Tag: WasimPathan

  • ಹುಬ್ಬಳ್ಳಿ ಗಲಭೆಯ ಮಾಸ್ಟರ್‌ಮೈಂಡ್ ಆರೋಪಿ ಅರೆಸ್ಟ್

    ಹುಬ್ಬಳ್ಳಿ ಗಲಭೆಯ ಮಾಸ್ಟರ್‌ಮೈಂಡ್ ಆರೋಪಿ ಅರೆಸ್ಟ್

    ಹುಬ್ಬಳ್ಳಿ: ಮಧ್ಯಾಹ್ನವಷ್ಟೇ ಅಜ್ಞಾತ ಸ್ಥಳದಿಂದ ವೀಡಿಯೋ ಮೂಲಕ ಪ್ರತ್ಯಕ್ಷವಾಗಿದ್ದ ಹುಬ್ಬಳ್ಳಿ ಗಲಭೆಯ ಮಾಸ್ಟರ್‌ಮೈಂಡ್ ಆರೋಪಿ ವಾಸಿಂ ಪಠಾಣ್, ವೀಡಿಯೋ ರಿಲೀಸ್ ಮಾಡಿದ ಕೆಲವೇ ಗಂಟೆಗಳಲ್ಲಿ ಪೊಲೀಸರ ಬಲೆಗೆ ಸಿಕ್ಕಿಬಿದ್ದಿದ್ದಾನೆ.

    HUBBALLI VASIM

    ಗಲಭೆ ನಡೆದ ದಿನ ಪೊಲೀಸರ ಜತೆ ವಾಗ್ವಾದಕ್ಕಿಳಿದಿದ್ದ ಎಐಎಮ್‌ಐಎಮ್ ಮುಖಂಡ ಮಹಮ್ಮದ್ ಆರಿಫ್‌ನನ್ನು ಪೊಲೀಸರು ವಶಕ್ಕೆ ಪಡೆದ್ದರು. ಇಂದು ವಾಸಿಂ ವೀಡಿಯೋ ರಿಲೀಸ್ ಮಾಡುತ್ತಿದ್ದಂತೆ ಹುಬ್ಬಳ್ಳಿ ಕೇಶ್ವಾಪೂರ ಠಾಣೆ ಇನ್ಸ್ಪೆಕ್ಟರ್ ಜಗದೀಶ್ ಹಂಚಿನಾಳ ತಂಡವು ಕಾರ್ಯಾಚರಣೆ ನಡೆಸಿ ಮುಂಬೈನಲ್ಲಿ ಆರೋಪಿಯನ್ನು ಬಂಧಿಸಿ ಕರೆತರಲಾಗಿದೆ. ಇನ್ಸ್ಪೆಕ್ಟರ್ ಅಲ್ತಾಫ್ ಕೂಡಾ ತಂಡದಲ್ಲಿ ಇದ್ದರು. ಇದನ್ನೂ ಓದಿ: ಮಾಸ್ಟರ್ ಮೈಂಡ್ ನಾನಲ್ಲ, ಗಲಭೆಗೆ ನಾನು ಕಾರಣನಲ್ಲ – ಅಜ್ಞಾತ ಸ್ಥಳದಿಂದ ವೀಡಿಯೋ ಬಿಟ್ಟ ವಾಸಿಂ

    ಹುಬ್ಬಳ್ಳಿ ಗಲಭೆ ವಿಚಾರಕ್ಕೆ ಸಂಬಂಧಿಸಿದಂತೆ ಈವರೆಗೆ ಒಟ್ಟು 126 ಜನರನ್ನು ಬಂಧಿಸಿದ್ದು, 12 ಮಂದಿಯ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಇನ್ನೂ 20ಕ್ಕೂ ಹೆಚ್ಚು ಜನರ ವಿಚಾರಣೆ ನಡೆಯುತ್ತಿದೆ. ಇದನ್ನೂ ಓದಿ: ಹುಬ್ಬಳ್ಳಿ ಗಲಭೆ – ಮಸೀದಿ ಮೇಲೆ `ಜೈಶ್ರೀರಾಮ್’ ಲೇಸರ್ ಲೈಟ್ ಹಾಕಿದ್ದ ಕಿಡಿಗೇಡಿಗಳು

    HUBBALLI INCIDENT

    ವೀಡಿಯೋನಲ್ಲಿ ವಾಸಿಂ ಹೇಳಿದ್ದೇನು?
    ಇಲ್ಲಿನ ಗಲಭೆಗೆ ನಾನು ಮಾಸ್ಟರ್ ಮೈಂಡ್ ಅಲ್ಲ. ಪೊಲೀಸರ ಸೂಚನೆಯಂತೆ ನಾನು ಉದ್ರಿಕ್ತರನ್ನು ಸಮಾಧಾನಪಡಿಸಲು ಅವರ ಕೈಯಲ್ಲಿದ್ದ ಮೈಕ್ ತೆಗೆದುಕೊಂಡು ಮಾತನಾಡಿದೆ ಅಷ್ಟೇ. ಬಂದಿದ್ದ ಜನರನ್ನು ಕರೆದು ದೂರು ಕೊಡಲು ಅವರೇ ಹೇಳಿದ್ರು. ಯಾವಾಗ ಗಲಭೆಗೆ ತಿರುಗಿತ್ತೋ ಆಗ ನನಗೆ ಎಲ್ಲರನ್ನು ಸಮಾಧಾನ ಪಡಿಸಲು ಜೀಪ್ ಮೇಲೆ ಹತ್ತುವಂತೆ ಹೇಳಿದ್ರು. ಅವರ ಸೂಚನೆಯಂತೆಯೇ ನಾನು ಉದ್ರಿಕ್ತರನ್ನು ಸಮಾಧಾನಪಡಿಸಲು ಮುಂದಾದೆ. ಪೊಲೀಸರ ಕೈಯಲ್ಲಿದ್ದ ಮೈಕ್ ಅನ್ನು ತೆಗೆದುಕೊಂಡು ಮಾತನಾಡಿದೆ. ಇದೇ ವೇಳೆ ಅಚಾನಕ್ಕಾಗಿ ಕರೆಂಟ್ ಕಟ್ ಆಯ್ತು. ನಾನೂ ಅಲ್ಲೇ ಇದ್ದರಿಂದ ನನ್ನ ಮೇಲೆ ಆರೋಪ ಬಂದಿದೆ. ಇದನ್ನೂ ಓದಿ: ಅಲ್ಪಸಂಖ್ಯಾತರು ಮುಗ್ಧ ಜನರು, ಅಮಾಯಕರು: ಆನಂದ್ ಸಿಂಗ್

    HUBBALLI_ GALATE 1

    ನಾನು ಜನರಿಗೆ ಸಮಾಧಾನ ಮಾಡಿದ ವೀಡಿಯೋ ಯಾವುದೂ ಜಾಲತಾಣದಲ್ಲಿ ಬಂದಿಲ್ಲ. ಅದು ಬಿಟ್ಟು ಬೇರೆ ಬೇರೆ ವೀಡಿಯೋ ಬಂದಿವೆ. ನನಗೆ ಪೊಲೀಸರ ಮೇಲೆ ಹಾಗೂ ಕಾನೂನಿನ ಮೇಲೆ ಭರವಸೆಯಿದೆ. ಆದಷ್ಟು ಬೇಗ ಪೊಲೀಸರ ಮುಂದೆ ಹಾಜರಾಗುತ್ತೇನೆ. ಜಮಾತ್ ಮುಂದೆ ಸಹ ನಿಲ್ಲುತ್ತೇನೆ ಎಂದು ವೀಡಿಯೋನಲ್ಲಿ ಹೇಳಿದ್ದರು.

  • ಹುಬ್ಬಳ್ಳಿ ಗಲಭೆ – ಮಸೀದಿ ಮೇಲೆ `ಜೈಶ್ರೀರಾಮ್’ ಲೇಸರ್ ಲೈಟ್ ಹಾಕಿದ್ದ ಕಿಡಿಗೇಡಿಗಳು

    ಹುಬ್ಬಳ್ಳಿ ಗಲಭೆ – ಮಸೀದಿ ಮೇಲೆ `ಜೈಶ್ರೀರಾಮ್’ ಲೇಸರ್ ಲೈಟ್ ಹಾಕಿದ್ದ ಕಿಡಿಗೇಡಿಗಳು

    ಹುಬ್ಬಳ್ಳಿ: ವಿವಾದಿತ ಪೋಸ್ಟ್ನಿಂದ ಹುಬ್ಬಳ್ಳಿಯಲ್ಲಿ ಗಲಭೆ ನಡೆದ ಬಳಿಕ ದಿನಕ್ಕೊಂದು ರಹಸ್ಯಗಳು ಬಯಲಾಗುತ್ತಿವೆ. ನೆನ್ನೆಯಷ್ಟೇ ಮುಸ್ಲಿಂ ಮೌಲ್ವಿಯಂತೆ ವೇಷ ಧರಿಸಿ ಬಂದಿದ್ದ ಲಾರಿಚಾಲಕನ ಅಸಲಿ ರೂಪ ಬಯಲಾಗಿತ್ತು. ಈ ಬೆನ್ನಲ್ಲೇ ಗಲಭೆಗೆ ಮತ್ತೊಂದು ಪ್ರಮುಖ ಕಾರಣ ಏನೆಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

    HUBBALLI INCIDENT

    ಕಳೆದ ಮೂರು ತಿಂಗಳಿನಿಂದಲೂ ಮುಸ್ಲಿಮರ ವಿರುದ್ಧ ನಡೆದ ಸಾಲು ಸಾಲು ಅಭಿಯಾನಗಳೇ ಗಲಾಟೆಗೆ ಕಾರಣ ಎಂದು ಹೇಳಲಾಗುತ್ತಿದೆ. ರಾಮನವಮಿ ದಿನದಂದೇ ಗಲಾಟೆ ನಡೆಯುವ ಸಾಧ್ಯತೆಗಳಿತ್ತು. ಏಕೆಂದರೆ ಹುಬ್ಬಳ್ಳಿಯ ಪೆಂಡಾರ್ ಗಲ್ಲಿಯ ಮಸೀದಿಯ ಮೇಲೆ ಕಿಡಿಗೇಡಿಗಳು `ಜೈಶ್ರೀರಾಮ್’ ಘೋಷಣೆಯನ್ನು ಲೇಸರ್ ಲೈಟ್ ಮೂಲಕ ಹಾಕಿದ್ದರು. ಇದನ್ನು ಮುಸ್ಲಿಂ ಮುಖಂಡರು ತಡೆದಿದ್ದರು. ಈ ಬೆನ್ನಲ್ಲೇ ವಿವಾದಿತ ಪೋಸ್ಟ್ ಹಾಕುತ್ತಿದ್ದಂತೆ ಮುಸ್ಲಿಂ ಸಮುದಾಯದವರು ರೊಚ್ಚಿಗೆದ್ದು, ಗಲಾಟೆ ಹಿಂಸಾತ್ಮಕ ರೂಪ ಪಡೆದಿದೆ. ಇದನ್ನೂ ಓದಿ: ಹುಬ್ಬಳ್ಳಿ ಗಲಭೆಯಲ್ಲಿ ಪೊಲೀಸರ ಹತ್ಯೆಗೆ ಸಂಚು- ಅಟ್ಟಾಡಿಸಿ ಕೊಲ್ಲಲು ಮುಂದಾಗಿದ್ದ ಗಲಭೆಕೋರರು

    HUBBALLI INCIDENT

    ವಿವಾದಿತ ಪೋಸ್ಟ್ ಹಾಕಿದ್ದ ಅಭಿಷೇಕ್‌ನನ್ನು ಮುಗಿಸಲು ಸ್ಕೆಚ್ ಹಾಕಿದ್ದರು. ಗಲ್ಲಿ-ಗಲ್ಲಿಗಳಲ್ಲೂ ಗಲಾಟೆಗೆ ಪ್ಲಾನ್ ನಡೆದಿತ್ತು. ಆದರೆ, ಅಭಿಷೇಕ್‌ನನ್ನೂ ಪೊಲೀಸರೇ ಬಚಾವ್ ಮಾಡಿದ್ದರು. ಇದರಿಂದ ಪೊಲೀಸರನ್ನೇ ಟಾರ್ಗೆಟ್ ಮಾಡಿದ್ದ ಕಿಡಿಗೇಡಿಗಳು ಇಬ್ಬರು ಪೊಲೀಸರನ್ನು ಕೊಲೆ ಮಾಡುವುಕ್ಕೂ ಯತ್ನಿಸಿದ್ದರು ಎಂಬ ಆರೋಪ ಬಂದಿದೆ. ಇದನ್ನೂ ಓದಿ: ಮಸೀದಿ ಮೈಕ್ ವಿರುದ್ಧ ಕ್ರಮಕ್ಕೆ ಡೆಡ್‍ಲೈನ್- ರಂಜಾನ್ ಒಳಗೆ ತೆರವಾಗದಿದ್ರೆ ಮಹಾ ಆರತಿ ಎಚ್ಚರಿಕೆ

    HUBBALLI INCIDENT

    ಅದಕ್ಕಾಗಿ ಹುಬ್ಬಳ್ಳಿ ಕಿಂಗ್ಸ್ ಎಂಬ ವಾಟ್ಸಪ್ ಗ್ರೂಪ್ ನಲ್ಲಿ ವಸೀಂ ಪಠಾಣ್, ಇರ್ಫಾನ್, ಮೊಹ್ಮದ್ ಆರಿಫ್ ನೀಡಿದ ಕರೆಯ ಮೇರೆಗೆ ಜನ ಜಮಾವಣೆಗೊಂಡಿದ್ದರು. ಇತ್ತ ಎಐಎಂಐಎಂ ಮುಖಂಡ ಇರ್ಫಾನ್ ತನ್ನ ವಾರ್ಡ್ ಜನರನ್ನು ಕರೆತಂದಿದ್ದರು. ಸದ್ಯ ಹುಬ್ಬಳ್ಳಿ ಗಲಭೆಗೆ ಪ್ರಚೋದನೆ ನೀಡಿದ್ದ ಮೊಹ್ಮದ್ ಆರಿಫ್‌ನನ್ನು ಪೊಲೀಸರು ಬಂಧಿಸಿದ್ದಾರೆ.