Tag: Washington

  • ಆಶ್ರಯ ಕೊಟ್ಟ ಭಾರತೀಯ ವಿದ್ಯಾರ್ಥಿಯನ್ನೇ ಹೊಡೆದು ಕೊಂದ ಯುಎಸ್ ನಿರಾಶ್ರಿತ ವ್ಯಕ್ತಿ!

    ಆಶ್ರಯ ಕೊಟ್ಟ ಭಾರತೀಯ ವಿದ್ಯಾರ್ಥಿಯನ್ನೇ ಹೊಡೆದು ಕೊಂದ ಯುಎಸ್ ನಿರಾಶ್ರಿತ ವ್ಯಕ್ತಿ!

    ವಾಷಿಂಗ್ಟನ್: ಯುಎಸ್ (US) ಮೂಲದ ನಿರಾಶ್ರಿತ ವ್ಯಕ್ತಿಗೆ ಆಶ್ರಯ (Shelter) ನೀಡಿದ ಭಾರತದ ವಿದ್ಯಾರ್ಥಿಯನ್ನು (Indian Student) ಕೊಲೆ ಮಾಡಿರುವ ಘಟನೆ ಯುಎಸ್‌ನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

    ವಿವೇಕ್ ಸೈನಿ (25) ಮೃತ ಭಾರತೀಯ ವಿದ್ಯಾರ್ಥಿ. ತಾನು ಮನೆಗೆ ಹೋಗುವ ಹಿನ್ನೆಲೆ ಬೇರೆ ಕಡೆ ಹೋಗು ಎಂದಿದ್ದಕ್ಕೆ ನಿರಾಶ್ರಿತ ವ್ಯಕ್ತಿ ಅಮೆರಿಕದ ಜಾರ್ಜಿಯಾದಲ್ಲಿನ ಕನ್ವೀನಿಯನ್ಸ್ ಸ್ಟೋರ್‌ನಲ್ಲಿ ಸುತ್ತಿಗೆಯಿಂದ ಹೊಡೆದು ದಾರುಣವಾಗಿ ಕೊಲೆ ಮಾಡಿದ್ದಾನೆ. ಇದನ್ನೂ ಓದಿ: ವೇಣೂರಿನಲ್ಲಿ ಪಟಾಕಿ ಗೋಡೌನ್ ಸ್ಫೋಟ – ಮೂವರು ಕಾರ್ಮಿಕರ ದಾರುಣ ಸಾವು

    ನಡೆದಿದ್ದೇನು?: ವಿವೇಕ್ ಯುಎಸ್‌ನಲ್ಲಿ ವಿದ್ಯಾರ್ಥಿಯಾಗಿದ್ದು, ಜಾರ್ಜಿಯಾದ ಕನ್ವೀನಿಯನ್ಸ್ ಸ್ಟೋರ್‌ನಲ್ಲಿ ಪಾರ್ಟ್ ಟೈಮ್ ಕೆಲಸ ಮಾಡುತ್ತಿದ್ದರು. ಈ ವೇಳೆ ಸೈನಿ ಸೇರಿದಂತೆ ಫುಡ್ ಮಾರ್ಟ್ನಲ್ಲಿನ ಉದ್ಯೋಗಿಗಳು ಜೂಲಿಯನ್ ಫಾಕ್ನರ್ ಎಂಬ ನಿರಾಶ್ರಿತ ವ್ಯಕ್ತಿಗೆ ಆಹಾರ ಮತ್ತು ಅಶ್ರಯ ನೀಡುತ್ತಿದ್ದರು. ಇದನ್ನೂ ಓದಿ: ಸೆಕ್ಸ್‌ಗೆ ಒತ್ತಾಯಿಸಿದ ಪತಿಯ ಮರ್ಮಾಂಗವನ್ನೇ ಕಚ್ಚಿ ಗಾಯಗೊಳಿಸಿದಳು!

    ಆರೋಪಿ ಮೊದಲು ಚಿಪ್ಸ್ ಮತ್ತು ಕೋಕ್‌ನ್ನು ಕೇಳಿದ್ದು, ಅದನ್ನು ನೀಡಿದ್ದಾರೆ. ನಂತರ ಹೊದಿಕೆ ಕೇಳಿದ್ದಾನೆ. ಅವರ ಬಳಿ ಹೊದಿಕೆ ಇಲ್ಲ ಎಂದು ಹೇಳಿ ಜಾಕೆಟ್ ನೀಡಿದ್ದರು. ಹಾಗೆಯೇ ಸಿಗರೇಟ್, ನೀರು ಮತ್ತು ಎಲ್ಲವನ್ನು ಕೇಳುತ್ತಾ ಒಳಗೆ, ಹೊರಗೆ ನಡೆಯುತ್ತಿದ್ದನು. ನಿತ್ಯವೂ ಅಲ್ಲಿಯೇ ಕುಳಿತಿರುತ್ತಿದ್ದನು. ಚಳಿ ಇದ್ದ ಪರಿಣಾಮ ಆರೋಪಿಯನ್ನು ಹೊರಗೆ ಹೋಗುವಂತೆ ಹೇಳಿರಲಿಲ್ಲ ಎನ್ನಲಾಗಿದೆ. ಇದನ್ನೂ ಓದಿ: ʻJEE ಮಾಡೋಕಾಗಲ್ಲ, ನಾನು ಕೆಟ್ಟ ಮಗಳು, ಇದೇ ನನ್ನ ಕೊನೇ ಆಯ್ಕೆʼ – ಡೆತ್‌ನೋಟ್‌ ಬರೆದಿಟ್ಟು ಯುವತಿ ಆತ್ಮಹತ್ಯೆ!

    ರಾತ್ರಿ ಸೈನಿ ಮನೆಗೆ ಹೋಗುವ ಹಿನ್ನೆಲೆಯಲ್ಲಿ ಆರೋಪಿಗೆ ಅಲ್ಲಿಂದ ಹೋಗುವಂತೆ ಹೇಳಿದ್ದಾನೆ. ಅವನ್ನು ಹೋಗದೆ ಇದಲ್ಲಿ ಪೊಲೀಸರಿಗೆ ತಿಳಿಸುವುದಾಗಿ ಬೆದರಿಕೆ ಹಾಕಿದ್ದಾನೆ. ಇದಕ್ಕೆ ಕೋಪಗೊಂಡ ಆರೋಪಿ, ಸೈನಿ ಅವರಿಗೆ ಸುತ್ತಿಗೆಯಿಂದ ಸುಮಾರು 5ಂ ಬಾರಿ ತಲೆ ಹಾಗೂ ಮುಖದ ಮೇಲೆ ಹೊಡೆದು ಹಲ್ಲೆ ಮಾಡಿದ್ದಾನೆ. ಇದನ್ನೂ ಓದಿ: ಬೆಳಗಾವಿಯಲ್ಲಿ ಸಿಲಿಂಡರ್ ಸ್ಫೋಟ – ಇಬ್ಬರ ದಾರುಣ ಸಾವು, ಮೂವರ ಸ್ಥಿತಿ ಗಂಭೀರ

    ಸೈನಿಗೆ ತೀವ್ರ ಗಾಯಗಳಾದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ನಂತರ ಘಟನೆ ಕುರಿತು ಪೊಲೀಸರಿಗೆ ರಾತ್ರಿ 12:30 ಡೆಕಾಲ್ಬ್ ಕೌಂಟಿ ಪೊಲೀಸರಿಗೆ ಮಾಹಿತಿ ತಿಳಿದಿದೆ. ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಪಕ್ಕದ ಸ್ಟೋರ್ ಗುಮಾಸ್ತನಿಂದ ಘಟನೆ ಬಗ್ಗೆ ತಿಳಿದು ಅಲ್ಲೇ ಸುತ್ತಿಗೆ ಹಿಡಿದು ನಿಂತಿದ್ದ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯಿಂದ ಸುತ್ತಿಗೆ ಮತ್ತು ಎರಡು ಚಾಕುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಟೆಕ್ಕಿ ಯುವತಿಯನ್ನ ಗುಂಡಿಕ್ಕಿ ಹತ್ಯೆಗೈದ ಪ್ರಿಯತಮ – ಪೊಲೀಸರು ಪ್ರಕರಣ ಭೇದಿಸಿದ್ದು ಹೇಗೆ?

