Tag: Wardha

  • ಮಹಾರಾಷ್ಟ್ರದ ಸ್ಟೀಲ್ ಕಂಪನಿಯಲ್ಲಿ ಬೆಂಕಿ ಅವಘಡ – 16 ಕಾರ್ಮಿಕರಿಗೆ ಗಾಯ

    ಮಹಾರಾಷ್ಟ್ರದ ಸ್ಟೀಲ್ ಕಂಪನಿಯಲ್ಲಿ ಬೆಂಕಿ ಅವಘಡ – 16 ಕಾರ್ಮಿಕರಿಗೆ ಗಾಯ

    ಮುಂಬೈ: ಸ್ಟೀಲ್ ಕಂಪನಿಯೊಂದರಲ್ಲಿ (Steel Company) ಬೆಂಕಿ ಅವಘಡ ಸಂಭವಿಸಿದ ಪರಿಣಾಮ 16 ಮಂದಿ ಕಾರ್ಮಿಕರು ಗಾಯಗೊಂಡ ಘಟನೆ ಮಹಾರಾಷ್ಟ್ರದ (Maharashtra) ವಾರ್ಧಾ (Wardha) ಜಿಲ್ಲೆಯಲ್ಲಿ ನಡೆದಿದೆ.

    ಘಟನೆಯಲ್ಲಿ ಗಂಭೀರ ಗಾಯಗೊಂಡ ಎಲ್ಲಾ ಕಾರ್ಮಿಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಒಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಗಳು ತಿಳಿಸಿವೆ. ಘಟನೆಯ ಮಾಹಿತಿ ಪಡೆದ ಆಡಳಿತ ಮಂಡಳಿ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ಹತೋಟಿಗೆ ತಂದಿದೆ. ಇದನ್ನೂ ಓದಿ: ಒಳ ಒಪ್ಪಂದದ ರೀತಿ ಲೋಕಾಯುಕ್ತ ಎಸ್ಪಿ ಸಿಎಂ ವಿಚಾರಣೆ ಮಾಡಿದ್ದಾರೆ: ಸ್ನೇಹಮಹಿ ಕೃಷ್ಣ ದೂರು

    ವಾರ್ಧಾ ಜಿಲ್ಲೆಯ ಭುಗಾಂವ್ ಸ್ಟೀಲ್ ಕಂಪನಿಯಲ್ಲಿ ಬೆಂಕಿ ಕಾಣಿಸಿಕೊಂಡು 16 ಕಾರ್ಮಿಕರು ಗಾಯಗೊಂಡಿದ್ದಾರೆ. ಎಲ್ಲಾ ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಲ್ಲಿ ಒಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ.  ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ವಾರ್ಧಾ ಜಿಲ್ಲಾಧಿಕಾರಿ ರಾಹುಲ್ ಕಾರ್ಡಿಲೆ ತಿಳಿಸಿದ್ದಾರೆ. ಇದನ್ನೂ ಓದಿ: ಬೆಂಗ್ಳೂರಲ್ಲಿ ಬೆಳ್ಳಂಬೆಳಗ್ಗೆ ದೆಹಲಿ, ಮುಂಬೈ ಮೂಲದ ಕಂಪನಿಗಳ ಮೇಲೆ ಐಟಿ ದಾಳಿ

  • ಪ್ರೀತಿ ನಿರಾಕರಿಸಿದ್ದಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಂದ ವಿವಾಹಿತ

    ಪ್ರೀತಿ ನಿರಾಕರಿಸಿದ್ದಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಂದ ವಿವಾಹಿತ

    – ಒಂದು ಮಗುವಿನ ತಂದೆಗೆ ಉಪನ್ಯಾಸಕಿ ಮೇಲೆ ಲವ್
    – ಮದ್ವೆಯಾದ್ರೂ ಉಪನ್ಯಾಸಕಿ ಹಿಂದೆ ಬಿದ್ದ

    ಮುಂಬೈ/ನಾಗ್ಪುರ: ಪ್ರೀತಿ ನಿರಾಕರಿಸಿದ್ದಕ್ಕೆ ವ್ಯಕ್ತಿಯೋರ್ವ ಯುವತಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೈದಿರುವ ಘಟನೆ ಮಹಾರಾಷ್ಟ್ರದ ವರ್ಧಾ ಜಿಲ್ಲೆಯಲ್ಲಿ ನಡೆದಿದೆ. ಫೆಬ್ರವರಿ 3ರಂದು ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಲಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವತಿ ಇಂದು ಬೆಳಗ್ಗೆ 6.55 ಗಂಟೆಗೆ ಸಾವನ್ನಪ್ಪಿದ್ದಾರೆ.

