Tag: wall collapse

  • ಬಾಗಲಕೋಟೆಯಲ್ಲಿ ನಿರಂತರ ಮಳೆ – ಮನೆಯ ಮೇಲ್ಛಾವಣಿ, ಗೋಡೆ ಕುಸಿದು ಬಾಲಕ ಸಾವು

    ಬಾಗಲಕೋಟೆಯಲ್ಲಿ ನಿರಂತರ ಮಳೆ – ಮನೆಯ ಮೇಲ್ಛಾವಣಿ, ಗೋಡೆ ಕುಸಿದು ಬಾಲಕ ಸಾವು

    ಬಾಗಲಕೋಟೆ: ಶುಕ್ರವಾರ ರಾತ್ರಿ ಸುರಿದ ನಿರಂತರ ಮಳೆಗೆ (Rain) ಮನೆಯ ತಗಡಿನ ಮೇಲ್ಛಾವಣಿ ಹಾಗೂ ಗೋಡೆ ಕುಸಿದು (Wall Collapse) ಬಾಲಕ ಸಾವನ್ನಪ್ಪಿರುವ ಘಟನೆ ಬಾಗಲಕೋಟೆ (Bagalkote) ಜಿಲ್ಲೆ ರಬಕವಿಬನಹಟ್ಟಿ ತಾಲೂಕಿನ ಮಹಾಲಿಂಗಪುರ (Mahalingapura) ಪಟ್ಟಣದಲ್ಲಿ ನಡೆದಿದೆ.

    ನಾಗಪ್ಪ ಲಾತೂರ್ ಮಗ ದರ್ಶನ್ ಲಾತೂರ್ (11) ಮೃತ ಬಾಲಕ. ಘಟನೆಯಲ್ಲಿ ಇನ್ನೊಬ್ಬ ಬಾಲಕ ಶ್ರೀಶೈಲ ಗಾಯಗೊಂಡಿದ್ದು, ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಗಿನ ಜಾವ 5 ಗಂಟೆಯ ಸುಮಾರಿಗೆ ಅವಘಡ ಸಂಭವಿಸಿದೆ. ಇದನ್ನೂ ಓದಿ: ಕಲಬುರಗಿಯಲ್ಲಿ ನಿರಂತರ ಮಳೆ – ಶಾಲೆಗಳಿಗೆ ಇಂದು, ನಾಳೆ ರಜೆ ಘೋಷಣೆ

    ಮನೆಯಲ್ಲಿ ಕೋಣೆಯೊಂದರಲ್ಲಿ ಮಕ್ಕಳು ತಾಯಿಯೊಂದಿಗೆ ಮಲಗಿದ್ದರು. ಬೆಳಗ್ಗೆ ತಾಯಿ ಎದ್ದು ಬೇರೆ ಕೊಠಡಿಗೆ ಬರುತ್ತಲೇ ಮನೆಯ ಗೋಡೆ ಕುಸಿದು ಬಿದ್ದಿದೆ. ಸ್ಥಳಕ್ಕೆ ಕಂದಾಯ ಇಲಾಖೆ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ರೌದ್ರರೂಪ ತಾಳಿದ ಭೀಮಾ ನದಿ – ಪ್ರವಾಹದಲ್ಲಿ ಸಿಲುಕಿದ್ದ 8 ಜನರ ರಕ್ಷಣೆ

  • Kalaburagi | ಮನೆ ಗೋಡೆ ಕುಸಿದು ಬಾಲಕಿ ಸಾವು – ನಾಲ್ಕು ಮಕ್ಕಳಿಗೆ ಗಾಯ

    Kalaburagi | ಮನೆ ಗೋಡೆ ಕುಸಿದು ಬಾಲಕಿ ಸಾವು – ನಾಲ್ಕು ಮಕ್ಕಳಿಗೆ ಗಾಯ

    ಕಲಬುರಗಿ: ಸತತ ಮಳೆಗೆ ಗೋಡೆ ಕುಸಿದು (Wall Collapse) ಬಾಲಕಿ ಸಾವನಪ್ಪಿ ನಾಲ್ವರು ಮಕ್ಕಳಿಗೆ ಗಂಭೀರ ಗಾಯವಾಗಿರುವ ಘಟನೆ ಕಲಬುರಗಿ (Kalaburagi) ಜಿಲ್ಲೆಯ ಯಡ್ರಾಮಿ ಪಟ್ಟಣದಲ್ಲಿ ನಡೆದಿದೆ.

    ರಾತ್ರಿ 2:30ರ ಸುಮಾರಿಗೆ ಘಟನೆ ನಡೆದಿದ್ದು, 17 ವರ್ಷದ ಸಾನಿಯಾ ಸೈಫನಸಾಬ್ ಸ್ಥಳದಲ್ಲೆ ಮೃತಪಟ್ಟಿದ್ದಾಳೆ. ಘಟನೆಯಲ್ಲಿ ಮೆಹಬೂಬ್, ನಿಶಾದ್, ಆಯಿಷಾ, ರಮಜಾನಬಿಗೆ ಗಾಯವಾಗಿದ್ದು, ಗಾಯಗಳುಗಳನ್ನು ಯಡ್ರಾಮಿ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಲಾಗುತ್ತಿದೆ. ತಂದೆ-ತಾಯಿ ಕೂಲಿ ಕೆಲಸದ ನಿಮಿತ್ಯ ಬೇರೆ ಊರಿಗೆ ಹೋದ್ದ ವೇಳೆ ಈ ದುರ್ಘಟನೆ ನಡೆದಿದೆ. ಇದನ್ನೂ ಓದಿ: ಪಾಕ್‌ ಒಳಗಡೆಯೇ ಏರ್‌ಸ್ಟ್ರೈಕ್‌ – 7 ಬಾಂಬ್‌ಗೆ 30 ಮಂದಿ ಬಲಿ

