Tag: volunteers

  • ಕೊರೊನಾ ನಿಯಂತ್ರಣಕ್ಕೆ ಮೈಸೂರು ಪೊಲೀಸರಿಂದ ವಿನೂತನ ಪ್ರಯತ್ನ – ಸ್ವಯಂ ಸೇವಕರಿಗೆ ಗುರುತಿನ ಚೀಟಿ

    ಕೊರೊನಾ ನಿಯಂತ್ರಣಕ್ಕೆ ಮೈಸೂರು ಪೊಲೀಸರಿಂದ ವಿನೂತನ ಪ್ರಯತ್ನ – ಸ್ವಯಂ ಸೇವಕರಿಗೆ ಗುರುತಿನ ಚೀಟಿ

    ಮೈಸೂರು: ಕೊರೋನಾ ವೈರಸ್ ರೂಪಾಂತರಿ ಓಮಿಕ್ರಾನ್ ಭೀತಿಯ ಹಿನ್ನೆಲೆಯಲ್ಲಿ ಜನರಲ್ಲಿ ಆತಂಕ ಹೆಚ್ಚುತ್ತಿದ್ದು, ಇದೀಗ ಮೈಸೂರಿ ಪೊಲೀಸರು ಕೊರೋನಾ ನಿಯಂತ್ರಣಕ್ಕೆ ಹೊಸದೊಂದು ಪ್ರಯತ್ನಕ್ಕೆ ಮುಂದಾಗಿದ್ದಾರೆ.

    ಮೈಸೂರು ಪೊಲೀಸರು ಸಾರ್ವಜನಿಕರ ಸಹಭಾಗಿತ್ವದಲ್ಲಿ ಕೋವಿಡ್ ನಿಯಂತ್ರಣದ ಬಗ್ಗೆ ಯೋಜಿಸಿದ್ದು, ಸ್ವಯಂ ಸೇವಕರಾಗಿ ಸೇವೆ ಸಲ್ಲಿಸಲು ಮುಂದೆ ಬರುವವರಿಗೆ ಗುರುತಿನ ಚೀಟಿ ವಿತರಿಸಲಿದ್ದಾರೆ. ಇದನ್ನೂ ಓದಿ: ಕಸ ಎಸೆದ ಯುವಕನಿಗೆ ರಸ್ತೆ ಮಧ್ಯೆ ಸಿಟಿ ರವಿ ಕ್ಲಾಸ್

    ಮೈಸೂರಿನ ಪ್ರತಿಯೊಂದು ಪೊಲೀಸ್ ಠಾಣೆಯಲ್ಲಿ 200 ಮಂದಿ ಸ್ವಯಂ ಸೇವಕರನ್ನು ನಿಯೋಜನೆ ಮಾಡುವ ಬಗ್ಗೆ ಚಿಂತನೆ ನಡೆಸಿದ್ದು, ಅವರಿಗೆ ಗುರುತಿನ ಚೀಟಿಯನ್ನೂ ವಿತರಿಸಲಾಗುತ್ತದೆ ಎಂದು ಮೈಸೂರು ನಗರ ಪೊಲೀಸ್ ಆಯುಕ್ತ ಡಾ. ಚಂದ್ರಗುಪ್ತ ಹೇಳಿದ್ದಾರೆ.

    ಕೋವಿಡ್ ನಿಯಂತ್ರಣಕ್ಕೆ ಬರುವವರೆಗೆ ಈ ಪ್ರಯತ್ನ ಮುಂದುವರಿಯಲಿದ್ದು, ನಂತರದ ದಿನಗಳಲ್ಲಿ ಬೇರೆ ಉದ್ದೇಶಗಳಿಗೂ ಸ್ವಯಂ ಸೇವಕರನ್ನು ಬಳಸಿಕೊಳ್ಳಲಾಗುತ್ತದೆ ಎಂದು ಹೇಳಿಕೆ ನೀಡಿದರು. ಇದನ್ನೂ ಓದಿ: ನೈಟ್ ಕರ್ಫ್ಯೂ ಮಾಡುವ ಬದಲು ಬೆಳಗ್ಗೆಯಿಂದಲೇ ಕರ್ಫ್ಯೂ ಜಾರಿ ಮಾಡಿ: ರೆಸಾರ್ಟ್ ಮಾಲೀಕರ ಅಕ್ರೋಶ

  • 7 ಹಸುಗಳ ಮೇಲೆ ಅತ್ಯಾಚಾರವೆಸೆಗಿದ ಕಾಮುಕ!