    25 ವರ್ಷದ ಅಂಕಿತಾ ಪಿಸುದೆ ಸಾವನ್ನಪ್ಪಿದ ಯುವತಿ. 27 ವರ್ಷದ ವಿಕೇಶ್ ನಾಗರಾಲೆಯನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆಗೆ ಒಳಪಡಿಸಿದ್ದಾರೆ. ಫೆಬ್ರವರಿ ಮೂರರಂದು ವಿಕೇಶ್ ಯುವತಿಯ ಮೇಲೆ ದಾಳಿ ನಡೆಸಿದ್ದನು. ಘಟನೆಯಲ್ಲಿ ಅಂಕಿತಾ ದೇಹ ಶೇ.40ರಷ್ಟು ಸುಟ್ಟಿತ್ತು. ಕೂಡಲೇ ಅಂಕಿತಾರನ್ನು ನಾಗಪುರದ ಆಸ್ಪತ್ರೆಗೆ ದಾಖಲಿಸಿ ವೆಂಟಿಲೇಟರ್ ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಘಟನೆಯಲ್ಲಿ ಅಂಕಿತಾ ದೃಷ್ಟಿ ಕಳೆದುಕೊಂಡಿದ್ದರು. ಇಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೇ ಅಂಕಿತಾ ಸಾವನ್ನಪ್ಪಿದ್ದಾರೆ ಎಂದು ಆರೆಂಜ್ ಸಿಟಿ ಆಸ್ಪತ್ರೆಯ ನಿರ್ದೇಶಕ ಡಾ.ಅನೂಪ್ ಮರಾರ್ ತಿಳಿಸಿದ್ದಾರೆ.

    ಆರೋಪಿ ವಿಕೇಶ್ ವಿವಾಹಿತನಾಗಿದ್ದು, ಒಂದು ಮಗುವಿನ ತಂದೆಯಾಗಿದ್ದಾನೆ. ಆದ್ರೂ ಅಂಕಿತಾರಿಗೆ ತನ್ನನ್ನು ಮದುವೆ ಆಗುವಂತೆ ಕಿರುಕುಳ ನೀಡುತ್ತಿದ್ದನು. ಘಟನೆ ಬಳಿಕ ಪ್ರತಿಕ್ರಿಯಿಸಿದ್ದ ಸಿಎಂ ಉದ್ಧವ್ ಠಾಕ್ರೆ, ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಚಿಕಿತ್ಸಾ ವೆಚ್ಚ ಭರಿಸಲಾಗುತ್ತದೆ ಎಂದು ತಿಳಿಸಿದ್ದರು. ಅಂಕಿತಾ ಸಾವಿಗೆ ದುಃಖ ವ್ಯಕ್ತಪಡಿಸಿರುವ ಮಹಾರಾಷ್ಟ್ರದ ಮಹಿಳಾ ಮತ್ತು ಕಲ್ಯಾಣ ಸಚಿವೆ ಯಶೋಮತಿ ಠಾಕೂರ್, ಧೈರ್ಯಶಾಲಿ ಮಗಳನ್ನು ಕಳೆದುಕೊಂಡಿರುವುದಕ್ಕೆ ದುಃಖವಾಗುತ್ತಿದೆ. ದೇಶದಲ್ಲಿ ಮತ್ತೊಂದು ನಿರ್ಭಯಾಳ ಸಾವು ಆಗಿದೆ. ಅಪರಾಧಿಗೆ ಕಠಿಣ ಶಿಕ್ಷೆ ಆಗಬೇಕು. ಈ ಸಂಬಂಧ ಅಧಿಕಾರಿಗಳು ಶೀಘ್ರವಾಗಿ ತನಿಖೆ ನಡೆಸಬೇಕೆಂದು ಆದೇಶಿಸಿದ್ದಾರೆ.