    ಗೋಡೆ ಕುಸಿತದ ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯರು ಮೂವರು ಮಕ್ಕಳ ರಕ್ಷಣೆ ಮಾಡಿದ್ದಾರೆ. ಈ ಕುರಿತು ಯಡ್ರಾಮಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಯ ಬಳಿಕ ಯಾವ ಅಧಿಕಾರಿಗಳು ಸ್ಥಳಕ್ಕೆ ಬಾರದ ಹಿನ್ನೆಲೆ ಆಸ್ಪತ್ರೆಯ ಮುಂದೆ ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಒಂದೂವರೆ ಕೋಟಿ, 50 ಗ್ರಾಂ ಚಿನ್ನಾಭರಣ ದೋಚಿದ ʻಸರ್ಕಾರಿ ಅಧಿಕಾರಿಗಳುʼ

  • ದೆಹಲಿಯಲ್ಲಿ ರಣ ಮಳೆಗೆ ಕುಸಿದ ಗೋಡೆ – ಇಬ್ಬರು ಮಕ್ಕಳು ಸೇರಿ 7 ಮಂದಿ ದಾರುಣ ಸಾವು

    ದೆಹಲಿಯಲ್ಲಿ ರಣ ಮಳೆಗೆ ಕುಸಿದ ಗೋಡೆ – ಇಬ್ಬರು ಮಕ್ಕಳು ಸೇರಿ 7 ಮಂದಿ ದಾರುಣ ಸಾವು

    ನವದೆಹಲಿ: ವರುಣನ (Rain) ಅಬ್ಬರಕ್ಕೆ ಕಾಂಪೌಂಡ್ ಗೋಡೆ ಕುಸಿದು (Wall Collapse) ಮೂವರು ಪುರುಷರು, ಇಬ್ಬರು ಮಹಿಳೆಯರು ಮತ್ತು ಇಬ್ಬರು ಬಾಲಕಿಯರು ಸೇರಿ ಏಳು ಜನ ಸಾವನ್ನಪ್ಪಿದ ದಾರುಣ ಘಟನೆ ದೆಹಲಿಯ (Delhi) ಜೈತ್‌ಪುರದ ಹರಿನಗರದಲ್ಲಿ ನಡೆದಿದೆ.

    ನಗರದ ಹಳೆಯ ದೇವಾಲಯ ಒಂದರ ಬಳಿಯ ಕೊಳಗೇರಿ ಪ್ರದೇಶದಲ್ಲಿ ಹಲವಾರು ಗುಜರಿ ವ್ಯಾಪಾರಿಗಳು ವಾಸಿಸುತ್ತಿದ್ದರು. ಈ ಪ್ರದೇಶದಲ್ಲಿದ್ದ ಗೋಡೆ ಭಾರೀ ಮಳೆಯ ಹೊಡೆತಕ್ಕೆ ಹಠಾತ್ ಕುಸಿದಿದೆ. ಅವಶೇಷಗಳ ಅಡಿ 8 ಮಂದಿ ಸಿಲುಕಿದ್ದರು. ಅವರನ್ನು ರಕ್ಷಿಸಿ ಆಸ್ಪತ್ರೆಗೆ ಸಾಗಿಸಲಾಯಿತು, ಆದರೆ ಗಂಭಿರವಾಗಿ ಗಾಯಗೊಂಡಿದ್ದ 7 ಮಂದಿ ಸಾವನ್ನಪ್ಪಿದರು. ಮತ್ತೆ ಅಂತಹ ಘಟನೆಗಳು ಸಂಭವಿಸದಂತೆ ಈ ಜಾಗದಿಂದ ಜನರನ್ನು ಸ್ಥಳಾಂತರಿಸಿದ್ದೇವೆ ಎಂದು ಡಿಸಿಪಿ ಐಶ್ವರ್ಯ ಶರ್ಮಾ ತಿಳಿಸಿದ್ದಾರೆ. ಇದನ್ನೂ ಓದಿ: ದೆಹಲಿಯಲ್ಲಿ ಭಾರೀ ಮಳೆ – ರೆಡ್ ಅಲರ್ಟ್ ಘೋಷಣೆ, 100ಕ್ಕೂ ಹೆಚ್ಚು ವಿಮಾನಗಳು ವಿಳಂಬ

    ಶುಕ್ರವಾರ ತಡರಾತ್ರಿಯಿಂದ ದೆಹಲಿಯಲ್ಲಿ ತೀವ್ರ ಮಳೆಯಾಗುತ್ತಿದೆ. ಇಂದು (ಶನಿವಾರ) ಸಹ ಹೆಚ್ಚಿನ ಭಾಗಗಳಲ್ಲಿ ಮಿಂಚು ಮತ್ತು ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಅಲ್ಲದೇ ಈ ಭಾಗಗಳಲ್ಲಿ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಹೆಚ್ಚಿನ ಮಳೆಯಾಗುವ ಮುನ್ಸೂಚನೆ ಇರುವುದರಿಂದ ತಗ್ಗು ಪ್ರದೇಶಗಳು ಮತ್ತು ಅಸುರಕ್ಷಿತ ಪ್ರದೇಶಗಳಲ್ಲಿ ವಾಸಿಸುವ ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.

