” ಎಂದು ಝೆಲೆನ್ಸ್ಕಿ ಭರವಸೆ ನೀಡಿದರು. ಇದನ್ನೂ ಓದಿ: ಉಪಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಮುಖಭಂಗ, ಬಿಜೆಪಿಯಿಂದ ಸ್ಪರ್ಧಿಸಿದ ಗಂಡ-ಹೆಂಡತಿ ಜಯಭೇರಿ

    ಫಿನ್‍ಲ್ಯಾಂಡ್ ನ್ಯಾಟೋ ಸದಸ್ಯತ್ವ ಪಡೆಯಲು ಅರ್ಜಿ ಸಲ್ಲಿಸುತ್ತಿದ್ದಂತೆ ರಷ್ಯಾ ನೈಸರ್ಗಿಕ ಅನಿಲ ಸರಬರಾಜನ್ನು ನಿಷೇಧಿಸಿದೆ. ಜೊತೆಗೆ 963 ಅಮೆರಿಕವನ್ನು ರಷ್ಯಾ ಪ್ರವೇಶಿಸದಂತೆ ನಿಷೇಧಿಸಿದೆ. ಈ ಯುದ್ಧದಿಂದಾಗಿ 64 ಲಕ್ಷ ಉಕ್ರೇನಿಯನ್ನರು ದೇಶದಿಂದ ಪಲಾಯನ ಮಾಡಿದ್ದಾರೆ. ಹಾಗಾಗಿ ಈ ಯುದ್ಧವನ್ನು ಬಗೆಹರಿಸಲು ರಾಜತಾಂತ್ರಿಕತೆಯೊಂದೆ ಪರಿಹಾರ ಎಂದು ರಷ್ಯಾ ಅಧ್ಯಕ್ಷ ವೊಲೋಡಿಮಿರ್ ಝಲೆನ್ಸ್ಕಿ ಹೇಳಿದ್ದಾರೆ. ಇದನ್ನೂ ಓದಿ: ಅಪಘಾತದಲ್ಲಿ ಮೃತಪಟ್ಟ 9 ಮಂದಿಯ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಣೆ

    ಈಗಾಗಲೇ ಮಾರಿಯುಪೋಲ್ ಉಕ್ಕಿನ ಸ್ಥಾವರದಿಂದ ಸುಮಾರು 2,500 ಉಕ್ರೇನಿಯನ್ ಸೈನಿಕರನ್ನು ಸೆರೆಹಿಡಿಯಲಾಗಿದೆ. 20,000 ಕ್ಕೂ ಹೆಚ್ಚು ಉಕ್ರೇನಿಯನ್ ಪ್ರಜೆಗಳು ಹತ್ಯೆಯಾಗಿದ್ದಾರೆ ಎಂದು ವರದಿಯಾಗಿದೆ.

    ಸುಮಾರು ಎರಡೂವರೆ ವರ್ಷಗಳ ನಂತರ, ಸ್ವಿಸ್ ಸ್ಕೀ ರೆಸಾರ್ಟ್ ಪಟ್ಟಣವಾದ ದಾವೋಸ್ ಮತ್ತೊಮ್ಮೆ ವಿಶ್ವ ಆರ್ಥಿಕ ವೇದಿಕೆಯ ವಾರ್ಷಿಕ ಸಭೆಯನ್ನು ಆಯೋಜಿಸಲು ಸಿದ್ಧವಾಗಿದೆ. ಭಾರತ ಸೇರಿದಂತೆ ಹಲವಾರು ಜಾಗತಿಕ ನಾಯಕರು ಉಕ್ರೇನ್ ಕುರಿತು ಚರ್ಚಿಸುವ ನಿರೀಕ್ಷೆಯಿದೆ.