    ಬಸ್‍ನಿಂದ ಇಳಿಯುತ್ತಿದ್ದಂತೆ ಬೆಂಕಿ ಹಚ್ಚಿದ: ಅಂಕಿತಾ ವರ್ಧಾ ಜಿಲ್ಲೆಯ ದರೋದಾ ಗ್ರಾಮದ ನಿವಾಸಿಯಾಗಿದ್ದು, ಮಹಿಳಾ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿಕೊಂಡಿದ್ದರು. ಪ್ರತಿದಿನದಂತೆ ಅಂಕಿತಾ 75 ಕಿ.ಮೀ. ದೂರದದಲ್ಲಿರುವ ಹಿಂಗಣಘಾಡಟ್ ಕಾಲೇಜಿಗೆ ಬಸ್ ನಲ್ಲಿ ತೆರಳುತ್ತಿದ್ದರು. ಫೆಬ್ರವರಿ 3ರಂದು ವಿಕೇಶ್ ಕಾಲೇಜಿನ ಬಳಿ ನಿಂತು ಅಂಕಿತಾ ಬರುವಿಕೆಗಾಗಿ ಕಾಯುತ್ತಿದ್ದನು. ಅಂಕಿತಾ ಬರುವ ಮೊದಲೇ ಸ್ಕೂಟಿಯಲ್ಲಿದ್ದ ಪೆಟ್ರೋಲ್ ಕ್ಯಾನಿಗೆ ತುಂಬಿ ಕೊಲೆ ಮಾಡಲು ಸಿದ್ಧನಾಗಿದ್ದನು. ಬಸ್ ಬರುತ್ತಿದ್ದಂತೆ ಅಂಕಿತಾ ಬಳಿ ಬಂದ ವಿಕೇಶ್ ಕ್ಷಣಾರ್ಧದಲ್ಲಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಪರಾರಿಯಾಗಿದ್ದನು.

    ಅಂಕಿತಾ ಸಹಾಯಕ್ಕೆ ಬಂದ ವಿದ್ಯಾರ್ಥಿಗಳು: ಬೆಂಕಿ ಹಚ್ಚಿ ವಿಕೇಶ್ ಪರಾರಿಯಾಗುತ್ತಿದ್ದಂತೆ ಸ್ಥಳದಲ್ಲಿ ವಿದ್ಯಾರ್ಥಿಗಳು ಅಂಕಿತಾ ಸಹಾಯಕ್ಕೆ ಬಂದಿದ್ದಾರೆ. ವಿದ್ಯಾರ್ಥಿನಿಯರ ಕಿರುಚಾಟ ಕೇಳಿದ ಜನರು ಅಂಕಿತಾ ಮೇಲೆ ನೀರು ಸುರಿದಿದ್ದಾರೆ. ಆದರೂ ಅಂಕಿತಾರ ಮುಖ ಸೇರಿದಂತೆ ದೇಹದ ಶೇ.40 ರಷ್ಟು ಬೆಂಕಿಗಾಹುತಿಯಾಗಿತ್ತು.

    ಆತ್ಮಹತ್ಯೆಗೆ ಯತ್ನಿಸಿದ್ದ ವಿಕೇಶ್: ಮೊದಲಿಗೆ ಅಂಕಿತಾ ಮತ್ತು ವಿಕೇಶ್ ಸ್ನೇಹಿತರು. ವಿಕೇಶ್ ಮದುವೆಯಾದ ಬಳಿಕ ಅಂಕಿತಾ ಅತನಿಂದ ಅಂತರ ಕಾಯ್ದುಕೊಂಡಿದ್ದರು. ಮದುವೆಯಾದ್ರೂ ನಾನು ನಿನ್ನನ್ನು ಮದುವೆ ಆಗುತ್ತೇನೆ ಎಂದು ವಿಕೇಶ್ ಪೀಡಿಸುತ್ತಿದ್ದನು. ಮದುವೆ ಬಳಿಕ ಅಂಕಿತಾರನ್ನು ಸಂಪರ್ಕಿಸಲು ವಿಕೇಶ್ ಪ್ರಯತ್ನಿಸುತ್ತಿದ್ದನು. ಆದರೆ ಅಂಕಿತಾ ಆತನೊಂದಿಗೆ ಮಾತನಾಡಲು ಇಷ್ಟಪಡುತ್ತಿರಲಿಲ್ಲ. ಈ ಘಟನೆಗೂ ಮುನ್ನ ಅಂದ್ರೆ ಮೂರು ತಿಂಗಳು ಮೊದಲು ಆರೋಪಿ ವಿಕೇಶ್ ಆತ್ಮಹತ್ಯೆಗೆ ಯತ್ನಿಸಿದ್ದನು. ನಾಲ್ಕು ತಿಂಗಳ ಮಗಳ ತಂದೆಯಾಗಿರುವ ವಿಕೇಶ್ ಜೈಲುಪಾಲಾಗಿದ್ದಾನೆ.

  • ಸೇನಾ ಶಸ್ತ್ರಾಸ್ತ್ರ ಸಂಗ್ರಹಾಲಯದಲ್ಲಿ ಬಾಂಬ್ ಸ್ಫೋಟ 6 ಮಂದಿ ಸಾವು, 10ಕ್ಕೂ ಹೆಚ್ಚು ಮಂದಿ ಗಂಭೀರ

    ಸೇನಾ ಶಸ್ತ್ರಾಸ್ತ್ರ ಸಂಗ್ರಹಾಲಯದಲ್ಲಿ ಬಾಂಬ್ ಸ್ಫೋಟ 6 ಮಂದಿ ಸಾವು, 10ಕ್ಕೂ ಹೆಚ್ಚು ಮಂದಿ ಗಂಭೀರ

    ಮುಂಬೈ: ಮಹಾರಾಷ್ಟ್ರದ ವಾರ್ಧಾ ಬಳಿಯಿರುವ ಸೇನಾ ಶಸ್ತ್ರಾಸ್ತ್ರ ಸಂಗ್ರಹಾಲಯ ಪುಲ್‍ಗಾಂವ್ ನಲ್ಲಿ ನಡೆದ ಸ್ಫೋಟದಿಂದಾಗಿ 6 ಮಂದಿ ಸಾವನ್ನಪ್ಪಿ 10 ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

    ಪುಲ್‍ಗಾಂವ್ ನಲ್ಲಿ ಸಂಭವಿಸಿದ ಸ್ಫೋಟದಿಂದಾಗಿ, ಶಸ್ತ್ರಾಸ್ತ್ರ ಕಾರ್ಖಾನೆಯ ಸಿಬ್ಬಂದಿ ಸೇರಿದಂತೆ 5 ಮಂದಿ ಕಾರ್ಮಿಕರು ಮೃತಪಟ್ಟಿದ್ದಾರೆ. ಇವರಲ್ಲಿ 4 ಮಂದಿ ಸ್ಥಳದಲ್ಲೇ ಮೃತಪಟ್ಟರೇ, ಇನ್ನಿಬ್ಬರೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗಿದೆ ಸಾವನ್ನಪ್ಪಿದ್ದಾರೆ. ಇವರಲ್ಲದೇ 11 ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ.

    ಮಧ್ಯಪ್ರದೇಶದ ಕಮಾರಿಯಾ ಶಸ್ತ್ರಾಸ್ತ್ರ ಕಾರ್ಖಾನೆಯಿಂದ 23 ಎಂಎಂ ಫಿರಂಗಿಗಳನ್ನು ವಾರ್ಧಾ ಬಳಿಯಿರುವ ಪುಲ್‍ಗಾಂವ್ ನ ಪ್ರದೇಶದಲ್ಲಿ ವಿಲೇವಾರಿ ಮಾಡಲಾಗುತ್ತಿತ್ತು. ಮಂಗಳವಾರ ಬೆಳಗ್ಗೆ 7.15ರ ಸುಮಾರಿಗೆ ಕಾರ್ಮಿಕನ ಕೈಯಿಂದ ಬಿದ್ದ ಫಿರಂಗಿಯೊಂದು ಏಕಾಏಕಿ ಸ್ಫೋಟಗೊಂಡಿದ್ದರಿಂದ ಅವಘಡ ಸಂಭವಿಸಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ನಿಖಿಲ್ ಪಿಂಗ್‍ಕಲ್ ಹೇಳಿದ್ದಾರೆ.

    ಈ ಬಗ್ಗೆ ಸೇನಾ ಅಧಿಕಾರಿಗಳು ಮಾತನಾಡಿ, ಕಮಾರಿಯಾ ಶಸ್ತ್ರಾಸ್ತ್ರ ಕಾರ್ಖಾನೆಯಿಂದ ತಂದಿದ್ದ ಫಿರಂಗಿಗಳನ್ನು ಕಂಟ್ರಾಕ್ಟರ್ ಹಾಗೂ ಕಾರ್ಮಿಕರ ನೆರವಿನಿಂದ ಪುಲ್‍ಗಾಂವ್ ಪ್ರದೇಶದಲ್ಲಿ ವಿಲೇವಾರಿ ಮಾಡಲಾಗುತ್ತಿತ್ತು. ಈ ವೇಳೆ ಅವಧಿ ಮುಗಿದ ಶೆಲ್ ವೊಂದು ಸ್ಫೋಟಗೊಂಡಿದೆ ಎಂದು ತಿಳಿಸಿದ್ದಾರೆ.

    ಪುಲ್‍ಗಾಂವ್ ಶಸ್ತ್ರಾಸ್ತ್ರ ಸಂಗ್ರಹಾಲಯ ಏಷ್ಯಾದಲ್ಲಿಯೇ ಎರಡನೇ ಅತಿ ದೊಡ್ಡ ಯುದ್ಧ ಸಾಮಗ್ರಿ ಸಂಗ್ರಹಾಲಯವಾಗಿದೆ. 2016ರಲ್ಲಿಯೂ ಇದೇ ಪುಲ್‍ಗಾಂವ್ ಸೇನಾ ಸಂಗ್ರಹಾಲಯದಲ್ಲಿ ಇಂತಹುದೇ ದುರ್ಘಟನೆ ಸಂಭವಿಸಿ 16 ಮಂದಿ ಸಾವಿಗೀಡಾಗಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews