Tag: warrior

  • ಸುದೀಪ್ ‘ವಾರಿಯರ್’ ಲುಕ್ : ಸಿನಿಮಾನಾ, ಜಾಹೀರಾತಾ?

    ಸುದೀಪ್ ‘ವಾರಿಯರ್’ ಲುಕ್ : ಸಿನಿಮಾನಾ, ಜಾಹೀರಾತಾ?

    ಲವು ದಿನಗಳಿಂದ ಸುದೀಪ್ ಅವರ ವಾರಿಯರ್ (Warrior) ಲುಕ್ ಇರುವಂತಹ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಲೇ ಇವೆ. ಇದು ಯಾವ ಸಿನಿಮಾದ್ದು? ಏನ್ ಕಥೆ ಎಂದು ಗೊತ್ತಾಗದೇ ಇರುವ ಕಾರಣದಿಂದಾಗಿ ಅಭಿಮಾನಿಗಳು ತಲೆ ಕೆಡಿಸಿಕೊಂಡಿದ್ದಾರೆ. ಸದ್ಯ ಸುದೀಪ್ ಅಂತಹ ಸಿನಿಮಾ ಮಾಡುತ್ತಿಲ್ಲ. ಮ್ಯಾಕ್ಸ್ ಸಿನಿಮಾದಲ್ಲೂ ಅಂತಹ ಗೆಟಪ್ ಇಲ್ಲ. ಹಾಗಾಗಿ ಇದು ಜಾಹೀರಾತು ಒಂದರ ಲುಕ್ ಇರಬಹುದು ಎಂದು ಹೇಳಲಾಗುತ್ತಿದೆ.

    ಈ ನಡುವೆ ಸುದೀಪ್ ನಟನೆಯ ಮ್ಯಾಕ್ಸ್ ಸಿನಿಮಾದ ಶೂಟಿಂಗ್ ನಿರಂತರವಾಗಿ ನಡೆಯುತ್ತಿದೆ. ಬಿಗ್ ಬಾಸ್ ನಡುವೆಯೂ ತಪ್ಪದೇ ಸುದೀಪ್ ಚಿತ್ರೀಕರಣದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಅಂದುಕೊಂಡಂತೆ ನಡೆದರೆ, ಡಿಸೆಂಬರ್ ಹೊತ್ತಿಗೆ ಮ್ಯಾಕ್ಸ್ (Max) ಸಿನಿಮಾದ ಬಹುತೇಕ ಶೂಟಿಂಗ್ ಮುಗಿಯಲಿದೆ. ಹಾಗಾಗಿ ಫೆಬ್ರವರಿಯಲ್ಲಿ (February) ಸಿನಿಮಾ ರಿಲೀಸ್ ಮಾಡಲು ಸಿದ್ಧತೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

    ಸಿನಿಮಾ ತಂಡವು ಅಧಿಕೃತವಾಗಿ ಮಾಹಿತಿ ನೀಡದೇ ಇದ್ದರೂ, ಚಿತ್ರೋದ್ಯಮದಲ್ಲಿ ಕೇಳಿ ಬರುತ್ತಿರುವ ಮಾತಿನಂತೆ ಫೆಬ್ರವರಿಗೆ ಮ್ಯಾಕ್ಸ್ ತೆರೆ ಕಾಣಲಿದೆ. ಬ್ಯಾಕ್ ಟು ಬ್ಯಾಕ್ ಚಿತ್ರಗಳನ್ನು ಸುದೀಪ್ ಒಪ್ಪಿಕೊಂಡಿದ್ದರಿಂದ ಮತ್ತು ಅವರೇ ಚಿತ್ರವೊಂದನ್ನು ನಿರ್ದೇಶನ ಮಾಡಬೇಕಾಗಿರುವುದರಿಂದ ಪಕ್ಕಾ ಪ್ಲ್ಯಾನ್ ಮಾಡಿಕೊಂಡೇ ಸಿನಿಮಾದ ಶೂಟಿಂಗ್ ಮುಗಿಸಲಿದ್ದಾರಂತೆ.

     

    ಮ್ಯಾಕ್ಸ್ (Max) ಸಿನಿಮಾದಲ್ಲಿ ದಕ್ಷಿಣದ ಖ್ಯಾತ ನಟಿ ವರಲಕ್ಷ್ಮಿ (Varalakshmi) ನಟಿಸಲಿದ್ದಾರೆ ಎಂದು ಹೇಳಲಾಗಿತ್ತು. ಅದು ಈಗ ನಿಜವಾಗಿದೆ. ಚೆನ್ನೈನಲ್ಲಿ ನಡೆಯುತ್ತಿರುವ ಚಿತ್ರೀಕರಣದಲ್ಲಿ ವರಲಕ್ಷ್ಮಿ ಭಾಗಿಯಾಗಿದ್ದಾರೆ. ಅಧಿಕೃತವಾಗಿಯೇ ಈ ಮಾಹಿತಿಯನ್ನು ಚಿತ್ರತಂಡ ಹೇಳಿಕೊಂಡಿದೆ. ‘ವೆಲ್ ಕಮ್ ಆನ್ ಬೋರ್ಡ್ ಮಹಾಲಕ್ಷ್ಮಿ’ ಎಂದು ಪೋಸ್ಟರ್ ವೊಂದನ್ನು ರಿಲೀಸ್ ಮಾಡಿದೆ.

  • ಯೋಧರು ಸೇರಿ ಐವರ ಪ್ರಾಣ ಉಳಿಸಿದ ಮೃತ ಮಹಿಳೆಯ ಅಂಗಾಂಗ

    ಯೋಧರು ಸೇರಿ ಐವರ ಪ್ರಾಣ ಉಳಿಸಿದ ಮೃತ ಮಹಿಳೆಯ ಅಂಗಾಂಗ

    ಮುಂಬೈ: ಮೃತ ಮಹಿಳೆಯ ಅಂಗಾಂಗದಿಂದ ಯೋಧರು ಸೇರಿ ಐವರ ಪ್ರಾಣ ಉಳಿಸಿದ ಸ್ಪೂರ್ತಿ ನೀಡುವ ಸುದ್ದಿಯೊಂದು ಪುಣೆಯಲ್ಲಿ ನಡೆದಿದೆ.

    ಪುಣೆಯ ಸದರ್ನ್ ಕಮಾಂಡ್ ಆಸ್ಪತ್ರೆಯಲ್ಲಿ ಸೇನಾ ಯೋಧರು ಸೇರಿದಂತೆ ಮೃತ ಮಹಿಳೆಯ ಅಂಗಾಂಗ ದಾನವು 5 ಜನರ ಜೀವಗಳನ್ನು ಉಳಿಸಿದೆ. ಮಹಿಳೆಗೆ ಮೆದುಳಿನ ಸಮಸ್ಯೆ ಉಂಟಾಗಿದ್ದರಿಂದ ಆಕೆಯನ್ನು ಕಮಾಂಡ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಘಲಕಾರಿಯಾಗದೇ ಆಕೆ ಸಾಯುವ ಪರಿಸ್ಥಿತಿಯಲ್ಲಿ ಇದ್ದಳು. ಈ ಹಿನ್ನೆಲೆ ಆಕೆಯ ಕುಟುಂಬದವರು ಮಹಿಳೆಯ ಅಗಾಂಗಗಳನ್ನು ಅಗತ್ಯ ಇರುವ ರೋಗಿಗಳಿಗೆ ದಾನ ಮಾಡಬೇಕೆಂದು ನಿರ್ಧರಿಸಿದ್ದಾರೆ. ಇದನ್ನೂ ಓದಿ: ವೀಡಿಯೋ ಬಂದ್ ವಿಚಾರ – ಯಾರು ಏನೇ ಹೇಳಲಿ, ಈಗ ಮೊದಲಿನಂತೆ ನಿಯಮ ಇರಲಿದೆ: ಸಿಎಂ 

    ಜುಲೈ 14 ರ ರಾತ್ರಿ ಮತ್ತು ಜುಲೈ 15 ರ ಮುಂಜಾನೆ, ಮೂತ್ರಪಿಂಡದ ಅಂಗಗಳನ್ನು ಭಾರತೀಯ ಸೇನೆಯ ಇಬ್ಬರು ಸೈನಿಕರಿಗೆ ಕಸಿ ಮಾಡಲಾಯಿತು. ಕಣ್ಣುಗಳನ್ನು ಸಶಸ್ತ್ರ ಪಡೆಗಳ ವೈದ್ಯಕೀಯ ಕಾಲೇಜು ಕಣ್ಣಿನ ಬ್ಯಾಂಕ್‍ನಲ್ಲಿ ಸಂರಕ್ಷಿಸಲಾಗಿದೆ ಮತ್ತು ಪುಣೆಯ ರೂಬಿ ಹಾಲ್ ಕ್ಲಿನಿಕ್‍ನಲ್ಲಿ ರೋಗಿಯೊಬ್ಬರಿಗೆ ಮಹಿಳೆಯ ಲಿವರ್ ನೀಡಲಾಯಿತು.

    ಈ ಕುರಿತು ಟ್ವೀಟ್ ಮಾಡಿದ ಅಧಿಕಾರಿಗಳು ಅಂಗಾಂಗ ದಾನದ ಬಗ್ಗೆ ಶ್ಲಾಘಿಸಿದರು. ಟ್ವೀಟ್‍ನಲ್ಲಿ, ಸದರ್ನ್ ಕಮಾಂಡ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಜ್ಞರ ಉತ್ತಮ ಕೆಲಸ, ಅವರ ಪಟ್ಟುಬಿಡದ ಪ್ರಯತ್ನ ಐದು ತೀವ್ರ ಅಸ್ವಸ್ಥ ರೋಗಿಗಳಿಗೆ ಜೀವನ ಮತ್ತು ದೃಷ್ಟಿ ನೀಡಿತು ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ:  ಖಶೋಗಿ ಹತ್ಯೆಗೆ ಸೌದಿ ಕ್ರೌನ್ ಪ್ರಿನ್ಸ್ ಹೊಣೆಗಾರಿಕೆ: ಬೈಡನ್ 

    Live Tv
    [brid partner=56869869 player=32851 video=960834 autoplay=true]

  • ಸಿಡಿಲು ಬಡಿದು ಅಸ್ಸಾಂನಲ್ಲಿ ಬಾಗಲಕೋಟೆ ಯೋಧ ಸಾವು

    ಸಿಡಿಲು ಬಡಿದು ಅಸ್ಸಾಂನಲ್ಲಿ ಬಾಗಲಕೋಟೆ ಯೋಧ ಸಾವು

    ದಿಸ್ಪುರ್: ಬಾಗಲಕೋಟೆ ಮೂಲದ ಬಿಎಸ್‍ಎಫ್ ಯೋಧ ಅಸ್ಸಾಂನಲ್ಲಿ ರಾತ್ರಿ ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ.

    ಅಶೋಕ್ ಮುಂಡಾಸ್(41) ಮೃತ ಬಿಎಸ್‍ಎಫ್ ಯೋಧ. ಬಾಗಲಕೋಟೆ ತಾಲೂಕಿನ ಶಿರೂರು ಗ್ರಾಮದ ಅಶೋಕ್ ಅವರು ಬಿಎಸ್‍ಎಫ್ 31 ಬಟಾಲಿಯನ್‍ನಲ್ಲಿ ಸೇವೆ ಸಲ್ಲಿಸುತ್ತಿದ್ದರು. ಅಸ್ಸಾಂನ ಬಾಂಗ್ಲಾ ಗಡಿಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಆದರೆ ಶನಿವಾರ ರಾತ್ರಿ ಸಿಡಿಲು ಬಡಿದ ರಭಸಕ್ಕೆ ಅಶೋಕ್ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ:  ಜಾಗತಿಕ ಪರಿಸರ ಉಪಕ್ರಮ ‘ಲೈಫ್ ಮೂವ್ಮೆಂಟ್’ಗೆ ಚಾಲನೆ ನೀಡಲಿರುವ ಮೋದಿ 

    ಅಶೋಕ್ ಅವರು ಬಿಎಸ್‍ಎಫ್‍ನಲ್ಲಿ 16 ವರ್ಷದಿಂದ ಸೇವೆಯಲ್ಲಿದ್ದು, ಈಗ ಪತ್ನಿ, ಇಬ್ಬರು ಹೆಣ್ಣುಮಕ್ಕಳನ್ನು ಅಗಲಿದ್ದಾರೆ. ಪಾರ್ಥೀವ ಶರೀರ ನಾಳೆ ಬೆಳಗ್ಗೆ ಗ್ರಾಮಕ್ಕೆ ಬರುವ ಸಾಧ್ಯತೆ ಇದೆ.

  • ಪತಿ ಆಸೆ ಈಡೇರಿಸಿದ ಮಡದಿ: ಹುತಾತ್ಮ ಯೋಧನ ಪತ್ನಿ ಈಗ ಲೆಫ್ಟಿನೆಂಟ್

    ಪತಿ ಆಸೆ ಈಡೇರಿಸಿದ ಮಡದಿ: ಹುತಾತ್ಮ ಯೋಧನ ಪತ್ನಿ ಈಗ ಲೆಫ್ಟಿನೆಂಟ್

    ನವದೆಹಲಿ: ಲ್ಯಾನ್ಸ್ ನಾಯಕ ಮತ್ತು ವೀರಚಕ್ರ ಪ್ರಶಸ್ತಿ ಪುರಸ್ಕೃತ ಶಾಹಿದ್ ದೀಪಕ್ ಸಿಂಗ್ ಅವರ ಪತ್ನಿ ರೇಖಾ ಸಿಂಗ್ ಅವರು ಭಾರತೀಯ ಸೇನೆಯಲ್ಲಿ ಲೆಫ್ಟಿನೆಂಟ್ ಆಗಿ ಆಯ್ಕೆಯಾಗಿದ್ದಾರೆ.

    ರೇಖಾ ಸಿಂಗ್ ಬಿಹಾರ ರೆಜಿಮೆಂಟ್‍ನ 16ನೇ ಬೆಟಾಲಿಯನ್ ನಾಯಕ ಶಾಹಿದ್ ದೀಪಕ್ ಸಿಂಗ್ ಅವರನ್ನು ವಿವಾಹವಾಗಿದ್ದರು. ಜೂನ್ 15, 2020 ರಂದು ಗಾಲ್ವಾನ್ ಕಣಿವೆಯಲ್ಲಿ ಚೀನಾ ಸೈನಿಕರ ವಿರುದ್ಧ ಹೋರಾಡುತ್ತಿದ್ದಾಗ ದೀಪಕ್ ಸಿಂಗ್ ಹುತಾತ್ಮರಾದರು. ದೀಪಕ್ ಸಿಂಗ್ ಅವರ ಧೈರ್ಯ ಮೆಚ್ಚಿದ ಸರ್ಕಾರ ಮರಣೋತ್ತರ ಪವಿತ್ರ ಪ್ರಶಸ್ತಿಯಾದ ‘ವೀರಚಕ್ರ’ ಪ್ರಶಸ್ತಿಯನ್ನು ಕೊಟ್ಟು ಗೌರವಿಸಿತು. ಇದನ್ನು ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೀಡಿದರು. ಇದನ್ನೂ ಓದಿ: ನಾನು ಒಳ್ಳೆಯದನ್ನೂ ಮಾಡಿದ್ದೀನಿ, ಅದನ್ನೂ ತೋರಿಸಿ – ಕ್ಯಾಮೆರಾ ಮುಂದೆ ಕೈ ಮುಗಿದ ಕಿಂಗ್‍ಪಿನ್ ಆರ್.ಡಿ.ಪಾಟೀಲ್

    Lieutenant Rekha Singh Fulfils The Dream Of Her Husband Who Got Martyred In Galwan Valley. Salutes!

    ದೀಪಕ್ ಸಿಂಗ್ ಅವರಿಗೆ ಯೋಧ ಪರಂಪರೆಯನ್ನು ಮುಂದುವರಿಯಬೇಕು ಎಂಬ ಕನಸಿತ್ತು. ಅದಕ್ಕೆ ಸಾಥ್ ಕೊಟ್ಟ ರೇಖಾ ಸಿಂಗ್ ಯೋಧೆಯಾಗಿ ವೃತ್ತಿಜೀವನವನ್ನು ಮುಂದುವರಿಸಲು ನಿರ್ಧರಿಸಿದರು. ರೇಖಾ ಮತ್ತು ದೀಪಕ್ ವಿವಾಹವಾಗಿ ಕೇವಲ 15 ತಿಂಗಳುಗಳಾಗಿದ್ದವು.

    ಈ ಕುರಿತು ಮಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಸೇನೆಗೆ ಸೇರಬೇಕು ಎಂಬುದು ನನ್ನ ಪತಿಯ ಕನಸು ಮತ್ತು ನನಗೆ ಇದ್ದ ದೇಶಭಕ್ತಿಯ ಕಾರಣ ನಾನು ಶಿಕ್ಷಕ ವೃತ್ತಿಯನ್ನು ಬಿಟ್ಟು ಸೈನ್ಯದಲ್ಲಿ ಕೆಲಸ ಮಾಡಲು ಮನಸ್ಸು ಮಾಡಿದೆ. ಆದರೆ ನೋಯ್ಡಾಕ್ಕೆ ಹೋಗುವುದು ಮತ್ತು ಸೇನೆಗೆ ಸೇರಲು ಪ್ರವೇಶ ಪರೀಕ್ಷೆಗೆ ತರಬೇತಿ ಪಡೆಯುವುದು ಸುಲಭವಾಗಿರಲಿಲ್ಲ. ದೈಹಿಕ ತರಬೇತಿ ಪಡೆದರೂ ಮೊದಲ ಪ್ರಯತ್ನದಲ್ಲಿ ಯಶಸ್ಸು ಸಿಗಲಿಲ್ಲ. ಆದರೆ ನಾನು ಧೈರ್ಯ ಕಳೆದುಕೊಳ್ಳದೆ ಸೇನೆಗೆ ಸೇರಲು ತಯಾರಿ ನಡೆಸುತ್ತಿದ್ದೆ ಎಂದು ತಮ್ಮ ಕಷ್ಟದ ದಿನಗಳನ್ನು ನೆನಪಿಸಿಕೊಂಡರು.ಇದನ್ನೂ ಓದಿ:  ನಮ್ಮ ಮನೆ ಎಕ್ಸ್ ಪೋ 4ನೇ ಆವೃತ್ತಿಗೆ ಎರಡನೇ ದಿನವು ಭರ್ಜರಿ ರೆಸ್ಪಾನ್ಸ್

    Galwan valley martyrs wife passes army test, to be trained as an officer

    ಎರಡನೆ ಪ್ರಯತ್ನದಲ್ಲಿ ನನ್ನ ಕಠಿಣ ಪರಿಶ್ರಮಕ್ಕೆ ತಕ್ಕ ಫಲ ಸಿಕ್ಕಿದ್ದು, ಭಾರತೀಯ ಸೇನೆಯಲ್ಲಿ ಲೆಫ್ಟಿನೆಂಟ್ ಹುದ್ದೆಗೆ ಆಯ್ಕೆಯಾಗಿದ್ದೇನೆ. ಭಾರತೀಯ ಸೇನೆಯಲ್ಲಿ ಲೆಫ್ಟಿನೆಂಟ್ ಹುದ್ದೆಯ ತರಬೇತಿಯು ಮೇ 28 ರಿಂದ ಚೆನ್ನೈನಲ್ಲಿ ಪ್ರಾರಂಭವಾಗಲಿದೆ ಎಂದು ತಿಳಿಸಿದರು.

  • ರಜೆಗೆ ಬಂದಿದ್ದ ಯೋಧ ಸಾವು – ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

    ರಜೆಗೆ ಬಂದಿದ್ದ ಯೋಧ ಸಾವು – ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

    ಚಿಕ್ಕೋಡಿ: ಅನಾರೋಗ್ಯ ಕಾರಣದಿಂದ ರಜೆಗೆ ಬಂದಿದ್ದ ಯೋಧ ಸಾವನ್ನಪ್ಪಿದ್ದಾರೆ. ಪರಿಣಾಮ ಸರ್ಕಾರಿ ಸಕಲ ಗೌರದೊಂದಿಗೆ ಸಂಜೆ ಅಂತಿಮ ನಮನ ಸಲ್ಲಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬೆಳವಿ ಗ್ರಾಮದಲ್ಲಿ ನಡೆದಿದೆ.

    ಜಮ್ಮು-ಕಾಶ್ಮೀರದಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧ ಕಲಗೌಡ ಹಡಗಿನಾಳ. ಕಳೆದ ಮಾರ್ಚ 20 ರಂದು ಎರಡು ತಿಂಗಳ ರಜೆಯ ಮೇಲೆ ಸ್ವಗ್ರಾಮ ಬೆಳಗಾವಿ ಗ್ರಾಮಕ್ಕೆ ಬಂದಿದ್ದರು. ಭಾನುವಾರ ರಾತ್ರಿ ಮನೆಯಲ್ಲಿದ್ದ ಕಲಗೌಡರಿಗೆ ರಕ್ತದೊತ್ತಡ ಕಡಿಮೆಯಾಗಿದ್ದರಿಂದ ಬೆಳವಿ ಸೇನೆ ಆಸ್ಪತ್ರೆಗೆ ಚಿಕಿತ್ಸೆಗೆಂದು ಸಾಗಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕಲಗೌಡ ಮೃತಪಟ್ಟಿದ್ದಾರೆ. ಇದನ್ನೂ ಓದಿ: ತಮ್ಮ ವೇಯ್ಟ್‌ ಲಾಸ್ ಜರ್ನಿ ಬಗ್ಗೆ ಹೇಳಿದ ಕಾಶ್ಮೀರಿ ಪಂಡಿತಾ

    ಅಣ್ಣ-ತಮ್ಮ ಇಬ್ಬರು ಯೋಧರು
    ರೈತ ಕುಟುಂಬದಿಂದ ಬೆಳೆದ ಯೋಧ ಕಲಗೌಡ ಭೀಮಪ್ಪ ಹಡಗಿನಾಳ ಕಳೆದ(2014) ಎಂಟು ವರ್ಷಗಳ ಹಿಂದೆ ಭಾರತೀಯ ಸೇನೆಗೆ ಸೇರಿ ಜಮ್ಮು-ಕಾಶ್ಮೀರದಲ್ಲಿ ಸೇವೆ ಸಲ್ಲಿಸುತ್ತಿದ್ದರು. ಹಿರಿಯ ಸಹೋದರ ಮಲ್ಲಪ್ಪ ಕೂಡ ಭಾರತೀಯ ಸೇನೆಯ ಆಸ್ಸಾಂನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಪ್ರಸ್ತುತ ಕಲಗೌಡ ತಂದೆ, ತಾಯಿ, ಪತ್ನಿಯನ್ನು ಅಗಲಿದ್ದಾರೆ.

    ಬೆಳವಿ ಗ್ರಾಮ ಪಂಚಾಯತಿ ಆವರಣದಲ್ಲಿ ವೀರಯೋಧನ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕೆ ಅನುಕೂಲ ಮಾಡಿದ್ದರಿಂದ ಸಾರ್ವಜನಿಕರು ದರ್ಶನ ಮಾಡಿ ಅಂತಿಮ ನಮನ ಸಲ್ಲಿಸಿದರು.

    ಪುಷ್ಪ ನಮನ ಸಲ್ಲಿಸಿದ ಗಣ್ಯರು
    ಅಲಂಕೃತಗೊಂಡ ವಾಹನದಲ್ಲಿ ಯೋಧ ಕಲಗೌಡ ಪಾರ್ಥಿವ ಶರೀರದ ಮೆರವಣಿಗೆ ನಡೆಸಿದರು. ಕಲಗೌಡ ‘ಅಮರ್ ರಹೇ’ ಎಂಬ ಘೋಷಣೆಯೊಂದಿಗೆ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಪ್ರಾರಂಭದಲ್ಲಿ ಗ್ರಾಮ ಪಂಚಾಯತಿ ಚೇರಮನ್ ಜಯಶ್ರೀ ಸತ್ಯಾಯಿಗೋಳ ಹಿರಿಯ ಸದಸ್ಯರಾದ ರಮೇಶ್ ಕುಲಕರ್ಣಿ, ಬಿಜೆಪಿ ರೈತ ಮೋರ್ಚಾ ಜಿಲ್ಲಾ ಅಧ್ಯಕ್ಷ ಸತ್ಯಪ್ಪ ನಾಯಿಕ, ಪಿಡಿಓ ಶೋಭಾ, ತಳವಾರ ಗ್ರಾಮ ಲೆಕ್ಕಾಧಿಕಾರಿ ಶಾನೂರ ಮುಲ್ತಾನಿ, ಮಾಜಿ ಸೈನಿಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಮಹಾದೇವ ಬನ್ನಕಗೋಳ ಗ್ರಾಮದ ಪರವಾಗಿ ಪುಷ್ಪ ನಮನ ಸಲ್ಲಿಸಿದರು. ಇದನ್ನೂ ಓದಿ: ರಾಜ್ಯದಲ್ಲಿ ಇಂದು 53 ಸೋಂಕು – ಶೂನ್ಯ ಮರಣ ಪ್ರಮಾ

    ಯೋಧನ ಸ್ವತೋಟದಲ್ಲಿ ಅಂತಿಮ ಗೌರವ ನಮನ ನಡೆಯಿತು. ಗ್ರಾಮದ ಜನರು, ಹಾಲಿ, ಮಾಜಿ ಸೈನಿಕರು ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಸೈನಿಕರು ಪಾಲ್ಗೊಂಡಿದ್ದರು.

  • ಸೈಕಲ್ ರ‍್ಯಾಲಿ ಯೋಧರನ್ನು ಆತ್ಮೀಯವಾಗಿ ಬರಮಾಡಿಕೊಂಡ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

    ಸೈಕಲ್ ರ‍್ಯಾಲಿ ಯೋಧರನ್ನು ಆತ್ಮೀಯವಾಗಿ ಬರಮಾಡಿಕೊಂಡ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

    ಚಿಕ್ಕಬಳ್ಳಾಪುರ: ಆಜಾದ್ ಕೀ ಅಮೃತ ಮಹೋತ್ಸವದ ಸಂಭ್ರಮದ ಸವಿನೆನಪಿಗಾಗಿ ಯೋಧರು ಕನ್ಯಾಕುಮಾರಿಯಿಂದ ದೆಹಲಿಯ ರಾಜ್ ಘಟ್ ವರೆಗೂ ಸೈಕಲ್ ರ‍್ಯಾಲಿ ಹಮ್ಮಿಕೊಂಡಿದ್ದು, ಈ ವೇಳೆ ಯೋಧರನ್ನು ಆತ್ಮೀಯವಾಗಿ ಶಾಸಕರು ಬರಮಾಡಿಕೊಂಡರು.

    ಆಜಾದ್ ಕೀ ಅಮೃತ ಮಹೋತ್ಸವ ಪ್ರಯುಕ್ತ ಕನ್ಯಾಕುಮಾರಿಯಿಂದ ರಾಜ್ ಘಟ್ ವರೆಗೂ ಯೋಧರು ಈ ಸೈಕಲ್ ರ‍್ಯಾಲಿ ಹಮ್ಮಿಕೊಂಡಿದ್ದಾರೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಂಗಳೂರು ಮೂಲಕ ಚಿಕ್ಕಬಳ್ಳಾಪುರ ಆಂಧ್ರಪ್ರದೇಶದ ಮಾರ್ಗವಾಗಿ ದೆಹಲಿಯ ರಾಜ್ ಘಟ್ ಗೆ ತೆರಳುವಾಗ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪಟ್ಟಣಕ್ಕೆ ಯೋಧರು ಆಗಮಿಸಿದ್ದಾರೆ. ಯೋಧರಿಗೆ ಜಿಲ್ಲಾಡಳಿತ ಹಾಗೂ ಸ್ಥಳೀಯ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಆತ್ಮೀಯವಾಗಿ ಬರಮಾಡಿಕೊಂಡರು. ಇದನ್ನೂ ಓದಿ:ಸೆ.5ರಂದು ‘ಗೌರಿ ಲಂಕೇಶ್ ದಿನ’ವನ್ನಾಗಿ ಆಚರಿಸಲಿದೆ ಕೆನಡಾದ ಬರ್ನಾಬಿ ನಗರ

    ಯೋಧ ಮಹಾಂತೇಶ್ ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ್ದು, ಉಗ್ರರ ದಾಳಿಯಿಂದ ಅಘ್ಘಾನಿಸ್ತಾನದಲ್ಲಿ ಅರಾಜಕತೆ ಉಂಟಾಗಿದ್ದರೂ, ಭಾರತದಲ್ಲಿ ಜನ ನೆಮ್ಮದಿಯಾಗಿದ್ದಾರೆ. ಇದಕ್ಕೆ ಮತ್ತಷ್ಟು ಆತ್ಮಸ್ಥೈರ್ಯ ತುಂಬುವ ನಿಟ್ಟಿನಲ್ಲಿ ಅಮೃತ ಕಾ ಮಹೋತ್ಸವದ ಕಾರ್ಯಕ್ರಮದಡಿಯಲ್ಲಿ ಕನ್ಯಾಕುಮಾರಿಯಿಂದ ದೆಹಲಿಯ ಮಹಾತ್ಮ ಗಾಂಧಿ ಅವರ ಸಮಾಧಿ ಸ್ಥಳವಾದ ರಾಜ್ ಘಟ್ ಗೆ ಸೈಕಲ್ ರ‍್ಯಾಲಿ ಮೂಲಕ ತೆರಳುತ್ತಿದ್ದು, ಮಾರ್ಗ ಮಧ್ಯೆ ಜನರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡ್ತಿದ್ದೇವೆ ಎಂದು ಸಂತಸ ಹಂಚಿಕೊಂಡರು. ಇದನ್ನೂ ಓದಿ:ರೋಹಿಣಿ ಸಿಂಧೂರಿಯಿಂದ 6 ಕೋಟಿ ಅಕ್ರಮ: ಸಾರಾ ಮಹೇಶ್ ಆರೋಪ

    ಇನ್ನೂ ಭಾರತದ ಪ್ರಜೆಗಳೆಲ್ಲ ಒಂದೇ. ಎಲ್ಲರಲ್ಲೂ ಆತ್ಮಸ್ಥೈರ್ಯ ತುಂಬಿ ದೇಶದ ಬಲಿಷ್ಠತೆಗೊಸ್ಕರ ಜನರಲ್ಲಿ ನೈತಿಕ ಸ್ಥೈರ್ಯ ತುಂಬುವ ಸಲುವಾಗಿ 20 ಮಂದಿ ಸೈನಿಕರು ಈ ಕಾರ್ಯವನ್ನು ಹಮ್ಮಿಕೊಂಡಿದ್ದಾರೆ. ಆಗಸ್ಟ್ 22 ರಂದು ಕನ್ಯಾಕುಮಾರಿಯಲ್ಲಿ ಸೈಕಲ್ ರ‍್ಯಾಲಿ ಆರಂಭವಾಗಿದ್ದು, ಅಕ್ಟೋಬರ್ 2 ರಂದು ದೆಹಲಿಯ ರಾಜ್ ಘಟ್ ತಲುಪಲಿದ್ದಾರೆ.

    ಸೈಕಲ್ ರ‍್ಯಾಲಿ ಮುಖಾಂತರ ಚಿಕ್ಕಬಳ್ಳಾಪುರ ಜಿಲ್ಲೆಗೆ ಆಗಮಿಸಿದ ಯೋಧರನ್ನು ಜಿಲ್ಲಾಡಳಿತದಿಂದ ಆತ್ಮೀಯವಾಗಿ ಬರ ಮಾಡಿಕೊಂಡು ಸ್ವಾಗತ ಕೋರಿ ಸತ್ಕರಿಸಲಾಯಿತು. ರಾಷ್ಟ್ರಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳು ಸಂದ ಹಿನ್ನೆಲೆಯಲ್ಲಿ ದೇಶಾದ್ಯಂತ ಅಜಾದ್ ಕೀ ಅಮೃತ ಮಹೋತ್ಸವ ಸಡಗರ ಸಂಭ್ರಮದಿಂದ ಜರುಗುತ್ತಿದ್ದು, ಸಿ.ಆರ್.ಫಿ.ಎಫ್ ಯೋಧರು ಸಹ ಸಂಭ್ರಮದಲ್ಲಿ ತೊಡಗಿದ್ದಾರೆ. ಇದನ್ನೂ ಓದಿ:ಮದುವೆಗೆ ಹಿರಿಯ ಮಗಳು ಒಪ್ಪದ್ದಕ್ಕೆ ಕಿರಿಯ ಮಗಳನ್ನೇ ಕಿಡ್ನಾಪ್‍ಗೈದ್ರು

    ಸಾವಿರಾರು ಕಿಲೋಮೀಟರ್ ದೂರ ಸೈಕಲ್ ಮುಖಾಂತರ ಕ್ರಮಿಸುವ ಸಾಹಸಕ್ಕೆ ಮುಂದಾಗಿದ್ದು, ಈ ನಿಟ್ಟಿನಲ್ಲಿ ಸೈಕಲ್ ಜಾಥ ಕೈಗೊಂಡ ಯೋಧರ ರ‍್ಯಾಲಿ ಬಾಗೇಪಲ್ಲಿ ಪಟ್ಟಣಕ್ಕೆ ಬಂದ ವೇಳೆ ತಾಲೂಕು ಆಡಳಿತ ಪಟ್ಟಣದಲ್ಲಿ ಯೋಧರಿಗೆ ಭಾವಪೂರ್ಣ ಸ್ವಾಗತ ಕೋರಿ ಸೈನಿಕರಿಗೆ ಸಕಲ ವ್ಯವಸ್ಥೆ ಕಲ್ಪಿಸಿತು.

    ಸೈಕಲ್ ಜಾಥದಲ್ಲಿ ಬಂದ ಯೋಧರಿಗೆ ಆತ್ಮೀಯ ಸ್ವಾಗತ ಕೋರಿದ ಬಾಗೇಪಲ್ಲಿ ತಾಲೂಕು ಆಡಳಿತ ರಾತ್ರಿ ತಂಗಲಿಕ್ಕೆ ಸಕಲ ವ್ಯವಸ್ಥೆ ಮಾಡಿದೆ. ಬೆಳಿಗ್ಗೆ ಧ್ವಜಾರೋಹಣ, ಹಾಗೂ ಸಾಂಸ್ಕøತಿಕ ಕಾರ್ಯಕ್ರಮಗಳ ಮೂಲಕ ಸೈನಿಕರ ಬೀಳ್ಕೊಡುಗೆ ಕಾರ್ಯವನ್ನು ನಡೆಸಿಕೊಟ್ಟಿತು. ಇದನ್ನೂ ಓದಿ:ರೋಹಿಣಿ ಸಿಂಧೂರಿಯಿಂದ 6 ಕೋಟಿ ಅಕ್ರಮ: ಸಾರಾ ಮಹೇಶ್ ಆರೋಪ

  • ಉಗ್ರರೊಂದಿಗಿನ ಗುಂಡಿನ ಕಾಳಗದಲ್ಲಿ ಕಲಬುರಗಿ ಯೋಧ ಹುತಾತ್ಮ

    ಉಗ್ರರೊಂದಿಗಿನ ಗುಂಡಿನ ಕಾಳಗದಲ್ಲಿ ಕಲಬುರಗಿ ಯೋಧ ಹುತಾತ್ಮ

    ಕಲಬುರಗಿ: ಬಾಂಗ್ಲಾ ಗಡಿಯಲ್ಲಿ ಉಗ್ರರೊಂದಿಗೆ ನಡೆದ ಗುಂಡಿನ ಕಾಳಗದಲ್ಲಿ ಜಿಲ್ಲೆಯ ಆಳಂದ ತಾಲೂಕಿನ ಚಿಂಚನಸೂರ ಯೋಧ ರಾಜಕುಮಾರ.ಎಂ.ಮಾವಿನ ಅವರು ಇಂದು ಹುತ್ಮಾತರಾಗಿದ್ದಾರೆ.

    ತ್ರಿಪುರಾ ರಾಜ್ಯದ ಭಾರತ ಮತ್ತು ಬಾಂಗ್ಲಾ ಗಡಿಯಲ್ಲಿರುವ ಧಲಾಯಿ ಪ್ರದೇಶದಲ್ಲಿ ಗಸ್ತು ನಡೆಸುತ್ತಿದ್ದ ಸಮಯದಲ್ಲಿ ಉಗ್ರರು ನಡೆಸಿದ ಗುಂಡಿನ ದಾಳಿ ವೇಳೆ ಎದೆಗೆ ಗುಂಡು ತಾಕಿ ಸ್ಥಳದಲ್ಲಿಯೇ ಹುತಾತ್ಮರಾದರು ಎನ್ನಲಾಗಿದೆ.

    ವೀರ ಯೋಧನ ಸಾವಿನ ಸುದ್ದಿ ತಿಳಿದು ಗ್ರಾಮದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಯೋಧನ ಪಾರ್ಥಿವ ಶರೀರ ಗುರುವಾರ ಗ್ರಾಮಕ್ಕೆ ಆಗಮಿಸುವ ಸಾಧ್ಯತೆಯಿದೆ. ಗ್ರಾಮದಲ್ಲಿ ನೀರವ ಮೌನ ಆವರಿಸಿದೆ.

  • ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರಿಗಾಗಿ ಗದಗ್‍ನಲ್ಲಿ ಸ್ಮರಣೋತ್ಸವ

    ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರಿಗಾಗಿ ಗದಗ್‍ನಲ್ಲಿ ಸ್ಮರಣೋತ್ಸವ

    ಗದಗ: ಪುಲ್ವಾಮಾ ದಾಳಿ ವೇಳೆ ಹುತಾತ್ಮರಾದ ಯೋಧರಿಗಾಗಿ ವಿಭಿನ್ನ ಹಾಗೂ ವಿಶಿಷ್ಟವಾಗಿ ಸ್ಮರಣೋತ್ಸವ ಕಾರ್ಯಕ್ರಮವನ್ನು ಗದಗ ಜಿಲ್ಲೆಯಲ್ಲಿ ನಡೆಸಲಾಯಿತು.

    ಆಟೋ ಚಾಲಕರ ಹಾಗೂ ಮಾಲೀಕರ ಸಂಘದಿಂದ ಹುತಾತ್ಮ ಯೋಧರ ಭಾವಚಿತ್ರಗಳನ್ನು ಆಟೋದಲ್ಲಿ ಮೆರವಣಿಗೆ ಮಾಡುವ ಮೂಲಕ ಸ್ಮರಣೋತ್ಸವ ಆಚರಿಸಿದರು. ಈ ಆಟೋ ರ‍್ಯಾಲಿಗೆ ಸಣ್ಣ ಕೈಗಾರಿಕೆ ಹಾಗೂ ವಾರ್ತಾ ಮತ್ತು ಪ್ರಸಾರ ಇಲಾಖೆ ಸಚಿವ ಸಿ.ಸಿ ಪಾಟೀಲ್ ವೀರಯೋಧರಿಗೆ ಪುಷ್ಪ ನಮನ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

    ಈ ಸಂದರ್ಭದ್ಲಿ ಇತ್ತೀಚಿಗೆ ಭಾರತೀಯ ಸೇನೆಯಿಂದ ನಿವೃತ್ತಿ ಹೊಂದಿದ ಯೋಧರಿಗೆ ಸನ್ಮಾನಿಸಲಾಯಿತು. ಅವರು ಸಹ ಇಂದು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.

    ನಗರದ ತೋಂಟದಾರ್ಯ ಮಠದಿಂದ ಆರಂಭವಾದ ರ್ಯಾಲಿ, ಅವಳಿ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಮಹಾತ್ಮ ಗಾಂಧಿ ವೃತ್ತದ ವರೆಗೆ ಈ ಆಟೋ ರ್ಯಾಲಿ ನಡೆಯಿತು. ಈ ವೇಳೆ ಸಚಿವ ಸಿ.ಸಿ.ಪಾಟೀಲ್, ಶಾಸಕ ಕಳಕಪ್ಪ ಬಂಡಿ, ಎಸ್.ವಿ ಸಂಕನೂರ ಸೇರಿದಂತೆ ಅನೇಕರು ಸ್ಮರಣೋತ್ಸವದಲ್ಲಿ ಭಾಗಿಯಾಗಿದ್ದರು.

    ಗದಗ ಆಟೋ ಚಾಲಕ ಸಂಘದಿಂದ ಭಾರತೀಯ ಹುತಾತ್ಮ ಯೋಧರಿಗೆ ಗೌರವ ಸಮರ್ಪಿಸಿದರು. ದಾರಿಯುದ್ದಕ್ಕೂ ಪುಷ್ಪಗಳನ್ನು ಎರಚುವ ಮೂಲಕ ಭಾರತ ಮಾತೆಗೆ ಜೈಘೋಷ ಕೂಗಿದರು.

  • 21 ವರ್ಷ ಗಡಿ ಕಾದು ಬಂದ ಯೋಧನಿಗೆ ಅದ್ಧೂರಿ ಸ್ವಾಗತ

    21 ವರ್ಷ ಗಡಿ ಕಾದು ಬಂದ ಯೋಧನಿಗೆ ಅದ್ಧೂರಿ ಸ್ವಾಗತ

    ಚಿಕ್ಕಮಗಳೂರು: 21 ವರ್ಷಗಳ ಕಾಲ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿಯ ಬಳಿಕ ಗ್ರಾಮಕ್ಕೆ ಬಂದ ಬಿಎಸ್‍ಎಫ್ ಯೋಧರೊಬ್ಬರಿಗೆ ಗ್ರಾಮಸ್ಥರು ತೆರೆದ ವಾಹನದಲ್ಲಿ ಮೆರವಣಿಗೆ ಮಾಡಿ ಅದ್ಧೂರಿ ಸ್ವಾಗತ ಕೋರಿದ್ದಾರೆ. ಜಿಲ್ಲೆಯ ಕಡೂರು ತಾಲೂಕಿನ ಎಸ್.ಬಿದರೆ ಗ್ರಾಮದ ಚಂದ್ರಶೇಖರ್ ಕಳೆದ 21 ವರ್ಷಗಳಿಂದ ಸೇನೆಯಲ್ಲಿ ಸೇವೆ ಸಲ್ಲಿಸಿದ್ದರು. ಕಾಶ್ಮೀರ, ಪಂಜಾಬ್, ಪಶ್ಚಿಮ ಬಂಗಾಳ, ಪಾಕಿಸ್ತಾನದ ಗಡಿ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಸ್ವದೇಶಕ್ಕೆ ಬೆನ್ನು ಮಾಡಿ ಶತ್ರುಗಳಿಗೆ ಎದೆಯೊಡ್ಡಿ ಸೇವೆ ಸಲ್ಲಿಸಿ ಹಿಂದಿರುಗಿದ್ದರು.

    ಚಂದ್ರಶೇಖರ್ ಬರುವ ವಿಷಯ ತಿಳಿದ ಗ್ರಾಮದ ಯುವಕರು ಹಾಗೂ ಬಾಲ್ಯ ಸ್ನೇಹಿತರು ಪಿಕಪ್ ಗಾಡಿಗೆ ಮಧುವಣಗಿತ್ತಿಯಂತೆ ಬಣ್ಣ-ಬಣ್ಣದ ಹೂಗಳಿಂದ ಅಲಂಕಾರ ಮಾಡಿ ಕಾದು ಕೂತಿದ್ದರು. ಯೋಧ ಚಂದ್ರು ಗ್ರಾಮದ ದ್ವಾರಬಾಗಿಲಿಗೆ ಬರುತ್ತಿದ್ದಂತೆ ಹೂವಿನ ಹಾರ ಹಾಕಿ ತಬ್ಬಿ ಮುದ್ದಾಡಿದ್ದಾರೆ. ತೆರೆದ ವಾಹನದಲ್ಲಿ ಊರಿನ ತುಂಬಾ ಮೆರವಣಿಗೆ ಮಾಡಿದ್ದಾರೆ. ಯೋಧ ಚಂದ್ರಶೇಖರ್ ಗ್ರಾಮಕ್ಕೆ ಬರುತ್ತಿದ್ದಂತೆ ಗ್ರಾಮಸ್ಥರು, ಶಾಲಾಮಕ್ಕಳು ಜೈಕಾರದೊಂದಿಗೆ ಘೋಷಣೆ ಕೂಗಿ ಬರಮಾಡಿಕೊಂಡಿದ್ದಾರೆ.

    ಕಾಶ್ಮೀರದ ಹಿಮಪಾತದಲ್ಲಿ ಸಿಲುಕಿ ಮೂರು ದಿನ ಒಂದು ಲೀಟರ್ ನೀರು ಕುಡಿದು ಬದುಕಿದ್ದ ಘಟನೆಯನ್ನ ಹೇಳಿಕೊಳ್ಳುವ ಮೂಲಕ ಗಡಿ ಕಾಯೋ ಯೋಧರು ಹೇಗೆಲ್ಲಾ ಕಷ್ಟ ಪಡುತ್ತಾರೆ ಅನ್ನೋದನ್ನ ನಿವೃತ್ತಿಯ ನಂತರ ಚಂದ್ರು ಗ್ರಾಮದಲ್ಲಿ ತಮ್ಮ ಅನುಭವವನ್ನು ಚಂದ್ರಶೇಖರ್ ಹಂಚಿಕೊಂಡರು. ಮುಂದಿನ ದಿನಗಳಲ್ಲೂ ನಾನು ಯೋಧನಾಗುತ್ತೇನೆ ಎಂದು ನಮ್ಮ ಗ್ರಾಮ ಸೇರಿ ಸುತ್ತಮುತ್ತಲಿನ ಗ್ರಾಮದ ಯಾರೇ ಬಂದರೂ ಅವರಿಗೆ ಟ್ರೈನಿಂಗ್ ನೀಡೋದಕ್ಕೂ ನಾನು ಸಿದ್ಧ ಎಂದಿದ್ದಾರೆ. ಇದನ್ನೂ ಓದಿ: ಅಂಗೈ ಮೇಲೆ ವೀರ ಯೋಧನನ್ನ ಬರಮಾಡ್ಕೊಂಡ ಗ್ರಾಮಸ್ಥರು

    ಓರ್ವ ಯೋಧ ಸೇನೆಯಲ್ಲಿ ಸಲ್ಲಿಸಿ ಬಂದು ನನ್ನ ಬದುಕು ಸಾರ್ಥಕ ಎಂದು ಭಾವಿಸುತ್ತಾರೆ. ಚಳಿ-ಮಳೆ-ಗಾಳಿ-ಬಿಸಿಲು ಯಾವುದನ್ನೂ ಲೆಕ್ಕಿಸದೆ ಗಡಿ ಕಾಯೋ ಹೆಮ್ಮೆಯ ಯೋಧರಿಗೆ ಈ ರೀತಿಯ ಸ್ವಾಗತ ಸಿಕ್ಕಾಗ ಅವರ ಸಂತೋಷಕ್ಕೆ ಪಾರವೇ ಇರೋದಿಲ್ಲ. ಎಸ್. ಬಿದರೆ ಗ್ರಾಮದ ಚಂದ್ರು ಮುಖದಲ್ಲಿ ಆ ಸಾರ್ಥಕ ಹಾಗೂ ಸಂತೋಷದ ಭಾವ ವ್ಯಕ್ತವಾಗಿತ್ತು.

  • ಅನಾರೋಗ್ಯದಿಂದ ಕರ್ತವ್ಯನಿರತ ಹಾಸನದ ಯೋಧ ಛತ್ತಿಸ್‍ಗಡದಲ್ಲಿ ನಿಧನ

    ಅನಾರೋಗ್ಯದಿಂದ ಕರ್ತವ್ಯನಿರತ ಹಾಸನದ ಯೋಧ ಛತ್ತಿಸ್‍ಗಡದಲ್ಲಿ ನಿಧನ

    – ನಾಳೆ ಹುಟ್ಟೂರಿಗೆ ಮೃತದೇಹ ಆಗಮನ

    ಹಾಸನ: ಕರ್ತವ್ಯದಲ್ಲಿರುವಾಗ ಅನಾರೋಗ್ಯದಿಂದ ಹಾಸನ ಜಿಲ್ಲೆಯ ಯೋಧ ಸಾವನ್ನಪ್ಪಿದ್ದಾರೆ.

    ಅರಕಲಗೂಡು ತಾಲೂಕಿನ ಬಾಣದಹಳ್ಳಿ ಗ್ರಾಮದ ಬಿ.ಆರ್.ರಾಕೇಶ್ (22) ಮೃತ ಯೋಧ. ಅರಕಲಗೂಡು ಪ.ಪಂ.ನೌಕರರಾಗಿರುವ ಶಿವಮ್ಮ, ರಾಜು ದಂಪತಿ ಪುತ್ರ ರಾಕೇಶ್ ಹಾಸನದ ಎನ್.ಡಿ.ಆರ್.ಕೆ ಕಾಲೇಜಿನಲ್ಲಿ ಪದವಿ ಶಿಕ್ಷಣ ಪಡೆಯುತ್ತಿದ್ದಾಗಲೇ ಭಾರತೀಯ ಸೇನೆ ಸೇರಿದ್ದರು. ಕಳೆದ ಮೂರು ವರ್ಷಗಳ ಹಿಂದೆ ಬೆಳಗಾವಿ ಸೈನಿಕ ಶಾಲೆಯಲ್ಲಿ (2018) ಮಿಲಿಟರಿ ಸೇನೆ ತರಬೇತಿ ಪಡೆದು ಹಿಮಾಚಲ ಪ್ರದೇಶದಲ್ಲಿ ದೇಶ ಸೇವೆ ಸಲ್ಲಿಸುತ್ತಿದ್ದರು.

    ಕಳೆದ ನಾಲ್ಕು ದಿನಗಳ ಹಿಂದೆ ಕರ್ತವ್ಯದಲ್ಲಿದ್ದಾಗಲೇ ಆರೋಗ್ಯ ಸಮಸ್ಯೆಯಿಂದ ಅಸ್ವಸ್ಥರಾಗಿದ್ದು, ಬಳಿಕ ಛತ್ತಿಸ್‍ಗಡದ ಮಿಲಿಟರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಯೋಧ ಇಂದು ಮೃತಪಟ್ಟಿದ್ದಾರೆ. ಇತ್ತೀಚೆಗಷ್ಟೇ ಸೇನಾಧಿಕಾರಿಗಳು ರಾಕೇಶ್ ಅನಾರೋಗ್ಯದ ಬಗ್ಗೆ ಅವರ ಕುಟುಂಬಕ್ಕೆ ಮಾಹಿತಿ ನೀಡಿದ್ದು, ತಾಯಿ ಶಿವಮ್ಮ ಮತ್ತು ಸಹೋದರ ರಕ್ಷಿತ್ ಛತ್ತಿಸ್‍ಗಡ್ ಗೆ ತೆರಳಿದ್ದರು. ಯೋಧನ ಪಾರ್ಥೀವ ಶರೀರವು ನಾಳೆ ಹುಟ್ಟೂರಿಗೆ ಆಗಮಿಸಲಿದೆ ಎಂದು ಎಂದು ಕುಟುಂಬದ ಮೂಲಗಳು ತಿಳಿಸಿವೆ.