  • ಫಿನ್ಲೆಂಡ್‌ಗೆ ರಷ್ಯಾ ಶಾಕ್ – ನೈಸರ್ಗಿಕ ಅನಿಲ ಸರಬರಾಜು ಸ್ಥಗಿತ

    ಫಿನ್ಲೆಂಡ್‌ಗೆ ರಷ್ಯಾ ಶಾಕ್ – ನೈಸರ್ಗಿಕ ಅನಿಲ ಸರಬರಾಜು ಸ್ಥಗಿತ

    ಮಾಸ್ಕೋ: ನ್ಯಾಟೋಗೆ ಸೇರಲು ಮುಂದಾದ ಫಿನ್ಲೆಂಡ್‌ಗೆ ರಷ್ಯಾ ಈಗ ಶಾಕ್ ಕೊಟ್ಟಿದೆ. ಇಂದಿನಿಂದ ಫಿನ್ಲೆಂಡ್‌ಗೆ ನೈಸರ್ಗಿಕ ಅನಿಲ ಸರಬರಾಜನ್ನು ಸ್ಥಗಿತಗೊಳಿಸಿದೆ.

    ರಷ್ಯಾ-ಉಕ್ರೇನ್ ಯುದ್ಧದ ನಡುವೆ ನ್ಯಾಟೋ ಸದಸ್ಯತ್ವಕ್ಕೆ ಅರ್ಜಿ ಸಲ್ಲಿಸಿದ ಫಿನ್ಲೆಂಡ್ ರುಬೆಲ್‌ನಲ್ಲಿ ಪಾವತಿಸುವ ಷರತ್ತನ್ನು ನಿರಾಕರಿಸಿತ್ತು. ಈ ಕಾರಣಕ್ಕೆ ರಷ್ಯಾ ಫಿನ್ಲೆಂಡ್‌ಗೆ ನೈಸರ್ಗಿಕ ಅನಿಲ ಸರಬರಾಜನ್ನು ಸ್ಥಗಿತಗೊಳಿಸಿದೆ ಎಂದು ಫಿನ್ನಿಷ್ ಸರ್ಕಾರಿ ಸ್ವಾಮ್ಯದ ಕಂಪೆನಿ ಹೇಳಿದೆ. ಇದನ್ನೂ ಓದಿ: ಮಸ್ಕ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ – ಬಾಯಿ ಮುಚ್ಚಿಸಲು ಕೋಟಿ ಹಣ ಸಂದಾಯ

     

    ಉಕ್ರೇನ್‌ನಲ್ಲಿನ ಯುದ್ಧದಿಂದಾಗಿ ರಷ್ಯಾದ ಕಚ್ಚಾತೈಲಗಳ ಮೇಲೆ ಯುರೋಪಿಯನ್ ಒಕ್ಕೂಟಗಳು ರಷ್ಯಾಮೇಲೆ ನಿರ್ಬಂಧ ಹೇರಲು ಮುಂದಾಗಿದ್ದವು. ಈ ವೇಳೆ ಸ್ನೇಹಪರವಲ್ಲದ ವಿದೇಶಿ ಖರೀದಿದಾರರು ರಷ್ಯಾದ ಕರೆನ್ಸಿಯಲ್ಲೇ ಗ್ಯಾಸ್‌ಗೆ ಖರೀದಿಸಬೇಕು ಎಂದು ರಷ್ಯಾ ಒತ್ತಾಯಿಸಿತ್ತು. ಫಿನ್ಲೆಂಡ್‌ ನ್ಯಾಟೋ ಸದಸ್ಯತ್ವಕ್ಕಾಗಿ ಅರ್ಜಿ ಸಲ್ಲಿಸಿದ ನಂತರ ರಷ್ಯಾ ಈ ಕ್ರಮಕೈಗೊಂಡಿರುವುದು ವಿಶೇಷ. ಇದನ್ನೂ ಓದಿ: ಜ್ಞಾನವಾಪಿ ಕೇಸ್ ವಾರಣಾಸಿ ಕೋರ್ಟ್‍ಗೆ ವರ್ಗಾವಣೆ – ವಾದ, ಪ್ರತಿವಾದ ಹೇಗಿತ್ತು?

    ಕಳೆದ ತಿಂಗಳ ಕೊನೆಯಲ್ಲಿ ಪೋಲೆಂಡ್ ಮತ್ತು ಬಲ್ಗೇರಿಯಾಗೆ ನೈಸರ್ಗಿಕ ಅನಿಲವನ್ನು ಸ್ಥಗಿತಗೊಳಿಸಿತ್ತು. ಆದರೆ, ಫಿನ್ಲೆಂಡ್‌ಗೆ ಅನಿಲ ಕಡಿತಗೊಳಿಸಿದ್ದು, ಇದರೊಂದಿಗೆ ಇತರ ಸಣ್ಣ-ಸಣ್ಣ ಗ್ರಾಹಕರೂ ರಷ್ಯಾದ ನೈಸರ್ಗಿಕ ಅನಿಲದಿಂದ ದೂರ ಸರಿಯಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

    12 ಸೇನಾ ಘಟಕ ಸ್ಥಾಪಿಸಲು ನಿರ್ಧಾರ: ನ್ಯಾಟೋ ವಿಸ್ತರಣೆಗೆ ಪ್ರತಿಯಾಗಿ ಪಶ್ಚಿಮದ ಮಿಲಿಟರಿ ಜಿಲ್ಲೆಯಲ್ಲಿ 12 ಹೊಸ ಸೇನಾ ಘಟಕಗಳು ಮತ್ತು ವಿಭಾಗಗಳ ನೆಲೆಯನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ ಎಂದು ರಷ್ಯಾ ರಕ್ಷಣಾ ಸಚಿವ ಸೆರ್ಗೈ ಶೋಯಿಗು ತಿಳಿಸಿದ್ದಾರೆ.

    ಸ್ವೀಡನ್ ಮತ್ತು ಫಿನ್ಲೆಂಡ್‌ ನ್ಯಾಟೋ ಸೇರಲು ಅರ್ಜಿ ಸಲ್ಲಿಸಿರುವುದನ್ನು ವರ್ಚುವಲ್ ಸಭೆಯಲ್ಲಿ ಉಲ್ಲೇಖಿಸಿದ ಅವರು, ಪಶ್ಚಿಮದ ಮಿಲಿಟರಿ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಬೆದರಿಕೆಗೆ ಪ್ರತಿಯಾಗಿ ಈ ನಿರ್ಧಾರಕ್ಕೆ ಬರಲಾಗಿದೆ. ಸೇನೆಯು ಎರಡು ಸಾವಿರಕ್ಕೂ ಹೆಚ್ಚು ಯೂನಿಟ್ ಸೇನಾ ಉಪಕರಣಗಳು ಮತ್ತು ಶಸ್ತ್ರಾಸ್ತ್ರಗಳನ್ನು ಶೀಘ್ರವೇ ಪಡೆಯಲಿದೆ ಎಂದು ಹೇಳಿದ್ದಾರೆ.

  • ರಷ್ಯಾ ಪಡೆ ನನ್ನನ್ನು ಸೆರೆ ಹಿಡಿಯಲು ಭಾರೀ ಹತ್ತಿರದಲ್ಲಿತ್ತು: ಝೆಲೆನ್ಸ್ಕಿ

    ರಷ್ಯಾ ಪಡೆ ನನ್ನನ್ನು ಸೆರೆ ಹಿಡಿಯಲು ಭಾರೀ ಹತ್ತಿರದಲ್ಲಿತ್ತು: ಝೆಲೆನ್ಸ್ಕಿ

    ಕೀವ್: ರಷ್ಯಾ ಪಡೆಗಳು ನನ್ನನ್ನು ಹಾಗೂ ನನ್ನ ಕುಟುಂಬವನ್ನು ಸೆರೆ ಹಿಡಿಯಲು ಬಹಳ ಹತ್ತಿರಕ್ಕೆ ಬಂದಿದ್ದವು ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಅನುಭವಿಸಿದ ಪರಿಸ್ಥಿತಿಯನ್ನು ಬಿಚ್ಚಿಟ್ಟಿದ್ದಾರೆ.

    ಅಲ್ಲಿನ ಶಬ್ಧ ಜೋರಾಗಿತ್ತು. ಭಾರೀ ಸ್ಫೋಟಗಳು ಅಲ್ಲಿ ಸಂಭವಿಸಿದ್ದವು. ನಾನಿದ್ದ ಸ್ಥಳ ಸುರಕ್ಷಿತವಲ್ಲ ಎಂಬುದು ತಕ್ಷಣವೇ ನನಗೆ ಖಾತ್ರಿಯಾಯಿತು. ರಷ್ಯಾ ಪಡೆಗಳು ನನ್ನನ್ನು ಹಾಗೂ ನನ್ನ ಕುಟುಂಬವನ್ನು ಕೊಲ್ಲಲು ಮುಂದಾಗಿವೆ ಎಂದು ನನಗೆ ಮಾಹಿತಿ ದೊರಕಿತು ಎಂದು ಭೀಕರ ಸನ್ನಿವೇಶದ ಬಗ್ಗೆ ತಿಳಿಸಿದರು. ಇದನ್ನೂ ಓದಿ: ಚೀನಿಗಳಿಗೆ ವೀಸಾ ಬಂದ್ ಮಾಡಿದ ಬೆನ್ನಲ್ಲೇ ಭಾರತೀಯ ವಿದ್ಯಾರ್ಥಿಗಳಿಗೆ ಬನ್ನಿ ಎಂದ ಚೀನಾ

    ಅಂತಹ ಸನ್ನಿವೇಶವನ್ನು ನಾನು ಅದಕ್ಕೂ ಮೊದಲು ಕೇವಲ ಸಿನಿಮಾಗಳಲ್ಲಿ ಮಾತ್ರವೇ ನೋಡಿದ್ದೆ. ತಕ್ಷಣ ನಮ್ಮ ಭದ್ರತಾ ಸಿಬ್ಬಂದಿ ನಮ್ಮ ಆವರಣವನ್ನು ಭದ್ರಪಡಿಸಲು ಯತ್ನಿಸಿದರು ಎಂದು ವಿವರಿಸಿದರು.

    ಹಿಂದಿನ ಪ್ರವೇಶದ್ವಾರದಲ್ಲಿ ಒಂದು ಗೇಟ್ ಅನ್ನು ಪೋಲಿಸ್ ಬ್ಯಾರಿಕೇಡ್‌ಗಳು ಹಾಗೂ ಪ್ಲೈವುಡ್ ಬೋರ್ಡ್‌ಗಳ ರಾಶಿಯಿಂದ ಮುಚ್ಚಲಾಗಿತ್ತು. ದಾಳಿಯ ಹಿಂದಿನ ರಾತ್ರಿ ದೀಪಗಳನ್ನು ಆರಿಸಲಾಗಿತ್ತು. ನಮ್ಮ ಕಾವಲುಗಾರರಿಗೆ ಹಾಗೂ ಎಲ್ಲಾ ಸಹಾಯಕರಿಗೂ ಬುಲೆಟ್ ಪ್ರೂಫ್ ಜಾಕೆಟ್ ಹಾಗೂ ರೈಫಲ್‌ಗಳನ್ನು ತರಿಸಲಾಗಿತ್ತು ಎಂದರು. ಇದನ್ನೂ ಓದಿ: ನನ್ನೊಂದಿಗೆ ಮಲಗದಿದ್ದರೆ ಇನ್ನೂ 20 ಪುರುಷರನ್ನು ಕರೆತರುವೆ: ರೇಪ್‌ಗೂ ಮುನ್ನ ರಷ್ಯಾ ಸೈನಿಕನ ಮಾತು

    ಝೆಲೆನ್ಸ್ಕಿ ತಮ್ಮ ನಿವಾಸದಲ್ಲಿ ಹೆಂಡತಿ ಹಾಗೂ ಮಕ್ಕಳೊಂದಿಗೆ ಇರುವಾಗಲೇ 2 ಬಾರಿ ರಷ್ಯಾ ಪಡೆಗಳು ಆಕ್ರಮಣ ಮಾಡಲು ಪ್ರಯತ್ನಿಸಿವೆ ಎಂದು ತಿಳಿಸಿದರು.

  • ವಿಕಿರಣ ವಿರೋಧಿ ಔಷಧಿ ಸಂಗ್ರಹಿಸಿ – ಉಕ್ರೇನಿಯನ್ನರಿಗೆ ಝೆಲೆನ್ಸ್ಕಿ ಕರೆ

    ವಿಕಿರಣ ವಿರೋಧಿ ಔಷಧಿ ಸಂಗ್ರಹಿಸಿ – ಉಕ್ರೇನಿಯನ್ನರಿಗೆ ಝೆಲೆನ್ಸ್ಕಿ ಕರೆ

    ಕೀವ್: ರಷ್ಯಾ ಉಕ್ರೇನ್ ಮೇಲೆ ಪರಮಾಣು ಬಾಂಬ್ ದಾಳಿ ನಡೆಸುವ ಬೆದರಿಕೆ ನಡುವೆಯೇ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಉಕ್ರೇನಿಯನ್ನರಿಗೆ ವಿಕಿರಣ ವಿರೋಧಿ ಔಷಧಿಗಳನ್ನು ಸಂಗ್ರಹಿಸಲು ಕರೆ ನೀಡಿದ್ದಾರೆ.

    ನಾವು ರಷ್ಯಾದ ಯಾವುದೇ ಬೆದರಿಕೆಗೂ ತಯಾರಾಗಿರಬೇಕು. ರಷ್ಯಾ ನಮ್ಮ ಮೇಲೆ ಯಾವುದೇ ಆಯುಧಗಳನ್ನೂ ಬಳಸಬಹುದು ಎಂಬುದು ನನಗೆ ಮನವರಿಕೆಯಾಗಿದೆ. ಹೀಗಾಗಿ ಇವುಗಳಿಂದಾಗಬಹುದಾದ ಅಡ್ಡ ಪರಿಣಾಮವನ್ನು ನಿಗ್ರಹಿಸಲು ವಿಕಿರಣ ವಿರೋಧಿ ಔಷಧಿಯನ್ನು ಸಂಗ್ರಹಿಸುವ ಅಗತ್ಯವಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಸ್ಮಾರ್ಟ್‌ಫೋನ್‌ನಿಂದ ಉಳಿಯಿತು ಉಕ್ರೇನ್‌ ಸೈನಿಕನ ಜೀವ

    ಫೆಬ್ರವರಿ 24 ರಂದು ರಷ್ಯಾ ಉಕ್ರೇನ್ ಮೇಲೆ ಯುದ್ಧ ಸಾರಿತ್ತು. ಇದಾದ ಕೆಲವೇ ದಿನಗಳಲ್ಲಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಪರಮಾಣು ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದ್ದರು. ಯಾವುದೇ ದೇಶ ಉಕ್ರೇನ್ ಪರವಾಗಿ ನಮ್ಮ ಮೇಲೆ ನೇರವಾಗಿ ಯುದ್ಧ ಮಾಡಿದರೆ ಪರಮಾಣು ದಾಳಿ ಮಾಡುವುದಕ್ಕೂ ನಾವು ಹಿಂಜರಿಯಲ್ಲ ಎಂದ ರಷ್ಯಾ ಹೇಳಿತ್ತು. ಉಕ್ರೇನ್ ಮೇಲೆ ಪರಮಾಣು ದಾಳಿಯ ಬೆದರಿಕೆಯಿದ್ದರೂ, ರಷ್ಯಾ ಇಲ್ಲಿಯವರೆಗೆ ಪರಮಾಣು ಶಸ್ತ್ರಾಸ್ತ್ರಗಳನ್ನು ಬಳಸಿರುವ ಬಗ್ಗೆ ವರದಿಯಾಗಿಲ್ಲ. ಇದನ್ನೂ ಓದಿ: ಶ್ರೀಲಂಕಾದಲ್ಲಿ ಒಂದೇ ದಿನ ಪೆಟ್ರೋಲ್ ಬೆಲೆ 84 ರೂ. ಏರಿಕೆ – ಪ್ರತಿಭಟನಾಕಾರರ ಮೇಲೆ ಫೈರಿಂಗ್

  • ರೈಲು ನಿಲ್ದಾಣದಲ್ಲಿ ರಾಕೆಟ್ ದಾಳಿ – 35 ಸಾವು

    ರೈಲು ನಿಲ್ದಾಣದಲ್ಲಿ ರಾಕೆಟ್ ದಾಳಿ – 35 ಸಾವು

    ಕೀವ್: ರಷ್ಯಾ-ಉಕ್ರೇನ್ ಯುದ್ಧ ಪ್ರಾರಂಭವಾಗಿ ಬಹುತೇಕ ಉಕ್ರೇನ್ ಅನ್ನು ಸರ್ವನಾಶ ಮಾಡಿರುವ ರಷ್ಯಾ ಶುಕ್ರವಾರ ಇನ್ನೊಂದು ಭೀಕರ ದಾಳಿ ನಡೆಸಿದೆ. ಉಕ್ರೇನ್‌ನ ಕ್ರಾಮಾಟೋರ್ಸ್ಕ್ ರೈಲು ನಿಲ್ದಾಣಕ್ಕೆ ರಾಕೆಟ್ ದಾಳಿ ನಡೆಸಿದ್ದು, 35 ಮಂದಿ ಸಾವನ್ನಪ್ಪಿದ್ದಾರೆ.

    ನಾಗರಿಕರನ್ನು ಸ್ಥಳಾಂತರಿಲು ಬಳಸಲಾಗುತ್ತಿದ್ದ ರೈಲು ನಿಲ್ದಾಣದ ಮೇಲೆ ಶುಕ್ರವಾರ ರಾಕೆಟ್ ದಾಳಿ ನಡೆದಿದ್ದು, 35 ಜನರು ಸಾವನ್ನಪ್ಪಿದ್ದಾರೆ ಹಾಗೂ ನೂರಾರು ಜನರು ಗಾಯಗೊಂಡಿದ್ದಾರೆ. ಆದರೆ ರಷ್ಯಾ ತಾನು ದಾಳಿ ನಡೆಸಿರುವುದನ್ನು ಅಲ್ಲೆಗಳೆದಿದೆ. ಇದನ್ನೂ ಓದಿ: ತುರ್ತು ಭೂಸ್ಪರ್ಶ ವೇಳೆ ಕಾರ್ಗೋ ವಿಮಾನ ಇಬ್ಬಾಗ

    ರಾಕೆಟ್ ದಾಳಿಯ ಬಳಿಕ ಪ್ರತಿಕ್ರಿಯಿಸಿದ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ, ರಷ್ಯಾವನ್ನು ಮಿತಿಯೇ ಇಲ್ಲದ ಕ್ರೂರಿ ಎಂದು ಟೀಕಿಸಿದ್ದಾರೆ. ಉಕ್ರೇನ್ ನಾಗರಿಕರನ್ನು ಸಿಕ್ಕ ಸಿಕ್ಕಲ್ಲಿ ಕೊಲ್ಲುತ್ತಿರುವ ರಷ್ಯಾವನ್ನು ಶಿಕ್ಷಿಸದಿದ್ದರೆ ಈ ಕ್ರೂರತನಕ್ಕೆ ಕೊನೆಯೇ ಇರುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಯಿಂದ ರಷ್ಯಾ ಸಸ್ಪೆಂಡ್‌

    ಇತ್ತೀಚೆಗೆ ಉಕ್ರೇನ್‌ನ ಬುಚಾ ನಗರದಲ್ಲಿ ರಷ್ಯಾ ಪಡೆಗಳು ಉಕ್ರೇನಿಯನ್ನರ ಭೀಕರ ಹತ್ಯೆಗೈದಿದ್ದು, ಇದನ್ನು ಭಾರತ ಸೇರಿದಂತೆ ಹಲವು ದೇಶಗಳು ಬಲವಾಗಿ ಖಂಡಿಸಿದೆ. ಬುಚಾ ನಗರದ ರಸ್ತೆಗಳಲ್ಲಿ ಉಕ್ರೇನಿಯನ್ನರ ಶವಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿರುವುದನ್ನು ಇತ್ತೀಚೆಗೆ ವರದಿ ಮಾಡಲಾಗಿತ್ತು.