Tag: VV Puram

  • ಐಷಾರಾಮಿ ಜೀವನಕ್ಕಾಗಿ ಲಾರಿ ಕಳ್ಳತನ – ಆರೋಪಿ ಅರೆಸ್ಟ್

    ಐಷಾರಾಮಿ ಜೀವನಕ್ಕಾಗಿ ಲಾರಿ ಕಳ್ಳತನ – ಆರೋಪಿ ಅರೆಸ್ಟ್

    ಬೆಂಗಳೂರು: ಐಷಾರಾಮಿ ಜೀವನಕ್ಕಾಗಿ ಲಾರಿಗಳನ್ನು (Lorry) ಕಳ್ಳತನ ಮಾಡಿ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ವಿವಿ ಪುರಂ (VV Puram) ಪೊಲೀಸರು (Police) ಬಂಧಿಸಿದ್ದಾರೆ. ಬಂಧಿತನಿಂದ 1.5 ಕೋಟಿ ರೂ. ಮೌಲ್ಯದ ಮೂರು ಲಾರಿಗಳನ್ನು ವಶಪಡಿಸಿಕೊಳ್ಳಲಾಗಿದೆ.

    ಬಂಧಿತ ಆರೋಪಿಯನ್ನು ತಮಿಳುನಾಡು ಮೂಲದ ಮುತ್ತುರಾಜ್ ಎಂದು ಗುರುತಿಸಲಾಗಿದೆ. ಆರೋಪಿ ಕದ್ದ ಲಾರಿಗಳನ್ನು ನಕಲಿ ದಾಖಲೆ ಸೃಷ್ಟಿಸಿ ಮಾರಾಟ ಮಾಡುತ್ತಿದ್ದ. ಅಲ್ಲದೇ ಕದ್ದ ಲಾರಿಗಳನ್ನು ಸ್ನೇಹಿತರ ಮೂಲಕ ಮಾರಾಟ ಮಾಡಿಸುತ್ತಿದ್ದ. ಓರ್ವ ಸ್ನೇಹಿತ ಇಂಜಿನ್ ಮತ್ತು ಚೆಸ್ಸಿ ನಂಬರ್ ಟ್ಯಾಂಪರಿಂಗ್ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಫ್ರಾನ್ಸ್, ಯುಎಇಗೆ ಪ್ರಧಾನಿ ಮೂರು ದಿನಗಳ ಪ್ರವಾಸ

    ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದು ಸಾವಿರಕ್ಕೂ ಅಧಿಕ ಸಿಸಿಟಿವಿಗಳನ್ನು ಪರಿಶೀಲನೆ ನಡೆಸಲಾಗಿದೆ. ಉಳಿದ ಇಬ್ಬರು ಆರೋಪಿಗಳ ಪತ್ತೆಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಶೀಘ್ರದಲ್ಲೇ ಉಳಿದ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

    ಈ ಸಂಬಂಧ ವಿವಿ ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ದೇಶವ್ಯಾಪಿ ಮುಂಗಾರು ಕುಂಠಿತ – ರಾಜ್ಯದ 25 ಜಿಲ್ಲೆಗಳಲ್ಲಿ ಮಳೆ ಕೊರತೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವಿವಿ ಪುರಂನ ತಿಂಡಿಗಳನ್ನು ಸವಿದು ಬಾಯ್ತುಂಬ ಹೊಗಳಿದ ಕೇಂದ್ರ ಸಚಿವ ಜೈಶಂಕರ್

