Tag: warner

  • ಚೆಂಡು ವಿರೂಪಗೊಳಿಸುತ್ತಿರೋ ಮತ್ತೊಬ್ಬ ಆಸೀಸ್ ಆಟಗಾರನ ವಿಡಿಯೋ ವೈರಲ್

    ಚೆಂಡು ವಿರೂಪಗೊಳಿಸುತ್ತಿರೋ ಮತ್ತೊಬ್ಬ ಆಸೀಸ್ ಆಟಗಾರನ ವಿಡಿಯೋ ವೈರಲ್

    ಸಿಡ್ನಿ: ಕೇಪ್‍ಟೌನ್ ನಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧ ಟೆಸ್ಟ್ ಪಂದ್ಯದಲ್ಲಿ ಆಸೀಸ್ ನ ಮತ್ತೊಬ್ಬ ಆಟಗಾರ ಚೆಂಡು ವಿರೂಪಗೊಳಿಸಲು ಪ್ರಯತ್ನಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಕೇಪ್‍ಟೌನ್ ಟೆಸ್ಟ್ ಪಂದ್ಯದ ಮೊದಲ ದಿನದಾಟದ ವೇಳೆ ಆಸೀಸ್ ಬೌಲರ್ ಪ್ಯಾಟ್ ಕಮ್ಮಿನ್ಸ್ ತನ್ನತ್ತ ಬರುತ್ತಿದ್ದ ಚೆಂಡನ್ನು ತಡೆದು ಬಳಿಕ ಕಾಲಿನಿಂದ ತುಳಿಯುತ್ತಿರುವ ದೃಶ್ಯಗಳು ವಿಡಿಯೋದಲ್ಲಿ ಸೆರೆಯಾಗಿದೆ.

    ವಿಡಿಯೋ ವೈರಲ್ ಆಗುತ್ತಿದಂತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಸಲು ಆಗ್ರಹ ವ್ಯಕ್ತವಾಗಿತ್ತು. ಆದರೆ ಆಫ್ರಿಕಾ ತಂಡದ ಮಾಜಿ ನಾಯಕ ಗ್ರೇಮ್ ಸ್ಮಿತ್ ಘಟನೆ ಉದ್ದೇಶ ಪೂರ್ವಕವಾಗಿ ನಡೆದಿಲ್ಲ. ಆಕಸ್ಮಿಕವಾಗಿ ನಡೆದಿದೆ ಎಂದು ವಿಕ್ಷಕ ವಿವರಣೆ ನೀಡಿದ ವೇಳೆ ತಿಳಿಸಿದ್ದರು.

    ಘಟನೆ ವೇಳೆ ಆನ್ ಫೀಲ್ಡ್ ಅಂಪೈರ್ ಕೂಡ ಕಂಡು ಚೆಂಡನ್ನು ಪರಿಶೀಲಿಸಿದ್ದ ಬಳಿಕ ಆಟವನ್ನು ಮುಂದುವರೆಸಲು ಅನುಮತಿ ನೀಡಿದ್ದರು. ಈ ಘಟನೆ ಕುರಿತು ದಿನದಾಟದ ಬಳಿಕ ಮಾಧ್ಯಮಗಳು ಸಹ ಪ್ರಶ್ನಿಸಿದ್ದವು. ಈ ವೇಳೆ ಉತ್ತರಿಸಿದ ಕಮ್ಮಿನ್ಸ್ ನಾನು ಚೆಂಡನ್ನು ತಡೆದ ಬಳಿಕ ನೇರ ನಡೆದೆ. ಈ ವೇಳೆ ತಪ್ಪು ನಡೆದಿದೆ. ಕೂಡಲೇ ಅಂಪೈರ್ ಘಟನೆ ಬಗ್ಗೆ ತಿಳಿಸಿದರು ಎಂದು ಸ್ಪಷ್ಟನೆ ನೀಡಿದ್ದರು.

