Tag: Voters

  • Bihar Election Dates 2025 | ಬೂತ್ ಅಧಿಕಾರಿಗಳಿಗೆ ನೇರವಾಗಿ ಕರೆ ಮಾಡಲು ಸಹಾಯವಾಣಿ

    Bihar Election Dates 2025 | ಬೂತ್ ಅಧಿಕಾರಿಗಳಿಗೆ ನೇರವಾಗಿ ಕರೆ ಮಾಡಲು ಸಹಾಯವಾಣಿ

    – ಯಾವುದೇ ಗೊಂದಲಗಳಿದ್ದರೂ ಖುದ್ದು ಮತದಾರರೇ ಬಗೆಹರಿಸಿಕೊಳ್ಳಲು ಅನುವು

    ನವದೆಹಲಿ: ಬಿಹಾರ ಚುನಾವಣೆಯಿಂದಲೇ (Bihar Election 2025) ಮತದಾರರ ಸೇವೆಗಳನ್ನು ಸುಧಾರಿಸುವ ನಿಟ್ಟಿನಲ್ಲಿ ಚುನಾವಣಾ ಆಯೋಗ 17 ಉಪಕ್ರಮಗಳನ್ನ ಅಳವಡಿಸಿಕೊಂಡಿದೆ. ಮತದಾರರ ಪಟ್ಟಿ (Voters List) ಶುದ್ಧೀಕರಣ, ಬೂತ್ ಮಟ್ಟದ ಅಧಿಕಾರಿಗಳ ಗೌರವಧನ ದ್ವಿಗುಣಗೊಳಿಸುವುದು, ಮೊಬೈಲ್ ಫೋನ್ ಕೌಂಟರ್‌, ಹೆಚ್ಚುವರಿ ಬೂತ್‌ಗಳು, ಇವಿಎಂಗಳಲ್ಲಿ ಅಭ್ಯರ್ಥಿಗಳ ಬಣ್ಣದ ಫೋಟೋಗಳು ಮತ್ತು ಪ್ರತಿ ಬೂತ್‌ನಲ್ಲಿ ಶೇ 100 ರಷ್ಟು ವೆಬ್‌ಕಾಸ್ಟಿಂಗ್ ವ್ಯವಸ್ಥೆ ಮಾಡಿದೆ. ಎಲ್ಲದಕ್ಕಿಂತ ಮುಖ್ಯವಾಗಿ ಮತದಾರರು ತಮ್ಮ ಬೂತ್‌ ಮಟ್ಟದ ಅಧಿಕಾರಿಗಳೊಂದಿಗೆ ನೇರವಾಗಿ ಮಾತನಾಡಿ ಗೊಂದಲ ಪರಿಹರಿಸಿಕೊಳ್ಳುವ ಅವಕಾಶವನ್ನು ಕಲ್ಪಿಸಿದೆ. ಮುಂದಿನ ದಿನಗಳಲ್ಲಿ ಇದು ದೇಶಾದ್ಯಂತ ಜಾರಿಗೆ ಬರಲಿದೆ.

    ಹೌದು. ಮತದಾನ, ಮತಪಟ್ಟಿ, ಹೆಸರು, ವಿಳಾಸ, ಬೂತ್‌ ಹೀಗೆ ಯಾವುದೇ ಗೊಂದಲಗಳು ಇದ್ದಲ್ಲಿ ನೇರವಾಗಿ ಬೂತ್‌ ಮಟ್ಟದ ಅಧಿಕಾರಿಗಳೊಂದಿಗೆ ಸಂಪರ್ಕ ಸಾಧಿಸಿ, ಬಗೆಹರಿಸಿಕೊಳ್ಳಲು ಅನುವುಮಾಡಿಕೊಟ್ಟಿದೆ. ಹೊಸದಾಗಿ ಪರಿಚಯಿಸಲಾದ ECINet ಅಪ್ಲಿಕೇಶನ್ ಮೂಲಕ ಹಾಗೂ ಮತದಾರರ ಸಹಾಯವಾಣಿ ಸಂಖ್ಯೆ 1950 ಮತ್ತು ಮತದಾರರ ಸೇವಾ ಪೋರ್ಟಲ್ ಮೂಲಕ ಈ ಸೇವೆ ಲಭ್ಯವಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ (Gyanesh Kumar) ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

    69 ಲಕ್ಷ ಹೆಸರುಗಳು ಡಿಲೀಟ್‌
    ಇನ್ನೂ ಸಾವು, ಅಕ್ರಮ ವಲಸಿಗರು, ನಕಲಿ ವೋಟರ್‌ ಐಡಿ (Voters ID) ಹಾಗೂ ವಿಳಾಸ ಬದಲಾವಣೆ ಕಾರಣಗಳಿಂದ 69 ಲಕ್ಷ ಹೆಸರುಗಳನ್ನ ಮತಪಟ್ಟಿಯಿಂದ ಅಳಿಸಲಾಗಿದೆ. ಇದೇ ವೇಳೆ 21.5 ಲಕ್ಷ ಹೊಸ ಮತದಾರರು ಸೇರ್ಪಡೆಯಾಗಿದ್ದಾರೆ. ಬಿಹಾರದಲ್ಲಿರುವ 243 ವಿಧಾನಸಭಾ ಕ್ಷೇತ್ರಗಳ ಪೈಕಿ 203 ಸಾಮಾನ್ಯ ಕ್ಷೇತ್ರಗಳಾಗಿದ್ದು, 2 ಎಸ್ಟಿ ಹಾಗೂ 38 ಎಸ್ಸಿ ಮೀಸಲು ಕ್ಷೇತ್ರಗಳಾಗಿವೆ. 7.43 ಕೋಟಿ ಮತದಾರರಿದ್ದು, 3.92 ಕೋಟಿ ಪುರುಷರು, 3.50 ಕೋಟಿ ಮಹಿಳಾ ಮತದಾರರಿದ್ದಾರೆ. ಬಿಹಾರದಲ್ಲಿ 22 ವರ್ಷಗಳ ಬಳಿಕ ಮತಪಟ್ಟಿಯ ಸಮಗ್ರ ಪರಿಷ್ಕರಣೆ ಬಳಿಕ ಚುನಾವಣೆ ನಡೆಯುತ್ತಿದ್ದು, 14 ಲಕ್ಷ ಪ್ರಥಮ ಬಾರಿಗೆ ಮತಚಲಾಯಿಸುವ ಮತದಾರರಿದ್ದಾರೆ ಎಂದು ತಿಳಿಸಿದರು.

    ಎಲ್ಲೆಲ್ಲಿ ಉಪಚುನಾವಣೆ?
    ಇನ್ನು, ಜಮ್ಮು & ಕಾಶ್ಮೀರ 2 ಹಾಗೂ ರಾಜಸ್ಥಾನ, ಜಾರ್ಖಂಡ್, ತೆಲಂಗಾಣ, ಪಂಜಾಬ್, ಮಿಜೋರಾಂ, ಒಡಿಶಾದಲ್ಲಿ ತಲಾ ಒಂದೊಂದು ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ.

    ಬುರ್ಖಾಧಾರಿ ಮಹಿಳೆಯರ ಪರಿಶೀಲನೆ
    ಕಾಂಗ್ರೆಸ್‌ ನಾಯಕರಿಂದ ಮತಗಳ್ಳತನ ಆರೋಪಗಳು ಹೆಚ್ಚಾಗಿ ಕೇಳಿಬಂದ ಹಿನ್ನೆಲೆ ಈ ಬಾರಿ 100% ವೆಬ್‌ಕ್ಯಾಸ್ಟಿಂಗ್‌ ವ್ಯವಸ್ಥೆ ಮಾಡಲಾಗಿದೆ. ಅಲ್ಲದೇ ಬುರ್ಖಾಧಾರಿ ಮಹಿಳೆಯರ ಗುರುತು ಪರಿಶೀಲಿಸಲು ಪ್ರತಿ ಬೂತ್‌ನಲ್ಲಿ ಪ್ರತ್ಯೇಕವಾಗಿ ಅಂಗನವಾಡಿ ಕಾರ್ಯಕರ್ತರನ್ನ ನಿಯೋಜಿಸಲಾಗುತ್ತದೆ. ಚುನಾವಣಾ ಆಯೋಗದ ಮಾರ್ಗಸೂಚಿಯ ಪ್ರಕಾರವೇ ಅವರು ಗುರುತು ಪರಿಶೀಲಿಸಲಿದ್ದಾರೆ ಎಂದು ತಿಳಿಸಿದ್ದಾರೆ.

    ಇನ್ನೂ ಮೊದಲ ಹಂತದ ಮತದಾನ ನಡೆಯಲಿರುವ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಅ.17 ಕೊನೆಯ ದಿನವಾಗಿದ್ದು, 2ನೇ ಹಂತದ ಕ್ಷೇತ್ರಗಳಿಗೆ ಅ.21 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಅಕ್ಟೋಬರ್‌ 18‌ ಮತ್ತು ಅಕ್ಟೋಬರ್‌ 21 ರಂದು ಕ್ರಮವಾಗಿ ಮೊದಲ ಮತ್ತು 2ನೇ ಹಂತದ ಕ್ಷೇತ್ರಗಳಿಗೆ ಸಲ್ಲಿಸಿರುವ ಅಭ್ಯರ್ಥಿಗಳ ನಾಮಪತ್ರ ಪರಿಶೀಲನೆ ನಡೆಲಿದೆ. ಅಕ್ಟೋಬರ್‌ 20 ಹಾಗೂ ಅ.23 ಕ್ರಮವಾಗಿ ನಾಮಪತ್ರ ಹಿಂಪಡೆಯಲು ಕೊನೆಯದಿನವಾಗಿದೆ. ನವೆಂಬರ್‌ 6ರಂದು ಚುನಾವಣೆ ನಡೆಯಲಿದೆ. ನವೆಂಬರ್‌ 14ರಂದು ಫಲಿತಾಂಶ ಪ್ರಕಟವಾಗಲಿದ್ದು, ಯಾರು ಅಧಿಕಾರದ ಗದ್ದುಗೆ ಹಿಡಿಯಲಿದ್ದಾರೆ ಎಂದು ತಿಳಿಯಲಿದೆ.

  • Bihar Election Dates 2025 | 69 ಲಕ್ಷ ಹೆಸರುಗಳು ಡಿಲೀಟ್‌, 21 ಲಕ್ಷ ಹೊಸ ಮತದಾರರ ಸೇರ್ಪಡೆ

    Bihar Election Dates 2025 | 69 ಲಕ್ಷ ಹೆಸರುಗಳು ಡಿಲೀಟ್‌, 21 ಲಕ್ಷ ಹೊಸ ಮತದಾರರ ಸೇರ್ಪಡೆ

    ನವದೆಹಲಿ: ಸಾವು, ಅಕ್ರಮ ವಲಸಿಗರು (Illegal Immigrants), ನಕಲಿ ವೋಟರ್‌ ಐಡಿ ಹಾಗೂ ವಿಳಾಸ ಬದಲಾವಣೆ ಕಾರಣಗಳಿಂದ ಈ ಬಾರಿ ಬಿಹಾರ ಮತದಾರರ ಪಟ್ಟಿಯಲ್ಲಿ 69 ಲಕ್ಷ ಹೆಸರುಗಳನ್ನು ಅಳಿಸಲಾಗಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ (Gyanesh Kumar) ಮಾಹಿತಿ ನೀಡಿದ್ದಾರೆ.

    ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ವಿವಿಧ ಕಾರಣಗಳಿಂದ 69 ಲಕ್ಷ ಹೆಸರುಗಳನ್ನ ಮತಪಟ್ಟಿಯಿಂದ ಅಳಿಸಲಾಗಿದೆ. ಇದೇ ವೇಳೆ 21.5 ಲಕ್ಷ ಹೊಸ ಮತದಾರರು (New Voters) ಸೇರ್ಪಡೆಯಾಗಿದ್ದಾರೆ ಎಂದು ವಿವರಿಸಿದ್ದಾರೆ. ಇದನ್ನೂ ಓದಿ: ಬಿಹಾರ ವಿಧಾನಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್‌ – ನ.6, 11ರಂದು ಮತದಾನ, ನ.14ಕ್ಕೆ ಫಲಿತಾಂಶ

    ಬಿಹಾರದಲ್ಲಿರುವ 243 ವಿಧಾನಸಭಾ ಕ್ಷೇತ್ರಗಳ ಪೈಕಿ 203 ಸಾಮಾನ್ಯ ಕ್ಷೇತ್ರಗಳಾಗಿದ್ದು, 2 ಎಸ್ಟಿ ಹಾಗೂ 38 ಎಸ್ಸಿ ಮೀಸಲು ಕ್ಷೇತ್ರಗಳಾಗಿವೆ. 7.43 ಕೋಟಿ ಮತದಾರರಿದ್ದು, 3.92 ಕೋಟಿ ಪುರುಷರು, 3.50 ಕೋಟಿ ಮಹಿಳಾ ಮತದಾರರಿದ್ದಾರೆ. ಬಿಹಾರದಲ್ಲಿ 22 ವರ್ಷಗಳ ಬಳಿಕ ಮತಪಟ್ಟಿಯ ಸಮಗ್ರ ಪರಿಷ್ಕರಣೆ ಬಳಿಕ ಚುನಾವಣೆ ನಡೆಯುತ್ತಿದ್ದು, 14 ಲಕ್ಷ ಪ್ರಥಮ ಬಾರಿಗೆ ಮತಚಲಾಯಿಸುವ ಮತದಾರರಿದ್ದಾರೆ.

    ಎಲ್ಲೆಲ್ಲಿ ಉಪಚುನಾವಣೆ?
    ಇನ್ನು, ಜಮ್ಮು & ಕಾಶ್ಮೀರ 2 ಹಾಗೂ ರಾಜಸ್ಥಾನ, ಜಾರ್ಖಂಡ್, ತೆಲಂಗಾಣ, ಪಂಜಾಬ್, ಮಿಜೋರಾಂ, ಒಡಿಶಾದಲ್ಲಿ ತಲಾ ಒಂದೊಂದು ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ. ಈ ಮಧ್ಯೆ ಬಿಹಾರ ಎಲೆಕ್ಷನ್‌ನಿಂದಾಗಿ ಕರ್ನಾಟಕದ ಕಾಂಗ್ರೆಸ್ & ಬಿಜೆಪಿ ನಾಯಕತ್ವ ಬದಲಾವಣೆ ವಿದ್ಯಮಾನಗಳಿಗೆ ಅಲ್ಪವಿರಾಮ ಬ್ರೇಕ್ ಬಿದ್ದಂತಾಗಿದೆ. ಇದನ್ನೂ ಓದಿ: Bihar Election 2025 | ಬುರ್ಖಾಧಾರಿ ಮಹಿಳೆಯರ ಗುರುತು ಪರಿಶೀಲನೆಗೆ ಅಂಗನವಾಡಿ ಕಾರ್ಯಕರ್ತರ ನಿಯೋಜನೆ

    ಬುರ್ಖಾಧಾರಿ ಮಹಿಳೆಯರ ಪರಿಶೀಲನೆ
    ಕಾಂಗ್ರೆಸ್‌ ನಾಯಕರಿಂದ ಮತಗಳ್ಳತನ ಆರೋಪಗಳು ಹೆಚ್ಚಾಗಿ ಕೇಳಿಬಂದ ಹಿನ್ನೆಲೆ ಈ ಬಾರಿ 100% ವೆಬ್‌ಕ್ಯಾಸ್ಟಿಂಗ್‌ ವ್ಯವಸ್ಥೆ ಮಾಡಲಾಗಿದೆ. ಅಲ್ಲದೇ ಬುರ್ಖಾಧಾರಿ ಮಹಿಳೆಯರ ಗುರುತು ಪರಿಶೀಲಿಸಲು ಪ್ರತಿ ಬೂತ್‌ನಲ್ಲಿ ಪ್ರತ್ಯೇಕವಾಗಿ ಅಂಗನವಾಡಿ ಕಾರ್ಯಕರ್ತರನ್ನ ನಿಯೋಜಿಸಲಾಗುತ್ತದೆ. ಚುನಾವಣಾ ಆಯೋಗದ ಮಾರ್ಗಸೂಚಿಯ ಪ್ರಕಾರವೇ ಅವರು ಗುರುತು ಪರಿಶೀಲಿಸಲಿದ್ದಾರೆ ಎಂದು ತಿಳಿಸಿದ್ದಾರೆ.  

    ಇನ್ನೂ ಮೊದಲ ಹಂತದ ಮತದಾನ ನಡೆಯಲಿರುವ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಅ.17 ಕೊನೆಯ ದಿನವಾಗಿದ್ದು, 2ನೇ ಹಂತದ ಕ್ಷೇತ್ರಗಳಿಗೆ ಅ.21 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಅಕ್ಟೋಬರ್‌ 18‌ ಮತ್ತು ಅಕ್ಟೋಬರ್‌ 21 ರಂದು ಕ್ರಮವಾಗಿ ಮೊದಲ ಮತ್ತು 2ನೇ ಹಂತದ ಕ್ಷೇತ್ರಗಳಿಗೆ ಸಲ್ಲಿಸಿರುವ ಅಭ್ಯರ್ಥಿಗಳ ನಾಮಪತ್ರ ಪರಿಶೀಲನೆ ನಡೆಲಿದೆ. ಅಕ್ಟೋಬರ್‌ 20 ಹಾಗೂ ಅ.23 ಕ್ರಮವಾಗಿ ನಾಮಪತ್ರ ಹಿಂಪಡೆಯಲು ಕೊನೆಯದಿನವಾಗಿದೆ. ನವೆಂಬರ್‌ 6ರಂದು ಚುನಾವಣೆ ನಡೆಯಲಿದೆ. ನವೆಂಬರ್‌ 14ರಂದು ಫಲಿತಾಂಶ ಪ್ರಕಟವಾಗಲಿದ್ದು, ಯಾರು ಅಧಿಕಾರದ ಗದ್ದುಗೆ ಹಿಡಿಯಲಿದ್ದಾರೆ ಎಂದು ತಿಳಿಯಲಿದೆ.

  • Bihar Election 2025 | ಬುರ್ಖಾಧಾರಿ ಮಹಿಳೆಯರ ಗುರುತು ಪರಿಶೀಲನೆಗೆ ಅಂಗನವಾಡಿ ಕಾರ್ಯಕರ್ತರ ನಿಯೋಜನೆ

    Bihar Election 2025 | ಬುರ್ಖಾಧಾರಿ ಮಹಿಳೆಯರ ಗುರುತು ಪರಿಶೀಲನೆಗೆ ಅಂಗನವಾಡಿ ಕಾರ್ಯಕರ್ತರ ನಿಯೋಜನೆ

    ನವದೆಹಲಿ: ಬಿಹಾರ ವಿಧಾನಸಭೆಯ 243 ಕ್ಷೇತ್ರಗಳಿಗೆ 2 ಹಂತದಲ್ಲಿ ಚುನಾವಣೆ (Bihar Election Dates 2025) ನಡೆಯಲಿದೆ. ನವೆಂಬರ್ 6 ಹಾಗೂ ನವೆಂಬರ್ 11ಕ್ಕೆ ಮತದಾನ ನಡೆಯಲಿದ್ದು, ನವೆಂಬರ್ 14ಕ್ಕೆ ಫಲಿತಾಂಶ ಪ್ರಕಟವಾಗಲಿದೆ ಅಂತ ಮುಖ್ಯಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ (Gyanesh Kumar) ಘೋಷಿಸಿದ್ದಾರೆ. ಮೊದಲ ಹಂತದಲ್ಲಿ 121 ಹಾಗೂ 2ನೇ ಹಂತದಲ್ಲಿ 122 ಕ್ಷೇತ್ರಗಳಿಗೆ ವೋಟಿಂಗ್ ನಡೆಯಲಿದೆ.

    ಕಾಂಗ್ರೆಸ್‌ ನಾಯಕರಿಂದ ಮತಗಳ್ಳತನ (Vote Theft) ಆರೋಪಗಳು ಹೆಚ್ಚಾಗಿ ಕೇಳಿಬಂದ ಹಿನ್ನೆಲೆ ಈ ಬಾರಿ 100% ವೆಬ್‌ಕ್ಯಾಸ್ಟಿಂಗ್‌ ವ್ಯವಸ್ಥೆ ಮಾಡಲಾಗಿದೆ. ಅಲ್ಲದೇ ಬುರ್ಖಾಧಾರಿ ಮಹಿಳೆಯರ ಗುರುತು ಪರಿಶೀಲಿಸಲು ಪ್ರತಿ ಬೂತ್‌ನಲ್ಲಿ ಪ್ರತ್ಯೇಕವಾಗಿ ಅಂಗನವಾಡಿ ಕಾರ್ಯಕರ್ತರನ್ನ ನಿಯೋಜಿಸಲಾಗುತ್ತದೆ. ಚುನಾವಣಾ ಆಯೋಗದ ಮಾರ್ಗಸೂಚಿಯ ಪ್ರಕಾರವೇ ಅವರು ಗುರುತು ಪರಿಶೀಲಿಸಲಿದ್ದಾರೆ ಎಂದು ತಿಳಿಸಿದ್ದಾರೆ.

    ಇನ್ನೂ ಮೊದಲ ಹಂತದ ಮತದಾನ ನಡೆಯಲಿರುವ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಅ.17 ಕೊನೆಯ ದಿನವಾಗಿದ್ದು, 2ನೇ ಹಂತದ ಕ್ಷೇತ್ರಗಳಿಗೆ ಅ.21 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಅಕ್ಟೋಬರ್‌ 18‌ ಮತ್ತು ಅಕ್ಟೋಬರ್‌ 21 ರಂದು ಕ್ರಮವಾಗಿ ಮೊದಲ ಮತ್ತು 2ನೇ ಹಂತದ ಕ್ಷೇತ್ರಗಳಿಗೆ ಸಲ್ಲಿಸಿರುವ ಅಭ್ಯರ್ಥಿಗಳ ನಾಮಪತ್ರ ಪರಿಶೀಲನೆ ನಡೆಲಿದೆ. ಅಕ್ಟೋಬರ್‌ 20 ಹಾಗೂ ಅ.23 ಕ್ರಮವಾಗಿ ನಾಮಪತ್ರ ಹಿಂಪಡೆಯಲು ಕೊನೆಯದಿನವಾಗಿದೆ. ನವೆಂಬರ್‌ 6ರಂದು ಚುನಾವಣೆ ನಡೆಯಲಿದೆ. ನವೆಂಬರ್‌ 14ರಂದು ಫಲಿತಾಂಶ ಪ್ರಕಟವಾಗಲಿದ್ದು, ಯಾರು ಅಧಿಕಾರದ ಗದ್ದುಗೆ ಹಿಡಿಯಲಿದ್ದಾರೆ ಎಂದು ತಿಳಿಯಲಿದೆ.

    ಬಿಹಾರದಲ್ಲಿರುವ 243 ವಿಧಾನಸಭಾ ಕ್ಷೇತ್ರಗಳ ಪೈಕಿ 203 ಸಾಮಾನ್ಯ ಕ್ಷೇತ್ರಗಳಾಗಿದ್ದು, 2 ಎಸ್ಟಿ ಹಾಗೂ 38 ಎಸ್ಸಿ ಮೀಸಲು ಕ್ಷೇತ್ರಗಳಾಗಿವೆ. 7.43 ಕೋಟಿ ಮತದಾರರಿದ್ದು, 3.92 ಕೋಟಿ ಪುರುಷರು, 3.50 ಕೋಟಿ ಮಹಿಳಾ ಮತದಾರರಿದ್ದಾರೆ. ಬಿಹಾರದಲ್ಲಿ 22 ವರ್ಷಗಳ ಬಳಿಕ ಮತಪಟ್ಟಿಯ ಸಮಗ್ರ ಪರಿಷ್ಕರಣೆ ಬಳಿಕ ಚುನಾವಣೆ ನಡೆಯುತ್ತಿದ್ದು, 14 ಲಕ್ಷ ಪ್ರಥಮ ಬಾರಿಗೆ ಮತಚಲಾಯಿಸುವ ಮತದಾರರಿದ್ದಾರೆ. 68.5 ಲಕ್ಷ ವೋಟ್‌ ಡಿಲೀಟ್ ಆಗಿದ್ದು, 21.5 ಲಕ್ಷ ಮತದಾರರ ಹೊಸ ಸೇರ್ಪಡೆಯಾಗಿದೆ.

    ಎನ್‌ಡಿಎನ ಮೋದಿ-ನಿತೀಶ್-ಚಿರಾಗ್ ಪಾಸ್ವಾನ್ ಹಾಗೂ ಇಂಡಿ ಕೂಟದ ರಾಹುಲ್-ತೇಜಸ್ವಿಯಾದವ್ ಹಾಗೂ ಜನಸುರಾಜ್ ಪಕ್ಷ ಸ್ಥಾಪಿಸಿರುವ ಪ್ರಶಾಂತ್ ಕಿಶೋರ್ ಅಧಿಕಾರದ ಚುಕ್ಕಾಣಿ ಸೆಣಸಲಿದ್ದಾರೆ.

    ಎಲ್ಲೆಲ್ಲಿ ಉಪಚುನಾವಣೆ?
    ಇನ್ನು, ಜಮ್ಮು & ಕಾಶ್ಮೀರ 2 ಹಾಗೂ ರಾಜಸ್ಥಾನ, ಜಾರ್ಖಂಡ್, ತೆಲಂಗಾಣ, ಪಂಜಾಬ್, ಮಿಜೋರಾಂ, ಒಡಿಶಾದಲ್ಲಿ ತಲಾ ಒಂದೊಂದು ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ. ಈ ಮಧ್ಯೆ ಬಿಹಾರ ಎಲೆಕ್ಷನ್‌ನಿಂದಾಗಿ ಕರ್ನಾಟಕದ ಕಾಂಗ್ರೆಸ್ & ಬಿಜೆಪಿ ನಾಯಕತ್ವ ಬದಲಾವಣೆ ವಿದ್ಯಮಾನಗಳಿಗೆ ಅಲ್ಪವಿರಾಮ ಬ್ರೇಕ್ ಬಿದ್ದಂತಾಗಿದೆ.

  • ಫಸ್ಟ್‌ ಟೈಂ EVM ನಲ್ಲಿ ಇನ್ಮುಂದೆ ಅಭ್ಯರ್ಥಿಗಳ ಕಲರ್ ಫೋಟೋ – ಬಿಹಾರ ವಿಧಾನಸಭಾ ಚುನಾವಣೆಯಿಂದಲೇ ಆರಂಭ

    ಫಸ್ಟ್‌ ಟೈಂ EVM ನಲ್ಲಿ ಇನ್ಮುಂದೆ ಅಭ್ಯರ್ಥಿಗಳ ಕಲರ್ ಫೋಟೋ – ಬಿಹಾರ ವಿಧಾನಸಭಾ ಚುನಾವಣೆಯಿಂದಲೇ ಆರಂಭ

    – ಕೇಂದ್ರ ಚುನಾವಣಾ ಆಯೋಗದಿಂದ ಮಾಹಿತಿ

    ಪಾಟ್ನಾ: ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಗೆ (Bihar Assembly Elections) ದಿನಾಂಕ ಘೋಷಿಸುವ ಮುನ್ನವೇ ಭಾರತೀಯ ಚುನಾವಣಾ ಆಯೋಗ ಹೊಸ ಮಾರ್ಗಸೂಚಿಗಳನ್ನ ಪರಿಷ್ಕರಿಸಿದೆ. ವಿದ್ಯುನ್ಮಾನ ಮತಯಂತ್ರ (EVM) ಮತಪತ್ರಗಳ ವಿನ್ಯಾಸದಲ್ಲಿ ಬದಲಾವಣೆ ತಂದಿದೆ. ಅದರಂತೆ ಅಭ್ಯರ್ಥಿಗಳ ಗುರುತನ್ನು ಸುಲಭವಾಗಿ ಪತ್ತೆಹಚ್ಚಲು ಇನ್ಮುಂದೆ ಇವಿಎಂನಲ್ಲಿ ಕಪ್ಪು-ಬಿಳುಪಿನ ಫೋಟೋ ಬದಲಿಗೆ ಕಲರ್‌ ಫೋಟೋ ಅಳವಡಿಸಲಾಗುತ್ತದೆ.

    ಮತದಾರರಿಗೆ (Voters) ಅಭ್ಯರ್ಥಿಗಳ ಚಿತ್ರ ಸ್ಪಷ್ಟವಾಗಿ ಕಾಣಬೇಕೆಂಬುದು ಇದರ ಉದ್ದೇಶವಾಗಿದೆ. ಅಲ್ಲದೇ ಅಭ್ಯರ್ಥಿಗಳ ಸರಣಿ ಸಂಖ್ಯೆಯು 30 ಗಾತ್ರದಷ್ಟು ಫಾಂಟ್‌ನಲ್ಲಿ ಇರಲಿದೆ. ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಯಲ್ಲೇ ಈ ಮಾರ್ಗಸೂಚಿ ಅನ್ವಯವಾಗಲಿದ್ದು, ಮುಂದಿನ ದಿನಗಳಲ್ಲಿ ದೇಶಾದ್ಯಂತ ಚುನಾವಣೆಗಳಿಗೆ ಅನ್ವಯವಾಗಲಿದೆ. ಚುನಾವಣೆಗಳ ಗುಣಮಟ್ಟ ಮತ್ತು ವಿಶ್ವಾಸಾರ್ಹತೆ ಸುಧಾರಿಸುವ ನಿಟ್ಟಿನಲ್ಲಿ ಚುನಾವಣಾ ಆಯೋಗದ (ECI) ಮಹತ್ವದ ಹೆಜ್ಜೆ ಇದಾಗಿದೆ. ಇದನ್ನೂ ಓದಿ: ಪ್ರಧಾನಿ ಮೋದಿಗೆ 75ರ ಸಂಭ್ರಮ – ಫೋನ್‌ ಕರೆ ಮಾಡಿ ಬರ್ತ್‌ಡೇ ವಿಶ್‌ ಮಾಡಿದ ಟ್ರಂಪ್‌

    ಪರಿಷ್ಕರಿಸಿದ ಮಾರ್ಗಸೂಚಿಯಲ್ಲಿ ಏನಿದೆ?
    * ಚುನಾವಣಾ ನೀತಿ ನಿಯಮಗಳು, 1961ರ ನಿಯಮ 49B ಅಡಿಯಲ್ಲಿ, ಅಭ್ಯರ್ಥಿಗಳ ಫೋಟೋವನ್ನು ಸುಲಭವಾಗಿ ಗುರುತಿಸಲು ನೆರವಾಗಬೇಕು. ಅದಕ್ಕಾಗಿ ಹಿಂದಿನ ಕಪ್ಪು-ಬಿಳುಪು ಅಥವಾ ಫೋಟೋ ರಹಿತ ಆವೃತ್ತಿಗಳನ್ನು ಬದಲಾಯಿತಿ ಕಲರ್‌ ಫೋಟೋಗಳನ್ನು ಮುದ್ರಿಸಲಾಗುತ್ತದೆ.

    * ಫೋಟೋ ನಿಗದಿಪಡಿಸಿದ ಸ್ಥಳದ ಮುಕ್ಕಾಲು ಭಾಗದಷ್ಟು ಅಂದ್ರೆ ನಾಲ್ಕನೇ ಮೂರು ಭಾಗ ಇರುತ್ತದೆ. ಇದರಿಂದ ಮತದಾರರು ಅಭ್ಯರ್ಥಿಗಳ ಮುಖವನ್ನು ಸ್ಪಷ್ಟವಾಗಿ ಗುರುತಿಸಬಹುದಾಗಿದೆ.