  • ಸೆ.29 ರಿಂದ ವಾಷಿಂಗ್ಟನ್‌ನಲ್ಲಿ ವಿಶ್ವ ಸಾಂಸ್ಕೃತಿಕ ಉತ್ಸವ

    ಸೆ.29 ರಿಂದ ವಾಷಿಂಗ್ಟನ್‌ನಲ್ಲಿ ವಿಶ್ವ ಸಾಂಸ್ಕೃತಿಕ ಉತ್ಸವ

    – ಶ್ರೀ ಶ್ರೀ ರವಿಶಂಕರ್‌ ಗುರೂಜಿ ನೇತೃತ್ವದಲ್ಲಿ ‘ಸಾಂಸ್ಕೃತಿಕ ಒಲಿಂಪಿಕ್ಸ್‌’

    ಬೆಂಗಳೂರು: ಅಮೆರಿಕದ ವಾಷಿಂಗ್ಟನ್‌ ಡಿ ಸಿಯ (Washington DC) ನ್ಯಾಷನಲ್‌ ಮಾಲ್‌ನಲ್ಲಿ ಸೆ.29 ರಿಂದ ಅ.1 ರ ವರೆಗೆ ‘ವಿಶ್ವ ಸಾಂಸ್ಕೃತಿಕ ಉತ್ಸವ’ವನ್ನು (World Culture Festival 2023) ಆರ್ಟ್‌ ಆಫ್‌ ಲಿವಿಂಗ್‌ (Art Of Living) ಸಂಸ್ಥೆಯು ಆಯೋಜಿಸಿದೆ.

    ಆರ್ಟ್‌ ಆಫ್‌ ಲಿವಿಂಗ್‌ ಸಂಸ್ಥೆ ಸಂಸ್ಥಾಪಕ ಶ್ರೀ ಶ್ರೀ ರವಿಶಂಕರ್‌ ಗುರೂಜಿ (Ravishankar Guruji) ಅವರ ಮುಂದಾಳತ್ವದಲ್ಲಿ ಈ ಉತ್ಸವ ಜರುಗಲಿದೆ. 17,000 ಕಲಾವಿದರು ಉತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ಜೊತೆಗೆ ವಿದೇಶಾಂಗ ಸಚಿವ ಎಸ್‌. ಜೈಶಂಕರ್‌, ಮಾಜಿ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌, ಡಾ.ವಿವೇಕ್‌ ಮೂರ್ತಿ, ಅಮೆರಿಕದ ಸಂಸದರಾದ ರಿಕ್ ಸ್ಕಾಟ್, ಭಾಷಣಕಾರರಾಗಿ ನಾನ್ಸಿ ಪೆಲೋಸಿ ಭಾಗವಹಿಸಲಿದ್ದಾರೆ. ಇದನ್ನೂ ಓದಿ: ಎಲ್ಲಾ ಸರ್ಕಾರಗಳು ತಮಿಳುನಾಡಿಗೆ ಕಾವೇರಿ ನೀರು ಬಿಟ್ಟಿವೆ: ಸತೀಶ್ ಜಾರಕಿಹೊಳಿ

    ಈ ದಿನಗಳಂದು ಇಡೀ ಜಗತ್ತಿನ ಕಣ್ಣು, ಅಮೆರಿಕದ ರಾಜಧಾನಿ ಮೇಲೆ ನೆಟ್ಟಿರುತ್ತದೆ. ಅವಿಸ್ಮರಣೇಯವಾದ ವೈವಿಧ್ಯತೆ ಹಾಗೂ ಏಕತೆಯ ಉತ್ಸವಕ್ಕೆ ಆತಿಥ್ಯವನ್ನು ಆರ್ಟ್‌ ಆಫ್‌ ಲಿವಿಂಗ್‌ ಸಂಸ್ಥೆ ವಹಿಸಲಿದೆ. ಇದು ಸಂಸ್ಥೆಯ ವಿಶ್ವ ಸಾಂಸ್ಕೃತಿಕ ಉತ್ಸವದ ನಾಲ್ಕನೆಯ ಆವೃತ್ತಿಯಾಗಿದೆ.

    ವಿಶ್ವ ಸಾಂಸ್ಕೃತಿಕ ಉತ್ಸವದಲ್ಲಿ 17,000 ಕಲಾವಿದರು, ಅನೇಕ ರಾಜ್ಯಗಳ ಮುಖ್ಯಸ್ಥರು, 100 ಕ್ಕಿಂತಲೂ ಹೆಚ್ಚು ದೇಶಗಳ ಚಿಂತಕರು ಭಾಗವಹಿಸಲಿದ್ದಾರೆ. 5 ಲಕ್ಷಕ್ಕೂ ಹೆಚ್ಚು ಜನರು ಈ ಉತ್ಸವದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಹೀಗಾಗಿ ಇದು ಜಾಗತಿಕವಾಗಿ ಮಹತ್ವದ ಉತ್ಸವವಾಗಲಿದೆ. ಈ ಉತ್ಸವದಲ್ಲಿ 50 ಪ್ರದರ್ಶನಗಳು ನಡೆಯಲಿವೆ. ಪಾರಂಪರಿಕ ಚೀನಾದ ಸಾಂಸ್ಕೃತಿಕ ಪ್ರದರ್ಶನವೂ ಇರಲಿದೆ. ಇದರಲ್ಲಿ 1,000 ಹಾಡುಗಾರರು ಮತ್ತು ನರ್ತಕರು ಭಾಗವಹಿಸಲಿದ್ದಾರೆ.

    7,000 ನರ್ತಕರನ್ನೊಳಗೊಂಡ ಗರ್ಭನೃತ್ಯ ವೈಭವ, ನೇರ ಸ್ವರಮೇಳದ ಸಹಿತ 700 ಭಾರತೀಯ ಶಾಸ್ತ್ರೀಯ ನರ್ತಕರು, ಹಿಪ್ ಹಾಪ್‌ನ 50ನೇ ವರ್ಷದ ಸಂಭ್ರಮ, ಕುರ್ಟಿಸ್ ಬ್ಲೋ, ಎಸ್‌ಹೆಚ್‌ಎ-ರಾಕ್, ಸೀಕ್ವೆನ್ಸ್ ಗರ್ಲ್ಸ್, ಡಿಜೆಕೂಲ್ ಹಾಗೂ ಕಿಂಗ್ ಚಾರ್ಲ್ಸ್ ಹಾಗೂ ಕೆಲ್ಲಿ ಫಾರ್ಮನ್ ಅವರಿಂದ ಸಂಯೋಜಿಸಲ್ಪಟ್ಟ ನೃತ್ಯ ಸಂಯೋಜನೆಯಲ್ಲಿ 100 ಬ್ರೇಕ್ ಡಾನ್ಸ್‌ನ ನರ್ತಕರು ತಮ್ಮ ಚೊಚ್ಚಲ ಪ್ರದರ್ಶನವನ್ನು ನೀಡಲಿದ್ದಾರೆ. ತಮ್ಮ ಪಾರಂಪರಿಕ ನೃತ್ಯವಾದ ಹೋಪಾಕ್ ನೃತ್ಯ ಪ್ರದರ್ಶನವನ್ನು ನೀಡಲಿರುವ 1,000 ಉಕ್ರೇನ್‌ ನರ್ತಕರು, ಗ್ರಾಮಿ ಪ್ರಶಸ್ತಿ ವಿಜೇತರಾದ ಮಿಕ್ಕಿ ಫ್ರೀ ಅವರ ನೇತೃತ್ವದಲ್ಲಿ 1,000 ಗಿಟಾರ್ ವಾದ್ಯ ಕಾರ್ಯಕ್ರಮ ನಡೆಯಲಿದೆ. ಬಾಬ್ ಮಾರ್ಲೆಯವರ ಖ್ಯಾತ “ಒನ್ ಲವ್” ಮರುಸೃಷ್ಟಿ ಕಾರ್ಯಕ್ರಮವನ್ನು ಅವರ ಮೊಮ್ಮಗ ಸ್ಕಿಪ್ ಮಾರ್ಲಿನ್ ನಡೆಸಿಕೊಡಲಿದ್ದಾರೆ. ಇದನ್ನೂ ಓದಿ: ಕರ್ನಾಟಕ ಬಂದ್‌ – ವಿಜಯನಗರ ವಿವಿ ಪರೀಕ್ಷೆ ಮುಂದೂಡಿಕೆ

    ನ್ಯಾಷನಲ್ ಮಾಲ್‌ನಲ್ಲಿ 1963 ರಲ್ಲಿ ಮಾರ್ಟಿನ್ ಲೂಥರ್ ಕಿಂಗ್ “ಐ ಹ್ಯಾವ್ ಎ ಡ್ರೀಮ್” ಅತ್ಯದ್ಭುತ ಭಾಷಣವನ್ನು ನೀಡಿದ್ದರು. ಆ ಮೂಲಕ ಜಗತ್ತಿಗೆ ಸಮನ್ವಯತೆ, ಏಕತೆಯ ಸಂದೇಶವನ್ನು ಸಾರಿದ್ದರು. ಅದಕ್ಕಿಂತಲೂ ನೂರು ವರ್ಷಗಳ ಹಿಂದೆ ಚಿಕಾಗೋನಲ್ಲಿ ನಡೆದ ಪ್ರಥಮ ವಿಶ್ವ ಧಾರ್ಮಿಕ ಸಂಸತ್ತಿನಲ್ಲಿ ಸ್ವಾಮಿ ವಿವೇಕಾನಂದರು ಅವಿಸ್ಮರಣೀಯ ಭಾಷಣ ಮಾಡಿ, ಸಭಿಕರನ್ನು ಮಂತ್ರಮುಗ್ಧರನ್ನಾಗಿಸಿದ್ದರು. ಧಾರ್ಮಿಕ ಪ್ರತಿನಿಧಿಗಳನ್ನು ಸಹೋದರ, ಸಹೋದರಿಯರೆ ಎಂದು ಸಂಬೋಧಿಸಿ ವಿವೇಕಾನಂದರು ಗಮನ ಸೆಳೆದಿದ್ದರು. ಧಾರ್ಮಿಕ ದ್ವಂದ್ವತೆ, ಅಸಹಿಷ್ಣುತೆ ಕೊನೆಗಾಣಿಸಬೇಕು ಎಂದು ಕರೆ ನೀಡಿದ್ದರು.

    ಇಂತಹ ಐತಿಹಾಸಿಕ ಸ್ಮರಣೀಯ ಸನ್ನಿವೇಶಗಳಿಗೆ ಸಾಕ್ಷಿಯಾಗಿದ್ದ ನ್ಯಾಷನಲ್‌ ಮಾಲ್‌ನಲ್ಲಿ ಇದೇ ಸೆ.29 ರಂದು ಗುರುದೇವ್ ಶ್ರೀ ಶ್ರೀ ರವಿಶಂಕರ ಗುರೂಜಿ ಅವರು, “ವಸುದೈವ ಕುಟುಂಬಕಂ” ಎಂಬ ಧ್ಯೇಯವಾಕ್ಯದೊಂದಿಗೆ 180 ದೇಶಗಳ ಗಡಿಗಳ ಜನ, ಧರ್ಮ, ಪಂಥಗಳನ್ನು ಒಂದುಗೂಡಿಸಲು ಸೇತುವೆಯಾಗಲಿದ್ದಾರೆ. ಈ ಉತ್ಸವದಲ್ಲಿ ಜಗತ್ತಿನ ಎಲ್ಲೆಡೆಯ ಆಹಾರಗಳ ಮೇಳವೂ ನಡೆಯಲಿದೆ. ಈ ಉತ್ಸವದ ವಿಶೇಷತೆಯೆಂದರೆ, ಉದಯೋನ್ಮುಖ ಕಲಾವಿದರು ಮತ್ತು ಪ್ರದರ್ಶಕರಿಗೆ ತಮ್ಮ ಸುಪ್ತ ಪ್ರತಿಭೆಯನ್ನು ಅನಾವರಣಗೊಳಿಸಲು ವೇದಿಕೆಯಾಗುವುದು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಶ್ವೇತಭವನದಲ್ಲಿ ಕೊಕೇನ್ ಪತ್ತೆ – ತೀವ್ರ ತನಿಖೆ

    ಶ್ವೇತಭವನದಲ್ಲಿ ಕೊಕೇನ್ ಪತ್ತೆ – ತೀವ್ರ ತನಿಖೆ

    ವಾಷಿಂಗ್ಟನ್: ಅಮೆರಿಕದ ಶ್ವೇತಭವನದಲ್ಲಿ (White House) ಅನುಮಾನಾಸ್ಪದ ಬಿಳಿ ಬಣ್ಣದ ವಸ್ತು ಪತ್ತೆಯಾಗಿದ್ದು, ಆ ವಸ್ತುವನ್ನು ಕೊಕೇನ್ (Cocaine) ಎಂದು ಗುರುತಿಸಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ತನಿಖೆಗೆ ಆದೇಶಿಸಲಾಗಿದೆ.

    ಅಮೆರಿಕ ಅಧ್ಯಕ್ಷ ಜೋ ಬೈಡನ್ (Joe Biden) ವಾರಾಂತ್ಯದ ಹಿನ್ನೆಲೆ ಕ್ಯಾಂಪ್ ಡೇವಿನ್‌ಗೆ ತೆರಳಿದ್ದು, ಈ ವೇಳೆ ಅನುಮಾನಾಸ್ಪದ ವಸ್ತು ಪತ್ತೆಯಾಗಿದೆ. ವೆಸ್ಟ್ ವಿಂಗ್‌ನ ಸಾರ್ವಜನಿಕವಾಗಿ ಪ್ರವೇಶಿಸಬಹುದಾದ ಪ್ರದೇಶದಲ್ಲಿ ರಹಸ್ಯ ಸೇವಾ ಏಜೆಂಟ್‌ಗಳು ಬಿಳಿ ಬಣ್ಣದ ಪುಡಿಯನ್ನು ಗಮನಿಸಿದ್ದಾರೆ. ಬಳಿಕ ಅಗ್ನಿಶಾಮಕ ಹಾಗೂ ತುರ್ತು ಸೇವಾ ಸಿಬ್ಬಂದಿ ವಸ್ತುವನ್ನು ಪರೀಕ್ಷಿಸಿದ್ದು, ಪ್ರಾಥಮಿಕ ಪರೀಕ್ಷೆಯಲ್ಲಿ ಅದು ಕೊಕೇನ್ ಎಂಬುದು ತಿಳಿದುಬಂದಿದೆ. ಇದನ್ನೂ ಓದಿ: ವಂದೇ ಭಾರತ್ ರೈಲಿಗೆ ಕಲ್ಲು ಹೊಡೆತ – ಮಕ್ಕಳಿಬ್ಬರು ಪೊಲೀಸರ ವಶಕ್ಕೆ

    ಅಜ್ಞಾತ ವಸ್ತು ಪತ್ತೆಯಾದ ಹಿನ್ನೆಲೆ ಶ್ವೇತಭವನದ ಸಂಕೀರ್ಣವನ್ನು ತಾತ್ಕಾಲಿಕವಾಗಿ ಮುಚ್ಚಲಾಗಿತ್ತು. ಬಿಳಿ ಬಣ್ಣದ ವಸ್ತುವನ್ನು ಕೊಕೇನ್ ಎಂದು ಗುರುತಿಸಿದ್ದರೂ ರಹಸ್ಯ ಸೇವೆ ಈ ವಸ್ತು ಯಾವುದು ಎಂಬುದನ್ನು ನಿರ್ದಿಷ್ಟಪಡಿಸಿಲ್ಲ. ಅದನ್ನು ಹೆಚ್ಚಿನ ಪರೀಕ್ಷೆಗೆ ಕಳುಹಿಸಲಾಗಿದ್ದು, ಅದು ಶ್ವೇತಭವನಕ್ಕೆ ಹೇಗೆ ಬಂತು ಎಂಬುದರ ಕುರಿತು ತನಿಖೆ ನಡೆಸಲಾಗುತ್ತಿದೆ. ಇದನ್ನೂ ಓದಿ: ನಿಜವಾಗ್ಲೂ ಪಠಾಣ್‌ ಸ್ಟಾರ್‌ಗೆ ಆಕ್ಸಿಡೆಂಟ್‌ ಆಗಿತ್ತಾ- ಶಾರುಖ್ ಹೆಲ್ತ್ ಅಪ್‌ಡೇಟ್‌ನಲ್ಲೇನಿದೆ?

    ವೆಸ್ಟ್ ವಿಂಗ್ ಶ್ವೇತಭವನದ ಒಂದು ಭಾಗವಾಗಿದ್ದು, ಅದು ಅಧ್ಯಕ್ಷರ ಸಿಬ್ಬಂದಿಗಾಗಿ ಓವಲ್ ಆಫೀಸ್, ಕ್ಯಾಬಿನ್ ರೂಮ್, ಪ್ರೆಸ್ ರೂಮ್, ಎಲ್ಲವೂ ಇವೆ. ಈ ಪ್ರದೇಶದಲ್ಲಿ ಕೆಲಸ ಮಾಡುವವರು ಹಾಗೂ ಆಗಾಗ ಭೇಟಿ ನೀಡುವವರು ನೂರಾರು ಜನರಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಉಬರ್ ಅಪ್ಲಿಕೇಶನ್ ಮೂಲಕ 800 ಭಾರತೀಯರ ಕಳ್ಳಸಾಗಣೆ – ಅಪರಾಧಿಗೆ 3 ವರ್ಷ ಜೈಲು ಶಿಕ್ಷೆ

    ಉಬರ್ ಅಪ್ಲಿಕೇಶನ್ ಮೂಲಕ 800 ಭಾರತೀಯರ ಕಳ್ಳಸಾಗಣೆ – ಅಪರಾಧಿಗೆ 3 ವರ್ಷ ಜೈಲು ಶಿಕ್ಷೆ

    ವಾಷಿಂಗ್ಟನ್: ಉಬರ್‌ನ (Uber) ರೈಡ್-ಹೈಲಿಂಗ್ (Raid-Hailing) ಎಂಬ ಅಪ್ಲಿಕೇಶನ್ ಬಳಿಸಿಕೊಂಡು ಸುಮಾರು 800ಕ್ಕೂ ಹೆಚ್ಚು ಭಾರತೀಯರನ್ನು (Indians) ಅಮೆರಿಕಾಗೆ (America) ಕಳ್ಳಸಾಗಣೆ (Smuggling) ಮಾಡಿದ ಭಾರತೀಯ ಮೂಲದ ವ್ಯಕ್ತಿಗೆ ನ್ಯಾಯಾಲಯ 3 ವರ್ಷಗಳ ಕಾಲ ಜೈಲುಶಿಕ್ಷೆ ವಿಧಿಸಿದೆ.

    ರಾಜಿಂದರ್ ಪಾಲ್ ಸಿಂಗ್ (49), ಅಕಾ ಜಸ್ಪಾಲ್ ಗಿಲ್, ಫೆಬ್ರವರಿಯಲ್ಲಿ ತಪ್ಪೊಪ್ಪಿಕೊಂಡಿದ್ದು, ಕೆನಡಾದಿಂದ ಗಡಿಯುದ್ದಕ್ಕೂ ನೂರಾರು ಭಾರತೀಯ ಪ್ರಜೆಗಳನ್ನು ಕರೆತರುವ ಸಲುವಾಗಿ 500,000 ಅಮೆರಿಕನ್ ಡಾಲರ್ (ಅಂದಾಜು 4.10 ಕೋಟಿ ರೂ.) ಹಣವನ್ನು ಪಡೆದುಕೊಂಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಇದನ್ನೂ ಓದಿ: ಮೋದಿ ಪ್ರಶ್ನಿಸಿದ್ದ ಅಮೆರಿಕ ಪತ್ರಕರ್ತೆಗೆ ಕಿರುಕುಳ – ವೈಟ್‍ಹೌಸ್ ಪ್ರತಿಕ್ರಿಯೆ

    ರಾಜಿಂದರ್ ಪಾಲ್ ಸಿಂಗ್ ಕ್ಯಾಲಿಫೋರ್ನಿಯಾ ನಿವಾಸಿಯಾಗಿದ್ದು, 4 ವರ್ಷಗಳ ಅವಧಿಯಲ್ಲಿ 800ಕ್ಕೂ ಹೆಚ್ಚು ಜನರನ್ನು ಉತ್ತರದ ಗಡಿಯ ಮೂಲಕ ವಾಷಿಂಗ್ಟನ್ (Washington) ರಾಜ್ಯಕ್ಕೆ ಕಳ್ಳಸಾಗಣಿಕೆ ಮಾಡಲು ವ್ಯವಸ್ಥೆ ಮಾಡಿದ್ದ ಎಂದು ಯುಎಸ್ (US) ಅಟಾರ್ನಿ ಟೆಸ್ಸಾ ಎಂ ಗೊರ್ಮನ್ ತಿಳಿಸಿದ್ದಾರೆ. ಇದನ್ನೂ ಓದಿ: ಒಂದೂವರೆ ವರ್ಷದ ಮಗಳನ್ನು ಬಿಟ್ಟು 10 ದಿನ ಟ್ರಿಪ್ ಹೋದ ತಾಯಿ- ಮಗು ಸಾವು

    ಜುಲೈ 2018ರಿಂದ ರಾಜಿಂದರ್ ಪಾಲ್ ಸಿಂಗ್ ಮತ್ತು ಅವರ ಸಹಚರರು ಕೆನಡಾದಿಂದ ಸಿಯಾಟಲ್ ಪ್ರದೇಶಕ್ಕೆ ಅಕ್ರಮವಾಗಿ ಗಡಿ ದಾಟಿದ ಜನರನ್ನು ಸಾಗಿಸಲು ಉಬರ್ ಅನ್ನು ಬಳಸಿದ್ದಾರೆ ಎಂದು ಪ್ರಕರಣದಲ್ಲಿ ದಾಖಲಿಸಲಾದ ದಾಖಲೆಗಳನ್ನು ಉಲ್ಲೇಖಿಸಿ ವರದಿಗಳು ತಿಳಿಸಿವೆ. 2018ರಿಂದ 2022ರ ಮಧ್ಯದಲ್ಲಿ ಭಾರತೀಯರನ್ನು ಯುಎಸ್‌ಗೆ ಸಾಗಿಸುವ ಸಲುವಾಗಿ ರಾಜಿಂದರ್ ಸುಮಾರು 600ಕ್ಕೂ ಹೆಚ್ಚು ಪ್ರವಾಸ ಬೆಳೆಸಿದ್ದ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಗಗನಯಾತ್ರಿಗಳ ಮೂತ್ರ, ಬೆವರಿನಿಂದಲೇ ಕುಡಿಯುವ ನೀರಿನ ಉತ್ಪಾದನೆ – ಬಾಹ್ಯಾಕಾಶದಲ್ಲಿ ಮಹತ್ವದ ಸಂಶೋಧನೆ

    ಪ್ರಕರಣದ ತನಿಖೆಯ ಪ್ರಕಾರ, 2018ರಿಂದ 2022ರ ಒಳಗಾಗಿ ಸುಮಾರು 80,000 ಅಮೆರಿಕನ್ ಡಾಲರ್ ಹಣಕ್ಕೆ 17 ಉಬರ್ ಖಾತೆಗಳು ಇದರೊಂದಿಗೆ ಕೈಜೋಡಿಸಿದ್ದವು. ಜನರನ್ನು ಸಾಗಿಸುವ ಸಲುವಾಗಿ ರಾಜಿಂದರ್ ಸಹಚರರು ಬಾಡಿಗೆಯ ಏಕಮುಖ ವಾಹನವನ್ನು ಬಳಸುತ್ತಿದ್ದರು. ಬಳಿಕ ಅವರನ್ನು ವಾಷಿಂಗ್ಟನ್‌ನ ಹೊರಪ್ರದೇಶಕ್ಕೆ ಸಾಗಿಸುತ್ತಿದ್ದರು. ಕ್ಯಾಲಿಫೋರ್ನಿಯಾದ ರಾಜಿಂದರ್ ಮನೆಯಿಂದ ತನಿಖಾಧಿಕಾರಿಗಳು ಸುಮಾರು 45,000 ಡಾಲರ್ ಹಣವನ್ನು ಮತ್ತು ನಕಲಿ ಗುರುತಿನ ದಾಖಲೆಯನ್ನು ಪತ್ತೆಹಚ್ಚಿದ್ದಾರೆ. ಕಾನೂನುಬದ್ದವಾಗಿ ಹಾಜರಾಗದ ರಾಜಿಂದರ್‌ನನ್ನು ಜೈಲುಶಿಕ್ಷೆಯ ಬಳಿಕ ಗಡಿಪಾರು ಮಾಡುವ ಸಾಧ್ಯತೆಯಿದೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಪಾಕಿಸ್ತಾನದಲ್ಲಿ ಸಿಖ್‌ ವ್ಯಾಪಾರಿಗೆ ಗುಂಡಿಕ್ಕಿ ಹತ್ಯೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವಾಷಿಂಗ್ಟನ್ ನಗರದಲ್ಲಿ ರಿಷಬ್ ಶೆಟ್ಟಿಗೆ ‘ವಿಶ್ವ ಶ್ರೇಷ್ಠ ಕನ್ನಡಿಗ’ ಪ್ರಶಸ್ತಿ

    ವಾಷಿಂಗ್ಟನ್ ನಗರದಲ್ಲಿ ರಿಷಬ್ ಶೆಟ್ಟಿಗೆ ‘ವಿಶ್ವ ಶ್ರೇಷ್ಠ ಕನ್ನಡಿಗ’ ಪ್ರಶಸ್ತಿ

    ಕಾಂತಾರ ಸಿನಿಮಾ ಖ್ಯಾತಿಯ ನಟ, ನಿರ್ದೇಶಕ ರಿಷಬ್ ಶೆಟ್ಟಿ ಇತ್ತೀಚೆಗೆ ಪತ್ನಿ ಪ್ರಗತಿ ಶೆಟ್ಟಿ (Pragati Shetty) ಸಮೇತ ಅಮೆರಿಕಾದ ವಾಷಿಂಗ್ಟನ್ (Washington) ನ ಸಿಯಾಟಲ್‌ ಗೆ ಭೇಟಿ ನೀಡಿದ್ದಾರೆ‌. ಅಲ್ಲಿನ ಪ್ರತಿಷ್ಠಿತ ಪ್ಯಾರಾಮೌಂಟ್ ಥಿಯೇಟರ್ ನಲ್ಲಿ ರಿಷಬ್ ಶೆಟ್ಟಿಗೆ ‘ವಿಶ್ವ ಶ್ರೇಷ್ಠ ಕನ್ನಡಿಗ 2023’ (Vishwa Shrestha Kannadiga) ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

    ಅಲ್ಲಿನ ಸಹ್ಯಾದ್ರಿ ಕನ್ನಡ ಸಂಘ ಹಾಗೂ ವಾಷಿಂಗ್ಟನ್ ರಾಜ್ಯದ ಕನ್ನಡಿಗರಾದ ಮನು ಗೌರವ್ ಮತ್ತು ತಂಡದವರು ರಿಷಬ್ ಶೆಟ್ಟಿ (Rishab Shetty) ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಸೆನೆಟರ್ ಡಾ.ದೆರೀಕ್ ಟ್ರಸ್ಫರ್ಡ್ ಸಹ ಉಪಸ್ಥಿತರಿದ್ದರು. ಇದನ್ನೂ ಓದಿ: ಪಡ್ಡೆಹುಡುಗರ ಕಣ್ಣು ಕುಕ್ಕುವಂತೆ ಹಾಟ್‌ ಆಗಿ ಕಾಣಿಸಿಕೊಂಡ ‘ಕೆಜಿಎಫ್‌’ ನಟಿ

    ಅಮೆರಿಕಾ ಹಾಗೂ ವಾಷಿಂಗ್ಟನ್ ನಗರಕ್ಕೆ ಕನ್ನಡಿಗರು ನೀಡುತ್ತಿರುವ ಕೊಡುಗೆಯನ್ನು ಸ್ಮರಿಸಿದ ಟ್ರಸ್ಫರ್ಡ್ ಅವರು, ರಿಷಬ್ ಶೆಟ್ಟಿ ಅವರ ‘ಕಾಂತಾರ’ ಸಿನಿಮಾವನ್ನು ಯೂನಿವರ್ಸಲ್‌ ಸಿನಿಮಾ ಎಂದು ಮುಕ್ತಕಂಠದಿಂದ ಶ್ಲಾಘಿಸಿದರು. ಇದೇ ಸಂದರ್ಭದಲ್ಲಿ ರಿಷಬ್ ಶೆಟ್ಟಿ ಅವರು ಅಮೆರಿಕಾದ ಇಡೀ ಕನ್ನಡಿಗರನ್ನು ಉದ್ದೇಶಿಸಿ ಮಾತನಾಡಿದರು.

     

    ವಾಷಿಂಗ್ಟನ್ ನ ಸಿಯಾಟಲ್ ನಗರದ ಪ್ಯಾರಾಮೌಂಟ್ ಥಿಯೇಟರ್ ಗೆ 95 ವರ್ಷಗಳ ಇತಿಹಾಸವಿದೆ‌. ಅಮೆರಿಕಾದ ಮಾಜಿ ಅಧ್ಯಕ್ಷ ಬರಾಕ್ ಒಬಾಮ ಸೇರಿದಂತೆ ಸಾಕಷ್ಟು ಗಣ್ಯರು ಈ ಸ್ಥಳದಲ್ಲಿ ಭಾಷಣ ಮಾಡಿದ್ದಾರೆ‌. ಅನೇಕ ಹೆಸರಾಂತ ಕಲಾವಿದರ ಕಾರ್ಯಕ್ರಮಗಳು ಇಲ್ಲಿ ನಡೆದಿದೆ‌. ಇಂತಹ ಇತಿಹಾಸವಿರುವ ಪ್ಯಾರಾಮೌಂಟ್ ಥಿಯೇಟರ್ ನಲ್ಲಿ ವಿಶ್ವ ಶ್ರೇಷ್ಠ ಕನ್ನಡಿಗ 2023 ಪಡೆದಿರುವುದಕ್ಕೆ ರಿಷಬ್ ಶೆಟ್ಟಿ ಸಂತಸಪಟ್ಟಿದ್ದಾರೆ. ಚಿನ್ನದ ಲೇಪನ ಹೊಂದಿರುವ ಈ ಟ್ರೋಫಿ, ಸುಮಾರು ಐದು ಕೆಜಿ ತೂಕವಿದೆ. 1800 ಕ್ಕೂ ಅಧಿಕ ಕನ್ನಡಿಗರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

     

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_title” view=”carousel” /]

  • ಅಮೆರಿಕದಲ್ಲಿ ಮುಂದುವರಿದ ಗುಂಡಿನ ಮೊರೆತ – ಶೂಟೌಟ್‌ಗೆ 3 ಬಲಿ

    ಅಮೆರಿಕದಲ್ಲಿ ಮುಂದುವರಿದ ಗುಂಡಿನ ಮೊರೆತ – ಶೂಟೌಟ್‌ಗೆ 3 ಬಲಿ

    ವಾಷಿಂಗ್ಟನ್‌: ಅಮೆರಿಕದಲ್ಲಿ (America) ಗುಂಡಿನ ದಾಳಿ ಮತ್ತೆ ಮುಂದುವರಿದಿದೆ. ಅಮೆರಿಕದ ವಾಷಿಂಗ್ಟನ್ (Washington) ರಾಜ್ಯದ ಯಾಕಿಮಾ ನಗರದ ಕನ್ವೀನಿಯನ್ಸ್ ಸ್ಟೋರ್‌ನಲ್ಲಿ ನಡೆದ ಗುಂಡಿನ (Shooting) ದಾಳಿಯಲ್ಲಿ ಕನಿಷ್ಠ 3 ಜನರು ಸಾವನ್ನಪ್ಪಿದ್ದಾರೆ ಎಂದು ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ.

    ಬಂದೂಕುಧಾರಿ ಅಂಗಡಿಯೊಂದರಲ್ಲಿ 21 ಜನರ ಮೇಲೆ ಗುಂಡು ಹಾರಿಸಿದ್ದಾನೆ. ದಾಳಿಯ ನಂತರ ಶೂಟರ್ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಕ್ಯಾಲಿಫೋರ್ನಿಯಾದಲ್ಲಿ ಮತ್ತೆ ಗುಂಡಿನ ದಾಳಿ – 7 ಮಂದಿ ಸಾವು

    ಯಕಿಮಾ, ವಾಷಿಂಗ್ಟನ್ ಸುಮಾರು 96,000 ಜನರಿರುವ ನಗರಗಳು. 2023 ರ ಆರಂಭದ ವಾರಗಳಲ್ಲೇ ಬಂಧೂಕು ಹಿಂಸಾಚಾರ ನಡೆಯುತ್ತಿದೆ. ಒಂದರ ಹಿಂದೆ ಒಂದರಂತೆ ಶೂಟೌಟ್‌ ಪ್ರಕರಣಗಳು ವರದಿಯಾಗುತ್ತಿವೆ.

    ಅಮೆರಿಕದ ಉತ್ತರ ಕ್ಯಾಲಿಫೋರ್ನಿಯಾದ ಹಾಫ್ ಮೂನ್ ಬೇ ಪ್ರದೇಶದ ಎರಡು ಸ್ಥಳಗಳಲ್ಲಿ ಗುಂಡಿನ ದಾಳಿ ನಡೆದಿತ್ತು. ಅದಾದ ಕೆಲವೇ ಗಂಟೆಗಳಲ್ಲಿ ಈ ದುರಂತ ಘಟನೆ ನಡೆದಿದೆ. ಇದನ್ನೂ ಓದಿ: ಕ್ಯಾಲಿಫೋರ್ನಿಯಾದಲ್ಲಿ ಚೀನೀಯರ ನ್ಯೂ ಇಯರ್‌ ಪಾರ್ಟಿ ವೇಳೆ ಶೂಟೌಟ್‌ – 10 ಮಂದಿ ಸಾವು

    ಕೆಲ ದಿನಗಳ ಹಿಂದಷ್ಟೇ ಕ್ಯಾಲಿಫೋರ್ನಿಯಾದಲ್ಲಿ ಚೀನೀಯರು ಹೊಸ ವರ್ಷದ ಪಾರ್ಟಿ ಮಾಡುತ್ತಿದ್ದ ವೇಳೆ ಗುಂಡಿನ ದಾಳಿ ನಡೆದಿತ್ತು. ಅದರಲ್ಲಿ 10 ಮಂದಿ ಮೃತಪಟ್ಟಿದ್ದರು. ಅದಾದ ಬಳಿಕ ಕ್ಯಾಲಿಫೋರ್ನಿಯಾದಲ್ಲೇ ನಡೆದ 2 ಪ್ರತ್ಯೇಕ ದಾಳಿಗಳಲ್ಲಿ 7 ಜನರು ಸಾವಿಗೀಡಾಗಿದ್ದರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • Google ಸಿಇಒ ಸುಂದರ್ ಪಿಚೈಗೆ ಪದ್ಮಭೂಷಣ ಪ್ರಶಸ್ತಿ ಹಸ್ತಾಂತರ

    Google ಸಿಇಒ ಸುಂದರ್ ಪಿಚೈಗೆ ಪದ್ಮಭೂಷಣ ಪ್ರಶಸ್ತಿ ಹಸ್ತಾಂತರ

    ವಾಷಿಂಗ್ಟನ್: ವ್ಯಾಪಾರ ಮತ್ತು ಕೈಗಾರಿಕಾ ವಿಭಾಗದಲ್ಲಿ ಗೂಗಲ್ ಹಾಗೂ ಆಲ್ಫಾಬೆಟ್ ಸಿಇಒ (Google CEO) ಆಗಿರುವ ಸುಂದರ್ ಪಿಚೈ (Sundar Pichai) ಅವರಿಗೆ ಭಾರತ ಸರ್ಕಾರ (Government Of India) ಪದ್ಮಭೂಷಣ ಪ್ರಶಸ್ತಿ (Padma Bhushan Award) ನೀಡಿ ಗೌರವಿಸಿದೆ. ಪ್ರಶಸ್ತಿಯನ್ನು ಪಿಚೈ ಅವರಿಗೆ ಭಾರತದ ಅಮೆರಿಕ ರಾಯಭಾರಿ ಹಸ್ತಾಂತರಿಸಿದ್ದಾರೆ.

    ಅಮೆರಿಕ-ಭಾರತೀಯ ರಾಯಭಾರಿ ತರಂಜಿತ್ ಸಿಂಗ್ ಸಂಧು (Taranjit Singh Sandhu) ಶುಕ್ರವಾರ ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ಪಿಚೈ ಕುಟುಂಬ ಸದಸ್ಯರ ಸಮ್ಮುಖದಲ್ಲಿ ಪ್ರಶಸ್ತಿ ಹಸ್ತಾಂತರಿಸಿದರು. ತಮಿಳುನಾಡಿನ ಮದುರೈ ಮೂಲದ ಪಿಚೈ ಈ ವರ್ಷಾರಂಭದಲ್ಲಿ 17 ಪ್ರಶಸ್ತಿ ಪುರಸ್ಕೃತರಲ್ಲಿ ಒಬ್ಬರಾಗಿದ್ದರು. ಇದನ್ನೂ ಓದಿ: ತಮಿಳುನಾಡಿನ ದೇವಾಲಯಗಳಲ್ಲಿ ಮೊಬೈಲ್ ಬಳಸುವಂತಿಲ್ಲ – ಮದ್ರಾಸ್ ಹೈಕೋರ್ಟ್ ಆದೇಶ

    ಪ್ರಶಸ್ತಿ ಸ್ವೀಕರಿಸಿದ ಬಳಿಕ ಮಾತನಾಡಿದ ಪಿಚೈ, ಈ ಅಪಾರ ಗೌರವಕ್ಕಾಗಿ ನಾನು ಭಾರತದ ಜನರಿಗೆ ಕೃತಜ್ಞನಾಗಿದ್ದೇನೆ. ನನ್ನನ್ನು ರೂಪಿಸಿದ ದೇಶದಿಂದಲೇ ಈ ರೀತಿ ಗೌರವಿಸಲ್ಪಟ್ಟಿರುವುದು ನಂಬಲು ಸಾಧ್ಯವೇ ಆಗುತ್ತಿಲ್ಲ. ಭಾರತ ದೇಶ ಎಂದಿಗೂ ನನ್ನ ಭಾಗವಾಗಿರುತ್ತದೆ. ನಾನು ಎಲ್ಲಿಗೇ ಹೋದರೂ ಭಾರತವನ್ನು ನನ್ನೊಂದಿಗೆ ಕೊಂಡೊಯ್ಯುತ್ತೇನೆ ಎಂದು ಕೊಂಡಾಡಿದರು. ಇದನ್ನೂ ಓದಿ: ನನ್ನ ಹತ್ಯೆಗೆ ಸ್ಕೆಚ್ – ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ಮುಖಂಡ ಗಂಭೀರ ಆರೋಪ

    ನನ್ನ ಆಸಕ್ತಿಗಳನ್ನು ಅನ್ವೇಷಿಸಲು ನನ್ನ ಕುಟುಂಬ ಬಹಳಷ್ಟು ತ್ಯಾಗ ಮಾಡಿದೆ. ನನ್ನ ಪೋಷಕರು ಕಲಿಕೆಗೆ ಸಹಕರಿಸಿದ್ದಾರೆ. ಅಂತಹ ಕುಟುಂಬದಲ್ಲಿ ನಾನು ಬೆಳೆಯಲು ಅದೃಷ್ಟಶಾಲಿಯಾಗಿದ್ದೇನೆ ಎಂದು ಸ್ಮರಿಸಿದರು.

    Live Tv
    [brid partner=56869869 player=32851 video=960834 autoplay=true]

  • ವಿದ್ಯುತ್ ಟವರ್‌ನಲ್ಲಿ ಸಿಕ್ಕಿಹಾಕಿಕೊಂಡ ಮಿನಿ ವಿಮಾನ

    ವಿದ್ಯುತ್ ಟವರ್‌ನಲ್ಲಿ ಸಿಕ್ಕಿಹಾಕಿಕೊಂಡ ಮಿನಿ ವಿಮಾನ

    ವಾಷಿಂಗ್ಟನ್: ಮಿನಿ ವಿಮಾನವೊಂದು (Small Plane) ಆಗಸದಲ್ಲಿ ಹಾರುತ್ತ ಕೆಳಗಿಳಿದು ವಿದ್ಯುತ್ ಟವರ್‌ನಲ್ಲಿ (Power Lines) ಸಿಕ್ಕಿಹಾಕಿಕೊಂಡ ಘಟನೆ ಅಮೆರಿಕದ (America) ಮೇರಿಲ್ಯಾಂಡ್‍ನಲ್ಲಿ ನಡೆದಿದೆ.

    ಮಿನಿ ವಿಮಾನ ಹಾರಾಡುತ್ತ ಏಕಾಏಕಿ ಕೆಳಕ್ಕೆ ಬಂದು ವಿದ್ಯುತ್ ಟವರ್‌ಗೆ ಡಿಕ್ಕಿ ಹೊಡೆದು ಅಲ್ಲೇ ಸಿಕ್ಕಿಹಾಕಿಕೊಂಡಿದೆ. ವಿಮಾನ ಡಿಕ್ಕಿ ಹೊಡೆಯುತ್ತಿದ್ದಂತೆ ಪವಾಡ ಸದೃಶ್ಯವಾಗಿ ಪೈಲಟ್ ಪಾರಾಗಿದ್ದಾನೆ. ಇದನ್ನೂ ಓದಿ: ಇಟಲಿಯ ಇಶಿಯಾ ದ್ವೀಪದಲ್ಲಿ ಭೂಕುಸಿತ – 3 ವಾರದ ಶಿಶು ಸೇರಿ 7 ಸಾವು

    ಘಟನೆಯಿಂದಾಗಿ ವಾಷಿಂಗ್ಟನ್ (Washington) ಸೇರಿದಂತೆ ಮೇರಿಲ್ಯಾಂಡ್‍ನ 90,000 ಮನೆ ಹಾಗೂ ಕೈಗಾರಿಕಾ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಾಸವಾಗಿ ಜನ ಪರದಾಡಿದ್ದಾರೆ. ಮಿನಿ ವಿಮಾನ ಅಪಘಾತವಾಗುತ್ತಿದ್ದಂತೆ ವಿದ್ಯುತ್ ಟವರ್‌ನ ವಯರ್‌ಗಳು ಕಡಿತಗೊಂಡಿದೆ. ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು ಮತ್ತು ಅಗ್ನಿ ಶಾಮಕದಳ ಪೈಲಟ್‍ನನ್ನು ರಕ್ಷಿಸಿದ್ದಾರೆ. ಈ ಬಗ್ಗೆ ವಿಚಾರಣೆ ನಡೆಸಿದ ವೇಳೆ ಮಳೆಯಿಂದಾಗಿ ಮಿನಿ ವಿಮಾನ ವಿದ್ಯುತ್ ಟವರ್‌ಗೆ ಡಿಕ್ಕಿ ಹೊಡೆದಿದೆ ಎಂದು ಪ್ರಾಥಮಿಕ ತನಿಖೆ ವೇಳೆ ತಿಳಿದು ಬಂದಿದೆ. ಇದನ್ನೂ ಓದಿ: ಗಂಟಲಲ್ಲಿ ಸಿಕ್ಕಿಕೊಂಡ ಚಾಕ್ಲೇಟ್- 9 ವರ್ಷದ ಬಾಲಕ ಉಸಿರುಗಟ್ಟಿ ಸಾವು

    Live Tv
    [brid partner=56869869 player=32851 video=960834 autoplay=true]

  • ಅಮೆರಿಕದಲ್ಲಿ ಸಾಮೂಹಿಕ ಗುಂಡಿನ ದಾಳಿ – ಹಲವು ಮಂದಿ ಸಾವು

    ಅಮೆರಿಕದಲ್ಲಿ ಸಾಮೂಹಿಕ ಗುಂಡಿನ ದಾಳಿ – ಹಲವು ಮಂದಿ ಸಾವು

    ವಾಷಿಂಗ್ಟನ್‌: ಕ್ಯಾಪಿಟಲ್‌ ಹಿಲ್‌ ಬಳಿಯ ಈಶಾನ್ಯ ವಾಷಿಂಗ್ಟನ್‌ನಲ್ಲಿ ಸಾಮೂಹಿಕ ಗುಂಡಿನ ದಾಳಿ ನಡೆದಿದ್ದು, ಹಲವು ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ.

    ಎಫ್ ಸ್ಟ್ರೀಟ್ ನಾರ್ತ್ ಈಸ್ಟ್‌ನ 1500 ಬ್ಲಾಕ್‌ನಲ್ಲಿ ರಾತ್ರಿ 8:30 ರ ಸುಮಾರಿಗೆ ಗುಂಡಿನ ದಾಳಿ ನಡೆದಿರುವ ಬಗ್ಗೆ ವರದಿಯಾಗಿದೆ. ಈ ಸಂಬಂಧ ಮೆಟ್ರೋಪಾಲಿಟನ್ ಪೊಲೀಸ್ ಇಲಾಖೆ ಟ್ವೀಟ್ ಮಾಡಿದ್ದು, ಘಟನೆಯಲ್ಲಿ ಹಲವು ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದೆ. ಆದರೆ ಎಷ್ಟು ಮಂದಿ ಎಂಬ ಬಗ್ಗೆ ನಿಖರ ಮಾಹಿತಿ ನೀಡಿಲ್ಲ. ಇದನ್ನೂ ಓದಿ: ಅಕ್ರಮ ಸಂಬಂಧ ಹೊಂದುವಂತೆ ಪತ್ನಿಗೆ ಬ್ಲಾಕ್‍ಮೇಲ್ – ಪೊಲೀಸಪ್ಪನ ಮೂಗು, ಕಿವಿ, ತುಟಿ ಕಟ್

    ಗುಂಡಿನ ದಾಳಿಯಲ್ಲಿ ಹಲವರು ಸಾವನ್ನಪ್ಪಿರುವುದು ಕಂಡುಬಂದಿದೆ. ಅಂಬುಲೆನ್ಸ್‌ಗಳು ರಸ್ತೆಯಲ್ಲಿ ಸಾಲುಗಟ್ಟಿ ನಿಂತಿದ್ದಾಗ ಈ ಘಟನೆ ನಡೆದಿದೆ. ಕನಿಷ್ಠ 15 ಗುಂಡುಗಳನ್ನು ಹಾರಿಸಲಾಗಿದೆ ಎಂದು ಪೊಲೀಸ್‌ ಅಧಿಕಾರಿ ತಿಳಿಸಿದ್ದಾರೆ.

    ಅಮೆರಿಕದಲ್ಲಿ ಗುಂಡಿನ ದಾಳಿ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿವೆ. ಈ ಹಿಂಸಾಚಾರದಲ್ಲಿ ಮಕ್ಕಳು ಹಾಗೂ ಜನರನ್ನು ರಕ್ಷಿಸುವ ಸಲುವಾಗಿ ಶಸ್ತ್ರಾಸ್ತ್ರಗಳಿಂದ ಸಂಬಂಧಿಸಿದ ನಿಯಮಗಳನ್ನು ಬಿಗಿಗೊಳಿಸಬೇಕು. ಶಸ್ತ್ರಾಸ್ತ್ರ ಖರೀದಿ ವಯೋಮಿತಿಯನ್ನು 18ರಿಂದ 21ಕ್ಕೆ ಹೆಚ್ಚಿಸಬೇಕು ಎಂದು ಅಮೆರಿಕ ಅಧ್ಯಕ್ಷ ಜೋ ಬೈಡೆನ್‌ ಈ ಹಿಂದೆ ಹೇಳಿದ್ದರು. ಇದನ್ನೂ ಓದಿ: ಅಲ್‌ಖೈದಾ ಮುಖ್ಯಸ್ಥ ಝವಾಹಿರಿ ಹತ್ಯೆ- ಮೋಸ್ಟ್ ವಾಂಟೆಡ್ ಉಗ್ರನ ಮೇಲೆ ಡ್ರೋಣ್ ಸ್ಟ್ರೈಕ್‌

    ಮೇ 24 ರಂದು ನಡೆದಿದ್ದ ಗುಂಡಿನ ದಾಳಿಯಲ್ಲಿ 19 ಮಕ್ಕಳು ಸೇರಿದಂತೆ ಅನೇಕರು ಮೃತಪಟ್ಟಿದ್ದರು. ಜೂ.1ರಂದು ನಡೆದ ಗುಂಡಿನ ದಾಳಿಯಲ್ಲಿ ನಾಲ್ವರು ಸಾವಿಗೀಡಾಗಿದ್ದರು. ಜೂ.20ರಂದು ಅಪ್ರಾಪ್ತ ನಡೆಸಿದ ದಾಳಿಯಲ್ಲಿ ಪೊಲೀಸ್‌ ಅಧಿಕಾರಿ ಸೇರಿದಂತೆ ಮೂವರು ಸಾವನ್ನಪ್ಪಿದ್ದರು.

    Live Tv
    [brid partner=56869869 player=32851 video=960834 autoplay=true]

  • ಯುಎಸ್ ಅಧ್ಯಕ್ಷ ಜೋ ಬೈಡನ್‍ಗೆ ಕೋವಿಡ್ ಪಾಸಿಟಿವ್

    ಯುಎಸ್ ಅಧ್ಯಕ್ಷ ಜೋ ಬೈಡನ್‍ಗೆ ಕೋವಿಡ್ ಪಾಸಿಟಿವ್

    ವಾಷಿಂಗ್ಟನ್: ಯುನೈಟೆಡ್ ಸ್ಟೇಟ್ಸ್ ಅಧ್ಯಕ್ಷ ಜೋ ಬೈಡನ್ ಅವರಿಗೆ ಕೋವಿಡ್-19 ಪಾಸಿಟಿವ್ ದೃಢವಾಗಿದೆ.

    Joe Biden

    ಶ್ವೇತಭವನದ ಮಾಧ್ಯಮ ಕಾರ್ಯದರ್ಶಿ ಕರೀನ್ ಜೀನ್-ಪಿಯರ್ ಈ ಕುರಿತು ಮಾಹಿತಿ ನೀಡಿದ್ದು, ಬೈಡನ್ ಅವರಿಗೆ ಕೊರೊನಾ ಸೌಮ್ಯ ಲಕ್ಷಣಗಳು ಕಾಣಿಸಿಕೊಂಡಿತ್ತು. ಈ ಹಿನ್ನೆಲೆ ಅವರಿಗೆ ಕೊರೊನಾ ಪರೀಕ್ಷೆ ಮಾಡಿಸಿದಾಗ ಪಾಸಿಟಿವ್ ಕಾಣಿಸಿಕೊಂಡಿದೆ. ರೋಗದ ತೀವ್ರತೆಯನ್ನು ಕಡಿಮೆ ಮಾಡಲು ಆಂಟಿವೈರಲ್ ಡ್ರಗ್ ಪ್ಯಾಕ್ಸ್ಲೋವಿಡ್ ತೆಗೆದುಕೊಂಡಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಯಾರಿಗೂ ಭಯಪಡದೆ ಸಂವಿಧಾನದ ಪಾಲಕರಾಗಬೇಕು: ದ್ರೌಪದಿ ಮುರ್ಮುಗೆ ಅಭಿನಂದಿಸಿದ ಯಶವಂತ್ ಸಿನ್ಹಾ

    ಬೈಡೆನ್ ಅವರು ಶ್ವೇತಭವನದಲ್ಲಿ ಪ್ರತ್ಯೇಕವಾಗಿದ್ದಾರೆ. ಆ ಸಮಯದಲ್ಲಿ ಅವರ ಎಲ್ಲ ಕರ್ತವ್ಯಗಳನ್ನು ಸಂಪೂರ್ಣವಾಗಿ ನಿರ್ವಹಿಸುತ್ತಾರೆ. ಅವರು ಇಂದು ಬೆಳಗ್ಗೆ ಶ್ವೇತಭವನದ ಸಿಬ್ಬಂದಿಯ ಸದಸ್ಯರೊಂದಿಗೆ ಫೋನ್ ಮೂಲಕ ಸಂಪರ್ಕದಲ್ಲಿದ್ದರು. ಶ್ವೇತಭವನದಲ್ಲಿ ಅವರ ಯೋಜಿತ ಸಭೆಗಳಲ್ಲಿ ಫೋನ್ ಮತ್ತು ಜೂಮ್ ಕಾಲ್ ಮೂಲಕ ನಡೆಸಿದ್ದಾರೆ ಎಂದು ವಿವರಿಸಿದ್ದಾರೆ.

    79 ವರ್ಷದ ಬೈಡನ್ ಅವರು ಅಧಿಕಾರ ವಹಿಸಿಕೊಳ್ಳುವ ಸ್ವಲ್ಪ ಸಮಯದ ಮೊದಲು ಎರಡು ಡೋಸ್ ಕೊರೊನಾ ಲಸಿಕೆಯನ್ನು ಪಡೆದುಕೊಂಡಿದ್ದರು. ಸೆಪ್ಟೆಂಬರ್‌ನಲ್ಲಿ ಬೂಸ್ಟರ್ ಡೋಸ್ ತೆಗೆದುಕೊಂಡಿದ್ದರು. ಉಪಾಧ್ಯಕ್ಷೆ ಕಮಲಾ ಹ್ಯಾರಿಸ್, ಕ್ಯಾಬಿನೆಟ್ ಸದಸ್ಯರು, ಶ್ವೇತಭವನದ ಸಿಬ್ಬಂದಿ ಮತ್ತು ಶಾಸಕರಿಗೆ ಸೋಂಕು ತಗುಲಿತ್ತು. ಇದನ್ನೂ ಓದಿ:  ಡಿಸಿ ನೀಡಿದ್ದ ತೀರ್ಪು ಎತ್ತಿಹಿಡಿದ ಹೈಕೋರ್ಟ್ – ನಗರಸಭೆಯ ಏಳು ಸದಸ್ಯರು ಅನರ್ಹ

    Live Tv
    [brid partner=56869869 player=32851 video=960834 autoplay=true]