    https://twitter.com/Golfhackno1/status/976807928840839168

    ಈ ಘಟನೆ ನಡೆದ ಎರಡು ದಿನಗಳ ಬಳಿಕ ಆಸೀಸ್ ಆಟಗಾರ ಬ್ಯಾನ್ ಕ್ರಾಫ್ಟ್ ಚೆಂಡು ವಿರೂಪಗೊಳಿಸುವ ವೇಳೆ ಸಿಕ್ಕಿಬಿದ್ದಿದ್ದರು. ಘಟನೆ ಸಂಬಂಧ ಆಸೀಸ್ ಕ್ರಿಕೆಟ್ ಮಂಡಳಿ ನಾಯಕ ಸ್ಮಿತ್, ಉಪನಾಯಕ ವಾರ್ನರನ್ನು ಒಂದು ವರ್ಷ ನಿಷೇಧಗೊಳಿಸಿದ್ದು, ಆರಂಭಿಕ ಆಟಗಾರ ಬ್ಯಾನ್ ಕ್ರಾಫ್ಟ್ 9 ತಿಂಗಳ ನಿಷೇಧ ಎದುರಿಸುತ್ತಿದ್ದಾರೆ.  ಇದನ್ನೂ ಓದಿ:  ಆಸ್ಟ್ರೇಲಿಯಾ ಪರ ಮತ್ತೆ ಕ್ರಿಕೆಟ್ ಆಡಲ್ಲ: ಕ್ಷಮೆಯಾಚಿಸಿ ಕಣ್ಣೀರಿಟ್ಟ ವಾರ್ನರ್

    ಬಿಸಿಸಿಐ ಕೂಡ ಕಳ್ಳಾಟದಲ್ಲಿ ಸಿಕ್ಕಿ ಬಿದ್ದ ಆಸೀಸ್ ಆಟಗಾರರ ಮೇಲೆ ಒಂದು ವರ್ಷ ನಿಷೇಧ ವಿಧಿಸಿದ್ದು ಏಪ್ರಿಲ್ 07 ರಿಂದ ಆರಂಭವಾಗುವ 11ನೇ ಆವೃತ್ತಿಯ ಐಪಿಎಲ್ ಪಂದ್ಯಗಳಿಂದ ಅವರನ್ನು ಹೊರಗಿಟ್ಟಿದೆ. ಇದನ್ನೂ ಓದಿ: 6 ಪದಗಳಿಂದಾಗಿ ಬಚಾವ್ ಆದ್ರು ಆಸೀಸ್ ಕೋಚ್ ಡ್ಯಾರೆನ್ ಲೆಹ್ಮನ್!

    ಘಟನೆ ಕುರಿತು ತನಿಖೆ ಎದುರಿಸಿ ಸಿಡ್ನಿಗೆ ಮರಳಿದ ಆಸೀಸ್ ಆಟಗಾರರು ಪತ್ರಿಕಾಗೋಷ್ಠಿ ನಡೆಸಿ ತಮ್ಮ ಕೃತ್ಯದ ಬಗ್ಗೆ ಕ್ಷಮೆಯಾಚಿಸಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಆಸೀಸ್ ಕೋಚ್ ಡ್ಯಾರೆನ್ ಲೆಹ್ಮನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.  ಇದನ್ನೂ ಓದಿ: ನಾಯಕತ್ವದ ವಿಫಲತೆಯನ್ನು ಒಪ್ಪಿ, ಕ್ಷಮೆ ಕೇಳಿ ಕಣ್ಣೀರಿಟ್ಟ ಸ್ವೀವ್ ಸ್ಮಿತ್

  • ಆಟಗಾರರ ಕಳ್ಳಾಟಕ್ಕೆ ಭಾರೀ ಮೊತ್ತದ ಪ್ರಾಯೋಜಕತ್ವವನ್ನು ಕಳೆದುಕೊಂಡಿತು ಆಸ್ಟ್ರೇಲಿಯಾ!

    ಆಟಗಾರರ ಕಳ್ಳಾಟಕ್ಕೆ ಭಾರೀ ಮೊತ್ತದ ಪ್ರಾಯೋಜಕತ್ವವನ್ನು ಕಳೆದುಕೊಂಡಿತು ಆಸ್ಟ್ರೇಲಿಯಾ!

    ಸಿಡ್ನಿ: ಆಟಗಾರರು ಚೆಂಡು ವಿರೂಪಗೊಳಿಸಿದ ಪ್ರಕರಣದಲ್ಲಿ ಸಿಕ್ಕಿ ಬಿದ್ದ ಬಳಿಕ ಆಸ್ಟ್ರೇಲಿಯಾದ ಮ್ಯಾಗೆಲ್ಲಾನ್ ಫೈನಾನ್ಷಿಯಲ್ ಗ್ರೂಪ್ ಸಂಸ್ಥೆ ತನ್ನ ಪ್ರಯೋಜಕತ್ವವನ್ನು ಹಿಂಪಡೆದಿದೆ. ಇದು ಆಸೀಸ್ ಕ್ರಿಕೆಟ್ ಮಂಡಳಿಗೆ ಭಾರೀ ನಷ್ಟವನ್ನು ಉಂಟು ಮಾಡಿದೆ.

    ಮ್ಯಾಗೆಲ್ಲಾನ್ ಸಂಸ್ಥೆ ತನ್ನ ಪ್ರಯೋಜಕತ್ವನ್ನು ಹಿಂಪಡೆದ ಕಾರಣ ಆಸೀಸ್ ಮಂಡಳಿ ತೀವ್ರ ಸಂಕಷ್ಟಕ್ಕೆ ಒಳಗಾಗುವ ಸಾಧ್ಯತೆ ಇದೆ. ಆಸ್ಟ್ರೇಲಿಯಾ ಮಾಧ್ಯಮಗಳ ವರದಿ ಪ್ರಕಾರ ಮ್ಯಾಗೆಲ್ಲಾನ್ ಸಂಸ್ಥೆಯೊಂದಿಗೆ ಸುಮಾರು 17-20 ದಶಲಕ್ಷ ಆಸ್ಟ್ರೇಲಿಯಾನ್ ಡಾಲರ್(ಅಂದಾಜು 90 ಕೋಟಿ ರೂ.) ಮೊತ್ತದ ಒಪ್ಪಂದವಾಗಿತ್ತು. ಇದರೊಂದಿಗೆ ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿ ಭಾರೀ ಮೊತ್ತದ ಪ್ರಯೋಜಕತ್ವವನ್ನು ಕಳೆದುಕೊಂಡಿದೆ. ಆದರೆ ಕೆಲ ಸಂಸ್ಥೆಗಳು ತಮ್ಮ ಪ್ರಯೋಜಕತ್ವವನ್ನು ಮುಂದುವರೆಸಿವೆ.

    ಈ ಕುರಿತು ಗುರುವಾರ ಪ್ರತಿಕ್ರಿಯೆ ನೀಡಿರುವ ಮ್ಯಾಗೆಲ್ಲಾನ್ ಸಂಸ್ಥೆ, ಆಸ್ಟ್ರೇಲಿಯಾ ಕ್ರಿಕೆಟ್ ಸಂಸ್ಥೆಯೊಂದಿಗೆ ಮಾಡಿಕೊಳ್ಳಲಾಗಿದ್ದ ಮೂರು ವರ್ಷಗಳ ಪ್ರಯೋಜಕತ್ವ ಒಪ್ಪಂದವನ್ನು ಅಂತ್ಯಗೊಳಿಸಲಾಗಿದೆ. ಈ ಹಿಂದೆ ಸಮಗ್ರತೆ, ನಾಯಕತ್ವ, ಸಮರ್ಪಣೆ ಸಂಸ್ಕೃತಿಯ ಮೌಲ್ಯಗಳ ಆಧಾರದ ಮೇಲೆ ಕ್ರಿಕೆಟ್ ಆಸ್ಟ್ರೇಲಿಯಾದೊಂದಿಗೆ ತನ್ನ ಒಪ್ಪಂದವನ್ನು ಮಾಡಿಕೊಳ್ಳಲಾಗಿತ್ತು ಎಂದು ತಿಳಿಸಿದೆ.

    ದಕ್ಷಿಣ ಆಫ್ರಿಕಾದ ಮೂರನೇ ಟೆಸ್ಟ್ ನಲ್ಲಿ ಆಸೀಸ್ ಆಟಗಾರರು ಉದ್ದೇಶ ಪೂರಕವಾಗಿ ನಿಯಮಗಳನ್ನು ಮುರಿದಿರುವ ಕಾರಣ ಇದು ಒಂದು ಪಿತೂರಿಯಾಗಿದ್ದು, ಆಟದ ಸಮಗ್ರತೆಯ ಮನೋಭವಕ್ಕೆ ಧಕ್ಕೆಯಾಗಿದೆ ಎಂದು ಮ್ಯಾಗೆಲ್ಲಾನ್ ಸಿಇಒ ಹ್ಯಾಮಿಶ್ ಡೌಗ್ಲಾಸ್ ಹೇಳಿದ್ದಾರೆ.