    7 ಹಸುಗಳ ಮೇಲೆ ಅತ್ಯಾಚಾರವೆಸೆಗಿದ ಕಾಮುಕ!

    – ಸ್ವಯಂಸೇವಕರಿಂದ ಧರ್ಮದೇಟು

    ಅಯೋಧ್ಯೆ: ಮದ್ಯದ ಅಮಲಿನಲ್ಲಿದ್ದ ಕಾಮುಕನೊಬ್ಬ ಗೋಶಾಲೆಯಲ್ಲಿದ್ದ ಹಸುಗಳ ಮೇಲೆ ಅತ್ಯಾಚಾರವೆಸಗಿದ ಅಮಾನವೀಯ ಕೃತ್ಯ ಅಯೋಧ್ಯೆ ನಗರದ ಕರ್ತಾಲಿಯ ಬಾಬಾ ಆಶ್ರಮದ ಗೋಶಾಲೆಯಲ್ಲಿ ನಡೆದಿದೆ.

    ಆರೋಪಿಯ ಹೆಸರು ರಾಜ್‍ಕುಮಾರ್ ಎಂಬುದು ತಿಳಿದು ಬಂದಿದೆ. ಆದರೆ ಆತನ ಇತರೇ ಮಾಹಿತಿ ಇನ್ನೂ ಲಭ್ಯವಾಗಿಲ್ಲ. ಕುಡಿದ ಅಮಲಿನಲ್ಲಿ ಆಶ್ರಮಕ್ಕೆ ಬರುತ್ತಿದ್ದ ಕಾಮುಕ ಗೋಶಾಲೆಯಲ್ಲಿದ್ದ ಏಳು ಹಸುಗಳ ಮೇಲೆ ಅತ್ಯಾಚಾರವೆಸಗಿದ್ದಾನೆ. ಈ ಕೃತ್ಯವು ಗೋಶಾಲೆಯಲ್ಲಿದ್ದ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.

    ಸಿಸಿಟಿವಿ ದೃಶ್ಯಾವಳಿಗಳನ್ನು ನೋಡಿದ ಆಶ್ರಮ ಸಿಬ್ಬಂದಿ ಹಾಗೂ ಸ್ವಯಂಸೇವಕರು ಕಾಮುಕನನ್ನು ಹಿಡಿಯಬೇಕು ಎಂದು ಗೋಶಾಲೆ ಮೇಲೆ ಹದ್ದಿನ ಕಣ್ಣು ಇಟ್ಟಿದ್ದರು. ಇದೇ ವೇಳೆ ಮತ್ತೆ ಕಾಮುಕ, ಹಸುಗಳ ಮೇಲೆ ಅತ್ಯಾಚಾರವೆಸಗಲು ಬಂದಾಗ ಆಶ್ರಮದ ಸ್ವಯಂಸೇವಕರು ಆತನನ್ನು ಹಿಡಿದು ಸಖತ್ ಗೂಸಾ ಕೊಟ್ಟು ಪೊಲೀಸರಿಗೆ ಒಪ್ಪಿಸಿದ್ದಾರೆ.

    ಸದ್ಯ ಆರೋಪಿ ವಿರುದ್ಧ ಐಪಿಸಿ ಸೆಕ್ಷನ್ 376 ಮತ್ತು 511ರ ಪ್ರಾಣಿಗಳ ವಿರುದ್ಧ ಕ್ರೌರ್ಯ ನಡೆಸುವ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಅಲ್ಲದೆ ಆರೋಪಿಯು ವಿಚಾರಣೆ ವೇಳೆ ತಾನು ಕುಡಿದ ಮತ್ತಿನಲ್ಲಿ ಏನು ಮಾಡಿದೆ ಎಂದು ಗೊತ್ತಿಲ್ಲ. ಆದರೆ ಜನ ನನ್ನನ್ನು ಹೊಡೆದಿರುವುದು ಮಾತ್ರ ನೆನಪಿದೆ ಎಂದು ಹೇಳಿದ್ದಾನೆ.