Tag: Waqf Act

  • ಧರ್ಮದ ಹೆಸರಿನಲ್ಲಿ ಅನ್ಯಾಯದ ವರ್ತನೆಯಲ್ಲಿ ತೊಡಗಬೇಡಿ: ಪ್ರತಿಭಟನಾಕಾರರಿಗೆ ಮಮತಾ ಬ್ಯಾನರ್ಜಿ ಮನವಿ

    ಧರ್ಮದ ಹೆಸರಿನಲ್ಲಿ ಅನ್ಯಾಯದ ವರ್ತನೆಯಲ್ಲಿ ತೊಡಗಬೇಡಿ: ಪ್ರತಿಭಟನಾಕಾರರಿಗೆ ಮಮತಾ ಬ್ಯಾನರ್ಜಿ ಮನವಿ

    – ವಕ್ಫ್‌ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ.ಬಂಗಾಳದಲ್ಲಿ ಪ್ರತಿಭಟನೆ, ಹಿಂಸಾಚಾರ

    ಕೋಲ್ಕತ್ತಾ: ತಮ್ಮ ಸರ್ಕಾರವು ಕೇಂದ್ರ ಸರ್ಕಾರದ ವಕ್ಫ್ ತಿದ್ದುಪಡಿ ಕಾಯ್ದೆಯನ್ನು (Waqf Act) ರಾಜ್ಯದಲ್ಲಿ ಜಾರಿಗೆ ತರಲು ಬಿಡುವುದಿಲ್ಲ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಹೇಳಿದ್ದಾರೆ. ಧರ್ಮದ ಹೆಸರಿನಲ್ಲಿ ಯಾವುದೇ ಅನ್ಯಾಯದ ವರ್ತನೆಯಲ್ಲಿ ತೊಡಗಬೇಡಿ ಎಂದು ಅವರು ಸಮುದಾಯಗಳಿಗೆ ಮನವಿ ಮಾಡಿದ್ದಾರೆ.

    ವಕ್ಫ್ ಕಾಯ್ದೆ ವಿರುದ್ಧ ಮುರ್ಷಿದಾಬಾದ್ ಮತ್ತು ಇತರ ಜಿಲ್ಲೆಗಳಲ್ಲಿ ನಡೆದ ಪ್ರತಿಭಟನೆ ಮತ್ತು ಹಿಂಸಾಚಾರದ ಬಳಿಕ ಅವರು ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಎಲ್ಲಾ ಧರ್ಮದ ಜನರಿಗೆ ನನ್ನ ಪ್ರಾಮಾಣಿಕ ಮನವಿ. ದಯವಿಟ್ಟು ಶಾಂತವಾಗಿರಿ, ಸಂಯಮದಿಂದಿರಿ. ಧರ್ಮದ ಹೆಸರಿನಲ್ಲಿ ಯಾವುದೇ ಅನ್ಯಾಯದ ನಡವಳಿಕೆಯಲ್ಲಿ ತೊಡಗಬೇಡಿ. ಪ್ರತಿಯೊಬ್ಬ ಮಾನವ ಜೀವವೂ ಅಮೂಲ್ಯ. ರಾಜಕೀಯಕ್ಕಾಗಿ ಗಲಭೆಗಳನ್ನು ಪ್ರಚೋದಿಸಬೇಡಿ. ಗಲಭೆಗಳನ್ನು ಪ್ರಚೋದಿಸುವವರು ಸಮಾಜಕ್ಕೆ ಹಾನಿ ಮಾಡುತ್ತಿದ್ದಾರೆ ಎಂದು ಅವರು X ಪೋಸ್ಟ್‌ನಲ್ಲಿ ಬರೆದಿದ್ದಾರೆ. ಇದನ್ನೂ ಓದಿ: ಪಶ್ಚಿಮ ಬಂಗಾಳ| ಹಿಂಸಾಚಾರಕ್ಕೆ ತಿರುಗಿದ ವಕ್ಫ್‌ ಪ್ರತಿಭಟನೆ – ವಾಹನಗಳಿಗೆ ಬೆಂಕಿ, ರೈಲುಗಳ ಮೇಲೆ ಕಲ್ಲು

    ಅನೇಕರು ವಿರೋಧಿಸುವ ಕಾನೂನನ್ನು ನಾವು ಜಾರಿ ಮಾಡಿಲ್ಲ ಎನ್ನುವುದು ನೆನಪಿಡಬೇಕು. ಕಾನೂನನ್ನು ಕೇಂದ್ರ ಸರ್ಕಾರ ಮಾಡಿದೆ. ಆದ್ದರಿಂದ ನೀವು ಬಯಸುವ ಉತ್ತರವನ್ನು ಕೇಂದ್ರ ಸರ್ಕಾರದಿಂದ ಪಡೆಯಬೇಕು. ಈ ವಿಷಯದ ಬಗ್ಗೆ ನಾವು ನಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದೇವೆ. ನಾವು ಈ ಕಾನೂನನ್ನು ಬೆಂಬಲಿಸುವುದಿಲ್ಲ. ಈ ಕಾನೂನನ್ನು ನಮ್ಮ ರಾಜ್ಯದಲ್ಲಿ ಜಾರಿಗೆ ತರಲಾಗುವುದಿಲ್ಲ. ಹೀಗಾಗಿ, ಗಲಭೆ ಯಾವುದಕ್ಕಾಗಿ ಮಾಡಬೇಕು ಎಂದು ಪ್ರಶ್ನಿಸಿದ್ದಾರೆ.

    ಕೆಲವು ರಾಜಕೀಯ ಪಕ್ಷಗಳು ರಾಜಕೀಯ ಲಾಭಕ್ಕಾಗಿ ಧರ್ಮವನ್ನು ದುರುಪಯೋಗಪಡಿಸಿಕೊಳ್ಳಲು ಪ್ರಯತ್ನಿಸುತ್ತಿವೆ. ಜನರು ನನ್ನ ಮನವೊಲಿಕೆಗೆ ಮಣಿಯಬಾರದು ಎಂದು ಒತ್ತಾಯಿಸುತ್ತಿದ್ದಾರೆ. ಗಲಭೆಯನ್ನು ಪ್ರಚೋದಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಮಮತಾ ಎಚ್ಚರಿಸಿದರು. ಇದನ್ನೂ ಓದಿ: Mumbai Attack| ರಾಣಾ ವಿರುದ್ಧ ಸಾಕ್ಷಿ ನುಡಿಯಲಿದ್ದಾರೆ ನಿಗೂಢ ವ್ಯಕ್ತಿಗಳು!

    ವಕ್ಫ್ ತಿದ್ದುಪಡಿ ಕಾನೂನಿನ ವಿರುದ್ಧ ಮಾಲ್ಡಾ, ಮುರ್ಷಿದಾಬಾದ್, ದಕ್ಷಿಣ 24 ಪರಗಣಗಳು ಮತ್ತು ಹೂಗ್ಲಿ ಜಿಲ್ಲೆಗಳಲ್ಲಿ ಹಿಂಸಾಚಾರ ಭುಗಿಲೆದ್ದು, ಪೊಲೀಸ್ ವ್ಯಾನ್‌ಗಳು ಸೇರಿದಂತೆ ಹಲವಾರು ವಾಹನಗಳಿಗೆ ಬೆಂಕಿ ಹಚ್ಚಲಾಯಿತು. ಭದ್ರತಾ ಪಡೆಗಳ ಮೇಲೆ ಕಲ್ಲು ತೂರಾಟ ನಡೆಸಲಾಯಿತು, ರಸ್ತೆಗಳನ್ನು ನಿರ್ಬಂಧಿಸಲಾಯಿತು. ಘಟನೆಯಲ್ಲಿ ಕನಿಷ್ಠ 10 ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದು, ವಾಹನ ಮತ್ತು ರೈಲು ಸಂಚಾರಕ್ಕೆ ಅಡ್ಡಿಯಾಗಿದೆ.