    ಆಸೀಸ್ ಕ್ರಿಕೆಟ್ ಮಂಡಳಿ ಬುಧವಾರ ಚೆಂಡು ವಿರೂಪಗೊಳಿದ ಪ್ರಮುಖ ಆಟಗಾರರಾದ ಸ್ಮಿತ್ ಹಾಗೂ ವಾರ್ನರ್ ಮೇಲೆ ಒಂದು ವರ್ಷದ ಕಾಲ ನಿಷೇಧ ವಿಧಿಸಿ ಕಠಿಣ ಸಂದೇಶ ರವಾಸಿತ್ತು. ಆದರೆ ದೇಶಿಯ ಕ್ರಿಕೆಟ್ ನಲ್ಲಿ ಭಾಗವಹಿಸಲು ಅವಕಾಶ ನೀಡಿತ್ತು. ಬಿಸಿಸಿಐ ಕೂಡ ಐಪಿಎಲ್ ನಲ್ಲಿ ಒಂದು ವರ್ಷ ಭಾಗವಹಿಸಿಲು ನಿಷೇಧ ವಿಧಿಸಿದೆ. ಇನ್ನು ಚೆಂಡು ವಿರೂಪಗೊಳಿಸಿದ್ದ ಬ್ಯಾನ್ ಕ್ರಾಫ್ಟ್ 9 ತಿಂಗಳು ನಿಷೇಧಕ್ಕೆ ಒಳಗಾಗಿದ್ದಾರೆ. ಸದ್ಯ ಮೂವರು ಆಟಗಾರರು ವಿಚಾರಣೆಗೊಳಪಟ್ಟ ಬಳಿಕ ಆಸ್ಟ್ರೇಲಿಯಾಗೆ ಹಿಂದಿರುಗಿದ್ದಾರೆ. ಇದನ್ನೂ ಓದಿ:  ಚೆಂಡು ವಿರೂಪಗೊಳಿಸಿದ ಆಸೀಸ್ ಕಳ್ಳಾಟ ಸೆರೆಹಿಡಿದ ಕ್ಯಾಮೆರಾಮೆನ್ ಈಗ ಹೀರೋ!

    ಆಸೀಸ್ ಆಟಗಾರ ವಾರ್ನರ್ ಹಾಗೂ ಬ್ಯಾನ್ ಕ್ರಾಫ್ಟ್ ರೊಂದಿಗೆ ಉಡುಪು ತಯಾರಿಕ ಸಂಸ್ಥೆ ಎಎಸ್‍ಐಸಿಎಸ್ ಮಾಡಿಕೊಂಡಿದ್ದ ಒಪ್ಪಂದವನ್ನು ಅಂತ್ಯಗೊಳಿಸುವುದಾಗಿ ತಿಳಿಸಿದೆ. ಮತ್ತೊಂದೆಡೆ ಎಲೆಕ್ಟ್ರಾನಿಕ್ಸ್ ತಯಾರಿಕಾ ಸಂಸ್ಥೆ ವಾರ್ನರ್ ರೊಂದಿನ ಒಪ್ಪಂದವನ್ನು ಅಂತ್ಯಗೊಳಿಸಿದೆ.

  • ಚೆಂಡು ವಿರೂಪಗೊಳಿಸಿದ್ದಕ್ಕೆ ಸ್ಮಿತ್, ವಾರ್ನರ್ ಗೆ ಒಂದು ವರ್ಷ ನಿಷೇಧ?

    ಚೆಂಡು ವಿರೂಪಗೊಳಿಸಿದ್ದಕ್ಕೆ ಸ್ಮಿತ್, ವಾರ್ನರ್ ಗೆ ಒಂದು ವರ್ಷ ನಿಷೇಧ?

    ಕೇಪ್‍ಟೌನ್: ಇಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧ ಟೆಸ್ಟ್ ಪಂದ್ಯದಲ್ಲಿ ಚೆಂಡು ವಿರೂಪಗೊಳಿಸಿದ ಪ್ರಕರಣದಲ್ಲಿ ಸಿಲುಕಿದ ಆಸೀಸ್ ನಾಯಕ ಸ್ಮಿತ್, ಉಪನಾಯಕ ವಾರ್ನರ್ ರನ್ನು ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿ ಒಂದು ವರ್ಷ ನಿಷೇಧ ಗೊಳಿಸುವ ಸಾಧ್ಯತೆ ಇದೆ ಎಂದು ಆಸೀಸ್ ಮಾಧ್ಯಮಗಳು ವರದಿ ಮಾಡಿದೆ.

    ಆಸೀಸ್ ಆಟಗಾರರ ಕೃತ್ಯದ ಕುರಿತು ಕಟು ಟೀಕೆ ವ್ಯಕ್ತಪಡಿಸಿರುವ ಮಾಧ್ಯಮಗಳು, ತಂಡದ ಕೋಚ್ ಡ್ಯಾರೆನ್ ಲೆಹ್ಮನ್ ಅವರು ಸಹ ತಮ್ಮ ಸ್ಥಾನ ತೊರೆಯುವ ಸಾಧ್ಯತೆಯೂ ಇದೆ ಎಂದು ವರದಿ ಮಾಡಿವೆ. 2013 ರಲ್ಲಿ ಆಸ್ಟ್ರೇಲಿಯಾ ತಂಡದ ಕೋಚ್ ಆಗಿ ಲೆಹ್ಮನ್ ಆಯ್ಕೆ ಆಗಿದ್ದರು. ಸದ್ಯ ಆಸೀಸ್ ಆಟಗಾರರ ಕೃತ್ಯದ ಕುರಿತು ದಕ್ಷಿಣ ಆಫ್ರಿಕಾಗೆ ತೆರಳಿರುವ ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿಯ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

    ಆಟಗಾರರ ಮೋಸದಾಟದ ಬಗ್ಗೆ ಆಸೀಸ್ ಮಾಧ್ಯಮಗಳು ಕೆಂಡಕಾರಿದ್ದು, ಸ್ಮಿತ್ ಹಾಗೂ ವಾರ್ನರ್ ಮೇಲೆ ನಿಷೇಧ ವಿಧಿಸಲು ಆಗ್ರಹಿಸಿವೆ. ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿಯ ಮೇಲು ಹೆಚ್ಚಿನ ಒತ್ತಡ ವ್ಯಕ್ತವಾಗುತ್ತಿದ್ದು, ತನಿಖೆಯ ಕುರಿತು ಅಭಿಮಾನಿಗಳಿಗೆ ಶೀಘ್ರವೇ ಮಾಹಿತಿ ನೀಡುವುದಾಗಿ ಬೋರ್ಡ್ ಅಧ್ಯಕ್ಷ ಸದರ್ಲ್ಯಾಂಡ್ ತಿಳಿಸಿದ್ದಾರೆ.

    ಚೆಂಡು ವಿರೂಪಗೊಳಿಸುವ ಜಾಲ ರೂಪಿಸಿದ್ದ ಆಸೀಸ್ ನಾಯಕ ಸ್ಮಿತ್ ಗೆ ಐಸಿಸಿ ಪಂದ್ಯದ 100% ದಂಡ, ಒಂದು ಪಂದ್ಯದ ನಿಷೇಧ ಹಾಗೂ ಬ್ಯಾಟ್ಸ್ ಮನ್ ಬ್ಯಾನ್ ಕ್ರಾಫ್ಟ್ ಗೆ ಪಂದ್ಯದ 75% ದಂಡ, 3 ಡಿಮೆರಿಟ್ ಅಂಕಗಳನ್ನು ನೀಡಿದೆ. ಅಲ್ಲದೇ ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿ ಸ್ಮಿತ್ ಹಾಗೂ ಉಪನಾಯಕ ವಾರ್ನರ್ ಅವರ ಸ್ಥಾನವನ್ನು ತಲೆ ದಂಡ ಮಾಡಿದೆ. ಇದರೊಂದಿಗೆ ಸ್ಮಿತ್ ಐಪಿಎಲ್ ನ ರಾಜಸ್ಥಾನ ರಾಯಲ್ಸ್ ತಂಡದ ನಾಯಕತ್ವವನ್ನು ಕಳೆದುಕೊಂಡಿದ್ದಾರೆ. ಸದ್ಯ ಆರ್ ಆರ್ ನಾಯಕತ್ವವನ್ನು ಟೀಂ ಇಂಡಿಯಾದ ಬ್ಯಾಟ್ಸ್ ಮನ್ ರಹಾನೆ ಪಡೆದಿದ್ದಾರೆ. ಇದನ್ನೂ ಓದಿ: ರಾಜಸ್ಥಾನ ರಾಯಲ್ಸ್ ನಾಯಕತ್ವ ಸ್ಥಾನದಿಂದ ಸ್ಮಿತ್ ಔಟ್ – ರಹಾನೆಗೆ ಪಟ್ಟ

    ನಡೆದಿದ್ದು ಏನು?
    ಆಸೀಸ್ ಆರಂಭಿಕ ಆಟಗಾರ ಕ್ಯಾಮರಾನ್ ಬ್ಯಾನ್ ಕ್ರಾಪ್ಟ್ ಕೇಪ್ ಟೌನ್ ನಲ್ಲಿ ನಡೆಯುತ್ತಿರುವ ದಕ್ಷಿಣ ಆಫ್ರಿಕಾ ವಿರುದ್ಧದ 3ನೇ ಟೆಸ್ಟ್ ಪಂದ್ಯದ 3ನೇ ದಿನದ ವೇಳೆ ಚೆಂಡನ್ನ ವಿರೂಪಗೊಳಿಸಿದ್ದರು. ಈ ದೃಶ್ಯಗಳು ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ದಿನದಾಟದ ಬಳಿಕ ಮಾತನಾಡಿದ ಆಸೀಸ್ ನಾಯಕ ಸ್ಮಿತ್ ಹಾಗೂ ಬ್ಯಾನ್‍ಕ್ರಾಫ್ಟ್ ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದರು.  ಇದನ್ನೂ ಓದಿ: ಚೆಂಡು ವಿರೂಪಗೊಳಿಸಿದ ಪ್ರಕರಣ: ಐಸಿಸಿ ನೀತಿ ವಿರುದ್ಧ ಹರ್ಭಜನ್ ಕಿಡಿ

  • ಆಸೀಸ್ ವಿರುದ್ಧ ಸತತ 7ನೇ ಟಿ20 ಗೆದ್ದ ಟೀಂ ಇಂಡಿಯಾ!

    ಆಸೀಸ್ ವಿರುದ್ಧ ಸತತ 7ನೇ ಟಿ20 ಗೆದ್ದ ಟೀಂ ಇಂಡಿಯಾ!

    ರಾಂಚಿ:  ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾ ಟಿ20 ಕ್ರಿಕೆಟ್ ಪಂದ್ಯದಲ್ಲಿ ಸತತ 7ನೇ ಗೆಲುವು ಸಾಧಿಸಿದೆ. 2012ರಲ್ಲಿ ಕೊನೆಯ ಬಾರಿಗೆ ಆಸ್ಟ್ರೇಲಿಯಾ ಭಾರತವನ್ನು ಸೋಲಿಸಿತ್ತು. ಇದಾದ ನಂತರ ಒಟ್ಟು 6 ಪಂದ್ಯಗಳು ಇತ್ತಂಡಗಳ ನಡುವೆ ನಡೆದಿತ್ತು. ಈ ಆರೂ ಪಂದ್ಯಗಳಲ್ಲಿ ಟೀಂ ಇಂಡಿಯಾವೇ ಗೆಲುವು ಸಾಧಿಸಿತ್ತು.  ಆಸ್ಟ್ರೇಲಿಯಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 9 ವಿಕೆಟ್ ಗಳ ಗೆಲುವು ಸಾಧಿಸಿದೆ. ಮಳೆ ಹಿನ್ನೆಲೆಯಲ್ಲಿ ಡಕ್ ವರ್ತ್ ಲೂಯಿಸ್ ನಿಯಮದಂತೆ ಗೆಲ್ಲಲು ಭಾರತಕ್ಕೆ 6 ಓವರ್ ಗಳಲ್ಲಿ 48 ರನ್ ಗಳ ಟಾರ್ಗೆಟ್ ಸಿಕ್ಕಿತ್ತು. 48 ರನ್ ಟಾರ್ಗೆಟ್ ಬೆನ್ನತ್ತಿದ ಭಾರತಕ್ಕೆ ರೋಹಿತ್ ಶರ್ಮಾ ಉತ್ತಮ ಆರಂಭ ನೀಡಿದರು. 7 ಎಸೆತಗಳಲ್ಲಿ 1 ಸಿಕ್ಸರ್ ಹಾಗೂ 1 ಬೌಂಡರಿ ಬಾರಿಸಿದ ರೋಹಿತ್ ಶರ್ಮಾ 11 ರನ್ ಗೆ ಔಟಾದರು.

    ಶಿಖರ್ ಧವನ್ 12 ಎಸೆತದಿಂದ 3 ಬೌಂಡರಿಗಳ ನೆರವಿನಿಂದ 15 ಹಾಗೂ ನಾಯಕ ವಿರಾಟ್ ಕೊಹ್ಲಿ 14 ಎಸೆತದಿಂದ 3 ಬೌಂಡರಿಗಳ ಜೊತೆ 22 ರನ್ ಗಳಿಸಿದರು. 5.3ನೇ ಓವರ್ ನಲ್ಲಿ ಬೌಂಡರಿ ಬಾರಿಸುವ ಮೂಲಕ ವಿರಾಟ್ ಕೊಹ್ಲಿ ಟೀಂ ಇಂಡಿಯಾವನ್ನು ಗೆಲುವಿನ ದಡ ದಾಟಿಸಿದರು.

    ಟಾಸ್ ಸೋತು ಬ್ಯಾಟಿಂಗ್ ಗೆ ಇಳಿದ ಆಸ್ಟ್ರೇಲಿಯಾಗೆ ಕೇವಲ 18.4 ಓವರ್ ಮಾತ್ರ ಆಡಲು ಸಾಧ್ಯವಾಯಿತು. ಪಂದ್ಯದ ನಿಗದಿತ ಓವರ್ ಮುಗಿಯಲು 8 ಎಸೆತ ಬಾಕಿ ಇರುವಂತೆಯೇ ಮಳೆ ಆರಂಭವಾಯಿತು. ಈ ಹಿನ್ನೆಲೆಯಲ್ಲಿ ಆಸೀಸ್ ಇನ್ನಿಂಗ್ಸನ್ನು ಅಲ್ಲಿಗೇ ಕೊನೆಗೊಳಿಸಲಾಯಿತು. ಆಸ್ಟ್ರೇಲಿಯಾ ತಂಡಕ್ಕೆ ಮೊದಲ ಓವರ್ ನಲ್ಲೇ ಭುವನೇಶ್ವರ್ ಕುಮಾರ್ ಆಘಾತ ನೀಡಿದರು. 5 ಎಸೆತಗಳಲ್ಲಿ 2 ಬೌಂಡರಿಗಳ ನೆರವಿನಿಂದ 8 ರನ್ ಗಳಿಸಿದ ನಾಯಕ ಡೇವಿಡ್ ವಾರ್ನರ್ ಬೌಲ್ಡ್ ಆದ್ರು.

    ಆದರೆ ಫಿಂಚ್ ಆಸ್ಟ್ರೇಲಿಯಾ ತಂಡಕ್ಕೆ ಉತ್ತಮ ಆಸರೆಯಾದರು. ಒಂದೆಡೆ ಫಿಂಚ್ ಉತ್ತಮವಾಗಿ ಆಡುತ್ತಿದ್ದರೆ ಆಸ್ಟ್ರೇಲಿಯಾ ಆಟಗಾರರೆಲ್ಲರೂ ಪೆವಿಲಿಯನ್ ಪರೇಡ್ ನಡೆಸುತ್ತಿದ್ದರು. ಮ್ಯಾಕ್ಸ್ ವೆಲ್ 17, ಪೇನ್ 17, ಹೆಡ್ 9, ಹೆನ್ರಿಕ್ಸ್ 8, ಕ್ರಿಶ್ಚಿಯನ್ 9, ಕಾಲ್ಟರ್ ನೈಲ್ 1, ಝಂಪಾ 4 ರನ್ ಗಳಿಸಿದರು.

    ಟೀ ಇಂಡಿಯಾ ಪರವಾಗಿ ಜಸ್ಪ್ರೀತ್ ಬೂಮ್ರಾ ಹಾಗೂ ಕುಲದೀಪ್ ಯಾದವ್ ತಲಾ 2 ವಿಕೆಟ್ ಪಡೆದರೆ ಭುವನೇಶ್ವರ್ ಕುಮಾರ್, ಹಾರ್ದಿಕ್ ಪಾಂಡ್ಯಾ ಹಾಗೂ ಚಾಹಲ್ ತಲಾ 1 ವಿಕೆಟ್ ಪಡೆದರು. ಸ್ಪಿನ್ನರ್ ಕುಲದೀಪ್ ಯಾದವ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.