Tag: washington university

  • ಸಂತೂರ್ ವಾದಕ ಭಜನ್ ಸೊಪೋರಿ ಇನ್ನಿಲ್ಲ

    ಸಂತೂರ್ ವಾದಕ ಭಜನ್ ಸೊಪೋರಿ ಇನ್ನಿಲ್ಲ

    ನವದೆಹಲಿ: ಖ್ಯಾತ ಸಂತೂರ್ ವಾದಕ ಭಜನ್ ಸೊಪೋರಿ (73) ನಿಧನರಾಗಿದ್ದಾರೆ. ದೀರ್ಘಕಾಲದ ಅನಾರೋಗ್ಯದಿಂದ ಗುರುಗ್ರಾಮ್ ಆಸ್ಪತ್ರೆಯಲ್ಲಿಂದು ನಿಧನರಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

    ಕಳೆದ ವರ್ಷ ಜೂನ್‌ನಲ್ಲಿ ಸೊಪೋರಿ ಅವರಿಗೆ ಕರುಳಿನ ಕ್ಯಾನ್ಸರ್ ಇರುವುದು ಪತ್ತೆಯಾಗಿತ್ತು. ಇಮ್ಯುನೊ ಥೆರಪಿ ಚಿಕಿತ್ಸೆಗಾಗಿ ಅವರನ್ನು 3 ವಾರಗಳ ಹಿಂದೆ ಗುರುಗ್ರಾಮ್‌ನ ಫೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ ಎಂದು ಅವರ ಪುತ್ರ ಅಭಯ್ ತಿಳಿಸಿದ್ದಾರೆ. ಇದನ್ನೂ ಓದಿ: ಬೆಂಗ್ಳೂರಿಗೆ ಬಂದಿದ್ದ ಕೇರಳದ 12 ವರ್ಷದ ಹುಡುಗಿ ಹಂದಿ ಜ್ವರಕ್ಕೆ ಬಲಿ – ರಾಜಧಾನಿಗೆ ಆತಂಕ

    ಭಜನ್ ಸೊಪೋರಿ ವಾಷಿಂಗ್ಟನ್ ವಿಶ್ವವಿದ್ಯಾಲಯದಿಂದ ಪಾಶ್ಚಿಮಾತ್ಯ ಶಾಸ್ತ್ರೀಯ ಸಂಗೀತವನ್ನು ಮತ್ತು ಅವರ ತಂದೆ ಮತ್ತು ತಾತನಿಂದ ಹಿಂದೂಸ್ತಾನಿ ಸಂಗೀತವನ್ನು ಕಲಿತರು. ಅಲ್ಲದೆ ತಮ್ಮ ವೃತ್ತಿಜೀವನದ ಸಾಧನೆಗಳ ಮೂಲಕ 2004 ರಲ್ಲಿ ಪದ್ಮಶ್ರೀ, 1992 ರಲ್ಲಿ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ ಮತ್ತು ಜಮ್ಮು ಮತ್ತು ಕಾಶ್ಮೀರ ರಾಜ್ಯ ಜೀವಮಾನ ಸಾಧನೆ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳನ್ನು ಪಡೆದಿದ್ದರು.

  • ವಾಷಿಂಗ್ಟನ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಂದ ಹೆಬ್ಬಾಳ ಫ್ಲೈ ಓವರ್ ಸ್ವಚ್ಛತೆ

    ವಾಷಿಂಗ್ಟನ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಂದ ಹೆಬ್ಬಾಳ ಫ್ಲೈ ಓವರ್ ಸ್ವಚ್ಛತೆ

    ಬೆಂಗಳೂರು: ರಾಜಧಾನಿ ಬೆಂಗಳೂರನ್ನು ಸಿಲಿಕಾನ್ ಸಿಟಿ, ಉದ್ಯಾನನಗರಿ ಹೀಗೆ ಹಲವಾರು ಹೆಸರುಗಳಿಂದ ಕರೆಯುತ್ತಾರೆ. ದೇಶ ವಿದೇಶಗಳಿಂದ ವಿದ್ಯಾಭ್ಯಾಸಕ್ಕೆ ಎಂದು ವಿದ್ಯಾರ್ಥಿಗಳು ಇಲ್ಲಿಗೆ ಬರುತ್ತಾರೆ. ಇಂತಹ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಆಗಾಗ ಕಸದ ಸಮಸ್ಯೆ ಕಾಣಿಸಿಕೊಂಡು ಗಾರ್ಬೇಜ್ ಸಿಟಿ ಆಗುತ್ತಿದೆ ಎಂದು ಟೀಕೆಗಳು ಕೇಳಿ ಬರುತ್ತಾನೆ ಇರುತ್ತೆ. ಅದಕ್ಕೆ ತಕ್ಕಂತೆ ಬಿಬಿಎಂಪಿ ಕೂಡ ಸ್ಪಂದಿಸದೇ ಛೀಮಾರಿ ಹಾಕಿಸಿಕೊಳ್ಳುತ್ತಿರುತ್ತೆ. ಅತಂಹದ್ದೆ ಒಂದು ಘಟನೆ ಈಗ ನಡೆದಿದೆ.

    ಬಿಬಿಎಂಪಿ ಮಾಡಬೇಕಾದ ಕಾರ್ಯವನ್ನು ವಿದೇಶದಿಂದ ವಿದ್ಯಾಭ್ಯಾಸಕ್ಕೆ ಎಂದು ಬಂದ ವಿದ್ಯಾರ್ಥಿಗಳು ಮಾಡಿದ್ದಾರೆ. ದಿನಬೆಳಗಾದ್ರೆ ಹೆಬ್ಬಾಳ ಫ್ಲೈಓವರ್ ಆಧಾರ ಸ್ತಂಭಗಳ ಮೇಲೆ ಧೂಳು ಬಿದ್ದು ಹಾಳಾಗುತ್ತಾ ಬಂದಿದೆ. ಬಿಬಿಎಂಪಿ ಸ್ವಚ್ಛತೆ ಮಾಡುವಂತ ಕೆಲಸ ಮುಂದಾಗಲಿಲ್ಲ. ಬದಲಾಗಿ ವಾಷಿಂಗ್ಟನ್ ವಿಶ್ವವಿದ್ಯಾಲಯದ 25 ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಅಂಗವಾಗಿ ಇಂಟರ್ನ್‍ಶಿಪ್ ಮಾಡಲು ಬೆಂಗಳೂರು ನಗರಕ್ಕೆ ಆಗಮಿಸಿದ್ದು, ಆ ವಿದ್ಯಾರ್ಥಿಗಳು ಹೆಬ್ಬಾಳ ಫ್ಲೈಓವರ್ ಅನ್ನು ಸ್ವಚ್ಛ ಮಾಡಿದ್ದಾರೆ.

    “ದಿ ಅಗ್ಲಿ ಇಂಡಿಯನ್” ಸಹಯೋಗದಲ್ಲಿ ಹೆಬ್ಬಾಳ ಮೇಲ್ಸೇತುವೆಯ ಆಧಾರ ಸ್ತಂಭ(ಪಿಲ್ಲರ್)ಗಳನ್ನು ಸ್ವಚ್ಛಗೊಳಿಸಿ ಬಣ್ಣ ಬಳಿದು ಸುಂದರವಾಗಿ ಕಾಣುವಂತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಇದರೊಂದಿಗೆ ಕೆಲ ಸಂಘಟನೆಗಳು ಪಾಲಿಕೆ ಜೊತೆ ಕೈ ಜೋಡಿಸಿ ಕಾರ್ಯನಿರ್ವಹಿಸುತ್ತಿವೆ. 3 ಗಂಟೆಗಳಲ್ಲಿ ಮೇಲ್ಸೇತುವೆಗೆ ಬಣ್ಣ ಬಳಿದು ಅವುಗಳಿಗೆ ಹೊಸ ಮೆರಗು ನೀಡಿ ಸುಂದರಗೊಳಿಸಿದ್ದಾರೆ. ವಿದೇಶಿ ವಿದ್ಯಾರ್ಥಿಗಳ ಈ ಕಾರ್ಯಕ್ಕೆ ಮೇಯರ್ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದಿದ್ದಾರೆ.