    ಶನಿವಾರ ಬೆಳಿಗ್ಗೆಯಿಂದಲೇ ಮುರ್ಷಿದಾಬಾದ್‌ನ ಜಂಗಿಪುರ ಮತ್ತು ಸುಟಿ ಪ್ರದೇಶಗಳಲ್ಲಿ ಭದ್ರತಾ ಕ್ರಮಗಳನ್ನು ತೀವ್ರಗೊಳಿಸಲಾಗಿದೆ. ಘಟನಾ ಸ್ಥಳದಿಂದ ಬಂದ ದೃಶ್ಯಗಳಲ್ಲಿ ಹಲವಾರು ವಾಹನಗಳು ಸುಟ್ಟು ಹಾನಿಗೊಳಗಾಗಿರುವುದು ಕಂಡುಬಂದಿದೆ. ಪೊಲೀಸರ ಪ್ರಕಾರ, ಹಿಂಸಾಚಾರಕ್ಕೆ ಸಂಬಂಧಿಸಿದಂತೆ 110 ಕ್ಕೂ ಹೆಚ್ಚು ವ್ಯಕ್ತಿಗಳನ್ನು ಬಂಧಿಸಲಾಗಿದೆ. ವ್ಯಾಪಕ ಪ್ರತಿಭಟನೆಗಳು ಭುಗಿಲೆದ್ದಿದ್ದ ಮಾಲ್ಡಾ, ಮುರ್ಷಿದಾಬಾದ್, ದಕ್ಷಿಣ 24 ಪರಗಣ ಮತ್ತು ಹೂಗ್ಲಿ ಜಿಲ್ಲೆಗಳಲ್ಲಿ ಪರಿಸ್ಥಿತಿ ಸಹಜ ಸ್ಥಿತಿಗೆ ಬಂದಿಲ್ಲ. ಇದನ್ನೂ ಓದಿ: ಶಿರೋಮಣಿ ಅಕಾಲಿ ದಳ ಅಧ್ಯಕ್ಷರಾಗಿ ಸುಖಬೀರ್ ಸಿಂಗ್ ಬಾದಲ್ ಮರು ಆಯ್ಕೆ

  • ವಕ್ಫ್‌ ತಿದ್ದುಪಡಿ ಮಸೂದೆಯಲ್ಲಿ ಏನು ಬದಲಾವಣೆಯಾಗಿದೆ? ಹಿಂದೆ ಏನಿತ್ತು?

    ವಕ್ಫ್‌ ತಿದ್ದುಪಡಿ ಮಸೂದೆಯಲ್ಲಿ ಏನು ಬದಲಾವಣೆಯಾಗಿದೆ? ಹಿಂದೆ ಏನಿತ್ತು?

    ನವದೆಹಲಿ: ವಿಪಕ್ಷಗಳು ಮತ್ತು ಮುಸ್ಲಿಮರ (Muslims) ವಿರೋಧದ ನಡುವೆ ಲೋಕಸಭೆಯಲ್ಲಿ (Lokasabha) ಇಂದು ವಕ್ಫ್ ತಿದ್ದುಪಡಿ ಮಸೂದೆ (Waqf Act Amendment Bill ಮಂಡನೆ ಆಗಲಿದೆ. ಮಧ್ಯಾಹ್ನ ಕೇಂದ್ರ  ಸಂಸದೀಯ ವ್ಯವಹಾರಗಳ ಖಾತೆಯ  ಸಚಿವ ಕಿರಣ್ ರಿಜಿಜು ಮಸೂದೆ ಮಂಡಿಸಲಿದ್ದಾರೆ.

