Tag: warrior

  • ಪ್ರಿಯತಮೆಯ ತಂದೆಗೆ ಗುಂಡು ಹಾರಿಸಿದ ಯೋಧ!

    ಪ್ರಿಯತಮೆಯ ತಂದೆಗೆ ಗುಂಡು ಹಾರಿಸಿದ ಯೋಧ!

    ದಾವಣಗೆರೆ: ಪ್ರೀತಿಯ ವಿಚಾರವಾಗಿ ಯೋಧನೊಬ್ಬ ತನ್ನ ಪ್ರಿಯತಮೆಯ ತಂದೆ ಮೇಲೆ ಗುಂಡು ಹಾರಿಸಿರುವ ಘಟನೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಬಿದರಘಟ್ಟೆ ಗ್ರಾಮದಲ್ಲಿ ನಡೆದಿದೆ.

    ದೇವರಾಜ್ (27) ಗುಂಡು ಹಾರಿಸಿದ ಯೋಧ. ದೇವರಾಜ್ ಅದೇ ಗ್ರಾಮದ ಪ್ರಕಾಶ್ ಎಂಬವರ ಮಗಳನ್ನು ಪ್ರೀತಿಸುತ್ತಿದ್ದರು. ಯೋಧ ಕೆಲವು ದಿನಗಳ ಹಿಂದೆ ರಜೆ ಮೇಲೆ ಗ್ರಾಮಕ್ಕೆ ಬಂದಿದ್ದರು. ಈ ವೇಳೆ ಪ್ರೀತಿಯ ವಿಚಾರವಾಗಿ ಯುವತಿಯ ತಂದೆ ಪ್ರಕಾಶ್ ಹಾಗೂ ದೇವರಾಜ್ ನಡುವೆ ವಾಗ್ವಾದ ನಡೆದಿದೆ.

    ಜಗಳದಲ್ಲಿ ಕೋಪಗೊಂಡ ದೇವರಾಜ್, ಯುವತಿಯ ತಂದೆ ಪ್ರಕಾಶ್ ಮೇಲೆ ಗುಂಡು ಹಾರಿಸಿದ್ದಾರೆ. ಗುಂಡೇಟು ತಿಂದ ಪ್ರಕಾಶ್ ಅವರನ್ನು ತಕ್ಷಣ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ಹೊನ್ನಾಳಿ ಪೊಲೀಸರು ಬಂದು ಯೋಧನನ್ನು ಬಂಧಿಸಿದ್ದಾರೆ.

    ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಸುಮಲತಾಗೆ ಹಾಕಿದ್ದ ಮೊದಲ ಮತ ಅಸಿಂಧು

    ಸುಮಲತಾಗೆ ಹಾಕಿದ್ದ ಮೊದಲ ಮತ ಅಸಿಂಧು

    ಮಂಡ್ಯ: ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರಿಗೆ ಹಾಕಿದ್ದ ಮೊದಲ ಮತ ಅಸಿಂಧು ಆಗಿದೆ.

    ಸುಮಲತಾ ಅವರಿಗೆ ಮೊದಲ ಅಂಚೆ ಮತ ಹಾಕಿದ್ದ ಯೋಧನ ಮತವನ್ನು ಚುನಾವಣಾ ಆಯೋಗ ತಿರಸ್ಕರಿಸಿದೆ. ಮಂಡ್ಯ ಮೂಲದ ಸಿಆರ್‌ಪಿಎಫ್‌ ಯೋಧ ರಾಜನಾಯಕ್ ಮತವನ್ನು ಆಯೋಗ ಅಸಿಂಧುಗೊಳಿಸಿದೆ.

    ರಾಜನಾಯಕ್ ಅಂಚೆ ಮತದಾನ ಮೂಲಕ ಸುಮಲತಾ ಅವರಿಗೆ ಮತ ಹಾಕಿದ್ದರು. ಯೋಧ ತಾನು ಸುಮಲತಾಗೆ ಮತ ಹಾಕಿದ್ದನ್ನ ಸೆಲ್ಫಿ ಮೂಲಕ ಫೇಸ್‍ಬುಕ್‍ಗೆ ಹಾಕಿ ಪ್ರಚಾರ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಮತದಾನದ ಗೌಪ್ಯತೆ ಹಾಳುಮಾಡಿದ್ದಕ್ಕೆ ಯೋಧನ ಮತವನ್ನು ಚುನಾವಣಾ ಆಯೋಗ ಅಸಿಂಧುಗೊಳಿದೆ.

    ಗೌಪ್ಯ ಮತದಾನವನ್ನು ಮರೆತು ಹಕ್ಕಿನ ದುರ್ಬಳಕೆ ಬಹಿರಂಗಗೊಳಿಸದ್ದಕ್ಕೆ ಯೋಧನ ವಿರುದ್ಧ ದೂರು ದಾಖಲಾಗಿತ್ತು. ದೂರಿನ ಹಿನ್ನೆಲೆಯಲ್ಲಿ ಚುನಾವಣಾ ಆಯೋಗದಿಂದ ಯೋಧನ ಮತವನ್ನು ಅಸಿಂಧುಗೊಳಿಸಿ ಶಿಸ್ತು ಕ್ರಮಕೈಗೊಂಡಿದೆ.

    ಪೋಸ್ಟ್‌ನಲ್ಲಿ ಏನಿತ್ತು?
    ಯುಗಾದಿ ಹಬ್ಬದ ದಿನ ನಿಮ್ಮ ಸಿಆರ್‌ಪಿಎಫ್‌ ಯೋಧನಿಂದ ಸುಮಲತಾ ಅಂಬರೀಶ್ ಮೇಡಂ ಅವರಿಗೆ ಮೊದಲನೇ ವೋಟ್ ಹಾಕುವುದರ ಮೂಲಕ ಅವರಿಗೆ ಒಳ್ಳೆದಾಗಲಿ. ಲೀಡಿಂಗ್‍ನಿಂದ ಗೆಲ್ಲುತ್ತಾರೆ ಎಂಬ ನಿರೀಕ್ಷೆ ಇದೆ. ನಮ್ಮ ಮಂಡ್ಯ ತುಂಬಾ ಅಭಿವೃದ್ಧಿ ಹೊಂದಬೇಕು. ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಅದು ನಿಲ್ಲಬೇಕು. ನಮ್ಮ ರೈತರು ಕಷ್ಟದಿಂದ ಹೊರಗೆ ಬರಬೇಕು. ನಮ್ಮಂತ ಯೋಧರ ಕುಟುಂಬಕ್ಕೆ ಒಳ್ಳೆದಾಗಬೇಕು. ಈ ಹಿಂದೆ ನಮ್ಮ ಅಂಬರೀಶ್ ಅಣ್ಣ ಮಂಡ್ಯಕ್ಕೆ ಎಷ್ಟೋ ಕೊಡುಗೆ ನೀಡಿದ್ದಾರೆ. ಅವರ ಪ್ರೀತಿ ನಿಮ್ಮಲ್ಲಿದೆ ದಯವಿಟ್ಟು ಎಲ್ಲರು ಸುಮಲತಾ ಅವರಿಗೆ ಸಪೋರ್ಟ್ ಮಾಡಿ ಗೆಲ್ಲಿಸಿ ಎಂದು ಮನವಿ ಮಾಡಿಕೊಂಡಿದ್ದರು. ಜೊತೆಗೆ ತಾವು ಮತ ಮಾಡಿದ್ದ ಫೋಟೋ ಪೋಸ್ಟ್ ಮಾಡಿದ್ದರು.

  • ಕಾದಾಟದ ವೇಳೆ ಪತಿ ಹುತಾತ್ಮ, ನಂತ್ರ ಗರ್ಭಪಾತ – ಪರೀಕ್ಷೆ ಬರೆದು ಸೇನೆ ಸೇರಿದ ಪತ್ನಿ

    ಕಾದಾಟದ ವೇಳೆ ಪತಿ ಹುತಾತ್ಮ, ನಂತ್ರ ಗರ್ಭಪಾತ – ಪರೀಕ್ಷೆ ಬರೆದು ಸೇನೆ ಸೇರಿದ ಪತ್ನಿ

    ಡೆಹಾಡ್ರೂನ್: ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರ ವಿರುದ್ಧ ಹೋರಾಡುವಾಗ ಹುತಾತ್ಮರಾಗಿದ್ದ ಯೋಧನ ಪತ್ನಿಯೂ ಈಗ ದೇಶಸೇವೆಗೆ ಸೇರಿದ್ದಾರೆ.

    ಸಂಗೀತಾ ಮಾಲ್ ಭಾರತೀಯ ಸೇನೆಗೆ ಸೇರಿದ ಯೋಧನ ಪತ್ನಿ. ಇವರು ಚೆನ್ನೈನಲ್ಲಿ ಅಧಿಕಾರಿಗಳ ತರಬೇತಿ ಅಕಾಡೆಮಿಯಿಂದ ಶನಿವಾರ ಭಾರತೀಯ ಸೈನ್ಯಕ್ಕೆ ಸೇರ್ಪಡೆಗೊಂಡಿದ್ದಾರೆ.

    ಸಂಗೀತಾ ಮಾಲ್ ಅವರು 2013ರಲ್ಲಿ ಗೂರ್ಖಾ ರೈಫಲ್‍ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಯೋಧ ಶಿಶಿರ್ ಮಾಲ್ ಅವರನ್ನು ಮದುವೆಯಾಗಿದ್ದರು. ಮೊದಲು ಸಂಗೀತಾ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು. ಜಮ್ಮು ಕಾಶ್ಮೀರದ ಬಾರಾಮುಲ್ಲಾ ಸೆಕ್ಟರ್ ನಲ್ಲಿ ಗೂರ್ಖಾ ರೈಫಲ್ಸ್ ನಲ್ಲಿ ಶಿಶಿರ್ ಸೇವೆ ಸಲ್ಲಿಸುತ್ತಿದ್ದರು. ಸೆಪ್ಟೆಂಬರ್ 2015ರಲ್ಲಿ ಭಯೋತ್ಪಾದಕರ ವಿರುದ್ಧ ಹೋರಾಡುತ್ತಿದ್ದ ಸಂದರ್ಭದಲ್ಲಿ ಶಿಶಿರ್ ಹುತಾತ್ಮರಾಗಿದ್ದರು.

    ಪತಿಯ ಮರಣದ ನಂತರ ಸಂಗೀತಾ ಅವರು ಶಿಕ್ಷಕಿ ವೃತ್ತಿಯನ್ನು ಬಿಟ್ಟಿದ್ದರು. ಅಷ್ಟೇ ಅಲ್ಲದೇ ಅದೇ ನೋವಿನಿಂದ ಸಂಗೀತಾಗೆ ಗರ್ಭಪಾತ ಕೂಡ ಆಗಿತ್ತು. ಬಳಿಕ ನಮ್ಮ ತಾಯಿ ಅವರಿಗೆ ವಿದ್ಯಾಭ್ಯಾಸ ಮಾಡಿ ಬ್ಯಾಂಕಿಂಗ್ ಕೆಲಸ ಮಾಡಲು ಪ್ರೋತ್ಸಾಹಿಸಿದರು ಎಂದು ಸಂಗೀತ ಮೈದುನಾ ಸುಶಾಂತ್ ಮಾಲ್ ತಿಳಿಸಿದ್ದಾರೆ.

    2016ರಲ್ಲಿ ರಾನಿಖೇತ್ ನಲ್ಲಿ ಸೇನಾ ಪದಕವನ್ನು ನೀಡಿ ಶಿಶಿರ್ ಅವರನ್ನು ಗೌರವಿಸಲಾಗಿತ್ತು. ಈ ಕಾರ್ಯಕ್ರಮದ ನೋಡಿ ಪ್ರೇರಣೆಗೊಂಡು ಸಂಗೀತಾ ಅವರು ಸೇನೆ ಸೇರಲು ಮುಂದಾದರು. ಕೆಲಸ ಮಾಡಿಕೊಂಡು ಅಧಿಕಾರಿಗಳ ತರಬೇತಿ ಅಕಾಡೆಮಿ(ಒಟಿಎ) ಪರೀಕ್ಷೆಯನ್ನು ಬರೆದು ಸಂಗೀತಾ ಉತ್ತೀರ್ಣರಾದರು. ಅಕಾಡೆಮಿಯಲ್ಲಿನ ಕಠಿಣ ತರಬೇತಿಯ ನಂತರ ಸಂಗೀತಾ ಈಗ ಸೇನೆಯ ಶಾರ್ಟ್ ಸರ್ವೀಸ್ ಕಮಿಷನ್ ನಲ್ಲಿ ಲೆಫ್ಟಿನೆಂಟ್ ಆಗಿ ಆಯ್ಕೆ ಆಗಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಮತ್ತೊಬ್ಬ ಮಗ ವಾಪಸ್ ಬರ್ತಿದ್ದಾರೆ – ಗುರು ಪೋಷಕರ ಸಂತಸ

    ಮತ್ತೊಬ್ಬ ಮಗ ವಾಪಸ್ ಬರ್ತಿದ್ದಾರೆ – ಗುರು ಪೋಷಕರ ಸಂತಸ

    – ಬಿಬಿಎಂಪಿ ವತಿಯಿಂದ 25 ಲಕ್ಷ ರೂ. ಪರಿಹಾರ

    ಬೆಂಗಳೂರು: ವಿಂಗ್ ಕಮಾಂಡರ್ ಅಭಿನಂದನ್ ಭಾರತಕ್ಕೆ ವಾಪಸ್ ಕರೆತರುತ್ತಿರುವುದು ಸಂತಸ ವಿಷಯ. ನಮ್ಮ ಸಹೋದರರ ನೋವಿನಲ್ಲೂ ಅವರು ವಾಪಸ್ ಬರುತ್ತಿರುವುದು ಸಂತಸ ತಂದಿದೆ ಎಂದು ಯೋಧರ ಗುರು ಅವರ ಪೋಷಕರು ಹೇಳಿದ್ದಾರೆ.

    ಬಿಬಿಎಂಪಿ ಕಚೇರಿಗೆ ಆಗಮಿಸಿದ್ದ ವೇಳೆ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಅವರು, ಅಭಿನಂದನ್ ವಾಪಸ್ ಬರುತ್ತಿರುವುದು ನಮ್ಮ ಮತ್ತೊಬ್ಬ ಮಗ ವಾಪಸ್ ಬರುತ್ತಿದಂತೆ ಎನಿಸುತ್ತಿದೆ ಎಂದರು. ಇದೇ ವೇಳೆ ಮಾತನಾಡಿದ ಗುರು ಸಹೋದರ, ನನ್ನ ದೊಡ್ಡಣ್ಣ ವಾಪಸ್ ಬರುತ್ತಿದ್ದಾರೆ. ಆದರೆ ನಮ್ಮನ್ನು ಮೋಸ ಮಾಡಿದವರು ಈ ದೇಶದಲ್ಲಿ ಮತ್ತೆ ಉಳಿದಂತೆ ಮಾಡಬೇಕು ಎಂದರು.

    ಈ ವೇಳೆ ಮಾತನಾಡಿದ ಬಿಬಿಎಂಪಿ ಮೇಯರ್ ಅವರು, ಪಾಲಿಕೆ ವತಿಯಿಂದ 25 ಲಕ್ಷ ರೂ. ಪರಿಹಾರ ನೀಡಲಾಗಿದೆ. ಬಿಬಿಎಂಪಿ ಸದಸ್ಯರ ಗೌರವಧನ ಹಾಗು ನೌಕರರ ಹಣ ಒಟ್ಟು ಸೇರಿ ಹಣ ನೀಡಲಾಗಿದೆ. ಅಲ್ಲದೇ ಪಾಲಿಕೆ ನೌಕರರು ಸ್ವಾತಂತ್ರ್ಯ ಉದ್ಯಾನವನದಲ್ಲಿ ಯೋಧ ಗುರು ಅವರ ಪ್ರತಿಮೆಯನ್ನು ನಿರ್ಮಿಸಲು ಮನವಿ ಮಾಡಿದ್ದಾರೆ. ಈ ಕುರಿತು ಕೌನ್ಸಿಲ್ ಸಭೆಯಲ್ಲಿ ಪ್ರಸ್ತಾಪ ಮಾಡಿ ನಿರ್ಣಯ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

    ಇದೇ ವೇಳೆ ತಮ್ಮ ಕುಟುಂಬದಲ್ಲಿ ಯಾವುದೇ ರೀತಿಯ ಅಸಮಾಧಾನ ಇಲ್ಲ ಎಂದು ಸ್ಪಷ್ಟಪಡಿಸಿದ ಗುರು ಅವರ ತಾಯಿ ಚಿಕ್ತಾಯಮ್ಮ ಅವರು, ನಿಮ್ಮೆಲರ ಸಹಾಯದಿಂದ ನಾವು ಮತ್ತೆ ನಗು ಕಾಣಲು ಸಾಧ್ಯವಾಗುತ್ತಿದೆ. ಅತ್ತೆ, ಸೊಸೆ ಮಧ್ಯೆ ಜಗಳ ಹಾಗೂ ಪೊಲೀಸ್ ಠಾಣೆಯ ಮೆಟ್ಟಿಲೆರಿದ್ದಾರೆ ಎಂದು ವರದಿಯಾಗಿದೆ. ಆದರೆ ಅಂತಹ ಯಾವುದೇ ಘಟನೆ ನಡೆದಿಲ್ಲ. ನಮ್ಮ ಸೊಸೆ ಮಗಳ ರೀತಿ ಇದ್ದೇವೆ. ಜನರ ಮಾತಿನಿಂದ ಮತ್ತೆ ನೋವು ಆಗುತ್ತಿದೆ. ದಯವಿಟ್ಟು ಇದನ್ನೆಲ್ಲ ಯಾರೂ ನಂಬಬೇಡಿ, ಸದ್ಯ ನಮಗೇ ಹಣಕ್ಕಿಂತ ನೆಮ್ಮದಿ ಬೇಕು ಅಷ್ಟೇ ಎಂದು ಸ್ಪಷ್ಟಪಡಿಸಿದರು.

    ಮಗನ ಸುದ್ದಿ ಕೇಳಿ ಮನೆಯಲ್ಲಿ ಯಾರು ಒಂದು ವಾರ ಅನ್ನ ತಿನ್ನಲು ಆಗದ ಸ್ಥಿತಿ ಇತ್ತು. ಸದ್ಯ ಸರ್ಕಾರ ಉದ್ಯೋಗ ನೀಡುವ ಭರವಸೆ ನೀಡಿದೆ. ನನಗೆ ಹಣ ಬೇಡ, ನಮ್ಮ ಗೌರವ ಉಳಿಸಿಕೊಂಡರೆ ಸಾಕು ಎಂದು ಕಣ್ಣೀರಿಟ್ಟರು. ಈ ವೇಳೆ ಗುರು ತಂದೆ ಹೊನ್ನಯ್ಯ ಹಾಗೂ ಸಹೋದರ ಹಾಜರಿದ್ದರು.

    ಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • 16 ವರ್ಷಗಳ ಕಾಲ ಗಡಿಕಾದ ಯೋಧ- ನಿವೃತ್ತಿ ನಂತರ ಗ್ರಾಮದ ಯುವಕರಿಗೆ ಸೇನಾ ತರಬೇತಿ

    16 ವರ್ಷಗಳ ಕಾಲ ಗಡಿಕಾದ ಯೋಧ- ನಿವೃತ್ತಿ ನಂತರ ಗ್ರಾಮದ ಯುವಕರಿಗೆ ಸೇನಾ ತರಬೇತಿ

    ಬಳ್ಳಾರಿ: ನಿಜವಾದ ದೇಶಪ್ರೇಮಿಗಳು ಯಾವತ್ತೂ ದೇಶಕ್ಕಾಗಿ ಒಂದಿಲ್ಲೊಂದು ಸೇವೆ ಮಾಡುತ್ತಲೇ ಇರುತ್ತಾರೆ. ಸೇನೆಯಲ್ಲಿ 16 ವರ್ಷ ದುಡಿದು ನಿವೃತ್ತರಾಗಿರೋ ಬಳ್ಳಾರಿಯ ಮೊಹ್ಮದ್ ರಫಿ ಅವರು ಈಗ ಯುವಕರಿಗೆ ತರಬೇತಿ ನೀಡ್ತಿದ್ದಾರೆ.

    ಯುವಕರಿಗೆ ತರಬೇತಿ ನೀಡುತ್ತಿರುವ ರಫಿ ದೈಹಿಕ ಶಿಕ್ಷಕರಲ್ಲ. ಬದಲಾಗಿ ನಿವೃತ್ತರಾಗಿರೋ ಯೋಧರು. ಬಳ್ಳಾರಿಯ ಹೂವಿನಹಡಗಲಿ ತಾಲೂಕಿನ ಮಿರಾಕೊರನಹಳ್ಳಿಯ ಮೊಹ್ಮದ್ ರಫಿಯವರು 2002ರಲ್ಲಿ ಸಿಪಾಯಿಯಾಗಿ ಸೇನೆ ಸೇರಿದ ಮೊಹ್ಮದ್ ರಫಿ ಅವರು 2018ರವರೆಗೆ ಸೇನಾಪಡೆಯಲ್ಲಿ ನಾಯಕ್, ಹವಾಲ್ದಾರ್ ಆಗಿ ಸೇವೆ ಸಲ್ಲಿಸಿದ್ದಾರೆ. ಪಂಜಾಬ್, ಜಮ್ಮುಕಾಶ್ಮೀರ ಸೇರಿದಂತೆ ದೇಶದ ಹಲವೆಡೆ ದೇಶ ಕಾದಿದ್ದಾರೆ. ನಿವೃತ್ತಿ ಬಳಿಕ ಈಗ ಯುವಕರಿಗೆ ಸೇನಾ ತರಬೇತಿ ನೀಡುತ್ತಿದ್ದಾರೆ.

    ಸೇನೆ, ಭದ್ರತಾಪಡೆಯಲ್ಲಿ ಹೇಗಿರಬೇಕು ಅನ್ನೋದರ ಜೊತೆಗೆ ಪೊಲೀಸ್ ಇಲಾಖೆಯಲ್ಲಿ ನೇಮಕಾತಿ ಯಾವ ರೀತಿ ನಡೆಯುತ್ತದೆ ಅನ್ನೋದರ ಬಗ್ಗೆಯೂ ಬೆಳಗ್ಗೆ-ಸಂಜೆ ತರಬೇತಿ ನೀಡ್ತಿದ್ದಾರೆ. ಗ್ರಾಮದ 25ಕ್ಕೂ ಹೆಚ್ಚು ಯುವಕರು ಈ ತರಬೇತಿಯಿಂದ ಪುಳಕಿತರಾಗಿದ್ದಾರೆ ಎಂದು ತರಬೇತಿ ಪಡೆಯುತ್ತಿರುವ ಬಸವರಾಜ್ ಹೇಳಿದ್ದಾರೆ.

    ಸಾಮಾನ್ಯವಾಗಿ ಯೋಧರು ನಿವೃತ್ತಿ ನಂತರ ಬೇರೊಂದು ಉದ್ಯೋಗ ಆಯ್ಕೆ ಮಾಡಿಕೊಳ್ಳುತ್ತಾರೆ. ಆದ್ರೆ, ಮೊಹ್ಮದ್ ರಫಿಯವರು ಮಾತ್ರ ದೇಶಕ್ಕೆ ಮತ್ತಷ್ಟು ಸೇವೆ ಸಲ್ಲಿಸ್ತಿದ್ದಾರೆ.

    https://www.youtube.com/watch?v=JdmLx3DcpHw

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮತ್ತೆ ಸೇನೆಗೆ ಹಿಂದಿರುಗಲು ಪತಿ ನಿರ್ಧಾರ – ಪತ್ನಿ ನೇಣಿಗೆ ಶರಣು

    ಮತ್ತೆ ಸೇನೆಗೆ ಹಿಂದಿರುಗಲು ಪತಿ ನಿರ್ಧಾರ – ಪತ್ನಿ ನೇಣಿಗೆ ಶರಣು

    ಗಾಂಧಿನಗರ: ಯೋಧನ ಪತ್ನಿಯೊಬ್ಬರು ಪುಲ್ವಾಮಾ ದಾಳಿ ಹಿನ್ನೆಲೆಯಲ್ಲಿ ಭಯಗೊಂಡಿದ್ದು, ತನ್ನ ಪತಿಗೂ ಇದೇ ರೀತಿ ಆಗಬಹುದೆಂಬ ಭೀತಿಯಿಂದ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುಜರಾತಿನಲ್ಲಿ ನಡೆದಿದೆ.

    ದ್ವಾರಕಾದ ಜಿಲ್ಲೆಯ ಖಂಭಾಲಿಯಾ ನಗರದಲ್ಲಿ ಈ ಘಟನೆ ನಡೆದಿದ್ದು, ಮೀನಾಕ್ಷಿ ಜೆಟ್ವಾ (22) ಮೃತ ಯೋಧನ ಪತ್ನಿ. ಮೀನಾಕ್ಷಿ ಅವರು ತಮ್ಮ ಪತಿ ಭೂಪೇಂದ್ರ ಸಿಂಗ್ ಜೆಟ್ವಾ ಅವರ ಯೋಗೇಶ್ವರನಗರದ ನಿವಾಸದಲ್ಲಿ ಸೀಲಿಂಗ್ ಫ್ಯಾನ್‍ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

    ಭೂಪೇಂದ್ರ ಸಿಂಗ್ ಅವರು ಜಮ್ಮು ಮತ್ತು ಕಾಶ್ಮೀರದ ಗುಲ್‍ಮಾರ್ಗ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಸೇನೆಯಿಂದ ರಜೆ ಪಡೆದು ಮನೆಗೆ ಬಂದಿದ್ದರು. ಈ ವೇಳೆ ಇತ್ತೀಚಿಗೆ ನಡೆದ ಹಿಮಪಾತದಲ್ಲಿ ಅದೃಷ್ಟವಶಾತ್ ನಾನು ಸಾವಿನಿಂದ ಬಚಾವಾದೆ ಎಂದು ಕುಟುಂಬದವರಿಗೆ ಹೇಳಿಕೊಂಡಿದ್ದಾರೆ. ಆದರೆ ಈ ವಿಚಾರ ಕೇಳಿದ ಪತ್ನಿ ಮೀನಾಕ್ಷಿ ಆತಂಕಗೊಂಡಿದ್ದರು. ಇದರ ಬೆನ್ನಲ್ಲೇ ಪುಲ್ವಾಮಾ ಉಗ್ರರ ದಾಳಿಯಲ್ಲಿ 44 ಯೋಧರು ಹುತಾತ್ಮರಾದರು. ಈ ದಾಳಿಯ ಬಗ್ಗೆ ತಿಳಿದ ಬಳಿಕ ಮೀನಾಕ್ಷಿ ಆಘಾತಕ್ಕೊಳಗಾಗಿದ್ದರು ಎಂದು ಇನ್ಸ್ ಪೆಕ್ಟರ್ ಕೆ.ಎಸ್ ಜಡೇಜಾ ಅವರು ಹೇಳಿದ್ದಾರೆ.

    ಭೂಪೇಂದ್ರ ಮತ್ತು ಮೀನಾಕ್ಷಿ ಅವರು ಎರಡು ವರ್ಷದ ಹಿಂದೆ ಮದುವೆಯಾಗಿದ್ದರು. ಪುಲ್ವಾಮಾ ಉಗ್ರರ ದಾಳಿಯ ಬಳಿಕ ಪತ್ನಿ ಮೀನಾಕ್ಷಿ ಪತಿ ಬಳಿ, ನೀವು ಮತ್ತೆ ಸೇನೆಗೆ ಹೋಗಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ. ಆದರೆ ಯೋಧ ಭೂಪೇಂದ್ರ ಅವರು ರಜೆ ಮುಗಿದ ಬಳಿಕ ಸೇನೆಗೆ ಹೋಗಲು ನಿರ್ಧರಿಸಿದ್ದರು.

    ಶನಿವಾರ ರಾತ್ರಿ ಭೂಪೇಂದ್ರ ಮತ್ತು ಅವರ ಕುಟುಂಬದವರು ಕಾರ್ಯಕ್ರಮವೊಂದಕ್ಕೆ ಮನೆಯಿಂದ ಹೊರಗೆ ಹೋಗಿದ್ದರು. ಆದರೆ ಮೀನಾಕ್ಷಿ ಮಾತ್ರ ಮನೆಯಲ್ಲಿದ್ದರು. ಕಾರ್ಯಕ್ರಮ ಮುಗಿಸಿಕೊಂಡು ಎಲ್ಲರೂ ಮನೆಗೆ ಹಿಂದಿರುಗಿದ್ದಾರೆ. ಈ ವೇಳೆ ಮೀನಾಕ್ಷಿ ತನ್ನ ರೂಮನ್ನು ಲಾಕ್ ಮಾಡಿಕೊಂಡಿದ್ದರು. ಪತ್ನಿ ಬಾಗಿಲು ಲಾಕ್ ಮಾಡಿಕೊಂಡಿದ್ದನ್ನು ನೋಡಿ ಪತಿ ಸುಮ್ಮನೆ ತೊಂದರೆ ಕೊಡುವುದು ಬೇಡ ಎಂದು ಬೇರೆ ರೂಮಿನಲ್ಲಿ ಮಲಗಿದ್ದಾರೆ.

    ಭಾನುವಾರ ಬೆಳಗ್ಗೆ ಮೀನಾಕ್ಷಿ ರೂಮಿನಿಂದ ಹೊರ ಬರಲಿಲ್ಲ. ಇದರಿಂದ ಆತಂಕಗೊಂಡ ಪತಿ ಭೂಪೇಂದ್ರ ಬಾಗಿಲು ಬಡಿದಿದ್ದಾರೆ. ಆದರೆ ಪತ್ನಿ ರೂಮಿನ ಬಾಗಿಲು ತೆಗೆಯಲಿಲ್ಲ. ಕೊನೆಗೆ ಪತಿ ಬಾಗಿಲು ಮುರಿದು ಒಳಗೆ ಹೋಗಿದ್ದಾರೆ. ಆಗ ಪತ್ನಿ ಸೀಲಿಂಗ್ ಫ್ಯಾನಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಜಡೇಜಾ ಅವರು ತಿಳಿಸಿದ್ದಾರೆ.

    ಕುಟುಂಬದ ಸದಸ್ಯರು ನೋವಿನಲ್ಲಿದ್ದರು. ಹೀಗಾಗಿ ಅವರನ್ನು ವಿಚಾರಣೆ ಮಾಡಲು ಸಾಧ್ಯವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮುಂದಿನ ತಿಂಗ್ಳು ನಿಶ್ಚಯವಾಗಿತ್ತು ಹುತಾತ್ಮರಾದ ಮೇಜರ್ ಮದ್ವೆ

    ಮುಂದಿನ ತಿಂಗ್ಳು ನಿಶ್ಚಯವಾಗಿತ್ತು ಹುತಾತ್ಮರಾದ ಮೇಜರ್ ಮದ್ವೆ

    ಶ್ರೀನಗರ: ಜಮ್ಮು ಕಾಶ್ಮೀರ ಪುಲ್ವಾಮಾ ದಾಳಿ ನಡೆದ 48 ಗಂಟೆಗಳ ಅವಧಿಯಲ್ಲೇ ಸುಧಾರಿತ ಐಇಡಿ ಸ್ಫೋಟ ಸಂಭವಿಸಿ 31 ವರ್ಷದ ಮೇಜರ್ ಚಿತ್ರೇಶ್ ಸಿಂಗ್ ಬಿಶ್ಟ್ ಹುತಾತ್ಮರಾಗಿದ್ದರು.

    ರಜೌರಿ ಜಿಲ್ಲೆಯ ನೌಶೇರಾ ಸೆಕ್ಟರ್‍ನ ಲಾಮಾ ಪ್ರದೇಶದಲ್ಲಿ ಶನಿವಾರ ಸಂಜೆ 3 ಗಂಟೆಯ ವೇಳೆಗೆ ಸ್ಫೋಟ ಸಂಭವಿಸಿತ್ತು. ಸೇನಾ ಯೋಧರು ಗಸ್ತು ತಿರುಗುತ್ತಿರುವ ವೇಳೆ ಮಣ್ಣಿನಲ್ಲಿ ಹೂತ್ತಿಟ್ಟ ಕೆಲ ವಸ್ತು ಪತ್ತೆಯಾಗಿತ್ತು. ಅದನ್ನು ಪರಿಶೀಲಿಸುತ್ತಿದ್ದ ವೇಳೆ ಐಇಡಿ ಏಕಾಏಕಿ ಬ್ಲಾಸ್ಟ್ ಆಗಿ ಮೇಜರ್ ವೀರಮರಣ ಅಪ್ಪಿದ್ದಾರೆ.

    ಈ ಕುರಿತು ಮಾಹಿತಿ ನೀಡಿರುವ ಸೇನಾ ಅಧಿಕಾರಿ ದೇವೇಂದ್ರ ಆನಂದ್, ನೆಲದಲ್ಲಿ ಪತ್ತೆಯಾಗಿದ್ದ ಸ್ಫೋಟಗಳಲ್ಲಿ ಒಂದು ಐಇಡಿಯನ್ನು ಮೇಜರ್ ಯಶಸ್ವಿಯಾಗಿ ನಿಷ್ಕ್ರಿಯಗೊಳಿಸಿದ್ದರು. ಆದರೆ ಎರಡನೇ ಸ್ಫೋಟಕ ನಿಷ್ಕ್ರಿಯಗೊಳಿಸುವ ವೇಳೆ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಮತ್ತೊರ್ವ ಯೋಧ ಗಾಯಗೊಂಡಿದ್ದಾರೆ ಎಂದು ತಿಳಿಸಿದ್ದಾರೆ.

    ಉತ್ತರಾಖಂಡದ ಡೆಕರಾಡೂನ್ ಸೇರಿದ್ದ ಮೇಜರ್ ಚಿತ್ರೇಶ್ ಸಿಂಗ್ ಅವರಿಗೆ ಮುಂದಿನ ತಿಂಗಳು ವಿವಾಹ ಕಾರ್ಯಕ್ರಮ ನಿಗಧಿಯಾಗಿತ್ತು. ಡೆಹರಾಡೂನ್‍ನಲ್ಲೇ ವಿವಾಹ ಸಮಾರಂಭ ನಡೆಯಲು ಎಲ್ಲಾ ಸಿದ್ಧತೆಗಳು ಪೂರ್ಣಗೊಂಡಿತ್ತು ಎಂಬ ಮಾಹಿತಿ ಲಭಿಸಿದೆ.

    ಗಡಿ ಗಸ್ತು ತಿರುಗುವ ಸೈನಿಕರನ್ನು ಗುರಿಯಾಗಿಸಿ ದಾಳಿ ನಡೆಸಲು ಉಗ್ರರು ಇಂತಹ ಐಇಡಿ ಸ್ಫೋಟಗಳನ್ನು ಭೂಮಿಯಲ್ಲಿ ಹೂತ್ತಿಟ್ಟರು ಎಂಬ ಮಾಹಿತಿ ಮೂಲಗಳಿಂದ ಲಭಿಸಿದೆ.

    ಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಉಗ್ರರಿಗೆ ತಕ್ಕ ಪಾಠ ಕಲಿಸಿ- ಕಣ್ಣೀರು ಹಾಕಿದ ಹಿರಿಯ ನಟಿ ಲೀಲಾವತಿ

    ಉಗ್ರರಿಗೆ ತಕ್ಕ ಪಾಠ ಕಲಿಸಿ- ಕಣ್ಣೀರು ಹಾಕಿದ ಹಿರಿಯ ನಟಿ ಲೀಲಾವತಿ

    ಬೆಂಗಳೂರು: ಉಗ್ರರ ದಾಳಿಯಲ್ಲಿ ವೀರ ಯೋಧರ ಹುತಾತ್ಮ ಹಿನ್ನೆಲೆಯಲ್ಲಿ ಹಿರಿಯ ನಟಿ ಡಾ.ಲೀಲಾವತಿ ಉಗ್ರರಿಗೆ ತಕ್ಕ ಪಾಠ ಕಲಿಸಿ ಎಂದು ಕಣ್ಣೀರು ಹಾಕಿದ್ದಾರೆ.

    ಡಾ. ಲೀಲಾವತಿ ತಮ್ಮ ತೋಟದ ಮನೆಯಲ್ಲಿ ಯೋಧರಿಗೆ ಮೊಂಬತ್ತಿ ಹಚ್ಚಿ ನಮನ ಸಲ್ಲಿಸಿದ್ದು, ವಿಡಿಯೋ ರೆಕಾರ್ಡ್ ಮಾಡಿ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯಿಂದ ಮಾಹಿತಿ ರವಾನೆ ಮಾಡಿದ್ದಾರೆ. ಯೋಧರ ಮನೆಯವರ ಗೋಳಾಟ ನೋಡಿದರೆ ಏನು ಹೇಳಲು ಸಾಧ್ಯವಾಗುತ್ತಿಲ್ಲ. ಯೋಧ ಮಂಡ್ಯಕ್ಕೆ ಮಾತ್ರ ಗುರು ಅಲ್ಲ, ಇಡೀ ದೇಶಕ್ಕೆ ಶ್ರೇಷ್ಠ ಗುರುವಾಗಿದ್ದಾರೆ. ಅವರ ಪಾದ ಕಮಲಗಳಿಗೆ ನನ್ನ ನಮಸ್ಕಾರ ಎಂದು ಬಿಕ್ಕಿ ಬಿಕ್ಕಿ ಅತ್ತು ಕಣ್ಣೀರು ಹರಿಸಿದ್ದಾರೆ.

    ನಾವು ಇರುವುದು ಪುಣ್ಯಭೂಮಿಯಲ್ಲಿ, ಈ ಭೂಮಿಯಲ್ಲಿ ಮೊದಲು ಪಾಪಿಗಳನ್ನು ಹೋಗಲಾಡಿಸಿ. ಇಲ್ಲವಾದರೆ ನಾವು ಇನ್ನೂ ಎಷ್ಟು ಜನರನ್ನು ಕಳೆದುಕೊಳ್ಳಬೇಕಾಗುತ್ತದೆ. ಉಗ್ರರಿಗೆ ತಕ್ಕ ಪಾಠ ಕಲಿಸಿ. ಅವರನ್ನು ಸುಮ್ಮನೆ ಬಿಡಬಾರದು ಎಂದು ಕಳಕಳಿಯಿಂದ ಮನವಿ ಮಾಡಿಕೊಂಡಿದ್ದಾರೆ.

    ಯೋಧರು ಹೋಗುವಾಗ ಸರಿಯಾದ ಭದ್ರತೆ ಸಿಕ್ಕಿದಿದ್ದರೆ ಅವರು ಸಾಯುತ್ತಿರಲಿಲ್ಲವೇನೋ, ಯಾರು ಉದಾಸೀನ ಮಾಡಿದ್ದಾರೋ ಗೊತ್ತಿಲ್ಲ. ಆದರೆ ನಾವು ಅವರನ್ನು ಕಳೆದುಕೊಂಡಿದ್ದೇವೆ. ತ್ಯಾಗ ಮಾಡಿದ ಅವರಿಗೆ ದೇವರು ಕೊಡುವ ಶಿಕ್ಷೆ ಇದೇನಾ ಎಂದು ಪ್ರಶ್ನೆ ಮಾಡಿದ್ದಾರೆ. ಆದರೆ ಅವರ ಪತ್ನಿ, ಕುಟುಂಬದವರು ಕೊನೆಯವರೆಗೂ ಇದನ್ನು ನೆನಪಿಸಿಕೊಂಡು ಜೀವನ ಮಾಡಬೇಕಾಗುತ್ತದೆ ಎಂದು ದುಃಖ ವ್ಯಕ್ತಪಡಿಸಿದರು.

    https://www.youtube.com/watch?v=H41kg81Fhgg

    https://www.youtube.com/watch?v=Rkj4iQSjQN0

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ಒಂದ್ಕಡೆ ದೇಶಕ್ಕೆ ಉಗ್ರದಾಳಿಯ ಶೋಕ- ಇತ್ತ ಶಾಸಕ  ಹ್ಯಾರೀಸ್‌ಗೆ ಹುಟ್ಟುಹಬ್ಬದ ಸಂಭ್ರಮ

    ಒಂದ್ಕಡೆ ದೇಶಕ್ಕೆ ಉಗ್ರದಾಳಿಯ ಶೋಕ- ಇತ್ತ ಶಾಸಕ ಹ್ಯಾರೀಸ್‌ಗೆ ಹುಟ್ಟುಹಬ್ಬದ ಸಂಭ್ರಮ

    ಬೆಂಗಳೂರು: ಇಡೀ ದೇಶವೇ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸುತ್ತಿದೆ. ಈ ನಡುವೆ ಶಾಂತಿನಗರ ಶಾಸಕ ಹ್ಯಾರೀಸ್ ಬೆಂಬಲಿಗರಿಂದ ಹುಟ್ಟುಹಬ್ಬ ಮನರಂಜನಾ ಕಾರ್ಯಕ್ರಮ ನಡೆದಿದೆ.

    ಶಾಂತಿನಗರ ಹಬ್ಬ ಎಂಬ ಹೆಸರಿನಲ್ಲಿ ವಿವೇಕನಗರ ಬಸ್ ನಿಲ್ದಾಣ ಬಳಿ ಕಾರ್ಯಕ್ರಮ ಆಯೋಜಿಸಿದ್ದು, ಆರ್ಕೆಸ್ಟ್ರಾ ಏರ್ಪಡಿಸಲಾಗಿತ್ತು. ಅಪ್ಪ-ಮಗನ ಹೆಸರಿನಲ್ಲಿ ದೊಡ್ಡ ದೊಡ್ಡ ಫ್ಲೆಕ್ಸ್ ಗಳು ರಾರಾಜಿಸುತ್ತಿದ್ದವು. ಆದರೆ ವಿಷಯ ಮಾಧ್ಯಮದವರಿಗೆ ಗೊತ್ತಾಗುತ್ತಿದ್ದಂತೆ ಹ್ಯಾರೀಸ್ ಬೆಂಬಲಿಗರು ಕಾರ್ಯಕ್ರಮವನ್ನ ರದ್ದುಗೊಳಿಸಿದ್ದಾರೆ.

    ಈ ಬಗ್ಗೆ ಶಾಸಕ ಹ್ಯಾರೀಸ್‍ರನ್ನೇ ಕೇಳಿದ್ದಕ್ಕೆ, ನನ್ನ ಬರ್ತ್ ಡೇ ಇರುವುದು ಜನವರಿ ತಿಂಗಳಲ್ಲಿ. ಬರ್ತ್ ಡೇ ಪಾರ್ಟಿ ಮಾಡಿಲ್ಲ. ಅದು ಶಾಂತಿನಗರ ಹಬ್ಬ ಅಂತ ಮಾಡುತ್ತಿದ್ದರು. ಸ್ಥಳಕ್ಕೆ ಭೇಟಿ ನೀಡಿ ಆ ಕಾರ್ಯಕ್ರಮ ಬದಲಾಯಿಸಿ ಯೋಧರ ಬಗ್ಗೆ ಶ್ರದ್ಧಾಂಜಲಿ ಸಲ್ಲಿಸಿ ಕಾರ್ಯಕ್ರಮ ಮುಗಿಸಲಾಗಿದೆ ಎಂದು ಸ್ಪಷ್ಟನೆ ನೀಡಿದರು.

    ಇನ್ನೂ ಪುಲ್ವಾಮಾ ದಾಳಿಯಲ್ಲಿ ಮಂಡ್ಯದ ಯೋಧ ಗುರು ಹುತಾತ್ಮ ಹಿನ್ನೆಲೆಯಲ್ಲಿ ಕುಟುಂಬಕ್ಕೆ ಐವತ್ತು ಸಾವಿರ ನೆರವು ನೀಡಲು ಮುಂದಾಗಿದ್ದಾರೆ. ಎನ್.ಎ.ಹ್ಯಾರೀಸ್ ಫೌಂಡೇಷನ್ ನಿಂದ ಐವತ್ತು ಸಾವಿರ ನೆರವು ನೀಡುವುದಾಗಿ ಶಾಸಕ ಹ್ಯಾರೀಸ್ ಟ್ವೀಟ್ ಮಾಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ಯೋಧ ಗುರುವಿನ ಕೊನೆ ಕ್ಷಣದ ಪ್ರವಾಸ – ಫೋಟೋ, ವಿಡಿಯೋ ನೋಡಿ

    ಯೋಧ ಗುರುವಿನ ಕೊನೆ ಕ್ಷಣದ ಪ್ರವಾಸ – ಫೋಟೋ, ವಿಡಿಯೋ ನೋಡಿ

    ಮಂಡ್ಯ: ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರನ ಆತ್ಮಾಹುತಿ ದಾಳಿಯಲ್ಲಿ ಮಂಡ್ಯದ ಯೋಧ ಗುರು ಹುತಾತ್ಮರಾಗಿದ್ದು, ಎಲ್ಲೆಡೆ ಉಗ್ರರನ್ನು ಸಂಹಾರ ಮಾಡಬೇಕೆಂದು ಪ್ರತಿಭಟನೆ ಮಾಡುತ್ತಿದ್ದಾರೆ. ಆದರೆ ಇತ್ತ ಯೋಧ ಗುರು ಅವರು ಕೊನೆಯಲ್ಲಿ ಪ್ರವಾಸಕ್ಕೆ ಹೋಗಿದ್ದ ಫೋಟೋ, ವಿಡಿಯೋ ಲಭ್ಯವಾಗಿದೆ.

    ಹುತಾತ್ಮ ಯೋಧ ರಜೆಯ ಹಿನ್ನೆಲೆಯಲ್ಲಿ ಊರಿಗೆ ಬಂದಿದ್ದರು. ಆಗ ಭಾನುವಾರ ಆರ್ಮಿಗೆ ತೆರಳುವ ಮುನ್ನ ಸ್ನೇಹಿತ ನಾಗೇಶ್ ಜೊತೆಗೆ ಮೈಸೂರಿನ ಹಿನ್ನೀರಿಗೆ ಪ್ರವಾಸಕ್ಕೆ ಹೋಗಿದ್ದರು. ಸ್ನೇಹಿತ ಮಾತ್ರವಲ್ಲದೇ ತಮ್ಮ ಪತ್ನಿ ಕಲಾವತಿ ಅವರನ್ನು ಜೊತೆಗೆ ಕರೆದುಕೊಂಡು ಹೋಗಿದ್ದರು. ಅವರ ಸ್ನೇಹಿತ ಕೂಡ ತಮ್ಮ ಪತ್ನಿ ಮತ್ತು ಮಗುವಿನ ಜೊತೆ ಬಂದಿದ್ದರು. ಎಲ್ಲರೂ ಒಟ್ಟಿಗೆ ಇದ್ದಾಗ ತೆಗೆದಿದ್ದ ಫೋಟೋ ಹಾಗೂ ವಿಡಿಯೋ ವೈರಲ್ ಆಗುತ್ತಿದೆ. ಸ್ನೇಹಿತ ಹಾಗೂ ಪತ್ನಿಯ ಜೊತೆ ಸೆಲ್ಫಿ ತೆಗೆದುಕೊಂಡಿದ್ದು, ಬಳಿಕ ಎಲ್ಲರೂ ಒಟ್ಟಿಗೆ ಹಿನ್ನೀರಿನಲ್ಲಿ ಬೋಟಿಂಗ್ ಮಾಡುತ್ತಿದ್ದಾಗ ವಿಡಿಯೋ ಮಾಡಿದ್ದಾರೆ. ಇದನ್ನೂ ಓದಿ: ಗುರು ಕಳುಹಿಸಿದ್ದ ಸೆಲ್ಫಿ ವಿಡಿಯೋ ನೋಡಿ ಭಾವುಕರಾದ ಗೆಳೆಯರು, ಕುಟುಂಬಸ್ಥರು

    ಇತ್ತೀಚೆಗಷ್ಟೆ ಹುತಾತ್ಮ ಯೋಧ ಗುರು ಅವರು ತಮ್ಮ ಸ್ನೇಹಿತರಿಗೆ ಹಾಗೂ ಕುಟುಂಬದವರಿಗೆ ಒಂದು ಸೆಲ್ಫಿ ವಿಡಿಯೋವನ್ನು ವಾಟ್ಸಾಪ್ ಮೂಲಕ ಕಳುಹಿಸಿದ್ದರು. ಆ ವಿಡಿಯೋದಲ್ಲಿ ಅವರು ಇಬ್ಬನಿಯಲ್ಲಿ ಕಾಶ್ಮೀರ್ ಎಂದು ಬರೆದು ಅಲ್ಲಿ ನಿಂತು ಹಾಯ್ ಮಾಡಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv