Tag: Vyomika Singh

  • ಆಸ್ಪತ್ರೆ, ಮೂಲಸೌಕರ್ಯ ಗುರಿಯಾಗಿಸಿ ಪಾಕ್‌ ಮಿಸೈಲ್‌ ದಾಳಿ, ತಕ್ಕ ಉತ್ತರ ಕೊಟ್ಟಿದ್ದೇವೆ: ವ್ಯೋಮಿಕಾ ಸಿಂಗ್

    ಆಸ್ಪತ್ರೆ, ಮೂಲಸೌಕರ್ಯ ಗುರಿಯಾಗಿಸಿ ಪಾಕ್‌ ಮಿಸೈಲ್‌ ದಾಳಿ, ತಕ್ಕ ಉತ್ತರ ಕೊಟ್ಟಿದ್ದೇವೆ: ವ್ಯೋಮಿಕಾ ಸಿಂಗ್

    ನವದೆಹಲಿ: ಪಾಪಿ ಪಾಕಿಸ್ತಾನ (Pakistan) ಗಡಿ ಮೀರಿ ಭಾರತದ ಮೇಲೆ ದಾಳಿ ಮಾಡುತ್ತಿದೆ. ಶೆಲ್ ದಾಳಿ ನಡೆಸಿ ಅಮಾಯಕರನ್ನ ಗುರಿ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಗಡಿ ಜಿಲ್ಲೆಗಳಾದ ಜಮ್ಮು ಮತ್ತು ಕಾಶ್ಮೀರ, ಪಂಜಾಬ್, ರಾಜಸ್ಥಾನ, ಹರಿಯಾಣ ಹಾಗೂ ಹಿಮಾಚಲ ಪ್ರದೇಶದಲ್ಲಿ ತುರ್ತು ಪರಿಸ್ಥಿತಿ ಹೇರಲಾಗಿದೆ. ಜಮ್ಮು-ಕಾಶ್ಮೀರದಲ್ಲಿ (Jammu And Kashmir) ಬೆಳಗ್ಗಿನವರೆಗೂ ಬ್ಲಾಕ್‌ಔಟ್ ಘೋಷಿಸಲಾಗಿತ್ತು.

    ಮೂಲಸೌಕರ್ಯಗಳಿಗೆ ಹಾನಿ:
    ಇಂದು ರಕ್ಷಣಾ ಸಚಿವಾಲಯ ನಡೆಸಿದ ಮಹತ್ವದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಂಗ್‌ ಕಮಾಂಡರ್‌ ವ್ಯೂಮಿಕಾ ಸಿಂಗ್‌ (Vyomika Singh), ಪಾಕಿಸ್ತಾನವು ಜಮ್ಮು ಮತ್ತು ಕಾಶ್ಮೀರದ ಶ್ರೀನಗರ, ಅವರಂತಿಪುರ ಹಾಗೂ ಉಧಂಪುರದಲ್ಲಿರುವ ಆಸ್ಪತ್ರೆ, ಶಾಲೆ ಇತರ ಮೂಲ ಸೌಕರ್ಯಗಳ ಮೇಲೆ ದಾಳಿ ಮಾಡಿದೆ ಎಂದು ತಿಳಿಸಿದರು.

    ಅಲ್ಲದೇ ದಾಳಿ ನಡೆಸಲು ತನ್ನ ಸೈನ್ಯವನ್ನು ಮುಂದಕ್ಕೆ ಸಾಗಿಸುತ್ತಿದೆ, ಇದು ಪರಿಸ್ಥಿತಿಯನ್ನ ಮತ್ತಷ್ಟು ಉಲ್ಬಣಗೊಳಿಸುವ ಆಕ್ರಮಣಕಾರಿ ಉದ್ದೇಶವನ್ನ ಸೂಚಿಸುತ್ತದೆ. ಭಾರತೀಯ ಸಶಸ್ತ್ರ ಪಡೆಗಳು ಹೆಚ್ಚಿನ ಕಾರ್ಯಾಚರಣೆಯ ಸನ್ನದ್ಧತೆಯಲ್ಲಿವೆ. ಎಲ್ಲಾ ಪ್ರತಿಕೂಲ ಕ್ರಮಗಳನ್ನು ಪರಿಣಾಮಕಾರಿಯಾಗಿ ಎದುರಿಸಲಾಗಿದೆ ಮತ್ತು ದಿಟ್ಟ ಉತ್ತರ ಸಹ ನೀಡಲಾಗಿದೆ. ಪಾಕಿಸ್ತಾನ ಮತ್ತೂ ದಾಳಿಗೆ ಪ್ರೈತ್ನಿಸಿದ್ರೆ ನಮ್ಮ ಸೇನೆ ತಕ್ಕ ಉತ್ತರ ನೀಡಲಿದೆ ಎಂದು ಎಚ್ಚರಿಸಿದರು.

