Tag: votes

  • ದೇಶದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಬಾರದು ಎಂಬುದೇ ನಮ್ಮ ಗುರಿಯಾಗಿರಬೇಕು – ಸ್ಟಾಲಿನ್‌ ಕರೆ

    ದೇಶದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಬಾರದು ಎಂಬುದೇ ನಮ್ಮ ಗುರಿಯಾಗಿರಬೇಕು – ಸ್ಟಾಲಿನ್‌ ಕರೆ

    ಚೆನ್ನೈ: ಈ ದೇಶದಲ್ಲಿ ಬಿಜೆಪಿ (BJP) ಮತ್ತೆ ಅಧಿಕಾರಕ್ಕೆ ಬರಬಾರದು ಎಂಬುದೋಂದೇ ನಮ್ಮ ಗುರಿಯಾಗಿರಬೇಕು. ಅದಕ್ಕಾಗಿ ಮತಗಳು ವಿಭಜನೆಯಾಗದಂತೆ ನೋಡಿಕೊಳ್ಳಬೇಕು ಎಂದು ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್‌ (MK Stalin) ಕರೆ ನೀಡಿದ್ದಾರೆ.

    ತಿರುಚಿನಾಪಳ್ಳಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸ್ಟಾಲಿನ್‌, ಈ ದೇಶದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲು ಬಿಡಬಾರದು ಎಂಬ ಒಂದೇ ಗುರಿಯನ್ನು ಎಲ್ಲರೂ ಹೊಂದಿರಬೇಕು. ಬಿಜೆಪಿ ವಿರುದ್ಧದ ಮತಗಳು ಯಾವುದೇ ಕಾರಣಕ್ಕೂ ವಿಜನೆಯಾಗದಂತೆ ನೋಡಿಕೊಳ್ಳಬೇಕು ಎಂದು ಕರೆ ಕೊಟ್ಟಿದ್ದಾರೆ.

    ಪ್ರತಿಯೊಬ್ಬರಿಗೂ ಒಂದೇ ಗುರಿ ಇರಬೇಕು. ಅದು ಈ ದೇಶದಲ್ಲಿ ಮತ್ತೆ ಬಿಜೆಪಿಯನ್ನ ಅಧಿಕಾರಕ್ಕೆ ಬರಲು ಬಿಡಬಾರದು. ಒಂದು ವೇಳೆ ಬಿಜೆಪಿ ಅಧಿಕಾರಕ್ಕೆ ಬಂದರೆ ದೇಶದಲ್ಲಿ ಪ್ರಜಾಪ್ರಭುತ್ವ ಮತ್ತು ಒಕ್ಕೂಟ ವ್ಯವಸ್ಥೆ ಇರುವುದಿಲ್ಲ ಎಂದು ಎಚ್ಚರಿಸಿದರು. ಇದನ್ನೂ ಓದಿ: ಲೋಕಸಮರ ಗೆಲ್ಲೋಕೆ ಪ್ಲಾನ್- 5 ಕ್ಷೇತ್ರಗಳಲ್ಲಿ ಮಹಿಳಾ ಅಭ್ಯರ್ಥಿಗಳಿಗಾಗಿ ಬಿಜೆಪಿ ಸರ್ವೇ

    INDIA ಒಕ್ಕೂಟದಲ್ಲಿ ( INDIA Block) ಅಸಮಾಧಾನ: ಲೋಕಸಭೆ ಚುನಾವಣೆಯಲ್ಲಿ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ಏಕಾಂಗಿಯಾಗಿ ಸ್ಪರ್ಧಿಸಲು ನಿರ್ಧರಿಸಿದ ನಂತರ ಆಮ್ ಆದ್ಮಿ ಪಕ್ಷವು ಹರಿಯಾಣದ ಎಲ್ಲಾ 90 ವಿಧಾನಸಭಾ ಸ್ಥಾನಗಳಿಗೆ ಏಕಾಂಗಿಯಾಗಿ ಸ್ಪರ್ಧಿಸಲು ನಿರ್ಧರಿಸಿದೆ. ಪಕ್ಷದ ರಾಷ್ಟ್ರೀಯ ನಾಯಕರಿಗೆ ನಮ್ಮ ನಿಲುವನ್ನು ತಿಳಿಸಿದ್ದೇವೆ. ನಾವು ಪ್ರಬಲರಾಗಿರುವುದರಿಂದ ಚುನಾವಣೆಯಲ್ಲಿ ಮೈತ್ರಿ ಮತ್ತು ಸ್ವತಂತ್ರವಾಗಿಯೂ ಸ್ಪರ್ಧಿಸಬಹುದು. ಅಂತಿಮ ನಿರ್ಧಾರವನ್ನು ಪಕ್ಷದ ನಾಯಕರು ತೆಗೆದುಕೊಳ್ಳುತ್ತಾರೆ ಎಂದು ಎಎಪಿ ನಾಯಕ ಸುಶೀಲ್ ಗುಪ್ತಾ ಹೇಳಿದ್ದಾರೆ. ಇದರಿಂದ ಐಎನ್‌ಡಿಐಎ ಒಕ್ಕೂಟದಲ್ಲಿ ಅಸಮಾಧಾನ ತಲೆದೋರಿದೆ.

    ಈ ಬೆನ್ನಲ್ಲೇ ಬಿಹಾರದ ಮುಖ್ಯಮಂತ್ರಿ ಮಹಾಘಟಬಂಧನ್‌ (ಮಹಾಮೈತ್ರಿಕೂಟ) ಜೊತೆಗಿನ ಸಂಬಂಧ ಕಡಿದುಕೊಂಡು ಮತ್ತೆ ಬಿಜೆಪಿ ಜೊತೆಗೆ ಸರ್ಕಾರ ರಚಿಸುತ್ತಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಇಂದೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಗಳೂ ಇವೆ ಎಂದು ಜೆಡಿಯು ಪಕ್ಷದ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಜೈಲಿನಲ್ಲಿ ಶ್ರೀರಾಮೋತ್ಸವ ಆಚರಿಸಿದ್ದಕ್ಕೆ ಹಿಂದೂ ಕೈದಿಗಳ ಮೇಲೆ ಹಲ್ಲೆ ಆರೋಪ!

    ಈ ಎಲ್ಲದರ ನಡುವೆ ರಾಷ್ಟ್ರವ್ಯಾಪಿ ಅನ್ಯಾಯದ ವಿರುದ್ಧ ಹೋರಾಡುವಲ್ಲಿ ಇಂಡಿಯಾ ಒಕ್ಕೂಟದ ಬಣಗಳ ಏಕತೆಯ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

  • ರಷ್ಯಾದಿಂದ ಭಾರತ ಖರೀದಿಸುತ್ತಿರುವ S-400 ಕ್ಷಿಪಣಿಗೆ ಎದುರಾಗಿದ್ದ ಕಾಟ್ಸಾ ಭೀತಿ ದೂರ

    ರಷ್ಯಾದಿಂದ ಭಾರತ ಖರೀದಿಸುತ್ತಿರುವ S-400 ಕ್ಷಿಪಣಿಗೆ ಎದುರಾಗಿದ್ದ ಕಾಟ್ಸಾ ಭೀತಿ ದೂರ

    ವಾಷಿಂಗ್ಟನ್: ರಷ್ಯಾದಿಂದ ಎಸ್-400 ಕ್ಷಿಪಣಿ ಖರೀದಿಸಿದ್ದಕ್ಕೆ ಪ್ರತಿಯಾಗಿ ಕಾಟ್ಸಾ ಕಾಯ್ದೆಯಡಿ ಭಾರತದ ಮೇಲೆ ಯಾವುದೇ ದಿಗ್ಬಂಧನ ವಿಧಿಸದಿರುವುದಕ್ಕೆ ಅಮೆರಿಕ ಪ್ರತಿನಿಧಿಗಳ ಸಭೆ ಒಪ್ಪಿಗೆ ಸೂಚಿಸಿದೆ.

    ಕಾಯ್ದೆ ತಿದ್ದುಪಡಿ ವಿಧೇಯಕವನ್ನು ಇಂಡೋ ಅಮೆರಿಕನ್ ಸದಸ್ಯ ರೋ ಖನ್ನಾ ಅಮೆರಿಕ ಪ್ರತಿನಿಧಿಗಳ ಸಭೆಯಲ್ಲಿ ಮಂಡಿಸಿದ್ರು. ಇದಕ್ಕೆ ಮೇಜುಕುಟ್ಟುವ ಮೂಲಕ ಅಮೆರಿಕಾದ ಕೆಳಸಭೆ ಅನುಮೋದನೆ ನೀಡಿದೆ. 2014ರಲ್ಲಿ ಕ್ರಿಮಿಯಾವನ್ನು ರಷ್ಯಾ ಆಕ್ರಮಿಸಿದ್ದಕ್ಕೆ ಮತ್ತು 2016ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ರಷ್ಯಾ ಮೂಗು ತೂರಿಸಿದ್ದಕ್ಕೆ ಪ್ರತಿಯಾಗಿ 2017ರಲ್ಲಿ ಅಮೆರಿಕ ಕಾಟ್ಸಾ ಕಾಯ್ದೆಯನ್ನು ಜಾರಿ ಮಾಡಿತ್ತು. ರಷ್ಯಾದ ಸೇನೆ ಮತ್ತು ಗೂಢಚರ್ಯೆ ಪಡೆಗಳ ಜೊತೆ ವ್ಯವಹಾರ ಹೊಂದಿರುವ ದೇಶಗಳ ಮೇಲೆ ಶಿಕ್ಷಾತ್ಮಕ ದಿಗ್ಬಂಧನ ವಿಧಿಸುವುದು ಕಾಟ್ಸಾ ಕಾಯ್ದೆಯ ಉದ್ದೇಶವಾಗಿದೆ. ಇದನ್ನೂ ಓದಿ: ಜ್ಞಾನವಾಪಿ ವಿವಾದ – ಹಿಂದೂಗಳಿಗೆ ಪೂಜೆ ಮಾಡಲು ಅನುಮತಿ ನೀಡುವಂತೆ ಕೋರಿ ಸುಪ್ರೀಂಗೆ ಅರ್ಜಿ

    ಈ ತಿದ್ದುಪಡಿ ಕಾಯ್ದೆಯು ಚೀನಾದಂತಹ ಆಕ್ರಮಣಕಾರರನ್ನು ತಡೆಯಲು ಸಹಾಯ ಮಾಡುವ ನಿಟ್ಟಿನಲ್ಲಿ ವಿನಾಯಿತಿಯನ್ನು ಭಾರತಕ್ಕೆ ಒದಗಿಸಲು ಬೈಡನ್ ಆಡಳಿತ ಅನುವು ಮಾಡಿಕೊಟ್ಟಿದೆ. ಚೀನಾದಂತಹ ಆಕ್ರಮಣಕಾರರನ್ನು ತಡೆಯಲು ನೆರವಾಗಲು ರಷ್ಯಾದಿಂದ ಭಾರತ ಖರೀದಿಸುತ್ತಿರುವ ಎಸ್-400 ಕ್ಷಿಪಣಿ ರಕ್ಷಣಾ ವ್ಯವಸ್ಥೆಗೆ ಕಾಟ್ಸಾ ಕಾಯ್ದೆಯಿಂದ ವಿನಾಯಿತಿ ನೀಡುವ ತಿದ್ದುಪಡಿ ಮಸೂದೆಗೆ ಅಮೆರಿಕದ ಪ್ರತಿನಿಧಿ ಸಭೆಯಲ್ಲಿ ಧ್ವನಿಮತದ ಮೂಲಕ ಅಂಗೀಕಾರ ಸಿಕ್ಕಿದೆ. ಇದನ್ನೂ ಓದಿ: ಭಗತ್‌ ಸಿಂಗ್‌ ಒಬ್ಬ ಭಯೋತ್ಪಾದಕ: ಶಿರೋಮಣಿ ಅಕಾಲಿ ದಳ ಸಂಸದ ವಿವಾದಾತ್ಮಕ ಹೇಳಿಕೆ

    ಅಮೆರಿಕ ಮಾಡಿರುವ ತಿದ್ದುಪಡಿಯು ಅತ್ಯಂತ ಮಹತ್ವದ್ದಾಗಿದ್ದು, ಇದರಿಂದ ಭಾರತ ಮತ್ತು ಅಮೆರಿಕ ನಡುವಿನ ಸಂಬಂಧ ಇನ್ನಷ್ಟು ಗಟ್ಟಿಯಾಗಬಹುದಾಗಿದೆ. ಅಕ್ಟೋಬರ್ 2018ರಲ್ಲಿ ಎಸ್-400 ವಾಯು ರಕ್ಷಣಾ ಕ್ಷಿಪಣಿ ಐದು ಘಟಕಗಳನ್ನು ಖರೀದಿಸಲು ಭಾರತ ರಷ್ಯಾದೊಂದಿಗೆ ಒಪ್ಪಂದ ಮಾಡಿಕೊಂಡಿತ್ತು. ಬಳಿಕ ಭಾರತದ ಮೇಲೆ ಅಮೆರಿಕ ಕಾಟ್ಸಾ ಕಾಯ್ದೆಯ ಮೂಲಕ ಕ್ರಮ ಕೈಗೊಳ್ಳುವ ಸಾಧ್ಯತೆ ಹೆಚ್ಚಿತ್ತು.

    Live Tv
    [brid partner=56869869 player=32851 video=960834 autoplay=true]

  • ನೂಪುರ್ ಹೇಳಿಕೆಯಿಂದ ಕೋಮು ಉದ್ವಿಗ್ನತೆ ಸೃಷ್ಟಿಸಿದ್ದು ಕೇವಲ ವೋಟಿಗಾಗಿ – ಸಿನ್ಹಾ ಗುಡುಗು

    ನೂಪುರ್ ಹೇಳಿಕೆಯಿಂದ ಕೋಮು ಉದ್ವಿಗ್ನತೆ ಸೃಷ್ಟಿಸಿದ್ದು ಕೇವಲ ವೋಟಿಗಾಗಿ – ಸಿನ್ಹಾ ಗುಡುಗು

    ನವದೆಹಲಿ: ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾರ ವಿವಾದಾತ್ಮಕ ಹೇಳಿಕೆಯಿಂದಾಗಿ ಕೋಮು ಉದ್ವಿಗ್ನತೆ ಸೃಷ್ಟಿಯಾಗಿದೆ. ಇದರಿಂದಾಗಿ ಉದಯಪುರ, ಅಮರಾವತಿ ಹತ್ಯೆಯ ನಂತರ ಬಂದ ಹೇಳಿಕೆಗಳು ಕೋಮು ಉದ್ವಿಗ್ನತೆ ಸೃಷ್ಟಿಸಿ ಮತ ಪಡೆಯುವ ಉದ್ದೇಶ ಹೊಂದಿವೆ. ಈ ಎಲ್ಲ ಕೋಮು ಗಲಭೆಗಳು ಸೃಷ್ಟಿಸಿದ್ದೂ ಮತ ಪಡೆಯುವ ಉದ್ದೇಶದಿಂದಲೇ ಎಂದು ರಾಷ್ಟ್ರಪತಿ  ಸ್ಥಾನಕ್ಕೆ ಸ್ಪರ್ಧಿಸಿರುವ ಪ್ರತಿ ಪಕ್ಷಗಳ ಅಭ್ಯರ್ಥಿ ಯಶವಂತ ಸಿನ್ಹಾ ವಾಗ್ದಾಳಿ ನಡೆಸಿದ್ದಾರೆ.

    ರಾಷ್ಟ್ರಪತಿ ಚುನಾವಣೆಗೂ ಮುನ್ನ ಯಶವಂತ್ ಸಿನ್ಹಾ ಗುಜರಾತ್‌ನ ವಿಧಾನಸೌಧಕ್ಕೆ ಭೇಟಿ ನೀಡಿ ಕಾಂಗ್ರೆಸ್ ಮತ್ತು ಇತರ ಪಕ್ಷದ ನಾಯಕರ ಜೊತೆ ಸಭೆ ನಡೆಸಿದರು. ಬಳಿಕ ಅಮಾನತುಗೊಂಡಿರುವ ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾ ಹೇಳಿಕೆ ವಿವಾದ, ಉದಯಪುರ ಹತ್ಯೆ ಹಾಗೂ ಅಮರಾವತಿ ವೈದ್ಯನ ಹತ್ಯೆಗಳ ಕುರಿತಾಗಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಇದನ್ನೂ ಓದಿ: `ಪವಿತ್ರ’ಪ್ರೇಮ ವಿಫಲ – ಯುವಕ ಕೈಕೊಟ್ಟನೆಂದು ಕಾಲೇಜಿನಲ್ಲೇ ವಿದ್ಯಾರ್ಥಿನಿ ನೇಣಿಗೆ ಶರಣು

    ದೇಶದಲ್ಲಿ ಕೋಮು ಉದ್ವಿಗ್ನತೆಯನ್ನು ಸೃಷ್ಟಿಸಲು ಇದು ಯೋಜಿತ ಪಿತೂರಿಯಾಗಿದೆ. ಕೇವಲ ಮತಕ್ಕಾಗಿ ಕಾನೂನು ಸುವ್ಯವಸ್ಥೆ ಸೃಷ್ಟಿಸುವ ಷಡ್ಯಂತ್ರವಿದೆ. ಪ್ರಧಾನಿ ನರೇಂದ್ರ ಮೋದಿ ಮನ್ ಕಿ ಬಾತ್‌ನಲ್ಲಿ ಮಾತನಾಡುತ್ತಾರೆ. ಇಂತಹ ದೊಡ್ಡ ಘಟನೆಗಳು ಉದಯಪುರ, ಅಮರಾವತಿಯಲ್ಲಿ ನಡೆದಿವೆ. ಈವರೆಗೂ ಕೇಂದ್ರ ಸರ್ಕಾರದಿಂದ ಒಂದೇ ಒಂದು ಹೇಳಿಕೆಯನ್ನೂ ನೀಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಪ್ರಧಾನಿ ನರೇಂದ್ರ ಮೋದಿ, ಗೃಹಸಚಿವರು ಅಥವಾ ರಕ್ಷಣಾ ಸಚಿವರು ಇಲ್ಲಿವರೆಗೆ ಯಾರೂ ಏನನ್ನೂ ಕೇಳಿಲ್ಲ. ಗುಜರಾತ್‌ನಲ್ಲಿ ಯಾವಾಗಲೂ ಸೆಕ್ಷನ್ 144 ಅಂತಹ ಪರಿಸ್ಥಿತಿ ಏಕೆ ಇದೆ. ತುರ್ತು ಪರಿಸ್ಥಿತಿಯ ಸಂದರ್ಭದಲ್ಲೂ ಇಂದಿನ ಸ್ಥಿತಿ ಇರಲಿಲ್ಲ ಎಂದು ವಿಷಾದಿಸಿದರು. ಇದನ್ನೂ ಓದಿ: ಫಸ್ಟ್ ನೈಟ್ ಅನ್ನೋದೇ ಇಲ್ಲ ಎಂದು ಹೇಳಿ ಪತಿಯನ್ನೇ ಬೆಚ್ಚಿ ಬೀಳಿಸಿದ ನಟಿ ಆಲಿಯಾ ಭಟ್

    ಇದೇ ವೇಳೆ ರಾಷ್ಟ್ರಪತಿ ಚುನಾವಣೆ ಕುರಿತು ಮಾತನಾಡಿದ ಸಿನ್ಹಾ, ಅಧ್ಯಕ್ಷೀಯ ಚುನಾವಣೆ ಬಹಳ ಮುಖ್ಯ. ರಬ್ಬರ್ ಸ್ಟಾಂಪ್ ಅಧ್ಯಕ್ಷರು ಅಲ್ಲಿ ಕುಳಿತರೆ ಏನೂ ಬದಲಾಗುವುದಿಲ್ಲ. ಈ ಚುನಾವಣೆಯಲ್ಲಿ ನಾವು ಯಾವ ಜಾತಿಯಿಂದ ಬಂದವರು ಎಂಬುದು ಮುಖ್ಯವಲ್ಲ. ಯಾವ ಸಿದ್ಧಾಂತ ಪ್ರತಿನಿಧಿಸುತ್ತೇವೆ ಎಂಬುದು ಮುಖ್ಯ ಎಂದು ಹೇಳಿದರು.

    Live Tv
    [brid partner=56869869 player=32851 video=960834 autoplay=true]

  • ಗೋವಾದಲ್ಲಿ ಕಾಂಗ್ರೆಸ್ ಸೋಲಿನ ಅಸಲಿಯತ್ತು ಬಹಿರಂಗ

    ಗೋವಾದಲ್ಲಿ ಕಾಂಗ್ರೆಸ್ ಸೋಲಿನ ಅಸಲಿಯತ್ತು ಬಹಿರಂಗ

    ಪಣಜಿ: ಪಂಚರಾಜ್ಯಗಳ ಚುನಾವಣಾ ಫಲಿತಾಂಶದಲ್ಲಿ ಕಾಂಗ್ರೆಸ್‍ಗೆ ತೀವ್ರ ಹಿನ್ನಡೆ ಉಂಟಾಗಿದೆ. ಇದೀಗ ಪಂಚರಾಜ್ಯಗಳ ಪೈಕಿ ಒಂದಾಗಿರುವ ಗೋವಾದಲ್ಲಿ ಕಾಂಗ್ರೆಸ್ ಸೋಲಿನ ಅಸಲಿಯತ್ತು ಬಹಿರಂಗವಾಗಿದೆ.

     

    ಕೊನೆಯ ಕ್ಷಣದ ವರೆಗೂ ಕಾಂಗ್ರೆಸ್ ಗೆಲ್ಲುವ ವಿಶ್ವಾಸದಲ್ಲಿತ್ತು. ಆದರೆ ಅಂತಿಮ ಫಲಿತಾಂಶ ಕಂಡು ನಿರಾಸೆ ಅನುಭವಿಸಿದೆ. ಬಳಿಕ ಕಾಂಗ್ರೆಸ್ ಸೋಲಿಗೆ ಪ್ರಮುಖ ಕಾರಣ ಏನು ಎಂದು ಹುಡುಕಿದಾಗ ಕಾಂಗ್ರೆಸ್‍ನ ಜಯದ ಓಟಕ್ಕೆ ಬ್ರೇಕ್ ಹಾಕಿದ್ದು ಎಎಪಿ ಮತ್ತು ಟಿಎಂಸಿ ಎಂಬ ಅಸಲಿಯತ್ತು ಹೊರಬಿದ್ದಿದೆ. ಇದನ್ನೂ ಓದಿ: ಗೋವಾದಲ್ಲಿ ಅತಂತ್ರ ಫಲಿತಾಂಶ – ಕುದುರೆ ವ್ಯಾಪಾರಕ್ಕೆ ವೇದಿಕೆ ಸಜ್ಜು

    ಅದಲ್ಲದೆ ಗೋವಾದಲ್ಲಿ ಜಾತ್ಯಾತೀತ ಮತಗಳ ವಿಭಜನೆಯಿಂದ ಕಾಂಗ್ರೆಸ್‍ಗೆ ಭಾರೀ ಪೆಟ್ಟು ಬಿದ್ದಿದೆ. ಬಿಜೆಪಿಯನ್ನು ಸೋಲಿಸಲು ಕಾಂಗ್ರೆಸ್-ಎಎಪಿ, ಟಿಎಂಸಿ ಹೊಂದಾಣಿಕೆ ಮಾಡಿಕೊಳ್ಳಲು ಚರ್ಚೆ ನಡೆದಿತ್ತು. ಕೊನೆಯ ಘಳಿಗೆಯಲ್ಲಿ ಮೈತ್ರಿ ಮುರಿದು ಬಿದ್ದಿದ್ದರಿಂದ ಸ್ವತಂತ್ರ್ಯವಾಗಿ ಸ್ಪರ್ಧೆ ಮಾಡಲು ಮೂರು ಪಕ್ಷಗಳು ನಿರ್ಧರಿಸಿದ್ದವು ಇದು ಸೋಲಿಗೆ ಪ್ರಮುಖ ಕಾರಣವಾಗಿದೆ.

    ಕಾಂಗ್ರೆಸ್ ಜೊತೆಗಿನ ಮೈತ್ರಿ ಮುರಿದು ಬಿದ್ದ ಬಳಿಕ ಟಿಎಂಸಿ ಪಕ್ಷ ಮಹಾರಾಷ್ಟ್ರ ಗೋಮಾಂತಕ ಪಾರ್ಟಿ ಜೊತೆ ಹೊಂದಾಣಿಕೆ ಮಾಡಿಕೊಂಡಿತ್ತು. ಇದು ಕಾಂಗ್ರೆಸ್‍ಗೆ ಹಿನ್ನಡೆ ಆಗುವಂತೆ ಮಾಡಿದೆ. ಟಿಎಂಸಿ ಸ್ಪರ್ಧೆ ಮಾಡಿದ ಅತಿ ಹೆಚ್ಚು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸೋತಿದೆ. ಈ ಎಲ್ಲಾ ಕಾರಣಗಳು ಇದೀಗ ಕಾಂಗ್ರೆಸ್ ಪಕ್ಷಕ್ಕೆ ಮನವರಿಕೆ ಆಗಿದ್ದು, ಸೋಲಿನ ಅಸಲಿ ಕಾರಣದ ವರದಿಯನ್ನು ಹೈಕಮಾಂಡ್‍ಗೆ ಸಲ್ಲಿಸಲು ಕಾಂಗ್ರೆಸ್ ನಾಯಕರು ಮುಂದಾಗಿದ್ದಾರೆ. ಇದನ್ನೂ ಓದಿ: 17 ರಾಜ್ಯಗಳಲ್ಲಿ ಬಿಜೆಪಿ, 2 ಕಡೆ ಕಾಂಗ್ರೆಸ್ – ಯಾವ ರಾಜ್ಯದಲ್ಲಿ ಯಾರಿಗೆ ಅಧಿಕಾರ? 

    ಪಕ್ಷಗಳು ಪಡೆದ ಶೇಕಡಾವರು ಮತಗಳ ವಿವರ:
    ಬಿಜೆಪಿ – 33.03%
    ಕಾಂಗ್ರೆಸ್ – 23.5%
    ಆಫ್ – 6.8%
    ಎಂಎಜಿ + ಟಿಎಂಸಿ – 7.6%
    ಪಕ್ಷೇತರರರು -28.08%

    ಗೋವಾದ ಚುನಾವಣಾ ಫಲಿತಾಂಶವನ್ನು ಗಮನಹರಿಸಿದರೆ, ಕಾಂಗ್ರೆಸ್ – 11, ಬಿಜೆಪಿ – 20, ಎಎಪಿ – 02, ಎಂಜಿಪಿ – 02, ಟಿಎಂಸಿ – 00, ಜಿಎಫ್‍ಪಿ – 01, ಎನ್‍ಸಿಪಿ – 00, ಆರ್‌ಜಿಪಿ – 01, ಇತರರು – 03 ಸ್ಥಾನ ಗೆದ್ದುಕೊಂಡಿದೆ. ಅತಿ ದೊಡ್ಡ ಪಕ್ಷವಾಗಿ ಬಿಜೆಪಿ ಹೊರಹೊಮ್ಮಿದೆ. ಎಂಜಿಪಿ ಬೆಂಬಲ ಇದೆ. ಕಳೆದ ಬಾರಿ ಬಿಜೆಪಿ ಅಭಿವೃದ್ಧಿ ಕೆಲಸ ಕೈ ಹಿಡಿದಿದೆ. ಸಮರ್ಥ ಅಭ್ಯರ್ಥಿಗಳ ಆಯ್ಕೆ ಈ ಬಾರಿ ಮಾಡಲಾಗಿದೆ. ಕ್ಯಾಥೋಲಿಕ್ ಪ್ರಾಬಲ್ಯದ ಕ್ಷೇತ್ರಗಳಲ್ಲೂ ಬಿಜೆಪಿ ಗೆಲುವು ಸಾಧಿಸಿದೆ. ಕಾಂಗ್ರೆಸ್‍ಗೆ ಸಮರ್ಥ ನಾಯಕತ್ವ, ಅಭ್ಯರ್ಥಿಗಳ ಕೊರತೆ ಕಾಡಿದೆ. ಕಾಂಗ್ರೆಸ್ ಮತ ಬ್ಯಾಂಕ್‍ಗೆ ಟಿಎಂಸಿ, ಎಎಪಿ ಕನ್ನ ಹಾಕಿದೆ.

  • ದಲಿತರೊಂದಿಗೆ ಚಹಾ ಸೇವಿಸಿ, ಬಿಜೆಪಿಗೆ ಮತ ಹಾಕುವಂತೆ ಮನವೊಲಿಸಿ: ಸ್ವತಂತ್ರ ದೇವ್

    ದಲಿತರೊಂದಿಗೆ ಚಹಾ ಸೇವಿಸಿ, ಬಿಜೆಪಿಗೆ ಮತ ಹಾಕುವಂತೆ ಮನವೊಲಿಸಿ: ಸ್ವತಂತ್ರ ದೇವ್

    ಲಕ್ನೋ: ಪಕ್ಷದ ಕಾರ್ಯಕರ್ತರು ದಲಿತರೊಂದಿಗೆ ಚಹಾ ಸೇವಿಸಿ, ಅವರು ಬಿಜೆಪಿಗೆ ಮತ ನೀಡುವಂತೆ ಮನವೊಲಿಸಬೇಕು ಎಂದು ಉತ್ತರ ಪ್ರದೇಶ ಬಿಜೆಪಿ ಅಧ್ಯಕ್ಷ ಸ್ವತಂತ್ರ ದೇವ್ ಸಿಂಗ್ ಹೇಳಿದ್ದಾರೆ.

    VOTE

    ನಿನ್ನೆ ನಡೆದ ಎರಡು ಪ್ರತ್ಯೇಕ ಕಾರ್ಯಕ್ರಮಗಳಲ್ಲಿ ( ಇತರೆ ಹಿಂದುಳಿದ ವರ್ಗಗಳ ಸಾಮಾಜಿಕ ಪ್ರತಿನಿಧಿ ಸಮ್ಮೇಳನ ಮತ್ತು ವೈಶ್ಯ ವ್ಯಾಪಾರಿ ಸಮ್ಮೇಳನ)ದಲ್ಲಿ ಭಾಗವಹಿಸಿದ ಸಿಂಗ್, ಚುನಾವಣೆ ಹಿನ್ನೆಲೆಯಲ್ಲಿ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ. ನೂರು ದಲಿತರೊಂದಿಗೆ ಚಹಾ ಸೇವಿಸಿ. ಮತ ಚಲಾಯಿಸಬೇಕಿರುವುದು ರಾಷ್ಟ್ರೀಯತೆಯ ಆಧಾರದಲ್ಲಿ. ಜಾತಿ, ಹಣ ಅಥವಾ ಧರ್ಮದ ಆಧಾರದಲ್ಲಿ ಅಲ್ಲ ಎಂಬುದನ್ನು ಅವರಿಗೆ ಮನವರಿಕೆ ಮಾಡಬೇಕು. ಮುಂಬರುವ ವಿಧಾನ ಸಭೆ ಚುನಾವಣೆಯಲ್ಲಿ ಬಿಜೆಪಿಗೆ ಮತ ಚಲಾಯಿಸುವಂತೆ ಮನವೊಲಿಸಬೇಕು ಎಂದು ಸೂಚಿಸಿದ್ದಾರೆ. ಇದನ್ನೂ ಓದಿ: ಚೊಚ್ಚಲ ಬಾರಿಗೆ ಟಿ20 ವಿಶ್ವಕಪ್ ಗೆದ್ದ ಆಸ್ಟ್ರೇಲಿಯಾ

    ಯೋಗಿ ಆದಿತ್ಯನಾಥ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಟೀಕಿಸಿದ್ದರು. ಅದರ ಬೆನ್ನಲ್ಲೇ ಸಿಂಗ್ ಈ ಹೇಳಿಕೆ ನೀಡಿದ್ದಾರೆ. 403 ಸದಸ್ಯ ಬಲದ ಉತ್ತರಪ್ರದೇಶ ವಿಧಾನ ಸಭೆಗೆ 2022ರಲ್ಲಿ ಚುನಾವಣೆ ನಡೆಯಲಿದೆ.

  • ನಾಳೆಯಿಂದ ಕರ್ನಾಟಕ ರಾಜಕಾರಣ ಕುರುಕ್ಷೇತ್ರ ಆಗುತ್ತೆ: ಬಚ್ಚೇಗೌಡ

    ನಾಳೆಯಿಂದ ಕರ್ನಾಟಕ ರಾಜಕಾರಣ ಕುರುಕ್ಷೇತ್ರ ಆಗುತ್ತೆ: ಬಚ್ಚೇಗೌಡ

    ಚಿಕ್ಕಬಳ್ಳಾಪುರ: ಕರ್ನಾಟಕ ರಾಜಕಾರಣ ನಾಳೆಯಿಂದ ಕುರುಕ್ಷೇತ್ರ ಆಗುತ್ತೆ. ಮೂರು-ನಾಲ್ಕು ದಿನದಲ್ಲಿ ಬಿಜೆಪಿ ನಾಯಕ ಯಡಿಯೂರಪ್ಪ ಸಿಎಂ ಆಗ್ತಾರೆ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿರುವ ಬಿಜೆಪಿ ಅಭ್ಯರ್ಥಿ ಬಿ.ಎನ್ ಬಚ್ಚೇಗೌಡ ಹೇಳಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಒಂದು, ಎರಡು, ಮೂರು, ನಾಲ್ಕು ಅಂತ ಎಣಿಸಿ ನೋಡಿ. ನಾಳೆಯಿಂದ ಕರ್ನಾಟಕ ರಾಜಕಾರಣ ಕುರುಕ್ಷೇತ್ರ ಆಗುತ್ತೆ. ಯಡಿಯೂರಪ್ಪ ಈ ಕುರುಕ್ಷೇತ್ರದಲ್ಲಿ ಗೆಲ್ಲುತ್ತಾರೆ. ಯಡಿಯೂರಪ್ಪ ನೇತೃತ್ವದಲ್ಲಿ ಸರ್ಕಾರ ಅಧಿಕಾರಕ್ಕೆ ಬರುತ್ತೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಮೋದಿ ಪ್ರಧಾನಿ ಆಗಬೇಕು ಎಂಬುದು ನನ್ನ ಆಸೆ ಅದು ನೆರವೇರುತ್ತಿದೆ. ಈಗ ಯಡಿಯೂರಪ್ಪ ಸಿಎಂ ಅಗಬೇಕು ಎಂಬುದೇ ನನ್ನ ಆಸೆಯಾಗಿದೆ. ಎರಡು ಮೂರು ದಿನ ಕಾದು ನೋಡಿ ಯಡಿಯೂರಪ್ಪ ಸಿಎಂ ಅಗ್ತಾರೆ ಎಂದರು. ಇದೇ ವೇಳೆ  ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಮಾಧ್ಯಮಗಳ ಎಕ್ಸಿಟ್ ಪೋಲ್ ಸಮೀಕ್ಷೆಗೆ ಬಚ್ಚೇಗೌಡರು ಪ್ರಶಂಸೆ ವ್ಯಕ್ತಪಡಿಸಿದರು.

  • ಕರ್ನಾಟಕದಲ್ಲಿ ಈ ಬಾರಿ ಇತಿಹಾಸ ಸೃಷ್ಟಿ – ಜನತೆಗೆ ಬಿಎಸ್‍ವೈ ಧನ್ಯವಾದ

    ಕರ್ನಾಟಕದಲ್ಲಿ ಈ ಬಾರಿ ಇತಿಹಾಸ ಸೃಷ್ಟಿ – ಜನತೆಗೆ ಬಿಎಸ್‍ವೈ ಧನ್ಯವಾದ

    ಬೆಂಗಳೂರು: ರಾಜ್ಯದ ಜನತೆ ಬಿಜೆಪಿಗೆ ಬೆಂಬಲ ಸೂಚಿಸಿರುವುದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರು ಹೃತ್ಪೂರ್ವಕ ಅಭಿನಂದನೆ ಸಲ್ಲಿಸಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಅವರು ಬಿಜೆಪಿಗೆ ಬೆಂಬಲ ನೀಡಿರುವ ಜನರಿಗೆ ಅಭಿನಂದನೆಗಳು. ಬಿಜೆಪಿ ರಾಜ್ಯದಲ್ಲಿ ಮುನ್ನಡೆ ಸಾಧಿಸುತ್ತಿರುವುದು ಖುಷಿಯ ವಿಚಾರ. ಜೊತೆಗೆ ಮಾಜಿ ಪ್ರಧಾನಿ ದೇವೇಗೌಡರು, ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ವೀರಪ್ಪ ಮೊಯ್ಲಿ, ಕೆ.ಎಚ್ ಮುನಿಯಪ್ಪ ಹೀನಾಯ ಸೋಲು ಅನುಭವಿಸಿರುವುದು ಇನ್ನೊಂದು ಸಂತೋಷದ ವಿಚಾರವಾಗಿದೆ. ಇದು ರಾಜ್ಯದ ಜನತೆ ಪ್ರಧಾನಿ ನರೇಂದ್ರ ಮೋದಿ ನಾಯಕತ್ವದ ಮೇಲೆ ನಂಬಿಕೆ ಇಟ್ಟಿರುವುದನ್ನು ತಿಳಿಸುತ್ತದೆ ಎಂದು ಸಂತಸ ವ್ಯಕ್ತಪಡಿಸಿದರು.

    ಮೋದಿ ವಿರುದ್ಧ ಏಕವಚನದಲ್ಲಿ, ದುರಂಹಕಾರದಲ್ಲಿ ಮಾತಾನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಗೆ ಮುಖಭಂಗ ಆಗಿದೆ. ರಾಜ್ಯ ಹಾಗೂ ದೇಶದ ಜನರ ಬಳಿ ಸಿದ್ದರಾಮಯ್ಯ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದರು. ಅಲ್ಲದೆ ಜನತೆ ಬಿಜೆಪಿಗೆ ಶೇ.54 ರಷ್ಟು ಮತ ನೀಡಿ ಇತಿಹಾಸ ಸೃಷ್ಟಿಸಿದ್ದಾರೆ. ದೇಶದ ಇತಿಹಾಸದಲ್ಲಿ ಇದು ದಾಖಲೆ. ರಾಜ್ಯದ 24 ಕ್ಷೇತ್ರಗಳನ್ನ ಬಿಜೆಪಿ ಮುನ್ನಡೆ ಸಾಧಿಸಿದೆ. ಅದರಲ್ಲೂ ಕರಾವಳಿ ಭಾಗದ ಜನರಿಗೆ ವಿಶೇಷ ಅಭಿನಂದನೆ ತಿಳಿಸುತ್ತೇನೆ. ಆಡಳಿತ ರೂಢ ಮೈತ್ರಿ ಸರ್ಕಾರದ ಭ್ರಷ್ಟಚಾರ, ವರ್ಗಾವಣೆ ದಂಧೆ, ರೈತರ ಸಾಲ ಮನ್ನಾದ ಸುಳ್ಳು ಭರವಸೆಗೆ ಈಗ ಉತ್ತರ ಸಿಕ್ಕಿದೆ ಎಂದು ಟಾಂಗ್ ನೀಡಿದರು.

    ರಾಜ್ಯದ ಎರಡು ಕ್ಷೇತ್ರದಲ್ಲಿ ಉಪ-ಚುನಾವಣೆ ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿ, ಚಿಂಚೊಳಿಯಲ್ಲಿ ಬಿಜೆಪಿ ಗೆದ್ದಿದೆ, ಆದರೆ ಕುಂದಗೋಳ ಕ್ಷೇತ್ರದಲ್ಲಿ ಕಡಿಮೆ ಅಂತರದಲ್ಲಿ ಹಿನ್ನಡೆಯಾಗಿದೆ ಎಂದರು.

    ಮಂಡ್ಯದಲ್ಲಿ ಸುಮಲತಾ ಗೆಲುವು ನಮಗೆ ಸಂತಸ ತಂದಿದೆ. ನೂರಾರು ಕೋಟಿ ಖರ್ಚು ಮಾಡಿ, ಹಣ ಬಲ ತೋರಿದ ಸಿಎಂ ಕುಮಾರಸ್ವಾಮಿ ಅವರಿಗೆ ಮಂಡ್ಯ ಜನ ಬುದ್ಧಿ ಕಲಿಸಿದ್ದಾರೆ. ಇದಕ್ಕಾಗಿ ಮಂಡ್ಯ ಜನರಿಗೆ ವಿಶೇಷ ಧನ್ಯವಾದಗಳು. 24 ಕ್ಷೇತ್ರದಲ್ಲಿ ಗೆದ್ದಷ್ಟೇ ಖುಷಿ ಸುಮಲತಾ ಗೆಲುವಿನಿಂದ ಆಗಿದೆ ಎಂದು ಸಂತೋಷವನ್ನು ಹಂಚಿಕೊಂಡರು.

    ಮೈತ್ರಿ ಸರ್ಕಾರ ಬೀಳಿಸುವ ವಿಚಾರವಾಗಿ ಮತನಾಡಿ, ಈಗ ಏನು ಹೇಳಲ್ಲ. ಈಗ ಅವರೇ ತೀರ್ಮಾನ ಮಾಡಬೇಕಿದೆ. ಯಾರ ಮೇಲೂ ಒತ್ತಡ ಹಾಕಲ್ಲ, ನಾನು ಕಾಯುತ್ತೇನೆ. ಅವರ ಆಡಳಿತಕ್ಕೆ ಈಗ ಉತ್ತರ ಸಿಕ್ಕಿದೆ. ಎಚ್. ವಿಶ್ವನಾಥ್, ರೋಷನ್ ಭೇಗ್ ಬಿಜೆಪಿ ಸೇರ್ಪಡೆ ವಿಚಾರವಾಗಿ ಅವರು ಯಾರೂ ನನ್ನ ಸಂಪರ್ಕ ಮಾಡಿಲ್ಲ. ಅದರ ಬಗ್ಗೆ ನಾನು ಏನೂ ಹೇಳಲ್ಲ. ನಾನು ವಿಶ್ವನಾಥ್ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸುದ್ದಿ ಮಾಧ್ಯಮಗಳಲ್ಲಿ ನೋಡಿದೆ. ನಾನು ಈಗ ಏನೂ ಮಾತನಾಡಲ್ಲ ಎಂದರು. ಬಳಿಕ ಮತ್ತೆ ಚುನಾವಣೆಗೆ ಹೋಗುತ್ತೀರಾ? ಎಂಬ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿ, ಸದ್ಯ ಕೇಂದ್ರ ನಾಯಕರು ಹೇಳಿದಂತೆ ಕೇಳುವೆ. ಅವರ ಅಭಿಪ್ರಾಯಕ್ಕೆ ನಾನು ಬದ್ಧ ಎಂದು ತಿಳಿಸಿದರು.

  • ಆರಂಭಿಕ ಸುತ್ತುಗಳಲ್ಲಿ ಮಂಡ್ಯದ ಮೂವರು ಸುಮಲತಾರಿಗೆ 1,210 ಮತ

    ಆರಂಭಿಕ ಸುತ್ತುಗಳಲ್ಲಿ ಮಂಡ್ಯದ ಮೂವರು ಸುಮಲತಾರಿಗೆ 1,210 ಮತ

    ಮಂಡ್ಯ: ಲೋಕಸಭಾ ಚುನಾವಣೆಯ ಮತ ಏಣಿಕೆ ಪ್ರಕ್ರಿಯೆ ಬಿರುಸಿನಿಂದ ನಡೆಯುತ್ತಿದೆ. ಈ ನಡುವೆ ಭಾರೀ ಸದ್ದು ಮಾಡುತ್ತಿರುವ ಮಂಡ್ಯ ಕ್ಷೇತ್ರದಲ್ಲಿ ನಿಖಿಲ್ ಕುಮಾರಸ್ವಾಮಿ ಹಾಗೂ ಸುಮಲತಾ ಅಂಬರೀಶ್ ಅವರನ್ನು ಹೊರತುಪಡಿಸಿ ಕಣಕ್ಕಿಳಿದಿದ್ದ ಸುಮಲತಾ ಹೆಸರಿನ ಅಭ್ಯರ್ಥಿಗಳು ಆರಂಭಿಕ ಸುತ್ತುಗಳಲ್ಲಿ ಸುಮಾರು 1,210 ಮತಗಳನ್ನು ಪಡೆದಿದ್ದಾರೆ.

    ಲೋಕಸಭಾ ಚುನಾವಣೆ ಘೋಷಣೆಯಾದ ದಿನದಿಂದಲೂ ಮಂಡ್ಯ ಕ್ಷೇತ್ರ ಭಾರೀ ಸುದ್ದಿಯಲ್ಲಿದೆ. ಇಲ್ಲಿ ಪಕ್ಷಕ್ಕಿಂತ ಹೆಚ್ಚಾಗಿ ಅಭ್ಯರ್ಥಿಗಳ ಹೆಸರಿನಲ್ಲೇ ಭಾರೀ ರಾಜಕೀಯ ನಡೆದಿತ್ತು. ಅದರಲ್ಲೂ ಸುಮಲತಾ ಅಂಬರೀಶ್ ಹೊರತುಪಡಿಸಿ ಸುಮಲತಾ ಹೆಸರಿರುವ ಇತರೇ 3 ಮಂದಿ ಅಭ್ಯರ್ಥಿಗಳು ಕೂಡ ಸಖತ್ ಸುದ್ದಿಯಾಗಿದ್ದರು. ಸದ್ಯ ಈವರೆಗೆ ನಡೆದಿರುವ ಮತ ಏಣಿಕೆಯಲ್ಲಿ 32,183 ಮತಗಳನ್ನು ನಿಖಿಲ್ ಕುಮಾರಸ್ವಾಮಿ ಗಳಿಸಿದ್ದರೆ ಸುಮಲತಾ ಅಂಬರೀಶ್ 30,311 ಮತಗಳನ್ನು ಪಡೆದಿದ್ದಾರೆ. ಅಲ್ಲದೆ 1,872 ಮತಗಳ ಅಂತರದಿಂದ ನಿಖಿಲ್ ಮುನ್ನಡೆ ಕಾಯ್ದುಕೊಂಡಿದ್ದಾರೆ. ಹಾಗೆಯೇ ಉಳಿದ ಮೂವರು ಸುಮಲತಾ ಹೆಸರಿನ ಅಭ್ಯರ್ಥಿಗಳು ಒಟ್ಟು 1,210 ಮತಗಳನ್ನು ಪಡೆದಿದ್ದಾರೆ. ಕ್ರ.ಸಂ19- ಸುಮಲತ 549, ಕ್ರ.ಸಂ21- ಎಂ.ಸುಮಲತ 478, ಕ್ರ.ಸಂ22- ಸುಮಲತಾ 183 ಮತ ಗಳಿಸಿದ್ದಾರೆ.

    ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹಾಗೂ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ನಡುವೆ ಪ್ರತಿಷ್ಠೆಯ ಕಣವಾಗಿ ಏರ್ಪಟ್ಟಿತ್ತು. ಈ ಇಬ್ಬರು ಅಭ್ಯರ್ಥಿಗಳ ನಡುವೆ ಪ್ರಚಾರದ ವೇಳೆ ಹಾಗೂ ಮತದಾನದ ವೇಳೆ ನಡೆದ ಸಣ್ಣ ಗಲಾಟೆ, ಪರ ವಿರೋಧ ಹೇಳಿಕೆಗಳಿಂದಲೇ ಮಂಡ್ಯ ಅಖಾಡ ಹೆಚ್ಚು ಸದ್ದು ಮಾಡಿತ್ತು.

  • ಮತಗಟ್ಟೆಗಳಲ್ಲಿ ಮೋದಿ ಸಿಸಿಟಿವಿ ಕ್ಯಾಮೆರಾ ಇಟ್ಟಿದ್ದಾರೆ: ಬಿಜೆಪಿ ಶಾಸಕ

    ಮತಗಟ್ಟೆಗಳಲ್ಲಿ ಮೋದಿ ಸಿಸಿಟಿವಿ ಕ್ಯಾಮೆರಾ ಇಟ್ಟಿದ್ದಾರೆ: ಬಿಜೆಪಿ ಶಾಸಕ

    – ಕಾಂಗ್ರೆಸ್‍ಗೆ ಯಾರು ಮತ ಹಾಕಿದ್ರು ಅಂತ ತಿಳಿಯುತ್ತೆ

    ಗಾಂಧಿನಗರ: ಕಾಂಗ್ರೆಸ್‍ಗೆ ಯಾರು ಮತ ಹಾಕಿದರು ಅಂತ ನೋಡಲು ಪ್ರಧಾನಿ ನರೇಂದ್ರ ಮೋದಿ ಅವರು ಮತಗಟ್ಟೆಗಳಲ್ಲಿ ಸಿಸಿಟಿವಿ ಕ್ಯಾಮೆರಾ ಇಟ್ಟಿದ್ದಾರೆ ಎಂದು ಗುಜರಾತ್‍ನ ಬಿಜೆಪಿ ಶಾಸಕ ರಮೇಶ್ ಕಟಾರ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

    ದಾಹೊದ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಸ್ವಂತ್ ಸಿನ್ಹಾ ಬಾಭೋರ್ ಅವರ ಪರ ಶಾಸಕರು ಪ್ರಚಾರ ಮಾಡುತ್ತಿದ್ದರು. ಈ ವೇಳೆ ಗ್ರಾಮವೊಂದರಲ್ಲಿ ಮಾತನಾತನಾಡಿದ ಶಾಸಕರು, ನೀವು ಮತದಾನ ಮಾಡುವಾಗ ಮತಯಂತ್ರ (ಇವಿಎಂ)ದಲ್ಲಿರುವ ಜಸ್ವಂತ್ ಸಿನ್ಹಾ ಬಾಭೋರ್ ಅವರ ಭಾವಚಿತ್ರ ಹಾಗೂ ಕಮಲದ ಚಿಹ್ನೆಯ ಪಕ್ಕದಲ್ಲೇ ಹಸಿರು ಗುಂಡಿ ಇರುತ್ತದೆ. ಅದನ್ನು ನೀವು ಒತ್ತಬೇಕು. ಸಿಸಿಟಿವಿ ಕ್ಯಾಮೆರಾಗಳು ಇರುವುದರಿಂದ ಯಾರು ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿದ್ದಾರೆ ಎನ್ನುವುದು ತಿಳಿಯುತ್ತದೆ ಎಂದು ತಿಳಿಸಿದ್ದಾರೆ.

    ನೀವು ಯಾರಿಗೆ ಮತ ಹಾಕುತ್ತೀರಿ ಎನ್ನುವುದನ್ನು ತಿಳಿಯಲು ಪ್ರಧಾನಿ ನರೇಂದ್ರ ಮೋದಿ ಅವರು ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿದ್ದಾರೆ. ಕಾಂಗ್ರೆಸ್‍ಗೆ ಮತ ಹಾಕಿದ ಮತದಾರರಿಗೆ ಉದ್ಯೋಗ ಸೇರಿದಂತೆ ಯಾವುದೇ ಸೌಕರ್ಯಗಳು ಸಿಗುವುದಿಲ್ಲ. ಆದರೆ ಬಿಜೆಪಿಗೆ ಮತದಾನ ಮಾಡಿದವರಿಗೆ ಎಲ್ಲ ರೀತಿಯ ಸೌಕರ್ಯಗಳು ಸಿಗಲಿವೆ ಎಂದು ಹೇಳಿದ್ದಾರೆ.

    ರಮೇಶ್ ಕಾತ್ರಾ ಅವರು ದಾಹೊದ್ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಫತೇಪುರ್ ಶಾಸಕರಾಗಿದ್ದಾರೆ. ಹೀಗಾಗಿ ತಮ್ಮ ಪಕ್ಷದ ಅಭ್ಯರ್ಥಿ ಜಸ್ವಂತ್ ಸಿನ್ಹಾ ಬಾಭೋರ್ ಅವರ ಪರ ಪ್ರಚಾರ ನಡೆಸಿದ್ದಾರೆ. ಸಿಸಿಟಿವಿ ಕ್ಯಾಮೆರಾ ಬಗ್ಗೆ ಶಾಸಕರು ನೀಡಿರುವ ಹೇಳಿಕೆಯ ಬಗ್ಗೆ ವಿಪಕ್ಷ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಈ ಮೊದಲು ಸುಲ್ತಾನಪುರದ ಬಿಜೆಪಿ ಅಭ್ಯರ್ಥಿಯಾಗಿರುವ, ಕೇಂದ್ರ ಸಚಿವೆ ಮನೇಕಾ ಗಾಂಧಿ, ಮುಸ್ಲಿಮರ ಮತಗಳ ಹೊರತಾಗಿ ನಾನು ಜಯ ಸಾಧಿಸುತ್ತೇನೆ. ಮುಸ್ಲಿಂ ಸಮುದಾಯದ ಮತ ಪಡೆಯದೇ ಜಯ ಸಾಧಿಸಲು ನನಗೆ ಇಷ್ಟವಿಲ್ಲ. ಗೆದ್ದ ಮೇಲೆ ಕೆಲಸ ಕೇಳಿಕೊಂಡು ಮುಸ್ಲಿಮರು ಬಂದಾಗ ನಾನು ನೂರು ಬಾರಿ ಯೋಚಿಸಿ ಉದ್ಯೋಗ ನೀಡೋದು ಬೇಡ ಎಂದು ನಿರ್ಧರಿಸಬೇಕಾಗುತ್ತದೆ. ಮತದ ಬದಲಾಗಿ ಉದ್ಯೋಗ ನೀಡೋದು ವ್ಯವಹಾರ ಎಂದು ಮುಸ್ಲಿಮರು ತಿಳಿದುಕೊಳ್ಳಬೇಕಿದೆ. ನಾವೇನು ಮಹಾತ್ಮ ಗಾಂಧೀಜಿಯ ಕುಟುಂಬಸ್ಥರು ಅಲ್ಲ. ಕೇವಲ ಕೊಡುವುದು ಗೊತ್ತಿಲ್ಲ. ನಮ್ಮ ಕೆಲಸಕ್ಕೆ ಪ್ರತಿಯಾಗಿ ನೀವು ನಮಗೆ ಮತ ನೀಡಬೇಕೆಂದು ವಿವಾದಾತ್ಮಕ ಹೇಳಿಕೆ ನೀಡಿ ಸುದ್ದಿಯಾಗಿದ್ದರು.

  • ಮತದಾನದ ಹಕ್ಕು ಚಲಾಯಿಸಿದ ವಿಶ್ವದ ಅತ್ಯಂತ ಕುಬ್ಜ ಮಹಿಳೆ

    ಮತದಾನದ ಹಕ್ಕು ಚಲಾಯಿಸಿದ ವಿಶ್ವದ ಅತ್ಯಂತ ಕುಬ್ಜ ಮಹಿಳೆ

    – ಎಲ್ಲರೂ ಮತದಾನ ಮಾಡುವಂತೆ ಜ್ಯೋತಿ ಆಮ್ಗೆ ಮನವಿ

    ಮುಂಬೈ: ವಿಶ್ವದ ಅತ್ಯಂತ ಕುಬ್ಜ ಮಹಿಳೆ ಜ್ಯೋತಿ ಆಮ್ಗೆ ಅವರು ಇಂದು ಮಹಾರಾಷ್ಟ್ರದ ನಾಗ್ಪುರದಲ್ಲಿ ಮತ ಚಲಾಯಿಸಿದ್ದು, ಎಲ್ಲರೂ ಮತದಾನ ಮಾಡುವಂತೆ ಮನವಿ ಮಾಡಿಕೊಂಡಿದ್ದಾರೆ.

    ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಪ್ರಕ್ರಿಯೆ ಇಂದು ಆರಂಭವಾಗಿದೆ. ಮಹಾರಾಷ್ಟ್ರದ ನಾಗ್ಪುರ್ ದ ಮತಗಟ್ಟೆಯಲ್ಲಿ ಜ್ಯೋತಿ ಆಮ್ಗೆ ಮತದಾನ ಮಾಡಿದರು.

    ಮತದಾನದ ಬಳಿ ಮಾತನಾಡಿದ ಜ್ಯೋತಿ ಆಮ್ಗೆ ಅವರು, ಎಲ್ಲರೂ ಮತದಾನ ಮಾಡಬೇಕು ಎಂದು ಮನವಿ ಮಾಡಿಕೊಳ್ಳುತ್ತೇನೆ. ದಯವಿಟ್ಟು ಮೊದಲು ಮತದಾನ ಮಾಡಿ, ನಂತರ ನಿಮ್ಮ ಕೆಲಸದಲ್ಲಿ ತೊಡಗಿ ಎಂದು ಮತದಾರರಲ್ಲಿ ಮನವಿ ಮಾಡಿಕೊಂಡರು.

    ಜ್ಯೋತಿ ಅವರು 25 ವರ್ಷದವರಾಗಿದ್ದು, 62.8 ಸೆಂ.ಮೀ ಎತ್ತರ ಇದ್ದಾರೆ. ನಾಗ್ಪುರ್ ದ ನಿವಾಸಿಯಾದ ಜ್ಯೋತಿ ಆಮ್ಗೆ ತಮ್ಮ ಪೋಷಕರ ಜೊತೆಗೆ ಮತಗಟ್ಟೆಗೆ ಆಗಮಿಸಿದರು. ಈ ವೇಳೆ ಅಲ್ಲಿ ಸೇರಿದ್ದ ಜನರು ಅವರನ್ನು ಸಂತೋಷದಿಂದ ಸ್ವಾಗತಿಸಿದರು. ಅಧಿಕಾರಿಗಳು ಕೂಡ ಜವಾಬ್ದಾರಿ ಮೆರೆದ ಜ್ಯೋತಿ ಅವರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    2011ರಲ್ಲಿ ಜ್ಯೋತಿ ಅವರನ್ನು ವಿಶ್ವದ ಕುಬ್ಜ ಮಹಿಳೆ ಎಂಬುದಾಗಿ ಗಿನ್ನಿಸ್ ಸಂಸ್ಥೆ ಪ್ರಕಟಿಸಿತು.