Tag: warrior

  • ನಮ್ಮವರನ್ನು ಹೇಗೆ ಬ್ಲಾಸ್ಟ್ ಮಾಡಿದ್ರೋ ಹಾಗೆಯೇ ಅವ್ರನ್ನು ಕೊಂದು ಬಿಡಿ ಪ್ಲೀಸ್ – ಗುರು ಪತ್ನಿ ಮನವಿ

    ನಮ್ಮವರನ್ನು ಹೇಗೆ ಬ್ಲಾಸ್ಟ್ ಮಾಡಿದ್ರೋ ಹಾಗೆಯೇ ಅವ್ರನ್ನು ಕೊಂದು ಬಿಡಿ ಪ್ಲೀಸ್ – ಗುರು ಪತ್ನಿ ಮನವಿ

    ಮಂಡ್ಯ: ನಮ್ಮವರನ್ನು ಹೇಗೆ ಬ್ಲಾಸ್ಟ್ ಮಾಡಿ ಕೊಂದರೋ ಹಾಗೇ ಅವರನ್ನು ಬ್ಲಾಸ್ಟ್ ಮಾಡಬೇಕು. ಯಾವುದೇ ಕಾರಣಕ್ಕೆ ಅವರನ್ನು ಬಿಡಬಾರದು. ಪ್ಲೀಸ್ ಇದಕ್ಕೆ ಎಲ್ಲರೂ ಸಹಾಯ ಮಾಡಿ ಎಂದು ಯೋಧ ಗುರುವಿನ ಪತ್ನಿ ಕಲಾವತಿ ಅವರು ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ.

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಕಲಾವತಿ ಅವರು, ಹುಷಾರು. ನಾನು ಏಪ್ರಿಲ್‍ಗೆ ಬರುತ್ತೇನೆ ಎಂದು ಹೇಳಿ ಹೋಗಿದ್ದರು. ಆದರೂ ನಾವು ಅವರು ಡ್ಯೂಟಿಗೆ ಹೋದಾಗೆಲ್ಲಾ ಹುಷಾರು, ಹುಷಾರು ಎಂದು ಹೇಳುತ್ತಿದ್ದೆವು. ಅನೇಕ ಬಾರಿ ನಾನು ಈ ಕೆಲಸವನ್ನು ಬಿಟ್ಟುಬಿಡಿ ಎಂದು ಹೇಳಿದ್ದೆ. ಆದರೆ ಅವರು ನನ್ನ ಮಾತು ಕೇಳಲಿಲ್ಲ. ಇಂದು ಈ ಸುದ್ದಿ ತಂದುಕೊಡುವುದಕ್ಕೆ ಬಿಡಲಿಲ್ಲ ಅನ್ನಿಸುತ್ತದೆ ಎಂದು ಕಣ್ಣೀರು ಹಾಕಿಕೊಂಡು ಹೇಳಿದ್ದಾರೆ. ಇದನ್ನೂ ಓದಿ: ನಂಗೆ ಅವರು ಬೇಕು ಅಮ್ಮಾ..- ಮುಗಿಲು ಮುಟ್ಟಿದೆ ಹುತಾತ್ಮ ಗುರು ಪತ್ನಿಯ ಆಕ್ರಂದನ

    ನಾನು ಇನ್ನೂ ಹತ್ತು ವರ್ಷ ಸೇವೆ ಸಲ್ಲಿಸದೇ ಕೆಲಸ ಬಿಡುವುದಿಲ್ಲ ಎಂದಿದ್ದರು. ಮದುವೆಯಾಗಿ ವರ್ಷವಾಗಿಲ್ಲ, ಜೀವನದಲ್ಲಿ ಅವರಿಗೆ ನೆಮ್ಮದಿ ಅನ್ನುವುದು ಸಿಗಲಿಲ್ಲ. ದೇಶ ಕಾಯುವವರನ್ನೇ ಸಾಯಿಸಿದ್ದಾರೆ. ಅವರು ಏನು ಮಾಡಿದ್ದರು? ಇದರಿಂದ ಅವರಿಗೆ ಏನು ಸಿಕ್ಕಿತು? ಎಂದು ಆಕ್ರೋಶದಿಂದ ದುಷ್ಟರಿಗೆ ಕಲಾವತಿ ಅವರು ಪ್ರಶ್ನೆ ಮಾಡಿದ್ದಾರೆ.

    ದೇಶದ ಜನರನ್ನು ರಕ್ಷಣೆ ಮಾಡಲು ಹೋಗುತ್ತಿದ್ದವರನ್ನೇ ಕೊಲೆ ಮಾಡಿದ್ದಾರೆ. ಅವರು ಹೇಗೆ ಸತ್ತರೋ, ಹಾಗೇ ದುಷ್ಟರು ಸಾಯಬೇಕು. ಈ ಬಗ್ಗೆ ಎಲ್ಲರಿಗೂ ಗೊತ್ತಾಗಲಿ, ಪ್ಲೀಸ್ ಎಲ್ಲರೂ ಸಹಾಯ ಮಾಡಿ ಪ್ಲೀಸ್, ಅವರ ರೀತಿಯಲ್ಲೇ ಬ್ಲಾಸ್ಟ್ ಮಾಡಿ ದುಷ್ಟರನ್ನು ಸಾಯಿಸಬೇಕು. ನನ್ನ ಗಂಡನನ್ನು ಕೊಂದವರನ್ನು ಸುಮ್ಮನೆ ಬಿಡಬಾರದು. ದಯವಿಟ್ಟು ಅವರನ್ನು ಬಿಡಬೇಡಿ ಎಂದು ಕಣ್ಣೀರು ಹಾಕುತ್ತಾ ಕಲಾವತಿ ಅವರು ಮನವಿ ಮಾಡಿಕೊಂಡಿದ್ದಾರೆ.

    https://www.youtube.com/watch?v=wv03LJifMzo

    https://www.youtube.com/watch?v=sgF9rfJIWks

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ನಂಗೆ ಅವರು ಬೇಕು ಅಮ್ಮಾ..- ಮುಗಿಲು ಮುಟ್ಟಿದೆ ಹುತಾತ್ಮ ಗುರು ಪತ್ನಿಯ ಆಕ್ರಂದನ

    ನಂಗೆ ಅವರು ಬೇಕು ಅಮ್ಮಾ..- ಮುಗಿಲು ಮುಟ್ಟಿದೆ ಹುತಾತ್ಮ ಗುರು ಪತ್ನಿಯ ಆಕ್ರಂದನ

    ಮಂಡ್ಯ: ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಆವಂತಿಪುರದಲ್ಲಿ ನಡೆದ ಉಗ್ರರ ಆತ್ಮಾಹುತಿ ದಾಳಿಯಲ್ಲಿ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿ ಸಮೀಪದ ಗುಡಿಗೆರೆ ಕಾಲೋನಿಯ ಗುರು.ಎಚ್. (33) ವೀರಮರಣವನ್ನಪ್ಪಿದ್ದಾರೆ. ಅವರ ಅಗಲಿಕೆಯನ್ನು ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಪತ್ನಿ ಕಲಾವತಿ ಅವರ ಅಳಲು ಮುಗಿಲುಮುಟ್ಟಿದ್ದು, ಮನಕಲಕುವಂತಿದೆ.

    ನಾನು ಪ್ರತಿದಿನ ಅವರ ಜೊತೆ ಫೋನಿನಲ್ಲಿ ಮಾತನಾಡುತ್ತಿದ್ದೆ. ಅವರು ಬೆಳಗ್ಗೆ 11 ಗಂಟೆಗೆ ಫೋನ್ ಮಾಡಿದ್ದರು. ನಾನು ಕೆಲಸ ಮಾಡುತ್ತಿದ್ದರಿಂದ ಅವರ ಜೊತೆ ಮಾತನಾಡಲು ಸಾಧ್ಯವಾಗಿಲ್ಲ. ಅವರು ಊರಿಂದ ಹೋಗಿ ನಾಲ್ಕು ದಿನಗಳು ಆಗಿರಲಿಲ್ಲ. ತುಂಬಾ ನೋವಾಗುತ್ತಿದೆ ಎಂದು ಕಲಾವತಿ ಅವರು ಕಣ್ಣೀರು ಹಾಕಿದ್ದಾರೆ. ಇದನ್ನೂ ಓದಿ: ಪುಲ್ವಾಮಾದಲ್ಲಿ ಮಂಡ್ಯದ ಯೋಧ ಹುತಾತ್ಮ – ಫೆ.10ಕ್ಕೆ ರಜೆ ಮುಗಿಸಿ ಊರಿಂದ ಹೊರಟಿದ್ದರು

    ನನ್ನಿಂದ ಇದನ್ನು ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಗುರುವಾರ ಒಂದು ದಿನ ಅವರ ಜೊತೆ ಮಾತನಾಡಿದ್ರೆ ಆಗುತ್ತಿತ್ತು. ನಾನು 6 ಗಂಟೆಯಿಂದ ಫೋನ್ ಮಾಡಿ ಮಾಡಿ ಸಾಕಾಯ್ತು. ನನಗೆ ಅವರು ಬೇಕು ಅಮ್ಮಾ ಎಂದು ತಾಯಿ ಮಡಿಲಲ್ಲಿ ಮಲಗಿಕೊಂಡು ಅಳುತ್ತಿದ್ದಾರೆ.

    ಗುರುವಾರ ಮಧ್ಯಾಹ್ನ 3.30ರ ಸುಮಾರಿಗೆ ಜೈಶ್-ಎ- ಮೊಹಮ್ಮದ್ ಉಗ್ರ ಸಂಘಟನೆಗೆ ಸೇರಿದ ಅದಿಲ್ ದರ್ ಎಂಬ ಉಗ್ರ ಸ್ಕಾರ್ಪಿಯೋ ಕಾರಿನಲ್ಲಿ ಸ್ಫೋಟಕ ತುಂಬಿ ಆತ್ಮಾಹುತಿ ದಾಳಿ ಮಾಡಿದ್ದನು. ಈ ದಾಳಿಯಲ್ಲಿ ಇದೂವರೆಗೆ 44 ಯೋಧರು ಹುತಾತ್ಮರಾಗಿದ್ದು, ಹಲವರು ಗಾಯಗೊಂಡಿದ್ದರು.

    ಒಂದು ವರ್ಷ ಹಿಂದೆ ಗೃಹ ಪ್ರವೇಶ ಮಾಡಿಕೊಂಡಿದ್ದ ಗುರು ಅವರಿಗೆ 10 ತಿಂಗಳ ಹಿಂದೆ ಮದುವೆಯಾಗಿತ್ತು. ಸ್ವಂತ ಮಾವನ ಮಗಳಾದ, ಹಲಗೂರು ಬಳಿಯ ಸಾಸಲಾಪುರ ಗ್ರಾಮದವರಾದ ಕಲಾವತಿಯನ್ನು ವಿವಾಹವಾಗಿದ್ದರು. 15 ದಿನದ ಹಿಂದೆ ರಜೆಗೆಂದು ಬಂದಿದ್ದ ಗುರು ಅವರು ಫೆಬ್ರವರಿ 10ರಂದು ಗುಡಿಗೆರೆ ಕಾಲೋನಿಯಿಂದ ರಜೆ ಮುಗಿಸಿಕೊಂಡು ಹೊರಟಿದ್ದರು. ಹೀಗೆ ಹೊರಟಿದ್ದ ಗುರು ಗುರುವಾರವಷ್ಟೇ ಕರ್ತವ್ಯಕ್ಕೆ ಹಾಜರಾಗಿದ್ದರು. ಆದರೆ, ಕರ್ತವ್ಯಕ್ಕೆ ವಾಪಸ್ ಬರುತ್ತಿದ್ದಂತೆಯೇ ಮಾರಣಹೋಮದಲ್ಲಿ ಸಾವನ್ನಪ್ಪಿದ್ದು ವಿಧಿ ವಿಪರ್ಯಾಸ. ಗುರು ಸಾವಿನ ಸುದ್ದಿ ಕೇಳಿ ಗುಡಿಗೆರೆ ಕಾಲೋನಿಯ ನಿವಾಸದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

    https://www.youtube.com/watch?v=5JqTWRx0JWA

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಭಿಕ್ಷೆ ಬೇಡುತ್ತಿದ್ದ ಯೋಧನ ನೆರವಿಗೆ ಧಾವಿಸಿದ ಗಂಭೀರ್

    ಭಿಕ್ಷೆ ಬೇಡುತ್ತಿದ್ದ ಯೋಧನ ನೆರವಿಗೆ ಧಾವಿಸಿದ ಗಂಭೀರ್

    ನವದೆಹಲಿ: ಟೀಂ ಇಂಡಿಯಾ ಮಾಜಿ ಆಟಗಾರ ಗೌತಮ್ ಗಂಭೀರ್ ಭಿಕ್ಷೆ ಬೇಡುತ್ತಿದ್ದ ಮಾಜಿ ಯೋಧನ ಸ್ಥಿತಿ ಕಂಡು ನೆರವಿಗೆ ಧವಿಸಿದ್ದು, ಅವರ ಫೋಟೋ ಟ್ವೀಟ್ ಮಾಡಿ ಸೂಕ್ತ ಕ್ರಮಕೈಗೊಳ್ಳುವಂತೆ ರಕ್ಷಣಾ ಇಲಾಖೆಗೆ ಮನವಿ ಮಾಡಿದ್ದಾರೆ.

    ಈ ಕುರಿತು ಮಾಜಿ ಯೋಧ ಭಿಕ್ಷೆ ಬೇಡುತ್ತಿರುವ ಫೋಟೋದೊಂದಿಗೆ ಮಾಹಿತಿ ನೀಡಿರುವ ಗಂಭೀರ್, ತಾಂತ್ರಿಕ ಕಾರಣಗಳಿಂದ ಇವರಿಗೆ ಸೇನೆಯ ಸೌಲಭ್ಯಗಳು ಲಭ್ಯವಾಗಿಲ್ಲ ಎಂದು ತಿಳಿಸಿದ್ದಾರೆ.

    ಪೀತಾಂಬರನ್ ಎಂಬವರು 1965 ರಿಂದ 1971ರ ಅವಧಿಯಲ್ಲಿ ಸೇನೆಯಲ್ಲಿ ಕಾರ್ಯನಿರ್ವಹಿಸಿದ್ದರು. ಈ ಕುರಿತು ಅವರ ಐಡಿ ಪರಿಶೀಲನೆ ಮಾಡಿದ ವೇಳೆ ಸ್ಪಷ್ಟ ಮಾಹಿತಿ ಲಭಿಸಿದೆ. ಆದರೆ ಕೆಲ ತಾಂತ್ರಿಕ ಸಮಸ್ಯೆಗಳಿಂದ ಅವರಿಗೆ ಇಲಾಖೆಯ ಸೌಲಭ್ಯಗಳು ಲಭ್ಯವಾಗಿಲ್ಲ. ಇವರು ಸದ್ಯ ಜೀವನಕ್ಕಾಗಿ ದೆಹಲಿಯ ಕನಾಟ್ ಪ್ಲೇಸ್ ನಲ್ಲಿ ಭಿಕ್ಷೆ ಬೇಡುತ್ತಿದ್ದಾರೆ ಎಂದು ಬರೆದುಕೊಂಡಿದ್ದಾರೆ. ಅಲ್ಲದೇ ರಕ್ಷಣಾ ಸಚಿವಾಲಯ ಹಾಗೂ ರಕ್ಷಣಾ ವಕ್ತಾರರರಿಗೆ ಟ್ಯಾಗ್ ಮಾಡಿ ಟ್ವೀಟ್ ಮಾಡಿದ್ದಾರೆ.

    ಗಂಭೀರ್ ಟ್ವೀಟ್ ಮಾಡಿರುವ ಫೋಟೋದಲ್ಲೂ ಕೂಡ ಮಾಜಿ ಸೈನಿಕರಾದ ಪೀತಾಂಬರನ್ ಅವರು ತಮ್ಮ ವಿವರಗಳನ್ನ ಬರೆದಿರುವ ಬೋರ್ಡ್ ಹಿಡಿದು ಸಹಾಯ ಕೇಳಿದ್ದಾರೆ. ಇತ್ತೀಚೆಗೆ ನನಗೆ ಅಪಘಾತವಾಗಿದ್ದು ಚಿಕಿತ್ಸೆ ಪಡೆಯಲು ನನ್ನ ಬಳಿ ಹಣ ಇಲ್ಲ. ಆದ್ದರಿಂದ ಸಹಾಯ ಮಾಡಿ ಎಂದು ಮನವಿ ಮಾಡಿದ್ದಾರೆ.

    ಗೌತಮ್ ಗಂಭೀರ್ ಅವರ ಟ್ವೀಟ್‍ಗೆ ಪ್ರತಿಕ್ರಿಯೆ ನೀಡಿರುವ ರಕ್ಷಣಾ ಇಲಾಖೆ, ನಿಮ್ಮ ಕಾಳಜಿಗೆ ಧನ್ಯವಾದಗಳು ಬಹುಬೇಗ ಈ ಕುರಿತು ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಇತ್ತ ಇಲಾಖೆಯ ಶೀಘ್ರ ಪ್ರತಿಕ್ರಿಯೆಗೆ ಗಂಭೀರ್ ಧನ್ಯವಾದ ತಿಳಿಸಿದ್ದಾರೆ. ಗೌತಮ್ ಗಂಭೀರ್ ಅವರ ಈ ಟ್ವೀಟ್ ಗೆ 12 ಸಾವಿರ ಮಂದಿ ಲೈಕ್ ಮಾಡಿದ್ದು, 2 ಸಾವಿರಕ್ಕೂ ಹೆಚ್ಚು ಮಂದಿ ರೀ ಟ್ವೀಟ್ ಮಾಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ರಜೆ ಮೇಲೆ ಊರಿಗೆ ಬಂದಿದ್ದ ಯೋಧ ಅಪಘಾತಕ್ಕೆ ಬಲಿ

    ರಜೆ ಮೇಲೆ ಊರಿಗೆ ಬಂದಿದ್ದ ಯೋಧ ಅಪಘಾತಕ್ಕೆ ಬಲಿ

    ಚಿಕ್ಕೋಡಿ/ಬೆಳಗಾವಿ: ಟ್ರಾಕ್ಟರ್ ಹಿಂಬದಿಗೆ ಬೈಕ್ ಡಿಕ್ಕಿಯಾದ ಪರಿಣಾಮ ರಜೆಯ ಮೇಲೆ ಊರಿಗೆ ಬಂದಿದ್ದ ಯೋಧರೊಬ್ಬರು ಅಪಘಾತದಲ್ಲಿ ಮೃತಪಟ್ಟಿದ್ದಾರೆ.

    ನಾಗರಮುನ್ನೋಳಿ ಗ್ರಾಮ ನಿವಾಸಿ ಸಿಕಂದರ್ ಮುಲ್ತಾನಿ (28) ಮೃತ ಯೋಧ. ನಿಪ್ಪಾಣಿ-ಮುಧೋಳ ರಾಜ್ಯ ಹೆದ್ದಾರಿ ಮೇಲೆ ಈ ಘಟನೆ ನಡೆದಿದೆ. ಕಳೆದ 9 ವರ್ಷಗಳಿಂದ ಸಿಕಂದರ್ ಮುಲ್ತಾನಿ ಮದ್ರಾಸ್ ಎಂಜಿನಿಯರಿಂಗ್ ಗ್ರೂಪ್ ಆಫ್ ಸೆಂಟರ್ ಪಂಜಾಬ್ ನಲ್ಲಿ ಸೇವೆ ಸಲ್ಲಿಸುತ್ತಿದ್ದರು.

    ಸಿಕಂದರ್ ಮುಲ್ತಾನಿ 40 ದಿನ ರಜೆ ಪಡೆದು ಊರಿಗೆ ಬಂದಿದ್ದರು. ಆದರೆ ಶುಕ್ರವಾರ ನಾಗರಮುನ್ನೋಳಿ ಗ್ರಾಮದಿಂದ ಪಕ್ಕದ ಗ್ರಾಮದಲ್ಲಿ ನಡೆಯುತ್ತಿದ್ದ ಜಾತ್ರೆಗೆ ಹೋಗಿದ್ದರು. ತಡರಾತ್ರಿ ಮನೆಗೆ ಹಿಂದಿರುಗಿ ವಾಪಸ್ ಬರುವಾಗ ನಿಪ್ಪಾಣಿ-ಮುಧೋಳ ರಾಜ್ಯ ಹೆದ್ದಾರಿಯಲ್ಲಿ ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ವಾಹನವನ್ನು ತಪ್ಪಿಸಲು ಹೋಗಿ ಟ್ರಾಕ್ಟರ್ ಹಿಂಬದಿಗೆ ಡಿಕ್ಕಿ ಹೊಡೆದಿದ್ದಾರೆ. ಪರಿಣಾಮ ಸಿಕಂದರ್ ಮುಲ್ತಾನಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

    ಇನ್ನು ಈ ಘಟನೆ ಬಗ್ಗೆ ಮಾಹಿತಿ ಸ್ಥಳಕ್ಕೆ ಚಿಕ್ಕೋಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ಯೋಧ ಅವರಿಗೆ ಮದುವೆಯಾಗಿ ಇಬ್ಬರು ಮಕ್ಕಳಿದ್ದಾರೆ. ಈ ಘಟನೆ ಚಿಕ್ಕೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಉಗ್ರರ ದಾಳಿಯಿಂದ ಕೈಗೆ 40 ಹೊಲಿಗೆ ಹಾಕ್ಕೊಂಡು ಬೆಡ್ ಮೇಲೆ ಮಲಗಿದ್ರೂ ಮನೆಯವರಿಗೆ ಚೆನ್ನಾಗಿದ್ದೀನಿ ಅಂದ್ರು ಯೋಧ

    ಉಗ್ರರ ದಾಳಿಯಿಂದ ಕೈಗೆ 40 ಹೊಲಿಗೆ ಹಾಕ್ಕೊಂಡು ಬೆಡ್ ಮೇಲೆ ಮಲಗಿದ್ರೂ ಮನೆಯವರಿಗೆ ಚೆನ್ನಾಗಿದ್ದೀನಿ ಅಂದ್ರು ಯೋಧ

    ಚಿಕ್ಕಮಗಳೂರು: ಭಯೋತ್ಪಾದಕರ ದಾಳಿಯಲ್ಲಿ ಸೊಂಟಕ್ಕೆ ಗಾಯವಾಗಿ, ಎಡಗೈಗೆ 40ಕ್ಕೂ ಹೆಚ್ಚು ಹೊಲಿಗೆ ಹಾಕಿಸಿಕೊಂಡು ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೂ ತಿಂಗಳವರೆಗೆ ಮನೆಯವರಿಗೆ ವಿಷಯವನ್ನ ಹೇಳದೆ ಬೆಡ್ ಮೇಲೆ ಮಲಗಿಕೊಂಡೇ ಚೆನ್ನಾಗಿದ್ದೇನೆ ಅಂತ ಹೇಳುವ ಮೂಲಕ ಮಲೆನಾಡಿನ ವೀರಯೋಧರೊಬ್ಬರು ತಾಯಿ ಹಾಗೂ ತಾಯ್ನಾಡಿನ ಪ್ರೀತಿ ಮೆರೆದಿದ್ದಾರೆ.

    ಜಿಲ್ಲೆಯ ಕೊಪ್ಪ ತಾಲೂಕಿನ ಸಿಗದಾಳು ಗ್ರಾಮದ ಆದರ್ಶ್ ತಾಯಿ ಮತ್ತು ತಾಯ್ನಾಡಿನ ಪ್ರೀತಿ ಮೆರೆದಿರುವ ಬಿ.ಎಸ್.ಎಫ್ ಯೋಧ. ಇವರು ಜಮ್ಮು-ಕಾಶ್ಮೀರದ ಗಡಿಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಗಣರಾಜ್ಯೋತ್ಸವಕ್ಕೆ ವಾರದ ಹಿಂದೆ ಜಮ್ಮುವಿನ ಸಾಂಬಾ ಜಿಲ್ಲೆಯ ಹತ್ತು ಕಿ.ಮೀ. ದೂರದ ರಾಜ್‍ಘಡ್‍ನಲ್ಲಿ ಬೀಡುಬಿಟ್ಟಿದ್ದರು.

    ಈ ವೇಳೆ ಸೀಮಾ ಗಡಿ ಉಲ್ಲಂಘನೆ ಮಾಡಿ ದಾಳಿ ಮಾಡಿದ್ದರು. 15 ಭಾರತೀಯ ಯೋಧರ ತಂಡವೂ ಪ್ರತಿದಾಳಿ ಮಾಡಿತ್ತು. ಉಗ್ರರ ಶೆಲ್ ದಾಳಿಯಿಂದ ಆದರ್ಶ್ ಕೈ ಹಾಗೂ ಸೊಂಟಕ್ಕೆ ಗಾಯವಾಗಿತ್ತು. ಉಗ್ರರ ಜೊತೆ ದಾಳಿಗೂ ಮುಂಚೆ ಪತ್ನಿ ಜೊತೆ ಆದರ್ಶ್ ಮಾತನಾಡಿದ್ದರು. ಆಗ ಪತ್ನಿಗೆ ರಾಜಕಾರಣಿಗಳು ಪ್ರಚಾರಕ್ಕೆ ಬಂದಿದ್ದರು ಎಂದು ಹೇಳಿದ್ದು, ದಾಳಿಯ ವಿಚಾರವನ್ನ ಪತ್ನಿಗೆ ಆದರ್ಶ್ ಅವರು ಹೇಳಿರಲಿಲ್ಲ. ಮನೆಗೆ ಹೇಳಿದರೆ ಗಾಬರಿಯಾಗುತ್ತಾರೆ ಎಂದು ಈ ವಿಚಾರದ ಬಗ್ಗೆ ಅವರು ಮನೆಯಲ್ಲಿ ಹೇಳಲಿಲ್ಲ.

    ಇದೀಗ ಮನೆಯಲ್ಲಿ ಚಿಕಿತ್ಸೆ ಹಾಗೂ ವಿಶ್ರಾಂತಿಯಲ್ಲಿರುವ ಯೋಧ ಆದರ್ಶ್ ದಾಳಿಯನ್ನ ನೆನೆಯುತ್ತಿದ್ದು, ಗಡಿ, ಸೈನಿಕ ವೃತ್ತಿ, ಹೋರಾಟ ಹೇಗಿರುತ್ತದೆಂದು ಸುತ್ತಮುತ್ತಲಿನವರಿಗೆ ಹೇಳುತ್ತಿದ್ದಾರೆ. ಜೊತೆಗೆ ನನಗೂ ತಾಯಿಗಿಂತ ತಾಯ್ನಾಡೆ ಮುಖ್ಯ ಅಂತಿದ್ದಾರೆ. 2000 ಇಸವಿಯಲ್ಲಿ ಸೇನೆಗೆ ಸೇರಿದ್ದ ಆದರ್ಶ್, 2010ರಲ್ಲಿ ಕಮಾಂಡರ್ ಆಗಿ ವಿಶೇಷ ತರಬೇತಿ ಪಡೆದಿದ್ದರು.

    ನಾನು ಪಡೆದ ತರಬೇತಿಯೇ ಉಗ್ರರ ಜೊತೆ ಹೋರಾಡುವುದಕ್ಕೆ ಉತ್ತೇಜನ ನೀಡಿತ್ತು ಎಂದು ಆದರ್ಶ್ ಹೇಳಿದ್ದಾರೆ. ಆದರೆ ಉಗ್ರರೊಂದಿಗೆ ಸೆಣಸಾಟದಲ್ಲಿ ಸ್ನೇಹಿತ ಹಾಗೂ ಸೈನಿಕ ಕೇರಳದ ಸುರೇಶ್ ಸಾವನ್ನಪ್ಪಿದ್ದಕ್ಕೆ ಅವರು ಬೇಸರ ವ್ಯಕ್ತಪಡಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕಾರ್ಗಿಲ್ ಯುದ್ಧದಲ್ಲಿ ಹೋರಾಡಿ ಗೆದ್ದ ಯೋಧನಿಗೆ ಜಮೀನು, ಸೂರು, ಉದ್ಯೋಗವಿಲ್ಲ!

    ಕಾರ್ಗಿಲ್ ಯುದ್ಧದಲ್ಲಿ ಹೋರಾಡಿ ಗೆದ್ದ ಯೋಧನಿಗೆ ಜಮೀನು, ಸೂರು, ಉದ್ಯೋಗವಿಲ್ಲ!

    -ಯೋಧನ ಗೋಳು ಕೇಳೋರು ಯಾರೂ ಇಲ್ಲ

    ಹಾವೇರಿ: ಕಾರ್ಗಿಲ್ ಯುದ್ಧದಲ್ಲಿ ಶತ್ರುಗಳ ಗುಂಡಿಗೆ ಎದೆಯೊಡ್ಡಿ ಹೋರಾಟ ಮಾಡಿದ್ದರೂ ಜಮೀನು, ಸ್ವಂತ ಸೂರು ಮತ್ತು ಉದ್ಯೋಗಕ್ಕಾಗಿ ಮಾಜಿ ಯೋಧರೊಬ್ಬರು ಇಂದಿಗೂ ಕಚೇರಿಯಿಂದ ಕಚೇರಿಗೆ ಅಲೆದಾಡುತ್ತಿರುವ ಪರಿಸ್ಥಿತಿ ನಿರ್ಮಾಣವಾಗಿದೆ.

    ಹಾವೇರಿ ನಗರದ ಹುಮನಾಬಾದ್ ಓಣಿಯ ನಿವಾಸಿ ಮಹಮ್ಮದ್ ಜಹಾಂಗೀರ ಖವಾಸ್, ಕಾರ್ಗಿಲ್ ಯುದ್ಧದಲ್ಲಿ ಹೋರಾಡಿದ ಮಾಜಿ ಯೋಧ. ಇಪ್ಪತ್ತು ವರ್ಷಗಳ ಕಾಲ ಇವರು ಭಾರತೀಯ ಸೇನೆಯಲ್ಲಿ ದೇಶ ಕಾಯೋ ಕೆಲಸ ಮಾಡಿದ್ದಾರೆ. ಅದರಲ್ಲೂ 1999, ಜುಲೈ 26ರಂದು ನಡೆದ ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ್ದರು. ಕಾರ್ಗಿಲ್ ಯುದ್ಧದಲ್ಲಿ ಕಾರ್ಗಿಲ್ ಗನ್ನರ್ ಹುದ್ದೆಯಲ್ಲಿ ಕೆಲಸ ಮಾಡಿದ್ದಾರೆ. ಇದಕ್ಕೂ ಮೊದಲು ಹೈದರಾಬಾದ್, ಡೆಹರಾಡೂನ್, ಸಿಕ್ಕಿಂನಲ್ಲಿಯೂ ಕಾರ್ಯ ನಿರ್ವಹಿಸಿದ್ದಾರೆ. ಕಾರ್ಗಿಲ್ ಯುದ್ಧದ ನಂತರ 2000ರಂದು ಇವರು ನಿವೃತ್ತರಾಗಿದ್ದಾರೆ. ನಿವೃತ್ತಿ ನಂತರ ಸರ್ಕಾರದ 5 ಎಕರೆ ಜಮೀನು, ಉದ್ಯೋಗ ಮತ್ತು ಸ್ವಂತ ಸೂರಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ಈವರೆಗೂ ಅರ್ಜಿಗಳ ಮೇಲೆ ಅರ್ಜಿಗಳನ್ನು ಸಲ್ಲಿಸುತ್ತಲೇ ಬಂದಿದ್ದಾರೆ. ಆದರೆ ಇದೂವರೆಗೂ ಸ್ವಂತ ಸೂರು, ಉದ್ಯೋಗ ಮತ್ತು ಸರಕಾರದ ಜಮೀನು ಮಾತ್ರ ಸಿಕ್ಕಿಲ್ಲ.

    ಶಾಸಕರು, ಸಂಸದರು, ಸಚಿವರು ಮತ್ತು ಅಧಿಕಾರಿಗಳಿಗೂ ಈ ಮಾಜಿ ಯೋಧ ಸಾಕಷ್ಟು ಮನವಿಗಳನ್ನು ಸಲ್ಲಿಸಿದ್ದಾರೆ. ಆದರೆ ಎಲ್ಲರಿಂದಲೂ ಭರವಸೆ ಬಿಟ್ಟರೆ ಇವರಿಗೆ ಉದ್ಯೋಗ, ಸ್ವಂತ ಸೂರು ಮತ್ತು ಸರಕಾರದ ಜಮೀನು ಕೊಡಿಸುವ ಕೆಲಸವಾಗಿಲ್ಲ. ಕಾರ್ಗಿಲ್ ಯುದ್ಧದ ವೇಳೆ ವೈರಿಗಳ ವಿರುದ್ಧ ಹೋರಾಟ ಮಾಡುವಾಗಲೂ ಮಹಮ್ಮದ್ ಖವಾಸ್ ಇಷ್ಟೊಂದು ತೊಂದರೆ ಅನುಭವಿಸಿಲ್ಲ. ಈಗ ಸೂರು, ಉದ್ಯೋಗ ಮತ್ತು ಜಮೀನಿಗಾಗಿ ಅಲೆದಾಡಿ ಸಾಕಷ್ಟು ಸುಸ್ತಾಗಿದ್ದಾರೆ.

    2000ರಲ್ಲಿ ಖವಾಸ್ ವೃತ್ತಿಯಿಂದ ನಿವೃತ್ತರಾದ ಮೇಲೆ ಉದ್ಯೋಗ, ಸೂರು ಮತ್ತು ಜಮೀನಿಗಾಗಿ ಅರ್ಜಿಗಳ ಮೇಲೆ ಅರ್ಜಿ ಸಲ್ಲಿಸಿದ್ದರು. ಕಾರ್ಗಿಲ್ ಯುದ್ಧ ಇಡೀ ದೇಶದ ಚರಿತ್ರೆಯಲ್ಲೇ ದಾಖಲಾಗಿದ್ದರಿಂದ ಸರ್ಕಾರದ ಸೌಲಭ್ಯಗಳು ಸಿಗೋದು ಅಷ್ಟೊಂದು ಕಷ್ಟವಾಗೋದಿಲ್ಲ ಅಂತಾ ಭಾವಿಸಿದ್ದರು. ಆದರೆ ಯುದ್ಧದಲ್ಲಿ ಹೋರಾಟ ಮಾಡಿದ್ದಕ್ಕಿಂತಲೂ ಸೌಲಭ್ಯ ಪಡೆಯಲು ಮಹಮ್ಮದ್ ಖವಾಸ್ ಹೆಚ್ಚಿನ ಹೋರಾಟ ಮಾಡುತ್ತಿದ್ದಾರೆ. ನಿವೃತ್ತಿ ನಂತರ ಸರ್ಕಾರದಿಂದ ಯಾವುದೇ ಉದ್ಯೋಗ ಸಿಗದೆ ಕುಟುಂಬ ನಿರ್ವಹಣೆಗೆ ಕೆಲವು ವರ್ಷಗಳ ಕಾಲ ಖಾಸಗಿ ಕಂಪನಿಯಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡಿದ್ರು.

    ಇದೀಗ ಸೆಕ್ಯೂರಿಟಿ ಗಾರ್ಡ್ ಕೆಲಸವನ್ನೂ ಬಿಟ್ಟು ಮನೆಯಲ್ಲಿದ್ದಾರೆ. ಪತ್ನಿ, ನಾಲ್ವರು ಮಕ್ಕಳ ತುಂಬು ಸಂಸಾರ ಇವರದ್ದು, ವಾಸಿಸಲು ಸ್ವಂತ ಮನೆಯಿಲ್ಲ. ಬೇರೊಬ್ಬರ ಮೆನಯನ್ನು ಲೀಸ್ ಗೆ ಪಡೆದು ಆ ಮನೆಯಲ್ಲಿ ವಾಸ ಮಾಡುತ್ತಿದ್ದಾರೆ. ಕಾರ್ಗಿಲ್ ದಿವಸ್ ಬಂದಾಗೊಮ್ಮೆ ಮಾಜಿ ಯೋಧ ಮಹಮ್ಮದ್ ಖವಾಸ್ ರಿಗೆ ಸನ್ಮಾನ, ಹೊಗಳಿಕೆಗಳು ಬರುತ್ತಿವೆ. ಕಾರ್ಗಿಲ್ ದಿವಸ್ ಕಾರ್ಯಕ್ರಮ ಮುಗೀತು ಅಂದರೆ ನಂತರ ಯಾರೂ ಕ್ಯಾರೇ ಅಂತಿಲ್ಲ. ಸೂರು, ಉದ್ಯೋಗ ಮತ್ತು ಸರಕಾರದ ಭೂಮಿಗಾಗಿ ಅಲೆದಾಡುತ್ತಿರೋದನ್ನ ನೋಡಿ ಮಹಮ್ಮದ್ ಖವಾಸ್ ಅವರ ಕುಟುಂಬಕ್ಕೂ ಸಾಕಾಗಿ ಹೋಗಿದೆ ಎಂದು ಸ್ಥಳೀಯ ಮಲ್ಲಿಕಾರ್ಜನ್ ತಿಳಿಸಿದ್ದಾರೆ.

  • ನಾನು ಮನೆಯಲ್ಲಿ ಇಲ್ಲ, ದೇಶ ಕಾಯೋ ನಮಗೆ ನ್ಯಾಯ ಕೊಡಿಸಿ – ಸಾಮಾಜಿಕ ಜಾಲತಾಣದಲ್ಲಿ ಯೋಧನ ಮನವಿ

    ನಾನು ಮನೆಯಲ್ಲಿ ಇಲ್ಲ, ದೇಶ ಕಾಯೋ ನಮಗೆ ನ್ಯಾಯ ಕೊಡಿಸಿ – ಸಾಮಾಜಿಕ ಜಾಲತಾಣದಲ್ಲಿ ಯೋಧನ ಮನವಿ

    ಮೈಸೂರು: ದೇಶ ಕಾಯಲು ಹೋಗಿದ್ದೇನೆ, ಆದರೆ ನನ್ನ ಕುಟುಂಬಕ್ಕೆ ಆದ ಅನ್ಯಾಯಕ್ಕೆ ನ್ಯಾಯ ಕೊಡಿಸಲು ಸಾಧ್ಯವಾಗಿಲ್ಲ. ಈಗಾಲಾದರು ನಮಗೇ ನ್ಯಾಯ ಕೊಡಿಸಿ ಎಂದು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಮುತ್ತೂರು ಕಾಲೋನಿ ರಾಜೀವ್ ಗ್ರಾಮದ ನಿವಾಸಿಯಾಗಿದ್ದ ಯೋಧರೊಬ್ಬರು ಮನವಿ ಮಾಡಿದ್ದಾರೆ.

    ಯೋಧ ಮಂಜುನಾಥ್ ಈ ಕುರಿತು ಮನವಿ ಮಾಡಿದ್ದು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಪೋಸ್ಟ್ ಮಾಡಿದ್ದಾರೆ. ಈ ವೇಳೆ ತಾನು ದೇಶ ಕಾಯುವ ಕರ್ತವ್ಯದ ಮೇರೆಗೆ ಸೇನೆಗೆ ಹೋಗಿದ್ದು ನನ್ನ ಕುಟುಂಬಕ್ಕೆ ಈಗಲಾದರು ಪೊಲೀಸರು ನ್ಯಾಯ ನೀಡಿ ಎಂದು ಹೇಳಿದ್ದಾರೆ.

    ಏನಿದು ಘಟನೆ: ಮಂಜುನಾಥ್ ಸೈನ್ಯದಲ್ಲಿ ಯೋಧರಾಗಿ ಕಾರ್ಯನಿರ್ವಹಿಸುತ್ತಿದ್ದು, ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಮುತ್ತೂರು ಕಾಲೋನಿ ರಾಜೀವ್ ಗ್ರಾಮದ ವಾಸಿಸುವ ಮಂಜುನಾಥ್ ಅವರು ತನ್ನ ತಂದೆ ಮೇಲೆ ಕೆಲವರು ಜನರು ವಿನಾಃಕಾರಣ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

    ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವೀಡಿಯೋದಲ್ಲಿ ಸೇನಾ ಸಮವಸ್ತ್ರದಲ್ಲೇ ಬೇಸರ ವ್ಯಕ್ತಪಡಿಸಿರುವ ಮಂಜುನಾಥ್, ಅಪಘಾತದ ಪ್ರಕರಣದಲ್ಲಿ ತಂದೆ ಮೇಲೆ ಸ್ಥಳೀಯರು ಹಲ್ಲೆ ಮಾಡಿದ್ದಾರೆ. ಆದರೆ ತನ್ನ ತಂದೆ ಯಾವುದೇ ತಪ್ಪು ಮಾಡಿಲ್ಲ. ಅಪಘಾತ ಮಾಡಿದವರ ಕಡೆಯವರೆ ತನ್ನ ತಂದೆ ಮೇಲೆ ಹಲ್ಲೆ ಮಾಡಿದ್ದಾರೆ. ಆದರೂ ಪೊಲೀಸರು ಈವರೆಗೂ ತಪ್ಪು ಮಾಡಿದವರ ಮೇಲೆ ಯಾವುದೇ ಕ್ರಮ ಕೈಗೊಂಡಿಲ್ಲ. ಸದ್ಯ ನಾನು ಕರ್ತವ್ಯದಲ್ಲಿದ್ದು, ನಾನು ಮನೆಯಲ್ಲಿ ಇರುವುದಿಲ್ಲ. ದೇಶ ಕಾಯೋ ನಮಗೆ ನಮ್ಮ ತಂದೆಗೆ ಆದ ಅನ್ಯಾಯಕ್ಕೆ ನ್ಯಾಯ ಸಿಕ್ಕಿಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ.

    https://www.youtube.com/watch?v=2aXwzCRZCbM

  • ರೈಲಿನಡಿ ಸಿಲುಕುತ್ತಿದ್ದ ಬಾಲಕಿಯನ್ನ ರಕ್ಷಿಸಿದ್ರು ಭಾರತೀಯ ಯೋಧ – ವಿಡಿಯೋ ವೈರಲ್

    ರೈಲಿನಡಿ ಸಿಲುಕುತ್ತಿದ್ದ ಬಾಲಕಿಯನ್ನ ರಕ್ಷಿಸಿದ್ರು ಭಾರತೀಯ ಯೋಧ – ವಿಡಿಯೋ ವೈರಲ್

    ಮುಂಬೈ: ರೈಲಿನಡಿ ಸಿಲುಕುತ್ತಿದ್ದ ಬಾಲಕಿಯನ್ನು ತನ್ನ ಪ್ರಾಣವನ್ನು ಲೆಕ್ಕಿಸದೆ ಭಾರತೀಯ ಯೋಧರೊಬ್ಬರು ರಕ್ಷಣೆ ಮಾಡಿರುವ ಘಟನೆ ಮುಂಬೈನ ಮಹಾಲಕ್ಷ್ಮಿ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ.

    ಮಹಾರಾಷ್ಟ್ರ ರಕ್ಷಣಾ ಪಡೆಯ ಸಚಿನ್ ಪೋಲ್ ಎಂಬವರೇ ಬಾಲಕಿಯನ್ನು ರಕ್ಷಿಸಿದ ಯೋಧ. ಇವರು ಐದು ವರ್ಷದ ಬಾಲಕಿ ರೈಲಿನ ಅಡಿಯಲ್ಲಿ ಸಿಲುಕಿದಾಗ ಓಡಿ ಹೋಗಿ ಪ್ರಾಣಾಪಾದಿಂದ ಕಾಪಾಡಿದ್ದಾರೆ.

    ಘಟನೆಯ ವಿವರ: ಶುಕ್ರವಾರ ಮಹಾಲಕ್ಷ್ಮಿ ರೈಲ್ವೇ ನಿಲ್ದಾಣದಲ್ಲಿ ರೈಲು ಚಲಿಸಿದೆ, ಇದನ್ನು ನೋಡಿ ತಾಯಿಯೊಬ್ಬರು ಬಾಲಕಿಯ ಕೈ ಹಿಡಿದು ಓಡಿ ಬಂದಿದ್ದಾರೆ. ರೈಲಿನ ಬಾಗಿಲು ಬಳಿ ಬರುತ್ತಿದ್ದಂತೆ ಪೋಷಕರು ರೈಲನ್ನು ಹತ್ತಿದ್ದಾರೆ. ಈ ವೇಳೆ ಬಾಲಕಿ ರೈಲು ಹತ್ತಲು ಪ್ರಯತ್ನ ಮಾಡಿದ್ದಾಳೆ. ಆದರೆ ರೈಲು ಚಲಿಸುತ್ತಿದ್ದರಿಂದ ಹತ್ತಲಾಗದೇ ಕಾಲು ಜಾರಿ ರೈಲಿನ ಕೆಳಗೆ ಬಿದ್ದಿದ್ದಾಳೆ. ಅಲ್ಲೆ ಇದ್ದ ಯೋಧ ಇದನ್ನು ನೋಡಿ ಬಂದು ತನ್ನ ಪ್ರಾಣವನ್ನು ಲೆಕ್ಕಿಸದೆ ರೈಲಿನಡಿ ಸಿಲುಕುತ್ತಿದ್ದ ಬಾಲಕಿಯನ್ನು ಎಳೆದು ಕೊಂಡು ಕಾಪಾಡಿದ್ದಾರೆ. ಸದ್ಯಕ್ಕೆ ಈ ಘಟನೆಯಿಂದ ಇಬ್ಬರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಚಿಕಿತ್ಸೆ ಪಡೆದಿದ್ದಾರೆ.

    ಯೋಧ ಸಚಿನ್ ಪೋಲ್ ಬಾಲಕಿಯನ್ನು ರಕ್ಷಿಸಿರುವ ವಿಡಿಯೋ ರೈಲ್ವೇ ನಿಲ್ದಾಣದಲ್ಲಿ ಅಳವಡಿಸಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಯೋಧನ ಸಮಯ ಪ್ರಜ್ಞೆ ಮತ್ತು ಸಹಾಸದಿಂದ ಅದೃಷ್ಟವಶಾತ್ ಬಾಲಕಿ ಬಚಾವ್ ಆಗಿದ್ದಾಳೆ.

    ಯೋಧ ಸಚಿನ್ ಪೋಲ್ ಎರಡು ವರ್ಷಗಳಿಂದ ರಕ್ಷಣಾ ಪಡೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಇನ್ನು ಇವರ ಸಾಹಸಕ್ಕೆ ಜನರು ಮೆಚ್ಚುಗೆ ಸೂಚಿಸಿದ್ದಾರೆ.

  • ತನ್ನ ಪ್ರಾಣ ಲೆಕ್ಕಿಸದೇ ಭಯೋತ್ಪಾದಕರ ವಿರುದ್ಧ ಹೋರಾಡಿ ಬಂದ ಯೋಧನಿಗೆ ತವರೂರಲ್ಲಿ ಸಿಕ್ತು ಅದ್ಧೂರಿ ಸ್ವಾಗತ

    ತನ್ನ ಪ್ರಾಣ ಲೆಕ್ಕಿಸದೇ ಭಯೋತ್ಪಾದಕರ ವಿರುದ್ಧ ಹೋರಾಡಿ ಬಂದ ಯೋಧನಿಗೆ ತವರೂರಲ್ಲಿ ಸಿಕ್ತು ಅದ್ಧೂರಿ ಸ್ವಾಗತ

    ಮಂಗಳೂರು: ಭಯೋತ್ಪಾದಕರ ದಾಳಿಯಲ್ಲಿ ಉಗ್ರರ ವಿರುದ್ಧ ಹೋರಾಡಿ ಬಂದ ಸಿಆರ್‍ಪಿಎಫ್ ಯೋಧರೊಬ್ಬರಿಗೆ ತವರೂರಲ್ಲಿ ಅದ್ಧೂರಿ ಸ್ವಾಗತ ಸಿಕ್ಕಿದೆ.

    ಫೆಬ್ರವರಿ ತಿಂಗಳಲ್ಲಿ ಜಮ್ಮು ಕಾಶ್ಮೀರದಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಉಗ್ರರನ್ನು ಹೊಡೆದುರುಳಿಸಿದ್ದ ಸೇನಾ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದ ಸಿಆರ್ ಪಿಎಫ್ ಯೋಧ, ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಸಮೀಪದ ಬಜತ್ತೂರು ನಿವಾಸಿ ಜುಬೇರ್ ಎಂ. ಅವರನ್ನು ಹುಟ್ಟೂರಿನಲ್ಲಿ ಅದ್ಧೂರಿಯಾಗಿ ಸ್ವಾಗತಿಸಲಾಗಿದೆ.

    ಸಮೂನ್ ಬ್ಯಾರಿ ಹಾಗೂ ಅಮೀನಮ್ಮ ದಂಪತಿಯ ಎರಡನೇ ಪುತ್ರ ಜುಬೇರ್ ಸೇನಾ ಕಾರ್ಯಾಚರಣೆ ಬಳಿಕ ಹುಟ್ಟೂರಿಗೆ ಆಗಮಿಸಿದ್ದರು. ಯೋಧನನ್ನು ಊರಿನವರು ತೆರೆದ ವಾಹನದಲ್ಲಿ ಮೆರವಣಿಗೆ ನಡೆಸಿ, ಅದ್ಧೂರಿಯಾಗಿ ಸನ್ಮಾನಿಸಿದ್ದಾರೆ.

    ಜಮ್ಮುವಿನ ಕಟ್ಟಡ ಒಂದರಲ್ಲಿ ಅವಿತು ಕುಳಿತಿದ್ದ ಲಷ್ಕರ್-ಏ-ತೊಯ್ಬಾ ಉಗ್ರರು ಹಠಾತ್ತಾಗಿ ಸೇನಾ ಯೋಧರ ಮೇಲೆ ದಾಳಿ ನಡೆಸಿದ್ದರು. ಇದರಿಂದಾಗಿ ಹಲವು ಯೋಧರು ಹುತಾತ್ಮರಾಗಿದ್ದರು. ಆದರೆ, ಸಿಆರ್ ಪಿಎಫ್ ಯೋಧರು ಯಶಸ್ವಿ ಕಾರ್ಯಾಚರಣೆ ಮೂಲಕ ಉಗ್ರರನ್ನು ಹೊಡೆದುರುಳಿಸಿದ್ದರು.

    ಈ ಮಹತ್ವದ ಕಾರ್ಯಾಚರಣೆ ಬಳಿಕ ಜುಬೇರ್ ಮೊದಲ ಬಾರಿಗೆ ಹುಟ್ಟೂರಿಗೆ ಆಗಮಿಸಿದ್ದಾರೆ. ಆದ್ದರಿಂದ ತನ್ನ ಪ್ರಾಣವನ್ನು ಲೆಕ್ಕಿಸದೆ ದಾಳಿ ಸಂಘಟಿಸಿದ್ದಕ್ಕಾಗಿ ಜುಬೇರ್ ಅವರನ್ನು ಗ್ರಾಮದವರು ಹೃತ್ಪೂರ್ವಕವಾಗಿ ಅಭಿನಂದಿಸಿದ್ದು ವಿಶೇಷವಾಗಿತ್ತು.

  • ಬರೋಬ್ಬರಿ 9 ಗುಂಡುಗಳು ಹೊಕ್ಕಿ ಕೋಮಾಗೆ ಜಾರಿದ್ದ ಯೋಧ ಮತ್ತೆ ಕೆಲಸಕ್ಕೆ ಹಾಜರ್!

    ಬರೋಬ್ಬರಿ 9 ಗುಂಡುಗಳು ಹೊಕ್ಕಿ ಕೋಮಾಗೆ ಜಾರಿದ್ದ ಯೋಧ ಮತ್ತೆ ಕೆಲಸಕ್ಕೆ ಹಾಜರ್!

    ನವದೆಹಲಿ: ಜಮ್ಮು-ಕಾಶ್ಮೀರದ ಬಂಡಿಪೋರ್ ಎನ್‍ಕೌಂಟರ್ ವೇಳೆ ಒಂಭತ್ತು ಗುಂಡುಗಳು ತಾಗಿ ಕೋಮಾ ಸ್ಥಿತಿಗೆ ಜಾರಿದ್ದ ಸಿಆರ್‍ಪಿಎಫ್ ಕಮಾಂಡರ್ ಚೇತನ್ ಕುಮಾರ್ ಚೀತಾ ಅವರು ಸಂಪೂರ್ಣವಾಗಿ ಗುಣಮುಖರಾಗಿ ಮತ್ತೆ ಕೆಲಸಕ್ಕೆ ಹಾಜರಾಗಿದ್ದಾರೆ.

    ಕಳೆದ ವರ್ಷ ಫೆಬ್ರವರಿ 14ರಂದು ಜಮ್ಮು-ಕಾಶ್ಮೀರದ ಬಂಡಿಪೋರಾನಲ್ಲಿ ಉಗ್ರದ ವಿರುದ್ಧದ ಕಾರ್ಯಾಚರಣೆ ನಡೆಯುತ್ತಿತ್ತು. ಈ ವೇಳೆ 45 ವರ್ಷದ ಚೇತನ್ ಎದೆಗೆ 9 ಗುಂಡುಗಳು ಹೊಕ್ಕಿದ್ದವು. ದಾಳಿ ನಡೆದ ದಿನದಂದು ಚೇತನ್ ಅವರು ಪ್ರಜ್ಞೆ ಕಳೆದುಕೊಂಡು ಕೋಮಾಗೆ ಜಾರಿದ್ದರು. ಸುಮಾರು 2 ತಿಂಗಳ ಬಳಿಕ ಅವರು ಕೋಮಾದಿಂದ ಹೊರಬಂದಿದ್ದರು.

    ದೆಹಲಿಯ ಏಮ್ಸ್ ಆಸ್ಪತ್ರೆ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಚೇತನ್ ಅವರನ್ನು ಕಳೆದ ವರ್ಷ ಏಪ್ರಿಲ್ 5 ರಂದು ಡಿಸ್ಚಾರ್ಜ್ ಮಾಡಲಾಗಿತ್ತು.

    ಸುದೀರ್ಘ ಚಿಕಿತ್ಸೆ ಬಳಿಕ ಇದೀಗ ಆರೋಗ್ಯ ಸುಧಾರಿಸಿಕೊಂಡಿದ್ದ ಚೇತನ್ ಕುಮಾರ್ ಅವರು ಕೆಲಸಕ್ಕೆ ಮತ್ತೆ ಹಾಜರಾಗಿದ್ದಾರೆ. ಚೇತನ್ ಕುಮಾರ್ ಅವರ ಪತ್ನಿ ಮಾತನಾಡಿದ್ದು, ನನ್ನ ಗಂಡ ಮರಳಿ ಕೆಲಸಕ್ಕೆ ಹಾಜರಾಗುತ್ತಿರುವುದು ತುಂಬಾ ಖುಷಿ ನೀಡಿದೆ ಎಂದಿದ್ದಾರೆ.

    ಚೇತನ್ 45ನೇ ಬೆಟಾಲಿಯನ್ ನ ಕಮಾಂಡಿಂಗ್ ಆಫೀಸರ್ ಆಗಿದ್ದಾರೆ. 2017ರ ಫೆಬ್ರವರಿ 14ರಂದು ಅವರಿಗೆ 9 ಗುಂಡೇಟು ತಗುಲಿತ್ತು. ಮೆದುಳು, ಹೊಟ್ಟೆ, ಕೈ, ಬಲಗಣ್ಣು ಹಾಗೂ ತೊಡೆಯಲ್ಲಿ ಗುಂಡು ಹೊಕ್ಕಿತ್ತು. ಸುಮಾರು ಒಂದೂವರೆ ತಿಂಗಳು ಚೇತನ್ ಕುಮಾರ್ ಕೋಮಾದಲ್ಲಿದ್ದರು. ಏಪ್ರಿಲ್ ನಲ್ಲಿ ಅವರಿಗೆ ಪ್ರಜ್ಞೆ ಮರಳಿತ್ತು. ಚೇತನ್ ಪೂರ್ತಿಯಾಗಿ ಚೇತರಿಸಿಕೊಳ್ಳಲು 2 ವರ್ಷಗಳು ಬೇಕು ಅಂತಾ ವೈದ್ಯರು ತಿಳಿಸಿದ್ದಾರೆ. ಹಾಗಾಗಿ ಸದ್ಯಕ್ಕೆ ಅವರು ಕಚೇರಿ ಕೆಲಸ ನೋಡಿಕೊಳ್ಳಲಿದ್ದಾರೆ. ಸಂಪೂರ್ಣ ಗುಣಮುಖರಾದ ಮೇಲೆ ಕಾರ್ಯಾಚರಣೆಗಿಳಿಯಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ ವರ್ಷ ಸ್ವತಂತ್ರ್ಯಾ ದಿನಚಾರಣೆ ದಿನದಂದು ಚೇತನ್ ಕುಮಾರ್ ಚೇತಾ ಅವರಿಗೆ ಕೀರ್ತಿ ಚಕ್ರವನ್ನು ನೀಡಿ ಗೌರವಿಸಿತ್ತು.

    ಉಗ್ರರಿಂದ ಗುಂಡೇಟು ತಿಂದು ಶ್ರೀನಗರದಿಂದ ದೆಹಲಿಗೆ ಬಂದಾಗ ಚೇತನ್ ಕುಮಾರ್ ಆರೋಗ್ಯ ಸ್ಥಿತಿ ತುಂಬಾ ಚಿಂತಾಜನಕವಾಗಿತ್ತು. ಈ ಹಿನ್ನೆಲೆಯಲ್ಲಿ ಅಂದು ಕೇಂದ್ರ ಗೃಹ ಖಾತೆ ವ್ಯವಹಾರಗಳ ರಾಜ್ಯ ಸಚಿವ ಕಿರಣ್ ರಿಜಿಜು ಏಮ್ಸ್ ಆಸ್ಪತ್ರೆಗೆ ಭೇಟಿ ಕೊಟ್ಟು ಚೇತನ್ ಕುಮಾರ್ ಅವರ ಆರೋಗ್ಯ ವಿಚಾರಿಸಿದ್ದರು. ಈ ವೇಳೆ ಏಮ್ಸ್ ನಿಂದ ಡಿಸ್ಚಾರ್ಜ್ ಆಗುತ್ತಿದ್ದಂತೆ ನಕ್ಸಲ್ ವಿರುದ್ಧ ಕಾರ್ಯಾಚರಣೆ ನಡೆಸುತ್ತಿರುವ ಕೋಬ್ರಾ ಬೆಟಾಲಿಯನ್ ಸೇರುವ ಇಂಗಿತವನ್ನು ಚೇತನ್ ವ್ಯಕ್ತಪಡಿಸಿದ್ದರು. ಇದು ಇತರ ಯೋಧರಿಗೆ ನೈತಿಕ ಧೈರ್ಯ ತುಂಬಿದೆ ಎಂದು ಸಚಿವ ಕಿರಣ್ ರಿಜಿಜು ತಿಳಿಸಿದ್ದರು.