    * ಅಲ್ಲದೇ ಮತಪತ್ರದಲ್ಲಿ ಅಭ್ಯರ್ಥಿಗಳ ಸರಣಿ ಸಂಖ್ಯೆಯನ್ನು ಸ್ಪಷ್ಟವಾಗಿ ಕಾಣುವಂತೆ ಮಾಡಲು ಒತ್ತು ನೀಡಲಾಗಿದೆ. ಅದಕ್ಕಾಗಿ ಅಕ್ಷರ ಗಾತ್ರವು 30 ಫಾಂಟ್‌ ಗಾತ್ರದಲ್ಲಿ ಮುದ್ರಿಸಲಾಗುತ್ತದೆ. ಏಕರೂಪತೆಯನ್ನು ಖಚಿತಪಡಿಸಿಕೊಳ್ಳಲು, ಎಲ್ಲಾ ಅಭ್ಯರ್ಥಿಗಳ ಅಥವಾ ನೋಟಾ ಹೆಸರುಗಳನ್ನು ಒಂದೇ ಫಾಂಟ್‌ನಲ್ಲಿ ಮತ್ತು ಸುಲಭವಾಗಿ ಓದಲು ಸಾಧ್ಯವಾಗುವಂತೆ ಮುದ್ರಿಸಲಾಗುತ್ತದೆ. ಈ ಹಿಂದಿನ ಮಾರ್ಗಸೂಚಿಯಲ್ಲಿ ಅಭ್ಯರ್ಥಿಯ ಹೆಸರು, ಪಕ್ಷದ ಚಿಹ್ನೆ ಮತ್ತು ಸರಣಿ ಸಂಖ್ಯೆಯಂತಹ ಮೂಲಭೂತ ವಿವರಗಳು ಮಾತ್ರ ಅಗತ್ಯವಿರುತ್ತಿತ್ತು. ಫೋಟೋಗಳಿಗೆ ಹೆಚ್ಚಿನ ಮಹತ್ವ ನೀಡಲಾಗುತ್ತಿರಲಿಲ್ಲ. ಫೋಟೋ ಗಾತ್ರವೂ ಚಿಕ್ಕದಾಗಿರುತ್ತಿತ್ತು.

    * ಇನ್ನೂ ಇವಿಎಂ ಬ್ಯಾಲೆಟ್ ಪೇಪರ್‌ಗಳನ್ನು 70 ಜಿಎಸ್‌ಎಂ ಪೇಪರ್‌ನಲ್ಲಿ ಮುದ್ರಿಸಲಾಗುತ್ತದೆ. ವಿಧಾನಸಭಾ ಚುನಾವಣೆಗಳಿಗೆ ಗುಲಾಬಿ ಬಣ್ಣದ ಪೇಪರ್ ಅನ್ನು ಬಳಸಲಾಗುತ್ತದೆ.

    ಒಟ್ನಲ್ಲಿ ಚುನಾವಣಾ ಪ್ರಕ್ರಿಯೆ ಸುಗಮಗೊಳಿಸುವ ಜೊತೆಗೆ ಮತದಾರರ ಅನುಕೂಲತೆ ಹೆಚ್ಚಿಸಲು ಕಳೆದ 6 ತಿಂಗಳ ಕಾಲ ಚುನಾವಣಾ ಆಯೋಗ ತೆಗೆದುಕೊಂಡ 28 ಉಪಕ್ರಮಗಳಿಗೆ ಅನುಗುಣವಾಗಿ ಈ ಉಪಕ್ರಮಗಳನ್ನು ಮಾರ್ಗಸೂಚಿಯಲ್ಲಿ ತರಲಾಗಿದೆ. ಇದನ್ನೂ ಓದಿ: ಪ್ರಧಾನಿ ಮೋದಿ ತಾಯಿಯ AI ವಿಡಿಯೋ ತೆಗೆದುಹಾಕಿ: ಕಾಂಗ್ರೆಸ್‌ಗೆ ಪಾಟ್ನಾ ಹೈಕೋರ್ಟ್ ಸೂಚನೆ

  • 64.2 ಕೋಟಿ ಜನರಿಂದ ಮತದಾನ – ಸಾರ್ವತ್ರಿಕ ಚುನಾವಣೆಯಲ್ಲಿ ಭಾರತ ವಿಶ್ವದಾಖಲೆ

    64.2 ಕೋಟಿ ಜನರಿಂದ ಮತದಾನ – ಸಾರ್ವತ್ರಿಕ ಚುನಾವಣೆಯಲ್ಲಿ ಭಾರತ ವಿಶ್ವದಾಖಲೆ

    – ನಗದು, ಮದ್ಯ ಡ್ರಗ್ಸ್‌ ಸೇರಿ 10,000 ಕೋಟಿ ರೂ. ಮೌಲ್ಯದ ವಸ್ತುಗಳು ಜಪ್ತಿ

    ನವದೆಹಲಿ: ಪ್ರಸಕ್ತ ವರ್ಷದ ಲೋಕಸಭಾ ಚುನಾವಣೆಯಲ್ಲಿ 64.2 ಕೋಟಿಗೂ ಅಧಿಕ ಜನರು ಮತದಾನ ಮಾಡಿದ್ದು, ಭಾರತ ವಿಶ್ವ ದಾಖಲೆ ಬರೆದಿದೆ ಎಂದು ಕೇಂದ್ರ ಚುನಾವಣಾ ಆಯೋಗ (Election Commission Of India) ತಿಳಿಸಿದೆ.

    2024ರ ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟವಾಗುವ ಮುನ್ನಾ ದಿನವೇ ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಚುನಾವಣಾ ಆಯೋಗ ಹಲವು ಮಹತ್ವದ ವಿಚಾರಗಳನ್ನು ಹಂಚಿಕೊಂಡಿದೆ.

    ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ ಚುನಾವಣಾ ಆಯುಕ್ತ ಪಿ.ರಾಜೀವ್‌ ಕುಮಾರ್‌ (P Rajiv Kumar) ಈ ಬಾರಿ 64.2 ಕೋಟಿಗೂ ಅಧಿಕ ಮತದಾರರು (Voters) ಮತದಾನ ಮಾಡುವ ಮೂಲಕ ಭಾರತ ವಿಶ್ವ ದಾಖಲೆ ಬರೆದಿದೆ. ಜೊತೆಗೆ ಮಹಿಳೆಯರೂ ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿದ್ದಾರೆ ಎಂದು ಹರ್ಷ ವ್ಯಕ್ತಪಡಿಸಿದರು.

    ದೇಶಾದ್ಯಂತ 64.2 ಕೋಟಿಗೂ ಅಧಿಕ ಜನ ಹಕ್ಕು ಚಲಾಯಿಸಿದ್ದಾರೆ. ಇದು G7 ರಾಷ್ಟ್ರಗಳಿಗಿಂತ 1.5 ಪಟ್ಟು ಹಾಗೂ 27 ಯುರೋಪಿಯನ್‌ ರಾಷ್ಟ್ರಗಳಿಗಿಂತಲೂ (European Nations) 2.5 ಪಟ್ಟು ಹೆಚ್ಚಾಗಿದೆ. ಅಲ್ಲದೇ ದೇಶದಲ್ಲಿ 31 ಕೋಟಿ ಮಹಿಳಾ ಮತದಾರರು ಮತ ಚಲಾಯಿಸಿದ್ದು, ಇದೇ ಮೊದಲಬಾರಿಗೆ ಅತಿಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಮತದಾನ ಮಾಡಿದ್ದಾರೆ ಎಂದು ಪಿ.ರಾಜೀವ್‌ ಕುಮಾರ್‌ ಮಾಹಿತಿ ಹಂಚಿಕೊಂಡರು. ಇದೇ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಿದ ಮತದಾರ ಪ್ರಭುಗಳಿಗೆ ಆಯೋಗದ ಅಧಿಕಾರಿಗಳು ಎದ್ದುನಿಂತು ಚಪ್ಪಾಳೆ ಹೊಡೆಯುವ ಮೂಲಕ ಅಭಿನಂದಿಸಿದರು.

    2024ರ ಲೋಕಸಭಾ ಚುನಾವಣೆ ಕರ್ತವ್ಯ ನಿರ್ವಹಣೆಗೆ ಸುಮಾರು 4 ಲಕ್ಷ ವಾಹನಗಳು, 135 ವಿಶೇಷ ರೈಲುಗಳು ಮತ್ತು 1,692 ವಿಮಾನಗಳನ್ನು ಬಳಸಲಾಗಿದೆ. 39 ಕೇಂದ್ರಗಳಲ್ಲಿ ಮಾತ್ರವೇ ಮರುಮತದಾನ ನಡೆದಿದೆ. ಜಮ್ಮು ಮತ್ತು ಕಾಶ್ಮೀರವು ಕಳೆದ 4 ದಶಕಗಳಲ್ಲಿ ದಾಖಲೆಯ ಶೇ.58.58 ಮತ್ತು ಕಾಶ್ಮೀರದಲ್ಲಿ ಶೇ.51.05 ರಷ್ಟು ಮತದಾನವಾಗಿದೆ ಎಂದು ತಿಳಿಸಿದ್ದಾರೆ.

    ಇನ್ನೂ ಈ ಬಾರಿ ಡ್ರಗ್ಸ್‌, ನಗದು, ಚಿನ್ನಾಭರಣ ಸೇರಿ ದಾಖಲೆಯ 10,000 ಕೋಟಿ ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. 2019ರಲ್ಲಿ ಇದರ ಪ್ರಮಾಣ 3,500 ಕೋಟಿ ರೂ.ಗಳಷ್ಟಿತ್ತು.

  • ಬುರ್ಖಾಧಾರಿ ಮಹಿಳಾ ಮತದಾರರ ವಿಶೇಷ ತಪಾಸಣೆಗೆ ಒತ್ತಾಯ – ಬಿಜೆಪಿ ಮನವಿಗೆ ಓವೈಸಿ ಕೆಂಡಾಮಂಡಲ

    ಬುರ್ಖಾಧಾರಿ ಮಹಿಳಾ ಮತದಾರರ ವಿಶೇಷ ತಪಾಸಣೆಗೆ ಒತ್ತಾಯ – ಬಿಜೆಪಿ ಮನವಿಗೆ ಓವೈಸಿ ಕೆಂಡಾಮಂಡಲ

    ಹೈದರಾಬಾದ್‌: ಬಿಜೆಪಿಯು ಮುಸ್ಲಿಂ ಮಹಿಳೆಯರನ್ನ ಗುರಿಯಾಗಿಸಿಕೊಂಡು ಮತದಾನ ಪ್ರಕ್ರಿಯೆಯಲ್ಲಿ ಅಡೆತಡೆ ಸೃಷ್ಟಿಸುತ್ತಿದೆ ಎಂದು ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (AIMIM) ಅಧ್ಯಕ್ಷ ಅಸಾದುದ್ದೀನ್ ಓವೈಸಿ (Asaduddin Owaisi) ಕಿಡಿ ಕಾರಿದ್ದಾರೆ.