    ಶುಕ್ರವಾರ ರಾತ್ರಿ 11 ಗಂಟೆ ಸುಮಾರಿಗೆ ಪ್ರಾರಂಭವಾದ ಮಳೆ ಶನಿವಾರ ಬೆಳಿಗ್ಗೆಯವರೆಗೂ ಮುಂದುವರೆದಿತ್ತು. ಪರಿಣಾಮ ನಗರದ ಪಂಚಕುಯಿಯಾನ್ ಮಾರ್ಗ, ಮಥುರಾ ರಸ್ತೆ, ಶಾಸ್ತ್ರಿ ಭವನ, ಆರ್‌ಕೆ ಪುರಂ, ಮೋತಿ ಬಾಗ್ ಮತ್ತು ಕಿದ್ವಾಯಿ ನಗರ ಸೇರಿದಂತೆ ಹಲವಾರು ಪ್ರದೇಶಗಳ ರಸ್ತೆಗಳಲ್ಲಿ ಮಳೆ ನೀರು ನಿಂತು ವಾಹನ ಸಂಚಾರಕ್ಕೆ ಭಾರಿ ತೊಂದರೆ ಉಂಟಾಗಿತ್ತು. ಇದನ್ನೂ ಓದಿ: ಆಪರೇಷನ್ ಅಖಾಲ್ | ಭದ್ರತಾ ಸಿಬ್ಬಂದಿ, ಉಗ್ರರ ನಡುವೆ ಗುಂಡಿನ ಚಕಮಕಿ – ಇಬ್ಬರು ಯೋಧರು ಹುತಾತ್ಮ

  • ಆಂಧ್ರಪ್ರದೇಶ | ಸಿಂಹಾದ್ರಿ ಅಪ್ಪಣ್ಣಸ್ವಾಮಿ ದೇವಸ್ಥಾನದ ಗೋಡೆ ಕುಸಿದು 8 ಮಂದಿ ದುರ್ಮರಣ

    ಆಂಧ್ರಪ್ರದೇಶ | ಸಿಂಹಾದ್ರಿ ಅಪ್ಪಣ್ಣಸ್ವಾಮಿ ದೇವಸ್ಥಾನದ ಗೋಡೆ ಕುಸಿದು 8 ಮಂದಿ ದುರ್ಮರಣ

    ಅಮರಾವತಿ: ಸಿಂಹಾದ್ರಿ ಅಪ್ಪಣ್ಣಸ್ವಾಮಿ ದೇವಸ್ಥಾನದ ಗೋಡೆ ಕುಸಿದು ಎಂಟು ಜನರು ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ (Andhra Pradesh) ವಿಶಾಖಪಟ್ಟಣದಲ್ಲಿರುವ ಸಿಂಹಾಚಲಂನಲ್ಲಿ ನಡೆದಿದೆ.

    ದೇವಸ್ಥಾನದಲ್ಲಿ ನಡೆಯುತ್ತಿದ್ದ ಚಂದನೋತ್ಸವಂ ವೇಳೆ ಈ ಅವಘಡ ಸಂಭವಿಸಿದೆ. ಇಂದು ಬೆಳಗ್ಗೆ ಚಂದನೋತ್ಸವದಲ್ಲಿ ವರಾಹ ಲಕ್ಷ್ಮೀ ನರಸಿಂಹಸ್ವಾಮಿಯ ನಿಜರೂಪ ದರ್ಶನಕ್ಕಾಗಿ ಭಕ್ತರು ಸರತಿ ಸಾಲಿನಲ್ಲಿ ನಿಂತಿದ್ದರು. ಇದೇ ವೇಳೆ ದೇವಸ್ಥಾನದಲ್ಲಿ ಇತ್ತೀಚಿಗೆ ನಿರ್ಮಿಸಲಾಗಿದ್ದ 20 ಅಡಿ ಉದ್ದದ ಹೊಸ ಗೋಡೆಯೊಂದು ಕುಸಿದಿದೆ. ಪರಿಣಾಮ ಎಂಟು ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.ಇದನ್ನೂ ಓದಿ: ಕೋಲ್ಕತ್ತಾ ಹೋಟೆಲ್‌ನಲ್ಲಿ ಬೆಂಕಿ ಅವಘಡ: 14 ಮಂದಿ ಸಾವು

    ಸ್ಥಳಕ್ಕೆ ತಕ್ಷಣವೇ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF) ದೌಡಾಯಿಸಿ, ರಕ್ಷಣಾ ಕಾರ್ಯಾಚರಣೆಯನ್ನು ಆರಂಭಿಸಿದವು. ಅವಶೇಷಗಳಡಿಯಲ್ಲಿ ಸಿಲುಕಿರುವವರನ್ನು ಹೊರತೆಗೆಯಲಾಗಿದ್ದು, ಗಾಯಾಳುಗಳನ್ನು ಕಿಂಗ್ ಜಾರ್ಜ್ ಆಸ್ಪತ್ರೆಗೆ ರವಾನಿಸಲಾಗಿದೆ.

    ವರದಿಗಳ ಪ್ರಕಾರ, ಇಂದು ಬೆಳಗಿನ ಜಾವ 2:30 ರಿಂದ 3:30ರವರೆಗೆ ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗಿದೆ. ಭಾರೀ ಗಾಳಿ ಹಾಗೂ ದೇವಸ್ಥಾನದ ಬಳಿ ಹರಿಯುತ್ತಿದ್ದ ನೀರಿನ ಹರಿವು ಈ ಘಟನೆಗೆ ಕಾರಣ ಎನ್ನಲಾಗಿದೆ. ಗೋಡೆಯು ಮಣ್ಣಿನ ಹೊದಿಕೆಯನ್ನು ಹೊಂದಿದ್ದು, ಮಣ್ಣು ಸಡಿಲಗೊಂಡಿರಬಹುದು, ಜೊತೆಗೆ ಭಾರೀ ಗಾಳಿಯಿಂದಾಗಿ ಪೆಂಡಾಲ್‌ಗಳು ನೆಲಕ್ಕುರುಳಿದವು. ಇನ್ನೂ 20 ದಿನಗಳ ಹಿಂದೆಯಷ್ಟೇ ಈ ಗೋಡೆಯನ್ನು ನಿರ್ಮಿಸಲಾಗಿತ್ತು ಎಂದು ಮೂಲಗಳು ತಿಳಿಸಿವೆ.

    ಚಂದನೋತ್ಸವಂ ಹಬ್ಬವನ್ನು ಪ್ರತಿ ವರ್ಷ ಏ.30 ರಂದು ಆಚರಿಸಲಾಗುತ್ತದೆ. ಭಕ್ತರು ವರ್ಷಪೂರ್ತಿ ಶ್ರೀಗಂಧದ ಲೇಪದಿಂದ ಮುಚ್ಚಿದ ನರಸಿಂಹ ದೇವರನ್ನು ಈ ಚಂದನೋತ್ಸವಂ ಹಬ್ಬದ ಸಂದರ್ಭದಲ್ಲಿ ನೋಡುತ್ತಾರೆ.ಇದನ್ನೂ ಓದಿ: ಖಾಸಗಿಯವ್ರ ಪಾಲಾಗುತ್ತಿದೆ ಟೈರನ್ನೊಸಾರಸ್ ಪಳಯುಳಿಕೆ – ವಿಜ್ಞಾನಿಗಳ ಆತಂಕವೇನು?

  • ತುಮಕೂರು| ಮಳೆಗೆ ಮನೆಗೋಡೆ ಕುಸಿದು ಬಿದ್ದು ಮಹಿಳೆ ಸಾವು

    ತುಮಕೂರು| ಮಳೆಗೆ ಮನೆಗೋಡೆ ಕುಸಿದು ಬಿದ್ದು ಮಹಿಳೆ ಸಾವು

    ತುಮಕೂರು: ನಿರಂತರ ಮಳೆಯಿಂದಾಗಿ (Rain) ಮನೆ ಗೋಡೆ (Wall) ಕುಸಿದು ಬಿದ್ದು ಮಣ್ಣಿನಡಿ ಸಿಲುಕಿ ಮಹಿಳೆಯೊಬ್ಬರು ಮೃತ ಪಟ್ಟ ದಾರುಣ ಘಟನೆ ತುಮಕೂರು (Tumakuru) ಜಿಲ್ಲೆ ಗುಬ್ಬಿ (Gubbi) ತಾಲ್ಲೂಕಿನ ಜಿ.ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ.

    ಜಿ. ಹೊಸಹಳ್ಳಿ ನಿವಾಸಿ ಸಹನಾ (27) ಮೃತ ದುರ್ದೈವಿ. ಬೆಳಗ್ಗೆ ಸ್ನಾನಕ್ಕೆ ಹಳೆಯ ಮನೆಗೆ ತೆರಳಿದ್ದ ವೇಳೆ ಗೋಡೆ ಕುಸಿದು ಸಹನಾ ಮಣ್ಣಿನಡಿ ಸಿಲುಕಿದ್ದರು. ಮಣ್ಣಿನಡಿ ಸಿಲುಕಿದ್ದ ಸಹನಾಳನ್ನ ಗ್ರಾಮಸ್ಥರು ರಕ್ಷಣೆ ಮಾಡಿ, ಪ್ರಜ್ಞಾಹೀನ ಸ್ಥಿತಿಯಲ್ಲಿ ಗುಬ್ಬಿ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಇದನ್ನೂ ಓದಿ: ಯೋಗೇಶ್ವರ್ ನಮ್ಮನ್ನು ಬಿಡುವುದಿಲ್ಲ ಎನ್ನುವ ವಿಶ್ವಾಸವಿತ್ತು: ಕೋಟ ಶ್ರೀನಿವಾಸ ಪೂಜಾರಿ ಬೇಸರ

    ಸಹನಾಳನ್ನು ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ. ಈ ಸಂಬಂಧ ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಪರಿಸರ ಸಂರಕ್ಷಣಾ ಕಾಯ್ದೆ ಹಲ್ಲಿಲ್ಲದ ಹಾವು, ಇದು ರಾಜಕೀಯವಲ್ಲದೆ ಮತ್ತೇನು ಅಲ್ಲ: ಸುಪ್ರೀಂ ತರಾಟೆ

  • ತುಂತುರು ಮಳೆಗೆ ನೆನೆದಿದ್ದ ಮನೆಗೋಡೆ ಕುಸಿದು ವೃದ್ಧೆ ಸಾವು

    ತುಂತುರು ಮಳೆಗೆ ನೆನೆದಿದ್ದ ಮನೆಗೋಡೆ ಕುಸಿದು ವೃದ್ಧೆ ಸಾವು

    ಚಿತ್ರದುರ್ಗ: ತುಂತುರು ಮಳೆಗೆ (Rain) ನೆನೆದಿದ್ದ ಮನೆಗೋಡೆ ಕುಸಿದು (Wall Collapse) ವೃದ್ಧೆ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ (Chitradurga) ತಾಲೂಕಿನ ಈಚಲ ನಾಗೇನಹಳ್ಳಿ ಗ್ರಾಮದಲ್ಲಿ ನಡೆದಿದೆ.