    ಮಸೂದೆಯನ್ನು ಎನ್‌ಡಿಎ (NDA) ಒಕ್ಕೂಟದ 298 ಸಂಸದರು ಬೆಂಬಲಿಸಿದ್ದಾರೆ. ಇಂದೆ ವೋಟಿಂಗ್ ನಡೆಯೋ ಸಾಧ್ಯತೆ ಹೆಚ್ಚಿರುವ ಕಾರಣ ಎನ್‌ಡಿಎಯ ಎಲ್ಲಾ ಸಂಸದರು ಕಡ್ಡಾಯವಾಗಿ ಕಲಾಪಕ್ಕೆ ಬರಬೇಕೆಂದು ಆಯಾ ಪಕ್ಷಗಳು ವಿಪ್‌ ಜಾರಿ ಮಾಡಿದೆ. ಇದೇ ರೀತಿ ಕಾಂಗ್ರೆಸ್‌ ಸದಸ್ಯರು ಕಡ್ಡಾಯವಾಗಿ ಹಾಜರಾಗಬೇಕೆಂದು ವಿಪ್‌ ಜಾರಿ ಮಾಡಲಾಗಿದೆ. ಇದನ್ನೂ ಓದಿ: ಇಡೀ ‘ಇಂಡಿಯಾ ಒಕ್ಕೂಟ’ ವಕ್ಫ್‌ ಮಸೂದೆ ವಿರುದ್ಧ ಮತ ಚಲಾಯಿಸುತ್ತೆ: ಸಂಸದ ಪ್ರೇಮಚಂದ್ರನ್‌

    ವಕ್ಫ್ ತಿದ್ದುಪಡಿ ಬಿಲ್‌ನಲ್ಲೇನಿದೆ?
    ವಕ್ಫ್ ಆಸ್ತಿಗಳ ಸರ್ವೆ ಮತ್ತು ನಿಯಂತ್ರಣ
    * ಹಿಂದಿನ ಕಾನೂನು : ಸರ್ವೆಯನ್ನು ರಾಜ್ಯ ಸರ್ಕಾರ ನೇಮಿಸಿದ ಸರ್ವೆ ಆಯುಕ್ತರು ನಡೆಸ್ತಿದ್ದರು. ಈ ಪ್ರಕ್ರಿಯೆಯಲ್ಲಿ ಸರ್ಕಾರದ ನೇರ ಹಸ್ತಕ್ಷೇಪ ಕಡಿಮೆ ಇತ್ತು.
    * ಹೊಸ ತಿದ್ದುಪಡಿ : ಸರ್ವೆಗಳನ್ನು ಡಿಸಿಗಳಿಗೆ ವರ್ಗಾಯಿಸಲಾಗಿದೆ. ಡಿಸಿಗಳ ಮೇಲ್ವಿಚಾರಣೆಯಲ್ಲಿ ರಾಜ್ಯದ ಕಂದಾಯ ಕಾನೂನುಗಳಿಗೆ ಅನುಗುಣವಾಗಿ ಸರ್ವೆ ನಡೆಯಲಿದೆ. ಇದರಿಂದ ಸರ್ಕಾರಕ್ಕೆ ವಕ್ಫ್ ಆಸ್ತಿಗಳ ಮೇಲೆ ಹೆಚ್ಚಿನ ನಿಯಂತ್ರಣ ಸಿಗಲಿದೆ. ಇದನ್ನೂ ಓದಿ: ವಕ್ಫ್‌ ಬಿಲ್‌ ಮಂಡನೆ – ಬಿಲ್‌ ಪಾಸ್‌ ಆಗುತ್ತಾ? ಲೋಕಸಭೆಯಲ್ಲಿ ಬಲಾಬಲ ಹೇಗಿದೆ?

