Tag: Voter ID

  • ‘ವೋಟ್ ಚೋರಿ’ ಪ್ರಕರಣ | ಮಾಜಿ ಶಾಸಕ ಸುಭಾಷ್ ಗುತ್ತೇದಾರ್‌ ಮನೆ, ಬಾರ್ ಮೇಲೆ ಎಸ್‌ಐಟಿ ದಾಳಿ

    ‘ವೋಟ್ ಚೋರಿ’ ಪ್ರಕರಣ | ಮಾಜಿ ಶಾಸಕ ಸುಭಾಷ್ ಗುತ್ತೇದಾರ್‌ ಮನೆ, ಬಾರ್ ಮೇಲೆ ಎಸ್‌ಐಟಿ ದಾಳಿ

    ಕಲಬುರಗಿ: ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಸಿಡಿಸಿರುವ ಮತಗಳ್ಳತನ ಆರೋಪ ತೀವ್ರ ಸ್ವರೂಪ ಪಡೆದುಕೊಂಡಿದೆ. ಆಳಂದ ಕ್ಷೇತ್ರದ ವೋಟ್‍ ಚೋರಿ ಪ್ರಕರಣ (Vote Chori Case) ಸಂಬಂಧ ಎಸ್‍ಐಟಿ (SIT) ತನಿಖೆ ಚುರುಕುಗೊಂಡಿದೆ. ಈ ಕೇಸ್ ಇದೀಗ ಆಳಂದ ಮಾಜಿ ಶಾಸಕರ ಮನೆವರೆಗೂ ಬಂದು ನಿಂತಿದೆ.

    ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್‌ (Subhash Guttedar) ಅವರಿಗೆ ಸೇರಿದ ಮನೆ, ಬಾರ್ & ರೆಸ್ಟೋರೆಂಟ್ ಮೇಲೆ ಎಸ್‍ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಗುರುವಾರ ಎಸ್‍ಐಟಿ ಅಧಿಕಾರಿಗಳು ಕಲಬುರಗಿಯಲ್ಲಿ ಅಕ್ರಂ ಎಂಬಾತನ ಮನೆ ಮೇಲೆ ದಾಳಿ ಮಾಡಿದ್ದರು. ದಾಳಿ ವೇಳೆ ರಾಶಿ ರಾಶಿ ವೋಟರ್ ಐಡಿಗಳು ಪತ್ತೆ ಆಗಿದ್ದವು. 15 ಮೊಬೈಲ್, 7 ಲ್ಯಾಪ್ ಟಾಪ್ ಸೀಜ್ ಮಾಡಿದ್ದರು. ಇದನ್ನೂ ಓದಿ: ‘ವೋಟ್ ಚೋರಿ’ ಪ್ರಕರಣ | ಎಸ್ಐಟಿ ತೀವ್ರ ಶೋಧ – ಕಲಬುರಗಿಯಲ್ಲಿ ಸಾವಿರಾರು ವೋಟರ್ ಐಡಿಗಳು ಪತ್ತೆ

    ಇದರ ಬೆನ್ನಲ್ಲೇ ಇಂದು (ಅ.17) ಮಾಜಿ ಶಾಸಕರ ಮನೆ ಮೇಲೂ ದಾಳಿ ನಡೆದಿದೆ. ಇತ್ತ ಆಳಂದದಲ್ಲಿನ ಸುಭಾಷ್ ಗುತ್ತೇದಾರ್ ಮನೆ ಇರೋ ಬಡಾವಣೆಯಲ್ಲಿ ರಾಶಿ ರಾಶಿ ದಾಖಲೆಗಳಿಗೆ ಬೆಂಕಿ ಇಡಲಾಗಿದೆ. ಸುಭಾಷ್ ಗುತ್ತೆದಾರ್ ಮನೆಯ ಸಮೀಪದಲ್ಲೆ ದಾಖಲೆಗಳನ್ನು ಸುಟ್ಟು ಹಾಕಿದ್ದು, ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

    ಸುಟ್ಟಿರುವ ದಾಖಲೆಗಳು ಯಾವುವು? ಸುಟ್ಟು ಹಾಕಿದ್ಯಾರು? ಎಂಬುದರ ಬಗ್ಗೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಇನ್ಫೋಸಿಸ್‌ನವ್ರು ಏನ್ ಬಹಳ ಬೃಹಸ್ಪತಿಗಳಾ?: ಜಾತಿಗಣತಿಯಲ್ಲಿ ಭಾಗವಹಿಸದ್ದಕ್ಕೆ ಸಿಎಂ ಟಾಂಗ್

  • ‘ವೋಟ್ ಚೋರಿ’ ಪ್ರಕರಣ | ಎಸ್ಐಟಿ ತೀವ್ರ ಶೋಧ – ಕಲಬುರಗಿಯಲ್ಲಿ ಸಾವಿರಾರು ವೋಟರ್ ಐಡಿಗಳು ಪತ್ತೆ

    ‘ವೋಟ್ ಚೋರಿ’ ಪ್ರಕರಣ | ಎಸ್ಐಟಿ ತೀವ್ರ ಶೋಧ – ಕಲಬುರಗಿಯಲ್ಲಿ ಸಾವಿರಾರು ವೋಟರ್ ಐಡಿಗಳು ಪತ್ತೆ

    ಕಲಬುರಗಿ: ರಾಜ್ಯದಲ್ಲಿ ಸಂಚಲನ ಮೂಡಿಸಿರುವ ವೋಟ್ ಚೋರಿ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳದ (SIT) ಅಧಿಕಾರಿಗಳು ಕಲಬುರಗಿಯಲ್ಲಿ (Kalaburagi) ಮಹತ್ವದ ದಾಖಲೆಗಳನ್ನು ಪತ್ತೆ ಮಾಡಿದ್ದಾರೆ.

    ಬೆಂಗಳೂರಿನಿಂದ (Bengaluru) ಕಲಬುರಗಿಗೆ ಆಗಮಿಸಿರುವ ಎಸ್ಐಟಿ ಅಧಿಕಾರಿಗಳು ಬುಧವಾರ ನಗರದ ಐದು ಪ್ರಮುಖ ಸ್ಥಳಗಳ ಮೇಲೆ ದಾಳಿ ನಡೆಸಿ ಶೋಧ ಕಾರ್ಯ ನಡೆಸಿದ್ದಾರೆ. ಈ ವೇಳೆ ಟಿಪ್ಪು ಚೌಕ್ ಬಳಿಯ ಅಸ್ಲಂ ಎಂಬಾತನ ಮನೆಯಲ್ಲಿ ಆಳಂದ ಮತಕ್ಷೇತ್ರಕ್ಕೆ ಸಂಬಂಧಿಸಿದ ಸಾವಿರಾರು ವೋಟರ್ ಐಡಿಗಳ ರಾಶಿ ಪತ್ತೆಯಾಗಿದೆ. ದಾಳಿಯ ಸಂದರ್ಭದಲ್ಲಿ  ಅಧಿಕಾರಿಗಳು ಅಸ್ಲಂ ಮನೆಯಿಂದ 15 ಮೊಬೈಲ್ ಫೋನ್‌ಗಳು ಮತ್ತು ಏಳು ಲ್ಯಾಪ್‌ಟಾಪ್‌ಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಮತ ಕಳ್ಳತನದ ಬಗ್ಗೆ ಪ್ರಧಾನಿ ಮೋದಿ, ಅಮಿತ್ ಶಾ ಉತ್ತರ ಕೊಡಲಿ: ಶಿವರಾಜ್ ತಂಗಡಗಿ

    ಕಲಬುರಗಿ ನಗರದ ಜಂಜಂ ಕಾಲೋನಿಯಲ್ಲಿರುವ ಅಕ್ರಂ ಎಂಬಾತನ ನಿವಾಸದ ಮೇಲೂ ಎಸ್ಐಟಿ ಅಧಿಕಾರಿಗಳು ದಾಳಿ ನಡೆಸಿ ಶೋಧ ಕಾರ್ಯ ಕೈಗೊಂಡಿದ್ದಾರೆ. ಎಸ್‌ಪಿ ದರ್ಜೆಯ ಅಧಿಕಾರಿಗಳು ಸೇರಿದಂತೆ ಹಲವು ಅಧಿಕಾರಿಗಳು ಈ ದಾಳಿ ಮತ್ತು ಪರಿಶೀಲನೆಯಲ್ಲಿ ಭಾಗವಹಿಸಿದ್ದಾರೆ. ಇದನ್ನೂ ಓದಿ: ವೋಟ್ ಚೋರಿಯಂತಹ ಕೊಳಕು ನುಡಿಗಟ್ಟುಗಳನ್ನು ಬಳಸಬೇಡಿ, ಪುರಾವೆ ನೀಡಿ: ಚುನಾವಣಾ ಆಯೋಗ

  • ವೋಟರ್‌ ಐಡಿ ದುರುಪಯೋಗ ತಡೆಗೆ ಪರಿಹಾರ; ಇ-ಸೈನ್ ವ್ಯವಸ್ಥೆ ಆರಂಭಿಸಿದ ಚುನಾವಣಾ ಆಯೋಗ

    ವೋಟರ್‌ ಐಡಿ ದುರುಪಯೋಗ ತಡೆಗೆ ಪರಿಹಾರ; ಇ-ಸೈನ್ ವ್ಯವಸ್ಥೆ ಆರಂಭಿಸಿದ ಚುನಾವಣಾ ಆಯೋಗ

    ನವದೆಹಲಿ: ಮತದಾರರ ಪಟ್ಟಿಯಿಂದ ಹೆಸರು ಅಳಿಸಲು ಸಂಬಂಧಿಸಿದ ವಿವಾದ ಪರಿಹರಿಸಲು ಚುನಾವಣಾ ಆಯೋಗ (ECI) ಹೊಸ ತಾಂತ್ರಿಕ ವ್ಯವಸ್ಥೆಯೊಂದನ್ನ ಪರಿಚಯಿಸಿದೆ.

    ಇತ್ತೀಚೆಗಷ್ಟೇ ಲೋಕಸಭಾ ವಿಪಕ್ಷ ನಾಯಕ ರಾಹುಲ್‌ ಗಾಂಧಿ (Rahul Gandhi) ಕಲಬುರಗಿಯ ಆಳಂದ ಕ್ಷೇತ್ರದಲ್ಲಿ ಮತಗಳ್ಳತನ ನಡೆದಿರುವ ಬಗ್ಗೆ ಆರೋಪ ಮಾಡಿದ್ದರು. ಈ ವೇಳೆ ಆಳಂದ ಕ್ಷೇತ್ರದಲ್ಲಿ ಮತದಾರರ ಹೆಸರು ಅಳಿಸಲು ಹೆಚ್ಚಿನ ಸಂಖ್ಯೆಯ ಅರ್ಜಿಗಳನ್ನು ಸಲ್ಲಿಸಿರುವ ಬಗ್ಗೆ ಆರೋಪ ಎತ್ತಿದ್ದರು. ಇದಕ್ಕೆ ಚುನಾವಣಾ ಆಯೋಗ ಸ್ಪಷ್ಟನೆಯನ್ನೂ ನೀಡಿತ್ತು. ಈ ಬೆನ್ನಲ್ಲೇ ವೋಟರ್‌ ಐಡಿ ದುರುಪಯೋಗ ತಡೆಯಲು ECINET ಪೋರ್ಟಲ್ ಮತ್ತು ಅಪ್ಲಿಕೇಶನ್‌ನಲ್ಲಿ ‘ಇ-ಸೈನ್’ (E-Sign) ಎಂಬ ಹೊಸ ವೈಶಿಷ್ಟ್ಯವನ್ನು ಪ್ರಾರಂಭಿಸಿದೆ.

    ʻಇ-ಸೈನ್‌ʼ ವ್ಯವಸ್ಥೆ ಅಡಿಯಲ್ಲಿ, ಮತದಾರರು ನೋಂದಣಿ ಅಥವಾ ತಿದ್ದುಪಡಿಗಾಗಿ ಅರ್ಜಿ ಸಲ್ಲಿಸುವಾಗ ತಮ್ಮ ಆಧಾರ್‌ ಲಿಂಕ್‌ ಮಾಡಲಾದ ಮೊಬೈಲ್‌ ಸಂಖ್ಯೆಯನ್ನ ಬಳಸಿಕೊಂಡು ಪರಿಶೀಲಿಸಬೇಕಾಗುತ್ತದೆ. ಈ ಹಿಂದೆ ಅರ್ಜಿದಾರರು ಯಾವುದೇ ಪರಿಶೀಲನೆಯಿಲ್ಲದೇ ಫಾರ್ಮ್‌ಗಳನ್ನು ಸಲ್ಲಿಸಬಹುದಿತ್ತು, ಇದು ವೋಟರ್‌ ಐಡಿ ದುರುಯೋಗವಾಗುವ ಸಾಧ್ಯತೆಯಿತ್ತು. ಹಾಗಾಗಿ ಆಯೋಗ ಈ ವ್ಯವಸ್ಥೆ ಪ್ರಾರಂಭಿಸಿದೆ ಎಂದು ಆಯೋಗ ಹೇಳಿದೆ. ಇದನ್ನೂ ಓದಿ: ಕಾರುಗಳ ಬೆಲೆ ಭಾರೀ ಇಳಿಕೆ- ಯಾವ ಕಾರುಗಳ ಬೆಲೆ ಎಷ್ಟು ಇಳಿಕೆ? ಇಲ್ಲಿದೆ ಕಂಪ್ಲೀಟ್‌ ಮಾಹಿತಿ

    ಇ-ಸೈನ್‌ ಹೇಗೆ ಕೆಲಸ ಮಾಡುತ್ತೆ?
    ಹೊಸ ವ್ಯವಸ್ಥೆಯಲ್ಲಿ ಯಾವುದೇ ಒಬ್ಬ ವ್ಯಕ್ತಿ ECINET ಪೋರ್ಟಲ್‌ ಅಥವಾ ಅಪ್ಲಿಕೇಶನ್‌ನಲ್ಲಿ ಫಾರ್ಮ್‌-6 (ಹೊಸ ನೋಂದಣಿಗಾಗಿ), ಫಾರ್ಮ್-7 (ಹೆಸರು ಅಳಿಸುವಿಕೆಗಾಗಿ) ಅಥವಾ ಫಾರ್ಮ್-8 (ಹೆಸರು ಅಥವಾ ವಿಳಾಸ ತಿದ್ದುಪಡಿಗಾಗಿ) ಅನ್ನು ಭರ್ತಿ ಮಾಡಿದಾಗ ಇ-ಸೈನ್ ಮಾಡಬೇಕಾಗುತ್ತದೆ. ಅಂದ್ರೆ ಮತದಾರರ ಗುರುತಿನ ಚೀಟಿ ಮತ್ತು ಆಧಾರ್‌ನಲ್ಲಿರುವ ಹೆಸರು ಹೊಂದಿಕೆ ಆಗಿದೆಯೇ? ಆಧಾರ್‌ಗೆ ಮೊಬೈಲ್ ಸಂಖ್ಯೆ ಲಿಂಕ್‌ ಆಗಿಯೇ ಎಂಬುದನ್ನೂ ಖಚಿತಪಡಿಸಿಕೊಳ್ಳಬೇಕಾಗುತ್ತದೆ. ನಂತರ ಅರ್ಜಿದಾರರನ್ನು ಬಾಹ್ಯ ಇ-ಸೈನ್ ಪೋರ್ಟಲ್‌ಗೆ ನಿರ್ದೇಶಿಸಲಾಗುತ್ತದೆ, ಅಲ್ಲಿ ತಮ್ಮ ಆಧಾರ್‌ ಸಂಖ್ಯೆ ನಮೂದಿಸಬೇಕಾಗುತ್ತದೆ. ಇದನ್ನೂ ಓದಿ: ಆಳಂದ ಫೈಲ್ಸ್‌ | ಆನ್‌ಲೈನ್‌ನಲ್ಲಿ ಮತ ಅಳಿಸಲು ಸಾಧ್ಯವಿಲ್ಲ – ಇಂಚಿಚು ವಿವರ ನೀಡಿದ ಚುನಾವಣಾ ಆಯೋಗ 

    OTP ಕಡ್ಡಾಯ
    ಇಸೈನ್‌ ಪ್ರವೇಶಿಸಿ ಆಧಾರ್ ಸಂಖ್ಯೆ ನಮೂದಿಸಿದ ನಂತ್ರ, ಆಧಾರ್‌ಗೆ ಲಿಂಕ್ ಮಾಡಲಾದ ಫೋನ್ ಸಂಖ್ಯೆಗೆ OTP ಕಳುಹಿಸಲಾಗುತ್ತದೆ. OTP ಅನ್ನು ನಮೂದಿಸಿ ಒಪ್ಪಿಗೆ ನೀಡಿದ ನಂತರವೇ ಪರಿಶೀಲನೆ ಪೂರ್ಣಗೊಳ್ಳುತ್ತದೆ. ನಂತರ ಅರ್ಜಿದಾರರನ್ನು ಫಾರ್ಮ್ ಸಲ್ಲಿಸಲು ECINET ಪೋರ್ಟಲ್‌ಗೆ ಹಿಂತಿರುಗಿಸಲಾಗುತ್ತದೆ. ಈ ಪ್ರಕ್ರಿಯೆಯು ನಕಲಿ ಅರ್ಜಿಗಳನ್ನು ತಡೆಯಲು ಅನುಕೂಲವಾಗುತ್ತದೆ.

    ಬದಲಾವಣೆ ಏಕೆ?
    ಕಾಂಗ್ರೆಸ್‌ ಹಿರಿಯ ನಾಯಕ ರಾಹುಲ್‌ ಗಾಂಧಿ ಇದೇ ಸೆಪ್ಟೆಂಬರ್‌ 8ರಂದು ಆಳಂದ ಕ್ಷೇತ್ರದಲ್ಲಿ ಆನ್‌ಲೈನ್‌ ಅರ್ಜಿಗಳ ಮೂಲಕ 6,000 ಮತದಾರರ ಹೆಸರುಗಳನ್ನು ಅಳಿಸಲು ಯತ್ನಿಸಿದ್ದಾರೆ ಎಂದು ಆರೋಪಿಸಿದ್ದರು. ಇದನ್ನೂ ಓದಿ: ರಾಹುಲ್‌ ಆರೋಪಿಸಿದಂತೆ ಆನ್‌ಲೈನಿನಲ್ಲಿ ಮತ ಅಳಿಸಲು ಸಾಧ್ಯವಿಲ್ಲ: ಚುನಾವಣಾ ಆಯೋಗ

  • ಪವನ್‌ ಖೇರಾ ಬಳಿ 2 ವೋಟರ್‌ ಐಡಿ – ಬಿಜೆಪಿ ಬಾಂಬ್‌, EC ನೋಟಿಸ್‌ ಜಾರಿ

    ಪವನ್‌ ಖೇರಾ ಬಳಿ 2 ವೋಟರ್‌ ಐಡಿ – ಬಿಜೆಪಿ ಬಾಂಬ್‌, EC ನೋಟಿಸ್‌ ಜಾರಿ

    ನವದೆಹಲಿ: ಮತ ಕಳ್ಳತನ (Vote Chori) ಎಸಗುತ್ತಿರುವ ಬಿಜೆಪಿ ಮೇಲೆ ಹೈಡ್ರೋಜನ್‌ ಬಾಂಬ್‌ ಹಾಕಲಾಗುವುದು ಎಂದು ರಾಹುಲ್‌ ಗಾಂಧಿ ಹೇಳಿದ ಮರುದಿನವೇ ಬಿಜೆಪಿ ಈಗ ಕಾಂಗ್ರೆಸ್‌ ವಿರುದ್ಧವೇ ಬಾಂಬ್‌ ಹಾಕಿದೆ.

    ರಾಹುಲ್‌ ಗಾಂಧಿ (Rahul Gandhi) ಆಪ್ತ ಪವನ್‌ ಖೇರಾ ಎರಡು ಕಡೆ ವೋಟರ್‌ ಐಡಿ ಹೊಂದಿದ್ದಾರೆ ಎಂದು ಆರೋಪಿಸಿ ಬಿಜೆಪಿ ದಾಖಲೆ ಬಿಡುಗಡೆ ಮಾಡಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ದೂರಿನ ಬೆನ್ನಲ್ಲೇ ಪವನ್ ಖೇರಾ(Pawan Khera) ಅವರಿಗೆ ಚುನಾವಣಾ ಆಯೋಗ (Election Commission) ನೋಟಿಸ್‌ ನೀಡಿ ಶಾಕ್‌ ನೀಡಿದೆ.

    ದೆಹಲಿಯಲ್ಲಿ ಎರಡು ಕಡೆ ವೋಟರ್‌ ಐಡಿ ಹೊಂದಿರುವುದಕ್ಕೆ ಚುನಾವಣಾ ಆಯೋಗ ಖೇರಾಗೆ ನೋಟಿಸ್‌ ನೀಡಿದೆ. ಎರಡು ಕಡೆ ವೋಟರ್‌ ಐಡಿ ಹೊಂದಿರುವುದು 1950ರ ಜನಪ್ರತಿನಿಧಿ ಕಾಯ್ದೆಯ ಅಡಿ ಶಿಕ್ಷಾರ್ಹ ಅಪರಾಧ. ಈ ಸಂಬಂಧ ಸೆಪ್ಟೆಂಬರ್ 8 ರ ಸೋಮವಾರ ಬೆಳಿಗ್ಗೆ 11 ಗಂಟೆಯೊಳಗೆ ನೋಟಿಸ್‌ಗೆ ಉತ್ತರಿಸಬೇಕು ಮತ್ತು ಕಾಯ್ದೆಯಡಿ ನಿಮ್ಮ ವಿರುದ್ಧ ಕ್ರಮ ಯಾಕೆ ಕೈಗೊಳ್ಳಬಾರದು ಎಂಬುದನ್ನು ತಿಳಿಸಬೇಕು ಎಂದು ನೋಟಿಸ್‌ನಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ಪಕ್ಷ ವಿರೋಧಿ ಚಟುವಟಿಕೆ; ಪುತ್ರಿ ಕವಿತಾಗೆ ಪಕ್ಷದಿಂದ ಗೇಟ್ಪಾಸ್

    ನವದೆಹಲಿ ಮತ್ತು ಜಂಗ್ಪುರ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಪವನ್ ಖೇರಾ ಹೆಸರಿದೆ ಎಂದು ಬಿಜೆಪಿ ದಾಖಲೆಯನ್ನು ಇರಿಸಿ ಗಂಭೀರ ಆರೋಪ ಮಾಡಿ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು.

    ಬಿಜೆಪಿ ಸಾಮಾಜಿಕ ಜಾಲತಾಣದ ಮುಖ್ಯಸ್ಥ ಅಮಿತ್‌ ಮಾಳವೀಯ ಎಕ್ಸ್‌ನಲ್ಲಿ ಪವನ್‌ ಖೇರಾ ಎರಡು ವೋಟರ್‌ ಐಡಿ ಹೊಂದಿದ್ದಾರೆ ಎಂದು ಆರೋಪಿಸಿದ್ದರು. ಪವನ್ ಖೇರಾ ಎರಡು ಸಕ್ರಿಯ EPIC ಸಂಖ್ಯೆಗಳನ್ನು ಹೇಗೆ ಹೊಂದಿದ್ದಾರೆ? ಅವರು ಹಲವು ಬಾರಿ ಮತ ಚಲಾಯಿಸಿದ್ದಾರೆಯೇ ಎಂಬುದನ್ನು ತನಿಖೆ ಮಾಡುವುದು ಈಗ ಚುನಾವಣಾ ಆಯೋಗದ ಜವಾಬ್ದಾರಿ.  ಇದು ಚುನಾವಣಾ ಕಾನೂನುಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ದೂರಿದ್ದಾರೆ.

  • ಆಧಾರ್, ಮತದಾರರ ಗುರುತಿನ ಚೀಟಿ, ಪಡಿತರ ಚೀಟಿಗಳು ವಿಶ್ವಾಸಾರ್ಹ ದಾಖಲೆಗಳಲ್ಲ: ಸುಪ್ರೀಂಗೆ ಚುನಾವಣಾ ಆಯೋಗ ಅಫಿಡವಿಟ್‌

    ಆಧಾರ್, ಮತದಾರರ ಗುರುತಿನ ಚೀಟಿ, ಪಡಿತರ ಚೀಟಿಗಳು ವಿಶ್ವಾಸಾರ್ಹ ದಾಖಲೆಗಳಲ್ಲ: ಸುಪ್ರೀಂಗೆ ಚುನಾವಣಾ ಆಯೋಗ ಅಫಿಡವಿಟ್‌

    ನವದೆಹಲಿ: ಆಧಾರ್, ಮತದಾರರ ಗುರುತಿನ ಚೀಟಿ ಮತ್ತು ಪಡಿತರ ಚೀಟಿಗಳು (Aadhaar, Voter ID & Ration Cards) ವಿಶ್ವಾಸಾರ್ಹ ದಾಖಲೆಗಳಲ್ಲ ಎಂದು ಕೇಂದ್ರ ಚುನಾವಣಾ ಆಯೋಗ (Election Commission of India) ಸುಪ್ರೀಂ ಕೋರ್ಟ್‌ಗೆ 789 ಪುಟಗಳ ಅಫಿಡವಿಟ್‌ ಸಲ್ಲಿಸಿದೆ.

    ಬಿಹಾರ (Bihar) ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (SIR) ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಅರ್ಜಿ ವಿಚಾರಣೆಯ ವೇಳೆ ಸುಪ್ರೀಂ ಕೋರ್ಟ್‌ (Supreme Court) ಆಧಾರ್, ಮತದಾರರ ಗುರುತಿನ ಚೀಟಿ ಮತ್ತು ಪಡಿತರ ಚೀಟಿಗಳನ್ನು ವಿಶ್ವಾಸಾರ್ಹ ದಾಖಲೆಗಳನ್ನಾಗಿ ಯಾಕೆ ಪರಿಗಣಿಸಬಾರದು ಎಂದು ಚುನಾವಣಾ ಆಯೋಗವನ್ನು ಕೇಳಿತ್ತು.

    ಈ ಪ್ರಶ್ನೆಗೆ ಹಲವು ಕೋರ್ಟ್‌ ತೀರ್ಪು ಉಲ್ಲೇಖಿಸಿ ಮತದಾರರ ನೋಂದಣಿಗೆ ಅರ್ಹತೆಯನ್ನು ಸಾಬೀತುಪಡಿಸಲು ಇವುಗಳು ಸ್ವತಂತ್ರ ದಾಖಲೆಗಳಾಗಿ ಯಾಕೆ ಸ್ವೀಕರಿಸಲಾಗುವುದಿಲ್ಲ ಎಂಬದುನ್ನು ಚುನಾವಣಾ ಆಯೋಗ ವಿವರಿಸಿದೆ.  ಇದನ್ನೂ ಓದಿ: ಕನ್ವರ್ ಯಾತ್ರೆಯ ಮಾರ್ಗದಲ್ಲಿ ಹೋಟೆಲ್‌ಗಳಿಗೆ ಕ್ಯೂಆರ್ ಕೋಡ್ ಕಡ್ಡಾಯ ಆದೇಶ ಎತ್ತಿ ಹಿಡಿದ ಸುಪ್ರೀಂ

    ಆಧಾರ್ ಕೇವಲ ಗುರುತಿನ ಪುರಾವೆಯಾಗಿದೆ ಹೊರತು ಪೌರತ್ವವನ್ನು ಸ್ಥಾಪಿಸುವುದಿಲ್ಲ. ಆದರೆ ಸಂವಿಧಾನದ 326 ನೇ ವಿಧಿಯ ಅಡಿಯಲ್ಲಿ ಮತದಾರರ ಅರ್ಹತೆಗೆ ಅಗತ್ಯವಾದ ಅವಶ್ಯಕತೆಗಳಲ್ಲಿ ಆಧಾರ್‌ ಒಂದು ಎಂದು ಹೇಳಿದೆ. ಜನವರಿ 2024 ರ ನಂತರ ನೀಡಲಾದ ಹೊಸ ಆಧಾರ್ ಕಾರ್ಡ್‌ಗಳು ಪೌರತ್ವದ ಪುರಾವೆಯಲ್ಲ ಎಂದು ತಿಳಿಸಿದೆ.

    ರಾಣಿ ಮಿಸ್ತ್ರಿ vs ಪಶ್ಚಿಮ ಬಂಗಾಳ ರಾಜ್ಯ (2016) ಮತ್ತು ಖಾದಿಜಾ ಸ್ವಪ್ನಾ vs ಕರ್ನಾಟಕ ರಾಜ್ಯ (2017) ಸೇರಿದಂತೆ ಹಲವಾರು ಹೈಕೋರ್ಟ್ ತೀರ್ಪುಗಳನ್ನು ಉಲ್ಲೇಖಿಸಿ, ಆಧಾರ್ ಒಂದರಿಂದಲೇ ಪೌರತ್ವವನ್ನು ದೃಢೀಕರಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯಗಳು ನಿರಂತರವಾಗಿ ತೀರ್ಪು ನೀಡಿವೆ ಎಂದು ಚುನಾವಣಾ ಆಯೋಗ ಹೇಳಿದೆ.

    ವಿಶೇಷ ತೀವ್ರ ಪರಿಷ್ಕರಣೆ (SIR) 2025 ಪ್ರಕ್ರಿಯೆಯಲ್ಲಿ ಮತದಾರರ ಗುರುತಿನ ಚೀಟಿಗಳನ್ನು (EPIC) ಮಾನ್ಯ ಪುರಾವೆಯಾಗಿ ಬಳಸುವುದನ್ನು ಚುನಾವಣಾ ಆಯೋಗ ತಿರಸ್ಕರಿಸಿದೆ. ಅವುಗಳು ಹೆಚ್ಚಾಗಿ ಹಳೆಯ ಅಥವಾ ಹಳೆಯ ದಾಖಲೆಗಳನ್ನು ಅವಲಂಬಿಸಿರುತ್ತವೆ ಎಂದು ವಾದಿಸಿದೆ. ಎಪಿಕ್‌ ಕಾರ್ಡ್‌ ಬಳಸಿದರೆ SIR ನ ಉದ್ದೇಶ ಮತ್ತು ಕಾರ್ಯವಿಧಾನದ ಸಮಗ್ರತೆಯನ್ನು ದುರ್ಬಲಗೊಳಿಸುತ್ತದೆ ಎಂದು ಹೇಳಿದೆ.

    ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ 2013 ಅನ್ನು ಉಲ್ಲೇಖಿಸಿ ಪಡಿತರ ಚೀಟಿಯನ್ನು ಅರ್ಹತೆಗಾಗಿ ಪರಿಗಣಿಸಬಹುದು. ಆದರೆ ನಕಲಿ ಪಡಿತರ ಚೀಟಿಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ ಚುನಾವಣಾ ಆಯೋಗ ಇತ್ತೀಚೆಗೆ 5 ಕೋಟಿಗೂ ಹೆಚ್ಚು ಅಂತಹ ಕಾರ್ಡ್‌ಗಳನ್ನು ನಿಷ್ಕ್ರಿಯಗೊಳಿಸಲಾಗಿದೆ ಮತ್ತು ದೃಢೀಕರಣವನ್ನು ಸುಧಾರಿಸಲು ಪಡಿತರ ವಿತರಣಾ ವ್ಯವಸ್ಥೆಗಳನ್ನು ಆಧಾರ್‌ನೊಂದಿಗೆ ಲಿಂಕ್ ಮಾಡುವ ಪ್ರಯತ್ನ ನಡೆಯುತ್ತಿದೆ ಎಂದು ತಿಳಿಸಿದೆ.

    ಬಿಹಾರ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ ಸಂಬಂಧಿಸಿದಂತೆ ಮುಂದಿನ ವಿಚಾರಣೆ ಜುಲೈ 28 ರಂದು ನಡೆಯಲಿದೆ.

  • ಬಾಗಲಕೋಟೆಯಲ್ಲಿ ವೋಟರ್ ಐಡಿ ಗೋಲ್ಮಾಲ್ – ಸ್ಥಳೀಯ ಶಾಸಕರ ಮೇಲೆ ಕಾಂಗ್ರೆಸ್ ಆರೋಪ

    ಬಾಗಲಕೋಟೆಯಲ್ಲಿ ವೋಟರ್ ಐಡಿ ಗೋಲ್ಮಾಲ್ – ಸ್ಥಳೀಯ ಶಾಸಕರ ಮೇಲೆ ಕಾಂಗ್ರೆಸ್ ಆರೋಪ

    ಬಾಗಲಕೋಟೆ: ರಾಜ್ಯದ ಗಮನ ಸೆಳೆದಿದ್ದ ವೋಟರ್ ಐಡಿ ಗೋಲ್ಮಾಲ್ ಈಗ ಮತ್ತೆ ಸದ್ದು ಮಾಡಿದೆ. ಬಾಗಲಕೋಟೆ (Bagalkote) ಮತಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಬಸವೇಶ್ವರ ಸಂಘದ ವಸತಿ ನಿಲಯದ ವಿದ್ಯಾರ್ಥಿಗಳನ್ನು (Student) ಅಕ್ರಮವಾಗಿ ಮತದಾರರ ಪಟ್ಟಿಯಲ್ಲಿ ಸೇರಿಸಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ (Congress) ಆರೋಪ ಮಾಡಿದೆ.

    ಇತ್ತೀಚೆಗೆ ವೋಟರ್ ಐಡಿ (Voter ID) ಗೋಲ್ಮಾಲ್ ಪ್ರಕರಣ ರಾಜ್ಯದ ಗಮನ ಸೆಳೆದಿತ್ತು. ಆ ಪ್ರಕರಣದಲ್ಲಿ ಇಬ್ಬರು ಹಿರಿಯ ಐಎಎಸ್ ಅಧಿಕಾರಗಳ ತಲೆದಂಡ ಸಹ ಆಗಿತ್ತು. ಆದರೆ ಇದೀಗ ಬಾಗಲಕೋಟೆಯಲ್ಲಿ ವೋಟರ್ ಐಡಿ ಗೋಲ್ಮಾಲ್ ಆರೋಪ ಕೇಳಿ ಬರುತ್ತಿದೆ. ಕಳೆದ ತಿಂಗಳಷ್ಟೇ ಜಿಲ್ಲೆಯಾದ್ಯಂತ 68 ಸಾವಿರ ಮತದಾರರನ್ನು ಡಿಲಿಟ್ ಮಾಡಲಾಗಿದೆ. ಅದು ಕಾಂಗ್ರೆಸ್ ಮತದಾರರನ್ನೇ ಉದ್ದೇಶ ಪೂರ್ವಕವಾಗಿ ತೆಗೆದುಹಾಕಲಾಗಿದೆ ಎಂದು ಕೈ ನಾಯಕರು ಆರೋಪಿಸಿದರು.

    ಆದರೆ ಇದೀಗ ಮತದಾರರ ಪಟ್ಟಿಯಲ್ಲಿ ಅಕ್ರಮವಾಗಿ 147 ಜನರನ್ನ ಸೇರಿಸಿರಿವುದು ಮೇಲ್ನೋಟಕ್ಕೆ ಕಂಡುಬಂದಿದ್ದು, ಇದರ ಹಿಂದೆ ಸ್ಥಳೀಯ ಜನಪ್ರತಿನಿಧಿಗಳ ಪ್ರಭಾವ ಇದೆ ಎಂದು ಜಿಲ್ಲಾ ಕಾಂಗ್ರೆಸ್ ಮುಖಂಡರು ತಿಳಿಸಿದರು. ಇದನ್ನೂ ಓದಿ: ನಡೆದಾಡುವ ದೇವರು ಸಿದ್ದೇಶ್ವರ ಶ್ರೀಗಳ ಆರೋಗ್ಯ ಸ್ಥಿರ- ಭಕ್ತರಿಗೆ ದರ್ಶನ

    147 ವಿದ್ಯಾರ್ಥಿಗಳ ಅರ್ಜಿಯಲ್ಲೂ ಲೀಗಲ್ ಗಾರ್ಡಿಯನ್ ಎಂದು ಹಾಸ್ಟೆಲ್ ವಾರ್ಡನ್ ಪ್ರಕಾಶ್ ತಿಮ್ಮನಗೌಡ ಹೆಸರು ಉಲ್ಲೇಖ ಆಗಿದೆ. ಬಾಗಲಕೋಟೆ ಬಸವೇಶ್ವರ ವಿದ್ಯಾವರ್ಧಕ ಸಂಘದ ಎಂಜಿನಿಯರಿಂಗ್ ಕಾಲೇಜಿಗೆ ಶಾಸಕ ವೀರಣ್ಣ ಚರಂತಿಮಠ ಕಾರ್ಯಾಧ್ಯಕ್ಷ ಆಗಿದ್ದಾರೆ. ಹೀಗಾಗಿ ಮುಂಬರುವ ಚುನಾವಣೆಗಾಗಿ ವಿದ್ಯಾರ್ಥಿ ಮತಕ್ಕೆ ಪ್ಲಾನ್ ಮಾಡಿದ್ದಾರೆ ಎಂಬುದು ಕೈ ನಾಯಕರ ಆರೋಪವಾಗಿದೆ. ಈ ಬಗ್ಗೆ ದಾಖಲೆ ಬಿಡುಗಡೆ ಮಾಡಿದ್ದಾರೆ. ಇದನ್ನೂ ಓದಿ: ಕೊರೊನಾ ಆತಂಕದ ಮಧ್ಯೆ ವೈಕುಂಠ ಏಕಾದಶಿ- ಹೊಸ ವರ್ಷದಲ್ಲಿ ದೇವಸ್ಥಾನಕ್ಕೆ ಭಕ್ತಸಾಗರ

    Live Tv
    [brid partner=56869869 player=32851 video=960834 autoplay=true]

  • ತನಿಖೆ ಹೆಸ್ರಲಿ ಟಾರ್ಚರ್ ಕೊಡಬೇಡಿ:  ಬಿಬಿಎಂಪಿ ಅಧಿಕಾರಿ ಮನವಿ

    ತನಿಖೆ ಹೆಸ್ರಲಿ ಟಾರ್ಚರ್ ಕೊಡಬೇಡಿ: ಬಿಬಿಎಂಪಿ ಅಧಿಕಾರಿ ಮನವಿ

    ಬೆಂಗಳೂರು: ನಗರದ 120 ಕಂದಾಯಾಧಿಕಾರಿಗಳ ರಕ್ಷಿಸಿ, ತನಿಖೆ ಹೆಸ್ರಲಿ ಟಾರ್ಚರ್ ಕೊಡಬೇಡಿ ಎಂದು ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಅಮೃತ್‌ ರಾಜ್‌ ತಿಳಿಸಿದರು.

    ಚಿಲುಮೆ (Chilume) ವೋಟರ್‌ ಐಡಿ (Voter ID) ಪ್ರಕರಣಕ್ಕೆ ಸಂಬಂಧಿಸಿ ಮಾತನಾಡಿ, ಚಿಲುಮೆ ವೋಟರ್‌ ಐಡಿ ಹಗರಣಕ್ಕೆ ಸಂಬಂಧಿಸಿ ತನಿಖೆಗೆ ಒಳಪಡಲು ಸಿದ್ಧರಿದ್ದೇವೆ. ಆದರೆ ಹಗರಣಕ್ಕೆ ಸಂಬಂಧಿಸಿ ಒಂದೇ ತನಿಖಾ ಸಂಸ್ಥೆಯಿಂದ ತನಿಖೆ ಮಾಡಿಸಬೇಕು. ಈಗ 10 ಪೊಲೀಸ್, ಪ್ರಾದೇಶಿಕ ಆಯುಕ್ತರ ಕಚೇರಿ, ಚುನಾವಣಾಧಿಕಾರಿ ಕಚೇರಿಯವರು ತನಿಖೆ ಮಾಡುತ್ತಿದ್ದಾರೆ. ಇದರಿಂದಾಗಿ ನಾವು ಮಾನಸಿಕ ಹಾಗೂ ದೈಹಿಕವಾಗಿ ತೊಂದರೆ ಅನುಭವಿಸುತ್ತಿದ್ದೇವೆ ಎಂದು ಬೇಸರ ವ್ಯಕ್ತಪಡಿಸಿದರು.

    ನಾವ್ ಬಿಬಿಎಂಪಿ ಕಂದಾಯಾಧಿಕಾರಿಗಳು ಕೆಲಸ ಮಾಡಿ ಟಾರ್ಚರ್ ಅನುಭವಿಸ್ತಾ ಇದ್ದೇವೆ. ಅಷ್ಟೇ ಅಲ್ಲದೇ ತಡರಾತ್ರಿವರೆಗೆ ಮಹಿಳಾ ಅಧಿಕಾರಿಗಳನ್ನು ಪೊಲೀಸ್‌ ಠಾಣೆಯಲ್ಲಿ ಕೂರಿಸಿಕೊಳ್ಳುತ್ತಿದ್ದಾರೆ. ಮಾನಸಿಕ ಚಿತ್ರ ಹಿಂಸೆ ತಡೆಯಲು ಆಗಲ್ಲ. 10 ಸ್ಟೇಷನ್‌ಗಳ ಹತ್ತಿ‌ ಇಳಿದು ಸಾಕಾಗಿದೆ. ತಡರಾತ್ರಿ 4 ಗಂಟೆಯವರೆಗೂ ತನಿಖೆ ಮಾಡ್ತಾರೆ. ನಿದ್ದೆಯಿಲ್ಲ, ಬದುಕು ಕಷ್ಟವಾಗಿದೆ. ಈ ರೀತಿ ಆದರೆ ನಾವು ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದರು. ಇದನ್ನೂ ಓದಿ: ಸಿದ್ದು ಪ್ರವಾಸದ ಬಳಿಕ ಕೋಲಾರ ಕ್ಷೇತ್ರದಲ್ಲಿ ಚುರುಕಾದ ಬಿಜೆಪಿ

    ಚುನಾವಣೆಗಾಗಿ ಕೆಲಸ ಮಾಡುತ್ತೇವೆ. ಈ ರೀತಿ ಬಿಟ್ಟಿ ಕೆಲಸಕ್ಕೆ ವರ್ಷಕ್ಕೆ ಗೌರವ ಧನ 7 ಸಾವಿರ ರೂ. ನೀಡುತ್ತಾರೆ. ಇದರಿಂದ ನಮಗೆ ತೊಂದರೆ ಆಗುತ್ತಿದೆ. ಬಿಎಲ್‌ಒಗಳನ್ನು ಅಧಿಕೃತವಾಗಿ ನೇಮಿಸಬೇಕು ಎಂದ ಅವರು, ಸದ್ಯ ಯಾವುದೇ 6 ಲಕ್ಷ ಹೆಸರು ಡಿಲೀಷನ್ ಫೈನಲ್ ಕಾಪಿ ಆಗಿಲ್ಲ. ಇದು ಕೇವಲ ಡ್ರಾಫ್ಟ್ ನೋಟ್ ಮೇಲೆ ಆಗಿರುವ ಡಿಲೀಷನ್ ಆಗಿದೆ. ಆಡಿಷನ್, ಡಿಲಿಷನ್‌ನಿಂದ ಅಧಿಕಾರಿಗಳಿಗೆ ಯಾವುದೇ ಲಾಭ ಆಗಲ್ಲ. ದೂರು ಕೊಟ್ಟ ನಮಗೆ ಟಾರ್ಚರ್ ಯಾಕೆ ಕೊಡ್ತೀರಾ ಎಂದು ಕಿಡಿಕಾರಿದರು. ಇದನ್ನೂ ಓದಿ: 24 ಗಂಟೆಯೊಳಗೆ ಸರ್ಕಾರಿ ವಸತಿ ಗೃಹ ಖಾಲಿ ಮಾಡಿ – ಕಾಶ್ಮೀರ ಮಾಜಿ ಸಿಎಂ ಮುಫ್ತಿ ಸೇರಿ 7 ಮಂದಿಗೆ ನೋಟಿಸ್‌

    Live Tv
    [brid partner=56869869 player=32851 video=960834 autoplay=true]

  • ಚುನಾವಣಾ ಆಯೋಗ ಸೂಚನೆ – ಮತದಾರರ ಪಟ್ಟಿ ಪರಿಷ್ಕರಣೆ ಶುರು

    ಚುನಾವಣಾ ಆಯೋಗ ಸೂಚನೆ – ಮತದಾರರ ಪಟ್ಟಿ ಪರಿಷ್ಕರಣೆ ಶುರು

    ವಿಜಯಪುರ: ಚುನಾವಣಾ ಆಯೋಗದ (Election Commission) ನಿರ್ದೇಶನದಂತೆ ಮತದಾರರ ಪಟ್ಟಿ ಪರಿಷ್ಕರಣೆ (Voter List Verification) ಕಾರ್ಯ ಜಿಲ್ಲೆಯಾದ್ಯಂತ ನಡೆಯುತ್ತಿದ್ದು, ಶನಿವಾರ ಜಿಲ್ಲಾಧಿಕಾರಿ ಡಾ.ವಿಜಯ ಮಹಾಂತೇಶ ದಾನಮ್ಮನವರ್ ಅವರು ನಗರದ ವಿವಿಧ ಮತಗಟ್ಟೆ ಮನೆ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

    ವಿಜಯಪುರ ನಗರದ ಮತಗಟ್ಟೆ ಸಂಖ್ಯೆ 153 ಹಾಗೂ ಮತಗಟ್ಟೆ ಸಂಖ್ಯೆ 119ರ ಸ್ವತಂತ್ರ ಕಾಲೋನಿ, ಖಾಜಾನಗರ, ಗುಂಡಬಾವಡಿ ಪ್ರದೇಶದ ಮನೆ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದನ್ನೂ ಓದಿ: ವಸಿಷ್ಠ ಸಿಂಹ ಜೊತೆ ಹಸೆಮಣೆ ಏರಲು ಸಜ್ಜಾದ ಹರಿಪ್ರಿಯಾ – ಸೂಪರ್‌ ಜೋಡಿ ಅಂದ್ರು ಫ್ಯಾನ್ಸ್‌

    ಮತಗಟ್ಟೆ ಮಟ್ಟದ ಅಧಿಕಾರಿಗಳು ಮನೆ ಮನೆಗೆ ತೆರಳಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ನಡೆಯುತ್ತಿದ್ದು, ತಮ್ಮ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಸಾರ್ವಜನಿಕರು ಹೊಸ ಸೇರ್ಪಡೆ, ತಿದ್ದುಪಡಿ, ಸ್ಥಳಾಂತರ, ಮತದಾರರ ಪಟ್ಟಿಯಿಂದ ಹೆಸರು ಕೈಬಿಡುವುದು ಹಾಗೂ ವಿಳಾಸದ ಬದಲಾವಣೆಗಳಿದ್ದರೆ ಈ ಅವಕಾಶವನ್ನು ಸದುಪಯೋಗ ಪಡೆದುಕೊಳ್ಳಬೇಕು. ಪ್ರಸ್ತುತ ಕಾಯ್ದೆಯಲ್ಲಿ ಜನವರಿ 1, ಏಪ್ರಿಲ್ 1, ಜುಲೈ 1 ಹಾಗೂ ಅಕ್ಟೋಬರ್ 1 ಅನ್ನು ನಾಲ್ಕು ಅರ್ಹತಾ ದಿನಾಂಕಗಳೆಂದು ನಿಗದಿಪಡಿಸಲಾಗಿದೆ. ಅರ್ಹ ಯುವ ಮತದಾರರು (Voters) ತಮ್ಮ ಹೆಸರು ಸೇರ್ಪಡೆಗಾಗಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು.  

    ಮತಗಟ್ಟೆ ಅಧಿಕಾರಿಗಳು ಸಹ ಯಾವುದೇ ಮತದಾರ ಮತದಾನದಿಂದ ವಂಚಿತವಾಗದಂತೆ ಜವಾಬ್ದಾರಿಯಿಂದ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಕೈಗೊಳ್ಳುವಂತೆ ಸಲಹೆ ನೀಡಿದರು. ಇದನ್ನೂ ಓದಿ: ಒಕ್ಕಲು ಮಕ್ಕಳು ಒಕ್ಕಲುತನ ಮೀರಿ ಉದ್ಯಮಿಗಳಾಗಲು ಶ್ರಮಿಸಬೇಕು – ಸಿ.ಎನ್.ಅಶ್ವಥ್ ನಾರಾಯಣ ಕರೆ

    ದೋಷಗಳಿಲ್ಲದೇ ಮತದಾರ ಪಟ್ಟಿಯನ್ನು ಸಿದ್ಧಪಡಿಸುವಂತೆ ಸೂಚನೆ ನೀಡಿದ ಅವರು, ಮತದಾರ ಲಿಂಗಾನುಪಾತ ಹಾಗೂ 18 ವರ್ಷದ ಯುವ ಮತದಾರರು ಮತದಾರರ ಪಟ್ಟಿಯ ಅನುಪಾತ ಕುರಿತು ಮತಗಟ್ಟೆ ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಿ ಅಗತ್ಯ ಸಲಹೆ-ಸೂಚನೆಗಳನ್ನು ನೀಡಿದರು.

    ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಯಾವುದಾದರೂ ಗೊಂದಲ, ಸಮಸ್ಯೆಗಳಿದ್ದಲ್ಲಿ ಜಿಲ್ಲಾ ದೂರು ನಿರ್ವಹಣಾ ಕೇಂದ್ರದ ಟೋಲ್ ಫ್ರೀ ಸಂಖ್ಯೆ 1950ಕ್ಕೆ ಸಂಪರ್ಕಿಸುವಂತೆ ಮಾಹಿತಿ ನೀಡಿದರು.

    ಈ ಸಂದರ್ಭದಲ್ಲಿ ವಿಜಯಪುರ ತಹಶೀಲ್ದಾರ ಸಿದರಾಯ ಭೋಸಗಿ ಸೇರಿದಂತೆ, ಮತಗಟ್ಟೆ ಅಧಿಕಾರಿಗಳು ಉಪಸ್ಥಿತರಿದ್ದರು.

    Live Tv
    [brid partner=56869869 player=32851 video=960834 autoplay=true]

  • ಚಿಲುಮೆ ಬಳಿಕ ಧಾರವಾಡದಲ್ಲೂ ವೋಟರ್ ಸ್ಕ್ಯಾಮ್- ಮತದಾರರ ಕ್ಷೇತ್ರ ವರ್ಗಾವಣೆ ಆರೋಪ

    ಚಿಲುಮೆ ಬಳಿಕ ಧಾರವಾಡದಲ್ಲೂ ವೋಟರ್ ಸ್ಕ್ಯಾಮ್- ಮತದಾರರ ಕ್ಷೇತ್ರ ವರ್ಗಾವಣೆ ಆರೋಪ

    ಧಾರವಾಡ: ಬೆಂಗಳೂರಿನಲ್ಲಿ ಕಾಂಗ್ರೆಸ್ (Congress) ನಾಯಕರು ಚಿಲುಮೆ ಸಂಸ್ಥೆಯ ಮೇಲೆ ಮತದಾರರ ಪಟ್ಟಿಯಲ್ಲಿ ಗೋಲ್‍ಮಾಲ್ ಮಾಡಿದ ಆರೋಪದ ಬೆನ್ನಲ್ಲೇ, ಧಾರವಾಡ ಜಿಲ್ಲೆಯಲ್ಲಿ ಕೂಡಾ ಇದೇ ರೀತಿ ಗೋಲ್‍ಮಾಲ್ ನಡೆದ ಆರೋಪ ಕೇಳಿ ಬಂದಿದೆ.

    ಜಿಲ್ಲೆಯ ಹುಬ್ಬಳ್ಳಿ ಧಾರವಾಡ ಪಶ್ಚಿಮ ವಿಧಾನ ಸಭಾ ಕ್ಷೇತ್ರದಲ್ಲಿ ಇರುವ ಅಲ್ಪಸಂಖ್ಯಾತ ಮತದಾರರನ್ನು ಬೇರೆ ಕ್ಷೇತ್ರಕ್ಕೆ ವರ್ಗಾವಣೆ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ಮುಖಂಡ ಆರೋಪ ಮಾಡಿದ್ದು, ಪಾಲಿಕೆಯ ಹಲವು ವಾರ್ಡ್ ಗಳಲ್ಲಿ ಈ ರೀತಿಯ ಮತದಾರರ ಪಟ್ಟಿಯಿಂದ ಹೆಸರು ಗಾಯಬ್ ಮಾಡಲಾಗಿದೆ ಎಂದಿದ್ದಾರೆ. ಈ ಕ್ಷೇತ್ರದ ವಾರ್ಡ್ ನಂಬರ್ 14, 16 ಹಾಗೂ 22ರಲ್ಲಿ ಬೇರೆ ಕಡೆ ಮತದಾರರನ್ನ ವರ್ಗಾವಣೆ ಮಾಡಲಾಗಿದೆ. ಅಲ್ಲದೇ ಧಾರವಾಡ ನಗರದ ಪಿಜಿಯಲ್ಲಿ ಇರುವ ಬೇರೆ ಜಿಲ್ಲೆಯ ವಿದ್ಯಾರ್ಥಿಗಳಿಗೆ ಮತದಾರರ ಪಟ್ಟಿಯಲ್ಲಿ ಹಾಕುವ ಕೆಲಸ ನಡೆದಿದೆ ಆರೋಪಿಸ್ತಿದ್ದಾರೆ.

    ಮತ್ತೊಂದು ಕಡೆ ಈ ಮತದಾರರ ಪಟ್ಟಿ ಹಿಡಿದು ಮನೆಗೆ ಬರುವ ಕೆಲವರು, ಯಾರಿಗೆ ಮತ ಹಾಕ್ತಾರೆ ಎಂದು ಕೇಳ್ತಾರಂತೆ. ಅವರು ಕಾಂಗ್ರೆಸ್‍ಗೆ ಮತ ಹಾಕ್ತೇವೆ ಎಂದ್ರೆ ಆ ಮತದಾರನ್ನ ಪಟ್ಟಿಯಿಂದ ಡಿಲೀಟ್ ಮಾಡುವ ಕೆಲಸ ನಡೆದಿದೆ ಎಂದು ಕಾಂಗ್ರೆಸ್ ಮುಖಂಡ ದೀಪಕ ಚಿಂಚೋರೆ ಆರೋಪಿಸಿದ್ದಾರೆ. ‌ ಇದನ್ನೂ ಓದಿ: ವೋಟರ್ ಲಿಸ್ಟ್ ಹಗರಣ – ಮುಖ್ಯ ಆರೋಪಿ ರವಿಕುಮಾರ್ ಆಪ್ತ ಲೋಕೇಶ್ ಬಂಧನ

    ಪಾಲಿಕೆ ಚುನಾವಣೆಯಲ್ಲಿ ಇದೇ ರೀತಿ ಮಾಡಿ ಬಿಜೆಪಿ ಪಶ್ಚಿಮ ಕ್ಷೇತ್ರದ ನಾಲ್ಕು ವಾರ್ಡ್ ಗೆದ್ದಿದೆ, 80 ಬೂತ್‍ಗಳಲ್ಲಿ ಮತದಾರರನ್ನ ಡಿಲೀಟ್ ಮಾಡುವ ಕೆಲಸ ನಡೆದಿದೆ. ಇದರ ಹಿಂದೆ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ್‌ (Aravind Bellad) ಕೈವಾಡ ಇದೆ ಎಂದು ಆರೋಪಿಸಲಾಗ್ತಿದೆ.

    ಒಟ್ಟಿನಲ್ಲಿ ಬೆಂಗಳೂರಿನ ನಂತರ ಅವಳಿ ನಗರವಾದ ಧಾರವಾಡದಲ್ಲೂ ಮತಪಟ್ಟಿ ಗೋಲ್ಮಾಲ್ ಆರೋಪ ಕೇಳಿ ಬಂದಿದ್ದು, ಈ ಬಗ್ಗೆ ಪಾಲಿಕೆ ಆಯುಕ್ತರು ಅಥವಾ ಚುನಾವಣಾ ಆಯೋಗವೇ ಸತ್ಯ ಹೇಳಬೇಕಿದೆ.

    Live Tv
    [brid partner=56869869 player=32851 video=960834 autoplay=true]

  • ವೋಟರ್ ಡೇಟಾ ಹಗರಣ ಆರೋಪ- ಸರ್ಕಾರಕ್ಕೆ ಸಿದ್ದರಾಮಯ್ಯ ವಾರ್ನಿಂಗ್

    ವೋಟರ್ ಡೇಟಾ ಹಗರಣ ಆರೋಪ- ಸರ್ಕಾರಕ್ಕೆ ಸಿದ್ದರಾಮಯ್ಯ ವಾರ್ನಿಂಗ್

    ಬೆಂಗಳೂರು: ವೋಟರ್ ಡೇಟಾ ಹಗರಣ (Voter Id Scam) ಆರೋಪ ಸಂಬಂಧ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ (BJP) ಯವರು ಮಾಡುತ್ತಿರುವ ಷಡ್ಯಂತ್ರ ಇಡೀ ದೇಶಕ್ಕೆ ಗೊತ್ತಾಗಿದೆ. ಲೆಟರ್ ಹೆಡ್, ಪ್ಯಾಡ್, ನೋಟ್ ಮೆಶಿನ್ ಎಲ್ಲಾ ಸಿಕ್ಕಿದೆ. ಕೂಡಲೇ ಅಶ್ವಥ್ ನಾರಾಯಣ್‍ (Ashwath Narayan) ಅರೆಸ್ಟ್ ಮಾಡಬೇಕು. ಕೇಂದ್ರ ಚುನಾವಣಾ ಆಯೋಗದ ಮುಂದೆ ಹೋಗ್ತೀವಿ ಎಂದು ಸರ್ಕಾರಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ವಾರ್ನಿಂಗ್ ಮಾಡಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯ ಚುನಾವಣಾಧಿಕಾರಿಗಳಿಗೆ ದೂರು ಕೊಟ್ಟಿದ್ದೇವೆ. ಬಿಜೆಪಿಯವರು ಮಾಡುತ್ತಿರುವ ಷಡ್ಯಂತ್ರ ಇಡೀ ದೇಶಕ್ಕೆ ಗೊತ್ತಾಗಿದೆ. ಕೃಷ್ಣಪ್ಪ ರವಿಕುಮಾರ್ ಚಿಲುಮೆ ಸಂಸ್ಥೆಯ ಮಾಲೀಕ. ಇವನು ಪುಣ್ಯಾತ್ಮ ಅಲ್ಲ ದುರಾತ್ಮ. ಇವನೇ ಬಿಎಲ್ ಓಗಳನ್ನ ನೇಮಕ ಮಾಡಿಬಿಟ್ಟಿದ್ದಾನೆ. ಬೇಕಾದವ್ರನ್ನ ಸೇರಿಸಿ, ಬೇಡದವ್ರನ್ನ ಡಿಲೀಟ್ ಮಾಡಿದ್ದಾರೆ. ಇದೆಲ್ಲವನ್ನೂ ಕ್ಯಾನ್ಸಲ್ ಮಾಡಿಸಿ ಎಂದು ಆಗ್ರಹಿಸಿದರು.

    ಡೂಪ್ಲಿಕೇಟ್ ಬಿಎಲ್ ಓ ಗಳಿಂದಲ್ಲ, ನಿಜವಾದ ಬಿಎಲ್ ಓ ಗಳಿಂದ ಸರ್ವೇ ಮಾಡಿಸಿ. ಚೀಫ್ ಕಮಿಷನರ್, ಚುನಾವಣಾಧಿಕಾರಿಗಳ ಮೇಲೆ ಡಿವಿಸಿಯವರು ತನಿಖೆ ಮಾಡೋದಕ್ಕಾಗುತ್ತಾ..?, ಬೆಂಗಳೂರು ಸಚಿವರು, ಸಿಎಂ ಮೇಲೆ ಇವ್ರು ತನಿಖೆ ಮಾಡೋಕ್ಕಾಗುತ್ತಾ..? ಪೊಲೀಸ್ ಕಮಿಷನರ್ ಗೆ ಸಿಎಂ ಹಾಗೂ ಇತರರ ಮೇಲೆ ದೂರು ಕೊಟ್ಟಿದ್ದೇವೆ ಎಂದರು. ಇದನ್ನೂ ಓದಿ: ಬ್ಲಾಕ್ ಮನಿಯನ್ನು ವೈಟ್ ಮಾಡಿತಾ ಚಿಲುಮೆ..?- ಡಿಕೆಶಿ ಹೊಸ ಬಾಂಬ್

    ಪರ್ಮಿಶನ್ ಕೊಟ್ಟು ಕ್ಯಾನ್ಸಲ್ ಮಾಡಿದ್ರೆ ಏನರ್ಥ. ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿದ್ರೆ ಏನರ್ಥ..? ತಪ್ಪಾಗಿದೆ ಅಂತಾ ಅರ್ಥ ಅಲ್ವಾ, ಪ್ರಭಾವಿಗಳ ಮೇಲೆ ಕ್ರಮ ತೆಗೆದುಕೊಂಡಿಲ್ಲ ಯಾಕೆ..?, ಪ್ರೈವೆಸಿಯನ್ನ ಕಳ್ಳತನ ಮಾಡಿರೋದು ಇದು. ಕೂಡಲೇ ಅಶ್ವಥ್ ನಾರಾಯಣ್ ಅವರನ್ನು ಅರೆಸ್ಟ್ ಮಾಡಬೇಕು ಎಂದು ಆಕ್ರೋಶ ಹೊರಹಾಕಿದರು.

    ಲೆಟರ್ ಹೆಡ್, ಪ್ಯಾಡ್, ನೋಟ್ ಮೆಶಿನ್ ಎಲ್ಲಾ ಸಿಕ್ಕಿದೆ. ನಮ್ಮ ಮನವಿ ಕೇಳದೇ ಇದ್ರೆ ಕೇಂದ್ರ ಚುನಾವಣಾ ಆಯೋಗದ ಮುಂದೆ ಹೋಗ್ತೀವಿ. ಕ್ರಮ ತೆಗೆದುಕೊಳ್ಳದೇ ಇದ್ರೆ ಕೇಂದ್ರ ಚುನಾವಣಾ ಆಯೋಗದ ಮಂದೆ ಹೋಗ್ತೀವಿ. ಇದು ದೊಡ್ಡ ಫ್ರಾಡ್ ಕೆಲಸ ಇಡೀ ರಾಜ್ಯಕ್ಕೆ ಮಾಡಿರೋ ಅನ್ಯಾಯ ಇದು ಪ್ರಜಾಪ್ರಭುತ್ವದ ಕೊಲೆ ಎಂದರು.

    2 ತಿಂಗಳ ಹಿಂದೆಯೇ ಎಲ್ಲ ಹಗರಣ ಪಾಲಿಕೆ ಕಮೀಷನರ್, ಮುಖ್ಯ ಚುನಾವಾಧಿಕಾರಿಗೆ ಮಾಹಿತಿ ಕೊಡಲಾಗಿತ್ತು. ಜಾತಿ, ವೈಯಕ್ತಿಕ ಮಾಹಿತಿ ಕೇಳ್ತಾ ಇದ್ದಾರೆ ಅಂತಾ ಹೇಳಿದೆ. ನಾನೇ ಖುದ್ದು ಹೋಗಿ ಮಾಹಿತಿ, ದೂರು ನೀಡಿದೆ. ಆದ್ರೂ ಯಾರು ಕ್ರಮಕೈಗೊಂಡಿಲ್ಲ. 10 ಜನ ಹುಡುಗರು ಮಹದೇವಪುರದಲ್ಲಿ ಸಮನ್ವಯ ಟ್ರಸ್ಟ್ ನಿಂದ ಸರ್ವೆಗೆ ಹೋಗಿದ್ರು. ಒಂದು ರೂಪಾಯಿ ಕೊಡಲಿಲ್ಲ. 10 ಸಾವಿರ ರೂ. ಸಂಬಳ ಅಂತಾ ಹೇಳಿ ಕೈ ಕೊಟ್ಟರು ಎಂದು ಹೇಳಿದರು.

    ಆಯುಕ್ತರು ನಮ್ಮ ಮನವಿಗೆ ಸ್ಪಂದಿಸಿದ್ದಾರೆ. ಕೇಂದ್ರ ಚುನಾವಣಾ ಆಯೋಗದ ಜೊತೆ ಮಾತನಾಡುತ್ತೇನೆ ಅಂದಿದ್ದಾರೆ. ಅವರು ನಿರ್ಧಾರ ಮಾಡಿದ್ರೆ ನ್ಯಾಯಾಂಗ ತನಿಖೆಗೆ ವಹಿಸುತ್ತವೆ ಅಂದಿದ್ದಾರೆ. ನಾವು ಕಾದು ನೋಡುತ್ತೇವೆ. ಇಲ್ಲದೆ ಹೊದ್ರೆ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

    Live Tv
    [brid partner=56869869 player=32851 video=960834 autoplay=true]