    ಪಾಕ್‌ ವಾಯುನೆಲೆಗಳು ಛಿದ್ರ:
    ಇನ್ನೂ ಭಾರತ ನಡೆಸಿದ ವಾಯುದಾಳಿಯಲ್ಲಿ ಸಿಯಾಲ್‌ಕೋಟ್, ಪಸ್ರೂರ್ ರಾಡಾರ್ ಸೈಟ್, ರಹೀಮ್ ಯಾರ್ ಖಾನ್, ಮುರಿದ್‌, ರಫೀಕ್, ಚುನಿಯನ್, ಚಕ್ಲಾಲಾ, ಸುಕ್ಕೂರ್ ಮೊದಲಾದ ಪಾಕಿಸ್ತಾನ ವಾಯುನೆಲೆಗಳನ್ನು ಧ್ವಂಸಗೊಳಿಸಿದೆ. ಜೊತೆಗೆ ಭಾರತದ ಮೇಲೆ ಪದೇ ಪದೇ ದಾಳಿಗೆ ಯತ್ನಿಸುತ್ತಿದ್ದ ಡ್ರೋನ್‌ ಲಾಂಚ್‌ಪ್ಯಾಡನ್ನೇ ಉಡೀಸ್‌ ಮಾಡಿದೆ ಎಂದು ಫೋಟೋ ಮತ್ತು ವಿಡಿಯೋ ಸಮೇತ ವಿವರಿಸಿದರು.

    ಅಮೃತಸರದಲ್ಲಿ ಪಾಕ್‌ ಡ್ರೋನ್‌ ಉಡೀಸ್‌:
    ಭಾರತೀಯ ಸೇನೆಯು ಪಾಕಿಸ್ತಾನದ ಡ್ರೋನ್‌ಗಳನ್ನು ಅಮೃತಸರದ ಖಾಸಾ ಕಂಟೋನ್ಮೆಂಟ್‌ನಲ್ಲಿ ಹೊಡೆದುರುಳಿಸಿದೆ. ಭಾರತದ ಸಾರ್ವಭೌಮತ್ವವನ್ನು ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದೆ. ಪಾಕಿಸ್ತಾನವು ಡ್ರೋನ್ ದಾಳಿಗಳ ಮೂಲಕ ಗಡಿಗಳಲ್ಲಿ ತೊಂದರೆ ಸೃಷ್ಟಿಸುತ್ತಿದೆ ಎಂದು ಭಾರತೀಯ ಸೇನೆ ಹೇಳಿದೆ. ಶನಿವಾರ ಮುಂಜಾನೆ 5 ಗಂಟೆಗೆ ಖಾಸಾ ಕಂಟೋನ್ಮೆಂಟ್ ಬಳಿ ಹಾರುತ್ತಿದ್ದ ಹಲವು ಡ್ರೋನ್‌ಗಳನ್ನು ಹೊಡೆದುರುಳಿಸಲಾಗಿದೆ.