    ವಕ್ಫ್ ಘೋಷಣೆಗೆ ಷರತ್ತುಗಳು
    * ಹಿಂದಿನ ಕಾನೂನು: ವಕ್ಫ್ ಘೋಷಿಸಲು ಯಾವುದೇ ನಿರ್ದಿಷ್ಟ ಅವಧಿಯ ಷರತ್ತು ಇರಲಿಲ್ಲ. ಯಾರಾದರೂ ಮುಸ್ಲಿಂ ವ್ಯಕ್ತಿ ತಮ್ಮ ಆಸ್ತಿಯನ್ನು ವಕ್ಫ್ ಆಗಿ ಘೋಷಿಸಬಹುದಿತ್ತು.
    * ಹೊಸ ತಿದ್ದುಪಡಿ: ಇಸ್ಲಾಂ ಧರ್ಮವನ್ನು ಕನಿಷ್ಠ 5 ವರ್ಷ ಪಾಲಿಸಿದ ವ್ಯಕ್ತಿಯೊಬ್ಬರಿಗೆ ಮಾತ್ರ ವಕ್ಫ್ ಘೋಷಿಸುವ ಅಧಿಕಾರ ನೀಡಲಾಗಿದೆ. ಇದರಿಂದ ದುರುಪಯೋಗ ತಡೆಗಟ್ಟುವ ಉದ್ದೇಶವಿದೆ.

     

    ಮಹಿಳೆಯರಿಗೆ ಆಸ್ತಿ ಹಕ್ಕು
    * ಹಿಂದಿನ ಕಾನೂನು: ಮಹಿಳೆಯರಿಗೆ ಹಕ್ಕುಗಳನ್ನು ಸ್ಪಷ್ಟವಾಗಿ ಖಾತ್ರಿಪಡಿಸುವ ನಿರ್ದಿಷ್ಟ ಉಲ್ಲೇಖ ಇರಲಿಲ್ಲ.
    * ಹೊಸ ತಿದ್ದುಪಡಿ: ಮಹಿಳೆಯರಿಗೆ ಸಮಾನ ಹಕ್ಕುಗಳನ್ನು ಖಾತ್ರಿಪಡಿಸುವ ನಿಬಂಧನೆ ಸೇರಿಸಲಾಗಿದೆ. ಇದು ಲಿಂಗ ಸಮಾನತೆಯತ್ತ ಒಂದು ಹೆಜ್ಜೆ ಎಂದು ಪರಿಗಣನೆ.

    ವಕ್ಫ್ ಮಂಡಳಿಯ ರಚನೆ
    * ಹಿಂದಿನ ಕಾನೂನು: ಕೇಂದ್ರ, ರಾಜ್ಯ ವಕ್ಫ್ ಮಂಡಳಿಗಳಲ್ಲಿ ಮಹಿಳೆಯರು ಅಥವಾ ಮುಸ್ಲಿಮೇತರ ಸದಸ್ಯರನ್ನು ಸೇರಿಸುವ ಕಡ್ಡಾಯ ನಿಯಮ ಇರಲಿಲ್ಲ.
    * ಹೊಸ ತಿದ್ದುಪಡಿ: ಕೇಂದ್ರ ವಕ್ಫ್ ಮಂಡಳಿಯಲ್ಲಿ ಕನಿಷ್ಠ ಇಬ್ಬರು ಮಹಿಳೆಯರು, ಇಬ್ಬರು ಮುಸ್ಲಿಮೇತರ ಸದಸ್ಯರನ್ನು ನೇಮಿಸುವುದು ಕಡ್ಡಾಯ. ಇದೇ ರೀತಿ ರಾಜ್ಯ ವಕ್ಫ್ ಮಂಡಳಿಗಳಲ್ಲಿಯೂ ಈ ಬದಲಾವಣೆ ತರಲಾಗಿದೆ. ಇದನ್ನೂ ಓದಿ: ವಕ್ಫ್ ಮಸೂದೆಯ ಪರ ಮತ ಹಾಕಿ – ಸಂಸದರಿಗೆ ಕೇರಳ ಕ್ಯಾಥೋಲಿಕ್ ಬಿಷಪ್ ಸಂಘಟನೆ ಕರೆ

    ಲೆಕ್ಕಪರಿಶೋಧನೆ
    * ಹಿಂದಿನ ಕಾನೂನು: ವಕ್ಫ್ ಮಂಡಳಿಗಳ ಖಾತೆಗಳ ಲೆಕ್ಕಪರಿಶೋಧನೆಯನ್ನು ಮಂಡಳಿಯೇ ನೇಮಿಸಿದ ಲೆಕ್ಕಪರಿಶೋಧಕರು ಮಾಡುತ್ತಿದ್ದರು. ರಾಜ್ಯ ಸರ್ಕಾರಕ್ಕೂ ಆಡಿಟ್ ಮಾಡುವ ಅವಕಾಶ ಇತ್ತು.
    * ಹೊಸ ತಿದ್ದುಪಡಿ: ರಾಜ್ಯ ಸರ್ಕಾರವು ರಚಿಸುವ ಲೆಕ್ಕಪರಿಶೋಧಕರ ಸಮಿತಿಯೇ ಆಡಿಟ್ ನಡೆಸಬೇಕು. ಇದರಿಂದ ಸರ್ಕಾರದ ಮೇಲ್ವಿಚಾರಣೆ ಹೆಚ್ಚಾಗಲಿದೆ.

    ಆಸ್ತಿ ನೋಂದಣಿ ಮತ್ತು ಪಾರದರ್ಶಕತೆ
    * ಹಿಂದಿನ ಕಾನೂನು: ವಕ್ಫ್ ಆಸ್ತಿಗಳ ನೋಂದಣಿ ಮತ್ತು ವಿವರಗಳ ಸಲ್ಲಿಕೆಗೆ ಕಡ್ಡಾಯ ಸಮಯ ಮಿತಿ ಇರಲಿಲ್ಲ.
    * ಹೊಸ ತಿದ್ದುಪಡಿ: ಎಲ್ಲ ವಕ್ಫ್ ಆಸ್ತಿಗಳನ್ನು ಕಾಯಿದೆಯಡಿ ನೋಂದಾಯಿಸುವುದು ಕಡ್ಡಾಯ. 6 ತಿಂಗಳೊಳಗೆ ವಿವರ ಸಲ್ಲಿಸಬೇಕು. ಪ್ರತಿ 5 ವರ್ಷಕ್ಕೊಮ್ಮೆ ಸರ್ವೆ ನಡೆಸಬೇಕು.

  • ಬಿಜೆಪಿ, ಎನ್‌ಡಿಎ ಸರ್ಕಾರ ಅಲ್ಪಸಂಖ್ಯಾತ ವಿರೋಧಿಗಳು – ವಕ್ಫ್ ಕಾಯ್ದೆ ತಿದ್ದುಪಡಿ ಮಸೂದೆ ಮಂಡನೆಗೆ ಸಿಎಂ ಆಕ್ಷೇಪ

    ಬಿಜೆಪಿ, ಎನ್‌ಡಿಎ ಸರ್ಕಾರ ಅಲ್ಪಸಂಖ್ಯಾತ ವಿರೋಧಿಗಳು – ವಕ್ಫ್ ಕಾಯ್ದೆ ತಿದ್ದುಪಡಿ ಮಸೂದೆ ಮಂಡನೆಗೆ ಸಿಎಂ ಆಕ್ಷೇಪ

    ಬೆಂಗಳೂರು: ಬಿಜೆಪಿಯವರು, ಎನ್‌ಡಿಎ ಸರ್ಕಾರ (NDA Government) ಸಂಪೂರ್ಣವಾಗಿ ಅಲ್ಪಸಂಖ್ಯಾತ ವಿರೋಧಿಗಳು ಅವರಿಗೆ ಸಾಮಾಜಿಕ ನ್ಯಾಯ ಗೊತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ (Siddaramaia) ವಾಗ್ದಾಳಿ ನಡೆಸಿದರು.

    ಮಾಜಿ ಸಿಎಂ ಎಸ್‌. ನಿಜಲಿಂಗಪ್ಪ ಅವರ ಪುಣ್ಯ ಸ್ಮರಣೆ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿರೋ ನಿಜಲಿಂಗಪ್ಪ ಪ್ರತಿಮೆಗೆ ಸಿಎಂ ಪುಷ್ಪ ನಮನ ಸಲ್ಲಿಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಂಸತ್‌ನಲ್ಲಿ ಕೇಂದ್ರದಿಂದ ವಕ್ಫ್ ಕಾಯ್ದೆ ತಿದ್ದುಪಡಿ ಮಸೂದೆ (Waqf Act Bill) ಮಂಡನೆ ವಿಚಾರಕ್ಕೆ ಪ್ರತಿಕ್ರಿಯಿಸಿದರು. ಇದನ್ನೂ ಓದಿ: ಮುಂದೊಂದು ದಿನ ಮೋದಿ ನಿವಾಸಕ್ಕೆ ಜನ ನುಗ್ಗುತ್ತಾರೆ: ನಾಲಗೆ ಹರಿಬಿಟ್ಟ ಕೈ ಹಿರಿಯ ನಾಯಕ

    ಬಿಜೆಪಿಯವರು, ಎನ್‌ಡಿಎ ಸರ್ಕಾರ ಸಂಪೂರ್ಣವಾಗಿ ಅಲ್ಪಸಂಖ್ಯಾತ ವಿರೋಧಿಗಳು. ಎನ್‌ಡಿಎ ಸರ್ಕಾರ ಜಾತ್ಯಾತೀತ ಸರ್ಕಾರ ಅಲ್ಲ. ಅವರಿಗೆ ಸಾಮಾಜಿಕ ನ್ಯಾಯ ಗೊತ್ತಿಲ್ಲ. ಎನ್‌ಡಿಎ ಕೂಟ ಕಮ್ಯುನಲ್ ಪಾರ್ಟಿಗಳು, ಫ್ಯಾಸಿಸ್ಟ್ ಮನಸ್ಥಿತಿ ಇರೋರು ಎಂದು ವಾಗ್ದಾಳಿ ನಡೆಸಿದರು. ಶುಕ್ರವಾರ (ಆ.9) ಮೈಸೂರಿನಲ್ಲಿ ಜನಾಂದೋಲನ ಸಮಾವೇಶ ನಡೆಯಲಿದೆ. ಅಲ್ಲಿ ಎಲ್ಲ ಮಾತಾಡ್ತೀನಿ ಎಂದರು. ಇದನ್ನೂ ಓದಿ: ದೇಶದ ಅತ್ಯದ್ಭುತ ʻನಾಗʼತಾಣಗಳ ಬಗ್ಗೆ ನಿಮಗೆ ಗೊತ್ತೇ? ಇಲ್ಲಿ ನಂಬಿಕೆ ಸುಳ್ಳಾಗಿಲ್ಲ ಅಂತಾರೆ ಭಕ್ತರು!

    ಇದೇ ವೇಳೆ ಬಿ.ಕೆ ಹರಿಪ್ರಸಾದ್‌ ಭೇಟಿ ವಿಚಾರಕ್ಕೆ ಪ್ರತಿಕ್ರಿಯಿಸಿ, ಹರಿಪ್ರಸಾದ್ ನಮ್ಮ ಪಕ್ಷದ ನಾಯಕರು. ಅವರು ಭೇಟಿಯಾಗೋದ್ರಲ್ಲಿ ಯಾವುದೇ ವಿಶೇಷ ಇಲ್ಲ. ಬುಧವಾರ 1 ಗಂಟೆಗಳ ಕಾಲ ಮಾತುಕತೆ ನಡೆಸಿದರು. ತುಂಬಾ ದಿನಗಳಿಂದ ಅವರು ಭೇಟಿಯಾಗಿರಲಿಲ್ಲ. ಹೀಗಾಗಿ ನಿನ್ನೆ ಭೇಟಿಯಾಗಿ ಮಾತಾಡಿದ್ದಾರೆ. ಉಭಯ ಕುಶಲೋಪರಿ ಮಾತಾಡಿದ್ದೇವೆ ಅಷ್ಟೆ ಎಂದು ತಿಳಿಸಿದರು. ಇದನ್ನೂ ಓದಿ: ಪದಕ ಗೆದ್ದು ತಾಯ್ನಾಡಿಗೆ ಮರಳಿದ ಮನು ಭಾಕರ್‌ಗೆ ಹೂಮಳೆಯ ಸ್ವಾಗತ