Tag: Water Bill

  • ನೀರಿನ ಬಿಲ್‌ 3 ಪಟ್ಟು ಹೆಚ್ಚಳ – ದುಬಾರಿ ಬಿಲ್ ನೋಡಿ ಹೌಹಾರಿದ ಗ್ರಾಹಕರು!

    ನೀರಿನ ಬಿಲ್‌ 3 ಪಟ್ಟು ಹೆಚ್ಚಳ – ದುಬಾರಿ ಬಿಲ್ ನೋಡಿ ಹೌಹಾರಿದ ಗ್ರಾಹಕರು!

    ಬೆಂಗಳೂರು: ಜಲಮಂಡಳಿಯ ದುಬಾರಿ ವಾಟರ್ ಬಿಲ್ (Water Bill) ನೋಡಿ ಜನ ಶಾಕ್ ಆಗಿದ್ದಾರೆ. ಎರಡ್ಮೂರು ಪಟ್ಟು ಹೆಚ್ಚು ಬಿಲ್ ಬಂದಿದ್ದಕ್ಕೆ, ನಾವು ಬಿಲ್ ಕಟ್ಟೋದಿಲ್ಲ ಅಂತ ಪಟ್ಟು ಹಿಡಿದಿದ್ದಾರೆ.

    ಬೆಂಗಳೂರು (Bengaluru) ಜಲಮಂಡಳಿಯ ವಾಟರ್ ಬಿಲ್ ನೋಡಿ ಗ್ರಾಹಕರು ಶಾಕ್ ಆಗಿದ್ದಾರೆ. ಬಸವನಗುಡಿ ವಿಧಾನಸಭಾ ಕ್ಷೇತ್ರದ ಶ್ರಿನಗರದ 11ನೇ ಮುಖ್ಯರಸ್ತೆಯ ನಿವಾಸಿಗಳಿಗೆ ಎರಡ್ಮೂರು ಪಟ್ಟು ವಾಟರ್ ಬಿಲ್ ಬಂದಿದೆ. ಏಕಾಏಕಿ ಹೆಚ್ಚುವರಿ ಬಿಲ್ ಬರೋಕೆ ಕಾರಣ ಏನು ಅಂತ ಜಲಮಂಡಳಿ ಅಧಿಕಾರಿಗಳು ಕೂಡ ಹೇಳ್ತಿಲ್ಲ. ನಾವು ಯಾವ್ದೇ ಕಾರಣಕ್ಕೆ ಬಿಲ್ ಕಟ್ಟಲ್ಲ ಅಂತ ಪಟ್ಟು ಹಿಡಿದಿದ್ದಾರೆ.

    ಇನ್ನು ಶ್ರೀನಗರದ 11ನೇ ಕ್ರಾಸ್‌ನ ಹಲವು ಮನೆಗಳಿಗೆ ವಾಟರ್ ಬಿಲ್ ಕೊಟ್ಟಿಲ್ಲ. ಜಲಮಂಡಳಿಯ ಸಿಬ್ಬಂದಿಗಳನ್ನೂ ಸರ್ವೆ ಕಾರ್ಯಕ್ಕೆ ಬಳಸಿಕೊಂಡಿದ್ದರಿಂದ ಬಿಲ್ ನೀಡಿಲ್ಲ. ಎರಡು ತಿಂಗಳ ಬಿಲ್ ಕಟ್ಟುವಂತೆ ಅಧಿಕಾರಿಗಳು ಜನರಿಗೆ ಏಕಾಏಕಿ ವಾಟ್ಸಪ್‌ಗೆ ಮೆಸೆಜ್ ಕಳಿಸಿದ್ದಾರೆ. ಈ ವೇಳೆ ಎರಡ್ಮೂರು ಪಟ್ಟು ಬಿಲ್ ಹೆಚ್ಚಳ ಆಗಿದ್ದು ಗೊತ್ತಾಗಿದೆ. ಎರಡು ತಿಂಗಳ ಹಿಂದೆ ಆರು ನೂರು, ಏಳು ನೂರು ಬರ್ತಿದ್ದ ಬಿಲ್, ಈ ತಿಂಗಳು 2 ಸಾವಿರಿಂದ ನಾಲ್ಕು ಸಾವಿರ ಬಿಲ್ ಬಂದಿದೆ.

    ಬಿಲ್ ನೀಡಲು ಜಲಮಂಡಳಿ ದಿನಾಂಕವನ್ನ ನಿಗದಿ ಮಾಡಲಾಗಿರುತ್ತೆ. ಆ ದಿನಾಂಕ ಮುಗಿದ ಬಳಿಕ ಸಿಬ್ಬಂದಿ ಬಿಲ್ ಕೊಡ್ತಿದ್ದಾರೆ. ಇದರಿಂದ ಗ್ರಾಹಕರು ಬಳಸಿದ ನೀರಿನ ಪ್ರಮಾಣಕ್ಕಿಂತ, ಮತ್ತೊಂದು ಸ್ಲ್ಯಾಬ್‌ಗೆ ಆಡ್ ಆಗ್ತಿದೆ. ಈ ಟೆಕ್ನಿಕಲ್ ಸಮಸ್ಯೆಯಿಂದಲೂ ಬಿಲ್ ಹೆಚ್ಚು ಬರುತ್ತಿದೆ ಎನ್ನಲಾಗ್ತಿದೆ. ಇನ್ನೂ ಕೆಲ ಮನೆಗಳಿಗೆ ಹೊಸ ಮೀಟರ್ ಗಳನ್ನ ಒತ್ತಾಯ ಪೂರ್ವಕವಾಗಿ ಅಳವಡಿಸಲಾಗಿದೆಯಂತೆ. ಅದೇನೆ ಇರಲಿ ಹೆಚ್ಚುವರಿ ಬಿಲ್ ಬರೋದಕ್ಕೆ ಕಾರಣ ಏನು ಅಂತ ಅಧಿಕಾರಿಗಳು ಸ್ಪಷ್ಟನೆ ನೀಡಬೇಕಿದೆ.

  • ರಾಜ್ಯದ ಜನತೆಗೆ ಸೆಸ್ ಶಾಕ್ – ನೀರಿನ ಬಿಲ್‌ನಲ್ಲೇ ʻಹಸಿರು ಸೆಸ್ʼ ಸಂಗ್ರಹಕ್ಕೆ ಮುಂದಾದ ಸರ್ಕಾರ

    ರಾಜ್ಯದ ಜನತೆಗೆ ಸೆಸ್ ಶಾಕ್ – ನೀರಿನ ಬಿಲ್‌ನಲ್ಲೇ ʻಹಸಿರು ಸೆಸ್ʼ ಸಂಗ್ರಹಕ್ಕೆ ಮುಂದಾದ ಸರ್ಕಾರ

    ಬೆಂಗಳೂರು: ರಾಜ್ಯದ ಜನರಿಗೆ ಸರ್ಕಾರ (Karnataka Govt) ಮತ್ತೊಂದು ಸೆಸ್ ಶಾಕ್ ಕೊಟ್ಟಿದೆ. ಪಶ್ಚಿಮ ಘಟ್ಟದ ನದಿ ನೀರು ಪೂರೈಕೆಯಾಗೋ ನಗರಗಳ ಜನರಿಗೆ ಸೆಸ್ ಶಾಕ್ ಕೊಡಲು ಸರ್ಕಾರ ಮುಂದಾಗಿದೆ.

    ಪಶ್ಚಿಮಘಟ್ಟ (Western ghats) ಸಂರಕ್ಷಣೆಗೆ ʻಕಾಪುನಿಧಿʼ ಸಂಗ್ರಹ ಗುರಿ ಹೊಂದಿದ್ದು, ನೀರಿನ ಬಿಲ್‌ನಲ್ಲೇ ʻಹಸಿರು ಸೆಸ್ʼ (Green Cess) ಸಂಗ್ರಹಕ್ಕೆ ಸರ್ಕಾರ ಮುಂದಾಗಿದೆ. ಈ ಸಂಬಂಧ ಪ್ರಸ್ತಾವನೆ ಸಲ್ಲಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ (Eshwar Khandre) ಸೂಚನೆ ಪ್ರಕಟಣೆಯಲ್ಲಿ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಬಿಡಿಗಾಸು ಅನುದಾನ ಬಿಡುಗಡೆ ಮಾಡದೆ ಹಗರಣದ ಆರೋಪ ಮಾಡುವುದರಲ್ಲಿ ಅರ್ಥವಿಲ್ಲ: ಸುನಿಲ್ ಕುಮಾರ್ ತಿರುಗೇಟು

    ಪ್ರಕಟಣೆಯಲ್ಲಿ ಏನಿದೆ?
    ಪಶ್ಚಿಮಘಟ್ಟಗಳು ತುಂಗಾ, ಭದ್ರಾ, ಕಾವೇರಿ, ಕಬಿನಿ, ಹೇಮಾವತಿ, ಕೃಷ್ಣಾ, ಮಲಪ್ರಭಾ, ಘಟಪ್ರಭಾ ಸೇರಿದಂತೆ ಹಲವು ನದಿಗಳ ಮೂಲವೂ ಆಗಿದೆ. ರಾಜ್ಯದ ಹಲವು ನಗರ, ಪಟ್ಟಣ ಪ್ರದೇಶಗಳಿಗೆ ಈ ನದಿಗಳ ನೀರನ್ನೇ ಪೂರೈಕೆ ಮಾಡಲಾಗುತ್ತಿದೆ. ಮುಂದೆಯೂ ರಾಜ್ಯದ ನೀರಿನ ಅಗತ್ಯವನ್ನು ಈ ನದಿಗಳೇ ಪೂರೈಸಬೇಕಾಗುತ್ತದೆ. ಹೀಗಾಗಿ ಈ ಎಲ್ಲ ನದಿಗಳ ಮೂಲವಾಗಿರುವ ಪಶ್ಚಿಮಘಟ್ಟವನ್ನು ಸಂರಕ್ಷಿಸಿದರೆ ಮಾತ್ರ ಮುಂದಿನ ದಿನಗಳಲ್ಲಿ ನದಿಗಳು ತುಂಬಿ ಹರಿಯಲು ಸಾಧ್ಯ.

    ಮಂಗಾರು ಮಳೆಯ ಮಾರುತಗಳನ್ನು ತಡೆದು ದೇಶದಾದ್ಯಂತ ವ್ಯಾಪಕ ಮಳೆ ಆಗುವಂತೆ ಮಾಡುವಲ್ಲಿ ಪಶ್ಚಿಮಘಟ್ಟಗಳು ಮಹತ್ವದ ಪಾತ್ರ ವಹಿಸುತ್ತವೆ. ಈ ನಿಟ್ಟಿನಲ್ಲಿ ಪಶ್ಚಿಮಘಟ್ಟದ ನದಿಗಳಿಂದ ನಗರ, ಪಟ್ಟಣಗಳಿಗೆ ಪೂರೈಕೆ ಆಗುವ ನೀರಿನ ಬಳಕೆಯ ಬಿಲ್ ನಲ್ಲಿ ಕೆಲವೇ ಕೆಲವು ರೂಪಾಯಿ ಹಸಿರು ಸೆಸ್ ವಿಧಿಸಿ, ಕಾಪು ನಿಧಿ ಸ್ಥಾಪನೆ ಸರ್ಕಾರ ಚಿಂತನೆ ನಡೆಸಿದೆ. ಇದನ್ನೂ ಓದಿ: ಸ್ವತಃ ಇಂದಿರಾ ಗಾಂಧಿ ಸ್ವರ್ಗದಿಂದ ಹಿಂತಿರುಗಿಬಂದರೂ 370ನೇ ವಿಧಿ ಮರುಸ್ಥಾಪನೆ ಸಾಧ್ಯವಿಲ್ಲ: ಅಮಿತ್‌ ಶಾ

    ಈ ಹಣವನ್ನು ಪಶ್ಚಿಮಘಟ್ಟ ಅರಣ್ಯ ಅಭಿವೃದ್ಧಿಗಾಗಿ, ವೃಕ್ಷ ಸಂವರ್ಧನೆಗಾಗಿ, ಅರಣ್ಯದಂಚಿನ ರೈತರು ಸ್ವಯಂ ಪ್ರೇರಿತವಾಗಿ ಅರಣ್ಯ ಇಲಾಖೆಗೆ ಮಾರಾಟ ಮಾಡಲು ಇಚ್ಛಿಸುವ ಕೃಷಿ ಭೂಮಿ ಖರೀದಿಸಲು ಬಳಸಬಹುದು. ಜೊತೆಗೆ ಅರಣ್ಯ ಸಂರಕ್ಷಿಸಲು ಮತ್ತು ವನ್ಯಜೀವಿ- ಮಾನವ ಸಂಘರ್ಷ ನಿಯಂತ್ರಿಸಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೂ ಈ ಹಣ ಬಳಸಬಹುದು. ಈ ನಿಟ್ಟಿನಲ್ಲಿ ಪ್ರಸ್ತಾವನೆ ಸಲ್ಲಿಸುವಂತೆ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ. ನೀರಿನ ಬಿಲ್ ಜೊತೆಯಲ್ಲಿ ಬಳಕೆದಾರರು 2 ಅಥವಾ 3 ರೂ. ಪಾವತಿಸಬೇಕು. ಈ ಹೆಚ್ಚುವರಿ ಹಣವನ್ನು ಪರಿಸರ ಸಂರಕ್ಷಣೆ ಮತ್ತು ಪಶ್ಚಿಮ ಘಟ್ಟದ ಮಹತ್ವದ ಅರಿವು ಮೂಡಿಸಲು ಬಳಕೆ ಮಾಡಲಾಗುತ್ತದೆ. ಹೀಗೆ ಸಂಗ್ರಹವಾಗುವ ಹಣವನ್ನು ಅನ್ಯ ಉದ್ದೇಶಕ್ಕೆ ಬಳಸಲಾಗುವುದಿಲ್ಲ ಎಂದು ಸಚಿವರು ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದ್ದಾರೆ.

  • ನೀರಿನ ದರ ಏರಿಕೆ ಮಾಡ್ತೀವಿ,ಬಸ್ ದರ ಏರಿಕೆ ನಾವು ಎಲ್ಲಿ ಹೇಳಿದ್ದೀವಿ: ಸಿಎಂ ಪ್ರಶ್ನೆ

    ನೀರಿನ ದರ ಏರಿಕೆ ಮಾಡ್ತೀವಿ,ಬಸ್ ದರ ಏರಿಕೆ ನಾವು ಎಲ್ಲಿ ಹೇಳಿದ್ದೀವಿ: ಸಿಎಂ ಪ್ರಶ್ನೆ

    ಬೆಂಗಳೂರು: ಜಲಮಂಡಳಿ (BWSSB) ನಷ್ಟದಲ್ಲಿದೆ. ಅದಕ್ಕಾಗಿ ನೀರಿನ ದರ (Water Bill) ಏರಿಕೆ‌ ಮಾಡುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಹೇಳಿದ್ದಾರೆ.

    ನಗರದಲ್ಲಿ ಮಾತನಾಡಿದ ಅವರು, ನೀರಿನ ದರ ಹೆಚ್ಚು ಮಾಡುವ ಬಗ್ಗೆ ಚರ್ಚೆ ಮಾಡಿದ್ದೇವೆ. ಆದರೆ ಇನ್ನೂ ಏರಿಕೆ ಮಾಡಿಲ್ಲ. ಸುಮಾರು ವರ್ಷಗಳಿಂದ ನೀರಿನ ದರ ಏರಿಕೆ ಆಗಿಲ್ಲ. ಹಾಗಾಗಿ ನೀರಿನ ದರ ಏರಿಕೆ ಮಾಡುತ್ತಿದ್ದೇವೆ ಎಂದರು. ಇದನ್ನೂ ಓದಿ: KSRTC ಬಸ್ ದರ ಏರಿಕೆ – ಮತ್ತೆ ಸುಳಿವು ನೀಡಿದ ರಾಮಲಿಂಗಾ ರೆಡ್ಡಿ

     

    ಬಸ್ ದರ ಏರಿಕೆ ವಿಚಾರವಾಗಿಯೂ ಪ್ರತಿಕ್ರಿಯಿಸಿದ ಸಿಎಂ, ಬಸ್ ದರ (Bus Fare) ಏರಿಕೆ ಬಗ್ಗೆ ನಾವು ಎಲ್ಲಿ ಹೇಳಿದ್ದೇವೆ? ನಮಗೆ ಅದು ಗೊತ್ತೇ ಇಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ವಿಮೆ ಹಣ ದೋಚಲು ಅಮಾಯಕ ವ್ಯಕ್ತಿಯ ಮರ್ಡರ್ ಮಿಸ್ಟ್ರಿ- ಹಾಸನದಲ್ಲಿ ನಟೋರಿಯಸ್ ದಂಪತಿ ಅರೆಸ್ಟ್

    ಕೆಪಿಎಸ್‌ಸಿಯಲ್ಲಿ ಏನು ಗೊಂದಲವಿಲ್ಲ. ಕೆಲವು ಜನ ಪರೀಕ್ಷೆ ಮುಂದಕ್ಕೆ ಹಾಕಬೇಕು ಎಂದು ಹೇಳುತ್ತಿದ್ದಾರೆ. ನಾವು ಈಗ ಪರೀಕ್ಷೆ ಮುಂದಕ್ಕೆ ಹಾಕುವುದಿಲ್ಲ. ಒಂದು ಪತ್ರಿಕೆ ಮಾತ್ರ ಮುಂದೂಡಿಕೆ ಮಾಡುತ್ತಿದ್ದೇವೆ ಎಂದು ಮಾಹಿತಿ ನೀಡಿದರು.

    ರಾಜ್ಯಪಾಲರು ಮಸೂದೆಗಳನ್ನು ವಾಪಸ್ ಕಳುಹಿಸಿದ ವಿಚಾರ ಪ್ರಾಸ್ತಾಪಿಸಿ, ಇದರ ಬಗ್ಗೆ ಕ್ಯಾಬಿನೆಟ್‌ನಲ್ಲಿ ಚರ್ಚೆ ಮಾಡುತ್ತೇವೆ. ಅವು ಸದನದಲ್ಲಿ ಪಾಸ್ ಆಗಿರುವ ಬಿಲ್‌ಗಳು ಇವೆ. ವಿವರಣೆ ಕೇಳಿದರೆ ಕೊಡುತ್ತಿದ್ದೇವೆ. ಆದರೆ ಬಿಲ್‌ಗಳು ವಾಪಸ್ ಕಳುಹಿಸಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

  • ಗ್ರಾಹಕರಿಗೆ ವಿದ್ಯುತ್‌ ದರ ಏರಿಕೆ ಬಳಿಕ ಮತ್ತೊಂದು ಶಾಕ್‌ -‌ ಏಕಾಏಕಿ ವಾಟರ್‌ ಬಿಲ್‌ ಡಬಲ್

    ಗ್ರಾಹಕರಿಗೆ ವಿದ್ಯುತ್‌ ದರ ಏರಿಕೆ ಬಳಿಕ ಮತ್ತೊಂದು ಶಾಕ್‌ -‌ ಏಕಾಏಕಿ ವಾಟರ್‌ ಬಿಲ್‌ ಡಬಲ್

    ಬೆಂಗಳೂರು: ಒಂದು ಕೈನಲ್ಲಿ ಕೊಟ್ಟು ಮತ್ತೊಂದು ಕೈನಲ್ಲಿ ಕಿತ್ತುಕೊಳ್ತಿದೆಯಾ ಸರ್ಕಾರ ಎಂದು ಜನಸಾಮಾನ್ಯರಲ್ಲಿ ಪ್ರಶ್ನೆ ಮೂಡುತ್ತಿದೆ. ಸರ್ಕಾರದ ಉಚಿತ ಭಾಗ್ಯಗಳ (Government Free Schemes)  ನಡುವೆ ರಾಜ್ಯದ ಜನರಿಗೆ ಬೆಲೆ ಏರಿಕೆ ಬಿಸಿ ತಟ್ಟಿದೆ.

    ಹೌದು. ಜೂನ್‌ ತಿಂಗಳಲ್ಲಿ ಬಂದಿರುವ ವಾಟರ್ ಬಿಲ್ (Water Bill) ಏಕಾಏಕಿ ಡಬಲ್‌ ಆಗಿದೆ. ಕೆಲ ಮನೆಗಳಿಗೆ ಬಂದಿರುವ ನೀರಿನ ಬಿಲ್‌ ಮೂರ‍್ನಾಲ್ಕು ಪಟ್ಟು ಹೆಚ್ಚಾಗಿದೆ. ಇದು ಬೇಕಂತಲೇ ಮಾಡಿದ್ದಾರೆ ಎಂದು ಜನ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದನ್ನೂ ಓದಿ: Cyclone Biparjoy: ಇಂದು ಸಂಜೆ ಅಪ್ಪಳಿಸಲಿದೆ ಸೈಕ್ಲೋನ್‌ – 74 ಸಾವಿರ ಮಂದಿ ಸ್ಥಳಾಂತರ

    ಬೆಂಗಳೂರಿನ (Bengaluru) ಕೆಲವು ಮನೆಗಳಲ್ಲಿ ಏಕಾಏಕಿ ಮನೆಯ ನೀರಿನ ಬಳಕೆಯ ಬಿಲ್ ಡಬಲ್, ತ್ರಿಬಲ್ ಆಗಿದೆ. ಹೀಗೆ ಹಲವು ರೀತಿಯಲ್ಲಿ ಬೆಲೆ ಏರಿಕೆ ಬಾಣ ಜನರಿಗೆ ಚುಚ್ಚುತ್ತಿದೆ. ಸರ್ಕಾರ ಒಂದು ಕೈನಲ್ಲಿ ಕೊಟ್ಟು ಮತ್ತೊಂದು ಕೈನಲ್ಲಿ ಕಿತ್ತುಕೊಳ್ತಿದೆಯಾ ಅನ್ನೋ ಆರೋಪ ಕೂಡಾ ಸಾರ್ವಜನಿಕರಿಂದ ಕೇಳಿ ಬರ್ತಿದೆ. ಇದನ್ನೂ ಓದಿ: ಸರ್ಕಾರಿ ನೌಕರರಿಗೆ ಸರಿಯಾಗಿ ವೇತನ ಸಿಗ್ತಿದೆ: ವದಂತಿಗೆ ಹಿಮಾಚಲಪ್ರದೇಶ ಸಿಎಂ ಸ್ಪಷ್ಟನೆ

    ಏಕಾಏಕಿ ನೀರಿನ ಶುಲ್ಕ ಹೆಚ್ಚಳ ಆಗಿದೆ. ಇದರಿಂದಾಗಿ ಸಾರ್ವಜನಿಕರು ಕಂಗಾಲಾಗಿದ್ದಾರೆ. ಕಳೆದ ತಿಂಗಳು 930 ರೂ. ಬಂದಿತ್ತು, ಈ ತಿಂಗಳು ಏಕಾಏಕಿ 3,000 ದಾಟಿದೆ. ವಯಾಲಿಕಾವಲ್ ಬಳಿ ಒಂದೇ ರಸ್ತೆಯ ಹತ್ತಾರು ಮನೆಗಳಲ್ಲಿ ನೀರಿನ ಬಿಲ್ ಡಬಲ್ ಆಗಿರೋದು ನೋಡಿ ಜನ ಶಾಕ್ ಆಗಿದ್ದಾರೆ. ಉಚಿತ ಭಾಗ್ಯ ಅಂತ ಈ ರೀತಿ ಮಾಡಿದ್ದಾರೆ ಎಂದು ಜಲಮಂಡಳಿ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಎಲ್ಲಾ ಫ್ರೀ ಭಾಗ್ಯ ಒಕೆ ಅದ್ರೇ ಈ ರೀತಿ ಬೇರೆ ರೀತಿಯಲ್ಲಿ ಸರ್ಕಾರ ನಮಗೆ ಬರೆ ಹಾಕ್ತಿದೆ ಅಂತ ಜನ ಆಕ್ರೋಶಗೊಂಡಿದ್ದಾರೆ. ಇನ್ನೂ ಜಲಮಂಡಳಿ ಅಧಿಕಾರಿಗಳನ್ನ ಕೇಳಿದ್ರೇ ಹೀಗೆ ಆಗಲು ಸಾಧ್ಯವಿಲ್ಲ. ಹೆಚ್ಚಿಗೆ ಬಿಲ್‌ಗೆ ಲೀಕೇಜ್ ಕಾರಣ ಇರಬಹುದು. ಒಂದೇ ರಸ್ತೆಯಲ್ಲಿ ಹತ್ತಾರು ಮನೆಗಳಿಗೆ ಈ ರೀತಿ ಆಗಿದೆ ಅಂದ್ರೆ ಪರಿಶೀಲನೆ ಮಾಡ್ತೀವಿ ಅಂತಾ ಹೇಳಿದ್ದಾರೆ.

  • ತೆರಿಗೆ, ನೀರಿನ ಬಿಲ್ ಪಾವತಿಸಿ – ತಾಜ್ ಮಹಲ್‍ಗೆ ನೋಟಿಸ್

    ತೆರಿಗೆ, ನೀರಿನ ಬಿಲ್ ಪಾವತಿಸಿ – ತಾಜ್ ಮಹಲ್‍ಗೆ ನೋಟಿಸ್

    ಲಕ್ನೋ: ಪ್ರತಿವರ್ಷ ಲಕ್ಷಾಂತರ ಪ್ರವಾಸಿಗರನ್ನು ಭಾರತಕ್ಕೆ ಸೆಳೆಯುವ ಆಗ್ರಾದ ತಾಜ್ ಮಹಲ್ (Taj Mahal) ಕಟ್ಟಡಕ್ಕೆ ಆಸ್ತಿ ತೆರಿಗೆ (Property Tax) ಹಾಗೂ ನೀರಿನ ಬಿಲ್‍ಗಳನ್ನು (Water Bill) ಪಾವತಿಸುವಂತೆ ಮೊದಲ ಬಾರಿಗೆ ಯುಪಿ ಸರ್ಕಾರ (Uttar Pradesh Government) ನೋಟಿಸ್ ನೀಡಿದೆ.

    ಯೋಗಿ ಆದಿತ್ಯನಾಥ್ (Yogi Adityanath) ನೇತೃತ್ವದ ಉತ್ತರ ಪ್ರದೇಶ ಸರ್ಕಾರದ ವಿವಿಧ ಘಟಕಗಳು 320 ವರ್ಷಗಳ ಇತಿಹಾಸ ಇರುವ ಆಗ್ರಾದ ತಾಜ್ ಮಹಲ್ ಹಾಗೂ ಆಗ್ರಾ ಕೋಟೆ ಎರಡಕ್ಕೂ ಬಾಕಿ ಬಿಲ್‍ಗಳನ್ನು ಪಾವತಿಸುವಂತೆ ನೋಟಿಸ್ ನೀಡಿದೆ. ಬಿಲ್‍ಗಳ ಮೊತ್ತ 1 ಕೋಟಿಗೂ ಹೆಚ್ಚು ಬಾಕಿ ಇದೆ ಎಂದು ಎಎಸ್‍ಐಗೆ ತಿಳಿಸಿದೆ. ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್‍ಐ) ಅಧಿಕಾರಿಗಳು ಇದು, ತಪ್ಪು, ಶೀಘ್ರದಲ್ಲೇ ಸರಿಪಡಿಸಲಾಗುವುದು ಎಂದು ತಿಳಿಸಿದರು.

    ಈ ಬಗ್ಗೆ ಆಗ್ರಾದ ಎಎಸ್‍ಐನ ಅಧೀಕ್ಷಕ ಪುರಾತತ್ವ ಶಾಸ್ತ್ರಜ್ಞ ರಾಜ್‍ಕುಮಾರ್ ಪಟೇಲ್ ಮಾತನಾಡಿ, ಇಲ್ಲಿಯವರೆಗೆ 3 ನೋಟಿಸ್‍ಗಳು ಬಂದಿದ್ದು, ತಾಜ್‍ಮಹಲ್‍ಗೆ ಎರಡು ಮತ್ತು ಆಗ್ರಾ ಕೋಟೆಗೆ ಒಂದು ಎಂದು ದೃಢಪಡಿಸಿದ್ದಾರೆ.

    ತಾಜ್ ಮಹಲ್‍ಗೆ ಸಂಬಂಧಿಸಿದಂತೆ, ನಮಗೆ ಎರಡು ನೋಟಿಸ್‍ಗಳು ಬಂದಿವೆ. ಒಂದು ಆಸ್ತಿ ತೆರಿಗೆ ಮತ್ತು ಇನ್ನೊಂದು ನೀರು ಸರಬರಾಜು ಇಲಾಖೆಯಿಂದಾಗಿದೆ. ಒಟ್ಟು 1 ಕೋಟಿಗೂ ಅಧಿಕ ರೂ.ಗಳನ್ನು ಎಎಸ್‍ಐನಿಂದ ಬೇಡಿಕೆಯಿಡಲಾಗಿದೆ. ಆದರೆ ಅಂತಹ ತೆರಿಗೆಗಳು ಸ್ಮಾರಕಗಳಿಗೆ ಅನ್ವಯಿಸುವುದಿಲ್ಲವಾದ್ದರಿಂದ ಇದು ತಪ್ಪಾಗಿರಬಹುದು ಎಂದು ಹೇಳಿದರು. ಇದನ್ನೂ ಓದಿ: ಡಿಕೆಶಿ ಮನೆಯಲ್ಲಿಯೇ ED, CBI ಕಚೇರಿ ಓಪನ್‌ ಮಾಡಿ: ರಣದೀಪ್ ಸಿಂಗ್ ಸುರ್ಜೇವಾಲಾ

    ಮೊದಲನೆಯದಾಗಿ, ಸ್ಮಾರಕದ ಆವರಣಗಳಿಗೆ ಆಸ್ತಿ ತೆರಿಗೆ ಅಥವಾ ಮನೆ ತೆರಿಗೆ ಅನ್ವಯಿಸುವುದಿಲ್ಲ. ಉತ್ತರ ಪ್ರದೇಶದಲ್ಲೂ ಈ ಕಾನೂನು ಇದೆ. ಜೊತೆಗೆ ನಾವು ಯಾವುದೇ ವಾಣಿಜ್ಯ ಉದ್ದೇಶಗಳಿಗಾಗಿ ನೀರನ್ನು ಬಳಸುತ್ತಿಲ್ಲ. ಬದಲಿಗೆ ತಾಜ್ ಸಂಕೀರ್ಣದ ಒಳಗೆ, ಹುಲ್ಲುಹಾಸುಗಳಿಗಾಗಿ, ಸಾರ್ವಜನಿಕ ಸೇವೆಗಾಗಿ ಬಳಸುತ್ತಿದ್ದೇವೆ. ಇದರಿಂದಾಗಿ ಬಾಕಿಯ ಪ್ರಶ್ನೆಯೇ ಇಲ್ಲ ಎಂದು ಉತ್ತರ ನೀಡಿದ್ದಾರೆ. ಇದನ್ನೂ ಓದಿ: ಗಡಿ ವಿವಾದ – ಮಹಾರಾಷ್ಟ್ರ ಯಾವುದೇ ಕಾರಣಕ್ಕೂ ಹಿಂದೆ ಸರಿಯುವ ಪ್ರಶ್ನೆಯಿಲ್ಲ: ದೇವೇಂದ್ರ ಫಡ್ನವಿಸ್

    Live Tv
    [brid partner=56869869 player=32851 video=960834 autoplay=true]

  • ರಾಜ್ಯದ ಜನತೆಗೆ ಏಕಕಾಲದಲ್ಲಿ ಮೂರು ಶಾಕ್ – ಹಾಲು, ವಿದ್ಯುತ್, ಸಾರಿಗೆ ಸೇರಿ ಬೆಂಗ್ಳೂರಿಗರಿಗೆ ನೀರಿನ ದರ ಏರಿಕೆ?

    ರಾಜ್ಯದ ಜನತೆಗೆ ಏಕಕಾಲದಲ್ಲಿ ಮೂರು ಶಾಕ್ – ಹಾಲು, ವಿದ್ಯುತ್, ಸಾರಿಗೆ ಸೇರಿ ಬೆಂಗ್ಳೂರಿಗರಿಗೆ ನೀರಿನ ದರ ಏರಿಕೆ?

    ಬೆಂಗಳೂರು: ಹಣದುಬ್ಬರದಿಂದಾಗಿ ಎಲ್ಲಾ ಅಗತ್ಯ ವಸ್ತುಗಳು ಹಾಗೂ ಬೆಲೆಗಳು ನಿರಂತರವಾಗಿ ಏರಿಕೆ ಕಾಣುತ್ತಿವೆ. ಪೆಟ್ರೋಲ್, ಡೀಸೆಲ್, ಅಡುಗೆ ಎಣ್ಣೆ, ಬೇಳೆ ಕಳು, ತರಕಾರಿ ಬೆಲೆಗಳು ದಿನೇ ದಿನೇ ಹೆಚ್ಚುತ್ತಲೇ ಇವೆ. ಇದು ಸಾಲದು ಅಂತಾ ಶೀಘ್ರವೇ ರಾಜ್ಯದ ಜನತೆಗೆ ಏಕಕಾಲದಲ್ಲಿ ಮೂರು ಶಾಕ್ ಎದುರಾಗಲಿವೆ.

    ಹಾಲು, ವಿದ್ಯುತ್ ದರ, ಸಾರಿಗೆ ದರ ಹೆಚ್ಚಳದ ಜೊತೆ ಜೊತೆಗೆ, ಬೆಂಗಳೂರಿನ ಮಂದಿಗೆ ಹೆಚ್ಚುವರಿ ನೀರಿನ ದರ ಹೆಚ್ಚಿಸಲು ಜಲಮಂಡಳಿ ಪ್ಲಾನ್ ಮಾಡಿದೆ. ಈಗಾಗಲೇ ಆಯಾ ಇಲಾಖೆಗಳು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿವೆ. ರಾಜ್ಯ ಸರ್ಕಾರ ಇದಕ್ಕೆ ಒಪ್ಪಿಗೆ ಕೊಡುವುದು ಬಾಕಿ ಇದೆ. ಇದನ್ನೂ ಓದಿ: ರಾಜ್ಯದ ಜನತೆಗೆ ವಿದ್ಯುತ್ ದರ ಏರಿಕೆ ಶಾಕ್?

    ಆದರೆ ದರ ಹೆಚ್ಚಳಕ್ಕೆ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸಿದೆ. ಜನರ ಮೇಲೆ ಈಗ ತೆರಿಗೆ ಹಾಕೋದು ಸರಿಯಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ದರ ಹೆಚ್ಚಳಕ್ಕೆ ಮೊದಲು ಜನರಿಗೆ ಆದಾಯ ಬರುವಂತೆ ಸರ್ಕಾರ ಮಾಡಲಿ ಅಂತಾ ಡಿಕೆ ಶಿವಕುಮಾರ್ ಒತ್ತಾಯಿಸಿದ್ದಾರೆ. ಈ ಬೆನ್ನಲ್ಲೇ ಸ್ಪಷ್ಟನೆ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ, ಸದ್ಯಕ್ಕೆ ದರ ಹೆಚ್ಚಳದ ಬಗ್ಗೆ ಯಾವುದೇ ತೀರ್ಮಾನಗಳು ಆಗಿಲ್ಲ. ದರ ಹೆಚ್ಚಳದ ಪ್ರಸ್ತಾವನೆಗಳು ಬರುವುದು ಸಹಜ ಆದ್ರೆ ಸರ್ಕಾರ ಅವಸರದ ನಿರ್ಧಾರ ತೆಗೆದುಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‌ನಲ್ಲೇ ದ್ವಂದ್ವ – ನೈಟ್ ಕರ್ಫ್ಯೂ ಬಗ್ಗೆ ಡಿಕೆಶಿ, ಸಿದ್ದು ಭಿನ್ನ ಅಭಿಪ್ರಾಯ

  • ಬಿಎಸ್‍ವೈ ಕ್ಯಾಬಿನೆಟ್‍ನಲ್ಲಿ ಬಡ ಮಿನಿಸ್ಟ್ರು – ನೀರಿನ ಬಿಲ್ ಕಟ್ಟೋಕೆ ಮಂತ್ರಿಗಳ ಕೈಯಲ್ಲಿ ಕಾಸಿಲ್ಲ

    ಬಿಎಸ್‍ವೈ ಕ್ಯಾಬಿನೆಟ್‍ನಲ್ಲಿ ಬಡ ಮಿನಿಸ್ಟ್ರು – ನೀರಿನ ಬಿಲ್ ಕಟ್ಟೋಕೆ ಮಂತ್ರಿಗಳ ಕೈಯಲ್ಲಿ ಕಾಸಿಲ್ಲ

    ಬೆಂಗಳೂರು: ಸಿಲಿಕಾನ್ ಸಿಟಿ ಜನ ಒಂದು ತಿಂಗಳು ವಾಟರ್ ಬಿಲ್ ಪಾವತಿಸಿಲ್ಲ ಜಲಮಂಡಳಿ ಅವರು ಮಾತಾನಾಡಿಸಲು ಅವಕಾಶ ಕೊಡದೇ ನೀರಿನ ಸಂಪರ್ಕ ಕಟ್ ಮಾಡುತ್ತಾರೆ. ಆದರೆ ಮಂತ್ರಿ ಮಹೋದಯರ ಕೈಯಲ್ಲಿ ಪಾಪ ಕಾಸಿಲ್ಲ ನೋಡಿ ಅವರಿಗೆ ಮಾತ್ರ ಭರ್ಜರಿ ರಿಯಾಯಿತಿ.

    ಸಿಎಂ ಯಡಿಯೂರಪ್ಪ ಕ್ಯಾಬಿನೆಟ್‍ನಲ್ಲಿ ಬಡ ಮಿನಿಸ್ಟ್ರುಗಳು ನೀರಿನ ಬಿಲ್ ಕಟ್ಟೋಕೆ ಆಗದೇ ಲಕ್ಷ ಲಕ್ಷ ಬಿಲ್ ಬಾಕಿ ಉಳಿಸಿಕೊಂಡಿದ್ದಾರೆ. ಸಚಿವ ಜಗದೀಶ್ ಶೆಟ್ಟರ್ ಹಾಗೂ ಶ್ರೀರಾಮುಲು ಸರ್ಕಾರಿ ಬಂಗಲೆಯ ನೀರಿನ ಬಿಲ್ ಕಟ್ಟದ ಬಗ್ಗೆ ಹೈಕೋರ್ಟ್ ವಕೀಲ ಶಶಿಕುಮಾರ್ ಆರ್ ಟಿಐ ನಲ್ಲಿ ಮಾಹಿತಿ ಹೊರಹಾಕಿದ್ದಾರೆ.

    ಸಚಿವರಾದ ಜಗದೀಶ್ ಶೆಟ್ಟರ್-10,66,672 ರೂ. ಬಾಕಿ ಉಳಿಸಿಕೊಂಡಿದ್ದರೆ, ಬಿ. ಶ್ರೀರಾಮುಲು- 9,28,298 ರೂ ಬಾಕಿ ಉಳಿಸಿದ್ದಾರೆ. ಜನಸಾಮಾನ್ಯರಿಗೊಂದು ರೂಲ್ಸ್ ದೊಡ್ಡವರಿಗೊಂದು ರೂಲ್ಸ್ ಜಲಮಂಡಳಿ ಇವರ ಮನೆಯ ನೀರಿನ ಸಂಪರ್ಕವನ್ನು ಕಟ್ ಮಾಡಲಿ ಅಂತಾ ವಕೀಲ ಶಶಿಕುಮಾರ್ ಆಗ್ರಹಿಸಿದ್ದಾರೆ. ಇದನ್ನೂ ಓದಿ: ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ, ಸರ್ಕಾರಕ್ಕೆ ಬಿಲ್- ರಾಜ್ಯದ ಶಾಸಕರ ಕೊರೊನಾ ‘ಬಿಲ್’ವಿದ್ಯೆ

  • ಇಂದಿರಾ ಕ್ಯಾಂಟೀನ್‍ಗಳಿಗೆ ಎದುರಾಯ್ತು ಜಲಮಂಡಳಿ ಸಂಕಷ್ಟ

    ಇಂದಿರಾ ಕ್ಯಾಂಟೀನ್‍ಗಳಿಗೆ ಎದುರಾಯ್ತು ಜಲಮಂಡಳಿ ಸಂಕಷ್ಟ

    ಬೆಂಗಳೂರು: ಸಿಲಿಕಾನ್ ಸಿಟಿಯ ಇಂದಿರಾ ಕ್ಯಾಂಟೀನ್‍ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಇಂದಿರಾ ಕ್ಯಾಂಟೀನ್‍ಗಳಿಗೆ ಸಬರರಾಜು ಮಾಡುವ ಕಾವೇರಿ ನೀರಿನ ಬಿಲ್ ಕಟ್ಟಿಲ್ಲ. ಈ ಸಂಬಂಧ ಗುತ್ತಿಗೆದಾರರಿಗೆ ನೋಟಿಸ್ ಹೊರಡಿಸಲಾಗಿದೆ ಎಂದು ಬೆಂಗಳೂರು ಜಲಮಂಡಳಿ ಅಧ್ಯಕ್ಷ ತುಷಾರ್ ಗಿರಿನಾಥ್ ಪಬ್ಲಿಕ್ ಟಿವಿಗೆ ಮಾಹಿತಿ ನೀಡಿದ್ದಾರೆ.

    ಈ ಬಗ್ಗೆ ಪಬ್ಲಿಕ್ ಟಿವಿಗೆ ಬೆಂಗಳೂರು ಜಲಮಂಡಳಿ ಅಧ್ಯಕ್ಷ ತುಷಾರ್ ಗಿರಿನಾಥ್ ಮಾಹಿತಿ ನೀಡಿದ್ದು, ಇಂದಿರಾ ಕ್ಯಾಂಟೀನ್‍ಗಳಿಗೆ ಸರಬರಾಜು ಆಗುತ್ತಿರುವ ಕಾವೇರಿನ ನೀರಿನ ಬಿಲ್ ಬಾಕಿ ಇದೆ. ಮುಂಜಾಗ್ರತವಾಗಿ ಬಾಕಿರುವ ಬಿಲ್ ಕಟ್ಟಿ ಎಂದು ನೋಟಿಸ್ ಹೊರಡಿಸಿದ್ದಾರೆ. ನೋಟಿಸ್ ನಂತರವು ಬಿಲ್ ಕಟ್ಟಿಲ್ಲ ಎಂದರೆ ಕಾವೇರಿ ನೀರು ನಿಲ್ಲಿಸುವ ಕುರಿತು ನಿರ್ಧಾರ ಕೈಗೊಳ್ಳಬೇಕಾಗುತ್ತೆ ಎಂದಿದ್ದಾರೆ.

    ಸದ್ಯ 146 ಕ್ಯಾಂಟೀನ್‍ಗಳಿಗೆ ಜಲಮಂಡಳಿ ಕಾವೇರಿ ನೀರು ಪೂರೈಕೆ ಮಾಡುತ್ತಿದ್ದು, ಗುತ್ತಿಗೆದಾರರು ಕಾವೇರಿ ನೀರು ಬಿಲ್ ಕಟ್ಟದ ಕಾರಣ ನೀರು ಪೂರೈಕೆ ಬಂದ್ ಮಾಡಲಾಗುತ್ತಿದೆ. ಹಲವು ಬಾರಿ ಮನವಿ ಮಾಡಿದರು ಗುತ್ತಿಗೆದಾರರು ಗಮನ ಕೊಡದ ಕಾರಣ ಈ ನಿರ್ಧಾರ ಕೈಗೊಳ್ಳಲಾಗಿದೆ. ಇಲ್ಲಿಯವರಿಗೆ ಗುತ್ತಿಗೆದಾರರು ಜಲಮಂಡಳಿಗೆ ಕೋಟ್ಯಂತರ ರೂ. ಬಾಕಿ ಮೊತ್ತ ಪಾವತಿಯನ್ನೆ ಮಾಡಿಲ್ಲ. ಸರಿಸುಮಾರು 4 ಕೋಟಿ ಜಲಮಂಡಳಿಗೆ ಬಾಕಿ ಮೊತ್ತ ಪಾವತಿ ಮಾಡಬೇಕು. ಬಿಬಿಎಂಪಿ ಕಮಿಷನರ್‍ಗೂ ಈ ಬಗ್ಗೆ ಮನವಿ ಮಾಡಲಾಗಿದೆ. ಕಮಿಷನರ್ ಅವರು ಗಮನ ಕೊಡದಿದ್ದರೆ ಮುಂದಿನ ಕ್ರಮ ಕೈಗೊಳ್ಳಬೇಕಾಗುತ್ತೆ ಎಂದು ಜಲಮಂಡಳಿ ಅಧ್ಯಕ್ಷ ತಿಳಿಸಿದ್ದಾರೆ.

  • ಬೆಂಗಳೂರಿಗರಿಗೆ ಜಲಮಂಡಳಿಯಿಂದ ಬಿಗ್ ಶಾಕ್-ಸಾರ್ವಜನಿಕರ ಮೇಲೆ ಬೀಳಲಿದೆ ಇನ್ನಷ್ಟು ವಾಟರ್ ಬಿಲ್!

    ಬೆಂಗಳೂರಿಗರಿಗೆ ಜಲಮಂಡಳಿಯಿಂದ ಬಿಗ್ ಶಾಕ್-ಸಾರ್ವಜನಿಕರ ಮೇಲೆ ಬೀಳಲಿದೆ ಇನ್ನಷ್ಟು ವಾಟರ್ ಬಿಲ್!

    ಬೆಂಗಳೂರು: ಬೇಸಿಗೆಯಲ್ಲಿ ಉತ್ತರ ಕರ್ನಾಟಕ ಮಾತ್ರವಲ್ಲದೇ ಬೆಂಗಳೂರಿನಲ್ಲಿ ನೀರಿನ ಬರ ಇರುತ್ತದೆ. ಈಗ ಬೆಂಗಳೂರಿಗರಿಗೆ ಜಲಮಂಡಳಿ ಮತ್ತೊಂದು ಬಿಗ್ ಶಾಕ್ ಕೊಟ್ಟಿದೆ. ಕಾವೇರಿ ನೀರಿನ ದರ ಶೇ. 15 ರಷ್ಟು ಏರಿಕೆ ಮಾಡಲು ಸಿದ್ಧತೆ ನಡೆಸಿದ್ದು, ಇದಕ್ಕಾಗಿ ಪ್ರತ್ಯೇಕ ಕಮಿಟಿ ಕೂಡ ಮಾಡಿಕೊಂಡಿದೆ. ಶೇಕಡಾ 15 ರಷ್ಟು ಅಂದ್ರೆ 100 ರೂಪಾಯಿಗೆ 15 ರೂಪಾಯಿನಷ್ಟು ದರ ಹೆಚ್ಚಾಗಲಿದೆ.

    ನೀರು ಪೂರೈಕೆ ಪ್ರಸ್ತುತ ದರದ ವಿವರ
    * ಗೃಹ ಸಂಪರ್ಕ- ಪ್ರತಿ ಸಾವಿರ ಲೀಟರ್ 7 ರೂ.
    * ನೀರು ಬಳಸುವ ಕಟ್ಟಡಗಳಿಗೆ- 8,001-25 ಸಾವಿರ ಲೀಟರ್ ವರೆಗೆ- ಪ್ರತಿ ಸಾವಿರ ಲೀಟರ್ ಗೆ 11 ರೂ.
    * 25,001 ರಿಂದ 50 ಸಾವಿರ ಲೀಟರ್ ವರಗೆ- 26 ರೂ.
    * 50 ಸಾವಿರ ಲೀ. ಮೇಲ್ಪಟ್ಟು ನೀರು ಬಳಸುವ ಕಟ್ಟಡ- ಪ್ರತಿ ಸಾವಿರ ಲೀಟರ್ ಗೆ 45 ರೂ.
    * ಬೋರ್‍ವೆಲ್‍ಗಳಿಗೆ: 100 ರೂ.
    * ಕೈಗಾರಿಕೆ, ಈಜುಕೊಳ, ಬಿಡದಿ ಕೈಗಾರಿಕಾ ಪ್ರದೇಶಗಳಿಗೆ- 90 ರೂ.
    * ಸಗಟು ಬಳಕೆದಾರರಿಗೆ: ಪ್ರತಿ ಸಾವಿರ ಲೀಟರ್ ಗೆ- 10 ರೂ.

    2014ರ ನಂತರ ಜಲಮಂಡಳಿ ನೀರಿನ ದರ ಪರಿಷ್ಕರಣೆ ಮಾಡಿರಲಿಲ್ಲ. ಹೀಗಾಗಿ ನಿರ್ವಹಣೆ ದುಬಾರಿ ಆಗ್ತಿರೋ ಹಿನ್ನೆಲೆ, ನೀರಿನ ದರವನ್ನ ಹೆಚ್ಚು ಮಾಡಲಾಗುತ್ತಿದೆ. ಈ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗ್ತಿದೆ. ಜಲಮಂಡಳಿಯಲ್ಲಿ ಸಿಬ್ಬಂದಿ ಕೊರತೆಯೂ ಕೂಡ ಉಂಟಾಗಿದ್ದು 3 ಸಾವಿರದ 500 ಹುದ್ದೆಗಳ ಪೈಕಿ, 1945 ಹುದ್ದೆಗಳ ಸಿಬ್ಬಂದಿ ಮಾತ್ರ ಕಾರ್ಯ ನಿರ್ವಹಿಸುತ್ತಿದ್ದಾರೆ.

    ಒಂದಡೆ ಬೆಂಗಳೂರಲ್ಲಿ ನೀರಿಗಾಗಿ ಜನ ಪರದಾಡ್ತಿದ್ರೆ, ಮತ್ತೊಂದಡೆ ಜಲಮಂಡಳಿಯಲ್ಲಿ ಅಧಿಕಾರಿಗಳ ಕೊರತೆ ಕಾಣುತ್ತಿದೆ. ಹೀಗಿರುವಾಗ ಜನರಿಗೆ ಜಲಮಂಡಳಿ ಸಮರ್ಪಕವಾಗಿ ನೀರು ಹೇಗೆ ಒದಗಿಸುತ್ತೆ ಅಂತ ಸಾರ್ವಜನಿಕರು ಪ್ರಶ್ನೆ ಮಾಡುತ್ತಿದ್ದಾರೆ.