    ಬುಧವಾರ ಸಾರ್ವಜನಿಕ ಸಮಾರಂಭವೊಂದರಲ್ಲಿ ಮಾತನಾಡಿದ ಅವರು, ಬಿಜೆಪಿ ಮುಸ್ಲಿಂ ಮಹಿಳೆಯರನ್ನ (Muslim Womens) ಗುರಿಯಾಗಿಸಿಕೊಂಡು ಮತದಾನ ಪ್ರಕ್ರಿಯೆಯಲ್ಲಿ ಅಡೆತಡೆ ಸೃಷ್ಟಿಸುತ್ತಿದೆ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಕಾಂಬೋಡಿಯಾದಲ್ಲಿ ಮೋಸದ ಉದ್ಯೋಗ ಜಾಲಕ್ಕೆ ಸಿಲುಕಿದ್ದ 60 ಮಂದಿ ಭಾರತೀಯರ ರಕ್ಷಣೆ

    ಬುರ್ಖಾ (Burqas) ಧರಿಸಿರುವ ಮಹಿಳೆಯರನ್ನು ವಿಶೇಷ ತಪಾಸಣೆಗೆ ಒಳಪಡಿಸಬೇಕು ಎಂದು ಬಿಜೆಪಿಯ ದೆಹಲಿ ಘಟಕ ಚುನಾವಣಾ ಆಯೋಗಕ್ಕೆ ತಿಳಿಸಿದೆ. ಇತ್ತೀಚೆಗೆ ತೆಲಂಗಾಣದ ಅಭ್ಯರ್ಥಿ ಕೂಡ ಮತದಾನದ ವೇಳೆ ಮುಸ್ಲಿಂ ಮಹಿಳೆರನ್ನ ಸಾರ್ವಜನಿಕವಾಗಿ ನಿಂದಿಸಿ ಕಿರುಕುಳ ನೀಡಿದ್ದರು. ಅಷ್ಟೇ ಅಲ್ಲ ಪ್ರತಿ ಚುನಾವಣೆಯಲ್ಲೂ ಬಿಜೆಪಿ ಮುಸ್ಲಿಂ ಮಹಿಳೆರಿಗೆ ಕಿರುಕುಳ ನೀಡಲು ಒಂದೊಂದೇ ದಾರಿಯನ್ನು ಕಂಡುಕೊಳ್ಳುತ್ತಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.

    ಚುನಾವಣಾ ಆಯೋಗ ಪರಿಶೀಲನೆಯ ನಂತರವೇ ಮತದಾನಕ್ಕೆ ಅವಕಾಶ ಮಾಡಿಕೊಡಲಿದೆ. ಪರಿಶೀಲನೆ ಮಾಡದೇ ಮತದಾನ ಯಾರೂ ಮಾಡುವುದಿಲ್ಲ. ಅದಕ್ಕಾಗಿಯೇ ಚುನಾವಣಾ ಆಯೋಗ ಸ್ಪಷ್ಟ ನಿಬಂಧನೆಗಳನ್ನು ಹೊಂದಿದೆ. ಆದ್ರೆ, ಬಿಜೆಪಿ ವಿಶೇಷ ಬೇಡಿಕೆಯೊಂದಿಗೆ‌ ಮುಸ್ಲಿಂ ಮಹಿಳೆಯರಿಗೆ ಕಿರುಕುಳ ನೀಡುತ್ತಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ರಾಹುಲ್‌ ಗಾಂಧಿಗೆ ಕಸದ ಬುಟ್ಟಿಯ ಬಗ್ಗೆ ಸಾಕಷ್ಟು ಅನುಭವವಿದೆ: ಆಚಾರ್ಯ ಪ್ರಮೋದ್‌ ಕೃಷ್ಣಂ ಮತ್ತೆ ವಾಗ್ದಾಳಿ

    ಮೇ 25ರಂದು 6ನೇ ಹಂತದ ಮತದಾನ:
    ಮೇ 25ರಂದು 6ನೇ ಹಂತದ ಲೋಕಸಭಾ ಚುನಾವಣೆಗೆ ಮತದಾನ ನಡೆಯಲಿದ್ದು, ಒಟ್ಟು 6 ರಾಜ್ಯ ಮತ್ತು 2 ಕೇಂದ್ರಾಡಳಿತ ಪ್ರದೇಶಗಳ 58 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಬುಧವಾರ ಮತದಾನ ನಡೆಯುವ ಮೇಳೆ ಬುರ್ಖಾ ಧರಿಸಿ ಬರುವ ಮಹಿಳಾ ಮತದಾರರನ್ನ ವಿಶೇಷ ತಪಾಸಣೆಗೆ ಒಳಪಡಿಸಬೇಕು ಎಂದು ದೆಹಲಿ ಬಿಜೆಪಿ ನಿಯೋಗವು ಮುಖ್ಯ ಚುನಾವಣಾ ಅಧಿಕಾರಿ (ಸಿಇಒ)ಗಳಿಗೆ ಒತ್ತಾಯಿಸಿತ್ತು.

    ಇತ್ತೀಚೆಗೆ ಹೈದ್ರಾಬಾದ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ ಅವರು ಮತಗಟ್ಟೆಯಲ್ಲಿ ಮುಸ್ಲಿಂ ಮಹಿಳೆಯರ ಮತದಾರರ ಗುರುತಿನ ಚೀಟಿಗಳನ್ನು ಖುದ್ದು ಪರಿಶೀಲಿಸಿದ್ದರು. ಈ ಕುರಿತ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡಿದ ಬಳಿಕ ಚುನಾವಣಾಧಿಕಾರಿಗಳು ಪ್ರಕರಣ ದಾಖಲಿಸಿದ್ದರು. ಇದನ್ನೂ ಓದಿ: 2047 ರವರೆಗೆ 24×7 ಕೆಲಸ ಮಾಡಬೇಕೆಂದು ದೇವರು ನನಗೆ ಆದೇಶಿಸಿದ್ದಾನೆ ಎಂದು ನಂಬಿದ್ದೇನೆ: ಮೋದಿ 

  • ಏ.26ರಂದು ರಾಜ್ಯದ ಮೊದಲ ಹಂತದ ಚುನಾವಣೆ: ಯಾವ ಕ್ಷೇತ್ರ-ಎಷ್ಟು ಮತದಾರರು? ಇಲ್ಲಿದೆ ವಿವರ…

    ಏ.26ರಂದು ರಾಜ್ಯದ ಮೊದಲ ಹಂತದ ಚುನಾವಣೆ: ಯಾವ ಕ್ಷೇತ್ರ-ಎಷ್ಟು ಮತದಾರರು? ಇಲ್ಲಿದೆ ವಿವರ…

    ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಚುನಾವಣೆ ಕಳೆಗಟ್ಟಿದೆ. ಇದೇ ಏಪ್ರಿಲ್‌ 26 (ನಾಳೆ)ರಂದು ರಾಜ್ಯದಲ್ಲಿ ಮೊದಲ ಹಂತದ ಚುನಾವಣೆ ನಡೆಯಲಿದ್ದು, ಮತದಾರರು ತಮ್ಮ ಹಕ್ಕು ಚಲಾಯಿಸಲು ಉತ್ಸುಕರಾಗಿದ್ದಾರೆ. ಮೊದಲ ಹಂತದ ಚುನಾವಣೆಗೆ ಉಡುಪಿ-ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ (ಎಸ್‌ಸಿ), ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ (ಎಸ್‌ಸಿ), ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ, ಕೋಲಾರ (ಎಸ್‌ಸಿ) ಸೇರಿ 14 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. 

    ಒಟ್ಟು 1,44,17,530 ಪುರುಷರು, 1,43,87,585 ಮಹಿಳೆಯರು ಹಾಗೂ 3,067 ತೃತೀಯ ಲಿಂಗಿಗಳು ಸೇರಿ ಒಟ್ಟು 2,88,08,182 ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಹಾಗಾದ್ರೆ ಕ್ಷೇತ್ರವಾರು ಮತದಾರರ ವಿವರ ಎಷ್ಟಿದೆ ಎಂಬುದನ್ನು ತಿಳಿಯುವ ಕುತೂಹಲ ನಿಮಗಿದ್ದರೆ ಮುಂದೆ ಓದಿ… 

    ಉಡುಪಿ-ಚಿಕ್ಕಮಗಳೂರು

    ಹಾಸನ

    ದಕ್ಷಿಣ ಕನ್ನಡ

    ಚಿತ್ರದುರ್ಗ (ಎಸ್‌ಸಿ)

    ತುಮಕೂರು

    ಮಂಡ್ಯ

    ಮೈಸೂರು

    ಚಾಮರಾಜನಗರ (ಎಸ್‌ಸಿ)

    ಬೆಂಗಳೂರು ಗ್ರಾಮಾಂತರ

    ಬೆಂಗಳೂರು ಉತ್ತರ

    ಬೆಂಗಳೂರು ಕೇಂದ್ರ

    ಬೆಂಗಳೂರು ದಕ್ಷಿಣ

    ಚಿಕ್ಕಬಳ್ಳಾಪುರ

    ಕೋಲಾರ (ಎಸ್‌ಸಿ)

  • Lok sabha Elections 2024- ಅಸ್ಸಾಂನ ಈ ಕುಟುಂಬದಲ್ಲಿದ್ದಾರೆ 350 ಮಂದಿ ಮತದಾರರು!

    Lok sabha Elections 2024- ಅಸ್ಸಾಂನ ಈ ಕುಟುಂಬದಲ್ಲಿದ್ದಾರೆ 350 ಮಂದಿ ಮತದಾರರು!

    ಗುವಾಹಟಿ: ಲೋಕಸಭಾ ಚುನಾವಣೆಗೆ (Lok sabha Elections 2024) ಸಜ್ಜಾಗುತ್ತಿದ್ದಂತೆಯೇ ಅಸ್ಸಾಂನ ರಂಗಪಾರ ವಿಧಾನಸಭಾ ಕ್ಷೇತ್ರ ಮತ್ತು ಸೋನಿತ್‌ಪುರ ಸಂಸದೀಯ ಕ್ಷೇತ್ರದ ವ್ಯಾಪ್ತಿಯಲ್ಲಿ ವಿಶಿಷ್ಟ ಕುಟುಂಬವೊಂದು ಬೆಳಕಿಗೆ ಬಂದಿದೆ.

    ಹೌದು. ಅಸ್ಸಾಂನ (Assam) ಸೋನಿತ್‌ಪುರ ಜಿಲ್ಲೆಯಲ್ಲಿ ಒಂದೇ ಕುಟುಂಬದಲ್ಲಿ ಸುಮಾರು 350 ಮತದಾರರಿದ್ದಾರೆ. ಈ ಕುಟುಂಬವು ಒಟ್ಟು 1,200 ಸದಸ್ಯರನ್ನು ಹೊಂದಿದೆ. ಇದು ದೇಶದ ಅತಿದೊಡ್ಡ ಕುಟುಂಬಗಳಲ್ಲಿ ಒಂದಾಗಿದೆ. ಈ ಕುಟುಂಬದ ಎಲ್ಲಾ ಅರ್ಹ ಸದಸ್ಯರು ಏ.19 ರಂದು ಸೋನಿತ್‌ಪುರ ಲೋಕಸಭಾ ಕ್ಷೇತ್ರದಲ್ಲಿ ಮತ ಚಲಾಯಿಸಲಿದ್ದಾರೆ.

    ಈ ಕುಟುಂಬವು ಜಿಲ್ಲೆಯ ಫುಲೋಗುರಿ ನೇಪಾಳಿ ಪಾಮ್‌ನ ದಿ.ರಾನ್ ಬಹದ್ದೂರ್ ಥಾಪಾ ಕುಟುಂಬಕ್ಕೆ ಸೇರಿದ್ದಾಗಿದೆ. ಥಾಪಾ ಅವರಿಗೆ ಐವರು ಹೆಂಡತಿಯರು, 12 ಗಂಡು ಮತ್ತು 9 ಮಂದಿ ಹೆಣ್ಣು ಮಕ್ಕಳಿದ್ದಾರೆ. ರಾನ್ ಬಹದ್ದೂರ್ ಅವರು 150 ಕ್ಕೂ ಹೆಚ್ಚು ಮೊಮ್ಮಕ್ಕಳನ್ನು ಹೊಂದಿದ್ದಾರೆ. ಒಟ್ಟಾರೆ 1,200 ಸದಸ್ಯರಿರುವ ಈ ಕುಟುಂಬದಲ್ಲಿ ಸುಮಾರು 350 ಸದಸ್ಯರು ಈ ಬಾರಿಯ ಚುನಾವಣೆಯಲ್ಲಿ ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಇದನ್ನೂ ಓದಿ: 200 ಕೋಟಿ ಆಸ್ತಿ ದಾನ ಮಾಡಿ ಸನ್ಯಾಸತ್ವ ಸ್ವೀಕರಿಸಿದ ಉದ್ಯಮಿ ದಂಪತಿ

    ಈ ಕುರಿತು ದಿವಂಗತ ರಾನ್ ಬಹದ್ದೂರ್ ಅವರ ಪುತ್ರ ಟಿಲ್ ಬಹದ್ದೂರ್ ಥಾಪಾ ಅವರು ಸುದ್ದಿ ಸಂಸ್ಥೆಯೊಂದಕ್ಕೆ ಪ್ರತಿಕ್ರಿಯಿಸಿ, ನಮ್ಮ ಇಡೀ ಕುಟುಂಬದಲ್ಲಿ ಸುಮಾರು 350 ಜನರು ಮತ ಚಲಾಯಿಸಲು ಅರ್ಹರಾಗಿದ್ದಾರೆ. ನನ್ನ ತಂದೆ 1964 ರಲ್ಲಿ ನನ್ನ ಅಜ್ಜನೊಂದಿಗೆ ಇಲ್ಲಿಗೆ ಬಂದು ಇಲ್ಲಿ ನೆಲೆಸಿದರು. ತಂದೆಗೆ ಐದು ಮಂದಿ ಪತ್ನಿಯರು ಹಾಗೂ ನಮಗೆ 12 ಸಹೋದರರು ಮತ್ತು 9 ಮಂದಿ ಸಹೋದರಿಯರಿದ್ದಾರೆ. ಅವರ ಪುತ್ರರಿಂದ 56 ಮೊಮ್ಮಕ್ಕಳಿದ್ದು, ಇದರಲ್ಲಿ ಎಷ್ಟು ಹೆಣ್ಣುಮಕ್ಕಳು ಇದ್ದಾರೆ ಎಂದು ನನಗೆ ಗೊತ್ತಿಲ್ಲ. ಮೊಮ್ಮಕ್ಕಳು ಕೂಡ ಇದ್ದಾರೆ. ಈ ಚುನಾವಣೆಯಲ್ಲಿ ಥಾಪಾ ಕುಟುಂಬದ ಸುಮಾರು 350 ಸದಸ್ಯರು ಮತದಾನ ಮಾಡಲು ಅರ್ಹರಾಗಿದ್ದಾರೆ. ಎಲ್ಲರನ್ನು ಲೆಕ್ಕ ಹಾಕಿದರೆ ನಮ್ಮ ಕುಟುಂಬದ ಒಟ್ಟು ಸದಸ್ಯರು 1,200 ಕ್ಕಿಂತ ಹೆಚ್ಚಿರುತ್ತಾರೆ ಎಂದರು.

    VOTE
    ಸಾಂದರ್ಭಿಕ ಚಿತ್ರ

    ಕುಟುಂಬದವರ ಆರೋಪ: ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಲ್ಯಾಣ ಯೋಜನೆಗಳ ಸದುಪಯೋಗ ಈ ಕುಟುಂಬಕ್ಕೆ ಇನ್ನೂ ಸಾಧ್ಯವಾಗಿಲ್ಲ ಎಂದು ಇದೇ ವೇಳೆ ಟಿಲ್ ಬಹದ್ದೂರ್ ಥಾಪಾ ವಿಷಾದ ವ್ಯಕ್ತಪಡಿಸಿದರು. ನಮ್ಮ ಮಕ್ಕಳು ಉನ್ನತ ಶಿಕ್ಷಣ ಪಡೆದರು. ಆದರೆ ಯಾವುದೇ ಸರ್ಕಾರಿ ಕೆಲಸ ಸಿಗಲಿಲ್ಲ. ಕುಟುಂಬದ ಕೆಲವರು ಬೆಂಗಳೂರಿಗೆ ತೆರಳಿ ಖಾಸಗಿ ಉದ್ಯೋಗಗಳನ್ನು ಕಂಡುಕೊಂಡಿದ್ದಾರೆ. ಕೆಲವರು ದಿನಗೂಲಿ ಕೆಲಸ ಮಾಡುತ್ತಿದ್ದಾರೆ. ನಾನು 1989 ರಿಂದ ಗ್ರಾಮದ ಮುಖ್ಯಸ್ಥನಾಗಿದ್ದೇನೆ. ನನಗೆ 8 ಗಂಡು ಮತ್ತು ಮೂವರು ಹೆಣ್ಣು ಮಕ್ಕಳಿದ್ದಾರೆ ಎಂದು ತಿಳಿಸಿದರು.

    9 ವಿಧಾನಸಭಾ ಕ್ಷೇತ್ರಗಳಿರುವ ಸೋನಿತ್‌ಪುರ ಲೋಕಸಭಾ ಕ್ಷೇತ್ರದಲ್ಲಿ 16.25 ಲಕ್ಷಕ್ಕೂ ಹೆಚ್ಚು ಮತದಾರರಿದ್ದಾರೆ. ಅಸ್ಸಾಂನ 14 ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್ 19, ಏಪ್ರಿಲ್ 26 ಮತ್ತು ಮೇ 7 ಹೀಗೆ ಮೂರು ಹಂತಗಳಲ್ಲಿ ಮತದಾನ ನಡೆಯಲಿದೆ.

  • 2019ರ ಲೋಕಸಭಾ ಚುನಾವಣೆಯಲ್ಲಿ ಏನಾಗಿತ್ತು? – ಗೆದ್ದವರು ಯಾರು? ಸೋತವರು ಯಾರು? – ಇಲ್ಲಿದೆ ಸಂಪೂರ್ಣ ಮಾಹಿತಿ

    2019ರ ಲೋಕಸಭಾ ಚುನಾವಣೆಯಲ್ಲಿ ಏನಾಗಿತ್ತು? – ಗೆದ್ದವರು ಯಾರು? ಸೋತವರು ಯಾರು? – ಇಲ್ಲಿದೆ ಸಂಪೂರ್ಣ ಮಾಹಿತಿ

    2019 ರ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ 28 ಕ್ಷೇತ್ರಗಳ ಪೈಕಿ 25 ರಲ್ಲಿ ಜಯಭೇರಿ ಬಾರಿಸಿತ್ತು. ಆಗ ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್‌ ಮೈತ್ರಿ ಸರ್ಕಾರ ಅಸ್ತಿತ್ವದಲ್ಲಿದ್ದರೂ, ಎರಡೂ ಪಕ್ಷಗಳು ತಲಾ ಒಂದೊಂದು ಸ್ಥಾನಕ್ಕಷ್ಟೇ ತೃಪ್ತಿ ಪಟ್ಟುಕೊಂಡಿದ್ದವು. ಇನ್ನು ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸುಮಲತಾ ಅಂಬರೀಶ್‌ ಗೆಲುವು ದಾಖಲಿಸಿದ್ದರು. ಹಾಗಾದರೆ ಯಾವ ಕ್ಷೇತ್ರದಲ್ಲಿ ಯಾರ‍್ಯಾರು ಗೆದ್ದಿದ್ದರು, ಯಾರು ಸೋತಿದ್ದರು ಎಂಬ ವಿವರ ಇಲ್ಲಿದೆ.

    ಬೆಳಗಾವಿ:

    2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಸುರೇಶ್ ಅಂಗಡಿ 7,61,991 ಮತಗಳನ್ನು ಪಡೆದು, 3,91,304 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಪ್ರತಿಸ್ಪರ್ಧಿಯಾಗಿದ್ದ ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್ ಸಾಧುನವರ್ 3,70,687 ಮತಗಳನ್ನು ಪಡೆದು ಪರಾಭವಗೊಂಡಿದ್ದರು.

    ಬಳ್ಳಾರಿ:

    ಬಿಜೆಪಿಯಿಂದ ಸ್ಪರ್ಧಿಸಿದ್ದ ವೈ. ದೇವೇಂದ್ರಪ್ಪ 6,16,338 ಮತಗಳನ್ನು ಪಡೆದು, 55,707 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಪ್ರತಿಸ್ಪರ್ಧಿಯಾಗಿದ್ದ ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್ ಉಗ್ರಪ್ಪ 5,60,681 ಮತಗಳನ್ನು ಪಡೆದು ಸೋಲುಕಂಡಿದ್ದರು.

    ಬಾಗಲಕೋಟೆ:

    ಬಿಜೆಪಿಯಿಂದ ಸ್ಪರ್ಧಿಸಿದ್ದ ಪಿ.ಸಿ ಗದ್ದಿಗೌಡರ್ 1,68,638 ಮತಗಳನ್ನು ಪಡೆದು, 1,68,187 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಪ್ರತಿಸ್ಪರ್ಧಿಯಾಗಿದ್ದ ಕಾಂಗ್ರೆಸ್ ಅಭ್ಯರ್ಥಿ ವೀಣಾ ಕಾಶಪ್ಪನವರ್ 4,96,451 ಮತಗಳನ್ನು ಪಡೆದು ಸೋಲುಕಂಡಿದ್ದರು.

    ಬೀದರ್:

    ಬಿಜೆಪಿಯಿಂದ ಸ್ಪರ್ಧಿಸಿದ್ದ ಭಗವಂತ್ ಖೂಬಾ 5,85,471 ಮತಗಳನ್ನು ಪಡೆದು, 1,16,834 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಪ್ರತಿಸ್ಪರ್ಧಿಯಾಗಿದ್ದ ಕಾಂಗ್ರೆಸ್ ಅಭ್ಯರ್ಥಿ ಈಶ್ವರ್ ಖಂಡ್ರೆ 4,68,637 ಮತಗಳನ್ನು ಪಡೆದು ಸೋಲುಕಂಡಿದ್ದರು.

    ಬೆಂಗಳೂರು ಕೇಂದ್ರ:

    ಬಿಜೆಪಿಯಿಂದ ಸ್ಪರ್ಧಿಸಿದ್ದ ಪಿ.ಸಿ ಮೋಹನ್ 6,02,853 ಮತಗಳನ್ನು ಪಡೆದು, 70,968 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಪ್ರತಿಸ್ಪರ್ಧಿಯಾಗಿದ್ದ ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಅರ್ಷದ್ 5,31,885 ಮತಗಳನ್ನು ಪಡೆದು ಸೋಲುಕಂಡಿದ್ದರು.

    ಬೆಂಗಳೂರು ಉತ್ತರ:

    ಬಿಜೆಪಿಯಿಂದ ಸ್ಪರ್ಧಿಸಿದ್ದ ಸದಾನಂದಗೌಡ 8,24,500 ಮತಗಳನ್ನು ಪಡೆದು, 1,47,518 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಪ್ರತಿಸ್ಪರ್ಧಿಯಾಗಿದ್ದ ಕಾಂಗ್ರೆಸ್ ಅಭ್ಯರ್ಥಿ ಕೃಷ್ಣ ಭೈರೇಗೌಡ 6,76,982 ಮತಗಳನ್ನು ಪಡೆದು ಸೋಲುಕಂಡಿದ್ದರು.

    ಬೆಂಗಳೂರು ಗ್ರಾಮಾಂತರ:

    ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಡಿ.ಕೆ ಸುರೇಶ್ 8,78,258 ಮತಗಳನ್ನು ಪಡೆದು, 2,06,870 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಬಿಜೆಪಿಯಿಂದ ಕಣಕ್ಕಿಳಿದಿದ್ದ ಪ್ರತಿಸ್ಪರ್ಧಿ ಅಶ್ವಥ್ ನಾರಾಯಣಗೌಡ 6,71,388 ಮತಗಳನ್ನ ಪಡೆದು ಸೋಲನುಭವಿಸಿದ್ದರು.

    ಬೆಂಗಳೂರು ದಕ್ಷಿಣ:

    ಬಿಜೆಪಿಯಿಂದ ಸ್ಪರ್ಧಿಸಿದ್ದ ತೇಜಸ್ವಿ ಸೂರ್ಯ 7,39,229 ಮತಗಳನ್ನು ಪಡೆದು, 3,31,192 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಕಾಂಗ್ರೆಸ್‌ನಿಂದ ಅಖಾಡಕ್ಕಿಳಿದಿದ್ದ ಪ್ರತಿಸ್ಪರ್ಧಿ ಬಿ.ಕೆ ಹರಿಪ್ರಸಾದ್ 6,08,037 ಮತಗಳನ್ನು ಪಡೆದು ಸೋಲುಕಂಡಿದ್ದರು.

    ಚಾಮರಾಜನಗರ:

    ಬಿಜೆಪಿಯಿಂದ ಸ್ಪರ್ಧಿಸಿದ್ದ ವಿ. ಶ್ರೀನಿವಾಸ್ ಪ್ರಸಾದ್ 5,68,537 ಮತಗಳನ್ನು ಪಡೆದು, 1,817 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಕಾಂಗ್ರೆಸ್‌ನಿಂದ ಕಣಕ್ಕಿಳಿದಿದ್ದ ಪ್ರತಿಸ್ಪರ್ಧಿ ಆರ್. ಧ್ರುವನಾರಾಯಣ 5,66,720 ಮತಗಳನ್ನು ಪಡೆದು ಸೋಲುಕಂಡಿದ್ದರು.

    ಚಿಕ್ಕಬಳ್ಳಾಪುರ:

    ಬಿಜೆಪಿಯಿಂದ ಸ್ಪರ್ಧಿಸಿದ್ದ ಬಿ.ಎನ್ ಬಚ್ಚೇಗೌಡ 7,45,912 ಮತಗಳನ್ನು ಪಡೆದು, 1,82,110 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಕಾಂಗ್ರೆಸ್‌ನಿಂದ ಕಣಕ್ಕಿಳಿದಿದ್ದ ಪ್ರತಿಸ್ಪರ್ಧಿ ಎಂ. ವೀರಪ್ಪ ಮೊಯ್ಲಿ 5,63,802 ಮತಗಳನ್ನು ಪಡೆದು ಸೋಲುಕಂಡಿದ್ದರು.

    ಉಡುಪಿ-ಚಿಕ್ಕಮಗಳೂರು:

    ಬಿಜೆಪಿಯಿಂದ ಸ್ಪರ್ಧಿಸಿದ್ದ ಶೋಭಾ ಕರಂದ್ಲಾಜೆ 7,18,916 ಮತಗಳನ್ನು ಪಡೆದು, 3,49,599 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಜೆಡಿಎಸ್‌ನಿಂದ ಕಣಕ್ಕಿಳಿದಿದ್ದ ಪ್ರತಿಸ್ಪರ್ಧಿ ಪ್ರಮೋದ್ ಮಧ್ವರಾಜ್ 3,69,317 ಮತಗಳನ್ನು ಪಡೆದು ಸೋಲುಕಂಡಿದ್ದರು.

    ಚಿಕ್ಕೋಡಿ:

    ಬಿಜೆಪಿಯಿಂದ ಸ್ಪರ್ಧಿಸಿದ್ದ ಅಣ್ಣಾ ಸಾಹೇಬ್ ಜೊಲ್ಲೆ 6,45,017 ಮತಗಳನ್ನು ಪಡೆದು, 1,18,887 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಕಾಂಗ್ರೆಸ್‌ನಿಂದ ಕಣಕ್ಕಿಳಿದಿದ್ದ ಪ್ರತಿಸ್ಪರ್ಧಿ ಪ್ರಕಾಶ್ ಹುಕ್ಕೇರಿ 5,26,140 ಮತಗಳನ್ನು ಪಡೆದು ಸೋಲುಕಂಡಿದ್ದರು.

    ಚಿತ್ರದುರ್ಗ:

    ಬಿಜೆಪಿಯಿಂದ ಸ್ಪರ್ಧಿಸಿದ್ದ ಎ.ನಾರಾಯಣಸ್ವಾಮಿ 6,26,195 ಮತಗಳನ್ನು ಪಡೆದು, 80,178 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಕಾಂಗ್ರೆಸ್‌ನಿಂದ ಕಣಕ್ಕಿಳಿದಿದ್ದ ಪ್ರತಿಸ್ಪರ್ಧಿ ಬಿ.ಎನ್ ಚಂದ್ರಪ್ಪ 5,46,017 ಮತಗಳನ್ನು ಪಡೆದು ಸೋಲುಕಂಡಿದ್ದರು.

    ದಕ್ಷಿಣ ಕನ್ನಡ:

    ಬಿಜೆಪಿಯಿಂದ ಸ್ಪರ್ಧಿಸಿದ್ದ ನಳಿನ್‌ಕುಮಾರ್ ಕಟೀಲ್ 7,74,285 ಮತಗಳನ್ನು ಪಡೆದು, 2,74,621 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಕಾಂಗ್ರೆಸ್‌ನಿಂದ ಕಣಕ್ಕಿಳಿದಿದ್ದ ಪ್ರತಿಸ್ಪರ್ಧಿ ಮಿಥುನ್ ರೈ 4,99,664 ಮತಗಳನ್ನು ಪಡೆದು ಸೋಲುಕಂಡಿದ್ದರು.

    ದಾವಣಗೆರೆ:

    ಬಿಜೆಪಿಯಿಂದ ಸ್ಪರ್ಧಿಸಿದ್ದ 6,52,996 ಮತಗಳನ್ನು ಪಡೆದು, 1,69,702 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಕಾಂಗ್ರೆಸ್‌ನಿಂದ ಕಣಕ್ಕಿಳಿದಿದ್ದ ಪ್ರತಿಸ್ಪರ್ಧಿ ಹೆಚ್.ಬಿ ಮಂಜಪ್ಪ 4,83,294 ಮತಗಳನ್ನು ಪಡೆದು ಸೋಲುಕಂಡಿದ್ದರು.

    ಧಾರವಾಡ:

    ಬಿಜೆಪಿಯಿಂದ ಸ್ಪರ್ಧಿಸಿದ್ದ ಪ್ರಹ್ಲಾದ್ ಜೋಶಿ 6,84,837 ಮತಗಳನ್ನು ಪಡೆದು, 2,05,072 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಕಾಂಗ್ರೆಸ್‌ನಿಂದ ಕಣಕ್ಕಿಳಿದಿದ್ದ ಪ್ರತಿಸ್ಪರ್ಧಿ ವಿನಯ್ ಕುಲಕರ್ಣಿ 4,79,765 ಮತಗಳನ್ನು ಪಡೆದು ಸೋಲುಕಂಡಿದ್ದರು.

    ಹಾಸನ:

    ಜೆಡಿಎಸ್‌ನಿಂದ ಸ್ಪರ್ಧಿಸಿದ್ದ ಪ್ರಜ್ವಲ್ ರೇವಣ್ಣ 6,76,606 ಮತಗಳನ್ನು ಪಡೆದು, 1,41,324 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಕಾಂಗ್ರೆಸ್‌ನಿಂದ ಕಣಕ್ಕಿಳಿದಿದ್ದ ಪ್ರತಿಸ್ಪರ್ಧಿ ಎ.ಮಂಜು 5,35,282 ಮತಗಳನ್ನು ಪಡೆದು ಸೋಲುಕಂಡಿದ್ದರು.

    ಹಾವೇರಿ:

    ಬಿಜೆಪಿಯಿಂದ ಸ್ಪರ್ಧಿಸಿದ್ದ ಶಿವಕುಮಾರ್ ಉದಾಸಿ 6,83,660 ಮತಗಳನ್ನು ಪಡೆದು, 1,40,882 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಕಾಂಗ್ರೆಸ್‌ನಿಂದ ಕಣಕ್ಕಿಳಿದಿದ್ದ ಪ್ರತಿಸ್ಪರ್ಧಿ 1,40,882 ಮತಗಳನ್ನು ಪಡೆದು ಸೋಲುಕಂಡಿದ್ದರು.

    ಕಲಬುರಗಿ:

    ಬಿಜೆಪಿಯಿಂದ ಸ್ಪರ್ಧಿಸಿದ್ದ ಡಿ.ಉಮೇಶ್ ಜಾಧವ್ 6,20,192 ಮತಗಳನ್ನು ಪಡೆದು, 95,452 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಕಾಂಗ್ರೆಸ್‌ನಿಂದ ಕಣಕ್ಕಿಳಿದಿದ್ದ ಪ್ರತಿಸ್ಪರ್ಧಿ ಮಲ್ಲಿಕಾರ್ಜುನ ಖರ್ಗೆ 4,24,740 ಮತಗಳನ್ನು ಪಡೆದು ಸೋಲುಕಂಡಿದ್ದರು.

    ಕೋಲಾರ:

    ಬಿಜೆಪಿಯಿಂದ ಸ್ಪರ್ಧಿಸಿದ್ದ ಎಸ್. ಮುನಿಸ್ವಾಮಿ 7,09,165 ಮತಗಳನ್ನು ಪಡೆದು, 2,10,021 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಕಾಂಗ್ರೆಸ್‌ನಿಂದ ಕಣಕ್ಕಿಳಿದಿದ್ದ ಪ್ರತಿಸ್ಪರ್ಧಿ ಕೆ.ಹೆಚ್. ಮುನಿಯಪ್ಪ 6,99,144 ಮತಗಳನ್ನು ಪಡೆದು ಪರಾಭವಗೊಂಡಿದ್ದರು.

    ಕೊಪ್ಪಳ:

    ಬಿಜೆಪಿಯಿಂದ ಸ್ಪರ್ಧಿಸಿದ್ದ ಕರಡಿ ಸಂಗಣ್ಣ 5,86,783 ಮತಗಳನ್ನು ಪಡೆದು, 38,397 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಕಾಂಗ್ರೆಸ್‌ನಿಂದ ಕಣಕ್ಕಿಳಿದಿದ್ದ ಬಸವರಾಜ ಹಿಟ್ನಾಳ್ 5,48,386 ಮತಗಳನ್ನು ಪಡೆದು ಪರಾಭವಗೊಂಡಿದ್ದರು.

    ಮಂಡ್ಯ:

    ಪ್ರತಿಷ್ಠೆಯ ಕಣವಾಗಿದ್ದ ಮಂಡ್ಯ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಹಾಲಿ ಸಂಸದೆ ಸುಮಲತಾ ಅಂಬರೀಷ್ 7,03,660 ಮತಗಳನ್ನು ಪಡೆದು, 1,25,876 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ನಿಖಿಲ್ ಕುಮಾರಸ್ವಾಮಿ 5,77,784 ಮತಗಳನ್ನು ಪಡೆದು ಸೋಲು ಕಂಡಿದ್ದರು.

    ಮೈಸೂರು:

    ಬಿಜೆಪಿಯಿಂದ ಸ್ಪರ್ಧಿಸಿದ್ದ ಪ್ರತಾಪ್ ಸಿಂಹ 6,88,974 ಮತಗಳನ್ನು ಪಡೆದು, 1,38,647 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಸಿ.ಹೆಚ್ ವಿಜಯ್ ಶಂಕರ್ 5,50,327 ಮತಗಳನ್ನು ಪಡೆದು ಪರಾಭವಗೊಂಡಿದ್ದರು.

    ರಾಯಚೂರು:

    ಬಿಜೆಪಿಯಿಂದ ಸ್ಪರ್ಧಿಸಿದ್ದ ಅಮರೇಶ್ವರ ನಾಯಕ 5,98,337 ಮತಗಳನ್ನು ಪಡೆದು, 1,17,716 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಬಿ.ವಿ ನಾಯಕ್ 4,80,621 ಮತಗಳನ್ನು ಪಡೆದು ಸೋಲನುಭವಿಸಿದ್ದರು.

    ಶಿವಮೊಗ್ಗ:

    ಬಿಜೆಪಿಯಿಂದ ಸ್ಪರ್ಧಿಸಿದ್ದ ಬಿ.ವೈ ರಾಘವೇಂದ್ರ 7,29,872 ಮತಗಳನ್ನು ಪಡೆದು, 5,06,512 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಜೆಡಿಎಸ್‌ನಿಂದ ಸ್ಪರ್ಧಿಸಿದ್ದ ಮಧು ಬಂಗಾರಪ್ಪ 5,06,512 ಮತಗಳನ್ನು ಪಡೆದು ಸೋಲನುಭವಿಸಿದ್ದರು.

    ತುಮಕೂರು:

    ಬಿಜೆಪಿಯಿಂದ ಸ್ಪರ್ಧಿಸಿದ್ದ ಜಿ.ಎಸ್ ಬಸವರಾಜು 5,96,127 ಮತಗಳನ್ನು ಪಡೆದು, 13,339 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಜೆಡಿಎಸ್‌ನಿಂದ ಸ್ಪರ್ಧಿಸಿದ್ದ ಹೆಚ್.ಡಿ ದೇವೇಗೌಡ 5,82,788 ಮತಗಳನ್ನು ಪಡೆದು ಸೋಲನುಭವಿಸಿದ್ದರು.

    ಉತ್ತರ ಕನ್ನಡ:

    ಬಿಜೆಪಿಯಿಂದ ಸ್ಪರ್ಧಿಸಿದ್ದ ಅನಂತ್‌ಕುಮಾರ್ ಹೆಗಡೆ 7,86,042 ಮತಗಳನ್ನು ಪಡೆದು, 4,79,649 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಜೆಡಿಎಸ್‌ನಿಂದ ಸ್ಪರ್ಧಿಸಿದ್ದ ಆನಂದ್ ಟಸ್ನೋಟಿಕರ್ 3,06,393 5,82,788 ಮತಗಳನ್ನು ಪಡೆದು ಸೋಲನುಭವಿಸಿದ್ದರು.

    ವಿಜಯಪುರ:

    ಬಿಜೆಪಿಯಿಂದ ಸ್ಪರ್ಧಿಸಿದ್ದ ರಮೇಶ್ ಜಿಗಜಿಣಗಿ 6,35,867 ಮತಗಳನ್ನು ಪಡೆದು, 2,58,038 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಜೆಡಿಎಸ್‌ನಿಂದ ಸ್ಪರ್ಧಿಸಿದ್ದ ಸುನಿತಾ ದೇವಾನಂದ್ ಚವ್ಹಾಣ್ 3,77,829 ಮತಗಳನ್ನು ಪಡೆದು ಸೋಲನುಭವಿಸಿದ್ದರು.

  • Telangana Election 2023: ಸಾಮಾನ್ಯರಂತೆ ಸರತಿ ಸಾಲಿನಲ್ಲಿ ನಿಂತು ವೋಟ್‌ ಮಾಡಿದ ಸ್ಟಾರ್ಸ್‌

    Telangana Election 2023: ಸಾಮಾನ್ಯರಂತೆ ಸರತಿ ಸಾಲಿನಲ್ಲಿ ನಿಂತು ವೋಟ್‌ ಮಾಡಿದ ಸ್ಟಾರ್ಸ್‌

    ಹೈದರಾಬಾದ್‌: ಜಿದ್ದಾಜಿದ್ದಿ ಕಣವಾಗಿರುವ ತೆಲಂಗಾಣ ರಾಜ್ಯದಲ್ಲಿಂದು ಮತದಾನ (Telangana Assembly Election 2023) ನಡೆಯುತ್ತಿದೆ. ಬೆಳಗ್ಗೆ 7 ಗಂಟೆಯಿಂದಲೇ ಮತದಾನ ಆರಂಭಗೊಂಡಿದ್ದು, ಜನರು ತಮ್ಮ ಹಕ್ಕು ಚಲಾಯಿಸಲು ಉತ್ಸಾಹ ತೋರಿದ್ದಾರೆ.

    ಈ ನಡುವೆ ತೆಲುಗು ಚಿತ್ರರಂಗದ ಖ್ಯಾತ ನಟರಾದ ಅಲ್ಲು ಅರ್ಜುನ್‌ (Allu Arjun), ಜೂನಿಯರ್‌ ಎನ್‌ಟಿಆರ್‌ (Jr NTR) ಹಾಗೂ ಚಿರಂಜೀವಿ (Chiranjeevi) ಹೈದರಾಬಾದ್‌ನಲ್ಲಿ ತಮ್ಮ ಕುಟುಂಬಗಳೊಂದಿಗೆ ಬಂದು ಮತದಾನದ ಹಕ್ಕನ್ನು ಚಲಾಯಿಸಿದ್ದಾರೆ. ಬೆಳ್ಳಂ ಬೆಳಗ್ಗೆಯೇ ಸಾಮಾನ್ಯರಂತೆ ಸರತಿ ಸಾಲಿನಲ್ಲಿ ನಿಂತು ವೋಟ್‌ ಮಾಡಿದ್ದಾರೆ. ಇದನ್ನೂ ಓದಿ: Telangana Poll: ಜಿದ್ದಾಜಿದ್ದಿ ಕಣ ತೆಲಂಗಾಣದಲ್ಲಿಂದು ಮತದಾನ – ದಾಖಲೆಯ ಮತದಾನಕ್ಕೆ ಮೋದಿ ಕರೆ

    ಅಲ್ಲು ಅರ್ಜುನ್‌ ತಾವೊಬ್ಬರೇ ಮತಗಟ್ಟೆಗೆ ಬಂದು ವೋಟ್‌ ಮಾಡಿದರು. ಜೂನಿಯರ್‌ ಎನ್‌ಟಿಆರ್‌ ಲಕ್ಷ್ಮಿ ಪ್ರಣತಿ, ತಾಯಿ ಶಾಲಿನಿ ನಂದಮೂರಿ ಅವರೊಂದಿಗೆ ಬಂದು ವೋಟ್‌ ಮಾಡಿದ್ರು. ಇನ್ನೂ ಮೆಗಾಸ್ಟಾರ್‌ ಚಿರಂಜೀವಿ ಸಹ ತಮ್ಮ ಕುಟುಂಬ ಸಮೇತರಾಗಿ ಬಂದು ವೋಟ್‌ ಮಾಡಿ ತನ್ಮ ಹಕ್ಕು ಚಲಾಯಿಸಿದರು. ಜೊತೆಗೆ ಪ್ರತಿಯೊಬ್ಬರು ಬಂದು ವೋಟ್‌ ಮಾಡುವಂತೆ ಮನವಿ ಮಾಡಿದರು. ಸದ್ಯ ಸ್ಟಾರ್ಸ್‌ಗಳು ವೋಟ್‌ ಮಾಡಿರುವ ಫೋಟೋ ವೀಡಿಯೋ ಜಾಲತಾಣದಲ್ಲಿ ಸಖತ್‌ ಸದ್ದು ಮಾಡುತ್ತಿದೆ. ಇದನ್ನೂ ಓದಿ: ಇತಿಹಾಸದಲ್ಲೇ ಗರಿಷ್ಠ ಬೆಲೆಗೆ ತಲುಪಿದ ಚಿನ್ನ – ಬರೋಬ್ಬರಿ 65,000ಕ್ಕೆ ಏರಿಕೆ

    ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸಗಡ, ಮಿಜೋರಾಂಗಳಲ್ಲಿ ಈಗಾಗಲೇ ನ.7ರಿಂದ ನವೆಂಬರ್ 25ರ ಒಳಗೆ ಮತದಾನ ಮುಕ್ತಾಯವಾಗಿದೆ. ತೆಲಂಗಾಣದಲ್ಲಿಂದು (ನ.30) 119 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. ಇದನ್ನೂ ಓದಿ:  Bigg Boss Kannada- ದೊಡ್ಡಪ್ಪನ ಮಾತು ಕೇಳಿ ತಾಳಿ ಕಟ್ಟಿದ್ದೆ: ವರ್ತೂರು ಸಂತೋಷ್