Tag: vote

  • ಚಾಮುಂಡೇಶ್ವರಿಯಲ್ಲಿ ಸಾಕಷ್ಟು ಅಭಿವೃದ್ಧಿ ಮಾಡಿದ್ರೂ ಜನ ಸೋಲಿಸಿಬಿಟ್ರು: ಸಿದ್ದರಾಮಯ್ಯ

    ಚಾಮುಂಡೇಶ್ವರಿಯಲ್ಲಿ ಸಾಕಷ್ಟು ಅಭಿವೃದ್ಧಿ ಮಾಡಿದ್ರೂ ಜನ ಸೋಲಿಸಿಬಿಟ್ರು: ಸಿದ್ದರಾಮಯ್ಯ

    – ಬಾದಾಮಿ ಜನ ಒಳ್ಳೆಯವರು ಒಂದೇ ದಿನ ಪ್ರಚಾರ ಮಾಡಿದ್ದರು ಗೆಲ್ಲಿಸಿಬಿಟ್ಟರು

    ಬಾಗಲಕೋಟೆ: ಚಾಮುಂಡೇಶ್ವರಿಯಲ್ಲಿ ಸಾಕಷ್ಟು ಅಭಿವೃದ್ಧಿ ಮಾಡಿದ್ದರು ಜನ ಸೋಲಿಸಿಬಿಟ್ಟರು. ಆದರೆ ಬಾದಾಮಿ ಜನ ಒಳ್ಳೆಯವರು ಒಂದೇ ದಿನ ಪ್ರಚಾರ ಮಾಡಿದ್ದರು ಗೆಲ್ಲಿಸಿಬಿಟ್ಟರು. ಚಾಮುಂಡೇಶ್ವರಿ ಸೋಲಿನ ಕಹಿ ನೆನಪುಗಳನ್ನು ಮಾಜಿ ಸಿಎಂ ಸಿದ್ದರಾಮಯ್ಯ ಮೆಲಕು ಹಾಕಿದ್ದಾರೆ.

    ಬಾದಾಮಿ ಜನ ಬಹಳ ಒಳ್ಳೆಯವರು, ನಾನು ಒಂದಿನ ಬಂದು ನಾಮಿನೇಷನ್ ಹಾಕಿದೆ, ಒಂದು ದಿನವಷ್ಟೆ ಪ್ರಚಾರಕ್ಕೆ ಬಂದಿದ್ದೇನು. ಬಾದಾಮಿಯಲ್ಲಿ ಜನ ನನ್ನನ್ನು ಗೆಲ್ಲಿಸಿಬಿಟ್ಟರು. ಆ ಚಾಮುಂಡೇಶ್ವರಿ ಜನ ಅಷ್ಟೊಂದು ಅಭಿವೃದ್ಧಿ ಮಾಡಿದರೂ ಸೋಲಿಸಿ ಬಿಟ್ಟರು ಎಂದು ಮತ್ತೆ ಸಿದ್ದರಾಮಯ್ಯ ಚಾಮುಂಡೇಶ್ವರಿ ಸೋಲಿನ ಕುರಿತಾಗಿ ಬಾದಾಮಿಯಲ್ಲಿ ಹೇಳಿದ್ದಾರೆ. ಇದನ್ನೂ ಓದಿ: ನಟಿ ವಿಜಯಲಕ್ಷ್ಮಿ ತಾಯಿ ನಿಧನ

    ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಬನಶಂಕರಿಯಲ್ಲಿ ಪ್ರವಾಸೋದ್ಯಮ ಇಲಾಖೆಯಿಂದ ತ್ರಿಸ್ಟಾರ್ ಹೊಟೇಲ್ ನಿರ್ಮಾಣದ ಅಡಿಗಲ್ಲು ಸಮಾರಂಭದಲ್ಲಿ ಸಿದ್ದರಾಮಯ್ಯ ಮಾತನಾಡಿದರು. ಎರಡು ಬಾರಿ ಮಾತ್ರ ಜನ ಗೆಲ್ಲಿಸಿದ್ದಾರೆ. ಈಗ ನಮ್ಮ ಹುಡುಗನ ಗೆಲ್ಲಿಸಿದ್ದಾರೆ. ಈ ಕಾಪು ಸಿದ್ದಲಿಂಗಸ್ವಾಮಿ ಇದಾನಲ್ಲ ಇವನು ನನ್ನ ವಿರುದ್ಧ ಸ್ಪರ್ಧಿಸಿದ್ದರು. 2013ರಲ್ಲಿ ಏನಯ್ಯಾ ಸಿದ್ದಲಿಂಗಸ್ವಾಮಿ ಎಂದು ಕೇಳಿದ್ದೇನು. ರಾಜಕಾರಣಿಗಳು ಹೇಗಿರುತ್ತಾರೋ ಹಾಗೆ ಜನ ಇರುತ್ತಾರೆ ಎಂದಿದ್ದಾರೆ.

    ಅಭಿವೃದ್ಧಿ ವಿಚಾರದಲ್ಲಿ ರಾಜಕಾರಣ ಬರಬಾರದು. ನಾವು ವೈಯಕ್ತಿಕವಾಗಿ ಯಾರೂ ವೈರಿಗಳು ಅಲ್ಲ. ಚುನಾವಣೆ ಬಂದಾಗ ಚುನಾವಣೆ ಮಾಡೋಣ. ಮತ್ತೇ ಎಲೆಕ್ಷನ್ ಬಂತು, ಇನ್ನೂ ಒಂದೂವರೆ ವರ್ಷ ಇದೆ. ಒಂದೇ ಒಂದು ತಾಪತ್ರಯ ಎಂದರೆ ನಾನು ಬಾದಾಮಿಗೆ ಪದೇ ಪದೇ ಬರಲು ಆಗುತ್ತಿಲ್ಲ. ನಾನು ಬಾದಾಮಿ ನಿವಾಸಿನೂ ಅಲ್ಲ. ಸಂಸದ ಪಿಸಿ ಗದ್ದಿಗೌಡ ಬಾದಾಮಿ ನಿವಾಸಿ, ಹಾಗಂತ ಬಾದಾಮಿ ಅಭಿವೃದ್ಧಿಯಲ್ಲಿ ನಾನು ಹಿಂದೆ ಬಿದ್ದಿಲ್ಲ, ಮುಂಚೂಣಿಯಲ್ಲಿದ್ದೇನೆ. ಬಾದಾಮಿ ಅಭಿವೃದ್ಧಿಯಲ್ಲಿ ಮಾದರಿ ಕ್ಷೇತ್ರ ಮಾಡಲಾಗುತ್ತಿದೆ. ಬಾದಾಮಿ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶ್ವದ ಭೂಪಟದಲ್ಲಿದೆ. ಪ್ರವಾಸಿ ತಾಣದ ಅಭಿವೃದ್ಧಿಗೆ ವಿಶೇಷ ಒತ್ತು ಕೊಡಲಾಗುವುದು. ಆನಂದ್ ಸಿಂಗ್ ನನ್ನ ಆತ್ಮೀಯ ಸ್ನೇಹಿತ. ಪ್ರವಾಸೋದ್ಯಮ ಸಚಿವರಾಗಿ ಇರುವವರೆಗೂ ಬಾದಾಮಿ ಪ್ರವಾಸಿ ತಾಣ ಅಭಿವೃದ್ಧಿಗೆ ಅನುದಾನ ಕೊಡುತ್ತಾರೆ ಎನ್ನುವ ವಿಶ್ವಾಸವಿದೆ. ಏನಯ್ಯ ಅನುದಾನ ಕೊಡುತ್ತೀಯೊ ಇಲ್ಲವೋ ಎಂದು ಆನಂದ್ ಸಿಂಗ್ ಅವರನ್ನು ಸಿದ್ದರಾಮಯ್ಯ ಕೇಳಿದರು. ಕೊಡುತ್ತೇನೆ ಎಂದು ಆನಂದ್ ಸಿಂಗ್ ಹೇಳಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ತಪ್ಪಿದ ದೊಡ್ಡ ದುರಂತ – ಇದ್ದಕಿದ್ದಂತೆ ಕುಸಿದ ಮನೆ

    ಪುರಾತತ್ವ ಇಲಾಖೆ ಅಧಿಕಾರಿಗಳ ವಿರುದ್ಧ ಹರಿಹಾಯ್ದ ಸಿದ್ದರಾಮಯ್ಯ, ಅದೊಂದು ತೊಂದರೆ ಕೊಡುವ ಇಲಾಖೆ . ಬಾದಾಮಿ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಅಡ್ಡಿ ಬರುತ್ತಾರೆ. ಸ್ಮಾರಕಗಳ ಸಂರಕ್ಷಣೆ ಮಾಡಲಿ ಆದರೆ ಪ್ರತಿಯೊಂದಕ್ಕೂ ಅಡ್ಡಿ ಬಂದು ಅನುಮತಿ ತೆಗೆದುಕೊಳ್ಳಿ ಎನ್ನುತ್ತಾರೆ. ಹೀಗಾಗಿ ಸಂಸದ ಪಿ ಸಿ ಗದ್ದಿಗೌಡ ನೀವೂ ಪುರಾತತ್ವ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಳ್ಳಿ, ನಾನು ಈಗೊಮ್ಮೇ ಕರೆದು ಹೇಳಿದ್ದೇನೆ. ಪುರಾತತ್ವ ಇಲಾಖೆ ಏನು ಅಮೇರಿಕಾದಲ್ಲಿ ಇದೆ ಎಂದು ಅಧಿಕಾರಿಗಳು ತಿಳಿದುಕೊಂಡಿದ್ದಾರೆ ಏನು? ಅದು ಕೇಂದ್ರ ಸರ್ಕಾರದ ಅಧೀನದಲ್ಲಿ ಬರುವ ಇಲಾಖೆ. ಭಾರತ ದೇಶದಲ್ಲಿ ಇರುವ ಇಲಾಖೆಯಾಗಿದೆ. ಎಲ್ಲಾದಕ್ಕೂ ಅಡ್ಡಿ ಬರುತ್ತಾರೆ. ಮನೆ, ಶೌಚಾಲಯ, ನೀರಿನ ಟ್ಯಾಂಕ್, ಕಟ್ಟಿಕೊಳ್ಳಬೇಕಾದರೂ ಅಡ್ಡಿ ಪಡಿಸುತ್ತಾರೆ. ನಿಮ್ಮ ಕ್ಷೇತ್ರ ಹಂಪಿಯಲ್ಲೂ ಹೀಗೆ ಇದೆ ಆಲ್ಲವಾ ಎಂದು ಸಚಿವ ಆನಂದ್ ಸಿಂಗ್ ಅವರನ್ನು ಸಿದ್ದರಾಮಯ್ಯ ಕೇಳಿದರು. ಇದನ್ನೂ ಓದಿ:  ಸಹಾಯ ಬೇಕು, ಭಿಕ್ಷೆ ಅಂತ ಆದರೂ ಹೇಳಿ ಪರವಾಗಿಲ್ಲ: ನಟಿ ವಿಜಯಲಕ್ಷ್ಮಿ

    ಹೌದು ಎಲ್ಲದಕ್ಕೂ ಅಡ್ಡಿಪಡಿಸುತ್ತಾರೆ. ಬಾದಾಮಿ ಅಭಿವೃದ್ಧಿ ಹಿನ್ನೆಡೆಗೆ ಇದು ಒಂದು ಕಾರಣವಿದೆ. ನಾನು ಮುಖ್ಯಮಂತ್ರಿ ಇದ್ದಾಗ ಬಾದಾಮಿ ಅಭಿವೃದ್ಧಿ ಪಡಿಸಲಿಕ್ಕೆ ಆಗಲಿಲ್ಲ. ಯಾಕೆಂದರೆ ಯಾರ ಒತ್ತಾಯವೂ ಇರಲಿಲ್ಲ. ನಾನು ಬಾದಾಮಿ ಶಾಸಕನಾದ ಮೇಲೆ ಅಭಿವೃದ್ಧಿಗೆ ಒತ್ತು ನೀಡಿದ್ದೇನೆ ಎಂದರು.

  • ಮೇಕೆದಾಟು ಯೋಜನೆಗೆ ತಮಿಳುನಾಡಿನವರು ರಾಜಕೀಯ ಗಿಮಿಕ್ ಮಾಡುತ್ತಿದ್ದಾರೆ: ಗೋವಿಂದ್ ಕಾರಜೋಳ

    ಮೇಕೆದಾಟು ಯೋಜನೆಗೆ ತಮಿಳುನಾಡಿನವರು ರಾಜಕೀಯ ಗಿಮಿಕ್ ಮಾಡುತ್ತಿದ್ದಾರೆ: ಗೋವಿಂದ್ ಕಾರಜೋಳ

    ಹಾಸನ: ಮೇಕೇದಾಟು ಯೋಜನೆ ಜಾರಿ ಸೂಕ್ಷ್ಮ ವಿಚಾರವಾಗಿದ್ದು, ರಾಜ್ಯಕ್ಕೆ ಧಕ್ಕೆ ಯಾಗದ ರೀತಿ ಕೆಲಸ ಮಾಡಲಾಗುವುದು, ಇದರಲ್ಲಿ ಯಾವುದೇ ರಾಜಿ ಇಲ್ಲ ಎಂದು ನೀರಾವರಿ ಸಚಿವ ಗೋವಿಂದ್ ಕಾರಜೋಳ ತಿಳಿಸಿದರು.

    ಸಕಲೇಶಪುರ ತಾಲ್ಲೂಕಿನ ಎತ್ತಿನಹೊಳೆ ಯೋಜನೆ ಕಾಮಗಾರಿಸ್ಥಳ ವೀಕ್ಷಣೆಗೂ ಮುನ್ನಾ, ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಯೋಜನೆ ಕುಡಿಯುವ ನೀರಿನ ಯೋಜನೆಯಾಗಿದೆ, ನೀರಾವರಿ ಯೋಜನೆಯಲ್ಲ. ಆದ್ದರಿಂದ ತಮಿಳುನಾಡಿಗೆ ಕೊಡಬೇಕಾದ ನೀರನ್ನು ಕೊಡುತ್ತೇವೆ. ಯೋಜನೆ ವಿಚಾರವಾಗಿ ತಮಿಳುನಾಡು ವಿನಾಕಾರಣ ಕೇಸ್ ಹಾಕಿದೆ. ನಾವೂ ಕೂಡ ಕಾನೂನು ವ್ಯಾಪ್ತಿಯಲ್ಲಿ ಹೋರಾಟ ಮಾಡುತ್ತೇವೆ. ಖಂಡಿತವಾಗಿ ಯೋಜನೆ ಜಾರಿಗೆ ತರುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ಪಾಲಿಕೆ ಚುನಾವಣಾ ಫಲಿತಾಂಶ- ಮತದಾರರಿಗೆ, ಪಕ್ಷದ ಹಿರಿಯ ನಾಯಕರಿಗೆ ಸಿಎಂ ಧನ್ಯವಾದ

    ನೆಲಜಲ ರಕ್ಷಣೆ ಪ್ರಶ್ನೆ ಬಂದಾಗ ಬಿಜೆಪಿಯವರು ಪಕ್ಷಾತೀತವಾಗಿ ಹೋರಾಟ ಮಾಡುತ್ತಿದ್ದೇವೆ ಎಂದು ಹೇಳಿದರು. ತಮಿಳುನಾಡಿನಲ್ಲಿ ಈ ವಿಷಯದಲ್ಲಿ ರಾಜಕೀಯ ಗಿಮಿಕ್ ಮಾಡಲಾಗುತ್ತಿದೆ. ಈ ವಿಚಾರದಲ್ಲಿ ಪಕ್ಷದ ವಿಷಯ ಬರಲ್ಲ, ರಾಜ್ಯದ ವಿಷಯವಷ್ಟೆ ಬರುತ್ತೆ ಎಂದು ಹೇಳಿದರು.

    ಬೆಳಗಾವಿ ಗೆಲುವು ಸಂತಸ ತಂದಿದೆ

    ನಮ್ಮ ಅಭಿವೃದ್ಧಿ ಕೆಲಸಕ್ಕೆ ಮನ್ನಣೆಯಾಗಿ ನಿರೀಕ್ಷೆಯಂತೆ ಬೆಳಗಾವಿ ಮತದಾರರು ಪಕ್ಷಕ್ಕೆ ಬೆಂಬಲಿಸಿ ಗೆಲುವಿಗೆ ಕಾರಣರಾಗಿದ್ದಾರೆ. ಅಲ್ಲದೆ ಜನರ ಪ್ರೀತಿ ವಿಶ್ವಾಸ ನಂಬಿಕೆಗೆ ದ್ರೋಹ ಬಗೆಯದೆ ಆಡಳಿತ ನೀಡಿರುವ ಹಿನ್ನೆಲೆಯಲ್ಲಿ ಪಾಲಿಕೆ ನಮ್ಮ ಪಾಲಾಗಿದೆ ಎಂದರು.

    ಈ ಭಾಗದ ಪಕ್ಷದ ಶಾಸಕರು, ನಾಯಕರು ಶ್ರಮ ಹಾಕಿ ನಮ್ಮನ್ನು ಗೆಲ್ಲಿಸಿದ್ದಾರೆ. ಮುಂದಿನ ದಿನ ಜನ ಬಯಸಿದ ಆಡಳಿತ ನೀಡಿ ಪ್ರಭುತ್ವ ಸಾಧಿಸುತ್ತೇವೆ. ಯಾವತ್ತೂ ಕೂಡ ಬೆಳಗಾವಿಯಲ್ಲಿ ಬಹುಮತ ಇರಲಿಲ್ಲ. ಇಂದಿನ ಗೆಲುವು ಸಂತಸ ತಂದಿದೆ. ಉತ್ತಮ ಆಡಳಿತದ ಮೂಲಕ ಜನರ ಋಣ ತೀರುಸುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: ಸೌಂದರ್ಯಕ್ಕಿಂತ ಆರೋಗ್ಯವೇ ಮುಖ್ಯ: ರಮ್ಯಾ

    ಹುಬ್ಬಳ್ಳಿ, ಧಾರವಾಡದಲ್ಲಿ ಮತ್ತೆ ಜನ ನಮಗೆ ಆಶೀರ್ವಾದ ಮಾಡಿದ್ದಾರೆ. ಜನ ನೆಮ್ಮದಿಯಿಂದ ಇರುವಂತೆ ಆಡಳಿತ ನೀಡುವ ಭರವಸೆ ನೀಡಿದ ಅವರು ಈ ಎಲ್ಲಾ ಬೆಳವಣಿಗೆಗೆ ನರೇಂದ್ರ ಮೋದಿ ನಮ್ಮ ಪಕ್ಷದ ರೋಲ್ ಮಾಡೆಲ್. ಅವರ ಧ್ಯೇಯ ವಾಕ್ಯ ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ನಂತೆ ಅಡಳಿತ ನಡೆಸುತ್ತೇವೆ ಎಂದು ನುಡಿದಿದ್ದಾರೆ. ಇದನ್ನೂ ಓದಿ: ಬಿಜೆಪಿ ಓಕೆ, ಕಾಂಗ್ರೆಸ್ ಯಾಕೆ?:ಆರ್. ಅಶೋಕ್

    ಕಲ್ಬುರ್ಗಿಯಲ್ಲಿ ಕ್ಯಾಲುಕೆಲೇಷನ್ ಸ್ವಲ್ಪ ತಪ್ಪಾಗಿದೆ. ಇಲ್ಲದಿದ್ದರೆ ಬಿಜೆಪಿ ಇನ್ನಷ್ಟು ಹೆಚ್ಚು ಸ್ಥಾನ ಪಡೆಯುತ್ತಿತ್ತು . 2023ರ ಚುನಾವಣೆಯಲ್ಲೂ ಬಿಜೆಪಿ ಸ್ಪಷ್ಟ ಬಹುಮತ ದೊಂದಿಗೆ ಅಧಿಕಾರಕ್ಕೆ ಬರುವ ವಿಶ್ವಾಸ ವ್ಯಕ್ತಪಡಿಸಿದರು.

  • ನಾನು ರಾಷ್ಟ್ರಪತಿ ಚುನಾವಣೆಯ ಅಭ್ಯರ್ಥಿಯಲ್ಲ: ಶರದ್ ಪವಾರ್

    ನಾನು ರಾಷ್ಟ್ರಪತಿ ಚುನಾವಣೆಯ ಅಭ್ಯರ್ಥಿಯಲ್ಲ: ಶರದ್ ಪವಾರ್

    ಮುಂಬೈ: ನಾನು ರಾಷ್ಟ್ರಪತಿ ಚುನಾವಣೆಯ ಅಭ್ಯರ್ಥಿಯಲ್ಲ, ರಾಷ್ಟ್ರಪತಿ ಆಯ್ಕೆಗಾಗಿ ಮುಂದಿನ ವರ್ಷ ನಡೆಯಲಿರುವ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ ಎಂದು ಎನ್‍ಸಿಪಿ ವರಿಷ್ಠ ಶರದ್ ಪವಾರ್ ಹೇಳಿದ್ದಾರೆ. ಇದನ್ನೂ ಓದಿ: ಬಿಗ್‍ಬಾಸ್ ಮನೆಯಲ್ಲಿ ಕೊರೊನಾ ಆತಂಕ

    ಈ ಕುರಿತಂತೆ ಮುಂಬೈನಲ್ಲಿ ಮಾತನಾಡಿದ ಅವರು, ನಾನು ರಾಷ್ಟ್ರಪತಿ ಚುನಾವಣೆಯ ಅಭ್ಯರ್ಥಿಯಲ್ಲ.. ಅಲ್ಲದೆ 2024ರ ಲೋಕಸಭಾ ಚುನಾವಣೆಯ ಪ್ರಧಾನಿ ಅಭ್ಯರ್ಥಿಯೂ ಅಲ್ಲ ಎಂದು ಬುಧವಾರ ಸ್ಪಷ್ಟಪಡಿಸಿದ್ದಾರೆ.

    300ಕ್ಕೂ ಅಧಿಕ ಸಂಸದರನ್ನು ಹೊಂದಿರುವ ಪಕ್ಷ ಆಡಳಿತ ನಡೆಸುತ್ತಿದೆ. ಹೀಗಾಗಿ ರಾಷ್ಟ್ರಪತಿ ಚುನಾವಣೆಯ ಫಲಿತಾಂಶ ಏನಾಗಲಿದೆ ಎಂಬುದು ನನಗೆ ತಿಳಿದಿದೆ. ನಾನು ರಾಷ್ಟ್ರಪತಿ ಚುನಾವಣೆಯ ಅಭ್ಯರ್ಥಿ ಆಗಲಾರೆ. ಅಂತೆಯೇ 2024ರಲ್ಲಿ ನಡೆಯುವ ಲೋಕಸಭಾ ಚುನಾವಣೆ ಅಥವಾ ಮಹಾರಾಷ್ಟ್ರದ ವಿಧಾನಸಭಾ ಚುನಾವಣೆಗಳ ಬಗ್ಗೆ ಈಗ ಯಾವ ನಿರ್ಧಾರ ಕೈಗೊಂಡಿಲ್ಲ. ಚುನಾವಣೆಗಳು ಇನ್ನೂ ದೂರ ಇವೆ. ರಾಜಕೀಯ ಸನ್ನಿವೇಶಗಳೂ ಬದಲಾಗುತ್ತಲೇ ಇರುತ್ತವೆ ಎಂದೂ ಅವರು ಹೇಳಿದ್ದಾರೆ.

    ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಅವರು ರಾಹುಲ್ ಗಾಂಧಿ ಹಾಗೂ ಶಿವಸೇನಾ ಮುಖ್ಯ ವಕ್ತಾರ ಸಂಜತ್ ರಾವತ್ ಅವರ ಭೇಟಿ ಬೆನ್ನಲ್ಲೇ ಮಾತನಾಡಿದ್ದ ಸಂಜಯ್ ರಾವತ್, ಪ್ರಧಾನಿ ಹುದ್ದೆಗೆ ಶರದ್ ಪವಾರ್ ಅವರಿಗಿಂತ ಉತ್ತಮ ನಾಯಕ ತಮಗೆ ಕಾಣಿಸುತ್ತಿಲ್ಲ ಎಂಬ ಹೇಳಿಕೆ ವ್ಯಾಪಕ ಸುದ್ದಿಗೆ ಗ್ರಾಸವಾದ ಬೆನ್ನಲ್ಲೇ ಶರದ್ ಪವಾರ್ ಈ ಸ್ಪಷ್ಟನೆ ನೀಡಿದ್ದಾರೆ.

  • ಪಿಪಿಇ ಕಿಟ್ ಧರಿಸಿ ಕೊರೊನಾ ಸೋಂಕಿತರಿಂದ ಮತದಾನ

    ಪಿಪಿಇ ಕಿಟ್ ಧರಿಸಿ ಕೊರೊನಾ ಸೋಂಕಿತರಿಂದ ಮತದಾನ

    ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಕೊರೊನಾ ಆತಂಕದ ಮಧ್ಯೆ ಕೆಲ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯುತ್ತಿದ್ದು, ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಪಟ್ಟಣ ಪಂಚಾಯ್ತಿ ಚುನಾವಣೆ ನಡೆಯುತ್ತಿದೆ.

    ಬೆಳಗ್ಗೆ 07 ಗಂಟೆಯಿಂದ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಮತದಾರರು ಆಗಮಿಸಿ ಮತ ಚಲಾಯಿಸ್ತಿದ್ದಾರೆ. ಆದರೆ ಕೋವಿಡ್ ಆತಂಕ ಇರುವ ಕಾರಣ ಮತದಾರರು ಕಡ್ಡಾಯವಾಗಿ ಮಾಸ್ಕ್ ಧರಿಸಿ ಬರಬೇಕು. ಹಾಗೂ ಮತದಾರರ ಕೈಗಳಿಗೆ ಸ್ಯಾನಿಟೈಸರ್ ಹಾಕಿ ಥರ್ಮಲ್ ಸ್ಕ್ಯಾನರ್ ಮೂಲಕ ಟೆಂಪರೇಚರ್ ಚೆಕ್ ಮಾಡಿ ಬಿಡಲಾಗುತ್ತಿದೆ.

    11 ವಾರ್ಡುಗಳಿಗೆ ನಡೆಯುತ್ತಿರುವ ಚುನಾವಣೆಗೆ ಅಂತಿಮವಾಗಿ 50 ಅಭ್ಯರ್ಥಿಗಳು ಕಣದಲ್ಲಿ ಇದ್ದು 8847 ಮಂದಿ ಮತದಾರರಿದ್ದಾರೆ. ಈ ಚುನಾವಣೆ ಹಿನ್ನೆಲೆ ಕೊರೊನಾ ಸೋಂಕಿತರಿಗೂ ಮತದಾನಕ್ಕೆ ಅವಕಾಶ ನೀಡಲಾಗಿದ್ದು, ಕೊರೊನಾ ಸೋಂಕಿತರಿಗೆ 1 ಗಂಟೆ ಪ್ರತ್ಯೇಕ ಅವಕಾಶ ನೀಡಲಾಗಿದೆ. ಸಂಜೆ 05 ಗಂಟೆಯಿಂದ 06 ಗಂಟೆಯವರೆಗೆ ಕೊರೊನಾ ಸೋಂಕಿತರಿಗೆ ಮತದಾನಕ್ಕೆ ಅವಕಾಶ ನೀಡಲಾಗಿದ್ದು, ಪಿಪಿಐ ಕಿಟ್ ಮಾಸ್ಕ್ ಧರಿಸಿ ಬಂದು ಮತದಾನ ಮಾಡಲು ಅವಕಾಶವಿದೆ.

    29 ಕೊರೊನಾ ಸೋಂಕಿತ ಮತದಾರರು ಮತದಾನ ಮಾಡುವ ಮಾಹಿತಿ ಇದ್ದು, ಸೋಂಕಿತರ ಕರೆತರಲು ವಾಹನ ವ್ಯವಸ್ಥೆ ಮಾಡಲಾಗಿದೆ. 5 ಗಂಟೆ ನಂತರ ಕೊರೊನಾ ಸೋಂಕಿತ ಮತದಾರರನ್ನ ಕರೆತಂದು ಮತದಾನ ಮಾಡಿಸಲಾಗುವುದು ಅಂತ ಚುನಾವಣಾಧಿಕಾರಿ ವೆಂಕಟೇಶ್ ಪಬ್ಲಿಕ್ ಟಿವಿ ಗೆ ತಿಳಿಸಿದರು.

    ಚುನಾವಣಾಧಿಕಾರಿಗಳು ಸಹ ಕಡ್ಡಾಯವಾಗಿ ಫೇಸ್ ಶೀಲ್ಡ್ ಹಾಕಿಕೊಂಡಿರಬೇಕು. ಸದ್ಯ ಮತದಾನ ಪ್ರಕ್ರಿಯೆ ಶಾಂತಿಯುತವಾಗಿ ಜರುಗಿದ್ದು ಗುಡಿಬಂಡೆ ಪೊಲೀಸ್ ಠಾಣೆ ಪಿಐ ಲಿಂಗರಾಜು ಬಂದೋಬಸ್ತ್ ವ್ಯವಸ್ಥೆ ಮಾಡಿಕೊಂಡಿದ್ದಾರೆ.

  • ಮುಂದಿನ ಚುನಾವಣೆಯಲ್ಲಿ ಬಿಜೆಪಿಗೆ ಮತ ಹಾಕುವುದಿಲ್ಲ- ಸಾರಿಗೆ ನೌಕರರು

    ಮುಂದಿನ ಚುನಾವಣೆಯಲ್ಲಿ ಬಿಜೆಪಿಗೆ ಮತ ಹಾಕುವುದಿಲ್ಲ- ಸಾರಿಗೆ ನೌಕರರು

    – ಆರ್‍ಎಸ್‍ಎಸ್ ಕಾರ್ಯಕರ್ತರಿಂದ ಬೆದರಿಕೆ

    ಮಡಿಕೇರಿ: 6ನೇ ವೇತನ ಆಯೋಗ ಜಾರಿ ಮಾಡುವಂತೆ ಮುಷ್ಕರ ನಡೆಸುತ್ತಿರುವ ಸಾರಿಗೆ ನೌಕರರಿಗೆ ಆರ್‍ಎಸ್‍ಎಸ್ ಕಾರ್ಯಕರ್ತರಿಂದ ಬೆದರಿಕೆ ಇದ್ದು ಮುಂದಿನ ಚುನಾವಣೆಯಲ್ಲಿ ನಾವು ಬಿಜೆಪಿ ಸರ್ಕಾರಕ್ಕೆ ಮತ ಹಾಕುವುದಿಲ್ಲ ಎಂದು ಪ್ರತಿಭಟನಾ ನಿರತ ನೌಕರರು ಆಕ್ರೋಶ ಹೊರಹಾಕಿದ್ದಾರೆ.

    ಈ ಕುರಿತು ಮಾಧ್ಯಮದೊಂದಿಗೆ ಪ್ರತಿಕ್ರಿಯಿಸಿರುವ ಪುತ್ತೂರು ವಿಭಾಗದ ಮಡಿಕೇರಿ ಘಟಕದ ಚಾಲಕ ಕಂ ನಿರ್ವಾಹಕ ಮನು, ನಾನು ಕೂಡ ಪಕ್ಕ ಹಿಂದೂ ಕಾರ್ಯಕರ್ತ, ಆರ್‍ಎಸ್‍ಎಸ್ ಕಾರ್ಯಕರ್ತನಾಗಿದ್ದೆ. ಆದರೆ ಪ್ರತಿಭಟನೆ ಕೈಬಿಟ್ಟು ಬಸ್‍ಗಳನ್ನು ಚಲಾಯಿಸುವಂತೆ ನನಗೆ ಆರ್‍ಎಸ್‍ಎಸ್ ಕಾರ್ಯಕರ್ತರಿಂದ ಬೆದರಿಕೆ ಕರೆಗಳು ಬಂದಿವೆ ಎಂದು ತಿಳಿಸಿದ್ದಾರೆ.

    ಮತ್ತೊಂದೆಡೆ ಪುತ್ತೂರು ವಿಭಾಗದ ಅಧಿಕಾರಿಗಳು ಮಡಿಕೇರಿಯಲ್ಲಿ ಪ್ರತಿಭಟನೆ ನೇತೃತ್ವ ವಹಿಸುತ್ತಿದ್ದ ಮುಖಂಡರನ್ನು ರಾಮನಗರ ಡಿಪೋಗೆ ವರ್ಗಾವಣೆ ಮಾಡಿ ಆದೇಶ ಮಾಡಿದ್ದಾರೆ. ನಾವು ಇಂತಹ ಬೆದರಿಕೆಗೆಲ್ಲ ಹೆದರುವುದಿಲ್ಲ ಯಡಿಯೂರಪ್ಪ, ಲಕ್ಷ್ಮಣ ಸವದಿ ಅವರಿಗೆ ನಾವು ಹೆದರುವುದಿಲ್ಲ. ಇದೊಂದು ಹಠಮಾರಿ ಸರ್ಕಾರವಾಗಿದ್ದು, ಮುಂದಿನ ಬಾರಿ ನಾವು ಬಿಜೆಪಿಗೆ ವೋಟು ಹಾಕಲ್ಲ. ಮುಂದೆ ಜನರೇ ಇವರಿಗೆ ಬುದ್ಧಿ ಕಲಿಸಲಿದ್ದಾರೆ ಎಂದು ಎಚ್ಚರಿಕೆ ನೀಡಿದ್ದಾರೆ.

    ಮಡಿಕೇರಿ ಘಟಕದ ಟಿಸಿ ನೌಕರರ ಕ್ವಾಟ್ರಸ್‍ಗಳಲ್ಲಿ ಇದ್ದ ಹನ್ನೊಂದು ಕುಟುಂಬಗಳ ಕೆಎಸ್‍ಆರ್ ಟಿಸಿ ನೌಕರರು ಕರ್ತವ್ಯಕ್ಕೆ ಹಾಜರಾಗಬೇಕು. ತುರ್ತು ಸಂದರ್ಭಗಳಲ್ಲಿ ಕರ್ತವ್ಯ ನಿರ್ವಹಿಸುವವರಿಗಾಗಿ ಕ್ವಾಟ್ರಸ್ ಮಾಡಲಾಗಿದೆ. ಇಲ್ಲದಿದ್ದರೆ ಸೂಕ್ತ ಕ್ರಮ ವಹಿಸಲಾಗುವುದು ಎಂದು ಎಚ್ಚರಿಕೆಯ ನೊಟೀಸ್ ನೀಡಲಾಗಿದೆ. ಇದಕ್ಕೂ ಅಸಮಾಧಾನ ವ್ಯಕ್ತಪಡಿಸಿರುವ ನೌಕರರ ಕುಟುಂಬದವರು, ಎಚ್‍ಆರ್‍ಎ ಕಟ್ ಮಾಡಿಕೊಂಡು ನಮಗೆ ಕ್ವಾಟ್ರಸ್ ನೀಡಿದ್ದಾರೆ. ಒಂದು ಮನೆಯಲ್ಲಿ ಬಾಡಿಗೆ ಇದ್ದರೂ ಒಂದು ತಿಂಗಳ ಮುಂಚಿತವಾಗಿ ಮಾಹಿತಿ ನೀಡಿ ಮನೆ ಖಾಲಿ ಮಾಡಿಸುತ್ತಾರೆ. ಆದರೆ ಇದೀಗ ಕನಿಷ್ಠ ಮಾನವೀಯತೆ ಇಲ್ಲದವರಂತೆ ಸರ್ಕಾರ ನಡೆದುಕೊಳ್ಳುತ್ತಿದ್ದು, ಇದ್ದಕ್ಕಿದ್ದಂತೆ ಮನೆ ಖಾಲಿ ಮಾಡಿ ಎಂದರೆ ಎಲ್ಲಿಗೆ ಹೋಗಬೇಕು. ಕಳೆದ 20 ವರ್ಷಗಳಿಂದ ಸಂಸ್ಥೆಗಾಗಿ ದುಡಿದಿದ್ದೇವೆ. ಇಂದಿಗೂ ಕೇವಲ 10 ಸಾವಿರ ಸಂಬಳ ಸಿಗುತ್ತಿದೆ. ಕಳೆದ ಒಂದು ವರ್ಷದಿಂದ ಓಟಿಯೂ ಸಿಗುತ್ತಿಲ್ಲ. ಹೀಗಾದರೆ ನಮ್ಮ ಬದುಕು ಹೇಗೆ ಎನ್ನುವುದು ನೌಕರರ ಕುಟುಂಬದವರ ಪ್ರಶ್ನೆಯಾಗಿದೆ.

  • ಸೈಕಲ್‍ನಲ್ಲಿ ತೆರಳಿ ವೋಟ್ ಹಾಕಿದ್ದಕ್ಕೆ ವಿಜಯ್ ಸ್ಪಷ್ಟನೆ

    ಸೈಕಲ್‍ನಲ್ಲಿ ತೆರಳಿ ವೋಟ್ ಹಾಕಿದ್ದಕ್ಕೆ ವಿಜಯ್ ಸ್ಪಷ್ಟನೆ

    ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಸ್ಟಾರ್ ನಟ ವಿಜಯ್ ಸೈಕಲ್ ನಲ್ಲಿ ತೆರಳಿ ವೋಟ್ ಮಾಡಿರುವುದು ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಸದ್ಯ ಸ್ವತಃ ನಟನೆ ಈ ಬಗ್ಗೆ ಸ್ಪಷ್ಟನೆ ನೀಡುವ ಮೂಲಕ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

    ವೋಟ್ ಮಾಡಿ ಮನೆಗೆ ತೆರಳುವಾಗಲೂ ನಟನಿಗೆ ಅಭಿಮಾನಿಗಳಿಂದ ಕಿರಿಕಿರಿ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಅವರು ಮಾಧ್ಯಮಗಳಿಗೆ ಕೂಡ ಹೇಳಿಕೆ ನೀಡದೆ ಸ್ನೇಹಿತರ ಬೈಕಿನಲ್ಲಿ ಮನೆಗೆ ವಾಪಸ್ಸಾಗಿದ್ದರು. ನಂತರ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದ ನಟ, ನನ್ನ ಮತಗಟ್ಟೆ ತುಂಬಾ ಇಕ್ಕಟ್ಟಾದ ಸ್ಥಳದಲ್ಲಿದೆ. ಹೀಗಾಗಿ ಅಲ್ಲಿಗೆ ಕಾರಿನಲ್ಲಿ ತೆರಳಲು ಸಾಧ್ಯವಿಲ್ಲವಾಯಿತು. ಅಲ್ಲದೆ ಪಾರ್ಕಿಂಗ್ ಸಮಸ್ಯೆ ಕೂಡ ಉಂಟಾಗಬಹುದು ಎಂದು ಸೈಕಲ್ ನಲ್ಲಿ ತೆರಳಿ ವೋಟ್ ಹಾಕಿ ಬಂದೆ. ಆದರೆ ಇದರ ಹಿಂದೆ ಬೇರೆ ಯಾವುದೇ ಉದ್ದೇಶ ಇಲ್ಲ ಎಂದು ಸ್ಪಷ್ಟನೆ ಕೊಟ್ಟಿದ್ದಾರೆ.

    ನಟ ವಿಜಯ್ ಅವರು ನಿನ್ನೆ ಸೈಕಲ್‍ನಲ್ಲಿ ಚೆನ್ನೈನ ನೀಲಾಂಕರೈನಲ್ಲಿರುವ ವೆಲ್ಸ್ ಇಂಟರ್ ನ್ಯಾಷನಲ್ ಪ್ರೀ ಸ್ಕೂಲ್ ಮತಗಟ್ಟೆಗೆ ಬಂದಿದ್ದರು. ಈ ವೇಳೆ ಅಭಿಮಾನಿಗಳು ವಿಜಯ್ ಅವರ ಜೊತೆಯಲ್ಲಿ ಫೋಟೋ ಮತ್ತು ವೀಡಿಯೋವನ್ನು ಕ್ಲಿಕ್ಕಿಸಿಕೊಂಡಿದ್ದು, ಈ ಫೋಟೋ ಹಾಗೂ ವೀಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಸದ್ದು ಮಾಡಿದ್ದವು.

    ಅಲ್ಲದೆ ಹಲವರು ಹಲವು ರೀತಿಯ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದರು. ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಭಾರೀ ಪ್ರಮಾಣದಲ್ಲಿ ಏರಿಕೆ ಮಾಡಿರುವುದನ್ನು ಖಂಡಿಸಿ ವಿಜಯ್ ಸೈಕಲ್ ನಲ್ಲಿ ತೆರಳಿ ವೋಟ್ ಹಾಕಿದ್ದಾರೆ. ಈ ಮೂಲಕ ಬೆಲೆ ಏರಿಕೆಯನ್ನು ವಿಜಯ್ ಸಾಂಕೇತಿಕವಾಗಿ ಖಂಡಿಸಿದ್ದಾರೆ ಎಂದು ಭಾರೀ ಚರ್ಚೆಗೀಡಾಗಿತ್ತು.

  • ಒಂದು ವೋಟಿಗೆ 5 ಸಾವಿರ ಹಂಚಿದ ಮೇಲೆ ಚುನಾವಣೆ ಯಾಕೆ ಮಾಡ್ಬೇಕು: ರೇವಣ್ಣ

    ಒಂದು ವೋಟಿಗೆ 5 ಸಾವಿರ ಹಂಚಿದ ಮೇಲೆ ಚುನಾವಣೆ ಯಾಕೆ ಮಾಡ್ಬೇಕು: ರೇವಣ್ಣ

    – ಸರ್ಕಾರದ ಹಿಡಿತಕ್ಕೆ ಸಿಲುಕಿ ಚುನಾವಣಾ ಆಯೋಗ ನಲುಗುತ್ತಿದೆ

    ಹಾಸನ: ಒಂದು ವೋಟಿಗೆ ಐದು ಸಾವಿರ, ಮೂರು ಸಾವಿರ ಎಂದು ಹಂಚಿದ ಮೇಲೆ ಚುನಾವಣೆ ಯಾಕೆ ಮಾಡಬೇಕು ಎಂದು ಮಾಜಿ ಸಚಿವ ರೇವಣ್ಣ ಕಿಡಿಕಾರಿದ್ದಾರೆ.

    ಹಾಸನದಲ್ಲಿ ಶಿರಾ ಮತ್ತು ಆರ್.ಆರ್ ನಗರ ಉಪಚುನಾವಣೆ ಬಗ್ಗೆ ಮಾತನಾಡಿದ ಅವರು, ಸರ್ಕಾರದ ಹಿಡಿತಕ್ಕೆ ಸಿಲುಕಿ ಚುನಾವಣಾ ಆಯೋಗ ನಲುಗುತ್ತಿದೆ. ಶಿರಾ ಕ್ಷೇತ್ರದ ಒಂದು ಊರಿನಲ್ಲಿ ಬಿಜೆಪಿ ಅಭ್ಯರ್ಥಿಯನ್ನೇ ಊರೊಳಗಡೆ ಬಿಟ್ಟಿಲ್ಲ. ಆದರೂ ಆ ಊರಿನಲ್ಲಿ ಶೇ, 80ರಷ್ಟು ಮತಗಳು ಲೀಡ್ ಇದೆ ಅಂತಾ ಹೇಳುತ್ತಾರೆ. ಆಡಳಿತ ಯಂತ್ರವನ್ನು ಸರ್ಕಾರ ದುರುಪಯೋಗಪಡಿಸಿಕೊಂಡಿದೆ ಎಂದರು.

    ಚುನಾವಣೆಗೂ ಮೊದಲೇ 20 ಸಾವಿರ ಮತದಿಂದ ಗೆಲ್ಲುತ್ತೇವೆ ಎಂದು ಹೇಳುತ್ತಾರೆ. ಚುನಾವಣಾ ಆಯೋಗ ರಾಜ್ಯದಲ್ಲಿ ಒಂದು ಪಕ್ಷದ ಏಜೆಂಟ್ ಆಗಿ ಕೆಲಸ ಮಾಡುತ್ತಿದೆ. ಜಿಲ್ಲಾ ಮಟ್ಟದ ಅಧಿಕಾರಿಗಳು ಸರ್ಕಾರದ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ. ಸಿಎಂ ಮತ್ತು ಸಿಎಂ ಮಗ ಇಬ್ಬರೂ ಎರಡು ಕ್ಷೇತ್ರದಲ್ಲಿ 25 ಸಾವಿರ ಮತಗಳ ಅಂತರದಿಂದ ಗೆಲ್ಲುತ್ತೇವೆ ಅಂತಾ ಹೇಳುತ್ತಾರೆ. ಈ 25 ಸಾವಿರ ಮತ ಪಡೆಯೋಕೆ ಎಷ್ಟು ಹಣ ಖರ್ಚು ಮಾಡಿದ್ದಾರೆ ಅಂತಾ ಹೇಳಬೇಕು ಎಂದು ಅಗ್ರಹಿಸಿದರು.

    ಜೊತೆಗೆ ಬಿಜೆಪಿಯವರು ಗುಪ್ತಚರ ಇಲಾಖೆಯನ್ನು ಏನು ಚುನಾವಣೆ ಸಮೀಕ್ಷೆ ಮಾಡೋಕೆ ಬಿಟ್ಟಿದ್ದೀರಾ ಎಂದು ರೇವಣ್ಣ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

  • ಆಸಕ್ತಿ ತೋರದ ಬೆಂಗ್ಳೂರು ಮಂದಿ – ಎಲ್ಲಿ ಎಷ್ಟು ಪ್ರಮಾಣದ ಮತದಾನ ನಡೆದಿದೆ?

    ಆಸಕ್ತಿ ತೋರದ ಬೆಂಗ್ಳೂರು ಮಂದಿ – ಎಲ್ಲಿ ಎಷ್ಟು ಪ್ರಮಾಣದ ಮತದಾನ ನಡೆದಿದೆ?

    ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಪ್ರತಿಷ್ಠೆಯ ಕಣಗಳಾದ ರಾಜರಾಜೇಶ್ವರಿ ನಗರ ಮತ್ತು ಶಿರಾ ಬೈಎಲೆಕ್ಷನ್ ಅತ್ಯಂತ ಶಾಂತಿಯುತವಾಗಿ ನಡೆದಿದೆ.

    ಆರ್ ಆರ್ ನಗರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ, ಕಾಂಗ್ರೆಸ್‍ನ ಕುಸುಮಾ, ಜೆಡಿಎಸ್‍ನ ಕೃಷ್ಣಮೂರ್ತಿ ಸೇರಿ 16 ಹುರಿಯಾಳುಗಳ ಭವಿಷ್ಯ ಮತಯಂತ್ರ ಸೇರಿದೆ. ಶಿರಾದಲ್ಲಿ ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ, ಕಾಂಗ್ರೆಸ್‍ನ ಜಯಚಂದ್ರ, ಜೆಡಿಎಸ್‍ನ ಅಮ್ಮಾಜಮ್ಮ ಸೇರಿ 15 ಅಭ್ಯರ್ಥಿಗಳ ಭವಿಷ್ಯ ಮತಯಂತ್ರಗಳಲ್ಲಿ ಭದ್ರವಾಗಿದೆ.

    ಏಳು ದಿನಗಳ ಬಳಿಕ ನವೆಂಬರ್ 10ಕ್ಕೆ ಫಲಿತಾಂಶ ಹೊರಬೀಳಲಿದೆ. ರಾಜರಾಜೇಶ್ವರಿ ನಗರ ಪ್ರಚಾರ ಕಣದಲ್ಲಿ ಸಿಡಿದ ಮಾತಿನ ಮತಾಪುಗಳನ್ನು ನೋಡಿದರೆ ಈ ಬಾರಿಯ ಚುನಾವಣೆಯಲಿ ಏನೇನೋ ಆಗಿಬಿಡಬಹುದು ಎಂಬ ಭೀತಿ ಮನೆ ಮಾಡಿತ್ತು. ಆದರೆ ಅದೃಷ್ಟವಶಾತ್ ಅಂಥದ್ದೇನು ನಡೆಯಲಿಲ್ಲ. ಬೆಳಗ್ಗೆ ಏಳು ಗಂಟೆಗೆ ಶುರುವಾದ ಮತದಾನ ಸಂಜೆ ಆರರವರೆಗೂ ನಡೆಯಿತು.

    ಬೆಳಗ್ಗೆ ಮತ್ತು ಸಂಜೆ ಮತದಾನ ಪ್ರಕ್ರಿಯೆ ಒಂಚೂರು ಬಿರುಸು ಪಡೆದಿದ್ದು ಬಿಟ್ಟರೆ ಉಳಿದ ಅವಧಿಯಲ್ಲಿ ಮತದಾನ ಅತ್ಯಂತ ನೀರಸವಾಗಿತ್ತು. ಬೇಸರದ ವಿಷ್ಯ ಅಂದ್ರೆ, ಅತ್ಯಂತ ಸುಶಿಕ್ಷಿತ ಮತದಾರರು ಎನಿಸಿಕೊಂಡ ನಗರ ಪ್ರದೇಶದ ಮಂದಿ, ತಮ್ಮ ಹಕ್ಕು ಚಲಾಯಿಸಲು ಉತ್ಸಾಹ ತೋರಲೇ ಇಲ್ಲ.

    ಮತದಾನದ ಬಗ್ಗೆ ಎಷ್ಟೇ ಜಾಗೃತಿ ಮೂಡಿಸಿದರೂ ಆರ್ ಆರ್ ನಗರದಲ್ಲಿ ವೋಟಿಂಗ್ ಪ್ರಮಾಣ ಹೆಚ್ಚಲೇ ಇಲ್ಲ. ಯುವಕರಿಗಿಂತ ಹಿರಿಯರೇ ಮತಗಟ್ಟೆಗೆ ಹೆಚ್ಚಾಗಿ ಧಾವಿಸಿದ್ದರು. ಆಕ್ಸಿಡೆಂಟ್ ಆಗಿ ನಡೆಯಲಾಗದವರೂ ಸಹ ಮತ ಚಲಾಯಿಸಲು ಬಂದಿದ್ದರು.

    ಶಿರಾದಲ್ಲಿ ಪರಿಸ್ಥಿತಿ ಇದಕ್ಕೆ ಸಂಪೂರ್ಣ ತದ್ವಿರುದ್ಧ. ಅಲ್ಲಿನ ಕೊರೋನಾ ನಡ್ವೆಯೂ ಮತದಾರರು ಜೋರು ಉತ್ಸಾಹದಿಂದ ಮತಗಟ್ಟೆಗೆ ಬಂದರು. ಒಟ್ಟಾರೆ ಎರಡೂ ಕ್ಷೇತ್ರಗಳಲ್ಲಿ ಶೇ.51.3ರಷ್ಟು ಮತದಾನ ಆಗಿದೆ.

    ರಾಜರಾಜೇಶ್ವರಿ ಕ್ಷೇತ್ರದಲ್ಲಿ ಈ ಬಾರಿ 45.25% ಮತದಾನ ನಡೆದರೆ 2018ರಲ್ಲಿ 52% ರಷ್ಟು ಮತದಾನ ನಡೆದಿತ್ತು. ಶಿರಾದಲ್ಲಿ ಈ ಬಾರಿ 82.31% ರಷ್ಟು ಮತದಾನ ನಡೆದಿದ್ದರೆ 2018 ರಲ್ಲಿ 84.31% ರಷ್ಟು ಮತದಾನ ನಡೆದಿತ್ತು.

    ಮತ ಪ್ರಮಾಣ ಇಳಿಕೆಗೆ ಕಾರಣವೇನು?
    – ಲಾಕ್‍ಡೌನ್ ವೇಳೆ ಊರಿಗೆ ಹೋದವರು ಸಂಪೂರ್ಣವಾಗಿ ವಾಪಸ್ ಆಗದೇ ಇರುವುದು
    – ಕೊರೋನಾ ಸೋಂಕು ಭೀತಿ
    – ಮತದಾನ ಮಾಡಲು ನಿರ್ಲಕ್ಷ್ಯ ಧೋರಣೆ
    – ಗಾರ್ಮೆಂಟ್ಸ್‌ ಗೆ ರಜೆ ನೀಡದೇ ಇರುವುದು

  • ನಮ್ಮ ಭವಿಷ್ಯ, ಕ್ಷೇತ್ರದ ಅಭಿವೃದ್ಧಿಗಾಗಿ ಮತ ಚಲಾಯಿಸಿ: ಪ್ರೇಮ್

    ನಮ್ಮ ಭವಿಷ್ಯ, ಕ್ಷೇತ್ರದ ಅಭಿವೃದ್ಧಿಗಾಗಿ ಮತ ಚಲಾಯಿಸಿ: ಪ್ರೇಮ್

    ಬೆಂಗಳೂರು: ಏನೇ ಕೊರೊನಾ ಇದ್ದರೂ ನಮ್ಮ ಭವಿಷ್ಯಕ್ಕಾಗಿ ವೋಟ್ ಮಾಡಲೇಬೇಕು. ಕೊರೊನಾ ಜೊತೆ ಬದುಕೋದನ್ನ ಜನರು ಅಭ್ಯಾಸ ಮಾಡಿಕೊಂಡಿದ್ದಾರೆ. ಕೊರೊನಾ ಬಳಿಕ ಜನರ ಬದುಕು ಸಾಮಾನ್ಯ ಪರಿ ಸ್ಥಿತಿಗೆ ಮರಳುತ್ತಿದೆ ಎಂದು ಹೇಳಿದರು.

    ಆರ್.ಆರ್.ನಗರ ವಿಧಾನಸಭಾ ಕ್ಷೇತ್ರದ ಕೊಟ್ಟಿಗೆಪಾಳ್ಯ ವಾರ್ಡ್ ನಲ್ಲಿ ನಟ ಪ್ರೇಮ ಕುಟುಂಬ ಸಮೇತರಾಗಿ ಆಗಮಿಸಿ ಮತ ಚಲಾಯಿಸಿದರು. ಮತ ಚಲಾಯಿಸಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಪ್ರೇಮ್, ಮತದಾನ ನಮ್ಮ ಹಕ್ಕು ಮತ್ತು ಎಲ್ಲರ ಭವಿಷ್ಯವನ್ನ ನಿರ್ಧಾರ ಮಾಡುತ್ತದೆ. ಹಾಗಾಗಿ ಚುನಾವಣೆಯಲ್ಲಿ ಎಲ್ಲರೂ ವೋಟ್ ಮಾಡಬೇಕು. ನಾನು ಸಹ ಕುಟುಂಬದ ಜೊತೆ ಬಂದು ಮತ ಚಲಾಯಿಸಿದ್ದೇನೆ. ಚುನಾವಣೆ ಆಯೋಗ ಮತಗಟ್ಟೆಯಲ್ಲಿ ಕೊರೊನಾ ಮುನ್ನೆಚ್ಚರಿಕೆಗಳನ್ನು ತೆಗದುಕೊಂಡಿದೆ. ಆರಕ್ಷಕ ಮತ್ತು ಚುನಾವಣಾಧಿಕಾರಿಗಳಿಗೆ ಧನ್ಯವಾದ ಹೇಳುತ್ತೇನೆ. ತುಂಬಾ ಶಿಸ್ತುಬದ್ಧವಾಗಿ ಕೊರೊನಾ ನಿಯಮಗಳನ್ನ ಪಾಲಿಸುವಂತೆ ನೋಡಿಕೊಳ್ಳುತ್ತಿದ್ದಾರೆ ಎಂದರು.

    ಕೊರೊನಾ ಕ್ಯಾನ್ಸರ್ ಗಿಂತ ದೊಡ್ಡ ರೋಗವೇನು ಅಲ್ಲ. ಭಯದಿಂದ ಮನೆಯಲ್ಲಿ ಕುಳಿತುಕೊಳ್ಳದೇ ಮತಗಟ್ಟೆಗೆ ಬಂದು ಮತ ಚಲಾಯಿಸಿ. ವೋಟ್ ಮಾಡದಿದ್ರೆ ನಮ್ಮ ಭವಿಷ್ಯದ ಮೇಲೆ ನಾವೇ ಕಲ್ಲು ಹಾಕಿಕೊಂಡಂತೆ ಆಗುತ್ತೆ. ನಮ್ಮ ಕ್ಷೇತ್ರಗಳ ಅಭಿವೃದ್ಧಿಗಾಗಿ ಮತ ಹಾಕಲೇಬೇಕು ಎಂದು ಮತದಾರರಲ್ಲಿ ಮನವಿ ಮಾಡಿಕೊಂಡರು.

  • ಪಿಪಿಇ ಕಿಟ್ ಧರಿಸಿ ಮತ ಚಲಾಯಿಸಿದ ಕೊರೊನಾ ಸೋಂಕಿತರು

    ಪಿಪಿಇ ಕಿಟ್ ಧರಿಸಿ ಮತ ಚಲಾಯಿಸಿದ ಕೊರೊನಾ ಸೋಂಕಿತರು

    ಧಾರವಾಡ/ಹುಬ್ಬಳ್ಳಿ: ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಯ ಕೊನೆಯ ಒಂದು ತಾಸು ಮತದಾನ ಅವಧಿಯನ್ನು ಕೋವಿಡ್ ಸೋಂಕಿತರು ತಮ್ಮ ಹಕ್ಕು ಚಲಾಯಿಸಲು ಮೀಸಲಿಡಲಾಗಿತ್ತು. ಈ ವೇಳೆ ಅಣ್ಣಿಗೇರಿ ಪುರಸಭೆಯ ಮತಗಟ್ಟೆ ಸಂಖ್ಯೆ 50ರಲ್ಲಿ ಇಬ್ಬರು ಕೊರೊನಾ ಸೋಂಕಿತರು ಪಿಪಿಇ ಕಿಟ್ ಧರಿಸಿ ಕೋವಿಡ್ ನಿಯಂತ್ರಣದ ಎಲ್ಲ ಮುಂಜಾಗ್ರತಾ ಕ್ರಮಗಳೊಂದಿಗೆ ಮತ ಚಲಾಯಿಸಿದರು.

    ಹೋಂ ಐಸೋಲೇಷನ್ ನಲ್ಲಿದ್ದ ಓರ್ವ ಹಾಗೂ ಕೋವಿಡ್ ಕೇರ್ ಸೆಂಟರ್ ನಲ್ಲಿದ್ದ ಓರ್ವ ಪಿಪಿಇ ಕಿಟ್ ಧರಿಸಿ ಮತದಾನ ಮಾಡಿದರು. ಇವರು ಮತಗಟ್ಟೆಗೆ ಬಂದು ಹೋಗಲು ಜಿಲ್ಲಾಡಳಿತದಿಂದ ವ್ಯವಸ್ಥೆ ಕಲ್ಪಿಸಲಾಗಿತ್ತು.

    ಮತದಾನದ ನಂತರ ಮತಗಟ್ಟೆಯನ್ನು ಪುನಃ ಸಂಪೂರ್ಣ ಸ್ಯಾನಿಟೈಸ್ ಮಾಡಲಾಯಿತು ಎಂದು ಜಿಲ್ಲಾ ಆರ್ ಸಿ ಹೆಚ್ ಅಧಿಕಾರಿ ಡಾ.ಎಸ್. ಎಂ.ಹೊನಕೇರಿ ಹೇಳಿದ್ದಾರೆ.