    ಗ್ರಾಮದ ರಂಗಮ್ಮ(75) ಮೃತ ವೃದ್ಧೆ. ಮನೆ ಹಳೆಯದಾಗಿದ್ದು, ನಿರಂತರ ಮಳೆಗೆ ನೆನೆದು ಗೋಡೆ ಕುಸಿದಿದೆ. ಈ ವೇಳೆ ಮನೆಯೊಳಗಿದ್ದ ವೃದ್ಧೆ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಚಿತ್ರದುರ್ಗ ಕ್ಷೇತ್ರದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಭೇಟಿ ನೀಡಿ ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಇದನ್ನೂ ಓದಿ: ರಾಯಚೂರು ವಿವಿಗೆ ಮಹರ್ಷಿ ವಾಲ್ಮೀಕಿ ಹೆಸರು – ಸಿಎಂ ಸಿದ್ದರಾಮಯ್ಯ ಘೋಷಣೆ

    ಮೃತ ವೃದ್ಧೆ ಕುಟುಂಬಕ್ಕೆ ಕೇಂದ್ರ ಸರ್ಕಾರದ ಎಸ್‌ಡಿಆರ್‌ಎಫ್ ಮಾರ್ಗಸೂಚಿಯಂತೆ ಪ್ರಕೃತಿ ವಿಕೋಪ ನಿಧಿಯಿಂದ 4 ಲಕ್ಷ ರೂ. ಮತ್ತು ಹೆಚ್ಚುವರಿಯಾಗಿ 1 ಲಕ್ಷ ರೂ. ಸೇರಿದಂತೆ ಒಟ್ಟು 5 ಲಕ್ಷ ರೂ. ಹಣವನ್ನು ವಾರಸುದಾರರಿಗೆ ವಿತರಿಸಿದರು. ಇದನ್ನೂ ಓದಿ: ದುರ್ಗಾದೇವಿ ವಿಸರ್ಜನೆ ವೇಳೆ ಹಲ್ಲೆ – ಅ.19 ರಂದು ಲಕ್ಷ್ಮೇಶ್ವರ ಬಂದ್ ಕರೆ ನೀಡಿದ ಶ್ರೀರಾಮಸೇನೆ

    ಮೃತ ವೃದ್ಧೆ ರಂಗಮ್ಮಗೆ ಇಬ್ಬರು ಹೆಣ್ಣು, ಇಬ್ಬರು ಗಂಡು ಮಕ್ಕಳಿದ್ದಾರೆ. ವೃದ್ಧೆ ತನ್ನ ಮಗನೊಂದಿಗೆ ಈ ಮನೆಯಲ್ಲಿ ವಾಸವಾಗಿದ್ದರು. ಘಟನೆ ನಡೆದ ಸಂದರ್ಭ ಮಗ ಕೆಲಸಕ್ಕೆ ತೆರಳಿದ್ದರು. ಇದನ್ನೂ ಓದಿ: ಡಿಕೆ ಸುರೇಶ್‌ಗೆ ಚನ್ನಪಟ್ಟಣ ಕ್ಷೇತ್ರದ ಟಿಕೆಟ್ ಸಿಗಲಿ: ಕೊಲ್ಲೂರು ಮೂಕಾಂಬಿಕೆ ಮೊರೆ ಹೋದ ಬೆಂಬಲಿಗರು

  • ಸತತ ಮಳೆಯಿಂದಾಗಿ ಗೋಡೆ ಕುಸಿದು ವೃದ್ಧ ಸಾವು

    ಸತತ ಮಳೆಯಿಂದಾಗಿ ಗೋಡೆ ಕುಸಿದು ವೃದ್ಧ ಸಾವು

    ದಾವಣಗೆರೆ: ಸತತ ಮಳೆಗೆ ಗೋಡೆ ಕುಸಿದು ವೃದ್ಧ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಚನ್ನಗಿರಿ (Channagiri) ತಾಲೂಕಿನ ಸಂತೆಬೆನ್ನೂರಿನಲ್ಲಿ (Santhebennur) ನಡೆದಿದೆ.

    ಮೃತ ವೃದ್ಧನನ್ನು ಸಂತೆಬೆನ್ನೂರು ನಿವಾಸಿ ಕುಳಗಟ್ಟೆ ಬಸವರಾಜಪ್ಪ (81) ಎಂದು ಗುರುತಿಸಲಾಗಿದೆ. ಪುಷ್ಕರಣಿ ಬೀದಿಯಲ್ಲಿದ್ದ ಮನೆಯಲ್ಲಿ ಗೋಡೆ ಕುಸಿದು ಸಾವನ್ನಪ್ಪಿದ್ದಾರೆ.ಇದನ್ನೂ ಓದಿ: ಇನ್ನೂ ರಿಟ್ರೀವ್ ಆಗಿಲ್ಲ ದರ್ಶನ್, ಪವಿತ್ರಾಗೌಡ ಮೊಬೈಲ್!

    ರಾತ್ರಿ ಸತತ ಮಳೆ ಸುರಿಯುತ್ತಿದ್ದು, ಗೋಡೆ ಒಂದು ಕಡೆ ವಾಲುತ್ತಿತ್ತು. ಈ ವೇಳೆ ಮನೆಯಲ್ಲಿದ್ದ ಬಸವರಾಜಪ್ಪ, ಆತನ ಮಗ ಹಾಗೂ ಸೊಸೆ ಮನೆಯಿಂದ ಹೊರಬರಲು ಯತ್ನಿಸಿದ್ದಾರೆ. ಆತನ ಮಗ ಹಾಗೂ ಸೊಸೆ ಮನೆಯಿಂದ ಹೊರಗೆ ಬಂದಿದ್ದಾರೆ. ಆದರೆ ಮನೆಯಿಂದ ಹೊರಬರುವ ಪ್ರಯತ್ನದಲ್ಲಿದ್ದ ವೃದ್ಧ ಬಸವರಾಜಪ್ಪನ ಮೇಲೆ ಗೋಡೆ ಕುಸಿದಿದೆ. ಗೋಡೆ ಕುಸಿದು ತೀವ್ರ ಗಾಯಗೊಂಡು ಸಾವನ್ನಪ್ಪಿದ್ದಾರೆ.

    ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಚನ್ನಗಿರಿ ತಹಶೀಲ್ದಾರರಾದ ರುಕ್ಮಿಣಿಬಾಯಿ ಭೇಟಿ ನೀಡಿದ್ದು, ಮೃತರ ಕುಟುಂಬಕ್ಕೆ ಐದು ಲಕ್ಷ ರೂ. ಚೆಕ್‌ನ್ನು ಪರಿಹಾರವಾಗಿ ನೀಡಿದ್ದಾರೆ. ಸಂತೆಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇದನ್ನೂ ಓದಿ: Women’s T20 World Cup; ಭಾರತ vs ಪಾಕಿಸ್ತಾನ ಫೈಟ್‌ – ಟೀಂ ಇಂಡಿಯಾಗೆ ಇಂದು ನಿರ್ಣಾಯಕ ಪಂದ್ಯ

  • ಭಾರೀ ಮಳೆಗೆ ಮನೆಗಳ ಗೋಡೆ ಕುಸಿತ – ಪ್ರತ್ಯೇಕ ಘಟನೆಯಲ್ಲಿ 2 ಕಂದಮ್ಮಗಳ ದಾರುಣ ಸಾವು

    ಭಾರೀ ಮಳೆಗೆ ಮನೆಗಳ ಗೋಡೆ ಕುಸಿತ – ಪ್ರತ್ಯೇಕ ಘಟನೆಯಲ್ಲಿ 2 ಕಂದಮ್ಮಗಳ ದಾರುಣ ಸಾವು

    ದಾವಣಗೆರೆ/ಹಾವೇರಿ: ಎಡಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ (Rain) ಎರಡು ಪ್ರತ್ಯೇಕ ಕಡೆಗಳಲ್ಲಿ ಮನೆಗಳ ಗೋಡೆ ಕುಸಿದು (Wall Collapse) ಎಳೆ ಕಂದಮ್ಮಗಳು ದಾರುಣ ಸಾವಿಗೀಡಾಗಿರುವ ಘಟನೆ ದಾವಣಗೆರೆ, ಹಾವೇರಿಯಲ್ಲಿ ನಡೆದಿದೆ.

    ಮನೆಯೊಂದರ ಗೋಡೆ ಕುಸಿದ ಪರಿಣಾಮ 1 ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ದಾವಣಗೆರೆ (Davanagere) ಜಿಲ್ಲೆಯ ಹರಿಹರ ತಾಲೂಕಿನ ಕುಂಬಳೂರಿನಲ್ಲಿ ನಡೆದಿದೆ. ಕುಂಬಳೂರಿನ ಲಕ್ಷ್ಮಿ ಹಾಗೂ ಕೆಂಚಪ್ಪ ದಂಪತಿಯ ಪುತ್ರಿ ಸ್ಪೂರ್ತಿ ಮನೆಯ ಗೋಡೆ ಕುಸಿದು ಅದರಡಿ ಸಿಲುಕಿ ದಾರುಣ ಅಂತ್ಯ ಕಂಡ ಕಂದಮ್ಮ. ಕಳೆದ 4-5 ದಿನಗಳಿಂದ ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಮನೆಯ ಗೋಡೆ ಕುಸಿದಿದೆ. ತಂದೆ-ತಾಯಿ ಜೊತೆ ಮಲಗಿದ್ದ ಬಾಲಕಿ ಮೇಲೆ ಗೋಡೆ ಬಿದ್ದ ಪರಿಣಾಮ ಬಾಲಕಿ ಸಾವನ್ನಪ್ಪಿದ್ದಾಳೆ.

    ಘಟನೆಯಲ್ಲಿ ಬಾಲಕಿಯ ತಂದೆ-ತಾಯಿಗೂ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗೆ ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಪುಟ್ಟ ಕಂದಮ್ಮನ ಅಗಲಿಕೆಯಿಂದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಮಲೆಬೆನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

    ಇನ್ನು ಹಾವೇರಿಯಲ್ಲೂ (Havreri) ನಿರಂತರವಾಗಿ ಬೀಳುತ್ತಿರುವ ಮಳೆಯಿಂದ ಮನೆಯ ಗೋಡೆ ಕುಸಿದು 3 ವರ್ಷದ ಬಾಲಕಿ ಮೃತಪಟ್ಟ ಘಟನೆ ಮಾಳಾಪುರ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಭಾಗ್ಯ ಚಳಮರದ ಎಂದು ಗುರುತಿಸಲಾಗಿದೆ. ಮನೆಯಲ್ಲಿದ್ದ ಮತ್ತೊಂದು ಮಗುವಿಗೂ ಗಾಯವಾಗಿದೆ. ಇದನ್ನೂ ಓದಿ: ಕರಾವಳಿ ಭಾಗದಲ್ಲಿಂದು ರೆಡ್ ಅಲರ್ಟ್ – ಬೆಂಗ್ಳೂರಲ್ಲಿ ದಿನವಿಡೀ ತುಂತುರು ಮಳೆ

    2 ದಿನಗಳ ಹಿಂದೆ ನಿರಂತರ ಮಳೆಯಿಂದ ಮನೆಯ ಗೋಡೆ ಕುಸಿದು ಬಿದ್ದಿತ್ತು. ಘಟನೆಯಲ್ಲಿ 3 ವರ್ಷದ ಬಾಲಕಿ ಭಾಗ್ಯ ಗಂಭೀರವಾಗಿ ಗಾಯಗೊಂಡಿದ್ದಳು. ತಕ್ಷಣವೆ ಆಕೆಗೆ ಜಿಲ್ಲಾಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಬಾಲಕಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಬಾಲಕಿ ಮೃತಪಟ್ಟಿದ್ದಾಳೆ.

    ಬಾಲಕಿಯ ಸಾವಿನಿಂದ ಕುಟುಂಬದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಪುಟ್ಟ ಬಾಲಕಿಯ ಸಾವಿಗೆ ಗ್ರಾಮದ ಜನರು ಸಹ ಕಣ್ಣೀರಾಗಿದ್ದಾರೆ. ಇದನ್ನೂ ಓದಿ: ಕೊಡಗು ಜಿಲ್ಲೆಯಲ್ಲಿ ವರುಣಾರ್ಭಟ – ಉಕ್ಕಿ ಹರಿದ ಕಾವೇರಿ ನದಿ; ಬಡಾವಣೆ ಜಲಾವೃತ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ರಾಯಚೂರಿನಲ್ಲಿ ಸತತ ಮಳೆಗೆ ಮನೆಗೋಡೆ ಕುಸಿತ – ಒಂದೇ ಕುಟುಂಬದ ಮೂವರು ಸಾವು

    ರಾಯಚೂರಿನಲ್ಲಿ ಸತತ ಮಳೆಗೆ ಮನೆಗೋಡೆ ಕುಸಿತ – ಒಂದೇ ಕುಟುಂಬದ ಮೂವರು ಸಾವು

    ರಾಯಚೂರು: ಜಿಲ್ಲೆಯಾದ್ಯಂತ ಒಂದು ವಾರದಿಂದ ನಿರಂತರವಾಗಿ ಸುರಿಯುತ್ತಿರುವ ಮಳೆ ಮೂವರನ್ನು ಬಲಿ ಪಡೆದಿದೆ. ಮಾನ್ವಿ ತಾಲೂಕಿನ ಕುರಡಿ ಗ್ರಾಮದಲ್ಲಿ ಸತತ ಮಳೆಗೆ ಮನೆ ಗೋಡೆ ಕುಸಿದು ಒಂದೇ ಮೂವರು ಸಾವನ್ನಪ್ಪಿದ್ದಾರೆ.

    ಪರಮೇಶ (45) ,‌ ಪರಮೇಶ್ ಪತ್ನಿ ಜಯಮ್ಮ (39) ಹಾಗೂ ಪರಮೇಶನ ತಮ್ಮನ ಮಗ ನಾಲ್ಕು ವರ್ಷದ ಭರತ್ ಮೃತ ದುರ್ದೈವಿಗಳು. ಮನೆಯಲ್ಲಿ ಮಲಗಿದ್ದಾಗ ಬೆಳಗಿನ ಜಾವ ಮೂರು ಗಂಟೆ ಸುಮಾರಿಗೆ ಮನೆ ಗೋಡೆ ಕುಸಿದು ಅವಘಡ ನಡೆದಿದೆ. ಪರಮೇಶ ಹಾಗೂ ಜಯಮ್ಮ ಸ್ಥಳದಲ್ಲೇ ಮೃತಪಟ್ಟರೆ, ಬಾಲಕ ಭರತ್ ಮಾನ್ವಿ ತಾಲೂಕು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾನೆ. ಇದನ್ನೂ ಓದಿ: ಇದು ನಾಗರಿಕ ಸಮಾಜವೇ ತಲೆ ತಗ್ಗಿಸುವ ಸುದ್ದಿ – ಅಪ್ಪನ ಸಾಲ ತೀರಿಸಲು ಮಗನಿಂದ ಬೆತ್ತಲೆ ಪೂಜೆ

    ಘಟನೆ ಹಿನ್ನೆಲೆ ಸ್ಥಳದಲ್ಲಿ ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಮಾನ್ವಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಈ ಮೂಲಕ ಮಳೆಯಿಂದಾಗಿ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. ಎರಡು ದಿನಗಳ ಹಿಂದೆಯಷ್ಟೇ ಮಸ್ಕಿ ತಾಲೂಕಿನ ಬಳಗಾನೂರಿನಲ್ಲಿ 60 ವರ್ಷದ ವೃದ್ಧ ಮರಿಯಪ್ಪ ಚಿನಿವಾಲ್ ಮನೆ ಕುಸಿತದಿಂದ ಸಾವನ್ನಪ್ಪಿದ್ದರು. ಇದನ್ನೂ ಓದಿ: ಕಲ್ಲು ತುಂಬಿ ನಿಂತಿದ್ದ ಲಾರಿಗೆ KSRTC ಬಸ್‌ ಡಿಕ್ಕಿ – ಬಸ್‌ನಲ್ಲಿದ್ದ ದಂಪತಿ ದುರ್ಮರಣ, 20 ಮಂದಿಗೆ ಗಾಯ

    Live Tv
    [brid partner=56869869 player=32851 video=960834 autoplay=true]

  • ಭಾರೀ ಮಳೆಗೆ ಗೋಡೆ ಕುಸಿದು 9 ಮಂದಿ ಸಾವು

    ಭಾರೀ ಮಳೆಗೆ ಗೋಡೆ ಕುಸಿದು 9 ಮಂದಿ ಸಾವು

    ಲಕ್ನೋ: ಭಾರೀ ಮಳೆಯಿಂದಾಗಿ (Rain) ಗೋಡೆ ಕುಸಿದು (Wall Collapse) 9 ಮಂದಿ ಸಾವಿಗೀಡಾಗಿದ್ದು, ಇಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಲಕ್ನೋದಲ್ಲಿ (Lucknow) ನಡೆದಿದೆ. ಗಾಯಾಳುಗಳನ್ನು ಸಿವಿಲ್‌ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಅವರು, ಮೃತರ ಕುಟುಂಬಕ್ಕೆ ತಲಾ 4 ಲಕ್ಷ ರೂ. ಮತ್ತು ಗಾಯಾಳುಗಳ ಚಿಕಿತ್ಸೆಗೆ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಇದನ್ನೂ ಓದಿ: ಗಂಟೆಗೆ 130 ಕಿ.ಮೀ ವೇಗದಲ್ಲಿ ಬಂದು ಡಿಕ್ಕಿ ಹೊಡೆದ ಕಾರು – ಮಹಿಳಾ ಟೆಕ್ಕಿಗಳಿಬ್ಬರ ದುರ್ಮರಣ

    ಕೆಲವು ಕಾರ್ಮಿಕರು ದಿಲ್ಕುಶಾ ಪ್ರದೇಶದಲ್ಲಿನ ಆರ್ಮಿ ಎನ್‌ಕ್ಲೇವ್‌ನ ಹೊರಗೆ ಗುಡಿಸಲುಗಳಲ್ಲಿ ವಾಸಿಸುತ್ತಿದ್ದರು. ರಾತ್ರಿಯ ಭಾರೀ ಮಳೆಯಿಂದಾಗಿ, ಆರ್ಮಿ ಎನ್‌ಕ್ಲೇವ್‌ನ ಗಡಿ ಗೋಡೆ ಕುಸಿದಿದೆ ಎಂದು ಜಂಟಿ ಪೊಲೀಸ್ ಕಮಿಷನರ್ (ಕಾನೂನು ಮತ್ತು ಸುವ್ಯವಸ್ಥೆ) ಪಿಯೂಷ್ ಮೊರ್ಡಿಯಾ ತಿಳಿಸಿದ್ದಾರೆ.

    ರಾತ್ರಿಯ ಎಡೆಬಿಡದ ಮಳೆಯ ನಂತರ ಇಂದು ಶಾಲೆಗಳನ್ನು ಮುಚ್ಚುವಂತೆ ಆದೇಶ ಹೊರಡಿಸಲಾಗಿದೆ. ಹಲವಾರು ಪ್ರದೇಶಗಳಲ್ಲಿ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಇದನ್ನೂ ಓದಿ: ಜೈಲುವಾಸ ಮುಗಿಸಿ ಹೊರ ಬಂದವರಿಗೆ ಗುಡ್ ನ್ಯೂಸ್!

    ಲಕ್ನೋದಲ್ಲಿ ಇಡೀ ತಿಂಗಳಲ್ಲಿ ಬೀಳುವ ಪ್ರಮಾಣದ ಮಳೆ ಒಂದೇ ದಿನದಲ್ಲಿ ಸುರಿದಿದೆ. ನಗರದಲ್ಲಿ ಕಳೆದ 24 ಗಂಟೆಗಳಲ್ಲಿ 155.2 ಮಿ.ಮೀ ಮಳೆ ದಾಖಲಾಗಿದೆ. ಇಡೀ ಸೆಪ್ಟೆಂಬರ್ ತಿಂಗಳಿಗೆ ಲಕ್ನೋ ಸಾಮಾನ್ಯವಾಗಿ ಪಡೆಯುವ ಸರಾಸರಿ 197 ಮಿ.ಮೀ. ಅಸಾಧಾರಣ ಮಳೆಯಿಂದಾಗಿ ಕೆಲವು ಪ್ರದೇಶಗಳಲ್ಲಿ ಜಲಾವೃತವಾಗಿದೆ.

    Live Tv
    [brid partner=56869869 player=32851 video=960834 autoplay=true]