    ಜೆ&ಕೆ ಗುರಿಯಾಗಿಸಿ ಡ್ರೋನ್ ದಾಳಿ
    ಜಮ್ಮು ಮತ್ತು ಕಾಶ್ಮೀರವನ್ನು ಗುರಿಯಾಗಿಸಿ ಪಾಕಿಸ್ತಾನ ಶನಿವಾರವೂ ಹಲವಾರು ಡ್ರೋನ್ ದಾಳಿಗಳನ್ನು ನಡೆಸಿದೆ. ಶನಿವಾರ ಬೆಳಗಿನ ಜಾವ ಪಾಕಿಸ್ತಾನವು ಜಮ್ಮು ವಾಯುನೆಲೆ ಮತ್ತು ಉಧಂಪುರ ಗುರಿಯಾಗಿಸಿ ಕ್ಷಿಪಣಿ ದಾಳಿ ನಡೆಸಿದೆ, ಅಲ್ಲದೇ ಜಮ್ಮುವಿನ ಪ್ರಸಿದ್ಧ ಶಂಭು ದೇವಾಲಯದ ಮೇಲೂ ಕ್ಷಿಪಣಿ ದಾಳಿಗೆ ಪಾಕ್‌ ಯತ್ನಿಸಿದೆ. ಆದ್ರೆ ಭಾರತ ಈ ದಾಳಿಯನ್ನು ವಿಫಲಗೊಳಿಸಿದೆ. ಉಧಂಪುರದಲ್ಲಿ ಪಾಕಿಸ್ತಾನದ ಕ್ಷಿಪಣಿ ಬಿದ್ದಿದೆ. ಅದರ ಅವಶೇಷಗಳನ್ನು ಹೊರತೆಗೆಯಲಾಗಿದೆ.

  • ಸಿಂಧೂರ ಅಳಿಸಿದವರಿಗೆ ನಾರಿ ಶಕ್ತಿಯಿಂದಲೇ ಭಾರತ ಉತ್ತರ – ಕರ್ನಲ್ ಸೋಫಿಯಾ, ವಿಂಗ್ ಕಮಾಂಡರ್ ವ್ಯೋಮಿಕಾ ಬಗ್ಗೆ ಗೊತ್ತಾ?

    ಸಿಂಧೂರ ಅಳಿಸಿದವರಿಗೆ ನಾರಿ ಶಕ್ತಿಯಿಂದಲೇ ಭಾರತ ಉತ್ತರ – ಕರ್ನಲ್ ಸೋಫಿಯಾ, ವಿಂಗ್ ಕಮಾಂಡರ್ ವ್ಯೋಮಿಕಾ ಬಗ್ಗೆ ಗೊತ್ತಾ?

    ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಹಿಂದೂಗಳ ನರಮೇಧಕ್ಕೆ ಭಾರತ ಪ್ರತೀಕಾರ ತೀರಿಸಿಕೊಂಡಿದೆ. ಇಂದು ಸೂರ್ಯೋದಯಕ್ಕೂ ಮುನ್ನವೇ ಪಾಕ್‌ನ ಉಗ್ರ ತಾಣಗಳನ್ನು ಭಾರತೀಯ ವಾಯುಪಡೆ ಧ್ವಂಸ ಮಾಡಿದೆ. ಘಟನೆ ಬಳಿಕ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಜೊತೆ ಸಶಸ್ತ್ರ ಪಡೆಗಳ ಇಬ್ಬರು ಹಿರಿಯ ಮಹಿಳಾ ಅಧಿಕಾರಿಗಳಾದ ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ (Vyomika Singh) ಮತ್ತು ಕರ್ನಲ್ ಸೋಫಿಯಾ ಖುರೇಷಿ (Sophia Qureshi) ಅವರು ಆಪರೇಷನ್‌ ಸಿಂಧೂರದ ಬಗ್ಗೆ ಮಾಹಿತಿ ನೀಡಿದ್ದು, ಪಾಕಿಸ್ತಾನದ ಸುಳ್ಳಿನ ಮುಖವಾಡವನ್ನು ಕಳಚಿದ್ದಾರೆ.

    ಮಹಿಳಾ ಅಧಿಕಾರಿಗಳಿಂದಲೇ ಸುದ್ದಿಗೋಷ್ಠಿ ನಡೆಸಿದ್ದು ಏಕೆ?
    ಭಾರತ ವಿದೇಶಾಂಗ ಸಚಿವಾಲಯ ನಡೆಸಿದ ಸುದ್ದಿಗೋಷ್ಠಿಯಲ್ಲಿ, ಆಪರೇಷನ್‌ ಸಿಂಧೂರದ (Operation Sindoor) ಕುರಿತು ಮಹಿಳಾ ಅಧಿಕಾರಿಗಳಿಂದಲೇ ಮಾಹಿತಿ ಕೊಡಿಸಲಾಯಿತು. ಏಕೆಂದರೆ ಪಹಲ್ಗಾಮ್‌ ದಾಳಿಯಲ್ಲಿ 26 ಮಹಿಳೆಯರ ಸಿಂಧೂರ ಅಳಿಸಲಾಗಿತ್ತು, ಇದಕ್ಕೆ ಪ್ರತ್ಯುತ್ತರ ನೀಡಿದ ಭಾರತ ಮಹಿಳಾ ಅಧಿಕಾರಿಗಳಿಂದಲೇ ದಾಳಿಯ ವಿವರ ಕೊಡಿಸಿದೆ.

    ಇನ್ನೂ ಇಡೀ ದೇಶವೇ ಕೊಂಡಾಡುತ್ತಿರುವ ಈ ಇಬ್ಬರು ಮಹಿಳಾ ಅಧಿಕಾರಿಗಳ ಬಗ್ಗೆ ತಿಳಿಯುವ ಕುತೂಹಲ ನಿಮಗಿದ್ದರೆ ಮುಂದೆ ಓದಿ…

    ವಿಂಗ್‌ ಕಮಾಂಡರ್‌ ವ್ಯೂಮಿಕಾ ಸಿಂಗ್‌
    2004ರ ಡಿ.18ರಲ್ಲಿ ಭಾರತೀಯ ವಾಯುಪಡೆಗೆ (IAF) ನಿಯೋಜನೆಗೊಂಡ ವ್ಯೂಮಿಕಾ ಸಿಂಗ್‌ ಅವರು ಪ್ರಸ್ತುತ ಅತ್ಯುತ್ತಮ ವಿಂಗ್‌ ಕಮಾಂಡರ್‌ಗಳಲ್ಲಿ ಒಬ್ಬರಾಗಿದ್ದಾರೆ. ಚೀತಾ, ಚೇತಕ್‌ನಂತಹ ಯುದ್ಧ ಹೆಲಿಕಾಪ್ಟರ್‌ಗಳನ್ನು ಹಾರಿಸುವಲ್ಲಿ ಪರಿಣತಿ ಹೊಂದಿದ್ದಾರೆ. ವಾಯುಪಡೆಗೆ ನಿಯೋಜನೆಗೊಂಡ ಆರಂಭದಲ್ಲಿ ಹೆಲಿಕಾಪ್ಟರ್‌ ಪೈಲಟ್‌ ಆಗಿದ್ದರು, ಸತತ ಕಠಿಣ ಪರಿಶ್ರಮದಿಂದ 13 ವರ್ಷಗಳ ಬಳಿಕ ಅಂದ್ರೆ 2017 ಡಿ.18ರಲ್ಲಿ ಇವರಿಗೆ ವಿಂಗ್‌ ಕಮಾಂಡರ್‌ ಹುದ್ದೆ ನೀಡಲಾಯಿತು. 2021ರಲ್ಲಿ ವ್ಯೋಮಿಕಾ ಸಿಂಗ್‌ ಮಣಿರಾಂಗ್‌ ಪರ್ವತ ಏರಿದ ವಾಯುಪಡೆಯ ಮಹಿಳಾ ವಿಭಾಗದ ಭಾಗವಾಗಿದ್ದರು. ಇದು ಐತಿಹಾಸಿಕ ಸಾಧನೆಯೂ ಆಗಿತ್ತು.

    6ನೇ ತರಗತಿಯಲ್ಲಿ ಕಂಡ ಕನಸು
    ವಿಂಗ್‌ ಕಮಾಂಡರ್‌ ವ್ಯೂಮಿಕಾ ಸಿಂಗ್‌ ಸಾವಿರಾರು ಗಂಟೆಗಳ ಹಾರಾಟದ ಅನುಭವ ಹೊಂದಿದ್ದಾರೆ. ಆದ್ರೆ ಇಂದಿನ ಸಾಧನೆ ಸಾಮಾನ್ಯವಾದುದ್ದಲ್ಲ, ಇದು 6ನೇ ತರಗತಿಯಲ್ಲೇ ಕಂಡ ಕನಸು, ಈ ಬಗ್ಗೆ ಹಿಂದೊಮ್ಮೆ ವ್ಯೂಮಿಕಾ ಅವರೇ ಹೇಳಿಕೊಂಡಿದ್ದರು. 6ನೇ ತರಗತಿಯಲ್ಲಿದ್ದಾಗ ನನ್ನ ಹೆಸರಿನ ಬಗ್ಗೆ ಚರ್ಚೆ ನಡೆಯುತ್ತಿತ್ತು. ನಾನು ಅರ್ಥ ಕೇಳಿದಾಗ ವ್ಯೂಮಿಕಾ ಅಂದ್ರೆ ಆಕಾಶವನ್ನ ತನ್ನ ಮುಷ್ಟಿಯಲ್ಲಿ ಹಿಡಿದಿರುವವರು ಎಂದರ್ಥ ಅಂತ ಹೇಳಿದ್ದರು, ಈಗ ಆಕಾಶವೇ ನನ್ನದಾಗಿದೆ ಎಂದಿದ್ದರು ವ್ಯೂಮಿಕಾ.

    ಕರ್ನಲ್ ಸೋಫಿಯಾ ಖುರೇಷಿ ಬಗ್ಗೆ ಗೊತ್ತಾ?
    ಇನ್ನೂ ʻಆಪರೇಷನ್‌ ಸಿಂಧೂರʼದ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದ ಕರ್ನಲ್ ಸೋಫಿಯಾ ಖುರೇಷಿ (Colonel Sophia Qureshi) ಪ್ರಸ್ತುತ ಭಾರತೀಯ ಸೇನೆಯ ಸಿಗ್ನಲ್ಸ್ ದಳದ ಅಧಿಕಾರಿಯಾಗಿದ್ದಾರೆ. 2016 ರಲ್ಲಿ ಬಹುರಾಷ್ಟ್ರೀಯ ಮಿಲಿಟರಿ ವ್ಯಾಯಾಮದಲ್ಲಿ ಭಾರತೀಯ ಸೇನಾ ತುಕಡಿಯನ್ನು ಮುನ್ನಡೆಸಿದ ಮೊದಲ ಮಹಿಳಾ ಅಧಿಕಾರಿಯಾಗಿ ಇತಿಹಾಸ ನಿರ್ಮಿಸಿದ್ದರು. ಆ ಸಮಯದಲ್ಲಿ ಭಾರತ ಆಯೋಜಿಸಿದ್ದ ಅತಿದೊಡ್ಡ ವಿದೇಶಿ ಮಿಲಿಟರಿ ಕವಾಯತಿನಲ್ಲಿ ಅವರು ಭಾರತದ ತಂಡವನ್ನು ಮುನ್ನಡೆಸಿದ್ದರಲ್ಲದೇ ಪಾಲ್ಗೊಂಡಿದ್ದ 18 ರಾಷ್ಟ್ರಗಳ ಪೈಕಿ ಏಕೈಕ ಮಹಿಳಾ ಕಮಾಂಡರ್‌ ಆಗಿದ್ದರು.

    ಗುಜರಾತ್‌ ಮೂಲದ ಕರ್ನಲ್‌ ಸೋಫಿಯಾ ಖುರೇಷಿ (35 ವರ್ಷ) ಮೂಲತಃ ಮಿಲಿಟರಿ ಕುಟುಂಬಕ್ಕೆ ಸೇರಿದವರು. ಜೀವರಸಾಯನಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 1999 ರಲ್ಲಿ ಚೆನ್ನೈನ ಅಧಿಕಾರಿಗಳ ತರಬೇತಿ ಅಕಾಡೆಮಿಯಿಂದ ಲೆಫ್ಟಿನೆಂಟ್ ಆಗಿ ನೇಮಕಗೊಂಡರು. ಖುರೇಷಿ 2006 ರಲ್ಲಿ ಕಾಂಗೋದಲ್ಲಿ ನಡೆದ ವಿಶ್ವಸಂಸ್ಥೆಯ ಶಾಂತಿಪಾಲನಾ ಕಾರ್ಯಾಚರಣೆಯಲ್ಲಿಯೂ ಸೇವೆ ಸಲ್ಲಿಸಿದ್ದಾರೆ.