    ವಿವಿ ಪುರಂನ ತಿಂಡಿಗಳನ್ನು ಸವಿದು ಬಾಯ್ತುಂಬ ಹೊಗಳಿದ ಕೇಂದ್ರ ಸಚಿವ ಜೈಶಂಕರ್

    ಬೆಂಗಳೂರು: ರಾಜ್ಯಕ್ಕೆ ಆಗಮಿಸಿರುವ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಜೈಶಂಕರ್ ಶುಕ್ರವಾರ ಬೆಂಗಳೂರಿನ ವಿವಿ ಪುರಂಗೆ ಭೇಟಿ ನೀಡಿದ್ದು, ಸ್ಥಳೀಯ ಬೇಕರಿ ಹಾಗೂ ಫುಡ್ ಸ್ಟ್ರೀಟ್‌ನಲ್ಲಿರುವ ಅಂಗಡಿಗಳಿಗೆ ಭೇಟಿ ನೀಡಿ ತಿಂಡಿಗಳನ್ನು ಸವಿದಿದ್ದಾರೆ. ಜೈಶಂಕರ್ ಅವರಿಗೆ ಸಚಿವ ಅಶ್ವಥ್ ನಾರಾಯಣ್ ಅವರು ಸಾಥ್ ನೀಡಿದ್ದಾರೆ.

    ಫುಡ್ ಸ್ಟ್ರೀಟ್‌ನಲ್ಲಿ ವಿವಿಧ ತಿಂಡಿಗಳನ್ನು ಸವಿದು ಗ್ರಾಹಕರು ಹಾಗೂ ಅಂಗಡಿ ಮಾಲೀಕರೊಂದಿಗೆ ಜೈಶಂಕರ್ ಮಾತುಕತೆಯನ್ನೂ ನಡೆಸಿದ್ದಾರೆ. ಇದು ನನಗೆ ಒಳ್ಳೆಯ ಅನುಭವವನ್ನು ತಂದು ಕೊಟ್ಟಿದೆ. ಈ ಭಾಗದ ಆಹಾರ ತುಂಬಾ ಚೆನ್ನಾಗಿತ್ತು. ದೇಶದ ಪ್ರಧಾನಿ ಪ್ರವಾಸೋದ್ಯಮವನ್ನು ಬೆಂಬಲಿಸಲು ಹೇಳಿದ್ದಾರೆ. ಪ್ರವಾಸೋದ್ಯಮ ಉದ್ಯೋಗ ಸೃಷ್ಟಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ನಾನು ಮತ್ತೊಮ್ಮೆ ಈ ಭಾಗಕ್ಕೆ ಬರಲು ಇಷ್ಟಪಡುತ್ತೇನೆ. ಇಲ್ಲಿನ ಆಹಾರ ತುಂಬಾ ಚೆನ್ನಾಗಿತ್ತು ಎಂದು ಕನ್ನಡದಲ್ಲಿಯೇ ನುಡಿದಿದ್ದಾರೆ. ಇದನ್ನೂ ಓದಿ: ಮೋದಿ ಚೀನಾದೊಂದಿಗೆ `ರಾಷ್ಟ್ರಧ್ವಜ ಒಪ್ಪಂದ’ ಮಾಡ್ಕೊಂಡಿದ್ದಾರೆ – ರಾಹುಲ್ ಗಾಂಧಿ ಆರೋಪ

    ಬಳಿಕ ಮಾತನಾಡಿದ ಜೈಶಂಕರ್, ಮನೆ ಮನೆ ಮೇಲೆ ತ್ರಿವರ್ಣ ಧ್ವಜ ಹಾರಬೇಕೆಂದು ಇಡೀ ದೇಶ ಹೇಳುತ್ತಿದೆ. ನಾನಿರುವ ಜಾಗದಿಂದಲೇ ನಾಳೆ ತ್ರಿವರ್ಣ ಧ್ವಜ ಹಾರಿಸುತ್ತೇವೆ. ನಾಳೆಯಿಂದ 3 ದಿನಗಳ ಕಾಲ ದೇಶದ ಎಲ್ಲಾ ಭಾಗಗಳಲ್ಲೂ ತ್ರಿವರ್ಣ ಧ್ವಜ ಹಾರಬೇಕು. ಪ್ರತಿ ಮನೆ ಮೇಲೂ, ಪ್ರತಿಯೊಬ್ಬರ ಮನದಲ್ಲೂ ತ್ರಿವರ್ಣ ಧ್ವಜ ಹಾರಬೇಕು ಎಂದರು.

    ಮನೆ ಮನೆ ಮೇಲೆ ತ್ರಿವರ್ಣ ಧ್ವಜ ಇದು ರಾಷ್ಟ್ರೀಯತೆಯ ಸಂಕೇತ. ಮೋದಿ ಅವರ ನೇತೃತ್ವದಲ್ಲಿ ಈ ಅಭಿಯಾನ ನಡೆಯಲಿದೆ. ಅವರ ಅಭಿಯಾನದಿಂದ ದೇಶವೇ ಒಂದಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಆಗಸ್ಟ್ 15ರ ನಂತ್ರ ಸರ್ಕಾರ, ಪಕ್ಷದಲ್ಲಿ ಬದಲಾವಣೆ – ಸಂಪುಟ ಸಭೆಯಲ್ಲಿ ಬೊಮ್ಮಾಯಿ ಸುಳಿವು

    Live Tv
    [brid partner=56869869 player=32851 video=960834 autoplay=true]

  • ಸತತ ನಾಲ್ಕನೇ ಪ್ರಯತ್ನದಲ್ಲಿ ಆತ್ಮಹತ್ಯೆ ಮಾಡಿಕೊಂಡ ಯುವಕ

    ಸತತ ನಾಲ್ಕನೇ ಪ್ರಯತ್ನದಲ್ಲಿ ಆತ್ಮಹತ್ಯೆ ಮಾಡಿಕೊಂಡ ಯುವಕ

    ಬೆಂಗಳೂರು: ವಿವಿ ಪುರಂ ಚರ್ಚ್ ವೊಂದರ ಮೇಲೆ ಯುವಕನೊಬ್ಬ ವಿಚಿತ್ರವಾಗಿ ಸಾವನ್ನಪ್ಪಿದ್ದಾನೆ. ಸಾಯಲು ಸತತ 4 ಗಂಟೆ ಕಾಲ 3 ಬಾರಿ ಭಿನ್ನ ವಿಭಿನ್ನ ರೀತಿಯಲ್ಲಿ ಯತ್ನಿಸಿ, 4ನೇ ಬಾರಿಗೆ ಯಮನ ಪಾದ ಸೇರಿದ್ದಾನೆ.

    ಮೊದಲು ನೇಣು ಬಿಗಿದುಕೊಳ್ಳಲು ಹೋಗಿ ನೆಲದ ಮೇಲೆ ಬಿದ್ದು ಅಲ್ಲೇ ಇದ್ದು ಗಾಜಿನ ಪೀಸುಗಳಿಂದ ಗಾಯಗೊಂಡಿದ್ದಾನೆ. ನಂತರ ಗಾಜಿನ ಪೀಸಿನಿಂದ ಹೊಟ್ಟೆಗೆ ಇರಿದುಕೊಂಡಿದ್ದಾನೆ. ಬಳಿಕ ರಕ್ತಸ್ರಾವದ ನಡುವೆ 2 ಗಂಟೆ ಕಾಲ ಚರ್ಚ್ ಮೇಲೆ ಓಡಾಡಿದ ಯುವಕ 3ನೇ ಬಾರಿಗೆ ಮೊನಚಾದ ಟೈಲ್ಸ್ ನಿಂದ ಇರಿದುಕೊಂಡು ಅದೇ ರಕ್ತದಲ್ಲಿ ಮಲೆಯಾಳಂ ಭಾಷೆಯಲ್ಲಿ ಹುಡುಗಿಯೊಬ್ಬಳ ಹೆಸರು ಬರೆದಿದ್ದಾನೆ.

    ಆಗಲೂ ಸಾವನ್ನಪ್ಪದಿದ್ದಾಗ ತನ್ನ ಶರ್ಟ್ ನಿಂದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಸಾಯೋದಕ್ಕೆ ಚರ್ಚ್ ಮೇಲೇಕೆ ಬಂದ..? ಯಾರಾದರೂ ಕೊಲೆ ಮಾಡಿ ಮಾಡಿದ್ರಾ..? ಹುಡುಗಿ ವಿಚಾರಕ್ಕೋಸ್ಕರ ಹೀಗೆ ಮಾಡಿಕೊಂಡನಾ..? ಕೊಲೆಯೋ ಆತ್ಮಹತ್ಯೆಯೋ..? ಅನ್ನೋ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದು ಈ ಸಂಬಂಧ ವಿವಿ ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv