Tag: Washington dc

  • ವಿಮಾನ – ಹೆಲಿಕಾಪ್ಟರ್ ದುರಂತ; ಎಲ್ಲಾ 64 ಮಂದಿ ದುರ್ಮರಣ, 28 ಮೃತದೇಹ ಪತ್ತೆ

    ವಿಮಾನ – ಹೆಲಿಕಾಪ್ಟರ್ ದುರಂತ; ಎಲ್ಲಾ 64 ಮಂದಿ ದುರ್ಮರಣ, 28 ಮೃತದೇಹ ಪತ್ತೆ

    ವಾಷಿಂಗ್ಟನ್: ಸೇನಾ ಹೆಲಿಕಾಪ್ಟರ್‌ – ಅಮೆರಿಕರ ವಿಮಾನದ ನಡುವಿನ ದುರಂತದಲ್ಲಿ (Plane Helicopter Collision) ಎಲ್ಲಾ 64 ಮಂದಿ ದುರ್ಮರಣಕ್ಕೀಡಾಗಿದ್ದು, ಈವರೆಗೆ 28 ಮೃತದೇಹಗಳನ್ನು ಪೊಟೊಮ್ಯಾಕ್ ನದಿಯಿಂದ (Potomac River) ಹೊರತೆಗೆಯಲಾಗಿದೆ ಎಂದು ವರದಿಗಳು ತಿಳಿಸಿವೆ.

    ಅಮೆರಿಕದ (America) ವಾಷಿಂಗ್ಟನ್ ಡಿಸಿಯ ರೊನಾಲ್ಡ್ ರೇಗನ್ ವಿಮಾನ ನಿಲ್ದಾಣದ (Reagan National Airport) ಬಳಿ ದುರಂತ ನಡೆದಿದೆ. ಈ ವೇಳೆ ಅಮೆರಿಕನ್ ಏರ್‌ಲೈನ್ಸ್ ಫ್ಲೈಟ್-5342ರಲ್ಲಿ ಪ್ರಯಾಣಿಸುತ್ತಿದ್ದ ಎಲ್ಲಾ 64 ಮಂದಿ ಸಾವನ್ನಪ್ಪಿದ್ದು, ಈವರೆಗೆ 28 ಮೃತದೇಹಳನ್ನು ಹೊರತೆಗೆಯಲಾಗಿದೆ. ಭೀಕರ ದುರಂತದಲ್ಲಿ ಬದುಕುಳಿದಿರುವ ಸಾಧ್ಯತೆಗಳು ಕಡಿಮೆ ಎಂದು ವಾಷಿಂಗ್ಟನ್ ಅಗ್ನಿಶಾಮಕ ಮುಖ್ಯಸ್ಥ ಜಾನ್ ಡೊನ್ನೆಲ್ಲಿಯನ್ನು ತಿಳಿಸಿದ್ದಾರೆ. ಇದನ್ನೂ ಓದಿ: AI ರಂಗದಲ್ಲಿ ಡೀಪ್‌ಸೀಕ್ ಸಂಚಲನ – ಅಮೆರಿಕ ಷೇರುಪೇಟೆ ಶೇಕ್!

    ಸದ್ಯ ನದಿಯಲ್ಲಿ ಉಳಿದ ಮೃತದೇಹಳಿಗಾಗಿ ಕಾರ್ಯಾಚರಣೆ ಮುಂದುವರಿದಿದೆ. ಆದ್ರೆ ಮಿಲಿಟರಿ ಬ್ಲಾಕ್‌ ಹಾಕ್ ಹೆಲಿಕಾಪ್ಟರ್‌ನಲ್ಲಿ ಮೂವರು ಸೈನಿಕರಿದ್ದು, ಅವರ ಬಗ್ಗೆ ಯಾವುದೇ ಮಾಹಿತಿ ಇನ್ನೂ ಲಭ್ಯವಾಗಿಲ್ಲ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಕಾಂಗೋದಲ್ಲಿ M23 ಬಂಡುಕೋರರ ಲೂಟಿ – 100ಕ್ಕೂ ಹೆಚ್ಚು ಬಲಿ, ಸಾವಿರಾರು ಜನರಿಗೆ ಗಾಯ

    ಅಪಘಾತ ಸಂಭವಿಸಿದ್ದು ಹೇಗೆ?
    ದುರಂತಕ್ಕೀಡಾದ ಅಮೆರಿಕನ್‌ ಏರ್‌ಲೈನ್ಸ್‌ (American Airlines) ವಿಮಾನವು ಕಾನ್ಸಾಸ್‌ನಿಂದ ಡಿ.ಸಿ.ಯ ರೇಗನ್ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಬುಧವಾರ ತಡರಾತ್ರಿ ಪೊಟೊಮ್ಯಾಕ್ ನದಿಯಲ್ಲಿ ವಿಮಾನ ಪತನಗೊಂಡಿದೆ. ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ಆರಂಭಿಸಿದೆ. ವಿಮಾನ ನಿಲ್ದಾಣದಲ್ಲಿ ಎಲ್ಲಾ ಹಾರಾಟಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಅಮೆರಿಕದಲ್ಲಿನ ವಲಸಿಗರ ಕೈಗೆ ಕೋಳ – ಟ್ರಂಪ್ ಆದೇಶದ ವಿರುದ್ಧ ಸಿಡಿದೆದ್ದ ಸಿಖ್ಖರು

  • ಸೇನಾ ಹೆಲಿಕಾಪ್ಟರ್‌ಗೆ ಡಿಕ್ಕಿ ಹೊಡೆದು ನದಿಗೆ ಬಿದ್ದ ವಿಮಾನ -18 ಮಂದಿ ಸಾವು

    ಸೇನಾ ಹೆಲಿಕಾಪ್ಟರ್‌ಗೆ ಡಿಕ್ಕಿ ಹೊಡೆದು ನದಿಗೆ ಬಿದ್ದ ವಿಮಾನ -18 ಮಂದಿ ಸಾವು

    ವಾಷಿಂಗ್ಟನ್: ಸೇನಾ ಹೆಲಿಕಾಪ್ಟರ್‌ಗೆ (Military Helicopter) ಪ್ರಯಾಣಿಕರಿದ್ದ ವಿಮಾನವೊಂದು (Flight) ಡಿಕ್ಕಿ ಹೊಡೆದು ನದಿಗೆ ಬಿದ್ದ ಪರಿಣಾಮ 18 ಮಂದಿ ಸಾವನ್ನಪ್ಪಿದ ಘಟನೆ ಅಮೆರಿಕದ (America) ವಾಷಿಂಗ್ಟನ್ ಡಿಸಿಯ ರೊನಾಲ್ಡ್ ರೇಗನ್ ವಿಮಾನ ನಿಲ್ದಾಣದ (Reagan National Airport )ಬಳಿ ನಡೆದಿದೆ.

    ಅಮೆರಿಕ ಸೇನಾ ಹೆಲಿಕಾಪ್ಟರ್‌ಗೆ ವಿಮಾನ ಡಿಕ್ಕಿ ಹೊಡೆದ ಪರಿಣಾಮ ಪೋಟೋಮ್ಯಾಕ್ ನದಿಗೆ ವಿಮಾನ ಬಿದ್ದಿದೆ. ಸದ್ಯ ನದಿಯಿಂದ ವಿಮಾನದಲ್ಲಿದ್ದ ನಾಲ್ವರನ್ನು ರಕ್ಷಣೆ ಮಾಡಿದ್ದು, 18 ಮಂದಿಯ ಮೃತದೇಹಗಳನ್ನು ಮೇಲೆತ್ತಲಾಗಿದೆ. ಇದನ್ನೂ ಓದಿ: ಹಾಸನದಲ್ಲಿ ಪುಡಿ ರೌಡಿಯ ಕಾಟ | ಬೆಂಗಳೂರು – ಮಂಗಳೂರು ಬಸ್ಸು ತಡೆದು ಮಾರಕಾಸ್ತ್ರದಿಂದ ಹಲ್ಲೆ

    ಅಪಘಾತಕ್ಕೀಡಾದ ವಿಮಾನವು 60 ಪ್ರಯಾಣಿಕರು ಮತ್ತು ನಾಲ್ವರು ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿತ್ತು. ಕಾನ್ಸಾಸ್‌ನಿಂದ ಡಿ.ಸಿ.ಯ ರೇಗನ್ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಬುಧವಾರ ತಡರಾತ್ರಿ ಪೊಟೊಮ್ಯಾಕ್ ನದಿಯಲ್ಲಿ ವಿಮಾನ ಪತನಗೊಂಡಿದೆ. ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ಆರಂಭಿಸಿದೆ. ವಿಮಾನ ನಿಲ್ದಾಣದಲ್ಲಿ ಎಲ್ಲಾ ಹಾರಾಟಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಚಲಿಸುತ್ತಿದ್ದ ರೈಲಿನಿಂದ ಆಯತಪ್ಪಿ ಹೇಮಾವತಿ ನದಿಗೆ ಬಿದ್ದ ವಿದ್ಯಾರ್ಥಿ – ಪ್ರಾಣಾಪಾಯದಿಂದ ಪಾರು

  • ಅಮೆರಿಕದ ಏಳ್ಗೆಗಾಗಿ ವಿದೇಶಗಳಿಗೆ ತೆರಿಗೆ, ಫೆಡರಲ್‌ ಉದ್ಯೋಗಿಗಳಿಗೆ ವರ್ಕ್‌ ಫ್ರಮ್‌ ಹೋಮ್‌ ರದ್ದು; ಮಹತ್ವದ ಆದೇಶಗಳಿಗೆ ಟ್ರಂಪ್‌ ಸಹಿ

    ಅಮೆರಿಕದ ಏಳ್ಗೆಗಾಗಿ ವಿದೇಶಗಳಿಗೆ ತೆರಿಗೆ, ಫೆಡರಲ್‌ ಉದ್ಯೋಗಿಗಳಿಗೆ ವರ್ಕ್‌ ಫ್ರಮ್‌ ಹೋಮ್‌ ರದ್ದು; ಮಹತ್ವದ ಆದೇಶಗಳಿಗೆ ಟ್ರಂಪ್‌ ಸಹಿ

    ವಾಷಿಂಗ್ಟನ್‌: ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್‌ ಟ್ರಂಪ್‌ (Donald Trump) ಅಧಿಕಾರ ಸ್ವೀಕರಿಸಿದ್ದಾರೆ. ಇದೇ ವೇಳೆ ಅಮೆರಿಕನ್ನರ ಏಳಿಗೆಗಾಗಿ ವಿದೇಶಗಳಿಗೆ ತೆರಿಗೆ ವಿಧಿಸುವ ಮಹತ್ವದ ಘೋಷಣೆ ಮಾಡಿರುವ ಟ್ರಂಪ್‌ 80 ಕಾರ್ಯಕಾರಿ ಆದೇಶಗಳಿಗೆ ಸಹಿ ಹಾಕಿದ್ದಾರೆ. ಅಲ್ಲದೇ ಶ್ವೇತಭವನ ತಲುಪಿದ ಬಳಿಕ ಇನ್ನಷ್ಟು ಕಾರ್ಯಕಾರಿ ಆದೇಶಗಳಿಗೆ ಸಹಿ ಹಾಕಲಿದ್ದಾರೆ ಎಂದು ವರದಿಗಳು ತಿಳಿಸಿವೆ.

    ಸೋಮವಾರವಷ್ಟೇ ಅಧಿಕಾರ ವಹಿಸಿಕೊಂಡ ಟ್ರಂಪ್‌, ವಿಶೇಷ ಅಧಿಕಾರ ಬಳಸಿ 2021ರಲ್ಲಿ ನಡೆದ ವಾಷಿಂಗ್ಟನ್‌ ಗಲಭೆ ಪ್ರಕರಣದ ಆರೋಪಿಗಳಿಗೆ ಕ್ಷಮಾದಾನ ನೀಡಿದ್ದಾರೆ. ಮಹತ್ವದ ಆದೇಶಗಳಿಗೆ ಸಹಿ ಹಾಕುವ ಮುನ್ನವೇ ಜೋ ಬೈಡನ್‌ ಅವರ ಅವಧಿಯಲ್ಲಿ ತೆಗೆದುಕೊಳ್ಳಲಾದ 80 ವಿನಾಶಕಾರಿ ಕ್ರಮಗಳನ್ನು ಹಿಂಪಡೆಯುವುದಾಗಿ ಟ್ರಂಪ್‌ ಗುಡುಗಿದ್ದಾರೆ. ಇದನ್ನೂ ಓದಿ: ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್‌ ಟ್ರಂಪ್‌ ಪ್ರಮಾಣ ವಚನ ಸ್ವೀಕಾರ – ಮೋದಿ ವಿಶ್‌

    ಪ್ರಮುಖ ಆದೇಶಗಳೇನು?
    ಅಮೆರಿಕದ ದಕ್ಷಿಣ ಗಡಿಯಲ್ಲಿ ರಾಷ್ಟ್ರೀಯ ತುರ್ತು ಪರಿಸ್ಥಿತಿ ಘೋಷಣೆ ಮಾಡುವುದು. ಮೆಕ್ಸಿಕೋ ಗಡಿಗೆ ಸೇನೆ ಕಳುಹಿಸುವುದು ನಮ್ಮ ಆದ್ಯತೆ ಆಗಿದೆ. ಅಲ್ಲದೇ ಅಮೆರಿಕ ಪ್ರವೇಶಿಸುತ್ತಿರುವ ಅಕ್ರಮ ವಲಸಿಗರನ್ನು ಸಂಪೂರ್ಣವಾಗಿ ತಡೆಯುವುದು. ಅಮೆರಿಕದಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿಗರನ್ನ ದೇಶದಿಂದ ಹೊರಹಾಕುವುದು ಆದ್ಯತೆಯಾಗಿದೆ. ಅಲ್ಲದೇ ಅಮೆರಿಕ ಗಡಿಯುದ್ಧಕ್ಕೂ ಸೇನೆ ನಿಯೋಜಿಸಲು ತಕ್ಷಣ ಆದೇಶ ಹೊರಡಿಸುತ್ತೇನೆ ಎಂಬುದಾಗಿಯೂ ಟ್ರಂಪ್‌ ಘೋಷಿಸಿದ್ದಾರೆ.

    ಅಷ್ಟೇ ಅಲ್ಲದೇ ಪಳೆಯುಳಿಕೆ ಇಂಧನ ಉತ್ಪಾದನೆಯನ್ನು ಹೆಚ್ಚಿಸುವುದು, ಪರಿಸರ ನಿಯಮಗಳನ್ನು 2021ರ ಪ್ಯಾರಿಸ್ ಹವಾಮಾನ ಒಪ್ಪಂದವನ್ನು ಹಿಂತೆಗೆದುಕೊಳ್ಳುವ ಪ್ರಮುಖ ಆದೇಶಗಳಿಗೆ ಸಹಿ ಹಾಕಿದ್ದಾರೆ ಎಂದು ವರದಿಯಾಗಿದೆ. ಇದನ್ನೂ ಓದಿ: ಕದನ ವಿರಾಮದ ಮೊದಲ ಹೆಜ್ಜೆ ಯಶಸ್ವಿ: ಹಮಾಸ್‌ನಿಂದ ಮೂವರು ಒತ್ತೆಯಾಳು ಬಿಡುಗಡೆ

    ವರ್ಕ್‌ಫ್ರಮ್‌ ಹೋಮ್‌ ರದ್ದು:
    ಫೆಡರಲ್‌ ಉದ್ಯೋಗಿಗಳಿಗೆ ವರ್ಕ್‌ ಫ್ರಮ್‌ ಹೋಮ್‌ ಕೊನೆಗೊಳಿಸುವ ಆದೇಶವನ್ನು ಟ್ರಂಪ್‌ ಮೊದಲು ಪ್ರಕಟಿಸಿದ್ದಾರೆ. ಸರ್ಕಾರದ ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುವ ಎಲ್ಲಾ ಏಜೆನ್ಸಿ ಮುಖ್ಯಸ್ಥರು, ವಿಭಾಗಗಳು ಆದಷ್ಟು ಬೇಗ ವರ್ಕ್‌ ಫ್ರಮ್‌ ಹೋಮ್‌ ನಿಯಮವನ್ನು ಹಿಂತೆಗೆದುಕೊಳ್ಳಬೇಕು. ಅಗತ್ಯಬಿದ್ದಲ್ಲಿ ಆಯಾ ಏಜೆನ್ಸಿ, ಇಲಾಖೆ ಮುಖ್ಯಸ್ಥರು ವಿನಾಯಿತಿ ನೀಡಲಿದ್ದಾರೆ ಎಂದು ಟ್ರಂಪ್‌ ಕಾರ್ಯಾದೇಶದಲ್ಲಿ ತಿಳಿಸಿದ್ದಾರೆ.

    ಟ್ರಂಪ್‌ ಆದೇಶದ ಪ್ರಮುಖ ಅಂಶಗಳು:
    * ವಾಘ್‌ ಸ್ವಾತಂತ್ರ್ಯ ಮರುಸ್ಥಾಪಿಸುವುದು ಮತ್ತು ಫೆಡರಲ್‌ ಸೆನ್ಸಾರ್‌ಶಿಪ್‌ ಕೊನೆಗೊಳಿಸುವುದು
    * ಗಲ್ಫ್‌ ಆಫ್‌ ಮೆಕ್ಸಿಕೊವನ್ನು ಗಲ್ಫ್‌ ಆಫ್‌ ಅಮೆರಿಕ ಎಂದು ಮರುನಾಮಕರಣ ಮಾಡುವುದು
    * ಚೀನಾ ನಿರ್ವಹಣೆ ಮಾಡುತ್ತಿರುವ ಪನಾಮ ಕಾಲುವೆಯನ್ನು ಮರಳಿ ಪಡೆಯುವುದು
    * ಅಮೆರಿಕದಲ್ಲಿ ಎರಡು ದಿನಗಳ ಹಿಂದೆಯಷ್ಟೇ ಸ್ಥಗಿತಗೊಂಡಿದ್ದ ಟಿಕ್‌ಟಾಕ್‌ ಸೇವೆಯನ್ನು ಮುಂದಿನ 24 ಗಂಟೆಯಲ್ಲಿ ಪ್ರಾರಂಭಿಸುವುದು ಎಂಬಿತ್ಯಾದಿ ಅದೇಶಗಳಿಗೆ ಸಹಿ ಹಾಕಿದ್ದಾರೆ ಎಂದು ತಿಳಿದುಬಂದಿದೆ.

    ಅಮೆರಿಕದಲ್ಲಿರೋದು ಎರಡೇ ಲಿಂಗ:
    ತೃತೀಯ ಲಿಂಗಿಗಳನ್ನು ಮೊದಲಿನಿಂದಲೂ ವಿರೋಧಿಸುತ್ತಿರುವ ಟ್ರಂಪ್‌, ಇನ್ಮುಂದೆ ಅಮೆರಿಕದಲ್ಲಿ 2 ಲಿಂಗಗಳಷ್ಟೇ ಇರುತ್ತವೆ ಎಂದು ಘೋಷಿಸಿದ್ದಾರೆ. ಅಲ್ಲದೇ ಮಹಿಳೆಯರ ಕ್ರೀಡೆಯಲ್ಲಿ ತೃತೀಯ ಲಿಂಗಿಗಳಿಗೆ ಅವಕಾಶ ನೀಡುವುದನ್ನು ನಿಷೇಧಿಸುತ್ತೇನೆ ಎಂಬುದಾಗಿಯೂ ಟ್ರಂಪ್‌ ಘೋಷಿಸಿದ್ದಾರೆ.

  • ಅಮೆರಿಕದಲ್ಲಿ ಹೈದರಾಬಾದ್ ಮೂಲದ ಯುವಕನ ಹತ್ಯೆ

    ಅಮೆರಿಕದಲ್ಲಿ ಹೈದರಾಬಾದ್ ಮೂಲದ ಯುವಕನ ಹತ್ಯೆ

    ವಾಷಿಂಗ್ಟನ್: ದುಷ್ಕರ್ಮಿಗಳು ನಡೆಸಿದ ಗುಂಡಿನ ದಾಳಿಗೆ ಭಾರತೀಯ ಮೂಲದ ಯುವಕನೋರ್ವ ಬಲಿಯಾದ ಘಟನೆ ಅಮೆರಿಕದ (America) ವಾಷಿಂಗ್ಟನ್ ಡಿಸಿಯ (Washington DC) ಗ್ಯಾಸ್ ಸ್ಟೇಷನ್‌ನಲ್ಲಿ ನಡೆದಿದೆ.

    ರವಿತೇಜ (26) ಮೃತ ಯುವಕ. ರವಿತೇಜ ಹೈದರಾಬಾದ್‌ನ (Hyderabad) ಆರ್‌ಕೆ ಪುರಂ ಗ್ರೀನ್ ಹಿಲ್ಸ್ ಕಾಲೋನಿಯ ನಿವಾಸಿಯಾಗಿದ್ದು, ಸ್ನಾತಕೋತ್ತರ ಪದವಿ ಪಡೆಯುವ ಸಲುವಾಗಿ 2022ರಲ್ಲಿ ಅಮೆರಿಕಗೆ ತೆರಳಿದ್ದರು. ಶಿಕ್ಷಣ ಮುಗಿಸಿದ ಬಳಿಕ ಅಲ್ಲಿಯೇ ಉದ್ಯೋಗ ಅರಸುತ್ತಿದ್ದರು. ಇದನ್ನೂ ಓದಿ:  ಹುಬ್ಬಳ್ಳಿ | ಬೀಗ ಮುರಿದು ರಾಷ್ಟ್ರೀಕೃತ ಬ್ಯಾಂಕ್ ದರೋಡೆಗೆ ಯತ್ನ

    ಸ್ಥಳೀಯ ಪೊಲೀಸರು ದಾಳಿಯ ಹಿಂದಿನ ಉದ್ದೇಶವನ್ನು ತನಿಖೆ ಮಾಡುತ್ತಿದ್ದಾರೆ ಮತ್ತು ದುಷ್ಕರ್ಮಿಗಳನ್ನು ಗುರುತಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಅವಾಚ್ಯ ಶಬ್ದ ಬಳಸಿ ಸಾಲಗಾರರಿಗೆ ಬೆದರಿಕೆ ಆರೋಪ – ಮೈಕ್ರೋ ಫೈನಾನ್ಸ್ ಬ್ರಾಂಚ್ ಮ್ಯಾನೇಜರ್ ಬಂಧನ

    ಕಳೆದ ಕೆಲವು ತಿಂಗಳುಗಳಲ್ಲಿ ಅಮೆರಿಕದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿಗಳು ಕೊಲ್ಲಲ್ಪಟ್ಟ ಹಲವಾರು ಘಟನೆಗಳು ಬೆಳಕಿಗೆ ಬಂದಿವೆ. ಇದನ್ನೂ ಓದಿ: PUBLiC TV Impact | ಕಾರ್ಮಿಕರಿಗೆ ಥಳಿತ ಪ್ರಕರಣ – ಮಾಲೀಕ ಸೇರಿ ಮೂವರು ಅರೆಸ್ಟ್

  • ವಿಶ್ವ ಸಾಂಸ್ಕೃತಿಕ ಉತ್ಸವ; ಉಕ್ರೇನ್‌ ಶಾಂತಿಗಾಗಿ ಪ್ರಾರ್ಥಿಸಿದ 180 ದೇಶಗಳ ಜನ

    ವಿಶ್ವ ಸಾಂಸ್ಕೃತಿಕ ಉತ್ಸವ; ಉಕ್ರೇನ್‌ ಶಾಂತಿಗಾಗಿ ಪ್ರಾರ್ಥಿಸಿದ 180 ದೇಶಗಳ ಜನ

    – ಉತ್ಸವದಲ್ಲಿ ಯೋಗ ಕಾರ್ಯಕ್ರಮ ನಡೆಸಿಕೊಟ್ಟ ಶ್ರೀ ಶ್ರೀ ರವಿಶಂಕರ್ ಗುರೂಜಿ

    ಬೆಂಗಳೂರು: ಅಮೆರಿಕದ ವಾಷಿಂಗ್ಟನ್‌ (Washington DC) ಡಿಸಿಯ ನ್ಯಾಷನಲ್‌ ಮಾಲ್‌ನಲ್ಲಿ ಆಯೋಜಿಸಿರುವ ‘ವಿಶ್ವ ಸಾಂಸ್ಕೃತಿಕ ಉತ್ಸವ’ (World Culture Festival) 2ನೇ ದಿನವೂ ಅದ್ಧೂರಿಯಾಗಿ ಜರುಗಿತು. ಉತ್ಸವಕ್ಕೆ 180 ದೇಶಗಳಿಂದ ಆಗಮಿಸಿದ್ದ ಜನರು, ಉಕ್ರೇನ್‌ನಲ್ಲಿ ಶಾಂತಿ ನೆಲೆಸಲಿ ಎಂದು ಪ್ರಾರ್ಥಿಸಿದರು.

    ಉತ್ಸವದಲ್ಲಿ ಎರಡನೆಯ ದಿನವು ಕೂಡ ನೂರಾರು ಬಾವುಟಗಳು ಹಾರಾಡಿದವು. ಮತ್ತೊಮ್ಮೆ ಏಕತೆಯ ಭಾವವು ಎಲ್ಲೆಡೆ ರಾರಾಜಿಸಿತು. 180 ದೇಶಗಳಿಂದ ಬಂದಿದ್ದ ಜನರು ಒಬ್ಬರನ್ನೊಬ್ಬರು ಕಲೆತು, ನೃತ್ಯ, ಸಂಗೀತ ಮತ್ತು ಆಹಾರದೊಡನೆ ಜಗತ್ತಿನ ವಿವಿಧ ಸಂಸ್ಕೃತಿಗಳನ್ನು ಸಂಭ್ರಮಿಸಿದರು.

    ಬೃಹತ್ ಪ್ರಮಾಣದಲ್ಲಿ ನಡೆದ ಈ ಉತ್ಸವವು ವಿಶ್ವವನ್ನು ಒಗ್ಗೂಡಿಸಲು ಹೊರಟಿರುವ ಭಾರತದ ಸಂಕಲ್ಪ ಶಕ್ತಿಯನ್ನು ಪ್ರತಿಬಿಂಬಿಸಿತು. ವಾಷಿಂಗ್ಟನ್ ಡಿಸಿ ನ್ಯಾಷನಲ್ ಮಾಲಿನ ಐತಿಹಾಸಿಕ ಲಿಂಕನ್ ಸ್ಮಾರಕದ ಎದುರು ಸಾವಿರಾರು ಜನ ತಮ್ಮ ತಮ್ಮ ಮ್ಯಾಟ್ ಹಾಸಿ ಯೋಗ ಮಾಡುವುದರೊಂದಿಗೆ 2ನೇ ದಿನದ ಉತ್ಸವಕ್ಕೆ ಚಾಲನೆ ಕೊಟ್ಟರು. ಅಲ್ಲಿ ನೆರೆದಿದ್ದ ಎಲ್ಲರಿಗೂ ಗುರುದೇವ ಶ್ರೀ ಶ್ರೀ ರವಿಶಂಕರ್ ಗುರೂಜಿ (Ravishankar Guruji) ಅವರು ಒಂದು ಅನುಪಮವಾದ ಉಸಿರಾಟ, ಯೋಗ ಮತ್ತು ಧ್ಯಾನದ ಪ್ರಕ್ರಿಯೆಗಳನ್ನು ಹೇಳಿಕೊಟ್ಟರು. ಸಂಜೆಯ ವೇಳೆಗೆ ಮನಸೂರೆಗೊಳ್ಳುವಂತಹ ಪ್ರದರ್ಶನಗಳು ಜರುಗಿದವು. ಇದನ್ನೂ ಓದಿ: ನಾವೆಲ್ಲರೂ ವಿಶ್ವ ಕುಟುಂಬಕ್ಕೆ ಸೇರಿದವರು: ಶ್ರೀ ಶ್ರೀ ರವಿಶಂಕರ್‌ ಗುರೂಜಿ

    ಗಣ್ಯರ ಸ್ಫೂರ್ತಿದಾಯಕ ಭಾಷಣಗಳು ಮನುಷ್ಯರ ಬಾಂಧವ್ಯಗಳನ್ನು ಇನ್ನಷ್ಟು ಬೆಸೆಯುವಂತಿತ್ತು. ಭಾರತದ ಮಾಜಿ ರಾಷ್ಟ್ರಪತಿಗಳಾದ ರಾಮ್‌ನಾಥ್ ಕೋವಿಂದ್ ಮಾತನಾಡಿ, ಪರ್ವತ ಶ್ರೇಣಿಗಳು, ಕರಾವಳಿ ಬಯಲು, ನದಿಯ ತೀರ, ಮರುಭೂಮಿ ಪ್ರದೇಶ ಹೀಗೆ ಪ್ರಪಂಚದ ಮೂಲೆ ಮೂಲೆಗಳಿಂದ ಬಂದು ಜನರು ಇಲ್ಲಿ ಸೇರಿದ್ದಾರೆ. ಗುರುದೇವರು ಇಲ್ಲಿ ಒಂದು ಪುಟ್ಟ ಪ್ರಪಂಚವನ್ನೇ ನಿರ್ಮಿಸಿದ್ದಾರೆ ಎಂದು ಬಣ್ಣಿಸಿದರು.

    ಅನೇಕ ಕಲಾರೂಪಗಳ ಪ್ರದರ್ಶನಗಳು ನಡೆದವು. ಅವುಗಳಲ್ಲಿ ಪಾರಂಪರಿಕ ಉಕ್ರೇನ್‌ನ ಹಾಡಿನ ಪ್ರದರ್ಶನ ಕೂಡ ಒಂದು. ಇದನ್ನು ಉಕ್ರೇನ್ ಖ್ಯಾತ ಸಂಗೀತಗಾರರಾದ ಒಲೇನ ಅಸ್ತಶೇವ‌ ಅವರು ನಡೆಸಿಕೊಟ್ಟರು. ಯುದ್ಧದ ಕಾರಣದಿಂದಾಗಿ ಇವರು ತಮ್ಮ ಮಾತೃಭೂಮಿಯನ್ನು ತೊರೆದಿದ್ದರು. ಮನಕುಲಕುವ ಈ ಹಾಡಿನ ಪ್ರದರ್ಶನದ ನಂತರ ಜನರೆಲ್ಲರೂ ಸೇರಿ ಉಕ್ರೇನ್ ಶಾಂತಿಗಾಗಿ ಗುರುದೇವರ ಸಮ್ಮುಖದಲ್ಲಿ ಪ್ರಾರ್ಥಿಸಿದರು. ಇದನ್ನೂ ಓದಿ: ಬೆಂಗಳೂರಿನ BSF ಯೋಧರಿಂದ ಸ್ವಚ್ಛತಾ ಅಭಿಯಾನ

    ಎಲ್ಲರನ್ನೂ ಎಚ್ಚರಿಸುವಂತೆ ಬಿರುಸಿನ ಭಾಷಣ ಮಾಡಿದ ರೆವರೆಂಡ್ ಜೆರಾಲ್ಡ್ ದುರ್ಲೆ, ಆರ್ಟ್ ಆಫ್ ಲಿವಿಂಗ್‌ನ ಹೆಸರನ್ನು ಆರ್ಟ್ ಆಫ್ ಪ್ರೂಫ್ ಎಂದು ಬದಲಿಸಬೇಕು. ಏಕೆಂದರೆ ನಾವು ಎಲ್ಲರನ್ನೂ ಪ್ರೀತಿಸಬಹುದು. ನಾವು ಎಲ್ಲರೊಂದಿಗೆ ಹಂಚಿಕೊಳ್ಳಬಹುದು ಎಂದು ಗುರುದೇವರು ಪ್ರೂವ್ ಮಾಡಿದ್ದಾರೆ ಎಂದರು.

    ಅಮೆರಿಕದ ವೆಂಚರ್ ಕ್ಯಾಪಿಟಲ್ ಹೂಡಿಕೆದಾರರಾದ ಟಿಮ್ ಡ್ರೇಪರ್ ಮಾತನಾಡಿ, ಅಮೆರಿಕನ್ನರಾದ ನಾವು ಇತರ ಜನರನ್ನು ಅನ್ಯಲೋಕದವರಂತೆ ಕಂಡಿದ್ದೇವೆ. ಅದು ಒಳ್ಳೆಯ ಬೆಳವಣಿಗೆ ಆಗಿರಲಿಲ್ಲ. ಆದರೆ ಈಗ ಬದಲಾವಣೆ ಆರಂಭವಾಗಿದೆ. ಗುರುದೇವರ ನಾಯಕತ್ವದಲ್ಲಿ ಜನರನ್ನು ಒಂದಾಗಿ ತರುತ್ತಿದ್ದೇವೆ. ಈಗ ಭೂಮಿಯ ಮೇಲಿರುವ ಯಾರು ಕೂಡ ಏಲಿಯನ್ನರಲ್ಲ (ಅನ್ಯಗ್ರಹ ಜೀವಿಗಳು). ಆದರೆ ಈ ಭೂಮಿಯ ಮೇಲೆ ಯಾರಾದರೂ ಏಲಿಯನ್ನರು ಇದ್ದು, ನಿಮ್ಮ ನಾಯಕರ ಬಳಿಗೆ ಕರೆದೊಯ್ಯಿರಿ ಎಂದರೆ ನಾನು ಅವರನ್ನು ಗುರುದೇವ್ ಶ್ರೀ ಶ್ರೀ ರವಿಶಂಕರರ ಬಳಿಗೆ ಕರೆದೊಯ್ಯುತ್ತೇನೆ ಎಂದರು.

    ಮಾರಿಷಿಯಸ್‌ನ ಅಧ್ಯಕ್ಷರಾದ ಪೃಥ್ವಿರಾಜ್‌ ಸಿಂಗ್ ರೂಪನ್, ಜಪಾನಿನ ಮಾಜಿ ಪ್ರಧಾನ ಮಂತ್ರಿ ದಿವಂಗತ ಶಿಂಜೊ ಅಬೆಯವರ ಪತ್ನಿ ಅಕೀ ಅಬೆ, ಯುಎಸ್‌ನ ಸರ್ಜನ್ ಜನರಲ್ ಡಾ. ವಿವೇಕ್ ಮೂರ್ತಿ ಇನ್ನಿತರ ಗಣ್ಯರು ಎರಡನೇ ದಿನ ಉಪಸ್ಥಿತರಾಗಿದ್ದರು. ಇದನ್ನೂ ಓದಿ: BJP-JDS ಮೈತ್ರಿಗೆ ಜೆಡಿಎಸ್ ಶಾಸಕರಿಂದ ಸರ್ವಾನುಮತದ ಒಪ್ಪಿಗೆ

    ಸಾಂಸ್ಕೃತಿಕ ಕಾರ್ಯಕ್ರಮ
    ಎರಡನೆಯ ದಿನ ಸಾಂಸ್ಕೃತಿಕ ಮಹೋತ್ಸವದಲ್ಲಿ, 10,000 ಜನರಿಂದ ಗರ್ಭ ನೃತ್ಯ ನಡೆಯಿತು. ಅವರೊಡನೆ ಗ್ರಾಮಿ ಪ್ರಶಸ್ತಿ ವಿಜೇತರಾದ ಭಾರತೀಯ ಅಮೆರಿಕನ್ನರೂ ಆದ ಫಾಲು ಶಾ ಅವರು ಗಾಯನ ಮಾಡಿದರು. 200 ಜನರನ್ನೊಳಗೊಂಡ ಭಾಂಗ್ರ ನೃತ್ಯ, ಐರಿಶ್‌ನ ಸ್ಟೆಪ್ ನೃತ್ಯ, ಆಫ್ಗಾನಿನ ಸುಮಧುರ ಸಂಗೀತ, 1000 ಚೀನಿ ಅಮೆರಿಕನ್ನರಿಂದ ವೈಭವಯುತವಾದ ನೃತ್ಯ ಹಾಗೂ ಗಾಯನ ಜರುಗಿತು. ಇದರೊಡನೆ ಕುಂಗ್ ಫೂ ಪ್ರದರ್ಶನವೂ ನಡೆಯಿತು.

    ಭವ್ಯವಾದ ಡ್ರಾಗನ್ ಮತ್ತು ಸಿಂಹಗಳು ಕಲಾತ್ಮಕ ಕಲ್ಪನೆಯನ್ನು ಜೀವಂತವಾಗಿಸಿದವು. ಇಂಡೊನೇಷಿಯಾ, ಬ್ರೆಜಿಲ್, ಬೊಲಿವಿಯ ಮತ್ತು ಲ್ಯಾಟಿನ್ ಅಮೆರಿಕದ ದೇಶಗಳು ಅವಿಸ್ಮರಣೀಯವಾದ ನೃತ್ಯಗಳನ್ನು ನಡೆಸಿದವು. ಖ್ಯಾತ ಕುರ್ಟಿಸ್ ಬ್ಲೋ ಅವರ ನೇತೃತ್ವದಲ್ಲಿ ಹಿಪ್ ಹಾಪ್ ಮತ್ತು ಬ್ರೇಕ್ ಡಾನ್ಸ್‌ನ ಪ್ರದರ್ಶನ ನಡೆಯಿತು. 1,200 ಹಾಡುಗಾರರ ಗಾಸ್ಪೆಲ್ ಕಾಯರ್, ಪಾಕಿಸ್ತಾನದ ಮನಮೋಹಕ ಪ್ರದರ್ಶನವು ನಡೆಯಿತು.

    ಸರ್ಜನ್ ಜನರಲ್ ಡಾ. ವಿವೇಕ್ ಮೂರ್ತಿ ಮಾತನಾಡಿ, ಇಂದಿನ ವಿಶ್ವ ಸಾಂಸ್ಕೃತಿಕ ಉತ್ಸವದಂತಹ ಉತ್ಸವಗಳು ಬಹಳ ಮುಖ್ಯ. ನಾವೆಲ್ಲರೂ ಪರಸ್ಪರ ಹೊಂದಿರುವ ಸಂಬಂಧವು ಎಷ್ಟು ಅವಶ್ಯಕವಾದದ್ದು ಎಂಬುದನ್ನು ಇದು ತೋರಿಸುತ್ತದೆ. ಇಂದಿನ ದಿನಗಳಲ್ಲಿ ಏಕಾಂಗಿತನ ಹಾಗೂ ಪ್ರತ್ಯೇಕತೆಯು ಹೆಚ್ಚಾಗಿದೆ. ಎಲ್ಲರೂ ಒಂದಾಗಿರುವ ಸಂಬಂಧಗಳನ್ನು ನೆನಪಿಸಿಕೊಳ್ಳುವುದು ಅವಶ್ಯಕವಾಗಿದೆ. ಏಕಾಂಗಿತನ, ಪ್ರತ್ಯೇಕತೆಯಿಂದ ದೈಹಿಕ ಕಾಯಿಲೆ, ಹೃದ್ರೋಗಗಳು ಹೆಚ್ಚುತ್ತಿವೆ. ಇವು ನಮ್ಮ ಸಮುದಾಯಗಳ ಒಳಿತನ್ನೇ ನಾಶಮಾಡುತ್ತಿವೆ ಎಂದು ತಿಳಿಸಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಾವೆಲ್ಲರೂ ವಿಶ್ವ ಕುಟುಂಬಕ್ಕೆ ಸೇರಿದವರು: ಶ್ರೀ ಶ್ರೀ ರವಿಶಂಕರ್‌ ಗುರೂಜಿ

    ನಾವೆಲ್ಲರೂ ವಿಶ್ವ ಕುಟುಂಬಕ್ಕೆ ಸೇರಿದವರು: ಶ್ರೀ ಶ್ರೀ ರವಿಶಂಕರ್‌ ಗುರೂಜಿ

    – ‘ವಿಶ್ವ ಸಾಂಸ್ಕೃತಿಕ ಉತ್ಸವ’ದ ಮೊದಲ ದಿನದ ಕಾರ್ಯಕ್ರಮದಲ್ಲಿ 10 ಲಕ್ಷ ಮಂದಿ ಭಾಗಿ

    ಬೆಂಗಳೂರು: ಅಮೆರಿಕದ ವಾಷಿಂಗ್ಟನ್‌ ಡಿಸಿಯಲ್ಲಿ ಆರ್ಟ್‌ ಆಫ್‌ ಲಿವಿಂಗ್‌ (The Art Of Living) ಸಂಸ್ಥೆ ಆಯೋಜಿಸಿರುವ 4ನೇ ವಿಶ್ವ ಸಾಂಸ್ಕೃತಿಕ ಉತ್ಸವದಲ್ಲಿ (World Culture Festival 2023) 10 ಲಕ್ಷಕ್ಕೂ ಹೆಚ್ಚು ಮಂದಿ ಪಾಲ್ಗೊಂಡಿದ್ದರು. 180 ದೇಶಗಳ ಲಕ್ಷಾಂತರ ಜನರು ಜಗತ್ತಿನ ಮಾನವೀಯತೆ, ಶಾಂತಿ ಮತ್ತು ಸಂಸ್ಕೃತಿಗಳ ಸಂಗಮದ ಹಬ್ಬವಾದ ‘ವಿಶ್ವ ಸಾಂಸ್ಕೃತಿ ಉತ್ಸವ’ದಲ್ಲಿ ಭಾಗಿಯಾಗಿ ಅದ್ಭುತಕ್ಕೆ ಸಾಕ್ಷಿಯಾದರು.

    ಈ ಸಮಾರಂಭದಲ್ಲಿ ಜಾಗತಿಕ ಗಣ್ಯರಾದ ವಿಶ್ವಸಂಸ್ಥೆಯ 8ನೇ ಪ್ರಧಾನ ಕಾರ್ಯದರ್ಶಿ ಹೆಚ್.ಇ. ಬಾನ್ ಕಿ-ಮೂನ್, ವಾಷಿಂಗ್ಟನ್‌ ಡಿ.ಸಿಯ ಮೇಯರ್ ಮುರಿಯಲ್ ಬೌಸರ್, ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್, ಬಿಷಪ್ ಎಮೆರಿಟ್ಸ್‌ ಮಾರ್ಸೆಲೊ ಸ್ಯಾಂಚೆಜ್ ಸೊರೊಂಡೋ, ಪಾಂಟಿಫಿಕಲ್ ಅಕಾಡೆಮಿ ಆಫ್ ಸೈನ್ಸಸ್‌ನ ಚಾನ್ಸೆಲರ್ ಎಮೆರಿಟಸ್ ಪಾಲ್ಗೊಂಡಿದ್ದರು. ವಸುದೈವ ಕುಟುಂಬಕಂ (ಇಡೀ ವಿಶ್ವವೇ ಒಂದು ಕುಟುಂಬ) ಎಂಬ ಧ್ಯೇಯವಾಕ್ಯದೊಂದಿಗೆ ಆರ್ಟ್ ಆಫ್ ಲಿವಿಂಗ್‌ನ ‘ವಿಶ್ವ ಸಾಂಸ್ಕೃತಿಕ ಉತ್ಸವವು ಸಂಗೀತ, ನೃತ್ಯಗಳ ಮೂಲಕ ಏಕತೆ, ಸಾಮರಸ್ಯದ ಜಾಗತಿಕ ಸಂದೇಶ ಸಾರಿತು.

    ಜಾಗತಿಕ ಗಣ್ಯರು, ರೋಮಾಂಚನಗೊಳಿಸುವ ಸಂಗೀತ ಮತ್ತು ವರ್ಣರಂಜಿತ ನೃತ್ಯ ಪ್ರದರ್ಶನ ಕಲಾವಿದರು, ಗ್ರ್ಯಾಮಿ ಪ್ರಶಸ್ತಿ ವಿಜೇತರು, ಇತರೆ ಹೆಸರಾಂತ ಕಲಾವಿದರು ಬೃಹತ್‌ ಕಾರ್ಯಕ್ರಮದಲ್ಲಿ ಒಟ್ಟಾಗಿ ಪಾಲ್ಗೊಂಡಿದ್ದರು.

    ಜಾಗತಿಕ ಮಾನವತಾವಾದಿ ಮತ್ತು ಶಾಂತಿದೂತರಾದ, ದಿ ಆರ್ಟ್ ಆಫ್ ಲಿವಿಂಗ್ ಸಂಸ್ಥಾಪಕ ಗುರುದೇವ ಶ್ರೀ ಶ್ರೀ ರವಿಶಂಕರ್ (Ravishankar Guruji) ಅವರು ಮಾತನಾಡಿ, ನಮ್ಮ ವೈವಿಧ್ಯತೆಯನ್ನು ಆಚರಿಸಲು ಇದು ಒಂದು ಸುಂದರ ಸಂದರ್ಭವಾಗಿದೆ. ನಮ್ಮ ಜಗತ್ತು ತುಂಬಾ ವೈವಿಧ್ಯಮಯವಾಗಿದೆ. ಆದರೂ ನಮ್ಮ ಮಾನವೀಯ ಮೌಲ್ಯಗಳಲ್ಲಿ ಏಕತೆ ಇದೆ. ಈ ಸಂದರ್ಭದಲ್ಲಿ ಸಮಾಜದಲ್ಲಿ ಹೆಚ್ಚಿನ ಸಂತೋಷವನ್ನು ತರಲು ನಾವು ಬದ್ಧರಾಗೋಣ. ಎಲ್ಲರ ಮುಖದಲ್ಲೂ ನಗು ಮೂಡಿಸೋಣ. ಅದೇ ಮಾನವೀಯತೆ. ಅದರಿಂದಲೇ ನಾವೆಲ್ಲರೂ ಮಾಡಲ್ಪಟ್ಟಿರುವುದು. ಜ್ಞಾನದ ಬೆಂಬಲವಿಲ್ಲದಿದ್ದರೆ ಯಾವುದೇ ಆಚರಣೆಯು ಸತ್ವವನ್ನು ಹೊಂದಿರುವುದಿಲ್ಲ. ಆ ಜ್ಞಾನವು ನಮ್ಮೆಲ್ಲರೊಳಗಿದೆ. ನಾವು ವಿಭಿನ್ನವಾಗಿದ್ದರೂ, ನಾವೆಲ್ಲರೂ ಒಂದೇ ಎಂದು ಗುರುತಿಸುವುದು ಜಾಣ್ಮೆಯಾಗಿದೆ. ನಾವೆಲ್ಲರೂ ಪರಸ್ಪರ ಒಬ್ಬರಿಗೊಬ್ಬರು ಸೇರಿದವರು. ನಾವೆಲ್ಲರೂ ವಿಶ್ವ ಕುಟುಂಬಕ್ಕೆ ಸೇರಿದವರು. ನಮ್ಮ ಜೀವನವನ್ನು ಸಂಭ್ರಮಿಸೋಣ. ಸವಾಲುಗಳನ್ನು ದಿಟ್ಟತನದಂದ ಸ್ವೀಕರಿಸಿ ಎದುರಿಸೋಣ. ಮುಂದಿನ ಪೀಳಿಗೆಯ ಉತ್ತಮ ಭವಿಷ್ಯಕ್ಕಾಗಿ ಕನಸನ್ನು ಕಾಣೋಣ ಎಂದು ಸಂದೇಶ ನೀಡಿದರು.

    ಭಾರತದ ವಿದೇಶಾಂಗ ಸಚಿವ ಡಾ. ಎಸ್.ಜೈಶಂಕರ್ ಮಾತನಾಡಿ, ನಾವೆಲ್ಲರೂ ಸಮೃದ್ಧಿಯನ್ನು ಹೆಚ್ಚಿಸಲು ಮತ್ತು ನಮ್ಮ ಭೂಮಿಯ ಭವಿಷ್ಯವನ್ನು ಭದ್ರಪಡಿಸಿಕೊಳ್ಳಲು ಪ್ರಯತ್ನಿಸುತ್ತಿರುವಾಗ ಸವಾಲುಗಳನ್ನು ಎದುರಿಸುವುದು ಸಹಜ. ನೈಸರ್ಗಿಕ ವಿಕೋಪಗಳಾಗಲಿ, ಮಾನವ ನಿರ್ಮಿತವಾದವುಗಳಾಗಲಿ, ಘರ್ಷಣೆಗಳಾಗಲಿ ಅಥವಾ ಅಡೆತಡೆಗಳಾಗಲಿ ಪರಸ್ಪರ ಅವಲಂಬಿತ ಜಗತ್ತಿನಲ್ಲಿ ನಾವು ಯಾವಾಗಲೂ ಒಬ್ಬರಿಗೊಬ್ಬರು ಇರುತ್ತೇವೆ ಎಂಬುದು ಮುಖ್ಯವಾಗುತ್ತದೆ. ಈ ನಿಟ್ಟಿನಲ್ಲಿ ಆರ್ಟ್ ಆಫ್ ಲಿವಿಂಗ್ ಒಂದು ಸ್ಪೂರ್ತಿದಾಯಕ ಉದಾಹರಣೆಯಾಗಿದೆ. ಉಕ್ರೇನ್ ಸಂಘರ್ಷದ ಸಂದರ್ಭದಲ್ಲಿ ಅವರು ಇತ್ತೀಚೆಗೆ ಬೀರಿದ ಪ್ರಭಾವವನ್ನು ನಾನು ವೈಯಕ್ತಿಕವಾಗಿ ನೋಡಿದ್ದೇನೆ. ಇಂದು ಅವರ ಸಂದೇಶ, ನಿಮ್ಮ ಸಂದೇಶ, ನಮ್ಮ ಸಂದೇಶವು ಕಾಳಜಿ, ಹಂಚಿಕೊಳ್ಳುವಿಕೆ, ಔದಾರ್ಯ, ತಿಳುವಳಿಕೆಯ ಸದ್ಭಾವನೆ ಮತ್ತು ಸಹಕಾರವಾಗಿರಬೇಕು. ಇದುವೇ ನಮ್ಮೆಲ್ಲರನ್ನೂ ಇಲ್ಲಿ ಒಟ್ಟುಗೂಡಿಸಿರುವುದು ಎಂದು ಹೇಳಿದರು.

    ವಿಶ್ವ ಸಾಂಸ್ಕೃತಿಕ ಉತ್ಸವದ ಮೊದಲ ದಿನದಂದು ವಿಶ್ವಸಂಸ್ಥೆಯ 8ನೇ ಪ್ರಧಾನ ಕಾರ್ಯದರ್ಶಿ ಹೆಚ್.ಇ. ಬಾನ್ ಕಿ-ಮೂನ್, ವಾಷಿಂಗ್ಟನ್‌ ಡಿ.ಸಿಯ ಮೇಯರ್ ಮುರಿಯಲ್ ಬೌಸರ್, ಮಿಚಿಗನ್ ಕಾಂಗ್ರೆಸಿಗ ಥಾನೆದರ್, ಜಪಾನಿನ ಶಿಕ್ಷಣ, ಸಂಸ್ಕೃತಿ, ಕ್ರೀಡೆ, ವಿಜ್ಞಾನ ಹಾಗೂ ತಂತ್ರಜ್ಞಾನದ ಮಾಜಿ ಸಚಿವ, ಸಂಸದ ಹಕುಬುನ್ ಶಿಮೊಮುರಾ, ಯುಎನ್‌ಇಪಿಯ ಮಾಜಿ ಉಪ ಪ್ರಧಾನ ಕಾರ್ಯದರ್ಶಿ ಮತ್ತು ಯುಎನ್‌ಇಪಿಯ ಕಾರ್ಯನಿರ್ವಾಹಕ ನಿರ್ದೇಶಕ ಎರಿಕ್ ಸೋಲ್‌ಹೈಮ್, ಮಾಜಿ ಅಂತಾರಾಷ್ಟ್ರೀಯ ಅಭಿವೃದ್ಧಿ ನಾರ್ವೆ ಸಚಿವರು ಮತ್ತು ಇತರ ಜಾಗತಿಕ ಗಣ್ಯರು, ಅನೇಕ ಜಾಗತಿಕ ಸವಾಲುಗಳನ್ನು ಎದುರಿಸುತ್ತಿರುವ ಸಂಘರ್ಷದ ಜಗತ್ತಿನಲ್ಲಿ ಏಕತೆ, ಶಾಂತಿ ಮತ್ತು ಸಾಮರಸ್ಯದ ಸಹಬಾಳ್ವೆ ಕುರಿತು ಮಾತನಾಡಿದರು.

    ದಿ ರೆವರೆಂಡ್ ಬಿಷಪ್ ಎಮೆರಿಟ್ಸ್‌ ಮಾರ್ಸೆಲೊ ಸ್ಯಾಂಚೆಜ್ ಸೊರೊಂಡೋ ಅವರು, ವಿಶ್ವ ಶಾಂತಿ ಸಾಧಿಸಲು ನಮ್ಮಲ್ಲಿ ಆಂತರಿಕ ಶಾಂತಿಯಿರಬೇಕು. ಶಾಂತಿಯನ್ನು ಸಂವಹನ ಮಾಡಲು, ನಾವು ಶಾಂತಿಯಿಂದ ಬದುಕಬೇಕು. ಶಾಂತಿಯಿಂದ ಬದುಕಲು ನಮಗೆ ಆರ್ಟ್ ಆಫ್ ಲಿವಿಂಗ್ ಅಗತ್ಯವಿದೆ. ಶಾಂತಿಯಿಂದ ಬದುಕುವ ಕಲೆಯನ್ನು ಹೊಂದಲು ನಾವು ದೇವರೊಂದಿಗೆ ಸಂವಹನ ಸಾಧಿಸಬೇಕು. ದೇವರು ಮಾನವನಿಗೆ ಶತ್ರುವಲ್ಲ. ದೇವರು ಒಬ್ಬ ಸ್ನೇಹಿತ. ದೇವರು ಅಂದರೆ ಪ್ರೀತಿ. ದೇವರನ್ನು ಹೊಂದಲು ನಾವು ಧ್ಯಾನಕ್ಕೆ, ಪ್ರಾರ್ಥನೆಗೆ ಹಿಂತಿರುಗಬೇಕಾಗಿದೆ. ನಾವು ನಮ್ಮ ಮೂಲಕ್ಕೆ ಹಿಂತಿರುಗಬೇಕಾಗಿದೆ. ಆದ್ದರಿಂದ ಈ ಸೂಕ್ಷ್ಮ ಕ್ಷಣದಲ್ಲಿ ನಾವು ದೇವರನ್ನು ಪ್ರಾರ್ಥಿಸಬೇಕಾಗಿದೆ. ಪೋಪ್ ಫ್ರಾನ್ಸಿಸ್ ಅವರ ಹೆಸರಿನಲ್ಲಿ ನಾವು ಎಲ್ಲಾ ಮಾನವರ ಭ್ರಾತೃತ್ವದಲ್ಲಿ ನಾನು ನಿಮ್ಮನ್ನು ಆಶೀರ್ವದಿಸುತ್ತೇನೆ. ನಾನು ಈ ದೊಡ್ಡ ಸಭೆಯನ್ನು ಆಶೀರ್ವದಿಸುತ್ತೇನೆ. ಈ ಜೀವನ ಕ್ರಮವು ನಿಜವಾಗಿಯೂ ನಮ್ಮ ಮಾನವೀಯತೆಯ ಭವಿಷ್ಯವಾಗಿರಲಿದೆ ಎಂದು ನಾನು ಭಾವಿಸುತ್ತೇನೆ ಎಂದು ಹೇಳಿದರು.

    ಗುರುದೇವ್ ಶ್ರೀ ಶ್ರೀ ರವಿಶಂಕರ್ ಅವರಿಂದ ಪ್ರೇರಿತರಾಗಿ ಮತ್ತು ಆರ್ಟ್ ಆಫ್ ಲಿವಿಂಗ್ ಸಂಸ್ಥೆಯು ಆಯೋಜಿಸಿದ ವಿಶ್ವ ಸಾಂಸ್ಕೃತಿಕ ಉತ್ಸವವು ಗಡಿಗಳನ್ನು ಮೀರಿದ್ದು, ಮಾನವೀಯತೆ ಮತ್ತು ಸಹೋದರತ್ವದ ಎಳೆಯಲ್ಲಿ ಒಟ್ಟಿಗೆ ಕಟ್ಟಿದ ಸಂಸ್ಕೃತಿಗಳ ಶ್ರೀಮಂತಿಕೆಯನ್ನು ಆಚರಿಸಿತು. ಸಂಗೀತ ಮತ್ತು ನೃತ್ಯದ ಮೂಲಕ ಸ್ಥಳೀಯ ಸಂಪ್ರದಾಯಗಳ ಸಂರಕ್ಷಣೆಗಾಗಿ ವಿಶ್ವ ಸಾಂಸ್ಕೃತಿಕ ಉತ್ಸವವು ವೇದಿಕೆ ಒದಗಿಸುತ್ತದೆ. ಹಾಗೆಯೇ ಪ್ರತಿಯೊಬ್ಬರೂ ಆನಂದಿಸಲು ಅವಕಾಶವನ್ನು ಒದಗಿಸುತ್ತದೆ. ಇದು ಪ್ರೀತಿ, ಸಹಾನುಭೂತಿ ಮತ್ತು ಸೌಹಾರ್ದತೆಯಂತಹ ಸಾರ್ವತ್ರಿಕ ಮಾನವೀಯ ಮೌಲ್ಯಗಳ ಪುನರುಜ್ಜೀವನದ ಆಂದೋಲನವಾಗಿದೆ ಎಂದು ಹೇಳಿಲಾಯಿತು.

    ವಿಶ್ವಸಂಸ್ಥೆಯ 8ನೇ ಪ್ರಧಾನ ಕಾರ್ಯದರ್ಶಿ ಮಹಾಮಹಿಮರಾದ ಬಾನ್ ಕಿ-ಮೂನ್, ಸಂಸ್ಕೃತಿ ಸೇತುವೆಗಳನ್ನು ನಿರ್ಮಿಸುತ್ತದೆ, ಗೋಡೆಗಳನ್ನು ಒಡೆಯುತ್ತದೆ. ಮಾತುಕತೆ ಮತ್ತು ಪರಸ್ಪರ ತಿಳಿವಳಿಕೆಯ ಮೂಲಕ ಜಗತ್ತನ್ನು ಒಟ್ಟುಗೂಡಿಸುತ್ತದೆ. ಜನರು ಮತ್ತು ರಾಷ್ಟ್ರಗಳ ನಡುವೆ ಏಕತೆ ಮತ್ತು ಸಾಮರಸ್ಯವನ್ನು ಹೆಚ್ಚಿಸುತ್ತದೆ. ಸಂಸ್ಕೃತಿಯು ಎಲ್ಲಾ ಜಾಗತಿಕ ನಾಗರಿಕರ ನಡುವೆ ಪ್ರಬಲ ವಿನಿಮಯವನ್ನು ರಚಿಸಬಹುದು. ಇಂದು ಪ್ರಪಂಚದ ಎಲ್ಲಾ ಸಾಂಸ್ಕೃತಿಕ ಶ್ರೀಮಂತಿಕೆಯು ಯುನೈಟೆಡ್ ಸ್ಟೇಟ್ಸ್‌ನ ನ್ಯಾಷನಲ್ ಮಾಲ್‌ನಲ್ಲಿ ಒಟ್ಟುಗೂಡಿದೆ. ಗುರುದೇವ್ ಶ್ರೀ ಶ್ರೀ ರವಿಶಂಕರ್ ಅವರ ಏಕತೆ ಮತ್ತು ವೈವಿಧ್ಯತೆಯ ಸ್ಪೂರ್ತಿದಾಯಕ ದೃಷ್ಟಿಕೋನವನ್ನು ನಾನು ಪ್ರಶಂಸಿಸುತ್ತೇನೆ. ನಮಗೆ ಇಂತಹ ಹೆಚ್ಚು ಹೆಚ್ಚು ಆಚರಣೆಗಳು, ಹೆಚ್ಚು ಒಗ್ಗೂಡುವಿಕೆ, ಹೆಚ್ಚು ಶಾಂತಿ ಮತ್ತು ಹೆಚ್ಚಿನ ಸಹಕಾರ, ಐಕ್ಯಭಾವ ಮತ್ತು ಪಾಲುದಾರಿಕೆಯ ಅಗತ್ಯವಿದೆ. ನಾವು ಈಗ ಎದುರಿಸುತ್ತಿರುವ ದೊಡ್ಡ ಸವಾಲುಗಳ ಮೇಲೆ ನಾವು ಹೀಗೆಯೇ ಮುನ್ನುಗ್ಗಿ ಮುಂದುವರಿಯುತ್ತೇವೆ. ಇದೇ ರೀತಿ ನಾವು ಶಾಂತಿಯನ್ನು ನಿರ್ಮಿಸುತ್ತೇವೆ. ಸಂಘರ್ಷಗಳನ್ನು ಪರಿಹರಿಸುತ್ತೇವೆ. ಹಸಿವನ್ನು ಕೊನೆಗೊಳಿಸುತ್ತೇವೆ. ಆರೋಗ್ಯಕರ ಜೀವನವನ್ನು ಖಚಿತಪಡಿಸಿಕೊಳ್ಳುತ್ತೇವೆ. ಗುಣಮಟ್ಟದ ಶಿಕ್ಷಣವನ್ನು ಮುನ್ನಡೆಸುತ್ತೇವೆ. ಮಹಿಳೆಯರು ಮತ್ತು ಬಾಲಕಿಯರನ್ನು ಸಬಲೀಕರಣಗೊಳಿಸುತ್ತೇವೆ. ಹೀಗೆಯೇ ನಾವು ಯಾರೂ ಹಿಂದುಳಿಯದಂತೆ ಮುನ್ನಡೆಯಲಿರುವುದು ಎಂದು ತಿಳಿಸಿದರು.

    ಸಾವಿರಾರು ರಾಷ್ಟ್ರಧ್ವಜಗಳು ಏಕತೆಯ ಉತ್ಸಾಹದಲ್ಲಿ ಗಾಳಿಯಲ್ಲಿ ಹಾರಾಡಿದವು. ಉತ್ಸವದಲ್ಲಿ ನೆರೆದಿದ್ದ ಜನರ ಉತ್ಸಾಹ ಮತ್ತು ಸಂತೋಷ ಇಮ್ಮಡಿಗೊಂಡಿತ್ತು. ಕಲಾವಿದರಲ್ಲಿ ಶಕ್ತಿಯ ಸಂಚಲನ ಮೂಡಿದಂತಿತ್ತು.

    ಉತ್ಸವದ ಮಹತ್ವ ಕುರಿತು ಮಾತನಾಡಿದ ಮೋಹಿನಿಯಾಟ್ಟಂ ಪ್ರದರ್ಶನದ ನೃತ್ಯ ಸಂಯೋಜಕಿ ಬೀನಾ ಮೋಹನ್, ಈ ಪ್ರದರ್ಶನದ ಭಾಗವಾಗುವುದು ಒಂದು ಕನಸು. ಈ ಕಾರ್ಯವನ್ನು ಸಂಯೋಜಿಸುವುದು ನನಗೆ ಮತ್ತು ನನ್ನ ವಿದ್ಯಾರ್ಥಿಗಳಿಗೆ ನಂಬಲಾಗದ ಒಂದು ಅನುಭವವಾಗಿತ್ತು. ಪ್ರದರ್ಶನದ ನಂತರ ಇದು ನಮಗೆ ತರುವ ಆತ್ಮವಿಶ್ವಾಸ, ಸಂತೋಷ ಎಲ್ಲವೂ ಒಂದು ವಿಭಿನ್ನ ಭಾವನೆಯಾಗಿರಲಿದೆ ಎಂದು ಅವರು ಹೇಳಿದರು.

    ವಿಶ್ವ ಸಾಂಸ್ಕೃತಿಕ ಉತ್ಸವದ ತಮ್ಮ ಭಾಷಣದಲ್ಲಿ ಮಿಚಿಗನ್ ಕಾಂಗ್ರೆಸಿಗರಾದ ಥಾನೇದಾರ್ ಮಾತನಾಡಿ, ಕರ್ನಾಟಕ ರಾಜ್ಯದೊಂದಿಗಿನ ತಮ್ಮ ಸಂಬಂಧದ ಬಗ್ಗೆ ಅನಿಸಿಕೆ ಹಂಚಿಕೊಂಡರು. ಎಂತಹ ಸುಂದರವಾದ ಸಂಜೆ. ಎಂತಹ ಸುಂದರ ಪ್ರದರ್ಶನಗಳು. ನಾವು ಸ್ವಲ್ಪ ಮಳೆಯನ್ನು ನೋಡಿದ್ದೇವೆ. ಅದು ವಿಶ್ವ ಶಾಂತಿ ಮತ್ತು ಹೊಸ ಆರಂಭವನ್ನು ತರುತ್ತದೆ. ಕರ್ನಾಟಕದ ಬೆಳಗಾವಿಯಲ್ಲಿ ಆರ್ಥಿಕವಾಗಿ ಸಂಕಷ್ಟದಲ್ಲಿದ್ದ ಮನೆಯಲ್ಲಿ ಬೆಳೆದು, ಆ ರಾಜ್ಯವನ್ನು ಗುರುದೇವರೊಂದಿಗೆ ಹಂಚಿಕೊಂಡಿದ್ದ ನನಗೆ ಇತ್ತೀಚೆಗೆ ಗುರುದೇವರೊಂದಿಗೆ ಕನ್ನಡದಲ್ಲಿ ಮಾತನಾಡಲು ಸಾಧ್ಯವಾಗಿದ್ದಕ್ಕೆ ತುಂಬಾ ಸಂತೋಷವಾಯಿತು ಎಂದರು.

    ಗ್ರ್ಯಾಮಿ ಪ್ರಶಸ್ತಿ ವಿಜೇತೆ ಚಂದ್ರಿಕಾ ಟಂಡನ್ ಮತ್ತು 200 ಕಲಾವಿದರು ‘ಅಮೆರಿಕಾ ದಿ ಬ್ಯೂಟಿಫುಲ್ ಮತ್ತು ವಂದೇ ಮಾತರಂ’ ಗಾಯನ ಮಾಡಿದರು. 1,000 ಕಲಾವಿದರನ್ನು ಒಳಗೊಂಡ ಭಾರತೀಯ ಶಾಸ್ತ್ರೀಯ ನೃತ್ಯ ಮತ್ತು ಶಾಸ್ತ್ರೀಯ ಕಛೇರಿಯು ಪಂಚಭೂತಂ ಎಂಬ ಪ್ರದರ್ಶನ ನಡೆಸಿತು. ಗ್ರ್ಯಾಮಿ ಪ್ರಶಸ್ತಿ ವಿಜೇತ ಮಿಕ್ಕಿ ಫ್ರೀ ಅವರ ನೇತೃತ್ವದಲ್ಲಿ 1,000 ಗಿಟಾರ್‌ಗಳ ವಾದನವೂ ನಡೆಯಿತು. ಆಫ್ರಿಕಾ, ಜಪಾನ್ ಮತ್ತು ಮಧ್ಯಪ್ರಾಚ್ಯ ರಾಷ್ಟ್ರಗಳಿಂದ ಅನೇಕ ಪ್ರದರ್ಶನಗಳು ನಡೆದವು. ಅಂತಿಮವಾಗಿ ‘ಒನ್ ಲವ್’ ಆಚರಣೆಯೊಂದಿಗೆ ಸ್ಕಿಪ್ ಮಾರ್ಲೆಯವರ ರೆಗ್ಗೀ ರಿದಮ್ಸ್ ಪ್ರದರ್ಶನದೊಂದಿಗೆ ಮೊದಲ ದಿನದ ಕಾರ್ಯಕ್ರಮವು ಮುಕ್ತಾಯಗೊಂಡಿತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವಿಶ್ವವ್ಯಾಪಿ 10 ಲಕ್ಷಕ್ಕೂ ಅಧಿಕ ಮಂದಿಗೆ ಕೊರೊನಾ – ಅಮೆರಿಕದಲ್ಲಿ ಒಂದೇ ದಿನಕ್ಕೆ 1,169 ಮಂದಿ ಬಲಿ

    ವಿಶ್ವವ್ಯಾಪಿ 10 ಲಕ್ಷಕ್ಕೂ ಅಧಿಕ ಮಂದಿಗೆ ಕೊರೊನಾ – ಅಮೆರಿಕದಲ್ಲಿ ಒಂದೇ ದಿನಕ್ಕೆ 1,169 ಮಂದಿ ಬಲಿ

    ವಾಷಿಂಗ್ಟನ್: ವಿಶ್ವದೆಲ್ಲೆಡೆ ವ್ಯಾಪಕವಾಗಿ ಹರಡುತ್ತಿರುವ ಕೊರೊನಾ ವೈರಸ್‍ಗೆ ಅಮೆರಿಕ ಕೂಡ ತತ್ತರಿಸಿ ಹೋಗಿದ್ದು, ಕಳೆದ 24 ಗಂಟೆಗಳಲ್ಲಿ 1,169 ಮಂದಿಯನ್ನು ಕೊರೊನಾ ವೈರಸ್ ಬಲಿ ಪಡೆದಿದೆ.

    ಚೀನಾದಲ್ಲಿ ಮೊದಲು ಕಾಣಿಸಿಕೊಂಡ ಕೊರೊನಾ ವೈರಸ್ ಬಳಿಕ ವಿಶ್ವವ್ಯಾಪಿ ಹರಡಿತು. ಈ ವೈರಸ್ ಬಗ್ಗೆ ನಿರ್ಲಕ್ಷ್ಯ ತೋರಿದಕ್ಕೆ ಇಟಲಿಯಲ್ಲಿ ಹೆಚ್ಚಿನ ಸಾವು ಸಂಭವಿಸಿತ್ತು. ಆದರೆ ಈಗ ಚೀನಾ, ಇಟಲಿಯನ್ನು ಹಿಂದಿಕ್ಕಿ ಅತಿಹೆಚ್ಚಿನ ಪ್ರಮಾಣದಲ್ಲಿ ಸೋಂಕು ಅಮೆರಿಕದಲ್ಲಿ ಹರಡುತ್ತಿದೆ. ಈವರೆಗೆ ಅಮೆರಿಕದಲ್ಲಿ ಸುಮಾರು 2,26,374 ಜನರಿಗೆ ಕೊರೊನಾ ವೈರಸ್ ತಗುಲಿದ್ದು, 6,075 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಅದರಲ್ಲೂ ಕಳೆದ 24 ಗಂಟೆಗಳಲ್ಲಿ 1,169 ಮಂದಿ ಸಾವನ್ನಪ್ಪಿದ್ದು ರಾಷ್ಟ್ರದಲ್ಲಿ ಆತಂಕವನ್ನು ಹೆಚ್ಚಿಸಿದೆ.

    ಈ ಹಿಂದೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಕೊರೊನಾ ಸೋಂಕು ತಗುಲಿದೆ ಎಂಬ ವದಂತಿ ಕೇಳಿ ಬಂದಿತ್ತು. ಈ ಹಿನ್ನೆಲೆ ವೈದ್ಯಕೀಯ ಪರೀಕ್ಷೆ ನಡೆಸಿದಾಗ ಟ್ರಂಪ್ ಅವರಿಗೆ ಸೋಂಕು ತಟ್ಟಿಲ್ಲ ಎಂಬುದು ದೃಢಪಟ್ಟಿತ್ತು. ಈಗ ಎರಡನೇ ಬಾರಿಗೆ ಟ್ರಂಪ್ ವೈದ್ಯಕೀಯ ಪರೀಕ್ಷೆ ಮಾಡಿಸಿಕೊಂಡಿದ್ದು, ಈ ಬಾರಿಯೂ ವರದಿ ನೆಗೆಟಿವ್ ಬಂದಿದೆ.

    ವಿಶ್ವಾದ್ಯಂತ ರಣಕೇಕೆ ಹಾಕುತ್ತಿರುವ ಸೋಂಕಿಗೆ ಈವರೆಗೆ ಸುಮಾರು 10,16,330 ಮಂದಿ ತುತ್ತಾಗಿದ್ದಾರೆ. ಕೊರೊನಾ ವೈರಸ್‍ನಿಂದ 53,238 ಮಂದಿ ಸಾವನ್ನಪ್ಪಿದ್ದರೆ, 2,13,132 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ವರದಿಯಾಗಿದೆ.

    ಇಟಲಿಯಲ್ಲಿ ಈವರೆಗೆ 1,15,242 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, 13,919 ಮಂದಿ ಬಲಿಯಾಗಿದ್ದಾರೆ. ಇತ್ತ ಸ್ಪೇನ್‍ನಲ್ಲಿ 1,12,065 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, 10,348 ಮಂದಿ ಕೊರೊನಾದಿಂದ ಸಾವನ್ನಪ್ಪಿದ್ದಾರೆ. ಚೀನಾದಲ್ಲಿ 81,620 ಮಂದಿಗೆ ಸೋಂಕು ತಟ್ಟಿದ್ದು, 3,322 ಮಂದಿ ಮೃತಪಟ್ಟಿದ್ದಾರೆ. ಹಾಗೆಯೇ ಭಾರತದಲ್ಲಿ 2,301 ಮಂದಿಗೆ ಕೊರೊನಾ ವೈರಸ್ ತಗುಲಿದ್ದು, 56 ಮಂದಿ ಬಲಿಯಾಗಿದ್ದಾರೆ. ಹಾಗೆಯೇ ಪಾಕಿಸ್ತಾನದಲ್ಲಿ 2,450 ಮಂದಿ ಸೋಂಕಿಗೆ ತುತ್ತಾಗಿದ್ದು, 35 ಮಂದಿ ಸಾವನ್ನಪ್ಪಿದ್ದಾರೆ.